Monday, February 9, 2026
Monday, February 9, 2026
Home Blog Page 1827

ಮುಂದಿನ ರೇಸಿನಲ್ಲಿ ಗೆಲ್ಲುವ ಕುದುರೆ ಯಾವುದು?

0

ಇತ್ತೀಚಿನ ವರ್ಷಗಳಲ್ಲಿ ರಾಜಕೀಯ ಪಕ್ಷಗಳು ಅನೇಕ ದಿಢೀರ್ ಫಲಿತಾಂಶಗಳನ್ನು ಕಾಣುತ್ತಿವೆ. ಮೋದಿ ಅಲೆಯಲ್ಲಿ ಒಂದು ಅವಧಿ ಸಂಸತ್ತಿನಲ್ಲಿ ಹೊಸ ವಾತಾವರಣ ಸೃಷ್ಟಿಯಾಗಿತ್ತು. ಎರಡನೇ ಅವಧಿಯಲ್ಲಿ ಕೊನೆಯ ವರ್ಷ ಅಂದರೆ ಸಂಸತ್ತಿನ ಮಹಾ ಚುನಾವಣೆ ಸಂದರ್ಭ ತುಸು, ಮೋದಿ ಅಲೆಗೆ ಕಾಣದ ‘ಮಂದ’ ಪ್ರತಿಕ್ರಿಯೆ ನಿರ್ಮಾಣವಾಗಿತ್ತು. ಇದು ಮೋದಿ ಅವರ ತಪ್ಪಲ್ಲ, ರಾಜ್ಯದಲ್ಲಿನ ನಾಯಕರ ಒಳಜಗಳಗಳು, ನಾಯಕತ್ವಕ್ಕೆ ಸ್ಪರ್ಧೆಗಳು, ಸಾರ್ವಜನಿಕ ಇಮೇಜನ್ನು ಸೃಷ್ಟಿಸಿಕೊಳ್ಳುವಲ್ಲಿ ವಿಪಲತೆ, ಇನ್ನೂ ಅನೇಕ ಕಾರಣಗಳಿವೆ.
ಇದೇ ರೀತಿಯ ಸನ್ನಿವೇಶ ಕಾಂಗ್ರೆಸ್ ಗೂ ಇತ್ತು. ಏಕೆಂದರೆ ರಾಜೀವ್ ಗಾಂಧಿಯವರು ಒಂದು ಲೋಕಸಭಾ ಕ್ಷೇತ್ರದಲ್ಲಿ ಪರಾಜಯ. ಮತ್ತೊಂದರಲ್ಲಿ ಗೆಲುವು. ಹಾಗೆಯೇ ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭಾ ಚುನಾವಣೆಯಲ್ಲಿ ಅವರ ಸೋಲು-ಗೆಲುವು.
ಇನ್ನು ಜೆಡಿಎಸ್ ನಲ್ಲಿ ಕುಮಾರಣ್ಣ ಏಕಮೇವಾದ್ವತೀಯ ನಾಯಕರು. ಆದರೆ ತಳಮಟ್ಟದಲ್ಲಿ ಸಂಘದ ಚಟುವಟಿಕೆ ಮೊದಲಾದ ಕಾರಣ ಅವರ ಪಕ್ಷವು ಬಲವಾದ ಹೆಜ್ಜೆಯೂರಲು ವಿಫಲವಾಯಿತು. ಕುಟುಂಬ ರಾಜಕಾರಣ ಅವರು ಪಕ್ಷದ ದುರ್ಬಲತೆ. ಈ ದೌರ್ಬಲ್ಯ ಎಲ್ಲ ಪಕ್ಷದಲ್ಲೂ ಇದೆ. ಆದರೆ ಪಕ್ಷವನ್ನು ಮುನ್ನಡೆಸುವಲ್ಲಿ ಸೂಕ್ತ ಸದೃಢ ಯೋಜನೆ, ಉಪಾಯಗಳ ಕೊರತೆ ಇದೆ. ಇದು ಯಾವಾಗಲೂ ಜೆಡಿಎಸ್ ಪಕ್ಷವನ್ನು ಕಾಡುವ ಸಮಸ್ಯೆಯಾಗಿದೆ. ಒಟ್ಟಿನಲ್ಲಿ ಮೂರು ಪಕ್ಷಗಳು ಒಂದಿಲ್ಲೊಂದು ಕಾರಣಗಳಿಂದ ಥಂಪಿಂಗ್ ಮೆಜಾರಿಟಿ ಹಂತದಲ್ಲಿ ದುರ್ಬಲವಾಗಿದೆ. ಆಡಳಿತದಲ್ಲಿ ಜನತೆಯಲ್ಲಿ ವಿಶ್ವಾಸಾರ್ಹ ನಂಬಿಕೆ ಮೂಡಿಸಬೇಕು. ಗೆದ್ದ ಮೊದಲ ವರ್ಷಗಳಲ್ಲಿ ಹಾಗೆ ಮಾಡಿ, ನಂತರ ತಮ್ಮದೇ ಒಳ ಜಗಳದಲ್ಲಿ ತಲ್ಲೀನರಾಗುವ ಸ್ವಭಾವ ದೂರ ಮಾಡಿದರೆ ಮೂರು ಪಕ್ಷಗಳಿಗೆ ಭವಿಷ್ಯವಿದೆ. ಯಾರು ಅದನ್ನು ಸಾಧಿಸುತ್ತಾರೋ ಕಾದು ನೋಡೋಣ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಓಮಿಕ್ರಾನ್ ಲಕ್ಷಣಗಳು. ಸ್ಪಷ್ಟ ಚಿತ್ರಣ ಲಭ್ಯವಾಗಿಲ್ಲ

0

ಮಹಾರಾಷ್ಟ್ರದಲ್ಲಿ ದಿನೇದಿನೇ ಓಮಿಕ್ರಾನ್ ರೂಪಾಂತರಿ ಸೋಂಕಿತರ ಸಂಖ್ಯೆ ಜಾಸ್ತಿಯಾಗುತ್ತಿದೆ. ಒಂದೇ ದಿನ ಎಂಟು ಮಂದಿಯಲ್ಲಿ ಹೊಸ ರೂಪಾಂತರಿ ವೈರಾಣು ಪತ್ತೆಯಾಗಿದೆ. ಇವರಾರೂ ವಿದೇಶದಿಂದ ಬಂದವರಲ್ಲ ಮತ್ತು ವಿದೇಶದಿಂದ ಆಗಮಿಸಿದವರ ಜೊತೆ ಸಂಪರ್ಕವನ್ನು ಹೊಂದಿಲ್ಲ ಎನ್ನುವುದು ತಿಳಿದುಬಂದಿದೆ.
ದೇಶದಲ್ಲಿ ಇದುವರೆಗೆ ಒಟ್ಟು 60 ಪ್ರಕರಣಗಳು ದಾಖಲಾಗಿವೆ. ಮಹಾರಾಷ್ಟ್ರದಲ್ಲಿ 28, ರಾಜಸ್ಥಾನ 17, ದಿಲ್ಲಿ 6, ಗುಜರಾತ್ 4, ಕರ್ನಾಟಕ 3, ಪ್ರದೇಶ ಹಾಗೂ ಕೇರಳದಲ್ಲಿ ತಲಾ ಒಂದು ಓಮಿಕ್ರಾನ್ ಪ್ರಕರಣ ದಾಖಲಾಗಿವೆ.
ಒಮಿಕ್ರಾನ್ ಸೋಂಕಿತರಲ್ಲಿನ ಅನಾರೋಗ್ಯದ ಲಕ್ಷಣಗಳ ಬಗ್ಗೆ ಸ್ಪಷ್ಟವಾದ ಚಿತ್ರಣ ಸಿಗುತ್ತಿಲ್ಲ. ಜ್ವರ, ಮೈಕೈ ನೋವಿಗೆ ತಕ್ಕಂತೆ ಔಷಧೋಪಚಾರ ಮಾಡಲಾಗುತ್ತಿದೆ. ದೇಹದ ಒಳಗೆ ಒಮಿಕ್ರಾನ್ ನಿಂದಾಗುತ್ತಿರುವ ಅಪಾಯದ ಸುಳಿವು ವಿಜ್ಞಾನಿಗಳಿಗೆ, ತಜ್ಞ ವೈದ್ಯರಿಗೆ ಸ್ಪಷ್ಟವಾಗುತ್ತಿಲ್ಲ. ಸದ್ಯಕ್ಕೆ ಲಸಿಕೆಯ ಎರಡುಡೋಸ್ ಗಳನ್ನು ಪಡೆದು, ಮಾಸ್ಕ್ ಧರಿಸಿಕೊಂಡು ಸಂಚರಿಸುವುದು ಸೂಕ್ತ ಎಂದು ವಿಶ್ವ ಆರೋಗ್ಯ ಸಂಸ್ಥೆಯು ತಿಳಿಸಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಕಾಶ್ಮೀರ ಕಣಿವೆಯಲ್ಲಿ ಪಾಕ್ ಉಗ್ರನ ಹತ್ಯೆ.

0

ಪುಲ್ವಾಮದಲ್ಲಿ ಆತ್ಮಾಹುತಿ ದಾಳಿ ನಡೆಸಿ ಯೋಧರ ಬಲಿ ಪಡೆದಂತೆ, ಭದ್ರತಾ ಪಡೆಗಳ ಮೇಲೆ ಭೀಕರ ದಾಳಿ ನಡೆಸಲು ಸಂಚು ಹೆಣೆಯುತ್ತಿದ್ದ ಪಾಕಿಸ್ತಾನ ಪೋಷಿತ ಲಷ್ಕರ್ ತಯ್ಬಾ ಸಂಘಟನೆಯ ಉಗ್ರ ಆಬು ಜರಾರ್ ನನ್ನು ಎನ್ ಕೌಂಟರ್ ನಲ್ಲಿ ಹತ್ಯೆಗೈಯಲಾಗಿದೆ.
ಉಗ್ರ ಆಬು ಜರಾರ್ ಗೆ ರಾಔರಿಪೂಂಚ್ ಪ್ರದೇಶಗಳಲ್ಲಿ ವಿದ್ವಾಂಸಕ ಕೃತ್ಯಗಳನ್ನು ಹೆಚ್ಚಿಸುವುದರ ಜೊತೆಗೆ ಭದ್ರತಾ ಪಡೆಗಳ ಮೇಲೆ ಭೀಕರ ದಾಳಿ ನಡೆಸಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ ಐ ಆದೇಶಿಸಿತ್ತು. ಆ ನಿಟ್ಟಿನಲ್ಲಿ ಸಕ್ರಿಯನಾಗಿದ್ದ ಜರಾರ್ ಗೆ ಲಷ್ಕರ್ ಸಂಘಟನೆಯ ಕಾಶ್ಮೀರ ಕಣಿವೆಯಲ್ಲಿನ ಬೆಂಬಲಿಗರಿಂದ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳು ಸಿಕ್ಕಿದ್ದವು ಎಂದು ಸೇನಾ ಮೂಲಗಳು ತಿಳಿಸಿವೆ.
ಪೂಂಚ್ ಜಿಲ್ಲೆಯ ಬೆಹ್ರಮ್ ಗಾಲ ಪ್ರದೇಶದಲ್ಲಿ ಸಶಸ್ತ್ರ ಉಗ್ರರು ಅಡಗಿರುವ ಗುಪ್ತಚರ ಮಾಹಿತಿ ಸಿಕ್ಕಿತ್ತು. ಇದನ್ನು ಬೆನ್ನಟ್ಟಿ ಹೊರಟ ಭದ್ರತಾ ಪಡೆಗಳು ಹಾಗೂ ಜಮ್ಮು-ಕಾಶ್ಮೀರ ಪೊಲೀಸರ ಮೇಲೆ ಉಗ್ರರು ಗುಂಡಿನ ದಾಳಿ ಆರಂಭಿಸಿದರು. ಪ್ರತಿಯಾಗಿ ಕಾರ್ಯಾಚರಣೆ ಆರಂಭಿಸಿದ ಯೋಧರು, ಪಾಕ್ ಉಗ್ರನನ್ನು ಹೊಡೆದುರುಳಿಸಿದ್ದಾರೆ. ಆತನ ಬಳಿಯಿಂದ ಎಕೆ-47ರೈಫಲ್, ನಾಲ್ಕು ಸುತ್ತು ಗುಂಡುಗಳು, 1 ಗ್ರೆನೇಡ್, ಭಾರತೀಯ ಕರೆನ್ಸಿ ಗಳನ್ನು ವಶಪಡಿಸಿಕೊಳ್ಳಲಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಏಕದಿನ ಸರಣಿಗೆ ಕೊಹ್ಲಿ ಅಲಭ್ಯ

0

ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಟೆಸ್ಟ್ ಏಕದಿನ ಸರಣಿಯು 2022 ರ ಜನವರಿ ’19 ರಿಂದ 23′ ರ ತನಕ ನಡೆಯಲಿದೆ.
ಈ ಸರಣಿಯ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಭಾರತ ತಂಡದಿಂದ ಹೊರಗುಳಿಯಲಿದ್ದಾರೆ.
‘ಕೊಹ್ಲಿ-ಅನುಷ್ಕಾ’ ದಂಪತಿಗಳ ಮಗಳು ‘ವಾಮಿಕ’ಳಿಗೆ 2022ರ ಜನವರಿ ’11’ ರಂದು ವರ್ಷ ತುಂಬುತ್ತದೆ, ಎಂಬುವುದು ಗಮನಿಸ ಬೇಕಾದ ಸಂಗತಿ.
ಕಳೆದವಾರ ಏಕದಿನ ತಂಡದ ನಾಯಕನಾಗಿ ಬಿಸಿಸಿಐ ರೋಹಿತ್ ಶರ್ಮಾರನ್ನು (ಕೊಹ್ಲಿಯ ಬದಲು) ನೇಮಕ ಮಾಡಿತ್ತು. ಅದಕ್ಕೂ ಮೊದಲೇ ಅವರು ಟಿ – 20 ನಾಯಕನಾಗಿದ್ದರು. ಹೀಗಾಗಿ ಕೊಹ್ಲಿ ಬಳಿ ಈಗ ಉಳಿದಿರುವುದು ಟೆಸ್ಟ್ ನಾಯಕತ್ವ ಮಾತ್ರ.
ವಿರಾಟ್ ಕೊಹ್ಲಿ ಟೆಸ್ಟ್ ತಂಡದ ನಾಯಕನಾಗಿ ಮುಂದುವರೆಯುವುದು ಹಾಗೂ ರೋಹಿತ್ ಶರ್ಮಾ ವೈಟ್-ಬಾಲ್ (ಟಿ-20 ಮತ್ತು ಏಕದಿನ ಪಂದ್ಯಗಳ) ನಾಯಕನಾಗಿ ಜವಾಬ್ದಾರಿ ವಹಿಸಿಕೊಳ್ಳುವುದು ಈಗಾಗಲೇ ನಿರ್ಧಾರವಾಗಿರುವ ವಿಷಯ.
ರೋಹಿತ್ ಶರ್ಮರ ನಾಯಕತ್ವದ ಸಾಮರ್ಥ್ಯದ ಬಗ್ಗೆ ನಮಗೆಲ್ಲ ತುಂಬಾ ವಿಶ್ವಾಸ ಇದೆ. ಇನ್ನೂ , ಕೊಹ್ಲಿ ಟೆಸ್ಟ್ ತಂಡದ ಯಶಸ್ವಿ ನಾಯಕನಾಗಿ ಮುಂದುವರೆಯುತ್ತಾರೆ. ಒಟ್ಟಾರೆ, ಭಾರತೀಯ ಕ್ರಿಕೆಟ್ ಸುರಕ್ಷಿತ ‘ಕೈ’ ಗಳಲ್ಲಿದೆ. ಎಂಬುವುದು ನಮಗೆ ಮನವರಿಕೆಯಾಗಿದೆ. ಇದುವರೆಗೆ ವೈಟ್-ಬಾಲ್ ನಾಯಕನಾಗಿ ಸಲ್ಲಿಸಿದ ಸೇವೆಗಾಗಿ ನಾವು ಕೊಯ್ಲಿಗೆ ಧನ್ಯವಾದ ಹೇಳಲು ಬಯಸುತ್ತೇವೆ”.
ನಾಯಕತ್ವದ ವಿಷಯದಲ್ಲಿ ವಿರಾಟ್ ಕೊಹ್ಲಿ ಜೊತೆ ತಾವು ಮಾತನಾಡಿರುವುದಾಗಿ ‘ಬಿಸಿಸಿಐ ಅಧ್ಯಕ್ಷ ಸೌರವ್ ರಂಗೋಲಿ’ ಹೇಳಿದ್ದರು. ಟಿ-20 ತಂಡದ ನಾಯಕತ್ವದಿಂದ ಕೆಳಗಿಳಿಯಬೇಡಿ, ಎಂದು ಕೇಳಿ ಕೊಂಡಿರುವುದಾಗಿಯು ಎಂದು ಗಂಗೂಲಿ ಹೇಳಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಸಾರ್ವಜನಿಕ ಸ್ಥಳದಲ್ಲಿ ಪ್ರತಿಮೆ ಸ್ಥಾಪನೆಗೆ ನಿರ್ಬಂಧವಿದೆ

0

“ಸಾರ್ವಜನಿಕ ಪ್ರದೇಶಗಳಲ್ಲಿ ಪ್ರತಿಷ್ಠಾಪಿಸಿದ ಪ್ರತಿಮೆಗಳನ್ನು ಹಿಂದು ಮುಂದು ನೋಡದೆ ತೆರವುಗೊಳಿಸಬೇಕು” ಎಂದು ರಾಜ್ಯ ಸರ್ಕಾರಕ್ಕೆ, ಹೈಕೋರ್ಟ್ ಸೂಚನೆಯನ್ನು ನೀಡಿದೆ.

‘ ಸಾರ್ವಜನಿಕ ಪ್ರದೇಶದಲ್ಲಿ ಪ್ರತಿಮೆ ಸ್ಥಾಪನೆ ಮಾಡುವುದಕ್ಕೆ ನಿರ್ಬಂಧವಿದೆ. ಅದು ದೇವರ ಮೂರ್ತಿ ಯಾಗಲಿ ಅಥವಾ ಮಹಾನ್ ವ್ಯಕ್ತಿಯ ಮೂರ್ತಿ ಯಾಗಿರಲಿ ಸಾರ್ವಜನಿಕ ಸ್ಥಳದಲ್ಲಿ ಪ್ರತಿಷ್ಠಾಪನೆ ಮಾಡುವಂತಿಲ್ಲ. ಬೇಕಾದರೆ ಸ್ವಂತ ಜಾಗದಲ್ಲಿ ಪ್ರತಿಮೆ ಸ್ಥಾಪನೆ ಮಾಡಿಕೊಳ್ಳಬಹುದು. ಅದಕ್ಕೆ ನ್ಯಾಯಾಲಯದ ಆಕ್ಷೇಪವಿಲ್ಲ ಎಂದು ಖಡಕ್ಕಾಗಿ ತಿಳಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಿದಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸ್ ನಿಲ್ದಾಣದಲ್ಲಿ ವಾಲ್ಮೀಕಿ ಪ್ರತಿಮೆ ಸ್ಥಾಪನೆ ಮಾಡಲಾಗಿದೆ. ಇದನ್ನ ಪ್ರಶ್ನಿಸಿ ಕುವೆಂಪು ಒಕ್ಕಲಿಗರ ಸಂಘ ಹಾಗೂ ಬಿದಲೂರು ಗ್ರಾಮಸ್ಥರು, ಸಾರ್ವಜನಿಕರ ಹಿತದೃಷ್ಟಿಯಿಂದ ಮುಖ್ಯನ್ಯಾಯಮೂರ್ತಿ ಋತುರಾಜ್ ಅವಸ್ಥೆ ಅವರಿಗೆ ಅರ್ಜಿಯನ್ನು ಸಲ್ಲಿಸಿದ್ದರು. ಇವರು ನೇತೃತ್ವದ ನ್ಯಾಯಪೀಠ ವಿಚಾರಣೆಯನ್ನು ನಡೆಸಿತು. ಈ ವಿಚಾರಣೆಯ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲರು, ‘ವಾಲ್ಮೀಕಿ ನಾಯಕರ ಸಂಘವು ಬಿದಲೂರು ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ, ಅನಧಿಕೃತವಾಗಿ ಬಸ್ ನಿಲ್ದಾಣದಲ್ಲಿ ವಾಲ್ಮೀಕಿ ಪ್ರತಿಮೆಯನ್ನು ಸ್ಥಾಪಿಸಿದ್ದಾರೆ. ಇದು ಸಾರ್ವಜನಿಕ ಪ್ರದೇಶದಲ್ಲಿ ದೆ. ಪ್ರತಿಮೆಯನ್ನು ತೆರವುಗೊಳಿಸಲು ಸರ್ಕಾರ ನಿರ್ಧರಿಸಬೇಕು ಎಂದು ಹೇಳಿದರು.

ಇದಕ್ಕೆ ಪ್ರತ್ಯುತ್ತರವಾಗಿ ನ್ಯಾಯಪೀಠ, ಈ ಪ್ರಕರಣದಲ್ಲಿ ಪ್ರತಿಮೆ ತೆರವುಗೊಳಿಸದೆ ಸರ್ಕಾರ ಏಕೆ ಸುಮ್ಮನಿದೆ. ಸಾರ್ವಜನಿಕ ಸ್ಥಳದಲ್ಲಿ ಪ್ರತಿಭೆಯಿಂದ ಜನ ಹಾಗೂ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತದೆ. ಇಂತಹ ಪ್ರಕರಣಗಳಿಗೆ ಅಂತ್ಯ ಕಾಣಿಸಬೇಕು ಎಂದು ಹೈಕೋರ್ಟ್ ತಿಳಿಸಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಸಂಸ್ಕೃತಿ ಸಿರಿ ಪ್ರಶಸ್ತಿ ಘೋಷಣೆ

0

ಸಾಂಸ್ಕೃತಿಕ ಕ್ಷೇತ್ರದ ಸಾಧಕರಾದ ಬಿ. ಮಂಜಮ್ಮ ಜೋಗತಿ, ಶ್ರೀನಿವಾಸ ಜಿ.ಕಪ್ಪಣ್ಣ, ವೈ.ಕೆ. ಮುದ್ದುಕೃಷ್ಣ ಸೇರಿ ಹತ್ತು ಮಂದಿಯನ್ನು ಡಾ.ವೇಮಗಲ್ ನಾರಾಯಣಸ್ವಾಮಿ ಸಾಂಸ್ಕೃತಿಕ ಪ್ರತಿಷ್ಠಾನ ನೀಡುವ 2020 ಮತ್ತು 2021ನೇ ‘ಸಂಸ್ಕೃತಿ ಸಿರಿ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯು ತಲಾ 25 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ಡಿ.19ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಆನಂದ ಮಾದಲಗೆರೆ ಅವರು ತಿಳಿಸಿದ್ದಾರೆ.
ಇದೇ ವೇಳೆ ಪುನೀತ್ ರಾಜಕುಮಾರ್ ಸ್ಮರಣೆ,ಡಾ. ರಾಜಕುಮಾರ್ ಮತ್ತು ಪುನೀತ್ ರಾಜ್ ಅವರಿಗೆ ಗೀತನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಂಸ್ಕೃತ ವಿವಿ ನಿವೃತ್ತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್ ಅವರು ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ನಕಲಿ ನೋಂದಣಿ. ಜಾಲ ಪತ್ತೆಗೆ ತಂಡ ರಚನೆ

0

ತೆರಿಗೆ ಪಾವತಿಸಿಕೊಳ್ಳದೆಯೇ ಐಷಾರಾಮಿ ಕಾರುಗಳನ್ನು ನೊಂದಣಿ ಮಾಡಿ ತೆರಿಗೆ ಲಪಟಾಯಿಸಿರುವ ಹಗರಣವನ್ನು ಗಂಭೀರವಾಗಿ ಪರಿಗಣಿಸಿರುವ ಸಾರಿಗೆ ಇಲಾಖೆಯು ತನಿಖೆಯನ್ನು ತೀವ್ರಗೊಳಿಸಿದೆ.
ಅಕ್ರಮದ ತನಿಖೆಗಾಗಿಯೇ ಪ್ರತ್ಯೇಕ ತಂಡವನ್ನು ರಚಿಸಿದೆ.
ತೆರಿಗೆ ಪಾವತಿಸದೆ ವಾಹನಗಳ ನೋಂದಣಿ ಅಸಾಧ್ಯ.ಆದರೂ, ಹೀಗೂ ನೊಂದಣಿ ಮಾಡಿ ಸರ್ಕಾರ ಮತ್ತು ಮಾಲೀಕರನ್ನು ವಂಚಿಸಲಾಗಿದೆ ಎಂಬುದನ್ನು ಪತ್ತೆ ಮಾಡಲಾಗುತ್ತಿದೆ. ಪ್ರಾಥಮಿಕ ವರದಿ ಬಂದ ಬಳಿಕ ರಾಜ್ಯದ ಎಲ್ಲಾ ಆರ್ ಟಿಓ ಕಚೇರಿಗಳಲ್ಲಿ ತನಿಖೆ ನಡೆಸಲಾಗುವುದು ಎಂದು ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಟಾರಿಯಾ ತಿಳಿಸಿದ್ದಾರೆ.
ಇಲಾಖೆಯ ಹೆಚ್ಚುವರಿ ಮುಖ್ಯ ಆಯುಕ್ತ ನರೇಂದ್ರ ಹೋಳ್ಕರ್ ನೇತೃತ್ವದಲ್ಲಿ ತನಿಖೆ ಆರಂಭಿಸಲಾಗಿದೆ. 2010ರ ಏ.1.ರಿಂದ ಇಲ್ಲಿಯವರೆಗೆ ನೊಂದಣಿಯಾಗಿರುವ 20 ಲಕ್ಷಕ್ಕಿಂತ ಹೆಚ್ಚು ಮೌಲ್ಯದ ವಾಹನಗಳಿಂದ ತೆರಿಕೆ ಪಾವತಿಯಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲು ರಾಷ್ಟ್ರೀಯ ಮಾಹಿತಿ ಕೇಂದ್ರ ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ತಂಡವನ್ನು ರಚಿಸಲಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ನಿಗದಿತ ಅವಧಿಯಲ್ಲೇ ಗುರಿ ಸಾಧಿಸಿ ಪ್ರಧಾನಿ

0

ಮೂಲಸೌಕರ್ಯ ಯೋಜನೆಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಎಂದು ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದ್ದಾರೆ.
ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಸಭೆ ನಡೆಸಿದರು.
ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಬಿಜೆಪಿ ಆಡಳಿತವಿರುವ ಅಸ್ಸಾಂ, ಅರುಣಾಚಲ ಪ್ರದೇಶ, ಗೋವಾ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಮಧ್ಯ ಪ್ರದೇಶ, ಮಣಿಪುರ, ತ್ರಿಪುರ, ಉತ್ತರಾಖಂಡ ಮುಖ್ಯಮಂತ್ರಿಗಳು, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಈ ಸಭೆಯಲ್ಲಿ ಭಾಗವಹಿಸಿದ್ದರು.
‘ಉತ್ತಮ ಆಡಳಿತ’ ಮತ್ತು ‘ಜನರ ಜೀವನ ಬದಲಿಸಿದ ರಾಜ್ಯದ ಯೋಜನೆ’ ಕುರಿತು ಮುಖ್ಯಮಂತ್ರಿಗಳು ಮಾಹಿತಿ ನೀಡಿದರು. ಈ ಎರಡು ನಿರ್ದಿಷ್ಟ ವಿಷಯಗಳ ಕುರಿತು ವಿವರಣೆ ನೀಡುವಂತೆ ಪ್ರಧಾನಿಯವರೇ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದ್ದರು ಎಂದು ಮೂಲಗಳು ತಿಳಿಸಿವೆ.
ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವ ಉತ್ತರಪ್ರದೇಶ, ಉತ್ತರಾಖಂಡ, ಗೋವಾ, ಹಿಮಾಚಲ ಪ್ರದೇಶ, ಗುಜರಾತ್ ಹಾಗೂ ಪಂಜಾಬ್ ನಲ್ಲಿನ ಚುನಾವಣೆ ಸಿದ್ಧತೆಗಳ ಕುರಿತಾಗಿಯೂ ಚರ್ಚೆ ನಡೆಯಿತು. ಈ ಪೈಕಿ ಪಂಜಾಬ್ ಹೊರತುಪಡಿಸಿ ಇತರ ಆರು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಇದೆ.ಕೊರೊನಾ ಸಾಂಕ್ರಾಮಿಕ, ಲಸಿಕೆ ಅಭಿಯಾನದ ಕುರಿತಂತೆಯೂ ವಿವರವಾದ ಚರ್ಚೆ ನಡೆಸಲಾಯಿತು ಎಂದು ಮೂಲಗಳು ತಿಳಿಸಿವೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಕನ್ನಡ ಭಾಷೆ, ಬಲವಂತ ಬೇಡ.

0

ಪದವಿ ಶಿಕ್ಷಣ ಹಂತದಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಕಲಿಕೆ ಕಡ್ಡಾಯಗೊಳಿಸಲಾಗಿದೆ. ಈ ಆದೇಶದ ಜಾರಿ ಕುರಿತು ಸದ್ಯಕ್ಕೆ ವಿದ್ಯಾರ್ಥಿಗಳ ಮೇಲೆ ಯಾವುದೇ ಬಲವಂತದ ಕ್ರಮ ಜರುಗಿಸ ಬಾರದು ಎಂದು ಹೈಕೋರ್ಟ್, ರಾಜ್ಯ ಸರ್ಕಾರ ಮತ್ತು ಎಲ್ಲ ವಿಶ್ವವಿದ್ಯಾಲಯಗಳಿಗೆ ನಿರ್ದೇಶನ ನೀಡಿದೆ.

ಸಂಸ್ಕೃತ ಭಾರತಿ ಟ್ರಸ್ಟ್, ಮಹಾ ವಿಶ್ವವಿದ್ಯಾಲಯ ಸಂಸ್ಕೃತ ಪ್ರಾಧ್ಯಾಪಕ ಸಂಘ ಮತ್ತಿತರರು ಸರ್ಕಾರದ ಆದೇಶ ರದ್ದು ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದೆ.

ಕೇಂದ್ರದ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಂ. ಬಿ. ನರಗುಂದ್ “ಕಳೆದ ವಿಚಾರಣೆ ವೇಳೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗಾಗಿ ಕನ್ನಡ ಭಾಷೆ ಕಲಿಕೆ ಕಡ್ಡಾಯಗೊಳಿಸಬಹುದು ಎಂಬುದನ್ನು ಸ್ಪಷ್ಟಪಡಿಸುವಂತೆ ಕೇಂದ್ರವನ್ನು ಕೇಳಲಾಗಿತ್ತು. ಪ್ರಕರಣದ ಬಗ್ಗೆ ಮಾಹಿತಿ ಪಡೆದ ನ್ಯಾಯಾಲಯಕ್ಕೆ ಒದಗಿಸಲು ಸ್ವಲ್ಪ ಸಮಯ ಅವಕಾಶ ನೀಡಬೇಕು ಎಂದು ಕೋರಿದರು.

ಬಸವನಗುಡಿ ವಿಜಯಾ ಕಾಲೇಜಿನ 6 ಪದವಿ ವಿದ್ಯಾರ್ಥಿಗಳ ಪರ ವಾದ ಮಂಡಿಸಿದ ವಕೀಲ ಶ್ರೀಧರ್ ಪ್ರಭು ಅವರು, ‘ ಕನ್ನಡ ಕಡ್ಡಾಯ ಆದೇಶ ಪ್ರಶ್ನಿಸಿ ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿಯನ್ನು ಏಕಸದಸ್ಯಪೀಠ ವಿಭಾಗೀಯ ಪೀಠಕ್ಕೆ ಕಳುಹಿಸಲಾಗಿದೆ. ಪ್ರಥಮ ವರ್ಷ ಪದವಿಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಸಂಸ್ಕೃತ, ಇಂಗ್ಲಿಷ್ ಭಾಷೆ ಆಯ್ಕೆ ಮಾಡಿಕೊಳ್ಳಲು ಬಯಸಿದ್ದಾರೆ. ಆದರೆ, ಸರ್ಕಾರದ ಆದೇಶದಂತೆ ಕಡ್ಡಾಯವಾಗಿ ಕನ್ನಡ ಆಯ್ಕೆ ಮಾಡಿಕೊಳ್ಳಲು ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ’ ಎಂದು ತಿಳಿಸಿದರು.

ವಿವಿಗಳು ಕಾಲೇಜುಗಳಿಗೆ ವಿವಿಧ ಕೋರ್ಸ್ ಗಳ ಪ್ರವೇಶ ಅಂತಿಮಗೊಳಿಸಲು ವಿದ್ಯಾರ್ಥಿಗಳ ದಾಖಲಾತಿ ಪತ್ರಗಳನ್ನು ಕಳುಹಿಸುವಂತೆ ಸೂಚಿಸುತ್ತೇವೆ. ಆದ್ದರಿಂದ ಪ್ರಕರಣವನ್ನು ತುರ್ತಾಗಿ ವಿಚಾರಣೆ ನಡೆಸಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದ್ದಾರೆ.

ಸಂಸ್ಕೃತ ಭಾರತಿ ಟ್ರಸ್ಟ್ ಪರ ವಾದಿಸಿದ ಹಿರಿಯ ವಕೀಲ ಎಸ್.ಎಸ್. ನಾಗಾನಂದ್ ” ಕನ್ನಡವಲ್ಲದೆ ಇತರ ಭಾಷೆ ಆಯ್ದುಕೊಂಡಿರುವ ವಿದ್ಯಾರ್ಥಿಗಳ ದಾಖಲೆಪತ್ರಗಳನ್ನು ಕಾಲೇಜು ವಿಶ್ವವಿದ್ಯಾಲಯಗಳಿಗೆ ಕಳುಹಿಸಿ ಕೊಡದೆ ತಡೆ ಹಿಡಿಯುತ್ತೇವೆ ಎಂದು ತಿಳಿಸಿದರು.

ವಾದ ಆಲಿಸಿದ ಪೀಠವು ಕೇಂದ್ರದಿಂದ ಮಾಹಿತಿ ಪಡೆದು ಕೋರ್ಟ್ ಗೆ ತಿಳಿಸಲು ಎಎಸ್ ಜಿ ಗೆ ಕಾಲಾವಕಾಶ ನೀಡಿ ವಿಚಾರಣೆಯನ್ನು ಡಿಸೆಂಬರ್ 16 ಕ್ಕೆ ಮುಂದೂದಿಯಲ್ಲದೆ, ಅರ್ಜಿಯ ಮುಂದಿನ ವಿಚಾರಣೆ ವರೆಗೆ ಕನ್ನಡ ಕಡ್ಡಾಯ ವಿಚಾರದಲ್ಲಿ ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗದಂತೆ ಸರ್ಕಾರ ಹಾಗೂ ವಿಶ್ವವಿದ್ಯಾಲಯಗಳಿಗೆ ಸೂಚಿಸಿದೆ.

ಕತೆಗಾರ್ತಿ ಸತ್ಯವತಿ ಅವರಿಗೆ ಕುವೆಂಪು ಪುರಸ್ಕಾರ

0

ಪ್ರಸಕ್ತ ಸಾಲಿನ ಕುವೆಂಪು ರಾಷ್ಟ್ರೀಯ ಪುರಸ್ಕಾರ ವು ತೆಲುಗು ಭಾಷೆಯ ಪ್ರಸಿದ್ಧ ಕಥೆಗಾರ್ತಿ ಪಿ. ಸತ್ಯವತಿ ಅವರಿಗೆ ದೊರಕಿದೆ.

5 ಲಕ್ಷ ರೂ. ನಗದು ಮತ್ತು ಬೆಳ್ಳಿ ಪದಕವನ್ನು ಒಳಗೊಂಡಿದೆ. ತೆಲುಗು ಸಾಹಿತ್ಯದ ಶ್ರೀಮಂತಿಕೆ, ಸತ್ವವನ್ನು ತಮ್ಮ ಕಥೆ ಹಾಗೂ ಕಾದಂಬರಿಯಲ್ಲಿ ಅನುವಾದಗಳಲ್ಲಿ ಬಿಂಬಿಸಿರುವ ಸತ್ಯವತಿ ಅವರ ಸಾಹಿತ್ಯ ಸೇವೆ ಮಹತ್ವದಾಗಿದೆ.

ಡಿಸೆಂಬರ್ 29ರಂದು ಕುಪ್ಪಳಿಯಲ್ಲಿ ನಡೆಯುವ ರಾಷ್ಟ್ರಕವಿ ಕುವೆಂಪು ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಸತ್ಯವತಿ ಅವರಿಗೆ ಪುರಸ್ಕಾರ ಪ್ರದಾನ ಮಾಡಲಾಗುತ್ತದೆ.

ಬೆಂಗಳೂರಿನಲ್ಲಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಹಂ. ಪ. ನಾಗರಾಜಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.