Monday, February 9, 2026
Monday, February 9, 2026
Home Blog Page 1831

ದತ್ತಪೀಠ ಪ್ರಾಧಿಕಾರ: ವಿನಯ್ ಗುರೂಜಿ ಸಲಹೆ

0

ಚಿಕ್ಕಮಗಳೂರಿನ ಇನಾಂ ದತ್ತಪೀಠ ಸುತ್ತಮುತ್ತ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಗೌರಿಗದ್ದೆ ಆಶ್ರಮದ ವಿನಯ ಗುರೂಜಿ ಅವರು ಪಾಲ್ಗೊಂಡಿದ್ದರು.

ದತ್ತಪೀಠದ ಅಭಿವೃದ್ಧಿಗೆ ಪ್ರಾಧಿಕಾರ ಮಾಡುವುದು ಅಗತ್ಯವಿದೆ ಎಂದು ವಿನಯ್ ಗುರೂಜಿ ಅವರು ಹೇಳಿದ್ದಾರೆ.

ದತ್ತಪೀಠದಲ್ಲಿ ನಾನು ಶೌಚಾಲಯಗಳನ್ನು ಸ್ವಚ್ಛಗೊಳಿಸಿದೆ. ವಾರದ ಕೊನೆಯಲ್ಲಿ 2000ಕ್ಕೂ ಹೆಚ್ಚು ವಾಹನಗಳಲ್ಲಿ ಪ್ರವಾಸಿಗರು ಬರುತ್ತಾರೆ. ಮುಖ್ಯಮಂತ್ರಿ, ಪ್ರವಾಸೋದ್ಯಮ ಸಚಿವರು ದತ್ತಪೀಠ ಪ್ರಾಧಿಕಾರ ಮಾಡಬೇಕು ಎಂದು ಗುರು ಎಂಬುದಕ್ಕಿಂತ ಜನ ಸಾಮಾನ್ಯನಾಗಿ ಮನವಿ ಮಾಡುತ್ತೇನೆ. ಮಹಿಳೆಯರಿಗೆ ಇನ್ನು ಸೌಚಾಲಯಗಳು ನಿರ್ಮಿಸಿಕೊಡಿ. ಹಣ ಇದ್ದವರು ರಿಸಾರ್ಟ್ ಗೆ ಹೋಗ್ತಾರೆ. ಬಡವರು ಪ್ರವಾಸ ಮಾಡಬಾರದು ಎಂದು ನಿಯಮ ಇಲ್ಲ. ಸಂಬಂಧಿಸಿದವರಿಗೆ ನಾನೇ ಖುದ್ದು ಪತ್ರವನ್ನು ಬರೆಯುತ್ತೇನೆ. ಮುಂದಿನ ವರ್ಷದೊಳಗೆ ಸಮಸ್ಯೆ ಪರಿಹರಿಸಲು ಎಂದು ಗೌರಿಗದ್ದೆ ಆಶ್ರಮದ ವಿನಯ ಗುರೂಜಿಯವರು ಮಾಧ್ಯಮ ಮಿತ್ರರಿಗೆ ತಿಳಿಸಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಡಿಜಿಟಲ್ ಗ್ರಂಥಾಲಯ:ಕೋಟಿಗೂ ಮೀರಿ ಜನಸ್ಪಂದನ

0

ಮಂಗಳೂರಿನ, ಕಿನ್ಯಾ ಗ್ರಾಮದ ಕರ್ನಾಟಕ ಡಿಜಿಟಲ್ ಲೈಬ್ರರಿಯನ್ನು ಸಾರ್ವಜನಿಕ ಗ್ರಂಥಾಲಯ ಇಲಾಖೆ ಆರಂಭಿಸಿದೆ. ಈ ಲೈಬ್ರೆರಿಗೆ ಸುಮಾರು 1.91 ಕೋಟಿ ಜನರು ನೋಂದಣಿ ಮಾಡಿಕೊಂಡಿದ್ದಾರೆ.

ಕರ್ನಾಟಕದಲ್ಲಿ ಪ್ರತಿಯೊಬ್ಬರಿಗೂ ಪುಸ್ತಕಗಳು ಲಭಿಸಬೇಕು. ಹಾಗೂ ಓದುವ ಹವ್ಯಾಸ ಹಚ್ಚಬೇಕು ಎಂಬ ಉದ್ದೇಶದಿಂದ ಎರಡು ವರ್ಷಗಳ ಹಿಂದೆ ಈ ಡಿಜಿಟಲ್ ಲೈಬ್ರರಿ ಯನ್ನು ಆರಂಭಿಸಲಾಗಿದೆ.

ಶಾಲೆ ,ಕಾಲೇಜು, ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ಅಭ್ಯರ್ಥಿಗಳು ಡಿಜಿಟಲ್ ಲೈಬ್ರೆರಿಯ ಸದುಪಯೋಗವನ್ನು ಪಡೆದುಕೊಳ್ಳಬಹುದು. ಗೂಗಲ್ನಲ್ಲಿ ಕರ್ನಾಟಕ ಡಿಜಿಟಲ್ ಪಬ್ಲಿಕ್ ಲೈಬ್ರೆರಿ ಅಥವಾ ಪ್ಲೇ ಸ್ಟೋರ್ ನಲ್ಲಿ ಇ-ಸಾರ್ವಜನಿಕ ಗ್ರಂಥಾಲಯ app ಡೌನ್ಲೋಡ್ ಮಾಡಿಕೊಳ್ಳಬೇಕು. ನಂತರದಲ್ಲಿ ಹೆಸರು, ಮೊಬೈಲ್ ಸಂಖ್ಯೆ, ಬೇಕಾದ ಲೈಬ್ರರಿ ಆಯ್ಕೆಮಾಡಿ, ತಮ್ಮದೇ ಆದ ಪಾಸ್ವರ್ಡ್ ಸೃಷ್ಟಿಸಿಕೊಳ್ಳಬೇಕು. ಅನಂತರ ಅವರು ಡಿಜಿಟಲ್ ಲೈಬ್ರೆರಿಯ ಸದಸ್ಯರಾಗುತ್ತಾರೆ.

ಮೊದಲ ಹಂತದಲ್ಲಿ 30 ಜಿಲ್ಲಾ ಕೇಂದ್ರ ಗ್ರಂಥಾಲಯ, 26 ನಗರ ಕೇಂದ್ರ ಗ್ರಂಥಾಲಯ ಹಾಗೂ 216 ತಾಲೂಕು ಕೇಂದ್ರ ಗ್ರಂಥಾಲಯ ಸೇರಿ ಒಟ್ಟು 272 ಡಿಜಿಟಲ್ ಗ್ರಂಥಾಲಯ ಆರಂಭಗೊಂಡಿದೆ.

ಎರಡನೇ ಹಂತದಲ್ಲಿ ಬಿಬಿಎಂಪಿ ವ್ಯಾಪ್ತಿಯ 198 ವಾರ್ಡ್ ಗಳ 205 ಗ್ರಂಥಾಲಯಗಳ ಪೈಕಿ 100 ಕಡೆ ಡಿಜಿಟಲ್ ಲೈಬ್ರೆರಿ ಸೇವೆ ಆರಂಭಗೊಂಡಿದೆ. ಪ್ರಸ್ತುತ 372 ಡಿಜಿಟಲ್ ಲೈಬ್ರೆರಿಗಳು ಕಾರ್ಯನಿರ್ವಹಿಸುತ್ತಿವೆ.

ನವೆಂಬರ್ ತಿಂಗಳ ವರೆಗೂ ಹೊಸದಾಗಿ 1.91 ಕೋಟಿ ಜನರು ಡಿಜಿಟಲ್ ಲೈಬ್ರೆರಿ ಯಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಅವರು ಸುಮಾರು 20.06 ಲಕ್ಷ ಪುಸ್ತಕಗಳನ್ನು ಓದಿದ್ದಾರೆ. ಇ- ಪುಸ್ತಕಗಳು ಮತ್ತು ವೀಡಿಯೊಗಳು, ಕನ್ನಡ, ಇಂಗ್ಲಿಷ್ ನಿಯತಕಾಲಿಕಗಳು, ರಾಷ್ಟ್ರೀಯ ,ಅಂತರಾಷ್ಟ್ರೀಯ ಜರ್ನಲ್ ಗಳು ಹೀಗೆ ಹಲವಾರು ಮೌಲ್ಯ ಉಳ್ಳಂತಹ ಅನೇಕ ಪುಸ್ತಕಗಳು ಡಿಜಿಟಲ್ ಲೈಬ್ರರಿಯಲ್ಲಿವೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಹುತಾತ್ಮ ಬಿಪಿನ್ ರಾವತ್ ಅವರಿಗೆ ಶ್ರದ್ಧಾಂಜಲಿ

0

ಸಿಟಿಜನ್ ಫಾರ್ ಡೆಮಾಕ್ರಸಿ ಸಂಸ್ಥೆಯು ಬೆಂಗಳೂರು ಪುರಭವನದ ಮುಂಭಾಗದಲ್ಲಿ ಸಂಜೆಯ ವೇಳೆಯಲ್ಲಿ ಜನರಲ್ ಬಿಪಿನ್ ರಾವತ್ ಶ್ರದ್ಧಾಂಜಲಿ ಸಭೆಯನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಭಾಗವಹಿಸಿದ್ದರು.

ದೇಶದ ರಕ್ಷಣಾ ಪಡೆಗಳ ಮೊದಲ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅರ್ಧಕ್ಕೆ ಬಿಟ್ಟು ಹೋಗಿರುವ ಸೇನಾ ಸುಧಾರಣಾ ಕಾರ್ಯಗಳನ್ನು ಪೂರ್ಣಗೊಳಿಸಬೇಕು. ಇದೇ ಅವರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಎಂದು ರಾಮ್ ಮಾಧವ್ ತಿಳಿಸಿದರು.

ಸೇನೆಗೆ ಅಗತ್ಯವಾದ ಶಸ್ತ್ರಾಸ್ತ್ರ ಮತ್ತು ಉಪಕರಣಗಳಿಗೆ ಬೇರೆ ದೇಶಗಳನ್ನು ಅವಲಂಬಿಸದೆ ದೇಶದಲ್ಲಿ ದೊರಕುವಂತಾಗಬೇಕೆಂದು ರಾವತ್ ಕನಸು ಕಂಡಿದ್ದರು. ಅನಿಟ್ಟಿನಲ್ಲಿ ಯಶಸ್ಸು ಸಾಧಿಸಿದ್ದರು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ತಿಳಿಸಿದರು.

“ಮೊದಲ ಸಿಡಿಎಸ್ ರಾವತ್ ಮತ್ತು ಇತರ ಯೋಧರ ಸಾವಿನಿಂದ ಇಡೀ ದೇಶ ದುಃಖದಲ್ಲಿದೆ. ಈ ಸಂದರ್ಭದಲ್ಲಿ ಕೆಲವು ಕಿಡಿಗೇಡಿಗಳು ಸಂಗ್ರಹಿಸುತ್ತಿರುವುದು ದುರಾದೃಷ್ಟಕರ. ದೇಶದ ವಿದ್ಯಾರ್ಥಿ ಸಮೂಹಕ್ಕೆ ಮಿಲಿಟರಿ ತರಬೇತಿಯನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಸರಕಾರಗಳು ಮುಂದಾಗಬೇಕು ಎಂದರು.

ಈ ಸಭೆಯಲ್ಲಿ ವಿಮರ್ಶಕ ಹರೀಶ್, ಜೈವಿಕ ಪ್ರವಾಸೋದ್ಯಮ ಮಂಡಳಿ ಅಧ್ಯಕ್ಷ ಮದನಗೋಪಾಲ್, ನಟಿ ತಾರ, ಹಿರಿಯ ನಟ ಸೇತುರಾಮ್ ಸೇರಿದಂತೆ ಹಲವಾರು ಗಣ್ಯರು ಸಭೆಯಲ್ಲಿ ಭಾಗವಹಿಸಿ ಮುಂಬತ್ತಿ ಹಚ್ಚಿ ಅಗಲಿದ ಯೋಧರಿಗೆ ಗೌರವ ನಮನ ಸಲ್ಲಿಸಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ರಾಜ್ಯದಲ್ಲಿ ಮಹಿಳೆ,ಮಕ್ಕಳಲ್ಲಿ ರಕ್ತಹೀನತೆ ಹೆಚ್ಚಿದೆ

0

ನಮ್ಮ ರಾಜ್ಯದಲ್ಲಿ ರಕ್ತಹೀನತೆ ಮತ್ತು ಅದರಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ಹೆಚ್ಚಾಗಿ ಮಹಿಳೆಯರು ಹಾಗೂ ಮಕ್ಕಳು ಹೆಚ್ಚಾಗಿ ಅನುಭವಿಸುತ್ತಿದ್ದಾರೆ. ಕಳೆದ ಐದು ವರ್ಷಗಳಿಂದ ಗಣನೀಯವಾಗಿ ಏರಿಕೆ ಕಂಡಿದೆ ಎಂದು ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯಲ್ಲಿ ತಿಳಿಸಲಾಗಿದೆ.

ಮಹಿಳೆಯರಲ್ಲಿ ಶೇ. 48ರಷ್ಟು ರಕ್ತಹೀನತೆ ಸಮಸ್ಯೆ ಏರಿಕೆಯಾಗಿದೆ. ಆರು ತಿಂಗಳಿನಿಂದ ಸುಮಾರು ಐದು ವರ್ಷದವರೆಗಿನ ಮಕ್ಕಳಲ್ಲಿ ಈ ಪ್ರಮಾಣ ಶೇ. 66 ರಷ್ಟು ಹೆಚ್ಚಾಗಿದೆ.

2015-16 ವರ್ಷಕ್ಕೆ ಹೋಲಿಸಿದರೆ ರಕ್ತಹೀನತೆ ಎದುರಿಸುತ್ತಿರುವ ಮಕ್ಕಳ ಸಂಖ್ಯೆ ಶೇ.5ರಷ್ಟು ಹೆಚ್ಚಾಗಿದೆ. ಮತ್ತು ಮಹಿಳೆಯರ ಸಂಖ್ಯೆಯಲ್ಲಿ ಶೇ. 3 ರಷ್ಟು ಏರಿಕೆಯಾಗಿದೆ.

“ಅಪೌಷ್ಟಿಕತೆ ಹಾಗೂ ಕಬ್ಬಿಣ ಅಂಶ ದೇಹದಲ್ಲಿ ಕಡಿಮೆಯಾಗಿರುವುದರಿಂದ ರಕ್ತಹೀನತೆ ಉಂಟಾಗುತ್ತದೆ. ರಕ್ತಹೀನತೆ ಉಂಟಾದಾಗ ರಕ್ತದ ಮೂಲಕ ದೇಹದಾದ್ಯಂತ ಆಮ್ಲಜನಕದ ಪೂರೈಕೆ ಸಾಮರ್ಥ್ಯ ಕಡಿಮೆಯಾಗುತ್ತದೆ.
ಆರೋಗ್ಯವಂತ ಮಹಿಳೆಯಲ್ಲಿ ಹಿಮೋಗ್ಲೋಬಿನ್ ಪ್ರಮಾಣ ಪ್ರತಿ ಡೆಸಿಲೀಟರ್ ಗೆ 12ಗ್ರಾಂ ಇರಬೇಕು. ಅರ್ಧ ವರ್ಷಕ್ಕಿಂತ ಕಡಿಮೆ ಪ್ರಾಯದ ಮಗುವಿಗೆ ಪ್ರತಿದಿನ 0. 27 ಮಿಲಿಗ್ರಾಂ ಕಬ್ಬಿಣಾಂಶ ಅಗತ್ಯವಾಗಿರುತ್ತದೆ ” ಎಂದು ಕಿಮ್ಸ್ ಆಸ್ಪತ್ರೆಯ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕ ಡಾ. ಕೆ . ಪಿ ಬಾಲರಾಜ್ ಅವರು ಹೇಳಿದ್ದಾರೆ.

ನಗರ ಪ್ರದೇಶಗಳಲ್ಲಿ ಶೇ. 62. 8ರಷ್ಟು ಮಕ್ಕಳು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಶೇ. 67.1ರಷ್ಟು ಮಕ್ಕಳು ರಕ್ತಹೀನತೆಯಿಂದ ಬಳಲುತ್ತಿದ್ದಾರೆ. ಇದಕ್ಕೆ ಸೂಕ್ತವಾದ ಚಿಕಿತ್ಸೆ ನೀಡಿದರಷ್ಟೇ ಈ ಸಮಸ್ಯೆಯಿಂದ ಸುಲಭವಾಗಿ ಪಾರಾಗಲು ಸಾಧ್ಯ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ರಕ್ತಹೀನತೆ ಪ್ರಸವಪೂರ್ವ ಅಥವಾ ಪ್ರಸವ ನಂತರದಲ್ಲಿ ತಾಯಂದಿರ ಸಾವಿಗೂ ಕಾರಣವಾಗಬಹುದು. ನಿಶ್ಯಕ್ತಿ, ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ಕುಸಿತ, ಅವಧಿಗೂ ಮುನ್ನ ಪ್ರಸವ, ಕಡಿಮೆ ತೂಕದ ಶಿಶುಗಳ ಜನನಕ್ಕೆ ಕಾರಣವಾಗಬಹುದಾಗಿದೆ. ರಕ್ತಹೀನತೆಗೆ ಕಬ್ಬಿನ ವಿಷ ಕಡಿಮೆ ಇರುವುದೇ ಪ್ರಮುಖ ಕಾರಣ.

15-19 ವರ್ಷದ ಇವತ್ತು ಯರಲ್ಲಿ ರಕ್ತಹೀನತೆಯ ಪ್ರಮಾಣ 2015 ಕ್ಕೆ ಹೋಲಿಸಿದರೆ, ಶೇ.4 ರಷ್ಟು ಹೆಚ್ಚಾಗಿದೆ. ಈ ಸಮಯದಲ್ಲಿಯೇ ಪುರುಷರಲ್ಲಿವೂ ಕೂಡ ರಕ್ತಹೀನತೆ ಸಮಸ್ಯೆ ಹೆಚ್ಚಾಗಿರುವುದು ಕಂಡುಬಂದಿದೆ.

ರಕ್ತಹೀನತೆಗೆ ರಕ್ತದ ನಷ್ಟ ಅಥವಾ ಕೆಂಪು ಕಣಗಳನ್ನು ನಾಶ ಪ್ರಮುಖ ಕಾರಣವಾಗಿದೆ. ಮುಟ್ಟಿನ ಸಂದರ್ಭದಲ್ಲಿ ತೀವ್ರ ರಕ್ತಸ್ರಾವ. ಜಂತುಹುಳುಗಳ ಕಾಣಿಸಿಕೊಳ್ಳುವುದು. ಮೂಲವ್ಯಾಧಿ, ಮಲೇರಿಯಾ, ಕುಕ್ಕೆ ಹುಳುಗಳು, ಪೌಷ್ಟಿಕಾಂಶದ ಕೊರತೆ ಸಹ ಕಾರಣವಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ.

ರಕ್ತಹೀನತೆಯಿಂದ ಬಳಲುತ್ತಿರುವ ವ್ಯಕ್ತಿ ಕಬ್ಬಿಣಾಂಶ ಹೆಚ್ಚಿರುವ ಹಾಗೂ ವಿಟಮಿನ್ ಗಳು ಸಮೃದ್ಧವಾಗಿರುವ ಆಹಾರಗಳನ್ನು ಸೇವಿಸಬೇಕು. ಹಸಿರು ಸೊಪ್ಪುಗಳು, ಒಣ ಹಣ್ಣು, ಕಾಳುಗಳು ವಿಟಮಿನ್ ಬಿ-12 ಪೂರ್ವಕವಾದ ಆಹಾರವನ್ನು ಸೇವಿಸಿದರೆ ರಕ್ತಹೀನತೆಯನ್ನು ತಡೆಗಟ್ಟಬಹುದಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಪದ್ಮಶ್ರೀ ತುಳಸಿ ಗೌಡ: ಮದರ್ ತೆರೆಸ ಪ್ರಶಸ್ತಿಯ ಗರಿ

0

ಇತ್ತೀಚೆಗಷ್ಟೇ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ವನದೇವತೆ ಹೊನ್ನಾಳಿಯ ತುಳಸಿ ಗೌಡ ಅವರಿಗೆ ಈಗ ಮತ್ತೊಂದು ಪ್ರತಿಷ್ಠಿತ ಮದರ್ ತೆರೇಸಾ ಪ್ರಶಸ್ತಿ ಒಲಿದು ಬಂದಿದೆ.

ಡಿಸೆಂಬರ್ 13ರಂದು ಮುಂಬೈನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.

ಕೋಲ್ಕತ್ತದಲ್ಲಿ 2005ರಲ್ಲಿ ಮದರ್ ತೆರೇಸಾ ನೆನಪಿಗಾಗಿ ಹಾರ್ಮನಿ ಫೌಂಡೇಶನ್ ಹುಟ್ಟಿಕೊಂಡಿತ್ತು. ಸಾಮಾಜಿಕ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಈ ಸಂಸ್ಥೆ, ಅಂತರಾಷ್ಟ್ರೀಯ ಮಟ್ಟದಲ್ಲೂ ಗುರುತಿಸಿಕೊಂಡಿದೆ.

ಪ್ರತಿವರ್ಷ ಒಬ್ಬರಂತೆ ಶ್ರೇಷ್ಠ ವ್ಯಕ್ತಿಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಬೌದ್ಧ ಧರ್ಮದ ಗುರು ದಲೈ ಲಾಮಾ, ಮಲಲ ಯುಸೂಫ್, ಘಾನ ದೇಶದ ಅಧ್ಯಕ್ಷ ನಾನಾ ಅಕೂಪೋ- ಅಡ್ಡೋ ಹೀಗೆ ಹಲವಾರು ಗಣ್ಯರಿಗೆ ಪ್ರಶಸ್ತಿಯನ್ನು ನೀಡಲಾಗಿದೆ.

ನಾನು ಅಕ್ಷರ ಕಲಿತವಳಲ್ಲ. ಆದರೆ ನನ್ನ ಕೆಲಸವನ್ನು ಗುರುತಿಸಿ, ಹಲವು ಪ್ರಶಸ್ತಿಗಳು ಬಂದಿವೆ. ಈಗ ಪ್ರಶಸ್ತಿ ಸ್ವೀಕರಿಸಿ ಕಾರಣಕ್ಕಾಗಿ ಮತ್ತೆ ವಿಮಾನಯಾನ ಮಾಡಲಿದ್ದೇನೆ ಎಂದು ವೃಕ್ಷ ದೇವತೆ ಆದಂತಹ ತುಳಸಿ ಗೌಡ ಅವರು ತಿಳಿಸಿದ್ದಾರೆ.

ಹಾರ್ಮನಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಅಬ್ರಹಾಂ ಮಥಾಯಿ ನೇತೃತ್ವದಲ್ಲಿ ನಡೆಯಲಿದೆ. ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿಯವರ ಮೊಮ್ಮಗ ತುಷಾರ ಗಾಂಧಿ, ಚಿತ್ರ ನಿರ್ಮಾಪಕ ಮಹೇಶ್ ಭಟ್ , ಭಾರತೀಯ ಮಹಿಳಾ ಹಕ್ಕುಗಳ ಕಾರ್ಯಕರ್ತೆ ಪ್ಲಾನಿಯಾ ಅಗ್ನೇಶ್ ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಜೀವವೈವಿಧ್ಯ ರಕ್ಷಣೆ : ಸರ್ಕಾರಕ್ಕೆ ಮನವಿ ಅರ್ಪಣೆ

0

ಕರ್ನಾಟಕ ಜೀವವೈವಿಧ್ಯ ಮಂಡಳಿಯು ಪಶ್ಚಿಮಘಟ್ಟ ಉಳಿವಿಗಾಗಿ ಅರಣ್ಯ ಪರಿಸರ ಮತ್ತು ಹವಾಮಾನ ಬದಲಾವಣೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಗಮನಹರಿಸುವಂತೆ ಹಾಗೂ ಮುಂಬರುವ ಬಜೆಟ್ ಅಧಿವೇಶನದಲ್ಲಿ ಬಜೆಟ್ ಮೀಸಲಿಡುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದೆ.

ಇತ್ತೀಚಿನ ವರ್ಷಗಳಲ್ಲಿಪ್ರಕೃತಿ ವಿಕೋಪಕ್ಕೆ ಪಶ್ಚಿಮ ಘಟ್ಟಗಳು ಭೂಕುಸಿತಕ್ಕೆ ಒಳಪಡುತ್ತಿದೆ. ನಾಶವಾಗುತ್ತಿರುವ ಮೀಸಲು ಅರಣ್ಯಗಳ ರಕ್ಷಣೆಗೆ ಅರಣ್ಯ ಮತ್ತು ಕಂದಾಯ ಇಲಾಖೆಗಳು ಕೈಜೋಡಿಸಬೇಕು. ಜೀವ ವೈವಿಧ್ಯತೆಗೆ ಧಕ್ಕೆ ತಂದಿರುವ ಏಕಬೆಳೆ ನೀಡುವಿಕೆಯನ್ನು ಕೊನೆಗೊಳಿಸಬೇಕು. ಗ್ರಾಮೀಣ ಅಭಿವೃದ್ಧಿ ಮತ್ತು ಅರಣ್ಯ ಇಲಾಖೆಗಳು ಸ್ಥಳೀಯ ಅರಣ್ಯಗಳು ಮತ್ತು ಜೀವವೈವಿದ್ಯಗಳ ರಕ್ಷಣೆಗಾಗಿ ಗ್ರಾಮ ಸಮಿತಿಗಳನ್ನು ಬಲಪಡಿಸಬೇಕು ಎಂಬ 22 ಅಂಶಗಳನ್ನು ಒಳಗೊಂಡ ಮನವಿ ಪತ್ರವನ್ನು ಕರ್ನಾಟಕ ಜೀವವೈವಿಧ್ಯ ಮಂಡಳಿಯ ಅಧ್ಯಕ್ಷ ‘ಅನಂತ ಹೆಗಡೆ ಅಶೀಸರ’ ಅವರ ನೇತೃತ್ವದ ಸಮಿತಿಯು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಕರ್ನಾಟಕ ಕೋವಿಡ್ ಸೋಂಕಿನ ಪಟ್ಟಿಯಲ್ಲಿ ಟಾಪ್ 3

0

ಕರ್ನಾಟಕದಲ್ಲಿ ಇದುವರೆಗೂ 30 ಲಕ್ಷ ಜನರು ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಡಿ. 11ರಂದು ಸುಮಾರು 317 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಬಿಡುಗಡೆಯಾದವರ ಸಂಖ್ಯೆ 29,54,513 ಕ್ಕೆ ಏರಿಕೆಯಾಗಿರುವುದು ಕಂಡುಬಂದಿದೆ.

ರಾಜ್ಯದಲ್ಲಿ ಪ್ರಸ್ತುತ 7,306 ಒಟ್ಟು ಪ್ರಕರಣಗಳಿವೆ. ಕೋವಿಡ್ ಸೋಂಕಿನ ಪ್ರಮಾಣ ಶೇ. 0.30 ರಷ್ಟಿದೆ. ಸಾವಿನ ಪ್ರಮಾಣ ರಷ್ಟಿದೆ.

1,05,978 ಜನರಿಗೆ ಕೋವಿಡ್ ಪರೀಕ್ಷೆ 320 ಜನರಲ್ಲಿ ಸೋಂಕು ದೃಢಪಟ್ಟಿದೆ. ಇಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 30,00,105ಕ್ಕೆ ಏರಿಕೆಯಾಗಿದೆ. ಸಾವಿನ ಪ್ರಮಾಣದಲ್ಲೂ ಸಹ ಏರಿಕೆಯಾಗಿದೆ.

ಸೋಂಕು ಪೀಡಿತ ಟಾಪ್ ಫೈವ್ ರಾಜ್ಯಗಳೆಂದರೆ ಮಹಾರಾಷ್ಟ್ರ, ಕೇರಳ, ಕರ್ನಾಟಕ, ತಮಿಳುನಾಡು ಹಾಗೂ ಆಂಧ್ರಪ್ರದೇಶವಾಗಿದೆ.

ಬೆಂಗಳೂರಿನಲ್ಲಿ 190 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಆದರೆ ಬಾಗಲಕೋಟೆ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಹೀಗೆ ಹಲವಾರು ಜಿಲ್ಲೆಗಳಲ್ಲಿ ಯಾವುದೇ ಪ್ರಕರಣಗಳು ಕಂಡುಬಂದಿಲ್ಲ.

ಬೆಂಗಳೂರಿನಲ್ಲಿ ಇಬ್ಬರು ಮೃತಪಟ್ಟಿರುವುದು ವರದಿಯಾಗಿದೆ. ಇದನ್ನು ಬಿಟ್ಟರೆ ಉಳಿದ ಜಿಲ್ಲೆಗಳಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟ ಬಗ್ಗೆ ಎಲ್ಲೂ ವರದಿಯಾಗಿಲ್ಲ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಕನ್ನಡಶಾಸ್ತ್ರೀಯ ಭಾಷೆ : ಕೇವಲ ಹೆಸರಿಗಷ್ಟೆ

0

ಕೇಂದ್ರ ಸರ್ಕಾರ ಮಾತೃಭಾಷಾ ಶಿಕ್ಷಣಕ್ಕೆ ಮಾನ್ಯತೆ ಕೊಡಬೇಕು ಎಂದು ಆಗಾಗ ಹೇಳುತ್ತಲೇ ಇರುತ್ತದೆ. ಆದರೆ ಪ್ರಾದೇಶಿಕ ಭಾಷೆಗಳ ಅಭಿವೃದ್ಧಿಗೆ ಅತ್ಯಂತ ಕಡಿಮೆ ಅನುದಾನ ನೀಡುತ್ತಿದೆ. ಶಾಸ್ತ್ರೀಯ ಸ್ಥಾನಮಾನ ಹೊಂದಿರುವ ಕನ್ನಡಭಾಷೆಗೆ ವರ್ಷಕ್ಕೆ ಕೇವಲ 1 ಕೋಟಿ ರೂ. ನೀಡುತ್ತಿರುವುದು ಬೇಸರ ತಂದಿದೆ.

ಕಳೆದ ಏಳು ವರ್ಷದಲ್ಲಿ ಕನ್ನಡಭಾಷೆಗೆ ಕೇವಲ 8.39 ಕೋಟಿ ರೂ. ಅನುದಾನ ನೀಡಿದೆ. ಆದರೆ ತಮಿಳು ಭಾಷೆಗೆ ಕಳೆದ ಏಳು ವರ್ಷಗಳಲ್ಲಿ 50 ಕೋಟಿ ರೂ ಅನುದಾನ ನೀಡಿರುವುದು ಭಾಷೆಗಳ ಮಧ್ಯೆ ತಾರತಮ್ಯದ ವಿಚಾರದಲ್ಲೂ ನೋವು ತಂದಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಮನು ಬಳಿಗಾರ್ ಅವರು ಕನ್ನಡ ಭಾಷೆಗೆ ನೀಡುತ್ತಿರುವ ಕನಿಷ್ಠ ಅನುದಾನದ ಬಗ್ಗೆ ಪ್ರಸ್ತಾಪಿಸಿದ ಈ ಬಗ್ಗೆ ಮತ್ತೊಮ್ಮೆ ಚರ್ಚೆ ನಡೆಯುತ್ತಿದೆ. ಅಲ್ಲದೆ ಸಂಸ್ಕೃತ ಭಾಷೆಗೆ ಅದೇ ಅವಧಿಯಲ್ಲಿ ಸಯ1200 ಕೋಟಿ ರೂ. ಇರುವುದು ಕೂಡ ಚರ್ಚೆಯ ಒಂದು ಭಾಗವಾಗಿದೆ.

ಕನ್ನಡ ಪರ ಹೋರಾಟಗಾರ ಅರುಣ್ ಜಾವಗಲ್ ಅವರು “ಕನ್ನಡದ ಪ್ರಾಚೀನ ಗ್ರಂಥಗಳ ಉಳಿವಷ್ಟೇ ಅಲ್ಲ, ಮುಂದಿನ ಭವಿಷ್ಯಕ್ಕಾಗಿ ಕನ್ನಡವನ್ನು ತಂತ್ರಜ್ಞಾನ ಶಕ್ತ ಭಾಷೆಯಾಗಿ ಉಳಿಸುವ ಅಗತ್ಯ ಹೆಚ್ಚಿದೆ. ಈ ನಿಟ್ಟಿನಲ್ಲಿ ಅನುವಾದ ಮತ್ತಿತರ ನೂರಾರು ಕೆಲಸಗಳು ಆಗಬೇಕಿದೆ. ಇದಕ್ಕೆಲ್ಲಾ ಅನುದಾನ ಬೇಕು. ರಾಜ್ಯದಿಂದ ವರ್ಷಕ್ಕೆ 2.5 ಲಕ್ಷ ಕೋಟಿಯಷ್ಟು ತೆರಿಗೆ ಪಡೆಯುವ ಕೇಂದ್ರ ಜುಜುಬಿ 1 ಕೋಟಿ ನೀಡಿ ಕೈತೊಳೆದುಕೊಳ್ಳುತ್ತಿದೆ. ಈ ಬಗ್ಗೆ ಯಾವ ಜನಪ್ರತಿನಿಧಿಗಳು ಪ್ರಶ್ನೆ ಮಾಡುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ

0

ರಾಜ್ಯ ಸರ್ಕಾರ ರಾಜ್ಯಾದ್ಯಂತ ಇರುವಂತಹ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸಲು ಒಟ್ಟು 15 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದೆ.

ರಾಜ್ಯದ ಗ್ರಾಮಾಂತರ ಪ್ರದೇಶಗಳ ಶಾಲೆಗಳು ಎದುರಿಸುತ್ತಿರುವ ಪ್ರಮುಖ ಸಮಸ್ಯೆಯೆಂದರೆ ಶಿಕ್ಷಕರ ಕೊರತೆ ಈ ಕೊರತೆಯಿಂದಾಗಿ ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸದೆ ಖಾಸಗಿ ಶಾಲೆಗೆ ಸೇರಿಸಲು ಮುಂದಾಗುತ್ತಿದ್ದಾರೆ. ಈ ಸಮಸ್ಯೆಯನ್ನು ನೀಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಒಟ್ಟು 10 ಸಾವಿರ ಮಂದಿ ಹಾಗೂ ಕಲ್ಯಾಣ ಕರ್ನಾಟಕ ವೃಂದದ 5 ಸಾವಿರ ಮಂದಿ ಪದವೀಧರರ ಶಾಲಾ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಿದೆ.

5 ಸಾವಿರ ಪದವೀಧರ ಶಿಕ್ಷಕರ ನೇಮಕಕ್ಕೆ ನವೆಂಬರ್ ತಿಂಗಳ ಮೊದಲನೇ ವಾರ ಮತ್ತು 10 ಸಾವಿರ ಪದವೀಧರ ಶಿಕ್ಷಕರ ನೇಮಕಕ್ಕೆ ಡಿಸೆಂಬರ್. 10 ರಂದು ಹಣಕಾಸು ಇಲಾಖೆ ಅನುಮತಿ ನೀಡಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯು ಶಿಕ್ಷಕರ ನೇಮಕಾತಿಗೆ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸುವುದಾಗಿ ಹೇಳಿದೆ. ಇದರೊಂದಿಗೆ 4 ಸಾವಿರ ಹೆಚ್ಚುವರಿ ಅತಿಥಿ ಶಿಕ್ಷಕರ ನೇಮಕಕ್ಕೂ ಅನುಮತಿ ನೀಡಿದೆ. ಪ್ರಸ್ತುತ ರಾಜ್ಯದಲ್ಲಿ ಒಟ್ಟು 23 ಸಾವಿರ ಅತಿಥಿ ಶಿಕ್ಷಕರು ಕೆಲಸ ಮಾಡುತ್ತಿದ್ದಾರೆ.

ಈ ಬಾರಿ ಪದವಿ, ಬಿ.ಎಡ್ ಮತ್ತು ಟಿಇಟಿ ಪರೀಕ್ಷೆ ಉತ್ತೀರ್ಣರಾದ ಎಲ್ಲಾ ಅಭ್ಯರ್ಥಿಗಳ ಜೊತೆಗೆ ಎಂಜಿನಿಯರಿಂಗ್ ಪದವೀಧರರಿಗೂ ಅರ್ಜಿಸಲ್ಲಿಸಲು ಅವಕಾಶ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಎಂಜಿನಿಯರಿಂಗ್ ಪದವೀಧರರು ಗಣಿತ, ವಿಜ್ಞಾನ, ಇಂಗ್ಲಿಷ್, ಪರಿಸರ ಅಧ್ಯಯನ ಸೇರಿದಂತೆ ಇತರೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು “ರಾಜ್ಯದ ಸರ್ಕಾರಿ ಶಾಲೆಗಳಿಗೆ ಒಟ್ಟು 15 ಸಾವಿರ ಶಿಕ್ಷಕರನ್ನು ನೇಮಕ ಮಾಡಲು ಸರ್ಕಾರ ತೀರ್ಮಾನಿಸಿದ್ದು, ಹಣಕಾಸು ಇಲಾಖೆ ಕೂಡ ಅನುಮತಿ ನೀಡಿದೆ. ಈ ಸಂಬಂಧ ಶೀಘ್ರ ಅಧಿಸೂಚನೆ ಹೊರಡಿಸಿ, ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗುವುದು. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಮತ್ತೆ, ವಿದ್ಯುತ್ ದರ ಏರಿಕೆಯ ಶಾಕ್!

0

ಪ್ರತಿ ವರ್ಷದಂತೆ ಈ ಬಾರಿಯೂ ವಿದ್ಯುತ್ ದರ ಹೆಚ್ಚಿಸಲು ವಿದ್ಯುತ್ ಸರಬರಾಜು ಕಂಪನಿಗಳು ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿವೆ.

ಬೆಸ್ಕಾಂ ವ್ಯಾಪ್ತಿಯಲ್ಲಿ 1.50 ರೂ., ಹೆಸ್ಕಾಂ ವ್ಯಾಪ್ತಿ ಯಲ್ಲಿ 1.97 ರೂ. ಪ್ರತಿ ಯೂನಿಟ್ ಗೆ ಹೆಚ್ಚಿಸಲು ಮನವಿ ಮಾಡಲಾಗಿದೆ. ಇನ್ನುಳಿದ ಚೆಸ್ಕಾಂ, ಜೆಸ್ಕಾಂ ಸೇರಿದಂತೆ ಇತರೆ ಕಂಪನಿಗಳು ಪ್ರತಿ ಯೂನಿಟ್ ಗೆ 1.10ರೂ. ಗಳವರೆಗೆ ಹೆಚ್ಚಿಸುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಪರಿಷ್ಕೃತ ದರ ಮುಂದಿನ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಜಾರಿಗೆ ಬರಲಿದೆ.

ವಿದ್ಯುತ್ ಸರಬರಾಜು ಕಂಪನಿಗಳು ಸಲ್ಲಿಸಿದ ಪ್ರಸ್ತಾವನೆಗಳನ್ನು ಪರಿಶೀಲಿಸಿರುವ ಕೆಇಆರ್ ಸಿ ನಂತರ ದರಗಳನ್ನು ನಿಗದಿ ಪಡಿಸಲಿದೆ. ದರ ನಿಗದಿಗೆ ಮುನ್ನಾ ನಿಯಂತ್ರಣ ಆಯೋಗವು ಸರಬರಾಜು ಕಂಪನಿಗಳಿಂದ ಸ್ಪಷ್ಟೀಕರಣ ಪಡೆಯಲಿದೆ.

ಫೆಬ್ರವರಿಯಲ್ಲಿ ಸಾರ್ವಜನಿಕ ಹಾಗೂ ಕೈಗಾರಿಕೆಗಳಿಂದ ಆಯೋಗವು ದರ ನಿಗದಿ ಬಗ್ಗೆ ಆಕ್ಷೇಪಣೆ ಸ್ವೀಕರಿಸಲಿದೆ. ಏಪ್ರಿಲ್ ತಿಂಗಳಿನಲ್ಲಿ ಅಂತಿಮ ಪರಿಷ್ಕೃತ ದರ ಜಾರಿಗೆ ಬರಲಿದೆ.

ಕಳೆದ ಕೋವಿಡ್ ಸಂದರ್ಭದಲ್ಲಿ ಪ್ರತಿ ಯೂನಿಟ್ ಗೆ 30 ಪೈಸೆ ವಿದ್ಯುತ್ ಶುಲ್ಕ ಹೆಚ್ಚಿಸಿ ಜೂನ್ ನಲ್ಲಿ ಆದೇಶಿಸಿತ್ತು.

ಈ ಬಾರಿ 40 ಪೈಸೆ ಹೆಚ್ಚಿಸುವ ಸಂಭವ ಇದೆ. ಎಚ್ ಟಿ ಲೈನ್ ಬಳಸುವ ಕೋವಿಡ್ ಬಾಧಿತ ಕೈಗಾರಿಕೆಗಳಿಗೆ ಮಾಸಿಕ ಪಾವತಿಯಲ್ಲಿ ವಿನಾಯಿತಿ ನೀಡಬಹುದಾದ ನಿರೀಕ್ಷೆಯಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.