Monday, February 16, 2026
Monday, February 16, 2026
Home Blog Page 1740

ಕೃಷಿಗೆ ಎಷ್ಟು ಉತ್ತೇಜನ?

0

ಕೊರೋನಾ ತಂದ ಬದಲಾವಣೆಯಿಂದ ಈ ಬಾರಿ ಬಜೆಟ್ ಮಂಡನೆಯ ಸ್ವರೂಪದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಬದಲಾವಣೆಯಾಗಿದೆ. ಮೊಟ್ಟಮೊದಲ ಬಾರಿಗೆ ಬಜೆಟ್ ಮುದ್ರಣ ಗೊಳ್ಳುತ್ತಿಲ್ಲ. ಇದರ ಬದಲಾಗಿ ಕೇಂದ್ರ ಸರ್ಕಾರದ ಯೂನಿಯನ್ ಬಜೆಟ್ ಆಪ್ನಲ್ಲಿ ಸಂಸತ್ ಸದಸ್ಯರಿಗೆ ಮತ್ತು ಸಾರ್ವಜನಿಕರಿಗೆ ಲಭ್ಯವಾಗುತ್ತಿದೆ.

ಕೇಂದ್ರ ಸರ್ಕಾರ ಕೃಷಿಯಲ್ಲಿ ಡ್ರೋನ್ ಗಳ ಬಳಕೆ, ರಾಸಾಯನಿಕ ಮುಕ್ತ ಸಹಜ ಕೃಷಿ ಪದ್ಧತಿ ಮತ್ತು ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ರೈತರಿಗೆ ಡಿಜಿಟಲ್ ಮತ್ತು ಹೈಟೆಕ್ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಉತ್ತೇಜನ ನೀಡಲಿದೆ.
ಹಂತಹಂತವಾಗಿ ಕನಿಷ್ಠ ಬೆಂಬಲ ಬೆಲೆ ರದ್ದಾಗಲಿದೆ ಎನ್ನುವ ರೈತ ಸಂಘಟನೆಗಳ ಅನುಮಾನ ನಿವಾರಿಸುವ ಪ್ರಯತ್ನವನ್ನು ಮುಂಗಡಪತ್ರದಲ್ಲಿ ನೀಡಲಾಗಿದೆ.

ಏಪ್ರಿಲ್ 2022 ರಿಂದ ಮಾರ್ಚ್ 2023ರ ಅವಧಿಯಲ್ಲಿ ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಮೂಲಕ ಭತ್ತ ಮತ್ತು ಗೋಧಿ ಖರೀದಿಸಲು 2.37 ಲಕ್ಷ ಕೋಟಿ ರೂಪಾಯಿ ಮೀಸಲಿಡಲಾಗುವುದು ಎಂದು ಘೋಷಿಸಲಾಗಿದೆ. ಎಂ ಎಸ್ ಪಿ ಮೂಲಕ ಖರೀದಿಸಲಾದ ಬೆಳೆಗಳಿಗೆ ಪ್ರತಿಯಾಗಿ ರೈತರ ಖಾತೆಗಳಿಗೆ ಅನುದಾನವನ್ನು ನೇರವಾಗಿ ಜಮಾ ಮಾಡಲಾಗುತ್ತದೆ. ವಿಧಾನಸಭೆ ಚುನಾವಣೆ ನಡೆಸಲಿರುವ ಉತ್ತರ ಪ್ರದೇಶ ಮತ್ತು ಪಂಜಾಬ್ ಗಳಲ್ಲಿ ಭತ್ತ, ಗೋಧಿ ಪ್ರಮುಖ ಬೆಳೆಗಳಾಗಿರುವುದು ವಿಶೇಷ. ದೇಶದಾದ್ಯಂತ 2021-22 ನೇ ಸಾಲಿನಲ್ಲಿ 163 ಲಕ್ಷ ರೈತರಿಂದ 1,208 ಲಕ್ಷ ಟನ್ ಆಹಾರ ಧಾನ್ಯಗಳನ್ನು ಖರೀದಿಸಲಾಗಿದೆ.

ಸರ್ವರನ್ನು ಒಳಗೊಂಡ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಗುರಿಯಾಗಿದೆ. ಅದರ ಭಾಗವಾಗಿಯೂ ಕೃಷಿಯಲ್ಲಿ ಕಿಸಾನ್ ಡ್ರೋನ್ ಗಳ ಬಳಕೆಗೆ ಉತ್ತೇಜನ ನೀಡಲಾಗಿದೆ. ಬೆಳೆ ಮೌಲ್ಯಮಾಪನ, ಭೂದಾಖಲೆಗಳ ಡಿಜಿಟಲೀಕರಣ ಮತ್ತು ಕೀಟನಾಶಕಗಳ ಸಿಂಪಡಣೆ ಗೆ ಈ ಡ್ರೋನ್ ಗಳನ್ನು ಬಳಸುವುದು ಸರ್ಕಾರದ ಆಶಯವಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಿಳಿಸಿದ್ದಾರೆ.

ಇದರ ಜೊತೆಗೆ ಗ್ರಾಮ ರಸ್ತೆ ನಿರ್ಮಾಣಕ್ಕೂ ಹೆಚ್ಚು ಒತ್ತನ್ನು ನೀಡಲಾಗಿದೆ. ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಗೆ ನೀಡುವ ಅನುದಾನವನ್ನು ಶೇ. 36 ರಷ್ಟು ಹೆಚ್ಚಳ ಮಾಡಲಾಗಿದೆ. ಮುಂದಿನ ಹಣಕಾಸು ವರ್ಷದಲ್ಲಿ ಈ ಯೋಜನೆಗೆ 19 ಸಾವಿರ ಕೋಟಿ ರೂಪಾಯಿ ಅನುದಾನ ನಿಗದಿಪಡಿಸಲಾಗಿದೆ. ಮತ್ತೊಂದು ವಿಶೇಷವೇನೆಂದರೆ ಈಶಾನ್ಯ ಭಾರತದ ರಾಜ್ಯಗಳಲ್ಲಿ ನ‌ ಗ್ರಾಮೀಣ ಪ್ರದೇಶದ ರಸ್ತೆ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಲು ತೀರ್ಮಾನಿಸಲಾಗಿದೆ. 2021-22 ನೇ ಸಾಲಿನಲ್ಲಿ ಯೋಜನೆಗೆ 14,000 ಕೋಟಿ ರೂಪಾಯಿ ನಿಗದಿಪಡಿಸಲಾಗಿತ್ತು. ಆದರೆ ಗ್ರಾಮೀಣ ಅಭಿವೃದ್ಧಿ ಸಚಿವಾಲಯಕ್ಕೆ ನಿಗದಿಪಡಿಸಿರುವ ಅನುದಾನದಲ್ಲಿ ಶೇ.11 ರಷ್ಟು ಕಡಿತ ಮಾಡಲಾಗಿದೆ. ಇದರಿಂದ ಕೇಂದ್ರ ಪ್ರಾಯೋಜಿತ ಯೋಜನೆಗಳಲ್ಲಿ ರಾಜ್ಯಗಳಿಗೆ ನೀಡುವ ಅನುದಾನದಲ್ಲಿ ಗಣನೀಯವಾಗಿ ಕಡಿತವಾಗಲಿದೆ.

ಇದರೊಂದಿಗೆ ಜಲಶಕ್ತಿ ಅನುದಾನ ಹೆಚ್ಚಳವಾಗಿದೆ. ಜಲಶಕ್ತಿ ಸಚಿವಾಲಯಕ್ಕೆ 86,189 ಕೋಟಿ ರೂಪಾಯಿ ಅನುದಾನ ನಿಗದಿಪಡಿಸಲಾಗಿದೆ.

2023ನೇ ವರ್ಷವನ್ನು ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷವೆಂದು ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಪ್ರೋತ್ಸಾಹ ರೂಪಿಸಲು ಕೇಂದ್ರ ಸರ್ಕಾರ ವಿಶೇಷ ಯೋಜನೆ ರೂಪಿಸಲಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸಿರಿಧಾನ್ಯಗಳ ಬಳಕೆ ಹೆಚ್ಚಿಸಲು ಕ್ರಮ ಕೈಗೊಳ್ಳುವುದರ ಜೊತೆಗೆ ಸಿರಿಧಾನ್ಯಗಳಿಗೆ ಕಟಾವು ನಂತರದ ಸಂಸ್ಕರಣೆಗೆ ಬೆಂಬಲ ನೀಡುವ ಯೋಜನೆಗಳನ್ನು ರೂಪಿಸಲಾಗುತ್ತದೆ. ಇನ್ನು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಗಳಿಗೆ 6,75,000 ಕೋಟಿ ರೂಪಾಯಿ, ಬೆಳೆ ವಿಮೆ ಯೋಜನೆಗೆ 15,500 ಕೋಟಿ ರೂಪಾಯಿ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಗೆ 10,433 ಕೋಟಿ ರೂಪಾಯಿ , ಬೆಲೆ ಬೆಂಬಲ ಯೋಜನೆಯಲ್ಲಿ ಮಾರುಕಟ್ಟೆ ಮಧ್ಯಪ್ರವೇಶಕ್ಕೆ 1,500 ಕೋಟಿ ರೂಪಾಯಿ ನಿಗದಿಪಡಿಸಲಾಗಿದೆ.

ಕೃಷಿ ಸಾಲವನ್ನು ಗಣನೀಯವಾಗಿ ಹೆಚ್ಚು ಮಾಡಲಾಗಿದೆ. ಕೃಷಿ ಸಾಲದ ಪ್ರಮಾಣವನ್ನು 16.50 ಲಕ್ಷ-ಕೋಟಿ ರೂಪಾಯಿಗಳಿಂದ 18 ಲಕ್ಷ ಕೋಟಿ ರೂಪಾಯಿಗಳಿಗೆ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ. ಪ್ರಸ್ತುತ ಹಣಕಾಸು ವರ್ಷದಲ್ಲಿ ನಿಗದಿಯಾಗಿದ್ದ ಮೊತ್ತದ ಪೈಕಿ ಶೇ.75 ರಷ್ಟು ಮೊತ್ತವನ್ನು ರೈತರಿಗೆ ವಿತರಿಸಲಾಗುತ್ತದೆ ಅದರಲ್ಲೂ ಮೊದಲ ತ್ರೈಮಾಸಿಕದಲ್ಲಿಯೇ 7.36 ಲಕ್ಷ ಕೋಟಿ ರೂಪಾಯಿ ಸಾಲ ನೀಡಲಾಗಿದೆ ಎಂದು ಬಜೆಟ್ ಮಂಡನೆ ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಜೆಟ್ ಕುರಿತು ಪ್ರತಿಕ್ರಿಯೆ

0

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ಅವರು ಈ ಬಜೆಟ್ ಜನ ವಿರೋಧಿ, ಕಾರ್ಪೊರೇಟ್ ಸ್ನೇಹಿ ಬಜೆಟ್ ಎಂದು
ಕಿಡಿ ಕಾರಿದರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ,ಬಜೆಟ್ ಮಂಡನೆಯ ಕುರಿತು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ರಮೇಶ್ ಹೆಗ್ಡೆ, ರೇಖಾ ರಂಗನಾಥ್, ಯಮುನಾ ರಂಗೇಗೌಡ ಆಡಳಿತ ಉಸ್ತುವಾರಿಗಳಾದ ಚಂದ್ರಬೋಪಾಲ್ ,ಸಾಮಾಜಿಕ ಜಾಲತಾಣ ರಾಜ್ಯ ಉಪಾಧ್ಯಕ್ಷರಾದ ಸೌಗಂಧಿಕಾ ರಘುನಾಥ್ , ಜಿಲ್ಲಾ ಪದಾಧಿಕಾರಿಗಳಾದ ಚಂದ್ರಶೇಖರ್ ಚಂದನ್ ಸಾಮಾಜಿಕ ಜಾಲತಾಣದ ಜಿಲ್ಲಾ ಪದಾಧಿಕಾರಿಗಳಾದ ಸುಹೈಲ್ ಸಂಜಯ್ ಕಶ್ಯಪ್ ಹಾಗೂ ಅರುಣ್ ರಾವ್ ಅವರು ಉಪಸ್ಥಿತರಿದ್ದರು.

ಬಜೆಟ್ ನಲ್ಲಿ ಗಮನ ಸೆಳೆದ ಡಿಜಿಟಲ್ ವಿಶ್ವವಿದ್ಯಾನಿಲಯ

2

ಪ್ರತೀವರ್ಷದ ಬಜೆಟ್ ಎಂದರೆ ಯಾವ ಯಾವುದರ ಮೇಲೆ ತೆರಿಗೆ ಹಾಕಲಾಗುತ್ತದೆ?. ದೇಶದ ರಕ್ಷಣಾ ವೆಚ್ಚಕ್ಕೆ ಎಷ್ಟು ಮೀಸಲು?.ದುಡಿಯುವ ವರ್ಗಗಳಿಗೆ ಆದಾಯದಲ್ಲಿ ತೆರಿಗೆ ಹಂತಗಳನ್ನ ವಿಸ್ತರಿಸುತ್ತದೆಯೆ? ಪಟ್ರೋಲು ಡಿಸೆಲ್ಲು ರೇಟು ಇಳಿಸ್ತಾರ? ಕೃಷಿಕರು, ವ್ಯಾಪಾರಸ್ಥರು,ಗೃಹಿಣಿಯರು …ಹೀಗೆ ಅನೇಕರು ತಮ್ಮದೇ ನಿರೀಕ್ಷೆಗಳನ್ನ ಇಟ್ಟುಕೊಂಡಿರುವುದು ಸಹಜ.

ಆದರೆ ಈವರ್ಷ ವಿತ್ತ ಸಚಿವರು ಮಂಡಿಸಿದ ಬಜೆಟ್ ಮೇಲ್ನೋಟಕ್ಕೆ ಇದಾವುದರ ಬಗ್ಗೆಯೂ ಉಲ್ಲೇಖ ಮಾಡಿಲ್ಲ. ಯಾವಾಗಲೂ ಚುನಾವಣೆ,ವೋಟುಗಳ ದೃಷ್ಟಿಯಿಟ್ಟುಕೊಂಡು ಮಂಡಿಸುವ ಹಿನ್ನೆಲೆ ನೋಡಿದರೆ ಸಾಮಾನ್ಯರ ನಿರೀಕ್ಷೆ ಸಂಪೂರ್ಣ ಹುಸಿಯಾಗಿದೆ.
ಹಾಗಂತ ಇದು ಹುಳಿದ್ರಾಕ್ಷಿಯೆ ? ಎಂದು ಹೇಳಲೂ ಸಾಧ್ಯವಿಲ್ಲ.

ಕೋವಿಡ್ ನಿಂದ ತತ್ತರಿಸಿದ ಆರ್ಥಿಕತೆ ಚೇತರಿಸಿಕೊಳ್ಳಲೂ ಸಮಯ ಬೇಕಿದೆ.
ಅದರ ಬಗ್ಗೆ ಈಗಾಗಲೇ ನಡುನಡುವೆ ಸರ್ಕಾರ ಪ್ರಸ್ತಾಪಿಸಿ ಒಂದಿಷ್ಡು ಆರ್ಥಿಕ
ಬೆಂಬಲ ನೀಡಿದೆ.ಈ ಬಜೆಟ್ ನಲ್ಲಿ ಮತ್ತೆ ಹೊಸದನ್ನ ನೋಡಬಹುದೆ?
ನಾವೀಗ ಡಿಜಿಟಲ್ ಯುಗದಲ್ಲಿದ್ದೇವೆ. ಡಿಜಿಟಲ್ ಬ್ಯಾಂಕ್,ಡಿಜಿಟಲ್ ಕರೆನ್ಸಿ
ಡಿಜಿಟಲ್ ವಿಶ್ವವಿದ್ಯಾನಿಲಯ…ಹೀಗೆ ನವೀನ ಪ್ರಸ್ತಾಪ ನಮ್ಮ ಗಮನ ಸೆಳೆಯುತ್ತದೆ. ಮಿಕ್ಕ ಆಯವ್ಯಯದ ಬಗ್ಗೆ ತೆರಿಗೆ ,ಆರ್ಥಿಕ ತಜ್ಞರು ನಮ್ಮ ಓದುಗರ,ವೀಕ್ಷಕರ ಗಮನ ಸೆಳೆಯುವ ಪ್ರತಿಕ್ರಿಯೆ ನೀಡಿದ್ದಾರೆ.

ನಾವೀಗ ಡಿಜಿಟಲ್ ಪ್ರಸ್ತಾಪಕ್ಕೆ ಬರೋಣ.ಈಗಾಗಲೇ ಕೋವಿಡ್ ಲಾಕ್ ಡೌನ್ ನಮಗೆ ಮೊಬೈಲ್ ಮೂಲಕ ಡಿಜಿಟಲ್ ಪಾವತಿಯನ್ನ ಬಲವಂತವಾಗಿ
ಮೂಗು ಹಿಡಿದು ಕಲಿಸಿಬಿಟ್ಟಿದೆ. ಅದರ ಸಂಗತಿ ಬಂದಾಗ ಸೊಪ್ಪು ಮಾರುವವರಿಗೆ… ಹಣ್ಣುಹಂಪಲು ಮಾರುವವರಿಗೆ ,ದಿನಸಿ,ಹೋಟಲ್ಲು ಗಳಲ್ಲಿ ಎಂಥ ಡಿಜಿಟಲ್ ಪೇಮೆಂಟು? ಅಂತ ನಗೆಯಾಡಿಕೊಂಡಿದ್ದೆವು. ಆದರೆ ನಾವೀಗ ಡಿಜಿಟಲ್ ಸಾಕ್ಷರರಾಗಿದ್ದೇವೆ ಅಂದುಕೊಳ್ಳಬಹುದು.( ಅದರಲ್ಲೂ
ಮೋಸ ಮಾಡುವ ಆ್ಯಪ್ ಗಳೂ ಬಂದಿವೆ .ಎಚ್ಚರದಿಂದಿರೋಣ)

ಲಾಕ್ ಡೌನ್ ನಿಂದ ನಮ್ಮ ಶಿಕ್ಷಣ ವ್ಯವಸ್ಥೆ ಅಸ್ತವ್ಯಸ್ತವಾಗಿ ನಿಯಂತ್ರಣ ಕಳೆದುಕೊಂಡಿತ್ತು.ಇನ್ನೂ ತಹಬದಿಗೆ ತರುತ್ತಿದ್ದಂತೆ ಕೋವಿಡ್…ಒಮಿಕ್ರಾನ್
ಸೋಂಕು ನಮ್ಮನ್ನ ಆತಂಕಕ್ಕೆ ತಳ್ಳಿಬಿಟ್ಟಿದೆ ಆದರೆ ಆನ್ ಲೈನ್ ಶಿಕ್ಷಣ ಕಲಿಕೆಗೆ ಮತ್ತೊಂದು ಆಯಾಮವನ್ನೇ ನೀಡಿತು. ನಾಲ್ಕು ಗೋಡೆಗಳ ,ಕ್ಲಾಸ್ ರೂಮ್ ಬೋಧನೆಗೆ ನಾವು ಹೊಂದಿಕೊಂಡು ಬಿಟ್ಟಿದ್ದೇವೆ. ಆದರೆ ಈ ಬದಲಿ ವ್ಯವಸ್ಥೆ ಜಿರ್ಣಿಸಿಕೊಳ್ಳಲು ಕಷ್ಟ ಸಾಧ್ಯವಾಗಿದೆ. ಆಂಥದ್ದರಲ್ಲೂ ವಿದ್ಯುನ್ಮಾನ ಮಾಧ್ಯಮಗಳ ಮೂಲಕ ಸಮಾಧಾನಕರ ನಡೆಸಲಾಯಿತು. ಆದರೆ ಕಳ್ಳಬೀಳುವ ವಿದ್ಯಾರ್ಥಿಗಳ ಮನೋಧರ್ಮಕ್ಕೆ ಇದರಲ್ಲಿ ಶಿಸ್ತು ಹೇರುವ
ಕೆಲಸವಾಗುವುದಿಲ್ಲ. ನಮ್ಮ ತಜ್ಞರು ಅದಕ್ಕೆ ಮತ್ತೊಂದು ಪರಿಹಾರ ಹುಡುಕುತ್ತಾರೆ.

ಈ ವರ್ಷದ ಬಜೆಟ್ ನಲ್ಲಿ 200 ಟೀವಿ ಚಾನಲ್ ಗಳಿರುವ ಡಿಜಿಟಲ್ ವಿವಿ
ಸ್ಥಾಪನೆ ಪ್ರಸ್ತಾಪವಿದೆ.” ಒನ್ ಕ್ಲಾಸ್ ಒನ್ ಟೀವಿ ಚಾನಲ್”. ಈ ವ್ಯವಸ್ಥೆಯಲ್ಲಿ ಕೌಶಲ ಅಭಿವೃದ್ಧಿಗೆ ವರ್ಚುವಲ್ ಲ್ಯಾಬ್,ಇ-ಲ್ಯಾಬ್ ,
ಇ- ಕಂಟೆಂಟ್ ಇವೆಲ್ಲವೂ ಅಡಕವಾಗಿವೆ.
ಟೀವಿ ಅಂದಾಕ್ಷಣ ಮನೋರಂಜನೆ , ಸುದ್ದಿ ಸಮಾಚಾರ ಎಂಬ ಅರ್ಥಬರುವ
ಕಲ್ಪನೆ ಈಗ ಎಲ್ಲರ ಮನದಲ್ಲಿ ಮೂಡುವ ಚಿತ್ರ.ಆದರೆ ಡಿಜಿಟಲ್ ವಿವಿ ವಿನ್ಯಾಸದ ಬಗ್ಗೆ ನಮ್ಮ ಕಲ್ಪನೆ ಗರಿಗೆದರಿದರೆ ಅದರ ವ್ಯಾಪ್ತಿ ಇನ್ನಷ್ಟೂ
ಶೈಕ್ಷಣಿಕ ಹಿನ್ನೆಲೆಯಲ್ಲಿ ವಿಸ್ತರಿಸಲು ಸಾಧ್ಯವಿದೆ. ಮುಖ್ಯವಾಗಿ ನಮ್ಮ ಗಮನ ಮಕ್ಕಳನ್ನ ಪೋಷಕರಾದ ನಾವುಗಳು ಮೊಬೈಲ್,ಲ್ಯಾಪ್ ಟಾಪ್ ಕಂಪ್ಯೂಟರ್ ಗಳ ಪಾಸಿಟಿವ್ ಬಳಕೆಯ ಬಗ್ಗೆ ಪ್ರೇರಣೆ ನೀಡಲು ಪ್ರಯತ್ನಿಸಬೇಕಿದೆ.ಅದು ನಮ್ಮ ಹೊಣೆಯೂ ಹೌದು.

ದೂರದ ಪ್ರಾತ್ಯಕ್ಷಿಕೆಗಳನ್ನ ಮನೆಯಲ್ಲೇ ನೋಡಿ ತಿಳಿದುಕೊಳ್ಳುವ ಸೌಲಭ್ಯ
ಶೈಕ್ಷಣಿಕ ಬೋಧನೆಗೂ ಪರಿಣಾಮಕಾರಿ.ಈಗ ನಮ್ಮ ಮಕ್ಕಳು ತಾಂತ್ರಿಕ ವಿಚಾರಗಳ ಬಗ್ಗೆ…ಅಂದರೆ ಮೊಬೈಲ್ , ಮಿಕ್ಸಿ, ರೋಬಟ್ ಮಾಪರ್,ಇತ್ಯಾದಿ. ವಿದ್ಯುನ್ಮಾನ ಉಪಕರಣದ ಇನ್ಸ್ಟಾಲೇಷನ್ ಬಗ್ಗೆ ತಕ್ಷಣ ಯು ಟ್ಯೂಬ್ ಮೊರೆ ಹೋಗಿ ಅಲ್ಲಿಂದ ಮಾಹಿತ ಪಡೆಯುತ್ತಾರೆ. ಇದೇ ಮನೋಧರ್ಮ ಕಲಿಉವ ಪಠ್ಯದ ಬಗ್ಗೆಯೂ ಪೂರಕವಾದರೆ ಡಿಜಿಟಲ್ ತರಗತಿಗಳು ಉಪಯುಕ್ತವಾಗುತ್ತವೆ.
ಇಲ್ಲಿ ” ಇ-ಕಂಟೆಂಟ್ ” ಸಿದ್ಧಪಡಿಸುವವರ ಪ್ರಧಾನ ಪಾತ್ರವಿದೆ. ಪಠ್ಯ ವಿಷಯಗಳನ್ನ ಇಂಟರ್ ನೆಟ್, ಮೊಬೈಲ್, ಟೀವಿ,ರೇಡಿಯೊ ಗಳಲ್ಲಿ ಡಿಜಿಟಲ್ ವಿನ್ಯಾಸ, ಭಾಷೆಯಲ್ಲಿ ಸಿದ್ಧಪಡಿಸುವ ಪರಿಶ್ರಮ
ಒಂದು ಕಲೆಗಾರಿಕೆ ಆಗಬೇಕಾಗುತ್ತದೆ. ಇದೊಂದು ಬೃಹತ್ ಸಂಯುಕ್ತ,ಸಾಮಾಜಿಕ,ಶೈಕ್ಷಣಿಕ ಹೊಣೆಗಾರಿಕೆ. ದೇಶದ ಎನ್ ಸಿ ಇ ಆರ್ ಟಿ
ಸಂಸ್ಥೆಯ ಪರಿಣಿತರ ಸೇವೆ ಬಹಳ ಮುಖ್ಯ. ಆ ಸಂಸ್ಥೆಯೇ ಈ ಪಠ್ಯದ ವಿನ್ಯಾಸ ರೂಪಿಸುವಲ್ಲಿ ಒಂದು ದೀರ್ಘಕಾಲೀನ ಅಲ್ಲದಿದ್ದರೂ ನಿರ್ದಿಷ್ಟ ಕಾಲಾವಧಿಯಲ್ಲಾದರೂ ರೂಪಸಬಹುದು. ಏಕೆಂದರೆ ಬಿಸಿ ಇದ್ದಾಗಲೇ ಕಬ್ಬಿಣವನ್ನ ತಟ್ಟಿ ನಮಗೆ ಅವಶ್ಯದ ಆಕಾರಕ್ಕೆ ತರಬಹುದು.

ದೇಶದ ಪರಿಣತರ ಜ್ಞಾನ,ಅನುಭವ ದೇಶದ ತುಂಬಾ ಹಂಚಲ್ಪಡುತ್ತದೆ.
ಎಲ್ಲ ಭೌಗೋಳಿಕ, ಸಾಮಾಜಿಕ ,ಸಾಂಸ್ಕೃತಿಕ ಮನಸ್ಸು ಮಿಲನಗೊಂಡು
ಈ – ಕಂಟೆಂಟ್ ನಿರ್ಮಿಸುವುದರಿಂದ ಅಪೂರ್ವ ಕೊಡುಗೆ ನೀಡಿದಂತಾಗುತ್ತದೆ.

ಸಾಮಾನ್ಯರ ನಿರೀಕ್ಷೆ ಹುಸಿ ಭವ್ಯ ಭಾರತಕ್ಕೆ ಖುಷಿ

0

2021 -22ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದಾರೆ. ಒಟ್ಟು ಬಜೆಟ್ ಗಾತ್ರ 39.54 ಲಕ್ಷ ಕೋಟಿ ರೂಪಾಯಿ ಆಗಿದೆ.
3,030 ಕೋಟಿ ರೂ. ಹವಾಮಾನ ಬದಲಾವಣೆ, ಅರಣ್ಯ ಹಾಗೂ ಪರಿಸರ ಇಲಾಖೆಗೆ ನೀಡಲಾಗಿರುವ ಅನುದಾನ. ಸ್ವಚ್ಛ ಇಂಧನ, ಅಭಿವೃದ್ಧಿ ಹಾಗೂ ಬಳಕೆಗೆ ಒತ್ತು ನೀಡಲಾಗುವುದು ಎಂದು ತಿಳಿಸಿದರು.
54,873 ಕೋಟಿ ರೂ. ಭೂ ವಿಜ್ಞಾನ ಸಚಿವಾಲಯಕ್ಕೆ ನೀಡಲಾಗಿರುವ ಅನುದಾನವಾಗಿದೆ. ಕಳೆದ ವರ್ಷಕ್ಕಿಂತ 2684 ಕೋಟಿ ರೂ. ಹೆಚ್ಚಿನ ಅನುದಾನ ನೀಡಲಾಗಿದೆ.
73000 ಕೋಟಿ ರೂ. ಮನರೇಗಾ ಯೋಜನೆಗೆ ನೀಡಲಾಗಿರುವ ಅನುದಾನವಾಗಿದೆ. ಕಳೆದ ವರ್ಷಕ್ಕಿಂತ ಶೇಕಡಾ 25.51ರಷ್ಟು ಕಡಿಮೆ ಅನುದಾನವನ್ನು ನೀಡಲಾಗಿದೆ.
ಡಿಜಿಟಲ್ ತಂತ್ರಜ್ಞಾನ ಕ್ಷೇತ್ರದ ಪ್ರಮುಖ ಅಂಗವಾಗಿ ಅಭಿವೃದ್ಧಿಹೊಂದುತ್ತಿರುವ ಅನಿಮೇಷನ್, ವಿಶುವಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ ಗಳ ಉತ್ತೇಜನ ಅಗತ್ಯವಾದ ಉನ್ನತ ಮಟ್ಟದ ಕಾರ್ಯಪಡೆ ರಚನೆಗೆ ಬಜೆಟ್ ನಲ್ಲಿ ಸರ್ಕಾರ ಒತ್ತು ನೀಡುವ ಸುಳಿವು ಕೊಟ್ಟಿದೆ.
ಈಶಾನ್ಯ ರಾಜ್ಯಗಳ ಅಭಿವೃದ್ಧಿಗೆ ಬಹಳ ಒತ್ತು ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ಈ ಬಾರಿಯ ಬಜೆಟ್ ನಲ್ಲಿ ಈಶಾನ್ಯ ರಾಜ್ಯಗಳಿಗಾಗಿಯೇ ಸೀಮಿತವಾದ 1500 ಕೋಟಿ ರೂ. ಮೌಲ್ಯದ ಹೊಸ ಯೋಜನೆ ಪಿಎಂ-ದೇವೈನ್ (PM-DevINE) ಘೋಷಣೆ ಮಾಡಿಸಿದ್ದಾರೆ.

ಸಾಧನೆ ಆಧರಿತ ಪ್ರೋತ್ಸಾಹಧನ ಯೋಜನೆಯ ಭಾಗವಾಗಿ 19,500 ಕೋಟಿ ರೂ. ಹೆಚ್ಚುವರಿ ವೆಚ್ಚ ಮಾಡಿ ಮುಂದಿನ ಎಂಟು ವರ್ಷಗಳಲ್ಲಿ 280 ಗಿಗಾವ್ಯಾಟ್ ಸೌರ ಇಂಧನ ಸಾಮರ್ಥ್ಯ ಉತ್ಪಾದನೆಗೆ ಸಿದ್ಧತೆ ನಡೆಯಲಿದೆ.
ಮಹಾನಗರಗಳಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ, ತ್ರಿಚಕ್ರವಾಹನ ಬಳಕೆಗೆ ಪ್ರೋತ್ಸಾಹ ನೀಡಲಾಗಿದೆ. ಈ ಮೂಲಕ ಇವಿ ಬ್ಯಾಟರಿ ಸ್ಟ್ಯಾಂಪಿಂಗ್ ಗೆ ಒತ್ತು ನೀಡುವ ಘೋಷಣೆ ಮಾಡಿದೆ.
ಬಜೆಟ್ ಮಂಡನೆ ಕುರಿತು ಪ್ರಮುಖರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಇದು ಮುಂಗಾಣ್ಕೆಯ ಉತ್ತಮ ಬಜೆಟ್. ಮೋದಿ ನಾಯಕತ್ವದಲ್ಲಿ ಭಾರತದ ಆರ್ಥಿಕತೆಯನ್ನು ವಿಶ್ವದಲ್ಲೇ ಮುಂಚೂಣಿಗೆ ನಿಲ್ಲಿಸಲು ಸಹಾಯಕ. ಬಜೆಟ್ ಗಾತ್ರ ವನ್ನು 39.45 ಲಕ್ಷ ಕೋಟಿಗೆ ಏರಿಸುವ ಮೂಲಕ ಭಾರತೀಯ ಆರ್ಥಿಕತೆಯ ವೇಗವನ್ನು ಬಜೆಟ್ ಸಾಬೀತುಪಡಿಸಿದೆ ಎಂದು ಗೃಹ ಸಚಿವ ಅಮಿತ್ ಶಾ ಅವರು ತಿಳಿಸಿದ್ದಾರೆ.

ನವೋದ್ಯಮಗಳು ಮತ್ತು ಖಾಸಗಿ ಘಟಕಗಳಿಗೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿಗೆ ಶೇ‌.25ರಷ್ಟನ್ನು ಮೀಸಲಿಡುವ ಪ್ರಸ್ತಾಪವನ್ನು ಮಂಡಿಸಲಾಗಿದೆ. ಇದೊಂದು ಅತ್ಯುತ್ತಮ ಕ್ರಮ. ರಕ್ಷಣಾ ವಲಯವನ್ನು ಸ್ಥಳೀಯವಾಗಿ ರೂಪಿಸಿದ ಸಾಧನ ಸಲಕರಣೆಗಳಿಂದ ಬಲ ಗೊಳಿಸಲಾಗುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತಿಳಿಸಿದ್ದಾರೆ.

ಕೋವಿಡ್ ನಂತಹ ಸಂಕಷ್ಟದ ಪರಿಸ್ಥಿತಿಯಲ್ಲೂ ಎಲ್ಲ ಕ್ಷೇತ್ರಗಳಿಗೂ ಆದ್ಯತೆ ನೀಡಿರುವುದು ದಿಟ್ಟ ಹೆಜ್ಜೆ. ಶಿರಾಡಿ ಘಾಟ್ ಹೆದ್ದಾರಿ ಉನ್ನತೀಕರಣಕ್ಕೆ 1,200 ಕೋಟಿ ರೂ., ಬಾನಾಪುರ-ಗದ್ದನಕೇರಿ ಹೆದ್ದಾರಿ ವಿಸ್ತರಣೆಗೆ 173 ಕೋಟಿ ರೂ. ಘೋಷಿಸಿರುವುದು ನಮ್ಮ ರಾಜ್ಯಕ್ಕೆ ನೀಡಿದ ಕಾಣಿಕೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಅವರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.

ನಿರುದ್ಯೋಗ, ಹಣದುಬ್ಬರದಿಂದ ನಲುಗಿಹೋಗಿರುವ ಸಾಮಾನ್ಯ ಜನರಿಗೆ ಈ ಬಜೆಟ್ ಏನನ್ನೂ ಒದಗಿಸಿಲ್ಲ. ಇದೊಂದು ಪೆಗಾಸುಸ್ ಬೇಹುಗಾರಿಕೆ ಆರೋಪದಿಂದ ಮುನಿಸಿಕೊಳ್ಳಲು ತುಪ್ಪ ಸವರುವ ಮುಂಗಡಪತ್ರವಷ್ಟೇ.ಶಬ್ದಾಡಂಬರದಿಂದ ಯಾವ ಸಾಧನೆಯೂ ಆಗದು ಎಂದು ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಿಳಿಸಿದ್ದಾರೆ.

ನಿಜಕ್ಕೂ ಇದೊಂದು ನಿರಾಶಾದಾಯಕ ಬಜೆಟ್. ಜನಸಾಮಾನ್ಯರಿಗೆ ಕಿಂಚಿತ್ತೂ ನೆರವು ನೀಡಿಲ್ಲ.ಕೊರೊನಾ ಕಾಲಘಟ್ಟದ ಈ ಸಂದರ್ಭದಲ್ಲಿ ಭಾರಿ ನಿರೀಕ್ಷೆಗಳೇ ಇತ್ತು. ಆದರೆ ಯಾರಿಗೂ ಬಲವನ್ನೂ ನೀಡಿಲ್ಲ. ಯಾವ ವಲಯದಲ್ಲೂ ದರವನ್ನು ಕಡಿಮೆ ಮಾಡಿಲ್ಲ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.

Shimoga News – Wednesday, 1 February 2022

0

Book Your Advertisement Now in Shimoga News.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.


Latest News on WhatsApp

Shimoga News
Send a Whatsapp message Startto this contact to get started. That’s it! We will send you your daily dose of positive Shimoga News on Whatsapp!

Why Keelambi Media Lab Pvt Ltd in Shimoga News ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

Shimoga News

KLIVE Android App on Google Play Store

Shimoga News

Download the most loved Klive App for your Android phone or tablet.

ಪ್ರೊ ಕಬಡ್ಡಿ ಲೀಗ್ ಗುಜರಾತ್ ಮತ್ತು ದೆಹಲಿ ಜಯದ ಮುನ್ನಡೆ

0

ರೇಡರ್ ಗಳಾದ ಅಜಯ್ ಕುಮಾರ್ ಮತ್ತು ಪ್ರದೀಪ್ ಕುಮಾರ್ ಅವರ ಸೂಪರ್ 10 ಅಂಕಗಳ ಬರದಿಂದ ಗುಜರಾತ್ ಜಯೆಂಟ್ಸ್ ತಂಡ ಪ್ರೊ ಕಬ್ಬಡ್ಡಿ ಲೀಗ್ 8ನೇ ಆವೃತ್ತಿಯ 84ನೇ ಪಂದ್ಯದಲ್ಲಿ ಬಲಿಷ್ಠ ಹರಿಯಾಣ ಸ್ಟೀಲರ್ಸ್ ಗೆ ಆಘಾತ ನೀಡಿ ಟೂರ್ನಿಯಲ್ಲಿ ನಾಲ್ಕನೇ ಗೆಲುವು ದಾಖಲಿಸಿತು.

ವೈಟ್ ಫೀಲ್ಡ್ ನ ಶೆರಾಟಾನ್ ಗ್ಯಾಂಡ್ ಹೋಟೆಲ್ ಸಭಾಂಗಣದಲ್ಲಿ ನಡೆದ ಹಣಾಹಣಿಯಲ್ಲಿ ಗುಜರಾತ್ 32 ರಿಂದ 26 ಅಂಕಗಳ ಅಂತರದಿಂದ ಹರಿಯಾಣ ತಂಡವನ್ನು ಪರಾಭವಗೊಳಿಸಿತು. ಈ ಸೋಲಿನಿಂದಾಗಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ವಿಕಾಸ್ ಕಂಡೋಲ ಸಾರ್ ಅಂತ್ಯದ ಸ್ಟೀಲರ್ಸ್ ತಂಡದ ಕನಸು ಭಗ್ನಗೊಂಡಿತು. ಸದ್ಯ ಆಡಿದ 15 ಪಂದ್ಯಗಳಲ್ಲಿ ಹರಿಯಾಣ 6 ಗೆಲುವಿನೊಂದಿಗೆ 43 ಅಂಕಗಳನ್ನು ಗಳಿಸಿಕೊಂಡಿದೆ. ಅತ್ತ ಡ್ರಾ ಮತ್ತು ಸೋಲುಗಳಿಂದ ಜರ್ಜರಿತಗೊಂಡಿರುವ ಗುಜರಾತ್ ಟೂರ್ನಿಯಲ್ಲಿ 4ನೇ ಜಯಗಳಿಸಿ ಒಟ್ಟಾರೆ 33ಅಂಕ ಸಂಪಾದಿಸಿತು.

ಪಂದ್ಯದ ಆರಂಭದಿಂದಲೇ ರೇಂಡಿಂಗ್ ಮತ್ತು ಟ್ಯಾಕಲ್ ನಲ್ಲಿ ಮೇಲುಗೈ ಸಾಧಿಸಿದ ಗುಜರಾತ್ ತಂಡ ಪ್ರಥಮಾರ್ಧದ ಮುಕ್ತಾಯಕ್ಕೆ 19ರಿಂದ 12 ರಲ್ಲಿ ಅಂತರ ಕಾಯ್ದುಕೊಂಡಿತು. ಆದರೆ ಮೊದಲ ಅವಧಿಯಲ್ಲಿ ದೊಡ್ಡ ಅಂತರದ ಹಿನ್ನಡೆ ಅನುಭವಿಸಿದ್ದ ಕಾರಣ ಸೋಲು ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಸೋತ ತಂಡದ ಪರ ಮೀತು 8 ಅಂಕ ಗಳಿಸಿದರು.

ಕೊನೆಯವರೆಗೂ ತೀವ್ರ ಕುತೂಹಲ ಮೂಡಿಸಿದ್ದ ಪಂದ್ಯದಲ್ಲಿ ಅಂತಿಮ ಕ್ಷಣದ ಒತ್ತಡ ವನ್ನು ಸಮರ್ಥವಾಗಿ ನಿಭಾಯಿಸಿದ ದಬಾಂಗ್ ದೆಹಲಿ ತಂಡ 36 ರಿಂದ 30 ಅಂಕಗಳ ಅಂತರದಿಂದ ಯು ಮುಂಬಾ ತಂಡವನ್ನು ಹಣಿದು ಪೂರ್ಣ 55 ಅಂಕ ಕಲೆಹಾಕಿತು. ಇದರೊಂದಿಗೆ ಒಟ್ಟಾರೆ 53 ಅಂಕಗಳಿಸಿದ ದೆಹಲಿ ತಂಡ, ಅಂಕಪಟ್ಟಿಯಲ್ಲಿ ತನ್ನ ಅಗ್ರಸ್ಥಾನವನ್ನು ಇನ್ನಷ್ಟು ಭದ್ರ ಪಡಿಸಿಕೊಂಡಿತ್ತು. ಮೊದಲ ಅವಧಿಯಲ್ಲಿ ಉಭಯ ತಂಡಗಳು 12 ರಿಂದ 12 ರಲ್ಲಿ ಸಮಬಲದ ಹೋರಾಟ ನೀಡಿದವು. ದ್ವಿತೀಯಾರ್ಧ ವು ಅಂತಿಮ 4 ನಿಮಿಷದವರೆಗೂ ಸಂಬಳದಿಂದಲೇ ಕೂಡಿತ್ತು. ಆದರೆ ಕೊನೆಯಲ್ಲಿ ಕೌಶಲ್ಯಯುತ ಆಟ ಪ್ರದರ್ಶಿಸಿದ ದಬಾಂಗ್ ಆಟಗಾರರು 6 ಅಂಕಗಳಿಂದ ಮುಂಬಾ ಗೆ ಸೋಲಿಣಿಸುವಲ್ಲಿ ಯಶಸ್ವಿಯಾದರು. ಅಲ್ರೌಂಡರ್ ವಿಜಯ್,ದಬಾಂಗ್ ಪರ ಗರಿಷ್ಠ 12 ಅಂಕ ಗಳಿಸಿದರೆ, ಅಭಿಷೇಕ್ ಸಿಂಗ್ ಮುಂಬಾ ಪರ 8 ಅಂಕಗಳ ಕೊಡುಗೆ ನೀಡಿದ್ದಾರೆ

ಬಲಿಷ್ಠ ಹಾಗೂ ಭವಿಷ್ಯ ಭಾರತದ ಬಜೆಟ್

0

2021 -22ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದಾರೆ.
ಈ ಕುರಿತು ಆರ್ಥಿಕ ತಜ್ಞ ನಿವೃತ್ತ ಪ್ರಾಧ್ಯಾಪಕ ಬಿ.ಎಮ್. ಕುಮಾರಸ್ವಾಮಿಯವರು ಕೆಲೈವ್ ನ್ಯೂಸ್ ನೊಂದಿಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಐದು ರಾಜ್ಯಗಳಲ್ಲಿ ಚುನಾವಣೆ ಇರುವ ಕಾರಣ ಜನರು ಬೇರೆಯೇ ರೀತಿಯ ಬಜೆಟ್ ನಿರೀಕ್ಷೆಯಲ್ಲಿದ್ದರು. ಬಹಳ ಅಗ್ಗದ ಹಾಗೂ ಜನಪ್ರಿಯ ಬಜೆಟ್ ಇದಾಗಿಲ್ಲ.
ಇದು ಮೋದಿಯವರ ಬಜೆಟ್ ಆದ್ದರಿಂದ ಬಜೆಟ್ ಮಂಡನೆ ಯನ್ನು ಕೇಳುತ್ತಾ ಇದ್ದಾಗಲೇ ಐದು ರಾಜ್ಯಗಳಲ್ಲಿ ಚುನಾವಣೆ ಇದೆ ಎಂದು ಅನಿಸಲೇ ಇಲ್ಲ. ಚುನಾವಣೆ ಮತ್ತು ಅಧಿಕಾರವನ್ನು ಬಿಟ್ಟು ದೇಶದ ಹಿತದೃಷ್ಟಿಯನ್ನು ನೋಡಿ ಬಜೆಟ್ ಮಂಡಿಸಲಾಗಿದೆ.

ಜನಪ್ರಿಯತೆ ಮುಖ್ಯವಲ್ಲ. ದೇಶದ ಹಿತ ಮುಖ್ಯವೆಂಬ ದೃಷ್ಟಿಯಿಂದ ಬಜೆಟ್ ಮಂಡಿಸಿದ್ದಾರೆ. ತೆರಿಗೆದಾರರು, ಸರ್ಕಾರಿ ನೌಕರರು ಮತ್ತು ವ್ಯವಹಾರಸ್ಥರು ತೆರಿಗೆ ವಿನಾಯಿತಿ ನಿರೀಕ್ಷೆ ಮಾಡಿದ್ದರು. ಆದರೆ ಸರ್ಕಾರಕ್ಕೆ ಕೊರೊನಾ ಸಮಯ. ಆದ್ದರಿಂದ ಸರ್ಕಾರಕ್ಕೆ ಯಾವ ಆದಾಯವೂ ಇಲ್ಲ. ಅವರಿಗೂ ಕಷ್ಟವಾಗಿದೆ. ಆದ್ದರಿಂದ ಈ ಸಮಯದಲ್ಲಿ ತೆರಿಗೆವಿನಾಯಿತಿ ಕೇಳುವುದು ಯಾವುದೇ ಹೊಣೆಗಾರಿಕೆಯುಳ್ಳ ನಾಗರಿಕತನವಾಗುವುದಿಲ್ಲ.
ಹಾಗಾಗಿ ನೇರ ತೆರಿಗೆ, ಪರೋಕ್ಷ ತೆರಿಗೆ ಬಗ್ಗೆ ಪ್ರಸ್ತಾಪ ಮಾಡಿಲ್ಲ.
ದೀರ್ಘಾವಧಿ ದೃಷ್ಟಿಯಿಂದ 75 ಜಿಲ್ಲೆಗಳಲ್ಲಿ ಡಿಜಿಟಲ್ ಬ್ಯಾಂಕ್ ಸ್ಥಾಪನೆ ಮಾಡುವುದು, ಆರ್ಬಿಐ ಮೂಲಕ ಡಿಜಿಟಲ್ ಕರೆನ್ಸಿ ರೂಪಿಸುವುದು, 5ಜಿ ತರಂಗಕ್ಕೆ ಈ ವರ್ಷವೇ ಪ್ರಕ್ರಿಯೆ ಪ್ರಾರಂಭಿಸುವುದು, ಒಂದು ಡಿಜಿಟಲ್ ಯೂನಿವರ್ಸಿಟಿ ಸ್ಥಾಪಿಸುವುದು, ಇವೆಲ್ಲ ಮುಂದಿನ 25 ವರ್ಷಕ್ಕೆ ಭಾರತ ಬಲಿಷ್ಠ ದೇಶ ಆಗುವ ಸಲುವಾಗಿ ಮಾಡಿದ್ದಾರೆ.

ಆದರೆ ಚುನಾವಣೆಯಲ್ಲಿ ಗೆಲ್ಲಬೇಕೆನ್ನುವ ಕ್ಷಣಿಕ ಲಾಭದಿಂದ ಮಾಡಿಲ್ಲ. ಇದು ದೇಶದ ದೀರ್ಘಾವಧಿ ಭವಿಷ್ಯವನ್ನು ನೋಡಿ ಮಾಡಿರುವ ಬಜೆಟ್ ಮಂಡನೆಯೇ ಹೊರತು, ಐದು ರಾಜ್ಯಗಳ ಚುನಾವಣೆ ನೋಡಿ ಮಾಡಿರುವುದಿಲ್ಲ.
ಒಟ್ಟಾರೆಯಾಗಿ ಇದು ದೇಶದ ಹಿತಕ್ಕಾಗಿ ಮಾಡಿರುವ ಬಜೆಟ್ ಎಂದು ಅವರು ತಿಳಿಸಿದರು.

ಗೋಮಾಳ, ಕಾನು ಇತ್ಯಾದಿಗಳ ಮೇಲೆ ಅರಣ್ಯ ಇಲಾಖೆ ಹಕ್ಕು ಸ್ಥಾಪನೆ ಸರಿಯಲ್ಲ

0

ತಲತಲಾಂತರದಿಂದ ಸಾಗುವಳಿ ಪ್ರದೇಶದ ಮೇಲೆ ಹಕ್ಕು ಸ್ಥಾಪಿಸಲು ಅರಣ್ಯ ಇಲಾಖೆ ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯ ನಿಲ್ಲಿಸದಿದ್ದರೆ ಶಿವಮೊಗ್ಗ ಸಿಸಿಎಫ್ ಕಛೇರಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದು ಅನಿವಾರ್ಯ ಎಂದು ಮಲೆನಾಡು ಸಂಘರ್ಷ ಸಮಿತಿ ಎಚ್ಚರಿಕೆ ನೀಡಿದೆ.

ತೀರ್ಥಹಳ್ಳಿ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗೆ ತಹಶೀಲ್ದಾರ್ ರ ಮೂಲಕ ಸಮಿತಿ ಮನವಿ ಸಲ್ಲಿಸಿತು. ಪ್ರತಿ ಹಳ್ಳಿಯಲ್ಲಿ ಅರಣ್ಯ ಇಲಾಖೆ ನಡೆಸುತ್ತಿರುವ ದೌರ್ಜನ್ಯಕ್ಕೆ ತಕ್ಷಣ ಕಡಿವಾಣ ಹಾಕಬೇಕು. ಆಲೂರು ಹೊಸಕೊಪ್ಪ, ಚಿಕ್ಕ ಮತ್ತೀಗ, ಮಾವಿನ ಗದ್ದೆ, ತೊರೆ ಬೈಲು, ಹುಲ್ಲತ್ತಿ, ಬಿಳಗಿ ಮನೆ ಮುಂತಾದ ಗ್ರಾಮದಲ್ಲಿ ರೈತರ ಸ್ವಾಧೀನಾನುಭವ ಸಾಗುವಳಿ ಜಾಗಕ್ಕೆ ಅರಣ್ಯ ಇಲಾಖೆ ಬಲವಂತವಾಗಿ ಗಡಿ ಕಾಲುವೆ ಮಾಡುತ್ತಿದ್ದು ಇದನ್ನು ತಡೆಯಬೇಕು ಎಂದು ಆಗ್ರಹಿಸಿದೆ.

ಅಡಿಕೆ ಸಸಿ, ಮರ, ಬೇಲಿಯನ್ನು ದ್ವಂಸ ಮಾಡುತ್ತಿರುವುದರಿಂದ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಅರಣ್ಯ ಇಲಾಖೆ ರೈತರಿಗೆ ನಷ್ಟದ ಹಣವನ್ನು ಪಾವತಿಸಬೇಕು. ಗೋಮಾಳ, ಸೊಪ್ಪಿನಬೆಟ್ಟ, ಕಾನು, ಗ್ರಾಮಠಾಣಾ, ಪೂರ್ವಜರಿಂದ ಬಳಕೆಯಲ್ಲಿರುವ ಅರಣ್ಯ ಪ್ರದೇಶದ ಮೇಲೆ ಅರಣ್ಯ ಇಲಾಖೆ ಹಕ್ಕು ಸ್ಥಾಪಿಸಲು ಮುಂದಾಗಿರುವುದು ಮಾನವ ಹಕ್ಕುಗಳ ಉಲ್ಲಂಘನೆ.

ಅರಣ್ಯ, ಕಂದಾಯ, ಇತರೆ ಪ್ರದೇಶಗಳ ಕುರಿತು ಜಂಟಿ ಸರ್ವೆ ನಡೆಯದ ಹಿಂದೆ ದೊಡ್ಡ ಹುನ್ನಾರ ನಡೆದಿದೆ. ಕಾನೂನು, ನಿಯಮಗಳಲ್ಲಿ ಗೊಂದಲವನ್ನೇ ಬಂಡವಾಳ ಮಾಡಿಕೊಂಡು ಮಲೆನಾಡ ಭೂಪ್ರದೇಶದ ಮೇಲೆ ಅಧಿಪತ್ಯ ಸಾಧಿಸುವ ಪ್ರಯತ್ನವನ್ನು ಅರಣ್ಯ ಇಲಾಖೆ ಮಾಡುತ್ತಿದೆ.
ಅರಣ್ಯ ಸಂರಕ್ಷಣೆ, ಸಸಿ ಬೆಳೆಸುವ ಯೋಜನೆಯಡಿ ಭಾರಿ ಹಗರಣ ನಡೆದಿದೆ. ಸರ್ಕಾರ ತಕ್ಷಣ ಅರಣ್ಯ ಇಲಾಖೆ ವಿರುದ್ಧ ತನಿಖೆ ನಡೆಸಬೇಕು. ಸರ್ಕಾರಕ್ಕೆ ರೈತರ ಪರ ಕಾಳಜಿ ಇದ್ದರೆ ಅರಣ್ಯ ಇಲಾಖೆ ವಿರುದ್ಧ ಕ್ರಮ ಜರುಗಿಸಲಿ ಎಂದು ಆಗ್ರಹಿಸಿದೆ.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸುಂದರೇಶ್, ಸಂಚಾಲಕ ನೆಂಪೆ ದೇವರಾಜ್, ಹಸಿರುಮನೆ ತಾಲೂಕು ಅಧ್ಯಕ್ಷ ಜಾದುಗಾರ್ ನಿಶ್ಚಲ್ ಶೆಟ್ಟಿ, ತಾಲೂಕು ರೈತ ಸಂಘದ ಅಧ್ಯಕ್ಷ ಕೋಡ್ಲು ವೆಂಕಟೇಶ್, ಹೊಸಕೇರಿ ಈಶ್ವರಪ್ಪ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಂಸದರೆಲ್ಲರೂ ದೇಶದ ಜನರ ಭರವಸೆಯ ಚುಕ್ಕಾಣಿ- ಶ್ರೀರಾಮನಾಥ್ ಕೋವಿಂದ್

0

ದಾಖಲೆಯ ಪ್ರಮಾಣದಲ್ಲಿ ಕೃಷಿ ಉತ್ಪನ್ನಗಳ ಖರೀದಿ, ದೇಶದ ಆಂತರಿಕ ಭದ್ರತೆಗೆ ಕ್ರಮ, ಕೋವಿಡ್ ನ ಪರಿಣಾಮಕಾರಿ ನಿರ್ವಹಣೆ ಸೇರಿ ಹಲವು ಸಾಧನೆಗಳನ್ನು ಪಟ್ಟಿ ಮಾಡಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್, ಅಭಿವೃದ್ಧಿ ಗುರಿ ಸಾಧನೆ ಹಾದಿಯಲ್ಲಿ ಎಲ್ಲವೂ ಸಮಷ್ಟಿ ಸಾಧನೆಗಳು ಎಂದು ಶ್ಲಾಘಿಸಿದ್ದಾರೆ.

ಸೋಮವಾರ ಬಜೆಟ್ ಅಧಿವೇಶನಕ್ಕೆ ಚಾಲನೆ ನೀಡಿ, ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಮಾಡಿದ 50 ನಿಮಿಷದ ಭಾಷಣದಲ್ಲಿ ಅವರು , ಉತ್ತರಪ್ರದೇಶ ಸೇರಿದಂತೆ ಶೀಘ್ರದಲ್ಲಿಯೇ ಚುನಾವಣೆ ನಡೆಸಲಿರುವ ರಾಜ್ಯಗಳಲ್ಲಿ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ವಿಶೇಷವಾಗಿ ಉಲ್ಲೇಖಿಸಿದರು.

ಸಾಧನೆಗಳ ಉಲ್ಲೇಖದ ಹಿಂದೆ ಎಲ್ಲಾ ಸಾಧನೆಗಳ ಶ್ರೇಯ ಒಂದು ಸಂಸ್ಥೆ, ವ್ಯವಸ್ಥೆಯದಲ್ಲ. ಇದರ ಬದಲಿಗೆ ಅವು ಸಮಷ್ಟಿ ಸಾಧನೆ. ಇದರಲ್ಲಿ ದೇಶದ ಎಲ್ಲ ನಾಗರಿಕರು ಭಾಗಿಯಾಗಿದ್ದಾರೆ ಎಂದರು. ಭವ್ಯ, ಆಧುನಿಕ ಮತ್ತು ಅಭಿವೃದ್ಧಿ ಭಾರತವನ್ನು 2017ರ ವೇಳೆಗೆ ನಿರ್ಮಿಸಲು ಎಲ್ಲರೂ ಶಕ್ತಿಮೀರಿ ಶ್ರಮಿಸಬೇಕು ಎಂದು ಕರೆ ನೀಡಿದ್ದಾರೆ.

ಇದರಲ್ಲಿ ನಮ್ಮೆಲ್ಲರ ಪಾಲು ಇದೆ. ಈ ಪ್ರಯಾಣದಲ್ಲಿ ನಮ್ಮಗಳಿಗೆ ಸಮಾನ ಪಾಲು ಎಂದರು. ಸಂಸದರನ್ನು ಉದ್ದೇಶಿಸಿ ನೀವುಗಳು ದೇಶದ ಕೋಟ್ಯಾಂತರ ಜನರ ಭರವಸೆಗೆ ಚುಕ್ಕಾಣಿ. ಭವಿಷ್ಯದಲ್ಲಿಯೂ ಉತ್ಸಾಹದಿಂದ ಮುನ್ನಡೆಯಬೇಕು ಎಂದು ಸಲಹೆ ನೀಡಿದರು.

ಗೋವಾ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ, ಅಫ್ಘಾನಿಸ್ತಾನದಿಂದ ಗುರು ಗ್ರಂಥ ಸಾಹಿಬ್ ಅವರ ಎರಡು ವಿಶೇಷ ವಸ್ತುಗಳನ್ನು ಮರಳಿ ತಂದಿದ್ದು, ಕೃಷಿಕರ ಸಬಲೀಕರಣಕ್ಕೆ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ರಾಷ್ಟ್ರಪತಿ ಕೋವಿಂದ್ ಅವರು ವಿಶೇಷವಾಗಿ ಉಲ್ಲೇಖಿಸಿದ್ದಾರೆ.

ರಕ್ಷಣಾ ಇಲಾಖೆಯಲ್ಲಿ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳನ್ನು ಪಟ್ಟಿ ಮಾಡಿದ ಅವರು, ರಕ್ಷಣಾ ಪರಿಕರಗಳ ಆಧುನೀಕರಣಕ್ಕೆ ನೀಡಲಾದ ಶೇಕಡ 87 ರಷ್ಟು ಅನುಮೋದನೆಗಳು ಸ್ವಾವಲಂಬನೆಗೆ ಒತ್ತು ನೀಡಬೇಕು ಎಂದು ಹೇಳಿದ್ದಾರೆ.

ಕೋವಿಡ್ ಪರಿಸ್ಥಿತಿ ನಿರ್ವಹಣೆಯನ್ನು ಉಲ್ಲೇಖಿಸಿ ಆರೋಗ್ಯ ಕಾರ್ಯಕರ್ತರು, ವಿಜ್ಞಾನಿಗಳು, ಉದ್ಯಮಿಗಳ ಸೇವೆ ಶ್ಲಾಘನೀಯ. ಇದರ ಪರಿಣಾಮ ಒಂದೇ ವರ್ಷದಲ್ಲಿ 150 ಕೋಟಿ ಡೋಸ್ ಲಸಿಕೆ ನೀಡಲಾಯಿತು ಎಂದು ಹೇಳಿದರು

ಟೋಕಿಯೋನಲ್ಲಿ ಕೋವಿಡ್ ಬೂಸ್ಟರ್ ಡೋಸ್ ಅಭಿಯಾನ

0

ಟೋಕಿಯೊ ಮಿಲಿಟರಿಯಿಂದ ನಿರ್ವಹಿಸಲ್ಪಡುವ ತಾತ್ಕಾಲಿಕ ಕೇಂದ್ರಗಳಲ್ಲಿ ಕೋವಿಡ್ ಬೂಸ್ಟರ್ ಡೋಸ್ ಗಾಗಿ ಸಾಮೂಹಿಕ ಇನಾಕ್ಯುಲೇಷನ್ ಡ್ರೈವ್ ಅನ್ನು ಪ್ರಾರಂಭಿಸಿದೆ. ಏಕೆಂದರೆ ಹೆಚ್ಚುತ್ತಿರುವ ಸೋಂಕುಗಳನ್ನು ಎದುರಿಸಲು ಜಪಾನ್ ವಿಳಂಬವಾದ 3 ನೇ ಉದ್ಯೋಗಗಳನ್ನು ವೇಗಗೊಳಿಸಲು ಪ್ರಯತ್ನಿಸುತ್ತಿದೆ.

ಜಪಾನ್ ಡಿಸೆಂಬರ್‌ನಲ್ಲಿ ವೈದ್ಯಕೀಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ಗಳನ್ನು ನೀಡಲು ಪ್ರಾರಂಭಿಸಿತು.ಆದರೆ ಮೊದಲನೆಯ ಕೊರೋನಾ ವೈರಸ್ ಹೊಡೆತಗಳ ನಡುವಿನ ಮಧ್ಯಂತರವನ್ನು ಮತ್ತು ಆರಂಭಿಕ ಎಂಟರಿಂದ ಆರು ತಿಂಗಳವರೆಗೆ ಬೂಸ್ಟರ್ ಅನ್ನು ಕಡಿತಗೊಳಿಸುವ ನಿರ್ಧಾರವನ್ನು ನೀಡಿದ ನಂತರ ಜನಸಂಖ್ಯೆಯ 2.7 ಪ್ರತಿಶತದಷ್ಟು ಜನರಿಗೆ ಮಾತ್ರ ಅಂತಹ ಇನಾಕ್ಯುಲೇಶನ್‌ಗಳನ್ನು ಒದಗಿಸಿದೆ. ಈಗ ಬೂಸ್ಟರ್ ಶಾಟ್‌ಗಳಿಗೆ ಬೇಡಿಕೆ ತೀವ್ರವಾಗಿದೆ. ಶುಕ್ರವಾರದಂದು ಪ್ರಾರಂಭವಾದ ಆನ್‌ಲೈನ್ ಕಾಯ್ದಿರಿಸುವಿಕೆಗಳು ಮತ್ತು ಈ ವಾರ ಕೇಂದ್ರದಲ್ಲಿ ನೀಡಲಾಗುವ ಸುಮಾರು 4,300 ಡೋಸ್‌ಗಳ ಎಲ್ಲಾ ಸ್ಲಾಟ್‌ಗಳನ್ನು 9 ನಿಮಿಷಗಳಲ್ಲಿ ಭರ್ತಿ ಮಾಡಲಾಗುವುದು.ಕೇಂದ್ರವು moderna.inc ತಯಾರಿಸಿದ ಲಸಿಕೆಯನ್ನು ಒದಗಿಸುತ್ತಿದೆ. , 65 ವರ್ಷಕ್ಕಿಂತ ಮೇಲ್ಪಟ್ಟ ಜನರು ಬೇರೆಡೆ ಬೂಸ್ಟರ್ ಡೋಸ್ ಗಳನ್ನು ಪಡೆಯಬಹುದು. ಓಮಿಕ್ರಾನ್ ರೂಪಾಂತರವು ತ್ವರಿತವಾಗಿ ಹರಡುತ್ತಿದೆ. ಹೊಸ ವರದಿಯಾದ ಸೋಂಕುಗಳನ್ನು ಕೊರೋನಾವೈರಸ್ ನ ಹಿಂದಿನ ಅಲೆಗಳಿಗಿಂತ ಹೆಚ್ಚಿನದಕ್ಕೆ ತಳ್ಳುತ್ತದೆ. ಟೋಕಿಯೊ ಭಾನುವಾರ 15,895 ಹೊಸ ಪ್ರಕರಣಗಳನ್ನು ವರದಿ ಮಾಡಿದೆ.
ಟೋಕಿಯೋ ದಲ್ಲಿ
ಆಸ್ಪತ್ರೆಯ ಸಾಮರ್ಥ್ಯದ ಅರ್ಧದಷ್ಟು ಬೆಡ್ ಗಳು ತುಂಬಿವೆ. ರಾಷ್ಟ್ರವ್ಯಾಪಿ ಜಪಾನ್ ಸುಮಾರು 18,700 ಸಾವುಗಳೊಂದಿಗೆ ಒಟ್ಟು 2.68 ಮಿಲಿಯನ್‌ಗೆ ಸುಮಾರು 78,000 ಪ್ರಕರಣಗಳನ್ನು ದಾಖಲಿಸಿದೆ.