Wednesday, February 18, 2026
Wednesday, February 18, 2026
Home Blog Page 169

Department of Health and Family Welfare ಎಲ್ಲರೂ ಕಾಲಕಾಲಕ್ಕೆ ಸರಿಯಾಗಿ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳ ಬೇಕು-ಎಂ.ಬಿ.ಲಕ್ಷ್ಮಣಗೌಡ

0

Department of Health and Family Welfare ಕಣ್ಣಿನ ಆರೋಗ್ಯದ ಬಗ್ಗೆ ಪ್ರತಿಯೊಬ್ಬರೂ ಎಚ್ಚರ ವಹಿಸಬೇಕು. ಕಾಲಕಾಲಕ್ಕೆ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ವಲಯ ಹನ್ನೊಂದರ ಸಹಾಯಕ ಗವರ್ನರ್ ಲಕ್ಷ್ಮಣಗೌಡ ಎಂ.ಬಿ. ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಏರ್ಪಡಿಸಿದ್ದ ಅಂಧತ್ವ ಮುಕ್ತ ಶಿವಮೊಗ್ಗ

ಕಾರ್ಯಕ್ರಮದಲ್ಲಿ ಮಾತನಾಡಿ, ನೇತ್ರ ಶಿಬಿರದಿಂದ ಕಣ್ಣಿನ ಆರೋಗ್ಯದ ಬಗ್ಗೆ ಜಾಗೃತಿ ಮೂಡುತ್ತದೆ ಮತ್ತು ನಿಯಮಿತ ತಪಾಸಣೆಯಿಂದ ಕಣ್ಣಿನ ಆರೋಗ್ಯದ ಬಗ್ಗೆ ಅರಿವು ಮೂಡುತ್ತದೆ ಎಂದು ತಿಳಿಸಿದರು.

Department of Health and Family Welfare ರೋಟರಿ ವಲಯ ಹನ್ನೊಂದರ ವಲಯ ಸೇನಾನಿ ಕಿರಣ್ ಕುಮಾರ್ ಜಿ (ಎಸ್ ಬಿ ಎಸ್ ಬೋರ್ವೆಲ್ಸ್ ) ಅವರು ಉಚಿತವಾಗಿ ನೂರು ಕನ್ನಡಕಗಳನ್ನು ನೀಡಿದರು. ಈ ಸಂದರ್ಭದಲ್ಲಿ ವಲಯ ಸೇನಾನಿ ಕಿರಣ್ ಕುಮಾರ್ ಜಿ ಮಾತನಾಡಿ, ಹುಟ್ಟಿನಿಂದಲೇ ದೃಷ್ಟಿ ಕಳೆದುಕೊಂಡವರು ಪ್ರಪಂಚವನ್ನು ನೋಡುವ ಭಾಗ್ಯದಿಂದ ವಂಚಿತರಾಗಿರುತ್ತಾರೆ. ಆದರೆ ಬಹಳಷ್ಟು ಜನ ತಮ್ಮ ನಿರ್ಲಕ್ಷದಿಂದಲೇ ದೃಷ್ಟಿ ಕಳೆದುಕೊಂಡವರು ಇದ್ದಾರೆ. ದೃಷ್ಟಿ ಇದ್ದವರು ಕಣ್ಣಿಗೆ ರಕ್ಷಣೆಗೆ ಒತ್ತು ಕೊಡುವುದು ಅವಶ್ಯ. ಸರ್ಕಾರದಿಂದ ಪ್ರಾರಂಭಿಸಿರುವ ಯೋಜನೆಯನ್ನು ಹೆಚ್ಚು ಹೆಚ್ಚು ಜನ ಉಪಯೋಗಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ನಿಯೋಜಕ ಡಾ. ಕಿರಣ್ ಕುಮಾರ್ ಕೆ ಹಾಗೂ ಡಾ. ಗುಡದಪ್ಪ ಕಸುಬಿ, ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಬಸವರಾಜ್ ಬಿ, ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಕಿಶೋರ್ ಕುಮಾರ್, ಮಾಜಿ ಸಹಾಯಕ ಗವರ್ನರ್ ರವಿ ಕೋಟೋಜಿ, ಧರ್ಮೇಂದ್ರ ಸಿಂಗ್, ಧನಂಜಯ್, ಮೋಹನ್, ಸಂತೋಷ್ ಬಿಎ, ಅರುಣ್ ದೀಕ್ಷಿತ್, ನಟರಾಜ್, ಗೀತಾ ಜಗದೀಶ್, ರಾಜೇಶ್ವರಿ ಬಸವರಾಜ್, ಜ್ಯೋತಿ ಶ್ರೀ ರಾಮ್, ಈಶ್ವರ್ ಬಿ ವಿ ಹಾಗೂ ಕ್ಲಬ್‌ನ ಎಲ್ಲ ಸದಸ್ಯರು ಭಾಗವಹಿಸಿದ್ದರು.

Gandhi Endowment Award ಡಾ.ಹೆಚ್.ಎ.ಸುರೇಶ್ ಅವರಿಗೆ ಎ.ಆರ್.ನಾರಾಯಣ ಘಟ್ಟ & ಸರೋಜಮ್ಮ ಗಾಂಧಿ ದತ್ತಿ ಪ್ರಶಸ್ತಿ

0

Gandhi Endowment Award ಸರ್ವೋದಯ ಮಂಡಲದ ರಾಜ್ಯಾಧ್ಯಕ್ಷರಾದ dr. ಹೆಚ್. ಎಸ್ ಸುರೇಶ್ ಅವರಿಗೆ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತು ಈ ಬಾರಿಯ ಏ. ಆರ್ ನಾರಾಯಣ ಘಟ್ಟ ಮತ್ತು ಸರೋಜಮ್ಮ ಗಾಂಧಿ ದತ್ತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಹೆಚ್ ಎಸ್ ಸುರೇಶ್ ಅವರು ಹಿರಿಯ ಗಾಂಧಿವಾದಿಗಳಾಗಿದ್ದು, ಮಹಾತ್ಮ ಗಾಂಧಿಯವರ ಆದರ್ಶ ಮತ್ತು ತತ್ವಗಳನ್ನು ಸಾರ್ವಜನಿಕರಲ್ಲಿ ಮತ್ತು ಮಕ್ಕಳಲ್ಲಿ ಅಳವಡಿಸಿಕೊಳ್ಳಲು ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಸರ್ವೋದಯ ಮಂಡಳಿಗಳನ್ನು ಸ್ಥಾಪಿಸಿ, ಜಾಗೃತಿ ಮೂಡಿಸುತ್ತಿದ್ದಾರೆ.
Gandhi Endowment Award ಇವರ ಅನುಪಮ ಸೇವೆಯನ್ನು ಗುರುತಿಸಿ, ಕ.ಸಾ. ಪ. ಈ ಪ್ರಶಸ್ತಿಯನ್ನು ಘೋಷಿಸಿದೆ.
ಇವರನ್ನು ಶಿವಮೊಗ್ಗ ಜಿಲ್ಲಾ ಸರ್ವೋದಯ ಮಂಡಳ ಅಭಿನಂದಿಸುವ ನಿರ್ಣಯ ತೆಗೆದುಕೊಂಡಿದೆ ಎಂದು ಅಧ್ಯಕ್ಷ ಮನೋಹರ್ ಮತ್ತು ಕಾರ್ಯದರ್ಶಿ. ಜಿ ವಿಜಯ್ ಕುಮಾರ್ ತಿಳಿಸಿದ್ದಾರೆ.

Bharat Scouts and Guides Shivamogga ರಾಜ್ಯ ಪುರಸ್ಕಾರ ಪಡೆದ ಮಕ್ಕಳು ರಾಷ್ಡ್ರಪತಿ ಪುರಸ್ಕಾರ ಪಡೆಯುವಂತೆ ಪ್ರೋತ್ಸಾಹಿಸಬೇಕು- ವೀರೇಶಪ್ಪ

0

Bharat Scouts and Guides Shivamogga ಶಿವಮೊಗ್ಗ ದ ಸಿಹಿಮೊಗ್ಗೆ ಓಪನ್ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಗೆ ,ಗೌರವ ಸನ್ಮಾನ್ಯ ರಾಜ್ಯಪಾಲರಿಂದ ಪಡೆದ ರಾಜ್ಯ ಪುರಸ್ಕಾರ ಪ್ರಶಸ್ತಿ ಪತ್ರಗಳನ್ನು ನೀಡುವ ಕಾರ್ಯಕ್ರಮವನ್ನು ಲೀಡರ್ ಟ್ರೈನರ್ ಶ್ರೀಮತಿ ಕಾತ್ಯಾಯಿನಿ ಸಿ.ಎಸ್.
ಆಯೋಜಿಸಿದ್ದರು.
ಮುಖ್ಯ ಅತಿಥಿ ಗಳಾಗಿ
ಶ್ರೀ ವೀರೇಶಪ್ಪ ಜಿಲ್ಲಾ
ಸಹ ಕಾರ್ಯದರ್ಶಿ ಮತ್ತು
ಶ್ರೀಮತಿ ಮೀನಾಕ್ಷಿಮ್ಮ ಫ್ಲಾಕ್ ಲೀಡರ್ ಟ್ರೈನರ್ ಆಗಮಿಸಿದ್ದರು.ಶ್ರೀ ವೀರೇಶಪ್ಪ ನವರು ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ ಮಕ್ಕಳನ್ನು ಅಭಿನಂದಿಸಿ ಮಾತನಾಡುತ್ತಾ, ಮುಂದಿನ ಹಂತವಾದ ರಾಷ್ಟ್ರಪತಿ ಪುರಸ್ಕಾರ ಪ್ರಶಸ್ತಿ ಪತ್ರ ಪಡೆಯಲು ಅಗತ್ಯ ಮಾರ್ಗದರ್ಶನ ಮತ್ತು ತರಬೇತಿ ಪಡೆಯಬೇಕು.
ಸ್ಕೌಟಿಂಗ್ ಮಕ್ಕಳಿಗೆ ಸ್ವಯಂಶಿಸ್ತು, ಸಂಯಮ,ಸೇವಾ ಮನೋಭಾವನೆ ,ಜೀವನದ ಮೌಲ್ಯಗಳನ್ನು ಕಲಿಸುತ್ತದೆ ಎಂದು, ತಮ್ಮ ಸ್ಕೌಟಿಂಗ್ ಜೀವನದ ಅನುಭವಗಳನ್ನು ಹಂಚಿಕೊಂಡರು.
ಶ್ರೀಮತಿ ಮೀನಾಕ್ಷಿಮ್ಮ ನವರು ಕಬ್ಸ್ ಮತ್ತು
Bharat Scouts and Guides Shivamogga ಬುಲ್ ಬುಲ್ಸ್ ಮಕ್ಕಳಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ ಶುಭಕೋರಿ ಮಾತನಾಡಿ, ಸಿಹಿಮೊಗ್ಗೆ ಓಪನ್ ಗ್ರೂಪ್ ಕಳೆದ 25 ವರ್ಷಗಳಿಂದ ಮಕ್ಕಳಿಗೆ ಸ್ಕೌಟಿಂಗ್ ತರಬೇತಿ ನೀಡುತ್ತಾ ಬಂದಿದೆ.ಓಪನ್ ಗ್ರೂಪ್ ಹುಟ್ಟುಹಾಕಿ ಬೆಳೆಸುವುದು ಸುಲಭದ ಕೆಲಸವಲ್ಲ. ತರಬೇತುದಾರರು ಇಲ್ಲದ ಶಾಲೆಯ ಸ್ಕೌಟಿಂಗ್ ನಲ್ಲಿ ಆಸಕ್ತಿ ಇರುವ ಮಕ್ಕಳಿಗೆ ಇಲ್ಲಿ ತರಬೇತಿ ನೀಡುತ್ತಾರೆ .
ಒಂದೊಂದು ಮಗುವೂ ಒಬ್ಬೊಬ್ಬರನ್ನು ಸ್ಕೌಟಿಂಗ್ ನಲ್ಲಿ ಸೇರಿಸುವುದರ ಮೂಲಕ ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದರು.ಸಮಾಜಮುಖಿಯಾಗಿ ಸ್ಕೌಟಿಂಗ್ ಸೇವೆ ಮಾಡುತ್ತಿರುವ ಕಾತ್ಯಾಯಿನಿ ಯವರ ಕಾರ್ಯವೈಖರಿಯನ್ನು ಶ್ಲಾಘಿಸಿದರು. ಅತಿಥಿಗಳಿಗೆ ಗೌರವಿಸಿ ಸನ್ಮಾನನಿಸಲಾಯಿತು.ಈ ಕಾರ್ಯಕ್ರಮ ದಲ್ಲಿ ಪೋಷಕರು ಮತ್ತು ಮಕ್ಕಳು ಭಾಗವಹಿಸಿದ್ದರು.

Kannada Sahitya Parishat ವಿದ್ಯಾರ್ಥಿಯ ಜೀವನಕ್ಕೆ ಒಂದು ಗುರಿ‌‌ ಮತ್ತು ಗುರು ಮುಖ್ಯ- ವೈ.ಎಸ್.ವಿ.ದತ್ತ

0

Kannada Sahitya Parishat ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಾಧನೆ ಮಾಡಿದಾಗ ಶಿಕ್ಷಕರ ಬದುಕು ಸಾರ್ಥಕವೆನಿಸುತ್ತದೆ. ತಾಯಿ ಜನ್ಮ ಕೊಟ್ಟರೆ, ಶಿಕ್ಷಕರು ಜೀವನವನ್ನು ನೀಡುತ್ತಾರೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನಕ್ಕೆ ಒಂದು ಗುರಿ ಮತ್ತು ಗುರು ಅಗತ್ಯ ಎಂದು ಕಡೂರಿನ ಮಾಜಿ ಶಾಸಕ ವೈ.ಎಸ್.ವಿ. ದತ್ತ ಹೇಳಿದರು.
ಪಟ್ಟಣದ ರಂಗನಾಥ ಕನ್ವೆನ್ಷನ್ ಹಾಲ್‌ನಲ್ಲಿ ಶುಕ್ರವಾರ ಸಂಜೆ ಕನ್ನಡ ಸಾಹಿತ್ಯ ಸಾಂಸ್ಕöÈತಿಕ ವೇದಿಕೆ ವತಿಯಿಂದ ಹಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕöÈತರು ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಸ್ತುತ ಗ್ರಾಮೀಣ ಪ್ರದೇಶದಲ್ಲಿ ಅನೇಕ ಸರ್ಕಾರಿ ಶಾಲೆಗಳು ಅವನತಿ ಕಾಣುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ಅನೇಕ ಸೌಲಭ್ಯಗಳು ಇದ್ದರೂ ಸಹ ಮಕ್ಕಳ ದಾಖಲಾತಿ ಹೆಚ್ಚಿಸುವುದು ಸಾಹಸದ ಕೆಲಸವಾಗಿದೆ. ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲೀಷ್ ಕಲಿಕೆ ಅನಿವಾರ್ಯವಾಗಿದೆ. ಅದರೆ ಜ್ಞಾನಕ್ಕಾಗಿ ಇಂಗ್ಲೀಷ್ ಬಳಸಿ ಬದುಕು ಕಟ್ಟಿಕೊಳ್ಳಲು ಕನ್ನಡ ಕಲಿಕೆ ಅಗತ್ಯ. ಕನ್ನಡದ ಶಿಕ್ಷಣದಿಂದ ಎಲ್ಲಾ ಕ್ಷೇತ್ರದಲ್ಲೂ ಪಾರಂಗತರಾಗಲು ಸಾಧ್ಯ ಎಂದರು.
Kannada Sahitya Parishat ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವ ಜತೆಗೆ ಸಂಸ್ಕಾರ ಕಲಿಸಿ ಸಮಾಜಮುಖಿಯಾಗಿ ಪರಿವರ್ತಿಸಿ ಮುಖ್ಯ ವೇದಿಕೆಗೆ ತರುವ ಗುರುತರವಾದ ಹೊಣೆ ಶಿಕ್ಷಕರದ್ದಾಗಿದೆ ಎಂದ ಅವರು, ರಾಜಕೀಯ ಕ್ಷೇತ್ರದ ವಿವಿಧ ಆಯಾಮಗಳನ್ನು ಕಂಡಿದ್ದೇನೆ. ಪ್ರಸ್ತುತ ದಿನಮಾನಗಳಲ್ಲಿ ರಾಜಕೀಯ ಮೌಲ್ಯಗಳು ಬದಲಾಗಿವೆ. ನಾಡಹಬ್ಬ ದಸರಾ ಉದ್ಘಾಟನೆಯ ವಿಷಯದಲ್ಲಿ ರಾಜಕೀಯ ಮಾಡುವುದು ಸಲ್ಲದು. ರಾಷ್ಟçಕವಿ ಕುವೆಂಪು ಅವರಿಗೆ ಕನ್ನಡ ಕಲಿಕಿಗೆ ಉತ್ತೇಜನ ನೀಡಿದವರೂ ಒಬ್ಬ ಅಲ್ಪ ಸಂಖ್ಯಾತ ವ್ಯಕ್ತಿ. ಕೃಷ್ಣರಾಜ ಒಡೆಯರ್ ಕೂಡ ಅಂದಿನ ದಿವಾನರಾದ ಮಿರ್ಜಾ ಇಸ್ಮಾಯಿಲ್ ಅವರನ್ನು ಅಂಬಾರಿ ಮೇಲೆ ಕೂರಿಸಿಕೊಂಡಿದ್ದರು ಎಂದರು.
ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಸಾಂಸ್ಕöÈತಿಕ ವೇದಿಕೆ ಅಧ್ಯಕ್ಷ ಶಂಕರ್ ಶೇಟ್ ಪ್ರಾಸ್ತಾವಿಕ ಮಾತನಾಡಿ, ನಾಡಿನ ಸತ್ಪçಜೆಗಳನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವವಾಗಿದೆ. ವಿದ್ಯಾರ್ಥಿಗಳು ತಂದೆ-ತಾಯಿ ಹಾಗೂ ಗುರುಗಳನ್ನು ಗೌರವಯುತವಾಗಿ ಕಾಣಬೇಕು. ವೇದಿಕೆಯ ವತಿಯಿಂದ ಅನೇಕ ಸಾಮಾಜಿಕ ಹಾಗೂ ಜನಪರವಾದ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದ್ದು, ಉತ್ತಮ ಶಿಕ್ಷಕರನ್ನು ಗೌರವಿಸುತ್ತಿರುವುದು ಸಂತಸ ಎನಿಸುತ್ತಿದೆ. ಈಗಾಗಲೇ ಸಮಿತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸುಮಾರು ಒಂದು ಸಾವಿರ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗಿದೆ ಎಂದರು.
ದುಗ್ಲಿ ಮಠದ ಶ್ರೀ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವಿಶೇಷ ಆಹ್ವಾನಿತರಾಗಿ ರಾಷ್ಟçಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕöÈತ ವಂದನಾ ರೈ ಕಾರ್ಕಳ, ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ಪುಷ್ಪಾ, ಸಮಾಜ ಸೇವಕ ಕಾರ್ತಿಕ್ ಸಾಹುಕಾರ್ ಆನವಟ್ಟಿ, ನಲಿಕಲಿ ಕ್ರಿಯಾಶೀಲ ತಾರೆಯರು ಟ್ರಸ್ಟ್ ಅಧ್ಯಕ್ಷೆ ಫೌಜಿಯಾ ಸರಚತ್, ಶ್ರೀಧರ್ ಇಂಟರ್ ನ್ಯಾಷನಲ್ ಸ್ಕೂಲ್ ಪ್ರಾಂಶುಪಾಲ ಗುತ್ತೇದಾರ್ ಶೇಕ್ ನವಾಬ್ ಇತರರಿದ್ದರು.

೧೩ ಸೊರಬ ೦೧: ಸೊರಬ ಪಟ್ಟಣದ ರಂಗನಾಥ ಕನ್ವೆನ್ಷನ್ ಹಾಲ್‌ನಲ್ಲಿ ಶುಕ್ರವಾರ ಸಂಜೆ ಕನ್ನಡ ಸಾಹಿತ್ಯ ಸಾಂಸ್ಕöÈತಿಕ ವೇದಿಕೆ ವತಿಯಿಂದ ಹಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕöÈತರು ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಕಡೂರಿನ ಮಾಜಿ ಶಾಸಕ ವೈ.ಎಸ್.ವಿ. ದತ್ತ ಉದ್ಘಾಟಿಸಿದರು.

Karate training ಕರಾಟೆ ತರಬೇತಿ ನೀಡುವ ಸಂಸ್ಥೆ/ ತರಬೇತಿದಾರರಿಂದ ಅರ್ಜಿ ಆಹ್ವಾನ

0

Karate training ಶಿವಮೊಗ್ಗ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯುವ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಅಲ್ಪಸಂಖ್ಯಾತರ ವಸತಿ ಶಾಲೆ/ಕಾಲೇಜುಗಳಲ್ಲಿ 6,7,8,9 ಮತ್ತು 11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ “ಸ್ವಯಂ ರಕ್ಷಣಾ ಕಲೆ – ಕರಾಟೆ” ತರಬೇತಿಯನ್ನು ನೀಡಲು ಅರ್ಹ ಸಂಸ್ಥೆ/ ನುರಿತ ಮಹಿಳಾ ತರಬೇತುದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ನಿಗದಿತ ಅರ್ಜಿ ನಮುನೆಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಯೊಂದಿಗೆ ಸೆ.20 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Cyber crime Police Station ಶಿವಮೊಗ್ಗ ಸೈಬರ್ ಕ್ರೈಂವಿಭಾಗದಲ್ಲಿ ಕಳೆದ 8 ತಿಂಗಳಲ್ಲಿ ₹9 ಕೋಟಿಗೂ ಮೊತ್ತದ ವಂಚನೆ ಪ್ರಕರಣ ದಾಖಲು

0

Cyber crime Police Station ಶಿವಮೊಗ್ಗದಾದ್ಯಂತ ಸೈಬರ್ ಅಪರಾಧಗಳು ಹೆಚ್ಚುತ್ತಿದ್ದು, ಕಳೆದ 8 ತಿಂಗಳಲ್ಲಿ 9 ಕೋಟಿಗಿಂತ ಅಧಿಕ ಹಣವನ್ನು ಕಳೆದುಕೊಂಡ 86 ಪ್ರಕರಣಗಳನ್ನು ತನಿಖೆ ಮಾಡುತ್ತಿದ್ದೇವೆ. ಆದರೆ ಬಹುತೇಕ ದೂರು ನೋಂದಣಿ ವಿಳಂಬದಿಂದಾಗಿ ರೂ. ೫೦ ಲಕ್ಷಗಳನ್ನು ಮಾತ್ರ ರಿಕವರಿ ಮಾಡುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ತಿಳಿಸಿದರು.
ಅವರು ಬಜಾಜ್ ಫೈನಾನ್ಸ್ ಲಿಮಿಟೆಡ್ ವತಿಯಿಂದ ಸೂರ್ಯ ಕಂಫರ್ಟ್‌ನಲ್ಲಿ ಆಯೋಜಿಸಲಾಗಿದ್ದ ’ನಾಕೌಟ್ ಡಿಜಿಟಲ್ ಫ್ರಾಡ್ ಸೈಬರ್ ವಂಚನೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, “ಕಳೆದ ವರ್ಷ144 ಪ್ರಕರಣಗಳು ದಾಖಲಾಗಿದ್ದು, ಜನರು 11 ಕೋಟಿಗೂ ಹೆಚ್ಚು ಹಣ ಕಳೆದುಕೊಂಡಿದ್ದಾರೆ. ಕೇವಲ 2 ಕೋಟಿ ಮೊತ್ತದ ಹಣ ಮಾತ್ರ ಹಿಂಪಡೆಯಲು ಸಾಧ್ಯವಾಗಿದೆ ಎಂದರು.
ವಂಚನೆಯ ನಂತರದ ಮೊದಲ 24 ಗಂಟೆಗಳನ್ನು ಗೋಲ್ಡನ್ ಸಮಯ ಎಂದು ಪರಿಗಣಿಸಲಾಗುತ್ತದೆ. ಈ ಅವಧಿಯಲ್ಲಿ ಅಪರಾಧಿಯನ್ನು ಪತ್ತೆಹಚ್ಚುವ ಮತ್ತು ಕಳೆದುಹೋದ ಹಣವನ್ನು ಮರುಪಡೆಯುವ ಸಾಧ್ಯತೆಗಳು ಹೆಚ್ಚಿರುತ್ತವೆ. ನಾಗರೀಕರು ಮುಂದೆ ಬಂದು, ದೂರುಗಳನ್ನು ತಕ್ಷಣ ನೋಂದಾಯಿಸಿಕೊಳ್ಳಬೇಕು ಮತ್ತು ಹೆಚ್ಚುತ್ತಿರುವ ಸೈಬರ್ ಅಪರಾಧದ ಬೆದರಿಕೆಯನ್ನು ಎದುರಿಸಲು ನಮ್ಮ ಸಹಾಯವನ್ನು ಪಡೆಯಬೇಕು ಎಶಂದು ಹೇಳಿದರು.
Cyber crime Police Station ಬಿಎಫ್‌ಎಲ್‌ನ ವಕ್ತಾರ ವೆಂಕಟೇಶನ್ ವಿ.ಎಸ್. ಮಾತನಾಡಿ, “ನಮ್ಮ ಗ್ರಾಹಕರ ಆರ್ಥಿಕ ಸುರಕ್ಷತೆ ನಮಗೆ ಅತ್ಯಂತ ಮುಖ್ಯವಾಗಿದೆ. ಪ್ರತಿಯೊಬ್ಬರೂ ಸೈಬರ್ ವಂಚನೆಗಳಿಂದ ಸುರಕ್ಷಿತವಾಗಿರಲು ಜಾಗೃತಿ ಮೂಡಿಸುತಿದ್ದೇವೆ. ದೇಶದ ೧೦೦ ಪ್ರಮುಖ ನಗರಗಳು ಮತ್ತು ಪಟ್ಟಣಗಳಲ್ಲಿ ಸಂವಾದಾತ್ಮಕ ಕಾರ್ಯಾಗಾರಗಳು, ಡಿಜಿಟಲ್ ಜಾಗೃತಿ ಅಭಿಯಾನಗಳು ಮತ್ತು ಸಮುದಾಯ ಸಂಪರ್ಕ ಕಾರ್ಯಕ್ರಮಗಳ ಸರಣಿಯನ್ನು ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಸೈಬರ್ ಅಪರಾಧ ಪೊಲೀಸ್ ಠಾಣೆಯ ಸಹಾಯಕ ತನಿಖಾಧಿಕಾರಿ ರವಿ ಕುಮಾರ್ ಜಿ.ಎನ್. ನಿವೃತ್ತ ಪೊಲೀಸ್ ಉಪ ವರಿಷ್ಠಾಧಿಕಾರಿ ಎಂ.ಎನ್ ರುದ್ರಪ್ಪ ಸೇರಿದಂತೆ ಮತ್ತಿರರಿದ್ದರು.

All India Radio ಭದ್ರಾವತಿ ಆಕಾಶವಾಣಿಯಲ್ಲಿ ಅಡಿಕೆ ಬೆಳೆಯಲ್ಲಿ ಅಂತರ& ಮಿಶ್ರಬೆಳೆ‌ ನಿರ್ವಹಣೆ ಫೋನ್ ಇನ್ ಕಾರ್ಯಕ್ರಮ

0

All India Radio ಭದ್ರಾವತಿ ಆಕಾಶವಾಣಿಯಿಂದ ಸೆ. 16 ರಂದು ಸಂಜೆ 6.51 ರಿಂದ 7.30 ರವರೆಗೆ ‘ಹಲೋ ಆಕಾಶವಾಣಿ” ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಶಿವಮೊಗ್ಗದ ನವುಲೆ ತೋಟಗಾರಿಕೆ ಹಾಗು ಮುಖ್ಯಸ್ಥರು ಅಡಿಕೆ ಸಂಶೋಧನಾ ಕೇಂದ್ರದ ಪ್ರಾಧ್ಯಾಪಕ ಡಾ. ನಾಗರಾಜಪ್ಪ ಅಡಿವೆಪ್ಪರ್ ರವರು ಅಡಿಕೆ ಬೆಳೆಯಲ್ಲಿ ಅಂತರ ಮತ್ತು ಮಿಶ್ರ ಬೆಳೆಗಳ ನಿರ್ವಹಣೆ ಕುರಿತು ಮಾಹಿತಿ ನೀಡಲಿದ್ದಾರೆ.
ಫೋನ್ ಮಾಡಲು ದೂರವಾಣಿ ಸಂಖ್ಯೆ: 08282-270282, 270283 (ವಾಟ್ಸಪ್ ಮೆಸೆಜ್ ಮಾಡಲು ದೂರವಾಣಿ ಸಂಖ್ಯೆ: 9481572600).

MESCOM ಸೆ.16 ರಂದು ಶಿವಮೊಗ್ಗದ ವಿವಿಧೆಡೆವಿದ್ಯುತ್ ಪೂರೈಕೆ ವ್ಯತ್ಯಯ

0

MESCOM ನ.ಉ.ವಿ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಸೆ.16 ರಂದು ಬೆಳಗ್ಗೆ 09.00 ಗಂಟೆಯಿಂದ ಸಂಜೆ 6.00 ರವರೆಗೆ ಈ ವ್ಯಾಪ್ತಿಗೆ ಸೇರಿರುವ ಪಿಯರ್‌ಲೈಟ್, ಪೇಪರ್ ಪ್ಯಾಕೇಜ್,ಕೆ.ಆರ್. ಕುಡಿಯುವ ನೀರಿನ ಸ್ಥಾವರ, ಮಂಡ್ಲಿ ಕೈಗಾರಿಕಾ ಪ್ರದೇಶ, ಸೀಗೆಹಟ್ಟಿ, ರವಿವರ್ಮ ಬೀದಿ, ಬಿ.ಬಿ.ರಸ್ತೆ, ಗಾಂಧಿಬಜಾರ್, ಬುದ್ಧನಗರ, ಆರ್.ಎಂ.ಎಲ್.ನಗರ, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ನ್ಯೂಮಂಡ್ಲಿ, ಮಂಜುನಾಥ ಪೆಟ್ರೋಲ್ ಬಂಕ್, ವಿಜಯವಾಣಿ ಪ್ರೆಸ್ ಹತ್ತಿರ, ಎನ್.ಟಿ.ರಸ್ತೆ, ಹರಕೆರೆ, ಹಳೇಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್, ಬೆನಕೇಶ್ವರ ರೈಸ್ ಮಿಲ್, ಸವಾಯಿಪಾಳಯ, ಕುರುಬರ ಪಾಳ್ಯ, ಓ.ಟಿ.ರಸ್ತೆ, MESCOM ಪಂಚವಟಿ ಕಾಲೋನಿ, ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಇಲಿಯಾಜ್‌ನಗರ 1 ರಿಂದ 14ನೇ ಕ್ರಾಸ್, ಸಿದ್ದೇಶ್ವರ ಸರ್ಕಲ್, ಫಾರೂಕ್ಯ ಶಾದಿಮಹಲ್, ಚಾಲುಕ್ಯನಗರ, ಕೆಹೆಚ್‌ಬಿ ಕಾಲೋನಿ, ಮಂಡಕ್ಕಿಭಟ್ಟಿ, ಮೇಲಿನ ಮತ್ತು ಕೆಳಗಿನ ತುಂಗಾನಗರ, ಅಮೀರ್ ಅಹಮದ್ ಸರ್ಕಲ್, ಟಿಪ್ಪುನಗರ, ಮಂಜುನಾಥ ಬಡಾವಣೆ, ಇಲಿಯಾಜ್‌ನಗರ ಲಾರಿ ಗ್ಯಾರೇಜ್, ಬಿಹೆಚ್ ರಸ್ತೆ, ಸಾಗರ ನರ್ಸರಿ, ಚಾನಲ್ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶ ಮ್ತು ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್, ಹನುಮಂತಾಪುರ, ಶರಾವತಿನಗರ, ಶಾರದ ಕಾಲೋನಿ, ಗಾಜನೂರು ಗ್ರಾಮಾಂತರ ಪ್ರದೇಶ, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಹೊಸಳ್ಳಿ, ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮಸ್ಕಾಂ ಪ್ರಕಟಣೆ ತಿಳಿಸಿದೆ.

Department of social welfare Shimoga ವಸತಿ ಶಾಲೆಗೆ ಅತಿಥಿ ಶಿಕ್ಷಕರ ಹುದ್ದೆಗಾಗಿ ಅರ್ಜಿ ಆಹ್ವಾನ

0

Department of social welfare Shimoga ಶಿವಮೊಗ್ಗ ಜಿಲ್ಲೆ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸೊರಬ ತಾಲೂಕು ಜಡೆಯಲ್ಲಿರುವ ಡಾ|| ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗೆ ಕನ್ನಡ, ಆಂಗ್ಲ, ಹಿಂದಿ ಮತ್ತು ಗಣಿತ ವಿಷಯಗಳಿಗೆ ಅತಿಥಿ ಶಿಕ್ಷಕರ ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
Department of social welfare Shimoga ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಸೊರಬ ತಾಲುಕು ಹಿರೇಮಾಗಡಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಸೆ. 18ರೊಳಗಾಗಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 9663398179 ನ್ನು ಸಂಪರ್ಕಿಸುವುದು.

S. N. Channabasappa ಶಿವಮೊಗ್ಗದ ವಾರ್ಡ್ ನಂ17 ಮತ್ತು 24 ಕ್ಕೆ ಶಾಸಕ ಚನ್ನಬಸಪ್ಪ ಭೇಟಿ

0

S. N. Channabasappa ಶಿವಮೊಗ್ಗ :ಸೆ. 12. ಗುರುವಾರ ಬೆಳಿಗ್ಗೆ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ಸಂಖ್ಯೆ 17 ಮತ್ತು 24ಕ್ಕೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭೇಟಿ ನೀಡಿ, ಸ್ಥಳೀಯ ನಿವಾಸಿಗಳೊಂದಿಗೆ ನೇರವಾಗಿ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು.

S. N. Channabasappa ಈ ಸಂದರ್ಭದಲ್ಲಿ, ವಾರ್ಡ್ ಸಂಖ್ಯೆ 17ರಲ್ಲಿ ಯುಜಿಡಿ ಸಮಸ್ಯೆ ಹಾಗೂ ಕುಡಿಯುವ ನೀರಿನ ತೊಂದರೆ ಕುರಿತು ನಿವಾಸಿಗಳಿಂದ ಮಾಹಿತಿ ಪಡೆದು, ಸಮಸ್ಯೆ ಶೀಘ್ರ ಪರಿಹಾರವಾಗುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು. ವಾರ್ಡ್ ಸಂಖ್ಯೆ 24ರಲ್ಲಿ ಸ್ಥಳೀಯರ ಸಂಚಾರ ಸೌಲಭ್ಯ ಸುಧಾರಣೆಗೆ ಹಾಗೂ ನಗರ ಮೂಲಸೌಕರ್ಯ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ರಸ್ತೆ ಅಗಲೀಕರಣ ಹಾಗೂ ಡಬಲ್ ರಸ್ತೆ ಯೋಜನೆ ಮಂಜುರಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಅಗತ್ಯವಾದ ಭೂಸ್ವಾಧೀನ ಪ್ರಕ್ರಿಯೆಗೆ ಸ್ಥಳ ಪರಿಶೀಲನೆ ನಡೆಸಿದರು.

ಭೇಟಿಯ ಸಂದರ್ಭ ಪಾಲಿಕೆಯ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.