Thursday, February 19, 2026
Thursday, February 19, 2026
Home Blog Page 184

Shivamogga Police ಶಿಕಾರಿಪುರ ಸನಿಹ ಮಹಿಳೆಗೆ ವಾಹನ ಡಿಕ್ಕಿ, ತೀವ್ರತರ ಗಾಯ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮಹಿಳೆ ಸಾವು

0

Shivamogga Police ಶಿಕಾರಿಪುರ ಡಿ.17, 2024 ರಂದು ಶಿಕಾರಿಪುರ-ಹೊನ್ನಾಳಿ ರಸ್ತೆಯಲ್ಲಿ ಶಿಕಾರಿಪುರದ ಕಡೆಯಿಂದ ಅತಿವೇಗವಾಗಿ ಬಂದ ವಾಹನವು ನಡೆದುಕೊಂಡು ಹೋಗುತ್ತಿದ ಮಹಿಳೆಗೆ ಡಿಕ್ಕಿ ಹೊಡೆದು ವಾಹನವನ್ನು ನಿಲ್ಲಿಸದೇ ಹೋಗಿದ್ದು, ಮಹಿಳೆಗೆ ತೀವ್ರತರವಾದ ಗಾಯಗಳಾಗಿದ್ದನ್ನು ಗಮನಿಸಿದ ಸಾರ್ವಜನಿಕರು 108 ಆಂಬುಲೆನ್ಸ್ ಮೂಲಕ ಶಿಕಾರಿಪುರ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆದರೆ ಅಲ್ಲಿನ ಚಿಕಿತ್ಸೆ ಫಲಕಾರಿಯಾಗದೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಫೆ. 16 ರಂದು ಮೃತಪಟ್ಟಿರುತ್ತಾರೆ.
ಈ ಮಹಿಳೆಯ ಹೆಸರು, ವಿಳಾಸ, ವಾರಸುದಾರರ ಬಗ್ಗೆ ಯಾವುದೇ ಸುಳಿವು ದೊರೆತಿರುವುದಿಲ್ಲ.

ಆದ್ದರಿಂದ ಶಿವಮೊಗ್ಗ ಮಹಾನಗರ ಪಾಲಿಕೆ ಶರಾವತಿ ಕಾಲೋನಿಯ ಹಿಂದು ರುದ್ರಭೂಮಿಯಲ್ಲಿ ಶವ ಸಂಸ್ಕಾರ ಮಾಡಲಾಗಿರುತ್ತದೆ.
ಈ ಮೃತ ಮಹಿಳೆಯ ಚಹರೆ 45-50 ವರ್ಷ ವಯಸ್ಸು, ಕೋಲುಮುಖ, ತೆಳುವಾದ ಮೈಕಟ್ಟು, ಕಪ್ಪು ಮೈಬಣ್ಣ ಹೊಂದಿರುತ್ತಾರೆ. ಈಕೆ ಮೈಮೇಲೆ ಹಳದಿ ಹೂಗಳಿರುವ ನೀಲಿಬಣ್ಣದ ನೈಟಿ ಧರಿಸಿರುತ್ತಾರೆ.

Shivamogga Police ಕುತ್ತಿಗೆಯ ಬಲಭಾಗದಲ್ಲಿ ಕಪ್ಪು ಮಚ್ಚೆ ಇರುತ್ತದೆ.
ಈಕೆಯ ವಾರಸ್ಸುದಾರರಿದ್ದಲ್ಲಿ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ದೂ.ಸಂ:08187-223430, 9480803366 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.

Department of School Education and Literacy ಸೆ.5, ಕುವೆಂಪು ರಂಗಮಂದಿರದಲ್ಲಿ ಶಿಕ್ಷಕರ ದಿನಾಚರಣೆಗೆ ಜಿಲ್ಲಾಡಳಿತ ಸಜ್ಜು

0

Department of School Education and Literacy ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪ ನಿರ್ದೇಶಕರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಸೆ.5 ರ ಬೆಳಿಗ್ಗೆ 10 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಶಿಕ್ಷಕರ ದಿನಾಚರಣೆ-2025 ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಿದ್ದು, ಶಾಸಕರಾದ ಎಸ್.ಎನ್. ಚನ್ನಬಸಪ್ಪ ಅಧ್ಯಕ್ಷತೆ ವಹಿಸುವರು.

ವಿಶೇಷ ಆಹ್ವಾನಿತರಾಗಿ ಭದ್ರಾವತಿ ಶಾಸಕರು ಹಾಗೂ
ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಬಿ.ಕೆ.ಸಂಗಮೇಶ್ವರ ಹಾಗೂ ಸಾಗರದ ಶಾಸಕರು ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮ ನಿಯಮಿತ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಅವರು ಆಗಮಿಸುವರು.

ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭೆಯ ಹಾಗೂ ವಿಧಾನ ಪರಿಷತ್ ಶಾಸಕರುಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ವಿವಿಧ ಸಂಘಗಳ ಅಧ್ಯಕ್ಷರುಗಳು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಒ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಮಹಾನಗರಪಾಲಿಕೆ ಆಯುಕ್ತರು ಪಾಲ್ಗೊಳ್ಳುವವರು.

Department of School Education and Literacy ಚಿಂತಕರು ಹಾಗೂ ವಾಗ್ಮಿಗಳಾದ ವೈ.ವಿ.ಗುಂಡೂರಾವ್ ವಿಶೇಷ ಉಪನ್ಯಾಸ ನೀಡುವರು.

Shri Maharishi Valmiki Jayanti ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಹರಿಂದ ಅರ್ಜಿ ಆಹ್ವಾನ

0

Shri Maharishi Valmiki Jayanti 2025-26ನೇ ಸಾಲಿಗೆ ಆಚರಿಸುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ ಪರಿಶಿಷ್ಟ ವರ್ಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿ ಸ್ಮರಣಾರ್ಥ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದ್ದು, ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಿದೆ.

Shri Maharishi Valmiki Jayanti ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಶ್ರೀ ಮಹರ್ಷಿ ವಾಲ್ಮೀಕಿ ಭವನ, ಕಂಟ್ರಿ ಕ್ಲಬ್ ರಸ್ತೆ, ವಿದ್ಯಾನಗರ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೆ.10 ರೊಳಗಾಗಿ ಸಲ್ಲಿಸುವಂತೆ ಜಿ.ಪ.ವ. ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

Fisheries Department Shimoga ಪ್ರಧಾನಮಂತ್ರಿ ಮತ್ಸ್ಯಸಂಪದ & ನೀಲಿಕ್ರಾಂತಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

0

Fisheries Department Shimoga ಮೀನುಗಾರಿಕಾ ಇಲಾಖೆ ಶಿವಮೊಗ್ಗ ವತಿಯಿಂದ 2022-23 ರಿಂದ 2024-25 ನೇ ಸಾಲಿನವರೆಗೆ ಮರುಹಂಚಿಕೆಯಾಗಿರುವ ಪ್ರಧಾನಮಂತ್ರಿ ಮತ್ಸ್ಯ ಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಧಾನಮಂತ್ರಿ ಮತ್ಸ್ಯ ಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಮೀನು ಕೃಷಿಕೊಳಗಳ ನಿರ್ಮಾಣ ಒಟ್ಟು 4.03 ಹೆಕ್ಟೇರ್‌ಗುರಿ ಇದ್ದು, ಸಾಮಾನ್ಯರಿಗೆ 2.39 ಮತ್ತು ಪರಿಶಿಷ್ಟ ಜಾತಿ 1.64 ಹೆಕ್ಟೇರ್ ನೀಡಲಾಗುವುದು.
ಮೀನುಕೃಷಿ ಕೊಳ ನಿರ್ಮಾಣ ಮಾಡಿ ಮೀನುಕೃಷಿ ಕೈಗೊಂಡವರಿಗೆ ಹೂಡಿಕೆಗಳ ವೆಚ್ಚದ ಮೇಲೆ ಸಹಾಯಕ್ಕೆ ಒಟ್ಟು 8.60 ಹೆಕ್ಟೇರ್ ಗುರಿ ನಿಗದಿಪಡಿಸಿದ್ದು, ಸಾಮಾನ್ಯರಿಗೆ 4.80, ಸಾಮಾನ್ಯ ಮಹಿಳೆರಿಗೆ 1.80, ಪರಿಶಿಷ್ಟ ಜಾತಿಗೆ 1 ಹಾಗೂ ಪರಿಶಿಷ್ಟ ಪಂಗಡಕ್ಕೆ 1 ಹೆಕ್ಟೇರ್ ನೀಡಲಾಗುವುದು.
ಯಾಂತ್ರೀಕೃತ ದೋಣಿ ಖರೀದಿಗೆ ಸಹಾಯ ಯೋಜನೆಯಡಿ ಸಾಂಪ್ರದಾಯಿಕ ಮೀನುಗಾರರಿಗೆ ಎಫ್‌ಆರ್‌ಪಿ ಬದಲಿ ದೋಣಿ ನಿರ್ಮಾಣಕ್ಕಾಗಿ ಸಹಾಯ-01 ಘಟಕ ಗುರಿ ಇದ್ದು ಸಾಮಾನ್ಯರಿಗೆ ನೀಡಲಾಗುವುದು
ಮೀನುಮರಿ ಪಾಲನಾ ಘಟಕ ನಿರ್ಮಾಣ ಸಹಾಯ ಒಟ್ಟು 7.198 ಹೆಕ್ಟೇರ್ ಗುರಿ ಇದ್ದು, ಸಾಮಾನ್ಯರಿಗೆ 2.03, ಮಹಿಳೆಯರಿಗೆ 2,228 ಪರಿಶಿಷ್ಟ ಜಾತಿಗೆ 1 ಹಾಗೂ ಪರಿಶಿಷ್ಟ ಪಂಗಡಕ್ಕೆ 1.94 ಹೆಕ್ಟೇರ್ ನೀಡಲಾಗುವುದು.
Fisheries Department Shimoga ಸೈಕಲ್ ವಿತ್ ಐಸ್ ಬಾಕ್ಸ್ ಸಾಮಾನ್ಯ ವರ್ಗಕ್ಕೆ 1 ಗುರಿ, ಮಧ್ಯಮ ವರ್ಗದ ಅಲಂಕಾರಿಕ ಸಾಕಾಣಿಕೆ ಘಟಕ ಪರಿಶಿಷ್ಟ ಜಾತಿ 01 ಗುರಿ, ಹೊಸತಾದ ಅಲಂಕಾರಿಕಾ ಮೀನುಮಾರಾಟ ಮಳಿಗೆ ಸೇರಿದಂತೆ ಸಹಾಯ ಪರಿಶಿಷ್ಟ ಜಾತಿ 01 ಘಟಕ ನೀಡಲಾಗುವುದು.
ಸಹಾಯಧನ ಘಟಕಗಳ ಉಪಯೋಜನೆಗಳನ್ನು ಪಡೆಯಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.40 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ.60 ರಷ್ಟು ಸಹಾಯಧನ ನೀಡಲಾಗುವುದು.
ಆಸಕ್ತರು ಸೆ. 20 ರೊಳಗೆ ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿಯಿಂದ ಅರ್ಜಿಗಳನ್ನು ಪಡೆದು ಸಂಬAಧಪಟ್ಟ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿಗೆ ಪೂರ್ಣ ದಾಖಲೆಗಳೊಂದಿಗೆ ಸಲ್ಲಿಸಬಹುದೆಂದು ಮೀನುಗಾರಿಕೆ ಉಪ ನಿರ್ದೇಶಕರು ತಿಳಿಸಿದ್ದಾರೆ.

Hindu Mahasabha Ganapati ಹಿಂದೂ ಮಹಾ ಸಭಾ ಗಣೇಶ ಮೆರವಣಿಗೆ ನಿಮಿತ್ತ ಸೆಪ್ಟೆಂಬರ್ 6 ರಂದು ಶಿವಮೊಗ್ಗದಲ್ಲಿ ವಾಹನಗಳ ಸಂಚಾರ ಮಾರ್ಗ ಬದಲಾವಣೆ ಆದೇಶ

0

Hindu Mahasabha Ganapati ದಿನಾಂಕ: 06-09-2025 ರಂದು ನಗರದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಇರುವ ಹಿನ್ನೆಲೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ವಾಹನಗಳ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಕೆಳಕಂಡAತೆ ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ.
ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಮೋಟಾರು ವಾಹನ ಕಾಯ್ದೆ 1988 ಕಲಂ 115 & 117 ರ ಅನ್ವಯ ಅಂದು ಬೆಳಿಗ್ಗೆ 6 ರಿಂದ ರಾತ್ರಿ 12 ಗಂಟೆವರೆಗೆ ವಾಹನ ಸಂಚಾರ ನಿಷೇಧ, ನಿಲುಗಡೆ ಮತ್ತು ಮಾರ್ಗ ಬದಲಾವಣೆ ಮಾಡಲಾಗಿದೆ.
ಸೆ.06 ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ-ಎನ್ ಪಿ ಎಂ ಮುಖ್ಯ ರಸ್ತೆ-ರಾಮಣ್ಣ ಶ್ರೇಷ್ಠಿ ಪಾರ್ಕ್-ಗಾಂಧಿ ಬಜಾರ್ ಮುಖ್ಯ ರಸ್ತೆ, ಎಸ್ ಎನ್ ಸರ್ಕಲ್ -ಎ.ಎ.ಸರ್ಕಲ್- ನೆಹರು ರಸ್ತೆ- ಗೋಪಿ ಸರ್ಕಲ್- ದುರ್ಗಿಗುಡಿ ಮಾರ್ಗವಾಗಿ ಮಹಾವೀರ ಸರ್ಕಲ್ – ಡಿವಿಎಸ್ ಸರ್ಕಲ್ –ಕಾನ್ವೆಂಟ್ ರಸ್ತೆ – ಕೋಟೆ ರಸ್ತೆ ಮಾರ್ಗವಾಗಿ ಭೀಮೇಶ್ವರ ದೇವಸ್ಥಾನದ ಹತ್ತಿರ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಾಗುವುದು. ಮೆರವಣಿಗೆ ಮಾರ್ಗದಲ್ಲಿ ಮತ್ತು ಮಾರ್ಗದ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಹಾಗೂ ನಿಲುಗಡೆಯನ್ನು ನಿಷೇಧಿಸಲಾಗಿದೆ.

  • Hindu Mahasabha Ganapati ಬೆಂಗಳೂರು ಭದ್ರಾವತಿ, ಎನ್ ಆರ್ ಪುರ ಕಡೆಯಿಂದ ಬರುವ ಎಲ್ಲಾ ಭಾರೀ ವಾಹನ ಮತ್ತು ಎಲ್ಲಾ ಬಸ್‌ಗಳು/ಸಿಟಿ ಬಸ್‌ಗಳು ಹಾಗೂ ಕಾರು ವಾಹನಗಳು ಎಂಆರ್‌ಎಸ್ ಸರ್ಕಲ್‌ನಿಂದ ಬೈಪಾಸ್ ರಸ್ತೆ ಮುಖಾಂತರವಾಗಿ ಹೋಗುವುದು.
  • ಚಿತ್ರದುರ್ಗ ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲಾ ಭಾರೀ ವಾಹನ ಮತ್ತು ಬಸ್ ಗಳು ಎಂ.ಆರ್.ಎಸ್ ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರವಾಗಿ ಹೋಗುವುದು.
  • ಹೊನ್ನಾಳಿ ಹರಿಹರ, ದಾವಣಗೆರೆಯಿಂದ ಬರುವ ಮತ್ತು ಹೋಗುವ ಎಲ್ಲಾ ಭಾರೀ ವಾಹನ ಮತ್ತು ಬಸ್‌ಗಳು ಸಂಗೊಳ್ಳಿರಾಯಣ್ಣ ಸರ್ಕಲ್, ಶಂಕರಮಠ ಸರ್ಕಲ್ ಹೊಳೆಹೊನ್ನೂರು ಸರ್ಕಲ್, ವಿದ್ಯಾನಗರದ ಎಂ.ಆರ್.ಎಸ್. ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.
  • ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ, ಶಿಕಾರಿಪುರ, ಸೊರಬ, ಹರಿಹರ, ದಾವಣಗೆರೆ ಹೋಗುವ ಎಲ್ಲಾ ಬಸ್‌ಗಳು ಮತ್ತು ಭಾರೀ ಸರಕು ವಾಹನಗಳು ಸಾಗರ ರಸ್ತೆ ಮುಖಾಂತರವಾಗಿ ಹೆಲಿಪ್ಯಾಡ್ ಸರ್ಕಲ್-ಆಲ್ಕೋಳ ಸರ್ಕಲ್-ಪೊಲೀಸ್ ಚೌಕಿ-ರಾಜ್ ಕುಮಾರ್ ಸರ್ಕಲ್-ಬೊಮ್ಮನಕಟ್ಟೆ-ಸವಳಂಗ ರಸ್ತೆ ಮುಖಾಂತರ ಹೋಗುವುದು.
  • ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು, ಭದ್ರಾವತಿ ಕಡೆಗೆ ಹೋಗುವ ಎಲ್ಲಾ ವಾಹನಗಳು ಬೈಪಾಸ್ ರಸ್ತೆ ಎಂ.ಆರ್.ಎಸ್ ಸರ್ಕಲ್ ಮುಖಾಂತರ ಹೋಗುವುದು
  • ಶಿಕಾರಿಪುರ ಸೊರಬ ಆನವಟ್ಟಿ ಕಡೆಯಿಂದ ಶಿವಮೊಗ್ಗಕ್ಕೆ ಬರುವ ಮತ್ತು ಹೊರ ಹೋಗುವ ಎಲ್ಲಾ ಬಸ್‌ಗಳು ಮತ್ತು ಭಾರೀ ವಾಹನಗಳು ಉಷಾ ನರ್ಸಿಂಗ್ ಹೋಂ ಸರ್ಕಲ್ ಲಕ್ಷಿö್ಮÃ ಟಾಕೀಸ್ ಸರ್ಕಲ್-ಪೊಲೀಸ್ ಚೌಕಿ- ಆಲ್ಕೋಳ ಸರ್ಕಲ್ ಮಾರ್ಗವಾಗಿ ಸಾಗರ ರಸ್ತೆಯಲ್ಲಿ ಸಂಚರಿಸುವುದು.
  • ಕೋಟೆ ರಸ್ತೆ ಮತ್ತು ಓಲ್ಡ್ ಬಾರ್‌ಲೈನ್ ರಸ್ತೆ ಎಲ್ಲಾ ವಾಹನಗಳ ಸಂಚಾರ ನಿಷೇಧ.
    ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು ಅತಿಗಣ್ಯ ವ್ಯಕ್ತಿಗಳ ವಾಹನಗಳು ಆಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿರುತ್ತದೆ ಎಂದು ಅವರು ತಿಳಿಸಿದ್ದಾರೆ.

District Legal Services Authority ಸಾಥಿ ಅಭಿಯಾನದಡಿ 28 ಮಕ್ಕಳಿಗೆ ಆಧಾರ್ ಕಾರ್ಡ್ ವಿತರಿಸಲಾಗಿದೆ – ನ್ಯಾ.ಎಂ.ಎಸ್.ಸಂತೋಷ್

0

District Legal Services Authority ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಇವರ ನಿರ್ದೇಶನದ ಮೇರೆಗೆ ಶಿವಮೊಗ್ಗ ಜಿಲ್ಲೆಯಲ್ಲಿನ ಪಾಲನೆ ಮತ್ತು ಸಂರಕ್ಷಣೆ ಅಗತ್ಯವಿರುವ 28 ಮಕ್ಕಳಿಗೆ ‘ಸಾಥಿ ಅಭಿಯಾನ’ ದಡಿ ಆಧಾರ್ ಕಾರ್ಡ್ ಒದಗಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ ಎಸ್ ತಿಳಿಸಿದ್ದಾರೆ.
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಇವರ ನಿರ್ದೇಶನದ ಮೇರೆಗೆ ಶಿವಮೊಗ್ಗ ಜಿಲ್ಲೆಯಲ್ಲಿನ ಪಾಲನೆ ಮತ್ತು ಸಂರಕ್ಷಣೆ ಬೇಕಾಗಿರುವ ಮಕ್ಕಳಿಗೆ ಆಧಾರಕಾರ್ಡ್ ಮಾಡಿಸುವ ಉದ್ದೇಶದಿಂದ ಪ್ರಾಧಿಕಾರದ ಮೂಲಕ ಹಮ್ಮಿಕೊಂಡಿದ್ದ “ಸಾಥಿ ಅಭಿಯಾನ’ ದಡಿ ಒಟ್ಟು 19 ವಿವಿಧ ಇಲಾಖೆಗಳು ಜಿಲ್ಲಾ ಮತ್ತು ವಲಯ ಮಟ್ಟದ ಅಧಿಕಾರಿಗಳು ಮತ್ತು ಪ್ಯಾನಲ್ ವಕೀಲರನ್ನೊಳಗೊಂಡ ಸಾಥಿ ಘಟಕವನ್ನು ರಚಿಸುವ ಮೂಲಕ ಪರಿತ್ಯಕ್ತ, ಪಾಲನೆ, ಸಂರಕ್ಷಣೆ ಅಗತ್ಯವಿರುವ ಮಕ್ಕಳನ್ನು ಗುರುತಿಸಿ ಆಧಾರ್‌ಕಾರ್ಡ್ ಒದಗಿಸಲಾಗಿದ್ದು, ಈ ಅಭಿಯಾನದ ಯಶಸ್ಸಿಗೆ ಸಹಕರಿಸಿದ ಎಲ್ಲಾ ಇಲಾಖೆಯ ಅಧಿಕಾರಿಗಳು, ಪ್ಯಾನಲ್ ವಕೀಲರಿಗೂ ಮತ್ತು ಪ್ರಾಧಿಕಾರದ ಅರೆಕಾಲಿಕ ಸ್ವಯಂ ಸೇವಕರಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಧನ್ಯವಾದಗಳನ್ನು ಸಲ್ಲಿಸಿರುತ್ತಾರೆ.
ರಾಷ್ಟçಕ್ಕಾಗಿ ಮಧ್ಯಸ್ಥಿಕೆ – 90 ದಿನಗಳ ಮಧ್ಯಸ್ಥಿಕೆ ಅಭಿಯಾನ :
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ರವರ ನಿರ್ದೇಶನದಂತೆ ಶಿವಮೊಗ್ಗ ಜಿಲ್ಲೆಯಲ್ಲಿನ ಎಲ್ಲಾ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ವೈವಾಹಿಕ ವಿವಾಹದ ವ್ಯಾಜ್ಯಗಳು, ಅಪಘಾತಕ್ಕೆ ಸಂಬAಧಿಸಿದ ಪರಿಹಾರದ ವ್ಯಾಜ್ಯಗಳು, ಕೌಟುಂಬಿಕ ದೌರ್ಜನ್ಯ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ವಾಣಿಜ್ಯ ವಿವಾದದ ದಾವೆಗಳು, ವೇತನ ಮತ್ತು ಸೇವೆಗೆ ಸಂಬAಧಿಸಿದ ವ್ಯಾಜ್ಯಗಳು, ರಾಜಿ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಗ್ರಾಹಕರ ವೇದಿಕೆಯ ಪ್ರಕರಣಗಳು, ಸಾಲದ ಪ್ರಕರಣಗಳು, ಪಾಲು ವಿಭಾಗದ ದಾವೆಗಳು, ಸ್ಥಿರ ಆಸ್ತಿ ಸ್ವಾಧೀನದ ದಾವೆಗಳು, ಭೂಸ್ವಾಧೀನದ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳ’ ರಾಜೀ ಸಂಧಾನಕ್ಕಾಗಿ 90 ದಿನಗಳ ಮಧ್ಯಸ್ಥಿಕೆ ಅಭಿಯಾನವನ್ನು ದಿನಾಂಕ: 01.07.2025 ರಿಂದ 30.09.2025 ರವರೆಗೆ ಹಮ್ಮಿಕೊಳ್ಳಲಾಗಿದೆ.
ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಪಕ್ಷಗಾರರು ರಾಜೀ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಶೀಘ್ರವಾಗಿ ಮತ್ತು ತಮಗೆ ಸೂಕ್ತ ಎನ್ನಿಸುವ ನ್ಯಾಯಯುತವಾದ ಪರಿಹಾರಗಳನ್ನು ಪಡೆದುಕೊಳ್ಳಲು ಸಂಬAಧಪಟ್ಟ ನ್ಯಾಯಾಲಯಗಳಲ್ಲಿ ಅಂತಹ ಪ್ರಕರಣಗಳನ್ನು ಮಧ್ಯಸ್ಥಿಕೆಗೆ ನೇಮಿಸಲು ತಾವಾಗಲೀ ಅಥವಾ ವಕೀಲರ ಮೂಲಕ ಮನವಿ ಮಾಡಿಕೊಂಡು ಅದರಂತೆ ಪ್ರಕರಣಗಳಲ್ಲಿ ನ್ಯಾಯವನ್ನು ಪಡೆದುಕೊಳ್ಳಬಹುದಾಗಿದ್ದು, ಆದ್ದರಿಂದ ಎಲ್ಲಾ ಸಾರ್ವಜನಿಕರು ಮತ್ತು ವಕೀಲರು ಈ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು.
District Legal Services Authority ಖಾಯಂ ಲೋಕ್ ಅದಾಲತ್ ಜಾಗೃತಿ ಅಭಿಯಾನ :
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ನಿರ್ದೇಶನದಂತೆ ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲೆಯ ಎಲ್ಲಾ ತಾಲ್ಲೂಕು ಕಾನೂನು ಸೇವಾ ಸಮಿತಿಗಳ ಮೂಲಕ ಸಾರ್ವಜನಿಕ ಉಪಯುಕ್ತ ಸೇವೆಗಳನ್ನು ನೀಡುತ್ತಿರುವ ಬ್ಯಾಂಕ್‌ಗಳು, ವಿಮಾ ಕಂಪನಿಗಳು, ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳಿಗೆ ಮತ್ತು ಸಾರ್ವಜನಿಕರಲ್ಲಿ ಖಾಯಂ ಲೋಕ್ ಅದಾಲತ್ ಕುರಿತು ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಖಾಯಂ ಲೋಕ್ ಅದಾಲತ್ ಒಂದು ವಿಶೇಷ ನ್ಯಾಯಾಲಯವಾಗಿದ್ದು, ಪ್ರಕರಣಗಳ ರಾಜೀ ಸಂಧಾನವೇ ಈ ನ್ಯಾಯಾಲಯದ ಮೊದಲ ಆದ್ಯತೆಯಾಗಿದೆ. ಪ್ರಯಾಣಿಕರನ್ನು ಅಥವಾ ಸರಕನ್ನು ಸಾಗಿಸುವ ಭೂ ಸಾರಿಗೆ, ಜಲಸಾರಿಗೆ, ವಾಯು ಸಾರಿಗೆ ಸೇವೆಗಳು, ಅಂಚೆ ತಂತಿ, ದೂರವಾಣಿ ಸೇವೆಗಳು, ವಿದ್ಯುತ್, ನೀರು ಸರಬರಾಜು, ಸಾರ್ವಜನಿಕ ನೈರ್ಮಲ್ಯ ಹಾಗೂ ಚರಂಡಿ ವ್ಯವಸ್ಥೆ, ವಿಮಾ ಸೇವೆ, ಆಸ್ಪತ್ರೆ ಹಾಗೂ ಔಷಧಾಲಯಗಳ ಸೇವೆ, ಹಣಕಾಸು ಸಂಸ್ಥೆ ಹಾಗೂ ಬ್ಯಾಂಕ್ ಸೇವೆ, ಶಿಕ್ಷಣ ಸಂಸ್ಥೆಗಳ ಸಂಬAಧಪಟ್ಟ ಸೇವೆ, ಗೃಹ ಹಾಗೂ ರಿಯಲ್ ಎಸ್ಟೇಟ್ ಸೇವೆ ಒಳಗೊಂಡAತೆ ಇನ್ನಿತರ ಸಾರ್ವಜನಿಕ ಉಪಯುಕ್ತ ಸೇವೆಗಳ ಪ್ರಕರಣಗಳನ್ನು ಈ ನ್ಯಾಯಾಲಯದಲ್ಲಿ ಸಲ್ಲಿಸಬಹುದು. ಇತರೆ ನ್ಯಾಯಾಲಯಗಳಂತೆ ಇಲ್ಲಿ ಶುಲ್ಕ ಕಟ್ಟುವಂತಿಲ್ಲ ಹಾಗೂ ಯಾವುದೇ ಆದಾಯದ ಮಿತಿ ಇರುವುದಿಲ್ಲ. ಈ ಖಾಯಂ ಲೋಕ್ ಅದಾಲತ್ ರಾಜ್ಯದ 6 ಜಿಲ್ಲೆಗಳಲ್ಲಿ ಕಚೇರಿ ಹೊಂದಿದ್ದು ಶಿವಮೊಗ್ಗ ಜಿಲ್ಲೆಯು ಮಂಗಳೂರಿನ ವ್ಯಾಪ್ತಿಗೆ ಬರುತ್ತದೆ.
ವೀರ್ ಪರಿವಾರ ಸಹಾಯತಾ ಯೋಜನೆ :
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ರವರ ನಿರ್ದೇಶನದಂತೆ ಜಿಲ್ಲಾ ಸೈನಿಕ ಬೋರ್ಡ್, ಬಿ.ಹೆಚ್. ರಸ್ತೆ, ಶಿವಮೊಗ್ಗ ಇಲ್ಲಿ ವೀರ್ ಪರಿವಾರ ಸಹಾಯತಾ ಯೋಜನಾ ಅಡಿಯಲ್ಲಿ ಮಾಜಿ ಸೈನಿಕರು ಮತ್ತು ಅವರ ಕುಟುಂಬ ಸದಸ್ಯರಿಗೆ ಕಾನೂನು ಸಲಹೆ ಮತ್ತು ನೆರವು ನೀಡಲು ಕಾನೂನು ಸಲಹಾ ಕೇಂದ್ರವನ್ನು ಸ್ಥಾಪಿಸಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕ್ರಮ ಕೈಗೊಂಡಿದ್ದು ಈ ಕೇಂದ್ರಕ್ಕಾಗಿ ಮಾಜಿ ಸೈನಿಕರು ಹಾಗೂ ಪ್ರಸ್ತುತ ವಕೀಲರೊಬ್ಬರನ್ನು ನೇಮಿಸಲು ಶಿಫಾರಸ್ಸು ಮಾಡಲಾಗಿದೆ. ಈ ಯೋಜನೆಯಡಿಯಲ್ಲಿ ಮಾಜಿ ಸೈನಿಕರು ಮತ್ತು ಅವರ ಕುಟುಂಬ ಸದಸ್ಯರು ಕಾನೂನು ಸಲಹಾ ಕೇಂದ್ರಕ್ಕೆ ಭೇಟಿ ನೀಡಿ ತಮ್ಮ ಕುಂದು ಕೊರತೆಗಳಿಗೆ ಉಚಿತವಾಗಿ ಕಾನೂನು ಸಲಹೆ ಹಾಗೂ ನೆರವನ್ನು ಪಡೆದುಕೊಳ್ಳಬಹುದಾಗಿದೆ.

ನಾಲ್ಸಾ ಕಾನೂನು ಉಚಿತ ಸಹಾಯ ವಾಣಿ 15100 :
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿಯ ಸೂಚನೆಯಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿವಮೊಗ್ಗ ವತಿಯಿಂದ ಒಬ್ಬ ಮಹಿಳಾ ವಕೀಲರು ಹಾಗೂ ಒಬ್ಬ ಪುರುಷ ವಕೀಲರನ್ನು ಉಚಿತ ಸಹಾಯವಾಣಿ ಸಂಖ್ಯೆ 15100 ಗೆ ಬರುವ ಕರೆಗಳನ್ನು ಸ್ವೀಕರಿಸಿ ಸಾರ್ವಜನಿಕರ ಕುಂದು ಕೊರತೆಗೆ ಉಚಿತ ಕಾನೂನು ಸಲಹೆ ನೀಡಲು ನೇಮಿಸಲಾಗಿದೆ.
ಸಾರ್ವಜನಿಕರು ಈ ಉಚಿತ ಸಹಾಯವಾಣಿ ಸಂಖ್ಯೆ 15100 ಗೆ ಕರೆ ಮಾಡಿ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ಹೊರತುಪಡಿಸಿ ಉಳಿದಂತೆ ತಮಗೆ ಅವಶ್ಯಕವಿರುವ ತುರ್ತು ಕಾನೂನು ಸಲಹೆಯನ್ನು ದೂರವಾಣಿ ಕರೆಯ ಮೂಲಕ ಪಡೆದುಕೊಳ್ಳಬಹುದಾಗಿದೆ.
ರಾಷ್ಟಿçÃಯ ಲೋಕ್ ಅದಾಲತ್:
ದಿನಾಂಕಃ 13.09.2025 ರಂದು ಶಿವಮೊಗ್ಗ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳ ಶೀಘ್ರ ವಿಲೇವಾರಿಗೆ ಮತ್ತು ಪಕ್ಷಗಾರರಿಗೆ ತ್ವರಿತ ನ್ಯಾಯ ದಾನದ ದೃಷ್ಟಿಯಿಂದ ಈ ವರ್ಷದ 3ನೇ ರಾಷ್ಟಿçÃಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ.
ಅಂದು ಎಲ್ಲಾ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ವೈವಾಹಿಕ ವಿವಾದದ ವ್ಯಾಜ್ಯಗಳು, ಅಪಘಾತಕ್ಕೆ ಸಂಬAಧಿಸಿದ ಪರಿಹಾರದ ವ್ಯಾಜ್ಯಗಳು, ಕೌಟುಂಬಿಕ ದೌರ್ಜನ್ಯ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ವಾಣಿಜ್ಯ ವಿವಾದದ ದಾವೆಗಳು, ವೇತನ ಮತ್ತು ಸೇವೆಗೆ ಸಂಬAಧಿಸಿದ ವ್ಯಾಜ್ಯಗಳು, ರಾಜೀ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಗ್ರಾಹಕರ ವೇದಿಕೆಯ ಪ್ರಕರಣಗಳು, ಸಾಲದ ಪ್ರಕರಣಗಳು, ಪಾಲು ವಿಭಾಗದ ದಾವೆಗಳು, ಸ್ಥಿರಆಸ್ತಿ ಸ್ವಾಧೀನದ ದಾವೆಗಳು, ಭೂಸ್ವಾಧೀನದ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳ ರಾಜೀ ಸಂಧಾನಕ್ಕಾಗಿ ಉಭಯ ಪಕ್ಷಗಾರರ ಉಪಸ್ಥಿತಿಯಲ್ಲಿ ನ್ಯಾಯಾಧೀಶರು ಮತ್ತು ನ್ಯಾಯಿಕೇತರ ಸಂಧಾನಕಾರರು ರಾಜೀ ಸಂಧಾನದ ಪ್ರಕ್ರಿಯೆಯನ್ನು ಕೈಗೊಂಡು ಪಕ್ಷಗಾರರು ವಿವಾದವನ್ನು ಇತ್ಯರ್ಥಪಡಿಸಿಕೊಂಡರೆ ಅದರಂತೆ ಅಂತಿಮ ಆದೇಶವನ್ನು ಅದೇ ದಿನದಂದು ನೀಡುವ ಅವಕಾಶವನ್ನು ಸಾರ್ವಜನಿಕರು ಮತ್ತು ಪಕ್ಷಗಾರರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಈ ಮೂಲಕ ಕೋರಲಾಗಿದೆ.
ಈ ಮುಂಚೆ ದಿನಾಂಕಃ 12.07.2025 ರಂದು ಕೈಗೊಳ್ಳಲಾದ ಈ ವರ್ಷದ 2ನೇ ರಾಪ್ಟ್ರೀಯ ಲೋಕ್ ಅದಾಲತ್‌ನಲ್ಲಿ ವಿಚಾರಣೆಗೆ ಬಾಕಿ ಇರುವ 14225 ರಷ್ಟು ಪ್ರಕರಣಗಳು ರಾಜೀ ಸಂಧಾನದ ಮೂಲಕ ಕೊನೆಗೊಂಡಿದ್ದು, ಅವುಗಳ ಮೂಲಕ ಪಕ್ಷಗಾರರು ಒಟ್ಟು ರೂ. 30,50,15,387/- ಮೊತ್ತದ ಪರಿಹಾರ ಒಳಗೊಂಡ ವಿವಾದಗಳನ್ನು ರಾಜೀ ಮಾಡಿಕೊಂಡಿರುತ್ತಾರೆ. ಅದೇ ಸಂದರ್ಭದಲ್ಲಿ ಒಟ್ಟು 1,44,825 ವ್ಯಾಜ್ಯ ಪೂರ್ವ ಪ್ರಕರಣಗಳು ಕೊನೆಗೊಂಡಿದ್ದು, ಅವುಗಳ ಮೂಲಕ ಒಟ್ಟು ರೂ. 75,40,80,831/- ಮೊತ್ತದ ಪರಿಹಾರ ಒಳಗೊಂಡ ವಿವಾದಗಳನ್ನು ರಾಜೀ ಮಾಡಿಕೊಂಡಿರುತ್ತಾರೆ ಎಂದು ತಿಳಿಸಿದ್ದಾರೆ.

Christ University ಗೋಕರ್ಣ ಕುರಿತು ಪ್ರವಾಸಿಗರ ಅಭಿಪ್ರಾಯ ಸಂಗ್ರಹ: ಮಾಹಿತಿ ನೀಡಲು ಮನವಿ

0

Christ University ವಿಜಯ ವಿ. ಹೆಗಡೆ, ಕ್ರೈಸ್ಟ್ ವಿಶ್ವವಿದ್ಯಾಲಯ, ಬೆಂಗಳೂರು ಯಲ್ಲಿ ಸಂಶೋಧನಾ ವಿದ್ಯಾರ್ಥಿ.
“ಗೋಕರ್ಣದ ಕುರಿತು ಪ್ರವಾಸಿಗರ ಅಭಿಪ್ರಾಯ ಮತ್ತು ಪ್ರತಿಬದ್ಧತೆ” ಎಂಬ ವಿಷಯದ ಮೇಲೆ ನಡೆಯುತ್ತಿರುವ ನನ್ನ ಶೈಕ್ಷಣಿಕ ಸಂಶೋಧನೆಯ ಭಾಗವಾಗಿ ಈ ಸಮೀಕ್ಷೆಯನ್ನು ನಡೆಸಲಾಗುತ್ತಿದೆ.
ಹೆಚ್ಚು ಜನರಿಗೆ ಸಿಗುವಂತೆ ಈ ಗೂಗಲ್ ಫಾರ್ಮ್ ಅನ್ನು ಇಂಗ್ಲಿಷ್ ಮತ್ತು ಕನ್ನಡ ಭಾಷೆಗಳಲ್ಲಿ ಸಿದ್ಧಪಡಿಸಲಾಗಿದೆ.
ದಯವಿಟ್ಟು ಒಂದು ಭಾಷೆಯ ಆವೃತ್ತಿಯನ್ನು ಮಾತ್ರ ಆರಿಸಿ ಸಮೀಕ್ಷೆಯಲ್ಲಿ ಭಾಗವಹಿಸಿ.
ನಿಮ್ಮ ಭಾಗವಹಿಸುವಿಕೆ ಮಹತ್ವದ್ದಾಗಿದೆ!
ನಿಮ್ಮ ಅಮೂಲ್ಯ ಅಭಿಪ್ರಾಯಗಳು ಗೋಕರ್ಣ, ಕರ್ನಾಟಕದ ಸಸ್ಥಿರ ಪ್ರವಾಸೋದ್ಯಮ ತಂತ್ರಗಳನ್ನು ರೂಪಿಸಲು ನೆರವಾಗುತ್ತದೆ.
ನಿಮ್ಮ ಸಮಯ ಮತ್ತು ಭಾಗವಹಿಸುವಿಕೆಗೆ ಹೃತ್ಪೂರ್ವಕ ಧನ್ಯವಾದಗಳು!

Christ University ಕನ್ನಡ ಗೂಗಲ್ ಫಾರ್ಮ್ : https://forms.gle/K8uMEbXa7WEKiEGu8

Klive Special Article ಪರಮ ಭಾಗವತರು ಶ್ರೀಜಗನ್ನಾಥದಾಸರು

0

ಲೇ: ಎನ್.ಜಯಭೀಮ ಜೊಯ್ಸ್.ಶಿವಮೊಗ್ಗ

Klive Special Article ” ಹರಿಕಥಾಮೃತಸಾರ ಗುರುಗಳ/
ಕರುಣದಿಂದಾಪನಿತು ಪೇಳುವೆ/
ಪರಮಭಗವದ್ಭಕ್ತರಿದನಾದರದಿ
ಕೇಳುವುದು//
ಇದು ಶ್ರೀಜಗನ್ನಾಥದಾಸರು ರಚಿಸಿರುವ
“ಹರಿಕಥಾಮೃತಸಾರ”ಗ್ರಂಥದಲ್ಲಿರುವ
ಪದ್ಯದ ಸಾಲುಗಳು.
ಜಗನ್ನಾಥ ದಾಸರೆಂದರೆ ಮನಃಪಟಲದಲ್ಲಿ ಅಲೆಅಲೆಯಾಗಿ ತೇಲಿಬರುವುದು “ಶ್ರೀಹರಿ
ಕಥಾಮೃತಸಾರ”ದ ಪದ್ಯದ ಸಾಲುಗಳು. ಶ್ರೀಹರಿಕಥಾಮೃತಸಾರ ಮಧ್ವ ಸಿದ್ಧಾಂತ
ಕ್ಕೊಂದು ವಿದ್ವತ್ಪೂರ್ಣ ಕೈಗನ್ನಡಿ.ಇದರಲ್ಲಿ ಶ್ರೀಹರಿಯ ಅನಂತ ಕಲ್ಯಾಣಗುಣ ಪರಿಪೂರ್ಣತ್ವ,ಮೋಕ್ಷಸಾಧನೆಯ ವಿವರಗಳು.ಭಕ್ತಿಯ ಮಹತ್ವ,ಉಪಾಸನೆಯ ರೀತಿ ಮೊದಲಾದ ಪ್ರಮುಖ ತತ್ವಗಳನ್ನೆಲ್ಲಾ ಕಾವ್ಯಮಯವಾಗಿ ವಿವೇಚಿಸಲಾಗಿದೆ.
ಸಂಸ್ಕೃತದಲ್ಲಿರುವ ಈ ಸಿದ್ಧಾಂತಗಳನ್ನು ಕನ್ನಡಕ್ಕೆ ತರುವಲ್ಲಿ ಜಗನ್ನಾಥದಾಸರು ಅದ್ಭುತ ಕೌಶಲವನ್ನು ಮೆರೆದಿದ್ದಾರೆ.ಶ್ರೀಜಗನ್ನಾಥದಾಸರು 32 ಸಂಧಿಗಳುಳ್ಳ ಶ್ರೀಹರಿಕಥಾಮೃತಸಾರವನ್ನು
ಭಾಮಿನಿ ಷಟ್ಪದಿಯಲ್ಲಿ ರಚಿಸಿದ್ದಾರೆ.
ಇವರು ಹುಟ್ಟಿದ್ದು ರಾಯಚೂರು ಜಿಲ್ಲೆಯ ಮಾನವಿ ಊರಿಗೆ ಹತ್ತಿರವಿರುವ ಬ್ಯಾಗವಟ್ಟಿ
ಎಂಬ ಸಣ್ಣ ಗ್ರಾಮದಲ್ಲಿ.
ಇವರು ತಿರುಪತಿ ತಿಮ್ಮಪ್ಪನ ಅನುಗ್ರಹದಿಂದ ಹುಟ್ಟಿದ್ದರಿಂದ ಶ್ರೀನಿವಾಸ ಎಂದು ಅವರ ತಂದೆತಾಯಿಗಳು ನಾಮಕರಣ ಮಾಡಿದರು.
ವೇದಾಭ್ಯಾಸವನ್ನು ಮಂತ್ರಾಲಯದ ಅಂದಿನ ಪೀಠಾಧಿಕಾರಿಗಳಾಗಿದ್ದ ಶ್ರೀವರದೇಂದ್ರತೀರ್ಥ
ಶ್ರೀಪಾದಂಗಳವರಲ್ಲಿ ಮಾಡಿದರು. ಶ್ರೀನಿವಾಸನ ವೇದಾಭ್ಯಾಸ ಮುಗಿದು ಶ್ರೀವರದೇಂದ್ರತೀರ್ಥ ಗುರುಗಳ ಆಶೀರ್ವಾದ ಪಡೆದು ಮಾನವಿಗೆ ಹಿಂತಿರುಗಿ ಗೃಹಸ್ಥಾಶ್ರಮಿಗಳಾಗಿ ಮನೆಯಲ್ಲೇ ಗುರುಕುಲವನ್ನು ಪ್ರಾರಂಭಮಾಡುತ್ತಾರೆ.
ಹೀಗಿರುವಾಗ ಒಂದು ದಿವಸ ಶ್ರೀವಿಜಯದಾಸರು ಸಂಚಾರಮಾಡುತ್ತಾ ಮಾನವಿಗೆ ಬರುತ್ತಾರೆ.
ವಿಜಯದಾಸರು ಯಾವ ಊರಿಗೇ ಬರಲಿ, ಅಲ್ಲಿ ತಂಗಿರುವಾಗ ಆ ಊರಿನ ಪಂಡಿತರು, ಬ್ರಾಹ್ಮಣರು,ವಿದ್ವಾಂಸರುಗಳನ್ನು ತಮ್ಮೊಡನೆ
ಭೋಜನಕ್ಕೆ ಆಹ್ವಾನಿಸುವ ಪದ್ಧತಿಯನ್ನಿಟ್ಟು ಕೊಂಡಿದ್ದರು.ಅದೇ ರೀತಿ ಅವರು ಶ್ರೀನಿವಾಸಾ
ಚಾರ್ಯರಿಗೂ ತಾವು ತಂಗಿದ್ದಪ್ರಾಣದೇವರ ದೇವಸ್ಥಾನಕ್ಕೆ ಭೋಜನಕ್ಕೆ ಬರುವಂತೆ ಆಹ್ವಾನಿಸುತ್ತಾರೆ.
ಶ್ರೀನಿವಾಸಾಚಾರ್ಯರು ವಿಜಯದಾಸರ ಆಹ್ವಾನವನ್ನು ತಿರಸ್ಕರಿಸಿ ತಮಗೆ ಉದರಶೂಲೆ ಬಂದಿರುವುದರಿಂದ ಭೋಜನಕ್ಕೆಬರುವುದಿಲ್ಲವೆಂತ ಹೇಳಿಕಳಿಸುತ್ತಾರೆ.ಇದನ್ನು ಕೇಳಿದ ವಿಜಯದಾಸರು ಹರಿಚಿತ್ತ ಎಂದು ಕೊಳ್ಳುತ್ತಾರೆ.
ಶ್ರೀನಿವಾಸಾಚಾರ್ಯರು ಸುಳ್ಳು ಹೇಳಿ ವಿಜಯದಾಸರ ಆಹ್ವಾನವನ್ನು ತಿರಸ್ಕರಿಸಿದ್ದರಿಂದ ಅವರಿಗೆ ನಿಜವಾಗಿಯೂ ಉದರಶೂಲೆ ಪ್ರಾರಂಭವಾಗುತ್ತದೆ.
Klive Special Article ದಿನೇ ದಿನೇ ಉದರಶೂಲೆ ಹೆಚ್ಚಾಗುತ್ತಾ ಹೋಗಿ ಯಾವ ಔಷಧೋಪಚಾರದಿಂದಲೂ
ಗುಣಕಾಣುವುದಿಲ್ಲ. ವ್ಯಾಧಿ ಪರಿಹಾರಕ್ಕಾಗಿ ಪ್ರಾಣದೇವರ ಸೇವೆ ಮಾಡುತ್ತಾರೆ. ಪ್ರಾಣದೇವರು ಮಂತ್ರಾಲಯ ದೊರೆಗಳ ಮೊರೆ ಹೋಗುವಂತೆ ಸೂಚಿಸುತ್ತಾರೆ.
ಮಂತ್ರಾಲಯಕ್ಕೆ ಬಂದು ಶ್ರೀರಾಯರ ಸೇವೆಯನ್ನು ಮಾಡುತ್ತಾರೆ.
ಶ್ರೀನಿವಾಸಾಚಾರ್ಯರು ಶ್ರೀರಾಯರ ಪ್ರಹ್ಲಾದಾವತಾರದಲ್ಲಿ ಅವರ ಅನುಜ ಸಹ್ಲಾದರ ಅವತಾರವೆಂದುಜ್ಞಾನಿಗಳುಹೇಳುತ್ತಾರೆ.
ಶ್ರೀರಾಯರುಅವರಿಗೆವ್ಯಾಧಿಉಲ್ಬಣವಾಗಿರುವುದು ಇವರು ವಿಜಯದಾಸರ ಆಹ್ವಾನವನ್ನು ತಿರಸ್ಕರಿಸಿದ್ದರಿಂದ ಮತ್ತು ಇದರ ಪರಿಹಾರಕ್ಕೆ ವಿಜಯದಾಸರ ಹತ್ತಿರವೇ ಹೋಗಲು ಸ್ವಪ್ನದಲ್ಲಿ ತಿಳಿಸುತ್ತಾರೆ. ತಿರುಪತಿಯಲ್ಲಿದ್ದ ವಿಜಯದಾಸರ ಹತ್ತಿರ
ವ್ಯಾಧಿಯಿಂದ ಕೃಶರಾಗಿದ್ದ ಶ್ರೀನಿವಾಸಾಚಾರ್ಯರು ಬರುತ್ತಾರೆ.ಅಪರೋಕ್ಷ ಜ್ಞಾನಿಗಳಾದ ವಿಜಯದಾಸರಿಗೆ ಎಲ್ಲವೂ ತಿಳಿದಿರುತ್ತದೆ.
ಶ್ರೀನಿವಾಸಾಚಾರ್ಯರು ವಿಜಯದಾಸರನ್ನು ನೋಡಿದವರೇ ಅವರ ಕಾಲುಗಳನ್ನು ಗಟ್ಟಿಯಾಗಿ ಹಿಡಿದುಕೊಂಡು ತಮ್ಮ ತಪ್ಪನ್ನುಕ್ಷಮಿಸುವಂತೆಯೂ ಮತ್ತು ವ್ಯಾಧಿಯನ್ನು ಪರಿಹರಿಸಬೇಕೆಂತ ಪ್ರಾರ್ಥಿಸಿಕೊಳ್ಳುತ್ತಾರೆ.
ಶ್ರೀವಿಜಯದಾಸರು ಅತ್ಯಂತ ಪ್ರೀತಿಯಿಂದ ಶ್ರೀನಿವಾಸಾಚಾರ್ಯರಿಗೆ ಧೈರ್ಯ ಹೇಳಿ ಅವರಿಗೆ ತಮ್ಮ ಶಿಷ್ಯರಾದ ಗೋಪಾಲದಾಸರ
ಬಳಿ ಹೋಗಲು ಹೇಳಿ,ಅವರಿಂದ ಈ ವ್ಯಾಧಿ ಪರಿಹಾರವಾಗುವುದೆಂದು ತಿಳಿಸುತ್ತಾರೆ.
ತಮ್ಮನ್ನು ಕಾಣಲು ಉತ್ತನೂರಿಗೆ ಬಂದ ಶ್ರೀನಿವಾಸಾಚಾರ್ಯರನ್ನು ಗೋಪಾಲದಾಸರು ಬಹಳ ಪ್ರೀತ್ಯಾದರಗಳಿಂದಬರಮಾಡಿಕೊಳ್ಳುತ್ತಾರೆ.
ಶ್ರೀಗೋಪಾಲದಾಸರು ಗಣೇಶನ ಅಂಶದವರು ಮತ್ತು ಅಪರೋಕ್ಷಜ್ಞಾನಿಗಳೂ ಹೌದು. ಇವರು ಶ್ರೀಧನ್ವಂತರಿದೇವರಿಗೆ ನಿವೇದಿಸಿದ ಎರಡು ಭಕ್ರಿ(ಜೋಳದ ರೊಟ್ಟಿ)ಯನ್ನು ಶ್ರೀಧನ್ವಂತರಿ ದೇವರನ್ನುಪ್ರಾರ್ಥಿಸಿ ಶ್ರೀನಿವಾಸಾಚಾರ್ಯರಿಗೆ ತಿನ್ನಲಿಕ್ಕೆ ಕೊಡುತ್ತಾರೆ. ಶ್ರೀನಿವಾಸಾಚಾರ್ಯರಿಗೆ ಕೆಲವು ದಿವಸಗಳಲ್ಲಿ ವ್ಯಾಧಿ ಸಂಪೂರ್ಣ ವಾಸಿಯಾಗಿ
ದೇಹದಲ್ಲಿ ಸ್ವಲ್ಪ ಶಕ್ತಿಯೂ ಬರುತ್ತದೆ.
ಶ್ರೀನಿವಾಸಾಚಾರ್ಯರು ಗೋಪಾಲದಾಸರಿಗೆ
ತಮಗೆ ಹರಿದಾಸ ದೀಕ್ಷೆ ನೀಡುವಂತೆಯೂ
ಮತ್ತು ಶಿಷ್ಯರಾಗಿ ಅವರ ಬಳಿಯಲ್ಲೇ ಇರಲು
ಅಪೇಕ್ಷಿಸುತ್ತಾರೆ. ಗೋಪಾಲದಾಸ ರುಗುರುಗಳಾದ ಶ್ರೀವಿಜಯದಾಸರ ಆಜ್ಞೆಯಂತೆ ತಮ್ಮ ಆಯುಷ್ಯದಲ್ಲಿ 40 ವರ್ಷಗಳನ್ನು ಶ್ರೀನಿವಾಸಾಚಾರ್ಯರಿಗೆ ಧಾರೆಯೆರೆಯುತ್ತಾರೆ.
ಶ್ರೀನಿವಾಸಾಚಾರ್ಯರಿಗೆ ಪಂಢರಾಪುರಕ್ಕೆ ಹೋಗಿ ಶ್ರೀವಿಠಲನ ಅನುಗ್ರಹ ಪಡೆಯುವಂತೆ ತಿಳಿಸಿ ಅವರನ್ನುಪಂಢರಾಪುರಕ್ಕೆ ಕಳಿಸಿಕೊಡುತ್ತಾರೆ. ಶ್ರೀನಿವಾಸಾಚಾರ್ಯರು ಪಂಢರಾಪುರದಲ್ಲಿ
ಚಂದ್ರಭಾಗಾ ನದಿಯಲ್ಲಿ ಸ್ನಾನಮಾಡುವಾಗ
“ಜಗನ್ನಾಥವಿಠಲ” ಎಂಬ ಶಿಲಾ ಫಲಕ ಇವರ ಕೈಗೆ ಸಿಗುತ್ತದೆ.ಇದುವಿಠಲನ ಅನುಗ್ರಹವೆಂದುಕೊಂಡು “ತಟಿತ್ಕೋಟಿ
ನಿಭ ಕಾಯ ಜಗನ್ನಾಥ ವಿಠಲಯ್ಯ ವಿಠಲಯ್ಯಾ”ಎಂಬ ದೇವರನಾಮವನ್ನು
ರಚಿಸಿ ಹಾಡುತ್ತಾರೆ.ಅಂದಿನಿಂದ ಜಗನ್ನಾಥ ದಾಸರಾಗಿ ಶ್ರೀವಿಠಲನ ಅನುಗ್ರಹದಿಂದಲೇ ದೀಕ್ಷೆಪಡೆದರು.
ಅಲ್ಲಿ ವಿಠಲನ ಸೇವೆಮಾಡಿದಾಗ ವಿಠಲನು ಪ್ರತ್ಯಕ್ಷನಾಗಿ ಬ್ರಾಹ್ಮಣ ವೇಷದಲ್ಲಿ ಅವರಿಗೆ ಸುರಗಿ ಹೂವಿನ ಮಾಲೆ ಮತ್ತು ಫೇಡೆಯ ಗಂಟನ್ನು ಕೊಡುತ್ತಾನೆ. ಹರಿದಾಸ ಸಾಹಿತ್ಯಕ್ಕೆ ಶ್ರೀಜಗನ್ನಾಥದಾಸರ ಕೊಡುಗೆ ಅಪಾರವಾಗಿದೆ.ಅನೇಕ ಕೀರ್ತನೆಗಳನ್ನೂ, ಸುಳಾದಿಗಳನ್ನೂ ರಚಿಸಿದ್ದಾರೆ.‌
ಸುವ್ವಾಲಿ ಪದಗಳನ್ನು ರಚಿಸಿರುವುದು ಇವರ ಮತ್ತೊಂದು ವೈಶಿಷ್ಟ್ಯ.
ಜಗನ್ನಾಥದಾಸರು ಹರಿ ಕಥಾಮೃತಸಾರವನ್ನು
ರಚಿಸತೊಡಗಿದಾಗ, 27 ಸಂಧಿಗಳನ್ನು ರಚಿಸಿದ ನಂತರ ಮುಂದುವರೆಯದೆ ನಿಂತು ಹೋಯಿತಂತೆ.
ಆಗ ಅವರ ಗುರುಗಳಾದ ಗೋಪಾಲದಾಸರಲ್ಲಿ ವಿಚಾರಿಸಿದಾಗ ಗಣಪತಿ ಸ್ತೋತ್ರವನ್ನು ಕೈಬಿಟ್ಟಿರುವುದರಿಂದ ಈ ರೀತಿಯಾಗಿದೆ ಎಂದು ಗೊತ್ತಾಗಿ 28 ನೆಯ ಸಂಧಿಯನ್ನು “ಶ್ರೀ ವಿಘ್ನೇಶ್ವರ ಸಂಧಿ” ಎಂದು ಹೆಸರಿಸಿ ಗಣಪತಿಗೆ ಅರ್ಪಿಸಿದ ನಂತರ ಗ್ರಂಥ ಪೂರ್ಣಗೊಂಡಿತು ಎಂತ ತಿಳಿಯುತ್ತದೆ.
ಶ್ರೀಜಗನ್ನಾಥದಾಸರು ಶಾಲಿವಾಹನ ಶಕೆ 1731 ನೇ ಶುಕ್ಲ ಸಂವತ್ಸರದ ಭಾದ್ರಪದ ಶುದ್ಧನವಮಿಯಂದು ಮಾನವಿಯಲ್ಲಿ ಹರಿ ಪದವನ್ನೈದಿದರು.
ಇಂತಹ ದೈವಾಂಶ ಸಂಭೂತರ ಆರಾಧನಾ ದಿನದಂದು ಅವರನ್ನು ಸ್ಮರಿಸಿ ಭಕ್ತಿಯ ನಮನಗಳನ್ನು ಅರ್ಪಿಸಿ,ಅವರ ಅನುಗ್ರಹಕ್ಕೆ
ಪಾತ್ರರಾಗೋಣ.


ಎನ್.ಜಯಭೀಮ್ ಜೊಯ್ಸ್

Department of School Education, ಕ್ರೀಡೆಯಿಂದ ಶಿಸ್ತು ,ಏಕಾಗ್ರತೆ ಬೆಳೆಯುತ್ತದೆ- ಕ್ಲಿಫರ್ಡ್ ರೋಷನ್ ಪಿಂಟೊ

0

Department of School Education, ಕ್ರೀಡೆಯಿಂದ ಶಿಸ್ತು, ಏಕಾಗ್ರತೆ ಬೆಳೆಯುವುದು ಎಂದು ಮೌಂಟ್ ಕಾರ್ಮೆಲ್ ಎಜುಕೇಶನ್ ಸೊಸೈಟಿ, ಕಾರ್ಯದರ್ಶಿಯಾದ ಕ್ಲಿಫರ್ಡ್ ರೋಷನ್ ಪಿಂಟೊ ಕ್ರೀಡಾಪಟುಗಳಿಗೆ ತಿಳಿಸಿದರು.

ಅವರು ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಹಾಗೂ ಇನ್ ಫೆಂಟ್ ಜೀಸಸ್ ಶಾಲೆ, ಶರಾವತಿ ನಗರ, ಶಿವಮೊಗ್ಗ.ಇವರ ಸಂಯುಕ್ತ ಆಶ್ರಯದಲ್ಲಿ ಎರಡು ದಿನ ಆಯೋಜಿಸಿದ್ದ 14 ವರ್ಷ ವಯೋಮಿತಿಯೊಳಗಿನ ಸಿ ಮತ್ತು ಡಿ ಬಾಲಕ ಮತ್ತು ಬಾಲಕಿಯರ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡುತ್ತಾ, ಓದಿನ ಜೊತೆಗೆ ಕ್ರೀಡೆಗೂ ಹೆಚ್ಚು ಒತ್ತು ಕೊಟ್ಟಾಗ ಕ್ರೀಡೆ ಬೆಳೆಯಲು ಸಾಧ್ಯವಾಗುತ್ತದೆ.

ಕ್ರೀಡೆಯಲ್ಲಿ ಕ್ರೀಡಾ ಮನೋಭಾವದಿಂದ ಭಾಗವಹಿಸಿ, ಸೋಲು – ಗೆಲುವನ್ನು ಸಮಾನವಾಗಿ ಸ್ವೀಕರಿಸಿ,ನಿರಂತರ ಅಭ್ಯಾಸದಿಂದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಕ್ರೀಡಾಪಟುಗಳಿಗೆ ಕರೆ ನೀಡಿದರು.

ಶಾಲಾ ಶಿಕ್ಷಣ ಇಲಾಖೆಯ ತಾಲೂಕು ದೈಹಿಕ ಶಿಕ್ಷಣ ಅಧಿಕಾರಿಗಳಾದ ಚಂದ್ರಕಾಂತ್ . ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು,ಮನಸ್ಸು ಮತ್ತು ದೇಹದ ಬೆಳವಣಿಗೆಯು ಸಮಾನವಾಗಿ ಬೆಳೆಯಲು ಕ್ರೀಡೆ ಸಹಕಾರಿ ಎಂಬುದು ನಮಗೆಲ್ಲರಿಗೂ ತಿಳಿದಿದೆ.

ಆಟಗಳು ಮತ್ತು ಕ್ರೀಡೆಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಿದೆ, ಅದಕ್ಕಾಗಿಯೇ ದೈಹಿಕ ತರಬೇತಿ, ವ್ಯಾಯಾಮ ಮತ್ತು ಆಟಗಳಿಲ್ಲದೆ – ಶಿಕ್ಷಣವು ಅಪೂರ್ಣವಾಗಿರುತ್ತದೆ. ಅಲ್ಲದೆ, ಶಿಕ್ಷಣದ ಜೊತೆಗೆ, ಆಟಗಳು ಸಹ ನಮ್ಮೆಲ್ಲರನ್ನೂ ಎದ್ದು ನಿಲ್ಲಲು ಮತ್ತು ಜೀವನದ ಎಲ್ಲಾ ಕಠಿಣ ಸವಾಲುಗಳನ್ನು ಎದುರಿಸಲು ಸಿದ್ಧಗೊಳಿಸುತ್ತವೆ. ಆಟಗಳನ್ನು ಆಡುವಾಗ, ವಿದ್ಯಾರ್ಥಿಗಳು ಆಮ್ಲಜನಕದ ಉತ್ತಮ ಸೇವನೆಯನ್ನು ತೆಗೆದುಕೊಳ್ಳುತ್ತಾರೆ, ಅವರ ರಕ್ತ ಪರಿಚಲನೆ ಹೆಚ್ಚಾಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರಾ. ಹ.ತಿಮ್ಮೇನಹಳ್ಳಿ ಮಾತನಾಡಿ,ಕ್ರೀಡಾಪಟುಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂಬ ಸಂಕಲ್ಪ ಇರಬೇಕು. ಸತತ ಪ್ರಯತ್ನದಿಂದ ಜೀವನವನ್ನು ಹಾಗೂ ಕ್ರೀಡೆಗಳಲ್ಲಿ ಎಂತಹ ಸಾಧನೆಯನ್ನಾದರೂ ಮಾಡಬಹುದು ಎಂದರು.

Department of School Education, ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿಯಾದ ಸಿಸ್ಟರ್ ಫಿಲೋಮಿನಾ, ಜಿಲ್ಲಾ ಸಂಘದ ಕಾರ್ಯದರ್ಶಿ ಕೆ.ಜಿ.ಮಠಪತಿ, ತಾಲೂಕು ಸಂಘದ ಕಾರ್ಯದರ್ಶಿ, ತೇಜಸ್ ಕುಮಾರ್,ಕ್ರೀಡಾ ಕಾರ್ಯದರ್ಶಿ ಸುರೇಸ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Shivamogga Roller Skating Association ರಾಜ್ಯ ನಾಲ್ಕನೇ ಸ್ಕೇಟಿಂಗ್ ರ್ಯಾಂಕಿಂಗ್ ಸ್ಪರ್ಧೆಯಲ್ಲಿ ಪ್ರಶಸ್ತಿ‌ ಪಡೆದ ಶಿವಮೊಗ್ಗ ಚಿಣ್ಣರು

0

Shivamogga Roller Skating Association ಬೆಂಗಳೂರಿನ ಬನಶಂಕರಿಯಲ್ಲಿರುವ ಸ್ಕೇಟಿಂಗ್ ಕ್ರೀಡಾಂಗಣದಲ್ಲಿ ರಾಜ್ಯ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಕಳೆದ ಮೂರು ದಿನಗಳಿಂದ ಆಯೋಜಿಸಿದ್ದ ನಾಲ್ಕನೇ ರ್ಯಾಕಿಂಗ್ (ranking) ಸ್ಕೇಟಿಂಗ್ ಕ್ರೀಡೆಯಲ್ಲಿ ಶಿವಮೊಗ್ಗದ ನಮ್ಮ ಶಿವಮೊಗ್ಗ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ನ ನಾಲ್ವರು ಸ್ಕೇಟರ್ ಗಳು ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕವನ್ನು ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಆರು ವರ್ಷದೊಳಗಿನ ವಯೋಮಿತಿಯ ಪಂದ್ಯಾವಳಿಯಲ್ಲಿ ಭಕ್ತಿ ಎಂ.ಪಿ. ಅವರು ಎರಡು ಚಿನ್ನದ ಪದಕ ಪಡೆದಿದ್ದಾರೆ. ಸೆಂಟ್ ಜೋಸೆಫ್ ಅಕ್ಷರಧಾಮ ಶಾಲೆಯಲ್ಲಿ ಓದುತ್ತಿರುವ ಭಕ್ತಿ ಡಾ. ಎಂ.ಸಿ. ಪ್ರದೀಪ್ ಹಾಗೂ ಕೆ.ಬಿ. ಮಮತಾ ದಂಪತಿಗಳ ಪುತ್ರಿ.
ಅಂತೆಯೇ ಆರರಿಂದ ಎಂಟು ವರ್ಷದೊಳಗಿನ ವಯೋಮಿತಿಯ ಪಂದ್ಯಾವಳಿಯಲ್ಲಿ ನಮ್ಮ ಶಿವಮೊಗ್ಗ ಸಂಸ್ಥೆಯ ಹಿತ ಪ್ರವೀಣ್ ಎರಡು ಚಿನ್ನದ ಪದಕ ಪಡೆದಿದ್ದಾರೆ.

ಜ್ಞಾನದೀಪ ಶಾಲೆಯಲ್ಲಿ ಓದುತ್ತಿರುವ ಹಿತ ಪ್ರವೀಣ್ ಅವರು ಆರೋಗ್ಯ ಇಲಾಖೆಯ ಪ್ರವೀಣ್ ಹಾಗೂ ಸೌಮ್ಯ ದಂಪತಿಗಳ ಪುತ್ರಿ.
ಸರ್ಜಿ ಫ್ರೀ ಶಾಲೆಯಲ್ಲಿ ಓದುತ್ತಿರುವ ಸಮೃದ್ಧಿ ವಿಶ್ವಾಸ್ 6 ವರ್ಷದೊಳಗಿನ ವಯೋಮಿತಿಯ ಪಂದ್ಯಾವಳಿಯಲ್ಲಿ ಕಂಚಿನ ಪದಕ ಪಡೆದಿದ್ದಾರೆ.

ಶಿವಮೊಗ್ಗದ ಮಾಜಿ ಕಾರ್ಪೊರೇಟರ್ ಈ. ವಿಶ್ವಾಸ್ ಹಾಗೂ ಸುಪ್ರಿಯಾ ಎಸ್. ಎಸ್. ದಂಪತಿಗಳ ಪುತ್ರಿ.
ನಮ್ಮ ಶಿವಮೊಗ್ಗ ಸಂಸ್ಥೆಯ ಅದ್ವಿಕಾ ನಾಯರ್ 10 ರಿಂದ 12 ವರ್ಷ ವಯೋಮಿತಿಯ ಪಂದ್ಯಾವಳಿಯಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ.
ಪೋದಾರ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಅದ್ವಿಕಾ ಅವರು ಆರ್.ಎಲ್. ರಂಜಿತ್ ಹಾಗೂ ಗಾಯತ್ರಿ ದಂಪತಿಗಳ ಪುತ್ರಿ.
ಈ ಸಾಧಕ ಸ್ಕೇಟರ್ ಗಳಿಗೆ ನಮ್ಮ ಶಿವಮೊಗ್ಗ ಸಂಸ್ಥೆಯ ಆರ್. ವಿಶ್ವಾಸ್, ಆರ್. ಆತೀಶ್ ತರಬೇತುದಾರರು.

Shivamogga Roller Skating Association ಜಿಲ್ಲೆಗೆ ಕೀರ್ತಿ ತಂದ ಸಾಧಕ ಸ್ಕೇಟರ್ ಗಳಿಗೆ ನಮ್ಮ ಶಿವಮೊಗ್ಗ ಸಂಸ್ಥೆಯ ಅಧ್ಯಕ್ಷ ಮೋಹನ್ ಕುಮಾರ್, ಪದಾಧಿಕಾರಿಗಳಾದ ಎಂ.ರವಿ, ಎಸ್.ಕೆ. ಗಜೇಂದ್ರಸ್ವಾಮಿ, ಉಮಾ ಟಿ., ವಕೀಲ ಪ್ರವೀಣ್, ತಾರಾನಾಥ್ ಹೆಚ್. ಪಿ., ಶ್ರೀನಾಥ್ ಅಭಿನಂಧಿಸಿದ್ದಾರೆ.
ಬಿವೈಆರ್, ಕೆಎಸ್ಈ, ಡಿಎಸ್ಎ ಶುಭಹಾರೈಕೆ:
ಸ್ಕೇಟಿಂಗ್ ನಲ್ಲಿ ಜಿಲ್ಲೆಗೆ ಕೀರ್ತಿ ತಂದ ಪುಟಾಣಿ ಕ್ರೀಡಾಪಟುಗಳಿಗೆ ಶಿವಮೊಗ್ಗ ಲೋಕಸಭಾ ಸದಸ್ಯ ಬಿ. ವೈ. ರಾಘವೇಂದ್ರ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ. ಎಸ್. ಈಶ್ವರಪ್ಪ, ವಿಧಾನ ಪರಿಷತ್ ಶಾಸಕ ಡಿ. ಎಸ್. ಅರುಣ್ ಸೇರಿದಂತೆ ವಿವಿಧ ಗಣ್ಯರು ಅಭಿನಂದಿಸಿ ಶುಭಹಾರೈಸಿದ್ದಾರೆ.