Tuesday, February 17, 2026
Tuesday, February 17, 2026
Home Blog Page 167

CM Siddharamaiah ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ- ಮುಖ್ಯಮಂತ್ರಿ ಸಿದ್ಧರಾಮಯ್ಯ

0

CM Siddharamaiah ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ? ಅಂತಲೂ ಯಾರಿಗೂ ಕೇಳಿಲ್ಲ. ನಿಮ್ಮಿಂದ ನನಗೆ ಏನೇನೂ ಅಪೇಕ್ಷೆ ಇಲ್ಲ. ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ.

ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದೇ ದೊಡ್ಡ ವಿಷಯದಂತೆ ಮಾಧ್ಯಮಗಳಲ್ಲಿ ಚರ್ಚೆ ನಡೆಯಿತು. ಆ ಚರ್ಚೆಯಲ್ಲಿ ಜ್ಯೋತಿಷಿಗಳು, ಚಾನಲ್ ಗಳು ತೋರಿಸಿದ್ದೆಲ್ಲಾ ಅಪ್ಪಟ ಸುಳ್ಳಾಯ್ತು. ಮಾಧ್ಯಮದಲ್ಲಿ ಹೀಗೆಲ್ಲಾ ತೋರಿಸಿದರೆ ಜನ ಒಪ್ಪುತ್ತಾರಾ ಎಂದು ಯೋಚನೆ ಮಾಡಬೇಕು.

ಅಭಿವ್ಯಕ್ತಿ ಸ್ವಾತಂತ್ರ್ಯ ಎತ್ತಿಹಿಡಿಯಲು ನಮ್ಮ‌ ಸರ್ಕಾರ ಸದಾ ಸಿದ್ಧ. ಯಾವತ್ತೂ ಇದಕ್ಕೆ ಧಕ್ಕೆ ತರುವ ಕೆಲಸವನ್ನು ನಾನೂ ಮಾಡಿಲ್ಲ, ನಮ್ಮ ಸರ್ಕಾರವೂ ಮಾಡುವುದಿಲ್ಲ.

ಬ್ಲಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯು ಟ್ಯೂಬ್ ಚಾನಲ್ ಗಳು ಸಮಾಜಕ್ಕೆ ಶಾಪ ಆಗಿದ್ದು, ಇಂಥವರಿಂದ ಪತ್ರಿಕೋದ್ಯಮದ ಘನತೆ ಹಾಳಾಗುತ್ತಿದೆ, ಹೀಗಾಗಿ ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಇವರಿಗೂ ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂದು ಸಂಘವು ಬೇಡಿಕೆ ಸಲ್ಲಿಸಿದೆ. ಈ ಬೇಡಿಕೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. CM Siddharamaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಅನ್ನು ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ, ಮಾತನಾಡಿದರು

Commonwealth Parliamentary Association ವಿಧಾನ ಮಂಡಲದಲ್ಲಿಯ ಆರೋಗ್ಯಪೂರ್ಣ ಚರ್ಚೆಗಳೇ ಪ್ರಜಾಪ್ರಭುತ್ವದ ಯಶಸ್ಸಿನ ಮೂಲಾಧಾರ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಭಿಮತ

0

Commonwealth Parliamentary Association ವಿಧಾನಮಂಡಳಗಳಲ್ಲಿ ನಡೆಯುವ ಸಮಾಜಮುಖಿ ಹಾಗೂ ಆರೋಗ್ಯಪೂರ್ಣ ಚರ್ಚೆಗಳೇ ಪ್ರಜಾಪ್ರಭುತ್ವದ ಯಶಸ್ಸಿಗೆ ಮೂಲಾಧಾರವಾಗಿವೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಅಭಿಮತ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ ೧೧ ನೇ ಕಾಮನ್ ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಸಮ್ಮೇಳನದಲ್ಲಿ ” ವಿಧಾನ ಮಂಡಳದ ಚರ್ಚೆಗಳು ಜನರ ವಿಶ್ವಾಸ ಗಳಿಸುವುದರೊಂದಿಗೆ ಜನರ ಅಶೋತ್ತರಗಳನ್ನು ಈಡೆರಿಸುವಲ್ಲಿಯ ಪಾತ್ರ” ಕುರಿತ ವಿಚಾರ ಮಂಡಿಸಿದ ಬಸವರಾಜ ಹೊರಟ್ಟಿ, ಚುನಾಯಿತ ಪ್ರತಿನಿಧಿಗಳು ಸಾರ್ವಜನಿಕ ಕಾಳಜಿಗಳನ್ನು ಚರ್ಚಿಸಲು ಸರ್ಕಾರಿ ನೀತಿಗಳನ್ನು ಪರಿಶೀಲಿಸಲು ಮತ್ತು ಕಾನೂನು ರಚನೆಯ ಪ್ರಕ್ರಿಯೆಯಲ್ಲಿ ಭಾಗವಹಿಸಲು ವಿಧಾನ ಮಂಡಳ ಪರಿಣಾಮಕಾರಿ ವೇದಿಕೆಯಾಗಿದು ಅದನ್ನು ಸಮರ್ಥವಾಗಿ ಬಳಸಿಕೊಳ್ಳಲು ಜನಪ್ರತಿನಿಧಿಗಳು ಮುಂದಾಗಬೇಕು ಎಂದರು.

ಸದನವು ಕ್ರಮಬದ್ಧವಾಗಿಲ್ಲದಿದ್ದಾಗ ಮತ್ತು ಅರ್ಥಪೂರ್ಣ ಚರ್ಚೆಯಿಲ್ಲದೆ ಕಾನೂನುಗಳನ್ನು ಅಂಗೀಕರಿಸಿದಾಗ ನಮ್ಮ ಮೇಲಿನ ಜನರ ನಂಬಿಕೆಗಳು ಕ್ಷೀಣಿಸುವ ಸಂದರ್ಭ ಬರಬಹೆದೆನ್ನುವ ಎಚ್ಚರಿಕೆ ಜನಪ್ರತಿನಿಧಿಗಳಿಗಿರಬೇಕು ಎಂದರು.

Commonwealth Parliamentary Association ಸದನ ಕಲಾಪಗಳ ಪ್ರಧಾನ ಅಂಶಗಳಾದ ಪ್ರಶ್ನೋತ್ತರ ಅವಧಿ, ಶೂನ್ಯವೇಳೆ ಚರ್ಚೆ, ಅರ್ಧಗಂಟೆಯ ಚರ್ಚೆ, ಕಿರುಸೂಚನೆ ಪ್ರಶ್ನೆಗಳು ಮತ್ತು ಸದನದ ಗಮನ ಸೆಳೆಯುವ ಪ್ರಸ್ತಾವಗಳ ಮೂಲಕ ಪ್ರತಿಯೊಬ್ಬ ಸದಸ್ಯರು ಸದನದಲ್ಲಿನ ಅವಕಾಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಅನುವು ಮಾಡಿಕೊಡುವ ಮೂಲಕ ಸುಗಮ ಮತ್ತು ರಾಜತಾಂತ್ರಿಕ ಮಾರ್ಗಗಳನ್ನು ಪ್ರತಿನಿಧಿಗಳು ಯಾವಾಗಲೂ ಆಯ್ಕೆ ಮಾಡಿಕೊಳ್ಳಬೇಕು ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ಶಾಸಕಾಂಗ ಸದನಗಳಲ್ಲಿ ನನ್ನ 45 ವರ್ಷಗಳ ಅವಧಿಯಲ್ಲಿ ವಿಧಾನ ಪರಿಷತ್ತಿನ ಸಭಾಪತಿಯಾಗಿ 3ನೇ ಬಾರಿಗೆ ಪಡೆದ ಅನುಭವದ ಮೂಲಕ ಹೇಳುವುದಾದರೆ, ಸಾರ್ವಜನಿಕ ಪ್ರತಿನಿಧಿಗಳು ಜನಪರ ಮಹತ್ವದ ವಿಷಯಗಳಿಗೆ ಮಹತ್ವ ನೀಡುವುದರ ಮೂಲಕ ತಮ್ಮ ಜವಾಬ್ದಾರಿ ನಿಭಾಯಿಸಬೇಕು ಎಂದು ಹೊರಟ್ಟಿ ನುಡಿದರು.

Women and Child Welfare Department ಲಿಂಗತ್ವ ಅಲ್ಪ ಸಂಖ್ಯಾತರ ಮತ್ತು ಮಾಜಿ ದೇವದಾಸಿಯರಿಂದ ಅರ್ಜಿ ಆಹ್ವಾನ

0

Women and Child Welfare Department ಶಿವಮೊಗ್ಗ ಜಿಲ್ಲೆಯಲ್ಲಿ 2025-26 ನೇ ಸಾಲಿನಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರ ಹಾಗೂ ಮಾಜಿ ದೇವದಾಸಿಯರ ಸಮೀಕ್ಷೆಯಲ್ಲಿ ಸೇರುವ ಕುರಿತಂತೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಲಿಂಗತ್ವ ಅಲ್ಪ ಸಂಖ್ಯಾತರ ಸಮೀಕ್ಷೆಯು ಪ್ರತಿ ತಾಲ್ಲೂಕಿನ ತಾಲ್ಲೂಕು ಆಸ್ಪತ್ರೆ /ಎ.ಟಿ.ಆರ್. ಸೆಂಟರ್‌ಗಳಲ್ಲಿ ಹಾಗೂ ಮಾಜಿ ದೇವದಾಸಿಯರ ಸಮೀಕ್ಷೆಯನ್ನು ಪ್ರತಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯಲ್ಲಿ ಸೆ.15 ರಿಂದ 45 ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದು, ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30 ರವರೆಗೆ ನಡೆಸಲಾಗುವುದು. ಜಿಲ್ಲೆಯಲ್ಲಿರುವ ಎಲ್ಲಾ ಲಿಂಗತ್ವ ಅಲ್ಪ ಸಂಖ್ಯಾತರು ಹಾಗೂ ಮಾಜಿ ದೇವದಾಸಿಯರು ಸೆ. 30 ರೊಳಗಾಗಿ ಈ ಸಮೀಕ್ಷೆಗೆ ಹಾಜರಾಗಿ ಮಾಹಿತಿಯನ್ನು ಸಮೀಕ್ಷೆಯಲ್ಲಿ ಸೇರಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
Women and Child Welfare Department ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿವಮೊಗ್ಗ ದೂ.ಸಂ.08182-295514, ಮೊ.ಸಂ.9448681051 ಗೆ ಸಂಪರ್ಕಿಸಬಹುದು.

Sri Ramakrishna Vidyaniketana ಸೆ.18 ರಂದು ಜಿಲ್ಲಾ ಮಟ್ಟದ ಈಜು ಸ್ಪರ್ಧೆ

0

Sri Ramakrishna Vidyaniketana ಶಿವಮೊಗ್ಗ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶ್ರೀ ರಾಮಕೃಷ್ಣ ವಿದ್ಯಾನಿಕೇತನ, ಗೋಪಾಳ ಇದರ ಸಂಯುಕ್ತಾಶ್ರಯದಲ್ಲಿ 2025 – 26ರ ಸಾಲಿನ 14 ರಿಂದ 17 ವಯೋಮಿತಿಯ ಬಾಲಕ, ಬಾಲಕಿಯರ ಈಜು ಕ್ರೀಡಾಕೂಟವನ್ನು ಆಯೋಜಿಸಲಾಗಿದೆ.
ಗೋಪಾಳದ ರಾಮಕೃಷ್ಣ ವಿದ್ಯಾ ನಿಕೇತನದ ಪಕ್ಕದಲ್ಲಿರುವ ಕ್ರೀಡಾ ಸಂಕೀರ್ಣದ ಈಜು ಕೊಳದಲ್ಲಿ ಈ ಸ್ಪರ್ಧೆ ನಡೆಯುತ್ತಿದ್ದು, ಭಾಗವಹಿಸುವ ಮಕ್ಕಳು ಹಾಜರಾಗುವಂತೆ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಪ್ರಕಾಶ್ ಕೋರಿದ್ದಾರೆ.
ಅಂದು ಬೆಳಗ್ಗೆ 10 ಗಂಟೆಗೆ ಈ ಕಾರ್ಯಕ್ರಮವನ್ನು ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಮಂಜುನಾಥ ಅವರು ಉದ್ಘಾಟಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಮಕೃಷ್ಣ ವಿದ್ಯಾನಿಕೇತನದ ಅಧ್ಯಕ್ಷ ಡಾ. ಡಿ.ಆರ್. ನಾಗೇಶ್ ವಹಿಸಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಪ್ರಕಾಶ್, ರಾಮಕೃಷ್ಣ ವಿದ್ಯಾನಿಕೇತನದ ಕಾರ್ಯದರ್ಶಿ ಶೋಭಾ ವೆಂಕಟರಮಣ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ.
ನಿಯಮಗಳು:
Sri Ramakrishna Vidyaniketana ಸೆಪ್ಟೆಂಬರ್ 18ರ ಬೆಳಿಗ್ಗೆ 9ಗಂಟೆಯೊಳಗೆ ಈಜುಕೊಳದ ಬಳಿ ಸ್ಪರ್ಧಾಳುಗಳು ಆಗಮಿಸಿ ವರದಿ ಮಾಡಿಕೊಳ್ಳಬೇಕು.
ಬೇರೆ ತಾಲೂಕಿನ ಸ್ಪರ್ದಾಳುಗಳು ತಮ್ಮ ತಾಲೂಕಿನ ಟಿ ಓ ಪಿ ಲಾಗಿನ್ ನಲ್ಲಿ ಅಪ್ಲೋಡ್ ಮಾಡಿದ ಎಲಿಜಬಿಲಿಟಿ ಸರ್ಟಿಫಿಕೇಟ್ ಅನ್ನು ಕಡ್ಡಾಯವಾಗಿ ತರತಕ್ಕದ್ದು.
ಎಲ್ಲಾ ಸ್ಪರ್ದಾಳು ಸ್ಪರ್ದಾಳುಗಳು ಕಡ್ಡಾಯವಾಗಿ ಈಜು ಸಮವಸ್ತ್ರವನ್ನು ಧರಿಸಬೇಕು.

National Safety Council of India ರಾಷ್ಟ್ರೀಯ ಸುರಕ್ಷತಾ ಮಂಡಳಿ ವತಿಯಿಂದ ಕೊಪ್ಪಳದ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಾರ್ಖಾನೆಗೆ ಉನ್ನತ ಸುರಕ್ಷತಾ ಪುರಸ್ಕಾರ

0

National Safety Council of India ರಾಷ್ಟ್ರೀಯ ಸುರಕ್ಷತಾ ಮಂಡಳಿ ವತಿಯಿಂದ 2023-24ನೇ ಸಾಲಿನ ಉನ್ನತ ಸುರಕ್ಷತಾ ಪುರಸ್ಕಾರವನ್ನು ಕೊಪ್ಪಳದ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಾರ್ಖಾನೆಗೆ 09-09-2025 ರಂದು ಬೆಂಗಳೂರಿನ ರಾಡಿಸನ್ ಬ್ಲೂ ಹೋಟೆಲ್ ಸಭಾಂಗಣದಲ್ಲಿ ಪ್ರದಾನ ಮಾಡಲಾಯಿತು.
ರಾಷ್ಟ್ರೀಯ ಸುರಕ್ಷತಾ ಮಂಡಳಿ ಕರ್ನಾಟಕ ಚಾಪ್ಟರ್ ಪ್ರತಿ ಎರಡು ವರ್ಷಕ್ಕೊಮ್ಮೆ ಆಯೋಜಿಸುವ ಈ ಕಾರ್ಯಕ್ರಮದಲ್ಲಿ, ಸುರಕ್ಷತಾ ಆಡಿಟ್ ಆಧಾರದ ಮೇಲೆ ರಾಜ್ಯದ ಆಯ್ದ ಕಾರ್ಖಾನೆಗಳಿಗೆ ಉತ್ತಮ, ಉನ್ನತ ಮತ್ತು ಅತ್ಯುತ್ತಮ ಸುರಕ್ಷತಾ ಪುರಸ್ಕಾರಗಳನ್ನು ನೀಡಿ ಗೌರವಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ, ಕೊಪ್ಪಳದ ಘಟಕವು ಉತ್ತರ ಕರ್ನಾಟಕ ಭಾಗದಲ್ಲಿ ಕಾರ್ಮಿಕರ ಸುರಕ್ಷತೆ, ಆರೋಗ್ಯ ಹಾಗೂ ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ ಉತ್ಪಾದನೆ ನಡೆಸುತ್ತಿರುವುದಕ್ಕಾಗಿ ಈ ಪುರಸ್ಕಾರಕ್ಕೆ ಪಾತ್ರವಾಗಿದೆ. ಜೊತೆಗೆ, ಸಿ.ಎಸ್.ಆರ್ ಯೋಜನೆಗಳಡಿ ಸುತ್ತಮುತ್ತಲಿನ ಗ್ರಾಮಗಳ ಶಿಕ್ಷಣ, ಆರೋಗ್ಯ ಮತ್ತು ಅಭಿವೃದ್ಧಿಗೆ ಸಹ ಈ ಸಂಸ್ಥೆ ಶ್ರಮಿಸುತ್ತಿದೆ.
1993ರಲ್ಲಿ ಸ್ಥಾಪಿತವಾದ ಈ ಘಟಕವು 2017ರಲ್ಲಿ ಉತ್ತಮ ಸುರಕ್ಷತಾ ಪುರಸ್ಕಾರವನ್ನು, 2019, 2021 ಹಾಗೂ 2023ರಲ್ಲಿ ಉನ್ನತ ಸುರಕ್ಷತಾ ಪುರಸ್ಕಾರಗಳನ್ನು ಪಡೆದುಕೊಂಡಿತ್ತು. ಇದೇ ಶ್ರೇಯಸ್ಸನ್ನು ಮುಂದುವರಿಸಿಕೊಂಡು, 2025ರಲ್ಲಿ ನಾಲ್ಕನೇ ಬಾರಿ ಉನ್ನತ ಸುರಕ್ಷತಾ ಪುರಸ್ಕಾರವನ್ನು ಗಳಿಸುವ ಮೂಲಕ ಮತ್ತೊಂದು ಮೆಚ್ಚುಗೆ ಪಡೆದಿದೆ. ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪರಮೇನಹಳ್ಳಿಯ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಘಟಕಕ್ಕೂ ಉತ್ತಮ ಸುರಕ್ಷತಾ ಪುರಸ್ಕಾರ ಲಭಿಸಿದೆ.
ಈ ಸಾಧನೆಗೆ ಕಾರಣರಾದ ಎಲ್ಲಾ ಹಂತದ ಕಾರ್ಮಿಕರು, ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಗೆ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಶ್ರೀ ಆರ್.ವಿ. ಗುಮಾಸ್ತೆಯವರು ಅಭಿನಂದನೆ ಸಲ್ಲಿಸಿದರು. ಕಂಪನಿಯ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥರು ಹಾಗೂ ಕಾರ್ಯನಿರ್ವಾಹಕ ಉಪಾಧ್ಯಕ್ಷರಾದ ಡಾ. ಪಿ. ನಾರಾಯಣ ಅವರು, “ರಾಷ್ಟ್ರೀಯ ಸುರಕ್ಷತಾ ಮಂಡಳಿ ನೀಡಿದ ಈ ಪುರಸ್ಕಾರ ನಮ್ಮ ಪ್ರತಿಯೊಬ್ಬ ಉದ್ಯೋಗಿಯ ಪರಿಶ್ರಮಕ್ಕೆ ದೊರೆತ ಗೌರವ” ಎಂದು ಅಭಿಪ್ರಾಯಪಟ್ಟರು. ಸುರಕ್ಷತಾ ವಿಭಾಗದ ಮ್ಯಾನೇಜರ್ ಶ್ರೀ ಮುರಳಿಧರ್ ನಾಡಿಗೇರ್ ಅವರು, “ಸುರಕ್ಷತಾ ನೀತಿ-ನಿಯಮ ಪಾಲನೆ, ಸಾಧನ ಸಾಮಗ್ರಿಗಳ ಸರಿಯಾದ ಬಳಕೆ, ಸುರಕ್ಷತಾ ತರಬೇತಿ ಹಾಗೂ ಅಪಘಾತ ತಡೆ ಕ್ರಮಗಳ ಆಧಾರದ ಮೇಲೆ ಈ ಪ್ರಶಸ್ತಿ ದೊರೆತಿದೆ” ಎಂದು ಮಾಹಿತಿ ನೀಡಿದರು.
National Safety Council of India ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್, ಬೇವಿನಹಳ್ಳಿ ಘಟಕದ ಪರವಾಗಿ ಮಾನವ ಸಂಪನ್ಮೂಲ ಮತ್ತು ಆಡಳಿತ ವಿಭಾಗದ ಕಾರ್ಯನಿರ್ವಾಹಕ ಉಪಾಧ್ಯಕ್ಷರಾದ ಡಾ. ಪಿ. ನಾರಾಯಣ, ಎರಕ ವಿಭಾಗದ ಉಪಾಧ್ಯಕ್ಷರಾದ ಶ್ರೀ ವೀರಪ್ಪ ಕೋರಿ ಹಾಗೂ ಸುರಕ್ಷತಾ ವಿಭಾಗದ ಮ್ಯಾನೇಜರ್ ಶ್ರೀ ಎಂ.ಎಂ. ನಾಡಿಗೇರ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಸುರಕ್ಷತಾ ಮಂಡಳಿಯ ಮುಂಭೈ ಡೈರೆಕ್ಟರ್ ಜನರಲ್ ಡಾ. ಲಲಿತ್ ಘಭಾನೆ, ಜಿ.ಇ.ಬಿ.ಇ.ಎಲ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಶ್ರೀಮತಿ ಶೋಭಾ ನಾಗೇಶ್, ಕರ್ನಾಟಕ ರಾಜ್ಯ ಕಾರ್ಖಾನೆಗಳು ಮತ್ತು ಬಾಯ್ಲರ್‌ಗಳ ಕೈಗಾರಿಕಾ ಸುರಕ್ಷತೆ ಹಾಗೂ ಸ್ವಾಸ್ಥ್ಯ ಇಲಾಖೆಯ ನಿರ್ದೇಶಕರು ಶ್ರೀ ಕೆ. ಶ್ರೀನಿವಾಸ್ ಹಾಗೂ ರಾಷ್ಟ್ರೀಯ ಸುರಕ್ಷತಾ ಮಂಡಳಿ ಕರ್ನಾಟಕ ಚಾಪ್ಟರ್ ಕಾರ್ಯದರ್ಶಿ ಶ್ರೀ ಪಿ.ಸಿ. ವೆಂಕಟೇಶ್ವರಲು ಉಪಸ್ಥಿತರಿದ್ದರು.
ಪರಮೇನಹಳ್ಳಿ ಘಟಕದ ಪರವಾಗಿ ಬೀಡುಕಬ್ಬಿಣ ವಿಭಾಗದ ಜನರಲ್ ಮ್ಯಾನೇಜರ್ ಶ್ರೀ ಸುಶಾಂತ್ ಜಾದವ್ ಮತ್ತು ಸುರಕ್ಷತಾ ವಿಭಾಗದ ಡೆಪ್ಯುಟಿ ಮ್ಯಾನೇಜರ್ ಶ್ರೀ ಆಕಾಶ್ ಪ್ರಶಸ್ತಿಯನ್ನು ಸ್ವೀಕರಿಸಿದರು.

ವರದಿ: ಮುರುಳೀಧರ್ ನಾಡಿಗೇರ್

S.N.Chennabasappa ಶಾಂತಿನಗರ ಬಡಾವಣೆಯ ದೇವಾಲಯ ಧಾರ್ಮಿಕ ಸಾಂಸ್ಕೃತಿಕ, ಏಕತೆಯ ಸಂಕೇತವಾಗಲಿ : ಎಸ್.ಎನ್. ಚೆನ್ನಬಸಪ್ಪ

0

S.N.Chennabasappa ಹಲವು ದಿನಗಳ ಹಿಂದೆ ಕಿಡಿಗೇಡಿಗಳ ಕೃತ್ಯದಿಂದ ಶಿವಮೊಗ್ಗ ನಗರದ ಶಾಂತಿನಗರದ ಬಂಗಾರಪ್ಪ ಬಡಾವಣೆಯಲ್ಲಿದ್ದ ದೇವರ ವಿಗ್ರಹಗಳು ಹಾನಿಗೊಳಗಾಗಿದ್ದವು. ಸ್ಥಳೀಯರ ಧೃಡ ಸಂಕಲ್ಪ ಮತ್ತು ಹಿಂದೂ ಸಮಾಜದ ಏಕತೆಯ ಶಕ್ತಿಯಿಂದ ದೇವಸ್ಥಾನವನ್ನು ನೂತನವಾಗಿ ಪುನರ್ ನಿರ್ಮಾಣಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ದೇವಸ್ಥಾನದ ಹೊಸಲು ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು. ದೇವಾಲಯದ ನಿರ್ಮಾಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡು, ಇದು ಭಕ್ತರ ಆತ್ಮೀಯ ಶ್ರದ್ಧಾ ಕೇಂದ್ರವಾಗಿ ಹಾಗೂ ಸಮಾಜದ ಧಾರ್ಮಿಕ, ಸಾಂಸ್ಕೃತಿಕ ಏಕತೆಯ ಸಂಕೇತವಾಗಿ ರೂಪಾಂತರಗೊಳ್ಳಲೆಂದು ಹಾರೈಸಿದರು.

S.N.Chennabasappa ಈ ಸಂದರ್ಭದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀ ಬಸವರಾಜ್, ದೇವಾಲಯ ಸಮಿತಿ ಸದಸ್ಯರು, ಸ್ಥಳೀಯ ಪ್ರಮುಖರು ಹಾಗೂ ಅನೇಕ ಭಕ್ತಾದಿಗಳು ಉಪಸ್ಥಿತರಿದ್ದ

International Day of Democracy ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಶಿವಮೊಗ್ಗದಿಂದ ವಿಧಾನಸೌಧದವರೆಗೆ ಬೃಹತ್ ಬೈಕ್ ರ್ಯಾಲಿಗೆ ಚಾಲನೆ

0

International Day of Democracy ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ನಗರಾಭಿವೃದ್ಧಿ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ಪೊಲೀಸ್ ಇಲಾಖೆ ಶಿವಮೊಗ್ಗ ಮತ್ತು ಶಿವಮೊಗ್ಗ ಬೈಕ್ ಕ್ಲಬ್ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ
ಏರ್ಪಡಿಸಲಾಗಿದ್ದ ರಾಜ್ಯ ಮಟ್ಟದ ಬೈಕ್ ರ್ಯಾಲಿಗೆ ಅಪರ ಜಿಲ್ಲಾಧಿಕಾರಿಗಳಾದ ಅಭಿಷೇಕ್. ವಿ. ರವರು ಭಾನುವಾರ ಬೆಳಿಗ್ಗೆ ಜಿಲ್ಲಾಡಳಿತ ಕಚೇರಿ ಮುಂಭಾಗದಲ್ಲಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಬೈಕ್ ರ್ಯಾಲಿಯು ಶಿವಮೊಗ್ಗದಿಂದ ಬೆಂಗಳೂರಿನವರೆಗೆ ಹೋಗುತ್ತಿದ್ದು ಬೈಕ್ ಸವಾರರಿಗೆ ಅವರು ಶುಭ ಕೋರಿ, ಇದೇ ಸಂದರ್ಭದಲ್ಲಿ ಸಂವಿಧಾನ ಹಾಗೂ ಮತದಾನದ ಮಹತ್ವವನ್ನು ತಿಳಿಸಿದರು.
International Day of Democracy ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಲ್ಲೇಶಪ್ಪ ಡಿ, ಪತ್ರಾಂಕಿತ ವ್ಯವಸ್ಥಾಪಕರಾದ ಸೋಮಣ್ಣ, ಸಹಾಯಕ ನಿರ್ದೇಶಕರುಗಳಾದ ಸುರೇಶ್ ಕೆ.ಎನ್. ,ಅನಿಲ್, ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷರಾದ ಕೊಟ್ರೇಶ್, ಸುರೇಶ ,ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಬೈಕ್ ಕ್ಲಬ್ಬಿನ ಸಂಸ್ಥಾಪಕ ಅಧ್ಯಕ್ಷರಾದ. ಆ.ನಾ. ವಿಜಯೇಂದ್ರ ರಾವ್.ಮತ್ತು ಯೂಥ್ ಹಾಸ್ಟೆಲ್ ಹಾಗೂ ರೋಟರಿ ಸದಸ್ಯರು ಉಪಸ್ಥಿತರಿದ್ದರು.

Chamber Of Commerce Shivamogga ಸೆಪ್ಟೆಂಬರ್ 16 ಕ್ಕೆ ಜಿಎಸ್ ಟಿ 2.00 -ಎರಡನೇ ಹಂತದ ಸರಕು ಮತ್ತು ಸೇವಾ ತೆರಿಗೆ ಸುಧಾರಣೆಗಳ ಕುರಿತು ಉಪನ್ಯಾಸ

0

Chamber Of Commerce Shivamogga ಶಿವಮೊಗ್ಗ ನಗರದ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಪೇರೋ ಕಾಸ್ಟ್ ಸಭಾಂಗಣದಲ್ಲಿ ಸೆಪ್ಟೆಂಬರ್ 16 ರಂದು ಬೆಳಗ್ಗೆ 10.00 ಕ್ಕೆ “ಸರಕು ಮತ್ತು ಸೇವಾ ತೆರಿಗೆ ಮಂಡಳಿಯ 56 ನೇ ಸಭೆಯಿಂದ ಅನುಮೋದನೆ
ಗೊಂಡ ಜಿಎಸ್ ಟಿ 2.00 – ಎರಡನೇ ಹಂತದ ಸರಕು ಮತ್ತು ಸೇವಾ ತೆರಿಗೆ ಸುಧಾರಣೆಗಳಿಂದ ವಾಣಿಜ್ಯ ಮತ್ತು ಕೈಗಾರಿಕ. ವ್ಯಾಪಾರ, ಸಣ್ಣ ಕೈಗಾರಿಕೆ, ಚಿಲ್ಲರೆ ಮಾರುಕಟ್ಟೆ ಕ್ಷೇತ್ರಗಳ ಮೇಲೆ ಉಂಟಾದ ಪರಿಣಾಮಗಳ ಬಗ್ಗೆ ವಿಶ್ಲೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಸರಕು ಮತ್ತು ಸೇವಾ ತೆರಿಗೆಯ ಎರಡು ಹಂತದ ತೆರಿಗೆ ರಚನೆಯ ಮರು ವರ್ಗಿಕರಣದ ಪ್ರಯೋಗಾತ್ಮಕ ವಿಶ್ಲೇಷಣೆ ಎರಡನೇ ಹಂತದ ತೆರಿಗೆ ಸುಧಾರಣೆಯ ಅನುಸರಣೆ ಪ್ರಕ್ರಿಯೆಗಳ ಕಾರ್ಯವಿಧಾನ, ಜಿ ಎಸ್ ಟಿ ಕಾಯ್ದೆಯಲ್ಲಿ ಇತ್ತೀಚಿನ ತಿದ್ದುಪಡಿಗಳ ಅಳವಡಿಕೆಯಿಂದ ಬಗ್ಗೆ ವಿಶ್ಲೇಷಣೆ, ಉಂಟಾಗುವ ಸಂಭಾವ್ಯ ಪರಿಣಾಮಗಳು ಬಗ್ಗೆ ಚರ್ಚಿಸಲಾಗುವುದು. ಭೋಜನ : ಮಧ್ಯಾಹ್ನ 1.30 ರಿಂದ 2.00 , ನಿಮ್ಮ ಎಲ್ಲಾ ಪ್ರಶ್ನೆ ಗಳಿಗೆ ಸೆಮಿನಾರ್ ನ ಕೊನೆಗೆ ಮಧ್ಯಾಹ್ನದ ಅವಧಿಯಲ್ಲಿ ಪರಿಹಾರಕ್ಕೆ ಪ್ರಯತ್ನ ಖ್ಯಾತ CA ಜತಿನ್ ಕ್ರಿಸ್ಟೋಪರ್ ಸೆಮಿನಾರ್ ನಡೆಸಿ ಕೊಡಲಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಸರಕು ಮತ್ತು ಸೇವಾ ತೆರಿಗೆ ಹಿರಿಯ ಅಧಿಕಾರಿಗಳು ಉಪಸ್ಥಿತರಿರುವರು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಅಧ್ಯಕ್ಷತೆ ವಹಿಸುವರು. Chamber Of Commerce Shivamogga ಸೆಮಿನಾರ್ ನ ಈ ಉಪಯುಕ್ತ ಕಾರ್ಯಕ್ರಮಕ್ಕೆ ತಪ್ಪದೆ ಆದಷ್ಟು ಬೇಗ ತಮ್ಮ ಹೆಸರನ್ನು 7019663300 ಸಂಖ್ಯೆಯ ಮೊಬೈಲ್ ಗೆ ಕರೆ ಮಾಡುವುದರ ಮೂಲಕ ಉಚಿತವಾಗಿ ನೋಂದಣಿ ಮಾಡಿಕೊಂಡು ಸಕ್ರಿಯವಾಗಿ ಭಾಗವಹಿಸಲು ಈ ಮೂಲಕ ತಮ್ಮಲ್ಲಿ ಕೋರಲಾಗಿದೆ

S.N.Chennabasappa ಶಾಸಕ ಚೆನ್ನಿ ಅವರಿಂದ ರಸ್ತೆ ಅಭಿವೃದ್ಧಿ ಕಾಮಗಾರಿ ವೀಕ್ಷಣೆ

0

S.N.Chennabasappa ಹೊನ್ನಾಳಿ ರಸ್ತೆಯ ಸಮೀಪದ ಮೇಲ್ಸೇತುವೆ ಹತ್ತಿರ ಆರಂಭಗೊಂಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯ ಸ್ಥಳಕ್ಕೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

S.N.Chennabasappa ಸಂಚಾರ ಸುಗಮವಾಗಲು ಮತ್ತು ನಾಗರಿಕರಿಗೆ ಉತ್ತಮ ಮೂಲಸೌಕರ್ಯ ಒದಗಿಸಲು ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿಯ ಗುಣಮಟ್ಟ, ಗುರಿತೆಯಂತೆ ಪೂರ್ಣಗೊಳ್ಳುವ ಸಮಯ ಹಾಗೂ ಅಗತ್ಯ ಸೌಲಭ್ಯಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.

Shimoga Housing Co-operative Society ಶಿವಮೊಗ್ಗ ಹೌಸಿಂಗ್ ಸೊಸೈಟಿಯಿಂದ ಪ್ರತಿಭಾ ಪುರಸ್ಕಾರ

0

Shimoga Housing Co-operative Society ಪ್ರತಿಷ್ಠಿತ ಶಿವಮೊಗ್ಗ ಹೌಸಿಂಗ್ ಕೋ – ಆಪರೇಟಿವ್ ಸೊಸೈಟಿ ವತಿಯಿಂದ ರವೀಂದ್ರ ನಗರದ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯ ನಿರ್ಮಿತ ಬಲಮುರಿ ಶ್ರೀ ಗಣಪತಿ ದೇವಾಲಯದ ಸಭಾಂಗಣದಲ್ಲಿ ಸೊಸೈಟಿಯ ಗೌರವಾನ್ವಿತ ಸದಸ್ಯರುಗಳ ಪ್ರತಿಭಾವಂತ ಮಕ್ಕಳಿಗೆ “ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಸೊಸೈಟಿಯ ಅಧ್ಯಕ್ಷರು , ಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷರಾದ ಎಸ್ ಕೆ ಮರಿಯಪ್ಪನವರು ವಹಿಸಿದ್ದರು.

Shimoga Housing Co-operative Society ಕಾರ್ಯಕ್ರಮದಲ್ಲಿ ಸೊಸೈಟಿಯ ಉಪಾಧ್ಯಕ್ಷರಾದ ಸಿ ಹೊನ್ನಪ್ಪ, ಖಜಾಂಚಿ ಕೆ ರಂಗನಾಥ್, ಹಿರಿಯ ನಿರ್ದೇಶಕರಾದ ಉಮಾಶಂಕರ್ ಉಪಾಧ್ಯ, ಎಸ್ ಪಿ ಶೇಷಾದ್ರಿ, ಎಂ ಪ್ರವೀಣ್ ಕುಮಾರ್, ಕೆ ಜಿ ರಾಘವೇಂದ್ರ, ಎಸ್ ಎಂ ಕುಮಾರ್ ,ನಟರಾಜ್ ಶಾಸ್ತ್ರಿ, ಶ್ರೀನಿವಾಸ್ ಕರಿಯಣ್ಣ, ನಿರ್ಮಲ ಕಾಶಿ, ವೇದಾವತಿ ಕೆ ಎಸ್, ಸೊಸೈಟಿ ಸಿಬ್ಬಂದಿಗಳು ಹಾಗೂ ಸೊಸೈಟಿಯ ಸದಸ್ಯರ ಪ್ರತಿಭಾವಂತ ಮಕ್ಕಳು ಉಪಸ್ಥಿತರಿದ್ದರು.