Tuesday, February 17, 2026
Tuesday, February 17, 2026
Home Blog Page 162

National Health Campaign ಎನ್ ಹೆಚ್ ಎಂ ಯೋಜನೆಯಡಿ ಖಾಲಿಯಿರುವ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ, ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ

0

National Health Campaign ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಅಧೀನದಲ್ಲಿ ಬರುವ ವಿವಿಧ ಕಾರ್ಯಕ್ರಮದಲ್ಲಿ ಖಾಲಿಯಿರುವ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆರ್ಹರಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಿದೆ.

ಎನ್‌ಪಿಎನ್‌ಸಿಸಿ ಕಾರ್ಯಕ್ರಮದಡಿ ಎಂಬಿಬಿಎಸ್ ವೈದ್ಯರ 10 ಹುದ್ದೆಗಳಿಗೆ 3 ವರ್ಷ ಕೆಲಸ ಮಾಡಿದ ಅನುಭವವಿರುವ ಎಂಬಿಬಿಎಸ್ ವಿದ್ಯಾರ್ಹತೆಯಿರಬೇಕು. ಶುಶ್ರೂಷಾಧಿಕಾರಿಯ 1 ಹುದ್ದೆಗೆ ಜಿಎನ್‌ಎಂ ವಿದ್ಯಾರ್ಹತೆ ಮತ್ತು 2 ವರ್ಷ ಕೆಲಸ ಮಾಡಿದ ಅನುಭವವಿರಬೇಕು.

ಎನ್‌ಪಿಹೆಚ್‌ಸಿಇ ಕಾರ್ಯಕ್ರಮದಡಿ ತಜ್ಞವೈದ್ಯರ (ಎಂ.ಡಿ. ಇಂಟರ್ನಲ್ ಮೆಡಿಸಿನ್/ಜನರಲ್ ಮೆಡಿಸಿನ್) 1 ಹುದ್ದೆಗೆ ಎಂಬಿಬಿಎಸ್-ಎಚಿಡಿ(ಇಂಟರ್ನಲ್ ಮೆಡಿಸಿನ್/ಜಿಎಂ) ವಿದ್ಯಾರ್ಹತೆ ಹಾಗೂ 3 ವರ್ಷ ಕಾರ್ಯ ನಿರ್ವಹಿಸಿದ ಅನುಭವವಿರಬೇಕು.

ಆಸಕ್ತರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಬಿ.ಹೆಚ್.ರಸ್ತೆ ಇಲ್ಲಿ ಸೆ. 22 ರಂದು ನಡೆಯುವ ನೇರ ಸಂದರ್ಶನಕ್ಕೆ ಬೆಳಗ್ಗೆ 11.00ಕ್ಕೆ ದಾಖಲೆಗಳ ಮೂಲ ಪ್ರತಿ ಮತ್ತು ಛಾಯಾಪ್ರತಿಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

National Health Campaign ಹೆಚ್ಚಿನ ಮಾಹಿತಿಗಾಗಿ ಕೆಲಸದ ವೇಳೆಯಲ್ಲಿ ಕಚೇರಿಯನ್ನು ಸಂಪರ್ಕಿಸುವುದು.
ಎಂಬಿಬಿಎಸ್ ವೈದ್ಯರಿಗೆ ವಿಶೇಷ ಸೂಚನೆ : ಎನ್.ಸಿ.ಡಿ ಕ್ಲಿನಿಕ್ ವೈದ್ಯಾಧಿಕಾರಿಗಳ ಹುದ್ದೆ ಖಾಲಿ ಇದ್ದಲ್ಲಿ ಪ್ರತಿ ತಿಂಗಳ 3ನೇ ಸೋಮವಾರದಂದು ವೈದ್ಯರ ಮತ್ತು ತಜ್ಞ ವೈದ್ಯರ ಹುದ್ದೆಗೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

Adichunchanagiri Branch ಶಿವಮೊಗ್ಗದ ಆದಿಚುಂಚನಗಿರಿ ಶಾಖಾಮಠದಲ್ಲಿ ಶರನ್ನವರಾತ್ರಿ ಉತ್ಸವ

0

Adichunchanagiri Branch ಶರಾವತಿ ನಗರದ ಶಿವಮೊಗ್ಗ ಶಾಖಾ ಮಠದಲ್ಲಿ ಶ್ರೀ ಕಾಲಭೈರವೇಶ್ವರ ಸ್ವಾಮಿ ಮತ್ತು ಶೀ ಕಾಳಿಕಾಂಬದೇವಿಯ ಅಮ್ಮನವರ ಸನ್ನಿಧಿಯಲ್ಲಿ ಶರನ್ನವರಾತ್ರಿ ಮಹೋತ್ಸವವು ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮಿಗಳು ಹಾಗೂ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ 22/09/2025 ರಿಂದ 02/10/2025 ರವರೆಗೆ ಕಾರ್ಯಕ್ರಮ ನಡೆಯಲಿದ್ದು, ಒಂಬತ್ತು ದಿನಗಳವರೆಗೆ ಶ್ರೀದೇವಿಗೆ ವಿವಿಧ ಅಲಂಕಾರಗಳಿಂದ ಪೂಜಾ ಕೈಂಕರ್ಯಗಳು ಜರುಗಲಿವೆ. Adichunchanagiri Branch ಸಂಜೆ ದುರ್ಗಾಹೋಮ ನಡೆಸಲಾಗುವುದು, ಪ್ರತಿದಿನ ಸಂಜೆ 6:15 ರಿಂದ 7:20 ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುವವು.
ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರ ದಿವ್ಯಸಾನಿಧ್ಯದಲ್ಲಿ ಹಾಗೂ ಪೂಜ್ಯ ಶ್ರೀ ಶ್ರೀ ನಾದಮಯಾನಂದನಾಥ ಸ್ವಾಮಿಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ಸೆ, 30/09/2025 ರಂದು ಬೆಳಿಗ್ಗೆ 7 ರಿಂದ ಚಂಡಿಕಾ ಹೋಮ, ಮಹಾಮಂಗಳಾರತಿ, ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಲಿವೆ. ನಂತರ ಪ್ರಸಾದ ವಿನಿಯೋಗ ವಿರುತ್ತದೆ. ಅ,02/10/2025 ರ ಸಂಜೆ 5 ಗಂಟೆಗೆ ಪಲ್ಲಕ್ಕಿ ಉತ್ಸವ ಹಾಗೂ ಬನ್ನಿ ಮುಡಿಯುವ ಕಾರ್ಯಕ್ರಮವಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ.ಶ್ರೀ ಕಾಳಿಕಾಂಬ ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ಶಿಮೊಗ್ಗ ಶಾಖಾಮಠದ ವ್ಯವಸ್ಥಾಪಕರು ಕೋರಿದ್ದಾರೆ.

Union Ministry of Agriculture and Farmers Welfare ಹೆಸರು,ಉದ್ದು ಶೇಂಗಾಕ್ಕೆ ತಕ್ಷಣ ಬೆಂಬಲ ಬೆಲೆ ನೀಡಿ ಕೇಂದ್ರವು ಖರೀದಿಸಲಿ- ಸಚಿವ ಚಲುವರಾಯಸ್ವಾಮಿ

0

Union Ministry of Agriculture and Farmers Welfare ಬೆಂಬಲಬೆಲೆ ಯೋಜನೆಯಡಿ ಹೆಸರು, ಉದ್ದು, ಸೋಯಾಬಿನ್, ಸೂರ್ಯಕಾಂತಿ ಮತ್ತಿತರ ಕೃಷಿ ಉತ್ಪನ್ನಗಳ ಖರೀದಿಗೆ ತಕ್ಷಣ ಅನುಮೊದನೆ ನೀಡುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಆಯೋಜಿಸಿದ್ದ ರಾಷ್ಟ್ರೀಯ ರಬಿ ಅಭಿಯಾನ ಸಮ್ಮೇಳನದಲ್ಲಿ ಪಾಲ್ಗೊಂಡು ಅವರು‌ ಮಾತನಾಡಿದರು.

ಬೆಲೆ ಬೆಂಬಲ ಯೋಜನೆ (PSS) ಪ್ರಸ್ತುತ ಹೆಸರುಕಾಳು, ಉದ್ದು, ಸೂರ್ಯಕಾಂತಿ, ಸೋಯಾಬೀನ್ ಮತ್ತು ಶೇಂಗಾ ಬೆಲೆಗಳು ಕನಿಷ್ಠ ಬೆಂಬಲ ಬೆಲೆಗಿಂತ (MSP) ಕಡಿಮೆ ಇದೆ. ಇದರಿಂದ ರಾಜ್ಯದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ತಕ್ಷಣವೇ ಈ ಬೆಳೆಗಳನ್ನು ಬೆಲೆ ಬೆಂಬಲ ಯೋಜನೆ ಅಡಿಯಲ್ಲಿ ಸಂಗ್ರಹಿಸಲು ಅನುಮೋದನೆ ನೀಡುವಂತೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಮಾಡಿದರು.

ಕಳೆದ ಕೆಲವು ವರ್ಷಗಳಿಂದ ರಾಜ್ಯಕ್ಕೆ ನಿರಂತರವಾಗಿ ಬೆಂಬಲ ಮತ್ತು ಸಹಕಾರ ನೀಡುತ್ತಿರುವ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಿಗೆ ಧನ್ಯವಾದ ಅರ್ಪಿಸುತ್ತೇವೆ. ರೈತರ ಪರವಾಗಿ SMAM, RKVY, ATMA, PMSKY, WDC ಮತ್ತು PDPS ನಂತಹ ಯೋಜನೆಗಳನ್ನು ಮಂಜೂರು ಮಾಡಿದ್ದಕ್ಕಾಗಿ, ಅದರಲ್ಲೂ ವಿಶೇಷವಾಗಿ ಕರ್ನಾಟಕದ ಮಾವು ಬೆಳೆಗಾರರಿಗೆ ಸಹಾಯ ಮಾಡಿದ್ದಕ್ಕಾಗಿ ನಾವು ಆಭಾರಿಯಾಗಿದ್ದೇವೆ ಎಂದು ಅವರು ಹೇಳಿದರು.

ಇದೇ ರೀತಿ ಬೆಲೆ ಕುಸಿತ ಎದುರಿಸುತ್ತಿರುವ ರೈತರ ತುರ್ತು ಅಗತ್ಯಗಳನ್ನು ಪೂರೈಸಿ ಸಂಕಷ್ಟದಿಂದ ಪಾರುಮಾಡುವಂತೆ ಸಚಿವರು ಮನವಿ ಮಾಡಿದರು.

ಕರ್ನಾಟಕದಲ್ಲಿ ರೈತರು ಯಾಂತ್ರೀಕೃತ ಕೃಷಿ ಪದ್ಧತಿಗಳನ್ನು ಹೆಚ್ಚು ಅಳವಡಿಸಿಕೊಳ್ಳುತ್ತಿದ್ದಾರೆ. ಇದರಿಂದಾಗಿ SMAM ಯೋಜನೆಗೆ ಹೆಚ್ಚಿನ ಬೇಡಿಕೆ ಇದೆ. ಹೀಗಾಗಿ 2025-26ನೇ ಸಾಲಿಗೆ ರಾಜ್ಯಕ್ಕೆ ಹೆಚ್ಚುವರಿಯಾಗಿ ರೂ 200 ಕೋಟಿ ಅನುದಾನವನ್ನು ಒದಗಿಸಬೇಕೆಂದು ಸಚಿವ ಚಲುವರಾಯಸ್ವಾಮಿ ಮನವಿ ಮಾಡಿದರು

ರಸಗೊಬ್ಬರ ಪೂರೈಕೆ: ಏಪ್ರಿಲ್‌ನಿಂದ ಸೆಪ್ಟೆಂಬರ್ 2025ರ ಅವಧಿಗೆ ನಮಗೆ ಪೂರೈಸಬೇಕಿದ್ದ 3.36 ಲಕ್ಷ ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರ ಇನ್ನೂ ಬಾಕಿ ಇದೆ. ದಯವಿಟ್ಟು ಆದಷ್ಟು ಬೇಗ ಪೂರೈಸಲು ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದರು‌.

ಕೃಷಿ ವಿಶ್ವವಿದ್ಯಾಲಯಕ್ಕೆ ಮಾನ್ಯತೆ: ಮಂಡ್ಯದಲ್ಲಿ ಹೊಸದಾಗಿ ಪ್ರಾರಂಭವಾದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ICAR ನಿಂದ ಔಪಚಾರಿಕ ಮಾನ್ಯತೆ ಮತ್ತು ಅಗತ್ಯ ಅನುದಾನ ನೀಡಬೇಕು. ಜೊತೆಗೆ, ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಿಂದ ಎಲ್ಲಾ ಕೃಷಿ ವಿಜ್ಞಾನ ಕೇಂದ್ರಗಳು (KVK) ಮತ್ತು ಅಖಿಲ ಭಾರತ ಸಮನ್ವಯ ಸಂಶೋಧನಾ ಯೋಜನೆ (AICRP) ಕೇಂದ್ರಗಳನ್ನು ಮಂಡ್ಯ ವಿಶ್ವವಿದ್ಯಾಲಯಕ್ಕೆ ವರ್ಗಾಯಿಸಬೇಕೆಂದು ಅವರು ಕೋರಿದರು.

Union Ministry of Agriculture and Farmers Welfare RKVY ಯೋಜನೆಗಳು: ರೈತರ ಕಲ್ಯಾಣಕ್ಕಾಗಿ RKVY ಯೋಜನೆಗಳಿಗೆ ಹೆಚ್ಚಿನ ಮಹತ್ವ ನೀಡಿ, ಅಗತ್ಯವಿರುವ ಹೆಚ್ಚುವರಿ ನಿಧಿಯನ್ನು ಮಂಜೂರು ಮಾಡುವಂತೆ ಚಲುವರಾಯಸ್ವಾಮಿ ಮನವಿ‌ ಮಾಡಿದರು.

ನಮ್ಮ ರಾಜ್ಯದ ರೈತರ ಹಿತ ಕಾಪಾಡುವ ಈ ನಿಟ್ಟಿನಲ್ಲಿ ಕೇಂದ್ರದ ಬೆಂಬಲ ಮತ್ತು ಸಕಾರಾತ್ಮಕ ಪ್ರತಿಕ್ರಿಯೆ ಎದುರು ನೋಡುತ್ತಿದ್ದೇವೆ. ಇದರಿಂದ ರೈತರ ಬದುಕು ಇನ್ನಷ್ಟು ಉತ್ತಮವಾಗುತ್ತದೆ ಎಂಬ ವಿಶ್ವಾಸ ನನಗಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ,ರಾಜ್ಯ ಸಚಿವರಾದ ಭಗೀರಥ ಚೌಧರಿ ಹಾಗೂ ವಿವಿಧ ರಾಜ್ಯಗಳ ಕೃಷಿ ಸಚಿವರು ಹಾಗೂ ಅಧಿಕಾರಿಗಳು ಕಾರ್ಯದಲ್ಲಿ ಪಾಲ್ಗೊಂಡಿದ್ದರು.

Karnataka Chitsters Association ಚಿಟ್ ಫಂಡ್ ಸಂಸ್ಥೆಗಳಿಂದ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ಆದಾಯ- ಟಿ.ಹೆಚ್.ಎಂ.ಕುಮಾರ್

0

Karnataka Chitsters Association ಚಿಟ್ ಫಂಡ್‌ಗಳಿಂದ ರಾಜ್ಯಕ್ಕೆ ಹೆಚ್ಚಿನ ಆದಾಯ ಬರುವ ಜತೆಯಲ್ಲಿ ಜನತೆಗೆ ಅನುಕೂಲವಾಗುತ್ತಿದೆ. ರಾಜ್ಯದಲ್ಲಿ 45 ವರ್ಷಗಳಿಂದ ನಡೆಯುತ್ತಿರುವ ನೋಂದಾಯಿತ ಚಿಟ್ ಫಂಡ್ ಸಂಸ್ಥೆಗಳ ಬೆಳವಣಿಗೆಗೆ ಇಲಾಖೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ಸಹಕಾರ ಇಲಾಖೆಯ ರಿಜಿಸ್ಟರ್ ಟಿ.ಎಚ್.ಎಂ.ಕುಮಾರ್ ಹೇಳಿದರು.
ಬೆಂಗಳೂರಿನಲ್ಲಿ ಬಾಬು ಜಗಜೀವನ್ ರಾಮ್ ಭವನದಲ್ಲಿ ಕರ್ನಾಟಕ ರಾಜ್ಯ ಚಿಟ್ ಸ್ಟರ್ಸ್ ಅಸೋಸಿಯೇಷನ್ ಆಯೋಜಿಸಿದ್ದ ಅಖಿಲ ಭಾರತ ಸಮಾವೇಶದಲ್ಲಿ ಮಾತನಾಡಿ, ರಾಜ್ಯದಲ್ಲಿ ನಾಲ್ಕುವರೆ ಲಕ್ಷ ಸಹಕಾರ ಸಂಘಗಳು ನೋಂದಣಿಯಾಗಿವೆ. ಅದರಲ್ಲಿ ಚಿಟ್ ಫಂಡ್ ಸಂಸ್ಥೆಗಳಿಂದ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ಆದಾಯ ಬರುತ್ತಿದೆ ಹಾಗೂ ಸಾಮಾನ್ಯ ಜನತೆಗೆ ಅನುಕೂಲವಾಗಿದೆ ಎಂದು ತಿಳಿಸಿದರು.
Karnataka Chitsters Association ಅಸೋಸಿಯೇಷನ್ ಅಧ್ಯಕ್ಷ ಟಿ.ಸಿ.ವಿಜಯಕುಮಾರ್ ಮಾತನಾಡಿ, ಚಿಟ್ ಫಂಡ್ ಸಂಸ್ಥೆಯನ್ನು ಫೆಡರೇಷನ್ ಮಾಡಲು ಸಿದ್ಧತೆ ನಡೆಸಿದ್ದೇವೆ. ಸರ್ಕಾರ ರಾಜ್ಯ ಚಿಟ್ ಸ್ಟರ್ಸ್ ಅಸೋಸಿಯೇಷನ್ ಅನ್ನು ಫೆಡರೇಷನ್ ಆಫ್ ಕರ್ನಾಟಕ ಚಿಟ್ಸ್ ಎನ್ನುವ ಮಾನ್ಯತೆ ನೀಡಿದರೆ ಸರ್ಕಾರಕ್ಕೆ ಹೆಚ್ಚಿನ ಆದಾಯ ಹಾಗೂ ಗ್ರಾಹಕರಿಗೆ ಹೆಚ್ಚಿನ ಭರವಸೆ ದೊರೆಯುತ್ತದೆ. ಈ ಬಗ್ಗೆ ಸರ್ಕಾರ ಕ್ರಮ ಕೈಗೊಂಡು ಸಹಕರಿಸಬೇಕು ಎಂದು ವಿನಂತಿಸಿದರು.
ಸಮಾವೇಶದಲ್ಲಿ ಶಿವಮೊಗ್ಗದಿಂದ ಸಹ್ಯಾದ್ರಿ ಚಿಟ್ಸ್ನ ಚೇರ್ಮನ್ ಟಿ.ಎಸ್.ಬದ್ರಿನಾಥ್, ಮ್ಯಾನೇಜಿಂಗ್ ಡೈರೆಕ್ಟರ್ ರಮೇಶ್ ಭಟ್, ಮಾರ್ಕೆಟಿಂಗ್ ಡೈರೆಕ್ಟರ್ ಶಿವರಾಜ್ ಉಡುಗಣಿ, ನಿರ್ದೇಶಕರಾದ ಜಿ.ವಿಜಯಕುಮಾರ್ ಹಾಗೂ ರವೀಂದ್ರನಾಥ್ ಐತಾಳ್ ಹಾಜರಿದ್ದರು.
ಸಮಾವೇಶದಲ್ಲಿ ಮಾರ್ಗದರ್ಶಿ ಚಿಟ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಶೈಲಜಾ ಕಿರಣ್, ಎಂಎಸ್‌ಐಎಲ್ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಕುಮಾರ್, ಸಹಕಾರ ಇಲಾಖೆ ಜಂಟಿ ನಿರ್ದೇಶಕ ಡಾ. ಸುರೇಶ್ ಗೌಡ, ಎಫ್‌ಕೆಸಿಸಿಐ ಅಧ್ಯಕ್ಷ ಎಂ.ಜಿ.ಬಾಲಕೃಷ್ಣ, ಕೆಸಿಎ ಆಡಳಿತ ಮಂಡಳಿಯ ಮನೋಹರ ಮಲ್ಲರಾಚಪ್ಪ, ಎಂ.ಹರೀಶ್ ಇತರರಿದ್ದರು.

Chamber Of Commerce Shivamogga ಸ್ಟಾರ್ ರೇಟಿಂಗ್ ಹೊಂದಿರುವ ಉಪಕರಣಗಳ ಆಯ್ಕೆ ಮೂಲಕ ಇಂಧನದಿಂದ ಹೊರಸೂಸುವ ಇಂಗಾಲವನ್ನ ತಡೆಯಬಹುದು- ಬಿ.ಗೋಪಿನಾಥ್

0

Chamber Of Commerce Shivamogga ಇಂಧನ ಉಳಿತಾಯ ಅಭ್ಯಾಸಗಳನ್ನು ಪ್ರತಿಯೊಬ್ಬರೂ ರೂಢಿಸಿಕೊಳ್ಳಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.

ರಾಯಲ್ ಆರ್ಕಿಡ್‌ನಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಮತ್ತು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹಭಾಗಿತ್ವದಲ್ಲಿ ಏರ್ಪಡಿಸಿದ್ದ ಮಾಹಿತಿ ಕಾರ್ಯಗಾರದಲ್ಲಿ ಮಾತನಾಡಿ, ಜನರು ಸಾಧ್ಯವಾದ ಸಂದರ್ಭಗಳಲ್ಲಿ ಸಾರ್ವಜನಿಕ ಸಾರಿಗೆಯನ್ನು ಬಳಸಬೇಕು. ಹೆಚ್ಚಿನ ಇಂಧನ ಉಳಿತಾಯ ಅಭ್ಯಾಸಗಳನ್ನು ಹೊಂದುವ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಕ್ರೇಡೆಲ್ ಹೊಂದಿದ್ದು, ವಿವಿಧ ಚಟುವಟಿಕೆಗಳನ್ನು ಕ್ರೇಡಲ್ ಆಯೋಜಿಸುತ್ತಿದೆ ಎಂದು ತಿಳಿಸಿದರು.

ಇಂಧನ ವ್ಯರ್ಥವನ್ನು ಕಡಿಮೆ ಮಾಡುವುದು, ದಕ್ಷ ಇಂಧನ ಬಳಕೆಯನ್ನು ಉತ್ತೇಜಿಸುವುದು ಮತ್ತು ಸುಸ್ಥಿರ ಅಭ್ಯಾಸಗಳನ್ನು ಪ್ರೋತ್ಸಾಹಿಸುವ ಕೇಂದ್ರ ವಿದ್ಯುತ್ ಸಚಿವಾಲಯದ ಅಧೀನದಲ್ಲಿರುವ ಇಂಧನ ದಕ್ಷತೆಯ ಬ್ಯೂರೋ 5 ಸ್ಟಾರ್ ರೇಟಿಂಗ್ ಹೊಂದಿರುವ ಇಂಧನ ಸಮರ್ಥ ಉಪಕರಣಗಳನ್ನು ಆಯ್ಕೆ ಮಾಡಬೇಕು. ಸ್ಟಾರ್ ರೇಟೆಡ್ ಗೃಹೋಪಯೋಗಿ ಉಪಕರಣಗಳನ್ನು ಉಪಯೋಗಿಸುವುದರ ಮೂಲಕ ಹವಮಾನ ಬದಲಾವಣೆ ಮತ್ತು ಇಂಗಾಲ ಅನಿಲ ಹೊರಸುಸುವಿಕೆ ತಡೆಯಬಹುದು ಎಂದರು.

ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಆರ್.ಗಣೇಶ್ ಮಾತನಾಡಿ, ಇಂಧನ ಸಂರಕ್ಷಣೆ, ಹವಾಮಾನ ಬದಲಾವಣೆ ಮತ್ತು ಪರಿಸರ ನಾಶವನ್ನು ಎದುರಿಸುವ ಭಾರತದ ವಿಶಾಲ ಧ್ಯೇಯದ ಭಾಗವಾಗಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು ಕಾರ್ಯಕ್ರಮ ರೂಪಿಸಿದೆ ಎಂದು ಹೇಳಿದರು.

ರಾಜ್ಯದಲ್ಲಿನ ಚಟುವಟಿಕೆಗಳು ಇಂಧನ ವ್ಯರ್ಥವನ್ನು ಕಡಿಮೆ ಮಾಡುವುದು, ದಕ್ಷ ಇಂಧನ ಬಳಕೆ ಉತ್ತೇಜಿಸುವುದು ಮತ್ತು ಸುಸ್ಥಿರ ಅಭ್ಯಾಸಗಳನ್ನು ಪ್ರೋತ್ಸಾಹಿಸುವ ಬಗ್ಗೆ ಜಾಗೃತಿ ಮೂಡಿಸುವ ಗುರಿ ಹೊಂದಿವೆ ಎಂದು ತಿಳಿಸಿದರು.

ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜಿನ ಡಾ. ಎಚ್.ಬಿ.ಸುರೇಶ್, ಕ್ರೆಡಲ್ ಅಧಿಕಾರಿಗಳಾದ ಪ್ರೀತಿ ಗುಪ್ತ, ನಿತಿನ್ ಅವರು ಇಂಧನ ಸಂರಕ್ಷಣೆ ಪಾಲಿಸುವ ಬಗ್ಗೆ ರೂಪರೇಷೆ ವಿವರಿಸಿದರು. ಉಪನ್ಯಾಸದ ನಂತರ ಕಾರ್ಯಗಾರದಲ್ಲಿ ಹಾಜರಿದ್ದ ಶಿಬಿರಾರ್ಥಿಗಳಿಗೆ ಎಲ್ಲ ಸಂದೇಹದ ಪ್ರಶ್ನೆಗಳಿಗೆ ಸಮರ್ಪಕ ಮಾಹಿತಿ ನೀಡಿದರು.

Chamber Of Commerce Shivamogga ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯ್ ಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ, ನಿರ್ದೇಶಕರಾದ ಗಣೇಶ್ ಎಂ ಅಂಗಡಿ, ವಿನೋದ್ ಕುಮಾರ್ ಜೈನ್, ವಸಂತ್ ಹೋಬಳಿದಾರ್ , ಬಿ.ಸುರೇಶ್ ಕುಮಾರ್, ಉದ್ಯಮಿ ಶಿಲ್ಪಾ ಗೋಪಿನಾಥ್ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಹೋಮ್ ಅಪ್ಲೈಯನ್ಸ್ ಡೀಲರ್ಸ್, ಟೆಕ್ನಿಷಿಯನ್ಸ್, ಬಳಕೆದಾರರು ಹಾಗೂ ಅನೇಕ ವಾಣಿಜ್ಯ ಮತ್ತು ಕೈಗಾರಿಕ ಉದ್ಯಮಿಗಳು ಭಾಗವಹಿಸಿದ್ದರು.

Innerwheel Club Organization ಇನ್ನರ್ ವೀಲ್ ಸಂಸ್ಥೆಯು ಆರ್ಥಿಕ ಸಂಕಷ್ಟದಲ್ಲಿರುವ ಮಕ್ಕಳ ಶಿಕ್ಷಣಕ್ಕೆ ನೆರವು ನೀಡುತ್ತಿದೆ- ಅನ್ನಪೂರ್ಣ ರಂಗರಾಜನ್

0

Innerwheel Club Organization ಇನ್ನರ್‌ವ್ಹೀಲ್ ಕ್ಲಬ್ ಸಂಸ್ಥೆಯು ವಿಶ್ವಾದ್ಯಂತ ಸೇವಾಕಾರ್ಯಗಳನ್ನು ನಡೆಸುತ್ತಿದೆ ಎಂದು ಇನ್ನರ್ ವೀಲ್ ಕ್ಲಬ್ ಆಫ್ ಶಿವಮೊಗ್ಗ ಸೆಂಚುರಿ ಅಧ್ಯಕ್ಷೆ ಅನ್ನಪೂರ್ಣ ರಂಗರಾಜನ್ ಹೇಳಿದರು.

ಇನ್ನರ್ ವೀಲ್ ಕ್ಲಬ್ ಆಫ್ ಶಿವಮೊಗ್ಗ ಸೆಂಚುರಿ ವತಿಯಿಂದ ತರಂಗ ಕಿವುಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಗೆ ಮಗುವಿನ ವಿದ್ಯಾಭ್ಯಾಸಕ್ಕಾಗಿ ಹತ್ತು ಸಾವಿರ ರೂ. ದೇಣಿಗೆ ನೀಡಿ ಮಾತನಾಡಿ, ಇನ್ನರ್‌ವ್ಹೀಲ್ ಸಂಸ್ಥೆಯು ಮಕ್ಕಳ ಶಿಕ್ಷಣಕ್ಕಾಗಿ ವಿಶೇಷ ನೆರವು ಯೋಜನೆಗಳನ್ನು ಅನುಷ್ಠಾನ ಮಾಡುತ್ತಿದ್ದು, ಆರ್ಥಿಕ ಸಂಕಷ್ಟದಲ್ಲಿ ಇರುವ ಮಕ್ಕಳಿಗೆ ಹಣಕಾಸಿನ ನೆರವು ಒದಗಿಸುತ್ತಿದೆ. ಇದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಇನ್ನರ್ ವೀಲ್ ಕ್ಲಬ್ ಆಫ್ ಶಿವಮೊಗ್ಗ ಸೆಂಚುರಿ ಕಾರ್ಯದರ್ಶಿ ಸುಮಾ ಸತೀಶ್ ಮಾತನಾಡಿ, ನಮ್ಮ ಕ್ಲಬ್ ವತಿಯಿಂದ ಸಮಾಜಮುಖಿ ಕಾರ್ಯಕ್ರಮಗಳ ಜತೆಯಲ್ಲಿ ಆರೋಗ್ಯ ಜಾಗೃತಿ, ರಸ್ತೆ ಸುರಕ್ಷತೆ ಅರಿವು ಸೇರಿದಂತೆ ವೈವಿಧ್ಯ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಇನ್ನಷ್ಟು ಸೇವಾ ಚಟುವಟಿಕೆಗಳನ್ನು ನಡೆಸಲಾಗುವುದು ಎಂದು ಹೇಳಿದರು.

Innerwheel Club Organization ಇದೇ ಸಂದರ್ಭದಲ್ಲಿ ಇಬ್ಬರು ಹಿರಿಯ ಶಾಲಾ ಶಿಕ್ಷಕರಾದ ರಾಘವೇಂದ್ರ ಪಾಟೀಲ್ ಮತ್ತು ಟಿ.ಜಯರಾಂ ಬೋವಿ ಅವರನ್ನು ಗೌರವಿಸಲಾಯಿತು. ಶೋಭಾ ರಾಣಿ, ಸುಮಾ ಹರಿಪ್ರಸಾದ್, ಉಮಾ ಅಮರ್, ಮೇಘ ಜೋಷಿ, ಆಶಾ ನಂದಿಶ್, ಪ್ರಿಯಾ ಮತ್ತು ಶಾಲೆಯ ಮುಖ್ಯಸ್ಥರಾದ ರಾಘವೇಂದ್ರ ಪಾಟೀಲ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

DVS Composite Pre-university College ವಿದ್ಯಾರ್ಥಿಗಳು ಶಾಸಕಾಂಗ,ಕಾರ್ಯಾಂಗ & ನ್ಯಾಯಾಂಗದ ಕಾರ್ಯಗಳ ಬಗ್ಗೆ ತಿಳಿಯಲು ಅಣಕು ಸಂಸತ್ ಸಹಕಾರಿ- ಚಂದ್ರಪ್ಪ ಎಸ್.ಗುಂಡಪಲ್ಲಿ

0

DVS Composite Pre-university College ವಿದ್ಯಾರ್ಥಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಾಲ್ಗೊಳ್ಳುವುದರಿಂದ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದ ಕಾರ್ಯವೈಕರಿಯನ್ನು ತಿಳಿಯಲು ಅಣಕು ಸಂಸತ್ ಸ್ಪರ್ಧೆ ನೆರವಾಗುತ್ತದೆಂದು ಅಧ್ಯಕ್ಷತೆ ವಹಿಸಿದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಶಿವಮೊಗ್ಗ ನಿರ್ದೇಶಕ ಚಂದ್ರಪ್ಪ ಎಸ್ ಗುಂಡಪಲ್ಲಿ ಹೇಳಿದರು.

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಇಲಾಖೆ ಬೆಂಗಳೂರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಡಿ.ವಿ.ಎಸ್. ಸಂಯುಕ್ತ ಪದವಿ ಪೂರ್ವ ಕಾಲೇಜು, ಶಿವಮೊಗ್ಗ ಇವರ ಸಹಯೋಗದೊಂದಿಗೆ 2025- 26ನೇ ಸಾಲಿನ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಯುವ ಸಂಸತ್ ಸ್ಪರ್ಧೆ, ಅಬ್ದುಲ್ ನಜೀರ್ ಸಾಬ್ ಸಭಾಂಗಣ ಜಿ. ಪಂ. ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದೈನಂದಿನ ಜೀವನದಲ್ಲಿ ನಡೆಯುವ ಪ್ರಚಲಿತ ಘಟನೆಗಳು, ಪ್ರಶ್ನೆಗಳನ್ನು ಗಮನಿಸಿದರೆ ಇವತ್ತಿನ ಯುವ ಪೀಳಿಗೆ ಎತ್ತ ಸಾಗುತ್ತಿದೆ ಎಂಬ ಪ್ರಶ್ನೆ ಮೂಡುತ್ತದೆ.
ಅರ್ಥಪೂರ್ಣವಾಗಿ ಭಾಗವಹಿಸುವ ಮೂಲಕ ರಾಜ್ಯ,ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಬೇಕು. ತೀರ್ಪುಗಾರರು ನ್ಯಾಯಾಧೀಶರ ಸ್ಥಾನದಲ್ಲಿದ್ದು ನಿಷ್ಪಕ್ಷಪಾತವಾಗಿ ತೀರ್ಪು ನೀಡುತ್ತಾರೆಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಶಿವಮೊಗ್ಗ ಜಿಲ್ಲಾ ಪಂಚಾಯಿತಿಯ ಡಿ ಎಸ್ ಟು ಅನ್ನಪೂರ್ಣ ಮಾತನಾಡಿ ಈ ರೀತಿಯ ಕಾರ್ಯಕ್ರಮಗಳಿಂದ ನಮ್ಮ ರಾಷ್ಟ್ರದ ರಾಜಕೀಯ ವ್ಯವಸ್ಥೆ, ಸಂಸದೀಯ ವ್ಯವಹಾರಗಳು ಹೇಗೆ ನಡೆಯುತ್ತವೆ ಎಂಬ ಜ್ಞಾನ ವಿದ್ಯಾರ್ಥಿಗಳಿಗೆ ತಿಳಿಯುತ್ತದೆ ಎಂದರು.

ಮುಖ್ಯ ಅತಿಥಿಗಳಾಗಿ ಡಿ.ವಿ. ಎಸ್. ಸಮಿತಿ( ರಿ.) ಅಧ್ಯಕ್ಷ ಕೆ.ಎನ್. ರುದ್ರಪ್ಪ ಕೊಳಲೆ ಅವರು 63 ವರ್ಷಗಳ ಹಿಂದಿನ ತಮ್ಮ ವಿದ್ಯಾರ್ಥಿ ಜೀವನದ ಕಾಲೇಜು ದಿನಗಳನ್ನು ನೆನಪು ಮಾಡಿಕೊಂಡು ತಾವು ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಿದ್ದೆ ಎಂದರು.

ಜಿಲ್ಲಾ ಪ್ರಾಚಾರ್ಯರ ಸಂಘದ ಅಧ್ಯಕ್ಷ ಪಂಡರೀನಾಥ್ ಎಸ್. ಮಾತನಾಡಿ ಇಂದಿನ ವಿದ್ಯಾರ್ಥಿಗಳು ಮುಂದೆ ರಾಜಕೀಯವಾಗಿ ವಿವಿಧ ಹುದ್ದೆಗಳಲ್ಲಿ ಕಾಣಿಸಬಹುದು ಎಂದರು.

DVS Composite Pre-university College ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಯೋಗೀಶ್ ಎಸ್. ಉತ್ತಮವಾದ ಸಮಾಜವನ್ನು ಕಟ್ಟುವ ಶಕ್ತಿ ಯುವ ಜನತೆಗಿದ್ದು ಜೀವನದಲ್ಲಿ ಪ್ರಾಮಾಣಿಕತೆಯನ್ನು ರೂಡಿಸಿಕೊಳ್ಳಬೇಕೆಂದರು.
ಜಿಲ್ಲಾ ರಾಜ್ಯಶಾಸ್ತ್ರ ಉಪನ್ಯಾಸಕರ ವೇದಿಕೆಯ ಅಧ್ಯಕ್ಷ ಮಂಜುನಾಥ ಬಣಕಾರ ಪ್ರಸ್ತಾವಿಕ ನುಡಿಗೈದರು.
ವೇದಿಕೆಯಲ್ಲಿ ಜಿಲ್ಲಾ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ರಾಜು ಕೆ.ಹೆಚ್.,ಜಿ.ಎಫ್. ಕುಟ್ರಿ, ಉಪಸ್ಥಿತರಿದ್ದರು.

ರಾಜ್ಯಶಾಸ್ತ್ರ ಉಪನ್ಯಾಸಕರಾದ ದೇವಕುಮಾರ ಎ.ಜಿ. ಘನಶಾಮ್, ಡಾ. ವಸಂತನಾಯ್ಕ್, ತೀರ್ಥಪ್ಪ ಭಾಗವಹಿಸಿದ್ದರು.

ಕು.ವಾರುಣಿ ಪ್ರಾರ್ಥಿಸಿ, ಡಿ.ವಿ.ಎಸ್.ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಉಮೇಶ್ ಹೆಚ್.ಸಿ. ಸ್ವಾಗತಿಸಿ, ಉಪನ್ಯಾಸಕ ಸಂದೇಶ ನಾಡಿಗ್ ನಿರೂಪಿಸಿ ಉಪನ್ಯಾಸಕಿ ಆಶಾ ವಂದಿಸಿದರು.

Sri Ramakrishna Vidyaniketan ಈಜು ಸೇರಿದಂತೆ ಇತರ ಕ್ರೀಡೆಗಳು ಮಕ್ಕಳಲ್ಲಿ ಮಾನಸಿಕ ಪ್ರೌಢತೆ ಬೆಳೆಸುತ್ತವೆ- ಮಂಜುನಾಥ್

0

Sri Ramakrishna Vidyaniketan ಶಿವಮೊಗ್ಗ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶ್ರೀ ರಾಮಕೃಷ್ಣ ವಿದ್ಯಾನಿಕೇತನ, ಗೋಪಾಳ ಇದರ ಸಂಯುಕ್ತಾಶ್ರಯದಲ್ಲಿ ಇಂದು ಆರಂಭಗೊಂಡ 2025 – 26ರ ಸಾಲಿನ 14 ರಿಂದ 17 ವಯೋಮಿತಿಯ ಬಾಲಕ, ಬಾಲಕಿಯರ ಈಜು ಕ್ರೀಡಾಕೂಟವನ್ನು ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಮಂಜುನಾಥ್ ಅವರು ಉದ್ಘಾಟಿಸಿದರು.
ಅವರು ಮಾತನಾಡುತ್ತಾ ಪ್ರತಿ ಮಗುವಿನ ಸದೃಢವಾದ ಶರೀರದಲ್ಲಿ ಸದೃಢವಾದ ಮನಸ್ಸು ಬೆಳೆಯಲು ಕ್ರೀಡೆ ಸಹಕಾರಿ ಈಜು ಸೇರಿದಂತೆ ಇತರ ಕ್ರೀಡೆಗಳು ಹಾಗೂ ವ್ಯಾಯಾಮ ಮಕ್ಕಳಲ್ಲಿ ಮಾನಸಿಕ ಪ್ರೌಢತೆಯನ್ನು ಬೆಳೆಸುತ್ತದೆ ಎಂದರು.
ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಪ್ರಕಾಶ್, ಗಿಡ ಮತ್ತು ಯುವಜನ ಸಬಲೀಕರಣ ಇಲಾಖೆಯ ಉಪನಿಷಕ ರೇಖ್ಯಾನಾಯ್ಕ್ ಅವರು ಉಪಸ್ಥಿತರಿದ್ದರು.
Sri Ramakrishna Vidyaniketan ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಮಕೃಷ್ಣ ವಿದ್ಯಾನಿಕೇತನದ ಅಧ್ಯಕ್ಷ ಡಾ. ಡಿ. ಆರ್. ನಾಗೇಶ್ ವಹಿಸಿದ್ದು, ಕಾರ್ಯದರ್ಶಿ ಶೋಭಾ ವೆಂಕಟರಮಣ, ಟಿ.ಪಿ. ಚಂದ್ರಪ್ಪ ಹಾಗೂ ಇತರರು ಉಪಸ್ಥಿತರಿದ್ದರು.
ಕುಮಾರಿ ಕವನ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕ ತೀರ್ಥೇಶ್ ಸ್ವಾಗತಿಸಿದರು. ಹಿರಿಯ ಶಿಕ್ಷಕ ಟಿ.ವಿ. ಗಜೇಂದ್ರನಾಥ್ ವಂದಿಸಿದರು.
ಗೋಪಾಳದ ರಾಮಕೃಷ್ಣ ವಿದ್ಯಾ ನಿಕೇತನದ ಪಕ್ಕದಲ್ಲಿರುವ ಕ್ರೀಡಾ ಸಂಕೀರ್ಣದ ಈಜು ಕೊಳದಲ್ಲಿ ಈ ಸ್ಪರ್ಧೆ ನಡೆಯುತ್ತಿದೆ.

Chamber Of Commerce Shivamogga ಕ್ರೀಡೆಗಳಿಂದ ಮನುಷ್ಯನ ಮಾನಸಿಕ ವಿಕಸನ- ಜಿ.ವಿಜಯ ಕುಮಾರ್

0

Chamber Of Commerce Shivamogga ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯ ಸದೃಢವಾಗುತ್ತದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಹೇಳಿದರು.

ಜೆಸಿಐ ಸಪ್ತಾಹದ ಅಂಗವಾಗಿ ನಗರದ ನೆಹರು ಕ್ರೀಡಾಂಗಣದಲ್ಲಿ ಜೆಸಿ ಸದಸ್ಯರಿಗೆ ಹಾಗೂ ಸದಸ್ಯರಲ್ಲದವರಿಗೆ ವಲಯದ ಎಲ್ಲ ಜೆಸಿಐಗಳಿಂದ ಆಯೋಜಿಸಿದ್ದ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ಕ್ರೀಡೆಯು ಮನುಷ್ಯನ ಮನಸ್ಸನ್ನು ವಿಕಸನಗೊಳಿಸುತ್ತದೆ ಹಾಗೂ ನಮ್ಮಲ್ಲಿ ಜೀವನೋತ್ಸಾಹವನ್ನು ತುಂಬುತ್ತದೆ. ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಸದೃಢತೆ ವೃದ್ಧಿಯಾಗುತ್ತದೆ ಎಂದು ತಿಳಿಸಿದರು.

ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಮ್ಮ ಜೀವನದ ಅವಿಭಾಜ್ಯ ಅಂಗವಾಗಬೇಕು. ಪ್ರತಿನಿತ್ಯ 24 ಗಂಟೆಗಳಲ್ಲಿ ಒಂದು ಗಂಟೆಯಾದರೂ ಸಹ ನಮ್ಮ ಆರೋಗ್ಯಕ್ಕಾಗಿ ಸಮಯ ಮೀಸಲಿಡಬೇಕು. ಇದರಿಂದ ಸದಾ ನಾವು ಆರೋಗ್ಯದಿಂದ ಇರುತ್ತೇವೆ ಎಂದು ಹೇಳಿದರು.

ಜೆಸಿಐ ವಲಯ ಅಧ್ಯಕ್ಷ ಗೌರೀಶ್ ಭಾರ್ಗವ್ ಮಾತನಾಡಿ, ಕ್ರೀಡೆ ಪರಸ್ಪರರಲ್ಲಿ ಸ್ನೇಹ ವಿಶ್ವಾಸ ಪ್ರೀತಿಯನ್ನು ವೃದ್ಧಿಸುತ್ತದೆ. ನಮ್ಮ ಜೆಸಿ ಸಂಸ್ಥೆಯಲ್ಲಿ ರಾಜ್ಯ, ರಾಷ್ಟ್ರ ಮಟ್ಟದ ಆಟಗಾರರು ಸಹ ಇದ್ದಾರೆ. ಇಂತಹ ಕ್ರೀಡೆಗಳಿಂದ ಅವರಿಗೆ ಉತ್ಸಾಹ ಮೂಡುತ್ತದೆ. ಪ್ರತಿಯೊಬ್ಬ ಸದಸ್ಯರು ಕುಟುಂಬ ಸಮೇತರಾಗಿ ಭಾಗವಹಿಸಿ ಪ್ರತಿಭೆಯನ್ನು ಅನಾವರಣಗೊಳಿಸಬೇಕು ಎಂದು ತಿಳಿಸಿದರು.

Chamber Of Commerce Shivamogga ಜೆಸಿಐ ಸಂಸ್ಥೆಯ ಪ್ರಮೋದ್ ಶಾಸ್ತ್ರಿ. ಸುದರ್ಶನ್, ವಿನೀತ್, ಮೋಹನ್, ನವೀನ್, ಜೆಸಿಐ ಸಹ್ಯಾದ್ರಿ ಘಟಕದ ಗಣೇಶ್ ಕ್ರೀಡಾಕೂಟದ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಜೆಸಿಐನ ರೇಖಾ ರಂಗನಾಥ್, ಪೂರ್ಣಿಮಾ ಸುನಿಲ್ ಹಾಗೂ ಜೆಸಿಐನ ಎಲ್ಲಾ ಅಧ್ಯಕ್ಷರುಗಳು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Mangalore Institute of Oncology ಸೆ.20. ಶಿವಮೊಗ್ಗದಲ್ಲಿ ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್ ಮಾಹಿತಿ ಕೇಂದ್ರದ ಉದ್ಘಾಟನೆ

0

Mangalore Institute of Oncology ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಆಂಕಾಲಜಿ ಹಾಗೂ ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್ ತೀರ್ಥಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಶಿವಮೊಗ್ಗ ನಗರದಲ್ಲಿ ಕ್ಯಾನ್ಸರ್ ಮಾಹಿತಿ ಕೇಂದ್ರದ ಉದ್ಘಾಟನಾ ಸಮಾರಂಭ 20.09.2025 ರ ಶನಿವಾರ ಬೆಳಿಗ್ಗೆ 9.30 ಕ್ಕೆ ನಗರದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಹೋಟೆಲ್ ಮಥುರ ಪ್ಯಾರಡೈಸ್ ನೆಲ ಮಳಿಗೆ ಕೊಠಡಿಯಲ್ಲಿ ಹಮ್ಮಿಕೊಳ್ಳಲಾಗಿದೆ. Mangalore Institute of Oncology ಉದ್ಘಾಟನಾ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿಶ್ರೀ ಚೆನ್ನಬಸಪ್ಪ, ಶಾಸಕರು, ಶಿವಮೊಗ್ಗ ವಿಧಾನ ಸಭಾ ಹಾಗೂ ಶ್ರೀ ಎನ್. ಗೋಪಿನಾಥ್, ಅಧ್ಯಕ್ಷರು, ನಮ್ಮ ಕನಸಿನ ಶಿವಮೊಗ್ಗ ಇವರು ಆಗಮಿಸಲಿದ್ದಾರೆ. ಅಧ್ಯಕ್ಷತೆಯನ್ನು ಎಂ.ಐ.ಒ ಆಸ್ಪತ್ರೆಯ ಮತ್ತು ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್ ನ ನಿರ್ದೇಶಕರಾದ ಡಾ. ಡಿ.ಸುರೇಶ್ ರಾವ್ ವಹಿಸಲಿದ್ದಾರೆ.ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಕೇಂದ್ರದ ಸಂಯೋಜಕರಾದ ಅ.ನಾ.ವಿಜಯೇಂದ್ರ ರಾವ್ ಕೋರಿದ್ದಾರೆ