Monday, February 9, 2026
Monday, February 9, 2026
Home Blog Page 1826

ಉಜಿರೆಯಲ್ಲಿ ನುಡಿ ಸಾಮ್ರಾಜ್ಯದಲ್ಲಿ ಸ್ವರಾಜ್ಯ ಸಮಾವೇಶ

0

ಜನವರಿ 8 ಮತ್ತು 9ರಂದು ಉಜಿರೆಯಲ್ಲಿ ನುಡಿ ಸಾಮ್ರಾಜ್ಯದಲ್ಲಿ ಸ್ವರಾಜ್ಯ ಎಂಬ ವಿಷಯಕ್ಕೆ ಸಂಬಂಧಪಟ್ಟಂತೆ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ನ 3ನೇ ರಾಜ್ಯ ಅಧಿವೇಶನ ಜರುಗಲಿದೆ.

ಈ ಅಧಿವೇಶನದ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಡಾ.ನಾ. ಮೊಗಸಾಲೆ ವಹಿಸಲ್ಲಿದ್ದಾರೆ. ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಪರಿಷತ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ರಘುನಂದನ ಭಟ್ಟ ಅವರು ತಿಳಿಸಿದ್ದಾರೆ.

ಈ ಅಧಿವೇಶನವೂ ಎರಡು ದಿನಗಳ ಕಾಲ ನಡೆಯಲಿದೆ. ಅಧಿವೇಶನದಲ್ಲಿ ನುಡಿ ಸ್ವರಾಜ್ಯ, ನುಡಿ ಸಂಪದ, ಸಾಹಿತ್ಯ, ಸಂಸ್ಕೃತಿ, ಅವಿತಿಟ್ಟ ಅಂಬೇಡ್ಕರ್ (ನಾಟಕ) ಇತ್ಯಾದಿ ಕೃತಿಗಳು ಬಿಡುಗಡೆಯಾಗಲಿವೆ.

ರಾಜ್ಯದ ವಿವಿಧ ಜಿಲ್ಲೆಗಳಿಂದ 2 ಸಾವಿರಕ್ಕೂ ಅಧಿಕ ಸಾಹಿತ್ಯ ಪ್ರೇಮಿಗಳು ಈ ಅಧಿವೇಶನದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ರಾಜ್ಯದಲ್ಲಿ 317 ಕೋವಿಡ್ ಸೋಂಕಿತರು

0

ರಾಜ್ಯದಲ್ಲೂ ಸದ್ದಿಲ್ಲದೆ ಕೋವಿಡ್ ತನ್ನ ದುಷ್ಪರಿಣಾಮವನ್ನು ಬೀರುತ್ತಿದೆ. ಬುಧವಾರ ರಾಜ್ಯದಲ್ಲಿ ಒಟ್ಟು 1.19 ಲಕ್ಷ ಕೋವಿಡ್ ಪರೀಕ್ಷೆ ನಡೆಸಲಾಗಿದೆ. 317 ಮಂದಿಗೆ ಸೋಂಕು ದೃಢಪಟ್ಟಿದೆ.

ಇಬ್ಬರು ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ ಇದರಿಂದ ಮೃತರ ಸಂಖ್ಯೆ 38, 277 ಕ್ಕೆ ಏರಿಕೆಯಾಗಿದೆ. ಈವರೆಗೂ 30,01,251 ಮಂದಿ ಸೋಂಕಿಗೆ ಒಳಗಾಗಿದ್ದಾರೆ ಹಾಗೂ ಡಿಸೆಂಬರ್ 15ರಂದು 301 ಸೋಂಕಿತರು ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ತಿಳಿಸಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಪ್ರೊ.ಎಸ್.ಜಿ ಸಿದ್ದರಾಮಯ್ಯ ಅವರಿಗೆ ಪ್ರಶಸ್ತಿ

0

ಕವಿ ಪ್ರೊ.ಎಸ್.ಜಿ. ಸಿದ್ದರಾಮಯ್ಯ ಅವರು ಲಂಡನ್ ನ ಬಸವ ಅಂತಾರಾಷ್ಟ್ರೀಯ ಪ್ರತಿಷ್ಠಾನವು ಎಂ.ಎಂ. ಕಲ್ಬುರ್ಗಿ ಅವರ ಹೆಸರಿನಲ್ಲಿ ನೀಡುವ ಪ್ರಸಕ್ತ ಸಾಲಿನ ‘ಡಾ.ಎಂ.ಎಂ. ಕಲ್ಬುರ್ಗಿ ಪ್ರಗತಿಪರ ಚಿಂತಕ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿಯನ್ನು ಮೂಢನಂಬಿಕೆ ಮತ್ತು ಮೌಡ್ಯತೆ ವಿರುದ್ಧ ಕೆಲಸ ಮಾಡುತ್ತಿರುವವರನ್ನು ಗುರುತಿಸಿ ನೀಡಲಾಗುತ್ತದೆ. ಹಾಗಾಗಿ ಪ್ರೊ.ಎಸ್.ಜಿ. ಸಿದ್ದರಾಮಯ್ಯ ಅವರಿಗೆ ಈ ಪ್ರಶಸ್ತಿಯನ್ನು ನೀಡಲು ಡಾ.ಗೊ.ರು. ಚನ್ನಬಸಪ್ಪ ಅವರನ್ನೊಳಗೊಂಡ ಸಮಿತಿ ನಿರ್ಧರಿಸಿದೆ.

ಡಾ.ಎಂ.ಎಂ.ಕಲಬುರ್ಗಿ ಪ್ರಗತಿಪರ ಚಿಂತಕ ಪ್ರಶಸ್ತಿಯು 25 ಸಾವಿರ ನಗದು ಹಾಗೂ ತಾಮ್ರ ಪತ್ರವನ್ನು ಒಳಗೊಂಡಿದೆ.

ಈ ಸಮಾರಂಭವು ಡಿಸೆಂಬರ್ 27 ರ ಸಂಜೆ 5:30ಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಬಸವ ಇಂಟರ್ನ್ಯಾಷನಲ್ ಫೌಂಡೇಷನ್ ನ ಪ್ರಧಾನ ಕಾರ್ಯದರ್ಶಿ ಕೆ.ವಿ.ನಾಗರಾಜ ಮೂರ್ತಿ ಈ ಬಗ್ಗೆ ತಿಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಜನವರಿಯಿಂದ ಬೆಂಬಲ ಬೆಲೆ ಜಾರಿಗೆ

0

ಬೆಂಬಲ ಯೋಜನೆ ಅಡಿಯಲ್ಲಿ ಭತ್ತ, ರಾಗಿ, ಜೋಳವನ್ನು ಜನವರಿ 1 ರಿಂದ ಖರೀದಿಸಲಾಗುವುದು ಎಂದು ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ.

ಸದನದಲ್ಲಿ ಜೆಡಿಎಸ್ ನ ವೆಂಕಟರಾವ್ ಪ್ರಸ್ತಾಪಿಸಿದ ಈ ವಿಷಯಕ್ಕೆ ಸಂಬಂಧಿಸಿದಂತೆ “ಈಗಾಗಲೇ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಲಾಗಿದ್ದು, ರೈತರು ತಮ್ಮ ಆಹಾರ ಧಾನ್ಯಗಳನ್ನು ಮಾರಾಟ ಮಾಡದೇ ಉಳಿಸಿಕೊಳ್ಳುವುದು ಉತ್ತಮ” ಎಂದು ಸಚಿವ ಉಮೇಶ್ ಕತ್ತಿ ಪ್ರತ್ಯುತ್ತರ ನೀಡಿದ್ದಾರೆ.

” ಕಳೆದ ನವೆಂಬರ್ ನಲ್ಲಿ ಸುರಿದ ಭಾರಿ ಮಳೆಯಿಂದ ಭತ್ತದ ಕಟಾವು ವಿಳಂಬವಾಗಿದೆ ಹಾಗಾಗಿ ಜನವರಿ ಒಂದರಿಂದ ಖರೀದಿ ಕೇಂದ್ರಗಳಲ್ಲಿ ಭತ್ತ ಖರೀದಿ ಆರಂಭವಾದರೂ ರೈತರಿಗೆ ನಷ್ಟವಾಗಿದೆ ಎಂದು ಸಚಿವರು ಸಮರ್ಥಿಸಿಕೊಂಡಿದ್ದಾರೆ.

“ಆಂಧ್ರಪ್ರದೇಶದಲ್ಲಿ ಡಿಸೆಂಬರ್ ನಿಂದಲೇ ಭತ್ತ ಖರೀದಿ ಆರಂಭವಾಗಿದೆ. ಆದರೆ ಕೇಂದ್ರ ಸರ್ಕಾರದ ಮೇಲೆ ರಾಜ್ಯ ಸರ್ಕಾರ ಒತ್ತಡ ಹೇರುವಲ್ಲಿ ವಿಫಲವಾಗಿದೆ” ಎಂದು ವೆಂಕಟೇಶ್ ರಾವ್ ನಾಡಗೌಡ ತಿಳಿಸಿದ್ದಾರೆ. ವೆಂಕಟೇಶ್ ಅವರ ಈ ಮಾತಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಧ್ವನಿಗೂಡಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಜಿಲ್ಲಾ ವ್ಯಾಪ್ತಿಯಲ್ಲಿ ವಿವಿ ಸ್ಥಾಪನೆ- ಶ್ರೀ ಅಶ್ವತ್ಥ ನಾರಾಯಣ

0

ಬೆಳಗಾವಿ: ರಾಜ್ಯದಲ್ಲಿ ವಿಶ್ವವಿದ್ಯಾಲಯಗಳು ಇಲ್ಲದ ಜಿಲ್ಲಾ ಕೇಂದ್ರಗಳಲ್ಲಿ ಆದಷ್ಟು ತ್ವರಿತವಾಗಿ ವಿ.ವಿ.ಗಳನ್ನು ಸ್ಥಾಪಿಸಲಾಗುವುದು. ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ತಲೆ ಎತ್ತಲಿರುವ ಈ ವಿ.ವಿ.ಗಳಲ್ಲಿ ಕುಲಪತಿಯೂ ಸೇರಿದಂತೆ ಗರಿಷ್ಠ 25 ಸಿಬ್ಬಂದಿ ಮಾತ್ರ ಇರಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಆವರಣದಲ್ಲಿ ಬುಧವಾರ ನಡೆದ `ಜ್ಞಾನಯಜ್ಞ ಫೆಲೋಶಿಪ್ ವಿತರಣೆ ಮತ್ತು ವಿದ್ಯುನ್ಮಾನ ಪ್ರಮಾಣಪತ್ರಗಳ ಸೇವಾ ವ್ಯವಸ್ಥೆ’ (ಎಲೆಕ್ಟ್ರಾನಿಕ್ ಡಾಕ್ಯುಮೆಂಟರಿ ಡೆಲಿವರಿ) ಹಾಗೂ ಟ್ರ್ಯಾಕಿಂಗ್ ವ್ಯವಸ್ಥೆಯ ಉದ್ಘಾಟನೆ ನೆರವೇರಿಸಿ ಅವರು ಬುಧವಾರ ಮಾತನಾಡಿದರು.

`ನೂರಾರು ಎಕರೆ ವಿಶಾಲವಾದ ಕ್ಯಾಂಪಸ್ಸುಗಳು ಈಗ ಅಪ್ರಸ್ತುತವಾಗುತ್ತಿವೆ. ಆಧುನಿಕ ತಂತ್ರಜ್ಞಾನವು ಸಮರ್ಥವಾಗಿದ್ದು, ತುಂಬಾ ಕಡಿಮೆ ಜಾಗದಲ್ಲಿ ವಿ.ವಿ.ಗಳನ್ನು ಸ್ಥಾಪಿಸಲು ಈಗ ಸಾಧ್ಯವಿದೆ. ದೊಡ್ಡದೊಡ್ಡ ವಿ.ವಿ.ಗಳನ್ನು ಆರಂಭಿಸುವ ಬದಲು ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲೂ ವಿಶ್ವವಿದ್ಯಾಲಯಗಳು ಇರುವಂತೆ ನೋಡಿಕೊಳ್ಳುವುದಕ್ಕೆ ಸರಕಾರದ ಆದ್ಯತೆ ಕೊಟ್ಟಿದೆ’ ಎಂದು ಅವರು ನುಡಿದರು.

ಇದರೊಂದಿಗೆ ಬೆಂಗಳೂರಿನಲ್ಲಿರುವ ಯೂನಿವರ್ಸಿಟಿ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜನ್ನು (ಯುವಿಸಿಇ) ಮುಂಬೈನ ಐಐಟಿ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಇದಕ್ಕಾಗಿ 10 ವರ್ಷಗಳ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

120 ಎಕರೆ ವಿಶಾಲವಾಗಿರುವ ಬೆಳಗಾವಿಯ ವಿಟಿಯು ಕೂಡ ಐಐಟಿ ಮಾದರಿಯಲ್ಲೇ ಬೆಳೆಯಬೇಕು. ಈ ನಿಟ್ಟಿನಲ್ಲಿ ಕುಲಪತಿ ಪ್ರೊ.ಕರಿಸಿದ್ಧಪ್ಪನವರು ಇನ್ನು ಒಂದು ತಿಂಗಳಲ್ಲಿ ಕ್ರಿಯಾ ಯೋಜನೆ ಸಿದ್ಧಪಡಿಸಿ, ಸರಕಾರಕ್ಕೆ ಸಲ್ಲಿಸಲು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಅವರು ಹೇಳಿದರು.

ಹಾಗೆಯೇ ರಾಜ್ಯದಲ್ಲಿರುವ 17 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಜಾಗತಿಕ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡಲು ತೀರ್ಮಾನಿಸಲಾಗಿದೆ. ರಾಜ್ಯದಲ್ಲಿ ಎಂಜಿನಿಯರಿಂಗ್ ಓದುವವರು ಸಹಜವಾಗಿಯೇ ಈ ಕಾಲೇಜುಗಳತ್ತ ಆಕರ್ಷಿತವಾಗುವಂತೆ ಇವುಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಇವುಗಳಿಗೆ ಹೆಚ್ಚಿನ ಸ್ವಾಯತ್ತತೆ ನೀಡುವುದರ ಜತೆಗೆ ಆಡಳಿತ ಮಂಡಳಿಯನ್ನೂ ಸ್ಥಾಪಿಸಲಾಗುವುದು ಎಂದು ಅಶ್ವತ್ಥನಾರಾಯಣ ಹೇಳಿದರು.

ಸಮಾರಂಭದಲ್ಲಿ ವಿಟಿಯು ಕುಲಪತಿ ಪ್ರೊ,ಕರಿಸಿದ್ಧಪ್ಪ, ಕುಲಸಚಿವರಾದ ಪ್ರೊ.ಬಿ.ಇ.ರಂಗಸ್ವಾಮಿ, ಪ್ರೊ.ಎ.ಎಸ್.ದೇಶಪಾಂಡೆ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಮುಂತಾದವರು ಉಪಸ್ಥಿತರಿದ್ದರು.

ವಿಟಿಯು ಹಮ್ಮಿಕೊಂಡಿರುವ ಜ್ಞಾನಯಾನ ಫೆಲೋಶಿಪ್ ಕಾರ್ಯಕ್ರಮದಡಿ ಸಚಿವರು 22 ಸಂಶೋಧನಾ ವಿದ್ಯಾರ್ಥಿಗಳಿಗೆ ಫೆಲೋಶಿಪ್ ಪತ್ರ ವಿತರಿಸಿದರು.

ಈ ಯೋಜನೆಯಡಿ ಪ್ರತಿ ವಿದ್ಯಾರ್ಥಿಗೂ ತಿಂಗಳಿಗೆ 25 ಸಾವಿರ ರೂ. ನೀಡಲಾಗುವುದು. ಆಯ್ಕೆಯಾಗಿರುವ ಸಂಶೋಧನಾ ವಿದ್ಯಾರ್ಥಿಗಳಲ್ಲಿ ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್, ಕಂಪ್ಯೂಟರ್ ಸೈನ್ಸ್, ನ್ಯಾನೊ ತಂತ್ರಜ್ಞಾನ, ಏರೋಸ್ಪೇಸ್ ಪ್ರೊಪಲ್ಶನ್ ಎಂಜಿನಿಯರಿಂಗ್ ಮುಂತಾದ ವಿಭಾಗಗಳಲ್ಲಿ ಅಧ್ಯಯನ ಮಾಡುತ್ತಿರುವವರು ಇದ್ದಾರೆ ಎಂದು ಅವರು ತಿಳಿಸಿದರು.

ವಿಟಿಯು ಆರಂಭಿಸಿರುವ ಈ ಯೋಜನಯಡಿ ವಿದ್ಯಾರ್ಥಿಗಳು ತಮಗೆ ಬೇಕಾದ ಪ್ರಮಾಣಪತ್ರ, ಸಂಭಾವ್ಯ ಪದವಿ ಪ್ರಮಾಣ ಪತ್ರ, ಅಂಕಪಟ್ಟಿ, ವರ್ಗಾವಣೆ ಪತ್ರ, ಹೆಸರು ಬದಲಾವಣೆ, ದಾಖಲಾತಿಗಳ ಪರಿಶೀಲನೆ, ಮಾಧ್ಯಮ ಆಯ್ಕೆ ಮುಂತಾದ ಹತ್ತಾರು ಸೇವೆಗಳನ್ನು ಆನ್ಲೈನ್ ಮೂಲಕ ಸುಲಭವಾಗಿ ಪಡೆದುಕೊಳ್ಳಬಹುದು ಎಂದು ಅಶ್ವತ್ಥನಾರಾಯಣ ಹೇಳಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಬ್ಯಾಂಕು ನೌಕರರ ಮುಷ್ಕರ

0

ಡಿಸೆಂಬರ್ 16 ಮತ್ತು 17 ರಂದು ವಿವಾದಿತ ಖಾಸಗೀಕರಣ ವಿಧೇಯಕ್ಕೆ ವಿರೋಧಿಸಿ ಸಾರ್ವಜನಿಕ ವಲಯದ ಬ್ಯಾಂಕ್ ನೌಕರರು ಮುಷ್ಕರ ನಡೆಸುತ್ತಿದ್ದಾರೆ.

ಕಾರ್ಮಿಕ ಇಲಾಖೆಯೊಂದಿಗೆ ಬುಧವಾರ ನಡೆದ ಸಂಧಾನ ವಿಫಲವಾದ ಹಿನ್ನೆಲೆಯಲ್ಲಿ ಮೊದಲೇ ನಿಗದಿಯಾದಂತೆ ಮುಷ್ಕರ ಮುಂದುವರಿಯಲಿದೆ ಎಂದು ಆಲ್ ಇಂಡಿಯಾ ಬ್ಯಾಂಕ್ ಆಫೀಸರ್ಸ್ ಕಾನ್ಪೆಡರೇಶನ್ ಪ್ರಧಾನ ಕಾರ್ಯದರ್ಶಿ ಸೌಮ್ಯ ದತ್ತಾ ತಿಳಿಸಿದ್ದಾರೆ. ಬ್ಯಾಂಕ್ ಮುಷ್ಕರದ ಬಗ್ಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ಹಲವು ಬ್ಯಾಂಕ್ಗಳು ತಮ್ಮ ಗ್ರಾಹಕರಿಗೆ ಈ ಬಗ್ಗೆ ಮೊದಲೇ ಮಾಹಿತಿ ನೀಡಿವೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಫೋಟೋ ಆಧರಿಸಿ ದಂಡ ವಿಧಿಸುವ ಪ್ರಕ್ರಿಯೆ. ಆಟೋಚಾಲಕರ ಪ್ರತಿಭಟನೆ.

0

ಶಿವಮೊಗ್ಗದ ಪೊಲೀಸರು ಆಟೋಗಳಿಗೆ ವಿಪರೀತ ದಂಡ ಹಾಕುತ್ತಿದ್ದಾರೆ. ಇದನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿ ಆಟೋ ಚಾಲಕರ ಹಾಗೂ ಮಾಲೀಕರು ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪೊಲೀಸರು ಫೋಟೋ ತೆಗೆದು ಸಾವಿರ ರೂಪಾಯಿ ದಂಡ ಹಾಕುತ್ತಿದ್ದಾರೆ. ಇದರಿಂದ ಬಡ ಆಟೋ ಚಾಲಕರು ದುಡಿಮೆ ಮಾಡಿದ ಹಣವನ್ನು ದಂಡಕ್ಕೆ ಕಟ್ಟಿ ಹೊಟ್ಟೆಯ ಮೇಲೆ ತಣ್ಣೀರು ಬಟ್ಟೆ ಹಾಕಿ ಕೊಳ್ಳುವಂತಹ ಪರಿಸ್ಥಿತಿ ಎದುರಾಗಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ.

ಪೊಲೀಸರು ಫೋಟೋ ತೆಗೆದು ದಂಡ ಹಾಕುವ ಪ್ರಕ್ರಿಯೆ ಹೆಚ್ಚಾಗುತ್ತಿದೆ. ಗ್ಯಾಸ್ ಬೆಲೆ ಕೂಡ ಏರಿಕೆಯಾಗು ವುದರಿಂದ ನಮಗೆ ಸಂಪಾದನೆ ತೆಗೆದುಕೊಂಡು ಹೋಗಲು ಕಷ್ಟವಾಗುತ್ತಿದೆ. ಮಕ್ಕಳ ಶಿಕ್ಷಣ, ಜೀವನ ನಿರ್ವಹಣೆ, ತಂದೆ-ತಾಯಿಗೆ ಔಷಧಿ ಕೊಡಿಸಲು ಕೂಡ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ನಗರ ಆಟೋ ಚಾಲಕರು ಹಾಗೂ ಮಾಲೀಕರ ಸಂಘದ ಅಧ್ಯಕ್ಷ ಅನ್ಸರ್ ಅಹಮದ್ ಇನ್ನು ಮುಂತಾದವರು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಅವಹೇಳನಕಾರಿ ಪೋಸ್ಟಿಂಗ್ ; ಫೇಸ್ ಬುಕ್ ಸಂಸ್ಥೆಗೆ ಪತ್ರ

0

ಹೆಲಿಕ್ಯಾಪ್ಟರ್ ದುರಂತದಲ್ಲಿ ಮೃತರಾದ ಬಿಪಿನ್ ರಾವತ್ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ಖಾತೆದಾರರ ಮಾಹಿತಿ ಪತ್ತೆಗೆ ಫೇಸ್ಬುಕ್ ಸಂಸ್ಥೆಗೆ ಪತ್ರ ಬರೆಯಲಾಗಿದೆ ಎಂದು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ವಸಂತ್ ಕುಮಾರ್ ಟಿ.ಕೆ. ಎಂಬ ಫೇಸ್ಬುಕ್ ಖಾತೆಯಿಂದ ಮತ್ತು ಸುಬ್ಬರಾವ್ ರವಿಕುಮಾರ್ ಫೇಸ್ಬುಕ್ ಖಾತೆಯಿಂದ ಜ.ಬಿಪಿನ್ ರಾವತ್ ಅವರು ಕುರಿತು ಹಾಗೂ ಶ್ರೀನಿವಾಸ್ ಕಾರ್ಕಳ ಎಂಬ ಹೆಸರಿನ ಫೇಸ್ಬುಕ್ ಖಾತೆಯಿಂದ ಜ. ಬಿಪಿನ್ ರಾವತ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಬಗ್ಗೆ ಕೀಳಾಗಿ ಪೋಸ್ಟ್ ಮಾಡಲಾಗಿತ್ತು. ಈ ಬಗ್ಗೆ ತನಿಖೆ ನಡೆಸಲಾಗಿದ್ದು,ಕೆಲವು ನಕಲಿ ಐಡಿ ಎಂಬುದು ಪತ್ತೆಯಾಗಿದೆ. ಇದರ ಮೂಲ ಪತ್ತೆ ಹಚ್ಚಿ ಮಾಹಿತಿ ನೀಡುವಂತೆ ಫೇಸ್ಬುಕ್ ಸಂಸ್ಥೆಗೆ ಪತ್ರ ಬರೆಯಲಾಗಿದೆ. ಇಬ್ಬರು ಆರೋಪಿಗಳ ಪೈಕಿ ಒಬ್ಬರು ಬೆಂಗಳೂರು, ಮತ್ತೊಬ್ಬ ಕಾರ್ಕಳದವನೆಂದು ಮಾಹಿತಿ ಲಭಿಸಿದೆ. ಅವರನ್ನು ಶೀಘ್ರ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುವುದು ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಎಲ್ಲರನ್ನೂ ಒಳಗೊಳ್ಳುವ ದಿಟ್ಟ ಪ್ರಧಾನಿ ಬೇಕು

0

ಹಿಂದೂ, ಮುಸ್ಲಿಂ, ಸಿಖ್ ಅಥವಾ ಯಾರೇ ಆಗಿರಲಿ ಕೇವಲ ರಾಜಕೀಯಕ್ಕಾಗಿ ಜನರನ್ನು ವಿಭಜಿಸುವವರ ಬದಲು ಎಲ್ಲರನ್ನೂ ಒಳಗೊಳ್ಳುವ ದಿಟ್ಟ ಪ್ರಧಾನಮಂತ್ರಿ ಭಾರತಕ್ಕೆ ಅಗತ್ಯವಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಅವರ ಜೀವನ ಚರಿತ್ರೆ “ಫರೋಸ್ ಇನ್ ಎ ಫೀಲ್ಡ್ ದ ಅನ್ ಎಕ್ಸ್ ಪ್ಲೋರ್ಡ್ ಲೈಫ್ ಆಫ್ ಎಚ್.ಡಿ. ದೇವೇಗೌಡ ” ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದ ಜನರು ಬಲಿಷ್ಠರಾದ ಮಾತ್ರ ದೇಶವು ಬಲಿಷ್ಠವಾಗುತ್ತದೆ. ಭಾರತಕ್ಕೆ ಒಬ್ಬ ದಿಟ್ಟ ಪ್ರಧಾನಮಂತ್ರಿ ಬೇಕು. ಎಲ್ಲರನ್ನೂ ಒಟ್ಟಿಗೆ ಹಿಡಿದುಕೊಳ್ಳುವ ಪ್ರಧಾನಿಯೂ ರಾಜಕೀಯಕ್ಕಾಗಿ ಭಾರತ, ಹಿಂದೂ, ಮುಸ್ಲಿಂ, ಸಿಖ್ ಹೀಗೆ ಯಾರನ್ನು ವಿಭಜಿಸುವುದು ಇಲ್ಲ. ಭಾರತಕ್ಕೆ ವಿಭಜನೆಯ ಅಗತ್ಯವಿಲ್ಲ ಎಂದರು.

ಪ್ರತಿ ಚುನಾವಣೆಯು ಭಾರತ ಹಾಗೂ ಭಾರತದ ಜನರನ್ನು ವಿಭಜಿಸುತ್ತದೆ. ನಾವು ಧರ್ಮದ ಆಧಾರದಿಂದ ವಿಭಜನೆಯಾದ ದಿನ ಯಾವಾಗ ಬರುತ್ತದೆ ಎಂದು ಆಶ್ಚರ್ಯ ವ್ಯಕ್ತಪಡಿಸಿದರು. ನಾನು ಮುಸ್ಲಿಂ, ನನ್ನ ಧರ್ಮದಂತೆ ಇತರ ಎಲ್ಲಾ ಧರ್ಮಗಳ ಬಗ್ಗೆ ಗೌರವವನ್ನು ಹೊಂದಿದ್ದೇನೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ದೇವೇಗೌಡ್ರು, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಕಾಂಗ್ರೆಸ್ ಮುಖಂಡರಾದ ಜೈರಾಮ್ ರಮೇಶ್ ಇನ್ನು ಮುಂತಾದ ಗಣ್ಯರು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಭದ್ರಾವತಿಯಲ್ಲಿ ಗೋವುಗಳ ರಕ್ಷಣೆ.

0

ಭದ್ರಾವತಿಯ, ಅನ್ವರ್ ಕಾಲೋನಿಯ ಮನೆಯೊಂದರಲ್ಲಿ ಅಕ್ರಮವಾಗಿ ವರ್ಷದಲ್ಲಿ ಇಟ್ಟುಕೊಂಡಿದ್ದ 16 ಹಸುಗಳನ್ನು, ಹಳೆ ನಗರ ಪೊಲೀಸರು ಸಂರಕ್ಷಣೆ ಮಾಡಿದ್ದಾರೆ.

ತಬ್ರೆಜ್ ಎಂಬುವರ ಮನೆಯಲ್ಲಿ ಹಾಕಲಾಗಿದ್ದ ಹತ್ತು ಹಸುಗಳನ್ನು ಈತನಿಗೆ ಸೇರಿದ ಮತ್ತೊಂದು ಮನೆಯಲ್ಲಿ ಹಸುಗಳನ್ನು ವಶಕ್ಕೆ ಪಡೆದ ಪೊಲೀಸರು ಖಚಿತ ಮಾಹಿತಿಯನ್ನು ಆಧರಿಸಿ ಜಾಫರ್ ಸಾಧಿಕ್ ಎಂಬಾತನ ಮನೆಯಲ್ಲಿ ಹಸುಗಳನ್ನು ವಶಕ್ಕೆ ಪಡೆದು ಸಂರಕ್ಷಿಸಿದ್ದಾರೆ.

ಹಸುಗಳನ್ನು ಮಾಂಸ ಮಾರಾಟ ಮಾಡುವುದಕ್ಕಾಗಿ ಅಕ್ರಮವಾಗಿ ಹಸುಗಳನ್ನು ಕೂಡಿಹಾಕಲಾಗಿತ್ತು. ಈ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದರು. ಅನಂತರ ಆರೋಪಿಗಳ ಮನೆಯಲ್ಲಿದ್ದ ಹಸುಗಳನ್ನು ರಕ್ಷಿಸಲಾಗಿದೆ. ಇದಕ್ಕೆ ಸಂಬಂಧಿಸಿದ ಆರೋಪಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.