MESCOM ಶಿವಮೊಗ್ಗ ನಗರದ ಮಾಚೇನಹಳ್ಳಿಯ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂ.ಸಿ.ಎಫ್-17 ಮತ್ತು ಎಂ.ಸಿ.ಎಫ್-18 ರ ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆ.04 ರಂದು ಬೆಳಿಗ್ಗೆ 10.00 ರಿಂದ ಸಂಜೆ 6.00 ರವರೆಗೆ ಹೊನ್ನವಿಲೆ, ನವುಲೆಬಸವಾಪುರ, ಅಮರಾವತಿಕ್ಯಾಂಪ್, ಹಳೆ ಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಪದ್ಮೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Life Insurance Corporation of India ಎಲ್ ಐ ಸಿ 69 ನೇ ವಿಮಾ ಸಪ್ತಾಹ: ಶಿವಮೊಗ್ಗ ಕಛೇರಿಯಲ್ಲಿ ನಿಗಮದ ಧ್ವಜಾರೋಹಣ
Life Insurance Corporation of India ಭಾರತೀಯ ಜೀವ ವಿಮಾ ನಿಗಮದ 69ನೇ ವಿಮಾ ಸಪ್ತಾಹವನ್ನು ಶಿವಮೊಗ್ಗದಲ್ಲಿ ಸ್ಥಳೀಯ ವಿಭಾಗಾಧಿಕಾರಿ ಶ್ರೀ ಶ್ರೀನಿವಾಸರವರು ನಿಗಮದ ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾರುಕಟ್ಟೆ ವ್ಯವಸ್ಥಾಪಕ ಸುಜೀತ್ ಕುಮಾರ್, ವಿಕ್ರಯ ವ್ಯವಸ್ಥಾಪಕ ಯೋಗೆಂದ್ರ, ಮಾಲತೇಶ್ ಕುಲಕರ್ಣಿ, ಜಾನಕಿ, ರುಕ್ಮಿಣಿ, ಹರೀಶ್, ರವಿ, ನಿರಂಜನ್ ಹಾಗೂ ಎಲ್ಲಾ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.
Madhu Bangarappa ಜಿಲ್ಲೆಯಲ್ಲಿ ಮಳೆಹಾನಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ- ಮಧು ಬಂಗಾರಪ್ಪ
Madhu Bangarappa ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ನಿರಂತರವಾಗಿ ಸುರಿದ ಬಾರೀ ಮಳೆಯಿಂದಾಗಿ ಸುಮಾರು 45000ಹೆಕ್ಟೇರ್ಪ್ರದೇಶ ಅಡಿಕೆಬೆಳೆ ಕೊಳೆರೋಗಕ್ಕೆ ತುತ್ತಾಗಿದೆ ಅಲ್ಲದೇ ಸಹಸ್ರಾರು ಹೆಕ್ಟೇರ್ಪ್ರದೇಶದಲ್ಲಿ ಬೆಳೆದ ಮೆಕ್ಕೆಜೋಳ ಬೆಳೆಯು ಹಾನಿಗೊಳಗಾಗಿದ್ದು, ಬೆಳೆನಷ್ಟದ ಪ್ರಮಾಣವನ್ನು ತ್ವರಿತವಾಗಿ ಒದಗಿಸುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಬೆಳೆಹಾನಿಯ ಪ್ರಮಾಣ ಮತ್ತಷ್ಟು ಹೆಚ್ಚುವ ಸಂಭವವಿರುವ ಬಗ್ಗೆಯೂ ಮಾಹಿತಿ ಇದೆ. ಈಗಾಗಲೇ ಆಗಿರುವ ಬೆಳೆನಷ್ಟಕ್ಕೆ ಸಂಬಂಧಿಸಿದಂತೆ ಪರಿಹಾರ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. ಅಡಿಕೆ ಕೊಳೆರೋಗ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ವಿಜ್ಞಾನಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ ಅಲ್ಲದೇ ಸಂಭಾವ್ಯ ಬೆಳೆಹಾನಿಯನ್ನು ತಡೆಗಟ್ಟಲು ಇರುವ ಕ್ರಮಗಳ ಬಗ್ಗೆಯೂ ಮಾಹಿತಿ ಒದಗಿಸುವಂತೆ ಸೂಚಿಸಲಾಗಿದೆ ಎಂದರು.
ಬೆಳೆಹಾನಿಗೊಳಗಾಗಿರುವ ರೈತರಿಗೆ ಸಮಾಧಾನ ತರುವ ರೀತಿಯಲ್ಲಿ ಕೇಂದ್ರ ಸರ್ಕಾರವು ಪರಿಹಾರದ ಮೊತ್ತ ಘೋಷಿಸಬೇಕು. ಈಗಾಗಲೇ ಘೋಷಿಸಿರುವ ಮೊತ್ತ ಅತ್ಯಲ್ಪವಾಗಿದೆ. ಪರಿಹಾರಧನ ವಿತರಿಸುವ ವಿಷಯದಲ್ಲಿ ತಾರತಮ್ಯ ಧೋರಣೆ ಸರಿಯಲ್ಲ ಎಂದ ಅವರು, ತೆಂಗು ಅಭಿವೃಧ್ಧಿ ಮಂಡಳಿಯ ಶಾಖೆಯನ್ನು ಜಿಲ್ಲೆಯಲ್ಲಿ ಆರಂಭಿಸುವ ಬಗ್ಗೆಯೂ ಉದ್ದೇಶಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಮಳೆಹಾನಿಗೊಳಗಾಗಿರುವ ನಗರ ಮತ್ತು ಪಟ್ಟಣ ಪ್ರದೇಶಗಳ ರಸ್ತೆಯನ್ನು ದುರಸ್ತಿಗೊಳಿಸಲು ಉದ್ದೇಶಿಸಲಾಗಿದೆ. ಪ್ರಗತಿಪಥ ಯೋಜನೆಯಡಿಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕನಿಷ್ಟ 50ಕಿ.ಮೀ. ಮುಖ್ಯರಸ್ತೆಯನ್ನು ಅಭಿವೃದ್ಧಿಪಡಿಸಲು ಸುಮಾರು 50ಕೋಟಿ ರೂ.ಗಳ ಅನುದಾನ ಸರ್ಕಾರವು ಬಿಡುಗಡೆ ಮಾಡಲಿದೆ. ಅಲ್ಲದೇ ಜಿಲ್ಲೆಯ ಮಲೆನಾಡು ಪ್ರದೇಶದ ವ್ಯಾಪ್ತಿಗೊಳಪಡುವುದರಿಂದ ಹೆಚ್ಚು ಪ್ರಮಾಣದ ರಸ್ತೆಗಳು ಹಾಳಾಗಿದ್ದು, ದುರಸ್ತಿಗೆ ಹೆಚ್ಚಿನ ಅನುದಾನ ಬಿಡುಗಡೆಗೊಳಿಸುವಂತೆ ಮಾನ್ಯಮುಖ್ಯಮಂತ್ರಿಗಳಲ್ಲಿ ಕೋರಲಾಗಿದ್ದು, ಮಾನ್ಯ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ ತಿಳಿಸಿದರು.
Madhu Bangarappa ರಾಜ್ಯದಲ್ಲಿ ನೂತನವಾಗಿ ಆರಂಭಿಸಲು ಉದ್ದೇಶಿಸಲಾಗಿದ್ದ ಕರ್ನಾಟಕ ಪಬ್ಲಿಕ್ಸ್ಕೂಲ್ಗಳ ಸಂಖ್ಯೆಯನ್ನು 500ರಿಂದ 800ಕ್ಕೆ ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ. ವಿಶೇಷವಾಗಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ಹೆಚ್ಚಿನ ಸಂಖ್ಯೆಯ ಶಾಲೆಗಳನ್ನು ತೆರೆಯುವ ಉದ್ದೇಶ ಹೊಂದಲಾಗಿದೆ. ಅದಕ್ಕಾಗಿ ಸರ್ಕಾರ ಈಗಾಗಲೇ 3000ಕೋ.ರೂ.ಗಳನ್ನು ವೆಚ್ಚ ಮಾಡಲಿದೆ. ಅಲ್ಲದೇ ಅಂತಹ ಆಯ್ದ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಸರ್ಕಾರೇತರ ಸಂಸ್ಥೆಗಳಿಂದ ಆರ್ಥಿಕ ನೆರವನ್ನು ಪಡೆದುಕೊಳ್ಳಲಾಗುವುದು. ಈಗಾಗಲೇ ಅನೇಕ ಸರ್ಕಾರೇತರ ಸಂಸ್ಥೆಗಳು ಆಸಕ್ತಿ ತೋರಿವೆ ಎಂದವರು ನುಡಿದರು.
ರಸ್ತೆ, ಕಟ್ಟಡ, ನೀರಾವರಿ ಸೇರಿದಂತೆ ಹಲವು ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸರ್ಕಾರದ ವತಿಯಿಂದ ಸಹಸ್ರಾರು ಕೋಟಿ ರೂ.ಗಳ ಮಂಜೂರು ಮಾಡಲಾಗಿದ್ದು, ಆ ಎಲ್ಲಾ ಕಾಮಗಾರಿಗಳ ಉದ್ಘಾಟನೆಗೆ ಮಾನ್ಯ ಮುಖ್ಯಮಂತ್ರಿಗಳನ್ನು ಶೀಘ್ರವೇ ಆಹ್ವಾನಿಸಲು ಉದ್ದೇಶಿಸಲಾಗಿದೆ ಎಂದರು.
ಶಿಕ್ಷಣ ಇಲಾಖೆಯಲ್ಲಿ ಶಿಕ್ಷಣದ ಕೊರತೆಯನ್ನು ಹೋಗಲಾಡಿಸಿ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ಅಡ್ಡಿಯಾಗದಂತೆ ತಕ್ಷಣದ ಕ್ರಮವಾಗಿ 13000ಶಿಕ್ಷಕರನ್ನು ನಿಯೋಜಿಸಲಾಗಿದೆ. ಅಲ್ಲದೇ ಶೀಘ್ರದಲ್ಲಿ 18500ಶಿಕ್ಷಕರ ನೇಮಕಾತಿಗೂ ಕ್ರಮಕೈಗೊಳ್ಳಲಾಗಿದೆ ಎಂದ ಅವರು, ಸರ್ವರಲ್ಲೂ ಸಮಾನತೆ ಕಾಣುವ ಹಿನ್ನೆಲೆಯಲ್ಲಿ ಕೈಗೊಳ್ಳಲಿರುವ ಜಾತಿಗಣತಿಯನ್ನು ಅಕ್ಟೋಬರ್ ಮಾಸಾಂತ್ಯದೊಳಗೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಮಕ್ಕಳ ಕಲಿಕೆಗೆ ಅಡಚಣೆಯಾಗದಂತೆ ಶಿಕ್ಷಕರ ಸೇವೆಯನ್ನು ಬಳಸಿಕೊಳ್ಳಲಾಗುವುದು ಎಂದರು.
ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ನೆರೆಯ 26ತಾಲೂಕುಗಳ ವ್ಯಾಪ್ತಿಯ ಜನರು ಚಿಕಿತ್ಸೆಗಾಗಿ ಆಗಮಿಸುತ್ತಿರುವುದನ್ನು ಗಮನಿಸಲಾಗಿದೆ. ಮುಂದಿನ 10-15ದಿನಗಳಲ್ಲಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ, ಸೂಪರ್ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗುವುದು. ಅಲ್ಲದೇ ಕೊರತೆ ಇರುವ ಕೊಠಡಿಗಳ ನಿರ್ಮಾಣಕ್ಕೆ ಅಗತ್ಯ ಅನುದಾನ ಬಿಡುಗಡೆಗೊಳಿಸುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಕೋರಿಕೆ ಸಲ್ಲಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ಬಲ್ಕೀಸ್ಬಾನು, ಆರ್.ಪ್ರಸನ್ನಕುಮಾರ್, ಶ್ರೀನಿವಾಸಕರಿಯಣ್ಣ, ಕಲಗೋಡು ರತ್ನಾಕರ, ಕಲೀಂವುಲ್ಲಾ, ದೇವಿಕುಮಾರ್, ರಮೇಶ್, ಶೇಷಾದ್ರಿ, ರಮೇಶ್ಹೆಗ್ಡೆ, ಶರತ್ಮರಿಯಪ್ಪ ಮತ್ತಿತರರು ಉಪಸ್ಥಿತರಿದ್ದರು.
Backward Classes Welfare Department ಭದ್ರಾವತಿ ಆನವೇರಿಯ ಮೊರಾರ್ಜಿ ದೇಸಾಯಿ ವಸತಿ ಪಿಯು ಕಾಲೇಜಿಗೆ ಪಿಸಿಎಂಬಿ/ಪಿಸಿಎಂಸಿ ವಿಭಾಗಕ್ಕೆ ಅರ್ಜಿ ಆಹ್ವಾನ. ಹಿಂದುಳಿದ ಇಲಾಖೆ ಪ್ರಕಟಣೆ.
Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ ಶೈಕ್ಷಣಿಕ ಸಾಲಿಗೆ ಭದ್ರಾವತಿ ತಾಲ್ಲೂಕಿನ ಆನವೇರಿಯ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಪಿ.ಸಿ.ಎಂ.ಬಿ ಮತ್ತು ಪಿ.ಸಿ.ಎಂ.ಸಿ ಕೋರ್ಸ್ಗಳಲ್ಲಿ ಲಭ್ಯವಿರುವ 80 ಸೀಟುಗಳಿಗೆ ಅರ್ಜಿ ಆಹ್ವಾನಿಸಿದೆ.
ಆಸಕ್ತ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ/ಹಿಂದುಳಿದ ವರ್ಗದ ವಿದ್ಯಾರ್ಥಿಗಳು 2 ಭಾವಚಿತ್ರ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಎಸ್.ಟಿ.ಎಸ್. ನಂಬರ್, ಆಧಾರ್ ಕಾರ್ಡ್, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಕಲು ಪ್ರತಿ ಹಾಗೂ ಪೋಷಕರ ಅಥವಾ ಹಿಂದಿನ ಶಾಲೆಯ ಮುಖ್ಯೋಪಾಧ್ಯಾಯರ ಮೊಬೈಲ್ ಸಂಖ್ಯೆ, ವಿಶೇಷ ಪ್ರಮಾಣ ಪತ್ರವನ್ನು ಅರ್ಜಿಯೊಂದಿಗೆ ಲಗತ್ತಿಸಿ ಸೆ. Backward Classes Welfare Department 12 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ ಕೆ.ಆರ್. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.9535636963 ಗೆ ಸಂಪರ್ಕಿಸುವುದು.
JCI Shivamogga ಸ್ವಚ್ಛ ಪರಿಸರ ನಿರ್ಮಿಸುವಲ್ಲಿ ಎಲ್ಲರ ಸಹಕಾರ ಮುಖ್ಯ-ನರಸಿಂಹಮೂರ್ತಿ
JCI Shivamogga ಪರಿಸರ ಸಂರಕ್ಷಣೆ ಹಾಗೂ ನಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದು ಜೆಸಿಐ ಸಮೃದ್ಧಿ ಘಟಕದ ಅಧ್ಯಕ್ಷ ನರಸಿಂಹಮೂರ್ತಿ ಹೇಳಿದರು.
ಜೆಸಿಐ ಸಮೃದ್ಧಿ ಘಟಕದಿಂದ ಆಯೋಜಿಸಿದ್ದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಾತನಾಡಿ, ಜೆಸಿಐ ಸಂಸ್ಥೆ ನಿರಂತರವಾಗಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಆರೋಗ್ಯ, ಶಿಕ್ಷಣ, ಪರಿಸರ ಕುರಿತ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುತ್ತಿದೆ. ಸ್ವಚ್ಚ ಪರಿಸರ ನಿರ್ಮಾಣ ಮಾಡುವಲ್ಲಿ ಎಲ್ಲರ ಸಹಕಾರ ಮುಖ್ಯ ಎಂದು ತಿಳಿಸಿದರು.
ಜೆಸಿಐ ಸಮೃದ್ಧಿ ಘಟಕದ ಎಲ್ಲ ಪದಾಧಿಕಾರಿಗಳು ತುಂಗಾ ನದಿ ದಡದ ಭೀಮೇಶ್ವರ ದೇವಸ್ಥಾನದ ಬಳಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಪ್ರದೇಶದಲ್ಲಿ ಪ್ರತಿನಿತ್ಯ ನೂರಾರು ಜನರು ಬಂದು ಹೋಗುವುದರಿಂದ ಜತೆಗೆ ಮಳೆ ಜಾಸ್ತಿ ಆಗಿರುವುದರಿಂದ ನದಿಯ ದಡದ ಸುತ್ತಮುತ್ತ ಗಿಡಗಳು, ಹುಲ್ಲುಗಳು ಬೆಳೆದಿರುವುದು ಮತ್ತು ಪೇಪರ್ ಪ್ಲಾಸ್ಟಿಕ್, ಕಸ, ಕೆಸರು ತುಂಬಿಕೊಂಡಿತ್ತು. ಇದನ್ನು ಸಮೃದ್ಧಿ ಘಟಕದ ಪದಾಧಿಕಾರಿಗಳು ಸ್ವಚ್ಛಗೊಳಿಸಿದರು.
JCI Shivamogga ಜೆಸಿಐ ಸಮೃದ್ಧಿ ಘಟಕದ ಕಾರ್ಯದರ್ಶಿ ಗಾಯತ್ರಿ ಯಲ್ಲಪ್ಪಗೌಡ, ಅಶ್ವಿನಿ, ಕವಿತಾ, ನರಸಮ್ಮ, ಶಶಿಕಲಾ, ಸರಳಾ ವಾಸನ್, ಅನಿತಾ ಸಿರಿಲ್, ಮೀನಾ, ಮಾಲಾ, ಮಂಜುಳಾ, ಅನ್ನಪೂರ್ಣ, ಪುಷ್ಪ, ಶಾಂತಮ್ಮ, ದೀಕ್ಷಿತ್, ಕಿಶನ್, ಮತ್ತು ಬಿ.ಎಂ ಯಲ್ಲಪ್ಪಗೌಡ ಮುಂತಾದವರು ಹಾಜರಿದ್ದರು.
Klive Special Article ನಿಮ್ಮೂರಿನ ಇತಿಹಾಸ ನಿಮಗೆಷ್ಟು ಗೊತ್ತು? ವಿವರಣೆ: ದಿಲೀಪ್ ನಾಡಿಗ್. ಶಿವಮೊಗ್ಗ
ಭಾಗ. 4. Klive Special Article ಕೆಳದಿ ಮಹಾಯೋಧ ದೊಡ್ಡ ಸಂಕಣ್ಣನಾಯಕರು ತಾನುಟ್ಟಿದ್ದ ಖಾವಿಯೊಳಗೆ ಬೆಚ್ಚಗೆ ಮಲಗಿದ್ದ ನಾಗಮುರಿ ಖಡ್ಗದೊಂದಿಗೆ ದಕ್ಷಿಣ ಭಾರತದ ತೀರ್ಥ ಯಾತ್ರೆ ಕೈಗೊಂಡು ಮೊದಲು ಶ್ರೀ ರಾಮೇಶ್ವರನನ್ನ ದರ್ಶಿಸಿ ಶಿವಗಂಗೆ, ಕಂಚಿ, ಕುಂಭಕೋಣ, ಚಿದಂಬರಂ, ಶ್ರೀಮುಷ್ಣ, ಮನ್ನಾರ, ಪುದುಗಲ, ಮುಂತಾದ ಶೈವ ಪುಣ್ಯಕ್ಷೇತ್ರ ಸಂದರ್ಶಿಸಿ, ಶೈವದೇವರುಗಳ ಸಾನಿಧ್ಯದಲ್ಲಿ ಸೇವೆ ಮತ್ತು ಸಮುದ್ರ ದರ್ಶನ ಮಾಡಿ ಉತ್ತರಾಭಿಮುಖವಾಗಿ ಪ್ರಯಾಣ ಬೆಳೆಸಿ ವಿಜಯವಾಡ, ಗೋಲ್ಕೊಂಡ, ಅಹ್ಮದ್ ನಗರ, ಮೂಲಕ ದಿಲ್ಲಿಗೆ ಬಂದನು. ದೊಡ್ಡ ಸಂಕಣ್ಣನಾಯಕನ ನಿಜವಾದ ಯೋಧನ ತಾಕತ್ತು ಇಲ್ಲಿಯೇ ಪ್ರದರ್ಶವಾಗುತ್ತದೆ. ದಿಲ್ಲಿನಗರದ ವೈಭವವನ್ನು, ಸೊಬಗನ್ನು, ಭವ್ಯ ಕಟ್ಟಡಗಳನ್ನು ಕಣ್ಣಾರೆ ಕಂಡ ದೊಡ್ಡಸಂಕಣ್ಣನಾಯಕ ರಿಗೆ ದೆಹಲಿ ಬಾದಷಹನ ಅರಮನೆಯ ಬಳಿ ಬಂದಾಗ ಒಂದು ವಿಶೇಷ ದೃಶ್ಯ ಕಂಡರು, ಅರಮನೆಯ ಬಾಗಿಲಿಗೆ ಬಿರುದು ಸಮೇತ ಕಟ್ಟಿದ್ದ ಕತ್ತಿಯೊಂದು ತೂಗಾಡುತಿತ್ತು, ಅದರ ವಿಚಾರ ಕೇಳಲಾಗಿ ಬಾದಷಹನ ಅರಮನೆಯಲ್ಲಿ ಅಂಕುಶಖಾನನೆಂಬ ಜಟ್ಟಿಯೊಬ್ಬನಿದ್ದಾನೆ, ಅವನು ಒಂಟಿ ಕತ್ತಿಕಾಳಗದಲ್ಲಿ ಪ್ರಸಿದ್ದನಾಗಿದ್ದು ಅವನೊಂದಿಗೆ ಸೆಣಸುವವರು ಈ ಕತ್ತಿಯನ್ನು ಬಿಚ್ಚಿ ತನ್ನೊಡನೆ ಕಾಳಗಕ್ಕೆ ಬರಬೇಕೆಂದು ಸೂಚಿಸಿರುವುದಾಗಿಯೂ ತಿಳಿಸಿದರು, ಇತ್ತ ಬಾದಷಹ ಇವನನ್ನ ಎದುರಿಸುವ ಜಟ್ಟಿಗಳಾರೂ ಇಡೀ ಭಾರತದಲ್ಲೇ ಇಲ್ಲವೆಂದು ಚಿಂತಿಸುವ ಸಮಯದಲ್ಲೇ ಮಲ್ಲರಿಗೇ ಜಗದೇಕಮಲ್ಲರಾದ ಮಲ್ಲಸಾಮ್ರಾಜ್ಯದ ದೊಡ್ಡಸಂಕಣ್ಣನಾಯಕರ ಪ್ರವೇಶವಾಗಿತ್ತು. ಈ ವಿಚಾರ ತಿಳಿದ ಸಂಕಣ್ಣ ನಾಯಕರು ಕತ್ತಿಯನ್ನು ಬಿಚ್ಚಿ ಅಂಕುಶಖಾನನು ಪರಾಕ್ರಮಿಯಾಗಿದ್ದರೆ ನನ್ನನ್ನು ಎದುರಿಸಲೆಂದನು. ದೊಡ್ಡಸಂಕಣ್ಣನಾಯಕ ರ ವಿಷಯ ತಿಳಿದ ದೆಹಲಿ ಬಾದಷಹ ಸಂಭ್ರಮದಿಂದ ಅವನನ್ನು ಬರಮಾಡಿಕೊಂಡು ಕತ್ತಿ ಕಾಳಗ ಏರ್ಪಡಿಸಿದನಲ್ಲದೆ ತನ್ನ ಶಸ್ತ್ರಾಗಾರದಿಂದ ನಾನಾ ತರಹದ ಖಡ್ಗವನ್ನು ತರಿಸಿ ಬೇಕಾದುದನ್ನು ಆರಿಸಿಕೊಳ್ಳುವಂತೆ ಮಲ್ಲರಿಗೆ ಮಲ್ಲನಾದ ಸಂಕಣ್ಣನಾಯಕರಿಗೆ ತಿಳಿಸಿದನು.

Klive Special Article ಅವುಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ಸಂಕಣ್ಣನಾಯಕರು ನಗುತ್ತ ನನಗೆ ಈ ಯಾವ ಆಯುಧವೂ ಬೇಕಿಲ್ಲವೆಂದು ನನ್ನ ಬಳಿಯೇ ಖಡ್ಗವಿದೆಯೆಂದು ಹೇಳಿ ಕಾಳಗಕ್ಕೆ ಇಳಿದನು. ಈ ಅಪೂರ್ವ ಕಾಳಗವನ್ನು ವೀಕ್ಷಿಸಲು ಸಾವಿರಾರು ಜನರು, ನೂರಾರು ಜಟ್ಟಿಗಳು ಸೇರಿದರು. ಆದರೆ ಖಾವಿಯೊಳಗೆ ಬೆಚ್ಚಗೆ ಮಲಗಿದ್ದ ನಾಗಮುರಿ ರಕ್ತಕ್ಕಾಗಿ ತಹತಹಿಸುತ್ತಾ ಮಲಗಿತ್ತು. ಮಲ್ಲರಿಗೆ ಮಲ್ಲರಾದ ಮಲ್ಲಸಾಮ್ರಾಜ್ಯದ ದೊಡ್ಡಸಂಕಣ್ಣನಾಯಕರು ಇಡೀ ಭಾರತವೇ ಮೆಚ್ಚಿ ಕೊಂಡಾಡುವಂತಹ ಸಾಹಸಕ್ಕೆ ಕೈ ಹಾಕಿದ್ದರು. ಮುಂದುವರೆಯುವುದು. ದಿಲೀಪ್ ನಾಡಿಗ್, 6361124316.
Ramakrishna College ಬಾಲಕಿಯರ ಕಬಡ್ಡಿ ಕ್ರೀಡೆಯಲ್ಲಿ ಪ್ರಥಮ ಸ್ಥಾನ ಪಡೆದ ರಾಮಕೃಷ್ಣ ವಿದ್ಯಾಸಂಸ್ಥೆಯ ಮಕ್ಕಳು
Ramakrishna College ಶಿವಮೊಗ್ಗ ನಗರದ ನೆಹರೂ ಕ್ರೀಡಾಂಗಣದಲ್ಲಿ ನಡೆದ, ಪ್ರಾಥಮಿಕ ಬಾಲಕ ಬಾಲಕಿಯರ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಬಾಲಕಿಯರ ವಿಭಾಗದ ಕಬ್ಬಡಿ ಆಟದಲ್ಲಿ ಮಕ್ಕಳು ಪ್ರಥಮ ಸ್ಥಾನ ಪಡೆದಿರುತ್ತಾರೆ.
ಇನ್ಪಾಂಟ್ ಜೀಸಸ್ ಶಾಲೆಯ ಮುಖ್ಯ ಶಿಕ್ಷಕರು ಮೆಡಲ್ ಹಾಗೂ ಟ್ರೋಫಿ ವಿತರಿಸಿದರು.
ರಾಮಕೃಷ್ಣ ವಿದ್ಯಾಸಂಸ್ಥೆ ಯ ಕಾರ್ಯದರ್ಶಿ ಶೋಭಾ ವೆಂಕಟರಮಣ ಸಾಧಕ ಮಕ್ಕಳನ್ನು, ಶಿಕ್ಷಕರನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ರಾಮಕೃಷ್ಣ ಶಾಲೆಯ ಮುಖ್ಯ ಶಿಕ್ಷಕ ರಮೇಶ್, ಮುಖ್ಯ ಶಿಕ್ಷಕಿ ಅಶ್ವಿನಿ, ದೈಹಿಕ ಶಿಕ್ಷಕ ರಾಘವೇಂದ್ರ ಹಾಗೂ ಇತರರಿದ್ದರು.
Kote Sri Marikamba Temple ಇಂದು ಶ್ರೀ ವಿದ್ಯಾ ಗಣಪತಿ ಸಂಗೀತ ಸಭಾದಲ್ಲಿ ನಿವೇದಿತಾ ವಿಕಾಸ್ ಹಾಡುಗಾರಿಕೆ
Kote Sri Marikamba Temple ಶಿವಮೊಗ್ಗ ನಗರದ ಕೋಟೆ ಶ್ರೀ ಮಾರಿಕಾಂಬಾ ದೇವಸ್ಥಾನದ ಸಮೀಪ ಶ್ರೀ ವಿದ್ಯಾಗಣಪತಿ ಸಂಗೀತ ಸಭಾದಲ್ಲಿ ಸೆ.3ರಂದು ಸಂಜೆ 5.30ಕ್ಕೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಯುವ ಗಾಯಕಿ ನಿವೇದಿತಾ ವಿಕಾಸ್ ಸಂಗೀತ ಕಾರ್ಯಕ್ರಮ ನಡೆಸಿಕೊಡುವರು.
ಉಸ್ತಾದ್ ಹುಮಾಯೂನ್ ಹರ್ಲಾಪುರ, ವಿದ್ವಾನ್ ವಿನಾಯಕ್ ಭಟ್ ಸಹಕಾರ ನೀಡುವರು. ನಿವೇದಿತಾ ವಿಕಾಸ್ ಅವರು ಹುಮಾಯೂನ್ ಹರ್ಲಾಪುರ ಅವರ ಶಿಷ್ಯೆ. ರಾಜ್ಯದ ವಿವಿಧೆಡೆಗಳಲ್ಲಿ ನಡೆದಿರುವ ಕಾರ್ಯಕ್ರಮಗಳಲ್ಲಿ ಸಂಗೀತ ಸೇವೆ ಸಲ್ಲಿಸಿದ್ದಾರೆ.
Kote Sri Marikamba Temple ಕರ್ನಾಟಕ ಸಂಗೀತವನ್ನು ಅಭ್ಯಾಸ ಮಾಡಿದ್ದಾರೆ. ಶಿವಮೊಗ್ಗದ ರಾಜಶೇಖರ್ ಮತ್ತು ವಿಶಾಲಾಕ್ಷಿ ದಂಪತಿ ಪುತ್ರಿ. ನಿವೇದಿತಾ ಅವರು ಪತಿ ವಿಕಾಸ್ ಅವರೊಂದಿಗೆ ಮಂತ್ರ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ನಡೆಸುತ್ತಿದ್ದಾರೆ.
Puttaraja Gawai ಶ್ರೀವೀರೇಶ್ವರ ಪುಣ್ಯಾಶ್ರಮದಲ್ಲಿ ವಿಶೇಷ ಪೂಜೆಯೊಂದಿಗೆ ಗಣಪತಿ ವಿಸರ್ಜನೆ
Puttaraja Gawai ಸಾಗರ ರಸ್ತೆಯ ಪುಟ್ಟರಾಜ ಗವಾಯಿಗಳ ಸಂಗೀತ ಮಹಾ ವಿದ್ಯಾಲಯ ಪುಣ್ಯಾಶ್ರಮದಲ್ಲಿ 5 ದಿನಗಳ ಕಾಲ ವಿಶೇಷ ಪೂಜೆಗಳೊಂದಿಗೆ ಪ್ರತಿಷ್ಠಾಪಿಸಿದ್ದ ಸಿದ್ಧಿ ವಿನಾಯಕ ವಿಸರ್ಜನೆಯನ್ನು ನಿನ್ನೆ ಆಶ್ರಮದ ಮಕ್ಕಳೊಂದಿಗೆ ವಿಜೃಂಭಣೆಯಿಂದ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಆಶ್ರಮದ ಪ್ರಮುಖರು ಹಾಜರಿದ್ದರು.
Rotary Club Shivamogga ಶಿವಮೊಗ್ಗ ಸೆಂಟ್ರಲ್ ರೋಟರಿ ಸಂಸ್ಥೆಗೆ ಸಾರ್ವಜನಿಕ ಸೇವಾ ವಿಭಾಗದಲ್ಲಿ ದ್ವಿತೀಯ ಸ್ಥಾನ
Rotary Club Shivamogga ಉಡುಪಿ ಜಿಲ್ಲೆಯ ಸಾಸ್ತಾನದಲ್ಲಿ ಏರ್ಪಡಿಸಿದ್ದ 2024-25ನೇ ಸಾಲಿನ ರೋಟರಿ ಜಿಲ್ಲಾ ಪ್ರಶಸ್ತಿ ಪ್ರದಾನ ಸಮಾರಂಭ ಕಲ್ಯಾಣ ಸಂಗಮದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಸಂಸ್ಥೆ ಸಾರ್ವಜನಿಕ ಸೇವೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ವಿವಿಧ ವಿಭಾಗಗಳಲ್ಲಿ 27 ಪ್ರಶಸ್ತಿಗಳನ್ನು ನೀಡಿ 24-25ನೇ ಸಾಲಿನ ಅಧ್ಯಕ್ಷ ಕಿರಣ್ ಕುಮಾರ್ ಜಿ ಅವರನ್ನು ಗೌರವಿಸಲಾಯಿತು. 24-25ನೇ ಸಾಲಿನ ಕ್ಲಬ್ ಎಕ್ಸಲೆನ್ಸಿ ಅವಾರ್ಡ್ ನೀಡಲಾಯಿತು.
Rotary Club Shivamogga ರೋಟರಿ ಜಿಲ್ಲೆಯಲ್ಲಿ ಮಹಿಳಾ ಸದಸ್ಯರನ್ನು ಕ್ಲಬ್ಗೆ ಸದಸ್ಯರಾಗಿ ಸೇರ್ಪಡೆ ಮಾಡಿದ್ದಕ್ಕೆ ಜಿಲ್ಲೆಯಲ್ಲಿ ಮೂರನೇ ಸ್ಥಾನ ಲಭಿಸಿದೆ.
ಕಾರ್ಯಕ್ರಮದಲಿ 24-25 ಸಾಲಿನ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಕಾರ್ಯದರ್ಶಿ ಈಶ್ವರ್.ಬಿ.ವಿ., ಸುರೇಶ.ಎಚ್.ಎಂ, ಮಾಜಿ ಸಹಾಯಕ ಗವರ್ನರ್ ರವಿ ಕೋಟಜಿ, ಜಿಲ್ಲಾ ಮಾಜಿ ಗವರ್ನರ್ ಜಿ.ಎನ್.ಪ್ರಕಾಶ್, ಆನ್ಸ್ ಕಬ್ ಅಧ್ಯಕ್ಷೆ ಗೀತಾ ಜಗದೀಶ್, ಕಾರ್ಯದರ್ಶಿ ಶುಭಾ ಚಿದಾನಂದ್, 2025-26ನೇ ಸಾಲಿನ ಅಧ್ಯಕ್ಷ ಬಸವರಾಜ್ ಬಿ ಮತ್ತು ಕಾರ್ಯದರ್ಶಿ ಜಯಶೀಲ್ ಶೆಟ್ಟಿ ಮತ್ತು ಸೆಂಟ್ರಲ್ ಕ್ಲಬ್ನ್ 25 ಜನ ಸದಸ್ಯರು ಭಾಗವಹಿಸಿದ್ದರು.
