Monday, February 16, 2026
Monday, February 16, 2026
Home Blog Page 1739

ಧರ್ಮಸ್ಥಳದ ಬಾಹುಬಲಿಗೆ ಪಾದಾಭಿಷೇಕ

0

ಧರ್ಮಸ್ಥಳದ ರತ್ನಗಿರಿಯಲ್ಲಿ ವಿರಾಜಮಾನರಾಗಿರುವ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾಪನೆ ಮಹೋತ್ಸವದ ನಲವತ್ತನೇ ವರ್ಧಂತ್ಯುತ್ಸವದ ಅಂಗವಾಗಿ ಭವ್ಯ ಅಗ್ರೋದಕ ಮೆರವಣಿಗೆ ನಡೆಯಿತು.

ಬಾಹುಬಲಿ ಮೂರ್ತಿ ಗೆ 216ಕಲಾಶಗಳಿಂದ ಪಾದಾಭಿಷೇಕ ನಡೆಯಿತು.
ಇದಕ್ಕೆ ನೀರು, ಹಾಲು, ಎಳನೀರು, ಕಬ್ಬಿನ ರಸ, ಮತ್ತು ಶ್ರೀಗಂಧ, ಅರಿಶಿನ, ಚಂದನ ಮೊದಲಾದ ಮಂಗಲ ದ್ರವ್ಯಗಳನ್ನು ಬಳಸಲಾಯಿತು.
ಉಜಿರೆಯ ಎಸ್ ಡಿಎಂ ಕಾಲೇಜು ಮತ್ತು ಸಿದ್ದವನ ಗುರುಕುಲದ ವಿದ್ಯಾರ್ಥಿಗಳು ಹಾಗೂ ಬಾಹುಬಲಿ ಸೇವಾ ಸಮಿತಿಯ ಸದಸ್ಯರಿಂದ ಪೂಜಾ ಮಂತ್ರ ಪಠಣ, ಪಂಚ ನಮಸ್ಕಾರ ಮಂತ್ರ ಪಠಣ ಮತ್ತು ಜಿನ ಭಕ್ತಿ ಗೀತೆಗಳ ಸುಶ್ರಾವ್ಯ ಗಾಯನ ಕಾರ್ಯಕ್ರಮ ವಿಶೇಷ ಮೆರುಗನ್ನು ನೀಡಿತ್ತು.

ಧರ್ಮಸ್ಥಳದಲ್ಲಿ ಧರ್ಮ ಧ್ಯಾನಗಳಿಂದ ಪುಣ್ಯ ಸಂಚಯ ವಾಗುತ್ತದೆ. ಶ್ರದ್ಧಾ -ಭಕ್ತಿ, ದೃಢಸಂಕಲ್ಪ ದೊಂದಿಗೆ ವ್ರತ ನಿಯಮಗಳ ಪಾಲನೆ ಯಿಂದ ಮನೆಯಲ್ಲಿಯೇ ದೇವ ಗತಿ ಬಂಧವಾಗುತ್ತದೆ. ಮನೆಯೇ ಮಂದಿರ ವಾಗುತ್ತದೆ ಎಂದು ಮಂಗಲ ಪ್ರವಚನ ನೀಡಿದ ಕಾರ್ಕಳ ಜೈನ ಮಠದ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ಹೇಳಿದ್ದಾರೆ.

ಜೈನ ಧರ್ಮದ ತಿರುಳಾದ ಅಹಿಂಸೆಯೇ ಶ್ರೇಷ್ಠ ತತ್ವವಾಗಿದೆ. ಅಹಿಂಸೆಯಿಂದ ಸುಖ, ತ್ಯಾಗದಿಂದ ಶಾಂತಿ ಎಂದು ಬಾಹುಬಲಿಯ ಜೀವನ ಸಂದೇಶ ಸಾರುತ್ತದೆ. ತ್ಯಾಗ ಮತ್ತು ವೈರಾಗ್ಯದ ಸಂಕೇತವಾದ ಬಾಹುಬಲಿ ಮೂರ್ತಿಯ ದರ್ಶನ, ಪೂಜೆ, ಆರಾಧನೆಯೊಂದಿಗೆ ಆತನ ಗುಣಗಳನ್ನೂ ನಮ್ಮ ಜೀವನದಲ್ಲಿ ಅಳವಡಿಸಿದಾಗ ಜೀವನ ಪಾವನವಾಗುತ್ತದೆ. ಗೃಹ ಲಯವನ್ನು ಜಿನಾಲಯ ವನ್ನಾಗಿ ಪ್ರಾಪ್ತಿ ಮಾಡಿಕೊಳ್ಳಬೇಕು ಎಂದು ಸ್ವಾಮೀಜಿ ಅವರು ಸಲಹೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರಕುಮಾರ್ ಇನ್ನು ಮುಂತಾದವರು ಉಪಸ್ಥಿತರಿದ್ದರು

Shimoga News – Wednesday, 2 February 2022

0

Book Your Advertisement Now in Shimoga News.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.


Latest News on WhatsApp

Shimoga News
Send a Whatsapp message Startto this contact to get started. That’s it! We will send you your daily dose of positive Shimoga News on Whatsapp!

Why Keelambi Media Lab Pvt Ltd in Shimoga News ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

Shimoga News

KLIVE Android App on Google Play Store

Shimoga News

Download the most loved Klive App for your Android phone or tablet.

ಕ್ರಿಕೆಟ್ ಆಟಗಾರರ ಹರಾಜು ಪ್ರಕ್ರಿಯೆ

0

ಶಿಖರ್ ಧವನ್, ಶ್ರೇಯಸ್ ಅಯ್ಯರ್, ರವಿಚಂದ್ರನ್ ಅಶ್ವಿನ್ ಮುಂತಾದ ಭಾರತೀಯ ಆಟಗಾರರು ಮತ್ತು ಪ್ಯಾಟ್ ಕಮಿನ್ಸ್, ಡೇವಿಡ್ ವಾರ್ನರ್, ಕಗಿಸೊ ರಬಾಡ ಇನ್ನು ಮುಂತಾದ ವಿದೇಶಿ ಆಟಗಾರರು ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಎರಡು ಕೋಟಿ ರೂಪಾಯಿ ಮೂಲ ಬೆಲೆ ಹೊಂದಿದ್ದಾರೆ. ಇದು ಐಪಿಎಲ್ 15ನೇ ಆವೃತ್ತಿಯ ಹರಾಜಿನ ಗರಿಷ್ಠ ಮೂಲ ಬೆಲೆ.

ಭಾರತದ ಹಿರಿಯ ಆಟಗಾರರಾದ ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ಉಮೇಶ್ ಯಾದವ್, ಇಶಾಂತ್ ಶರ್ಮಾ, ಅಂಜಿಕ್ಯ ರಹಾನೆ ಕೂಡ ಎರಡು ಕೋಟಿ ರೂಪಾಯಿ ಮೂಲಬೆಲೆ ಹೊಂದಿದ್ದಾರೆ.

ಫೆಬ್ರವರಿ 12 ಮತ್ತು 13ರಂದು ಬೆಂಗಳೂರಿನಲ್ಲಿ ಹರಾಜು ನಡೆಯಲಿದೆ. ಒಟ್ಟು 590 ಆಟಗಾರರು ಹರಾಜಿಗಿರುವ ಆಟಗಾರರ ಅಂತಿಮ ಪಟ್ಟಿ ಬಿಡುಗಡೆ ಕಳೆದ ತಿಂಗಳು ಬಿಡುಗಡೆ ಮಾಡಲಾಗಿದ್ದ 1,214ರ ಪಟ್ಟಿ 590 ಕ್ಕೆ ಕಡಿತಗೊಂಡಿದೆ. 590 ಕ್ರಿಕೆಟಿಗರ ಪೈಕಿ 228 ಅಂತರಾಷ್ಟ್ರೀಯ ಪಂದ್ಯಗಳನ್ನಾಡಿದರು. 355 ಮಂದಿ ಅಂತರಾಷ್ಟ್ರೀಯ ಪಂದ್ಯಗಳನ್ನಾಡದವರು. ಮತ್ತು ಏಳು ಮಂದಿ ಸಹ ಸದಸ್ಯ ರಾಷ್ಟ್ರಗಳಿಗೆ ಸೇರಿದವರಾಗಿದ್ದಾರೆ.

ಶ್ರೇಯಸ್ ಅಯ್ಯರ್ ಮತ್ತು ಶಿಖರ್ ಧವನ್ ಹರಾಜಿನಲ್ಲಿ ಅತ್ಯಂತ ಬೇಡಿಕೆಯ ಆಟಗಾರರಾಗಲಿದ್ದಾರೆ. ಹಾಗೆಯೇ ಇಶಾನ್ ಕಿಶನ್,ದೇವದತ್ ಪಡಿಕ್ಕಲ್, ವಾಷಿಂಗ್ಟನ್ ಸುಂದರ್, ದೀಪಕ್ ಚಾಹರ್ ಕಳೆದ ಆವೃತ್ತಿಯ ಗರಿಷ್ಠ ವಿಕೆಟ್ ಗಳಿಕೆ ಗಾರ ಹರ್ಷಲ್ ಪಟೇಲ್, ಸ್ಪಿನ್ನರ್ ಯಜ್ವೆಂದ್ರ ಚಹಲ್ ಮತ್ತು ವೇಗದ ಬೌಲರ್ ಶಾರ್ದುಲ್ ಠಾಕೂರ್ ಅವರನ್ನು ಖರೀದಿಸಲು 10 ತಂಡಗಳ ನಡುವೆ ಭಾರೀ ಸ್ಪರ್ಧೆ ಏರ್ಪಡುವ ಸಾಧ್ಯತೆ ಇದೆ.

ವಿದೇಶಿ ಆಟಗಾರರ ಪೈಕಿ ವೇಗಿಗಳಾದ ಟ್ರೆಂಟ್ ಬೌಲ್ಟ್, ಪ್ಯಾಟ್ ಕಮಿನ್ಸ್, ಆಸ್ಟ್ರೇಲಿಯಾದ ಬ್ಯಾಟರ್ ಗಳಾದ ಮಿಚೆಲ್ ಮಾರ್ಷ್ ಹಾಗೂ ಸ್ಟೀವ್ ಸ್ಮಿತ್, ಬಾಂಗ್ಲಾದೇಶದ ಮಾಜಿ ನಾಯಕ ಶಕಿಬ್ ಅಲ್ ಹಸನ್ ಮತ್ತು ದೊಡ್ಡ ಹೊಡೆತಗಳ ಆಟಗಾರ ದಕ್ಷಿಣ ಆಫ್ರಿಕಾದ ಫಾಫ್ ಡು ಪ್ಲೆಸಿಸ್ ಅವರನ್ನು ಕೊಂಡುಕೊಳ್ಳಲು ಫ್ರಾಂಚೈಸಿ ಗಳು ಮುಗಿಬೀಳುವ ಸಾಧ್ಯತೆಗಳಿವೆ.

ಆದರೆ, ಎರಡು ಕೋಟಿ ರೂಪಾಯಿ ಮೂಲ ಬೆಲೆ ಹೊಂದಿರುವ ಸುರೇಶ್ ರೈನಾ, ರಾಬಿನ್ ಉತ್ತಪ್ಪ ಮುಂತಾದ ಭಾರತದ ಹಿರಿಯ ಆಟಗಾರರನ್ನು ಕೊಂಡುಕೊಳ್ಳಲು ಫ್ರಾಂಚೈಸಿಗಳು ಮುಗಿ ಬೀಳುವ ಸಾಧ್ಯತೆ ಕಡಿಮೆ ಇದೆ.

ಓಮಿಕ್ರಾನ್ ಲಘುವಾಗಿ ಪರಿಗಣಿಸಬೇಡಿ

0

ಓಮಿಕ್ರಾನ್ ರೂಪಾಂತರಿಯ 4 ತಳಿಗಳ ಬೆನ್ನತ್ತಿರುವ ವಿಶ್ವ ಆರೋಗ್ಯ ಸಂಸ್ಥೆಯು ಲಘುವಾಗಿ ಪರಿಗಣಿಸಬೇಡಿ ಎಂದು ರಾಷ್ಟ್ರಗಳಿಗೆ ಎಚ್ಚರಿಕೆ ನೀಡಿದೆ.

ಕೊರೋನಾ ವೈರಸ್ ಮತ್ತಷ್ಟು ಮಾರ್ಪಾಡುಗಳನ್ನು ಮಾಡಿಕೊಂಡು ತನ್ನ ದಾಳಿಯನ್ನು ಮುಂದುವರಿಸುತ್ತಲೇ ಇದೆ.

ಯುರೋಪ್, ಅಮೆರಿಕ, ಏಷ್ಯಾ, ಆಫ್ರಿಕಾದಲ್ಲಿ ಇದನ್ನು ಕಾಣಬಹುದು. ಓಮಿಕ್ರಾನ್ ತಳಿಯಾದ ಬಿಎ.2 ಬಹಳ ವೇಗವಾಗಿ ಪ್ರಸರಣ ಹೊಂದಿದೆ. ಇದೆ ಮುಂದುವರೆದು ಶ್ವಾಸಕೋಶ ಸಂಬಂಧಿತ ಗಂಭೀರ ಕಾಯಿಲೆ ಉಂಟುಮಾಡುವಷ್ಟು ಸಾಮರ್ಥ್ಯ ಪಡೆದಲ್ಲಿ ಓಮಿಕ್ರಾನ್ ರೂಪಾಂತರಿಯು ಮಾರಣಾಂತಿಕ ವಾಗಲಿದೆ.

ಸದ್ಯಕ್ಕೆ ಅಂತ 4 ತಳಿಗಳು ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಅಲ್ಪ ಪ್ರಮಾಣದಲ್ಲಿ ಮಾತ್ರವೇ ಕಂಡುಬರುತ್ತಿರುವುದು ಸಮಾಧಾನಕರ ಸಂಗತಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಪ್ರಧಾನ ನಿರ್ದೇಶಕ ಟೆಡ್ರೋಸ್ ಅಧಾನೊಮ್ ಘ್ರೆಬ್ರೆಯೆಸುಸ್ ಅವರು ಹೇಳಿದ್ದಾರೆ. ಮುಖ್ಯವಾಗಿ, ಸದ್ಯ ವಿಶ್ವದಾದ್ಯಂತ ನೀಡಲಾಗುತ್ತಿರುವ ಕೊರೋನಾ ನಿರೋಧಕ ಲಸಿಕೆಗಳು ಮುಂದಿನ ಕೆಲ ತಿಂಗಳ ನಂತರ ಹೊಸ ಕೊರೋನಾ ತಳಿಗಳನ್ನು ನಿಗ್ರಹಿಸುವಲ್ಲಿ ವಿಫಲವಾಗಲಿವೆ. ಆದ್ದರಿಂದ ಲಸಿಕೆಗಳ ಉನ್ನತೀಕರಣದ ಅಗತ್ಯವಿದೆ ಎಂದು ಅವರು ಲಸಿಕೆ ತಯಾರಿಕೆ ಕಂಪನಿಗಳಿಗೆ ಕಿವಿಮಾತು ಹೇಳಿದ್ದಾರೆ

ಬಜೆಟ್ ಬಡವರು ಮತ್ತು ಹಿಂದುಳಿದವರಿಗೆ ಅನುಕೂಲಕರ- ವಿತ್ತ ಸಚಿವೆ

0

ಕೊರೋನಾ ಕಾಲದಲ್ಲಿ ಜನಸಾಮಾನ್ಯರ ಮೇಲಿನ ಆರ್ಥಿಕ ಹೊರೆ ಹೆಚ್ಚಿಸಬಾರದು ಎನ್ನುವ ಪ್ರಧಾನಿ ನರೇಂದ್ರ ಮೋದಿ ಸಲಹೆ ಮೇರೆಗೆ, ಪ್ರಸ್ತುತ ಸಾಲಿನ ಬಜೆಟ್ ನಲ್ಲಿ ತೆರಿಗೆ ಏರಿಕೆ ಮಾಡಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಿಳಿಸಿದ್ದಾರೆ.

ಹಣಕಾಸು ಸಚಿವಾಲಯದ ಅಧಿಕಾರಿಗಳ ಜೊತೆ ಸುದ್ದಿಗೋಷ್ಠಿಯಲ್ಲಿ ಮಾತನಾ ಡುತ್ತಿದ್ದರು. ” ಕೊರೋನಾ ಕಾಲದಲ್ಲಿ ಸರ್ಕಾರವು ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದೆ. ಇದರ ಹೊರತಾಗಿಯೂ ಜನರಿಗೆ ತೆರಿಗೆ ವಿಧಿಸುವ ಮೂಲಕ ಆದಾಯ ಹೆಚ್ಚಿಸಿಕೊಳ್ಳುವ ಸಣ್ಣ ಪ್ರಯತ್ನವನ್ನು ನಮ್ಮ ಸರ್ಕಾರ ಮಾಡಿಲ್ಲ ಎಂದು ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.

ರಿಸರ್ವ್ ಬ್ಯಾಂಕ್ ಮೂಲಕ ಚಲಾವಣೆಯಲ್ಲಿ ಇರುವುದನ್ನು ಮಾತ್ರ ಕರೆನ್ಸಿ ಎಂದು ಪರಿಗಣಿಸುತ್ತೇವೆ. ಅದು ಕ್ರಿಪ್ಟೋ ಆದರೂ ಸರಿ ಇನ್ಯಾವುದೇ ರೂಪವಾದರೂ ಸರಿ. ಹೀಗಾಗಿ ವೈಯಕ್ತಿಕ ಅಥವಾ ಬ್ಯಾಂಕಿಂಗ್ ವ್ಯವಸ್ಥೆಗಿಂತ ಹೊರಗಡೆ ಸೃಷ್ಟಿಯಾಗಿರುವ ವ್ಯವಹಾರವನ್ನು ಕರೆನ್ಸಿ ಎಂದು ಕರೆಯುವುದಿಲ್ಲ. ಆದ್ದರಿಂದ ಕ್ರಿಪ್ಟೋಕರೆನ್ಸಿ ವರ್ಗಾವಣೆಗಳ ಆದಾಯದ ಮೇಲೆ ಗಳಿಸುವ ಆದಾಯದ ಮೇಲಿನ ತೆರಿಗೆಯನ್ನು ಕರೆನ್ಸಿ ಮೇಲಿನ ತೆರಿಗೆ ಇಂದು ಒಪ್ಪಿಕೊಳ್ಳಲಾಗುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ಆರ್ಥಿಕ ವ್ಯವಸ್ಥೆಯ ಚೇತರಿಕೆಗೆ ಈ ಬಜೆಟ್ ಸಹಕಾರಿಯಾಗಲಿದೆ. ಈ ಬಜೆಟ್ ಎಲ್ಲರಿಗೂ ನೆರವು ನೀಡಲಿದೆ. ಅದರಲ್ಲೂ ಬಡವರು ಮತ್ತು ಸಮಾಜದ ಹಿಂದುಳಿದ ವರ್ಗಕ್ಕೆ ಅನುಕೂಲಕರವಾಗಲಿದೆ. ಹೆಚ್ಚು ಹೂಡಿಕೆ, ಮೂಲಸೌಕರ್ಯಗಳ ವೃದ್ಧಿ ಮೂಲಕ ಹೆಚ್ಚು ಅಭಿವೃದ್ಧಿ ಸಾಧಿಸುವುದೇ ಲೆಕ್ಕಪತ್ರದ ಗುರಿಯಾಗಿದೆ ಎಂದು ವಿತ್ತ ಸಚವೆ ನಿರ್ಮಲಾ ಸೀತಾರಾಮನ್ ಅವರು ತಿಳಿಸಿದ್ದಾರೆ.

ರಾಜ್ಯದ ನೀರಿನ ಪಾಲು ನಿರ್ಧಾರದ ಬಳಿಕ ನದಿಜೋಡಣೆಗೆ ಒಪ್ಪಿಗೆ

0

ಬಜೆಟ್ ನಲ್ಲಿ ಕಾವೇರಿ, ಕೃಷ್ಣ ಮತ್ತು ಪೆನ್ನಾರ್ ನದಿ ಜೋಡಣೆ ಪ್ರಸ್ತಾವವಿದೆ. ಯೋಜನೆಯಲ್ಲಿ ರಾಜ್ಯದ ನೀರಿನ ಪಾಲು ನಿರ್ಧಾರ ಆದ ಬಳಿಕವೇ ಇದಕ್ಕೆ ಒಪ್ಪಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದ್ದಾರೆ.

ರಾಜ್ಯದ ಬಂಡವಾಳ ಖಾತೆಗೆ ಹಿಂದೆ 26,000 ಕೋಟಿ ರೂ. ಬರುತ್ತಿತ್ತು. ಈ ಬಾರಿ 3 ಸಾವಿರ ರೂ. ಕೋಟಿ ಅಧಿಕವಾಗಿ ಬರುವ ನಿರೀಕ್ಷೆಯಿದೆ. ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಮೂಲಸೌಕರ್ಯ ಯೋಜನೆಗಳು ಮೆಟ್ರೋ ಗೆ ಹೆಚ್ಚಿನ ಅನುದಾನ ಸಿಗಲಿದೆ.
ಸಣ್ಣ, ಅತಿ ಸಣ್ಣ ಕೈಗಾರಿಕೆಗಳ ಚೇತರಿಕೆ ರೂ.50 ಸಾವಿರ ಕೋಟಿಯಿಂದ ರೂ.5 ಲಕ್ಷಕೋಟಿ ನೀಡಲಾಗುವುದು.
ದೇಶದಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಸಣ್ಣ ಕೈಗಾರಿಕೆಗಳಿವೆ. ಇದರ ಪ್ರಯೋಜನ ರಾಜ್ಯದ ಉದ್ಯಮಿಗಳಿಗೆ ಸಿಗಲಿದೆ ಎಂದರು.

ಡಿಜಿಟಲೀಕರಣ, ನಗರ ಯೋಜನೆ ತಜ್ಞರ ಬಳಕೆಗೆ ಒತ್ತು ನೀಡಲಾಗಿದೆ. ನಗರ ಸಾರಿಗೆಗೆ ದೊಡ್ಡ ಪ್ರಮಾಣದ ಅನುದಾನ ಮೀಸಲಿಡಲಾಗಿದೆ. ದೇಶದ ಕೃಷಿಯಲ್ಲಿ ಸ್ವಾವಲಂಬನೆಯ ದೃಷ್ಟಿಯಿಂದ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ದೇಶಾದ್ಯಂತ ನೊಂದಣಿ ವ್ಯವಸ್ಥೆ ಒಂದೇ ಮಾದರಿ ಇರಬೇಕು ಎಂದು ಒನ್ ನೇಷನ್ ಒನ್ ಪ್ರಾಪರ್ಟಿ ಕಾರ್ಯಕ್ರಮ ರೂಪಿಸಲಾಗಿದೆ. ಬಹಳಷ್ಟು ರಾಜ್ಯಗಳಲ್ಲಿ ನೊಂದಣಿ ವ್ಯವಸ್ಥೆಯಲ್ಲಿ ವ್ಯತ್ಯಾಸಗಳಿವೆ. ಇವುಗಳನ್ನು ನಿವಾರಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಪ್ರಧಾನಿ ಮೋದಿಯವರ ಶಿವಮೊಗ್ಗ ಭೇಟಿ ಸುಳಿವು

0

ಪ್ರಧಾನಿಯವರು ಕರ್ನಾಟಕದಲ್ಲಿ ಪಂಚಾಯತ್ ರಾಜ್ ದಿವಸ ಆಚರಿಸಲು ಇಚ್ಚಿಸಿದರೆ ಜಿಲ್ಲೆಯ ಯಾವ ಪಂಚಾಯಿತಿ ಆಯ್ಕೆ ಮಾಡಿಕೊಳ್ಳಬಹುದು ಎಂಬ ಮಾಹಿತಿ ನೀಡುವಂತೆ ಪ್ರಧಾನ ಮಂತ್ರಿ ಕಾರ್ಯಾಲಯ ಜಿಲ್ಲಾಡಳಿತವನ್ನು ಕೋರಿದೆ.
ಕೋರಿಕೆ ಬಂದ ತಕ್ಷಣ ಕಾರ್ಯಪ್ರವೃತ್ತರಾಗಿರುವ ಜಿಲ್ಲಾಡಳಿತವು ಶಿವಮೊಗ್ಗ ಬಳಿಯ ಕೊಮ್ಮನಾಳ್ ಅಥವಾ ಹೊಳಲೂರು ಪಂಚಾಯತಿ ಹೆಸರು ಅಂತಿಮಗೊಳಿಸುವ ಕುರಿತು ಚರ್ಚಿಸಿದ್ದಾರೆ. ಕಸ ವಿಲೇವಾರಿ ನಿರ್ವಹಣೆಯಲ್ಲಿ ಹೊಳಲೂರು ಪಂಚಾಯಿತಿ ರಾಜ್ಯಕ್ಕೆ ಮಾದರಿಯಾಗಿರುವುದು ಇದಕ್ಕೆ ಕಾರಣ ಎಂದು ತಿಳಿದುಬಂದಿದೆ.
ಪ್ರಧಾನಮಂತ್ರಿ ಕಚೇರಿ ತೆಗೆದುಕೊಳ್ಳುವ ಅಂತಿಮ ನಿರ್ಧಾರದ ಮೇಲೆ ಜಿಲ್ಲೆಯ ಭೇಟಿ ಖಚಿತವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಸಿರಿವಂತಿಕೆಯಲ್ಲಿ ಜುಕರ್ ಬರ್ಗ್ ಹಿಂದಿಕ್ಕಿದ ವಾರೆನ್ ಬಫೆಟ್

0

ಅಮೆರಿಕದ ಖ್ಯಾತ ಹೂಡಿಕೆದಾರ ವಾರೆನ್ ಬಫೆಟ್ ಅವರು ಸಿರಿವಂತಿಕೆಯನ್ನು ಮತ್ತೊಮ್ಮೆ ಫೇಸ್ ಬುಕ್ ಸ್ಥಾಪಕ ಮಾರ್ಕ್ ಜುಕರ್ ಬರ್ಗ್ ಅವರನ್ನು ಹಿಂದಿಕ್ಕಿದ್ದಾರೆ.

ಬಫೆಟ್ ಹೂಡಿರುವ ಹೂಡಿಕೆಗಳು ಗಣನೀಯ ಲಾಭ ತಂದುಕೊಟ್ಟಿರುವುದು ಇದಕ್ಕೆ ಕಾರಣ. ಬಫೆಟ್ ಸಂಪತ್ತಿನಲ್ಲಿ ಈ ವರ್ಷ 2.4 ಶತಕೋಟಿ ಡಾಲರ್ ಏರಿಕೆಯಾಗಿದ್ದು, 111 ಶತಕೋಟಿ ಡಾಲರ್ ಗೆ (8.32 ಲಕ್ಷ ಕೋಟಿ ರೂ.) ಏರಿಕೆಯಾಗಿದೆ.
ತಂತ್ರಜ್ಞಾನ ಆಧರಿತ ಕಂಪನಿಗಳು ಶೇರು ದರಗಳು ಇತ್ತೀಚೆಗೆ ಕುಸಿದಿವೆ.

ಇದರ ಪರಿಣಾಮ ಸಿಲಿಕಾನ್ ವ್ಯಾಲಿಯ ಉದ್ಯಮಿಗಳು 50 ಶತಕೋಟಿ ಡಾಲರ್ ಸಂಪತ್ತನ್ನು ಕಳೆದುಕೊಂಡಿದ್ದಾರೆ.
ಮಾರ್ಕ್ ಜುಕರ್ ಬರ್ಗ್ ಸಂಪತ್ತಿನಲ್ಲಿ ಶೇಕಡ 12 ರಷ್ಟು ಇಳಿಕೆಯಾಗಿದೆ ಎಂದು ತಿಳಿದುಬಂದಿದೆ.

ಫೆಡರಲ್ ರಿಸರ್ವ್ ತನ್ನ ಹಣಕಾಸು ನೀತಿಯನ್ನು ಬಿಗಿಗೊಳಿಸುತ್ತಿರುವುದು ಮತ್ತು ಹಣದುಬ್ಬರ ಇದಕ್ಕೆ ಕಾರಣವಾಗಿದೆ. ಷೇರು ಮಾರುಕಟ್ಟೆಗಳಲ್ಲಿ ಸೂಚ್ಯಂಕಗಳು ಕುಸಿಯುತ್ತಿದ್ದು, ಆಗರ್ಭ ಸಿರಿವಂತ
ಉದ್ಯಮಿಗಳಿಗೆ ನಷ್ಟವಾಗುತ್ತಿದೆ.

ಅಂತಿಮ ವರ್ಷದ ಎಂಬಿಬಿಎಸ್ ಪರೀಕ್ಷೆ ಮುಂದೂಡಲು ಸಚಿವರ ಸೂಚನೆ

0

ಫೆಬ್ರವರಿಯಲ್ಲಿ ಆರಂಭವಾಗಬೇಕಿದ್ದ ಎಂಬಿಬಿಎಸ್ ಅಂತಿಮ ವರ್ಷದ ಪರೀಕ್ಷೆಗಳನ್ನು ಮುಂದೂಡುವಂತೆ ರಾಜೀವ್ ಗಾಂಧಿ ಆರೋಗ್ಯ ವಿವಿ ಕುಲಪತಿಗೆ ಸಚಿವ ಡಾಕ್ಟರ್ ಸುಧಾಕರ್ ಅವರು ಸೂಚಿಸಿದ್ದಾರೆ.
ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾದಾಗ ಆನ್ ಲೈನ್ ನಲ್ಲಿ ತರಗತಿಗಳು ನಡೆಸಿದ್ದರಿಂದ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಪರೀಕ್ಷೆ ಮುಂದೂಡಬೇಕೆಂದು ವಿದ್ಯಾರ್ಥಿಗಳು ಕಳೆದ ವಾರ ವರ್ಚ್ಯುವಲ್ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪತ್ರ ಬರೆದಿರುವ ಸಚಿವರು, ರಾಜೀವ್ ಗಾಂಧಿ ಆರೋಗ್ಯ ವಿವಿ ಅಧೀನದ ವೈದ್ಯಕೀಯ ಕಾಲೇಜುಗಳಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತರಗತಿಯ ಆರಂಭವಾದದ್ದು ಮೇ ತಿಂಗಳಲ್ಲಿ. ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಿದ್ದ ಕಾರಣ ಜುಲೈವರೆಗೆ ಪಾಠಗಳು ಆನ್ ಲೈನ್ ನಲ್ಲಿ ನಡೆದಿವೆ. ಅಗತ್ಯವಿದ್ದಷ್ಟು ಕ್ಲಿನಿಕಲ್ ಪೋಸ್ಟಿಂಗ್ ಸಹ ಆಗಿರುವುದಿಲ್ಲ. ಅಲ್ಲದೆ ಅಂತಿಮ ವರ್ಷದ ವಿದ್ಯಾರ್ಥಿಗಳು ಎರಡು ತಿಂಗಳು ಕಾಲ ಕೋವಿಡ್ ಕರ್ತವ್ಯವನ್ನು ನಿರ್ವಹಿಸಿದ್ದಾರೆ ಎಂದು ತಿಳಿಸಿದರು. ತರಗತಿಗಳು ವಿಳಂಬವಾಗಿ ಆರಂಭವಾಗಿರುವುದರಿಂದ ಪರೀಕ್ಷೆಯಲ್ಲಿ ಮುಂದೂಡಬೇಕು ಎಂದು ಹೇಳಿದರು.

ಬಜೆಟ್ ಮಂಡನೆ : ವಿಪಕ್ಷ ನಾಯಕರ ಪ್ರತಿಕ್ರಿಯೆ

0

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದ ಬಜೆಟನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶೂನ್ಯ ಮೊತ್ತದ ಬಜೆಟ್ ಎಂದು ಕರೆದಿದ್ದಾರೆ. ಇದರಲ್ಲಿ ವೇತನ ಪಡೆಯುವವರಿಗೆ, ಮಧ್ಯಮವರ್ಗದವರಿಗೆ ಮತ್ತು ಬಡವರಿಗೆ ಏನು ಇಲ್ಲ ಎಂದು
ಟೀಕಿಸಿದ್ದಾರೆ.

ಇನ್ನು ಹಲವು ಕಾಂಗ್ರೆಸ್ ನಾಯಕರು ಇದೊಂದು ಲಾಲಿಪಾಪ್ ಬಜೆಟ್ ಎಂದು ಕರೆದಿದ್ದಾರೆ.

ಮಾಜಿ ಹಣಕಾಸು ಸಚಿವ ಮತ್ತು ಕಾಂಗ್ರೆಸ್ ನಾಯಕ ಪಿ ಚಿದಂಬರಂ ಬಜೆಟ್ ಭಾಷಣವನ್ನು ಎಫ್ ಎಂ ಓದಿದ ಅತ್ಯಂತ ಬಂಡವಾಳಶಾಹಿ ಭಾಷಣ ಎಂದು ಕುಟುಕಿದ್ದಾರೆ.

ಯಾರೊಬ್ಬರೂ ಇಂಥದ್ದನ್ನು ಮಂಡಿಸಿರಲಿಲ್ಲ. ಬಜೆಟ್ ಭಾಷಣದ ಆರನೇ ಪ್ಯಾರಾದಲ್ಲಿ ಮಾತ್ರ ಎರಡು ಬಾರಿ ಬಡವರು ಎಂಬ ಪದ ಬಳಕೆಯಾಗಿದೆ. ಇದಕ್ಕಾಗಿ ಹಣಕಾಸು ಸಚಿವರಿಗೆ ಕೃತಜ್ಞತೆ ಸಲ್ಲಿಸುವ ಎಂದು ಚುಚ್ಚಿ ಮಾತನಾಡಿದ್ದಾರೆ. ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೆವಾಲಾ ಅವರೊಂದಿಗೆ ಪತ್ರಿಕಾಗೋಷ್ಠಿ ನಡೆಸಿದ ಚಿದಂಬರಂ, ಈ ದೇಶದ ಜನ ಬಂಡವಾಳಶಾಹಿ ಬಜೆಟ್ ತಿರಸ್ಕರಿಸುತ್ತಾರೆ ಎಂದು ಪ್ರತಿಪಾದಿಸಿದ್ದಾರೆ.

ಹಣಕಾಸು ಸಚಿವರು ಹೊಸ ಬಜೆಟ್ ನಲ್ಲಿ ಯಾವುದೇ ಪರಿಹಾರ ಕ್ರಮಗಳನ್ನು ಘೋಷಿಸದೆ ಸಂಬಳ ಪಡೆಯುವ ವರ್ಗಕ್ಕೆ ದ್ರೋಹವೆಸಗಿದ್ದಾರೆ. ಭಾರತದ ಸಂಬಳ ಪಡೆಯುವ ವರ್ಗ ಮತ್ತು ಮಧ್ಯಮ ವರ್ಗವು ಸಾಂಕ್ರಾಮಿಕ ರೋಗದ ಸಮಯದಲ್ಲಿ ಪರಿಹಾರ, ಸರ್ವಾಂಗೀಣ ವೇತನ ಕಡಿತ ಮತ್ತು ಹಣದುಬ್ಬರ ಮುರಿಯುವ ನಿರೀಕ್ಷೆಯಲ್ಲಿದ್ದರು. ನೇರ ತೆರಿಗೆ ಕ್ರಮಗಳಲ್ಲಿ ಎಫ್ ಎಂ ಮತ್ತು ಪ್ರಧಾನಿ ಮತ್ತೆ ತೀವ್ರ ನಿರಾಸೆ ಗೊಳಿಸಿದ್ದಾರೆ, ಎಂದು ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೆವಾಲಾ ಅವರು ಹೇಳಿದ್ದಾರೆ.

ಕ್ರಿಫ್ಟೋಕರೆನ್ಸಿ ಇಂದಿನಿಂದ ಕಾನೂನುಬದ್ಧ ವಾಗಿದೆ ಎಂದು ನಿರ್ಮಾಣ ವಾಸ್ತವವಾಗಿ ಘೋಷಿಸಿದ್ದಾರೆ. ಆದರೆ ಇದ್ಯಾವುದು ದೇಶದ 99.99% ಜನರಿಗೆ ಪ್ರಯೋಜನಕಾರಿಯಲ್ಲ ಎಂದು ಹೇಳಿದರು. ರಾಜ್ಯಸಭೆಯಲ್ಲಿ ಉಪ ನಾಯಕರಾಗಿರುವ ಆನಂದ ಶರ್ಮಾ, ಉದ್ಯೋಗ ನಿರ್ಮಾಣ, ಮಧ್ಯಮವರ್ಗ ಮತ್ತು ಬಡವರಿಗೆ ಹಲವು ಬಗೆಯ ಪರಿಹಾರದ ನಿರೀಕ್ಷೆಯಲ್ಲಿದ್ದರು. ಆದರೆ ಯಾವುದೂ ಈಡೇರಿಲ್ಲ ಎಂದು ಟೀಕಿಸಿದ್ದಾರೆ.