Monday, February 9, 2026
Monday, February 9, 2026
Home Blog Page 1830

ಪ್ರಧಾನಿ ಟ್ವಿಟ್ಟರ್ ಖಾತೆ ಹ್ಯಾಕ್: ಮತ್ತೆ ಸುಸ್ಥಿತಿ

0

ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶದಲ್ಲಿ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದೆ. ಸೈಬರ್ ವಂಚಕರ ಜಾಲಕ್ಕೆ ವಿದ್ಯಾವಂತರೇ ಬಲಿಯಾಗುತ್ತಿದ್ದಾರೆ.

ಸೈಬರ್ ಅಪರಾಧ ಕುರಿತಂತೆ ಜಿಲ್ಲೆಯಾದ್ಯಂತ ಜಿಲ್ಲಾ ಪೊಲೀಸ್ ಇಲಾಖೆ ಜನಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿದೆ. ಎಜುಕೇಟ್ ಕಾಲೇಜು ಸಭಾಂಗಣದಲ್ಲಿ ಕಾಲೇಜಿನ ಎನ್ನೆಸ್ಸೆಸ್ ಘಟಕ ಮತ್ತು ಪೊಲೀಸ್ ಇಲಾಖೆ ವತಿಯಿಂದ ಸೈಬರ್ ಅಪರಾಧ ಕುರಿತಂತೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

“ಸೈಬರ್ ವಂಚಕರ ಮಾತುಗಳನ್ನು ನಂಬಿ ಉನ್ನತ ವ್ಯಾಸಂಗ ಮಾಡಿದ ಎಂಜಿನಿಯರ್ ಗಳು, ವಕೀಲರು, ವೈದ್ಯರು ಹಾಗೂ ಉನ್ನತ ಹುದ್ದೆಯಲ್ಲಿರುವವರು ಮೋಸದ ಜಾಲಕ್ಕೆ ಬಲಿಯಾಗುತ್ತಿದ್ದಾರೆ” ಎಂದು ಸಿಇಎನ್ ಮತ್ತು ಅಪರಾಧ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗುರುರಾಜ್ ಬೇಸರ ವ್ಯಕ್ತಪಡಿಸಿದರು.

ವಂಚಕರು ಬ್ಯಾಂಕ್ ಅಧಿಕಾರಿ, ಮ್ಯಾನೇಜರ್ ಎಂದು ನಂಬಿಸಿ ಎಟಿಎಂ ಕಾರ್ಡ್, ಸಿವಿವಿ ಮತ್ತು ಓಟಿಪಿ ಪಡೆದು ಬ್ಯಾಂಕ್ ಖಾತೆಯಲ್ಲಿ ಇರುವಂತಹ ಹಣವನ್ನು ಲಪಟಾಯಿಸುತ್ತಾರೆ. ಹೀಗಾಗಿ ಯಾವುದೇ ಕಾರಣಕ್ಕೂ ಯಾರಿಗೂ ಎಟಿಎಂ ಕಾರ್ಡ್ ನಂಬರ್, ಸಿವಿವಿ ನಂಬರ್ ಮತ್ತು ಒಟಿಪಿಯನ್ನು ಕೊಡಬೇಡಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಪ್ಲೇ ಸ್ಟೋರ್ ಗಳಲ್ಲಿ ಸಿಗುವ app ಗಳೆಲ್ಲ ಅಧಿಕೃತವಾಗಿರುವುದಿಲ್ಲ. ಕ್ಲಬ್ ಫ್ಯಾಕ್ಟರಿ ಮತ್ತು ಇತರೆ ಸೈಟ್ಗಳ ನಕಲಿ ಕಸ್ಟಮರ್ ಕೇರ್ ನಂಬರ್ ಗಳಿಗೆ ಕರೆ ಮಾಡಿ ಮೋಸ ಹೋಗಬೇಡಿ ಎಂದು ತಿಳಿಸಿದ್ದಾರೆ. ನಿಮ್ಮ ಸುತ್ತಮುತ್ತ ಅಪರಾಧ ಕೃತ್ಯಗಳು, ಸೈಬರ್ ಅಪರಾಧಗಳು, ಗಾಂಜಾ ಸೇವನೆಯಂತಹ ಪ್ರಕರಣಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ, ಪೊಲೀಸ್ ಕಂಟ್ರೋಲ್ ರೂಂ 112, ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ 08182261413 ಅಥವಾ ಸಿಇಎನ್ ಅಪರಾಧ ಪೊಲೀಸ್ ಠಾಣೆ 08182261426 ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದು. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದರು.

ಸೈಬರ್ ವಂಚಕರ ಬಗ್ಗೆ ಎಚ್ಚರವಾಗಿರಿ

0

ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶದಲ್ಲಿ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದೆ. ಸೈಬರ್ ವಂಚಕರ ಜಾಲಕ್ಕೆ ವಿದ್ಯಾವಂತರೇ ಬಲಿಯಾಗುತ್ತಿದ್ದಾರೆ.

ಸೈಬರ್ ಅಪರಾಧ ಕುರಿತಂತೆ ಜಿಲ್ಲೆಯಾದ್ಯಂತ ಜಿಲ್ಲಾ ಪೊಲೀಸ್ ಇಲಾಖೆ ಜನಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿದೆ. ಎಜುಕೇಟ್ ಕಾಲೇಜು ಸಭಾಂಗಣದಲ್ಲಿ ಕಾಲೇಜಿನ ಎನ್ನೆಸ್ಸೆಸ್ ಘಟಕ ಮತ್ತು ಪೊಲೀಸ್ ಇಲಾಖೆ ವತಿಯಿಂದ ಸೈಬರ್ ಅಪರಾಧ ಕುರಿತಂತೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

“ಸೈಬರ್ ವಂಚಕರ ಮಾತುಗಳನ್ನು ನಂಬಿ ಉನ್ನತ ವ್ಯಾಸಂಗ ಮಾಡಿದ ಎಂಜಿನಿಯರ್ ಗಳು, ವಕೀಲರು, ವೈದ್ಯರು ಹಾಗೂ ಉನ್ನತ ಹುದ್ದೆಯಲ್ಲಿರುವವರು ಮೋಸದ ಜಾಲಕ್ಕೆ ಬಲಿಯಾಗುತ್ತಿದ್ದಾರೆ” ಎಂದು ಸಿಇಎನ್ ಮತ್ತು ಅಪರಾಧ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗುರುರಾಜ್ ಬೇಸರ ವ್ಯಕ್ತಪಡಿಸಿದರು.

ವಂಚಕರು ಬ್ಯಾಂಕ್ ಅಧಿಕಾರಿ, ಮ್ಯಾನೇಜರ್ ಎಂದು ನಂಬಿಸಿ ಎಟಿಎಂ ಕಾರ್ಡ್, ಸಿವಿವಿ ಮತ್ತು ಓಟಿಪಿ ಪಡೆದು ಬ್ಯಾಂಕ್ ಖಾತೆಯಲ್ಲಿ ಇರುವಂತಹ ಹಣವನ್ನು ಲಪಟಾಯಿಸುತ್ತಾರೆ. ಹೀಗಾಗಿ ಯಾವುದೇ ಕಾರಣಕ್ಕೂ ಯಾರಿಗೂ ಎಟಿಎಂ ಕಾರ್ಡ್ ನಂಬರ್, ಸಿವಿವಿ ನಂಬರ್ ಮತ್ತು ಒಟಿಪಿಯನ್ನು ಕೊಡಬೇಡಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಪ್ಲೇ ಸ್ಟೋರ್ ಗಳಲ್ಲಿ ಸಿಗುವ app ಗಳೆಲ್ಲ ಅಧಿಕೃತವಾಗಿರುವುದಿಲ್ಲ. ಕ್ಲಬ್ ಫ್ಯಾಕ್ಟರಿ ಮತ್ತು ಇತರೆ ಸೈಟ್ಗಳ ನಕಲಿ ಕಸ್ಟಮರ್ ಕೇರ್ ನಂಬರ್ ಗಳಿಗೆ ಕರೆ ಮಾಡಿ ಮೋಸ ಹೋಗಬೇಡಿ ಎಂದು ತಿಳಿಸಿದ್ದಾರೆ. ನಿಮ್ಮ ಸುತ್ತಮುತ್ತ ಅಪರಾಧ ಕೃತ್ಯಗಳು, ಸೈಬರ್ ಅಪರಾಧಗಳು, ಗಾಂಜಾ ಸೇವನೆಯಂತಹ ಪ್ರಕರಣಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ, ಪೊಲೀಸ್ ಕಂಟ್ರೋಲ್ ರೂಂ 112, ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ 08182261413 ಅಥವಾ ಸಿಇಎನ್ ಅಪರಾಧ ಪೊಲೀಸ್ ಠಾಣೆ 08182261426 ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದು. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದರು.

ಸಹಜ ಕೃಷಿ ಲಾಭದಾಯಕ. -ಪ್ರಧಾನಿ

0

ಉತ್ತರಪ್ರದೇಶದ ಬಲರಾಮ ಪುರದಲ್ಲಿ ಸರಯೂ ಕಾಲುವೆ ರಾಷ್ಟ್ರೀಯ ಯೋಜನೆ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉಪಸ್ಥಿತರಿದ್ದರು.

ಪ್ರಕೃತಿಯ ಮೇಲಿನ ಒತ್ತಡ ತಗ್ಗಿಸಿ ಸಮೃದ್ಧ ಫಸಲು ಪಡೆಯಲು ಸಹಜಕೃಷಿ ಅತ್ಯುತ್ತಮ ವಿಧಾನವಾಗಿದೆ. ದೇಶದ ರೈತರೆಲ್ಲರೂ ಸಹಜ ಕೃಷಿ ಪದ್ಧತಿಯನ್ನು ಅನುಸರಿಸಬೇಕು ಎಂದು ಮೋದಿಜಿ ಅವರು ತಿಳಿಸಿದ್ದಾರೆ.

ಸಹಜ ಕೃಷಿಯಿಂದ ನೀರಿನ ಮಿತ ಬಳಕೆ ಸಾಧ್ಯವಾಗುತ್ತದೆ. ಜೊತೆಗೆ ಉತ್ತಮ ಇಳುವರಿ ಪಡೆಯಬಹುದು. ಕೃಷಿಯಲ್ಲಿನ ವೆಚ್ಚ ಕಡಿಮೆ ಮಾಡಿ ರೈತರ ಆದಾಯ ವೃದ್ಧಿಸಲು ಇದು ಸಹಕಾರಿಯಾಗಲಿದೆ ಎಂದು ಪ್ರಧಾನಿ ಅವರು ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಸಹಜ ಕೃಷಿ ಅಳವಡಿಕೆ ಮಾದರಿ ಕುರಿತು ಮಾಹಿತಿ ನೀಡುವುದಕ್ಕಾಗಿ ಡಿಸೆಂಬರ್ 16ರಂದು ಕೇಂದ್ರ ಸರ್ಕಾರ ಮೆಗಾ ಕಾರ್ಯಕ್ರಮ ಆಯೋಜಿಸಿದೆ. ನಮ್ಮ ದೇಶದ ಎಲ್ಲಾ ರೈತರು ಇದನ್ನು ವೀಕ್ಷಿಸಬೇಕು. ದೂರದರ್ಶನದಲ್ಲಿ ವೀಕ್ಷಿಸಬಹುದಾಗಿದೆ. ಅಥವಾ ಸಮೀಪದ ಕೃಷಿ ವಿಜ್ಞಾನ ಕೇಂದ್ರಗಳಿಗೆ ಹೋಗಿ ವೀಕ್ಷಿಸಬಹುದು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಫೆಲೋಷಿಪ್ ಗೆ ವಯೋಮಿತಿ ನಿರ್ಬಂಧ: ಹಿಂದುಳಿದ ವರ್ಗಕ್ಕೆ ಸಮಸ್ಯೆ

0

ಹಿಂದುಳಿದ ವರ್ಗ ಕಲ್ಯಾಣ ಇಲಾಖೆಯು ಪಿಹೆಚ್ಡಿ ಸ್ಕಾಲರ್ಶಿಪ್ ಗೆ ವಯಸ್ಸಿನ ಮಿತಿ ನಿಗದಿಗೊಳಿಸಿದೆ. ಇದರಿಂದ ರಾಜ್ಯದ ಸಾವಿರಾರು ಸಂಶೋಧನಾ ವಿದ್ಯಾರ್ಥಿಗಳು ಫೆಲೋಶಿಪ್ ಅರ್ಜಿ ಸಲ್ಲಿಸಲು ಆಗದೆ ವಂಚಿತರಾಗಿದ್ದಾರೆ.

2021-2022ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣವಧಿ ಪಿ ಹೆಚ್ ಡಿ ಅಧ್ಯಯನಕ್ಕೆ ನೋಂದಣಿ ಮಾಡಿಕೊಂಡಿರುವವರಿಗಾಗಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲಾಗಿದೆ. ವಯೋಮಿತಿ ನಿಗದಿ ಮಾಡಿರುವುದರಿಂದ ಸಾವಿರಾರು ಅಭ್ಯರ್ಥಿಗಳು ವಿದ್ಯಾರ್ಥಿ ವೇತನದಿಂದ ವಂಚಿತರಾಗಿದ್ದಾರೆ.

ಯಾವುದೇ ವಿಶ್ವವಿದ್ಯಾಲಯದಲ್ಲಿ ಪಿಹೆಚ್ ಡಿ ಮಾಡಲು, ಉನ್ನತ ಶಿಕ್ಷಣ ಪಡೆಯಲು ವಯೋಮಿತಿ ಎಷ್ಟಿರಬೇಕು ಎಂದು ನಿಗದಿ ಮಾಡಿಲ್ಲ. ಆದರೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಯೋಮಿತಿ ನಿಗದಿ ಮಾಡಿರುವುದು ಏಕೆ ಎಂಬುದು ಸಂಶೋಧನಾ ವಿದ್ಯಾರ್ಥಿಗಳಲ್ಲಿ ಪ್ರಶ್ನೆ ಮೂಡಿದೆ.

“ವಯೋಮಿತಿಯನ್ನು ಆ ಸರ್ಕಾರವೇ ನಿರ್ಧರಿಸಿದೆ. ಇದನ್ನು ಇಲಾಖೆಯಿಂದ ಬದಲಾವಣೆ ಮಾಡೋಕೆ ಆಗಲ್ಲ. ಸರ್ಕಾರ ಬದಲಿಸುವಂತೆ ಸೂಚನೆ ನೀಡಿದರೆ ಬದಲಾವಣೆ ಮಾಡಲಾಗುವುದು” ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸುರೇಶ್ ತಿಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

‘ಪಾರ್ತಿಸುಬ್ಬ’ ಪ್ರಶಸ್ತಿ ಪುರಸ್ಕೃತ ಯಕ್ಷ ಪ್ರತಿಭೆ, ಶ್ರೀಧರ.

0

ಹುಟ್ಟೂರಿನಲ್ಲಿ ನನಗೆ ಮಾಡಿದ ಸನ್ಮಾನ ಎಲ್ಲಾ ಸನ್ಮಾನ ಗಳಿಗಿಂತ ದೊಡ್ಡದಾಗಿದೆ. ಅತ್ಯಂತ ಸಂತೋಷವನ್ನು ತಂದಿದೆ. ನಾನು ಬರೆದ ಎಲ್ಲಾ ಬರವಣಿಗೆಯಲ್ಲಿ ಹುಟ್ಟೂರಿನ ಉಲ್ಲೇಖವಿದೆ ಎಂದು ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತ ಕವಿ ಶ್ರೀಧರ್ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ನನ್ನ ಬಾಲ್ಯದ ದಿನಗಳು ಅತ್ಯಂತ ಬಡತನದಿಂದ ಕೂಡಿತ್ತು. ನನಗೆ ಯಕ್ಷಗಾನದಲ್ಲಿ ಆಸಕ್ತಿ ಬಾಲ್ಯದಿಂದಲೂ ಇತ್ತು. ಯಕ್ಷಗಾನ ಕಲಿಕೆ ಮತ್ತು ವೀಕ್ಷಣೆಗೆ 20ರಿಂದ 30 ಕಿ. ಮೀ. ದೂರ ನಡೆದುಕೊಂಡು ಹೋಗಬೇಕಾಗಿತ್ತು. ಆದರೆ ಇಂದು ನನ್ನ ಪ್ರಯತ್ನ ಸಾರ್ಥಕ ಎನಿಸುತ್ತಿದೆ. ನಿವೃತ್ತಿ ಜೀವನ ನಡೆಸುತ್ತಿರುವ ನನ್ನ ಸಂಪೂರ್ಣ ಜೀವನವನ್ನು ಯಕ್ಷಗಾನಕ್ಕಾಗಿಯೇ ಮೀಸಲಿಡುತ್ತೇನೆ ಎಂದರು. ಪಾರ್ತಿಸುಬ್ಬ ಪ್ರಶಸ್ತಿ
ಪಡೆದ ಶ್ರೀಧರ್ ಹೇಳಿದ್ದಾರೆ.ಹುಟ್ಟೂರು ನಿಟ್ಟೂರಿನಲ್ಕಿ ಅಭಿಮಾನಿಗಳು ಏರ್ಪಡಿಸಿದ್ದ ಸತ್ಕಾರ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.

ಖ್ಯಾತ ಭಾಗವತ ಸುಬ್ರಮಣ್ಯ ಧಾರೇಶ್ವರ ಅವರು ಮಾತನಾಡಿ, ಕವಿ ಶ್ರೀಧರ ಅವರು ಬಹುಮುಖ ಪ್ರತಿಭೆ ಉಳ್ಳವರು. ಇವರಿಂದ ನಾನು ಅನೇಕ ವಿಷಯಗಳನ್ನು ಕಲಿತುಕೊಂಡಿದ್ದೇನೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕವಿ ಶ್ರೀಧರ ಅವರ ಜೀವನ, ಯಶೋಗಾಥೆ ಒಳಗೊಂಡ ‘ಯಕ್ಷ ಶ್ರೀಧರ’ ಎಂಬ ಗೌರವಗ್ರಂಥ ಬಿಡುಗಡೆಗೊಳಿಸಿದರು. ಈ ಗೌರವ ಗ್ರಂಥವನ್ನು ಉಡುಪಿ ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್ ಬಿಡುಗಡೆ ಮಾಡಿದರು.

ಈ ಸಮಾರಂಭದಲ್ಲಿ ಯಕ್ಷಗಾನ ಸಂಘಟಕರಾದ ನಾರಾಯಣ ಎಂ. ಹೆಗಡೆ, ಡಾ. ಶಾಂತರಾಮ ಪ್ರಭು, ಶ್ರೀಧರ ಅವರ ಧರ್ಮಪತ್ನಿ ನಟೇಶ್ವರಿ ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ರೈತರ ಧರಣಿಯ ಸ್ಥಳ ಈಗ ಗುಜರಿಗಳ ಮೇಳ

0

ಕೇಂದ್ರ ಸರ್ಕಾರದ ವಿರುದ್ಧ ಸತತ ಒಂದು ವರ್ಷಗಳ ಕಾಲ ದಿಲ್ಲಿಯ ಗಡಿಭಾಗದಲ್ಲಿ 40ಕ್ಕೂ ಹೆಚ್ಚು ರೈತಸಂಘಟನೆಗಳು ಪ್ರತಿಭಟನೆ ನಡೆಸಿದ್ದೆವು. ಈಗ ರೈತರು ಪ್ರತಿಭಟನೆ ಪಡೆದು ತಮ್ಮ ಊರುಗಳಿಗೆ ಹಿಂತಿರುಗಿದ್ದಾರೆ. ರೈತರು ಆ ಭಾಗದಲ್ಲಿ ಟೆಂಟ್ ಗಳು, ಅಡುಗೆಮನೆ ಸ್ನಾನ ಶೌಚಗೃಹ ಗಳನ್ನು ಅಕ್ಕಿ ಬಳಸಿದ್ದ ಕಬ್ಬಿಣ ಬಿದಿರು ಮತ್ತಿತರೆ ಸಾಮಗ್ರಿಗಳು ಪ್ರತಿಭಟನಾ ಸ್ಥಳದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಇದರಿಂದ ಆ ಭಾಗದ ಗುಜರಿ ವ್ಯಾಪಾರಿಗಳಿಗೆ ಭರ್ಜರಿ ವಹಿವಾಟು ನಡೆಸುತ್ತಿದ್ದಾರೆ.

ತಮ್ಮ ಊರಿಗೆ ತೆರಳಿರುವ ರೈತರು ಬಿಟ್ಟು ಹೋಗಿರುವಂತಹ ವಸ್ತುಗಳ ಸಂಗ್ರಹಕ್ಕೆ ಗುಜರಿ ವ್ಯಾಪಾರಿಗಳ ನಡುವೆಯೇ ತೀರಾ ಪೈಪೋಟಿ ನಡೆಯುತ್ತಿದೆ. ಗುಜರಿ ಸಂಗ್ರಹಿಸುವವರ ಪಾಲಿಗೆ ಈ ಜಾಗ ಲಾಭದ ಅಡ್ಡೆಯಾಗಿ ಪರಿಣಮಿಸಿದೆ. ಕಬ್ಬಿಣ ಪ್ಲಾಸ್ಟಿಕ್ ಸಾಮಗ್ರಿಗಳ ಜೊತೆಗೆ ರೈತರು ಬಳಸುತ್ತಿದ್ದ ಬೆಚ್ಚನೆಯ ಹೊದಿಕೆ. ಪಂಚೆ-ಜುಬ್ಬಾಗಳು, ದಿನಬಳಕೆಯ ಸಾಮಗ್ರಿಗಳು ಇನ್ನು ಕೆಲವರಿಗೆ ಹಣ ಕೂಡ ಸಿಕ್ಕಿದೆ ಎಂದು ತಿಳಿದುಬಂದಿದೆ.

ಸ್ಥಳದಲ್ಲಿದ್ದಂತಹ ಗುಜರಿ ವ್ಯಾಪಾರಿ ಜಾವೇದ್ ಎಂಬವರು “ನನಗೆ ಇಲ್ಲಿ ಕಬ್ಬಿಣ, ಪ್ಲಾಸ್ಟಿಕ್ ಸೇರಿ ಅನೇಕ ಬೆಲೆಬಾಳುವ ವಸ್ತುಗಳು ಸಿಕ್ಕಿವೆ. ತಿಂಗಳ ಆದಾಯ ಗಳಿಕೆಯಾಗಿದೆ” ಎಂದು ಹರ್ಷವನ್ನು ವ್ಯಕ್ತಪಡಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಕೈಗಾರಿಕೆಗಳಿಗೆ ನೂತನ ಆಸ್ತಿ ತೆರಿಗೆ ಮಿತಿ : ಕರಡು ಸಿದ್ಧ

0

ರಾಜ್ಯ ಸರ್ಕಾರ ಕೈಗಾರಿಕೆಗಳನ್ನು ಪ್ರತ್ಯೇಕಗೊಳಿಸಿ ನೂತನ ಆಸ್ತಿ ತೆರಿಗೆ ಮಿತಿ ವಿಧಿಸುವ ವಿಧೇಯಕಕ್ಕೆ ಕರಡು ಸಿದ್ಧಪಡಿಸುತ್ತಿದೆ.

ಪ್ರಸ್ತುತ ರಾಜ್ಯ ಸರ್ಕಾರ ವಾಣಿಜ್ಯ ಕಟ್ಟಡಗಳಿಗೆ ವಿಧಿಸುತ್ತಿರುವ ತೆರಿಗೆಯ ಶೇ.70 ರಷ್ಟು ತೆರಿಗೆಯನ್ನು ಕೈಗಾರಿಕೆ ಮಿತಿಗೊಳಿಸುವ ಹೊಸ ವಿಧೇಯಕಕ್ಕೆ ಬೆಳಗಾವಿ ಅಧಿವೇಶನದಲ್ಲಿ ಅನುಮೋದನೆ ನಂತರ ರಾಜ್ಯದಲ್ಲಿ ಜಾರಿಗೆ ಬರಲಿದೆ.

ಸಣ್ಣ ಮತ್ತು ಮಧ್ಯಮ ವರ್ಗದ ಕೈಗಾರಿಕೆಗಳ ಉತ್ತೇಜನ ದೃಷ್ಟಿಯಿಂದಾಗಿ ನೂತನ ಆಸ್ತಿ ತೆರಿಗೆ ಮಿತಿ ವಿಧಿಸುವ ವಿಧೇಯಕ ಮಂಡಿಸಲಾಗುತ್ತಿದೆ.

ಈ ಕುರಿತಂತೆ “ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಕೋವಿಡ್ ನಂತರ ಕೈಗಾರಿಕಾ ಉತ್ತೇಜನಕ್ಕೆ ಹೊಸ ಕಾನೂನು ಅಗತ್ಯವಿತ್ತು. ಹೀಗಾಗಿ ಆಸ್ತಿ ತೆರಿಗೆ ಸಂಬಂಧ ವಿಧೇಯಕ ಮಂಡನೆ ಆಗಲಿದೆ” ಎಂದು ತಿಳಿಸಿದ್ದಾರೆ.

ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ರ ಕಲಂ 101(2)ರ ಕಾಯ್ದೆಗೆ ತಿದ್ದುಪಡಿ ತಂದು ನೂತನ ತೆರಿಗೆ ನೀತಿಯನ್ನು ಸೇರ್ಪಡಿಸಲು ಸಂಪುಟ ಒಪ್ಪಿಗೆ ನೀಡಿದೆ. ಕೈಗಾರಿಕೆಗೆ ಬಳಸುತ್ತಿರುವ ಮತ್ತು ಬಳಸುವ ಉದ್ದೇಶ ಹೊಂದಿರುವ ಸರ್ಕಾರಿ ಕಟ್ಟಡಗಳಿಗೂ ಮೊದಲು ನೀಡಿದ ವಿನಾಯಿತಿಗಳನ್ನು ತೆಗೆದುಹಾಕಲು ಪ್ರಸ್ತಾಪಿಸಲಾಗಿದೆ.

ಬಿಬಿಎಂಪಿ ಹೊರತುಪಡಿಸಿ ಮಹಾನಗರ ಪಾಲಿಕೆ/ ನಗರಸಭೆ /ಪುರಸಭೆಗಳು ಸೇರಿದಂತೆ ಎಲ್ಲಾ ನಗರಗಳಿಗೆ ಈ ಹೊಸ ಕಾನೂನು ಅನ್ವಯಿಸಲಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ರೈತ ಮಕ್ಕಳಿಗೆಲ್ಲ ವಿದ್ಯಾನಿಧಿ ಯೋಜನೆ

0

ರೈತ ಕುಟುಂಬದ ಎಲ್ಲಾ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆಯನ್ನು ಮಾರ್ಪಡಿಸುವ ಮೂಲಕ ಯೋಜನೆಯನ್ನು ಮತ್ತಷ್ಟು ಸರಳ ಮತ್ತು ವಿಸ್ತೃತಗೊಳಿಸಿ ಆದೇಶ ನೀಡಿದೆ.

ಮೊದಲಿನ ಆದೇಶದಲ್ಲಿ ಸರ್ಕಾರದ ಅನುದಾನದಿಂದ ನೀಡುವ ಒಂದೇ ವಿದ್ಯಾರ್ಥಿವೇತನಕ್ಕೆ ಅರ್ಹರು. ತಂದೆ-ತಾಯಿ ರೈತರಾಗಿದ್ದಾರೆ ಮಾತ್ರ ಮಕ್ಕಳು ಅರ್ಹರು. ರಾಜ್ಯ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವಂತೆ ಅವಕಾಶವಿತ್ತು. ಆದರೆ ಹೊಸ ಆದೇಶದಲ್ಲಿ ಯಾವುದೇ ಶಿಷ್ಯವೇತನ/ವಿದ್ಯಾರ್ಥಿವೇತನ ಪಡೆದರು ವಿದ್ಯಾನಿಧಿಗೆ ಅರ್ಹರು. ರೈತ ಕುಟುಂಬದ ಎಲ್ಲಾ ಮಕ್ಕಳು ಅರ್ಹರು. ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದು ಈ ಯೋಜನೆ ಬಗ್ಗೆ ಕೃಷಿ ಇಲಾಖೆ ತಿಳಿಸಿದೆ.

ಅರ್ಜಿ ಸಲ್ಲಿಸದೇ ಶಿಷ್ಯವೇತನ ನೀಡುವ ದೇಶದ ಮೊದಲ ಯೋಜನೆ ಇದಾಗಿದೆ. ರಜೆ ಇದ್ದರೂ ಶನಿವಾರ-ಭಾನುವಾರ ವಿದ್ಯಾನಿಧಿ ವಿತರಿಸುವ ಕೆಲಸ ದಲ್ಲಿ ಅನೇಕ ಕೃಷಿ ಇಲಾಖೆ ಸಿಬ್ಬಂದಿ ತೊಡಗಿಕೊಂಡಿದ್ದಾರೆ ಎಂದು ಕೃಷಿ ಇಲಾಖೆಯ ಹೆಚ್ಚುವರಿ ನಿರ್ದೇಶಕ ಎಂ.ಎಸ್. ದಿವಾಕರ್ ತಿಳಿಸಿದ್ದಾರೆ.

ರೈತ ಮಕ್ಕಳಿಗಷ್ಟೇ ಈ ಮೊದಲು ವಿದ್ಯಾನಿಧಿ ಮಿತಿಗೊಳಿಸಿದ್ದ ರಾಜ್ಯ ಸರ್ಕಾರ, ಆದೇಶವನ್ನು ಸಿದ್ದು ಪಡಿಸಿ ರೈತ ಕುಟುಂಬದ ಎಲ್ಲಾ ಮಕ್ಕಳಿಗೂ ವಿದ್ಯಾನಿಧಿ ನೀಡುವಂತೆ ಆದೇಶ ಹೊರಡಿಸಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಭಾರತ : ಮಾದಕ ವಸ್ತುಗಳ ಮಾರುಕಟ್ಟೆ ಆತಂಕ

0

2021ರಲ್ಲಿ ಭಾರತ ದೇಶದಲ್ಲಿ ತನಿಖಾ ಸಂಸ್ಥೆಗಳು 3 ಸಾವಿರ ಕೆ.ಜಿ.ಗಳಷ್ಟು ಹೆರಾಯಿನ್ ವಶಕ್ಕೆ ಪಡೆದಿವೆ. ದೇಶದಲ್ಲಿ ಹೆಚ್ಚು ಪ್ರಮಾಣದ ಹೆರಾಯಿನ್ ಸಾಗಾಣಿಕೆ ಆಗುತ್ತಿರುವುದು ಅಧಿಕಾರಿಗಳಲ್ಲಿ ಆತಂಕ ಮೂಡಿಸಿದೆ. ಅಂತಾರಾಷ್ಟ್ರೀಯ ಫ್ಲಕ್ಸ್ ಜಾಲವು ಭಾರತವನ್ನು ಸಾಗಾಣಿಕ ಕೇಂದ್ರವನ್ನಾಗಿ ರೂಪಿಸಿಕೊಂಡಿದೆ ಎಂಬ ಆತಂಕವೂ ಅಧಿಕಾರಿಗಳಲ್ಲಿ ಮೂಡಿದೆ.

2018ರಲ್ಲಿ ದೇಶದಲ್ಲಿ ಎಂಟು ಕೆಜಿ ಹೆರಾಯಿನ್ ವಶ ಪಡಿಸಿಕೊಳ್ಳಲಾಗಿತ್ತು. ಅದಾದ ಬಳಿಕ ನಾಲ್ಕು ವರ್ಷಗಳಲ್ಲೇ ಅಧಿಕ ಪ್ರಮಾಣ ಹೆರಾಯಿನ್ ಪತ್ತೆಹಚ್ಚಲಾಗಿದೆ.

ಮಾದಕ ವಸ್ತುಗಳ ನಿಯಂತ್ರಣ ಸಂಸ್ಥೆಗಳಾದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ ಸಿ ಬಿ ) ಮತ್ತು ಡೈರೆಕ್ಟೊರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (ಡಿ ಆರ್ ಐ) ಅಧಿಕಾರಿಗಳು ಈ ಜಾಲವನ್ನು ಪತ್ತೆಮಾಡಲು ತಂತ್ರರೂಪಿಸಿದೆ.

ಕೋವಿಡ್ ಲಾಕ್ ಡೌನ್ ಹಾಗೂ ಇತರೆ ಸಂಚಾರ ನಿರ್ಬಂಧನೆಗಳು ಹೊರತಾಗಿಯೂ ರಾಜ್ಯವಾರು ತನಿಖಾ ಸಂಸ್ಥೆಗಳು ವಶಕ್ಕೆ ಪಡೆದಿರುವ ಮತ್ತು ಮಾದಕ ವಸ್ತುಗಳ ಪ್ರಮಾಣ ಗಣನೀಯವಾಗಿ ಅಧಿಕವಾಗಿದೆ.

ಲಾಕ್ ಡೌನ್ ಸಂದರ್ಭದಲ್ಲಿ ದೇಶಾದ್ಯಂತ ಒಟ್ಟು ಬರೋಬ್ಬರಿ 202 ಕೆ.ಜಿ. ಹೆರಾಯಿನ್ ಪತ್ತೆಯಾಗಿದೆ. 2022ರ ಸೆಪ್ಟೆಂಬರ್ ನಲ್ಲಿ ಗುಜರಾತ್ ನ ಮುಂದ್ರಾ ಬಂದರಿನಲ್ಲಿ 3000 ಕೆ.ಜಿ. ಹೆರೋಯಿನ್ ವಶಕ್ಕೆ ಪಡೆಯಲಾಗಿತ್ತು. ಅಲ್ಲದೆ ಸೆಪ್ಟೆಂಬರ್ ಅಂತ್ಯದವರೆಗೆ 9000 ಕೆಜಿ ಹೆರಾಯಿನ್ ವಶ ಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತಂತೆ ಪಂಜಾಬ್ ನ ಮಾಜಿ ಡಿಜಿಪಿ ಶಶಿಕಾಂತ ಶರ್ಮಾ ಅವರು “ತನಿಖಾ ಸಂಸ್ಥೆಗಳು ವಶಕ್ಕೆ ಸಿಗುವುದು ಸಾಗಣೆಯ ಒಟ್ಟು ಮೊತ್ತದ ಶೇ.10ರಷ್ಟು ಮಾದಕ ವಸ್ತು ಮಾತ್ರವೇ. ಅದು ಹೆರಾಯಿನ್ ಗಾಂಜಾ ಜೊತೆಗೆ ಮಾತ್ರೆಗಳು ಆಗಿರಬಹುದು. ಅಫ್ಘಾನಿಸ್ತಾನದ ಅತ್ಯಂತ ಅಗ್ಗದ ಮೌಲ್ಯದ ಡ್ರಗ್ಸ್ ಗಳಿಗೆ ಭಾರತದಲ್ಲಿ ದೊಡ್ಡ ಮಾರುಕಟ್ಟೆ ನಿರ್ಮಿಸಲಾಗುತ್ತಿದೆ” ಎಂಬ ಆತಂಕಕಾರಿ ವಿಷಯ ತಿಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಅತಿಥಿ ಉಪನ್ಯಾಸಕರ ಗೋಳು ಕೇಳುವವರಿಲ್ಲ

0

ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಹೀಗಾಗಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ಪಾಠ ವಂಚಿತರಾಗಿದ್ದಾರೆ.

ರಾಜ್ಯದ 430 ಪ್ರಥಮದರ್ಜೆ ಕಾಲೇಜುಗಳಲ್ಲಿ 14,500 ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. ಅತಿಥಿ ಉಪನ್ಯಾಸಕರು ಸೇವಾ ಭದ್ರತೆ, ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತರಗತಿಗಳನ್ನು ಅನಿರ್ದಿಷ್ಟಾವಧಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನಾಕಾರರು ಯುಜಿಸಿ ನಿಯಮಾವಳಿಯಂತೆ ಗೌರವಧನ ನೀಡಬೇಕು. ಸೇವಾ ಭದ್ರತೆ ಒದಗಿಸಬೇಕು. ಹಲವು ವರ್ಷಗಳಿಂದ ಸೇವೆಸಲ್ಲಿಸುತ್ತಿರುವವರನ್ನು ಕಾಯಂ ಗೊಳಿಸಬೇಕು. ವರ್ಷಕ್ಕೊಮ್ಮೆ ನೇಮಕ ಮಾಡಿಕೊಂಡು ವೇತನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.