Tuesday, February 17, 2026
Tuesday, February 17, 2026
Home Blog Page 163

Karnataka Working Journalists Association ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ.ರಾಜ್ಯದ ಮುಖ್ಯ ಚುನಾವಣಾಧಿಕಾರಿಯಾಗಿ ಟೆಲೆಕ್ಸ್ ರವಿಕುಮಾರ್ ನೇಮಕ

0

Karnataka Working Journalists Association ರಾಜ್ಯದ ಕಾರ್ಯ ನಿರತ ಪತ್ರಕರ್ತರ ಪ್ರಾತಿನಿಧಿಕ ಪ್ರತಿಷ್ಠಿತ ಸಂಘಟನೆಯಾಗಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲುಜೆ) 2025-28 ಸಾಲಿನ ನೂತನ ಕಾರ್ಯಕಾರಿ ಮಂಡಳಿಯ ಚುನಾವಣೆ ನಡೆಸಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಯಾಗಿ ಹಿರಿಯ ಪತ್ರಕರ್ತ ಎನ್. ರವಿಕುಮಾರ್ (ಟೆಲೆಕ್ಸ್ ) ಅವರು ನೇಮಕಗೊಂಡಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಹತ್ತು ಸಾವಿರಕ್ಕೂ ಹೆಚ್ಚಿನ ಪತ್ರಕರ್ತ ಸದಸ್ಯರನ್ನು ಹೊಂದಿದ್ದು, ರಾಜ್ಯ ಕಾರ್ಯಕಾರಿ ಸಮಿತಿ ಮತ್ತು ಎಲ್ಲಾ ಸಂಘದ ಎಲ್ಲಾ ಜಿಲ್ಲಾ ಸಮಿತಿಗಳಿಗೂ ಏಕಕಾಲದಲ್ಲಿ ಚುನಾವಣೆ ನಡೆಯಲಿದೆ.

, ಶೀಘ್ರದಲ್ಲೇ ಚುನಾವಣಾ ವೇಳಾಪಟ್ಟಿ ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರು ತಿಳಿಸಿದ್ದಾರೆ.

Karnataka Working Journalists Association ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಮುಖ್ಯ ಚುನಾವಣಾಧಿಕಾರಿಯಾಗಿ ನೇಮಕಗೊಂಡಿರುವ ಎನ್.ರವಿಕುಮಾರ್ ಟೆಲೆಕ್ಸ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಕೆ ವಿ ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಅರುಣ್ ವಿ ಟಿ , ಅವರು ಅಭಿನಂದನೆ ಸಲ್ಲಿಸಿದ್ದಾರೆ..

Karnataka Banjara Thanda Development Corporation ಬಂಜಾರ ಕಲಾವಿದರಿಂದ ಕಲಾಮಳಾವ್ ಗೆ ಆಸಕ್ತರಿಂದ ಅರ್ಜಿ ಆಹ್ವಾನ

0

Karnataka Banjara Thanda Development Corporation ಕರ್ನಾಟಕ ಬಂಜಾರ ತಾಂಡಾ ಅಭಿವೃದ್ಧಿ ನಿಗಮವು ಬಂಜಾರ ಸಮುದಾಯದ ಸಾಂಪ್ರದಾಯಿಕ ಸಂಸ್ಕೃತಿ ಮತ್ತು ಕಲೆಗಳನ್ನು ಉಳಿಸಿ, ಬೆಳೆಸಿ ಪುನಶ್ಚೇತನಗೊಳಿಸುವ ಉದ್ದೇಶದಿಂದ ಮತ್ತು ಬಂಜಾರ ಕಲಾವಿದರ ಪ್ರತಿಭೆಯನ್ನು ಹೊರಹೊಮ್ಮಿಸಲು ಕಲಾ ಪ್ರತಿಭಾನ್ವೇಷಣೆ-ಕಲಾ ಮಳಾವ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಆಸಕ್ತ ಬಂಜಾರ ಸಮುದಾಯದ ಕಲಾವಿದರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತ ಬಂಜಾರ ಕಲಾವಿದರು ನಿಗಮದ ವಲಯ ಕಚೇರಿಯಿಂದ ನಿಗದಿತ ನಮೂನೆ ಅರ್ಜಿಯನ್ನು ಪಡೆದು, ಭರ್ತಿ ಮಾಡಿ ಅರ್ಜಿಯನ್ನು ಸೆ. 28 ರೊಳಗಾಗಿ ಸಲ್ಲಿಸುವಂತೆ ನಿಗಮದ ಅಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.

South Western Railway Mysore ರೈಲ್ವೆ ಮೈಸೂರು ವಿಭಾಗದಲ್ಲಿ ” ಸ್ವಚ್ಛತಾ ಹಿ ಸೇವಾ” ಅಭಿಯಾನಕ್ಕೆ ಚಾಲನೆ

0

South Western Railway Mysore ನೈಋತ್ಯ ರೈಲ್ವೆ, ಮೈಸೂರು ವಿಭಾಗವು “ಸ್ವಚ್ಛತೆ ಹಿ ಸೇವಾ” ಅಭಿಯಾನದ ಚಟುವಟಿಕೆಗಳನ್ನು 17 ಸೆಪ್ಟೆಂಬರ್ 2025 ರಂದು ಆರಂಭಿಸಿದ್ದು, ಇದು 2 ಅಕ್ಟೋಬರ್ 2025 ರವರೆಗೆ ಮುಂದುವರಿಯಲಿದೆ.

ಈ ಅಭಿಯಾನವನ್ನು ಮೈಸೂರು ರೈಲ್ವೆ ನಿಲ್ದಾಣದಲ್ಲಿ ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಶ್ರೀ ಮುದಿತ್ ಮಿತ್ತಲ್ ಅವರು ಸ್ವಚ್ಛತೆ ಪ್ರತಿಜ್ಞೆ ಮೂಲಕ ಆರಂಭಿಸಿದರು. ಕಾರ್ಯಕ್ರಮದ ಅಂಗವಾಗಿ ವಿಭಾಗದ ವಿವಿಧ ಸ್ಥಳಗಳಲ್ಲಿ ಶ್ರಮದಾನ ಚಟುವಟಿಕೆಗಳನ್ನು ನಡೆಸಲಾಯಿತು.

ಶ್ರೀ ಮುದಿತ್ ಮಿತ್ತಲ್, ವಿಭಾಗೀಯ ರೈಲ್ವೆ ವ್ಯವಸ್ಥಾಪಕರು, ಶ್ರೀ ಶಮ್ಮಾಸ್ ಹಮೀದ್, ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು, ಹಿರಿಯ ಅಧಿಕಾರಿಗಳೊಂದಿಗೆ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದರು.

ಮೈಸೂರು ವಿಭಾಗದ ಅಧಿಕಾರಿಗಳು, ಸಿಬ್ಬಂದಿ, ಸ್ವಯಂಸೇವಾ ಸಂಸ್ಥೆಗಳು ಹಾಗೂ ಒಪ್ಪಂದದ ಸಿಬ್ಬಂದಿಗಳು ಪ್ರಮುಖ ರೈಲ್ವೆ ನಿಲ್ದಾಣಗಳು ಹಾಗೂ ಆವರಣದಲ್ಲಿ ಶ್ರಮದಾನದಲ್ಲಿ ಭಾಗವಹಿಸಿ, ಪ್ರಯಾಣಿಕರು ಮತ್ತು ನಾಗರಿಕರಿಗೆ ಸ್ವಚ್ಛ ಹಾಗೂ ಹಸಿರು ಪರಿಸರವನ್ನಾಗಿಸಲು ಕೈಜೋಡಿಸಿದರು.

South Western Railway Mysore ಬ್ರಹ್ಮ ಸಮಾಜ ಮೈಸೂರು, ರೋಟರಿ ಕ್ಲಬ್ & ಇನರ್ ಪೀಸ್ (ಅರಸೀಕೆರೆ), ಜಯಪ್ರಕಾಶ್ ನಾರಾಯಣ ಗ್ರಾಮೀಣ ಅಭಿವೃದ್ಧಿ ಸೇವಾ ಸಮಿತಿ (ಹಾಸನ), ಚೈತನ್ಯ ಗ್ರಾಮೀಣ ಅಭಿವೃದ್ಧಿ (ಶಿವಮೊಗ್ಗ), ಸಂಕಲ್ಪ ಸೇವಾ ಫೌಂಡೇಶನ್ (ದಾವಣಗೆರೆ), ಹಾಗೂ ರೋಟರಿ ಕ್ಲಬ್ (ಹಾವೇರಿ) ಮುಂತಾದ ಸ್ವಯಂಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ನಾಟಕಗಳು, ಜಾಗೃತಿ ಜಾತ ಮತ್ತು ಶ್ರಮದಾನ ಚಟುವಟಿಕೆಗಳನ್ನು ನಡೆಸಿ, ಸ್ವಚ್ಛತಾ ಸಂದೇಶ ಪ್ರಚಾರ ಮಾಡಿದರು.

ಈ ಅಭಿಯಾನವು ದೇಶವ್ಯಾಪಿ ಮುಂದಾಳತ್ವದಂತೆ ಸ್ವಚ್ಛತೆ, ಸಾರ್ವಜನಿಕರ ಭಾಗವಹಿಸುವಿಕೆ ಹಾಗೂ ಜಾಗೃತಿಯನ್ನು ಉತ್ತೇಜಿಸಲು ಪ್ರಯತ್ನಿಸುತ್ತದೆ.

ಪೃಥ್ವಿ ಎಸ್. ಹುಲ್ಲತ್ತಿ
ವಿಭಾಗೀಯ ಹಣಕಾಸು ವ್ಯವಸ್ಥಾಪಕರು ಮತ್ತು
ಸಾರ್ವಜನಿಕ ಸಂಪರ್ಕ ಅಧಿಕಾರಿ
ಮೈಸೂರು ವಿಭಾಗ

Chandragutti Renukamba Temple ಚಂದ್ರಗುತ್ತಿ ಅಮ್ಮನವರ ದಸರಾ ಉತ್ಸವಕ್ಕೆ ವಿವಿಧ ಕಲಾ ತಂಡಗಳಿಂದ ಅರ್ಜಿ ಆಹ್ವಾನ

0

Chandragutti Renukamba Temple ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಸೆ.22 ರಿಂದ ಅ.02 ರವರೆಗೆ ದಸರಾ ಉತ್ಸವದ ಅಮ್ಮನವರ ಪಲ್ಲಕ್ಕಿ ಮೆರವಣಿಗೆಯಲ್ಲಿ ಭಾಗವಹಿಸಲು ಇಚ್ಛೆಯುಳ್ಳ ವಿವಿಧ ಕಲಾತಂಡಗಳಿAದ ಅರ್ಜಿ ಆಹ್ವಾನಿಸಿದೆ.
ಶ್ರೀ ರೇಣುಕಾ ಪರಮೇಶ್ವರಿ ಅಮ್ಮನವರ ಶರನ್ನವರಾತ್ರಿ ಉತ್ಸವದ ಅಂಗವಾಗಿ ಪ್ರತಿ ದಿನ ದೇವಿ ಪಾರಾಯಣ, ನವಗ್ರಹ ಜಪ, ಮೃತ್ಯುಂಜಯ ಜಪ, ಪವಮಾನ, ಶ್ರೀ ರೇಣುಕಾ ಸಹಸ್ರನಾಮ, ಶ್ರೀ ದುರ್ಗಾ ಸಹಸ್ರನಾಮ, ಲಲಿತಾ ಸಹಸ್ರನಾಮ ಪೂಜಾ ವಿಧಿಗಳನ್ನು ನಡೆಯುವುದು. Chandragutti Renukamba Temple ಅ. 02 ರಂದು ವಿಜಯದಶಮಿಯ ಬನ್ನ ಉತ್ಸವದಂದು ಅಮ್ಮನವರ ಪಲ್ಲಕ್ಕಿ ಮೆರವಣಿಗೆ ನಡೆಯುವುದರಿಂದ ಮೆರವಣಿಗೆಯಲ್ಲಿ ಭಾಗವಹಿಸಿ ಇಚ್ಛೆಯುಳ್ಳ ವಿವಿಧ ಕಲಾತಂಡಗಳು ಸೆ. 18ರೊಳಗಾಗಿ ತಮ್ಮ ತಂಡದ ಹೆಸರು, ತಾವು ನೀಡಿರುವ ಕಾರ್ಯಕ್ರಮದ ಸಂಪೂರ್ಣ ವಿವರಗಳೊಂದಿಗೆ ಕಾರ್ಯನಿರ್ವಾಹಣಾಧಿಕಾರಿಗಳು, ಶ್ರೀ ರೇಣುಕಾಂಬ ದೇವಸ್ಥಾನ ಚಂದ್ರಗುತ್ತಿ, ಸೊರಬ ತಾಲೂಕು, ಶಿವಮೊಗ್ಗ ಜಿಲ್ಲೆ ಇಲ್ಲಿ ಮನವಿ ಪತ್ರವನ್ನು ಸಲ್ಲಿಸುವುದು.

Narayana Health ಸೆ.17 ರಂದು ಒಂದೇದಿನದಲ್ಲಿ 20 ಕ್ಕೂ ಹೆಚ್ಚಿನ ಎನ್.ಹೆಚ್.ಆಸ್ಪತ್ರೆಯಲ್ಲಿ 11,786 ಮಹಿಳೆಯರಿಗೆ ಉಚಿತ ಇಸಿಜಿ ಪರೀಕ್ಷೆ

0

Narayana Health ಭಾರತದ ಅತ್ಯಂತ ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆ ಆಗಿರುವ ನಾರಾಯಣ ಹೆಲ್ತ್, ಕೇಂದ್ರ ಸರ್ಕಾರದ ಸ್ವಸ್ಥ ನಾರಿ, ಸಶಕ್ತ ಪರಿವಾರ ಅಭಿಯಾನದ ಭಾಗವಾಗಿ ಸೆ.17ರಂದು ಒಂದೇ ದಿನದಲ್ಲಿ ತನ್ನ 20ಕ್ಕೂ ಹೆಚ್ಚು ಆಸ್ಪತ್ರೆಗಳಲ್ಲಿ 11,786 ಮಹಿಳೆಯರಿಗೆ ಉಚಿತ ಇಸಿಜಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿ ದಾಖಲೆ ಬರೆದಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ಮಹಿಳೆಯರು ಮತ್ತು ಮಕ್ಕಳಿಗೆ ಉತ್ತಮ ವೈದ್ಯಕೀಯ ಸೇವೆ ಒದಗಿಸುವ ಉದ್ದೇಶದಿಂದ ಸೆಪ್ಟೆಂಬರ್ 17ರಂದು ಸ್ವಸ್ಥ ನಾರಿ, ಸಶಕ್ತ ಪರಿವಾರ ಅಭಿಯಾನವನ್ನು ಆರಂಭಿಸಿದರು.

ಈ ಯೋಜನೆಗೆ ಕೈ ಜೋಡಿಸಿದ ನಾರಾಯಣ ಹೆಲ್ತ್‌ ಈ ಮೂಲಕ ಕೇಂದ್ರ ಸರ್ಕಾರದ ಯೋಜನೆಗಳ ಜೊತೆ ಖಾಸಗಿ ವೈದ್ಯಕೀಯ ಸಂಸ್ಥೆಗಳು ಕೆಲಸ ಮಾಡಬೇಕಾದ ಮಹತ್ವವನ್ನು ಸಾರಿದೆ.

ನಾರಾಯಣ ಹೆಲ್ತ್‌ ನ ಈ ಅಭಿಯಾನದಲ್ಲಿ ಮಹಾನಗರಗಳಿಂದ ಹಿಡಿದು 2ನೇ ಮತ್ತು 3ನೇ ಹಂತದ ನಗರಗಳ ಮಹಿಳೆಯರು ಕೂಡ ಉತ್ಸಾಹದಿಂದ ಭಾಗವಹಿಸಿದರು. ನಾರಾಯಣ ಹೆಲ್ತ್‌ ನ ಆಸ್ಪತ್ರೆಗಳು, ಹಾರ್ಟ್ ಸೆಂಟರ್ ಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಬೆಳಿಗ್ಗೆ 9:00 ರಿಂದ ಸಂಜೆ 5:00 ರವರೆಗೆ ತೆರೆದಿದ್ದು, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಯಾವುದೇ ತೊಡಕು ಉಂಟಾಗದ ರೀತಿಯಲ್ಲಿ ಇಸಿಜಿ ಪರೀಕ್ಷೆಯನ್ನು ನಡೆಸಿದವು.

ವಿಶೇಷವೆಂದರೆ ಸಹ್ಯಾದ್ರಿ ನಾರಾಯಣ ನಲ್ಲಿ ಒಂದೇ ದಿನದಲ್ಲಿ350 ಸಂಖ್ಯೆಯ ಇಸಿಜಿ ಪರೀಕ್ಷೆಗಳು ನಡೆದುವು.

ಈ ಕುರಿತು ಮಾತನಾಡಿದ ನಾರಾಯಣ ಹೆಲ್ತ್‌ ನ ಸಂಸ್ಥಾಪಕ ಮತ್ತು ಅಧ್ಯಕ್ಷರಾದ ಡಾ. ದೇವಿ ಶೆಟ್ಟಿ ಅವರು, “ಒಂದೇ ದಿನದಲ್ಲಿ 10,000 ಇಸಿಜಿ ಪರೀಕ್ಷೆ ನಡೆಸಿದ್ದು ನಮಗೆ ಖುಷಿ ಕೊಟ್ಟಿದೆ. ಐದು ಸಾವಿರ ಅನ್ನುವುದು ಕೇವಲ ಸಂಖ್ಯೆಯಲ್ಲ, ಬದಲಿದೆ ಇದು ಹೃದಯದ ಆರೋಗ್ಯ ಪಾಲಿಸುವುದು ಮುಖ್ಯ ಎಂದು ಅರಿತುಕೊಂಡು ಆ ನಿಟ್ಟಿನಲ್ಲಿ ಹೆಜ್ಜೆ ಇಟ್ಟ ಮಹಿಳೆಯರ ಯಶಸ್ಸು. ನಾರಾಯಣ ಹೆಲ್ತ್‌ ನಲ್ಲಿ ನಾವು ರೋಗ ತಡೆಗಟ್ಟುವ ಚಿಕಿತ್ಸೆಯೇ ಆರೋಗ್ಯವಂತ ರಾಷ್ಟ್ರದ ಅಡಿಪಾಯ ಎಂದು ನಂಬಿದ್ದೇವೆ ಮತ್ತು ಆ ನಂಬಿಕೆಗೆ ಪೂರಕವಾಗಿ ಸ್ವಸ್ಥ ನಾರಿ, ಸಶಕ್ತ ಪರಿವಾರ ಯೋಜನೆ ಮೂಡಿ ಬಂದಿದೆ” ಎಂದು ಹೇಳಿದರು.

ನಾರಾಯಣ ಹೆಲ್ತ್‌ ನ ಗ್ರೂಪ್ ಸಿಇಓ ಡಾ. ಇಮ್ಯಾನುಯೆಲ್ ರೂಪರ್ಟ್ ಅವರು ಮಾತನಾಡಿ, “ದೇಶಾದ್ಯಂತ ನಾವು ಅಭೂತಪೂರ್ವ ಪ್ರತಿಕ್ರಿಯೆಯನ್ನು ಪಡೆದಿದ್ದೇವೆ. ರೋಗ ತಡೆಗಟ್ಟುವ ಚಿಕಿತ್ಸೆಯ ಕುರಿತು ಜಾಗೃತಿ ಹೆಚ್ಚುತ್ತಿರುವುದಕ್ಕೆ ಈ ಅದ್ಭುತ ಪ್ರತಿಕ್ರಿಯೆಯೇ ಸಾಕ್ಷಿಯಾಗಿದೆ. ಈ ಮೂಲಕ ನಾವು ಕೇವಲ ಪ್ರಮುಖ ನಗರಗಳ ಮಹಿಳೆಯರನ್ನು ಮಾತ್ರವೇ ತಲುಪಿಲ್ಲ, ಬದಲಿಗೆ ಚಿಕ್ಕ ಪಟ್ಟಣಗಳ ಮಹಿಳೆಯರೂ ಇಸಿಜಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮಾಡಿದ್ದೇವೆ. 20ಕ್ಕೂ ಹೆಚ್ಚು ಆಸ್ಪತ್ರೆಗಳಲ್ಲಿನ ನಮ್ಮ ತಂಡಗಳು ಈ ಯೋಜನೆಯನ್ನು ಯಶಸ್ವಿಗೊಳಿಸಲು ದಣಿವರಿಯದೆ ಶ್ರಮಿಸಿವೆ.

ಈ ಯಶಸ್ಸು ನಾರಾಯಣ ಹೆಲ್ತ್‌ ನ ಸಾಮರ್ಥ್ಯವನ್ನು ತೋರಿಸಿಕೊಟ್ಟಿದೆ” ಎಂದು ಹೇಳಿದರು.

Narayana Health ಭಾರತದಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಂದ ಶೇ.25ರಷ್ಟು ಸಾವುಗಳು ಉಂಟಾಗುತ್ತಿದ್ದು, ಇದರಲ್ಲಿ ಬಹುಪಾಲು ಮಹಿಳೆಯರೇ ಇದ್ದಾರೆ. ಗ್ಲೋಬಲ್ ಬರ್ಡನ್ ಆಫ್ ಡಿಸೀಸ್ ಸ್ಟಡಿಯ ಪ್ರಕಾರ ಭಾರತದ ಮಹಿಳೆಯರಲ್ಲಿ ಉಂಟಾಗುತ್ತಿರುವ ಸಾವಿಗೆ ಹೃದಯ ಕಾಯಿಲೆಯೇ ಪ್ರಮುಖ ಕಾರಣವಾಗಿದೆ. ಶೇ.18ರಷ್ಟು ಮಹಿಳೆಯರು ಹೃದಯ ಸಮಸ್ಯೆಯಿಂದ ಇಹಲೋಕ ತ್ಯಜಿಸುತ್ತಿದ್ದಾರೆ. ಹೀಗಾಗಿ ಮಹಿಳೆಯರ ಆರೋಗ್ಯ ರಕ್ಷಣೆ ಕಡೆಗೆ ಗಮನ ಹರಿಸಿರುವ ನಾರಾಯಣ ಹಾಸ್ಪಿಟಲ್ ಈ ಮಹತ್ವದ ಕ್ರಮ ಕೈಗೊಂಡಿದೆ.

ಉಚಿತ ಇಸಿಜಿ ಅಭಿಯಾನವು ನಾರಾಯಣ ಹೆಲ್ತ್‌ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದೆ. 2023ರಲ್ಲಿ ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿಯು ಒಂದೇ ಸ್ಥಳದಲ್ಲಿ 24 ಗಂಟೆಗಳಲ್ಲಿ 3,797 ಇಸಿಜಿಗಳನ್ನು ನಡೆಸಿ ಗಿನ್ನಿಸ್ ವಿಶ್ವ ದಾಖಲೆಯನ್ನು ಸ್ಥಾಪಿಸಿತ್ತು. ಇದೀಗ ನಾರಾಯಣ ಹೆಲ್ತ್ ತನ್ನ ದಾಖಲೆಯನ್ನು ತಾನೇ ಮುರಿದು ಹೊಸ ದಾಖಲೆ ಬರೆದಿದೆ.

ನಾರಾಯಣ ಹೆಲ್ತ್ ಕುರಿತು:

ಡಾ. ದೇವಿ ಶೆಟ್ಟಿ ಸ್ಥಾಪಿಸಿರುವ ನಾರಾಯಣ ಹೆಲ್ತ್ ಸಂಸ್ಥೆಯ ಕೇಂದ್ರ ಕಚೇರಿ ಬೆಂಗಳೂರಿನಲ್ಲಿದೆ ಮತ್ತು ಈ ಸಂಸ್ಥೆಯು ಜಾಗತಿಕ ಮಟ್ಟದ ವೈದ್ಯಕೀಯ ಸೇವಾ ಕ್ಷೇತ್ರದಲ್ಲಿ ಪ್ರಮುಖ ಸ್ಥಾನವನ್ನು ಪಡೆದಿದೆ. ಭಾರತದ ಅತಿದೊಡ್ಡ ವೈದ್ಯಕೀಯ ಸೇವೆ ಒದಗಿಸುವ ಸಂಸ್ಥೆಗಳಲ್ಲಿ ಒಂದಾಗಿರುವ ನಾರಾಯಣ ಹೆಲ್ತ್ ಸಂಸ್ಥೆಯು ಭಾರತ ಮತ್ತು ಕೆರಿಬಿಯನ್‌ ಪ್ರದೇಶಗಳಲ್ಲಿ ಪ್ರಾಥಮಿಕ, ದ್ವಿತೀಯ ಹಂತದ ಮತ್ತು ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ಸೇವೆಗಳನ್ನು ಒದಗಿಸುತ್ತಾ ಬಂದಿದ್ದು, ಬಹಳ ಪ್ರಸಿದ್ಧವಾಗಿದೆ. ಸಂಸ್ಥೆಯು ವಿವಿಧ ವೈದ್ಯಕೀಯ ವಿಭಾಗಗಳಲ್ಲಿ ಗುಣಮಟ್ಟದ ಕೇಂದ್ರಗಳು ಮತ್ತು 18,822ರಷ್ಟು ವೃತ್ತಿಪರರ ತಂಡವನ್ನು ಹೊಂದಿದೆ. ಇದರಲ್ಲಿ 3,868 ನುರಿತ ವೈದ್ಯರು ಮತ್ತು ತಜ್ಞರು ಇದ್ದಾರೆ. ಅತ್ಯುತ್ತಮ ಸೌಲಭ್ಯ ಮತ್ತು ತಂಡಗಳ ಮೂಲಕ ಉತ್ಕೃಷ್ಟ ಮಟ್ಟದ ವೈದ್ಯಕೀಯ ಸೇವೆ ಒದಗಿಸುತ್ತಿದೆ.

ನಾರಾಯಣ ಒನ್ ಹೆಲ್ತ್ (ಎನ್‌ಎಚ್ ಇಂಟಿಗ್ರೇಟೆಡ್ ಕೇರ್) ಮತ್ತು ನಾರಾಯಣ ಹೆಲ್ತ್ ಇನ್ಶೂರೆನ್ಸ್ ಇವು ನಾರಾಯಣ ಹೆಲ್ತ್‌ ನ ಅಂಗಸಂಸ್ಥೆಗಳಾಗಿವೆ.

ಹೆಚ್ಚಿನ ಮಾಹಿತಿಗಾಗಿ, ಭೇಟಿ ನೀಡಿ: https://www.narayanahealth.org/

Hindustan Aeronautics Limited ನಾಲ್ಕು ವರ್ಷದ ಅವಧಿಗೆ ಏರ್ ಫ್ರೇಮ್/ ಎಲೆಕ್ಟ್ರಿಷಿಯನ್ ಹುದ್ದೆಗೆ ನೇಮಕಾತಿ ಪಡೆಯಲು ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

0

Hindustan Aeronautics Limited ಹಿಂದೂಸ್ತಾನ್ ಏರೋನ್ಯಾಟಿಕ್ಸ್ ಲಿಮಿಟೆಡ್‌ನಲ್ಲಿ ಮೆಕಾನಿಕಲ್ ಎಂಜಿನಿಯರಿಂಗ್/ ಎಲೆಕ್ನಿಕಲ್ ಎಂಜಿನಿಯರಿಂಗ್ ಡಿಪ್ಲೊಮಾ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ, 45 ವರ್ಷದೊಳಗಿನ ಸಾಮಾನ್ಯ ವರ್ಗದ ಹಾಗೂ 50 ವರ್ಷದೊಳಗಿನ ಎಸ್ಸಿ/ಎಸ್‌ಟಿ ವರ್ಗದ ಮಾಜಿ ಸೈನಿಕರುಗಳಿಗೆ ನಾಲ್ಕು ವರ್ಷಗಳ ಅವಧಿಗೆ ಏರ್‌ಪ್ರೇಮ್ / ಎಲೆಕ್ಟ್ರೀಷಿಯನ್ ಹುದ್ದೆಗೆ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಅರ್ಹ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು dgrddemp@desw.gov.in- DGR ಜಾಲತಾಣದಿಂದ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಗಳನ್ನು ಎಕ್ಸೆಲ್ ಫಾರ್ಮೆಟ್‌ನಲ್ಲಿ ಜಿಲ್ಲಾ/ರಾಜ್ಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಗೆ soldiersshimoga@gmail.com ಇ-ಮೇಲ್ ಮೂಲಕ ಮಾತ್ರ ಕಳುಹಿಸಬಹುದಾಗಿದೆಯೆಂದು ಉಪ ನಿರ್ದೇಶಕರು (ಪ್ರಭಾರ), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ತಿಳಿಸಿದ್ದಾರೆ.
Hindustan Aeronautics Limited ಹೆಚ್ಚಿನ ಮಾಹಿತಿಗಾಗಿ ದೂರವಾಣಿ 08182-220925 ಹಾಗೂಮಿಂಚಂಚೆ soldiersshimoga@gmail.com ಗೆ ಸಂಪರ್ಕಿಸಬಹುದಾಗಿದೆ.

Rotary Club Shimoga ಶಿಕ್ಷಣವು ಜ್ಞಾನ, ಕೌಶಲ್ಯ & ಸಾಮಾಜಿಕ, ಆರ್ಥಿಕ ಸುಧಾರಿಸಲು ಸಹಕಾರಿ – ಪ್ರೊ.ಹೆಚ್.ಎಸ್.ಸುರೇಶ್

0

Rotary Club Shimoga ಶಿಕ್ಷಣ ಪ್ರತಿಯೊಬ್ಬರ ಜೀವನಕ್ಕೂ ಅವಶ್ಯಕ. ಶಿಕ್ಷಣವು ಜ್ಞಾನ, ಕೌಶಲ್ಯ ಮತ್ತು ಸಾಮಾಜಿಕ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಸಹಕಾರಿಯಾಗಿರುತ್ತದೆ ಎಂದು ರೋಟರಿ ವಲಯ ತರಬೇತುದಾರ ಪ್ರೊ. ಎಚ್.ಎಂ.ಸುರೇಶ್ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಆಯೋಜಿಸಿದ್ದ ಶಿಕ್ಷಣ ಮತ್ತು ಸಾಕ್ಷರತೆ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿ, ಸಾಕ್ಷರತೆಯು ವೈಯಕ್ತಿಕ ಬೆಳವಣಿಗೆ ಮತ್ತು ಸ್ವ ಅಭಿವ್ಯಕ್ತಿ ಮತ್ತು ನಿರ್ಧಾರ ತೆಗೆದುಕೊಳ್ಳುವಿಕೆಯನ್ನು ಬೆಳೆಸುತ್ತದೆ. ಸರ್ಕಾರಗಳು ಮತ್ತು ಶಿಕ್ಷಣ ಸಂಸ್ಥೆಗಳು ಮೂಲಸೌಕರ್ಯ, ಶಿಕ್ಷಕರ ತರಬೇತಿ ಮತ್ತು ಸಂಪನ್ಮೂಲಗಳಲ್ಲಿ ಹೂಡಿಕೆ ಮಾಡಬೇಕು. ವೈಯಕ್ತಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಮೂಲ ಶಿಕ್ಷಣ ಮತ್ತು ಸಾಕ್ಷರತೆ ನಿರ್ಣಾಯಕ ಎಂದು ತಿಳಿಸಿದರು.
ರೋಟರಿ ಸಂಸ್ಥೆಯು ವಿಶ್ವಾದ್ಯಂತ ಶಿಕ್ಷಣದ ಅಡಿಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ. ವಿಶ್ವದ ವಿವಿಧ ದೇಶಗಳಲ್ಲಿ ತಾಯಂದಿರಿಗೆ ಸಾಕ್ಷರತೆ ಮತ್ತು ಡಿಜಿಟಲ್ ಕೌಶಲ್ಯಗಳ ತರಬೇತಿ ನೀಡಲಾಗಿದೆ. ಮಕ್ಕಳ ಓದುವ ಸಾಮಾರ್ಥ್ಯ ವೃದ್ಧಿಸಲಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಬಸವರಾಜ್ ಬಿ ಮಾತನಾಡಿ, ನಮ್ಮ ವಲಯ ಅತಿ ಹೆಚ್ಚು ಸಾಮಾಜಿಕ ಕಾರ್ಯಕ್ರಮಗಳನ್ನು ಮಾಡುವಲ್ಲಿ ಸುರೇಶ್ ಪ್ರೋತ್ಸಾಹಿಸಿದ್ದರು. ನಮ್ಮ ಸಂಸ್ಥೆ ವತಿಯಿಂದ ನಿರಂತರವಾಗಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.
Rotary Club Shimoga ಕಾರ್ಯಕ್ರಮದಲ್ಲಿ ವಲಯ ಸೇನಾನಿ ಕಿರಣ್ ಕುಮಾರ್ ಜಿ, ನಿಕಟಪೂರ್ವ ಕಾರ್ಯದರ್ಶಿ ಈಶ್ವರ್ ಬಿ ಅವರು ಮುಖ್ಯ ಅತಿಥಿಗಳಿಗೆ ಕ್ಲಬ್ ಪರವಾಗಿ ನೆನಪಿನ ಕಾಣಿಕೆ ನೀಡಿ ಗೌರವ ಸಮರ್ಪಿಸಿದರು. ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಕಾರ್ಯದರ್ಶಿ ಜಯಶೀಲ್ ಶೆಟ್ಟಿ, ಮಾಜಿ ಸಹಾಯಕ ಗವರ್ನರ್ ರವಿ ಕೋಟೋಜಿ, ಆನಂದ್ ಎಸ್ ಜಿ ಮತ್ತು ಕ್ಲಬ್‌ನ ಎಲ್ಲಾ ಸದಸ್ಯರುಗಳು ಹೆಚ್ಚಿನ ಸಂಖ್ಯೆಯಲ್ಲಿದ್ದರು.

IndiGo Airlines ಗಮನಿಸಿ!. ಇನ್ನು ಶಿವಮೊಗ್ಗ- ಬೆಂಗಳೂರಿಗೆ ನಿತ್ಯ ಇಂಡಿಗೊ ವಿಮಾನ ಹಾರಾಟ

0

IndiGo Airlines ಬೆಂಗಳೂರಿನಿಂದ ಶಿವಮೊಗ್ಗ ಹಾಗೂ ಶಿವಮೊಗ್ಗದಿಂದ ಬೆಂಗಳೂರಿಗೆ ಇಂಡಿಗೋ ಏರ್ ಲೈನ್ಸ್ ವಿಮಾನವು 6E 7731 (BLR-RQY) ಮತ್ತು 6E 7732 (RQY-BLR) ದಿನಬಿಟ್ಟು ದಿನ ಹಾರಾಟ ಮಾಡುತ್ತಿತ್ತು. ಈಗ ಸೆಪ್ಟೆಂಬರ್ 21 ರಿಂದ ಪ್ರತಿನಿತ್ಯ ಹಾರಾಟ ಮಾಡಲಿದೆ. ಪ್ರತಿ ದಿನ ಬೆಳಿಗ್ಗೆ 9.35 ಕ್ಕೆ ಬೆಂಗಳೂರಿನಿಂದ ಹೊರಡುವ ವಿಮಾನವು ಶಿವಮೊಗ್ಗವನ್ನು ಬೆಳಿಗ್ಗೆ 10.45 ಕ್ಕೆ ತಲುಪಲಿದೆ. IndiGo Airlines ಅದೇ ರೀತಿ ಶಿವಮೊಗ್ಗದಿಂದ ಬೆಳಿಗ್ಗೆ 11.05 ಕ್ಕೆ ಹೊರಡುವ ವಿಮಾನವು ಮಧ್ಯಾಹ್ನ 12.05 ಕ್ಕೆ ಬೆಂಗಳೂರನ್ನು ತಲುಪಲಿದೆ.
ಈ ಸೌಲಭ್ಯವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಶಿವಮೊಗ್ಗ ಲೋಕಸಭಾ ಸಂಸದರಾದ ಶ್ರೀ ಬಿ.ವೈ. ರಾಘವೇಂದ್ರವರು ತಿಳಿಸಿದ್ದಾರೆ.

DC Shivamogga ಸಾರ್ವಜನಿಕ ಶಾಂತಿ ,ಸುವ್ಯವಸ್ಥೆ ದೃಷ್ಡಿಯಿಂದ ಸೆ.30 ವರೆಗೆ ಡಿಜೆ ಸಿಸ್ಟಂ ಬಳಕೆ ನಿಷೇಧಾಜ್ಞೆ ವಿಸ್ತರಣೆ

0

DC Shivamogga ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಆ. 27 ರಿಂದ ಸೆ.15 ರವರೆಗೆ ಡಿಜೆ ಸಿಸ್ಟಂ ಬಳಕೆಯ ನಿಷೇಧವನ್ನು ಸೆ. 30 ರವರೆಗೆ ಮುಂದುವರೆಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
DC Shivamogga ಜಿಲ್ಲೆಯ ಪ್ರಮುಖ ಗಣಪತಿ ಮೂರ್ತಿ ವಿಸರ್ಜನೆ ಹಾಗೂ ಈದ್ ಮಿಲಾದ್ ಮೆರವಣಿಗೆ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ, ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ಸಲುವಾಗಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆಗಳು ಪೂರ್ಣಗೊಳ್ಳುವವರೆಗೆ ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂಗಳ ಬಳಕೆಯನ್ನು ಸೆ. 30 ರವರೆಗೆ ನಿಷೇಧಿಸಿ ಆದೇಶಿಸಲಾಗಿದೆ .

Department of Kannada and Culture ವಿಶ್ವಕರ್ಮರು ಪುರಾತನವಾಗಿ ಎಲ್ಲ ಸಮಾಜದ ಗುರು ಮತ್ತು ದೇವರಾಗಿದ್ದರೆಂದು ಹೇಳಲಾಗುತ್ತದೆ- ಸಿ.ಎಸ್.ಚಂದ್ರಭೂಪಾಲ್

0

Department of Kannada and Culture ವಿಶ್ವಕರ್ಮವು ಪುರಾತನ ಕಾಲದಿಂದ ನಡೆದು ಬಂದ ಸಮಾಜವಾಗಿದ್ದು, ಈ ಸಮಾಜದ ಗುರುಗಳು ಎಲ್ಲಾ ದೇವರಿಗೂ ಗುರುಗಳಾಗಿದ್ದರೆಂದು ಹೇಳಲಾಗುತ್ತದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ವಿಶ್ವಕರ್ಮ ಮಹಾಸಭಾ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ನಗರದ ಕುವೆಂಪು ರಂಗಮAದಿರಲ್ಲಿ ಆಯೋಜಿಸಿದ್ದ ಶ್ರೀ ವಿಶ್ವಕರ್ಮ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
Department of Kannada and Culture ಭರತಖಂಡವು ಧಾರ್ಮಿಕ ಹಾಗೂ ಜನ ಜೀವನ ಸಂಸ್ಕೃತಿಯಿAದ ನಡೆದು ಬಂದಿದೆ. ಇಲ್ಲಿ ಉತ್ತಮ ಗುರು ಪಡೆದರೆ ಮಾತ್ರ ಉತ್ತಮ ಸಂಸ್ಕೃತಿಯನ್ನು ಪಡೆಯಲು ಸಾಧ್ಯ. ಇಂತಹ ಗುರುವಿನ ಸಂಸ್ಕೃತಿಯನ್ನು ವಿಶ್ವಕರ್ಮ ಸಮಾಜ ಒಳಗೊಂಡಿದ್ದು, ಈ ಸಮಾಜದಲ್ಲಿ ಹುಟ್ಟಿದ ನೀವೆಲ್ಲಾ ಭಾಗ್ಯವಂತರು ಎಂದರು.