Sunday, February 8, 2026
Sunday, February 8, 2026
Home Blog Page 1839

ಜನವರಿಯಲ್ಲಿ ಮೇಕೆದಾಟು ಪಾದಯಾತ್ರೆ. – ಡಿಕೆಶಿ.

0

ನಮ್ಮ ನೀರು ನಮ್ಮ ಹಕ್ಕು. ಮೇಕೆದಾಟು ಯೋಚನೆ ಆಗಲೇಬೇಕು. ಹಳೆ ಮೈಸೂರು ಭಾಗದ ರೈತರನ್ನು ರಕ್ಷಣೆ ಮಾಡಬೇಕು. ಆದ್ದರಿಂದ ಮೇಕೆದಾಟು ಯೋಜನೆ ಜಾರಿಗೆ ಜಾರಿಯಾಗಲೇಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಕುಮಾರ್ ಅವರು ತಿಳಿಸಿದ್ದಾರೆ.

‘ಯೋಜನೆ ಪ್ರಾರಂಭವಾಗಲು ಎಲ್ಲಾ ರೀತಿಯ ಅನುಮತಿ ಸಿಕ್ಕಿದೆ. ಯಾವುದೇ ನ್ಯಾಯಾಲಯದ ತಡೆಯಿಲ್ಲ. ಆದರೂ ಕೇಂದ್ರ ಸರ್ಕಾರ ಮಾತ್ರ ಕೆಲಸ ಮಾಡಲು ಅನುಮತಿ ನೀಡುತ್ತಿಲ್ಲ. ಈ ಯೋಜನೆಯಿಂದ ಬೆಂಗಳೂರಿಗೆ ಕುಡಿಯುವ ನೀರು ಲಭಿಸುತ್ತದೆ. ಹಾಗೂ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಆಗಲಿದೆ. ಇದರ ಜೊತೆಗೆ ರೈತರ ಕೃಷಿಗೆ ನೀರು ಮತ್ತು ತಮಿಳುನಾಡಿಗೆ ನೀರು ಹರಿಸಬಹುದು. ಇದರಿಂದ ಸಮಸ್ಯೆ ಬಗೆಹರಿಯಲು ಸಾಧ್ಯವಿದೆ’ ಎಂದು ಕೂಡ ತಿಳಿಸಿದರು.

ಈ ಯೋಜನೆಯ ಕೆಲಸ ಪ್ರಾರಂಭವಾಗಬೇಕು. ಈ ಬಗ್ಗೆ ನಮ್ಮ ಪಕ್ಷದಿಂದ ಹೋರಾಟ ಮಾಡುತ್ತೇವೆ. ಜನವರಿ ಮೊದಲ ವಾರದಿಂದ ಮೇಕೆದಾಟು ನಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಮಾಡುತ್ತೇವೆ. ಹತ್ತರಿಂದ ಹದಿನೈದು ದಿನಗಳ ಕಾಲ ಪಾದಯಾತ್ರೆ ಮಾಡುತ್ತೇವೆ. ಇದು ನಮ್ಮ ನೀರಿನ ಹಕ್ಕಿನ ಪ್ರಶ್ನೆ. ಮೇಕೆದಾಟು ಯೋಜನೆಯ ಹೋರಾಟದಲ್ಲಿ ಪಾಲ್ಗೊಳ್ಳುವವರಿಗೆ ಪ್ರಮಾಣಪತ್ರ ನೀಡುತ್ತೇವೆ. ಮಂಡ್ಯ ಭಾಗದ ಎಲ್ಲಾ ಜನರು ಈ ಹೋರಾಟದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಮಹಾರಾಷ್ಟ್ರ ಓಮಿಕ್ರಾನ್: ಹತ್ತು ಪ್ರಕರಣ ಪತ್ತೆ.

0

ವಿದೇಶಗಳಿಂದ ಮಹಾರಾಷ್ಟ್ರಕ್ಕೆ ಬಂದವರಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದೆ. ಹೀಗಾಗಿ ಕೊರೋನಾ ನಿರ್ಬಂಧಗಳನ್ನು ಇನ್ನಷ್ಟು ಬಿಗಿಗೊಳಿಸುವ ಸಾಧ್ಯತೆ ಇದೆ.

ದಕ್ಷಿಣ ಆಫ್ರಿಕಾದಿಂದ ಆಗಮಿಸಿರುವ 37 ವರ್ಷದ ಯುವಕ ಹಾಗೂ ಅಮೆರಿಕ ದಿಂದ ಹಿಂದಿರುಗಿರುವ ಅವರ 36 ವರ್ಷದ ಸ್ನೇಹಿತನಿಗೆ ಓಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇದರಿಂದಾಗಿ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಹತ್ತಕ್ಕೆ ಏರಿದೆ. ಡಿ.2ರಂದು ಏಳು ಪ್ರಕರಣಗಳು ದೃಢಪಟ್ಟಿವೆ. ದೇಶದಲ್ಲಿ ಒಟ್ಟು 23 ಜನರಿಗೆ ಓಮಿಕ್ರಾನ್ ಸೋಂಕು ಪತ್ತೆಯಾಗಿದೆ.

ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ಪ್ರಕರಣಗಳು ಹೆಚ್ಚಾಗಿರುವ ಕಾರಣ ಎಲ್ಲರಲ್ಲೂ ಆತಂಕ ಸೃಷ್ಟಿಸಿದೆ.

ಮಹಾರಾಷ್ಟ್ರದ ಮುಖ್ಯಮಂತ್ರಿಗಳಾದ ಉದ್ದವ್ ಠಾಕ್ರೆ ಅವರ ಅಧ್ಯಕ್ಷತೆಯಲ್ಲಿ ಕೊರೋನಾ ಕಾರ್ಯಪಡೆ ಸಭೆ ನಡೆಯಲಿದೆ. ಕೊರೋನಾ ನಿರ್ಬಂಧಗಳನ್ನು ಬಿಗಿಗೊಳಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಮಹಾರಾಷ್ಟ್ರ ಸರ್ಕಾರದ ವರದಿಗಳು ತಿಳಿಸಿವೆ.

ಕೇರಳ ಆರೋಗ್ಯ ಇಲಾಖೆ ಸುದ್ದಿಗೋಷ್ಠಿ: ಸರ್ಕಾರದ ಅನುಮತಿ ಅಗತ್ಯ.

0

ಕೇರಳದಲ್ಲಿ ವೈದ್ಯಾಧಿಕಾರಿಗಳು ಮತ್ತು ಆರೋಗ್ಯ ಕಾರ್ಯಕರ್ತರು ಅನುಮತಿ ಇಲ್ಲದೆ ಸಾರ್ವಜನಿಕವಾಗಿ ಹೇಳಿಕೆ ನೀಡುವಂತಿಲ್ಲ. ಸುದ್ದಿಗೋಷ್ಠಿ ನಡೆಸುವಂತಿಲ್ಲ. ಈ ವಿಷಯದ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಆದೇಶವನ್ನು ಹೊರಡಿಸಿದೆ.

ಕೊರೊನಾ ಪ್ರಕರಣಗಳ ಕುರಿತು ಜನರಿಗೆ ತಪ್ಪು ಮಾಹಿತಿ ಕಳಿಸುವುದು. ಹಾಗೂ ಆರೋಗ್ಯ ಇಲಾಖೆ ಕಾರ್ಯವೈಖರಿ ಕುರಿತು ಜನರ ದಾರಿ ತಪ್ಪಿಸುವ ಸಾಧ್ಯತೆ ಇರುವುದರಿಂದ ಇಂತಹ ಆದೇಶ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ.

ತುರ್ತು ಸಂದರ್ಭ ಸೇರಿ ಯಾವುದೇ ಪರಿಸ್ಥಿತಿಯಲ್ಲಿ ವೈದ್ಯಾಧಿಕಾರಿಗಳು, ಆರೋಗ್ಯ ಕಾರ್ಯಕರ್ತರು ಸುದ್ದಿಗೋಷ್ಠಿ ನಡೆಸಲು, ಸಾರ್ವಜನಿಕವಾಗಿ ಮಾಹಿತಿ ನೀಡಲು ಇಲಾಖೆಯ ಅನುಮತಿ ಅಗತ್ಯ ಎಂದು ಕೇರಳ ಆರೋಗ್ಯ ಇಲಾಖೆ ನಿರ್ದೇಶಕ ವಿ. ಕೆ. ರಾಜು ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ ಮತ್ತೆ ಗದ್ದಲ : ಕಲಾಪ ಮುಂದೂಡಿಕೆ

0

ಮಳೆಗಾಲದ ಅಧಿವೇಶನದಲ್ಲಿ ತೋರಿದ ಅನುಚಿತ ವರ್ತನೆ ಗಾಗಿ 12 ಸದಸ್ಯರನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ಪ್ರತಿಪಕ್ಷಗಳು ಗದ್ದಲ ಮುಂದುವರಿಸಿದ್ದರಿಂದ ರಾಜ್ಯ ಸಭೆಯಲ್ಲಿ ಯಾವುದೇ ಕಲಾಪ ನಡೆಯಲಿಲ್ಲ. ಬೆಳಿಗ್ಗೆಯಿಂದ ಹಲವು ಸಲ ಮುಂದೂಡಿಕೆ ಕಂಡ ಸದನವು ಮಧ್ಯಾಹ್ನ 4 ಗಂಟೆಗೆ ಸೇರಿದಾಗ ಗೃಹ ಸಚಿವ ಅಮಿತ್ ಶಾ ಅವರು ಪ್ರತಿಪಕ್ಷಗಳ ಗದ್ದಲದ ನಡುವೆಯೇ ನಾಗಾಲ್ಯಾಂಡ್ ದುರ್ಘಟನೆ ಕುರಿತು ಹೇಳಿಕೆ ನೀಡಿದರು.
ಬಳಿಕ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲಾಯಿತು. ಲೋಕಸಭೆಯಲ್ಲಿ ಫಾರ್ಮಾಸ್ಯುಟಿಕಲ್ ಶಿಕ್ಷಣ ಕ್ಷೇತ್ರದ ಸಂಸ್ಥೆಗಳಿಗೆ ವಿಶೇಷ ಸ್ಥಾನಮಾನ ನೀಡುವ ‘ರಾಷ್ಟ್ರೀಯ ಔಷಧೀಯ ಶಿಕ್ಷಣ ಮತ್ತು ಸಂಶೋಧನಾ ( ತಿದ್ದುಪಡಿ) ವಿಧೇಯಕ 2021’ ಅನ್ನು ಮಂಡಿಸಲಾಯಿತು.

ಓಮಿಕ್ರಾನ್ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇಲ್ಲ

0

ಕೋವಿಡ್ ವೈರಾಣುವಿನ ಹೊಸ ರೂಪಾಂತರಿ ‘ ಓಮಿಕ್ರಾನ್’ ಭಾರತ ಸೇರಿದಂತೆ ಯಾವುದೇ ದೇಶದಲ್ಲಿರುವ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇಲ್ಲ ಎಂದು ವೈರಾಣು ತಜ್ಞರು ಹೇಳಿದ್ದಾರೆ.
ಭಾರತ ಮಾತ್ರವಲ್ಲ, ಜಗತ್ತಿನ ಯಾವ ದೇಶದ ಮಕ್ಕಳಿಗೂ ಓಮಿಕ್ರಾನ್ ಬಾಧಿಸುವ ಸಾಧ್ಯತೆ ಇಲ್ಲ.ಅಷ್ಟಕ್ಕೂ, ಮಕ್ಕಳ ಮೇಲೆ ಹೊಸ ರೂಪದಲ್ಲಿ ಪರಿಣಾಮ ಬೀರುತ್ತದೆ ಎಂದು ಅಷ್ಟು ಬೇಗ ಅಂತಿಮ ನಿರ್ಧಾರಕ್ಕೆ ಬರುವುದು ಸೂಕ್ತವಲ್ಲ ಎಂದು ರಾಷ್ಟ್ರೀಯ ಜೈವಿಕ ವೈದ್ಯಕೀಯ ಜಿನೋಮಿಕ್ಸ್ ಸಂಸ್ಥೆ ನಿರ್ದೇಶಕ ಡಾ. ಸೌಮಿತ್ರ ದಾಸ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಪ್ರಕರಣಗಳ ಹೆಚ್ಚಳ, ಓಮಿಕ್ರಾನ್ ರೂಪಾಂತರಿ ತಳಿ ಪತ್ತೆಯಾದ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಪಡೆದು ಮಾರ್ಗಸೂಚಿಗಳಲ್ಲಿ ಕೆಲ ಬದಲಾವಣೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಓಮಿಕ್ರಾನ್ ಸೋಂಕಿತರ ಸಂಪರ್ಕದಲ್ಲಿದ್ದವರಿಗೆ ಯಾವುದೇ ಆರೋಗ್ಯ ಸಮಸ್ಯೆ ಕಂಡು ಬಂದಿಲ್ಲ. 2 ಡೋಸ್ ಲಸಿಕೆ ತೆಗೆದುಕೊಂಡವರಲ್ಲಿ ಓಮಿಕ್ರಾನ್ ಸೋಂಕಿನ ತೀವ್ರತೆ ಇರುವುದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ತಿಳಿಸಿದ್ದಾರೆ.
ಕೊರೊನಾ ವೈರಾಣುವಿನ ಪರಿಣಾಮವು ವ್ಯಕ್ತಿಯ ದೇಹದಲ್ಲಿರುವ ರೋಗನಿರೋಧಕ ಶಕ್ತಿ, ಆಹಾರ ಪದ್ಧತಿ, ಇದಕ್ಕೂ ಮೊದಲು ದೇಹದ ಮೇಲೆ ಪರಿಣಾಮ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಅದರಲ್ಲೂ , ಓಮಿಕ್ರಾನ್ ಬೇರೆ ದೇಶದ ಜನರಿಗೆ ಬೀರಿದ ಪರಿಣಾಮವೇ ಭಾರತೀಯರ ಮೇಲು ಬೀರುತ್ತಿದೆ ಎಂಬುದು ಕೇವಲ ವದಂತಿ. ಕೊರೊನಾ ನಿರೋಧಕ ಲಸಿಕೆ 2 ಡೋಸ್ ಪಡೆಯುವುದು, ಸಾಮಾಜಿಕ ಅಂತರ ಸೇರಿ ಹಲವು ಮುಂಜಾಗೃತಾ ಕ್ರಮ ತೆಗೆದುಕೊಂಡರೆ ಸಾಕು. ಅನವಶ್ಯಕ ಭೀತಿಗೆ ಒಳಗಾಗುವುದು ಬೇಡ ಎಂದು ರಾಷ್ಟ್ರೀಯ ಜೈವಿಕ ವೈದ್ಯಕೀಯ ಜಿನೋಮಿಕ್ಸ್ ಸಂಸ್ಥೆ ತಿಳಿಸಿದೆ.

ಮ್ಯಾನ್ಮಾರ್ ಸಾಂಗ್ ಸೂಕಿ: ಸೆರೆವಾಸ ಶಿಕ್ಷೆ.

0

ಮ್ಯಾನ್ಮಾರ್ ನಾಗರಿಕ ಹೋರಾಟಗಳ ನಾಯಕಿ ಆಂಗ್ ಸಾನ್ ಸೂಕಿ ಅವರಿಗೆ ಮ್ಯಾನ್ಮಾರ್ ನ್ಯಾಯಾಲಯ 4 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಕೊರೋನಾ ನಿಯಮ ಉಲ್ಲಂಘನೆ ಮತ್ತು ಶಾಂತಿಗೆ ಭಂಗ ಉಂಟುಮಾಡಿದ್ದಾರೆ ಎಂಬ ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಕಳೆದ ಫೆಬ್ರವರಿ ತಿಂಗಳಿನಲ್ಲಿ ಮ್ಯಾನ್ಮಾರ್ ನಲ್ಲಿ ನಡೆದ ಸೇನಾ ದಂಗೆಯ ಬಳಿಕ 76 ವರ್ಷದ ಸೂಕಿ ಅವರನ್ನು ಗೃಹಬಂಧನದಲ್ಲಿ ಇಡಲಾಗಿತ್ತು. ಕೊರೋನಾ ನಿಯಮ ಉಲ್ಲಂಘನೆ ಮತ್ತು ಸಾರ್ವಜನಿಕರ ಶಾಂತಿಗೆ ಭಂಗ ತಂದಿರುವ ಹಾಗೂ ಆರೋಪಗಳು ಇನ್ನು ಹಲವು ಆರೋಪಗಳು ಅವರ ಮೇಲಿವೆ. ಈ ಆರೋಪಗಳ ಸಾಲಿನಲ್ಲಿ ಒಂದು ಪ್ರಕರಣದಲ್ಲಿ ಮಾತ್ರ ಪ್ರಸ್ತುತ ತೀರ್ಪು ಹೊರಬಿದ್ದಿದೆ. ಇನ್ನುಳಿದದ್ದೆಲ್ಲಾ ಪ್ರಕರಣಗಳಲ್ಲಿ ತಪ್ಪು ಸಾಬೀತಾದರೆ, ನೂರು ವರ್ಷಗಳಿಗೂ ಅಧಿಕ ಕಾಲ ಜೈಲು ಶಿಕ್ಷೆ ವಿಧಿಸುವ ಅವಕಾಶವಿದೆ.

ಸೂಕಿ ಅವರನ್ನು ಕಾರಾಗೃಹಕ್ಕೆ ಕಳುಹಿಸಲಾಗುವುದು ಅಥವಾ ಗೃಹ ಬಂಧನದಲ್ಲಿ ಇರಿಸಲಾಗುವುದು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಸಂಬಂಧ ನ್ಯಾಯಾಲಯ ಏನನ್ನೂ ಹೇಳಿಲ್ಲ. ಈ ಹಿಂದೆ ಪ್ರಜಾಪ್ರಭುತ್ವ ಪರ ಹೋರಾಟ ನಡೆಸಿದ ಸೂಕಿ ಅವರನ್ನು 1989ರಲ್ಲಿ 15 ವರ್ಷಗಳ ಕಾಲ ಗೃಹಬಂಧನದಲ್ಲಿರಿಸಲಾಗಿತ್ತು.

ಸೂಕಿ ಅವರಿಗೆ ಶಿಕ್ಷೆ ವಿಧಿಸಿರುವುದನ್ನು ವಿಶ್ವಸಂಸ್ಥೆಯ ಮಾನವ ಹಕ್ಕು ತಜ್ಞರು ಇನ್ನು ಕೆಲವು ನಾಯಕರು ಇದನ್ನು ಖಂಡಿಸಿದ್ದಾರೆ. ಸೂಕಿ ಅವರ ವಿರುದ್ಧ ಆರೋಪಗಳು ಮತ್ತು ತೀರ್ಪು ಎರಡೂ ವಂಚನೆಯಿಂದ ಕೂಡಿವೆ. ಮ್ಯಾನ್ಮಾರ್ ನ್ಯಾಯಾಂಗವು ಅಲ್ಲಿನ ಮಿಲಿಟರಿ ಪ್ರಾಬಲ್ಯದ ಸರಕಾರದ ಕೈಗೊಂಬೆಯಾಗಿದೆ.ವಿಚಾರಣೆ ನ್ಯಾಯೋಚಿತವಾಗಿ ನಡೆದಿಲ್ಲ. ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಮಿತಿಯ ಮಾಜಿ ಅಧಿಕಾರಿ ಯಾಂಘೀ ಲೀ ಅವರು ಹೇಳಿದ್ದಾರೆ. ಅಮ್ನೆಸ್ಟಿ ಇಂಟರ್ ನ್ಯಾಷನಲ್ ಸೇರಿದಂತೆ ಇತರೆ ಅಂತರಾಷ್ಟ್ರೀಯ ಮಾನವ ಹಕ್ಕು ಸಂಘಟನೆಗಳು ಈ ತೀರ್ಪನ್ನು ಖಂಡಿಸಿವೆ.

ಅನಿವಾರ್ಯ ಆದರೆ ಶಾಲೆಗಳು ಬಂದ್- ಸಚಿವರು

0

ಕೊರೋನಾ ಮೇಲೆ ಸರ್ಕಾರ ನಿಗಾ ವಹಿಸಿದೆ. ಒಂದು ವೇಳೆ ಶಾಲೆಗಳು ಮುಚ್ಚಬೇಕಾದ ಪರಿಸ್ಥಿತಿ ಎದುರಾದರೆ ಅಥವಾ ಪರೀಕ್ಷೆಗಳನ್ನು ಸ್ಥಗಿತಗೊಳಿಸುವ ಸಂದರ್ಭ ಉಂಟಾದರೆ ಆ ವಿಷಯದಲ್ಲಿ ಹಿಂದೇಟು ಹಾಕುವುದಿಲ್ಲ ಎಂದು ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ತಿಳಿಸಿದ್ದಾರೆ.

ಸದ್ಯ ಅಂತ ಯಾವುದೇ ಪರಿಸ್ಥಿತಿ ಇಲ್ಲ. ಪೋಷಕರು ಆತಂಕಕ್ಕೆ ಒಳಗಾಗುವುದು ಬೇಡ. ಮಕ್ಕಳ ಮೇಲೆ ಕೊಮಿಡಿ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಜ್ಞರು ಸ್ಪಷ್ಟಪಡಿಸಿದ್ದಾರೆ. ಆದರೂ ನಮಗೆ ಮಕ್ಕಳ ಆರೋಗ್ಯ ತುಂಬಾ ಮುಖ್ಯ. ಪರಿಸ್ಥಿತಿ ಕೈಮೀರಿದರೆ ಪರ್ಯಾಯ ಏನು ಮಾಡಬೇಕು ಎಂದು ಯೋಚನೆ ಮಾಡುತ್ತೇವೆ. ತಜ್ಞರ ಸಲಹೆ ಪಡೆದ ನಂತರ, ಮುಖ್ಯಮಂತ್ರಿ ಅವರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಕೂಡ ಹೇಳಿದರು.

ವಸತಿ ಶಾಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚಿನ ಸಂಖ್ಯೆಯಲ್ಲಿ ದೃಢಪಟ್ಟಿದೆ. ಈ ಕುರಿತು ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಆಯುಕ್ತರ ಜೊತೆ ಸಮಾಲೋಚನೆ ನಡೆಸಿದ್ದೇನೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ವಿಧಾನಸೌಧದಲ್ಲಿ ಮಾಧ್ಯಮ ಮಿತ್ರರಿಗೆ ತಿಳಿಸಿದ್ದಾರೆ.

ಆಪ್ ಮೂಲಕ ಕಸಾಪ ಚುನಾವಣೆ ಅಧ್ಯಕ್ಷರ ಅನಿಸಿಕೆ

0

ಇನ್ನು ಮುಂದೆ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವವರು ಒಂದು ಲಕ್ಷ ರೂ. ಠೇವಣಿ ಇಡಬೇಕು ಎಂಬ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕೇಂದ್ರ ಕಸಾಪ ಅಧ್ಯಕ್ಷ ಡಾ. ಮಹೇಶ್ ಜೋಶಿ ಅವರು ತಿಳಿಸಿದ್ದಾರೆ.
ಮೈಸೂರು ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಆಯೋಜಿಸಿದ ನೂತನ ಜಿಲ್ಲಾಧ್ಯಕ್ಷ ಮಡ್ಡಿಕೆರೆ ಗೋಪಾಲ ಅವರ ‘ಜವಾಬ್ದಾರಿ ಸ್ವೀಕಾರ’ ಸಮಾರಂಭದಲ್ಲಿ ಮಾತನಾಡಿದರು.
ಜಿಲ್ಲಾಧ್ಯಕ್ಷರು 50 ಸಾವಿರ , ತಾಲೂಕು ಅಧ್ಯಕ್ಷ 25 ಸಾವಿರ ರೂ‌.ಠೇವಣಿ ಇಡುವಂತಾಗಬೇಕು. ಏಕೆಂದರೆ ಈಗಿರುವ 1 ಸಾವಿರ ಠೇವಣಿ ಹಣದಿಂದಾಗಿ ಸಾಕಷ್ಟು ಜನರು ಸ್ಪರ್ಧಿಸುತ್ತಿದ್ದು, ಮುಂದೆ ಈ ಸಂಖ್ಯೆ ಇನ್ನೂ ಹೆಚ್ಚಾದರೆ ಚುನಾವಣೆ ನಡೆಸುವುದು ಕಷ್ಟಕರವಾಗುತ್ತದೆ ಎಂದು ಚುನಾವಣಾ ಅಧಿಕಾರಿಗಳ ಸಲಹೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಇದಕ್ಕೆ ಕಾರ್ಯಕಾರಿ ಸಮಿತಿಯಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ ಎಂದು ತಿಳಿಸಿದರು.
ಪರಿಷತ್ತಿನ ಸದಸ್ಯತ್ವ ಸಂಖ್ಯೆ 1 ಕೋಟಿ ಗುರಿ ಇರುವುದರಿಂದ ಮುಂದಿನ ಬಾರಿ ಚುನಾವಣೆಯನ್ನು ಆಪ್ ಮೂಲಕ ನಡೆಸಲು ಯೋಜಿಸಲಾಗಿದೆ. ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವುದು ಇದೇ ಕೊನೆಯದ್ದು. ಸದಸ್ಯರು ಯಾವುದೇ ಸ್ಥಳದಲ್ಲಿದ್ದರೂ ಅಲ್ಲಿಂದಲೇ ಮತ ಚಲಾಯಿಸುವ ವ್ಯವಸ್ಥೆ ಕಲ್ಪಿಸಲಾಗುವುದು. ಪರಿಷತ್ತು ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು, ಹೆಚ್ಚು ಖರ್ಚಿಲ್ಲದೆ ಎಲೆಕ್ಷನ್ ನಡೆಸಬೇಕಾಗಿದೆ ಎಂದರು.

ಎರಡನೇ ಸುತ್ತಿನ ಸಿಇಟಿ ಪ್ರವೇಶಾವಕಾಶ.

0

ಯುಜಿಸಿಇಟಿ – 2021 ರ ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಗಳಿಗೆ ಮೊದಲನೇ ಸುತ್ತಿನಲ್ಲಿ ಒಟ್ಟು 10 ಸಾವಿರ ಸೀಟುಗಳನ್ನು ಆಯ್ಕೆ ಮಾಡಿಕೊಂಡು, ವಿದ್ಯಾರ್ಥಿಗಳು ಕಾಲೇಜುಗಳಿಗೆ ದಾಖಲಾಗಿದ್ದಾರೆ.
ಇದೀಗ 2ನೇ ಸುತ್ತಿನ ಇಂಜಿನಿಯರಿಂಗ್ ಕೋರ್ಸ್ ಗಳಿಗೆ 21 ಸಾವಿರ, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ಫಾರ್ಮಸಿ ನ್ಯಾಚುರೋಪತಿ ಮತ್ತು ಯೋಗ ಹಾಗೂ ಇತರೆ ಕೋರ್ಸ್ ಗಳ ಪ್ರವೇಶಕ್ಕೆ ಒಂದೂವರೆ ಸಾವಿರ ಸೇರಿದಂತೆ ಒಟ್ಟು 22,500 ಸೀಟುಗಳನ್ನು ಒಳಗೊಂಡ ಸೀಟ್ ಮ್ಯಾಟ್ರಿಕ್ಸ್ ಅನ್ನು ಡಿ.7ರಂದು ಬೆಳಿಗ್ಗೆ 11ರ ನಂತರ ಪ್ರಕಟಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕ್ರಮಕೈಗೊಂಡಿದೆ.
ಅರ್ಹ ಅಭ್ಯರ್ಥಿಗಳು ಆಯ್ಕೆಗಳನ್ನು ಬದಲಾಯಿಸಲು ಡಿ.9ರವರೆಗೆ ಕಾಲಾವಕಾಶವಿದೆ. ಡಿ.10ರಂದು ಸೀಟು ಹಂಚಿಕೆಯ ಪಲಿತಾಂಶ ಪ್ರಕಟಿಸಲಿದೆ.
ಸೀಟು ಹಂಚಿಕೆ
ಯಾದವರು ಚಾಯ್ಸ್ ನೀಡಲು ಡಿ.10ರಿಂದ 12ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಆಯ್ಕೆ ನೀಡಿದ ಅಭ್ಯರ್ಥಿಗಳು ಶುಲ್ಕ ಪಾವತಿಸಿ, ಪ್ರವೇಶ ಪತ್ರಗಳನ್ನು ಡಿ.13ರಿಂದ 15ರ ಸಂಜೆ 5:30ರವರೆಗೆ ಡೌನ್ಲೋಡ್ ಮಾಡಿಕೊಳ್ಳಬಹುದು. ಈ ವಿದ್ಯಾರ್ಥಿಗಳು ಕಾಲೇಜುಗಳಿಗೆ ಪ್ರವೇಶ ಪಡೆಯಲು ಡಿಸೆಂಬರ್ 16 ಕೊನೆಯ ದಿನಾಂಕವಾಗಿರುತ್ತದೆ.

ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿ: ವಿಚಾರಣೆ ಮುಂದೂಡಿಕೆ

0

ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಿರುವ ನಿರ್ಧಾರ ಕೋರ್ಟ್ ನಲ್ಲಿ ಪ್ರಶ್ನಿಸಲಾಗಿದೆ.ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಹಾಗೂ ಮೀಸಲಾತಿ ನಿಗದಿ ಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗ ಹಿಂಪಡೆದಿದೆ. ಈ ನಿರ್ಧಾರ ಪ್ರಶ್ನಿಸಿದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ ನೀಡಿದೆ.

ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ಋತುರಾಜ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ಸಂಸದೀಯ ವ್ಯವಹಾರಗಳ ಇಲಾಖೆ ಕಾರ್ಯದರ್ಶಿ ಮತ್ತು ರಾಜ್ಯ ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಕಳುಹಿಸಲು ಆದೇಶಿಸಿದೆ. ಈ ವಿಚಾರಣೆಯನ್ನು ನ್ಯಾಯಪೀಠ ಮುಂದೂಡಿದೆ.

ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಿರುವ ನಿರ್ಧಾರಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಪಂಚಾಯತ್ ರಾಜ್ ಹಾಗೂ ಗ್ರಾಮಸ್ವರಾಜ್ಯ ಕಾಯ್ದೆಗೆ ತಂದಿರುವ ತಿದ್ದುಪಡಿಯನ್ನು ಆಯೋಗವು ಪ್ರಶ್ನಿಸಿದೆ.

ಕರ್ನಾಟಕ ಗ್ರಾಮ ಸ್ವರಾಜ್ಯ ಹಾಗೂ ಪಂಚಾಯತ್ ರಾಜ್ ಕಾಯ್ದೆ 2021 ಅನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕು. ಚುನಾವಣೆ ಆಯೋಗವು ಈಗಾಗಲೇ ಪ್ರಕಟಿಸುವ ಕರಡು ಮೀಸಲು ಮತ್ತು ಕ್ಷೇತ್ರ ಮರು ವಿಂಗಡಣೆ ಅಧಿಸೂಚನೆ ಆಧರಿಸಿ ಚುನಾವಣೆ ಪ್ರಕ್ರಿಯೆ ಮುಂದುವರಿಸಬೇಕು. ಮೀಸಲು ಮತ್ತು ಕ್ಷೇತ್ರ ಪುನರ್ ವಿಂಗಡಣೆ ಪಟ್ಟಿಯನ್ನು ಪ್ರಕಟಿಸಬೇಕು. ಅನಂತರ ಶೀಘ್ರ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.