Monday, February 9, 2026
Monday, February 9, 2026
Home Blog Page 1828

ಬೆಳಗಾವಿ ಅಧಿವೇಶನ : ಗೃಹ ಸಚಿವರ ಸಭೆ

0

ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು, ಬೆಳಗಾವಿ ಅಧಿವೇಶನದಲ್ಲಿ ಭಾಗವಹಿಸು ವುದಕ್ಕೂ ಮೊದಲು ಪೂರ್ವಭಾವಿಯಾಗಿ, ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಬೆಳಗ್ಗೆ, ಸಭೆ ನಡೆಸಿದರು.

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ, ಅಧಿವೇಶನ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ, ಅವಕಾಶವಿಲ್ಲದಂತೆ, ಸುಲಲಿತವಾಗಿ ನಡೆಯಲು, ತೆಗೆದುಕೊಂಡಿರುವ ರಕ್ಷಣಾ ಕ್ರಮಗಳ ಬಗ್ಗೆ, ಸಚಿವರು ಮಾಹಿತಿ ಪಡೆದುಕೊಂಡರು.

ಈ ಸಭೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಒಳಾಡಳಿತ, ಶ್ರೀ ರಜನೀಶ್ ಗೋಯಲ್, ಎಡಿಜಿಪಿ ಕಾನೂನು ಮತ್ತು ಸುವ್ಯವಸ್ಥೆ, ಶ್ರೀ ಪ್ರತಾಪ್ ರೆಡ್ಡಿ, ಶ್ರೀ ಸತೀಶ್ ಕುಮಾರ್, ಐಜಿ ಬೆಳಗಾವಿ ವೃತ್ತ ಹಾಗೂ ಬೆಳಗಾವಿ ಪೊಲೀಸ್ ಆಯುಕ್ತ ತ್ಯಾಗರಾಜ್ ಶ್ರೀ ಅವರೂ ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಭಾರತದ ಹರ್ನಾಜ್ ಕೌರ್ ಭುವನ ಸುಂದರಿ

0

21 ವರ್ಷಗಳ ಬಳಿಕ ಭಾರತಕ್ಕೆ ನಟಿ ಹಾಗೂ ರೂಪದರ್ಶಿ ಹರ್ನಾಜ್ ಕೌರ್ ಸಂಧು ಅವರು ಭುವನ ಸುಂದರಿ ಪಟ್ಟವನ್ನು ಒಲಿಸಿಕೊಂಡಿದ್ದಾರೆ.

ಇಸ್ರೇಲ್ ನ ಕೆಂಪು ಸಮುದ್ರ ತೀರದಲ್ಲಿರುವ ಈಲಟ್ ನಗರದ ಐಷಾರಾಮಿ ರೆಸಾರ್ಟ್ ನಲ್ಲಿ ಭುವನ ಸುಂದರಿ ಸ್ಪರ್ಧೆಯ 70ನೇ ಆವೃತ್ತಿಯ ಕಾರ್ಯಕ್ರಮ ನಡೆಯಿತು. ಭಾರತದ ಚಂಡಿಗಡ ಮೂಲದ 21 ವರ್ಷದ ಹರೆಯದ ಹರ್ನಾಜ್ ಕೌರ್ ಅವರು ಫೈನಾನ್ಸ್ ಸುತ್ತಿನಲ್ಲಿ ಭುವನ ಸುಂದರಿ ಪಟ್ಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

1994 ರಲ್ಲಿ ಭಾರತದ ಸುಶ್ಮಿತಾ ಸೇನ್ ಮತ್ತು 2000 ರಲ್ಲಿ ಲಾರಾ ದತ್ತ ಭುವನಸುಂದರಿ ಪಟ್ಟವನ್ನು ತಮ್ಮದಾಗಿಸಿಕೊಂಡಿದ್ದರು. ಅದಾದ 21 ವರ್ಷದ ಬಳಿಕ ಭಾರತಕ್ಕೆ ಹರ್ನಾಜ್ ಈ ಗೌರವ ತಂದುಕೊಟ್ಟಿದ್ದಾರೆ.

ಈ ಸ್ಪರ್ಧೆಯ ಮೊದಲ ರನ್ನರ್ ಅಪ್ ಆಗಿ ಪೆರಾಗ್ವೆಯ ನಾದಿಯಾ ಫೆರೆರಾ ಹಾಗೂ ಎರಡನೇ ರನ್ನರ್ ಅಪ್ ಆಗಿ ದಕ್ಷಿಣ ಆಫ್ರಿಕಾದ ಲಲೇಲಾ ಸ್ವಾನ್ ಸ್ಥಾನ ಪಡೆದರು.

“21 ವರ್ಷಗಳ ನಂತರ ಭಾರತಕ್ಕೆ ಈ ಮಹೋನ್ನತ ಗೌರವ ತಂದು ಕೊಡುತ್ತಿದ್ದು, ಅತ್ಯಂತ ಹೆಮ್ಮೆಯ ಕ್ಷಣ” ಎಂದು ಹರ್ನಾಜ್ ಕೌರ್ ಪ್ರತಿಕ್ರಿಯಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಪ್ರತಿಭಟನೆ ಬಿಗಿ ಮಾಡಿದ ರೈತರು- ಸಚಿವರ ಆಶ್ವಾಸನೆ

0

ದೆಹಲಿಯಲ್ಲಿ ರೈತರು ಬೇಡಿಕೆಗಾಗಿ ಪ್ರತಿಭಟನೆಯನ್ನು ನಡೆಸಿದ್ದರು. ಬೇಡಿಕೆಗಳನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ. ಆದರೆ, ರಾಜ್ಯ ಸರ್ಕಾರ ಇನ್ನೂ ಕೂಡ ಕಾಯ್ದೆ ಹಿಂಪಡೆದಿಲ್ಲ. ಈ ಮೂರು ಕಾಯ್ದೆಗಳನ್ನು ಹಿಂಪಡೆಯುವವರೆಗೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು ತಿಳಿಸಿದ್ದಾರೆ.

ಎಪಿಎಂಸಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ ಮತ್ತು ಜಾನುವಾರು ಹತ್ಯೆ ನಿಷೇಧ ಕಾಯ್ದೆ ಹಿಂಪಡೆಯಲು ಒತ್ತಾಯಿಸಿದರು. ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಸುವರ್ಣ ವಿಧಾನಸೌಧದ ಕೊಂಡುಸ್ಕೊಪ್ಪ ದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಅವರು, ಮುಖ್ಯಮಂತ್ರಿಗಳು ಪ್ರತಿಭಟನೆ ಸ್ಥಳಕ್ಕೆ ಬಂದು ರೈತರ ಮನವಿ ಆಲಿಸಲು ಬರಬೇಕು ಎಂದು ಕರೆ ನೀಡಿದರು.

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ, ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು, “ರೈತರ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ” ಎಂದು ಭರವಸೆಯನ್ನು ನೀಡಿದರು.

ಸಚಿವ ಭೈರತಿ ಬಸವರಾಜ ಅವರು, ‘ ಅಧಿವೇಶನದ ಮೊದಲ ದಿನ ಸಂತಾಪ ಸೂಚನೆ ಬಳಿಕ ತುರ್ತು ಕಾರ್ಯಕ್ರಮದ ನಿಮಿತ್ತ ಸಿಎಂ ವಾರಣಾಸಿಗೆ ತೆರಳಿದ್ದಾರೆ. ಅಲ್ಲಿಂದ ವಾಪಸಾದ ಬಳಿಕ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ವಿವಿಧ ಬ್ಯಾಂಕುಗಳಲ್ಲಿ ಖಾಲಿ ಹುದ್ದೆ, ಮಾಹಿತಿ.

0

ಸಾರ್ವಜನಿಕ ವಲಯದ ಬ್ಯಾಂಕ್ ಗಳಲ್ಲಿ 41,177 ಸುದ್ದಿಗಳು ಖಾಲಿ ಇವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಿಳಿಸಿದ್ದಾರೆ.

2021ರ ಡಿಸೆಂಬರ್ ತಿಂಗಳಿನಲ್ಲಿ ಸಾರ್ವಜನಿಕ ವಲಯದ ಬ್ಯಾಂಕ್ ಗಳಲ್ಲಿ ಒಟ್ಟು ಹುದ್ದೆಗಳು 8,05,986 ಮಂಜೂರಾಗಿದೆ. ಇದರಲ್ಲಿ 41,177 ಹುದ್ದೆಗಳು ಖಾಲಿ ಇವೆ.

ಬ್ಯಾಂಕ್ ಗಳ ಪೈಕಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಗರಿಷ್ಠ ಸಂಖ್ಯೆಯಲ್ಲಿ, ಅಂದರೆ 8,544 ಹುದ್ದೆಗಳು ಖಾಲಿ ಇವೆ ಎಂದು ಅಧಿಕೃತ ಅಂಕಿ ಅಂಶಗಳವೆ ಎಂದು ತಿಳಿದುಬಂದದೆ.

ಸಾರ್ವಜನಿಕ ಬ್ಯಾಂಕ್ಗಳಲ್ಲಿ ಹುದ್ದೆಗಳು ಕಾಣುತ್ತಿರುವುದರ ಬಗ್ಗೆ ಹಾಗೂ ಸಿಬ್ಬಂದಿ ಕೊರತೆಯ ಪರಿಣಾಮ ಉಂಟಾಗಿದೆ. ಈ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದೆಯೇ ಎಂಬ ಪ್ರಶ್ನೆಗೆ ಲೋಕಸಭೆಯಲ್ಲಿ ಹಣಕಾಸು ಸಚಿವರು ಉತ್ತರಿಸಿದ್ದಾರೆ.

ಹುದ್ದೆಗಳು ಭರ್ತಿಗೊಳ್ಳ ದಿರುವುದರಿಂದ ಬ್ಯಾಂಕ್ ಗಳಲ್ಲಿ ಅವುಗಳ ಕರ್ತವ್ಯ ಕರ್ತವ್ಯ ನಿರ್ವಹಣೆಗೆ ತೊಂದರೆ ಆಗಿಲ್ಲ ಎಂದು ತಿಳಿಸಿದ ಸಚಿವರು, ಈ ಅಂಕಿ ಅಂಶವನ್ನು ತಿಳಿಸಿದ್ದಾರೆ.

ಸಾರ್ವಜನಿಕ ಬ್ಯಾಂಕ್ ಗಳಲ್ಲಿ ಕಳೆದ ಆರು ವರ್ಷಗಳಲ್ಲಿ ಪಂಜಾಬ್ ಅಂಡ್ ಸಿಂಧ್ ಬ್ಯಾಂಕಿನಲ್ಲಿ ಒಂದನ್ನು ಹೊರತುಪಡಿಸಿ, ಇನ್ಯಾವುದೇ ಹುದ್ದೆಗಳನ್ನು ರದ್ದುಪಡಿಸಿಲ್ಲ.
ಅಗತ್ಯಾನುಸಾರ ಖಾಲಿ ಹುದ್ದೆಗಳನ್ನು ಬರ್ತಿ ಗೊಳಿಸಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಒಟ್ಟು 12 ಸಾರ್ವಜನಿಕ ಬ್ಯಾಂಕ್ ಗಳಿವೆ. ಅಧಿಕಾರಿ, ಕ್ಲರ್ಕ್, ಉಪ ಸಿಬ್ಬಂದಿ ವಿಭಾಗದಲ್ಲಿ ಖಾಲಿಯಾಗಿರುವ ಹುದ್ದೆಗಳು ಇವೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ 6,743, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 6,295 , ಇಂಡಿಯನ್ ಓವರ್ ಸೀಸ್ ಬ್ಯಾಂಕ್ ನಲ್ಲಿ 5,112 ಹಾಗೂ ಬ್ಯಾಂಕ್ ಆಫ್ ಇಂಡಿಯಾದಲ್ಲಿ 4,848 ಹುದ್ದೆಗಳು ಖಾಲಿ ಇವೆ. ಎಸ್ ಬಿಐ ಬ್ಯಾಂಕಿನಲ್ಲಿ 3,423 ಹುದ್ದೆಗಳು ಖಾಲಿ ಇದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಮಹಾ‌ಮೇಳಾವ್ ಯತ್ನ: ಎಂಇಎಸ್ ಪೋಲಿಸ್ ಚಕಮಕಿ.

0

ವಿಧಾನ ಮಂಡಲ ಅಧಿವೇಶನದ ಮೊದಲ ದಿನ, ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡಾಟಿಕೆ ಮೆರೆದು ನಾಡ ದ್ರೋಹದ ವರ್ತನೆ ತೋರಿಸಿದೆ. ಪರವಾನಗಿ ಇಲ್ಲದೇ ಇದ್ದರೂ ವ್ಯಾಕ್ಸಿನ್ ಡಿಪೋ ಬಳಿ ಮಹಾ ಮೇಳಾವ ನಡೆಸಲು ಯತ್ನಿಸಿದ ಎಂ ಇ ಎಸ್ ಕಾರ್ಯಕರ್ತರು ಪೊಲೀಸರೊಂದಿಗೆ ವಾದ ವಿವಾದ ನಡೆಸಿದರು.

ಮಹಾ ಮೇಳಾವದ ವೇದಿಕೆಯನ್ನು ರಸ್ತೆ ಮೇಲೆ ನಿರ್ಮಿಸಿದ್ದರು. ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ವೇದಿಕೆ ತೆರವುಗೊಳಿಸುವಂತೆ ಸೂಚಿಸಿದ್ದಾರೆ. ಆದರೆ, ಎಂಇಎಸ್ ಕಾರ್ಯಕರ್ತರು, ಬಲವಂತವಾಗಿ ವೇದಿಕೆಯಿಂದ ಕೆಳಗಿಳಿಸುವ ಪ್ರಯತ್ನ ನಡೆಯಿತು. ಈ ಸಂದರ್ಭದಲ್ಲಿ ಎಂಇಎಸ್ ಕಾರ್ಯಕರ್ತರು ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ. ಹಠ ಹಿಡಿದು ಕುರ್ಚಿ ಗಳಿಲ್ಲದೇ ವೇದಿಕೆಯ ಮೇಲೆ ಕುಳಿತ ಘೋಷಣೆಯನ್ನು ಕೂಗಿದರು. ಮಹಾನಗರ ಪಾಲಿಕೆ ಸಿಬ್ಬಂದಿಗಳು, ವೇದಿಕೆಯನ್ನು ತೆರವುಗೊಳಿಸಲಾಗಿದೆ ಅಸಹಾಯಕರಾಗಿ ನಿಂತಿದ್ದರು. ಈ ಸಂದರ್ಭದಲ್ಲಿ ಕನ್ನಡಪರ ಸಂಘಟನೆಯ ಕಾರ್ಯಕರ್ತರು, ಎಂಇಎಸ್ ಮುಖಂಡ ದೀಪಕ್ ದಳವಿ ಅವರ ಮುಖಕ್ಕೆ ಕಪ್ಪು ಮಸಿ ಬಳಿದಿದ್ದಾರೆ. ನಂತರ ಮಸಿ ಬಳೆದ ಕನ್ನಡಪರ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಖಾಸಗಿ ವೈದ್ಯಕೀಯ ಸೀಟು: ಹಿಂತಿರುಗಿಸಿದರೆ ದಂಡ ತೆರಬೇಕು

0

ರಾಜ್ಯ ಸರ್ಕಾರ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆಯದೆ ವೈದ್ಯಕೀಯ ಸೀಟುಗಳನ್ನು ಹಿಂತಿರುಗಿಸುವ ವಿದ್ಯಾರ್ಥಿಗಳಿಗೆ ಅಧಿಕ ದಂಡ ವಿಧಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ವಿಧಾನಪರಿಷತ್ತಿನಲ್ಲಿ ಹೇಳಿದ್ದಾರೆ.

“2000-19 20 ಹಾಗೂ 2020-21 ನೇ ಸಾಲಿನಲ್ಲಿ ಮಾಪ್ಅಪ್ ಸುತ್ತಿನ ನಂತರ ಎನ್ ಆರ್ ಐ ಹಾಗೂ ಆಡಳಿತ ಮಂಡಳಿ ಕೋಟಾದಡಿ 1227 ಸೀಟುಗಳು ಉಳಿದಿವೆ ಆದರೆ ಸರ್ಕಾರಿ ಕೋಟಾದಡಿ ಸೀಟುಗಳು ಉಳಿದಿಲ್ಲ” ಎಂದು ತಿಳಿಸಿದರು.

” ರಾಜ್ಯದಲ್ಲಿ ಪ್ರತಿವರ್ಷ 2 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಾರೆ. 89,359 ಮಂದಿ ವಿದ್ಯಾರ್ಥಿಗಳು ಅರ್ಹತೆ ಪಡೆದು 33,651 ಮಂದಿ ಸಂದರ್ಶನ ಎದುರಿಸುತ್ತಾರೆ. ಆದರೆ ಕೇವಲ 8535 ಸರ್ಕಾರಿ ಕೋಟಾದಡಿ ಸೀಟುಗಳು ಲಭ್ಯವಾಗುತ್ತವೆ. ವೈದ್ಯಕೀಯ ಸೀಟುಗಳಿಗೆ ಇಷ್ಟೊಂದು ಬೇಡಿಕೆಯಿರುವಾಗ 2019-20 ಹಾಗೂ 2020-21 ನೇ ಸಾಲಿನಲ್ಲಿ 1227 ವೈದ್ಯಕೀಯ ಸೀಟುಗಳು ಉಳಿದಿದೆ. 3 ಹಂತದ ಕೌನ್ಸೆಲಿಂಗ್ ನಂತರ ಮಾಪ್ಅಪ್ ಸುತ್ತಿನ ಬಳಿಕವೂ ಉಳಿಯುವ ವೈದ್ಯಕೀಯ ಸೀಟುಗಳು ಹಂಚಿಕೆ ಮಾಡಲು ಸರ್ಕಾರ ಮತ್ತೊಂದು ಸುತ್ತಿನ ಕೌನ್ಸಿಲಿಂಗ್ ನಡೆಸಬೇಕು” ಎಂದು ವಿಧಾನ ಪರಿಷತ್ತಿನಲ್ಲಿ ಬಿಜೆಪಿಯ ಎನ್.ರವಿಕುಮಾರ್ ಆಗ್ರಹಿಸಿದರು.

ಸಾರಿಗೆ ಇಲಾಖೆಯಲ್ಲಿ ನಕಲಿ ನೋಂದಣಿ ಜಾಲ ಪತ್ತೆ

0

ರಾಜ್ಯ ಸರ್ಕಾರಕ್ಕೆ ಅಧಿಕ ಆದಾಯವನ್ನು ತಂದುಕೊಡುವಲ್ಲಿ ಸಾರಿಗೆ ಇಲಾಖೆಯು ಒಂದು. ಆದರೆ ಸಾರಿಗೆ ಇಲಾಖೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿರುವುದು ವಿಪರ್ಯಾಸವಾಗಿದೆ.

ಸಾರಿಗೆ ಇಲಾಖೆಯಲ್ಲಿ ಕೆಲ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಸಿಬ್ಬಂದಿಗಳು ಏಜೆಂಟರಿಗೆ ಕೈಜೋಡಿಸಿ ನಕಲಿ ನೋಂದಣಿ ಮಾಡುವ ಮೂಲಕ ಸರಕಾರಕ್ಕೆ ಕೋಟ್ಯಂತರ ರೂಪಾಯಿ ತೆರಿಗೆ ವಂಚಿಸುತ್ತಿರುವುದು ತಿಳಿದುಬಂದಿದೆ.

ತೆರಿಗೆ ಪಾವತಿಸಿ ಕೊಳ್ಳದೆಯೇ ಐಷಾರಾಮಿ ಕಾರುಗಳ ನಕಲಿ ನೋಂದಣಿ ಮಾಡಿ ಕಮಿಷನ್ ದೋಚುತ್ತಿದ್ದಾರೆ.

ಬೇರೊಂದು ಆರ್ ಟಿ ಓ ಕಚೇರಿಯಲ್ಲಿ ನೋಂದಣಿ ಆಗಿರುವ ವಾಹನದ ತೆರಿಗೆ ಪಾವತಿ ಚಲನ್ ಸಂಖ್ಯೆಯನ್ನು ವಾಹನ -1 ಅಂಶದ ಮೂಲಕ ಮತ್ತೊಂದು ವಾಹನಕ್ಕೂ ನಮೂದಿಸಿ ವಂಚಿತರಾಗಿದ್ದಾರೆ. ಅನ್ಯ ರಾಜ್ಯದ ವಾಹನಗಳಿಂದ ತೆರಿಗೆ ಕಾಣಿಸಿಕೊಳ್ಳದೆ ಕರ್ನಾಟಕದಲ್ಲಿ ನೋಂದಣಿ ಮಾಡಲಾಗುತ್ತಿದೆ. ಫ್ಯಾನ್ಸಿ ನಂಬರ್ ಪಡೆದ ಐಷಾರಾಮಿ ವಾಹನಗಳಿಂದ ತೆರಿಗೆ ಕಟ್ಟಿಕೊಳ್ಳದೆ ರಿಜಿಸ್ಟ್ರೇಷನ್ ಮಾಡಿಕೊಡಲಾಗುತ್ತದೆ. ವಾಹನ ಮಾಲೀಕರಿಗೆ ನೀಡಿರುವ ದಾಖಲೆಗಳು ಅಸಲಿ ಯಾಗಿದೆ, ತೆರಿಗೆ ರಸೀದಿಯಷ್ಟೇ ನಕಲಿಯಾಗಿದೆ.

ಈ ಹಗರಣದ ಕುರಿತು ಸಾರಿಗೆ ಇಲಾಖೆ ಎಚ್ಚೆತ್ತುಕೊಂಡು ಆಂತರಿಕ ತನಿಖೆಯನ್ನು ಶುರು ಮಾಡಿದೆ. “ತೆರಿಗೆ ಕಟ್ಟಿಸಿಕೊಳ್ಳಲು ವಾಹನಗಳನ್ನು ನೊಂದಣಿ ಮಾಡಿಕೊಟ್ಟು ಅಕ್ರಮವೇ ಸಿಗುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಕೆಲ ಆರ್ ಟಿ ಓ ಅಧಿಕಾರಿ, ಸಿಬ್ಬಂದಿ ಏಜೆಂಟರ ಜೊತೆ ಶಾಮೀಲಾಗಿ ಈ ಕೃತ್ಯ ಎಸಗಿರುವ ಅನುಮಾನವಿದೆ. ತೆರಿಗೆ ಪಾವತಿಸದೆಯೇ ಹೇಗೆ ವಾಹನಗಳನ್ನು ನೊಂದಣಿ ಮಾಡಿದರು ಎಂಬುದನ್ನು ಪತ್ತೆ ಮಾಡಲಾಗುವುದು. ಎಲ್ಲಾ ಆರ್ ಟಿ ಓ ಕಚೇರಿಗಳಲ್ಲೂ ವಾಹನಗಳ ನೋಂದಣಿ ಮಾಹಿತಿ ಪಡೆದು ಪರಿಶೀಲಿಸಲಾಗುವುದು” ಎಂದು ಸಾರಿಗೆ ಇಲಾಖೆ ಆಯುಕ್ತ ಎನ್.ಶಿವಕುಮಾರ್ ತಿಳಿಸಿದ್ದಾರೆ.

ಓಮಿಕ್ರಾನ್, ರಾಜ್ಯದಲ್ಲಿ ಮತ್ತೊಂದು ಪ್ರಕರಣ

0

ಕೊರೋನಾ ರೂಪಾಂತರ ತಳಿ ಓಮಿಕ್ರಾನ್ ನ ಮತ್ತೊಂದು ಪ್ರಕರಣ ರಾಜ್ಯದಲ್ಲಿ ಪತ್ತೆಯಾಗಿದೆ. ಒಟ್ಟಾರೆ ಪ್ರಕರಣಗಳು ಮೂರಕ್ಕೆ ಏರಿಕೆಯಾಗಿದೆ.

ದಕ್ಷಿಣ ಆಫ್ರಿಕಾದಿಂದ ಕರ್ನಾಟಕಕ್ಕೆ ಬಂದಿದ್ದ 34 ವರ್ಷದ ವ್ಯಕ್ತಿಗೆ ಓಮಿಕ್ರಾನ್ ಸೋಂಕು ದೃಡಪಟ್ಟಿದೆ. ಪ್ರಸ್ತುತ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಈತನೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಐದು ಜನ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ 15 ಮಂದಿಯನ್ನು ಪತ್ತೆ ಮಾಡಲಾಗಿದೆ. ಎಲ್ಲಾ ಸಂಪರ್ಕಿತ ರಿಗೆ ಪರೀಕ್ಷೆ ನಡೆಸಿ, ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಸಾಮಾಜಿಕ ಟ್ವಿಟರ್ ನಲ್ಲಿ ತಿಳಿಸಿದ್ದಾರೆ.

ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದಿದ್ದ ವ್ಯಕ್ತಿಗೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ನಂತರ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ, ವ್ಯಕ್ತಿಯನ್ನು ಬಿಬಿಎಂಪಿಯು ಕ್ವಾರಂಟೈನ್ ಒಳಪಡಿಸಿತ್ತು. ಆತನಲ್ಲಿ ಓಮಿಕ್ರಾನ್ ಸೋಂಕಿನ ಲಕ್ಷಣಗಳು ಕಂಡು ಬಂದಿವೆ. ಹೀಗಾಗಿ ಮತ್ತೆ ಕೋವಿಡ್ ಪರೀಕ್ಷೆ ನಡೆಸಿದ ನಂತರ ಕೊರೋನಾ ಪಾಸಿಟಿವ್ ವರದಿ ಬಂದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾದರಿಯನ್ನು ಜಿನೋಮ್ ಸಿಕ್ವೆನ್ಸಿಂಗ್ ಗೆ ಕಳುಹಿಸಲಾಗಿತ್ತು. ಇದರ ವರದಿಯಲ್ಲಿ ಓಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ದೇಶದಲ್ಲೇ ಮೊದಲ ಬಾರಿಗೆ ಓಮಿಕ್ರಾನ್ ಸೋಂಕಿತ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದ್ದವು. ದಿನದಿಂದ ದಿನಕ್ಕೆ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲರಲ್ಲೂ ಆತಂಕವನ್ನು ಸೃಷ್ಟಿಸಿದೆ. ಕರ್ನಾಟಕದಲ್ಲಿ 3, ಮಹಾರಾಷ್ಟ್ರದಲ್ಲಿ 17, ರಾಜಸ್ಥಾನದಲ್ಲಿ 9, ಗುಜರಾತ್ 3, ಆಂಧ್ರಪ್ರದೇಶ 1, ನವದೆಹಲಿ 2 ಹೀಗೆ ಒಟ್ಟು ದೇಶದಲ್ಲಿ 36 ಪ್ರಕರಣಗಳು ಧೃಡಪಟ್ಟಿದೆ ಎಂದು ವರದಿಯಾಗಿದೆ.

ಗೆಲುವಿನ ನಗೆ ಬೀರಿದ : ಡಿ.ಎಸ್.ಅರುಣ್

0

ಜಿಲ್ಲೆಯಲ್ಲಿ ತೀವ್ರ ಕುತೂಹಲ ಮೂಡಿಸಿದ್ದಂತಹ ವಿಧಾನಪರಿಷತ್ತಿನ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎಸ್.ಅರುಣ್ ಅವರು 2208 ಮತಗಳಿಸುವ ಮೂಲಕ ಗೆಲುವನ್ನು ಸಾಧಿಸಿದ್ದಾರೆ.

ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಭಾರೀ ಪೈಪೋಟಿ ನಡೆದಿತ್ತು. 4156 ಮತಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ಪ್ರಸನ್ನಕುಮಾರ್ ಅವರು 1820 ಮತ ಪಡೆದರೆ, ಬಿಜೆಪಿ ಅಭ್ಯರ್ಥಿ ಡಿ.ಎಸ್.ಅರುಣ್ 2208 ಮತಗಳಿಸಿ ಗೆಲುವು ಪಡೆದಿದ್ದಾರೆ. 4156 ಮತಗಳಲ್ಲಿ ತಿರಸ್ಕೃತ ಮತಗಳ ಸಂಖ್ಯೆ 109 ಆಗಿದೆ.

ಒಟ್ಟಾರೆ ಹೇಳುವುದಾದರೆ ಕಳೆದ ಒಂದು ತಿಂಗಳಿನಿಂದ ಜಿಲ್ಲೆಯಾದ್ಯಂತ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಪರ ಭಾರಿ ಪ್ರಚಾರ ನಡೆದಿತ್ತು. ಡಿಸೆಂಬರ್ 10ರಂದು ವಿಧಾನಪರಿಷತ್ತಿನ ಚುನಾವಣೆ ಎದ್ದಿತ್ತು. ಈ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಮತ್ತೆ ಬಿಜೆಪಿ ಜಯಭೇರಿ ಸಾಧಿಸಿದೆ.

ವಿಜಯ್ ಹಜಾರೆ ಟ್ರೋಫಿ : ಬರೋಡಾ ವಿರುದ್ಧ ಕರ್ನಾಟಕ ಜಯ

0

ವಿಜಯ್ ಹಜಾರೆ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯ 4 ನೇ ಪಂದ್ಯವು ಕರ್ನಾಟಕ ಮತ್ತು ಬರೋಡಾ ತಂಡಗಳ ನಡುವೆ ಪಂದ್ಯ ನಡೆಯಿತು. ಬರೋಡ ತಂಡದ ವಿರುದ್ಧ ಜಯ ಸಾಧಿಸಿದೆ. ಪ್ರಸ್ತುತ ವಿಜಯ್ ಹಜಾರೆ ಟ್ರೋಫಿ ಪಂದ್ಯಾವಳಿಯಲ್ಲಿ
ಕರ್ನಾಟಕ ಸತತ ಮೂರನೇ ಜಯ ಸಾಧಿಸಿದಂತಾಗಿದೆ.
ತಿರುವನಂತಪುರದ ಮಂಗಳಾಪುರ ಕ್ರೀಡಾಂಗಣದಲ್ಲಿ ನಡೆದ “ಬಿ” ಗುಂಪಿನ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಎದುರಾಳಿ ತಂಡಕ್ಕೆ ಮೊದಲು ಬ್ಯಾಟಿಂಗ್ ಆಡಲು ಅವಕಾಶ ಮಾಡಿಕೊಟ್ಟಿತು.
ಮೊದಲಿಗೆ ಬ್ಯಾಟಿಂಗ್ ಮಾಡಿದ ಬರೋಡಾ ತಂಡ 48.3 ಓವರ್ ಗಳಲ್ಲಿ 176 ರನ್ ಗಳಿಸಿತು.ಹೆಚ್ಚು ರನ್ ಗಳಿಸಲು ಕರ್ನಾಟಕದ ಬೌಲರ್ ಗಳು ಬಿಟ್ಟು ಕೊಡಲಿಲ್ಲ.
ಬರೋಡಾ ತಂಡದಲ್ಲಿ ಮೊದಲು ಬ್ಯಾಟಿಂಗ್ ಹಂತದಲ್ಲಿ ಅಂಕಣಕ್ಕೆ ಇಳಿದು ಆಡಿದ ಆರಂಭಿಕ ಜೋಡಿ ಕೇದಾರ್ ದೇವದಾರ್ ಮತ್ತು ಆದಿತ್ಯ ವಾಘಮೊಡೆ 59 ರನ್ ಗಳ ಜೊತೆಯಾಟದ ಮೂಲಕ ಭರವಸೆ ಮೂಡಿಸಿದರು. ಇವರಿಬ್ಬರ ವಿಕೆಟ್ ಕೌಶಿಕ್ ಉರುಳಿಸಿದರು.ಹಿಂದಿನ ಪಂದ್ಯದ ಹೀರೋ ಪ್ರವೀಣ್ ದುಬೆ ಅವರು ಅಭಿಮನ್ಯು ಸಿಂಗ್ ರಜಪೂತ್ ವಿಕೆಟ್ ಪಡೆದರು.ನಂತರ ಕೃಣಲ್ ಪಾಂಡ್ಯ ತಾಳ್ಮೆಯ ಆಟದ ಮೂಲಕ ರನ್ ಸೇರಿಸಿದರು.
ಕೆ. ಸಿ ಕಾರ್ಯಪ್ಪ ಅವರ LBW ಬಲೆಗೆ ಬಿದ್ದ ನಂತರ ತಂಡದ ವಿಕೆಟ್ ಗಳು ಬೇಗನೆ ಉರುಳತೊಡಗಿದವು. 5 ಬ್ಯಾಟರ್ ಗಳು ಎರಡoಕಿ ಮೊತ್ತ ದಾಟಲಾಗದೆ ಮರಳಿದರು.
ನಂತರ ಅಂಕಣಕ್ಕೆ ಇಳಿದ ಭಾನು ಪತ್ಯ ಏಕಾಂಗಿ ಹೋರಾಟದ ಮೂಲಕ ತಂಡದ ಇನ್ನಿಂಗ್ಸ್ ನ 2 ಸಿಕ್ಸರ್ ಗಳು ಅವರ ಬ್ಯಾಟಿಂಗ್ ನಿಂದ ಬಂದವು. ತಂಡವು 176 ರನ್ ಗಳಿಸುವಲ್ಲಿ ಆಸರೆಯಾದರು.
176 ರನ್ ಗಳ ಗೆಲುವಿನ ಗುರಿ ಬೆನ್ನತ್ತಿದ ಕರ್ನಾಟಕ ತಂಡ ಬರೋಡಾ ಇನ್ನಿಂಗ್ಸ್ ಮುಗಿದ ಕೂಡಲೇ ಮಳೆ ಸುರಿದು ಪಂದ್ಯ ಸ್ಥಗಿತಗೊಂಡಿತು. ನಂತರ ಮತ್ತೆ ಆರಂಭ ಗೊಂಡಾಗ 42 ಓವರ್ ಗಳಲ್ಲಿ 147 ರನ್ ಗಳ ಗುರಿಯನ್ನು ನೀಡಲಾಯಿತು.
ಆರಂಭಿಕ ಜೋಡಿ R. ಸಮರ್ಥ್ ಮತ್ತು ರೋಹನ್ ಕದಂ 44 ರನ್ ಸೇರಿಸಿದರು.ಅಷ್ಟರಲ್ಲಿ ರೋಹನ್ ವಿಕೆಟ್ ಕಳೆದುಕೊಂಡರೂ.
ನಂತರ ಸಿದ್ದಾರ್ಥ್ ಆಟ ರಂಗೇರಿತು. 25 ರನ್ ಗಳ ಜೊತೆಯಾಟವಾಡಿ ಸಮರ್ಥ್ ಔಟಾದರೆ, ಕರುಣ್ ನಾಯರ್ ಕೂಡ ರನ್ ಔಟ್ ಆಗಿ ವಾಪಸಾದರು.
ಕ್ರೀಸ್ ನಲ್ಲಿ ಸಿದ್ದಾರ್ಥ್ ಜೊತೆ 5 ನೇ ವಿಕೆಟ್ ಹಂತಕ್ಕೆ ಕೀಪರ್ ಶರತ್ ಜೊತೆಗೂಡಿ 47 ರನ್ ಗಳನ್ನ ತಂಡಕ್ಕೆ ಸೇರಿಸಿದರು.ಒಟ್ಟು 150 ರನ್ ಗಳಿಸುವಂತೆ ಮಾಡಿ 38.4 ಓವರ್ ಗಳಲ್ಲಿ ಜಯ ತಂದರು.