Wednesday, February 18, 2026
Wednesday, February 18, 2026
Home Blog Page 173

S.N.Channabasappa ಸಿದ್ಧರಾಮಯ್ಯ ಸರ್ಕಾರ ಇರುವವರೆಗೆ ಬ್ರದರ್ಸ್ ಗಳ ನೆಮ್ಮದಿಗೆ ಭಂಗವಿಲ್ಲ. ಹಿಂದೂಗಳಿಗೆ ಉಳಿಗಾಲವಿಲ್ಲ.-ಎಸ್.ಎನ್‌.ಚನ್ನಬಸಪ್ಪ ಆರೋಪ

0

ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ

  • ಮದ್ದೂರಿನಲ್ಲಿ ಗಣೇಶೋತ್ಸವದ ಮೇಲೆ ಕಲ್ಲು ತೂರುವ ಮತಾಂಧರಿಗೆ ಬೆಂಬಲ!
  • ಭದ್ರಾವತಿಯಲ್ಲಿ “ಪಾಕಿಸ್ತಾನ್ ಜಿಂದಾಬಾದ್” ಎಂದು ಕೂಗುವ ದೇಶದ್ರೋಹಿಗಳಿಗೆ ರಕ್ಷಣೆ!
  • ಬಾಂಬ್‌ ಬ್ಲಾಸ್ಟ್ ಮಾಡುವ ಬ್ರದರ್ಸ್‌ಗಳಿಗೆ ಮನ್ನಣೆ!
  • ಪ್ಯಾಲೆಸ್ಟೈನ್ ಧ್ವಜ ಹಾರಿಸುವ ದ್ರೋಹಿಗಳಿಗೆ ಮಣೆ!
  • ಪೊಲೀಸ್ ಠಾಣೆಗೆ ಬೆಂಕಿ ಹಚ್ಚುವ ಶಾಂತದೂತರಿಗೂ ಆಶ್ರಯ!

S.N.Channabasappa ಇದಕ್ಕೆ ಆಡಳಿತವೆಂದುವುದಿಲ್ಲ, ಇದು ತುಷ್ಟೀಕರಣದ ಕಳಂಕಿತ ರಾಜಕೀಯ. ಸಿದ್ದರಾಮಯ್ಯ ಸರ್ಕಾರ ಇರುವವರೆಗೂ ಬ್ರದರ್ಸ್‌ಗಳ ನೆಮ್ಮದಿಗೆ ಭಂಗವಿಲ್ಲ, ಆದರೆ ಹಿಂದೂಗಳಿಗೆ ಉಳಿಗಾಲವಿಲ್ಲ. ಹಬ್ಬ, ಹರಿದಿನ, ಉತ್ಸವ, ಜಾತ್ರೆಗಳನ್ನು ಶಾಂತಿ, ಭಕ್ತಿ ಮತ್ತು ಸಂಭ್ರಮದಿಂದ ಆಚರಿಸುವುದೇ ಅಸಾಧ್ಯ. ಜನರ ನಂಬಿಕೆ, ಭದ್ರತೆ ಮತ್ತು ಸಂಸ್ಕೃತಿಯ ಮೇಲೆ ನಡೆಯುತ್ತಿರುವ ಈ ದಾಳಿ, ರಾಷ್ಟ್ರದ ಭವಿಷ್ಯಕ್ಕೆ ಗಂಭೀರವಾದ ಅಪಾಯ!

ಮದ್ದೂರು ಗಣೇಶೋತ್ಸವದ ಸಂದರ್ಭದಲ್ಲಿ ಕೆಲ ಮತಾಂಧರು ನಡೆಸಿದ ಕಲ್ಲು ತೂರಾಟದ ಹೇಯ ಕೃತ್ಯವು ಭಕ್ತರ ಧಾರ್ಮಿಕ ಭಾವನೆಗಳನ್ನು ಮಾತ್ರವಲ್ಲ, ಸಮಾಜದ ಶಾಂತಿ ಮತ್ತು ಸೌಹಾರ್ದತೆಯನ್ನೂ ಗಂಭೀರವಾಗಿ ಕದಡಿದೆ. ಈ ದುರ್ಘಟನೆಯನ್ನು ಪ್ರಶ್ನಿಸಿ ನ್ಯಾಯಕ್ಕಾಗಿ ಧ್ವನಿ ಎತ್ತಿದ ಹಿಂದೂ ಸಮಾಜದ ಮೇಲೆ ಪೊಲೀಸರ ದೌರ್ಜನ್ಯ ನಡೆಸಿರುವುದು ಇನ್ನಷ್ಟು ಖಂಡನೀಯ ಸಂಗತಿಎಂದು ಎಸ್.ಎನ್‌. ಚೆನ್ನಬಸಪ್ಪನವರು ತಿಳಿಸಿದರು.

ಪಕ್ಷದ ಪ್ರಮುಖರೊಂದಿಗೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದ ಸಾಮೂಹಿಕ ಗಣಪತಿ ವಿಸರ್ಜನೆಯ ಭವ್ಯ ಶೋಭಾಯಾತ್ರೆಯಲ್ಲಿ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಘಟನೆ ನಡೆದ ಸ್ಥಳ ರಾಮ್ ರಹೀಮ್ ನಗರದ ಸುತ್ತಮುತ್ತಲಿನ ಪ್ರದೇಶಗಳಿಗೆ ಅವರು ಭೇಟಿ ನೀಡಿ, ಸ್ಥಳೀಯ ಪರಿಸ್ಥಿತಿಯನ್ನು ಪರಿಶೀಲಿಸಿ, ಘಟನೆ ವೇಳೆ ಗಾಯಗೊಂಡ ಅಜಯ್ ಅವರ ನಿವಾಸಕ್ಕೆ ಭೇಟಿ ನೀಡಿ ಅವರು ಆರೋಗ್ಯವನ್ನು ವಿಚಾರಿಸಿದರು. ನಂತರ ಪ್ರತಿಭಟನೆಯಲ್ಲಿ ಲಾಟಿಚಾರ್ಜ್ ಗೆ ಗಾಯಗೊಂಡ ಸ್ಥಳೀಯರೊಂದಿಗೆ ಮಾತುಕತೆ ನಡೆಸಿದರು.

ರಾಜ್ಯ ಸರ್ಕಾರವು ತನ್ನ ಪಕ್ಷಪಾತಿ ಧೋರಣೆಯಿಂದ ಸಮಾಜದ ಶಾಂತಿ-ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ತಕ್ಷಣವೇ ಆರೋಪಿಗಳನ್ನು ತಕ್ಷಣವೇ ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

H. B. Manjunath ಭಾರತೀಯ ಸನಾತನ ಮೌಲ್ಯಗಳ ಪ್ರಸರಣೆ ದೇವಾಲಯಗಳಿಂದಲೂ ಸಾಧ್ಯ – ಡಾ.ಹೆಚ್.ಬಿ.ಮಂಜುನಾಥ್

0

H. B. Manjunath ಸನಾತನ ಭಾರತೀಯ ಮೌಲ್ಯಗಳ ಪ್ರಸರಣ ದೇವಾಲಯಗಳ ಮುಖಾಂತರ ಮಾಡಲೂ ಸಾಧ್ಯವಿದ್ದು ಇದರಲ್ಲಿ ಅರ್ಚಕರ ಪಾತ್ರವೂ ಮಹತ್ತರವಾಗಿದೆ ಎಂದು ಹಿರಿಯ ಪತ್ರಕರ್ತ ಡಾ. ಎಚ್.ಬಿ.ಮಂಜುನಾಥ ಹೇಳಿದರು.

ಅವರಿಂದು ಚನ್ನಗಿರಿ ತಾಲೂಕು ತಾವರೆಕೆರೆಯಲ್ಲಿ ಕರ್ನಾಟಕ ದೇವಾಲಯ ಸಂವರ್ಧನ ಸಮಿತಿಯಿಂದ ಏರ್ಪಾಡಾಗಿದ್ದ ದೇವಾಲಯಗಳ ಅರ್ಚಕರ ರಾಜ್ಯಮಟ್ಟದ ಪ್ರಶಿಕ್ಷಣ ಶಿಬಿರದ ಸಂಪನ್ಮೂಲ ವ್ಯಕ್ತಿಗಳಾಗಿ ಉಪನ್ಯಾಸ ನೀಡುತ್ತಾ ವೇದೋಕ್ತವಾದ ದೇವ ಪೂಜಾ ಪದ್ಧತಿಯು ವೈಜ್ಞಾನಿಕ ಹಾಗೂ ವೈಚಾರಿಕವಾಗಿ ನೋಡಿದಾಗಿಯೂ ಅತ್ಯಂತ ಅರ್ಥವತ್ತಾಗಿದ್ದು ಇದನ್ನು ಅರ್ಚಕರು ಅರಿತುಕೊಂಡು ಕಾರ್ಯನಿರ್ವಹಿಸಬೇಕು, ಅನೇಕ ಮಂತ್ರಗಳು ಸಹಾ ಸಮಾಜಮುಖಿಯಾದ ಉದಾತ್ತ ಉದ್ದೇಶಗಳನ್ನೇ ವ್ಯಕ್ತಪಡಿಸುತ್ತಿದ್ದು ಅರ್ಚಕರು ಇದನ್ನು ತಾವು ತಿಳಿದು ಭಕ್ತರಿಗೂ ತಿಳಿಸಬೇಕು ಎಂಬುದನ್ನು ಉದಾಹರಣೆಗಳ ಸಹಿತ ವಿವರಿಸಿದರು.

ಕರ್ನಾಟಕ ದೇವಾಲಯ ಸಂವರ್ಧನಾ ಸಮಿತಿ ರಾಜ್ಯ ಸಂಯೋಜಕ ಮನೋಹರ ಮಠದ್ ಹಾಗೂ ಸ್ವಾಮಿಯವರ ಉಪಸ್ಥಿತಿಯಲ್ಲಿ ಅತಿಥಿಗಳಾಗಿ ಆಗಮಿಸಿದ್ದ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಮಾತನಾಡಿ ಅರ್ಚಕರ ಶ್ರದ್ಧಾ ಭಕ್ತಿಗಳು ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಪ್ರೇರಣದಾಯಕವಾಗಿರಬೇಕು ತನ್ಮೂಲಕ ದೇವರು ದೇವಸ್ಥಾನಗಳ ಬಗ್ಗೆ ನಂಬಿಕೆ ಹೆಚ್ಚಾಗಬೇಕು ಎಂದರು.

H. B. Manjunath ಕೃಷ್ಣಮೂರ್ತಿ ಕಶ್ಯಪ್, ಓಂಕಾರ್, ಮುನಿಯಪ್ಪ ದೇವರಾಜ್ ಮುಂತಾದವರು ಉಪಸ್ಥಿತರಿದ್ದರು. ತಾವರ ಕೆರೆಯ ಶ್ರೀ ಶಿಲಾ ಮಠದಲ್ಲಿ ಶಿಬಿರ ಏರ್ಪಾಡಾಗಿತ್ತು.

ಮಹಿಳಾ ದಸರಾ ಅಂಗವಾಗಿ ಸೆ.11 ರಂದು ” ಸಂಸಾರವೇ ಸ್ವರ್ಗ” ಕೌಟುಂಬಿಕ ಸ್ಪರ್ಧೆ

0

ಮಹಿಳಾ ದಸರಾ ಅಂಗವಾಗಿ ಶಿವಮೊಗ್ಗದ ವೀರಶೈವ ಕಲ್ಯಾಣ ಮಂದಿರದಲ್ಲಿ ಸೆಪ್ಟೆಂಬರ್ ೧೧ರ ಬೆಳಿಗ್ಗೆ 9:45ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಂಸಾರವೇ ಸ್ವರ್ಗ ಶೀರ್ಷಿಕೆಯಡಿಯಲ್ಲಿ ಕೌಟುಂಬಿಕ ಸ್ಪರ್ಧೆ ( ಗಂಡ ಹೆಂಡತಿ, ಅಪ್ಪ ಅಮ್ಮ , ಮೊಮ್ಮಗು) ಏರ್ಪಡಿಸಲಾಗಿದೆ.

GK Mithun Kumar ಭದ್ರಾವತಿಯಲ್ಲಿ ಪಾಕ್ ಪರ ಘೋಷಣೆ ಪ್ರಕರಣ. ತನಿಖೆಗೆ ಪೊಲೀಸ್ ಇಲಾಖೆ ಕಾರ್ಯಪ್ರವೃತ್ತ- ಜಿ.ಕೆ.ಮಿಥುನ್ ಕುಮಾರ

0

GK Mithun Kumar ಭದ್ರಾವತಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಅವರು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದರು.

ಈ ಘಟನೆ ಇಲಾಖೆ ಗಮನಕ್ಕೆ ಬಂದಿದ್ದು ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಸಂಬಂಧಪಟ್ಟ ಠಾಣೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಭದ್ರಾವತಿ ನಗರದಲ್ಲಿ ನಡೆದ ಮೆರವಣಿಗೆ ಸಂದರ್ಭದಲ್ಲಿ ಘೋಷಣೆ ಕೂಗಲಾಗಿದೆ ಎಂಬ ವಿಡಿಯೋ ಹರಿದಾಡುತ್ತಿದೆ. ಇದರ ಸತ್ಯಾಸತ್ಯತೆ ಪರಿಶೀಲನೆಗೆ ಮೂರು ತಂಡ ರಚಿಸಲಾಗಿದೆ ಎಂದು ತಿಳಿಸಿದರು.

GK Mithun Kumar ಕಿಡಿಗೇಡಿಗಳನ್ನು ಪತ್ತೆ ಹಚ್ಚುವ ಕೆಲಸ ಆರಂಭಗೊಂಡಿದ್ದು, ಮೆರವಣಿಗೆ ವೇಳೆ ಇಲಾಖೆ ವಿಡಿಯೋಗ್ರಾಫರ್, ವಾಯ್ಸ್ ಆಧಾರಿತ ಸಿ ಸಿ ಕ್ಯಾಮೆರಾ ಮತ್ತಿತರ ಕಡೆಗಳಿಂದ ಫೋಟೇಜ್ ಪಡೆಯಲಾಗಿದೆ. ಅದೇ ರೀತಿ ವೈರಲ್ ಆಗಿರುವ ವಿಡಿಯೋವನ್ನು ಎಫ್ ಎಸ ಎಲ್ ಗೆ ಕಳುಹಿಸಲಾಗಿದ್ದು, ತನಿಖೆ ನಂತರ ಸತ್ಯಾಂಶ ಏನೆಂಬುದು ತಿಳಿಯಲಿದೆ ಎಂದು ಹೇಳಿದರು.

Rotary Shivamogga ಯುವ ಮುಖಂಡ ಹೆಚ್.ಸಿ.ಯೋಗೇಶ್ಅವರಿಂದ ಮಕ್ಕಳಿಗೆ ಡ್ರೈಫ್ರೂಟ್ಸ್ ವಿತರಣೆ

0

Rotary Shivamogga ಸರ್ಕಾರಿ ಶಾಲೆಗಳಿಗೆ ಪ್ರೋತ್ಸಾಹ ನೀಡುವುದು ನಮ್ಮೆಲ್ಲರ ಕರ್ತವ್ಯ ಎಂದು ವಲಯ 11ರ ಸಹಾಯಕ ಗವರ್ನರ್ ಲಕ್ಷ್ಮಣ್‌ ಗೌಡ ಎಂ.ಬಿ ಹೇಳಿದರು.
ವಿನೋಬನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥೆಯ ವಲಯ ಸೇನಾನಿ ಕಿರಣ್ ಕುಮಾರ್ ಜಿ ಅವರಿಂದ ಶಾಲೆಗೆ ಅಗತ್ಯವಿರುವ ಪ್ರೆಷರ್ ಪಂಪ್ ಕೊಡುಗೆ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸರ್ಕಾರಿ ಶಾಲೆಯಲ್ಲಿ ಅಗತ್ಯ ಇರುವ ವಸ್ತುಗಳನ್ನು ರೋಟರಿ ಸಂಸ್ಥೆಯಿಂದ ಹೆಚ್ಚು ಪೂರೈಸಲಾಗುತ್ತಿದೆ. ನಮ್ಮ ರೋಟರಿಯ ಜಿಲ್ಲಾ ಕಾರ್ಯಕ್ರಮವಾದ ಸ್ವಚ್ಛತಾ ಕಾರ್ಯಕ್ರಮದ ಅಡಿಯಲ್ಲಿ ವಲಯ ಸೇನಾನಿ, ಎಸ್ ಬಿ ಎಸ್ ಬೋರ್ ವೆಲ್ಸ್ ನ ಕಿರಣ್ ಕುಮಾರ್.ಜಿ ಅವರು ಶಾಲೆಗೆ ಪ್ರೆಷರ್ ಪಂಪ್ ನೀಡುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.
Rotary Shivamogga ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ ರಮೇಶ್ ಮಾತನಾಡಿ, ಹಿಂದಿನಿಂದಲೂ ನಮ್ಮ ಶಾಲೆಗೆ ರೋಟರಿ ಸಂಸ್ಥೆಯವರು ಶಾಲೆಗೆ ಉಪಯುಕ್ತ ಕೊಡುಗೆಯನ್ನು ನೀಡುತ್ತಿದ್ದು, ಹೆಚ್ಚಿನ ಸೇವಾ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಬಸವರಾಜ್ ಬಿ, ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಕಾರ್ಯದರ್ಶಿ ಜಯಶೀಲಶೆಟ್ಟಿ, ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆ ಅಧ್ಯಕ್ಷ ನೆಪ್ಚೂನ್ ಕಿಶೋರ್ ಕುಮಾರ್, ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಧನಂಜಯ್, ರೋಟರಿ ಮಾಜಿ ಸಹಾಯಕ ಗವರ್ನರ್ ರವಿ ಕೋಟೋಜಿ, ಧಮೇಂದ್ರ ಸಿಂಗ್, ಚಂದ್ರು ಜೆಪಿ, ಸಂತೋಷ್ ಬಿ ಎ, ಈಶ್ವರ್ ಬಿವಿ, ಗೀತಾ ಜಗದೀಶ್, ಮೋಹನ್ ಕುಮಾರ್, ಬಲರಾಮ್, ಜಗದೀಶ್ ಜಿಎಸ್ ಹಾಗೂ ಶಾಲಾ ಸಿಬ್ಬಂದಿ ವರ್ಗ, ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Canara Bank ಕೆನರಾ ಬ್ಯಾಂಕ್ ಆಶ್ರಯದಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಸ್ಯಾಚುರೇಷನ್ ಅಭಿಯಾನ

0

Canara Bank ಶಿವಮೊಗ್ಗ ತಾಲೂಕು ಬಾಳೆ ಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಕೇಂದ್ರ ಸರ್ಕಾರದ, RBI na ಹಣಕಾಸು ಸೇರ್ಪಡೆ ಅಡಿಯಲ್ಲಿ ಹಾರ್ದಿಕ ಸಾಕ್ಷರತೆ ಮೂರು ತಿಂಗಳ ಅಭಿಯಾನದ ಪ್ರಯುಕ್ತ ಜನ ಸುರಕ್ಷಾ ಅಭಿಯಾನವನ್ನು ಮಾಡಲಾಯಿತು ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ನ ಯೋಜನಾ ನಿರ್ದೇಶಕರು ಶ್ರೀಮತಿ ನಂದಿನಿ ಕೆನರಾ ಬ್ಯಾಂಕ್ ಪ್ರಾದೇಶಿಕ ಕಾರ್ಯಾಲಯದ ಡಿ ಜಿಎಂ ಶ್ರೀ ದೇವರಾಜ್ ಅವರು ಲೀಡ್ ಬ್ಯಾಂಕ್ ನ ಎಡಿಎಂ ಶ್ರೀ ಹನುಮಂತಪ್ಪ ಅವರು ಗ್ರಾಮ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ಉಪಸ್ಥಿತರಿದ್ದರು. ಗ್ರಾಮಸ್ಥರಿಗೆ ಪ್ರಧಾನ್ ಮಂತ್ರಿ ಪಿ ಎಂ ಜೆ ಡಿ ವೈ,ಪಿ ಎಂ ಎಸ್ ಬಿ ವೈ, ಪಿ ಎಂ ಜೆ ಜೆ ಬಿ ವೈ, ಎ ಪಿ ವೈ ಹಾಗೂ ಇತರ ಸವಲತ್ತುಗಳನ್ನು ಪರಿಚಯಿಸಿ ಅರಿವು ಮೂಡಿಸಲಾಯಿತು ಹಾಗೇನೆ ನೋಂದಣಿಗಳನ್ನು ಮಾಡಲಾಯಿತು.

ಸೊರಬದಲ್ಲಿ ಕಾನುಕೇರಿಯ ಶ್ರೀ ಗಣೇಶಮೂರ್ತಿಯ ವಿಸರ್ಜನಾ ಕಾರ್ಯಕ್ರಮ

0

ವಿಶ್ವ ಹಿಂದೂ ಪರಿಷದ್-ಭಜರಂಗದಳ ನೇತೃತ್ವದ ಹಿಂದೂ ಮಹಾಸಭಾ ಗಣಪತಿ ಉತ್ಸವ ಸಮಿತಿಯಿಂದ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ಪ್ರತಿಷ್ಠಾಪಿತ ಶ್ರೀ ಗಣೇಶ ಮೂರ್ತಿಯ ವಿಸರ್ಜನಾ ಕಾರ್ಯಕ್ರಮ ಸೆ.10ರಂದು ಬುಧವಾರ ನಡೆಯಲಿದೆ.

ಬೆಳಗ್ಗೆ 11ಕ್ಕೆ ಶ್ರೀ ಸ್ವಾಮಿಯ ಸನ್ನಿಧಿಯಿಂದ ಆರಂಭವಾಗುವ ಶೋಭಾಯಾತ್ರೆ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನ, ಶ್ರೀ ಸ್ವಾಮಿ ವಿವೇಕಾನಂದ ಭೋದನಾ ಸಂಸ್ಥೆ, ಚಾಮರಾಜ ಪೇಟೆ, ಖಾಸಗಿ ಬಸ್ ನಿಲ್ದಾಣ ವೃತ್ತ ನಂತರ ರಾಜಬೀದಿ ಮಾರ್ಗವಾಗಿ ಶ್ರೀ ವರದಹಸ್ತ ಆಂಜನೇಯ ಸ್ವಾಮಿ ದೇವಸ್ಥಾನ, ಶ್ರೀ ರಂಗನಾಥ ದೇವಸ್ಥಾನದ ವರೆಗೆ ನಡೆಯಲಿದೆ.

ಶೋಭಾಯಾತ್ರೆಯಲ್ಲಿ ಚಂಡೆ ವಾಧ್ಯ, ಭಜನೆ, ಡೊಳ್ಳು ಸೇರಿದಂತೆ ವಿವಿಧ ವಾಧ್ಯ ಮೇಳಗಳು, ಜನಪದ ಕಲಾತಂಡಗಳು ಪ್ರದರ್ಶನ ನೀಡಲಿವೆ. ನಂತರ ಶ್ರೀ ಗಣೇಶ ಮೂರ್ತಿಯನ್ನು ಪುಣ್ಯನದಿ ದಂಡಾವತಿಯಲ್ಲಿ ವಿಸರ್ಜಿಸಲಾಗುವುದು.
ಶೋಭಾಯಾತ್ರೆಯಲ್ಲಿ ಸಾವಿರಾರು ಜನ ಭಾಗವಹಿಸುವ ನಿರೀಕ್ಷೆ ಇದೆ. ಹಿಂದೂ ಬಾಂಧವರು, ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಯವರು, ಮಾತೆಯರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂಪ್ರೇರಣೆಯಿಂದ ಭಾಗವಹಿಸುವ ಮೂಲಕ ಶೋಭಾಯಾತ್ರೆಯನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಹಿಂದೂ ಮಹಾಸಭಾ ಗಣಪತಿ ಉತ್ಸವ ಸಮಿತಿ ಅಧ್ಯಕ್ಷ ನಿರಂಜನ್ ಕೋರಿದ್ದಾರೆ.

Kateel Ashok Pai Memorial College ಪೂರ್ವಸಿದ್ಧತೆಯಿಲ್ಲದೇ ಯೋಜನೆ ರೂಪಿಸಿದ ಕಾರಣ ಜೀವ ಪ್ರಭೇದಗಳು ಅಳಿವಿನ ಅಂಚಿನಲ್ಲಿವೆ- ಡಾ.ಎಲ್.ಕೆ.ಶ್ರೀಪತಿ

0

Kateel Ashok Pai Memorial College ಮಾನಸ ಟ್ರಸ್ಟ್, ಕಟೀಲು ಅಶೋಕ್ ಪೈ ಸ್ಮಾರಕ ಕಾಲೇಜು, ಪರಿಸರ ಅಧ್ಯಯನ ಕೇಂದ್ರ ಶಿವಮೊಗ್ಗ, ಕಿಡ್ಸ್ ಸಂಸ್ಥೆ, ಪರ್ಯಾವರಣ ಟ್ರಸ್ಟ್, ಶಿವಮೊಗ್ಗ,
ಐ.ಕ್ಯೂ.ಎ.ಸಿ ಘಟಕ, ಸಮಾಜ ಕಾರ್ಯ ವಿಭಾಗ, ಎನ್.ಎಸ್.ಎಸ್ ಘಟಕ, ಬಯೋಸ್ಪೆಕ್ಟ್ರಂಮ್ ಇವರ ಸಹಯೋಗದಲ್ಲಿ ನಾಡಿನ ಹೆಸರಾಂತ ಲೇಖರಾದ ಶ್ರೀ ಪೂರ್ಣಚಂದ್ರ ತೇಜಸ್ವಿ ಅವರ ಜನ್ಮ ದಿನಾಚರಣೆಯ ಅಂಗವಾಗಿ ಹಾಗೂ ಪ್ರಖ್ಯಾತ ಕಾದಂಬರಿ ಕರವಾಲೋ ಪ್ರಕಟವಾಗಿ 50 ವರ್ಷ ಪೂರ್ಣಗೊಂಡ ಸಂದರ್ಭದಲ್ಲಿ 42ನೇ ಸಹ್ಯಾದ್ರಿ ದಿನಾಚರಣೆಯನ್ನು ಕಾಲೇಜಿನ ಬಹುಮುಖಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಸಮಾಜಕಾರ್ಯ ವಿಭಾಗದ ಮುಖ್ಯಸ್ಥರಾದ ಶ್ರೀ ಮಂಜುನಾಥ ಸ್ವಾಮಿಯವರು ಪ್ರಾಸ್ತವಿಕ ನುಡಿಗಳನ್ನಾಡಿದರು. ನಮ್ಮ ಪರಿಸರವನ್ನು ಸಂರಕ್ಷಣೆ ಮಾಡಲು ವಿದ್ಯಾರ್ಥಿಗಳು ಮತ್ತು ಹಲವಾರು ಸಂಘ ಸಂಸ್ಥೆಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ. ಹಾಗೆಯೇ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು ಪರಿಸರ ಅಧ್ಯಯನ ಕೇಂದ್ರ ಶಿವಮೊಗ್ಗ. ಕಿಡ್ಸ್ ಸಂಸ್ಥೆ, ಪರ್ಯಾವರಣ ಟ್ರಸ್ಟ್, ಶಿವಮೊಗ್ಗ ಇವುಗಳ ಸಹಯೋಗದಲ್ಲಿ 42ನೇ ಸಹ್ಯಾದ್ರಿ ದಿನಾಚರಣೆಯನ್ನು ಆಚರಿಸುತ್ತಿದ್ದು ನಮಗೆಲ್ಲ ಪರಿಸರ ಸಂರಕ್ಷಣೆ ಆದ್ಯತೆಯಾಗಲಿ. ಆ ಮೂಲಕ ಈ ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯೂ ಸಂರಕ್ಷಿಸಲ್ಪಡಲಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಡಾ. ಎಲ್ ಕೆ ಶ್ರೀಪತಿ ವಿಶ್ರಾಂತ ಉಪ ಪ್ರಾಂಶುಪಾಲರು, ಎಓಓಅ ಇಂಜಿನಿಯರಿಂಗ್ ಕಾಲೇಜ್, ಶಿವಮೊಗ್ಗ, ಅತಿಥಿ ಉಪನ್ಯಾಸಕರು ಧಾರವಾಡ ಇವರು ಉದ್ಘಾಟಿಸಿ ಮಾತನಾಡಿದರು.

ಪಶ್ಚಿಮ ಘಟ್ಟವು ಜಗತ್ತಿನ ಎಂಟು ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಒಂದಾಗಿದೆ. ಇಲ್ಲಿ ಸಾವಿರಾರು ಪ್ರಭೇದಗಳ ಪ್ರಾಣಿ-ಪಕ್ಷಿ ಸಂಕುಲಗಳು ಒಟ್ಟಾಗಿ ಜೀವಿಸುತ್ತಿವೆ. ಸರ್ಕಾರದ ಹಲವಾರು ಕಾರ್ಯಯೋಜನೆಗಳು ಯಾವುದೇ ಪೂರ್ವಸಿದ್ಧತೆ ಇಲ್ಲದೆ ರೂಪಿಸಿ, ಈ ಜೀವ ಪ್ರಭೇದಗಳು ಅಳಿವಿನ ಅಂಚಿನಲ್ಲಿವೆ. ಆ ಮೂಲಕ ಜೀವವೈವಿಧ್ಯತೆಯ ಅಸಮತೋಲನ ಸೃಷ್ಠಿ ಆಗುತ್ತಿದೆ. ಇದರಿಂದ ಪರಿಸರದ ಅಳಿವು ಹಾಗೂ ವೈಪರೀತ್ಯದಿಂದ ಹಲವಾರು ತೊಂದರೆಗಳಾಗುತ್ತಿವೆ. ಆದ್ದರಿಂದ ಈ ಪಶ್ಚಿಮ ಘಟ್ಟವನ್ನು ಉಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಸರ್ಕಾರದ ಯೋಜನೆ ರೂಪಿಸುವವರು ಪಶ್ಚಿಮ ಘಟ್ಟಗಳ ಬಗ್ಗೆ ಅರಿವನ್ನು ಹೊಂದಿರುವವರು ಆಗಿರಬೇಕಾಗುತ್ತದೆ. ಯಾವುದೇ ಅಧ್ಯಯನ ಇಲ್ಲದೇ ಪಶ್ಚಿಮ ಘಟ್ಟಗಳಲ್ಲಿ ಸರ್ಕಾರ ಯೋಜನೆಗಳನ್ನು ಮಾಡುವುದರಿಂದ ಪರಿಸರ ನಾಶವಾಗುತ್ತದೆ. ಅಪೂರ್ವವಾದ ಪ್ರಾಣಿ-ಪಕ್ಷಿ ಸಂಕುಲಗಳು ನಾಶವಾಗುತ್ತವೆ. ಆದುದರಿಂದ ಸಂಘ-ಸಂಸ್ಥೆಗಳು, ಕಾಲೇಜುಗಳು ಜನರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಅರಿವನ್ನು ಮೂಡಿಸಬೇಕಾಗುತ್ತದೆ. ಆ ಮೂಲಕ ಅಳಿವಿನಂಚಿನಲ್ಲಿರುವ ಅನೇಕ ಪ್ರಾಣಿ-ಪಕ್ಷಿ ಪ್ರಭೇದಗಳನ್ನು ಅಪೂರ್ವವಾದ ಸಸ್ಯ-ಸಂಕುಲಗಳನ್ನು ಉಳಿಸಿಕೊಳ್ಳುವ ಕಾರ್ಯವಾಗಬೇಕು ಎಂದು ಅಭಿಪ್ರಾಯಪಟ್ಟರು.

Kateel Ashok Pai Memorial College ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಧ್ಯಾ ಕಾವೇರಿ ಅವರು ಅಧ್ಯಕ್ಷೀಯ ನುಡಿಗಳನ್ನಾಡಿ ಮಲೆನಾಡು ಹಾಗೂ ಪಶ್ಚಿಮ ಘಟ್ಟದ ಪರಿಸರದ ಅರಿವನ್ನು ಹೊಂದಿರುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ. ವಿದ್ಯಾರ್ಥಿಗಳು ನಮ್ಮ ಸುತ್ತ-ಮುತ್ತಲಿನ ಪರಿಸರದ ಬಗ್ಗೆ ಕಾಳಜಿಯನ್ನು ಹೊಂದಿರಬೇಕು. ಇತರರಲ್ಲೂ ಕಾಳಜಿ ಮತ್ತು ಅರಿವನ್ನು ಮೂಡಿಸಬೇಕು. ಪರಿಸರ ಮತ್ತು ಅರಣ್ಯ ಸಂಪತ್ತನ್ನು ಕಾಪಾಡಬೇಕು ಹಾಗೂ ಸದುಪಯೋಗ ಪಡಿಸಿಕೊಳ್ಳುವಲ್ಲಿ ಯಶಸ್ವಿ ಪಾತ್ರವನ್ನು ವಹಿಸಬೇಕು ಎಂದು ಅಭಿಪ್ರಾಯಪಟ್ಟರು.

ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಮಾಧುರಿ ಕೆ ಆರ್ ಅವರು ವಂದಿಸಿದರು. ತೃತೀಯ ಸಮಾಜಕಾರ್ಯ ವಿಭಾಗದ ಕು. ಸ್ಪೂರ್ತಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

ಕಾಲೇಜಿನ ಆಡಳಿತಾ ಮಂಡಳಿ ನಿರ್ದೇಶಕರಾದ ಡಾ. ರಜನಿ ಎ ಪೈ, ಆಡಳಿತಾಧಿಕಾರಿಗಳಾದ ಪ್ರೊ. ರಾಮಚಂದ್ರ ಬಾಳಿಗ ಹಾಗೂ ಐ ಕ್ಯೂ ಎ ಸಿ ಸಂಯೋಜಕರಾದ ಡಾ. ಅರ್ಚನಾ ಭಟ್. ಉಪಸ್ಥಿತರಿದ್ದರು.

ಕು. ತನ್ಮಯಿ ಮತ್ತು ಸಂಗಡಿಗರು ಪ್ರಾರ್ಥನೆಯನ್ನು ಮಾಡಿದರು.

JCI Sahyadri Unit ವ್ಯಕ್ತಿತ್ವ & ಮನೋವಿಕಸನಕ್ಕೆ ಜೆಸಿಐ ಸಂಸ್ಥೆ ತರಬೇತಿ-ಜಿ.ವಿ.ಗಣೇಶ್

0

JCI Sahyadri Unit ವಿದ್ಯಾಭ್ಯಾಸದಲ್ಲಿ ಎಷ್ಟೇ ಸಾಧನೆ ಮಾಡಿದರು ಪರಿಪೂರ್ಣತೆ ಸಾಧಿಸಲು ವ್ಯಕ್ತಿತ್ವ ವಿಕಸನಗೊಳ್ಳಲು ಹಾಗೂ ಮನೋವಿಕಾಸ ಹೊಂದಲು ಜಿ ಸಿ ಐ ಸಂಸ್ಥೆಗಳ ತರಬೇತಿ. ವಿದ್ಯಾರ್ಥಿಗಳ ಜೀವನದಲ್ಲಿ ಬೆಳಕು ಚೆಲ್ಲುತ್ತದೆ ಎಂದು ಜೆಸಿಐ ಸಹ್ಯಾದ್ರಿ ಘಟಕದ ಅಧ್ಯಕ್ಷರಾದ ಜಿ ವಿ ಗಣೇಶ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ನಗರದ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾದ ವ್ಯಕ್ತಿತ್ವ ವಿಕಸನ. ದೊಡ್ಡ ದೊಡ್ಡ ಹುದ್ದೆಗಳಿಗೆ ಸಂದರ್ಶನದ ಪೂರ್ವಭಾವಿಸಿದ್ದತೆ ಹಾಗೂ ಜೀವನ ಕೌಶಲ್ಯಗಳ ತರಬೇತಿ ಕಾರ್ಯಕ್ರಮನ ಉದ್ಘಾಟಿಸಿ ಮಾತನಾಡಿದರು. ಸ್ಪರ್ಧಾತ್ಮಕ ಜಗತ್ತಿನಲ್ಲಿ ಎಷ್ಟು ವಿಷಯಗಳನ್ನು ತಿಳಿದುಕೊಂಡರುವ ಸಾಲದು ಪ್ರತಿದಿನ ಹೊಸ ಹೊಸ ಆವಿಷ್ಕಾರಗಳು ನಡೆಯುತ್ತಲೇ ಇರುತ್ತವೆ ಹಾಗೆ ತಂತ್ರಜ್ಞಾನವು ಸಾಕಷ್ಟ ಮುಂದುವರೆದಿದೆ. ಅದಕ್ಕೆ ತಕ್ಕಂತೆ ನಾವು ಹೊಂದಿಕೊಳ್ಳಲೇ ಬೇಕು ಎಂದು ನುಡಿದರು. ಇದೇ ಸಂದರ್ಭದಲ್ಲಿ ಜೆಸಿಐ ಸಂಸ್ಥೆಯ ವಲಯ ತರ್ಬೇತುದಾರರಾದ ಜೆಸಿ ನಿವೇದಿತಾ ವಿಕಾಸ ಅವರು ವಿದ್ಯಾರ್ಥಿಗಳಿಗೆ ಇಂಟರ್ವ್ಯೂ ಸ್ಕೀಲ್ಸ್. ಹಾಗೂ ಜೀವನ ಕೌಶಲ್ಯ ಹಾಗೂ ವ್ಯಕ್ತಿತ್ವ ವಿಕಸನದ ಬಗ್ಗೆ ಸಮಗ್ರ ಮಾಹಿತಿ ನೀಡಿದರು. JCI Sahyadri Unit ಕಾರ್ಯಕ್ರಮದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯ ಅಧ್ಯಕ್ಷರಾದ ನೆಫ್ಚುನ್ ಕಿಶೋರ್ ರವರು ಸಂದರ್ಶನಗಳನ್ನು ಹೇಗೆ ಎದುರಿಸಬೇಕು ಹಾಗೂ ಅದರ ಬಗ್ಗೆ ಪೂರ್ವಭಾವಿ ಸಿದ್ಧತೆಗಳು ಮತ್ತು ಅಭ್ಯಾಸಗಳ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಡಾಕ್ಟರ್ ಧನಂಜಯ.ವಾಣಿಜ್ಯ ಕಾಲೇಜಿನ ಪ್ರಾಂಶುಪಾಲರಾದ ಮಮತಾ ಪಿ ರಾವ್.. ಸ್ಮಿತಾ… ಗಂಗಪ್ಪ. ಸುನಿಲ್ ನಲ್ಲೂರು ಹಾಗೂ ಜೆಸಿಐ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು

Sarathi Yojana ಸಾರಥಿ ಯೋಜನೆಯನ್ನ ಸಮರ್ಥವಾಗಿ ತಮ್ಮ ಕುಟುಂಬ ಬೆಳವಣಿಗೆಗೆ ಉಪಯೋಗಿಸಿ- ಎಸ್.ಎನ್.ಚನ್ನಬಸಪ್ಪ

0

Sarathi Yojana ಅಂಬೇಡ್ಕರ್ ಅಭಿವೃದ್ಧಿ ನಿಗಮದ ‘ಸಾರಥಿ ಯೋಜನೆ’ಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ವಾಹನಗಳನ್ನು ವಿತರಿಸಿದರು.

ಈ ಸಂದರ್ಭ ಫಲಾನುಭವಿಗಳಿಗೆ ಹಾರ್ದಿಕ ಅಭಿನಂದನೆ ಸಲ್ಲಿಸಿ, ಈ ಅವಕಾಶವನ್ನು ಸಮರ್ಥವಾಗಿ ಉಪಯೋಗಿಸಿಕೊಂಡು ತಮ್ಮ ಕುಟುಂಬ ಮತ್ತು ಸಮಾಜದ ಬೆಳವಣಿಗೆಗೆ ಪೂರಕವಾಗುವಂತೆ ಆಶಯ ವ್ಯಕ್ತಪಡಿಸಿದರು.