ಮಕ್ಕಳಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಜಾಗೃತಿ ಮೂಡಿಸುವ ಆಶಯದಿಂದ ಇನ್ನರ್ವ್ಹೀಲ್ ಕ್ಲಬ್ ಆಫ್ ಶಿವಮೊಗ್ಗ ಪೂರ್ವ ವತಿಯಿಂದ ಜ್ಞಾನದೀಪ ಶಾಲೆ, ಓಪನ್ ಮೈಂಡ್ ಶಾಲೆ ಮತ್ತು ಜೈನ್ ಪಬ್ಲಿಕ್ ಶಾಲೆಗಳಲ್ಲಿ ಎಚ್ಪಿವಿ ಲಸಿಕಾ ಶಿಬಿರ ನಡೆಸಲಾಯಿತು.
ಸರ್ಜಿ ಆಸ್ಪತ್ರೆಯ ಶಿಶುರೋಗ ತಜ್ಞ ಡಾ. ಪ್ರಸಾದ್, ಶಿಶುರೋಗ ತಜ್ಞೆ ಡಾ. ಶಮಿತಾ ಅವರು ಲಸಿಕೆಯ ಮಹತ್ವ ಹಾಗೂ ಗರ್ಭಕಂಠದ ಕ್ಯಾನ್ಸರ್ ತಡೆ ಕುರಿತು ಜಾಗೃತಿ ಕಾರ್ಯಕ್ರಮ ನಡೆಸಿದರು. ಪ್ರತಿ ವರ್ಷ 1,20,000 ಮಹಿಳೆಯರು ಈ ರೋಗಕ್ಕೆ ಒಳಗಾಗುತ್ತಿದ್ದು, ಜಾಗೃತಿ ಮತ್ತು ಸರಿಯಾದ ಸಮಯದಲ್ಲಿ ಚಿಕಿತ್ಸೆ ಇಲ್ಲದೆ 85,000 ಮಂದಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಎಚ್ಪಿವಿ ಲಸಿಕೆ ಪಡೆಯುವುದರಿಂದ ಈ ಕ್ಯಾನ್ಸರ್ ಅನ್ನು ಬಹಳ ಮಟ್ಟಿಗೆ ತಡೆಗಟ್ಟಬಹುದು ಎಂದು ತಿಳಿಸಿದರು.
ಇನರ್ವೀಲ್ ಕ್ಲಬ್ ಈ ಜೀವ ರಕ್ಷಕ ಲಸಿಕೆಯನ್ನು ಎಲ್ಲರಿಗೂ ಸುಲಭವಾಗಿ ಲಭ್ಯವಾಗುವಂತೆ ಮಾಡಲು ಬದ್ಧವಾಗಿದೆ. 9–14 ವರ್ಷದ ಮಕ್ಕಳಿಗೆ 2 ಡೋಸ್, 15–26 ವರ್ಷ ವಯಸ್ಸಿನವರಿಗೆ 3 ಡೋಸ್ ಹೆಣ್ಣುಮಕ್ಕಳು ಮತು ಗಂಡುಮಕ್ಕಳು ಲಸಿಕೆ ಪಡೆಯಬೇಕು. ಎಚ್ಪಿವಿ ವೈರಸ್ ಹರಡುವಿಕೆ ಸಾಮಾನ್ಯವಾಗಿ ಪುರುಷರಿಂದ ಆಗುತ್ತದೆ. ಶೇ. 32 ಪುರುಷರು ಮತ್ತು ಶೇ. 12 ಮಹಿಳೆಯರು ಎಚ್ಪಿವಿ ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.
ಇನರ್ವೀಲ್ ಕ್ಲಬ್ ಅಧ್ಯಕ್ಷೆ ವೀಣಾ ಸುರೇಶ್ ಮುಂಚೂಣಿಯಲ್ಲಿದ್ದು, ಉಚಿತ ಲಸಿಕೆ ಒದಗಿಸಲು ಸ್ನೇಹಿತರು ಹಾಗೂ ಬಂಧುಗಳಿಂದ ನಿಧಿ ಸಂಗ್ರಹಿಸಿದರು. ಲಸಿಕೆಗಳ ಉಳಿದ ವೆಚ್ಚವನ್ನು ರೋಟರಿ ಕ್ಲಬ್ ಆಫ್ ಮದ್ರಾಸ್ ನಿಧಿ ಸಂಗ್ರಹದ ಮೂಲಕ ಭರಿಸುತ್ತಿದೆ. ಸರ್ಜೀ ಆಸ್ಪತ್ರೆಗಳ ಗುಂಪು ಮತ್ತು ಡಾ. ಧನಂಜಯ್ ಸರ್ಜೀ ಅವರು ಲಸಿಕೆಗಳನ್ನು ನೀಡಲು ವೈದ್ಯರನ್ನು ಮತ್ತು ಸಿಬ್ಬಂದಿ ಒದಗಿಸುತ್ತಿದ್ದಾರೆ. ಶಿಬಿರದಲ್ಲಿ 500 ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಲಸಿಕೆ ಪಡೆದರು.
ಇನ್ನರ್ವ್ಹೀಲ್ ಜಿಲ್ಲಾ ಅಧ್ಯಕ್ಷೆ ಶಬರಿ ಕಡಿದಾಳ್, ಜಿಲ್ಲಾ ಕಾರ್ಯದರ್ಶಿ ಶಿಲ್ಪಾ ಗೋಪಿನಾಥ್, ಜಿಲ್ಲಾ ಖಜಾಂಚಿ ಶ್ವೇತಾ ಅಶಿತ್, ಇನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ವೀಣಾ ಸುರೇಶ್ ಹಾಗೂ ಮಾಜಿ ಅಧ್ಯಕ್ಷೆ ಜಯಂತಿ ವಾಲಿ, ಬಿಂದು ವಿಜಯ ಕುಮಾರ್ ಉಪಸ್ಥಿತರಿದ್ದರು.
ಇನ್ನರ್ ವೀಲ್ ಪೂರ್ವ ಸಂಸ್ಥೆಯಿಂದ ಗರ್ಭಕಂಠ ಕ್ಯಾನ್ಸರ್ ಜಾಗೃತಿ
ಕ್ಯಾನ್ಸರ್ ಬಗ್ಗೆ ಸಂಶೋಧನಾ ಪ್ರಬಂಧ ಮಂಡಿಸಲು ಶಿವಮೊಗ್ಗದ ಎಸ್.ಬಿ.ಧನರಾಜ್ ಸಿಂಗಾಪುರಕ್ಕೆ ಪ್ರಯಾಣ
ಶಿವಮೊಗ್ಗದ ವಕೀಲರಾದ ಶ್ರೀಯುತ ಕೆ.ಸಿ.ಬಸವರಾಜ್ ಮತ್ತು ಶ್ರೀಮತಿ ವಿನೋದ ರವರ ಪುತ್ರ ದನರಾಜ್ ಎಸ್. ಬಿ. ರವರು ಸ್ವೀಡಜ್ ರ್ ಲ್ಯಾಂಡ್ ನ ಯೂರೋಪಿಯನ್ ಸೋಸೈಟಿ ಫಾರ್ ಮೆಡಿಕಲ್ ಅನ್ಕೊಲಜಿ ರವರು ಈ ವರ್ಷ ಡಿಸೆಂಬರ್ 5 ರಿಂದ 7 ನೆಯ ತಾರೀಕಿನ ವರೆಗೆ ಸಿಂಗಾಪುರ್ ದೇಶದಲ್ಲಿ ಏರ್ಪಡಿಸಿರುವ ಏಷ್ಯಾ ಆದಿವೇಶನಕ್ಕೆ ” ಕ್ಯಾನ್ಸರ್ ಕಾಯಿಲೆ ” ಬಗ್ಗೆ ತಾವು ಕೈಗೊಂಡ ಸಂಶೋಧನೆಯ ಅಂಶಗಳ ಕುರಿತು ವಿಚಾರ ಮಂಡಿಸಲು ತೆರಳಿದ್ದಾರೆ. YHAI ಸದಸ್ಯರಾಗಿರುವ ಅವರು ಈಗಾಗಲೇ ರಾಜ್ಯ – ರಾಷ್ಟ್ರ ಮಟ್ಟದ ಅನೇಕ ಚಾರಣಗಳಲ್ಲಿ ಪಾಲ್ಗೊಂಡಿದ್ದಾರೆ, ಎಂ. ಎಸ್ಸಿ, ಬಿಎಡ್ ಪದವೀದರರಾದ ಧನ್ ರಾಜ್ ರವರು ಪ್ರಸ್ತುತ ಮಣಿಪಾಲ್ ಅಕಾಡೆಮಿ ಆಫ಼್ ಹೈಯೆರ್ ಎಜುಕೇಶನ್ ನಲ್ಲಿ ಓರಲ್ ಕ್ಯಾನ್ಸರ್ ಕುರಿತು ಸಂಶೋದನೆಯಲ್ಲಿ ತೊಡಗಿದ್ದಾರೆ ( PhD) . ವಿವಿಧ ದೇಶಗಳ ಹೆಸರಾಂತ ವಿಜ್ಞಾನಿಗಳು ಪಾಲ್ಗೊಳ್ಳಲಿರುವ ಏಷ್ಯಾ ಮಟ್ಟದ ಅಂತರ್ ರಾಷ್ಟ್ರೀಯ ಸಮಾವೇಶಕ್ಕೆ ಶಿವಮೊಗ್ಗದ ಪ್ರತಿಬಾವಂತ ಯುವಕ ಶ್ರೀ ಧನ್ ರಾಜ್ ಎಸ್. ಬಿ. ರವರಿಗೆ ಆಮಂತ್ರಣ ದೊರಕಿರುವುದಕ್ಕೆ ಅವರಿಗೆ ಶುಭಾಷಯಗಳು.
ಗುಡ್ಡೇಕಲ್ ದೇಗುಲದಲ್ಲಿ ಕಾರ್ತೀಕ ದೀಪೋತ್ಸವ
ಶಿವಮೊಗ್ಗದ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಟ್ರಸ್ಟ್ ಮತ್ತು ಶ್ರೀ ಕಾರ್ತಿಕ ದಿಪೋತ್ಸವ ಸೇವಾ ಸಮಿತಿ ವತಿಯಿಂದ ಗುಡ್ಡೇಕಲ್ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ದ ಅದ್ದೂರಿ ಮೆರವಣಿಗೆಯ ಈ ಸಂದರ್ಭದಲ್ಲಿ ಶಿವಮೊಗ್ಗದ ಮಲೆನಾಡು ತಮಿಳ್ ಯುವ ಸಂಗಮ್ ಇವರಿಂದ ದೀಪವನ್ನು ತೆಗೆದುಕೊಂಡು ಬಂದ ಭಕ್ತಾಯಗಳಿಗೆ ಪುಷ್ಪವನ್ನು ಹಾಕಿ ಸ್ವಾಗತಿಸಿ ಹಾಗೂ ಶ್ರೀ ಬಾಲಸುಬ್ರಮಣ್ಯಯ ಸ್ವಾಮಿಯ ಮೂರ್ತಿಗೆ ಹೂವಿನ ಬೃಹತ್ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಸಂದೀಪ್ ಸುಂದರ್ ರಾಜ್, ಉಪಾಧ್ಯಕ್ಷರಾದ ಶಶಿಕುಮಾರ್ ಆರ್., ಪ್ರಧಾನ ಕಾರ್ಯದರ್ಶಿ, ರಮೇಶ್ ಸಿ., ಖಜಾಂಚಿ ಶಬರೀಶ್ ಎಸ್. ಸಂಘಟನಾ ಕಾರ್ಯದರ್ಶಿ ಕುಮಾರೇಶ್, ಸಹ ಕಾರ್ಯದರ್ಶಿಗಳು, ಸಂಘದ ಪದಾಧಿಕಾರಿಗಳಾದ ಸಂತೋಷ್, ಶಿವರಾಜ್, ರಮೇಶ್, ರಾಜೇಶ್(ಕುಟ್ಟಿ) ಕಾರ್ತಿಕ್ ಎಂ., ಶ್ರೀಧರ್, ಭರತ್, ಕಾರ್ತಿಕ್ ವಿ. ವಿನಯ ಎಸ್., ಪ್ರಶಾಂತ್ ಆರ್, ಯುವರಾಜ್, ಫೆಕ್ಸ್ ರಘು, ಶಿವುಕುಮಾರ್, ನಟರಾಜ್, ಗೋಪಿ, ಶಬರಿ, ಮತ್ತಿತರರು ಉಪಸ್ಥಿತರಿದ್ದರು.
Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ
Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ ಬೆಳೆಗಾರರಿಗೆ ಉಂಟಾಗುವ ಬೆಳೆ ನಷ್ಟಕ್ಕೆ ಆರ್ಥಿಕ ಭದ್ರತೆ ನೀಡುವ ಹವಾಮಾನಾಧಾರಿತ ಬೆಳೆ ವಿಮಾ ಯೋಜನೆಯಡಿ ವಿವಿಧ ಕಾರಣಗಳಿಂದಾಗಿ ಸಂತ್ರಸ್ಥರಿಗೆ ಪರಿಹಾರ ಧನ ನೀಡುವಲ್ಲಿ ನ್ಯೂನತೆಗಳುಂಟಾಗಿರುವುದು ಗಮನಕ್ಕೆ ಬಂದಿದ್ದು, ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಂದ ವರದಿ ಪಡೆದು ತ್ವರಿತ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತೋಟಗಾರಿಕೆ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿ, ಮಳೆಮಾಪಕ ಕೇಂದ್ರಗಳ ಮೂಲಕ ಸಂಗ್ರಹಿಸಿದ ಹವಾಮಾನ ದತ್ತಾಂಶಗಳನ್ನು ಆಧರಿಸಿ ವಿಮಾ ಪರಿಹಾರವನ್ನು ಲೆಕ್ಕಾಚಾರ ಮಾಡಲಾಗುತ್ತದೆ. ಆದರೆ, ಜಿಲ್ಲೆಯಲ್ಲಿರುವ 280ಮಳೆ ಮಾಪನ ಕೇಂದ್ರಗಳಲ್ಲಿ ಕೆಲವು ದುರಸ್ತಿಯಲ್ಲಿದ್ದು, ಸರಿಯಾದ ಮಳೆಮಾಪನ ವರದಿ ಹಾಗೂ ದತ್ತಾಂಶ ದೊರೆಯದಿರುವ ಪ್ರದೇಶಗಳಲ್ಲಿನ ರೈತರ ಬೆಳೆಹಾನಿಯ ಪ್ರಮಾಣ ಅಂದಾಜು ಸಿಗದೆ ಪರಿಹಾರ ಕೊಡುವಲ್ಲಿ ವಿಮಾ ಕಂಪನಿಗಳು ಹಿಂದೆ ಸರಿಯುತ್ತಿದ್ದು, ಇದರಿಂದಾಗಿ ರೈತರಿಗೆ ವಿಮಾ ಮೊತ್ತ ದೊರೆಯದೆ ಅತೀವ ನಷ್ಟ ಉಂಟಾಗುತ್ತಿದೆ. ಈ ಸಂಬಂಧ ಮಲೆನಾಡು ವಿಭಾಗದ ರೈತರಿಂದ ಸಾಕಷ್ಟು ದೂರುಗಳು ಬಂದಿವೆ ಎಂದವರು ನುಡಿದರು.
Madhu Bangarappa ಶಿವಮೊಗ್ಗ ಜಿಲ್ಲೆಯಲ್ಲಿ ಅಡಕೆ, ಶುಂಠಿ, ಕಾಳುಮೆಣಸು, ಮಾವಿನಂತಹ ಬೆಳೆಗಳನ್ನು ವಿಮಾ ವ್ಯಾಪ್ತಿಗೆ ಪರಿಗಣಿಸಲಾಗುತ್ತಿದೆ. ವಿಮಾಪಾಲಿಸಿಯಲ್ಲಿ ನಿರ್ದಿಷ್ಟಪಡಿಸಿದ ಹವಾಮಾನ ಘಟಕಗಳು ಇಳುವರಿ ನಷ್ಟವನ್ನು ಲೆಕ್ಕಿಸಿ ರೈತರಿಗೆ ಸ್ವಯಂಚಾಲಿತವಾಗಿ ಮತ್ತು ತ್ವರಿತವಾಗಿ ಪರಿಹಾರ ನೀಡುತ್ತವೆ. ಆದರೆ, ಮಳೆಮಾಪನ ಘಟಕಗಳ ನಿಷ್ಕ್ರಿಯತೆ ಮತ್ತು ಸಮರ್ಪಕ ಮಾಹಿತಿ ನೀಡದಿರುವುದರಿಂದ ಸಮಸ್ಯೆ ಉಂಟಾಗಿದೆ ಎಂದ ಅವರು, ಈ ಸಂಬಂಧ ಅಭಿವೃದ್ದಿ ಆಯುಕ್ತರು ಹಾಗೂ ವಿಮಾ ಕಂಪನಿಗಳ ನಡುವೆ ಸಮಾಲೋಚನೆ ನಡೆಸಿ, ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದ ಅವರು, ವಿಮಾ ಕಂಪನಿಗಳ ವ್ಯವಸ್ಥಾಪಕರು ಸ್ಪಂದಿಸದಿದ್ದಲ್ಲಿ ಅನಿವಾರ್ಯವಾಗಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಮೊರೆ ಹೋಗಲಾಗುವುದು. ಈ ಹಿಂದೆಯೂ ರೈತರು ನ್ಯಾಯಾಲಯಕ್ಕೆ ಹೋಗಿ ಪರಿಹಾರಧನ ಪಡೆದ ಉದಾಹರಣೆಗಳಿವೆ ಎಂದವರು ನುಡಿದರು.
ಮಳೆ ಮಾಪನ ಕೇಂದ್ರಗಳ ಅಸಮರ್ಪಕ ನಿರ್ವಹಣೆ ಮತ್ತು ದತ್ತಾಂಶ ಸಂಗ್ರಹದ ನ್ಯೂನತೆಯನ್ನು ಸರಿಪಡಿಸುವ ನಿಟ್ಟಿನಲ್ಲಿ ಸರ್ಕಾರವು ಮಹತ್ವದ ಹೆಜ್ಜೆ ಇರಿಸಿದ್ದು, ದುರಸ್ತಿಯಲ್ಲಿರುವ ಘಟಕಗಳಲ್ಲಿ ಆಧುನಿಕ ಯಂತ್ರಗಳನ್ನು ಅಳವಡಿಸಲು ಈಗಾಗಲೇ ಕೃಷಿ ಸಚಿವರು ಸೂಕ್ತ ನಿರ್ಣಯ ಕೈಗೊಂಡಿದ್ದಾರೆ. ಆದ್ದರಿಂದ ಜಿಲ್ಲೆಯಲ್ಲಿ ನಿಷ್ಕ್ರಿಯವಾಗಿರುವ ಯಂತ್ರಗಳ ಮಾಹಿತಿ ನೀಡಿದಲ್ಲಿ ಅವುಗಳನ್ನು ಬದಲಾಯಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
• ಶಿವಮೊಗ್ಗ ಜಿಲ್ಲೆಯಂತೆಯೇ ನೆರೆಯ ಕಾರವಾರ, ಚಿಕ್ಕಮಗಳೂರು, ಚಿತ್ರದುರ್ಗ ಮತ್ತಿತರ ಜಿಲ್ಲೆಗಳಲ್ಲಿಯೂ ಮಳೆ ಮಾಪನ ಯಂತ್ರಗಳು ದುರಸ್ತಿಯಲ್ಲಿದ್ದು, ದತ್ತಾಂಶ ಸಂಗ್ರಹದಲ್ಲಿ ವ್ಯತ್ಯಯಗಳಾಗಿರುವುದನ್ನು ಸಂಘಟಿತವಾಗಿ ಸರ್ಕಾರದ ಗಮನಕ್ಕೆ ತಂದು ಪರಿಹಾರ ಧನ ಒದಗಿಸಲು ಮನವಿ ಮಾಡಿಕೊಳ್ಳಲಾಗುವುದು. – ಗುರುದತ್ತ ಹೆಗಡೆ, ಮಾನ್ಯ ಜಿಲ್ಲಾಧಿಕಾರಿಗಳು. ಶಿವಮೊಗ್ಗ.
ವಿಮೆ ಮಾಡಿಸಿದ ಸಂತ್ರಸ್ಥ ರೈತರೆಲ್ಲರಿಗೂ ಪರಿಹಾರ ಧನ ಕೊಡಲೇಬೇಕಾದುದು ಸರ್ಕಾರದ ಅಂತೆಯೇ ಜನಪ್ರತಿನಿಧಿಗಳ ಕರ್ತವ್ಯವಾಗಿದೆ. ಅಧಿಕಾರಿಗಳಿಂದ ಮಾಹಿತಿ ಪಡೆದು ಸೂಕ್ತ ವಹಿಸಲಾಗುವುದಲ್ಲದೇ ವಿಮಾ ಕಂಪನಿಗಳ ಪ್ರತಿನಿಧಿಗಳೊಬ್ಬರು ಸದಾ ಜಿಲ್ಲಾ ಕೇಂದ್ರದಲ್ಲಿರುವಂತೆಯೂ ಸೂಚಿಸಲಾಗುವುದು ಎಂದ ಅವರು, ಸಕಾಲದಲ್ಲಿ ಮಾಹಿತಿ ಒದಗಿಸದಲ್ಲಿ ಶೀಘ್ರದಲ್ಲಿ ನಡೆಯಲಿರುವ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.
ಅಲ್ಲದೇ ಕಳೆದ ಮುಂಗಾರು ಮಳೆಯಿಂದಾಗಿ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಅಡಿಕೆ ಬೆಳೆಗೆ ಕಂಡುಬಂದ ಎಲೆಚುಕ್ಕೆ ರೋಗ ಮತ್ತು ಕೊಳೆರೋಗದಿಂದಾಗಿ ಅತೀವ ಪ್ರಮಾಣ ಬೆಳೆ ಹಾನಿ ಹಾಗೂ ಇಳುವರಿ ಕುಂಠಿತವಾಗಿದೆ. ಅದಕ್ಕೆ ಸಂಬಂಧಿಸಿದಂತೆ ಪ್ರತಿ ಹೆ.ಗೆ ರೂ.42,000/-ಗಳ ಪರಿಹಾರಧನ ನೀಡುವಂತೆ ತೋಟಗಾರಿಕೆ ಇಲಾಖೆಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಅಧಿಕಾರಿಗಳ ಸಮಾಲೋಚನಾ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಹೇಮಂತ್, ಅಪರ ಜಿಲ್ಲಾಧಿಕಾರಿ ಅಭಿಷೇಕ್ವಿ., ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ|| ಕಿರಣ್ಕುಮಾರ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಡಾ|| ಸಂಜಯ್ಎ.ಬಿ., ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Shivamogga District Minority Welfare Department ಬೌದ್ಧವಿಹಾರಗಳಲ್ಲಿನ ಧಮ್ಮಾಚಾರಿ ಮತ್ತು ಸಹ ಧಮ್ಮಾಚಾರಿಗಳ ಮಾಸಿಕ ಗೌರವ ಧನಕ್ಕೆ ಅರ್ಜಿ ಆಹ್ವಾನ
Shivamogga District Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಜಿಲ್ಲೆಯಲ್ಲಿರುವ ನೊಂದಾಯಿತ ಬೌದ್ಧ ವಿಹಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಧಮ್ಮಾಚಾರಿಗಳು ಮತ್ತು ಸಹಾಯಕ ಧಮ್ಮಾಚಾರಿಗಳಿಗೆ ಮಾಸಿಕ ಗೌರವಧನವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಜಿ ನಮೂನೆಯನ್ನು ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಬೌದ್ದ ವಿಹಾರ ನೊಂದಣಿ ಪ್ರತಿ, ಆಡಳಿತ ಮಂಡಳಿಯ ಪ್ರತಿ, ಧಮ್ಮಾಚಾರಿಗಳ ಭಾವಚಿತ್ರ, ನಿವಾಸ ದೃಢೀಕರಣ, ಬ್ಯಾಂಕ್ ಖಾತೆ ವಿವರ, ಆಧಾರ್ ಕಾರ್ಡ್ ಪ್ರತಿ, ಸೇವಾ ದೃಢಿಕರಣ ಪತ್ರ ಹಾಗೂ ಧಾರ್ಮಿಕ ವಿದ್ಯಾರ್ಹತೆ ಕುರಿತು ಅಗತ್ಯ ದಾಖಲೆಗಳೊಂದಿಗೆ ಡಿ.12 ರೊಳಗಾಗಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ:08182-220206 ಗೆ ಸಂಪರ್ಕಿಸಬಹುದು.
DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ
DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರ ನಿಗದಿಪಡಿಸಿದ ಬೆಲೆಯಂತೆ ರೈತರಿಂದ ಭತ್ತವನ್ನು ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ತಿಳಿಸಿದ್ದಾರೆ.
ಕೇಂದ್ರ ಸರ್ಕಾರವು ಭತ್ತವನ್ನು ಖರೀದಿಸಲು ಕನಿಷ್ಟ ಬೆಂಬಲವನ್ನು ಬೆಲೆ ನಿಗದಿಪಡಿಸಿದ್ದು ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್ಗೆ ರೂ.2369, ಗ್ರೇಡ್ ಎ ಭತ್ತ ಪ್ರತಿ ಕ್ವಿಂಟಾಲ್ಗೆ ರೂ.2389 ರಂತೆ ಖರೀದಿಸಲಾಗುವುದು. ಈ ಯೋಜನೆಯಡಿ ಭತ್ತ ಖರೀದಿಸಲು ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಮತ್ತು ನಿಯಮಿತ ವತಿಯಿಂದ ನೇಮಿಸಲಾಗುವ ಉಪ ಏಜೆನ್ಸಿಗಳಾದ ಟಿಎಪಿಸಿಎಂಎಸ್/ಪಿಎಸಿಎಸ್/ಎಫ್ಪಿಓ/ಎಸ್ಜಿಎಸ್ ಗಳನ್ನು ಸಂಗ್ರಹಣಾ ಏಜೆನ್ಸಿಗಳನ್ನಾಗಿ ನೇಮಿಸಲಾಗಿದೆ.
ಪ್ರತಿ ರೈತರಿಂದ ಪ್ರತಿ ಎಕರೆಗೆ 25 ಕ್ವಿಂಟಾಲ್ನಂತೆ ಗರಿಷ್ಟ 50 ಕ್ವಿಂಟಾಲ್ ಭತ್ತವನ್ನು ಖರೀದಿಸಲಾಗುವುದು. ಜಿಲ್ಲೆಯ ಎಲ್ಲಾ 7 ತಾಲ್ಲೂಕುಗಳ ಎಪಿಎಂಸಿ ಯಾರ್ಡ್ಗಳಲ್ಲಿರುವ ಕೆಎಫ್ಸಿಎಸ್ಸಿ ಸಗಟು ಮಳಿಗೆಗಳಲ್ಲಿ ಭತ್ತ ಖರೀದಿ ಕೇಂದ್ರ ತೆರೆದು ರೈತರಿಂದ ಭತ್ತ ಖರೀದಿಸಲಾಗುವುದು.
DC Shivamogga ರೈತರು ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಫ್ರ್ರೂಟ್ಸ್ ಐಡಿಯೊಂದಿಗೆ ಖರೀದಿ ಕೇಂದ್ರಗಳಲ್ಲಿ ದಿ:31-12-2025 ರವರೆಗೆ ಭತ್ತವನ್ನು ನೊಂದಾಯಿಸಿಕೊಳ್ಳಬಹುದು. ಹಾಗೂ ದಿ:28-02-2026 ರ ಅವಧಿಯವರೆಗೆ ರೈತರಿಂದ ಭತ್ತವನ್ನು ಖರೀದಿ ಮಾಡಲಾಗುವುದು. ರೈತ ಬಾಂಧವರು ಈ ಯೋಜನೆಯ ಸದುಪಯೋಗ ಪಡೆಯಬೇಕೆಂದು ತಿಳಿಸಿದ್ದಾರೆ.
Bangalore Television Centre ಕಲಾತ್ಮಕ ಧಾರಾವಾಹಿ ನಿರ್ಮಾಣ & ಫೋಕ್ ರಿಯಾಲಿಟಿ ಶೋ ನಲ್ಲಿ ಭಾಗವಹಿಸಲು ಅರ್ಜಿ ಆಹ್ವಾನ
Bangalore Television Centre ಬೆಂಗಳೂರು ದೂರದರ್ಶನ ಕೇಂದ್ರವು ನಿರ್ಮಿಸಲಿರುವ ಕಲಾತ್ಮಕ ಧಾರಾವಾಹಿಯನ್ನು ನಿರ್ದೇಶನ ಮಾಡಲು ರಾಷ್ಟ್ರಪ್ರಶಸ್ತಿ ಪುರಸ್ಕೃತ ಚಲನಚಿತ್ರ ನಿರ್ದೇಶಕರುಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದು ಆಕಾಶವಾಣಿ ಹಾಗೂ ದೂರದರ್ಶನದ ದಕ್ಷಿಣವಲಯದ ಉಪ ಮಹಾನಿರ್ದೇಶಕ ಭಾಗ್ಯವಾನ್ ತಿಳಿಸಿದ್ದಾರೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಅರ್ಜಿ ಸಲ್ಲಿಸಲು ಇದೇ ಡಿಸೆಂಬರ್ 14 ಕಡೆಯ ದಿನವಾಗಿದೆ. ನಿರ್ದೇಶಕರು, ಧಾರಾವಾಹಿ ವಿಭಾಗ
Bangalore Television Centre ದೂರದರ್ಶನ ಕೇಂದ್ರ. ಜೆ.ಸಿ. ನಗರ, ಬೆಂಗಳೂರು – 560006 ಇಲ್ಲಿಗೆ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು. ಇಲ್ಲವಾದಲ್ಲಿ ddchandanaserial@gmail.com ಈ ಮೇಲ್ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹೇಳಿದ್ದಾರೆ.
ದೂರದರ್ಶನ ಚಂದನವಾಹಿನಿಯಲ್ಲಿ ಫೋಕ್ ರಿಯಾಲಿಟಿ ಶೋ(ಹಾಡು), ಜನಪದ ಗೀತೆಗಳನ್ನು ಹಾಡುವ ಪ್ರತಿಭೆವುಳ್ಳ, 18 ವರ್ಷಕ್ಕೆ ಮೇಲ್ಪಟ್ಟ ಆಸಕ್ತ ಹಾಡುಹಕ್ಕಿಗಳು ಡಿಸೆಂಬರ್ 20ರಂದು ಬೆಂಗಳೂರು ದೂರದರ್ಶನ ಕೇಂದ್ರದಲ್ಲಿ ನಡೆಯಲಿರುವ ಮೆಗಾ ಆಡಿಷನ್ನಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ತಮ್ಮ ಸ್ವವಿವರಗಳುಳ್ಳ ಅರ್ಜಿಯೊಂದಿಗೆ ಆಗಮಿಸಿ ಆಡಿಷನ್ಸ್ ದಿನದಂದೇ ಕೇಂದ್ರದಲ್ಲೇ ತಮ್ಮ ಹೆಸರನ್ನು ನೋಂದಯಿಸಿಕೊಳ್ಳಬಹುದು. ಸ್ಪರ್ಧೆಯಲ್ಲಿ ಭಾಗವಹಿಸಿ ಗೆದ್ದ ವಿಜೇತರಿಗೆ ಆಕರ್ಷಕ ಬಹುಮಾನಗಳಿವೆ ಎಂದು ಭಾಗ್ಯವಾನ್ ತಿಳಿಸಿದ್ದಾರೆ
ಭಗವದ್ಗೀತೆ ಪಠ್ಯದಲ್ಲಿ ಅಳವಡಿಸಲು ಸಚಿವ ಕುಮಾರಣ್ಣ ಬರೆದ ಪತ್ರಕ್ಕೆ ಅಶೋಕ ಜಿ.ಭಟ್ ಕೃತಜ್ಞತೆ
ಶಿವಮೊಗ್ಗದಲ್ಲಿ ಇತ್ತೀಚೆಗೆ ಭಗವದ್ಗೀತಾ ಅಭಿಯಾನವು ಅತ್ಯಂತ ಯಶಸ್ವಿಯಾಗಿ ನೆರವೇರಿತು.
ರಾಜ್ಯಮಟ್ಟದ ಬೃಹತ್
ಸಮಾರಂಭದಲ್ಲಿ ವಿವಿಧ ಧಾರ್ಮಿಕ ಪೀಠಾಧಿಪತಿಗಳು, ಗಣ್ಯಾತಿಗಣ್ಯರು, ಕೇರಳದ ಮಾನ್ಯ ರಾಜ್ಯಪಾಲರು ಪಾಲ್ಗೊಂಡಿದ್ದರು.
ಅಲ್ಲಿ ಮೂಡಿಬಂದ ಸಾರ್ವಜನಿಕ ಅಭಿಪ್ರಾಯದಂತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಶಿಕ್ಷಣ ಸಚಿವರಿಗೆ ಭಗವದ್ಗೀತೆಯನ್ನ ಪಠ್ಯಕ್ರಮದಲ್ಲಿ ಸೂಕ್ತವಾಗಿ ಅಳವಡಿಸಲು ಪತ್ರಮುಖೇನ ಕೋರಿದ್ದಾರೆ.ಪತ್ರದ ಸಾರಾಂಶ ಹೀಗಿದೆ.
ಭಾರತವು ಬಹಳ ಹಿಂದಿನಿಂದಲೂ ಸಂತರು, ಜ್ಞಾನ ಮತ್ತು ಶಾಶ್ವತ ನಾಗರಿಕ ಮೌಲ್ಯಗಳ ಭೂಮಿಯಾಗಿದೆ. ಸನಾತನ ಧರ್ಮವು ವಸುಧೈವ ಕುಟುಂಬಕಂ ಎಂಬ ಸಾರ್ವತ್ರಿಕ ಆದರ್ಶವನ್ನು ಎತ್ತಿಹಿಡಿಯುತ್ತದೆ. ಶ್ರೀ ಕೃಷ್ಣನಾಗಿ ತನ್ನ ಎಂಟನೇ ಅವತಾರದಲ್ಲಿ, ಭಗವಾನ್ ವಿಷ್ಣುವು ನಿಷ್ಕಾಮ ಕರ್ಮವನ್ನು ಒತ್ತಿಹೇಳುವ ಭಗವದ್ಗೀತೆಯ ಶಾಶ್ವತ ಜ್ಞಾನವನ್ನು ಮತ್ತು ಪ್ರಾಮಾಣಿಕತೆ ಮತ್ತು ಸಮರ್ಪಣೆಯೊಂದಿಗೆ ಒಬ್ಬರ ಕರ್ತವ್ಯವನ್ನು ನಿರ್ವಹಿಸುವ ಮಹತ್ವವನ್ನು ಬೋಧಿಸಿದರು. ಈ ಮೌಲ್ಯಗಳು ವಿಶೇಷವಾಗಿ ಪ್ರಸ್ತುತ ಜಾಗತಿಕ ಪರಿಸರದಲ್ಲಿ ಬಹಳ ಪ್ರಸ್ತುತವಾಗಿವೆ.
ಇತ್ತೀಚೆಗೆ, ಗೌರವಾನ್ವಿತ ಪ್ರಧಾನ ಮಂತ್ರಿಗಳು ಉಡುಪಿಯ ಕೃಷ್ಣ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಗೀತಾ ಪಠಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು, ಅಲ್ಲಿ ಅವರು ಸನಾತನ ಧರ್ಮದ ಮೂಲ ತತ್ವಗಳನ್ನು ಎತ್ತಿಹಿಡಿದು ಎತ್ತಿ ತೋರಿಸಿದರು. ಅವರು ಮತ್ತೊಮ್ಮೆ ವಸುಧೈವ ಕುಟುಂಬಕಂ ಎಂಬ ಪರಿಕಲ್ಪನೆಯನ್ನು ಒತ್ತಿ ಹೇಳಿದರು ಮತ್ತು ಈ ಕಾಲಾತೀತ ಮೌಲ್ಯಗಳನ್ನು ಪುನರುಚ್ಚರಿಸಿದರು.
ಇದಲ್ಲದೆ, ನಿಮಗೆ ತಿಳಿದಿರುವಂತೆ, ಶಿವಮೊಗ್ಗದಲ್ಲಿ ನಡೆದ ಗೀತಾ ಪಠಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಸೌಭಾಗ್ಯ ನನಗೂ ಸಿಕ್ಕಿತು, ಅದು ಒಂದು ಸ್ಪೂರ್ತಿದಾಯಕ ಕಾರ್ಯಕ್ರಮವಾಗಿತ್ತು. ಇದು ಗೀತೆಯನ್ನು ಪಠಿಸಲು ಮತ್ತು ಅದರೊಂದಿಗೆ ಸಂಬಂಧಿಸಿದ ಆಳವಾದ ಶಕ್ತಿ ಮತ್ತು ಭಕ್ತಿಯನ್ನು ಅನುಭವಿಸಲು ಒಂದು ಅದ್ಭುತ ಅವಕಾಶವನ್ನು ನೀಡಿತು.
ಈ ಸಂದರ್ಭದಲ್ಲಿ, ಹಲವಾರು ಸ್ಥಳೀಯ ನಾಯಕರು ಮತ್ತು ಪೋಷಕರು ಭಗವದ್ಗೀತೆಯ ಬೋಧನೆಗಳನ್ನು ಶಾಲಾ ಪಠ್ಯಕ್ರಮದಲ್ಲಿ ಸೇರಿಸಬೇಕೆಂದು ವಿನಂತಿಸಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ (NEP) ಮೌಲ್ಯಾಧಾರಿತ ಶಿಕ್ಷಣದ ಮೇಲೆ ಬಲವಾದ ಒತ್ತು ನೀಡುತ್ತದೆ. ಗೀತೆಯಿಂದ ಆಯ್ದ ಬೋಧನೆಗಳನ್ನು ಪರಿಚಯಿಸುವುದರಿಂದ ವಿದ್ಯಾರ್ಥಿಗಳಲ್ಲಿ ನೈತಿಕ ಶಕ್ತಿ, ಚಿಂತನೆಯ ಸ್ಪಷ್ಟತೆ ಮತ್ತು ವ್ಯಕ್ತಿತ್ವವನ್ನು ಬೆಳೆಸಲು ಸಹಾಯ ಮಾಡುತ್ತದೆ, ಇದರಿಂದಾಗಿ ನಮ್ಮ ಜನಸಂಖ್ಯಾ ಲಾಭಾಂಶವನ್ನು ಬಲಪಡಿಸುತ್ತದೆ ಮತ್ತು ನಮ್ಮ ಯುವಕರನ್ನು ಜಾಗತಿಕವಾಗಿ ಶ್ರೇಷ್ಠಗೊಳಿಸಲು ಸಿದ್ಧಪಡಿಸುತ್ತದೆ.
ಆದ್ದರಿಂದ, ಭಗವದ್ಗೀತೆಯ ಕಾಲಾತೀತ ಮೌಲ್ಯಗಳನ್ನು ದೇಶಾದ್ಯಂತದ ವಿದ್ಯಾರ್ಥಿಗಳ ಕಲಿಕೆಯ ಚೌಕಟ್ಟಿನಲ್ಲಿ ಅರ್ಥಪೂರ್ಣವಾಗಿ ಸಂಯೋಜಿಸಲು ಈ ಪ್ರಸ್ತಾವನೆಗೆ ಸರಿಯಾದ ಪರಿಗಣನೆಯನ್ನು ನೀಡಿ ಸೂಕ್ತ ನಿರ್ದೇಶನಗಳನ್ನು ನೀಡಬೇಕೆಂದು ನಾನು ಮತ್ತೊಮ್ಮೆ ನಿಮ್ಮನ್ನು ವಿನಂತಿಸುತ್ತೇನೆ.
ಎಂದು ಮಾನ್ಯ ಕೇಂದ್ರ ಕೈಗಾರಿಕಾ ಸಚಿಷ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರಬರೆದು
ಮನವಿ ಮಾಡಿದ್ದಾರೆ.
ಪ್ರಸ್ತುತ ಗೀತಾಭಿಮಾನಿ
ಸಚಿವ ಕುಮಾರಸ್ವಾಮಿಯವರ ಈ ಪ್ರಯತ್ನಕ್ಕೆ
ಶಿವಮೊಗ್ಗ ಜಿಲ್ಲಾ ಭಗವದ್ಗೀತಾ ಅಭಿಯಾನದ ಕಾರ್ಯಾಧ್ಯಕ್ಷ ಹಾಗೂ ಹಿರಿಯ ನ್ಯಾಯವಾದಿಗಳಾದ ಅಶೋಕ.ಜಿ.ಭಟ್ ಅವರು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.
Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ ಮಾಡಿಸಬೇಕು- ಡಾ.ರಕ್ಷಾರಾವ್
Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು ಎಂದು ಉಷಾ ನರ್ಸಿಂಗ್ ಹೋಂ ವೈದ್ಯೆ ಡಾ. ರಕ್ಷಾ ರಾವ್ ಹೇಳಿದರು.
ಶಿವಮೊಗ್ಗ ನಗರದ ದೈವಜ್ಞ ಕಲ್ಯಾಣ ಮಂದಿರದಲ್ಲಿ ದೈವಜ್ಞ ಮಹಿಳಾ ಮಂಡಳಿ ವತಿಯಿಂದ ಭಾರತೀಯ ವೈದ್ಯಕೀಯ ಸಂಘ ಜಿಲ್ಲಾ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ಮತ್ತು ಜೀವ ಸುರಕ್ಷತೆ ತಿಳವಳಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.
30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು ಮೂರು ವರ್ಷಕ್ಕೆ ಒಂದು ಬಾರಿ ಮಾಡಿಸಿಕೊಳ್ಳಬೇಕು ಹಾಗೂ ಮ್ಯಾಮೊಗ್ರಫಿ ಟೆಸ್ಟ್ ಅನ್ನು ಎರಡು ವರ್ಷಗಳಿಗೆ ಒಂದು ಬಾರಿ ಮಾಡಿಸಬೇಕು ಎಂದು ತಿಳಿಸಿದರು.
Indian Medical Association ದೈವಜ್ಞ ಮಹಿಳಾ ಮಂಡಳಿ ಶಿವಮೊಗ್ಗ ಅಧ್ಯಕ್ಷೆ ಸೀಮಾ ಸದಾನಂದ್ ಮಾತನಾಡಿ, ಸ್ತನ ಮತ್ತು ಗರ್ಭಕಂಠ ಕ್ಯಾನ್ಸರ್ ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಅದರ ಬಗ್ಗೆ ಮುಂಚಿತವಾಗಿ ಜಾಗ್ರತೆ ವಹಿಸಲು ಅದಕ್ಕೆ ಸಂಬಂಧಿಸಿದ ತಪಾಸಣೆ ಪ್ಯಾಪ್ಸ್ ಮಿಯರ್ ಮತ್ತು ಮ್ಯಾಮೋಗ್ರಫಿ ತಪಾಸಣೆಯನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
117 ಮಹಿಳೆಯರು ಆರೋಗ್ಯ ತಪಾಸಣೆ ಮಾಡಿಕೊಂಡರು. ಮಹಿಳೆಯರು ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಲು ಡಾ. ರಕ್ಷಾ ರಾವ್ ಅಗತ್ಯ ಮಾರ್ಗದರ್ಶನ ನೀಡಿ ಕ್ಯಾನ್ಸರ್ ಬಗ್ಗೆ ವಿವರಿಸಿದರು.
ದೈವಜ್ಞ ಮಹಿಳಾ ಮಂಡಳಿ ಶಿವಮೊಗ್ಗ ಕಾರ್ಯದರ್ಶಿ ವಾಣಿ ಪ್ರವೀಣ್, ಉಪಾಧ್ಯಕ್ಷೆ ಪ್ರೇಮ ರಮೇಶ್, ಅರ್ಚನಾ ಅಣ್ಣಪ್ಪ, ಸಹ ಕಾರ್ಯದರ್ಶಿ ಸುಧಾ ಸುರೇಶ್, ಚೇತನಾ ವಾದಿರಾಜ್, ಖಜಾಂಚಿ ರೂಪ ರವಿ, ನಿರ್ದೇಶಕರು, ಮಾಜಿ ಅಧ್ಯಕ್ಷರು ಹಾಗೂ ಸದಸ್ಯರೆಲ್ಲರೂ ಉಪಸ್ಥಿತರಿದ್ದರು.
ಡಿಸೆಂಬರ್ 6. ಗೃಹರಕ್ಷಕ ದಳ ದಿನಾಚರಣೆ ಸರ್ವ ಸಿದ್ಧತೆ
ಶಿವಮೊಗ್ಗ ಜಿಲ್ಲಾ ಗೃಹ ರಕ್ಷಕದಳವು ಡಿ. 06 ರಂದು ಸಂಜೆ 4.00ಕ್ಕೆ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಅಖಿಲ ಭಾರತ ಗೃಹರಕ್ಷಕ ದಳ ದಿನಾಚರಣೆಯನ್ನು ಆಯೋಜಿಸಿದೆ.
ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ. ಮಿಥುನ್ ಕುಮಾರ್ ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ವಿಶೇಷ ಆಹ್ವಾನಿತರು. ಜಿಲ್ಲಾ ಸಮಾದೇಷ್ಟರು ಡಾ. ಚೇತನ್ ಹೆಚ್.ಪಿ. ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಎನ್. ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣಗೌಡ, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ., ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೆಶಕ ಮಂಜುನಾಥ ಎಸ್. ಆರ್. ಆಗಮಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಉಪ ಸಮಾದೇಷ್ಟರು ಹಾಲಪ್ಪ ಷ ಡಾವಣಗೇರಿ, ಜಿಲ್ಲೆಯ ಎಲ್ಲಾ ಅಧಿಕಾರಿ ವರ್ಗ, ಕಚೇರಿ ಸಿಬ್ಬಂದಿವರ್ಗ, ಘಟಕಾಧಿಕಾರಿಗಳು ಹಾಗೂ ಸಮಸ್ತ ಗೃಹರಕ್ಷಕ ಸದಸ್ಯರು, ಗೃಹರಕ್ಷಕದಳ ಉಪಸ್ಥಿತರಿರಲಿದ್ದಾರೆ.
