Sunday, May 17, 2026
Sunday, May 17, 2026
Home Blog Page 164

Shimoga News ಶಿವಮೊಗ್ಗದಲ್ಲಿ ವಿಮಾ ನಿಗಮದ ಉಪ ಕಚೇರಿ ತೆರೆಯಲು ಆಗ್ರಹ

0

Shimoga News ಶಿವಮೊಗ್ಗ ನಗರದಲ್ಲಿ ನೌಕರರ ರಾಜ್ಯ ವಿಮಾ ನಿಗಮದ ಉಪ ಪ್ರಾದೇಶಿಕ ಕಚೇರಿಯ ಕರ್ನಾಟಕ ವಿಭಾಗ ತೆರೆಯುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಆಗ್ರಹಿಸಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಇಎಸ್‌ಐಸಿ ಪ್ರಾದೇಶಿಕ ಕಚೇರಿ ಹುಬ್ಬಳ್ಳಿ ಸಂಯುಕ್ತ ಸಹಭಾಗಿತ್ವದಲ್ಲಿ ಸಂಘದ ಶಾಂತಲಾ ಸ್ಪೇರೋಕ್ಯಾಸ್ಟ್ ಸಭಾಂಗಣದಲ್ಲಿ “ಇಎಸ್‌ಐಸಿ ಎಸ್‌ಪಿಆರ್‌ಇಇ 2025 ಕಾರ್ಯಕ್ರಮ” ಯೋಜನೆ ಅಡಿಯಲ್ಲಿ ಆಯೋಜಿಸಿದ್ದ ಸಾಮಾಜಿಕ ಭದ್ರಾತಾ ಸೌಲಭ್ಯ ವಿಸ್ತರಣಾ ಅರಿವು ಕಾರ್ಯಾಗಾರದಲ್ಲಿ ಮಾತನಾಡಿದರು.

ಪ್ರಸ್ತುತ ನೌಕರರ ರಾಜ್ಯ ವಿಮಾನ ನಿಗಮದ ಹುಬ್ಬಳ್ಳಿ ಕೇಂದ್ರವು ಶಿವಮೊಗ್ಗ, ಭದ್ರಾವತಿ, ದಾವಣಗೆರೆ, ಚಿತ್ರದುರ್ಗ ಮತ್ತು ಹರಿಹರ ಕಚೇರಿ ಕೇಂದ್ರಗಳ ವ್ಯಾಪ್ತಿ ಹೊಂದಿದೆ. ಈ ವ್ಯಾಪ್ತಿ ಪ್ರದೇಶದಲ್ಲಿ 2,80,000 ನೋಂದಾಯಿತ ಕಾರ್ಮಿಕರು ಮತ್ತು 5670 ನೊಂದಾಯಿತ ಮಾಲೀಕರಿದ್ದಾರೆ. ಹುಬ್ಬಳ್ಳಿ ಕೇಂದ್ರವು ಮೇಲ್ಕಂಡ ವ್ಯಾಪ್ತಿ ಪ್ರದೇಶಗಳಿಂದ ಅತ್ಯಂತ ದೂರವಾಗಿದೆ ಎಂದು ತಿಳಿಸಿದರು.

ಕಾರ್ಮಿಕರಿಗೆ ಕೆಲಸ ಕಾರ್ಯಗಳಿಗೆ ಹುಬ್ಬಳ್ಳಿಗೆ ಭೇಟಿ ನೀಡಲು ತುಂಬಾ ಅನಾನುಕೂಲವಾಗಿದೆ. ಆದ್ದರಿಂದ ಶಿವಮೊಗ್ಗ ನಗರಕ್ಕೆ ಉಪ ಪ್ರಾದೇಶಿಕ ಕಚೇರಿ ಮಂಜೂರು ಮಾಡಬೇಕು. ನೌಕರರ ರಾಜ್ಯ ವಿಮಾ ನಿಗಮವು ರಾಗಿಗುಡ್ಡದಲ್ಲಿ 100 ಹಾಸಿಗೆ ಆಸ್ಪತ್ರೆ ಮತ್ತು 32 ಸಿಬ್ಬಂದಿ ವಸತಿಗೃಹ ನಿರ್ಮಾಣ ಕೈಗೆತ್ತಿಕೊಂಡಿದೆ. ಮಾರ್ಚ್ 2026 ರೊಳಗೆ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.

Shimoga News ಮಾಚೇನಹಳ್ಳಿ ಕೈಗಾರಿಕಾ ವಲಯದಲ್ಲಿ ಇಎಸ್‌ಐ ಔಷಧಾಲಯ ಹಾಗೂ ಶಿಕಾರಿಪುರಕ್ಕೆ ನೌಕರರ ರಾಜ್ಯ ವಿಮಾ ನಿಗಮದ ಇಎಸ್‌ಐ ಶಾಖೆ ಮಂಜೂರು ಮಾಡಬೇಕು. ಎಸ್‌ಪಿಆರ್‌ಇಇ 2025 ಕಾರ್ಯಕ್ರಮದ ಬಗ್ಗೆ ಹೆಚ್ಚು ಪ್ರಚಾರ ಕೈಗೊಳ್ಳಬೇಕು. ದಂಡವಿಲ್ಲದೆ ನೋಂದಣಿಗೆ 2026ರ ಮಾರ್ಚ್ ವರೆಗೂ ಅವಕಾಶ ನೀಡಬೇಕು ಎಂದು ತಿಳಿಸಿದರು.

ನೌಕರರ ರಾಜ್ಯ ವಿಮಾ ನಿಗಮ ಹುಬ್ಬಳ್ಳಿ ಉಪ ವಿಭಾಗಿಯ ಕಚೇರಿ ಜಂಟಿ ನಿರ್ದೇಶಕ ರಘುರಾಮನ್ ಮಾತನಾಡಿ, ಉದ್ಯೋಗದಾತರು ಮತ್ತು ಉದ್ಯೋಗಿಗಳ ನೋಂದಣಿಯನ್ನು ಉತ್ತೇಜಿಸುವ ಯೋಜನೆ ಎಸ್‌ಪಿಆರ್‌ಇಇ 2025 ಕಾರ್ಯಕ್ರಮ ಎಂದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯ್ ಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್ ಮನೋಹರ, ಪ್ರೋಗ್ರಾಂ ಕಮಿಟಿ ಚೇರ್ಮನ್ ಶರತ್, ನಿರ್ದೇಶಕರಾದ ಪಿ.ರುದ್ರೇಶ್, ಎಸ್.ಎಸ್.ಉದಯಕುಮಾರ್, ಬಿ.ಸುರೇಶ್ ಕುಮಾರ್, ಜಿ.ವಿ.ಕಿರಣ್ ಕುಮಾರ್, ಡಾ ಲಕ್ಷ್ಮೀದೇವಿ ಗೋಪಿನಾಥ್, ಮಾಜಿ ಅಧ್ಯಕ್ಷ ಜೆ.ಆರ್.ವಾಸುದೇವ್, ಡಿ.ಎಂ.ಶಂಕರಪ್ಪ, ನೌಕರರ ರಾಜ್ಯ ವಿಮಾ ನಿಗಮದ ಶಿವಮೊಗ್ಗ ಕೇಂದ್ರದ ಮ್ಯಾನೇಜರ್ ಆಶಾದೇವಿ, ಭದ್ರಾವತಿ ಕೇಂದ್ರದ ಮಂಜುಳಾ, ಕಾರ್ಮಿಕ ಇಲಾಖೆ ಅಧಿಕಾರಿಗಳು, ವಾಣಿಜ್ಯ ಮತ್ತು ಕೈಗಾರಿಕಾ ಉದ್ಯಮಿ ಹಾಜರಿದ್ದರು.

K. S. Eshwarappa ಗುಣಮಟ್ಟದ ಚಹಾ ಸೇವೆಯ ” ಸ್ವಸ್ತಿಕ್ ಚಾಯ್” ಗೆ ಚಾಲನೆ.

0

K. S. Eshwarappa ನಗರದ ರಾಜೇಂದ್ರನಗರ, ಲಕ್ಷ್ಮೀ ಟಾಕೀಸ್ ಹಿಂಭಾಗ ಆಕ್ಸಿಸ್ ಬ್ಯಾಂಕ್ ಹತ್ತಿರ ಸ್ಥಾಪಿತವಾಗಿರುವ ಸ್ವಸ್ತಿಕ್ ಚಾಯ್‌ನ ಹೊಸ ಶಾಖೆಯನ್ನು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಇಂದು ಬೆಳಿಗ್ಗೆ ಉದ್ಘಾಟನೆಯನ್ನು ನೆರವೇರಿಸಿದರು.
ಹೊಸ ಶಾಖೆಯ ಉದ್ಘಾಟನೆಯೊಂದಿಗೆ ನಗರದಲ್ಲಿ ಗುಣಮಟ್ಟದ ಚಹಾ ಸೇವೆ ಮತ್ತು ಕುಟುಂಬಸ್ನೇಹಿ ವಾತಾವರಣ ಒದಗಿಸುವತ್ತ ಸಂಸ್ಥೆಯ ಬದ್ಧತೆ ಮತ್ತಷ್ಟು ಬಲಪಡಲಿದೆ ಎಂದು ವ್ಯವಸ್ಥಾಪಕ ತಿಳಿಸಿದರು.
K. S. Eshwarappa ಈ ಸಂದರ್ಭದಲ್ಲಿ ಭಾರತೀ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎ. ಶಿವಕುಮಾರ್, ರೇಖಾ ರಂಗನಾಥ್, ಮಾಲೀಕರಾದ ಸುರೇಶ್, ಕಿಶನ್, ನಿತೀನ್ ಸೇರಿದಂತೆ ಕುಟುಂಬದವರು, ಸ್ನೆಹಿತರು ಪಾಲ್ಗೊಂಡು ಶುಭ ಹಾರೈಸಿದರು.

Areca Garden Shimoga ಅತೀ ಕನಿಷ್ಠ ವಿಮೆ ಹಣ ಪರಿಹಾರ. ಸೂಕ್ತ ಪರಿಹಾರಕ್ಕೆ ಹಕ್ಕೋತ್ತಾಯ ಮಾಡಲು ಸಂಘಟನೆಯ ಕರೆ.

0

Areca Garden Shimoga ಅಡಿಕೆ ಬೆಳೆಗಾರ ಇವತ್ತು ಎಲೆ ಚುಕ್ಕೆ, ಕೊಳೆರೋಗ ,ಕಾಡುಪ್ರಾಣಿಗಳ ಹಾವಳಿ ಹೀಗೆ ಎಲ್ಲಾ ರೀತಿಯ ಸಂಕಷ್ಟಗಳಿಂದ ತತ್ತರಿಸಿ ಹೋಗಿದ್ದು ಗಾಯದ ಮೇಲೆ ಬರೆ ಎಳೆದಂತೆ ಅತಿವೃಷ್ಟಿಯಿಂದ ಇರುವ ಫಸಲೂ ಕೂಡ ನಷ್ಟ ಹೊಂದಿದೆ. ಆಪತ್ ಕಾಲಕ್ಕೆ ಆಗಲಿ ಎಂದು ಕಟ್ಟಿದ ಇನ್ಸೂರೆನ್ಸ್ ಹಣವು ಕೂಡ ಇನ್ಸೂರೆನ್ಸ್ ಕಂಪನಿ ಪಾಲಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅವೈಜ್ಞಾನಿಕ ,ರೈತ ವಿರೋಧಿ ವರದಿಯಿಂದ ಇವತ್ತು ಬೆಳೆಗಾರನಿಗೆ ಹೆಕ್ಟೇರಿಗೆ ಬರಬೇಕಾದ 128,000 /ಮೊತ್ತದ ಬದಲಾಗಿ ಆರು ನೂರು ರೂಗಳು ಕೆಲವೆಡೆ 975 ರೂಗಳು ಹೀಗೆ ಅತಿ ಕನಿಷ್ಠ ಮೊತ್ತದ ಹಣ ಬೆಳೆಗಾರನ ಖಾತೆಗೆ ಜಮೆಯಾಗಿದೆ. . ಹಾಗೂ ಬರುವ ವರ್ಷದ ವಿಮಾ ಪರಿಹಾರಕ್ಕೆ ಇದೇ ಮಾನದಂಡವೇ ಅನ್ವಯಿಸುವುದರಿಂದ ಬರುವ ಸಾಲಿನಲ್ಲಿಯೂ ಬೆಳೆಗಾರನಿಗೆ ಇದೇ ಪರಿಸ್ಥಿತಿ ಬರುವುದು ಖಂಡಿತ .ಕಟ್ಟಿದ ವಿಮೆಗೆ ಪರಿಹಾರದ ಮೊತ್ತವನ್ನ ಪಡೆಯುವುದು ಬೆಳೆಗಾರನ ಆದ್ಯ ಹಕ್ಕು .ಹಾಗಾಗಿ ಇದು ಯಾರ ವಿರುದ್ಧ ಪ್ರತಿಭಟನೆ ಎನ್ನುವುದಕ್ಕಿಂತಲೂ ಹೆಚ್ಚಾಗಿ ನಮ್ಮ ಹಕ್ಕಿಗಾಗಿ ಆಗ್ರಹಿಸುವ ಹಕ್ಕೊತ್ತಾಯದ Areca Garden Shimoga ಸಭೆಯಾಗಿದೆ. ಸಂಕಷ್ಟ ಪರಿಸ್ಥಿತಿಯಲ್ಲೆಲ್ಲಾ ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘ ಅಡಿಕೆ ಬೆಳೆಗಾರರ ಪರವಾಗಿ ನಿಂತಿದ್ದು ಎಲ್ಲಾ ರೀತಿಯ ಹೋರಾಟಗಳನ್ನು ಮಾಡುತ್ತಾ ಬಂದಿದೆ . ನಾಳೆಯೂ ಕೂಡ ಬೆಳೆಗಾರರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹಕ್ಕೊತ್ತಾಯದ ಸಭೆಯನ್ನು ಕರೆಯಲಾಗಿದ್ದು ಪ್ರಾಂತ್ಯದ ಎಲ್ಲಾ ಅಡಿಕೆ ಬೆಳೆಗಾರರೂ ಇಂದು ಮಂಗಳವಾರ ಬೆಳಿಗ್ಗೆ 10:30 ಕ್ಕೆ ಸರಿಯಾಗಿ ಸಾಗರ ಉಪವಿಭಾಗಾಧಿಕಾರಿಗಳ ಕಚೇರಿ ಎದುರಿನಲ್ಲಿ ಆಗಮಿಸಿ ಸಭೆ ಸೇರಿ ನ್ಯಾಯಯುತ ಪರಿಹಾರ ಪಡೆಯುವ ಹಕ್ಕಿಗಾಗಿ ಸಂಘದ ಹೋರಾಟದಲ್ಲಿ ಕೈಜೋಡಿಸಬೇಕಾಗಿ ವಿನಂತಿಸುತ್ತಿದ್ದೇವೆ

Department Of Education Shimoga ಶಿವಮೊಗ್ಗದಲ್ಲಿ ಶಾಲಾ ಶಿಕ್ಷರಿಗೆ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳು

0

Department Of Education Shimoga 2025-26ನೇ ಸಾಲಿನ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರುಗಳಿಗೆ ಡಿ. 11 ರಂದು ಬೆಳಗ್ಗೆ 10.00 ರಿಂದ ಬಿ.ಹೆಚ್.ರಸ್ತೆಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
Department Of Education Shimoga ಭಕ್ತಿಗೀತೆ, ಆಶುಭಾಷಣ, ಪ್ರಬಂಧ ಸ್ಪರ್ಧೆ, ಸ್ಥಳದಲ್ಲೇ ಪಾಠೋಪಕರಣ ತಯಾರಿಕಾ ಸ್ಪರ್ಧೆ, ಸ್ಥಳದಲ್ಲೇ ಚಿತ್ರ ಬರೆಯುವ ಸ್ಪರ್ಧೆ ಹಾಗೂ ಸಾಮಾನ್ಯ ಜ್ಞಾನ ಮತ್ತು ವಿಜ್ಞಾನ ವಿಷಯಗಳ ಕುರಿತು ರಸಪ್ರಶ್ನೆ ಸ್ಪರ್ಧೆಗಳನ್ನು ನಡೆಸಲಾಗುತ್ತಿದ್ದು, ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಶಿಕ್ಷಕರು ಭಾಗವಹಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆ) ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Doc Adalat ಡಿಸೆಂಬರ್ 15. ಶಿವಮೊಗ್ಗ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ” ಡಾಕ್ ಅದಾಲತ್”

0

Doc Adalat ಶಿವಮೊಗ್ಗ ಕೋಟೆ ರಸ್ತೆಯಲ್ಲಿರುವ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಡಿ. 15 ರಂದು ಬೆಳಗ್ಗೆ 11.00ಕ್ಕೆ ತ್ರೈಮಾಸಿಕ ಡಾಕ್ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಅಂಚೆ ಇಲಾಖೆಯ ಕುಂದುಕೊರತೆಗಳನ್ನು ಅಥವಾ ಸಲಹೆಗಳಿದ್ದಲ್ಲಿ ಡಿ. 12 ರೊಳಗಾಗಿ ಲಿಖಿತವಾಗಿ ಸಲ್ಲಿಸಿ, ಡಾಕ್ ಅದಾಲತ್ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅಂಚೆ ಅಧೀಕ್ಷಕ ಎಂ. ಕುಮಾರಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

Red Sandalwood Smuggling ಮಂಡಗದ್ದೆ ಸನಿಹ ಅಕ್ರಮ ಶ್ರೀಗಂಧ ಅರಣ್ಯ ಸಿಬ್ಬಂದಿ ವಶ.ಆರೋಪಿಗಳ ಬಂಧನ.

0

Red Sandalwood Smuggling ಮಂಡಗದ್ದೆ ವಲಯ, ಮಂಡಗದ್ದೆ ಶಾಖೆಯ ಕನಗಳಕೊಪ್ಪ ಗಸ್ತಿನ ರ ಮೇಲಿನ ಪತ್ರುವಳ್ಳಿ ಗ್ರಾಮದ ಸರ್ವೇ ನಂಬರ್ 06 ರಲ್ಲಿ 33.250 Kg ಶ್ರೀಗಂಧವನ್ನು ಸರ್ಕಾರದ ಪರ ವಶಪಡಿಸಿಕೊಂಡು, ಸತೀಶ್ ಬಿನ್ ನಂದಿ ಬಸವ ಕನಗಳಕೊಪ್ಪ ವಾಸಿ ಮತ್ತು ಪ್ರಕಾಶ್ ಬಿನ್ ಶೇಖರ್ ಕನಗಳಕೊಪ್ಪ ವಾಸಿ ಇಬ್ಬರನ್ನು ಬಂಧಿಸಿ ಅರಣ್ಯ ಮೊಕದ್ದಮೆ ಸಂಖ್ಯೆ 35/2025-26 ದಾಖಲಿಸಿರುತ್ತಾರೆ. ಸದರಿ ಕಾರ್ಯಾಚರಣೆಯಲ್ಲಿ ಶ್ರೀ ವಿನಯ ಕುಮಾರ್, ವಲಯ ಅರಣ್ಯಧಿಕಾರಿ, ಶ್ರೀ ಅಮಿತ್ ಉಪ ವಲಯ Red Sandalwood Smuggling ಅರಣ್ಯಧಿಕಾರಿ, ಶ್ರೀ ಸಂತೋಷ್, ಕಿರಣ್ ಕುಮಾರ್ ಮತ್ತು ಮಹದೇವ್ ಗಸ್ತು ಅರಣ್ಯ ಪಾಲಕರು ಮತ್ತು ಶ್ರೀ ಅರುಣ್ ವಾಹನ ಚಾಲಕರ ಭಾಗವಹಿಸಿದ್ದರು.

Devavrat Mahesh ದಂಡಕ್ರಮ ಪಾರಾಯಣ: ದೇವವ್ರತ ಮಹೇಶ್ ಗೆ ಶೃಂಗೇರಿ ಮಠದಿಂದ ಸನ್ಮಾನ.ವಿಶೇಷ ವರದಿ: ಡಾ.ತಂಗಿರಾಲ ಶಿವಕುಮಾರ್ ಶರ್ಮ.ಶೃಂಗೇರಿ.

0

Devavrat Mahesh ಮಹಾರಾಷ್ಟ್ರ ಮೂಲದ ದೇವವ್ರತ ಮಹೇಶ್ ರೇಖೆ ಅವರ ಸಾಧನೆಗೆ ಕರ್ನಾಟಕದಲ್ಲಿರುವ ಶೃಂಗೇರಿ ಶಾರದಾ ಪೀಠ ಬೆನ್ನೆಲುಬಾಗಿ ನಿಂತಿದ್ದು, ಶೃಂಗೇರಿ ಶ್ರೀಗಳಿಂದ ಪುರಸ್ಕಾರ ನೀಡಿ ಸನ್ಮಾನಿಸಲಾಗಿದೆ.

ದೇವವ್ರತ ಮಹೇಶ್ ರೇಖೆ ಐತಿಹಾಸಿಕ ಸಾಧನೆಗೆ ಶೃಂಗೇರಿ ಮಠದಿಂದ ಸನ್ಮಾನ

ಶುಕ್ಲ ಯಜುರ್ವೇದದ ದಂಡಕ್ರಮ ಪಾರಾಯಣ ಯಶಸ್ವಿಯಾಗಿ ಪೂರ್ಣಗೊಳಿಸಿದ್ದ ಕಾಶಿಯ ಯುವ ವೇದ ವಿದ್ವಾಂಸ ವೇದಮೂರ್ತಿ ದೇವವ್ರತ ಮಹೇಶ್ ರೇಖೆ ಅವರ ಸಾಧನೆಗೆ ಪ್ರಧಾನಿ ಆದಿಯಾಗಿ ದೇಶಾದ್ಯಂತ ಮೆಚ್ಚುಗೆ, ಅಭಿನಂದನೆಗಳು ವ್ಯಕ್ತವಾಗತೊಡಗಿವೆ.

ಮಹಾರಾಷ್ಟ್ರ ಮೂಲದ ದೇವವ್ರತ ಮಹೇಶ್ ರೇಖೆ ಅವರ ಸಾಧನೆಗೆ ಕರ್ನಾಟಕದಲ್ಲಿರುವ ಶೃಂಗೇರಿ ಶಾರದಾ ಪೀಠ ಬೆನ್ನೆಲುಬಾಗಿ ನಿಂತಿದ್ದು, ಶೃಂಗೇರಿ ಶ್ರೀಗಳಿಂದ ಆಶೀರ್ವಾದ ಪೂರ್ವಕ ಪುರಸ್ಕಾರ ನೀಡಿ ಯುವ ವಿದ್ವಾಂಸರಿಗೆ ಸನ್ಮಾನ ಮಾಡಲಾಗಿದೆ.

ಸನ್ಮಾನ ಸಮಾರಂಭದ ಭಾಗವಾಗಿ ಕಾಶಿಯಲ್ಲಿ ರಥಯಾತ್ರೆ ಕ್ರಾಸಿಂಗ್‌ನಿಂದ ಮಹಮೂರ್‌ಗಂಜ್‌ವರೆಗೆ ಸಂಗೀತ ವಾದ್ಯಗಳು, ಶಂಖಧ್ವನಿ ಮತ್ತು 500 ಕ್ಕೂ ಹೆಚ್ಚು ವೈದಿಕ ವಿದ್ಯಾರ್ಥಿಗಳನ್ನು ಒಳಗೊಂಡ ಭವ್ಯ ಮೆರವಣಿಗೆ ನಡೆದಿದೆ.

Devavrat Mahesh ಕಾಶಿಯ ಶೃಂಗೇರಿ ಶಂಕರ ಮಠದಲ್ಲಿ ಶೃಂಗೇರಿ ಜಗದ್ಗುರುಗಳ ಪ್ರತಿನಿಧಿಗಳಾದ ಆಸ್ಥಾನ ವಿದ್ವಾಂಸರೂ ಆದ ಡಾ.ತಂಗಿರಾಲ ಶಿವಕುಮಾರ ಶರ್ಮ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ಮಹೇಶ್ ರೇಖೆ ಅವರಿಗೆ ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸನ್ನಿಧಾನದಿಂದ ವಿಶೇಷ ಆಶೀರ್ವಾದದ ಸಂದೇಶವನ್ನು ರವಾನಿಸಲಾಯಿತು. ಇದೇ ವೇಳೆ ಶ್ರೀಮಠದಿಂದ 5 ಲಕ್ಷ ರೂಪಾಯಿ ಮೌಲ್ಯದ ಸುವರ್ಣ ಕಂಕಣ ಹಾಗೂ ₹1,11,116 ನೀಡಿ ಸನ್ಮಾನಿಸಲಾಗಿದೆ.

ಯುವ ವೈದಿಕ ದೇವವ್ರತ ನಿರಂತರ 50 ದಿನಗಳ ಕಾಲ ಪುಸ್ತಕದ ಸಹಾಯವಿಲ್ಲದೇ, ಕೇವಲ ಸ್ಮರಣಶಕ್ತಿಯಿಂದ (ಕಂಠಸ್ಥ) ಶುಕ್ಲ ಯಜುರ್ವೇದದ ಮಾಧ್ಯಂದಿನ ಶಾಖೆಯ 2,000 ಮಂತ್ರಗಳ ದಂಡ ಕ್ರಮ ಪಾರಾಯಣವನ್ನು ಕಾಶಿಯ ವಿದ್ವತ್ ವರ್ಗದ ಮುಂದೆ ಮಾಡಿ ಯಶಸ್ವಿಯಾಗಿದ್ದಾರೆ. 200 ವರ್ಷಗಳ ನಂತರ ವಿದ್ವಾಂಸರೊಬ್ಬರು ಮಾಡಿರುವ ಸಾಧನೆ ಇದಾಗಿದೆ.

ದಂಡಕ್ರಮವನ್ನು ಇತಿಹಾಸದಲ್ಲಿ ಕೇವಲ ಮೂರು ಬಾರಿ ಮಾತ್ರ ಪ್ರದರ್ಶಿಸಲಾಗಿದೆ. ದೇವವ್ರತ ಅವರ ಪಠಣ ದೋಷರಹಿತವಾಗಿದ್ದು ಮತ್ತು ಕಡಿಮೆ ಅವಧಿಯಲ್ಲಿ ಪೂರ್ಣಗೊಂಡಿರುವುದು ಐತಿಹಾಸಿಕ ಸಾಧನೆಯಾಗಿದೆ.

ವಲ್ಲಭಾರಂ ಶಾಲಿಗ್ರಾಮ ಸಂಗವೇದ ವಿದ್ಯಾಲಯದಲ್ಲಿ ಅಕ್ಟೋಬರ್ 2 ರಿಂದ ನವೆಂಬರ್ 30 ರವರೆಗೆ ನಡೆದ ಪಾರಾಯಣವನ್ನು ಕಾಶಿಯ ಹಲವಾರು ಧಾರ್ಮಿಕ ಮತ್ತು ಸಾಮಾಜಿಕ ಸಂಸ್ಥೆಗಳು ಬೆಂಬಲಿಸಿದವು. ಸಂತರು, ವೇದ ವಿದ್ವಾಂಸರು ಮತ್ತು ಗಣ್ಯರು ಯುವ ವಿದ್ವಾಂಸ ಮತ್ತು ದೇವವ್ರತ ಅವರ ತಂದೆ ಮತ್ತು ಶಿಕ್ಷಕರೂ ಆಗಿರುವ ಮಹೇಶ್ ಚಂದ್ರಕಾಂತ್ ರೇಖೆ (ಪೀಠದ ವೇದಪೋಷಕ ಸಭೆ ನಡೆಸುವ ಶುಕ್ಲ ಯಜುರ್ವೇದ ಮಧ್ಯಂದಿನ ಶಾಖಾ ಪರೀಕ್ಷೆಗಳ ಮುಖ್ಯ ಪರೀಕ್ಷಕರು) ಅವರನ್ನು ಶ್ಲಾಘಿಸಿದರು.

ದಂಡಕ್ರಮ ಪಾರಾಯಣ ಎಂದರೇನು? ಕಠಿಣ ಏಕೆ?
ವೇದಗಳಲ್ಲಿ ಸಂಹಿತಾಪದ ಪ್ರಕೃತಿ ಎಂಬ ಸೂತ್ರದಿಂದ ಸಂಹಿತಾ ಹಾಗು ಪದಪಾಠಗಳು ಪ್ರಕೃತಿ ಪಾಠಗಳು ಎಂಬುದಿವೆ. ಸಂಹಿತಾ‌ಭಾಗವನ್ನು ಅದಿರುವಂತೆಯೇ ಪಠಿಸುವುದು ಪ್ರಕೃತಿಪಾಠವಾಗಿದೆ. ಸಂಹಿತಾಭಾಗದ ಪದಗಳನ್ನು ಬೇರೆ ಬೇರೆ ಕ್ರಮದಲ್ಲಿ ಮರುಜೋಡಿಸಿ ಪಠಿಸುವುದು ವಿಕೃತಿಪಾಠ

ಈ ಪಾಠಗಳನ್ನು ಯಥಾವತ್ತಾಗಿ, ಸ್ವರಗಳ ವ್ಯತ್ಯಾಸವಾಗದೆ, ಅಕ್ಷರ ವ್ಯತ್ಯಾಸವಾಗದೇ ವೇದಗಳ ಉಚ್ಚಾರಣೆ ಮಾಡುವಾಗ ಎಲ್ಲಿಯೂ ಯಾವುದೇ ಲೋಪದೋಷಗಳಾಗದೇ ಇರುವುದನ್ನು ಖಚಿತಪಡಿಸಿಕೊಳ್ಳಲು ಕಠಿಣ ಅಭ್ಯಾಸ ಕ್ರಮಕ್ಕಾಗಿ 8 ವಿಕೃತಿಪಾಠಗಳನ್ನು ಅನುಸರಿಸಲಾಗುತ್ತದೆ.

ಜಟಾ, ಮಾಲಾ, ಶಿಖಾ, ರೇಖಾ, ಧ್ವಜ, ದಂಡ, ರಥ, ಘನ ಎಂಬುದು 8 ವಿಕೃತಿಪಾಠಗಳಾಗಿವೆ.

ಸಂಹಿತಾ ಮಂತ್ರಗಳ ಪದಚ್ಛೇದವಾಗಿರುವ ಪದಗಳನ್ನು ಈ ಮೇಲೆ ಉಲ್ಲೇಖಿಸಿದ 8 ವಿಧಾನಗಳಲ್ಲಿ ಅಭ್ಯಸಿಸಲಾಗುತ್ತದೆ. ಹಾಗು ಇವುಗಳಿಗೆ ಅದರದ್ದೇ ಆದ ಕಠಿಣ ವಿಧಿವತ್ತಾದ ಅಭ್ಯಾಸ ಕ್ರಮಗಳನ್ನು ವಿಧಿಸಲಾಗಿದೆ. ಈಗ ದೇವವ್ರತ ಘನಪಾಠಿಗಳು ಪಾರಾಯಣ ಮಾಡಿರುವುದು 6ನೆಯದ್ದಾದ ದಂಡ ಎಂಬ ವಿಕೃತಿಯನ್ನು, ಅದರ ಉದಾಹರಣೆ ಹೀಗಿದೆ. ಅದರಲ್ಲಿ ನಿರ್ದಿಷ್ಟ ಮಂತ್ರಗಳ ಪದಚ್ಛೇದವನ್ನು ಈ ಕ್ರಮವಾಗಿ ಪಠಿಸಲಾಗುತ್ತದೆ.

representatives of sringeri matha felicitate Devvrat Mahesh Rekhe of kashi
50 ದಿನಗಳ ನಿರಂತರ ಶುಕ್ಲ ಯಜುರ್ವೇದದ ದಂಡಕ್ರಮ ಪಾರಾಯಣ: ಕಾಶಿಯ ಯುವ ವೇದ ವಿದ್ವಾಂಸನ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ
1 2 – A B

2 1 – B A

1 2 2 3 – A B B C

3 2 1 – C B A

1 2 2 3 3 4 – A B B C C D

4 3 2 1 – C D B A

1 2 2 3 3 4 4 5 – A B B C C D E

5 4 3 2 1 – E D C B A

1 2 2 3 3 4 4 5 5 6 – A B B C C D D E E F

6 5 4 3 2 1 – F E D C B A

ಹೀಗೆ ಪದಗಳ ಸಂಖ್ಯೆ ಅನುಸರಿಸಿ ಮುಂದುವರೆಯುತ್ತದೆ.

(ಮಾಹಿತಿ: ಸುಮುಖ ಶರ್ಮಾ)

ಯಾವುದೇ ಪುಸ್ತಕದ ನೆರವು ಇಲ್ಲದೇ, ಕೇವಲ ಸ್ಮರಣ ಶಕ್ತಿಯಿಂದ ಈ permutation and combination ಅನುಸರಿಸಿ, ಲಕ್ಷಗಟ್ಟಲೆ ಪದಗಳ ಪಾರಾಯಣ ಆಗಿರುತ್ತದೆ! ಈಗ ಮಹೇಶ್ ರೇಖೆ ಅವರು ನಡೆಸಿರುವುದು ಯಾಜ್ಙ್ನವಲ್ಕ್ಯ ಎಂಬ ಮಹರ್ಷಿಗಳಿಂದ ಪ್ರಚಾರಗೊಂಡ ಶುಕ್ಲಯಜುರ್ವೇದ ದ ಮಾಧ್ಯಂದಿನ ಶಾಖೆಯ ದಂಡಕ್ರಮ ಕಂಠಸ್ಥ ಪಾರಾಯಣವಾಗಿದೆ.

Bhagavad Gita ಭಗವದ್ಗೀತೆ ಎಲ್ಲಾಕಾಲಕ್ಕೂ ಶ್ರೇಷ್ಠವಾದ ಗ್ರಂಥ- ಡಾ.ಹರೀಶ್ ದೇಲಂತಬೆಟ್ಟು

0

Bhagavad Gita ಭದ್ರಾವತಿಯ ಸಂಸ್ಕೃತಿ ಸೌರಭ ವತಿಯಿಂದ ನವಂಬರ್ 6ನೇ ತಾರೀಕು ಶನಿವಾರ ತಾಲೂಕು ಬ್ರಾಹ್ಮಣ ಸಂಘದ ಶ್ರೀ ಗಾಯತ್ರಿ ಧರ್ಮ ಶಾಲಾ ಭವನದಲ್ಲಿ ಗೀತಾ ಜ್ಞಾನಸೌರಭ ಭಗವದ್ಗೀತೆ ಹಾಗೂ ಮಾನಸಿಕ ಆರೋಗ್ಯ ಎಂಬ ವಿಷಯವಾಗಿ ನಗರದ ಹೆಸರಾಂತ ವೈದ್ಯರು ಹಾಗೂ ಶಿವಮೊಗ್ಗ ಸುಬ್ಬಯ್ಯ ವೈದ್ಯಕೀಯ ಮಹಾ ವಿದ್ಯಾಲಯದ ಮನೋ ವೈದ್ಯಕೀಯ ವಿಭಾಗದ ಮುಖ್ಯಸ್ಥರಾದ ಶ್ರೀ ಹರೀಶ್ ದೇಲಂತ ಬೆಟ್ಟು ರವರಿಂದ ಗೀತಾ ಜ್ಞಾನ ಸೌರಭ ಭಗವದ್ಗೀತೆ ಹಾಗೂ ಮಾನಸಿಕ ಆರೋಗ್ಯ ಎಂಬ ವಿಷಯವಾಗಿ ಉಪನ್ಯಾಸ ಏರ್ಪಡಿಸಲಾಗಿತ್ತು ಶ್ರೀಯುತರು ಮಾತನಾಡುತ್ತಾ ಭಗವದ್ಗೀತೆ ಎಲ್ಲಾ ಕಾಲಕ್ಕೂ ಶ್ರೇಷ್ಠ ಮತ್ತು ಗ್ರಂಥ ಎಂದು ತಿಳಿಸಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಕೃತಿ ಸೌರಭ ಅಧ್ಯಕ್ಷರಾದ ಶ್ರೀಯುತ ಸುಬ್ರಮಣ್ಯ ರವರು ವಹಿಸಿದ್ದರು ವೇದಿಕೆಯಲ್ಲಿ ಸಂಸ್ಕೃತಿ ಸೌರಭ ಗೌರವ ಅಧ್ಯಕ್ಷರಾದ ಶ್ರೀ ಕೃಷ್ಣ ಉಪಾಧ್ಯ ಹಾಗೂ ತಾಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಶ್ರೀ Bhagavad Gita ರಮೇಶ್ ರವರು ಉಪಸ್ಥಿತರಿದ್ದರು ಇತ್ತೀಚೆಗೆ ಭಗವದ್ ಗೀತಾ ಅಭಿಯಾನದ ತಾಲೂಕು ಮಟ್ಟದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಜಯಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು ಹಾಗೂ ಭಗವದ್ಗೀತಾ ಪಠಣ ಮಾಡಲು ಸಹಕರಿಸಿದ ಶ್ರೀಮತಿ ಪುಷ್ಪ ಸುಬ್ರಹ್ಮಣ್ಯ ರವರನ್ನು ಸನ್ಮಾನಿಸಲಾಯಿತು ಭಾಷಣ ಸ್ಪರ್ಧೆಯಲ್ಲಿ ಜಯಗಳಿಸಿದ ಕುಮಾರಿ ಜೈನಬಿ ಹಾಗೂ ಕುಮಾರಿ ಸ್ತುತಿ ಭಗವದ್ಗೀತೆಯ ಬಗ್ಗೆ ಮಾತನಾಡಿದರು ಶ್ರೀಯುತ ಕೃಷ್ಣ ಸ್ವಾಮಿ ಅವರಿಂದ ಸ್ವಾಗತ ಶ್ರೀ ಶೇಷಾದ್ರಿ ಅವರು ವಂದನಾರ್ಪಣೆ ಹಾಗೂ ಶ್ರೀ ಆನಂದ್ ರವರು ಕಾರ್ಯಕ್ರಮ ನಿರೂಪಣೆ ಮಾಡಿದರು

CM Siddaramaiah ವಿಧಾನಸಭೆ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿ ಸಜ್ಜು.

0

CM Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಳಿಗಾಲದ ಅಧಿವೇಶನದ ಪ್ರಯುಕ್ತ ಸುವರ್ಣ ವಿಧಾನ ಸೌಧಕ್ಕೆ ಆಗಮಿಸಿ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್, ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ಆಡಳಿತ ಪಕ್ಷದ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್ ಅವರ ಜೊತೆ ಚರ್ಚೆ ನಡೆಸಿದರು.

CM Siddaramaiah ಈ ಸಂದರ್ಭದಲ್ಲಿ ಸಚಿವರಾದ ಡಾ.ಹೆಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್, ಮುಖ್ಯಮಂತ್ರಿಯವರ ಕಾನೂನು ಸಲಹಗರರಾದ ಎ.ಎಸ್.ಪೊನ್ನಣ್ಣ ಅವರು ಉಪಸ್ಥಿತರಿದ್ದರು.

Shimoga News ಜೀವರಕ್ಷಣಾ ಕೌಶಲ್ಯವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು- ಸೀಮಾ ಆನಂದ್

0

Shimoga News ಜೀವ ರಕ್ಷಿಸುವ ಕೌಶಲ್ಯವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳುವುದು ಅತ್ಯಂತ ಅವಶ್ಯಕ ಎಂದು ದೈವಜ್ಞ ಮಹಿಳಾ ಮಂಡಳಿ ಶಿವಮೊಗ್ಗ ಅಧ್ಯಕ್ಷೆ ಸೀಮಾ ಸದಾನಂದ್ ಹೇಳಿದರು.

ದೈವಜ್ಞ ಕಲ್ಯಾಣ ಮಂದಿರದಲ್ಲಿ ದೈವಜ್ಞ ಮಹಿಳಾ ಮಂಡಳಿಯಿಂದ ಆಯೋಜಿಸಿದ್ದ “ಜೀವ ಸುರಕ್ಷತೆ” ತಿಳುವಳಿಕೆ ಕಾರ್ಯಕ್ರಮದ ಪ್ರಾತ್ಯಕ್ಷಿಕೆಯಲ್ಲಿ ಮಾತನಾಡಿ, ಆರೋಗ್ಯವೇ ಭಾಗ್ಯ ಎಂಬುದನ್ನು ಅರಿತುಕೊಳ್ಳಬೇಕು. ಹೃದಯ ಸಂಬಂಧಿತ ಕಾಯಿಲೆ ಎದುರಾದಾಗ ಮುಂಜಾಗ್ರತೆ ವಹಿಸಬೇಕು. ಪ್ರತಿಯೊಬ್ಬರೂ ಆರೋಗ್ಯದ ಅರಿವು ಹೊಂದಬೇಕು ಎಂದು ತಿಳಿಸಿದರು.

ಭಾರತೀಯ ವೈದ್ಯಕೀಯ ಸಂಘ ಶಿವಮೊಗ್ಗ ಶಾಖೆ ಕಾರ್ಯದರ್ಶಿ ಡಾ. ಕೆ.ಎಸ್.ಶುಭ್ರತಾ, ಸಂಪನ್ಮೂಲ ವ್ಯಕ್ತಿ ಡಾ. ಶ್ವೇತಾ ಬಾದಾಮಿ ಅವರು ಹೃದಯ ಸ್ತಂಭನವಾದಾಗ ಹೇಗೆ ಜೀವ ರಕ್ಷಿಸಬಹುದು ಎಂಬ ವಿಷಯವನ್ನು ಸವಿಸ್ತಾರವಾಗಿ ತಿಳಿಸಿದರು.

Shimoga News ದೈವಜ್ಞ ಮಹಿಳಾ ಮಂಡಳಿ ಶಿವಮೊಗ್ಗ ಕಾರ್ಯದರ್ಶಿ ವಾಣಿ ಪ್ರವೀಣ್ ಮಾತನಾಡಿ, ಸಿಪಿಆರ್ ಅರಿವು ಕಾರ್ಯಕ್ರಮಗಳಿಂದ ಜನರಲ್ಲಿ ಆರೋಗ್ಯ ಜಾಗೃತಿ ಮೂಡುತ್ತದೆ. ಸಿಪಿಆರ್ ಪ್ರಕ್ರಿಯೆ ಕಲಿಯುವುದರಿಂದ ತುರ್ತು ಸಂದರ್ಭಗಳಲ್ಲಿ ಜೀವ ಉಳಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ದೈವಜ್ಞ ಮಹಿಳಾ ಮಂಡಳಿ ಶಿವಮೊಗ್ಗ ಉಪಾಧ್ಯಕ್ಷೆ ಪ್ರೇಮಾ ರಮೇಶ್, ಅರ್ಚನಾ ಅಣ್ಣಪ್ಪ, ಸಹ ಕಾರ್ಯದರ್ಶಿ ಸುಧಾ ಸುರೇಶ್, ಚೇತನಾ ವಾದಿರಾಜ್, ಖಜಾಂಚಿ ರೂಪಾ ರವಿ, ನಿರ್ದೇಶಕರು, ಮಾಜಿ ಅಧ್ಯಕ್ಷರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು ಉಪಸ್ಥಿತರಿದ್ದರು.