ಪ್ರವಾದಿ ಮಹಮ್ಮದ್ ರವರು ಅತ್ಯಂತ ಬಡತನದಲ್ಲಿ ಬೆಳೆದವರು. ವಾಸಿಸಲು ಗುಡಿಸಲೊಂದೆ. ಅವರು ತೊಡುವ ಚರ್ಮದ ಅಂಗಿಯನ್ನು ಅವರೇ ಹೊಲಿಯುತ್ತಿದ್ದರು.
ಅವರು ಅತ್ಯಂತ ಸಾಧಾರಣ ಮತ್ತು ವಿನಮ್ರರಾಗಿದ್ದರು. ಹೀಗಾಗಿ ತಮ್ಮ ಸಹವರ್ತಿಗಳೊಂದಿಗೆ ಸುಲಭವಾಗಿ ಬೆರೆಯುತ್ತಿದ್ದರು. ಕುಟುಂಬದಲ್ಲಿ ಮನೆಗೆಲಸಕ್ಕೆ ನೆರವಾಗುತ್ತಿದ್ದರು. ಮದೀನ ಪಟ್ಟಣದಲ್ಲಿ ವಾಸಮಾಡುತ್ತಿದ್ದ ಅವರ ಜೀವಿತಾವಧಿಯಲ್ಲಿ ಇಡೀ ನಗರವೇ ಬೆಳ್ಳಿ- ಬಂಗಾರಗಳಿಂದ ತುಂಬಿತ್ತು . ಹೀಗಾಗಿ ಅವರನ್ನು “ಅರೇಬಿಯಾದ ರಾಜ “ಎಂದು ಕರೆಯುತ್ತಿದ್ದರು.
ಇವರ ಸರಳತೆಯನ್ನು ಕುರಿತು ಜಾರ್ಜ್ ಬರ್ನಾಡ್ ಶಾ ” ಇಸ್ಲಾಂ ನಲ್ಲಿರುವ ಜೀವಸತ್ವದಿಂದಾಗಿ ನಾನು ಯಾವಾಗಲೂ ಅದನ್ನು ಗೌರವಾನ್ವಿತ ಸ್ಥಾನದಲ್ಲೇ ಕಾಣುತ್ತಿರುವೆನು” ಎಂದಿದ್ದಾರೆ. ಮಹಾತ್ಮ ಗಾಂಧೀಜಿಯವರು “ಮಾನವ ಸಮೂಹದ ಕೋಟ್ಯಂತರ ಹೃದಯಗಳಲ್ಲಿ ವಿವಾದ ರಹಿತವಾದ ಪ್ರಭುತ್ವವನ್ನು ಸ್ಥಾಪಿಸಿದರು. ಅತ್ಯುನ್ನತ ವ್ಯಕ್ತಿಯ ಕುರಿತು ತಿಳಿಯ ಬಯಸಿದ್ದೆ…. ಅಂದಿನ ಜೀವನರಂಗದಲ್ಲಿ ಇಸ್ಲಾಮಿಗೆ ಸ್ಥಾನವನ್ನು ಗಳಿಸಿಕೊಟ್ಟಿದ್ದು ಖಡ್ಗವಲ್ಲ ಬದಲಾಗಿ ಪ್ರವಾದಿಯ ನಿರಾಡಂಬರತೆ , ಪರಿಪೂರ್ಣ ನಿಷ್ಕಪಟತೆ, ವಾಗ್ದಾನಗಳ ಕುರಿತು ಆತ್ಯಂತಿಕವಾದ ನಿಷ್ಠೆ, ನನ್ನ ಸ್ನೇಹಿತರು ಮತ್ತು ಸಹವರ್ತಿಗಳಿಗೆ ಅವರು ನೀಡುತ್ತಿದ್ದ ತೀವ್ರ ಪರಿಗಣನೆ, ಮತ ಪ್ರಚಾರ ಕಾರ್ಯದ ಕುರಿತು ಅವರಿಗಿದ್ದ ಎದೆಗಾರಿಕೆ, ನಿರ್ಭಯತೆ ಮತ್ತು ದೇವನಲ್ಲಿದ್ದ ಪರಿಪೂರ್ಣ ನಂಬಿಕೆ ಮತ್ತು ಭರವಸೆಗಳಾಗಿದ್ದವು ಮತ್ತು ವಾಸ್ತವತೆಯನ್ನು ನಾನು ಚೆನ್ನಾಗಿ ಮನದಟ್ಟು ಮಾಡಿಕೊಂಡೆ. ಇವುಗಳಾದ್ದವು ಅವರ ಮುಂದಿದ್ದ ಸರ್ವ ಅಡೆತಡೆಗಳನ್ನು ನಿವಾರಿಸಿದ ಅಸ್ತ್ರವೇ ಹೊರತು ಖಡ್ಗ ವಾಗಿರಲಿಲ್ಲ” ಎಂದಿದ್ದಾರೆ.
ಮಹಾತ್ಮ ಗಾಂಧೀಜಿಯವರು ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಬಗ್ಗೆ ತಾವು ತಿಳಿದುಕೊಂಡ ಸಂಗತಿಯ ಬಗ್ಗೆ ಬಹಳ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.
ಹೀಗೆ ಇನ್ನೂ ಅನೇಕ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಗಣ್ಯ ವ್ಯಕ್ತಿಗಳು , ಲೇಖಕರು, ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಸಂದೇಶಗಳ ಪ್ರಭಾವಕ್ಕೆ ಒಳಗಾಗಿದ್ದಾರೆ.
ಪ್ರವಾದಿ ಮುಹಮ್ಮದ್ ಪೈಗಂಬರ್ ರವರ ಪ್ರೀತಿ ಮತ್ತು ವಾತ್ಸಲ್ಯಭರಿತ ಭಾವನೆ ನಮ್ಮೆಲ್ಲರಿಗೂ ಮಾದರಿ. ಎಲ್ಲಾ ಜನರನ್ನು ಒಬ್ಬನೇ ದೇವನು ಸೃಷ್ಟಿಸಿದ್ದಾನೆ ಎಂದು ಭೋದಿಸಿ, ಎಲ್ಲರನ್ನೂ ಒಂದೇ ಕುಟುಂಬದ ಸದಸ್ಯರ ಹಾಗೆ ಕಾಣುತ್ತಿದ್ದ ಅವರ ಸ್ವಭಾವ ಮಾನವರ ಕೌಟುಂಬಿಕ ಸಮಸ್ಯೆಗಳಿಗೆ ಅತ್ಯುತ್ತಮ ಪರಿಹಾರವನ್ನು ನೀಡುವುದರಲ್ಲಿ ಸಂದೇಹವಿಲ್ಲ.


ವಿಜಯನಗರದ ದೊರೆಗಳು ತಮ್ಮ ವಿಜಯೋತ್ಸವದ ಸಂತೋಷದಲ್ಲಿ ಶೃಂಗೇರಿ ಮಠಕ್ಕೆ ಭೂದಾನವನ್ನು ಮಾಡಿದರು. ಗುರು ವಿದ್ಯಾಶಂಕರ ಅದ್ವಿತೀಯ ದೇವಾಲಯವನ್ನು ಶೃಂಗೇರಿ ಮಠದಲ್ಲಿ ಕಟ್ಟಿಸಿಕೊಟ್ಟರು. ಶೃಂಗೇರಿ ಮಠಕ್ಕೆ ವಿಜಯನಗರದ ಸಾಮ್ರಾಜ್ಯ ಇದ್ದ ಐತಿಹಾಸಿಕ ಸಂಬಂಧವೂ ಶೃಂಗೇರಿ ಮಠದ ಹಲವಾರು ಸಂಪ್ರದಾಯ, ಆಚರಣೆ ಹಾಗೂ ಉತ್ಸವಗಳ ಉಗಮಕ್ಕೆ ಪ್ರೇರಣೆಯಾಯಿತು. ವಿಜಯನಗರದ ಹಕ್ಕ-ಬುಕ್ಕರು ವಿದ್ಯಾರಣ್ಯರಿಗೆ ಕೊಟ್ಟ ರಾಜ ಲಾಂಛನವನ್ನು ಗೌರವದಿಂದ ಶೃಂಗೇರಿ ಮಠದಲ್ಲಿ ದಸರಾ ದರ್ಬಾರ್ ಆಚರಣೆ ಆರಂಭವಾಯಿತು. ವಿಜಯನಗರದ ಸ್ಥಾಪನೆಯಾಗಿ ಇಂದಿಗೆ ಸುಮಾರು ಆರೂವರೆ ಶತಮಾನಗಳು ಕಳೆದರೂ ಇಂದಿಗೂ ಐತಿಹಾಸಿಕ ಧಾರ್ಮಿಕ ಆಚರಣೆಯು ಶೃಂಗೇರಿ ಮಠದ ದಸರಾ ಹಬ್ಬದ ವಿಶೇಷತೆಯಾಗಿದೆ. ಶಾರದಾ ಮಾತೆಯ 9 ಅಲಂಕಾರಗಳು ಹೋಮಹವನ ಪಾರಾಯಣ ಇತ್ಯಾದಿ ಧಾರ್ಮಿಕ ಆಚರಣೆಗಳು ಸಾಧಾರಣವಾಗಿ ನಮ್ಮ ನಾಡಿನ ಎಲ್ಲ ಮಠ-ಮಂದಿರ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಕಂಡುಬರುತ್ತದೆ. ಆದರೆ ಈ ದರ್ಬಾರ ಆಚರಣೆಯು ವಿಜಯನಗರದ ದೊರೆಗಳು ವಿಜಯನಗರ ವೆಂಬ ಮಹಾ ಸಾಮ್ರಾಜ್ಯವನ್ನು ಕಟ್ಟಲು ಕಾರಣೀಭೂತರಾದ ಶ್ರೀ ವಿದ್ಯಾರಣ್ಯರಿಗೆ ಕೊಟ್ಟ ರಾಜ್ಯ ಗೌರವದ ಸಂಕೇತವಾಗಿದ್ದು ಕನ್ನಡನಾಡಿನ ಇತಿಹಾಸ, ಪರಂಪರೆ ಹಾಗೂ ಸಂಸ್ಕೃತಿಯನ್ನು ಸಾರುತ್ತದೆ.
ವಿಜಯನಗರದ ದೊರೆಗಳ ನಂತರ ಕೆಳದಿ, ತ್ರಾವೆಂಕೂರ್, ಮೈಸೂರು, ಸುರಪುರ, ಜಮಖಂಡಿ, ನೇಪಾಳ, ಬರೋಡ ಮುಂತಾದ ರಾಜಸಂಸ್ಥಾನಗಳು ಶೃಂಗೇರಿ ಜಗದ್ಗುರುಗಳನ್ನು ಅಪಾರವಾಗಿ ಗೌರವಿಸುವ ಮಾರ್ಗದರ್ಶನ ಪಡೆದರೆಂದು ಪತ್ರಾಗಾರದ ಇಲಾಖೆಯ ದಾಖಲೆಗಳು ತಿಳಿಸುತ್ತವೆ. ಇಂದಿಗೂ ಶೃಂಗೇರಿ ದರ್ಬಾರ್ ನಲ್ಲಿ ಭಾರತದ ಹಲವಾರು ರಾಜವಂಶಸ್ಥರು ಗುರುಕಾಣಿಕೆಯನ್ನು ಸಲ್ಲಿಸುವುದು ವಿಶೇಷವಾಗಿದೆ. ಯಾವ ಸ್ವರ್ಣ ಸಿಂಹಾಸನವನ್ನು ಶ್ರೀ ವಿದ್ಯಾರಣ್ಯರು ಹರಿಹರ ಬುಕ್ಕರಾಯರಿಗೆ ಅಲಂಕರಿಸಲು ಸಹಾಯಮಾಡಿದ್ದರೊ ಆ ಸಿಂಹಾಸನವು ಪಾಂಡವರಿಗೆ ಮತ್ತು ವಿಕ್ರಮಾದಿತ್ಯನಿಗೆ ಸೇರಿದ್ದು ಎಂಬ ಪ್ರತೀತಿ ಇದೆ. ಇದೇ ಸ್ವರ್ಣ ಸಿಂಹಾಸನವನ್ನು ಮೈಸೂರು ದೊರೆಗಳು ವಶಪಡಿಸಿಕೊಂಡು ಮೈಸೂರು ಸಂಸ್ಥಾನವನ್ನು ಸಂಸ್ಥಾನವನ್ನು ಕಟ್ಟಿದ್ದರಿಂದ ಸಹಜವಾಗಿವೆ ಮೈಸೂರಿನ ಎಲ್ಲಾ ದೊರೆಗಳು ಶೃಂಗೇರಿ ಗುರುಗಳನ್ನು ರಾಜಗುರುಗಳು ಎಂದು ಗೌರವಿಸುವುದನ್ನು ನಾವು ಇತಿಹಾಸದ ದಾಖಲೆಗಳಲ್ಲಿ ಕಾಣಬಹುದು. ಇಂದಿಗೂ ಶೃಂಗೇರಿ ಜಗದ್ಗುರುಗಳವರು ಇಂದಿಗೂ ವಿಜಯದಶಮಿ ಮೆರವಣಿಗೆಯಲ್ಲಿ ಮುಮ್ಮಡಿ ಕೃಷ್ಣರಾಜ ಒಡೆಯರು ಭಕ್ತಿಪೂರ್ವಕವಾಗಿ ಅರ್ಪಿಸಿದ ಸ್ವರ್ಣ ಪಾಲಕಿಯನ್ನು ಅನುಭವಿಸುವುದನ್ನು ನಾವು ಕಾಣಬಹುದು. ಶೃಂಗೇರಿ ಜಗದ್ಗುರುಗಳಾಗಿದ್ದ ನರಸಿಂಹ ಭಾರತೀ ಸ್ವಾಮಿಗಳವರು ಚಾಮರಾಜ ಒಡೆಯರಿಗೆ ಬಳುವಳಿಯಾಗಿ ಆಶೀರ್ವದಿಸಿದ ನವರತ್ನ ಕೀಟವನ್ನು ಇಂದಿಗೂ ಮೈಸೂರು ದಸರಾ ಆಚರಣೆಯಲ್ಲಿ ಪೂಜಿಸುವುದು ಗುರು-ಶಿಷ್ಯ ಬಾಂಧವ್ಯಕ್ಕೆ ಪ್ರತ್ಯಕ್ಷ ಪ್ರಮಾಣವಾಗಿ ನಿಲ್ಲುತ್ತದೆ.
