Saturday, December 6, 2025
Saturday, December 6, 2025
Home Blog Page 1832

ದೇವನೊಬ್ಬನೇ :ಆತನಿಗೆ ಸರಿಸಮಾನ ಯಾರಿಲ್ಲ – ಪ್ರವಾದಿ ಮಹಮ್ಮದ್ ಪೈಗಂಬರ್

0

ಪ್ರವಾದಿ ಮಹಮ್ಮದ್ ರವರು ಅತ್ಯಂತ ಬಡತನದಲ್ಲಿ ಬೆಳೆದವರು. ವಾಸಿಸಲು ಗುಡಿಸಲೊಂದೆ. ಅವರು ತೊಡುವ ಚರ್ಮದ ಅಂಗಿಯನ್ನು ಅವರೇ ಹೊಲಿಯುತ್ತಿದ್ದರು.
ಅವರು ಅತ್ಯಂತ ಸಾಧಾರಣ ಮತ್ತು ವಿನಮ್ರರಾಗಿದ್ದರು. ಹೀಗಾಗಿ ತಮ್ಮ ಸಹವರ್ತಿಗಳೊಂದಿಗೆ ಸುಲಭವಾಗಿ ಬೆರೆಯುತ್ತಿದ್ದರು. ಕುಟುಂಬದಲ್ಲಿ ಮನೆಗೆಲಸಕ್ಕೆ ನೆರವಾಗುತ್ತಿದ್ದರು. ಮದೀನ ಪಟ್ಟಣದಲ್ಲಿ ವಾಸಮಾಡುತ್ತಿದ್ದ ಅವರ ಜೀವಿತಾವಧಿಯಲ್ಲಿ ಇಡೀ ನಗರವೇ ಬೆಳ್ಳಿ- ಬಂಗಾರಗಳಿಂದ ತುಂಬಿತ್ತು . ಹೀಗಾಗಿ ಅವರನ್ನು “ಅರೇಬಿಯಾದ ರಾಜ “ಎಂದು ಕರೆಯುತ್ತಿದ್ದರು.
ಇವರ ಸರಳತೆಯನ್ನು ಕುರಿತು ಜಾರ್ಜ್ ಬರ್ನಾಡ್ ಶಾ ” ಇಸ್ಲಾಂ ನಲ್ಲಿರುವ ಜೀವಸತ್ವದಿಂದಾಗಿ ನಾನು ಯಾವಾಗಲೂ ಅದನ್ನು ಗೌರವಾನ್ವಿತ ಸ್ಥಾನದಲ್ಲೇ ಕಾಣುತ್ತಿರುವೆನು” ಎಂದಿದ್ದಾರೆ. ಮಹಾತ್ಮ ಗಾಂಧೀಜಿಯವರು “ಮಾನವ ಸಮೂಹದ ಕೋಟ್ಯಂತರ ಹೃದಯಗಳಲ್ಲಿ ವಿವಾದ ರಹಿತವಾದ ಪ್ರಭುತ್ವವನ್ನು ಸ್ಥಾಪಿಸಿದರು. ಅತ್ಯುನ್ನತ ವ್ಯಕ್ತಿಯ ಕುರಿತು ತಿಳಿಯ ಬಯಸಿದ್ದೆ…. ಅಂದಿನ ಜೀವನರಂಗದಲ್ಲಿ ಇಸ್ಲಾಮಿಗೆ ಸ್ಥಾನವನ್ನು ಗಳಿಸಿಕೊಟ್ಟಿದ್ದು ಖಡ್ಗವಲ್ಲ ಬದಲಾಗಿ ಪ್ರವಾದಿಯ ನಿರಾಡಂಬರತೆ , ಪರಿಪೂರ್ಣ ನಿಷ್ಕಪಟತೆ, ವಾಗ್ದಾನಗಳ ಕುರಿತು ಆತ್ಯಂತಿಕವಾದ ನಿಷ್ಠೆ, ನನ್ನ ಸ್ನೇಹಿತರು ಮತ್ತು ಸಹವರ್ತಿಗಳಿಗೆ ಅವರು ನೀಡುತ್ತಿದ್ದ ತೀವ್ರ ಪರಿಗಣನೆ, ಮತ ಪ್ರಚಾರ ಕಾರ್ಯದ ಕುರಿತು ಅವರಿಗಿದ್ದ ಎದೆಗಾರಿಕೆ, ನಿರ್ಭಯತೆ ಮತ್ತು ದೇವನಲ್ಲಿದ್ದ ಪರಿಪೂರ್ಣ ನಂಬಿಕೆ ಮತ್ತು ಭರವಸೆಗಳಾಗಿದ್ದವು ಮತ್ತು ವಾಸ್ತವತೆಯನ್ನು ನಾನು ಚೆನ್ನಾಗಿ ಮನದಟ್ಟು ಮಾಡಿಕೊಂಡೆ. ಇವುಗಳಾದ್ದವು ಅವರ ಮುಂದಿದ್ದ ಸರ್ವ ಅಡೆತಡೆಗಳನ್ನು ನಿವಾರಿಸಿದ ಅಸ್ತ್ರವೇ ಹೊರತು ಖಡ್ಗ ವಾಗಿರಲಿಲ್ಲ” ಎಂದಿದ್ದಾರೆ.

ಮಹಾತ್ಮ ಗಾಂಧೀಜಿಯವರು ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಬಗ್ಗೆ ತಾವು ತಿಳಿದುಕೊಂಡ ಸಂಗತಿಯ ಬಗ್ಗೆ ಬಹಳ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.
ಹೀಗೆ ಇನ್ನೂ ಅನೇಕ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಗಣ್ಯ ವ್ಯಕ್ತಿಗಳು , ಲೇಖಕರು, ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಸಂದೇಶಗಳ ಪ್ರಭಾವಕ್ಕೆ ಒಳಗಾಗಿದ್ದಾರೆ.
ಪ್ರವಾದಿ ಮುಹಮ್ಮದ್ ಪೈಗಂಬರ್ ರವರ ಪ್ರೀತಿ ಮತ್ತು ವಾತ್ಸಲ್ಯಭರಿತ ಭಾವನೆ ನಮ್ಮೆಲ್ಲರಿಗೂ ಮಾದರಿ. ಎಲ್ಲಾ ಜನರನ್ನು ಒಬ್ಬನೇ ದೇವನು ಸೃಷ್ಟಿಸಿದ್ದಾನೆ ಎಂದು ಭೋದಿಸಿ, ಎಲ್ಲರನ್ನೂ ಒಂದೇ ಕುಟುಂಬದ ಸದಸ್ಯರ ಹಾಗೆ ಕಾಣುತ್ತಿದ್ದ ಅವರ ಸ್ವಭಾವ ಮಾನವರ ಕೌಟುಂಬಿಕ ಸಮಸ್ಯೆಗಳಿಗೆ ಅತ್ಯುತ್ತಮ ಪರಿಹಾರವನ್ನು ನೀಡುವುದರಲ್ಲಿ ಸಂದೇಹವಿಲ್ಲ.

ಅಕ್ಕನ ಸಾಧನೆಯ ಬಗ್ಗೆ ತಮ್ಮನ ಪ್ರೀತಿಯ ಬರಹ

0

ಸಾಧನೆಯ ಹಾದಿಯಲ್ಲಿರುವ ಮಹಿಳೆಯ ಯಶಸ್ಸಿನ ಬಗ್ಗೆ ಕುಟುಂಬದ ಸದಸ್ಯರು ಬರೆಯುವುದು ಸಾಮಾನ್ಯದ ಸಂಗತಿ.
ಆದರೆ ಎಲ್ಲಾ ಮಮಕಾರಗಳನ್ನು ಮೀರಿ ಅಕ್ಕನ ಸಾಧನೆಯ ಮೆಟ್ಟಿಲುಗಳನ್ನು ಮನತುಂಬಿ ರಂಗೋಲಿ ಇಟ್ಟಂತೆ ಬಿಡಿಸಿಟ್ಟಿದ್ದಾರೆ ಸಹೋದರ ರಾಮಚಂದ್ರ ನಾಡಿಗ್.
ಬೆಳಗಾವಿಯ ಮರಾಠಾ ಲೋಕಮಾನ್ಯ ಸೊಸೈಟಿಯವರು ನವರಾತ್ರಿ ಅಂಗವಾಗಿ ನೀಡುವ ‘ಸ್ತ್ರೀಶಕ್ತಿ’ ಪ್ರಶಸ್ತಿಯನ್ನು ಈಬಾರಿ ನನ್ನ ಅಕ್ಕ ವತ್ಸಲಾ ಇವಳಿಗೆ ನೀಡಿದ್ದಾರೆ.
ಅಕ್ಕನ ಸಾಧನೆಯ ಪಯಣವನ್ನು ರಾಮಚಂದ್ರ ನಾಡಿಗ್‌ ಅವರು ತಮ್ಮದೇ ಆದ ಶೈಲಿಯಲ್ಲಿ ವಿವರಿಸಿರುವ ಬಗೆ ಹೀಗಿದೆ……,
ಉದ್ಯಮದಲ್ಲಿ ಯಾವ ಮಹಿಳೆ ತನ್ನನ್ನು ತೊಡಗಿಸಿಕೊಂಡು ಯಶಸ್ವಿ ಆಗಿರುತ್ತರೋ, ಸಾಧನೆ ಮಾಡಿರುತ್ತಾರೆಯೋ ಅವರಿಗೆ ಲೋಕಮಾನ್ಯ ಸೊಸೈಟಿಯು ಈ ಪ್ರಶಸ್ತಿಯನ್ನು ನೀಡುತ್ತದೆ.
ನನ್ನ ನಾಲ್ಕು ಜನ ಅಕ್ಕಂದಿರಲ್ಲಿ ವತ್ಸಲಾ ನಾಲ್ಕನೆಯವಳು. ಓದಿನಲ್ಲಿ ಸ್ವಲ್ಪ ಹಿಂದೆ ಇದ್ದರೂ, ವ್ಯವಹಾರದ ಲಕ್ಷಣಗಳು ಮೊದಲಿನಿಂದಲೇ ಇದ್ದವು.


ಟೈಪ್ ರೈಟಿಂಗ್ ಕಲಿತಳು, ಭರತನಾಟ್ಯ ಕಲಿತಳು ಯಾವುದೂ ಕೈಹಿಡಿಯಲಿಲ್ಲ.
ಈಕೆ ಒಳ್ಳೆ ನೃತ್ಯಗಾತಿ. ಅದನ್ನೇ ಮುಂದುವರಿಸಿದ್ದರೆ ನೃತ್ಯದಲ್ಲಿ ಒಳ್ಳೆಯ ಭವಿಷ್ಯವಿತ್ತು. ಆದರೆ ಮನೆಯಲ್ಲಿನ ಹಲವು ಸಮಸ್ಯೆಗಳು ಇದಕ್ಕೆ ಆಸ್ಪದ ಕೊಡಲಿಲ್ಲ.
ಕೆಲ ವರ್ಷಗಳ ಕಾಲ ಹಳ್ಳಿಯ ಮನೆಯಲ್ಲಿ ಕುಳಿತು ಬಟ್ಟೆ ಹೊಲಿದು ಅದರಲ್ಲೆ ಉತ್ತಮ ಹಣ ಸಂಪಾದಿಸುತ್ತಿದ್ದಳು.
ಕಡೆಗೆ ಬೆಳಗಾವಿಯ ವಿಲಾಸ್ ತಿನೈಕರ್ ಜೊತೆ ಮದುವೆಯಾಯಿತು. ಭಾವ ವಿಲಾಸ್ ಅವರ ಬಗ್ಗೆ ಹಾಗೂ ಅವರ ಉದ್ಯಮದ ಬಗ್ಗೆ ನಮಗೆ ಏನೂ ಗೊತ್ತಿರಲಿಲ್ಲ.
ಆಗ ನಮ್ಮ ಭಾವ ನಡೆಸುತ್ತ ಇದ್ದದ್ದು ಸಣ್ಣ ಹೋಟೆಲ್. ಬೆಳಗಾವಿಯ ಭಾಗ್ಯನಗರದಲ್ಲಿನ ಕೆ. ಎಲ್.ಇ ಸೊಸೈಟಿಯ ಹಾಸ್ಟೆಲ್ನಲ್ಲಿ ಹೋಟೆಲ್ ನಡೆಸುತ್ತಿದ್ದರು.
ವಿಲಾಸ್ ಈ ಹೋಟೆಲ್ ಜೊತೆ ಮತ್ತೊಂದು ಹೋಟೆಲ್ ಉದ್ಯಮಕ್ಕೆ ಕೈ ಹಾಕಿದರು. ವತ್ಸಲಾ ಇಲ್ಲಿನ ವ್ಯವಹಾರ ನೋಡಿಕೊಂಡರೆ, ಭಾವ ಮತ್ತೊಂದು ಹೋಟೆಲ್ ವ್ಯವಹಾರ ನೋಡಿಕೊಳ್ಳುತ್ತಿದ್ದರು.
ಕಡೆಗೆ ಒಮ್ಮೆ ಇದ್ದಬದ್ದ ಬಂಗಾರವನ್ನೆಲ್ಲ ಮಾರಿ, ಬ್ಯಾಂಕಿನಿಂದ ಒಂದಿಷ್ಟು ಲೋನ್ ಮಾಡಿ ಭಾಗ್ಯನಗರದಲ್ಲಿ ಒಂದು ಮಳಿಗೆಯನ್ನು ಖರೀದಿ ಮಾಡಿದರು. ಅದಕ್ಕೆ “ಪದ್ಮಶ್ರೀ ಹೋಟೆಲ್” ಎಂದು ನಾಮಕರಣ ಮಾಡಿದರು.
ಎರಡರ ಜೊತೆ ಮೂರನೆಯದಾಗಿ ಈ ಹೋಟೆಲ್ ಆರಂಭವಾಯಿತು.
ಅವೆರಡು ಕಾಲೇಜ್ ಕ್ಯಾಂಟೀನ್ ಆದರೆ, ಇದು ಮಾತ್ರ ಯಾರ ಆಧೀನದಲ್ಲೂ ಇಲ್ಲದೆ ಸ್ವತಂತ್ರವಾಗಿ ನಡೆಯುವಂತಾಯಿತು. ಪದ್ಮಶ್ರೀ ಹೋಟೆಲ್ನಲ್ಲಿ ಎರಡು ಹೊತ್ತು ಊಟ ಮಾತ್ರ.
ಕಡೆಗೆ ಎರಡು ಹಾಸ್ಟೆಲ್ ಕ್ಯಾಂಟೀನ್ ಗಳನ್ನು ಬಿಟ್ಟು ಪದ್ಮಶ್ರೀ ಹೋಟೆಲ್ ಸಮೀಪವೇ ಮತ್ತೊಂದು ಜಾಗವನ್ನು ಲೀಸ್ ಗೆ ಪಡೆದು ಎರಡು ವರ್ಷದ ಹಿಂದೆ ಮತ್ತೊಂದು ಹೋಟೆಲ್ ಆರಂಭವಾಗಿದೆ.
ಇಲ್ಲಿ ಊಟ ಇಲ್ಲ ತಿಂಡಿ ಮಾತ್ರ. ಇದರ ನಡುವೆ ಮದುವೆ, ಬರ್ತಡೆ ಪಾರ್ಟಿ ಮತ್ತಿತರ ಶುಭಕಾರ್ಯಗಳಿಗೆ ಕ್ಯಾಟರಿಂಗ್ ಸೇವೆ ಕೂಡಾ ಇದೆ. ಭಾವನವರ ಎಲ್ಲಾ ಸಾಧನೆ ಹಿಂದೆ ಇರುವುದು ಅಕ್ಕ ವತ್ಸಲಾ.
ಹಬ್ಬ-ಹರಿದಿನಗಳಲ್ಲಿ ಊಟದಲ್ಲಿ ಏನಾದರೂ ವಿಶೇಷತೆ, ಅಡುಗೆ, ತಿಂಡಿಯಲ್ಲಿ ಏನಾದರೂ ವಿಶೇಷತೆ ಹೀಗೆ ಹಲವು ಹೊಸ ಪ್ರಯೋಗಗಳನ್ನು ಮಾಡಿ ಗ್ರಾಹಕರ ಮೆಚ್ಚುಗೆಗೆ ಪದ್ಮಶ್ರೀ ಹೋಟೆಲ್ ಪಾತ್ರವಾಗಿದೆ ಎಂದರೆ ಅದಕ್ಕೆ ಕಾರಣ ವತ್ಸಲಾ.
ತವರು ಮನೆಯಲ್ಲಿ ನಮ್ಮಮ್ಮ ಮಾಡುತ್ತಿದ್ದ ಚಟ್ನಿ, ಪಲ್ಯಗಳನ್ನು ಹೋಟೆಲ್ ನಲ್ಲಿ ಪ್ರಯೋಗಿಸಿದ್ದು ಗ್ರಾಹಕರಿಗೆ ಬಹಳ ಇಷ್ಟವಾಗಿದೆ.
ಅದಕ್ಕೆ ಹಿರಿಯರು ಹೇಳಿದ ಮಾತು… ಹೆಣ್ಣು ಸಂಸಾರದ ಕಣ್ಣು.
ಶ್ರೀಮತಿ ವತ್ಸಲಾ ಅವರು ಇನ್ನೂ ಹೆಚ್ಚಿನದನ್ನು ಸಾಧಿಸಲಿ ….
ಶುಭಾಶಯಗಳು.

ಭೀಕರ ಮಳೆಗೆ ತುತ್ತಾದ ಕೇರಳಕ್ಕೆ, ಕೇಂದ್ರದ ಸಾಂತ್ವನ:

0

ಕೇರಳದಲ್ಲಿ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೇರಳ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ.

ಕೇರಳದ ಇಡುಕಿ ಜಲಾಶಯದಲ್ಲಿ ನೀರಿನ ಮಟ್ಟ 2396.90 ಅಡಿಯಿದ್ದು ಜನರ ಸುರಕ್ಷತೆಗಾಗಿ ಜಿಲ್ಲಾಡಳಿತವು ಆರೆಂಜ್ ಅಲರ್ಟ್ ಅನ್ನು ಘೋಷಿಸಿದೆ. ಶಬರಿಗಿರಿ ಯೋಜನೆಯ ಭಾಗಿಯಾಗಿರುವ ಕಕ್ಕಿ ಆಣೆಕಟ್ಟಿನ ಶಟರ್ ಗಳನ್ನು ತೆರೆಯಲಾಗಿದ್ದು, ಪಂಪ ನದಿಯ ನೀರಿನ ಮಟ್ಟ ಹೆಚ್ಚಾಗುವ ಸಾಧ್ಯತೆ ಇದೆ. ಶಬರಿಮಲೆ ಬೆಟ್ಟಕ್ಕೆ ತೆರಳುವ ಭಕ್ತಾದಿಗಳಿಗೆ ನೀರು ಬಿಡುವ ನಿರ್ಧಾರವು ಬೇಸರದ ಸಂಗತಿಯಾಗಿದೆ. ಈ ಭಾರೀ ಕೇರಳದಲ್ಲಿ ಧಾರಾಕಾರ ಮಳೆಯಿಂದಾಗಿ ಜನರ ಜನಜೀವನ ಅಸ್ತವ್ಯಸ್ತಗೊಂಡಿದೆ. ಅತಿಯಾದ ಮಳೆಯ ಕಾರಣ ಅನೇಕ ಕಡೆ ಭೂಕುಸಿತದಿಂದ ಅನೇಕರು ಸಾವಿಗೀಡಾಗಿದ್ದಾರೆ.
ಇಂತಹ ಸಂದರ್ಭದಲ್ಲಿ ನಿಮ್ಮ ರಕ್ಷಣೆಗಾಗಿ ನಾವಿದ್ದೇವೆ ಎಂದು ಮಾನ್ಯ ಪ್ರಧಾನ ಮಂತ್ರಿ,ಹಾಗೂ ಗೃಹ ಸಚಿವರು ತಮ್ಮ ಕಳಕಳಿಯನ್ನ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಪಡಿಸಿದ್ದರು.

ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕೇರಳದ ಮುಖ್ಯಮಂತ್ರಿ ಜೊತೆ ,ಭೂ ಕುಸಿತ ಮತ್ತು ಮಳೆ ವಿಚಾರದ ಬಗ್ಗೆ ಮಾತು ಕತೆ ನಡೆಸಿದ್ದೇನೆ, ಸಂಬಂಧ ಪಟ್ಟ ರಕ್ಷಣಾ ಇಲಾಖೆಯು ಕಾರ್ಯಚರಣೆ ನಡೆಸುತ್ತಿದೆ. ಆರೋಗ್ಯ ಇಲಾಖೆಯು ಗಾಯಾಳುಗಳಿಗೆ ಚಿಕಿತ್ಸೆ ಕಾರ್ಯವನ್ನು ಮಾಡುತ್ತಿದೆ. ಎಲ್ಲರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆಂದು ಮಾನ್ಯ ಪ್ರಧಾನಿ ಮೋದಿಯವರು ತಮ್ಮ ಅಭಿಪ್ರಾಯಗಳನ್ನು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಹಾಗೆ ಕೇಂದ್ರ ಗೃಹಸಚಿವ ಅಮಿತ್ ಶಾ ರವರು ಭಾರೀ ಮಳೆ ಹಾಗೂ ನೆರೆ ಉಂಟಾಗಿರುವ ಕೇರಳದ ಪರಿಸ್ಥಿತಿಯ ಬಗ್ಗೆ ನಾವು ನಿರಂತರವಾಗಿ ಪರಿಶೀಲನೆ ನಡೆಸಿದ್ದೇವೆ, ಜನರಿಗೆ ಅಗತ್ಯವಿರುವ ಎಲ್ಲಾ ಸಹಾಯವನ್ನು ಮಾಡಲು ಕೇಂದ್ರ ಸರ್ಕಾರವು ಸಿದ್ಧವಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಸಲು ಎನ್ ಡಿಆರ್ ಎಫ್ ತಂಡವನ್ನು ಕಳುಹಿಸಲಾಗಿದೆ. ಜನರ ಸುರಕ್ಷತೆಗಾಗಿ ಪ್ರಾರ್ಥಿಸುತ್ತಿದ್ದೇನೆ ಎಂದು ಪ್ರವಾಹ ಪೀಡಿತರಿಗೆ ಧೈರ್ಯತುಂಬುವ ನುಡಿಗಳನ್ನ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಕ್ರಿಕೆಟಿಗ ಯುವರಾಜ್ ಸಿಂಗ್ ಬಂಧನ : ಬಿಡುಗಡೆ

0

ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಹರಿಯಾಣ ಪೊಲೀಸರು ಹೇಳಿದ್ದಾರೆ.
ಕಳೆದ ವರ್ಷ ಇನ್ಸ್ಟಾಗ್ರಾಮ್ ನಲ್ಲಿ ರೋಹಿತ್ ಶರ್ಮ ಅವರೊಂದಿಗೆ ಲೈವ್ ಚಾಟ್ ನಲ್ಲಿ, ಯುವರಾಜ್ ಅವರು ಯುಜ್ವೇಂದ್ರ ಚಹಲ್ ಅವರನ್ನು ಗುರಿಯಾಗಿಸಿಕೊಂಡು ಪರಿಶಿಷ್ಟ ಜಾತಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿತ್ತು. ಆದರೆ ಈ ಪ್ರಕರಣದಲ್ಲಿ ಯುವರಾಜ್ ಸಿಂಗ್ ಅವರಿಗೆ ತಕ್ಷಣ ಜಾಮೀನು ನೀಡಿ ಹೈಕೋರ್ಟ್ ಆದೇಶದ ಮೇರೆಗೆ ಬಿಡುಗಡೆ ಮಾಡಲಾಗಿದೆ. ಹೈಕೋರ್ಟ್ ಆದೇಶದ ನಂತರ ಯುವರಾಜ್ ತನ್ನ ವಕೀಲರೊಂದಿಗೆ ಹಿಸಾರ್ ತಲುಪಿದರು.
ಕೆಲವು ಗಂಟೆಗಳ ವಿಚಾರಣೆಯ ನಂತರ ಯುವರಾಜ್ ಸಿಂಗ್ ಚಂಡಿಗಢಕ್ಕೆ ಹೋದರು ಎಂದು ಮೂಲಗಳು ತಿಳಿಸಿವೆ.

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್

0

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 324 ಪ್ರೊಬೆಷನರಿ ಅಧಿಕಾರಿ ( PO) ಹುದ್ದೆಗಳ ನೇಮಕಾತಿ ಸೇರಿದಂತೆ 6,328 ಹುದ್ದೆಗಳಿವೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹಾಗೂ ಅರ್ಜಿಯಲ್ಲಿ ಬದಲಾವಣೆ ಮಾಡಲು ಅಕ್ಟೋಬರ್ 25 ರವರೆಗೆ ಕಾಲಾವಕಾಶ ನೀಡಲಾಗಿದೆ.

ಪರಿಶಿಷ್ಟ ಜಾತಿ (SC ) 162
ಇತರೆ ಹಿಂದುಳಿದ ವರ್ಗಗಳಿಗೆ ( ‌OBC) 560
ಆರ್ಥಿಕವಾಗಿ ದುರ್ಬಲ ವಿಭಾಗ (EWS ) ‌‌200
ಸಾಮಾನ್ಯ ವರ್ಗಕ್ಕೆ 810 ಹುದ್ದೆಗಳಿವೆ.

ಶೈಕ್ಷಣಿಕ ಅರ್ಹತೆ

ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿಯನ್ನು ಹೊಂದಿರಬೇಕು. ತಮ್ಮ ಪದವಿಯ ಅಂತಿಮ ವರ್ಷ ಅಥವಾ ಸೆಮಿಸ್ಟರ್ ನಲ್ಲಿರುವವರು ಸಂದರ್ಶನಕ್ಕೆ ಕರೆದರೆ, ಅವರು ಡಿಸೆಂಬರ್ 31, 2021 ರಂದು ಅಥವಾ ಅದಕ್ಕೂ ಮೊದಲು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂಬುದಕ್ಕೆ ಪುರಾವೆಯನ್ನು ಹಾಜರುಪಡಿಸಬೇಕಾಗುತ್ತದೆ ಎಂಬ ಷರತ್ತಿಗೆ ಒಳಪಟ್ಟು ಅರ್ಜಿ ಸಲ್ಲಿಸಬಹುದು.
ಇಂಟಿಗ್ರೇಟೆಡ್ ಡುಯಲ್ ಡಿಗ್ರಿ (ಐಡಿಡಿ) ಪ್ರಮಾಣಪತ್ರ ಹೊಂದಿರುವ ಅಭ್ಯರ್ಥಿಗಳು ಐಡಿಡಿ ಉತ್ತಿರ್ಣ ಗೊಳಿಸಿರುವ ದಿನಾಂಕ ಡಿಸೆಂಬರ್ 31, 2021 ರಂದು ಅಥವಾ ಅದಕ್ಕೂ ಮೊದಲು ಇರಬೇಕು ಎಂಬುದನ್ನು ಗಮನಿಸಬೇಕು.

ವಯೋಮಿತಿ

ಅಭ್ಯರ್ಥಿಯು ಏಪ್ರಿಲ್ 1, 2021 ರಂತೆ 21 ವರ್ಷಕ್ಕಿಂತ ಕಡಿಮೆ ಇರಬಾರದು.
30 ವರ್ಷಗಳಿಗಿಂತ ಮೇಲ್ಪಟ್ಟವರಾಗಿರಬಾರದು.
ಎಸ್ಸಿ, ಎಸ್ಟಿ, ಓಬಿಸಿ, ಪಿಡಬ್ಲ್ಯೂಡಿ, ಮಾಜಿ ಸೈನಿಕರು ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಇದೆ.

ಆಯ್ಕೆ ವಿಧಾನ

ಅಭ್ಯರ್ಥಿಗಳ ಆಯ್ಕೆಯನ್ನು ಪ್ರಿಲಿಮ್ಸ್, ಮೈನ್ಸ್, ಮತ್ತು ಸಂದರ್ಶನದ ಆಧಾರದ ಮೇಲೆ ಮಾಡಲಾಗುತ್ತದೆ. ಫೀಲಿಮ್ಸ್ ನಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಮುಂದಿನ ನೇಮಕಾತಿ ಪ್ರಕ್ರಿಯೆಗೆ ಕರೆಯಲಾಗುತ್ತದೆ.

ಅರ್ಜಿ ಸಲ್ಲಿಕೆ ವಿಧಾನ ಮತ್ತು ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು www.sbi.co.in ಜಾಲತಾಣಕ್ಕೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮತ್ತು ಅಧಿಸೂಚನೆ ಸಂಬಂಧಿಸಿದಂತೆ ವಿವರವನ್ನು ಪಡೆಯಬಹುದು.

ಗತಿ ಶಕ್ತಿ : ದೇಶದ ಅಭ್ಯುದಯಕ್ಕೆ ಅಡಿಪಾಯ

0

ದುರ್ಗಾಷ್ಟಮಿಯಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೆಹಲಿಯ ಪ್ರಗತಿ ಮೈದಾನದ ನ್ಯೂ ಎಕ್ಸಿಬಿಶನ್ ಕಾಂಪ್ಲೆಕ್ಸ್ ನಲ್ಲಿ ಗತಿ ಶಕ್ತಿ ಯೋಜನೆಯನ್ನು ಉದ್ಘಾಟಿಸಿದರು.

ಪ್ರಧಾನಿಯವರು ತಮ್ಮ ಉದ್ಘಾಟನಾ ನುಡಿಗಳನ್ನಾಡುತ್ತ “ಶಕ್ತಿ ದೇವತೆಯ ಆರಾಧನೆಯಂದು ಆರಂಭಗೊಂಡ ಗತಿ ಶಕ್ತಿ ಯೋಜನೆಯು ಅಷ್ಟೇ ಹೊಸ ಶಕ್ತಿಯನ್ನು ಪಡೆದುಕೊಂಡಿದೆ. ಇಂತಹ ಪವಿತ್ರವಾದ ದಿನ ಆರಂಭಗೊಂಡಿರುವ ಯೋಜನೆಯಿಂದ ದೇಶವು ಪ್ರಗತಿ ಹೊಂದುವುದರಲ್ಲಿ ಸಂದೇಹವಿಲ್ಲ. ಆತ್ಮ ನಿರ್ಭರ ಭಾರತ ಯೋಜನೆಯಿಂದ ಮುಂದಿನ 25 ವರ್ಷಗಳ ಪ್ರಗತಿಯ ಬೆಳವಣಿಗೆಗೆ ಇದು ಅಡಿಪಾಯ ಆಗಿದೆ” ಎಂದರು.
21ನೇ ಶತಮಾನದ ನವ ಭಾರತಕ್ಕೆ ಗತಿ ಶಕ್ತಿಯು ಒಂದು ದಿಕ್ಸೂಚಿ ಯೋಜನೆಯಾಗಿದೆ. ಭಾರತೀಯ ಉದ್ಯಮಗಳು, ವ್ಯವಹಾರ, ಭಾರತೀಯ ಕೈಗಾರಿಕಾ ಉತ್ಪಾದಕರು, ಕೃಷಿಕರು, ಮತ್ತು ಭಾರತೀಯ ಪ್ರಜೆಗಳ ಹಿತದೃಷ್ಟಿಯನ್ನು ಈ ಯೋಜನೆಯು ಒಳಗೊಂಡಿದೆ. ಈ ಎಲ್ಲ ಸಮುದಾಯದ ಅಭಿವೃದ್ಧಿಗೆ ಅಡ್ಡಗಾಲಾಗಿರುವ ಸಮಸ್ಯೆಗಳನ್ನು ಬಗೆಹರಿಸುವುದು ಗತಿ ಶಕ್ತಿ ಯೋಜನೆ ಪರಮೋದ್ದೇಶ.
ಇಲ್ಲಿಯವರೆಗೆ ನಡೆದುಬಂದ ಪ್ರಗತಿಯ ಬೆಳವಣಿಗೆಯು ವಿಶ್ವಾಸದ ಕೊರತೆಯಿಂದ ನಿಧಾನಗತಿಯಲ್ಲಿತ್ತು. ಪ್ರಗತಿಯು ತೀವ್ರ ವೇಗ ಪಡೆದುಕೊಳ್ಳಬೇಕು ಮತ್ತು ಸ್ವಯಂ ಉತ್ಸಾಹ, ಸಂಘಟಿತ ಪ್ರಯತ್ನ ವಾಗಿರಬೇಕು. 21ನೇ ಶತಮಾನದ ಭಾರತವು ಹಳೆಯ ವ್ಯವಸ್ಥೆ ಮತ್ತು ಅಭ್ಯಾಸಗಳಿಂದ ವಿಮುಖವಾಗಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ಕೊಟ್ಟರು.
ಪ್ರಧಾನಮಂತ್ರಿ ಅವರು ಹೇಳಿದ ಪ್ರಗತಿ ಮಂತ್ರ ಹೀಗಿವೆ : ಪ್ರಗತಿಗಾಗಿ ಕೆಲಸ, ಸಂಪತ್ತಿಗಾಗಿ ಪ್ರಗತಿ, ಪ್ರಗತಿಗಾಗಿ ಯೋಜನೆ, ಮತ್ತು ಪ್ರಗತಿಗಾಗಿ ಎಲ್ಲಾ ಆದ್ಯತೆ.
ಮುಂದುವರಿದು ಮಾತನಾಡಿದ ಪ್ರಧಾನಿ ಶ್ರೀ ಮೋದಿಯವರು ನಾವು ಕಾರ್ಯ ಪ್ರವೃತ್ತ ಸಂಸ್ಕೃತಿಯನ್ನು ಮೈಗೂಡಿಸಿಕೊಂಡಿದ್ದು, ಅವುಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುತ್ತಿದ್ದೆವೆ.ಆದರೆ ಎಲ್ಲಾ ಯೋಜನೆಗಳನ್ನು ನಿಗದಿತ ಅವಧಿಗಿಂತ ಮುಂಚೆ ಮುಗಿಸುವಲ್ಲಿ ಪ್ರಯತ್ನಶೀಲರಾಗಿದ್ದೆವೆ ಎಂದರು.
ಗತಿ ಶಕ್ತಿಯು ಬೃಹತ್ತ್ ಯೋಜನೆಯಾಗಿದ್ದು, ಮಂಜೂರಾಗಿರುವ ಅಂದಾಜು ವೆಚ್ಚವನ್ನು ಸಾರ್ಥಕವಾಗಿ ಬಳಸುವುದೇ ಆಗಿದೆ. ತಾವು 2014ರಲ್ಲಿ ಪ್ರಧಾನ ಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡಾಗ ಇಂತಹ ತಡೆ ಗೊಂಡಿದ್ದ ನೂರಾರು ಯೋಜನೆಗಳನ್ನು ಪರಿಶೀಲಿಸಲಾಯಿತು. ಎಲ್ಲ ಯೋಜನೆಗಳನ್ನು ಒಂದೇ ವೇದಿಕೆಗೆ ತಂದು ಅಡೆತಡೆಗಳನ್ನು ದೂರ ಮಾಡಲು ಪ್ರಯತ್ನಿಸಲಾಯಿತು. ಈ ಎಲ್ಲಾ ಯೋಜನೆಗಳನ್ನು ಯಶಸ್ವಿಗೊಳಿಸಲು ಸರ್ವಪ್ರಯತ್ನಗಳನ್ನು ತಮ್ಮ ಸರ್ಕಾರ ಕೈಗೊಂಡಿರುವ ಬಗ್ಗೆ ಸಂತೃಪ್ತಿ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಕೇಂದ್ರ ಸಚಿವರಾದ ಶ್ರೀ ನಿತಿನ್ ಗಡ್ಕರಿ, ಶ್ರೀ ಪಿಯುಷ್ ಗೊಯಲ್, ಶ್ರೀ ಹರ್ದೀಪ್ ಸಿಂಘ್ ಪುರಿ, ಶ್ರೀ ಸರ್ಭಾನಂದ ಸೊನೊವಾಲ್, ಶ್ರೀ ಜ್ಯೋತಿರಾಧಿತ್ಯ ಸಿಂಧಿಯಾ, ಶ್ರೀ ಅಶ್ವಿನಿ ವೈಷ್ಣವ್, ಮತ್ತು ಆರ್.ಕೆ. ಸಿಂಗ್ ಮುಂತಾದ ಗಣ್ಯಾತಿಗಣ್ಯರು ಉಪಸ್ಥಿತರಿದ್ದರು.

ಐಪಿಎಲ್-14 ಕ್ರಿಕೆಟ್ ಪುರಸ್ಕಾರ

0

ಐಪಿಎಲ್ 2021 ಸೀಸನ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಕೆಲ ಆಟಗಾರರು ವಿಶೇಷ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 14 ನಲ್ಲಿ CSK ತಂಡವು ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದೆ. ಫೈನಲ್ ನಲ್ಲಿ ಮಿಂಚಿದ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಯನ್ನು ಫಾಫ್ ಡುಪ್ಲೆಸಿಸ್ ಪಡೆದಿದ್ದಾರೆ. CSK ತಂಡದ ರುತುರಾಜ್ ಗಾಯಕ್ವಾಡ್ ಅವರಿಗೆ ಎಮರ್ಜಿಂಗ್ ಪ್ಲೇಯರ್ ಪ್ರಶಸ್ತಿ ಲಭಿಸಿದೆ. ಹಾಗೆಯೇ ರಾಜಸ್ತಾನ ರಾಯಲ್ಸ್ ತಂಡಕ್ಕೆ ಕ್ರೀಡಾಸ್ಫೂರ್ತಿಯಿಂದ ಆಡಿದ ತಂಡಕ್ಕೆ ನೀಡುವ ಫೇರ್ ಪ್ರಶಸ್ತಿ ಪಡೆದಿದೆ. ಕ್ಯಾಚ್ ಆಫ್ ದಿ ಸೀಸನ್ ಪ್ರಶಸ್ತಿ ಪಂಜಾಬ್ ಕಿಂಗ್ಸ್ ತಂಡದ ರವಿ ಬಿಷ್ಣೋಯ್ ಗೆ ಲಭಿಸಿದೆ. ಪ್ಲೇಯರ್ ಆಫ್ ದಿ ಸೀಸನ್ ಪ್ರಶಸ್ತಿ KKR ತಂಡದ ವೆಂಕಟೇಶ್ ಅಯ್ಯರ್ ಪಡೆದಿದ್ದಾರೆ. ಗೇಮ್ ಚೇಂಜರ್ ಆಫ್ ದಿ ಸೀಸನ್ -RCB ಯ ಹರ್ಷಲ್ ಪಟೇಲ್ ಅವರಿಗೆ ಸಿಕ್ಕಿದೆ. ಸೀಸನ್ನಲ್ಲಿ 635 ರನ್ ಬಾರಿಸಿದ ರುತುರಾಜ್ ಗಾಯಕ್ವಾಡ್ ಆರೆಂಜ್ ಕ್ಯಾಪ್ ಪಡೆದಿದ್ದಾರೆ. RCB ತಂಡದ ಬಾಲರ್ ಹರ್ಷಲ್ ಪಟೇಲ್ 32 ವಿಕೆಟ್ ಗಳನ್ನು ಪಡೆದು ಪರ್ಪಲ್ ಕ್ಯಾಪ್ ಅನ್ನು ತಮ್ಮದಾಗಿಸಿಕೊಂಡಿದ್ದಾರೆ. ಸೀಸನ್ ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರರಿಗೆ ನೀಡುವ ಪ್ರಶಸ್ತಿ 30 ಸಿಕ್ಸ್ ಬಾರಿಸಿದ K.L. ರಾಹುಲ್ ಅವರ ಪಾಲಾಗಿದೆ. ಒಟ್ಟಾರೆ ಐಪಿಎಲ್ 2021ರ ಆವೃತ್ತಿ ಮುಗಿದಿದ್ದರೂ ಕೂಡ ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ ಕೆಲವು ಆಟಗಾರರು ಪಡೆದಿರುವ ವಿಶೇಷ ಪ್ರಶಸ್ತಿಗಳಿಂದ ಅಭಿಮಾನಿಗಳಲ್ಲಿ ಸಂತಸ ಮೂಡಿದೆ.

ತಜ್ಞರ ಸಲಹೆ ಆಧರಿಸಿ ಶಾಲೆಗಳು ಪ್ರಾರಂಭ? : ಸಚಿವ ಬಿ.ಸಿ.ನಾಗೇಶ್

0

ರಾಜ್ಯದಲ್ಲಿ ಒಂದರಿಂದ ಐದನೇ ತರಗತಿ ಗಳನ್ನು ಪುನರಾರಂಭಿಸಲು ಕುರಿತಂತೆ ಇನ್ನೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಕೋವಿಡ್ ಕಾರಣದಿಂದಾಗಿ ಶಾಲೆ ತಡವಾಗಿ ಆರಂಭಗೊಳ್ಳುತ್ತಿರುವುದರಿಂದ ಶೈಕ್ಷಣಿಕ ಪಠ್ಯಕ್ರಮ ಕುಂಠಿತಗೊಂಡಿದೆ. ಹೀಗಾಗಿ ಶನಿವಾರ ಭಾನುವಾರವೂ ತರಗತಿ ನಡೆಸುವ ಸಾಧ್ಯತೆಯಿದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ .ನಾಗೇಶ್ ತಿಳಿಸಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿ. ಸಿ. ನಾಗೇಶ್ ರವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಇನ್ನೆರಡು ದಿನಗಳಲ್ಲಿ ಪ್ರಾಥಮಿಕ ಶಾಲೆಗಳ ಪುನರಾರಂಭ ಕುರಿತಂತೆ ಸಭೆ ನಡೆಯಲಿದೆ. ಆ ಸಭೆಯಲ್ಲಿ ಕೋವಿಡ್ ಉಸ್ತುವಾರಿಗಳು, ತಾಂತ್ರಿಕ ಸಲಹಾ ಸಮಿತಿ, ತಜ್ಞರು,ನೀಡುವಂತ ಸಲಹೆಗಳು ಆಧಾರದ ಮೇಲೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಶೃಂಗೇರಿ ದಸರಾ ವೈಶಿಷ್ಟ್ಯತೆ – ಡಾ.ಪ್ರಶಾಂತ್ ಶೃಂಗೇರಿ, ಮೈಸೂರು.

0

ಭಾರತದಾದ್ಯಂತ ಒಂಬತ್ತು ದಿನಗಳ ದಸರಾ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸುವುದು ಸರ್ವೇಸಾಮಾನ್ಯವಾದ ವಿಚಾರ. ಕರ್ನಾಟಕದಲ್ಲಿ ಶೃಂಗೇರಿ ದಸರಾ ತನ್ನದೇ ಆದ ವಿಶಿಷ್ಟತೆಯನ್ನು ಹೊಂದಿದೆ. ಸಾಧಾರಣವಾಗಿ ಶೃಂಗೇರಿ ದಸರಾ ವಿವರಣೆಗಳನ್ನು ಮಾಧ್ಯಮದವರು ನೀಡುವಾಗ ಧಾರ್ಮಿಕ ಆಚರಣೆಗಳನ್ನು ಮಾತ್ರ ಕೇಂದ್ರೀಕರಿಸುತ್ತಾರೆ. ಶೃಂಗೇರಿ ಮಠವನ್ನು ಧಾರ್ಮಿಕ-ಸಾಮಾಜಿಕ ಪಾರಂಪರಿಕ ಮತ್ತು ಐತಿಹಾಸಿಕ ಹಿನ್ನೆಲೆಯಲ್ಲಿ ವಿತರಿಸಬಹುದಾಗಿದೆ.

ಶೃಂಗೇರಿ ಗುರುಪರಂಪರೆಯ 12ನೇ ಗುರುಗಳಾಗಿದ್ದ ಶ್ರೀ ವಿದ್ಯಾರಣ್ಯ ಮಹಾಸ್ವಾಮಿಗಳು ವಿಜಯನಗರ ಮಹಾಸಾಮ್ರಾಜ್ಯ ನಿರ್ಮಾಣದಲ್ಲಿ ವಹಿಸಿದ ಪಾತ್ರದಿಂದ 14ನೇ ಶತಮಾನದಲ್ಲಿ ಶೃಂಗೇರಿ ಮಠಕ್ಕೆ ಅಪಾರವಾದ ಗೌರವ ಪ್ರಾಪ್ತಿಯಾಯಿತು. ಪರಕೀಯ ಶಕ್ತಿಗಳಿಂದ ಭಾರತೀಯ ಸಂಸ್ಕೃತಿ ಧರ್ಮ ಗಳಿಗೆ ಧಕ್ಕೆ ಉಂಟಾಗಿ ಅರಾಜಕತೆ ಉಂಟಾಗಿದ್ದ ಸಂದಿಗ್ಧ ಪರಿಸ್ಥಿತಿಯಲ್ಲಿ ಭಾರತೀಯ ಮೌಲ್ಯಗಳ ಸಂರಕ್ಷಣೆಯ ಪಣತೊಟ್ಟ ಸಂಗಮ ಸಹೋದರರಾದ ಹಕ್ಕ-ಬುಕ್ಕರು ಮಾತಂಗ ಪರ್ವತದಲ್ಲಿ ತಪಸ್ಸು ಮಾಡುತ್ತಿದ್ದ ಶ್ರೀ ವಿದ್ಯಾರಣ್ಯರ ಮರೆ ಹೊಕ್ಕು ಅವರ ಕೃಪಾರ್ಶೀವಾದ ಪಡೆದರು. ಶ್ರೀ ವಿದ್ಯಾರಣ್ಯರ ಮಾರ್ಗದರ್ಶನದಿಂದ 1336ರಲ್ಲಿ ವಿಜಯನಗರವೆಂಬ ಮಹಾಸಾಮ್ರಾಜ್ಯ ನಿರ್ಮಿಸಿ ಅದಕ್ಕೆ ಗುರು ವಿದ್ಯಾರಣ್ಯರ ಸ್ಮರಣಾರ್ಥ “ವಿದ್ಯಾನಗರ” ಎಂದು ನಾಮಕರಣ ಮಾಡಿದರು. ಶೃಂಗೇರಿ ಮಠದ ಶ್ರೀ ವಿದ್ಯಾರಣ್ಯರ ಆಶೀರ್ವಾದದಿಂದಲೇ ತಮಗೆ ಸಿಂಹಾಸನ ಪ್ರಾಪ್ತಿಯಾಯಿತು ಎಂದು ವಿದ್ಯಾರಣ್ಯರ ಬಲವನ್ನು ವರ್ಣಿಸುವ ನೂರಾರು ಶಾಸನಗಳು ಇಂದಿಗೂ ಶೃಂಗೇರಿ ಮಠ ಮತ್ತು ವಿಜಯನಗರ ಸಾಮ್ರಾಜ್ಯದ ಗುರು-ಶಿಷ್ಯ ಸಂಬಂಧವನ್ನು ಸಾರುತ್ತದೆ. ವಿಜಯನಗರದ ದೊರೆಗಳು ವಿದ್ಯಾರಣ್ಯರಿಗೆ “ಕರ್ನಾಟಕ ಸಿಂಹಾಸನ ಪ್ರತಿಷ್ಠಾಪನಾಚಾರ್ಯ “ಎಂದು ಬಿರುದಿನಿಂದ ಗೌರವಿಸಿದರು. ಹರಿಹರ ಬುಕ್ಕ ರಾಯರು ವಿದ್ಯಾರಣ್ಯ ರನ್ನು ಅಡ್ಡಪಲ್ಲಕ್ಕಿ ಮೆರವಣಿಗೆಯಲ್ಲಿ ಕರೆತಂದು ಗೌರವಿಸಿದರೆಂದು ಇಂದಿಗೂ ಹಂಪಿಯ ವಿರೂಪಾಕ್ಷ ದೇವಾಲಯದ ಛಾವಣಿಯಲ್ಲಿರುವ ಸುಮಾರು 30 ಅಡಿ ಬಿತ್ತಿಚಿತ್ರ ಸಾರುತ್ತಿದೆ. ವಿಜಯನಗರದ ವೈಭವವನ್ನು ಸಾರುವ ಕಲೆ- ಸಾಹಿತ್ಯ, ಸಂಗೀತ, ಸಂಸ್ಕೃತಿ, ಪರಂಪರೆಗಳ ಉತ್ಸವ ವಿದ್ಯಾರಣ್ಯರ ಮಾರ್ಗದರ್ಶನದಿಂದ ವಿಜಯನಗರದ ರಾಜರು ಆರಂಭಿಸಿದರು. ಹಂಪಿಯ ಮಹಾನವಮಿ ದಿಬ್ಬದ ಮೇಲೆ ನಡೆಯುತ್ತಿದ್ದ ವೈಭವೋಪೇತ ಕಾರ್ಯಕ್ರಮದ ಉತ್ಸವ ನಮ್ಮ ನಾಡಿನ ಸಾಂಸ್ಕೃತಿಕ ಹಿರಿಮೆಗೆ ಸಾಕ್ಷಿಯಾಗಿತ್ತು. ವಿಜಯನಗರದ ದೊರೆಗಳು ತಮ್ಮ ವಿಜಯೋತ್ಸವದ ಸಂತೋಷದಲ್ಲಿ ಶೃಂಗೇರಿ ಮಠಕ್ಕೆ ಭೂದಾನವನ್ನು ಮಾಡಿದರು. ಗುರು ವಿದ್ಯಾಶಂಕರ ಅದ್ವಿತೀಯ ದೇವಾಲಯವನ್ನು ಶೃಂಗೇರಿ ಮಠದಲ್ಲಿ ಕಟ್ಟಿಸಿಕೊಟ್ಟರು. ಶೃಂಗೇರಿ ಮಠಕ್ಕೆ ವಿಜಯನಗರದ ಸಾಮ್ರಾಜ್ಯ ಇದ್ದ ಐತಿಹಾಸಿಕ ಸಂಬಂಧವೂ ಶೃಂಗೇರಿ ಮಠದ ಹಲವಾರು ಸಂಪ್ರದಾಯ, ಆಚರಣೆ ಹಾಗೂ ಉತ್ಸವಗಳ ಉಗಮಕ್ಕೆ ಪ್ರೇರಣೆಯಾಯಿತು. ವಿಜಯನಗರದ ಹಕ್ಕ-ಬುಕ್ಕರು ವಿದ್ಯಾರಣ್ಯರಿಗೆ ಕೊಟ್ಟ ರಾಜ ಲಾಂಛನವನ್ನು ಗೌರವದಿಂದ ಶೃಂಗೇರಿ ಮಠದಲ್ಲಿ ದಸರಾ ದರ್ಬಾರ್ ಆಚರಣೆ ಆರಂಭವಾಯಿತು. ವಿಜಯನಗರದ ಸ್ಥಾಪನೆಯಾಗಿ ಇಂದಿಗೆ ಸುಮಾರು ಆರೂವರೆ ಶತಮಾನಗಳು ಕಳೆದರೂ ಇಂದಿಗೂ ಐತಿಹಾಸಿಕ ಧಾರ್ಮಿಕ ಆಚರಣೆಯು ಶೃಂಗೇರಿ ಮಠದ ದಸರಾ ಹಬ್ಬದ ವಿಶೇಷತೆಯಾಗಿದೆ. ಶಾರದಾ ಮಾತೆಯ 9 ಅಲಂಕಾರಗಳು ಹೋಮಹವನ ಪಾರಾಯಣ ಇತ್ಯಾದಿ ಧಾರ್ಮಿಕ ಆಚರಣೆಗಳು ಸಾಧಾರಣವಾಗಿ ನಮ್ಮ ನಾಡಿನ ಎಲ್ಲ ಮಠ-ಮಂದಿರ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಕಂಡುಬರುತ್ತದೆ. ಆದರೆ ಈ ದರ್ಬಾರ ಆಚರಣೆಯು ವಿಜಯನಗರದ ದೊರೆಗಳು ವಿಜಯನಗರ ವೆಂಬ ಮಹಾ ಸಾಮ್ರಾಜ್ಯವನ್ನು ಕಟ್ಟಲು ಕಾರಣೀಭೂತರಾದ ಶ್ರೀ ವಿದ್ಯಾರಣ್ಯರಿಗೆ ಕೊಟ್ಟ ರಾಜ್ಯ ಗೌರವದ ಸಂಕೇತವಾಗಿದ್ದು ಕನ್ನಡನಾಡಿನ ಇತಿಹಾಸ, ಪರಂಪರೆ ಹಾಗೂ ಸಂಸ್ಕೃತಿಯನ್ನು ಸಾರುತ್ತದೆ.ಶೃಂಗೇರಿ ದಸರಾ ವೈಶಿಷ್ಟ್ಯತೆ. ವಿಜಯನಗರದ ದೊರೆಗಳ ನಂತರ ಕೆಳದಿ, ತ್ರಾವೆಂಕೂರ್, ಮೈಸೂರು, ಸುರಪುರ, ಜಮಖಂಡಿ, ನೇಪಾಳ, ಬರೋಡ ಮುಂತಾದ ರಾಜಸಂಸ್ಥಾನಗಳು ಶೃಂಗೇರಿ ಜಗದ್ಗುರುಗಳನ್ನು ಅಪಾರವಾಗಿ ಗೌರವಿಸುವ ಮಾರ್ಗದರ್ಶನ ಪಡೆದರೆಂದು ಪತ್ರಾಗಾರದ ಇಲಾಖೆಯ ದಾಖಲೆಗಳು ತಿಳಿಸುತ್ತವೆ. ಇಂದಿಗೂ ಶೃಂಗೇರಿ ದರ್ಬಾರ್ ನಲ್ಲಿ ಭಾರತದ ಹಲವಾರು ರಾಜವಂಶಸ್ಥರು ಗುರುಕಾಣಿಕೆಯನ್ನು ಸಲ್ಲಿಸುವುದು ವಿಶೇಷವಾಗಿದೆ. ಯಾವ ಸ್ವರ್ಣ ಸಿಂಹಾಸನವನ್ನು ಶ್ರೀ ವಿದ್ಯಾರಣ್ಯರು ಹರಿಹರ ಬುಕ್ಕರಾಯರಿಗೆ ಅಲಂಕರಿಸಲು ಸಹಾಯಮಾಡಿದ್ದರೊ ಆ ಸಿಂಹಾಸನವು ಪಾಂಡವರಿಗೆ ಮತ್ತು ವಿಕ್ರಮಾದಿತ್ಯನಿಗೆ ಸೇರಿದ್ದು ಎಂಬ ಪ್ರತೀತಿ ಇದೆ. ಇದೇ ಸ್ವರ್ಣ ಸಿಂಹಾಸನವನ್ನು ಮೈಸೂರು ದೊರೆಗಳು ವಶಪಡಿಸಿಕೊಂಡು ಮೈಸೂರು ಸಂಸ್ಥಾನವನ್ನು ಸಂಸ್ಥಾನವನ್ನು ಕಟ್ಟಿದ್ದರಿಂದ ಸಹಜವಾಗಿವೆ ಮೈಸೂರಿನ ಎಲ್ಲಾ ದೊರೆಗಳು ಶೃಂಗೇರಿ ಗುರುಗಳನ್ನು ರಾಜಗುರುಗಳು ಎಂದು ಗೌರವಿಸುವುದನ್ನು ನಾವು ಇತಿಹಾಸದ ದಾಖಲೆಗಳಲ್ಲಿ ಕಾಣಬಹುದು. ಇಂದಿಗೂ ಶೃಂಗೇರಿ ಜಗದ್ಗುರುಗಳವರು ಇಂದಿಗೂ ವಿಜಯದಶಮಿ ಮೆರವಣಿಗೆಯಲ್ಲಿ ಮುಮ್ಮಡಿ ಕೃಷ್ಣರಾಜ ಒಡೆಯರು ಭಕ್ತಿಪೂರ್ವಕವಾಗಿ ಅರ್ಪಿಸಿದ ಸ್ವರ್ಣ ಪಾಲಕಿಯನ್ನು ಅನುಭವಿಸುವುದನ್ನು ನಾವು ಕಾಣಬಹುದು. ಶೃಂಗೇರಿ ಜಗದ್ಗುರುಗಳಾಗಿದ್ದ ನರಸಿಂಹ ಭಾರತೀ ಸ್ವಾಮಿಗಳವರು ಚಾಮರಾಜ ಒಡೆಯರಿಗೆ ಬಳುವಳಿಯಾಗಿ ಆಶೀರ್ವದಿಸಿದ ನವರತ್ನ ಕೀಟವನ್ನು ಇಂದಿಗೂ ಮೈಸೂರು ದಸರಾ ಆಚರಣೆಯಲ್ಲಿ ಪೂಜಿಸುವುದು ಗುರು-ಶಿಷ್ಯ ಬಾಂಧವ್ಯಕ್ಕೆ ಪ್ರತ್ಯಕ್ಷ ಪ್ರಮಾಣವಾಗಿ ನಿಲ್ಲುತ್ತದೆ.

ಶೃಂಗೇರಿ ದಸರಾ ವೈಶಿಷ್ಟತೆ


ಶೃಂಗೇರಿ ಜಗದ್ಗುರುಗಳವರು ದರ್ಬಾರ್ ನಲ್ಲಿ ಅಲಂಕರಿಸುವ ರಜತ ಸಿಂಹಾಸನ ಜಮಖಂಡಿ ರಾಮಚಂದ್ರ, ಪಟವರ್ಧನ ಮಹಾರಾಜರ ಕಾಣಿಕೆಯಾಗಿದೆ. ಜಮಖಂಡಿ,ಕೋಚಿ, ಬರೋಡ ವಿಜಯನಗರ ಮುಂತಾದ ಸಂಸ್ಥಾನಗಳು ಕೊಟ್ಟ ಆಭರಣಗಳನ್ನು ಧರಿಸುವುದು ಶೃಂಗೇರಿ ಮಠ ಭಾರತದ ಮಧ್ಯಕಾಲೀನ ರಾಜಮನೆತನಕ್ಕೆ ಇರುವ ನಂಟಿನ ಇತಿಹಾಸವನ್ನು ಸಾರುತ್ತದೆ. ಟಿಪ್ಪು ಕೊಟ್ಟ ಮಕರ ಕಂಠಿಹಾರ, ಮದನ ವಿಲಾಸ ಸನ್ನಿಧಾನ ಅರ್ಪಿಸಿದ ವಜ್ರದ ಹಾರ, ವಿಜಯನಗರದ ದೊರೆಗಳು ಅರ್ಪಿಸಿದ ಸ್ವರ್ಣ ಪಾದಕ್ಕೆ ಮುಂತಾದ ಕೊಡುಗೆಗಳನ್ನು ಈ ದರ್ಬಾರ್ ಆಚರಣೆಯಲ್ಲಿ ನಾವು ಕಾಣಬಹುದು. ಶೃಂಗೇರಿ ಜಗದ್ಗುರುಗಳ ದರ್ಬಾರ್ ಆಚರಣೆಯು ಸಂಸ್ಕೃತದಲ್ಲಿ ಘೋಷಿಸುವ ಪಾಠಕ ಗಳಲ್ಲಿನ ವಿದ್ಯಾನಗರ ರಾಜ್ಯಧಾನಿ ಕರ್ನಾಟಕ ಸಿಂಹಾಸನ ಪ್ರತಿಷ್ಠಾಪನಾಚಾರ್ಯ ಎಂಬ ಮಹಾ ಬಿರುದಾವಳಿಗಳು ಕರ್ನಾಟಕ ಸಾಮ್ರಾಜ್ಯ ವೆಂಬ ಕನ್ನಡ ನಾಡನ್ನು ಕಟ್ಟುವಲ್ಲಿ ಶೃಂಗೇರಿ ಪೀಠದ ಪಾತ್ರವನ್ನು ವರ್ಣಿಸುತ್ತ ಶೃಂಗೇರಿ ಮಠ ಕನ್ನಡ ನಾಡಿನ ಉದಯಕ್ಕೂ ಇರುವ ಸಂಬಂಧವನ್ನು ಸಾರುತ್ತದೆ.

ವಿದೇಶಿ ಪ್ರವಾಸಿಗರಿಗೆ ಸಂತಸದ ಸುದ್ದಿ

0

8 ತಿಂಗಳ ನಂತರ ಭಾರತವು ಅಂತಿಮವಾಗಿ ತನ್ನ ಗಡಿಯನ್ನು ವಿದೇಶಿ ಪ್ರವಾಸಿಗರಿಗೆ ತೆರೆದಿದೆ. ಶುಕ್ರವಾರದಿಂದ ವಿದೇಶಿ ಪ್ರವಾಸಿಗರು ವಿಶೇಷ ವಿಮಾನದಲ್ಲಿ ಭಾರತಕ್ಕೆ ಭೇಟಿ ನೀಡಬಹುದು, ದೈನಂದಿನ ನಿಗದಿತ ವಿಮಾನಗಳಲ್ಲಿ ಪ್ರಯಾಣಿಸುವವರು ಇನ್ನೊಂದು ತಿಂಗಳು ಕಾಯಬೇಕಾಗುತ್ತದೆ ಎಂದು ಗೃಹಸಚಿವಾಲಯವು ಗುರುವಾರ ಘೋಷಿಸಿತು. ಇದರೊಂದಿಗೆ ಕೋವಿಡ್ 19ರ ಕಾರಣದಿಂದ ಮಾರ್ಚ್ 15, 2020 ರಿಂದ ವೀಸಾ ಮತ್ತು ಅಂತರಾಷ್ಟ್ರೀಯ ಪ್ರಯಾಣದ ಮೇಲೆ ನಿರ್ಬಂಧನೆಗಳನ್ನು ವಿಧಿಸಲಾಗಿತ್ತು.ವಿಶೇಷ ವಿಮಾನಗಳನ್ನು ಹೊರತುಪಡಿಸಿ ಇತರ ವಿಮಾನಗಳ ಮೂಲಕ ಭಾರತಕ್ಕೆ ಪ್ರವೇಶಿಸುವ ವಿದೇಶಿ ಪ್ರವಾಸಿಗಳಿಗೆ ಹೊಸ ಪ್ರವಾಸಿ ವೀಸಾದಲ್ಲಿ ನವೆಂಬರ್ 15, 2021 ರಿಂದ ಅನ್ವಯವಾಗುವಂತೆ ಮಾಡಲಾಗಿದೆ. ವಿವಿಧ ಹರಿವುಗಳನ್ನು ಪರಿಗಣಿಸಿದ ನಂತರ ಸಚಿವಾಲಯವು ವಿಶೇಷ ವಿಮಾನಗಳ ಮೂಲಕ ಭಾರತಕ್ಕೆ ಬರುವ ವಿದೇಶಿಗರಿಗೆ ಹೊಸ ಪ್ರವಾಸಿ ವೀಸಾವನ್ನು ನೀಡಲು ಅಕ್ಟೋಬರ್ 15 , 2021 ರಿಂದ ಜಾರಿಗೆ ಬರುವಂತೆ ಆರಂಭಿಸಲು ತೀರ್ಮಾನಿಸಿದೆ ಎಂದು ಗೃಹ ಸಚಿವಾಲಯವು ತಿಳಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಮಂತ್ರಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ವಿವಿಧ ರಾಜ್ಯ ಸರ್ಕಾರಗಳು ವಿದೇಶಿ ಪ್ರವಾಸಿಗರು ಬರುವ ನಿರೀಕ್ಷೆಯಲ್ಲಿವೆ.