Hindustan Aeronautics Limited ಹಿಂದೂಸ್ತಾನ್ ಏರೋನ್ಯಾಟಿಕ್ಸ್ ಲಿಮಿಟೆಡ್ನಲ್ಲಿ ಮೆಕಾನಿಕಲ್ ಎಂಜಿನಿಯರಿಂಗ್/ ಎಲೆಕ್ನಿಕಲ್ ಎಂಜಿನಿಯರಿಂಗ್ ಡಿಪ್ಲೊಮಾ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ, 45 ವರ್ಷದೊಳಗಿನ ಸಾಮಾನ್ಯ ವರ್ಗದ ಹಾಗೂ 50 ವರ್ಷದೊಳಗಿನ ಎಸ್ಸಿ/ಎಸ್ಟಿ ವರ್ಗದ ಮಾಜಿ ಸೈನಿಕರುಗಳಿಗೆ ನಾಲ್ಕು ವರ್ಷಗಳ ಅವಧಿಗೆ ಏರ್ಪ್ರೇಮ್ / ಎಲೆಕ್ಟ್ರೀಷಿಯನ್ ಹುದ್ದೆಗೆ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಅರ್ಹ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು dgrddemp@desw.gov.in- DGR ಜಾಲತಾಣದಿಂದ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಗಳನ್ನು ಎಕ್ಸೆಲ್ ಫಾರ್ಮೆಟ್ನಲ್ಲಿ ಜಿಲ್ಲಾ/ರಾಜ್ಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಗೆ soldiersshimoga@gmail.com ಇ-ಮೇಲ್ ಮೂಲಕ ಮಾತ್ರ ಕಳುಹಿಸಬಹುದಾಗಿದೆಯೆಂದು ಉಪ ನಿರ್ದೇಶಕರು (ಪ್ರಭಾರ), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ತಿಳಿಸಿದ್ದಾರೆ.
Hindustan Aeronautics Limited ಹೆಚ್ಚಿನ ಮಾಹಿತಿಗಾಗಿ ದೂರವಾಣಿ 08182-220925 ಹಾಗೂಮಿಂಚಂಚೆ soldiersshimoga@gmail.com ಗೆ ಸಂಪರ್ಕಿಸಬಹುದಾಗಿದೆ.
Hindustan Aeronautics Limited ನಾಲ್ಕು ವರ್ಷದ ಅವಧಿಗೆ ಏರ್ ಫ್ರೇಮ್/ ಎಲೆಕ್ಟ್ರಿಷಿಯನ್ ಹುದ್ದೆಗೆ ನೇಮಕಾತಿ ಪಡೆಯಲು ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ
Rotary Club Shimoga ಶಿಕ್ಷಣವು ಜ್ಞಾನ, ಕೌಶಲ್ಯ & ಸಾಮಾಜಿಕ, ಆರ್ಥಿಕ ಸುಧಾರಿಸಲು ಸಹಕಾರಿ – ಪ್ರೊ.ಹೆಚ್.ಎಸ್.ಸುರೇಶ್
Rotary Club Shimoga ಶಿಕ್ಷಣ ಪ್ರತಿಯೊಬ್ಬರ ಜೀವನಕ್ಕೂ ಅವಶ್ಯಕ. ಶಿಕ್ಷಣವು ಜ್ಞಾನ, ಕೌಶಲ್ಯ ಮತ್ತು ಸಾಮಾಜಿಕ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಸಹಕಾರಿಯಾಗಿರುತ್ತದೆ ಎಂದು ರೋಟರಿ ವಲಯ ತರಬೇತುದಾರ ಪ್ರೊ. ಎಚ್.ಎಂ.ಸುರೇಶ್ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಆಯೋಜಿಸಿದ್ದ ಶಿಕ್ಷಣ ಮತ್ತು ಸಾಕ್ಷರತೆ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿ, ಸಾಕ್ಷರತೆಯು ವೈಯಕ್ತಿಕ ಬೆಳವಣಿಗೆ ಮತ್ತು ಸ್ವ ಅಭಿವ್ಯಕ್ತಿ ಮತ್ತು ನಿರ್ಧಾರ ತೆಗೆದುಕೊಳ್ಳುವಿಕೆಯನ್ನು ಬೆಳೆಸುತ್ತದೆ. ಸರ್ಕಾರಗಳು ಮತ್ತು ಶಿಕ್ಷಣ ಸಂಸ್ಥೆಗಳು ಮೂಲಸೌಕರ್ಯ, ಶಿಕ್ಷಕರ ತರಬೇತಿ ಮತ್ತು ಸಂಪನ್ಮೂಲಗಳಲ್ಲಿ ಹೂಡಿಕೆ ಮಾಡಬೇಕು. ವೈಯಕ್ತಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಮೂಲ ಶಿಕ್ಷಣ ಮತ್ತು ಸಾಕ್ಷರತೆ ನಿರ್ಣಾಯಕ ಎಂದು ತಿಳಿಸಿದರು.
ರೋಟರಿ ಸಂಸ್ಥೆಯು ವಿಶ್ವಾದ್ಯಂತ ಶಿಕ್ಷಣದ ಅಡಿಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ. ವಿಶ್ವದ ವಿವಿಧ ದೇಶಗಳಲ್ಲಿ ತಾಯಂದಿರಿಗೆ ಸಾಕ್ಷರತೆ ಮತ್ತು ಡಿಜಿಟಲ್ ಕೌಶಲ್ಯಗಳ ತರಬೇತಿ ನೀಡಲಾಗಿದೆ. ಮಕ್ಕಳ ಓದುವ ಸಾಮಾರ್ಥ್ಯ ವೃದ್ಧಿಸಲಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಬಸವರಾಜ್ ಬಿ ಮಾತನಾಡಿ, ನಮ್ಮ ವಲಯ ಅತಿ ಹೆಚ್ಚು ಸಾಮಾಜಿಕ ಕಾರ್ಯಕ್ರಮಗಳನ್ನು ಮಾಡುವಲ್ಲಿ ಸುರೇಶ್ ಪ್ರೋತ್ಸಾಹಿಸಿದ್ದರು. ನಮ್ಮ ಸಂಸ್ಥೆ ವತಿಯಿಂದ ನಿರಂತರವಾಗಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.
Rotary Club Shimoga ಕಾರ್ಯಕ್ರಮದಲ್ಲಿ ವಲಯ ಸೇನಾನಿ ಕಿರಣ್ ಕುಮಾರ್ ಜಿ, ನಿಕಟಪೂರ್ವ ಕಾರ್ಯದರ್ಶಿ ಈಶ್ವರ್ ಬಿ ಅವರು ಮುಖ್ಯ ಅತಿಥಿಗಳಿಗೆ ಕ್ಲಬ್ ಪರವಾಗಿ ನೆನಪಿನ ಕಾಣಿಕೆ ನೀಡಿ ಗೌರವ ಸಮರ್ಪಿಸಿದರು. ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಕಾರ್ಯದರ್ಶಿ ಜಯಶೀಲ್ ಶೆಟ್ಟಿ, ಮಾಜಿ ಸಹಾಯಕ ಗವರ್ನರ್ ರವಿ ಕೋಟೋಜಿ, ಆನಂದ್ ಎಸ್ ಜಿ ಮತ್ತು ಕ್ಲಬ್ನ ಎಲ್ಲಾ ಸದಸ್ಯರುಗಳು ಹೆಚ್ಚಿನ ಸಂಖ್ಯೆಯಲ್ಲಿದ್ದರು.
IndiGo Airlines ಗಮನಿಸಿ!. ಇನ್ನು ಶಿವಮೊಗ್ಗ- ಬೆಂಗಳೂರಿಗೆ ನಿತ್ಯ ಇಂಡಿಗೊ ವಿಮಾನ ಹಾರಾಟ
IndiGo Airlines ಬೆಂಗಳೂರಿನಿಂದ ಶಿವಮೊಗ್ಗ ಹಾಗೂ ಶಿವಮೊಗ್ಗದಿಂದ ಬೆಂಗಳೂರಿಗೆ ಇಂಡಿಗೋ ಏರ್ ಲೈನ್ಸ್ ವಿಮಾನವು 6E 7731 (BLR-RQY) ಮತ್ತು 6E 7732 (RQY-BLR) ದಿನಬಿಟ್ಟು ದಿನ ಹಾರಾಟ ಮಾಡುತ್ತಿತ್ತು. ಈಗ ಸೆಪ್ಟೆಂಬರ್ 21 ರಿಂದ ಪ್ರತಿನಿತ್ಯ ಹಾರಾಟ ಮಾಡಲಿದೆ. ಪ್ರತಿ ದಿನ ಬೆಳಿಗ್ಗೆ 9.35 ಕ್ಕೆ ಬೆಂಗಳೂರಿನಿಂದ ಹೊರಡುವ ವಿಮಾನವು ಶಿವಮೊಗ್ಗವನ್ನು ಬೆಳಿಗ್ಗೆ 10.45 ಕ್ಕೆ ತಲುಪಲಿದೆ. IndiGo Airlines ಅದೇ ರೀತಿ ಶಿವಮೊಗ್ಗದಿಂದ ಬೆಳಿಗ್ಗೆ 11.05 ಕ್ಕೆ ಹೊರಡುವ ವಿಮಾನವು ಮಧ್ಯಾಹ್ನ 12.05 ಕ್ಕೆ ಬೆಂಗಳೂರನ್ನು ತಲುಪಲಿದೆ.
ಈ ಸೌಲಭ್ಯವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಶಿವಮೊಗ್ಗ ಲೋಕಸಭಾ ಸಂಸದರಾದ ಶ್ರೀ ಬಿ.ವೈ. ರಾಘವೇಂದ್ರವರು ತಿಳಿಸಿದ್ದಾರೆ.
DC Shivamogga ಸಾರ್ವಜನಿಕ ಶಾಂತಿ ,ಸುವ್ಯವಸ್ಥೆ ದೃಷ್ಡಿಯಿಂದ ಸೆ.30 ವರೆಗೆ ಡಿಜೆ ಸಿಸ್ಟಂ ಬಳಕೆ ನಿಷೇಧಾಜ್ಞೆ ವಿಸ್ತರಣೆ
DC Shivamogga ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಆ. 27 ರಿಂದ ಸೆ.15 ರವರೆಗೆ ಡಿಜೆ ಸಿಸ್ಟಂ ಬಳಕೆಯ ನಿಷೇಧವನ್ನು ಸೆ. 30 ರವರೆಗೆ ಮುಂದುವರೆಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
DC Shivamogga ಜಿಲ್ಲೆಯ ಪ್ರಮುಖ ಗಣಪತಿ ಮೂರ್ತಿ ವಿಸರ್ಜನೆ ಹಾಗೂ ಈದ್ ಮಿಲಾದ್ ಮೆರವಣಿಗೆ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ, ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ಸಲುವಾಗಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆಗಳು ಪೂರ್ಣಗೊಳ್ಳುವವರೆಗೆ ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂಗಳ ಬಳಕೆಯನ್ನು ಸೆ. 30 ರವರೆಗೆ ನಿಷೇಧಿಸಿ ಆದೇಶಿಸಲಾಗಿದೆ .
Department of Kannada and Culture ವಿಶ್ವಕರ್ಮರು ಪುರಾತನವಾಗಿ ಎಲ್ಲ ಸಮಾಜದ ಗುರು ಮತ್ತು ದೇವರಾಗಿದ್ದರೆಂದು ಹೇಳಲಾಗುತ್ತದೆ- ಸಿ.ಎಸ್.ಚಂದ್ರಭೂಪಾಲ್
Department of Kannada and Culture ವಿಶ್ವಕರ್ಮವು ಪುರಾತನ ಕಾಲದಿಂದ ನಡೆದು ಬಂದ ಸಮಾಜವಾಗಿದ್ದು, ಈ ಸಮಾಜದ ಗುರುಗಳು ಎಲ್ಲಾ ದೇವರಿಗೂ ಗುರುಗಳಾಗಿದ್ದರೆಂದು ಹೇಳಲಾಗುತ್ತದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ವಿಶ್ವಕರ್ಮ ಮಹಾಸಭಾ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ನಗರದ ಕುವೆಂಪು ರಂಗಮAದಿರಲ್ಲಿ ಆಯೋಜಿಸಿದ್ದ ಶ್ರೀ ವಿಶ್ವಕರ್ಮ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
Department of Kannada and Culture ಭರತಖಂಡವು ಧಾರ್ಮಿಕ ಹಾಗೂ ಜನ ಜೀವನ ಸಂಸ್ಕೃತಿಯಿAದ ನಡೆದು ಬಂದಿದೆ. ಇಲ್ಲಿ ಉತ್ತಮ ಗುರು ಪಡೆದರೆ ಮಾತ್ರ ಉತ್ತಮ ಸಂಸ್ಕೃತಿಯನ್ನು ಪಡೆಯಲು ಸಾಧ್ಯ. ಇಂತಹ ಗುರುವಿನ ಸಂಸ್ಕೃತಿಯನ್ನು ವಿಶ್ವಕರ್ಮ ಸಮಾಜ ಒಳಗೊಂಡಿದ್ದು, ಈ ಸಮಾಜದಲ್ಲಿ ಹುಟ್ಟಿದ ನೀವೆಲ್ಲಾ ಭಾಗ್ಯವಂತರು ಎಂದರು.
Bharat Scouts and Guides Shimoga ಸೃಜನಾತ್ಮಕ ಭಾವನೆಯನ್ನು ವ್ಯಕ್ತಪಡಿಸುವ ವಿಧಾನವೇ ಚಿತ್ರಕಲೆ :ಶಕುಂತಲಾ ಚಂದ್ರಶೇಖರ್
Bharat Scouts and Guides Shimoga ಸೃಜನಾತ್ಮಕ ಭಾವನೆಯನ್ನು ವ್ಯಕ್ತಪಡಿಸುವ ವಿಧಾನವೇ ಚಿತ್ರಕಲೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತೆ ಶಕುಂತಲಾ ಚಂದ್ರಶೇಖರ್ ಹೇಳಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿವಮೊಗ್ಗ ಸ್ಥಳೀಯ ಸಂಸ್ಥೆ ವತಿಯಿಂದ ಜಿಲ್ಲಾ ಸ್ಕೌಟ್ ಭವನದಲ್ಲಿ ಆಯೋಜಿಸಿದ್ದ ಸ್ಕೌಟರ್ಸ್ ಮತ್ತು ಗೈಡರ್ಸ್ ಸಮಾವೇಶದಲ್ಲಿ ಮಾತನಾಡಿ, ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಶಿಕ್ಷಕರ ಮಾರ್ಗದರ್ಶನ ಅತ್ಯಂತ ಅವಶ್ಯಕ ಎಂದು ತಿಳಿಸಿದರು.
ವಿನೋಬನಗರ ಬಡಾವಣೆಯಲ್ಲಿ ಮಕ್ಕಳಿಗೆ ಚಿತ್ರಕಲಾ ಶಿಕ್ಷಣ ನೀಡುತ್ತಿರುವ ನಿವೃತ್ತ ಶಿಕ್ಷಕಿ ಮತ್ತು ಸ್ಕೌಟ್ ಶಿಕ್ಷಕಿಯಾಗಿ 25 ವರ್ಷಗಳಿಂದ ಸ್ಕೌಟ್ ಮತ್ತು ಗೈಡ್ ಚಳುವಳಿಯಲ್ಲಿ ತೊಡಗಿಸಿಕೊಂಡು ಮಕ್ಕಳಿಗೆ ಸ್ಥಳೀಯ, ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆಯಲು ಮಾರ್ಗದರ್ಶನ ನೀಡುತ್ತಿರುವ ಕಾತ್ಯಾಯಿನಿ ಸಿ. ಎಸ್. ಅವರನ್ನು ಸನ್ಮಾನಿಸಲಾಯಿತು.
ಕಾತ್ಯಾಯಿನಿ ಅವರು 33 ವರ್ಷಗಳಿಗೂ ಹೆಚ್ಚು ವರ್ಷ ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಚಿತ್ರಕಲಾ ಮತ್ತು ಕೌಶಲ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ನಂತರವೂ ಸ್ಕೌಟ್ ಗೈಡ್ ಚಳುವಳಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇತ್ತೀಚಿಗೆ ಶಿವಮೊಗ್ಗ ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದು, ತಂದೆಯವರ ಮಾರ್ಗದರ್ಶನದಲ್ಲಿ, ಅವರ ಪ್ರೋತ್ಸಾಹದಿಂದ ಸಾಂಪ್ರದಾಯಿಕ ಚಿತ್ರ ಮತ್ತು ಹಸೆ ಚಿತ್ರಗಳಲ್ಲಿ ಬಾಲ್ಯದಿಂದಲೇ ತೊಡಗಿಸಿಕೊಂಡಿದ್ದಾರೆ.
Bharat Scouts and Guides Shimoga ಕಾತ್ಯಾಯಿನಿಯವರು ಶಿಕ್ಷಕಿಯಾಗಿ ರಾಜ್ಯ, ರಾಷ್ಟ್ರ ಮಟ್ಟದ ಜಂಬೂರೀ, ಜಂಬೂರೆಟ್ಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಗೈಡ್ ವಿಭಾಗದ ತರಬೇತಿ ನಾಯಕಿ ಆಗಿದ್ದು, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಹಲವಾರು ತರಬೇತಿ ಶಿಬಿರಗಳಲ್ಲಿ ನಾಯಕಿಯಾಗಿ ಸೇವೆ ಸಲ್ಲಿಸಿದ್ದಾರೆ.
ಹಿರಿಯ ಸ್ಕೌಟರ್ ವೈ.ಆರ್.ವೀರೇಶಪ್ಪ, ಜಿಲ್ಲಾ ರೋವರ್ ಆಯುಕ್ತ ಕೆ.ರವಿ, ಜಿಲ್ಲಾ ಸ್ಕೌಟ್ ಆಯುಕ್ತ ಎಸ್.ಜಿ.ಆನಂದ್, ನೂತನ ಜಿಲ್ಲಾ ಆಯುಕ್ತೆ ಲಕ್ಷ್ಮೀ ಕೆ. ರವಿ, ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರಯ್ಯ, ಸಹಾಯಕ ಜಿಲ್ಲಾ ಆಯುಕ್ತ ಹೆಚ್.ಪರಮೇಶ್ವರ, ಶ್ರೀನಿವಾಸ್ ವರ್ಮಾ, ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್, ಘನಶ್ಯಾಮ್ ಗಿರಿಮಾಜಿ, ಅಶ್ವಿನಿ ದೊರೈ, ದೊರೈ, ನಗರದ ವಿವಿಧ ಶಾಲಾ ಕಾಲೇಜಿನ ಶಿಕ್ಷಕ, ಶಿಕ್ಷಕಿಯರು, ಉಪನ್ಯಾಸಕರು, ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ರಾಜೇಶ್ ಅವಲಕ್ಕಿ, ಯುವ ಸಮಿತಿಯ ಸದಸ್ಯರು ಭಾಗವಹಿಸಿದ್ದರು.
Hindustan Aeronautics Limited ಮಾಜಿ ಸೈನಿಕರಿಗೆ ಎಚ್ಎಎಲ್ (HAL) ನಿಂದ ಅರ್ಜಿ ಆಹ್ವಾನ
Hindustan Aeronautics Limited ಹಿಂದೂಸ್ತಾನ್ ಏರೋನ್ಯಾಟಿಕ್ಸ್ ಲಿಮಿಟೆಡ್ನಲ್ಲಿ ಮೆಕಾನಿಕಲ್ ಎಂಜಿನಿಯರಿಂಗ್/ ಎಲೆಕ್ನಿಕಲ್ ಎಂಜಿನಿಯರಿಂಗ್ ಡಿಪ್ಲೊಮಾ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ, 45 ವರ್ಷದೊಳಗಿನ ಸಾಮಾನ್ಯ ವರ್ಗದ ಹಾಗೂ 50 ವರ್ಷದೊಳಗಿನ ಎಸ್ಸಿ/ಎಸ್ಟಿ ವರ್ಗದ ಮಾಜಿ ಸೈನಿಕರುಗಳಿಗೆ ನಾಲ್ಕು ವರ್ಷಗಳ ಅವಧಿಗೆ ಏರ್ಪ್ರೇಮ್ / ಎಲೆಕ್ಟ್ರೀಷಿಯನ್ ಹುದ್ದೆಗೆ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಅರ್ಹ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು dgrddemp@desw.gov.in- DGR ಜಾಲತಾಣದಿಂದ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಗಳನ್ನು ಎಕ್ಸೆಲ್ ಫಾರ್ಮೆಟ್ನಲ್ಲಿ ಜಿಲ್ಲಾ/ರಾಜ್ಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಗೆ soldiersshimoga@gmail.com ಇ-ಮೇಲ್ ಮೂಲಕ ಮಾತ್ರ ಕಳುಹಿಸಬಹುದಾಗಿದೆಯೆಂದು ಉಪ ನಿರ್ದೇಶಕರು (ಪ್ರಭಾರ), ಸೈನಿಕ Hindustan Aeronautics Limited ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ 08182-220925 ಹಾಗೂ soldiersshimoga@gmail.com ಗೆ ಮಿಂಚಂಚೆ ಸಂಪರ್ಕಿಸಬಹುದಾಗಿದೆ.
MESCOM ಪೊಲೀಸ್ ಚೌಕಿ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-8ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿದ್ದು, ಸೆ. 18 ರಂದು ಬೆಳಗ್ಗೆ 10.00 ರಿಂದ ಸಂಜೆ 5.30 ರವರೆಗೆ ಆಲ್ಕೋಳ ಸರ್ಕಲ್, ಅರಣ್ಯ ಕಚೇರಿ, ಇಂದಿರಾ ಗಾಂಧಿ ಬಡಾವಣೆ, ಶಿವಪ್ಪ ನಾಯಕ ಬಡಾವಣೆ, ಜಯದೇವ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಕೆಎಸ್ಆರ್ಟಿಸಿ ಲೇಔಟ್, ಕಾಶಿಪುರ, ಲಕ್ಕಪ್ಪ ಲೇಔಟ್, ಹನುಮಂತಪ್ಪ ಬಡಾವಣೆ, ತಮಿಳು ಕ್ಯಾಂಪ್, ಕುವೆಂಪು ಬಡಾವಣೆ, ಎನ್ಎಂಸಿ ಕಾಂಪೌಂಡ್, ಲಕ್ಷ್ಮೀಪುರ ಕೆಂಚಪ್ಪ ಲೇಔಟ್, ಹುಡ್ಕೋ ಕಲ್ಲಹಳ್ಳಿ, ಎ ರಿಂದ ಎಫ್ ಬ್ಲಾಕ್, ಕರಿಯಣ್ಣ ಬಿಲ್ಡಿಂಗ್, ತಿಮ್ಮಕ್ಕ ಲೇಔಟ್, ಅಣ್ಣ ಹಜಾರೆ ಪಾರ್ಕ್, ಬಸವ ಮಂಟಪ, ದಾಮೋಧರ ಕಾಲೋನಿ, ಸೂಡಾ ಕಚೇರಿ, ಪೊಲೀಸ್ ಚೌಕಿ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
Minority Welfare Department ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಂದ ಸರಳ ವಿವಾಹ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
Minority Welfare Department ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಅಭ್ಯರ್ಥಿಗಳಿಂದ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ. 50,000/- ನೀಡುವ ಯೋಜನೆಯು ಜಾರಿಯಲ್ಲಿದ್ದು, ಅರ್ಹ ಹಾಗೂ ಆಸಕ್ತಿಯುಳ್ಳ ವಧು ವರರು ಜಿಲ್ಲಾ ನೋಂದಣಿ/ ವಕ್ಫ್ ಬೋರ್ಡ್ ಕಚೇರಿಗಳಲ್ಲಿ ಸಾಮೂಹಿಕ ವಿವಾಹಗಳ ಆಯೋಜಕರೆಂದು ನೋಂದಣಿಯಾಗಿರುವ ಖಾಸಗಿ ಟ್ರಸ್ಟ್ಗಳು, ದೇವಸ್ಥಾನ ಟ್ರಸ್ಟ್ಗಳು, ಸಂಘ, ಸೊಸೈಟಿಗಳು, ವಕ್ಫ್ ಸಂಸ್ಥೆಗಳು ಮತ್ತು ಖಾಸಗಿ ವ್ಯಕ್ತಿಗಳು ನಡೆಸುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ವಿವಾಹವಾದವರಿಂದ ಅರ್ಜಿ ಆಹ್ವಾನಿಸಿದೆ.
Minority Welfare Department ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳಿಗೆ ಪ್ರೋತ್ಸಾಹ ಹಾಗೂ ವಿವಾಹದ ಖರ್ಚು-ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ. 5,000/-ಗಳನ್ನು ನೀಡಲಾಗುವುದು. ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳು ಈ ಕಾರ್ಯಕ್ರಮದ ಏಳು ದಿನ ಮುಂಚಿತವಾಗಿ ಕಾರ್ಯಕ್ರಮ ಆಯೋಜನೆಯ ಬಗ್ಗೆ ಅರ್ಜಿ ಸಲ್ಲಿಸುವುದು ಮತ್ತು ವಿವಾಹ ನಡೆದ ದಿನಾಂಕದಿAದ 3 ದಿನಗಳೊಳಗಾಗಿ ಅಗತ್ಯ ದಾಖಲಾತಿಗಳನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸುವುದು. ವಧು-ವರರು ಕನಿಷ್ಠ ಏಳು ದಿನ ಮುಂಚಿತವಾಗಿ ವಾಸ್ತವ್ಯವಿರುವ ಜಿಲ್ಲೆಯಲ್ಲಿಯೇ ಅರ್ಜಿ ಸಲ್ಲಿಸತಕ್ಕದ್ದು.
ಅರ್ಜಿ ಸಲ್ಲಿಸಲು ಅರ್ಹತೆ: ಸಾಮೂಹಿಕ ವಿವಾಹಗಳಲ್ಲಿ ಕನಿಷ್ಠ 10 ಜೋಡಿಗಳು ಭಾಗವಹಿಸಿರತಕ್ಕದ್ದು, ವಧುವಿಗೆ ಕನಿಷ್ಠ 18 ವರ್ಷದಿಂದ 42 ವರ್ಷಗಳು, ವರನಿಗೆ ಕನಿಷ್ಠ 21 -45 ವರ್ಷ ವಯಸ್ಸು ಆಗಿರತಕ್ಕದ್ದು. ವಧುವರರ ವಾರ್ಷಿಕ ಆದಾಯವು ರೂ. 2.50 ಲಕ್ಷಗಳು ಮತ್ತು ಒಟ್ಟಾರೆಯಾಗಿ 5.00 ಲಕ್ಷಗಳನ್ನು ಮೀರತಕ್ಕದ್ದಲ್ಲ. ಈ ಸೌಲಭ್ಯವನ್ನು ಜೀವನದಲ್ಲಿ ಒಮ್ಮೆ ಮಾತ್ರ ಪಡೆಯಬಹುದಾಗಿದೆ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಈ ಯೋಜನೆಯ ಸೌಲಭ್ಯ ನೀಡೊಲಾಗುವುದು. ವರನಿಗೆ ಈಗಾಗಲೇ ಜೀವಂತ ಪತ್ನಿಯಿದ್ದಲ್ಲಿ ಅಥವಾ ವಧುವಿಗೆ ಜೀವಂತ ಪತಿ ಇದ್ದಲ್ಲಿ ಈ ಯೋಜನೆ ಅನ್ವಯಿಸುವುದಿಲ್ಲ
ಆಸಕ್ತರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Karnataka Science and Technology Academy ಐದು ದಿನಗಳ “ಸಂಶೋಧನಾ ವಿಧಾನ ಮತ್ತು ದತ್ತಾಂಶ ವಿಶ್ಲೇಷಣೆ” ಕಾರ್ಯಾಗಾರ
Karnataka Science and Technology Academy ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ “ಸಂಶೋಧನಾ ವಿಧಾನ ಮತ್ತು ದತ್ತಾಂಶ ವಿಶ್ಲೇಷಣೆ” ವಿಷಯದ ಮೇಲೆ ದಿನಾಂಕ: 14/10/2025 ರಿಂದ 18/10/2025 ರವರೆಗೆ ಐದು ದಿನಗಳ ಕಾರ್ಯಾಗಾರವನ್ನು ಅಕಾಡೆಮಿಯ ಕಛೇರಿಯಲ್ಲಿ ಆಯೋಜಿಸಲಾಗುತ್ತಿದ್ದು ಆಸಕ್ತ ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು/ಪ್ರಾಧ್ಯಾಪಕರು ಭಾಗವಹಿಸಬಹುದಾಗಿದೆ.
ಆಸಕ್ತ ಪ್ರತಿನಿಧಿಗಳು ದಿನಾಂಕ: 13/10/2025ರೊಳಗಾಗಿ (Google form https://forms.gle/UNrBg9wiBzgQBMVD6) ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ.
Karnataka Science and Technology Academy ಹೆಚ್ಚಿನ ಮಾಹಿತಿಗಾಗಿ ಕಾರ್ಯಾಗಾರದ ಸಂಯೋಜಕ ಶ್ರೀನಿವಾಸು ವಿ.ಕೆ.. ವೈಜ್ಞಾನಿಕಾಧಿಕಾರಿ ಇವರನ್ನು (ಮೊ: 9620767819) ಸಂಪರ್ಕಿಸಬಹುದಾಗಿದೆ ಹಾಗೂ ಅಕಾಡೆಮಿಯ ವೆಬ್ ಸೈಟ್ – https://kstacademy.in ವೀಕ್ಷಿಸಬಹುದಾಗಿದೆ. ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಆರ್ ಅವರು ತಿಳಿಸಿದ್ದಾರೆ.
