Saturday, December 6, 2025
Saturday, December 6, 2025
Home Blog Page 1834

ಚರ್ಮಕಾರ ಪ್ರತ್ಯೇಕ ಅಭಿವೃದ್ಧಿ ನಿಗಮ ಬೇಕು

0

ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಕರ್ನಾಟಕ ತ್ರಿಮತಸ್ಥ ಚರ್ಮಕಾರ ಪರಿಷತ್ ಆಗ್ರಹಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಸಂಚಾಲಕ ಆರ್.ಸತ್ಯನಾರಾಯಣ್, ತ್ರಿಮತಸ್ಥ ಚರ್ಮಕಾರರು ಹಲವು ಹೆಸರುಗಳಿಂದ ಕರೆಯಲ್ಪಡುತ್ತಿದ್ದು ಸುಮಾರು ೧೯ ಕ್ಕೂ ಹೆಚ್ಚು ಜಾತಿಗಳನ್ನು ಇದು ಒಳಗೊಂಡಿದೆ. ರಾಜ್ಯದಲ್ಲಿ ಸುಮಾರು ೧೮ ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಒಂದು ಪ್ರತ್ಯೇಕ ಜಾತಿ ಇದಾಗಿದ್ದು. ಶರಣರ ಅನುಯಾಯಿಗಳಾಗಿದ್ದು ರಾಜಕೀಯ ಮತ್ತು ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದ ಸಮುದಾಯವಾಗಿದೆ. ಗ್ರಾಮ ಪಂಚಾಯಿತಿಯಿಂದ ಹಿಡಿದು ಲೋಕಸಭೆಯವರೆಗೆ ಚರ್ಮಕಾರರಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದರು.
ಆಧುನಿಕತೆಗೆ ಸಿಕ್ಕು ಚರ್ಮಕಾರರ ಕುಲಕಸುಬು ಅವಸಾನದತ್ತ ಸಾಗಿದೆ. ಶಿಕ್ಷಣ ಮಟ್ಟವು ಇಲ್ಲದ್ದರಿಂದ ಜೀವನ ಸಾಗಿಸುವುದು ಕಷ್ಟವಾಗಿದೆ. ಬಲಿಷ್ಟ ಜಾತಿಗಳ ಸ್ಪರ್ಧೆಯಿಂದ ನಮ್ಮ ಜಾತಿ ಮುಖ್ಯವಾಹಿನಿಗೆ ಬರುವುದು ಕಷ್ಟವಾಗಿದೆ. ಸುಮಾರು ೧೦ ಲಕ್ಷ ಯುವಕರು ಉಧ್ಯೋಗವಿಲ್ಲದೆ ಇದ್ದಾರೆ. ಆದ್ದರಿಂದ ಸರ್ಕಾರ ಚರ್ಮಕಾರರಿಗೆ ಒಂದು ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದರು.

ವೇತನವಿಲ್ಲದೆ ಎಂಎಸ್‌ಐಎಲ್‌ ನೌಕರರ ಪರದಾಟ

0

ಕೊರೊನಾ, ಪ್ರವಾಹ, ಬರ ಯಾವುದೇ ಇದ್ದರೂ ಸರಕಾರಕ್ಕೆ ಆದಾಯ ತಂದುಕೊಡುವ ಏಕಮಾತ್ರ ಇಲಾಖೆ ಅಬಕಾರಿ. ಕೋವಿಡ್ ಸಂದರ್ಭದಲ್ಲೂ ಆದಾಯ ಗುರಿ ತಲುಪಿದ ಇಲಾಖೆ ತನ್ನ ಅಧೀನದಲ್ಲಿ ಕೆಲಸ ಮಾಡುವ ಎಂಎಸ್‌ಐಎಲ್ ಮಳಿಗೆ ನೌಕರರಿಗೆ ಐದು ತಿಂಗಳಿನಿಂದ ವೇತನ ನೀಡಿಲ್ಲ ಎಂದರೆ ನಂಬಲೇ ಬೇಕು .ಹೌದು
ರಾಜ್ಯದಲ್ಲಿ ಸಾವಿರಕ್ಕೂ ಹೆಚ್ಚು ಎಂಎಸ್‌ಐಎಲ್ ಮದ್ಯ ಮಾರಾಟ ಮಳಿಗೆಗಳಿವೆ. ಪ್ರತಿ ಮಳಿಗೆಯಲ್ಲೂ ಕನಿಷ್ಠ ಮೂರರಿಂದ ನಾಲ್ಕು ಮಂದಿ ನೌಕರರಿದ್ದಾರೆ. ಒಟ್ಟು ಮೂರು ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಸಂಬಳವಿಲ್ಲದೇ ದಿನ ದೂಡುವಂತಾಗಿದೆ. ಸರಕಾರ ಅಧೀನ ಸಂಸ್ಥೆಯಾಗಿರುವುದರಿಂದ ಉದ್ಯೋಗ ಭದ್ರತೆ, ವೇತನ, ಪಿಎಫ್, ಇಎಸ್‌ಐ ಸೌಲಭ್ಯ ಸಿಗುತ್ತದೆ ಎಂದು ಸಾವಿರಾರು ಯುವಕರು ಕೆಲಸಕ್ಕೆ ಸೇರಿದ್ದಾರೆ. ಕೇವಲ 9500 ರೂ.ಗೆ ಬೆಳಗ್ಗೆ 10ರಿಂದ ರಾತ್ರಿ 10ರವರೆಗೆ ದುಡಿಯುವ ಇವರಿಗೆ ಈ ವೇತನ ಕೊಡದೆ ಸತಾಯಿಸಲಾಗುತ್ತಿದೆ.

ಸಂಬಳ ಯಾಕಿಲ್ಲ?

ಎಂಎಸ್‌ಐಎಲ್ ಮಳಿಗೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ನೇರವಾಗಿ ಇಲಾಖೆಗೆ ಒಳಪಡುವುದಿಲ್ಲ. ಇವರನ್ನು ರಾಜ್ಯಮಟ್ಟದ ಖಾಸಗಿ ಮ್ಯಾನ್ ಪವರ್ ಏಜೆನ್ಸಿ ಮೂಲಕ ಸಂಬಳ ನೀಡಲಾಗುತ್ತಿದೆ. ಎರಡು ವರ್ಷದ ಅವಧಿಗೆ ಟೆಂಡರ್ ಪಡೆಯುವ ಗುತ್ತಿಗೆದಾರ ಇವರಿಗೆ ಸಂಬಳ, ಪಿಎಫ್, ಇಎಸ್‌ಐ ವ್ಯವಸ್ಥೆ ಮಾಡಬೇಕು. ಆದರೆ ಟೆಂಡರ್‌ದಾರ ವೇತನ ಪಾವತಿ ಮಾಡದೆ ಬಾಕಿ ಉಳಿಸಿಕೊಂಡ ಪರಿಣಾಮ ನೌಕರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಬರೀ ವೇತನವಷ್ಟೇ ಅಲ್ಲದೇ ಒಂದೂವರೆ ವರ್ಷದಿಂದ ಪಿಎಫ್, ಇಎಸ್‌ಐ ಖಾತೆಗೆ ಹಣ ಕೂಡ ಜಮೆ ಮಾಡಿಲ್ಲ. ಇಎಸ್‌ಐ ಇದೆ ಎಂದು ಆಸ್ಪತ್ರೆಗೆ ಹೋದವರು ಶಾಕ್ ಆಗಿದ್ದಾರೆ. ಕಷ್ಟಪಟ್ಟು ದುಡಿದರೂ ಬೆಲೆ ಇಲ್ಲ, ಈ ಬಗ್ಗೆ ಕೇಳಿದರೆ ನಿಮಗೆ ಎಲ್ಲಿ ಸಂಬಳ ನೀಡುತ್ತಾರೋ ಅಲ್ಲಿಗೆ ಹೋಗಿ ಅನ್ನುತ್ತಾರೆ.ಕೋವಿಡ್ ಸಮಯದಲ್ಲಿ ಕೆಲಸದಿಂದ ತೇಗೆಯುತ್ತಿತುವುದೇ ಹೆಚ್ಚಾಗಿದೆ ಇಂತಹ ಸಂದರ್ಭದಲ್ಲಿ ಎಲ್ಲಿಗೆ ಹೋಗಿ ಕೆಲಸ ಹುಡುಕುವುದು  ಎಂದು ಸಿಬ್ಬಂದಿಗಳು ಅಳಲು ತೋಡಿಕೊಂಡಿದ್ದಾರೆ.
ಕೈಗೆ ಸಿಗುವುದು 9500 ರೂ. ಸಂಬಳ. ಅದನ್ನೂ ಸರಿಯಾಗಿ ಕೊಡುತ್ತಿಲ್ಲ.
ದಿನಬಳಕೆ ವಸ್ತುಗಳ ಬೆಲೆ ಕೂಡ ಗಗನಕ್ಕೆ ಏರುತ್ತಿದೆ. ಟೆಂಡರ್‌ದಾರನಿಗೆ ಹೆಚ್ಚಿನ ಹಣ ಸಿಗುತ್ತದೆ. ಆದರೆ ನೌಕರರಿಗೆ ಸಿಗುವುದು ಬಿಡಿಗಾಸು. ಪಿಎಫ್, ಇಎಸ್‌ಐ ಸೌಲಭ್ಯ ಸಿಗದಿದ್ದರೆ ಇಷ್ಟು ಕಡಿಮೆ ಸಂಬಳ. ಅಂಗಡಿಯಲ್ಲಿ ಬಿಲ್‌ನಲ್ಲಿ ಕೊಂಚ ವ್ಯತ್ಯಾಸವಾದರೂ ಅದು ನೌಕರನ ಮೇಲೆ ಬರುತ್ತದೆ. ಅವೆಲ್ಲವನ್ನು ಸಹಿಸಿಕೊಂಡಿದ್ದೇವೆ. ಎಷ್ಟೋ ಕಡೆ ಎಂಆರ್‌ಪಿಗಿಂತ ಹೆಚ್ಚಿನ ದರ ಪಡೆಯುತ್ತಾರೆ. ಇದರಲ್ಲಿ ಅಧಿಕಾರಿಗಳು ಸಹ ಪಾಲುದಾರರು. ಇವೆಲ್ಲವನ್ನು ನಾವ್ಯಾರು ಪ್ರಶ್ನಿಸುವಂತಿಲ್ಲ. ನಾವೇನಾದರೂ ಹೆಚ್ಚು ಮಾತನಾಡಿದರೆ ಕೆಲಸದಿಂದ ತೆಗೆದು ಹಾಕುತ್ತಾರೆ. ಇಲ್ಲ ದೂರದ ಮಳಿಗೆಗೆ ಹಾಕುತ್ತಾರೆ. ಇವೆಲ್ಲವನ್ನು ಸಹಿಸಿಕೊಳ್ಳುತ್ತೇವೆ. ಸಂಬಳ ಮಾತ್ರ ಪ್ರತಿ ತಿಂಗಳು ಹಾಕಿದರೆ ಸಾಕು ಎಂಬುದು ಹೆಸರು ಹೇಳಲಿಚ್ಛಿಸದ ನೌಕರನ ಆರೋಪ.
ಪ್ರತಿ ಮಳಿಗೆಯಿಂದ ಪ್ರತಿದಿನ ಕನಿಷ್ಠ 50 ಸಾವಿರ, 3 ಲಕ್ಷದವರೆಗೂ ವಹಿವಾಟು ನಡೆಯುತ್ತದೆ. ಎಂಆರ್‌ಪಿಒ ದರಕ್ಕೆ ಸಿಗುವುದರಿಂದ ಗ್ರಾಹಕರು ಕೂಡ ಮುಗಿಬಿದ್ದು ಖರೀದಿ ಮಾಡುತ್ತಾರೆ.
ಕೈಕೊಟ್ಟ ಟೆಂಡರ್‌ದಾರ-

ಎರಡು ವರ್ಷ ಅವಧಿಗೆ ಗುತ್ತಿಗೆ ಪಡೆದಿದ್ದ ಟೆಂಡರ್‌ದಾರ ಒಂದೂವರೆ ವರ್ಷ ಪೂರೈಸಿದ್ದು ವೇತನ ಬಾಕಿ ಉಳಿಸಿಕೊಂಡಿದ್ದಾನೆ. ಪಿಎಫ್, ಇಎಸ್‌ಐ ಕೂಡ ಬಾಕಿ ಉಳಿಸಿಕೊಂಡ ಪರಿಣಾಮ ಅವರನ್ನು ಕೈಬಿಟ್ಟು ಬೇರೊಬ್ಬರಿಗೆ ಟೆಂಡರ್ ನೀಡಲಾಗಿದೆ. 10 ದಿನದೊಳಗೆ ಸಮಸ್ಯೆ ಬಗೆಹರಿಯಲಿದೆ ಎಂಬುದು ನಿರ್ದೇಶಕರೊಬ್ಬರ ಅಭಿಪ್ರಾಯ

ವಿಜಯೇಂದ್ರ ತನ್ನಪಾಡಿಗೆ ತಾನು ಸಂಘಟನೆಯ ಕೆಲಸ ಮಾಡುತ್ತಿದ್ದಾನೆ – ಸಂಸದ ಬಿ.ವೈ ರಾಘವೇಂದ್ರ

0

ವಿಜಯೇಂದ್ರ ತನ್ನಪಾಡಿಗೆ ತಾನು ಸಂಘಟನೆಯ ಕೆಲಸ ಮಾಡುತ್ತಿದ್ದಾನೆ – ಸಂಸದ ಬಿ.ವೈ ರಾಘವೇಂದ್ರ

ವಿಜಯೇಂದ್ರ ಜನಪ್ರತಿನಿಧಿಯಾಗಿ ಗುರುತಿಸಿಕೊಳ್ಳದೇ ತನ್ನ ಪಾಡಿಗೆ ತಾನು ಸಂಘಟನೆಯ ಕೆಲಸ ಮಾಡುತ್ತಿದ್ದಾನೆ ಎಂದು ಸಂಸದ ಹಾಗೂ ವಿಜಯೇಂದ್ರ ಅಣ್ಣನಾಗಿರುವ ಬಿ ವೈ ರಾಘವೇಂದ್ರ ಹೇಳಿದರು.

ಬಿಜೆಪಿ ಸರ್ಕಾರದಲ್ಲಿ ವಿಜಯೇಂದ್ರ ಅವರಿಗೆ ಸ್ಥಾನಮಾನ ಕೊಡುವ ಬಗ್ಗೆ ಚರ್ಚೆಯಾಗುತ್ತಿರುವ ಕುರಿತು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದ ಅವರು. ಯಡಿಯೂರಪ್ಪನವರಾಗಿರಲಿ, ವಿಜಯೇಂದ್ರ ಆಗಲಿ ಎಲ್ಲಿಯೂ ಈ ಕುರಿತು ಹೇಳಿಕೊಂಡಿಲ್ಲ. ಅಪೇಕ್ಷೇನೂ ಪಟ್ಟಿಲ್ಲ, ವಿಜಯೇಂದ್ರ ಅವನ ಪಾಡಿಗೆ ಅವನು ಸಂಘಟನೆಯಲ್ಲಿ ಸಂಘಟನೆಯ ಚೌಕಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದರು.
ಇನ್ನೂ ನಿನ್ನೆ ಶಿರಸಿಯಲ್ಲಿ ರಾಜ್ಯ ರಾಜಕಾರಣಕ್ಕೆ ಮರಳುವ ಇಂಗಿತ ವ್ಯಕ್ತಪಡಿಸಿದ್ದರ ಕುರಿತು ಮಾತನಾಡಿದ ಅವರು, ಲೋಕಸಭಾ ಕ್ಷೇತ್ರದ ಜನ ನನಗೆ ಆಶೀರ್ವಾದ ಮಾಡಿ ಮೂರು ಬಾರಿ ಸಂಸತ್​​ ಸದಸ್ಯನಾಗಿ ಸೇವೆ ಸಲ್ಲಿಸುವ ಅವಕಾಶ ಮಾಡಿಕೊಟ್ಟಿದ್ದಾರೆ.

ಹಾಗಾಗಿ, ಆ ದಿಕ್ಕಿನಲ್ಲಿಯೇ ಮುಂದುವರಿಯುವ ಅಪೇಕ್ಷೆ ಇದೆ ಎಂದರು. ಒಂದು ವಿಧಾನಸಭಾ ಕ್ಷೇತ್ರಕ್ಕೆ ಸೀಮಿತವಾಗದೆ ಎಂಟು ತಾಲೂಕಿಗೆ ಸೇವೆ ಮಾಡುವ ಅವಕಾಶ ಹಾಗೂ ಆಶೀರ್ವಾದ ಜನ ಮಾಡಿದ್ದಾರೆ. ಹಾಗಾಗಿ, ನಾನು ಲೋಕಸಭಾ ಸದಸ್ಯನಾಗಿಯೇ ಸೇವೆ ಮುಂದುವರಿಸಿಕೊಂಡು ಹೋಗುತ್ತೇನೆ ಎಂದರು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಆಪ್ತ ಉಮೇಶ ಮನೆಯ ಮೇಲಿನ ಐಟಿ ದಾಳಿಯ ಕುರಿತು ಮಾತನಾಡಿದ ಸಂಸದ ರಾಘವೇಂದ್ರ ಅವರು, ಐಟಿ ದಾಳಿಗೂ ನಮ್ಮ ಕುಟುಂಬಕ್ಕೂ ಯಾವುದೇ ಸಂಬಂಧ ಇಲ್ಲ. ಉಮೇಶ್ ಅವರು ಅನೇಕ ವರ್ಷಗಳಿಂದ ಮುಖ್ಯಮಂತ್ರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ತನಿಖೆ ನಡೆಯುತ್ತಿದೆ, ಐಟಿ ಅಧಿಕಾರಿಗಳು ಅವರ ಕೆಲಸವನ್ನು ಅವರು ಮಾಡುತ್ತಿದ್ದಾರೆ ಎಂದರು.

ನಾಡ ಹಬ್ಬ

0

ನಾಡ ಹಬ್ಬ ದಸರಾದ ಪ್ರಯುಕ್ತ ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ.ಅದರಂತೆ ಇಂದು ನಗರದ ಫ್ರೀಡಂ ಪಾರ್ಕ್ ನಲ್ಲಿ ಸಾಂಸ್ಕೃತಿಕ ಜಾನಪದ ದಸರಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ನೂರಕ್ಕೂ ಹೆಚ್ಚು ಕಲಾವಿದರು ವಿವಿಧ ಪ್ರಕಾರದ ಜಾನಪದ ಕಲೆಗಳನ್ನು ಪ್ರದರ್ಶಿಸುವ ಮೂಲಕ ನೇರೆದಿದ್ದವರ ಗಮನ ಸೆಳೆದರು.

ಉಪಚುನಾವಣೆ ಗೆಲುವು ನಮ್ಮದೆ- ಸಚಿವ ಕೆ.ಎಸ್ ಈಶ್ವರಪ್ಪ

0

ಚುನಾವಣೆ ಎಂದರೆ ಬಿಜೆಪಿ ಗೆಲುವು- ಸಚಿವ ಕೆ.ಎಸ್ ಈಶ್ವರಪ್ಪ

ಚುನಾವಣೆ ಎಂದರೆ ಬಿಜೆಪಿ ಗೆಲವು, ಎರಡು ಉಪ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಗೆಲುತ್ತೆ ಅಂತ ಸಚಿವ ಕೆ.ಎಸ್ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈಗಾಗಲೇ ನಡೆದಂತಹ ಎಲ್ಲಾ ಉಪ ಚುನಾವಣೆಯಲ್ಲಿ ನಾವು ಗೆದ್ದಿದ್ದೇವೆ ಅದರಂತೆ ಮೊನ್ನೆ ನಡೆದಂತಹ ಮೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸಹ ನಾವು ಗೆದ್ದಿದ್ದೇವೆ. ಹಾಗಾಗಿ ಚುನಾವಣೆ ಎಂದರೆ ಬಿಜೆಪಿ ಗೆಲುವು ಎಂದರು. ಯಾಕೇ ನಾವು ಎಲ್ಲಾ ಚುನಾವಣೆಯಲ್ಲಿ ಗೇಲ್ತವೆ ಎಂದರೆ ಪಕ್ಷದ ಸಂಘಟನೆ ಬೂತ್ ಮಟ್ಟದ ವರೆಗೂ ವ್ಯವಸ್ಥಿತವಾಗಿದೆ ಯಾವುದೇ ಸಂದರ್ಭದಲ್ಲಿ ಚುನಾವಣೆ ಬಂದರು ನಾವು ಚುನಾವಣೆ ಎದುರಿಸಲು ತಯಾರಿದ್ದೇವೆ. ಯಡಿಯೂರಪ್ಪ ನವರು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಹಾಗೂ ಬಸವರಾಜ್ ಬೊಮ್ಮಯಿ ಅವರು ರಾಜ್ಯದಲ್ಲಿ ಮಾಡಿರುವಂತಹ ಅಭಿವೃದ್ಧಿ ಕಾರ್ಯಗಳು ಹಾಗೂ ವಿಶ್ವವೇ ಮೆಚ್ಚುವಂತ ಮೋದಿಯವರ ನಾಯಕತ್ವದ ಆಧಾರದಲ್ಲಿ ನಾವು ಗೇವಿ ಎಂದರು.ಎರಡು ಉಪ ಚುನಾವಣಾ ಕ್ಷೇತ್ರಗಳಲ್ಲಿ ವ್ಯವಸ್ಥಿತವಾಗಿ ಚುನಾವಣಾ ಪ್ರಚಾರ ನಡೆಯುತ್ತಿದೆ ಎಂದು ತಿಳಿಸಿದರು.

ರೈತರ ಹತ್ಯೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ನಿಂದ ಮೌನ ಪ್ರತಿಭಟನೆ

0

ಉತ್ತರ ಪ್ರದೇಶದ ಖೇರಿಯಲ್ಲಿ ನಡೆದ ರೈತರ ಹತ್ಯೆಯನ್ನು ಖಂಡಿಸಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್ ಸುಂದರೇಶ್ ನೇತೃತ್ವದಲ್ಲಿ ನಗರದ ಗಾಂಧಿ ಪಾರ್ಕ್ ನಲ್ಲಿರುವ ಗಾಂಧಿ ಪ್ರತಿಮೆ ಎದುರು ಮೌನ ಪ್ರತಿಭಟನೆ ನಡೆಸಿದರು.

ಪ್ರತಿಭಟನಾನಿರತ  ರೈತರ ಗುಂಪಿನ ಮೇಲೆ ಕೇಂದ್ರದ ಬಿಜೆಪಿ ಸರ್ಕಾರದ ಗೃಹ ಖಾತೆ ಸಹಾಯಕ ಸಚಿವರಾದ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ  ಆಶಿಶ್ ಮಿಶ್ರಾ ಅವರು ವಾಹನವನ್ನು ನುಗ್ಗಿಸಿದ ಪರಿಣಾಮ ನಾಲ್ವರು ರೈತರು ಹತ್ಯೆಯಾಗಿದ್ದರು. ಹಾಗಾಗಿ ಈ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿ ರೈತರ ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮಕೈಗೊಳ್ಳುವಂತೆ ಮೌನ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಬಿ ಪ್ರಸನ್ನ ಕುಮಾರ್ ,ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ,ಕಾಂಗ್ರೆಸ್ ಮುಖಂಡರಾದ ವೈ.ಹೆಚ್ ನಾಗರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕೋವಿಡ್‍ನಿಂದ ಮೃತರಾದವರಿಗೆ ಘೋಷಿತ ಪರಿಹಾರಧನ ನೀಡಲು ಕ್ರಮ : ಕೆ.ಬಿ.ಶಿವಕುಮಾರ್

0

ಕೋವಿಡ್-19 ಸೋಂಕಿನಿಂದ ಮೃತ ವ್ಯಕ್ತಿಯ ಅವಲಂಬಿತರಿಗೆ ಸರ್ಕಾರವು ಈಗಾಗಲೇ ಘೋಷಿಸಿರುವ ಆರ್ಥಿಕ ನೆರವನ್ನು ಒದಗಿಸಲು ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಹಶೀಲ್ದಾರರು ಹಾಗೂ ತಾಲೂಕು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಿಂದ ಏರ್ಪಡಿಸಲಾಗಿದ್ದ ಕೋವಿಡ್ ಮೃತ ಕುಟಂಬಕ್ಕೆ ಆರ್ಥಿಕ ನೆರವು ಒದಗಿಸುವುದು, ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಮನೆ, ಬೆಳೆ, ಆಸ್ತಿ, ಜನ-ಜಾನುವಾರು ಹಾನಿಗಳ ಕುರಿತ ವಿಡಿಯೋ ಸಂವಾದದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಈಗಾಗಲೇ ಸರ್ಕಾರವು  ಜಿಲ್ಲೆಯಲ್ಲಿ ಕೋವಿಡ್‍ನಿಂದ ಮೃತರಾದ ವ್ಯಕ್ತಿಗಳಲ್ಲಿ ಮೊದಲ ಹಂತದಲ್ಲಿ 1064ಜನ ಮೃತರ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಮೃತರ ಕುಟುಂಬದ ಸದಸ್ಯರು ನೆರವಿಗಾಗಿ ಅರ್ಜಿ ಸಲ್ಲಿಸುವವರೆಗೆ ಕಾಯದೇ ಕಂದಾಯ ಇಲಾಖೆಯ ಅಧಿಕಾರಿಗಳು ಮೃತರ ಮನೆಗೆ ಧಾವಿಸಿ, ಅವರಿಂದ ಅರ್ಜಿ ಹಾಗೂ ಮಾಹಿತಿ ಪಡೆದು, ಆನ್‍ಲೈನ್ ಮೂಲಕ ಮಾಹಿತಿ ಉನ್ನತೀಕರಿಸಿ ಮಾಹಿತಿ ನೀಡುವಂತೆಯೂ ಅವರು ಸೂಚಿಸಿದರು.
ಮೃತರ ಕುಟುಂಬವು ಬಿ.ಪಿ.ಎಲ್. ಕುಟುಂಬ ವ್ಯಾಪ್ತಿಗೊಳಪಟ್ಟಿದ್ದರೆ ರಾಜ್ಯ ಸರ್ಕಾರವು ಒಂದು ಲಕ್ಷ ರೂ.ಗಳ ಆರ್ಥಿಕ ನೆರವು ಹಾಗೂ ಕೇಂದ್ರ ಸರ್ಕಾರವು ಕೋವಿಡ್‍ನಿಂದ ಮೃತರಾದ ಎಲ್ಲಾ ಕುಟುಂಬಗಳಿಗೆ ರೂ.50,000/-ಗಳ ನೆರವು ಒದಗಿಸಲಿದೆ. ಈ ಪರಿಹಾರಧನ ಪಡೆಯಲು ಜಿಲ್ಲೆಯಲ್ಲಿ ಸಲ್ಲಿಕೆಯಾದ ಅರ್ಜಿ ನಿರೀಕ್ಷಿತ ಪ್ರಗತಿ ಕಂಡುಬಂದಿಲ್ಲ. ಸಂಬಂಧಿತ ಅಧಿಕಾರಿಗಳು ಇನ್ನಾದರೂ ವಿಳಂಬಕ್ಕೆ ಅವಕಾಶ ಕೊಡದೆ ಈ ತಿಂಗಳ ಮಾಸಾಂತ್ಯದೊಳಗಾಗಿ ಮಾಹಿತಿಯನ್ನು ಸಂಗ್ರಹಿಸಿ, ಫಲಾನುಭವಿಗಳಿಗೆ ಸೌಲಭ್ಯ ದೊರಕಿಸುವ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಅವರು ತಾಕೀತು ಮಾಡಿದರು.
ಆನ್‍ಲೈನ್‍ನಲ್ಲಿ ಮಾಹಿತಿ ತುಂಬಲು ತಾಂತ್ರಿಕ ಸಮಸ್ಯೆಗಳು ಎದುರಾದಲ್ಲಿ ಆರೋಗ್ಯ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸಮನ್ವಯತೆ ಸಾಧಿಸಿ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದ ಅವರು, ಮೃತ ವ್ಯಕ್ತಿಯು ಹೊರಗಿನ ಜಿಲ್ಲೆಯವರಾಗಿದ್ದಲ್ಲಿ ಅಂತಹವರು ತಮ್ಮ ಮೂಲ ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ,ನಾಗೇಂದ್ರ ಎಫ್.ಹೊನ್ನಳ್ಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ,ರಾಜೇಶ್ ಸುರಗೀಹಳ್ಳಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಕೆ.ನಾಗರಾಜ್, ಆರ್.ಸಿ.ಹೆಚ್.ಅಧಿಕಾರಿ ಡಾ,ನಾಗರಾಜ್‍ನಾಯ್ಕ್ ಸೇರಿದಂತೆ ಎಲ್ಲಾ ತಾಲೂಕುಗಳ ತಹಶೀಲ್ದಾರರು, ತಾಲೂಕು ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ

0

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ- ಕಂದಾಯ ಇಲಾಖೆ ಎಂಬ ಹೊಸ ಪರಿಕಲ್ಪನೆಯಡಿ ಪ್ರತಿ ತಿಂಗಳ 3ನೇ ಶನಿವಾರದಂದು ಜಿಲ್ಲಾಧಿಕಾರಿಗಳು ಗ್ರಾಮ ಭೇಟಿ ನೀಡಿ ವಾಸ್ತವ್ಯ ಮಾಡಲಿದ್ದಾರೆ.

ಈ ಪರಿಕಲ್ಪನೆಯ ಅಂಗವಾಗಿ ಇದೇ ಶನಿವಾರ ಬೆಳಗ್ಗೆ 11.00ಕ್ಕೆ ಶಿವಮೊಗ್ಗ ತಾಲೂಕು ನಿಧಿಗೆ-2ನೇ ಹೋಬಳಿ, ಗಾಜನೂರು ಗ್ರಾಮದ ಶ್ರೀ ತುಂಗಾ ಸಮುದಾಯ ಭವನದಲ್ಲಿ ಜಿಲ್ಲಾಧಿಕಾರಿಗಳು ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿ,ಸಿಬ್ಬಂದಿಗಳೊಂದಿಗೆ ಸಾರ್ವಜನಿಕರನ್ನು ಭೇಟಿ ಮಾಡಿ ಕುಂದು ಕೊರತೆಗಳನ್ನು ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡು, ಹಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಆದ್ದರಿಂದ ಗಾಜನೂರು ಗ್ರಾಮಸ್ಥರು ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ತಮ್ಮ ಅಹವಾಲುಗಳನ್ನು ಮುಂಚಿತವಾಗಿ ತಮ್ಮ ಗ್ರಾಮದಲ್ಲಿಯ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಿ ಶನಿವಾರದಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿಲಾಗಿದೆ.

ಶ್ರೀ ಮಠದ ಪೀಠಾಧಿಪತಿ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ಸುದ್ದಿಗೋಷ್ಠಿ

0

ನಗರದ ಬೆಕ್ಕಿನ ಕಲ್ಮಠ ಆವರಣದಲ್ಲಿ ಶ್ರೀ ಗುರುಬಸವ ಮಹಾಸ್ವಾಮಿಗಳ  ಶಿಲಾ ಮಂಟಪ ಹಾಗೂ ಶಿವಾಲಯ ನಿರ್ಮಾಣ ಕಾರ್ಯಕ್ಕೆ ಅ.೧೫ರಂದು  ಮಧ್ಯಾಹ್ನ ೧೨ ಗಂಟೆಗೆ ಚಾಲನೆ ನೀಡಲಾಗುವುದು ಎಂದು ಶ್ರೀ ಮಠದ ಪೀಠಾಧಿಪತಿ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೨೦೦ ವರ್ಷಗಳ ಹಿಂದೆ ಗುರುಬಸವ ಶ್ರೀಗಳು ಶ್ರೀ ಮಠವನ್ನು ಸ್ಥಾಪನೆ ಮಾಡಿದರು. ಆಗಿನ ಕಾಲದಲ್ಲಿಯೇ ಅವರು,  ಸಂಸ್ಕೃತ ಸಮಾವೇಶದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೆ, ಮೌಢ್ಯಗಳ ವಿರುದ್ಧ ಜನಸಾಮಾನ್ಯರಲ್ಲಿ ಅರಿವು ಮೂಡಿಸಿದ್ದರು ಎಂದರು.
ಆನಂದಪುರದಲ್ಲಿರುವ ಮುರುಘಾಮಠದ ಆವರಣದಲ್ಲಿ ೩ ಕೋಟಿ ರೂ. ವೆಚ್ಚದಲ್ಲಿ ಉಚಿತ ವಿದ್ಯಾರ್ಥಿ ನಿಲಯವನ್ನು  ನಿರ್ಮಿಸಲಾಗ್ಠುತ್ತಿದೆ. ನಗರಕ್ಕೆ ಸಮೀಪದ ಮಲ್ಲಿಗೇನಹಳ್ಳಿಯಲ್ಲಿ ೩ ಕೋಟಿ ರೂ. ವೆಚ್ಚದಲ್ಲಿ ಮ್ಯೂಸಿಯಂ ನಿರ್ಮಿಸಲಾಗುತ್ತಿದ್ದು, ಇದು ಮುಗಿಯುವ ಹಂತಕ್ಕೆ ತಲುಪಿದೆ. ಜನವರಿಯಲ್ಲಿ ಉದ್ಘಾಟನೆಯಾಗಲಿದೆ ಎಂದರು.
ನಗರದ ತುಂಗಾನದಿ ದಡದಲ್ಲಿ ಬೆಕ್ಕಿನ ಕಲ್ಮಠ ಅತ್ಯಂತ ಸುಸಜ್ಜಿತವಾಗಿ ನಿರ್ಮಾಣಗೊಂಡಿದೆ. ಶ್ರೀಮಠದಲ್ಲಿ ಗುರುಬಸವ ಶ್ರೀಗಳ ಶಿಲಾ ಮಂಟಪವನ್ನು ಸ್ಥಾಪನೆ ಮಾಡಬೇಕೆಂಬ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳ ಹಿಂದೆ ಅಡಿಪಾಯವನ್ನು ಹಾಕಲಾಗಿತ್ತು. ಸತತ ಎರಡು ವರ್ಷಗಳ ಕೋವಿಡ್  ಹಿನ್ನೆಲೆಯಲ್ಲಿ ನಿರ್ಮಾಣ ಕಾರ್ಯ ವಿಳಂಬವಾಗಿದ್ದು, ಇದೀಗ ಈ ಕಾರ್ಯ ಆರಂಭಗೊಳ್ಳಲಿದೆ ಎಂದರು.
ನಗರದ ನಾಗರೀಕರು  ಆಧುನಿಕ ಬದುಕಿನಲ್ಲಿ ನೆಮ್ಮದಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶ್ರೀಗಳ ಶಿಲಾಮಂಟಪದ ಆವರಣದಲ್ಲಿ  ಧ್ಯಾನ ಹಾಗೂ ಮೌನ ವ್ರತಕ್ಕೆ ಸ್ಥಳಾವಕಾಶವನ್ನು ಕಲ್ಪಿಸಲಾಗುವುದು ಎಂದ ಅವರು, ಇದರಿಂದ ಪ್ರತಿಯೊಬ್ಬರಿಗೂ ಮಾನಸಿಕ ಶಾಂತಿ ಹಾಗೂ ಸದೃಢತೆ ದೊರೆಯಲಿದೆ ಎಂದರು.
ಸುಮಾರು ೧.೫ ಕೋಟಿ ರೂ. ವೆಚ್ಚದಲ್ಲಿ  ಶಿಲಾ ಮಂಟಪವನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು, ಕಾರ್ಕಳದ ಮಹೇಶ್ ಭಟ್ ಕಟ್ಟಡದ ಕಾರ್ಯನಿರ್ವಹಣೆ ಕೈಗೊಳ್ಳಲಿದ್ದಾರೆ ಎಂದರು.
ಕತೃ ಗದ್ದುಗೆ ಹಾಗೂ ಶಿವಾಲಯ ಕಟ್ಟಡ ನಿರ್ಮಾಣ ಸಮಿತಿಯ ಮಹಾ ಪೋಷಕರಾಗಿ  ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಪೋಷಕರಾಗಿ ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಆಯನೂರು ಮಂಜುನಾಥ್, ಎಸ್. ರುದ್ರೇಗೌಡ, ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ ಕಾರ್ಯ ನಿರ್ವಹಿಸಿದರೆ,  ಕಾರ್ಯಾಧ್ಯಕ್ಷರಾಗಿ  ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್, ಅಧ್ಯಕ್ಷರಾಗಿ ಹೆಚ್.ವಿ. ಮಹೇಶ್ವರಪ್ಪ, ಉಪಾಧ್ಯಕ್ಷರಾಗಿ  ಎಸ್.ಎಸ್. ಜ್ಯೋತಿಪ್ರಕಾಶ್, ಎನ್.ಜೆ. ರಾಜಶೇಖರ್, ಸಿ.ಎಸ್. ಷಡಾಕ್ಷರಿ, ಗೋವಿಂದ ನಾಯರ್  ಕಾರ್ಯನಿರ್ವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ   ಕಾರ್ಯಾಧ್ಯಕ್ಷ ಎಂ.ಶ್ರೀಕಾಂತ್, ಅಧ್ಯಕ್ಷ ಹೆಚ್.ವಿ. ಮಹೇಶ್ವರಪ್ಪ, ಶ್ರೀಬಸವೇಶ್ವರ ವೀರಶೈವ ಸಮಾಜದ ಅಧ್ಯಕ್ಷ ಎನ್.ಜೆ. ರಾಜಶೇಖರ್, ಪಾಲಿಕೆ ಸದಸ್ಯ ಹೆಚ್.ಸಿ. ಯೋಗೀಶ್,  ಎಂ.ಆರ್. ಪ್ರಕಾಶ್ ಮೊದಲಾದವರಿದ್ದರು.

ರೈಲ್ವೆ  ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಂಸದ ಬಿ. ವೈ. ರಾಘವೇಂದ್ರ

0

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನೂತನ ರೈಲ್ವೆ ಸಂಪರ್ಕ ಕಲ್ಪಿಸಲು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪನವರು ಮತ್ತು ಸಂಸದರಾದ ಬಿ. ವೈ. ರಾಘವೇಂದ್ರ ಅವರು ಅವಿರತ ಪ್ರಯತ್ನವನ್ನು ನೆಡೆಸಿದ್ದರು.

ಈ ಸಂಬಂಧ ರಾಣಿಬೆನ್ನೂರು- ಶಿಕಾರಿಪುರ ರೈಲ್ವೆ ಮಾರ್ಗವನ್ನು ಕೇಂದ್ರದ ರೈಲ್ವೆ ಅಧಿಕಾರಿಗಳು ತಂಡವು ಮಂಗಳವಾರ
– ರಾಣಿಬೆನ್ನೂರಿನಿಂದ ಶಿಕಾರಿಪುರ – ಶಿವಮೊಗ್ಗವರೆಗೆ ನೂತನ ಮಾರ್ಗದಲ್ಲಿ ಆಗಮಿಸಿ ಪರಿಶೀಲಿಸಿ ಈ ಯೋಜನೆಗೆ ಬೇಕಾದ ಮಾಹಿತಿ, ಭೂ ಸ್ವಾಧೀನ ಮತ್ತು ಸ್ಥಳೀಯ ಸಮಸ್ಯೆಗಳ ಬಗ್ಗೆ ಸಂಸದರ ಅಧ್ಯಕ್ಷತೆಯಲ್ಲಿ ಸಭೆ ನೆಡೆಸಿ ದೀರ್ಘ ಸಮಾಲೋಚನೆ ಮಾಡಿ ಶೀಘ್ರವಾಗಿ ಸಮಸ್ಯೆ ಪರಿಹರಿಸಿ ತ್ವರಿತವಾಗಿ ಕಾಮಗಾರಿ ಪ್ರಾರಂಭಿಸಲು ಸಂಸದರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಈ ವಿಷಯವಾಗಿ ಡಿಸೆಂಬರ್ ಕೊನೆಯ ವಾರ ಅಥವಾ ಜನವರಿಯಲ್ಲಿ ಮೊದಲನೇ ಹಂತದ ಕಾಮಗಾರಿಯನ್ನ ಪ್ರಾರಂಭಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಶಿವಮೊಗ್ಗದ ಸೊಗನೆಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ತಾಂತ್ರಿಕ ವಿಷಯಗಳ ಬಗ್ಗೆ ರೈಲ್ವೆ ಅಧಿಕಾರಿಗಳೊಂದಿಗೆ ಚರ್ಚೆ ನೆಡೆಸಿ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಸೂಚಿಸಿದರು.ಈ ಸಂದರ್ಭದಲ್ಲಿ ರೈಲ್ವೆ ಅಧಿಕಾರಿಗಳಾದ ಹರಿ ಬಾಬು. IRSE. ಜೆನರಲ್ ಮ್ಯಾನೇಜರ್.ಎಂ. ಜಿ. ಸುದೀಪ್. ಸೀನಿಯರ್ ಡಿ. ಜಿ. ಎಂ.ಶ್ರೀನಿವಾಸ್. ಜೆ. ಜಿ. ಎಂ, ಎಂ. ರಾಜು ಆಡಿಷನಲ್ ಜೆನರಲ್ ಮ್ಯಾನೇಜರ್ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.