Thursday, February 19, 2026
Thursday, February 19, 2026
Home Blog Page 182

Madhu Bangarappa ದಸರಾ ಕ್ರೀಡಾಕೂಟದಲ್ಲಿ ವಯಸ್ಸಿನ ನಿರ್ಬಂಧವಿಲ್ಲ. ಎಲ್ಲರೂ ಭಾಗವಹಿಸಿ- ಮಧು ಬಂಗಾರಪ್ಪ

0

Madhu Bangarappa ಕ್ರೀಡಾ ಕ್ಷೇತ್ರ ಸೇರಿದಂತೆ ಯಾವುದೇ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಎಂದಿಗೂ ವಿಶೇಷ ಗೌರವವಿದ್ದು, ಇವರು ನಮ್ಮೆಲ್ಲರಿಗೆ ಸ್ಪೂರ್ತಿದಾಯಕರಾಗಿರುತ್ತಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನುಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಸೆ.02 ಮತ್ತು 03 ರಂದು ನೆಹರು ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣ ಮಾತ್ರವಲ್ಲದೇ ಕ್ರೀಡೆ ಮತ್ತು ಇತರೆ ಸಾಂಸ್ಕೃತಿಕ ಚಟುವಟಿಕೆಗಳೂ ಮುಖ್ಯವಾಗಿದ್ದು ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯ ಹೆಚ್ಚಿಸುವಲ್ಲಿ ಬಹಳ ಪ್ರಮುಖ ಪಾತ್ರ ವಹಿಸುತ್ತವೆ.
ದಸರಾ ಕ್ರೀಡಾಕೂಟದಲ್ಲಿ ವಯಸ್ಸಿನ ಮಿತಿಯಿಲ್ಲದ ಕಾರಣ ಎಲ್ಲ ವಯೋಮಾನದವರು ಕ್ರೀಡೆಯಲ್ಲಿ ಭಾಗವಹಿಸಬಹುದು.

ಮಕ್ಕಳಿಗೆ ಸ್ಪೂರ್ತಿಯಾಗುವಂತೆ ವಯಸ್ಸಾದವರು ಸ್ಪರ್ಧಿಸುತ್ತಿರುವುದು ಸಂತಸದ ವಿಷಯ. ದಸರಾ ಕ್ರೀಡಾಕೂಟದ ಕುರಿತು ಇನ್ನೂ ಹೆಚ್ಚಿನ ಪ್ರಚಾರ ನೀಡಬೇಕು. ಪ್ರಸ್ತುತ ಜಿಲ್ಲೆಯಲ್ಲಿ 5 ಸಾವಿರ ಕ್ರೀಡಾಪಟುಗಳು ಭಾಗವಹಿಸುತ್ತಿದ್ದು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕ್ರೀಡಾಪಟುಗಳು ಪಾಲ್ಗೊಳ್ಳಬೇಕು. ಅವರ ಹವ್ಯಾಸಗಳು ನಮಗೆ ಮಾರ್ಗದರ್ಶನ ಆಗಬೇಕು ಎಂದ ಅವರು ಬರ್ಲಿನ್ ದೇಶದಲ್ಲಿ ಅಂತರಾಷ್ಟ್ರೀಯ ಬಾಲಕರ ಜ್ಯೂನಿಯರ್ ಹಾಕಿ ಪಂದ್ಯಾವಳಿಯಲ್ಲಿ ಪಾಲ್ಗೊಂಡ ಕ್ರೀಡಾಪಟು ಸುನೀಲ್ ಬಗ್ಗೆ ಹೆಮ್ಮೆ ಎನ್ನಿಸುತ್ತಿದೆ.

ಅವರ ಸಾಧನೆಯಿಂದಾಗಿ ಅವರನ್ನು ಜನರು ಗುರುತಿಸುತ್ತಿದ್ದಾರೆ. ಅವರು ಇನ್ನೂ ಉನ್ನತ ಮಟ್ಟಕ್ಕೆ ಬೆಳೆಯಲಿ ಎಂದು ಹಾರೈಸಿದರು.

ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಜನರು ವೈದ್ಯರಲ್ಲಿ ಹಸಿವು, ಜೀರ್ಣ, ನಿದ್ರೆ, ಸೇರಿದಂತೆ ಎಲ್ಲದಕ್ಕೂ ಮಾತ್ರೆ ಬೇಕೆಂದು ಕೇಳುತ್ತಾರೆ. ಈ ಎಲ್ಲ ಸಮಸ್ಯೆಗಳಿಗೆ ಕಾರಣ ಜೀವನಶೈಲಿಯಾಗಿದ್ದು, ಬೇಗ ಏಳುವುದು, ನಗುವುದು, ಮನೆಯವರ ಜೊತೆ ಒಡನಾಟ, ಉತ್ತಮ ಊಟ, ನಿದ್ರೆ , ಆಟ ಕೂಡ ದೊಡ್ಡ ಔಷಧ ಎಂದು ಎಲ್ಲರೂ ತಿಳಿದುಕೊಳ್ಳಬೇಕು.

ವೈದ್ಯರಿಂದ ದೂರ ಇರಲು ಕ್ರೀಡೆಗಳಲ್ಲಿ ಭಾಗವಹಿಸಬೇಕು. ನಡೆಯಬೇಕು. ಒಂದು ಗಂಟೆ ಆಟ ಆಡಿದರೆ ಸುಮಾರು 200 ರಿಂದ 500 ಕ್ಯಾಲರಿಯನ್ನು ಕಡಿಮೆ ಮಾಡಿಕೊಳ್ಳಬಹುದು. ಹಾಗೂ ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಜ್ಞಾಪಕ ಶಕ್ತಿ ಹೆಚ್ಚುತ್ತದೆ. ಆರೋಗ್ಯ ವೃದ್ದಿಯಾಗುತ್ತದೆ. ಉತ್ತಮ ಅಂಕವನ್ನೂ ಗಳಿಸಬಹುದು, ಜೊತೆಗೆ ಟಿವಿ, ಮೊಬೈಲ್‌ನಿಂದ ದೂರ ಇರಲು ಸಾಧ್ಯವಾಗುತ್ತದೆ.

ಕ್ರೀಡೆ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕವಾಗಿ ಸದೃಢರನ್ನಾಗಿಸುತ್ತದೆ. ಆದ್ದರಿಂದ ಎಲ್ಲರೂ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕೆಂದರು.

ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ಮಾತನಾಡಿ ದಸರಾ ಕ್ರೀಡಾಕೂಟಕ್ಕೆ ವಯಸ್ಸಿನ ಮಿತಿ ಇಲ್ಲ. ನಾವೆಲ್ಲ ಒಂದೇ ಎಂಬ ಭಾವನೆ ಬೆಳೆಸುವ ಉದ್ದೇಶದಿಂದ ಇಂತಹ ಕ್ರೀಡಾಕೂಟವನ್ನು ನಮ್ಮ ಹಿರಿಯರು ಆರಂಭಿಸಿದ್ದಾರೆ. ಕ್ರೀಡೆಯಿಂದ ನಮ್ಮ ದೇಹದ ಅಂಗಗಳು ಚುರುಕಾಗಿ ಆರೋಗ್ಯಯುತವಾಗಿರಲು ಸಾಧ್ಯವಾಗುತ್ತದೆ. ದಸರಾ ಕ್ರೀಡಾ ಸಮಿತಿಯವರು ಮುಂದಿನ ದಿನಗಳಲ್ಲಿ ನಶಿಸಿ ಹೋಗುತ್ತಿರುವ ಗ್ರಾಮೀಣ ಪಂದ್ಯಗಳನ್ನು ಸಹ ಅಳವಡಿಸಿಕೊಳ್ಳಬಹುದೆಂದು ಸಲಹೆ ನೀಡಿದರು.

ಎಸ್‌ಸಿ ಎಸ್‌ಟಿ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಮಾತನಾಡಿ, ನಮ್ಮನ್ನೆಲ್ಲ ಆರೋಗ್ಯವಂತರನ್ನಾಗಿ, ಯುವಕರನ್ನಾಗಿ ಇಡುವ ಶಕ್ತಿ ಕ್ರೀಡೆಗೆ ಇದೆ. ಪ್ರಸ್ತುತ ಮಕ್ಕಳನ್ನು ನಾವು ಮೊಬೈಲ್‌ನಿಂದ ದೂರ ಇಡಬೇಕು. ನಾವು ಹಿಂದೆ ಆಡುತ್ತಿದ್ದ ಆಟಗಳಲ್ಲಿ ಈಗಿನ ಮಕ್ಕಳನ್ನು ತೊಡಗಿಸುವ ಪ್ರಯತ್ನ ಮಾಡಬೇಕು. ಹಾಗೂ ಅವರಲ್ಲಿ ಸಕಾರಾತ್ಮಕ ಚಿಂತನೆಗಳನ್ನು ತುಂಬಬೇಕು. ಕ್ರೀಡೆಗಳು ಕೇವಲ ಆಟಗಳಲ್ಲ, ಅದೊಂದು ಭಾವೈಕ್ಯತೆ ಮತ್ತು ದೇಶಪ್ರೇಮದ ಪ್ರತೀಕವಾಗಿದೆ ಎಂದರು.

ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮೀಣ ಪ್ರತಿಭೆಗಳಿಗಾಗಿಯೇ ಆರಂಭಿಸಿದ್ದು ಖೇಲೋ ಇಂಡಿಯಾ. ತಂಡಕ್ಕಾಗಿ ಆಡುವ ಮನೋಭಾವ ಬೆಳಿಸಿಕೊಂಡಾಗ ಯಶಸ್ಸು ಸಾಧ್ಯವಾಗುತ್ತದೆ. ಸೋಲೇ ಗೆಲುವಿನ ಸೋಪಾನ ಎಂಬ ಮಾತಿನಂತೆ ಆಡುತ್ತಾ ಆಡುತ್ತಾ ಬೆಳೆಯಬೇಕು. ಹಳೆಯ, ಗ್ರಾಮೀಣ ಕ್ರೀಡೆಗಳು, ಆಟಗಳು ಈಗಿನ ಮಕ್ಕಳಿಗೆ ಗೊತ್ತಿಲ್ಲ. ಈ ಆಟಗಳ ನಾಶಕ್ಕೆ ಕಾರಣ ನಾವೇ ಆಗಿದ್ದು, ಅವುಗಳ ಪರಿಚಯ ಅವರಿಗೆ ಮಾಡಿಸಿ, ಆಡಲು ಪ್ರೋತ್ಸಾಹಿಸಬೇಕು. ಕ್ರೀಡೆಗಳನ್ನು ಬೆಳೆಸಲು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

Madhu Bangarappa ಸೊರಬ ತಾಲ್ಲೂಕಿನ ತಲ್ಲೂರು ಗ್ರಾಮದ ಹಾಕಿ ಕ್ರೀಡಾಪಟು ಸುನೀಲ್ ಬರ್ಲಿನ್‌ನಲ್ಲಿ ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಬಾಲಕರ ಜ್ಯೂನಿಯರ್ ಪಂದ್ಯಾವಳಿಯಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ಕೀರ್ತಿ ತಂದಿರುವ ಹಿನ್ನೆಲೆ ಅವರನ್ನು ಈ ಸಂದರ್ಭದಲ್ಲಿ ಗಣ್ಯರು ಸನ್ಮಾನಿಸಿ, ಅಭಿನಂದಿಸಿದರು
ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ, ಕ್ರೀಡಾಪಟುಗಳು, ಇಲಾಖಾ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Department of School Education ಹತ್ತು ವರ್ಷದಷ್ಟು ಹಳೇಯ ಆಧಾರ್ ಕಾರ್ಡ್ ಹೊಂದಿರುವವರು ಕೂಡಲೇ ನವೀಕರಿಸಿ- ಸಿದ್ಧಲಿಂಗರೆಡ್ಡಿ

0

Department of School Education ದಶಕಗಳ ಹಿಂದೆ ದಾಖಲೆ ಸಲ್ಲಿಸಿ ಆಧಾರ್ ನೊಂದಾಯಿಸಿಕೊಂಡಿರುವವರು ಪ್ರಸ್ತುತ ವಾಸಸ್ಥಳದ ವಿವರಗಳನ್ನು ತಮ್ಮ ಸಮೀಪದ ಅಂಚೆ ಕಚೇರಿ, ರಾಷ್ಟ್ರೀಕೃತ ಬ್ಯಾಂಕುಗಳು ಅಥವಾ ಆಧಾರ್ ಸೇವಾ ಕೇಂದ್ರಗಳಲ್ಲಿ ಸಲ್ಲಿಸಿ, ಆಧಾರ್ ನವೀಕರಿಸಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ ಅವರು ಸಾರ್ವಜನಿಕರಿಗೆ ತಿಳಿಸಿದ್ದಾರೆ.

ಅವರು ತಮ್ಮ ಕಚೇರಿ ಕಾರ್ಯಾಲಯದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಆಧಾರ್ ನೋಂದಣಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಐದು ವರ್ಷದೊಳಗಿನ ಎಲ್ಲಾ ಮಕ್ಕಳ ಪೋಷಕರು ತಮ್ಮ ಮಕ್ಕಳ ಆಧಾರ್ ನೋಂದಣಿ ಮಾಡಿಸಿಕೊಳ್ಳಬೇಕು. ಈಗಾಗಲೇ ಆಧಾರ್ ನೋಂದಣಿ ಮಾಡಿಸಿದ್ದು, 5 ವರ್ಷಗಳ ಅವಧಿ ಪೂರ್ಣಗೊಂಡಿರುವ 92,317ಮಕ್ಕಳುಗಳು ಬಯೋಮೆಟ್ರಿಕ್ ಗುರುತನ್ನು ನೀಡಿ ನೋಂದಣಿ ಮಾಡಿಸಿಕೊಳ್ಳಬೇಕು.

ಅಲ್ಲದೇ 15ವರ್ಷ ಮೇಲ್ಪಟ್ಟ 85,209ಮಕ್ಕಳಿದ್ದು, ಆಧಾರ್ ನವೀಕರಿಸಿಕೊಳ್ಳುವಂತೆ ಅವರು ಸೂಚಿಸಿದ್ದಾರೆ.
ಒಂದು ಅಂದಾಜಿನ ಪ್ರಕಾರ ಜಿಲ್ಲೆಯಲ್ಲಿ ಸುಮಾರು 27,533 ಮಕ್ಕಳು ಈವರೆಗೆ ಆಧಾರ್ ನೋಂದಣಿ ಮಾಡಿಸದಿರುವುದನ್ನು ಗುರುತಿಸಲಾಗಿದೆ. ಈವರೆಗೆ ಆಧಾರ್ ಮಾಡಿಸದಿರುವ ಮಕ್ಕಳ ಪೋಷಕರು ಕೂಡಲೇ ಆಧಾರ್ನೋಂದಣಿಗೆ ಮುಂದಾಗುವಂತೆ ಸೂಚಿಸಿರುವ ಅವರು, ಆಧಾರ್ ನೋಂದಣಿಗಾಗಿ ಮಕ್ಕಳು ವ್ಯಾಸಂಗ ಮಾಡುತ್ತಿರುವ ಶಾಲೆಗಳಲ್ಲಿಯೇ ಶಾಲಾ ಮುಖ್ಯೋಪಾಧ್ಯಾಯರಿಗೆ ಮಾಹಿತಿ ನೀಡಿ ಆಧಾರ್ ನೋಂದಾಯಿಸಿಕೊಳ್ಳಬಹುದಾಗಿದೆ.

ಅದಕ್ಕಾಗಿ ಶಾಲಾ ಶಿಕ್ಷಕರಿಗೆ ನೋಂದಣಿ ತರಬೇತಿ ನೀಡಲಾಗಿದೆ ಎಂದ ಅವರು, ಶೇ.26.03ರಷ್ಟು ಮಕ್ಕಳು ನೋಂದಾಯಿಸಿರುವ ಹೆಸರು-ವಿಳಾಸ, ಮೊ.ನಂಬರ್ಗಳಲ್ಲಿ ವೆತ್ಯಾಸಗಳಿದ್ದು, ಅವುಗಳನ್ನು ಸರಿಪಡಿಸಿಕೊಳ್ಳುವಂತೆ ಅವರು ತಿಳಿಸಿದರು. ಅದಕ್ಕಾಗಿ ಆಧಾರ್ ನೋಂದಣಿ, ನವೀಕರಣ ಹೆಚ್ಚಿಸಲು ಬ್ಯಾಂಕುಗಳ ಮೂಲಕ ಹೋಬಳಿ ಕೇಂದ್ರ ಮತ್ತು ಶಾಲಾ ಹಂತದಲ್ಲಿ ಶಿಬಿರಗಳನ್ನು ಆಯೋಜಿಸಲು ಸೂಚಿಸಲಾಗಿದ್ದು, ನೋಂದಣಿ ಕಿಟ್ ನ್ನು ನೀಡಲಾಗುವುದು.

ಮುಂದಿನ ಒಂದು ವರ್ಷದೊಳಗಾಗಿ ಆಧಾರ್ ನೋಂದಣಿ, ನವೀಕರಣ ಕಾರ್ಯ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ ಎಂದರು.
ಶಾಲಾ ಮಕ್ಕಳ ಆಧಾರ್ ನೋಂದಣಿಯಿಂದ ಅವರ ಶೈಕ್ಷಣಿಕ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ತಪ್ಪಿದಲ್ಲಿ ಸಿ.ಇ.ಟಿ. ಮತ್ತಿತರ ಪ್ರವೇಶ ಪರೀಕ್ಷೆಗಳಿಗೆ, ವಿದ್ಯಾರ್ಥಿ ವೇತನ ಪಡೆಯಲು ಸಹಕಾರಿಯಾಗಲಿದೆ.

ತಪ್ಪಿದಲ್ಲಿ ಅನಾನುಕೂಲವಾಗಲಿದೆ ಎಂದ ಅವರು, ಶಾಲಾ ಶಿಕ್ಷಣ ಇಲಾಖೆ ಮತ್ತು ಪದವೀಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಮ್ಮ ಅಧೀನ ಅಧಿಕಾರಿಗಳಿಗೆ ಆಧಾರ್ ನೋಂದಣಿಯ ಕುರಿತು ಮಾಹಿತಿ ನೀಡುವಂತೆ ಅವರು ಸೂಚಿಸಿದರು.

Department of School Education ಯಾವುದೇ ಆಧಾರ್ ಕೇಂದ್ರವು ಅನಧಿಕೃತ, ವಂಚನೆಯ ಚಟುವಟಿಕೆಗಳನ್ನು ನಡೆಸುತ್ತಿರುವುದು ಕಂಡುಬಂದರೆ, ಅಕ್ರಮ ವಲಸಿಗರು ಆಧಾರ್ಗೆ ದಾಖಲಾಗಲು ಪ್ರಯತ್ನಿಸಿದರೆ, ಜಿಲ್ಲಾ ಕಾನೂನು ಜಾರಿ ಪ್ರಾಧಿಕಾರ (ಪೊಲೀಸ್ ಅಧೀಕ್ಷಕರು) ಎಫ್ ಐ ಆರ್ ದಾಖಲಿಸುವ, ಅಪರಾಧದ ಸ್ವರೂಪಕ್ಕೆ ಅನುಗುಣವಾಗಿ ಆಧಾರ್ ಕಾಯ್ದೆಯನ್ವಯ ಜಿಲ್ಲಾ ಸಮಿತಿಯು ಕ್ರಮ ಕೈಗೊಳ್ಳಲಿದೆ ಎಂದವರು ನುಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಆಧಾರ್ ಸಂಬಂಧಿತ ಅಧಿಕಾರಿ-ಸಿಬ್ಬಂದಿಗಳು, ಜಿಲ್ಲಾ ಸಮಿತಿ ಸಭೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Yadav School of Chess Academy ಯಾದವ ಸ್ಕೂಲ್ ಆಫ್ ಚೆಸ್ ಅಕಾಡೆಮಿಯಿಂದ 5 ತಿಂಗಳ ಚೆಸ್ ತರಬೇತಿ

0

Yadav School of Chess Academy ಶಿವಮೊಗ್ಗ ನಗರದ ಪ್ರತಿಷ್ಠಿತ ರವೀಂದ್ರ ನಗರ ದಲ್ಲಿರುವ ಯಾದವ ಸ್ಕೂಲ್ ಆಫ್ ಚೆಸ್ ಅಕಾಡೆಮಿ ವತಿಯಿಂದ ಸೆಪ್ಟೆಂಬರ್ 6 ರಿಂದ ಜನವರಿ 2026ವರೆಗೆ 5 ತಿಂಗಳುಗಳ ಕಾಲ ಚೆಸ್ ತರಬೇತಿ ನಡೆಯಲಿದೆ. ಪ್ರತಿ ಶನಿವಾರ ಭಾನುವಾರ ಮಧ್ಯಾಹ್ನ3 ರಿಂದ 4:30 ರ ವರೆಗೆ ಒಂದನೇ ಬ್ಯಾಚ್ ಸಂಜೆ 5 ರಿಂದ 6 ರವರೆಗೆ ಎರಡನೇ ಬ್ಯಾಚ್ ಪ್ರತಿ ಬ್ಯಾಚ್ ನಲ್ಲಿ 10 ಮಕ್ಕಳಿಗೆ ಮಾತ್ರ ಅವಕಾಶ.
Yadav School of Chess Academy ಅಂತರ ಚೆಸ್ ಪಂದ್ಯಾವಳಿಯಲ್ಲಿ ಆಯ್ಕೆಯಾದ ಮಕ್ಕಳಿಗೆ ತರಬೇತಿ ಪ್ರಯೋಜನ ಪಡೆಯಬಹುದು ಆಸಕ್ತರು ಪ್ರಾಣೇಶ್ ಯಾದವ್ ಅಂತರರಾಷ್ಟ್ರೀಯ ಚೆಸ್ ತೀರ್ಪು ಗಾರ ಮತ್ತು ಚೆಸ್ ತರಬೇತುದಾರ ಇವರನ್ನು ಸಂಪರ್ಕಿಸಿ ಮಾಹಿತಿಗಾಗಿ 97438017 02 ಮತ್ತು 9743819678.

Gangubai Hanagal Dance University ಭರತನಾಟ್ಯ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಪಡೆದ ಶಿವಮೊಗ್ಗದ ಜಿ.ಧನ್ವಿತಾ

0

Gangubai Hanagal Dance University ಗಂಗೂಬಾಯಿ ಹಾನಗಲ್ ನಾಟ್ಯ ವಿವಿಯಿಂದ ನಡೆಸಿದ ಭರತನಾಟ್ಯ ಜೂನಿಯರ್ ನಲ್ಲಿ ನಗರದ ನೀಲ ಕೃಷ್ಣ ನಾಟ್ಯ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿನಿ ಧನ್ವಿತ ಜಿ. ಶೇ. 83ರಷ್ಟು ಅಂಕ ಪಡೆದು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆ ಯಾಗಿದ್ದಾರೆ. ಈ ಮೂಲಕ ಜಿಲ್ಲೆಗೆ ಹಾಗೂ ನಾಟ್ಯ ಶಾಲೆಗೆ ಕೀರ್ತಿ ತಂದಿದ್ದಾಳೆ.
ಈ ಪ್ರತಿಭಾನ್ವಿತೆಯು ನಗರದ ಗಣೇಶ್ ಮತ್ತು ರೂಪ ದಂಪತಿಗಳ ಪುತ್ರಿಯಾಗಿದ್ದು, ಶಾಲೆಯ ಮುಖ್ಯಸ್ಥರು ಹಾಗೂ ವಿದ್ಯಾರ್ಥಿನಿ ಧನ್ವಿತ ಅವರ ಗುರುಗಳಾದ ಶ್ರೀಲಕ್ಷ್ಮಿನಂದನ್ ಅವರು ಅಭಿನಂದಿಸಿದ್ದಾರೆ.

D.K.Shivakumar ಕೃಷ್ಣಾ ಮೇಲ್ದಂಡೆ ಯೋಜನೆ, ಹಂತ-3 ರ ಅನುಷ್ಠಾನದ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ

0

D.K.Shivakumar ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ, ಪುನರ್ವಸತಿ, ಪುನರ್‌ನಿರ್ಮಾಣ, ಭೂಪರಿಹಾರ ಹಾಗೂ ವಿವಿಧ ನ್ಯಾಯಾಲಯಗಳಲ್ಲಿ ಹೆಚ್ಚುವರಿ ಭೂ ಪರಿಹಾರ ಕೋರಿ ದಾಖಲಿಸಿರುವ ಪ್ರಕರಣಗಳ ಕುರಿತು ಸಭೆ ನಡೆಯಿತು.

D.K.Shivakumar ಈ ಸಭೆಯಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಬೋಸರಾಜ್, ಶಿವಾನಂದ ಪಾಟೀಲ್, ಆರ್.ಬಿ.ತಿಮ್ಮಾಪುರ, ದರ್ಶನಪೂರ್, ಡಿ.ಸುಧಾಕರ್, ಶಾಸಕರು, ಹಿರಿಯ ಅಧಿಕಾರಿಗಳು, ರೈತ ಮುಖಂಡರು ಸೇರಿದಂತೆ ಇತರರು ಭಾಗವಹಿಸಿದರು.

Shivaganga Yoga Center ಯೋಗಾಭ್ಯಾಸದಿಂದ ಆತ್ಮವಿಶ್ವಾಸದ ವೃದ್ಧಿ-ಕಲಗೋಡು ರತ್ನಾಕರ್

0

Shivaganga Yoga Center ಯೋಗ, ಧ್ಯಾನ ಹಾಗೂ ಪ್ರಾಣಾಯಾಮದ ಅಭ್ಯಾಸದಿಂದ ಆತ್ಮವಿಶ್ವಾಸ ವೃದ್ಧಿಸುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಹೇಳಿದರು.

ಕುವೆಂಪು ನಗರದ ಎನ್‌ಇಎಸ್ ಬಡಾವಣೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ಹಾಗೂ ಶ್ರೀ ಶಿವಗಂಗಾ ಯೋಗಕೇಂದ್ರದಲ್ಲಿ ಆಯೋಜಿಸಿದ್ದ ಉಚಿತ ಯೋಗ ಶಿಬಿರದ ಸಮಾರೋಪದಲ್ಲಿ ಮಾತನಾಡಿದರು.

ವಯಸ್ಸು ಹೆಚ್ಚಿದಂತೆ ದೈಹಿಕ ಮತ್ತು ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ. ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಯೋಗಾಭ್ಯಾಸ ಮಾಡಬೇಕು. ಇದರಿಂದ ಕಾಯಿಲೆಗಳು ಬರದಂತೆ ಎಚ್ಚರ ವಹಿಸಬಹುದಾಗಿದೆ. ದೇಹ ಮತ್ತು ಮನಸ್ಸಿನ ಆರೋಗ್ಯಕ್ಕೆ ಯೋಗ ಉತ್ತಮ ಪರಿಹಾರ. ಸದಾ ಲವಲವಿಕೆಯಿಂದ ಇರಲು ನೆರವಾಗುತ್ತದೆ ಎಂದು ತಿಳಿಸಿದರು.

ಶ್ರೀ ಶಿವಗಂಗಾ ಯೋಗ ಕೇಂದ್ರ ನಗರದ 38 ಕೇಂದ್ರಗಳಲ್ಲಿ ಉಚಿತವಾಗಿ ಯೋಗ ಶಿಕ್ಷಣವನ್ನು ನೀಡುತ್ತಿರುವ ಸಂಸ್ಥೆಯಾಗಿದೆ. ಯೋಗಾಚಾರ್ಯ, ರಾಜ್ಯ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಸಿವಿ ರುದ್ರಾರಾಧ್ಯ ಅವರ ಸಾಧನೆ ಅವಿಸ್ಮರಣೀಯವಾಗಿದೆ ಎಂದು ಹೇಳಿದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ರುದ್ರಮುನಿ ಸಜ್ಜನ್ ಮಾತನಾಡಿ, ಹಾನಗಲ್ ಕುಮಾರ ಸ್ವಾಮಿಗಳ ಆಶೀರ್ವಾದದಿಂದ ಹಾಗೂ ಎಲ್ಲ ಸಾರ್ವಜನಿಕರ ಸಹಕಾರದಿಂದ ಭವನ ನಿರ್ಮಾಣವಾಗಿದ್ದು, ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು ಎಂದು ತಿಳಿಸಿದರು.

ಯೋಗಚಾರ್ಯ ಸಿ.ವಿ.ರುದ್ರಾರಾಧ್ಯ ಮಾತನಾಡಿ, ಮನೆಮನಗಳಿಗೆ ಯೋಗವನ್ನು ತಲುಪಿಸಬೇಕು. ಶಿವಮೊಗ್ಗವನ್ನು ಯೋಗ ನಗರವನ್ನಾಗಿ ಮಾರ್ಪಾಡು ಮಾಡಬೇಕೆಂಬ ಆಶಯವಿದೆ ಎಂದರು.

Shivaganga Yoga Center ಯೋಗ ಶಿಕ್ಷಕರಿಗೆ ಗೌರವಿಸಲಾಯಿತು. ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕದ ಮಾಜಿ ಅಧ್ಯಕ್ಷ ಜಿ.ವಿಜಯ್ ಕುಮಾರ್, ಮಹಾಸಭಾ ಮಾಧ್ಯಮ ವಿಭಾಗದ ಜಿಲ್ಲಾಧ್ಯಕ್ಷ ಸೋಮನಾಥ್.ಕೆ.ಆರ್., ಖಜಾಂಚಿ ಮಲ್ಲಿಕಾರ್ಜುನ್ ಕಾನೂರ್, ಎಲ್.ಎಂ.ಮೋಹನ್, ಲವಕುಮಾರ್, ವಿಜಯ ಬಾಯರ್, ಕಾಟನ್ ಜಗದೀಶ್, ಎಚ್.ಎಸ್.ನಾಗರಾಜ್, ಶಿಲ್ಪಾ, ಸರೋಜಾ, ತಿಮ್ಮಪ್ಪ ಇತರರಿದ್ದರು.

Madhu Bangarappa ಬಿಜೆಪಿಯವರ ಹೇಳಿಕೆ ಬರೀ ಡೋಂಗಿ- ಮಧು ಬಂಗಾರಪ್ಪ

0

Madhu Bangarappa ಶಿವಮೊಗ್ಗದಲ್ಲಿ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನವರು ಬಾನು ಮುಸ್ತಾಕ್ ಅವರು ತಿಲಕ ಇಟ್ಟು ದಸರಾ ಉದ್ಘಾಟನೆ ಮಾಡಲಿ ಎಂಬ ಬಿಜೆಪಿಯವರ ಹೇಳಿಕೆ ವಿಚಾರವಾಗಿ ಮಾತನಾಡಿದರು.

ಬಿಜೆಪಿಯವರಿಗೆ ತಲೆ ಸರಿ ಇಲ್ಲ. ತಿಲಕ ಇಟ್ಟುಕೊಂಡು ಉದ್ಘಾಟನೆ ಮಾಡಬೇಕು ಎಂಬುವ ಬಿಜೆಪಿಯವರ ಹೇಳಿಕೆ ಬರಿ ಡೋಂಗಿ.
ಬಿಜೆಪಿಯವರು ಹೊರಗಡೆ ತಿಲಕ ಇಟ್ಟುಕೊಳ್ಳುತ್ತಾರೆ ಮಾಡುವುದೆಲ್ಲ ಹೊಲಸು ಕೆಲಸ ಎಂದಿದ್ದಾರೆ.

ಇದಕ್ಕೆಲ್ಲ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಉತ್ತರ ಕೊಟ್ಟಿದ್ದಾರೆ.
ಬಿಜೆಪಿಯವರು ಯಾವಾಗಲೂ ಮೊಸರಲ್ಲಿ ಕಲ್ಲು ಹುಡುಕುತ್ತಾರೆ.ಅದು ಅವರಿಗೆ ಅಭ್ಯಾಸ ಆಗಿಬಿಟ್ಟಿದೆ.
ಏನಾದರೂ ಧಾರ್ಮಿಕವಾಗಿ ಈ ರೀತಿಯ ವಿಚಾರಗಳು ಸಿಕ್ಕರೆ ಬೆಂಕಿ ಹೆಟ್ಟುವ ಕೆಲಸ ಮಾಡುತ್ತಾರೆ ಎಂದಿದ್ದಾರೆ.

ಇನ್ಮೇಲೆ ಈ ರೀತಿಯ ಕೆಲಸಗಳು ನಮ್ಮ ದೇಶದಲ್ಲೂ ಮಾಡೋದಕ್ಕೆ ಆಗೋದಿಲ್ಲ.
ಅವರು ಎಲ್ಲಾ ತರಹದ ಚೋರಿ ಮಾಡಿಯಾಗಿದೆ.ಅದು ಸಾಮಾನ್ಯ ಜನರಿಗೂ ಗೊತ್ತಾಗಿದೆ. ಬಿಹಾರದಲ್ಲಿ ಚಿಕ್ಕ ಚಿಕ್ಕ ಮಕ್ಕಳಿಗೂ ಗೊತ್ತಾಗಿದೆ.
Madhu Bangarappa ಅಲ್ಲಿಯ ಮಕ್ಕಳು ಬಿಜೆಪಿ ಅವರಿಗೆ ವೋಟ್ ಚೋರ್ ಗದ್ದಿ ಚೊರ್ ಎಂದು ಕರೆಯುತ್ತಿದ್ದಾರೆ.
ಒಂದು ದಿಸ ನಿಮಗೂ ಟೈಮ್ ಬರುತ್ತೆ ಇನ್ನೊಂದು ದಿವ್ಸ ನಮಗೂ ಒಳ್ಳೆ ಟೈಂ ಬರುತ್ತದೆ ಎಂದು ಹೇಳಿದ್ದಾರೆ.

Madhu Bangarappa ಬೋವಿ ನಿಗಮದಲ್ಲಿನ ಭ್ರಷ್ಠಾಚಾರ ಪ್ರಕರಣ: ಯಾರದೇ ತಪ್ಪಿದ್ದರೂ ಕಾನೂನು ತನ್ನ ಜವಾಬ್ದಾರಿ ನಿರ್ವಹಿಸುತ್ತೆ- ಮಧು ಬಂಗಾರಪ್ಪ

0

Madhu Bangarappa ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ರಾಜ್ಯ ಬೋವಿ ಅಭಿವೃದ್ಧಿ ನಿಗಮದಲ್ಲಿ ಲಂಚಾವತಾರ ವಿಚಾರವಾಗಿ ಮಾತನಾಡಿದರು.

ನಾನು ಮಾಧ್ಯಮದಲ್ಲಿ ವಿಷಯ ನೋಡಿದೆ.ನಾನು ವೈಯಕ್ತಿಕವಾಗಿ ಇನ್ನು ಕೂಡ ಮಾತನಾಡಿಲ್ಲ.ಜಿಲ್ಲಾಧ್ಯಕ್ಷರು ಮಾತನಾಡಿದ್ದಾರೆ. ಬೇರೆ ಬೇರೆ ಕಾರಣ ಕೊಟ್ಟಿದ್ದಾರೆ.ನಾನು ತಿಳುವಳಿಕೆ ಇಟ್ಟುಕೊಂಡು ಮಾತನಾಡಬೇಕಾಗುತ್ತೆ ಎಂದರು.

ಮಾಧ್ಯಮದಲ್ಲಿ ಬಂದಾಗ ಹುಷಾರಾಗಿ ನೋಡಿಕೊಂಡಾಗ ರಿಯಾಕ್ಟ್ ಮಾಡಬೇಕು. ಯಾವುದೇ ಸಂದರ್ಭದಲ್ಲಿ ಯಾರದ್ದೇ ತಪ್ಪಿದ್ದರೂ ಕಾನೂನು ತನ್ನ ಜವಾಬ್ದಾರಿ ನಿರ್ವಹಿಸುತ್ತೆ ಆ ವಿಶ್ವಾಸವನ್ನ ನೂರಕ್ಕೆ ನೂರು ನಾನು ಕೊಡ್ತೇನೆ.
ಈ ವಿಷಯವನ್ನ ಕಾನೂನು ಕಾನೂನು ರೀತಿಯಲ್ಲೇ ನೋಡುತ್ತೆ ಎಂದು ತಿಳಿಸಿದರು.

ಶಿಕಾರಿಪುರದಲ್ಲಿ ಹಲವು ಬೇರೆ ಬೇರೆ ಪಕ್ಷಗಳ ಮುಖಂಡರು ಶೀಘ್ರದಲ್ಲೇ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ – ಪುಷ್ಪಾ ಶಿವಕುಮಾರ್

0

ಶಿಕಾರಿಪುರ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆಯಾಗುತ್ತಿದ್ದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಿಕಾರಿಪುರ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಶಿವಕುಮಾರ್ ಅವರ ನೇತೃತ್ವದಲ್ಲಿ ಬಿಜೆಪಿ, ಜೆಡಿಎಸ್ ಪಕ್ಷದ ಹಲವು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.
ಇದಕ್ಕೆ ಸಾಕ್ಷಿ ಎಂಬಂತೆ ಭಾನುವಾರ ನಗರದ ಸಾಗರ ರಸ್ತೆಯಲ್ಲಿರುವ ಹೋಟೆಲ್ ಹರ್ಷ ಫನ್ ಸಭಾಂಗಣದಲ್ಲಿ ಪುಷ್ಪಾ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಬಗ್ಗೆ ಸಮಾಲೋಚನಾ ಸಭೆ ನಡೆಯಿತು. ಈ ಸಭೆಯಲ್ಲಿ ಶಿಕಾರಿಪುರ, ಶಿರಾಳಕೊಪ್ಪ ಮತ್ತು ಸುತ್ತಮುತ್ತಲ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಹಾಜರಿದ್ದು, ಪಕ್ಷದ ಸಿದ್ಧಾಂತಕ್ಕೆ ಒಳಪಟ್ಟು ಪಕ್ಷವನ್ನು ಸೇರಿ ಎಂದು ಆಹ್ವಾನಿಸಿದರು.
ಮುಖ್ಯವಾಗಿ ಉದ್ಯಮಿ ಎನ್.ವಿ. ಈರೇಶ್ ಅವರು ಈ ಹಿಂದೆ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನಿರ್ದೇಶಕರು, ಇವರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷವನ್ನು ಸೇರುವ ಇಚ್ಛೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪುಷ್ಪಾ ಶಿವಕುಮಾರ್, ಶಿಕಾರಿಪುರದಲ್ಲಿ ಮತ್ತೆ ಕಾಂಗ್ರೆಸ್ ವಿಜೃಂಭಿಸಬೇಕು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ವಲ್ಪದರಲ್ಲಿ ನಾವು ಸೋಲು ಕಂಡಿದ್ದೇವೆ. ಮುಂದೆ ಹಾಗೆ ಆಗಬಾರದು. ಹಾಗಾಗಿ ಪಕ್ಷದ ಹಿರಿಯರ ಮತ್ತು ರಾಜ್ಯ ನಾಯಕರ ಮಾರ್ಗದರ್ಶನದಲ್ಲಿ ಈಗಿನಿಂದಲೇ ಪಕ್ಷವನ್ನು ಸಂಘಟಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಈರೇಶ್ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಗುವುದು. ಇದರಿಂದ ಕಾಂಗ್ರೆಸ್ ಪಕ್ಷ ಮತ್ತಷ್ಟು ಬಲವರ್ಧನೆ ಗೊಳ್ಳುತ್ತದೆ. ಈಗಾಗಲೇ ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧ್ಯಕ್ಷರ ಜೊತೆಗೆ ಮಾತನಾಡಿದ್ದೇವೆ. ಶೀಘ್ರವೇ ಅವರ ಸಮ್ಮುಖದಲ್ಲೇ ಇವರ ಜೊತೆಗೆ ಹಲವರು ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದರು.
ಉದ್ಯಮಿ ಈರೇಶ್ ಮಾತನಾಡಿ, ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳನ್ನು ಒಪ್ಪಿಕೊಂಡೇ ನನ್ನ ಬೆಂಬಲಿಗರೊಂದಿಗೆ ಪಕ್ಷ ಸೇರುತ್ತೇನೆ. ಅಧಿಕೃತವಾಗಿ ಜಿಲ್ಲಾ ಉಸ್ತುವಾರಿ ಸಚಿವ ಸಮ್ಮುಖದಲ್ಲಿ ಶೀಘ್ರವೇ ಪಕ್ಷಕ್ಕೆ ಸೇರ್ಪಡೆಗೊಳ್ಳುವೆ ಎಂದರು.
ಗುತ್ತಿಗೆದಾರ ಹೆಚ್ ಎಂ ಶಿವಕುಮಾರ್ ಸಹ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಳ್ಳಲಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲೆಯ ಹಲವು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಮತ್ತು ಪಕ್ಷಕ್ಕೆ ಸೇರ್ಪಡೆಗೊಳ್ಳುವ ಹಲವರು ಹಾಜರಿದ್ದರು.

JCI Institute ಅತಿಮುಖ್ಯ ಕೌಶಲಗಳನ್ನ ಜೆಸಿ ಸ್ಯಾಟ್ ವಿದ್ಯಾರ್ಥಗಳಿಗೆ ಕಲಿಸುತ್ತದೆ- ಜಿ.ವಿ.ಗಣೇಶ್

0

JCI Institute ವಿದ್ಯಾಭ್ಯಾಸದ ಜೊತೆಗೆ ಮಕ್ಕಳಲ್ಲಿ ಕೌಶಲ್ಯ ವೃದ್ಧಿಸುವ ಪರೀಕ್ಷೆಗಳು ಅತ್ಯಂತ ಅವಶ್ಯಕ ಎಂದು ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆ ಅಧ್ಯಕ್ಷ ಜಿ.ವಿ.ಗಣೇಶ್ ಹೇಳಿದರು.
ನಗರದ ರೋಟರಿ ಶಾಲೆಯಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಪರೀಕ್ಷೆಯಲ್ಲಿ ಪಾಲ್ಗೊಳ್ಳುವಂತೆ ಮಾತನಾಡಿ, ಇಂದಿನ ತಂತ್ರಜ್ಞಾನ ಯುಗದಲ್ಲಿ ಹೊಸ ಹೊಸ ಪರೀಕ್ಷೆಗಳನ್ನು ಎದುರಿಸುವುದು ಹಾಗೂ ಹೊಸ ಫಾರಂಗಳನ್ನು, ಅಪ್ಲಿಕೇಶನ್‌ಗಳನ್ನು ಯಾವ ರೀತಿ ತುಂಬಬೇಕು. ಪರೀಕ್ಷೆಗಳನ್ನ ಹೇಗೆ ಎದುರಿಸಬೇಕು ಎಂಬ ಹಲವಾರು ಅತಿ ಮುಖ್ಯ ಕೌಶಲ್ಯಗಳನ್ನು ಜೆಸಿಐನ ಜೆಸಿ ಸ್ಯಾಟ್ ಕಲಿಸುತ್ತದೆ ಎಂದು ತಿಳಿಸಿದರು.
ಇದು ರಾಷ್ಟ್ರಮಟ್ಟದ ಪರೀಕ್ಷೆ ಆಗಿದ್ದು, ಇದರಲ್ಲಿ ವಿಜೇತರಿಗೆ ಒಂದು ಲಕ್ಷ ರೂ. ಹಾಗೂ 50,000 ರೂ. ಮತ್ತು 25000 ರೂ ನಗದು ಬಹುಮಾನ ಇರುತ್ತದೆ ಎಂದು ಮಾಹಿತಿ ತಿಳಿಸಿದರು.
JCI Institute ಇದೇ ಸಂದರ್ಭದಲ್ಲಿ ರೋಟರಿ ಮಾಜಿ ಸಹಾಯಕ ಗವರ್ನರ್ ಜಿ. ವಿಜಯಕುಮಾರ್ ಮಾತನಾಡಿ, ಜೆಸಿಐ ಸಂಸ್ಥೆ ಮನುಕುಲದ ಸೇವೆಯ ಜೊತೆಗೆ ಮಕ್ಕಳಲ್ಲಿ ಆತ್ಮ ವಿಶ್ವಾಸ, ಕೌಶಲ್ಯವನ್ನು ತುಂಬುವ ಜೊತೆಗೆ ಇಂತಹ ಪರಿಣಾಮಕಾರಿ ಕಾರ್ಯಕ್ರಮಗಳನ್ನು ನಿರಂತರವಾಗಿ ಮಾಡುತ್ತಿದೆ. ಇಂತಹ ಅವಕಾಶವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಸೂರ್ಯನಾರಾಯಣ, ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ನೆಪ್ಟ್ಯೂನ್ ಕಿಶೋರ್, ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಡಾ. ಧನಂಜಯ ರಾಂಪುರ, ಪ್ರಮುಖರಾದ ಶೇಷಗಿರಿ ಹಾಗೂ ಶಿಕ್ಷಕರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.