Department of School Education ಕ್ರೀಡಾಪಟುಗಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ, ಆಗಿದ್ದಾಗ ಮಾತ್ರ ಆರೋಗ್ಯವಂತರಾಗಿರಲು ಸಾಧ್ಯವಾಗುತ್ತದೆ ಎಂದು ಶಿವಮೊಗ್ಗ ಜಿಲ್ಲಾ ಅನುದಾನ ರಹಿತ ಖಾಸಗಿ ವಿದ್ಯಾ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಗಿರೀಶ್ ಅಭಿಪ್ರಾಯಪಟ್ಟರು.
ಅವರು ನೆಹರೂ ಕ್ರೀಡಾಂಗಣದಲ್ಲಿ ನಾಲ್ಕು ದಿನ ನಡೆಯಲಿರುವ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಶಿವಮೊಗ್ಗ ಹಾಗೂ ಶ್ರೀ ರಾಜರಾಜೇಶ್ವರಿ ಪ್ರೌಢಶಾಲೆ, ಗೋಪಾಳ,ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಅನುದಾನ ರಹಿತ ಪ್ರೌಢ ಶಾಲೆಗಳ ‘ಎ’ ಮತ್ತು ‘ಬಿ’ವಲಯಗಳ ವಲಯ ಮಟ್ಟದ 17 ವರ್ಷ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ಶಿವಮೊಗ್ಗ ತಾಲ್ಲೂಕಿನ ವಲಯ ಮಟ್ಟದ ಕ್ರೀಡಾ ಕೂಟದ ಧ್ವಜಾರೋಣ ನೆರವೇರಿಸಿ ಮಾತನಾಡುತ್ತಾ, ಓದಿನ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸಿ,ಕ್ರೀಡೆಯಲ್ಲಿ ತಮ್ಮ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯವನ್ನು ಪರೀಕ್ಷಿಸಿಕೊಳ್ಳಬಹುದಾಗಿದೆ ಎಂದರು.
ಕ್ರೀಡಾಪಟುಗಳಲ್ಲಿ ಅತ್ಯಂತ ಸಾಮರಸ್ಯವಿರುತ್ತದೆ. ಇದು ಕ್ರೀಡಾ ಕ್ಷೇತ್ರದ ಗುಟ್ಟಾಗಿದೆ ಎಂದ ಅವರು, ಕ್ರೀಡೆ ತಮ್ಮ ಮಾನಸಿಕ ಬುದ್ದಿ ಮಟ್ಟವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಕೂಡ ಶೈಕ್ಷಣಿಕ ಚಟುವಟಿಕೆಯ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ಕೂಡ ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಸತತವಾಗಿ ಅಭ್ಯಾಸದಿಂದ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ವಾಗುತ್ತದೆ ಎಂದರು.
Department of School Education ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಜ ರಾಜೇಶ್ವರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಧನಂಜಯ ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ,ಆಟದಲ್ಲಿ ಸೋಲು ಗೆಲುವು ಸರ್ವೇ ಸಾಮಾನ್ಯ ಆದರೆ ಭಾಗವಹಿಸುವಿಕೆ ಅತ್ಯಂತ ಮುಖ್ಯವಾಗಿರುತ್ತದೆ ಎಂದ ಅವರು, ಕ್ರೀಡಾ ಮನೋಭಾವದಿಂದ ಕ್ರೀಡೆಯಲ್ಲಿ ಭಾಗವಹಿಸಿ ಎಂದು ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
ನಿವೃತ್ತ ತಾಲ್ಲೂಕು ದೈಹಿಕ ಶಿಕ್ಷಣ ಅಧಿಕಾರಿ ಬಿ. ಹೆಚ್.ನಿರಂಜನ್ ಮೂರ್ತಿ ಮಾತನಾಡುತ್ತಾ, ಪ್ರಪಂಚದಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತ, ಕ್ರೀಡಾ ಕ್ಷೇತ್ರದಲ್ಲಿ ಹಿಂದುಳಿದಿರುವುದು ವಿಷಾದನೀಯ ಎಂದರು. ಮಕ್ಕಳೇ ಈ ದೇಶದ ಭವಿಷ್ಯದ ಪ್ರಜೆಗಳು, ಈಗಿನಿಂದಲೇ ಸತತ ಅಭ್ಯಾಸ ಮಾಡಿ, ಮುಂದಿನ ದಿನಗಳಲ್ಲಿ ಒಲಂಪಿಕ್ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿ ದೇಶದ ಕೀರ್ತಿ ಹೆಚ್ಚಿಸಬೇಕಾಗಿದೆ ಎಂದರು. ಕಾರ್ಯ ಕ್ರಮದಲ್ಲಿ ತಾಲೂಕು ದೈಹಿಕ ಶಿಕ್ಷಣ ಅಧಿಕಾರಿಗಳಾದ ಚಂದ್ರಕಾಂತ್, ಜಿಲ್ಲಾ ಅನುದಾನ ರಹಿತ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷ ರಾ. ಹ. ತಿಮ್ಮೇನಹಳ್ಳಿ, ಕಾರ್ಯದರ್ಶಿ ಕೆ.ಜಿ.ಮಠಪತಿ, ಸೋಮಶೇಖರ್ ಎಸ್. ಆರ್. ಕಾರ್ಯಕ್ರಮ ನಿರುಪಿಸಿದರೆ, ರಘು ಎಲ್.ಎಸ್. ವಂದಿಸಿದರು.ಕಾರ್ಯಕ್ರಮ ದಲ್ಲಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
Department of School Education ಓದಿನ ಜೊತೆ ಕ್ರೀಡೆಯಲ್ಲಿ ಭಾಗವಹಿಸಿ, ದೈಹಿಕ, ಮಾನಸಿಕ ಸಾಮರ್ಥ್ಯ ಪರೀಕ್ಷಿಸಿಕೊಳ್ಳಬಹುದು- ಗಿರೀಶ್
Rotary East English Medium School ಶಿಕ್ಷಕ ವೃತ್ತಿಯು ಪ್ರತ್ಯಕ್ಷ ದೇವರಿಗೆ ಸಮಾನವಾಗಿದೆ- ಕೆ.ಬಿ.ರವಿಶಂಕರ್
Rotary East English Medium School ರೋಟರಿ ಪೂರ್ವ ಆಂಗ್ಲ ಮಾದ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಶಿಕ್ಷಕರ ಸಮೂಹದೊಂದಿಗೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ರೋಟರಿ ಪೂರ್ವ ಎಜುಕೇಶನಲ್ & ಛಾರಿಟಬಲ್ ಟ್ರಸ್ಟಿನ ಮ್ಯಾನೇಜಿಂಗ್ ಟ್ರಸ್ಟಿಯಾದ ರೊ. ಕೆ ಬಿ ರವಿಶಂಕರ್ ಇವರು ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡುತ್ತಾ ಶಿಕ್ಷಕರ ವೃತ್ತಿಯು ಪ್ರತ್ಯಕ್ಷ ದೇವರಿಗೆ ಸಮಾನದುದೆಂದು ಶಿಕ್ಷಕರ ಅವಿರತ ಶ್ರಮದ ಪರವಾಗಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉನ್ನತ ಹುದ್ದೆಗೆ ನೇಮಕಗೊಳ್ಳುತ್ತಿದ್ದು ಆಮೂಲಕ ಸಾರ್ವಜನಿಕ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದಾರೆಂದು, ಈ ಕಾರಣಕ್ಕೆ ರಾಷ್ಟ್ರನಿರ್ಮಾಣದಲ್ಲಿ ಶಿಕ್ಷಕರ ಕೊಡುಗೆ ಬಹಳದೊಡ್ಡದಾಗಿರುತ್ತದೆಂದು ಅಭಿಪ್ರಾಯ ಪಟ್ಟರು.
ಇದೇ ಸಂದರ್ಭದಲ್ಲಿ ರೋಟರಿ ಪೂರ್ವದ ಅಧ್ಯಕ್ಷರಾದ ರೊ. ನಿಪ್ಚೂನ್ ಕಿಶೋರ್ಕುಮಾರ್ ರವರು ಮಾತನಾಡುತ್ತಾ ಇಂದಿನ ದಿನಗಳಲ್ಲಿ ಸೇವಾಮನೋಬಾವದ ಉತ್ತಮ ಶಿಕ್ಷಕರನ್ನು ಕಾಣುವುದೇ ಅಪರೂಪವೆಂದು ಆದರೆ ರೋಟರಿ ಪೂರ್ವ ಆಂಗ್ಲ ಮಾದ್ಯಮ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರೆಲ್ಲರೂ ಸೇವಾಮನೋಬಾವದಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆಂದು, ಈ ಕಾರಣಕ್ಕಾಗಿ ರೋಟರಿ ಪೂರ್ವ ಆಂಗ್ಲ ಮಾದ್ಯಮ ಶಾಲೆಯಲ್ಲಿ ಬಡವರು ಮತ್ತು ಮದ್ಯಮ ವರ್ಗದವರ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿದ್ದಾರೆಂದು, ಬಾಲ್ಯದಲ್ಲಿಯೇ ವಿದ್ಯಾರ್ಥಿಗಳಿಗೆ ಸೇವಾಮನೊಬಾವನ್ನು ಬೆಳೆಸಿಕೊಳ್ಳುತ್ತಿದ್ದಾರೆಂದು ಈ ಕಾರಣಕ್ಕೆ ರೋಟರಿ ಪೂರ್ವ ಆಂಗ್ಲ ಮಾದ್ಯಮ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರೆಲ್ಲರು ಅಭಿನಂದನಾರ್ಹರೆಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ರೋಟರಿ ಪೂರ್ವದ ಕಾರ್ಯದರ್ಶಿ ರೊ. ಧನಂಜಯರವರು ಮಾತನಾಡುತ್ತಾ ಈ ಒಂದು ಸಂದರ್ಭವು ತಮ್ಮ ಬಾಲ್ಯದ ದಿನಗಳನ್ನು ನೆನಪಿಸುತ್ತದೆಂದು ಬಾಲ್ಯದಲ್ಲಿ ತಮಗೆ ವಿದ್ಯಾರ್ಜನೆ ಮಾಡಿದ ಗುರುಗಳಿಗೆ ವಂದಿಸುವಂತಹ ಸುವರ್ಣವಕಾಶ ಇದಾಗಿರುತ್ತದೆಂದು ಪ್ರತಿಯೊಬ್ಬ ವಿದ್ಯಾರ್ಥಿಯು ತಾವು ಎಷ್ಟೇ ದೊಡ್ಡ ವ್ಯಕ್ತಿಗಳಾಗಿದ್ದರು.
ವಿದ್ಯಾರ್ಜನೆ ಮಾಡಿದ ಗುರುಗಳನ್ನು ಮರೆಯಬಾರದೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ರೋಟರಿ ಪೂರ್ವ ಎಜುಕೇಶನಲ್ & ಛಾರಿಟಬಲ್ ಟ್ರಸ್ಟನ ನಿಕಟ ಪೂರ್ವ ಮ್ಯಾನೇಜಿಂಗ್ ಟ್ರಸ್ಟಿಯಾದ ರೊ. ಚಂದ್ರಶೇಖರಯ್ಯ ಎಮ್ ಇವರು ಮಾತನಾಡುತ್ತ ತಮ್ಮ ಜೀವನದುದ್ದಕ್ಕೂ ವಿದ್ಯಾರ್ಥಿಗಳಿಗೆ ತಮ್ಮ ಪಾಂಡಿತ್ಯವನ್ನು ದಾರೆಯೆರದ ಶಿಕ್ಷಕರಿಗೆ ಗೌರವ ಸಮರ್ಪಣೆ ಮಾಡುವಂತಹ ಕಾರ್ಯಕ್ರಮ ಇದಾಗಿದೆಯೆಂದು ರಾಷ್ಟಕಂಡ ಅತ್ಯುತ್ತಮ ಶಿಕ್ಷಕ ಮತ್ತು ತತ್ವಜ್ಞಾನಿಯಾದ ಡಾ|| ಸರ್ವಪಲ್ಲಿ ರಾಧಕೃಷ್ಣರವರ ತತ್ವಾದರ್ಶಗಳನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು.
Rotary East English Medium School ರೋಟರಿ ಪೂರ್ವ ಎಜುಕೇಶನಲ್ & ಛಾರಿಟಬಲ್ ಟ್ರಸ್ಟಿನ ಕಾರ್ಯದರ್ಶಿ ರೊ. ರಾಮಚಂದ್ರ ಎಸ್. ಸಿ. ರವರು ಮಾತನಾಡುತ್ತಾ ಶಿಕ್ಷಕ ವೃತ್ತಿಗೆ ಬೆಲೆಕಟ್ಟಲಾಗದಂತಹ ಮೌಲ್ಯವಿದೆಯೆಂದು ಮೌಲ್ಯಾದಾರಿತ ಬದುಕನ್ನು ಕಟ್ಟಿಕೊಳ್ಳುವಲ್ಲಿ ಶಿಕ್ಷಕರ ಪಾತ್ರ ಬಹುದೊಡ್ಡದೆಂದು ಅಭಿಪ್ರಾಯ ಪಟ್ಟು ಮೌಲ್ಯಾದಾರಿತ ಬದುಕನ್ನು ಕಟ್ಟಿಕೊಳ್ಳುವ ದೆಸೆಯಲ್ಲಿ ವಿದ್ಯಾರ್ಥಿಗಳು ಬಾಲ್ಯದಿಂದಲೇ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.
ಸಮಾರಂಭದಲ್ಲಿ ರೋಟರಿ ಪೂರ್ವ ಎಜುಕೇಶನಲ್ & ಛಾರಿಟಬಲ್ ಟ್ರಸ್ಟನ ಉಪಾದ್ಯಕ್ಷರಾದ ನಾಗವೇಣಿ ಎಸ್. ಆರ್. ಖಜಾಂಚಿ ರೊ. ಮಂಜುನಾಥ ಎನ್ ಬಿ ಟ್ರಸ್ಟಿಯಾದ ಅನಿತಾ ರವಿಶಂಕರ್ ಮತ್ತು ಪ್ರಿನ್ಸಿಪಾಲ್ ಸೂರ್ಯನಾರಾಯಣ್ ಇನ್ಟ್ರಕ್ಟ್ ಕ್ಲಬ್ನ ಸಂಯೋಜಕರಾದ ಶ್ರೀಮತಿ ರೂಪ ಎಸ್ ಸಿ ರವರು ಉಪಸ್ಥಿತರಿದ್ದು, ಕಾರ್ಯಕ್ರಮದ ಕೊನೆಯಲ್ಲಿ ಕುಮಾರಿ ಗೌತಮಿಯವರು ವಂದಿಸಿದರು.
JCI ಜೆಸಿಐ ಸಂಸ್ಥೆಯಿಂದ ಉತ್ತಮ ಸಮಾಜ ನಿರ್ಮಾಣ- ಕೆ.ಎಸ್.ಈಶ್ವರಪ್ಪ
JCI ಜೆಸಿಐ ಸಂಸ್ಥೆಯಿಂದ ಉತ್ತಮ ಸಮಾಜ ನಿರ್ಮಾಣ- ಕೆ.ಎಸ್.ಈಶ್ವರಪ್ಪ ಸಿಐ ಸಪ್ತಾಹ 2025 – ಕೆ.ಎಸ್ ಈಶ್ವರಪ್ಪನವರಿಂದ ಧ್ವಜಾರೋಹಣ , ವಾಕಥಾನ್ ಜಾಥಕ್ಕೆ ಚಾಲನೆ ಜೆಸಿಐ ಭಾರತ – ವಲಯ 24, ನಾಯಕತ್ವ, ಕಲಿಕೆ, ಕ್ರೀಡೆ, ವ್ಯವಹಾರ ಮತ್ತು ಸಮುದಾಯದ ಪ್ರಭಾವದ ಒಂದು ವಾರದ ಹಬ್ಬವಾದ ಜೆಸಿಐ ಸಪ್ತಾಹ 2025 ರ ಭವ್ಯ ಆಚರಣೆಯ ಅಂಗವಾಗಿ ನೆಹರು ಕ್ರೀಡಾಂಗಣದಲ್ಲಿ ಏಕತೆ ಮತ್ತು ಬದ್ಧತೆಯನ್ನು ಸಂಕೇತಿಸುವ ಧ್ವಜಾರೋಹಣವನ್ನು ಮಾಜಿ ಉಪ ಮುಖ್ಯಮಂತ್ರಿಗಳಾದ ಕೆ ಎಸ್ ಈಶ್ವರಪ್ಪನವರು ನೆರವೇರಿಸಿ ನಂತರ ವಾಕ್ಥಾನ್ ಜಾಥಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಜೆಸಿಐ ಸಂಸ್ಥೆಯು ಸುಮಾರು ವರ್ಷಗಳಿಂದ ಹಲವಾರು ಸಾಮಾಜಿಕ ಕಾರ್ಯಗಳನ್ನು ಮಾಡುತ್ತಾ ಒಂದು ಉತ್ತಮವಾದ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಸಹಕಾರಿಯಾಗಿದೆ, ಅದೇ ರೀತಿ ಒಂದು ವಾರಗಳ ಕಾಲ ಜೆಸಿಐ ಸಪ್ತಾಹ ಆಚರಣೆ ಮುಖಾಂತರ ಕಲಿಕೆ, ಕ್ರೀಡೆ, ಯುವ ಸಮುದಾಯವನ್ನು ನಾಯಕತ್ವ, ಕೌಶಲ್ಯಾಭಿವೃದ್ಧಿಗೆ ಆಕರ್ಷಿಸುವಂತಹ ಸಂವಾದಗಳನ್ನು ನಡೆಸುವ ಮುಖಾಂತರ ಉತ್ತಮವಾದ ಕಾರ್ಯಕ್ರಮವನ್ನು ಆಯೋಜಿಸಿರುವುದು ಶ್ಲಾಘನೀಯ ಸಂಗತಿ ಎಂದರು. JCI ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ವಲಯ ಅಧ್ಯಕ್ಷರು ಸೆನೇಟರ್ ಗೌರೀಶ್ ಭಾರ್ಗವ, ಅವರು ಜೆಸಿಐ ಸಪ್ತಾಹಕ್ಕೆ ಶಿವಮೊಗ್ಗದ ಎಲ್ಲಾ ಘಟಕಗಳಿಗೆ ಶುಭ ಕೋರಿದರು. ವಲಯ ಉಪಾಧ್ಯಕ್ಷರುಗಳಾದ JFM ಪ್ರಮೋದ್ ಶಾಸ್ತ್ರಿ, JFS ಸುದರ್ಶನ್ ತಾಯಿ ಮನೆ, ವಲಯ ಕಾರ್ಯದರ್ಶಿ JFS ಆದರ್ಶ್,ಜೈಕಾಂ ಚೇರ್ಮನ್ JFM ಮೋಹನ್ ಕಲ್ಪತರು, ಮೀಡಿಯಾ ಟಾಸ್ಕ್ ಫೋರ್ಸ್ Jc ನವೀನ್ ಕುಮಾರ್ ಶಿವಮೊಗ್ಗದ ಎಲ್ಲಾ ಘಟಕ ಅಧ್ಯಕ್ಷರುಗಳಾದ JC ರೇಖಾ ರಂಗನಾಥ್, JC ರುದ್ರೇಶ್ ಕೋರಿ,JC ಸ್ಮಿತಾ ಮೋಹನ್, JC ಗಣೇಶ್ ಪೈ, JC ಸಂತೋಷ್ ,JC ಗಣೇಶ್ ಜಿ, JC ನಿವೇದಿತಾ, JC ಶಿಲ್ಪಾN, JC ಮಂಜುಳಾ ಕೇಶವ್, JC ಸ್ವಾತಿ, JC ಶಿಲ್ಪಾ, JC ನರಸಿಂಹ JC ವಿನೋದ್ ಹಾಗೂ ಎಲ್ಲಾ ಘಟಕಗಳ ಪದಾಧಿಕಾರಿಗಳು , ಸದಸ್ಯರು ಉಪಸ್ಥಿತರಿದ್ದರು.
Rotary Club Shivamogga ನಾವು ನೂರು ರೂಪಾಯಿ ತೆರಿಗೆ ಸಂಗ್ರಹಿಸಿದರೆ ನಮಗೆ ಹಿಂದಿರುಗುವುದು ಕೇವಲ 3.64 ಪೈಸೆ ಮಾತ್ರ- ಪ್ರೊ. ಬಿ.ಎಂ.ಕುಮಾರಸ್ವಾಮಿ
Rotary Club Shivamogga ದಕ್ಷಿಣ ಭಾರತದಲ್ಲಿ ಅತ್ಯುತ್ತಮ ಪ್ರಗತಿ ಕಾಣುತ್ತಿದ್ದರು, ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಕಾರಣದಿಂದ, ಆದಾಯ ಹಂಚಿಕೆಯ ಕೊರತೆಯಿಂದ ದಕ್ಷಿಣ ರಾಜ್ಯ ಸರ್ಕಾರಗಳು, ತಮ್ಮ ಪ್ರಜೆಗಳಿಗೆ ನ್ಯಾಯ ಒದಗಿಸಲು ಕಷ್ಟಪಡುವ ಪ್ರಮೇಯ ಉಂಟಾಗಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಜ್ಯೂಬಿಲಿಯ ವಾರದ ಸಭೆಯ ಮುಖ್ಯಾತಿಥಿಗಳಾಗಿ ಆಗಮಿಸಿದ ಪ್ರೋ. ಕುಮಾರಸ್ವಾಮಿ ಮಾತನಾಡುತ್ತಿದ್ದರು.
ರಾಷ್ಟ್ರೀಯ ಸಮಸ್ಯೆಗಳನ್ನು ಕೇಂದ್ರ ಸರ್ಕಾರ ನಿರ್ವಹಿಸಿದರೆ, ರಾಜ್ಯ ಸರ್ಕಾರಗಳು ಸ್ಥಳಿಯ ನಾಗರೀಕರ ಸಮಸ್ಯೆ, ಪ್ರಗತಿಗಳನ್ನು ಪೂರೈಸುವ ಹೊಣೆಗಾರಿಕೆ ಇದೆ.
ತೆರಿಗೆಗಳನ್ನು ಕೇಂದ್ರ ಸರ್ಕಾರಕ್ಕೆ ಆದಾಯ ರೂಪದಲ್ಲಿ ಪಡೆದರೆ, ಸಾಮಾಜಿಕ ನ್ಯಾಯ ಒದಗಿದುವುದಕ್ಕಾಗಿ ಕೇಂದ್ರ ಸರ್ಕಾರ 1951 ರಲ್ಲಿ ಪ್ರಥಮ ಹಣಕಾಸು ಆಯೋಗ ರಚಿಸಿ ಐದು ವರ್ಷಕ್ಕೊಮ್ಮೆ ಸಮಿತಿ ಹೊಸದಾಗಿ ನಿಯಮ ರೂಪಿಸಿ, ರಾಷ್ಟ್ರೀಯ ನ್ಯಾಯ ಒದಗಿಸುತ್ತೇವೆ ಎನ್ನುತ್ತಾರೆ.
ಈಗ ಹದಿನೈದನೇ ಪೈನಾನ್ಸ್ ಕಮಿಷನ್ ಕಾರ್ಯನಿರ್ವಹಿಸುತ್ತಿದೆ
ಮೊದಲ ಆಯೋಗ ಆದಾಯ ತೆರಿಗೆಯನ್ನು ಮಾತ್ರ ಹಂಚಿಕೆ ಮಾಡುತ್ತಿದ್ದರು. ಆದರೆ, ಹತ್ತನೆ ಸಮಿತಿ ಕ್ರಾಂತಿಕಾರಕ ನಿರ್ಣಯ ಕೈಗೊಂಡು ಪೂರ್ಣ ತೆರಿಗೆಯಲ್ಲಿ ಹಂಚಿಕೆ ಮಾಡಬೇಕೆಂದಿತು.
ಹದಿಮೂರನೇ ಸಮಿತಿ ಶೇ.32 ನೀಡಬೇಕೆಂದರೆ, ಹದಿನಾಲ್ಕನೆ ಸಮಿತಿ 42% ಹಂಚಿಕೆ ಮಾಡಬೇಕೆಂದಿತು. ಹದಿನೈದನೆ ಸಮಿತಿ 41% ರಾಜ್ಯ ಸರ್ಕಾರಕ್ಕೆ 1% ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಲು ಸೂಚಿಸಿದೆ.
ಜನಸಂಖ್ಯೆ ಆದಾರದಲ್ಲಿ ಹೆಚ್ಚಿನಪಾಲು ಶೇ.15 ನೀಡುವುದರಿಂದ ಉತ್ತರ ರಾಜ್ಯಗಳು ಹೆಚ್ಚು ಪಾಲು ಪಡೆಯುತ್ತವೆ. ಅರಣ್ಯ 33%, ಗುಡ್ಡಗಾಡು ಪ್ರದೇಶಕ್ಕೆ 66% ಹೊಂದಿರುವ ರಾಜ್ಯಕ್ಕೆ 7.5% ಪಾಲು ಇದೆ. ತಲಾದಾಯ ಹೆಚ್ಚು ಇದ್ದರೆ 45%, ಹೆಚ್ಚು ತೆರಿಗೆ ಸಂಗ್ರಹಿಸಿದರೆ 2.5% ಮಾತ್ರ ನೀಡಲಾಗುತ್ತದೆ.
ಜನಸಂಖ್ಯೆ ನಿಯಂತ್ರಣಕ್ಕೆ 12.5% ನೀಡುತ್ತಿರುವುದರಿಂದ ಈಗಾಗಲೆ ಜನಸಂಖ್ಯೆ ನಿಯಂತ್ರಣ ಹೊಂದಿರುವ ರಾಜ್ಯಗಳಿಗೆ ಅನ್ಯಾಯ ವಾಗುತ್ತಿದೆ. ನಾವು ನೂರು ರೂ. ಸಂಗ್ರಹಿಸಿದ ತೆರಿಗೆಯಲ್ಲಿ ನಮಗೆ ಹಿಂದಿರುಗುವುದು 3.64ಪೈಸೆ ಮಾತ್ರ. ಕೈಗಾರಿಕೆ, ವಾಣಿಜ್ಯ, ಜನಸಂಖ್ಯೆ, ವ್ಯವಸಾಯ, ಶೈಕ್ಷಣಿಕ ಪ್ರಗತಿ ಗಳಿಸಿದರು ಆದಾಯ ಹಂಚಿಕೆಯಲ್ಲಿ ಎಪ್ಪತ್ತೈದು ವರ್ಷ ದಿಂದ ಅನ್ಯಾಯ ವಾಗುತ್ತಲೇ ಇದೆ.
ಮುಂದೆ ರಾಜಕೀಯವಾಗಿಯು ತ್ತೊಂದರೆ ಉಂಟಾಗುತ್ತದೆ. ನಮ್ಮ ದಕ್ಷಿಣ ರಾಜ್ಯಗಳು ಒಟ್ಟಿಗೆ ಸೇರಿ ಪ್ರಗತಿಯಿಂದ ಉಂಟಾಗಿರುವ ಅನ್ಯಾಯ ಪ್ರದರ್ಶಿಸಲೇ ಬೇಕು.
ಕೇಂದ್ರ ಸರ್ಕಾರ ತೆರಿಗೆ ಹೆಚ್ಚಿಸದೆ, ಆರೋಗ್ಯ, ಶಿಕ್ಷಣ, ಹಿಂದುಳಿದವರ್ಗಕ್ಕೆ, ರಸ್ತೆ, ಆದಾಯ ಹೀಗೆ ಮೇಲ್ ತೆರಿಗೆ ಎಂದು ಹೆಚ್ಚಿಸಿ ನೇರವಾಗಿ ತನ್ನ ಆದಾಯ ಹೆಚ್ಚಿಸಿ ಕೊಳ್ಳುತ್ತಿದೆ. ಈ ತೆರಿಗೆ 2011-12 ರಲ್ಲಿ ಶೇ.10%, 92ಸಾವಿರ ಕೋಟಿ ಮಾತ್ರ ಇತ್ತು. 24-25ರಲ್ಲಿ ಶೇ.28% ಮೂರು ಸಾವಿರದ ಅರವತ್ತೈದು ಲಕ್ಷ ಕೋಟಿಗೆ ಏರಿಕೆಯಾಗಿದೆ.
ಒಟ್ಟು ಆದಾಯದಲ್ಲಿ ಶೇ.50ಭಾಗ ಹಂಚಿಕೆ ಯಾಗಲೇಬೇಕು ಹಾಗೂ ಸಮಿತಿಯಲ್ಲಿ ರಾಜ್ಯ ಸರ್ಕಾರಗಳ ಪ್ರತಿನಿಧಿಗಳು ಇರಲೇ ಬೇಕು, ಜನಸಂಖ್ಯೆ ನಿಯಂತ್ರಣಕ್ಕೆ ಶೇ.20 ಆದಾಯ ಹಂಚಿಕೆಯಾಗಬೇಕು ಎಂಬ ಬೇಡಿಕೆ ಹೆಚ್ಚಾಗಿದೆ. ಪ್ರತಿ ರಾಜ್ಯಗಳು ಪ್ರಗತಿ ಹೊಂದಿದರೆ ಮಾತ್ರ ರಾಷ್ಟ್ರ ಪ್ರಗತಿ ಹೊಂದಲು ಸಾದ್ಯ ಎಂದರು.
Rotary Club Shivamogga ಅಧ್ಯಕ್ಷತೆಯನ್ನು ಬಿ.ಎಸ್.ಅಶ್ವತ್ ವಹಿಸಿ ಕಳೆದ ಸಾಲಿನಲ್ಲಿ ನಮ್ಮ ಕ್ಲಬ್ ಏಳು ಜಿಲ್ಲಾಮಟ್ಟದ ಸೇವಾ ಪ್ರಶಸ್ತಿಗಳಿಸಲು ಅಧ್ಯಕ್ಷೆ ರೂಪಪುಣ್ಯಕೋಟಿ, ಕಾರ್ಯದರ್ಶಿ ಡಾ.ಪ್ರಕೃತಿಮಂಚಾಲೆ ಹಾಗೂ ಆಡಳಿತ ಮಂಡಳಿಗೆ ಅಭಿನಂದಿಸಿ, ಈ ಸಾಲಿನಲ್ಲು ಅತ್ಯತ್ತಮ ಕಾರ್ಯಕ್ರಮ ಆಯೋಜಿಸಲಾಗುವುದೆಂದರು.
ಭಾರದ್ವಾಜ್ ಸ್ವಾಗತಿಸಿದರು, ಸತ್ಯನಾರಾಯಣ್ ನಿರೂಪಿಸಿದರು, ರೇವಣ ಸಿದ್ದಪ್ಪ ವಂದಿಸಿದರು. ಲಕ್ಷ್ಮೀನಾರಾಯಣ್, ವಿನೋದ್, ಜವಳಿ, ಉಮೇಶ್, ವಾಗೇಶ್, ಉಮಾದೇವಿ ಮುಂತಾದ ಸದಸ್ಯರು ಭಾಗವಹಿಸಿದ್ದರು.
MESCOM ಸೆ.12. ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ
MESCOM ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 12 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ.
ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದು, ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
MESCOM ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ ; 9480841340.
Rabindra Kalakshetra ಬೆಂಗಳೂರಿನ ಯಕ್ಷಗಾನ ರಸಿಕರಿಗೆ “ಯಕ್ಷಗಾನ ಸಂಭ್ರಮ”
Rabindra Kalakshetra ಬೆಂಗಳೂರಿನ ಯಕ್ಷ ರಸಿಕರಿಗಾಗಿ ಯಕ್ಷಗಾನದ ಮೇರು ಕಲಾವಿದರನ್ನು ಒಂದೇ ವೇದಿಕೆಯಲ್ಲಿ ತರುವ ಪ್ರಯತ್ನವಾಗಿ, ರವೀಂದ್ರ ಕಲಾಕ್ಷೇತ್ರದಲ್ಲಿ ಇದೇ ಶನಿವಾರ ರಾತ್ರಿ 9:10ರಿಂದ ಆರಂಭಗೊಳ್ಳುವ “ತಿತ್ತಿತೈ–ಯಕ್ಷ ಪರ್ವ 2025” ಪ್ರೇಕ್ಷಕರಿಗೆ ಅಪರೂಪದ ಯಕ್ಷಗಾನ ಸಂಭ್ರಮವನ್ನು ನೀಡಲು ಸಜ್ಜಾಗಿದೆ.
ಈ ವಿಶೇಷ ಯಕ್ಷಪರ್ವದಲ್ಲಿ ಮೂರು ಪ್ರಸಂಗಗಳನ್ನು ಭಿನ್ನತೆಯೊಂದಿಗೆ ಆಯೋಜಿಸಲಾಗಿದೆ.
ಮೊದಲ ಪ್ರಸಂಗ “ದಮಯಂತಿ ಪುನಃ ಸ್ವಯಂವರ”. ಕೆರೆಮನೆ ಪರಂಪರೆಯ ಋತುಪರ್ಣ–ಬಾಹುಕ ಜೋಡಿ ಪ್ರಸಿದ್ಧವಾಗಿದ್ದ ಈ ಪ್ರಸಂಗದಲ್ಲಿ, ವರ್ತಮಾನದಲ್ಲಿ ಕೊಂಡದಕುಳಿ ರಾಮಚಂದ್ರ ಹೆಗಡೆ (ಬಾಹುಕ) ಮತ್ತು ಬಳ್ಕೂರು ಕೃಷ್ಣ ಯಾಜಿ (ಋತುಪರ್ಣ) ಪ್ರಮುಖ ಪಾತ್ರಗಳಲ್ಲಿ ರಂಗವೇರುತ್ತಾರೆ.
ದಮಯಂತಿಯಾಗಿ ನೀಲ್ಕೋಡ್ ಶಂಕರ ಹೆಗಡೆ, ಸುದೇವ ಬ್ರಾಹ್ಮಣನಾಗಿ ಸಿದ್ಧಾಪುರ ಅಶೋಕ್ ಭಟ್, ಚೇದಿರಾಣಿಯಾಗಿ ಪಂಜು ಬಗ್ವಾಡಿ ಕಾಣಿಸಿಕೊಳ್ಳಲಿದ್ದಾರೆ. ಭಾಗವತಿಗಳಾಗಿ ಕೊಳಗಿ ಕೇಶವ ಹೆಗಡೆ ಮತ್ತು ಮೂಡುಬೆಳ್ಳೆ, ವಾದ್ಯದಲ್ಲಿ ಫಾಟಕ್–ಕುಂಜತ್ತಾಯರು ಜೋಡಿಯಾಗಲಿದ್ದಾರೆ.
ಎರಡನೇ ಪ್ರಸಂಗ “ಭೃಗು ಶಾಪ”. ಶ್ರೀಧರ್ ಡಿ.ಎಸ್. ರಚನೆಯ ಈ ಬಿರುಸಿನ ಪ್ರಸಂಗದಲ್ಲಿ ಪೆರ್ಮುದೆ, ಜಲವಳ್ಳಿ, ಸೀತಾರಾಮ ಕುಮಾರ್ ಮುಂತಾದವರು ಪಾತ್ರವಹಿಸಿದ್ದಾರೆ.
ಹಾಸ್ಯ, ವೀರ ರಸ ಹಾಗೂ ವಾಗ್ವಾದಗಳನ್ನು ಒಟ್ಟುಗೂಡಿಸಿರುವ ಈ ಆಖ್ಯಾನ ಪ್ರೇಕ್ಷಕರಿಗೆ ರಂಗಸ್ಥಳದ ಬಿಸಿತನವನ್ನು ನೀಡಲಿದೆ.
Rabindra Kalakshetra ಕೊನೆಯ ಪ್ರಸಂಗ “ಕೃಷ್ಣ ಸಂಕಲ್ಪ”. ತೀರ್ಥಹಳ್ಳಿ ಗೋಪಾಲ್ ಆಚಾರ್ ಮತ್ತು ಕೊಳಲಿ ಕೃಷ್ಣ ಶೆಟ್ಟಿ ಅವರ ಹಿರಿಯ ಜೋಡಿ ರಂಗೇರಲಿದ್ದು, ಭಾಮಿನಿ ವೇಷ, ಪದ್ಯ–ಚಂಡೆಯ ಜುಗಲ್ಬಂದಿ ವಿಶೇಷ ಆಕರ್ಷಣೆಯಾಗಲಿದೆ.
ಯಕ್ಷರಸಿಕರಿಗೆ ಇದು ನೈಜ ಯಕ್ಷಗಾನ ಸವಿನೆನಪನ್ನು ನೀಡುವ ಪರ್ವವಾಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಸಂಪರ್ಕ: 6362673283
Vice President Election 2025 ಉಪರಾಷ್ಟ್ರಪತಿ ಚುನಾವಣೆ. ಎನ್ ಡಿಎ ಅಭ್ಯರ್ಥಿ ಗೆಲುವಿಗೆ ಸಂಖ್ಯಾಬಲ ಬೆಂಬಲ?
Vice President Election 2025 ಉಪ ರಾಷ್ಟ್ರಪತಿಗಳಾಗಿದ್ದ ಶ್ರೀ ಜಗದೀಪ್ ಧನ್ಕರ್ ಅವರ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸೆಪ್ಟೆಂಬರ್ 9 ಚುನಾವಣೆ ನಡೆಯುತ್ತಿದೆ.
ಲೋಕಸಭೆಯಲ್ಲಿ ಪಕ್ಷಗಳ ಬಲಾಬಲ ಆಧರಿಸಿ ಊಹಿಸಿದರೆ ಇಂಡಿ ಅಭ್ಯರ್ಥಿ ನ್ಯಾ.ಶ್ರೀ ಬಿ.ಸುದರ್ಶನ ರೆಡ್ಡಿ ಅವರಿಗಿಂತ
ಬಿಜೆಪಿ ಬೆಂಬಲಿತ
ಎನ್ ಡಿ ಎ ಅಭ್ಯರ್ಥಿ ಶ್ರೀ ಸಿ.ಪಿ.ರಾಧಾಕೃಷ್ಣನ್
Vice President Election 2025 ಅವರ ಜಯ ಬಹುತೇಕ ಖಚಿತವಾಗಿದೆ. 391 ಮತ ಪಡೆದವರು ಜಯಶಾಲಿಗಳಾಗುತ್ತಾರೆ. ಸಂಖ್ಯಾಬಲದ ಪ್ರಕಾರ
ಲೋಕಸಭೆ ಮತ್ತು ರಾಜ್ಯಸಭೆ ಸೇರಿ ಒಟ್ಟು ಸ್ಥಾನಗಳು 781.
ಅದರಲ್ಲಿ ಎನ್ ಡಿಎ ಬಲ 436 ಇದೆ.
ಪ್ರತಿಪಕ್ಷ ಒಕ್ಕೂಟ ಇಂಡಿ ಬಲ 324 ಇದೆ.
ಪಕ್ಷ ನಿಷ್ಠೆ ಆಧಾರದಲ್ಲಿ
ಮತಹಾಕಿದರೆ ಎನ್ ಡಿ ಎ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್ ಗೆಲುವು ಸಲೀಸಾಗಲಿದೆ.
ಇಂದು ಶಿವಮೊಗ್ಗ ಸಂಸದ ಬಿ.ವೈರಾಘವೇಂದ್ರ ಅವರು ಮತ ಚಲಾಯಿಸಿದ
ಹರ್ಷದಲ್ಲಿರುವ ತಮ್ಮ ಚಿತ್ರವನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Sri Dharmasthala Manjunatheshwara Education Trust ಬೆಂಗಳೂರಿನ ರುಡ್ ಸೆಟ್ ಸಂಸ್ಥೆಯಿಂದ ಅಣಬೆ ಕೃಷಿ ಬಗ್ಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ
Sri Dharmasthala Manjunatheshwara Education Trust ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಅಣಬೆ ಬೇಸಾಯ (Mushroom Cultivation) ಕುರಿತ 10 ದಿನಗಳ ಉಚಿತ ತರಬೇತಿಯನ್ನು ಅಕ್ಟೋಬರ್ 06 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರಬೇಕು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಸೆಪ್ಟೆಂಬರ್ 25 ಕೊನೆಯ ದಿನವಾಗಿದೆ.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
Sri Dharmasthala Manjunatheshwara Education Trust ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9481506564, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ತಿಳಿಸಿದ್ದಾರೆ.
CM Siddharamaiah ಶ್ರೀನಾರಾಯಣ ಗುರುಗಳು ಜಾತಿ, ಮೂಢನಂಬಿಕೆ,& ಅಂಧಶ್ರದ್ಧೆ ವಿರುದ್ಧ ಹೋರಾಟಗೈದವರು- ಸಿದ್ಧರಾಮಯ್ಯ
CM Siddharamaiah ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮಾತನಾಡಿದರು.
ಬ್ರಹ್ಮ ಶ್ರೀ ನಾರಾಯಣ ಗುರುಗಳ ಚಿಂತನೆ, ಹೋರಾಟಗಳ ಉದ್ದೇಶವನ್ನು ಜನರು ಅರ್ಥೈಸಿಕೊಳ್ಳಬೇಕಿದೆ. ನಾರಾಯಣ ಗುರುಗಳು ಯಾವುದೇ ಒಂದು ಸಮುದಾಯ, ಜಾತಿಗೆ ಮೀಸಲಾಗದೇ, ಇಡೀ ಸಮಾಜದ ಆಸ್ತಿಯಾಗಿದ್ದಾರೆ.
ಸಮಾಜದಲ್ಲಿರುವ ಜಾತಿವ್ಯವಸ್ಥೆ, ಮೂಢನಂಬಿಕೆ, ಅಂಧಶ್ರದ್ಧೆಯ ವಿರುದ್ಧ ಹೋರಾಟ ನಡೆಸಿದರು. ನಾರಾಯಣ ಗುರುಗಳು’ ವಿದ್ಯೆಯಿಂದ ಸ್ವತಂತ್ರರಾಗಿರಿ’ ಎಂಬ ಮಾತನ್ನು ಪ್ರತಿಪಾದಿಸಿದರು. ಇತಿಹಾಸದಲ್ಲಿ ನಮ್ಮ ಸಮಾಜದಲ್ಲಿ ಅನಕ್ಷರತೆಯಿತ್ತು, ಈಗ ಪರಿಸ್ಥಿತಿ ಕೊಂಚ ಸುಧಾರಿಸಿದೆ. ದೇವಸ್ಥಾನಕ್ಕೆ ಪ್ರವೇಶ ದೊರೆಯದಿದ್ದರೆ, ದೇವಸ್ಥಾನವೇ ನಿಮ್ಮ ಬಳಿ ಕರೆತರಲು ಪ್ರಯತ್ನಿಸಿ ಎಂದು ನಾರಾಯಣಗುರುಗಳು ತಿಳಿಸಿದ್ದರು. ನಾರಾಯಣ ಗುರುಗಳ ಕಾಲಮಾನದಲ್ಲಿ ಕೇರಳದಲ್ಲಿ ಶೂದ್ರವರ್ಗದವರನ್ನು ತುಚ್ಛವಾಗಿ ಕಾಣುವ ಪರಿಸ್ಥಿತಿಯಿತ್ತು.
ಪರ್ಯಾಯ ವ್ಯವಸ್ಥೆಯನ್ನು ನಾರಾಯಣ ಗುರುಗಳು ಹುಡುಕಿದರು. ಅವರು ಮೊದಲನೇ ದೇವಸ್ಥಾನ ಕಟ್ಟಿದ್ದು 1885ರಲ್ಲಿ. ಅಲ್ಲಿಂದೀಚೆಗೆ 150ಕ್ಕೂ ಹೆಚ್ಚು ದೇವಸ್ಥಾನಗಳನ್ನು ಕಟ್ಟಿದರು. ಮೇಲ್ಜಾತಿಯವರೇ ಪೂಜಾರಿಗಳಾಗಬೇಕೆಂದು ದೇವರು ಹೇಳಿಲ್ಲ. ಪೂಜಾರಿಗಳಾದವರಿಗೆ ತರಬೇತಿ ಕೊಡುವ ವ್ಯವಸ್ಥೆಯನ್ನು ಕೂಡ ಮಾಡುತ್ತಾರೆ. ಒಂದು ಜಾತಿ, ಒಂದು ಮತ, ಒಂದು ದೇವರು ಎಂಬ ಮಾತುಗಳನ್ನು ಅವರು ಹೇಳಿದರು.
ನಮಗೆ ದೊರೆತಿರುವ ಸ್ವಾತಂತ್ರ್ಯ ಯಶಸ್ವಿಯಾಗಬೇಕಾದರೆ ಶಕ್ತಿ ಇಲ್ಲದವರನ್ನು ಶಕ್ತಿಯುತರಾಗಿಸಬೇಕು. ಆಗ ಮಾತ್ರ ನಿಜವಾದ ಸ್ವಾತಂತ್ರ್ಯ ದೊರೆಯುತ್ತದೆ. ಬಸವಣ್ಣನ ಕಾಲದಿಂದಲೂ ಜಾತಿ, ವರ್ಗ ಹೋಗಬೇಕೆಂದು ಹೇಳುತಾ ಬಂದಿದ್ದರೂ ಜಾತಿ ವರ್ಗ ಹೋಗಿಲ್ಲ. ಸಂವಿಧಾನದಲ್ಲಿ ಬಹಳ ಸ್ಪಷ್ಟವಾಗಿ ಎಲ್ಲರಿಗೂ ಸಮಾನ ಅವಕಾಶಗಳು ದೊರೆಯಬೇಕು ಎಂದಿದ್ದರೂ ಎಲ್ಲರಿಗೂ ಸಮಾನ ಅವಕಾಶಗಳು ಸಿಕ್ಕಿಲ್ಲ.
ಬಸವಣ್ಣವ ವಚನವನ್ನು ಹೇಳುತ್ತಲೇ ಯಾವ ಜಾತಿ ಎಂದು ಕೇಳುತ್ತೇವೆ. ಇದನ್ನು ಹೋಗಲಾಡಿಸಬೇಕಾದರೆ ಆರ್ಥಿಕ, ಸಾಮಾಜಿಕವಾಗಿ ಸ್ವಾವಲಂಬಿಗಳಾಗಬೇಕು. ಅದಕ್ಕಾಗಿ ಕಸುಬು ಯಾವುದೇ ಇದ್ದರೂ ವಿದ್ಯೆ ಕಲಿಯಲೇಬೇಕು. ವೈದ್ಯರು, ಇಂಜಿನಿಯರ್, ಪ್ರೊಫೆಸರ್, ವಿಜ್ಞಾನಿಗಳಾಗಬೇಕು. ವೈದ್ಯರು, ಇಂಜಿನಿಯರ್ ಅಥವಾ ವಿಜ್ಞಾನಿಗಳಾಗುವುದು ಯಾರೊಬ್ಬರ ಸ್ವತ್ತಲ್ಲ. ಎಲ್ಲರಿಗೂ ಸಾಮರ್ಥ್ಯವಿದೆ. ನಾನು ಕುರುಬ ಜಾತಿಯಲ್ಲಿ ಹುಟ್ಟಿದ್ದರೂ ಮುಖ್ಯಮಂತ್ರಿಯಾಗಿಲ್ಲವೆ. ಹುಟ್ಟಿನಿಂದ ಎಲ್ಲವೂ ನಿರ್ಧಾರವಾಗುವುದಿಲ್ಲ.
ಅವಕಾಶಗಳು ದೊರೆಯುವುದು ಹಾಗೂ ಅದನ್ನು ಬಳಕೆ ಮಾಡುವುದರ ಮೇಲೆ ನಿರ್ಧಾರವಾಗುತ್ತದೆ. ಜಾಲಪ್ಪ ಅವರು ವೈದ್ಯಕೀಯ ಕಾಲೇಜು ಸ್ಥಾಪಿಸಿದರು. ಆ ಯೋಚನೆ ಮಾಡದೇ ಹೋಗಿದ್ದರೆ ಅದು ಸಾಧ್ಯವಾಗುತ್ತಿರಲಿಲ್ಲ. ಸರ್ಕಾರ ಎಲ್ಲರಿಗೂ ಉಚಿತ ಶಿಕ್ಷಣ ನೀಡುತ್ತಿದೆ. ಕಡ್ಡಾಯ ಶಿಕ್ಷಣ ನೀಡಲು ಬದ್ಧವಾಗಿದೆ. ಪೋಷಕರು ತಾವು ಯಾವುದೇ ವೃತ್ತಿಯನ್ನು ಮಾಡುತ್ತಿರಲಿ, ಮಕ್ಕಳಿಗೆ ಮಾತ್ರ ಒಳ್ಳೆಯ ಶಿಕ್ಷಣ ಕೊಡಿಸಿ ಅವರನ್ನು ವಿದ್ಯಾವಂತರನ್ನಾಗಿ ಮಾಡುವುದು ತಂದೆ ತಾಯಿಗಳ ಕರ್ತವ್ಯ.
CM Siddharamaiah ವಿದ್ಯೆ ಇಲ್ಲದೆ ಹೋಗಿದ್ದರೆ ದೇವರಾಜ ಅರಸು ಅವರನ್ನು ಮೊದಲ್ಗೊಂಡು, ನಾನಾಗಲಿ, ಬಂಗಾರಪ್ಪನವರಾಗಲಿ, ವೀರಪ್ಪ ಮೊಯ್ಲಿ ಅವರಾಗಲಿ, ಎಸ್. ಎಂ.ಕೃಷ್ಣ ಅವರಾಗಲಿ, ದೇವೇಗೌಡ ಅವರಾಗಲಿ ಮುಖ್ಯಮಂತ್ರಿಗಳಾಗಲು ಸಾಧ್ಯವಿತ್ತೆ? ಎಲ್ಲಾ ಸಾಧನೆಗಳಿಗೂ ಶಿಕ್ಷಣವೇ ಅಡಿಪಾಯ ಎಂದು ಶಿಕ್ಷಣದ ಮಹತ್ವವನ್ನು ನಾರಾಯಣ ಗುರುಗಳು ಪದೇ ಪದೇ ಹೇಳುತ್ತಿದ್ದರು.
ಸರ್ಕಾರದ ವತಿಯಿಂದ ಸುಮಾರು 31 ಜಯಂತಿಗಳನ್ನು ಆಚರಿಸಲಾಗುತ್ತದೆ. ಅದರಲ್ಲಿ ಸುಮಾರು 15 ಜಯಂತಿಗಳ ಆಚರಣೆ ಜಾರಿಗೆ ತಂದಿದ್ದು ನಮ್ಮ ಸರ್ಕಾರ.
2016ರಲ್ಲಿ ನಾರಾಯಣ ಗುರುಗಳ ಜಯಂತಿ ಆಚರಣೆ ಪ್ರಾರಂಭಿಸಿದ್ದು ನಮ್ಮದೇ ಸರ್ಕಾರದ ಅವಧಿಯಲ್ಲಿ.
ಈಡಿಗ – ಬಿಲ್ಲವ ಸಮಾಜದ ಸಮುದಾಯ ಭವನ ನಿರ್ಮಾಣ, ಹಾಸ್ಟೆಲ್ ನಿರ್ಮಾಣಕ್ಕೆ ಸ್ಥಳ ಒದಗಿಸಿದವುದೂ ಸೇರಿದಂತೆ ನಮ್ಮ ಸರ್ಕಾರ ಅನುದಾನವನ್ನು ನೀಡಲಿದೆ. ಈಡಿಗರು, ಬಿಲ್ಲವರ ಅಭಿವೃದ್ಧಿ ನಿಗಮ ಈಗಾಗಲೇ ಘೋಷಣೆಯಾಗಿದೆ. ಕಾನೂನುನಾತ್ಮಕವಾಗಿ ಅವುಗಳನ್ನು ನೋಂದಣಿ ಮಾಡುವ ಕಾರ್ಯ ಆಗಬೇಕಾಗಿದೆ. ದೇವರಾಜ ಅರಸು ನಿಗಮದಲ್ಲಿ ಇದಕ್ಕಾಗಿ 10 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಅದರ ಬದಲಿಗೆ ನಿಗಮಗಳಲ್ಲಿಯೇ ಸ್ವತಂತ್ರವಾಗಿ ಇಡಲು ಕ್ರಮ ಕೈಗೊಳ್ಳಲಾಗುವುದು. ಕಂಪನಿ ಕಾಯ್ದೆ ಪ್ರಕಾರ ನೋಂದಣಿ ಮಾಡಲಾಗುವುದು.
ನಿಮ್ಮ ಸಮುದಾಯಗಳ ಎಲ್ಲಾ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವುದು ನೀವು ನಾರಾಯಣ ಗುರುಗಳಿಗೆ ಸಲ್ಲಿಸುವಂತಹ ಗೌರವ. ನಾವೆಲ್ಲ ಅವರ ಚಿಂತನೆಗಳನ್ನು ರೂಢಿಸಿಕೊಂಡು ಸಾಗಬೇಕಿದೆ.
ನಾನು ಸದಾ ಅವಕಾಶ ವಂಚಿತರ ಪರ, ಸಾಮಾಜಿಕ ನ್ಯಾಯದ ಪರವಾಗಿ ಇರುತ್ತೇನೆ. ನಮ್ಮ ಸರ್ಕಾರವು ಅದಕ್ಕೆ ಬದ್ಧವಾಗಿರುತ್ತದೆ. ನನ್ನ ರಾಜಕೀಯ ಜೀವನವನ್ನೇ ಸಾಮಾಜಿಕ ನ್ಯಾಯಕ್ಕಾಗಿ ಮುಡಿಪಾಗಿಟ್ಟಿದ್ದೇನೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ತಿಳಿಸಿದರು.
Klive Special Article ನಿಮ್ಮೂರಿನ ಇತಿಹಾಸ ನಿಮಗೆಷ್ಟು ಗೊತ್ತು? ವಿವರಣೆ: ದಿಲೀಪ್ ನಾಡಿಗ್. ಶಿವಮೊಗ್ಗ
ಭಾಗ. 4.
Klive Special Article ಕೆಳದಿ ಮಹಾಯೋಧ ದೊಡ್ಡ ಸಂಕಣ್ಣನಾಯಕರು ತಾನುಟ್ಟಿದ್ದ ಖಾವಿಯೊಳಗೆ ಬೆಚ್ಚಗೆ ಮಲಗಿದ್ದ ನಾಗಮುರಿ ಖಡ್ಗದೊಂದಿಗೆ ದಕ್ಷಿಣ ಭಾರತದ ತೀರ್ಥ ಯಾತ್ರೆ ಕೈಗೊಂಡು ಮೊದಲು ಶ್ರೀ ರಾಮೇಶ್ವರನನ್ನ ದರ್ಶಿಸಿ ಶಿವಗಂಗೆ, ಕಂಚಿ, ಕುಂಭಕೋಣ, ಚಿದಂಬರಂ, ಶ್ರೀಮುಷ್ಣ, ಮನ್ನಾರ, ಪುದುಗಲ, ಮುಂತಾದ ಶೈವ ಪುಣ್ಯಕ್ಷೇತ್ರ ಸಂದರ್ಶಿಸಿ, ಶೈವದೇವರುಗಳ ಸಾನಿಧ್ಯದಲ್ಲಿ ಸೇವೆ ಮತ್ತು ಸಮುದ್ರ ದರ್ಶನ ಮಾಡಿ ಉತ್ತರಾಭಿಮುಖವಾಗಿ ಪ್ರಯಾಣ ಬೆಳೆಸಿ ವಿಜಯವಾಡ, ಗೋಲ್ಕೊಂಡ, ಅಹ್ಮದ್ ನಗರ, ಮೂಲಕ ದಿಲ್ಲಿಗೆ ಬಂದನು. ದೊಡ್ಡ ಸಂಕಣ್ಣನಾಯಕನ ನಿಜವಾದ ಯೋಧನ ತಾಕತ್ತು ಇಲ್ಲಿಯೇ ಪ್ರದರ್ಶವಾಗುತ್ತದೆ. ದಿಲ್ಲಿನಗರದ ವೈಭವವನ್ನು, ಸೊಬಗನ್ನು, ಭವ್ಯ ಕಟ್ಟಡಗಳನ್ನು ಕಣ್ಣಾರೆ ಕಂಡ ದೊಡ್ಡಸಂಕಣ್ಣನಾಯಕ ರಿಗೆ ದೆಹಲಿ ಬಾದಷಹನ ಅರಮನೆಯ ಬಳಿ ಬಂದಾಗ ಒಂದು ವಿಶೇಷ ದೃಶ್ಯ ಕಂಡರು, ಅರಮನೆಯ ಬಾಗಿಲಿಗೆ ಬಿರುದು ಸಮೇತ ಕಟ್ಟಿದ್ದ ಕತ್ತಿಯೊಂದು ತೂಗಾಡುತಿತ್ತು, ಅದರ ವಿಚಾರ ಕೇಳಲಾಗಿ ಬಾದಷಹನ ಅರಮನೆಯಲ್ಲಿ ಅಂಕುಶಖಾನನೆಂಬ ಜಟ್ಟಿಯೊಬ್ಬನಿದ್ದಾನೆ, ಅವನು ಒಂಟಿ ಕತ್ತಿಕಾಳಗದಲ್ಲಿ ಪ್ರಸಿದ್ದನಾಗಿದ್ದು ಅವನೊಂದಿಗೆ ಸೆಣಸುವವರು ಈ ಕತ್ತಿಯನ್ನು ಬಿಚ್ಚಿ ತನ್ನೊಡನೆ ಕಾಳಗಕ್ಕೆ ಬರಬೇಕೆಂದು ಸೂಚಿಸಿರುವುದಾಗಿಯೂ ತಿಳಿಸಿದರು. Klive Special Article ಇತ್ತ ಬಾದಷಹ ಇವನನ್ನ ಎದುರಿಸುವ ಜಟ್ಟಿಗಳಾರೂ ಇಡೀ ಭಾರತದಲ್ಲೇ ಇಲ್ಲವೆಂದು ಚಿಂತಿಸುವ ಸಮಯದಲ್ಲೇ ಮಲ್ಲರಿಗೇ ಜಗದೇಕಮಲ್ಲರಾದ ಮಲ್ಲಸಾಮ್ರಾಜ್ಯದ ದೊಡ್ಡಸಂಕಣ್ಣನಾಯಕರ ಪ್ರವೇಶವಾಗಿತ್ತು. ಈ ವಿಚಾರ ತಿಳಿದ ಸಂಕಣ್ಣ ನಾಯಕರು ಕತ್ತಿಯನ್ನು ಬಿಚ್ಚಿ ಅಂಕುಶಖಾನನು ಪರಾಕ್ರಮಿಯಾಗಿದ್ದರೆ ನನ್ನನ್ನು ಎದುರಿಸಲೆಂದನು. ದೊಡ್ಡಸಂಕಣ್ಣನಾಯಕ ರ ವಿಷಯ ತಿಳಿದ ದೆಹಲಿ ಬಾದಷಹ ಸಂಭ್ರಮದಿಂದ ಅವನನ್ನು ಬರಮಾಡಿಕೊಂಡು ಕತ್ತಿ ಕಾಳಗ ಏರ್ಪಡಿಸಿದನಲ್ಲದೆ ತನ್ನ ಶಸ್ತ್ರಾಗಾರದಿಂದ ನಾನಾ ತರಹದ ಖಡ್ಗವನ್ನು ತರಿಸಿ ಬೇಕಾದುದನ್ನು ಆರಿಸಿಕೊಳ್ಳುವಂತೆ ಮಲ್ಲರಿಗೆ ಮಲ್ಲನಾದ ಸಂಕಣ್ಣನಾಯಕರಿಗೆ ತಿಳಿಸಿದನು. ಅವುಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ಸಂಕಣ್ಣನಾಯಕರು ನಗುತ್ತ ನನಗೆ ಈ ಯಾವ ಆಯುಧವೂ ಬೇಕಿಲ್ಲವೆಂದು ನನ್ನ ಬಳಿಯೇ ಖಡ್ಗವಿದೆಯೆಂದು ಹೇಳಿ ಕಾಳಗಕ್ಕೆ ಇಳಿದನು. ಈ ಅಪೂರ್ವ ಕಾಳಗವನ್ನು ವೀಕ್ಷಿಸಲು ಸಾವಿರಾರು ಜನರು, ನೂರಾರು ಜಟ್ಟಿಗಳು ಸೇರಿದರು. ಆದರೆ ಖಾವಿಯೊಳಗೆ ಬೆಚ್ಚಗೆ ಮಲಗಿದ್ದ ನಾಗಮುರಿ ರಕ್ತಕ್ಕಾಗಿ ತಹತಹಿಸುತ್ತಾ ಮಲಗಿತ್ತು. ಮಲ್ಲರಿಗೆ ಮಲ್ಲರಾದ ಮಲ್ಲಸಾಮ್ರಾಜ್ಯದ ದೊಡ್ಡಸಂಕಣ್ಣನಾಯಕರು ಇಡೀ ಭಾರತವೇ ಮೆಚ್ಚಿ ಕೊಂಡಾಡುವಂತಹ ಸಾಹಸಕ್ಕೆ ಕೈ ಹಾಕಿದ್ದರು. ಮುಂದುವರೆಯುವುದು. ದಿಲೀಪ್ ನಾಡಿಗ್, 6361124316
