Monday, February 9, 2026
Monday, February 9, 2026
Home Blog Page 1829

ಶಿಕ್ಷೆ ತೀರ್ಪು : ಅಪರಾಧಿಯ ಮನಸ್ಥಿತಿ ಆಧರಿಸಿ ನೀಡಿ

0

ಸುಪ್ರೀಂಕೋರ್ಟ್ ಅಪರಾಧಿಯ ಹಿನ್ನೆಲೆ ಅರಿತು ಶಿಕ್ಷೆ ನೀಡಲು ನ್ಯಾಯಾಲಯಗಳಿಗೆ ಸಲಹೆ ನೀಡಿದೆ. ಅಪರಾಧಿಗಳ ಅಪರಾಧವನ್ನು ಮಾತ್ರವಲ್ಲದೆ, ಅಪರಾಧಿಯ ಮನಸ್ಥಿತಿ ಮತ್ತು ಅವರ ಸಾಮಾಜಿಕ, ಆರ್ಥಿಕ ಸ್ಥಿತಿಗತಿಯನ್ನು ಕೂಡ ಗಣನೆಗೆ ತೆಗೆದುಕೊಳ್ಳುವ ಕೆಲಸವನ್ನು ನ್ಯಾಯಾಲಯಗಳು ಮಾಡಬೇಕು ಎಂದು ಸುಪ್ರೀಂಕೋರ್ಟ್ ತಿಳಿಸಿದೆ.

ನ್ಯಾಯಮೂರ್ತಿ ಎನ್.ನಾಗೇಶ್ವರ ರಾವ್ ನೇತೃತ್ವದ ಪೀಠ ಅಪರಾಧ ಘಟಿಸಿದಾಗ ಅದರ ಹಿಂದೆ ಸುಧಾರಣೆಯ ಸಾಧ್ಯತೆಯೂ ಇರುತ್ತದೆ. ಅಪರಾಧಿ ಸಿಕ್ಕಿಬಿದ್ದಾಗ ಕಠಿಣ ಶಿಕ್ಷೆಯೊಂದೇ ಮಾರ್ಗ ಅಲ್ಲ. ಸುಧಾರಾಣೆ ಮತ್ತು ಪುನರ್ವಸತಿ ಬಗ್ಗೆಯೂ ಯೋಚಿಸಬೇಕು ಎಂದು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತನ್ನ ಇಬ್ಬರು ಸೋದರರು ಮತ್ತು ಸೋದರಳಿಯನನ್ನು ಕೊಲೆಮಾಡಿ ಮರಣದಂಡನೆಗೆ ಗುರಿಯಾಗಿದ್ದ ಅಪರಾಧಿಯ ಶಿಕ್ಷೆಯನ್ನು 30 ವರ್ಷಗಳ ಜೀವಾವಧಿಗೆ ಇಳಿಸಿದ ಸುಪ್ರೀಂಕೋರ್ಟ್ ಈ ಸಲಹೆ ನೀಡಿದೆ.

“ಅಪರಾಧಿಯು ಗ್ರಾಮೀಣ ಭಾಗದ ಬಡತನ ಹಿನ್ನೆಲೆಯಲ್ಲಿ ಬೆಳೆದು ಬಂದ ವ್ಯಕ್ತಿ. ಈ ಘಟನೆಗೂ ಮೊದಲು ಅಂತಹ ಯಾವುದೇ ದುಷ್ಕೃತ್ಯವನ್ನು ಎಸಗಿಲ್ಲ. ಆದ್ದರಿಂದ ಆತನಿಗೆ ಕಠೋರ ಕ್ರಿಮಿನಲ್ ಪಟ್ಟ ಕಟ್ಟುವುದು ಸರಿಯಲ್ಲ” ಎಂದು ನ್ಯಾಯಮೂರ್ತಿ ನಾಗೇಶ್ವರ ರಾವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಗೋಸಂರಕ್ಷಣೆಗೆ 1962 ಕರೆ ಮಾಡಿ

0

ರಾಜ್ಯದಲ್ಲಿ ಗೋಕಳ್ಳರ ಉಪಟಳ ಹೆಚ್ಚಾಗಿದೆ. ಈ ನಡುವೆ ಬಿಜೆಪಿ ಸರ್ಕಾರ ಗೋವುಗಳ ರಕ್ಷಣೆಗೆ ಒಟ್ಟು 275 ಆಂಬುಲೆನ್ಸ್ ವ್ಯವಸ್ಥೆಯನ್ನು ಪ್ರಾರಂಭಿಸಿದೆ.

ಅನಾರೋಗ್ಯ ಪೀಡಿತ ಅಥವಾ ಅಪಘಾತಕ್ಕೆ ಸಿಲುಕಿ ಗಾಯಗೊಂಡ ಗೋವುಗಳಿಗೆ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಪ್ರತಿ ತಾಲೂಕಿಗೊಂದರಂತೆ 275 ಸುಸಜ್ಜಿತ ಪಶು ಸಂಜೀವಿನಿ ಆಂಬುಲೆನ್ಸ್ ಸೇವೆ ನೀಡುತ್ತವೆ ಎಂದು ಪಶುಸಂಗೋಪನೆ ಸಚಿವ ಪ್ರಭು.ಬಿ.ಚವ್ಹಾಣ್ ಹೇಳಿದ್ದಾರೆ.

“ಪಶು ಸಂಜೀವಿನಿ ಆಂಬುಲೆನ್ಸ್ ಗೆ ಟೆಂಡರ್ ಪ್ರಕ್ರಿಯೆ ಮುಗಿದಿದೆ. ರಾಜ್ಯಕ್ಕೆ 275 ಆಂಬುಲೆನ್ಸ್ ನೀಡುತ್ತೇವೆ. ಪಶು ಸಂಜೀವಿನಿ ಆಂಬುಲೆನ್ಸ್ ಗಾಗಿ 1962 ದೂರವಾಣಿ ಸಂಖ್ಯೆಗೆ ಕರೆ ಮಾಡಿದರೆ ಸ್ಥಳಕ್ಕೆ ಬರುತ್ತದೆ” ಎಂದು ಸಚಿವ ತಿಳಿಸಿದ್ದಾರೆ.

ಪ್ರಥಮ ಬಾರಿಗೆ ಪ್ರಾಣಿ ಸಹಾಯವಾಣಿ ಕೇಂದ್ರವನ್ನು ರಾಜ್ಯ ಸರ್ಕಾರ ತೆರೆದಿದೆ. ಪಶುಸಂಗೋಪನಾ ಇಲಾಖೆಗೆ ಸಂಬಂಧಿಸಿದ ಮಾಹಿತಿ, ಇಲಾಖೆ ಅಧಿಕಾರಿಗಳು, ವೈದ್ಯರ ಬಗ್ಗೆ ದೂರು ಸೇರಿದಂತೆ ಹಲವು ಮಾಹಿತಿಯನ್ನು ಕರೆ ಮಾಡಿ ತಿಳಿಸಬಹುದು. ಕಳೆದ 3 ತಿಂಗಳಿನಲ್ಲಿ 30 ಸಾವಿರ ಫೋನ್ ಕರೆಗಳು ಬಂದಿವೆ. ಶೇ.75ರಷ್ಟು ಸಮಸ್ಯೆಗಳಿಗೆ ಸ್ಪಂದಿಸಿದ್ದೇವೆ ಎಂದು ಸಚಿವರು ಹೇಳಿದ್ದಾರೆ.

ಶೀಘ್ರದಲ್ಲೇ, ತಾಲೂಕು ಸಮಿತಿಗಳ ಘೋಷಣೆ

0

‘ಜಿಲ್ಲೆಯನ್ನು ಸಾಹಿತ್ಯಿಕವಾಗಿ ಹಾಗೂ ಸಾಂಸ್ಕೃತಿಕವಾಗಿ ಬೆಳೆಸಲು ಎಲ್ಲರೂ ಮುಂದಾಗಬೇಕು. ಜಿಲ್ಲೆಯಲ್ಲಿ ನಿರಂತರವಾಗಿ ಕನ್ನಡ ಭಾಷೆ ಬೆಳವಣಿಗೆಗೆ ಪೂರಕವಾದ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ನಾಡು-ನುಡಿ ಬೆಳವಣಿಗೆಗಾಗಿ ಶ್ರಮಿಸಬೇಕು. ಶಾಲೆ ಮತ್ತು ಮನೆಯಂಗಳದಲ್ಲಿ ಸಾಹಿತ್ಯ ಪರಿಷತ್ತು ಚಟುವಟಿಕೆ ನಡೆಸೋಣ ಎಂದು ಶಿವಮೊಗ್ಗ ಜಿಲ್ಲಾ ಕಸಾಪ ಅಧ್ಯಕ್ಷ ಡಿ. ಮಂಜುನಾಥ್ ಅವರು ಹೇಳಿದ್ದಾರೆ.

ಶಿಕಾರಿಪುರದ, ಗುರುಭವನದಲ್ಲಿ ನಡೆದ ಅಭಿನಂದನಾ ಸಮಾರಂಭ ಹಾಗೂ ಆಜೀವ ಸದಸ್ಯರ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ತಾಲೂಕು ಮಟ್ಟದಲ್ಲಿ ಸಾಹಿತ್ಯ ಪರಿಷತ್ ಚಟುವಟಿಕೆ ನಡೆಸಲು ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಅಗತ್ಯವಾದ ಸಮಯವನ್ನು ಮೀಸಲಿಡಬೇಕು. ಅಂತವರು ಮಾತ್ರ ನಮ್ಮ ಜೊತೆ ಬರಬೇಕು. ಮುಂದಿನ ದಿನಗಳಲ್ಲಿ ಶಿವಮೊಗ್ಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷರ ಹೆಸರು ಘೋಷಣೆ ಮಾಡಲಾಗುತ್ತದೆ ಎಂದು ಕೂಡ ತಿಳಿಸಿದರು.

ಇದೇ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಹಿರಿಯ ಆಜೀವ ಸದಸ್ಯರಾದ ಎಸ್.ಆರ್. ಕೃಷ್ಣಪ್ಪ, ಕಾನೂರು ನಾಗಪ್ಪ, ಚುರ್ಚಿಗುಂಡಿ ಪ್ರೊ. ಬಸವನಗೌಡ್ರು, ಸರ್ವಮಂಗಳಮ್ಮ, ಶಿರಳಕೊಪ್ಪ ಟಿ. ರಾಜಶೇಖರ್ ಮತ್ತು ನಿಜಲಿಂಗಪ್ಪ ಗೌಡ್ರು ಅವರನ್ನು ಸನ್ಮಾನಿಸಲಾಯಿತು.

ಪಠ್ಯಪುಸ್ತಕ ಕೊರತೆ ನೀಗಿಸಲು ಶೀಘ್ರ ಕ್ರಮ

0

ರಾಜ್ಯ ಸರ್ಕಾರಿ ಶಾಲಾಗಳಿಗೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸಕಾಲದಲ್ಲಿ ಪಠ್ಯಪುಸ್ತಕ ಒದಗಿಸಲು ರಾಜ್ಯ ಸರ್ಕಾರ ವಿಫಲವಾಗಿದೆ. ರಾಜ್ಯಾದ್ಯಂತ ಶಾಲೆಗಳು ಆರಂಭವಾಗಿ ಅರ್ಧ ವರ್ಷ ಕಳೆದಿದೆ. ಆದರೆ ಲಕ್ಷಾಂತರ ವಿದ್ಯಾರ್ಥಿಗಳ ಕೈಗೆ ಇನ್ನೂ ಪಠ್ಯಪುಸ್ತಕ ಸಿಕ್ಕಿಲ್ಲ.

ಕೋವಿಡ್ ಲಾಕ್ ಡೌನ್ ವೇಳೆ ಅನೇಕ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಯಿಂದ ಸರ್ಕಾರಿ ಶಾಲೆಗಳಿಗೆ ದಾಖಲಿಸಿದರು. ಈ ವರ್ಷ ಸುಮಾರು 2.40 ಲಕ್ಷಕ್ಕಿಂತ ಅಧಿಕ ಮಕ್ಕಳು ಸರ್ಕಾರಿ ಶಾಲೆಗಳಿಗೆ ಸೇರಿದ್ದಾರೆ.

ಶಾಲಾ ಮಕ್ಕಳಿಗೆ ಮಾತ್ರವಲ್ಲದೇ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೂ ಪಠ್ಯಪುಸ್ತಕದ ಕೊರತೆ ಎದುರಾಗಿದೆ. ಈ ಸಮಸ್ಯೆಗೆ ವಿದ್ಯಾರ್ಥಿಗಳ ದಾಖಲಾತಿಯನ್ನು ಸರಿಯಾಗಿ ಪಠ್ಯಪುಸ್ತಕಗಳ ಮುದ್ರಣಕ್ಕೆ ಕಾರ್ಯಾದೇಶ ನೀಡಲು ಅಧಿಕಾರಿಗಳು ಮುಂದಾಗದೆ ಇರುವುದು ಮೂಲ ಕಾರಣವಾಗಿದೆ.

“ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳ ಕೊರತೆ ಎದುರಾಗಿರುವುದು ನನ್ನ ಗಮನಕ್ಕೆ ಬಂದಿಲ್ಲ ಶಿಕ್ಷಣಕ್ಕಾಗಿ ಎಲ್ಲಾ ವಿದ್ಯಾರ್ಥಿಗಳಿಗೂ ಪಠ್ಯಪುಸ್ತಕಗಳು ಅಗತ್ಯವಾಗಿ ಬೇಕು. ಈ ಸಂಬಂಧ ಅಧಿಕಾರಿಗಳಿಂದ ಮಾಹಿತಿ ಪಡೆದು ಸೂಕ್ತ ಕ್ರಮಕೈಗೊಳ್ಳಲಾಗುವುದು” ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್ ತಿಳಿಸಿದ್ದಾರೆ.

ಬೇಡಿಕೆ ಈಡೇರದಿದ್ದರೆ, ದೆಹಲಿ ಮಾದರಿ ಹೋರಾಟ

0

ಬೆಳಗಾವಿಯ, ಕಣಬರ್ಗಿ ಯ ಸಂಕಲ್ಪ ಗಾರ್ಡನ್ ನಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ‘ರೈತ ಅಧಿವೇಶನ’ವನ್ನು ಏರ್ಪಡಿಸಲಾಗಿತ್ತು. ವಿಧಾನಮಂಡಲದ ಚಳಿಗಾಲ ಅಧಿವೇಶನಕ್ಕೆ ಪೂರ್ವಭಾವಿಯಾಗಿ ಈ ಕಾರ್ಯಕ್ರಮವನ್ನು ನಡೆಸಲಾಯಿತು.

ಭೂ ಸುಧಾರಣೆ, ಎಪಿಎಂಸಿ ಹಾಗೂ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ ಗಳನ್ನ ರಾಜ್ಯ ಸರ್ಕಾರವು 2020ರಲ್ಲಿ ಜಾರಿಗೊಳಿಸಿದೆ. ರೈತ ವಿರೋಧಿ ತಿದ್ದುಪಡಿಗಳನ್ನು ಇಲ್ಲಿನ ಸುವರ್ಣವಿಧಾನಸೌಧದಲ್ಲಿ ಡಿ. 13ರಿಂದ ನಡೆಯಲಿರುವ ವಿಧಾನ ಮಂಡಲ ಚಳಿಗಾಲದ ಅಧಿವೇಶನದಲ್ಲಿ ರದ್ದುಗೊಳಿಸಬೇಕು ಎಂದು ರೈತರ ಅಧಿವೇಶನದಲ್ಲಿ ಹಕ್ಕೊತ್ತಾಯವನ್ನು ಮಂಡಿಸಿತು.

ಕೇಂದ್ರ ಸರ್ಕಾರವು ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದಿರುವುದನ್ನು ಪಡೆದಿರುವುದನ್ನು ಇಲ್ಲಿ ಸಂಭ್ರಮಿಸಲಾಯಿತು. ಬಂದವರಿಗೆಲ್ಲ ಬೆಳಗಾಂ ಹೆಸರುವಾಸಿ ಸಿಹಿ ಕುಂದಾ ಹಂಚಲಾಯಿತು. ಕೇಂದ್ರದಂತೆ ರಾಜ್ಯ ಸರ್ಕಾರವೂ ಕಾಯ್ದೆಗಳನ್ನು ಕೂಡಲೇ ಹಿಂಪಡೆಯದಿದ್ದರೆ, ದೆಹಲಿಯ ಗಡಿಗಳಲ್ಲಿ ನಡೆದ ಮಾದರಿಯಲ್ಲೇ ರಾಜ್ಯದಲ್ಲೂ ಅನಿರ್ಧಿಷ್ಠಾವಧಿ ಹೋರಾಟ ನಡೆಸಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದರು.

“ಸಂಘರ್ಷ ಮಾಡುವುದರಲ್ಲಿ ನಾವು ಪ್ರವೀಣರು. ಸಮಾಜದ ಒಳಿತಿಗಾಗಿ ಅಗ್ನಿ ಆಹುತಿಗೆ ಸಿದ್ಧವಾಗಿದ್ದೇವೆ. ಪ್ರಧಾನಮಂತ್ರಿ-ಮುಖ್ಯಮಂತ್ರಿ ಅವರ ಕಾರುಗಳಿಗೆ ಮುತ್ತಿಗೆಯನ್ನು ಹಾಕುತ್ತೇವೆ. ನಮ್ಮ ಇನ್ನೊಂದು ಆಯಾಮದ ಹೋರಾಟವೇ ಈ ರೈತ ಅಧಿವೇಶನ ಎಂದು ಹೇಳಲಾಗಿದೆ.

ದೇಶದಲ್ಲಿ ಸರ್ವಾಧಿಕಾರ ಹಾಗೂ ಪ್ರಜಾಪ್ರಭುತ್ವಗಳ ನಡುವೆ ಹೋರಾಟ ನಡೆಯುತ್ತಿದೆ. ಸರ್ವಾಧಿಕಾರಿಯ ನಡೆ ವಿರುದ್ಧ ದಿಟ್ಟ ಹೆಜ್ಜೆಗಳನ್ನು ಇಟ್ಟಿರುವುದರಿಂದ ನಮ್ಮ ದೇಶದಲ್ಲಿನ್ನೂ ಪ್ರಜಾಪ್ರಭುತ್ವ ಉಳಿದಿದೆ, ಉಳಿಸಿಕೊಳ್ಳುತ್ತೇವೆ ಎಂಬ ಸಂದೇಶವನ್ನು ರವಾನಿಸಿದರು. ನಾವಿಲ್ಲಿ ಮಂಡಿಸಿರುವ ಹಕ್ಕೊತ್ತಾಯಗಳ ಬಗ್ಗೆ ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ ಚರ್ಚಿಸಬೇಕು” ಎಂದು ಒತ್ತಾಯಿಸಿದರು.

ನಮ್ಮ ಅಧಿವೇಶನದ ನಿರ್ಣಯಗಳನ್ನು ವಿಧಾನಸಭಾಧ್ಯಕ್ಷರು ಹಾಗೂ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕರಿಗೆ ಸಲ್ಲಿಸಲಾಗುವುದು. ಆ ಕಾರ್ಯಸೂಚಿ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಬೇಕು. ಸರ್ಕಾರದ ನಡೆಯು ನಮಗೆ ಪೂರಕವಾಗಿಲ್ಲದಿದ್ದರೆ ಸಂಘರ್ಷಕ್ಕೆ ಇಳಿಯಬೇಕಾಗುತ್ತದೆ. ಸರ್ಕಾರ ಕಿತ್ತೊಗೆಯಲು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ಸಂದೇಶವನ್ನು ನೀಡಲಾಯಿತು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಬೂಸ್ಟರ್ ಡೋಸ್ ನಿಂದ, ಓಮಿಕ್ರಾನ್ ವಿರುದ್ಧ ರಕ್ಷಣೆ ಸಾಧ್ಯ

0

ಕೊರೋನಾ ಸಾಂಕ್ರಾಮಿಕ ರೋಗದ ವಿರುದ್ಧ ದ ಲಸಿಕೆಯ ಬೂಸ್ಟರ್ ಡೋಸ್ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಲಿದೆ. ಓಮಿಕ್ರಾನ್ ಸೋಂಕು ಪರಿಣಾಮದ ವಿರುದ್ಧ ರಕ್ಷಣೆ ನೀಡಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಕೊರೋನಾ ರೂಪಾಂತರ ತಳಿಯ ಪರಿಣಾಮದ ತಡೆಗೆ ಬೂಸ್ಟರ್ ಸುಲಭವಾದ ಮಾರ್ಗ ಎಂದು ಪ್ರತಿಪಾದಿಸಿದ್ದಾರೆ.

ಬ್ರಿಟನ್ ನ ಆರೋಗ್ಯ ಭದ್ರತಾ ಸಂಸ್ಥೆಯು , ‘ಕೋವಿಶೀಲ್ಡ್ ಲಸಿಕೆಯ ಬೂಸ್ಟರ್ ಡೋಸ್ ಓಮಿಕ್ರಾನ್ ಸೋಂಕಿನ ವಿರುದ್ಧ ಪರಿಣಾಮಕಾರಿಯಾಗಿದೆ. ಇದು ಓಮಿಕ್ರಾನ್ ನಿಂದ ಶೇ.70ರಷ್ಟು ರಕ್ಷಣೆ ನೀಡಲಿದೆ. ಕೋವಿಡ್ ನ ಯಾವುದೇ ಲಸಿಕೆಯ ಬೂಸ್ಟರ್ ಡೋಸ್ ನಿಂದ ನಿರೋಧಕ ಶಕ್ತಿ ಹೆಚ್ಚಿಸಲಿದೆ’ ಎಂದು ಹೇಳಿದೆ.

” ಬೂಸ್ಟರ್ ಡೋಸ್ ಅಗತ್ಯ. ಗಂಭೀರ ರೋಗದ ವಿರುದ್ಧ, 2 ಡೋಸ್ ಲಸಿಕೆಯು ಎಷ್ಟರ ಮಟ್ಟಿಗೆ ರಕ್ಷಣೆ ನೀಡುತ್ತದೆಯೋ, ತಿಳಿದಿಲ್ಲ ಎಂದು ಸೂಕ್ಷ್ಮ ರೋಗಾಣು ಡಾ. ಶಾಹಿದ್ ಜಮೀಲ್ ಅವರು ತಿಳಿಸಿದರು.

ಭಾರತದಲ್ಲಿ ಹೆಚ್ಚಿನವರು ಕೋವಿಶೀಲ್ಡ್ ಲಸಿಕೆ ಪಡೆದಿದ್ದಾರೆ. ಈಗ ಒಂದು ಡೋಸ್ ಪಡೆದಿರುವವರು ಎರಡನೇಯ ಡೋಸ್ ಲಸಿಕೆಯನ್ನು 8ರಿಂದ 12 ವಾರಗಳ ಬದಲು, 12ರಿಂದ 16 ವಾರದ ಅಂತರದಲ್ಲಿ ಪಡೆಯಬೇಕು ಎಂದು ಸಲಹೆ ನೀಡಿದರು.

ಓಮಿಕ್ರಾನ್ ಸೋಂಕನ್ನು ಕೋವ್ಯಾಕ್ಸಿನ್ ಹಾಗೂ ಕೋವಿ ಶೀಲ್ಡ್ ಲಸಿಕೆಯು ಎಷ್ಟರಮಟ್ಟಿಗೆ ನಿಸ್ತೇಜ ಗೊಳಿಸಲಿದೆ ಎಂಬ ಬಗ್ಗೆ ಅಧ್ಯಯನ ನಡೆಯಬೇಕು. ಬೂಸ್ಟರ್ ಲಸಿಕೆ ನೀಡುವ ಕುರಿತು ನೀತಿ ರೂಪಿಸಬೇಕು. ಯಾರು ಲಸಿಕೆ ಪಡೆಯಬೇಕು, ಯಾವಾಗ ಪಡೆಯಬೇಕು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ದೊರೆಯಬೇಕು. ಹದಿಹರೆಯದವರೂ ಒಳಗೊಂಡಂತೆ ಮಕ್ಕಳಿಗೆ ಲಸಿಕೆ ನೀಡಲು ಶೀಘ್ರ ಚಾಲನೆ ನೀಡಬೇಕು ಎಂದು ಡಾ.ಶಾಹಿದ್ ಜಮೀರ್ ಅವರು ತಿಳಿಸಿದರು.

ಬೂಸ್ಟರ್ ಡೋಸ್ ಆಗಿ ಕೋವ್ಯಾಕ್ಸಿನ್, ಕೋವಿಶೀಲ್ಡ್, ಎಸ್ ಐಐ ಸಂಸ್ಥೆಯ ಕೊವೊವ್ಯಾಕ್ಸ್, ಬಯೋಲಾಜಿಕಲ್ ಇ ಸಂಸ್ಥೆಯ ಕೋರ್ಬೇವ್ ಎಎಕ್ಸ್- ಇ ಲಸಿಕೆಗಳನ್ನು ಪರಿಗಣಿಸಬಹುದು ಎಂದು ಕೂಡ ತಿಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಕನ್ನಡಕ್ಕೆ ಅನುದಾನ ತಾರತಮ್ಯ ಬೇಡ

0

ಕನ್ನಡ ಭಾಷೆಗೆ ಶಾಸ್ತ್ರೀಯ ಭಾಷೆ ಸ್ಥಾನಮಾನ ನೀಡಿದರೂ ಸಹ ಕನ್ನಡ ಭಾಷೆ ಅಭಿವೃದ್ಧಿಗೆ ಕೇಂದ್ರ ಸರ್ಕಾರ ನೀಡುತ್ತಿರುವ ಅನುದಾನ ಹೆಚ್ಚಿಸಬೇಕು ಎಂದು ಎಲ್ಲೆಡೆ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಮೈಸೂರಿನ ಭಾಷಾ ಸಂಸ್ಥಾನಕ್ಕೆ ಯಾವುದೇ ರೀತಿಯ ಮಂಜೂರಾತಿ ನೀಡುತ್ತಿಲ್ಲ. ವರ್ಷಕ್ಕೆ ಕೇವಲ 1 ಕೋಟಿ ರೂ. ಮಾತ್ರ ಅನುದಾನ ನೀಡಲಾಗುತ್ತಿದೆ. ಕೇಂದ್ರ ನೀಡಿರುವ ಅನುದಾನದ ಹಣ ಸಿಬ್ಬಂದಿಯ ವೇತನಕ್ಕಷ್ಟೇ ಮೀಸಲಾಗಿದೆ.

“ಸಂಸತ್ತಿನಲ್ಲಿ ಎರಡು ಪಕ್ಷದ ನಾಯಕರು ಪಕ್ಷಬೇಧವನ್ನು ಮರೆತು ಕನ್ನಡ ಭಾಷೆಗಾಗಿ ಸಂಸತ್ತಿನಲ್ಲಿ ಒಕ್ಕೊರಲಿನಿಂದ ಧ್ವನಿ ಎತ್ತಬೇಕು. ಕಾಂಗ್ರೆಸ್ ನ ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಅವರ ದಾರಿಯನ್ನು ಉಳಿದವರು ಅನುಸರಿಸಬೇಕು. ಕನ್ನಡ ಸಂಘಟನೆಗಳು ಕೂಡ ಧ್ವನಿ ಎತ್ತಬೇಕು” ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಕಾರ್ಯದರ್ಶಿಯಾಗಿದ್ದ ಕೆ. ರಾಜಕುಮಾರ್ ಆಗ್ರಹಿಸಿದ್ದಾರೆ.

“ಎಲ್ಲಾ ಶಾಸ್ತ್ರೀಯ ಭಾಷೆಗಳಿಗೂ ಸಮಾನ ಸ್ಥಾನಮಾನ ನೀಡುವ ಬದಲು ಕೇಂದ್ರ ಸರ್ಕಾರ ತಾರತಮ್ಯ ನೀಡುತ್ತಿದೆ” ಎಂದು ಕರ್ನಾಟಕದ ರಾಜ್ಯಸಭಾ ಸದಸ್ಯರು ಜಿ.ಸಿ. ಚಂದ್ರಶೇಖರ್ ಸಂಸತ್ತಿನಲ್ಲಿ ಕನ್ನಡ ಪರ ಧ್ವನಿ ಎತ್ತಿದ್ದಾರೆ.

“ಮೂರು ವರ್ಷಗಳ ಅಂಕಿ-ಅಂಶ ನೋಡಿದರೆ ಕೇವಲ 28 ಸಾವಿರ ಜನರು ಮಾತನಾಡುವ ಸಂಸ್ಕೃತ ಭಾಷೆಗೆ 634 ಕೋಟಿ ‌ರೂ. ಅನುದಾನವನ್ನು ನೀಡಲಾಗಿದೆ.7 ಕೋಟಿ ಮಂದಿ ಮಾತನಾಡುವ ಕನ್ನಡಕ್ಕೆ ಸಿಕ್ಕಿರುವುದು ಕೇವಲ 7 ಕೋಟಿ ರೂ. ಎಂಬುದನ್ನು ಉಲ್ಲೇಖಿಸಿದ್ದಾರೆ. ಸಂಸ್ಕೃತಕ್ಕೆ ಇಷ್ಟು ಮೊತ್ತ ಕೊಟ್ಟಿರುವುದಕ್ಕೆ ಆಕ್ಷೇಪವಿಲ್ಲ. ಆದರೆ 32 ಕೋಟಿ ಜನರು ಮಾತನಾಡುವ ಉಳಿದ ಐದು ಭಾಷೆಗಳಾದ ಕನ್ನಡ, ತಮಿಳು, ತೆಲುಗು, ಮಲಯಾಳಂ, ಒಡಿಯಾ ಭಾಷೆಗಳಿಗೆ ಕೇವಲ 29 ಕೋಟಿ ರೂ. ಕೊಟ್ಟಿರುವುದು ಸರಿಯಲ್ಲ” ಎಂದು ರಾಜ್ಯಸಭೆಯಲ್ಲಿ ಜಿ.ಸಿ.ಚಂದ್ರಶೇಖರ್ ತಿಳಿಸಿದ್ದಾರೆ.

ಮಾನವ ಕಳ್ಳಸಾಗಣೆ ನಿಲ್ಲಬೇಕು

0

ಮಾನವ ಕಳ್ಳ ಸಾಗಾಣಿಕೆಯನ್ನ ತಡೆಯುವಲ್ಲಿ ಅಮೆರಿಕಾ ಮಧ್ಯಸ್ಥಿಕೆ ವಹಿಸಬೇಕಾಗಿದೆ. ಇತ್ತೀಚೆಗೆ ಮೆಕ್ಸಿಕೋದಲ್ಲಿ ಜರುಗಿದ ವಾಹನ ಅಪಘಾತದಲ್ಲಿ 12ಕ್ಕೂ ಅಧಿಕ ಮಂದಿ ಮೃತರಾಗಿದ್ದಾರೆ ಎಂದು ವರದಿಯಾಗಿದೆ.

ಮುಚ್ಚಿದ ಜಂಟಿ ವಾಹನಗಳಲ್ಲಿ ಮಾನವರನ್ನು ಕಳ್ಳಸಾಗಾಣೆ ಮಾಡಿ ಅಮೆರಿಕ ಗಡಿಗೆ ತಲುಪಿಸುತ್ತಿದ್ದರು. ಅಂತಹ ಜಂಟಿ ವಾಹನ ಮಗುಚಿಬಿದ್ದು ಜನರ ಪ್ರಾಣಕ್ಕೆ ಹಾನಿ ಮಾಡಿದೆ.

ಮೃತರ ಸಂಖ್ಯೆ ಮತ್ತು ಹೆಚ್ಚಿದ್ದು ಕೊನೆಪಕ್ಷ 56 ಮಂದಿ ಗ್ವಾಟೆಮಾಲದಿಂದ ವಲಸೆ ಬಂದವರೆಂದು ತಿಳಿದುಬಂದಿದೆ. ಅಮೆರಿಕ ರಾಯಬಾರಿ ಸಂಸ್ಥೆಯ ಹೇಳಿಕೆ ಪ್ರಕಾರ ಈ ಘಟನೆಗೆ ಹೊಣೆಗಾರರಾದವರನ್ನ ಪತ್ತೆ ಹಚ್ಚಿ ಕಾನೂನು ಕ್ರಮ ಜರುಗಿಸಲಾಗುವುದು. ಈ ಕುರಿತು ಮೆಕ್ಸಿಕೋ, ಗ್ವಾಟೆಮಾಲ , ಈಕ್ವಿಡಾರ್, ಹೊಂಡುರಾಸ್, ನಿಕಾರುಗುವ ದೇಶಗಳು ಇದಕ್ಕೆ ಬೆಂಬಲ ನೀಡಿವೆ.

ಸಾವಿರಾರು ಜನ ಬಡತನ ಹಾಗೂ ಹಿಂಸೆ ಅನುಭವಿಸಿ ಮೆಕ್ಸಿಕೋ ಮುಖಾಂತರ ಅಮೆರಿಕ ಗಡಿಯನ್ನು ತಲುಪುತ್ತಿದ್ದಾರೆ. ಅಲ್ಲದೇ ಸಾಗಾಣಿಕೆ ಟ್ರಕ್ ಗಳಲ್ಲಿ ಉಸಿರುಗಟ್ಟಿಸುವಂತೆ ಅವರನ್ನ ತುಂಬಿಕೊಂಡು ಸಾಗಿಸಲಾಗುತ್ತಿದೆ.

ಇಂತಹ ಅಪಾಯಕಾರಿ ಜೀವ ಘಾತಕ ಸಾಗಣೆಯಿಂದ ಮನುಷ್ಯರನ್ನು ಬಿಡುಗಡೆಗೊಳಿಸಬೇಕಿದೆ. ಅಮೆರಿಕವು ಗ್ವಾಟೆಮಾಲಾ ದಂತಹ ದೇಶಗಳಲ್ಲಿ ಬಂಡವಾಳ ತೊಡಗಿಸಿ, ಅಭಿವೃದ್ಧಿಪರ ಯೋಜನೆಗಳನ್ನು ಹಮ್ಮಿಕೊಂಡರೆ ಈ ಸಮಸ್ಯೆಗೆ ಪರಿಹಾರ ಸಿಗುತ್ತದೆ ಎಂದು ಹೇಳಲಾಗಿದೆ.

ಬೆಳಗಾವಿ ಅಧಿವೇಶನ : ಸರ್ಕಾರಕ್ಕೆ ಅಗ್ನಿಪರೀಕ್ಷೆ

0

ಬೆಳಗಾವಿಯಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ. ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲಿರುವ ವಿರೋಧ ಪಕ್ಷದ ನಾಯಕರು.

ಇಂದಿನಿಂದ ಆರಂಭವಾಗಿರುವ ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮತಾಂತರ ನಿಷೇಧ ವಿಧೇಯಕ ಮಂಡಿಸಲು ಮುಂದಾಗಿದೆ. ಈ ಬಗ್ಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ.

ಕಳೆದೆರಡು ವರ್ಷದಿಂದ ಕೋವಿಡ್ ಲಾಕ್ಡೌನ್ ನಿಂದಾಗಿ ಬೆಳಗಾವಿ ಸುವರ್ಣಸೌಧದಲ್ಲಿ ಅಧಿವೇಶನ ನಡೆದಿರಲಿಲ್ಲ. ಈ ಬಾರಿ ಕೋವಿಡ್-19, ಡೆಲ್ಟಾ ಮತ್ತು ಓಮಿಕ್ರಾನ್ ವೈರಸ್ ಹೆಚ್ಚಳದ ನಡುವೆಯೂ ಸರ್ಕಾರ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಅಧಿವೇಶನ ನಡೆಸಲು ನಿರ್ಧರಿಸಿದೆ.

ಈ ಬಾರಿ ಅಧಿವೇಶನದಲ್ಲಿ ವಿರೋಧಪಕ್ಷಗಳು ಸರ್ಕಾರದ ವಿರುದ್ಧ ಬಿಟ್ ಕಾಯಿನ್ ಪ್ರಕರಣ, 40 ಪರ್ಸೆಂಟೇಜ್ ಆರೋಪ, ಮಳೆ ಹಾನಿ, ಕೋವಿಡ್ ಪರಿಹಾರ ಕೊರತೆ, ನೀರಾವರಿ ಯೋಜನೆಗಳು ಮತ್ತು ರಸ್ತೆ ಮೂಲಸೌಕರ್ಯ ಸಮಸ್ಯೆಗಳ ಕುರಿತು ಪಂಚಾಸ್ತ್ರ ಪ್ರಯೋಗಿಸಲು ಸಿದ್ಧವಾಗಿವೆ.

“ಜನಪರ ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತೇವೆ. ಇದರಲ್ಲಿ ಯಾವುದೇ ಮುಲಾಜಿನ ಪ್ರಶ್ನೆ ಇಲ್ಲ ” ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರು ತಿಳಿಸಿದ್ದಾರೆ.

ಈ ಬಾರಿಯ ಅಧಿವೇಶನದಲ್ಲಿ “ಅಭಿವೃದ್ಧಿ ಪರವಾಗಿ ಅರ್ಥಪೂರ್ಣವಾಗಿ ಚರ್ಚೆಯಾಗಬೇಕೆಂದು ಸರ್ಕಾರದ ಆಶಯವಾಗಿದೆ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಕೃಷಿಉತ್ಪನ್ನಕ್ಕೆ ಸೂಕ್ತ ಮಾರುಕಟ್ಟೆ ಬೇಕು

0

ರೈತ ಬೆಳೆದ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ಸಿಗಬೇಕು. ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆ ಗಳಿಗಿಂತ ಕಡಿಮೆ ದರದಲ್ಲಿ ಖರೀದಿ ಮಾಡುವವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಕೃಷಿ ಬೆಲೆ ಆಯೋಗ ಮಾಜಿ ಅಧ್ಯಕ್ಷ ಡಾ. ಟಿ.ಎನ್. ಪ್ರಕಾಶ್ ಕಮ್ಮರಡಿ ಅವರು ಆಗ್ರಹಿಸಿದರು.

ಕೋವಿಡ್ ಸಂದರ್ಭದಲ್ಲಿ ರೈತರು ಅನುಭವಿಸಿದ ಸಮಸ್ಯೆಗಳ ಕುರಿತು ನಾವು ಸಮೀಕ್ಷೆ ನಡೆಸಿದ್ದೇವೆ. 1500 ರೈತರು ಅಭಿಪ್ರಾಯವನ್ನು ಆಧರಿಸಿ, 108 ಪುಟಗಳ ಸಮಗ್ರ ವಿವರ ಒಳಗೊಂಡ ಸಮೀಕ್ಷಾ ವರದಿಯನ್ನು 2021ರಲ್ಲಿ ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಇದರಲ್ಲಿ ಪ್ರಸ್ತಾಪಿಸಿದ ಅಂಶಗಳನ್ನು ಗಣನೆಗೆ ತೆಗೆದುಕೊಂಡು ರೈತರ ಸಬಲೀಕರಣಕ್ಕಾಗಿ ಸರ್ಕಾರ ಕ್ರಮ ಕೈಗೊಳ್ಳಬೇಕು. ಯಾವುದೇ ಉತ್ಪನ್ನಕ್ಕೆ ನಿಗದಿಪಡಿಸುವ ಬೆಂಬಲ ಬೆಲೆಗೆ ಕಾನೂನಿನ ಸ್ವರೂಪ ನೀಡಬೇಕು. ಕೃಷಿಕರಿಗೆ ವಿವಿಧ ಸೌಲಭ್ಯ ಒದಗಿಸುವ ಇಲಾಖೆಗಳನ್ನು ಜಾಗೃತಗೊಳಿಸಬೇಕು ಎಂದು ಡಾ. ಟಿ. ಎನ್. ಪ್ರಕಾಶ್ ಕಮ್ಮರಡಿ ಅವರು ಒತ್ತಾಯಿಸಿದರು.

ಮೊದಲ ಲಾಕ್ ಡೌನ್ ನಲ್ಲಿ ರೈತರ ಬೆಳೆಗಳು ಸಂಪೂರ್ಣ ಮಾರಾಟವಾಗಿಲ್ಲ. ಸಾಮಾನ್ಯ ದಿನ ದಿನಗಳಿಗಿಂತ ಕಡಿಮೆ ದರ ದೊರೆತಿದೆ. ಶೇ.70 ರಷ್ಟು ರೈತರು ಸಮೀಕ್ಷೆಯಲ್ಲಿ ತಿಳಿಸಿದ್ದಾರೆ. ಉಳಿದ ವಲಯಗಳಿಗೆ ಹೋಲಿಸಿದರೆ ಕೃಷಿ ವಲಯದ ಬಗ್ಗೆ ಸರ್ಕಾರ ಹೆಚ್ಚಿನ ಗಮನ ಹರಿಸಿಲ್ಲ ಎಂಬುವುದು ಶೇ.54ರಷ್ಟು ರೈತರ ಅಭಿಪ್ರಾಯವಾಗಿದೆ. ಗೋಬಿ ಪರಿಸ್ಥಿತಿ ಸರಿಯಾಗಿ ನಿಭಾಯಿಸಿಲ್ಲ ಎಂದು ಶೇ.55 ರೈತರು ತಿಳಿಸಿದ್ದಾರೆ. ಕೃಷಿಗೆ ಅಗತ್ಯವಿರುವ ಸಾಲ ಸೌಲಭ್ಯ ಮತ್ತು ವಿಮೆ ಸೌಲಭ್ಯ ಸಿಕ್ಕಿಲ್ಲ ಎಂದು ಹಲವಾರು ರೈತರು ಅಭಿಪ್ರಾಯಪಟ್ಟಿದ್ದಾರೆ ಎಂದು ಕರ್ನಾಟಕ ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಡಾ. ಟಿ.ಎನ್. ಪ್ರಕಾಶ್ ಕಮ್ಮರಡಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.