Department of Kannada and Culture ವಿಶ್ವಕರ್ಮವು ಪುರಾತನ ಕಾಲದಿಂದ ನಡೆದು ಬಂದ ಸಮಾಜವಾಗಿದ್ದು, ಈ ಸಮಾಜದ ಗುರುಗಳು ಎಲ್ಲಾ ದೇವರಿಗೂ ಗುರುಗಳಾಗಿದ್ದರೆಂದು ಹೇಳಲಾಗುತ್ತದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ವಿಶ್ವಕರ್ಮ ಮಹಾಸಭಾ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ನಗರದ ಕುವೆಂಪು ರಂಗಮAದಿರಲ್ಲಿ ಆಯೋಜಿಸಿದ್ದ ಶ್ರೀ ವಿಶ್ವಕರ್ಮ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
Department of Kannada and Culture ಭರತಖಂಡವು ಧಾರ್ಮಿಕ ಹಾಗೂ ಜನ ಜೀವನ ಸಂಸ್ಕೃತಿಯಿAದ ನಡೆದು ಬಂದಿದೆ. ಇಲ್ಲಿ ಉತ್ತಮ ಗುರು ಪಡೆದರೆ ಮಾತ್ರ ಉತ್ತಮ ಸಂಸ್ಕೃತಿಯನ್ನು ಪಡೆಯಲು ಸಾಧ್ಯ. ಇಂತಹ ಗುರುವಿನ ಸಂಸ್ಕೃತಿಯನ್ನು ವಿಶ್ವಕರ್ಮ ಸಮಾಜ ಒಳಗೊಂಡಿದ್ದು, ಈ ಸಮಾಜದಲ್ಲಿ ಹುಟ್ಟಿದ ನೀವೆಲ್ಲಾ ಭಾಗ್ಯವಂತರು ಎಂದರು.
Department of Kannada and Culture ವಿಶ್ವಕರ್ಮರು ಪುರಾತನವಾಗಿ ಎಲ್ಲ ಸಮಾಜದ ಗುರು ಮತ್ತು ದೇವರಾಗಿದ್ದರೆಂದು ಹೇಳಲಾಗುತ್ತದೆ- ಸಿ.ಎಸ್.ಚಂದ್ರಭೂಪಾಲ್
Bharat Scouts and Guides Shimoga ಸೃಜನಾತ್ಮಕ ಭಾವನೆಯನ್ನು ವ್ಯಕ್ತಪಡಿಸುವ ವಿಧಾನವೇ ಚಿತ್ರಕಲೆ :ಶಕುಂತಲಾ ಚಂದ್ರಶೇಖರ್
Bharat Scouts and Guides Shimoga ಸೃಜನಾತ್ಮಕ ಭಾವನೆಯನ್ನು ವ್ಯಕ್ತಪಡಿಸುವ ವಿಧಾನವೇ ಚಿತ್ರಕಲೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತೆ ಶಕುಂತಲಾ ಚಂದ್ರಶೇಖರ್ ಹೇಳಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿವಮೊಗ್ಗ ಸ್ಥಳೀಯ ಸಂಸ್ಥೆ ವತಿಯಿಂದ ಜಿಲ್ಲಾ ಸ್ಕೌಟ್ ಭವನದಲ್ಲಿ ಆಯೋಜಿಸಿದ್ದ ಸ್ಕೌಟರ್ಸ್ ಮತ್ತು ಗೈಡರ್ಸ್ ಸಮಾವೇಶದಲ್ಲಿ ಮಾತನಾಡಿ, ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಶಿಕ್ಷಕರ ಮಾರ್ಗದರ್ಶನ ಅತ್ಯಂತ ಅವಶ್ಯಕ ಎಂದು ತಿಳಿಸಿದರು.
ವಿನೋಬನಗರ ಬಡಾವಣೆಯಲ್ಲಿ ಮಕ್ಕಳಿಗೆ ಚಿತ್ರಕಲಾ ಶಿಕ್ಷಣ ನೀಡುತ್ತಿರುವ ನಿವೃತ್ತ ಶಿಕ್ಷಕಿ ಮತ್ತು ಸ್ಕೌಟ್ ಶಿಕ್ಷಕಿಯಾಗಿ 25 ವರ್ಷಗಳಿಂದ ಸ್ಕೌಟ್ ಮತ್ತು ಗೈಡ್ ಚಳುವಳಿಯಲ್ಲಿ ತೊಡಗಿಸಿಕೊಂಡು ಮಕ್ಕಳಿಗೆ ಸ್ಥಳೀಯ, ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆಯಲು ಮಾರ್ಗದರ್ಶನ ನೀಡುತ್ತಿರುವ ಕಾತ್ಯಾಯಿನಿ ಸಿ. ಎಸ್. ಅವರನ್ನು ಸನ್ಮಾನಿಸಲಾಯಿತು.
ಕಾತ್ಯಾಯಿನಿ ಅವರು 33 ವರ್ಷಗಳಿಗೂ ಹೆಚ್ಚು ವರ್ಷ ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಚಿತ್ರಕಲಾ ಮತ್ತು ಕೌಶಲ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ನಂತರವೂ ಸ್ಕೌಟ್ ಗೈಡ್ ಚಳುವಳಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇತ್ತೀಚಿಗೆ ಶಿವಮೊಗ್ಗ ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದು, ತಂದೆಯವರ ಮಾರ್ಗದರ್ಶನದಲ್ಲಿ, ಅವರ ಪ್ರೋತ್ಸಾಹದಿಂದ ಸಾಂಪ್ರದಾಯಿಕ ಚಿತ್ರ ಮತ್ತು ಹಸೆ ಚಿತ್ರಗಳಲ್ಲಿ ಬಾಲ್ಯದಿಂದಲೇ ತೊಡಗಿಸಿಕೊಂಡಿದ್ದಾರೆ.
Bharat Scouts and Guides Shimoga ಕಾತ್ಯಾಯಿನಿಯವರು ಶಿಕ್ಷಕಿಯಾಗಿ ರಾಜ್ಯ, ರಾಷ್ಟ್ರ ಮಟ್ಟದ ಜಂಬೂರೀ, ಜಂಬೂರೆಟ್ಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಗೈಡ್ ವಿಭಾಗದ ತರಬೇತಿ ನಾಯಕಿ ಆಗಿದ್ದು, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಹಲವಾರು ತರಬೇತಿ ಶಿಬಿರಗಳಲ್ಲಿ ನಾಯಕಿಯಾಗಿ ಸೇವೆ ಸಲ್ಲಿಸಿದ್ದಾರೆ.
ಹಿರಿಯ ಸ್ಕೌಟರ್ ವೈ.ಆರ್.ವೀರೇಶಪ್ಪ, ಜಿಲ್ಲಾ ರೋವರ್ ಆಯುಕ್ತ ಕೆ.ರವಿ, ಜಿಲ್ಲಾ ಸ್ಕೌಟ್ ಆಯುಕ್ತ ಎಸ್.ಜಿ.ಆನಂದ್, ನೂತನ ಜಿಲ್ಲಾ ಆಯುಕ್ತೆ ಲಕ್ಷ್ಮೀ ಕೆ. ರವಿ, ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರಯ್ಯ, ಸಹಾಯಕ ಜಿಲ್ಲಾ ಆಯುಕ್ತ ಹೆಚ್.ಪರಮೇಶ್ವರ, ಶ್ರೀನಿವಾಸ್ ವರ್ಮಾ, ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್, ಘನಶ್ಯಾಮ್ ಗಿರಿಮಾಜಿ, ಅಶ್ವಿನಿ ದೊರೈ, ದೊರೈ, ನಗರದ ವಿವಿಧ ಶಾಲಾ ಕಾಲೇಜಿನ ಶಿಕ್ಷಕ, ಶಿಕ್ಷಕಿಯರು, ಉಪನ್ಯಾಸಕರು, ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ರಾಜೇಶ್ ಅವಲಕ್ಕಿ, ಯುವ ಸಮಿತಿಯ ಸದಸ್ಯರು ಭಾಗವಹಿಸಿದ್ದರು.
Hindustan Aeronautics Limited ಮಾಜಿ ಸೈನಿಕರಿಗೆ ಎಚ್ಎಎಲ್ (HAL) ನಿಂದ ಅರ್ಜಿ ಆಹ್ವಾನ
Hindustan Aeronautics Limited ಹಿಂದೂಸ್ತಾನ್ ಏರೋನ್ಯಾಟಿಕ್ಸ್ ಲಿಮಿಟೆಡ್ನಲ್ಲಿ ಮೆಕಾನಿಕಲ್ ಎಂಜಿನಿಯರಿಂಗ್/ ಎಲೆಕ್ನಿಕಲ್ ಎಂಜಿನಿಯರಿಂಗ್ ಡಿಪ್ಲೊಮಾ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ, 45 ವರ್ಷದೊಳಗಿನ ಸಾಮಾನ್ಯ ವರ್ಗದ ಹಾಗೂ 50 ವರ್ಷದೊಳಗಿನ ಎಸ್ಸಿ/ಎಸ್ಟಿ ವರ್ಗದ ಮಾಜಿ ಸೈನಿಕರುಗಳಿಗೆ ನಾಲ್ಕು ವರ್ಷಗಳ ಅವಧಿಗೆ ಏರ್ಪ್ರೇಮ್ / ಎಲೆಕ್ಟ್ರೀಷಿಯನ್ ಹುದ್ದೆಗೆ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಅರ್ಹ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು dgrddemp@desw.gov.in- DGR ಜಾಲತಾಣದಿಂದ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಗಳನ್ನು ಎಕ್ಸೆಲ್ ಫಾರ್ಮೆಟ್ನಲ್ಲಿ ಜಿಲ್ಲಾ/ರಾಜ್ಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಗೆ soldiersshimoga@gmail.com ಇ-ಮೇಲ್ ಮೂಲಕ ಮಾತ್ರ ಕಳುಹಿಸಬಹುದಾಗಿದೆಯೆಂದು ಉಪ ನಿರ್ದೇಶಕರು (ಪ್ರಭಾರ), ಸೈನಿಕ Hindustan Aeronautics Limited ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ 08182-220925 ಹಾಗೂ soldiersshimoga@gmail.com ಗೆ ಮಿಂಚಂಚೆ ಸಂಪರ್ಕಿಸಬಹುದಾಗಿದೆ.
MESCOM ಪೊಲೀಸ್ ಚೌಕಿ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-8ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿದ್ದು, ಸೆ. 18 ರಂದು ಬೆಳಗ್ಗೆ 10.00 ರಿಂದ ಸಂಜೆ 5.30 ರವರೆಗೆ ಆಲ್ಕೋಳ ಸರ್ಕಲ್, ಅರಣ್ಯ ಕಚೇರಿ, ಇಂದಿರಾ ಗಾಂಧಿ ಬಡಾವಣೆ, ಶಿವಪ್ಪ ನಾಯಕ ಬಡಾವಣೆ, ಜಯದೇವ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಕೆಎಸ್ಆರ್ಟಿಸಿ ಲೇಔಟ್, ಕಾಶಿಪುರ, ಲಕ್ಕಪ್ಪ ಲೇಔಟ್, ಹನುಮಂತಪ್ಪ ಬಡಾವಣೆ, ತಮಿಳು ಕ್ಯಾಂಪ್, ಕುವೆಂಪು ಬಡಾವಣೆ, ಎನ್ಎಂಸಿ ಕಾಂಪೌಂಡ್, ಲಕ್ಷ್ಮೀಪುರ ಕೆಂಚಪ್ಪ ಲೇಔಟ್, ಹುಡ್ಕೋ ಕಲ್ಲಹಳ್ಳಿ, ಎ ರಿಂದ ಎಫ್ ಬ್ಲಾಕ್, ಕರಿಯಣ್ಣ ಬಿಲ್ಡಿಂಗ್, ತಿಮ್ಮಕ್ಕ ಲೇಔಟ್, ಅಣ್ಣ ಹಜಾರೆ ಪಾರ್ಕ್, ಬಸವ ಮಂಟಪ, ದಾಮೋಧರ ಕಾಲೋನಿ, ಸೂಡಾ ಕಚೇರಿ, ಪೊಲೀಸ್ ಚೌಕಿ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
Minority Welfare Department ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಂದ ಸರಳ ವಿವಾಹ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
Minority Welfare Department ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಅಭ್ಯರ್ಥಿಗಳಿಂದ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ. 50,000/- ನೀಡುವ ಯೋಜನೆಯು ಜಾರಿಯಲ್ಲಿದ್ದು, ಅರ್ಹ ಹಾಗೂ ಆಸಕ್ತಿಯುಳ್ಳ ವಧು ವರರು ಜಿಲ್ಲಾ ನೋಂದಣಿ/ ವಕ್ಫ್ ಬೋರ್ಡ್ ಕಚೇರಿಗಳಲ್ಲಿ ಸಾಮೂಹಿಕ ವಿವಾಹಗಳ ಆಯೋಜಕರೆಂದು ನೋಂದಣಿಯಾಗಿರುವ ಖಾಸಗಿ ಟ್ರಸ್ಟ್ಗಳು, ದೇವಸ್ಥಾನ ಟ್ರಸ್ಟ್ಗಳು, ಸಂಘ, ಸೊಸೈಟಿಗಳು, ವಕ್ಫ್ ಸಂಸ್ಥೆಗಳು ಮತ್ತು ಖಾಸಗಿ ವ್ಯಕ್ತಿಗಳು ನಡೆಸುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ವಿವಾಹವಾದವರಿಂದ ಅರ್ಜಿ ಆಹ್ವಾನಿಸಿದೆ.
Minority Welfare Department ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳಿಗೆ ಪ್ರೋತ್ಸಾಹ ಹಾಗೂ ವಿವಾಹದ ಖರ್ಚು-ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ. 5,000/-ಗಳನ್ನು ನೀಡಲಾಗುವುದು. ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಆಯೋಜಕರುಗಳು ಈ ಕಾರ್ಯಕ್ರಮದ ಏಳು ದಿನ ಮುಂಚಿತವಾಗಿ ಕಾರ್ಯಕ್ರಮ ಆಯೋಜನೆಯ ಬಗ್ಗೆ ಅರ್ಜಿ ಸಲ್ಲಿಸುವುದು ಮತ್ತು ವಿವಾಹ ನಡೆದ ದಿನಾಂಕದಿAದ 3 ದಿನಗಳೊಳಗಾಗಿ ಅಗತ್ಯ ದಾಖಲಾತಿಗಳನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸುವುದು. ವಧು-ವರರು ಕನಿಷ್ಠ ಏಳು ದಿನ ಮುಂಚಿತವಾಗಿ ವಾಸ್ತವ್ಯವಿರುವ ಜಿಲ್ಲೆಯಲ್ಲಿಯೇ ಅರ್ಜಿ ಸಲ್ಲಿಸತಕ್ಕದ್ದು.
ಅರ್ಜಿ ಸಲ್ಲಿಸಲು ಅರ್ಹತೆ: ಸಾಮೂಹಿಕ ವಿವಾಹಗಳಲ್ಲಿ ಕನಿಷ್ಠ 10 ಜೋಡಿಗಳು ಭಾಗವಹಿಸಿರತಕ್ಕದ್ದು, ವಧುವಿಗೆ ಕನಿಷ್ಠ 18 ವರ್ಷದಿಂದ 42 ವರ್ಷಗಳು, ವರನಿಗೆ ಕನಿಷ್ಠ 21 -45 ವರ್ಷ ವಯಸ್ಸು ಆಗಿರತಕ್ಕದ್ದು. ವಧುವರರ ವಾರ್ಷಿಕ ಆದಾಯವು ರೂ. 2.50 ಲಕ್ಷಗಳು ಮತ್ತು ಒಟ್ಟಾರೆಯಾಗಿ 5.00 ಲಕ್ಷಗಳನ್ನು ಮೀರತಕ್ಕದ್ದಲ್ಲ. ಈ ಸೌಲಭ್ಯವನ್ನು ಜೀವನದಲ್ಲಿ ಒಮ್ಮೆ ಮಾತ್ರ ಪಡೆಯಬಹುದಾಗಿದೆ. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಈ ಯೋಜನೆಯ ಸೌಲಭ್ಯ ನೀಡೊಲಾಗುವುದು. ವರನಿಗೆ ಈಗಾಗಲೇ ಜೀವಂತ ಪತ್ನಿಯಿದ್ದಲ್ಲಿ ಅಥವಾ ವಧುವಿಗೆ ಜೀವಂತ ಪತಿ ಇದ್ದಲ್ಲಿ ಈ ಯೋಜನೆ ಅನ್ವಯಿಸುವುದಿಲ್ಲ
ಆಸಕ್ತರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Karnataka Science and Technology Academy ಐದು ದಿನಗಳ “ಸಂಶೋಧನಾ ವಿಧಾನ ಮತ್ತು ದತ್ತಾಂಶ ವಿಶ್ಲೇಷಣೆ” ಕಾರ್ಯಾಗಾರ
Karnataka Science and Technology Academy ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ “ಸಂಶೋಧನಾ ವಿಧಾನ ಮತ್ತು ದತ್ತಾಂಶ ವಿಶ್ಲೇಷಣೆ” ವಿಷಯದ ಮೇಲೆ ದಿನಾಂಕ: 14/10/2025 ರಿಂದ 18/10/2025 ರವರೆಗೆ ಐದು ದಿನಗಳ ಕಾರ್ಯಾಗಾರವನ್ನು ಅಕಾಡೆಮಿಯ ಕಛೇರಿಯಲ್ಲಿ ಆಯೋಜಿಸಲಾಗುತ್ತಿದ್ದು ಆಸಕ್ತ ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು/ಪ್ರಾಧ್ಯಾಪಕರು ಭಾಗವಹಿಸಬಹುದಾಗಿದೆ.
ಆಸಕ್ತ ಪ್ರತಿನಿಧಿಗಳು ದಿನಾಂಕ: 13/10/2025ರೊಳಗಾಗಿ (Google form https://forms.gle/UNrBg9wiBzgQBMVD6) ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ.
Karnataka Science and Technology Academy ಹೆಚ್ಚಿನ ಮಾಹಿತಿಗಾಗಿ ಕಾರ್ಯಾಗಾರದ ಸಂಯೋಜಕ ಶ್ರೀನಿವಾಸು ವಿ.ಕೆ.. ವೈಜ್ಞಾನಿಕಾಧಿಕಾರಿ ಇವರನ್ನು (ಮೊ: 9620767819) ಸಂಪರ್ಕಿಸಬಹುದಾಗಿದೆ ಹಾಗೂ ಅಕಾಡೆಮಿಯ ವೆಬ್ ಸೈಟ್ – https://kstacademy.in ವೀಕ್ಷಿಸಬಹುದಾಗಿದೆ. ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಆರ್ ಅವರು ತಿಳಿಸಿದ್ದಾರೆ.
Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ Infosys Springboard ಸಿ.ಎಸ್.ಆರ್. ಕಾರ್ಯಕ್ರಮದಡಿ ಪತ್ರಕರ್ತರ ತರಬೇತಿಗೆ ಅರ್ಜಿ ಆಹ್ವಾನ
Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು Infosys Springboard ಸಿ.ಎಸ್.ಆರ್. ಕಾರ್ಯಕ್ರಮದಡಿ ಪತ್ರಕರ್ತರ ತರಬೇತಿಗೆ ಅರ್ಜಿ ಆಹ್ವಾನಿಸಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕನಿಷ್ಠ 5 ವರ್ಷ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಗಣಿಸಿರುವ ರಾಜ್ಯಮಟ್ಟದ ಪತ್ರಿಕೆಗಳು ಹಾಗೂ ಇಲಾಖೆಯಡಿ ನೋಂದಾಯಿತ ಉಪಗ್ರಹ ಸುದ್ದಿ ವಾಹಿನಿಗಳ ಸಂಪಾದಕರು ಶಿಫಾರಸು ಮಾಡುವ ಪತ್ರಕರ್ತರನ್ನು ತರಬೇತಿಗೆ ಪರಿಗಣಿಸಲಾಗುವುದು. ಈ ಕುರಿತು ಸಂಪಾದಕರನ್ನು ನೇರವಾಗಿ ಸಂಪರ್ಕಿಸಲಾಗುವುದು.
Karnataka Media Academy ಆಸಕ್ತ ಪತ್ರಕರ್ತರು ಗೂಗಲ್ ಫಾರ್ಮ್ https://forms.gle/q9NUnsQ7M5xrsruj9 ನಲ್ಲಿ ಮಾಹಿತಿ ಹಾಗೂ ದಾಖಲೆಗಳನ್ನು ಒದಗಿಸುವ ಮೂಲಕ ತರಬೇತಿಗೆ ನೋಂದಾಯಿಸಬಹುದಾಗಿದೆ.
• ಅರ್ಜಿ ನಮೂನೆಯಲ್ಲಿ ಸೂಚಿಸಿರುವಂತೆ ಪತ್ರಕರ್ತರು ಭಾವಚಿತ್ರ, ವಯಸ್ಸಿನ ದಾಖಲೆ, ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಯ ಮುಖ್ಯಸ್ಥರ ದೃಢೀಕರಣ, ಸದರಿ ಮಾಧ್ಯಮ ಸಂಸ್ಥೆಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಕುರಿತ ದಾಖಲೆ ಹಾಗೂ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿರುವ ಕುರಿತು ಸೇವಾನುಭವ ದಾಖಲೆಗಳನ್ನು ಸಲ್ಲಿಸಬೇಕು.
• ಇದು ಮೂರು ದಿನಗಳ ವಸತಿಯುತ ತರಬೇತಿಯಾಗಿದ್ದು, ಪತ್ರಕರ್ತರಿಗೆ ಪ್ರಯಾಣ ಭತ್ಯೆ ನೀಡಲಾಗುವುದು. ಇನ್ಫೋಸಿಸ್ ಸಂಸ್ಥೆಯ ನಿಗದಿತ ಕ್ಯಾಂಪಸ್ಗಳಲ್ಲಿ ತರಬೇತಿ ನಡೆಯಲಿದೆ.
• ಈ ತರಬೇತಿ ಕಾರ್ಯಕ್ರಮದಲ್ಲಿ ಡಿಜಿಟಲ್ ಮಾಧ್ಯಮ, ಎಐ ಬಳಕೆ ಹಾಗೂ ಸಾಫ್ಟ್ಸ್ಕಿಲ್ ಅಭಿವೃದ್ಧಿ ತರಬೇತಿ ನೀಡಲಾಗುವುದು.
• ಪ್ರಸಕ್ತ ಸಾಲಿನಲ್ಲಿ ಒಟ್ಟು ಮೂರು ತಂಡಗಳಲ್ಲಿ ತರಬೇತಿ ನಡೆಯಲಿದ್ದು, ಒಂದು ತಂಡದಲ್ಲಿ ಮಹಿಳಾ ಆಯವ್ಯಯದಡಿ ಪತ್ರಕರ್ತೆಯರಿಗಾಗಿ ತರಬೇತಿ ನಡೆಯಲಿದೆ.
• ಎಲ್ಲ ಮೂರು ತಂಡಗಳಿಗೂ ಈ ಒಂದು ಬಾರಿ ಮಾತ್ರ ಅರ್ಜಿ ಆಹ್ವಾನಿಸಲಾಗುತ್ತಿದೆ.
• ತರಬೇತಿಯ ಸ್ಥಳ ಮತ್ತು ದಿನಾಂಕವನ್ನು ನಂತರ ತಿಳಿಸಲಾಗುವುದು. ತರಬೇತಿಗೆ ಪತ್ರಕರ್ತರ ಆಯ್ಕೆ ಕುರಿತ ಅಂತಿಮ ನಿರ್ಧಾರ ಅಕಾಡೆಮಿಯದ್ದೇ ಆಗಿರುತ್ತದೆ.
• ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 26,2025 ಕೊನೆಯ ದಿನವಾಗಿದೆ.
B.Y.Raghavendra ನರೇಗಾ ಯೋಜನೆಯಲ್ಲಿ ಅನುಷ್ಠಾನ ಲೋಪ ಸರಿಪಡಿಸಿ- ಬಿ.ವೈ.ರಾಘವೇಂದ್ರ
B.Y.Raghavendra ಶಿವಮೊಗ್ಗ ಜಿಲ್ಲೆಯಲ್ಲಿ ನರೇಗಾ ಯೋಜನೆಯ ವ್ಯವಸ್ಥಿತ ಅನುಷ್ಟಾನದಲ್ಲಿ ಅನೇಕ ಲೋಪಗಳಿದ್ದು, ಅವುಗಳನ್ನು ಸರಿಪಡಿಸುವಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ವಿಶೇಷ ಗಮನಹರಿಸಬೇಕಲ್ಲದೆ ಸರ್ಕಾರಕ್ಕೆ ಸಭೆಯ ನಡಾವಳಿಯನ್ನು ಸಲ್ಲಿಸುವಂತೆ ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು.
ಅವರು ಜಿಲ್ಲಾ ಮಟ್ಟದ ಅಭಿವೃದ್ಧಿ, ಸಮನ್ವಯತೆ ಹಾಗೂ ಮೇಲ್ವಿಚಾರಣೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ನರೇಗಾ ಯೋಜನೆಯಡಿಯಲ್ಲಿ ಉದ್ಯೋಗಚೀಟಿ ಪಡೆದವರಿಗೆ ಪಾವತಿಸುವ ಹಣದಲ್ಲಿ ಅಕ್ರಮಗಳಿಗೆ ಅವಕಾಶವಾಗಿರುವುದನ್ನು ಸಮಿತಿ ಸದಸ್ಯರು ಗಮನಕ್ಕೆ ತಂದಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಸಂಬಂಧಿಸಿದ ಅಧಿಕಾರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕಲ್ಲದೆ ಕ್ರಿಯಾಯೋಜನೆಯಲ್ಲಿನ ಅನೇಕ ಲೋಪಗಳಲ್ಲಿನ ಲೋಪಗಳನ್ನು ಸರಿಪಡಿಸಿಕೊಳ್ಳಬೇಕು. ಕ್ರಿಯಾಯೋಜನೆ ತಯಾರಿಸುವ ಮುನ್ನ ಅಧಿಕಾರಿಗಳು ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಿ ನಂತರ ಕ್ರಿಯಾಯೋಜನೆ ರೂಪಿಸಬೇಕು ಎಂದರು. ಶಿವಮೊಗ್ಗ-ಆನವಟ್ಟಿ ಮಾರ್ಗದಲ್ಲಿ ಸವಳಂಗ ಮತ್ತು ಕುಟ್ರಳ್ಳಿ ಸಮೀಪ ರಾಜ್ಯ ಹೆದ್ದಾರಿ 57ರಲ್ಲಿ ಅಳವಡಿಸಿರುವ ಟೋಲ್ಸುಂಕವಸೂಲಿ ಗೇಟುಗಳು ಅವೈಜ್ಞಾನಿಕವಾಗಿದೆ. ಇದು ಸರಿಯಲ್ಲ. ಅಲ್ಲದೇ ಸಾರ್ವಜನಿಕರ ಶೋಷಣೆಗೆ ಅವಕಾಶ ನೀಡಿದಂತಾಗಿದೆ. ಜನಸಾಮಾನ್ಯರಿಗೆ ಆರ್ಥಿಕ ಹೊರೆ ಹೆಚ್ಚಾಗಿದೆ. ಈ ಗೇಟುಗಳನ್ನು ಅಳವಡಿಸಿ ಅನೇಕ ವರ್ಷಗಳೇ ಸಂದಿವೆ. ಇವುಗಳನ್ನು ತ್ವರಿತವಾಗಿ ತೆರೆವುಗೊಳಿಸಬೇಕು ಎಂದು ದಿಶಾ ಸಮಿತಿ ಸದಸ್ಯ ಶಿಕಾರಿಪುರದ ಕೆ.ಎಸ್.ಗುರುಮೂರ್ತಿ ಅವರು ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿ 15ರಲ್ಲಿನ ಸಕ್ಕರೆ ಕಾರ್ಖಾನೆ ಸಮೀಪ ದುಮ್ಮಳ್ಳಿ ರಸ್ತೆಯ ಇಕ್ಕೆಲಗಳಲ್ಲಿ ಅಂಗಡಿ-ಮುಂಗಟ್ಟು ಇಟ್ಟುಕೊಂಡಿರುವಲ್ಲಿ ಆಗಾಗ್ಗೆ ಆಕಸ್ಮಿಕ ಅಪಘಾತಗಳು ನಡೆಯುತ್ತಲೇ ಇವೆ. ಇವುಗಳ ನಿಯಂತ್ರಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ತಕ್ಷಣದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಇನ್ನಷ್ಟು ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಸರ್ಜಿ, ವಿಧಾನ ಪರಿಷತ್ ಸದಸ್ಯರಾದ ಡಾ|| ಧನಂಜಯ ಅವರು ಹೇಳಿದರು.
ದುಮ್ಮಳ್ಳಿ ರಸ್ತೆಯ ಇಕ್ಕೆಲಗಳಲ್ಲಿ ಹಲವು ದಶಕಗಳಿಂದ ವಾಸವಿರುವ ನಿವಾಸಿಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಿಕೊಟ್ಟು ಬೇರೆಡೆಗೆ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಬೇಕು. ಅಲ್ಲದೇ ಚನ್ನಗಿರಿ ರಸ್ತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಗ್ರಾಮಗಳ ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ ವ್ಯವಸ್ಥೆ ಕಲ್ಪಿಸಬೇಕು. ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಶಾಸಕರಾದ – ಎಸ್.ಎನ್.ಚನ್ನಬಸಪ್ಪನವರು ತಿಳಿಸಿದರು.
ಭದ್ರಾವತಿಯಲ್ಲಿ ಅಪರಾಧ ಚಟುಚಟಿಕೆ ಹೆಚ್ಚಾಗಿದ್ದು, ಅದನ್ನು ಕಡಿವಾಣ ಹಾಕಬೇಕಿದೆ. ಇದರೊಟ್ಟಿಗೆ ಅಟ್ರಾಸಿಟಿ ಕಾಯ್ದೆಯು ಕೂಡ ದುರುಪಯೋಗವಾಗುತ್ತಿದ್ದು, ಇದಕ್ಕೆ ಅವಕಾಶ ನೀಡಬಾರದು ಎಂದು ಸಂಸದ ಬಿ.ವೈ.ರಾಘವೇಂದ್ರ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೆ ತಿಳಿಸಿದರು. ಅಮೃತ್ 1.0 ಯೋಜನೆಯಡಿ ಈಗಾಗಲೇ ಜಿಲ್ಲೆಯಲ್ಲಿ ನೀರು ಸರಬರಾಜು ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಅಮೃತ್ 2.0 ಯೋಜನೆಯಡಿಯಲ್ಲಿ ನೀರು ಸರಬರಾಜು ಕಲ್ಪಿಸುವ ಕಾಮಗಾರಿಯನ್ನು ಕೈಗೊಳ್ಳಲಾಗುವುದು ಎಂದರು.
B.Y.Raghavendra ಜಿಲ್ಲೆಯಲ್ಲಿ ಅನುಷ್ಠಾನದಲ್ಲಿರುವ 1000 ಕೋಟಿ ವೆಚ್ಚದ ಯುಜಿಡಿ ಯೋಜನೆ ಅನುಷ್ಠಾನದ ಬಗ್ಗೆ ದೂರುಗಳು ಬರುತ್ತಿದ್ದು, ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಜವಾಭ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಸರಿಯಾದ ನೀರು ಸರಬರಾಜು, ಒಳಚರಂಡಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಮೊದಲ ಆದ್ಯತೆ ನೀಡಬೇಕು. ಸಮಸ್ಯೆಗಳ ನಿವಾರಣೆಗೆ ಅಧಿಕಾರಿಗಳು ಎಲ್ಲಾ ರೀತಿಯ ಶ್ರಮವನ್ನು ವಹಿಸಬೇಕು. ಇಲಾಖೆಯ ಸಚಿವರಿಗೂ ಕೂಡ ಸಂಪರ್ಕ ಮಾಡಿ ಈ ಕುರಿತು ಅಧಿಕಾರಿಗಳು ತಿಳಿಸುವಂತಾಗಬೇಕು ಎಂದರು. ಪಿಎಂಎಜಿವೈ ಯೋಜನೆಯಿಂದ ಎಸ್ಸಿ/ಎಸ್ಟಿ ಕಾಲೋನಿಗೆ ಉತ್ತಮವಾದ ಮೂಲಭೂತ ಸೌಕರ್ಯ ಕಲ್ಪಿಸುವಲ್ಲಿ ಅಧಿಕಾರಿಗಳು ಗಮನಹರಿಸಬೇಕು. ಅಲ್ಲಿನ ಮಕ್ಕಳ ವಿದ್ಯಾಭ್ಯಾಸಕ್ಕೆ ಅಂಗನವಾಡಿ ಕೇಂದ್ರ, ಓಡಾಡಲು ಉತ್ತಮ ರಸ್ತೆ, ಚರಂಡಿ, ಸೋಲರ್ ಲೈಟ್ ಮಾಡಿಕೊಡಬೇಕು ಎಂದರು.
ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿ, ಶಿಕಾರಿಪುರ, ಹಾನಗಲ್ ಮಾರ್ಗವಾದ ಟೋಲ್ಗೇಟ್ ಸಂಬಂಧಿಸಿದಂತೆ ಮಾಹಿತಿ ನೀಡಿದರು.
ಟೋಲ್ ಗೇಟ್ ವಿರೋಧಿಸಿ ಪ್ರತಿಭಟನೆ ಮಾಡಿದ ಬೆನ್ನಲ್ಲೆ ಸಚಿವರ ಮಟ್ಟದಲ್ಲಿ ಸಭೆ ಮಾಡಲಾಗಿದೆ. ಹಾಗೂ ಸರ್ಕಾರಕ್ಕೂ ಪತ್ರವನ್ನು ಬರೆದಿದ್ದೇವೆ. ಇದು ಸರ್ಕಾರ ಮಟ್ಟದಲ್ಲಿ ಚರ್ಚೆಯಾಗಿ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್, ಜಿಲ್ಲಾ ಪೊಲೀಸ್ಅಧೀಕ್ಷಕ ಜಿ.ಕೆ.ಮಿಥುನ್ಕುಮಾರ್, ವಿಧಾನ ಪರಿಷತ್ಸದಸ್ಯೆ ಶ್ರೀಮತಿ ಬಲ್ಕೀಸ್ಬಾನು, ಡಾ|| ಧನಂಜಯ ಸರ್ಜಿ, ಶಾಸಕ ಎಸ್.ಎನ್.ಚನ್ನಬಸಪ್ಪ, ದಿಶಾ ಸಮಿತಿಯ ಹಿರಿಯ ಸದಸ್ಯ ಕೆ.ಎಸ್.ಗುರುಮೂರ್ತಿ ಸೇರಿದಂತೆ ಸಮಿತಿಯ ನಾಮನಿರ್ದೇಶಿತ ಸದಸ್ಯರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Shivamogga Police ಗೋಪಾಳ ಆನೆ ಸರ್ಕಲ್ ಬಳಿ ಅಪರಿಚಿತ ವ್ಯಕ್ತಿ ಸಾವು, ಚಹರೆ ಮಾಹಿತಿ
Shivamogga Police ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೋಪಾಳ ಆನೆ ಸರ್ಕಲ್ ಫುಟ್ಪಾಲ್ ಬಳಿ ಸುಮಾರು 45-50 ವರ್ಷದ ವ್ಯಕ್ತಿ ಅನಾರೋಗ್ಯದಿಂದ ಬಿದ್ದಿದ್ದು, ಸಾರ್ವಜನಿಕರ ಸಹಾಯದಿಂದ ಆಂಬ್ಯುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಪರೀಕ್ಷಿಸಿ ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.
Shivamogga Police ಮೃತನ ಹೆಸರು, ವಿಳಾಸ, ವಾರಸುದಾರರ ಬಗ್ಗೆ ಯಾವುದೇ ಸುಳಿವು ಇರುವುದಿಲ್ಲ.
ಮೃತ ವ್ಯಕ್ತಿಯ ಚಹರೆ 5.6 ಅಡಿ ಎತ್ತರ, ತೆಳುವಾದ ಮೈಕಟ್ಟು, ಗೋಧ ಮೈಬಣ್ಣ, ಬಲಗೈ ಮೆಲೆ ಮಂಜಮ್ಮ , ಕವಿತಾ ಎಂಬ ಕನ್ನಡ ಅಕ್ಷರದ ಹಚ್ಚೆ ಇರುತ್ತದೆ. ಮೈಮೇಲೆ ಬಿಳಿ ಬಣ್ಣದ ನೀಲಿ ಗೆರೆಯಿರುವ ತುಂಬುತೋಳಿನ ಶರ್ಟ್, ಬ್ರೌನ್ ಕಲರ್ ಪ್ಯಾಂಟ್ ಧರಿಸಿರುತ್ತಾನೆ.
ಈ ವ್ಯಕ್ತಿಯ ವಾರಸುದಾರರ ಬಗ್ಗೆ ಸುಳಿವು ಸಿಕ್ಕಲ್ಲಿ ತುಂಗಾನಗರ ಪೊಲೀಸ್ ಠಾಣೆ 08182-261424 /261404/261400/08192-237860/22212108 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.
Shivamogga District Women and Child Development Department ಸೆ.19.ಚಿತ್ರಕಲೆ & ದೇಶಭಕ್ತಿ ಗೀತೆ ಗಾಯನ ಸ್ಪರ್ಧೆ
Shivamogga District Women and Child Development Department ಶಿವಮೊಗ್ಗ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2025-26ನೇ ಸಾಲಿನ 79ನೇ ಸ್ವಾತಂತ್ರ ದಿನಾಚರಣೆ ಅಂಗವಾಗಿ 5-16 ವರ್ಷದೊಳಗಿನ ಮಕ್ಕಳಿಗೆ ಜಿಲ್ಲಾ ಬಾಲಭವನ ಸಮಿತಿಯಿಂದ ಸೆ.19 ರಂದು ಚಿತ್ರಕಲೆ ಮತ್ತು ದೇಶಭಕ್ತಿಗೀತೆ ಸ್ಪರ್ಧೆಯನ್ನು ಆಯೋಜಿಸಿದೆ.
ಚಿತ್ರಕಲೆ ಸ್ಪರ್ಧೆಯಲ್ಲಿ 75 ಮಕ್ಕಳಿಗೆ 3 ಗುಂಪಿನ ವರ್ಗವಾರು ಮಾಡಿದ್ದು, 5-8 ವರ್ಷದ ಮಕ್ಕಳಿಗೆ “ಶಾಲೆಯ ಪರಿಸರ”, 9-12 ವರ್ಷದ ಮಕ್ಕಳಿಗೆ “ಒಳ್ಳೆ ಸ್ಪರ್ಶ ಮತ್ತು ಕೆಟ್ಟ ಸ್ಪರ್ಶ” ಮತ್ತು 13-16 ವರ್ಷದ ಮಕ್ಕಳಿಗೆ “ಬಾಲ್ಯ ವಿವಾಹ ನಡೆಯುತ್ತಿರುವಾಗ ಅದನ್ನು ತಡೆಗಟ್ಟುವ ಚಿತ್ರಣ” ಎಂಬ ವಿಷಯಗಳಿದ್ದು, ಭಾಗವಹಿಸುವ ಮಕ್ಕಳಿಗೆ ಡ್ರಾಯಿಂಗ್ ಶೀಟ್ನ್ನು ಮಾತ್ರ ಕೊಡಲಾಗುತ್ತಿದ್ದು, ಇನ್ನುಳಿದ ಪರಿಕರಗಳನ್ನು ಸ್ಪರ್ಧಿಗಳೇ ತರತಕ್ಕದ್ದು.
ದೇಶಭಕ್ತಿಗೀತೆ ಸ್ಪರ್ಧೆಯು ವೈಯಕ್ತಿಕ ಸ್ಪರ್ಧೆಯಾಗಿದ್ದು, 3 ರಿಂದ 4 ನಿಮಿಷಗಳು ಇರುತ್ತದೆ. ಕನ್ನಡ ಭಾಷೆಯಲ್ಲೇ ಹಾಡಬೇಕು.
Shivamogga District Women and Child Development Department ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ.
ಆಸಕ್ತ ಮಕ್ಕಳು ಸೆ. 19 ರಂದು ಸರ್ಕಾರಿ ಪ್ರಧಾನ ಹಿರಿಯ ಪ್ರಾಥಮಿಕ ಪಾಠಶಾಲೆ, ಕರ್ನಾಟಕ ಸಂಘದ ಪಕ್ಕ, ಬಿ.ಹೆಚ್.ರಸ್ತೆ, ಶಿವಮೊಗ್ಗ ಇಲ್ಲಿ ಮಧ್ಯಾಹ್ನ 1.00 ಗಂಟೆ ಹಾಜರಿರುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಬಾಲಭವನ ಸಮಿತಿಯ ಕಾರ್ಯಕ್ರಮ ಸಂಯೋಜಕಿ ಮಂಜುಳ ಆರ್. -9353617934 ಇವರನ್ನು ಸಂಪರ್ಕಿಸಬಹುದು.
