Thursday, February 19, 2026
Thursday, February 19, 2026
Home Blog Page 185

MESCOM ಸೆಪ್ಟೆಂಬರ್ 2. ಭದ್ರಾವತಿ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

0

MESCOM ಭದ್ರಾವತಿ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಸೆ. 02 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಗ್ರಾಹಕರು ಈ ಅವಕಾಶದ ಸದುಪಯೋಗಪಡೆದುಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.
ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 9448289507.

Karnataka State Roller Skating Association ರಾಜ್ಯ ರೋಲರ್ ಸ್ಕೇಟಿಂಗ್ ಸಂಸ್ಥೆಯ ಸಹ ಕಾರ್ಯದರ್ಶಿಯಾಗಿ ಶಿವಮೊಗ್ಗದ ಎಂ.ರವಿ.ಆಯ್ಕೆ

0

Karnataka State Roller Skating Association ಕರ್ನಾಟಕ ರಾಜ್ಯ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ನ ನೂತನ ಸಹ ಕಾರ್ಯದರ್ಶಿಯಾಗಿ ಶಿವಮೊಗ್ಗದ ನಮ್ಮ ಶಿವಮೊಗ್ಗ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಕಾರ್ಯದರ್ಶಿ ಎಂ. ರವಿ ಅವರನ್ನು ಆಯ್ಕೆ ಮಾಡಲಾಗಿದೆ.

ರಾಜ್ಯ ಸ್ಕೇಟಿಂಗ್ ಅಸೋಸಿಯೇಷನ್ ಅಧ್ಯಕ್ಷ ಎಂ. ಲಕ್ಷ್ಮೀನಾರಾಯಣ್ ಹಾಗೂ ಪ್ರಧಾನ ಕಾರ್ಯದರ್ಶಿ ಇಂದೂದರ್ ಸೀತಾರಾಮ್ ಅವರು ಬೆಂಗಳೂರಿನ ಬನಶಂಕರಿಯಲ್ಲಿ ನಡೆದ ನಾಲ್ಕನೇ ಸ್ಕೇಟಿಂಗ್ ಉದ್ಘಾಟನಾ ಸಮಾರಂಭದಲ್ಲಿ ಎಂ.ರವಿ ಅವರ ಆಯ್ಕೆಯನ್ನು ಘೋಷಿಸಿದರು.

Karnataka State Roller Skating Association ನೂತನವಾಗಿ ರಾಜ್ಯ ಸಹಕಾರ್ಯದರ್ಶಿಯಾಗಿ ಆಯ್ಕೆಯಾದ ಎಂ. ರವಿ ಅವರಿಗೆ ನಮ್ಮ ಶಿವಮೊಗ್ಗ ಸ್ಕೇಟಿಂಗ್ ಸಂಸ್ಥೆಯ ಪದಾಧಿಕಾರಿಗಳು, ಹಾಗೂ ಕ್ರೀಡಾ ಪಟುಗಳ ಪೋಷಕರು ಮತ್ತು ಸ್ಟೇಟರ್ ಗಳು ಅಭಿನಂದಿಸಿದ್ದಾರೆ

Rotary Shimoga ರೋಟರಿ ಸಂಸ್ಥೆಯಿಂದ ಸಂವಹನ ಕೌಶಲ ಹೊಂದಲು ಸಹಾಯವಾಗುತ್ತದೆ- ಗಿರೀಶ್ ಪಟೇಲ್

0

Rotary Shimoga ಪ್ರತಿಯೊಂದು ಸಂಘ ಸಂಸ್ಥೆಗಳು ಸದೃಢವಾಗಿರಲು ಸದಸ್ಯರ ಪಾತ್ರ ಬಹಳ ಪ್ರಮುಖ. ಸಂಘ ಸಂಸ್ಥೆ ಮುನ್ನಡೆಸುವವರಿಗೆ ನಾಯಕತ್ವದ ಗುಣ, ಸನ್ನಡತೆ, ಸಂಸ್ಕೃತಿ ಮತ್ತು ಸಹನೆ ಅವಶ್ಯಕ ಎಂದು ಕ್ರೀಡಾ ಪ್ರಾಧಿಕಾರದ ಮಾಜಿ ಉಪಾಧ್ಯಕ್ಷ ಗಿರೀಶ್ ಪಟೇಲ್ ಹೇಳಿದರು.

ರಾಜೇಂದ್ರ ನಗರದ ರೋಟರಿ ಶಿವಮೊಗ್ಗ ಪೂರ್ವದ ಸಭಾಂಗಣದಲ್ಲಿ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಕ್ರೀಡಾ ದಿನದ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಸಂಘ ಸಂಸ್ಥೆಗಳಲ್ಲಿ ಸದಸ್ಯರ ಸಕ್ರಿಯ ಪಾತ್ರ, ಕ್ರಿಯಾಶೀಲತೆ ಮತ್ತು ಪ್ರಾಮಾಣಿಕತೆ ಸಂಘ ಸಂಸ್ಥೆಗಳ ಸಂಘಟನೆಯಲ್ಲಿ ತುಂಬಾ ಮುಖ್ಯ ಎಂದು ತಿಳಿಸಿದರು.

ರೋಟರಿ ಸಂಸ್ಥೆಯು ಸೇವಾ ಉದ್ದೇಶಕ್ಕಾಗಿ ಆರಂಭಗೊಂಡಿದ್ದು, 220 ದೇಶಗಳಲ್ಲಿ ಸೇವೆ ಮಾಡುವ ಮೂಲಕ ರೋಟರಿ ಸಂಸ್ಥೆ ಸಕ್ರಿಯವಾಗಿದೆ. ರೋಟರಿ ಸಂಸ್ಥೆಗಳಿಂದ ಸಂಪರ್ಕ ಕೌಶಲ್ಯ ಹೊಂದಲು ತುಂಬ ಸಹಾಯವಾಗುತ್ತದೆ. ಇದರಿಂದ ದೀರ್ಘಕಾಲದವರೆಗೆ ಸಂಘ ಸಂಸ್ಥೆಗಳು ಯಶಸ್ವಿಯಾಗಿ ಮುನ್ನಡೆಯಲು ಸಾಧ್ಯ ಎಂದರು.

ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಡಿ.ಕಿಶೋರ್ ಕುಮಾರ್ ಮಾತನಾಡಿ, ರೋಟರಿ ಸಂಸ್ಥೆಯು ಜೀವನ ಕೌಶಲ್ಯ, ಓಡನಾಟ ಹಾಗೂ ಸೇವೆಯ ಗುರಿ ಹೊಂದಿದೆ. ಈ ನಿಟ್ಟಿನಲ್ಲಿ ಹೆಚ್ಚು ಹೆಚ್ಚು ಜನ ರೋಟರಿ ಸಂಸ್ಥೆಗೆ ಸೇರಬೇಕು. ಸಮಾಜಮುಖಿ ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ತಿಳಿಸಿದರು.

Rotary Shimoga ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಧನಂಜಯ.ಬಿ.ಆರ್., ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್ ಕುಮಾರ್, ಚಂದ್ರಹಾಸ ರಾಯ್ಕರ್, ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್, ಮಾಜಿ ಅಧ್ಯಕ್ಷ ಅರುಣ್ ದೀಕ್ಷಿತ್, ಡಾ. ಗುಡದಪ್ಪ ಕಸಬಿ, ಶ್ರೀಕಾಂತ್, ಗಣೇಶ್, ಮಹೇಶ್, ಪ್ರತಾಪ್ ಮೋರೆ, ವೀಣಾ ಕಿಶೋರ್, ಮನೋಹರ, ಮಹಾದೇವ ಸ್ವಾಮಿ ಹಾಗೂ ಹೊಸ ಸದಸ್ಯರು ಉಪಸ್ಥಿತರಿದ್ದರು.

Dr. Mallikarjuna Murugarajendrasri ಶಾಶ್ವತವಾದ ಸತ್ಯದ ಬದುಕಿನ ಬಗ್ಗೆ ಹೆಚ್ಚಿನ ಗಮನ ಕೊಡಬೇಕು- ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರಶ್ರೀ

0

Dr. Mallikarjuna Murugarajendrasri ಶ್ರೀ ಶಿವಗಂಗಾ ಯೋಗ ಕೇಂದ್ರದ ಸಂಸ್ಥಾಪಕ ಕಾರ್ಯಾಧ್ಯಕ್ಷರಾದ ಯೋಗಾಚಾರ್ಯ ಶ್ರೀ ಸಿ.ವಿ. ರುದ್ರಾರಾಧ್ಯರ ಜನುಮದಿನದ ಸಂದರ್ಭದಲ್ಲಿ ಅವರನ್ನು ಅಭಿನಂದಿಸಿ ಶುಭ ಕೋರಿ ಆಶೀರ್ವದಿಸಿದ ಯೋಗ ಕೇಂದ್ರದ ಮಹಾ ಪೋಷಕರಾದ ಪೂಜ್ಯ ಶ್ರೀ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ಮಾತನಾಡುತ್ತಾ ಭಗವಂತ ನಮಗಾಗಿ ಪ್ರಕೃತಿ ಪ್ರಪಂಚ ಜೀವಿಗಳನ್ನು ಸೃಷ್ಟಿ ಮಾಡಿದ್ದಾನೆ. ಮನುಷ್ಯ ಜನುಮದ ಹುಟ್ಟಿಗೆ ಕಾರಣನೂ ಭಗವಂತನೇ. ದೇವರು ನೀಡಿದ ಈ ಜೀವನದಲ್ಲಿ ಹುಟ್ಟು ಸಾವಿನ ಬಗ್ಗೆ ಚಿಂತನೆ ಮಾಡಬಾರದು. ಎರಡರ ಮಧ್ಯೆ ಇರುವ ಜೀವನವನ್ನು ವ್ಯರ್ಥವಾಗಿ ಕಳೆದುಕೊಳ್ಳುತ್ತಿದ್ದೇವೆ. ಬದಲಾಗಿ ಶಾಶ್ವತವಾದ ಸತ್ಯದ ಬದುಕಿನ ಕಡೆಗೆ ಹೆಚ್ಚಿನ ಗಮನ ಕೊಡಬೇಕು. ಇಹಲೋಕದ ಬದುಕಿಗೆ ಮರ್ತ್ಯ ಲೋಕವೆಂಬದು ಕರ್ತಾರನ ಕಮ್ಮಟವಯ್ಯ. ಇಲ್ಲಿ ಸಲ್ಲುವವರು ಅಲ್ಲಿಯೂ ಸಲ್ಲುವರು. ಇಲ್ಲಿ ಸಲ್ಲದವರು ಎಲ್ಲಿಯೂ ಸಲ್ಲರು. ಕರ್ತಾರನ ಕಮ್ಮಟವೆಂದರೆ ಭಗವಂತನ ಸೃಷ್ಟಿ. ನಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದವರೊಂದಿಗೆ ಜೀವನವನ್ನು ಸಾರ್ಥಕ್ಯ ಗೊಳಿಸಿಕೊಳ್ಳಬೇಕು ಎಂದರು.

ಆ ದೃಷ್ಟಿಯಲ್ಲಿ ಶ್ರೀ ರುದ್ರಾರಾಧ್ಯರಿಗೆ ಅವರ ತಂದೆ ತಾಯಿಯವರು ನೀಡಿದ ಸಂಸ್ಕಾರ ಅವರೊಂದಿಗೆ ಸಮ್ಮೇಳಿತಗೊಂಡಿದೆ. ಜೊತೆಯಾಗಿ ಬೆಂಬಲವಾಗಿ ನಿಂತವರು ಅವರ ಸಂಗಾತಿ ಶ್ರೀಮತಿ ಅನ್ನಪೂರ್ಣ ರವರ ತ್ಯಾಗ ಬಹಳ ದೊಡ್ಡದು. ಮತ್ತು ಸದಾ ಬೆಂಬಲವಾಗಿರುವ ಯೋಗ ಶಿಕ್ಷಕರು ವಿಶ್ವಸ್ಥ ಮಂಡಳಿ ಸದಸ್ಯರು ಮತ್ತು ಆರಂಭದಿಂದಲೂ ಯೋಗ ಸಂಸ್ಥೆಯ ಬೆಳವಣಿಗೆಯಲ್ಲಿ ಶ್ರೀ ಕೆ. ಎಸ್.ಈಶ್ವರಪ್ಪನವರ ಕೊಡುಗೆಯನ್ನು ನೆನಪು ಮಾಡಿಕೊಂಡರು.

ಸಮಾಜವನ್ನು ಬೆಳೆಸಿ ಆರೋಗ್ಯ ಸೇವೆಯಲ್ಲಿ ಶ್ರೀ ಶಿವಗಂಗಾ ಯೋಗ ಕೇಂದ್ರವು ಇನ್ನೂ ಬೆಳೆದು ಸಾರ್ವಜನಿಕರ ಜೀವನ ಮತ್ತು ಆರೋಗ್ಯವನ್ನು ವೃದ್ಧಿಸು ವಂತವರಾಗಲಿ. ಆರೋಗ್ಯ ಭಾಗ್ಯವನ್ನು ದಯಪಾಲಿಸುವಂತ ಶಕ್ತಿಯನ್ನು ಭಗವಂತೆ ನೀಡಲಿ ಎಂದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಶ್ರೀ ಎಸ್. ರುದ್ರೇಗೌಡರು ಯೋಗ ಕೇಂದ್ರದ ಒಳ್ಳೆಯ ಕೆಲಸ ಕಾರ್ಯಗಳಿಗೆ ಆಡಳಿತ ಮಂಡಳಿ ಸದಾ ಬೆಂಬಲವನ್ನು ನೀಡುತ್ತದೆ ಎಂದು ತಿಳಿಸಿದರು.
ಇದೀಗ ತಾನೇ 75ರ ವಸಂತ ಪೂರೈಸಿದ ಸ್ವಾಮೀಜಿಯವರಿಗೆ ಅಭಿನಂದಿಸಿ ಗೌರವ ಸಲ್ಲಿಸಲಾಯಿತು.

Dr. Mallikarjuna Murugarajendrasri ವೇದಿಕೆಯಲ್ಲಿ ಯೋಗಾಚಾರ್ಯ ಶ್ರೀ ಸಿ. ವಿ.ರುದ್ರಾರಾಧ್ಯ,ಮಾಜಿ ಉಪ ಮುಖ್ಯಮಂತ್ರಿ ಶ್ರೀ ಕೆ.ಎಸ್. ಈಶ್ವರಪ್ಪ. ಖಜಾಂಚಿ ಹೊಸತೋಟ ಸೂರ್ಯನಾರಾಯಣ, ಎಸ್ ಎಸ್ ಜ್ಯೋತಿ ಪ್ರಕಾಶ್. ಪೋಷಕ ಸದಸ್ಯರಾದರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಶ್ರೀ ಎಸ್ ಷಡಾಕ್ಷರಿ, ವಿಶ್ವಸ್ಥ ಮಂಡಳಿ ಸದಸ್ಯರಾದ ಕೆ.ಇ. ಕಾಂತೇಶ್ , ಹಾಲಪ್ಪನವರು , ಉಪಸ್ಥಿತರಿದ್ದರು. ಪೋಷಕ ಸದಸ್ಯರಾದ ಶ್ರೀ ಎಸ್ ಡಿ ದೇವೇಂದ್ರ, ಪರಮೇಶ್, ಮನು ಕುಮಾರ್, ಸುರೇಶ್ ಉಪಸ್ಥಿತರಿದ್ದರು. ಡಾ. ಗಾಯಿತ್ರಿ ದೇವಿ ಸಜ್ಜನ್ರವರು ಶ್ರೀ ರುದ್ರಾರಾಧ್ಯರರ ಸೇವೆಯನ್ನು ಕುರಿತು ಮಾತನಾಡಿದರು. ಶ್ರೀ ತೀರ್ಥಪ್ರಸಾದ್ ಸ್ವರಚಿತ ಗೀತೆಯನ್ನು ಹಾಡಿದರು. ಶ್ರೀ ಸಂತೋಷ್ ಬಿದರಗದ್ದೆ ಕವನ ವಾಚಿಸಿದರು. ಜಿಎಸ್ ಓಂಕಾರ್ ಎಲ್ಲರನ್ನೂ ಸ್ವಾಗತಿಸಿದರು. ಶ್ರೀಮತಿ ವಿಜಯ ಬಾಯರವರಿಂದ ನಿರೂಪಣೆ. ಶ್ರೀ ಜಗದೀಶ್ ರವರು ವಂದಿಸಿದರು.

Rotary Shimoga ವಿವಿಧ ಸೇವೆ ಸಲ್ಲಿಸಿದ ಶಿವಮೊಗ್ಗ ಸಿಲ್ವರ್ ಜ್ಯೂಬಿಲಿ ಕ್ಲಬ್ ಗೆಏಳು ಪ್ರಶಸ್ತಿಗಳ ಹೆಮ್ಮೆ

0

Rotary Shimoga ಉಡುಪಿಯಲ್ಲಿ ಜರುಗಿದ ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ “ಕಲ್ಯಾಣ-ಸಂಗಮ” ದಲ್ಲಿ, ರೋಟರಿ ಶಿವಮೊಗ್ಗ ಜ್ಯೂಬಿಲಿ ಕ್ಲಬ್ ಗೆ ಸಾರ್ವಜನಿಕ ಸೇವೆಗೆ ಜಿಲ್ಲಾ ಮಟ್ಟದ ಏಳು ಪ್ರಶಸ್ತಿಗಳನ್ನು ಪಡೆದು ಕೊಂಡಿದೆ.

ಉದ್ಯೋಗದಾತರ ಗೌರವಿಸುವಿಕೆ, ಶುದ್ಧನೀರು ಮತ್ತು ಶುಚಿತ್ವಕ್ಕೆ ಸಹಕಾರ, ಬಾಣಂತಿಯರ ಯೋಗಕ್ಷೇಮ ಮತ್ತು ಮಕ್ಕಳ ಆರೋಗ್ಯ, ಕ್ಲಬ್ ಪತ್ರಿಕೆ, ಯುವಜನರ ಸಬಲಿಕರಣ, ಶಿಕ್ಷಣ ಮತ್ತು ಕನ್ನಡ ಜಾಗೃತಿ, ರಸ್ತೆ ಸುರಕ್ಷೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ ಬಗ್ಗೆ ಒಟ್ಟು ಏಳು ಪ್ರಶಸ್ತಿಯನ್ನು ನೀಡಲಾಗಿದೆ.

2024-25ನೇ ಸಾಲಿನ ಅಧ್ಯಕ್ಷರಾಗಿ ರೂಪಪುಣ್ಯಕೋಟಿ, ಕಾರ್ಯದರ್ಶಿಯಾಗಿ ಡಾ.ಪ್ರಕೃತಿ ಮಂಚಾಲೆ ಕಾರ್ಯನಿರ್ವಹಿಸಿದ್ದರು. ಕ್ಲಬ್ಬಿನ ಎಲ್ಲಾ ಸದಸ್ಯರು ಅಭಿನಂದಿಸಿದ್ದಾರೆ.

Rotary Shimoga ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾಜಿ ಸಹಾಯಕ ಗೌರ್ನರ್ ನಾಗರಾಜ್, ಲಕ್ಷ್ಮೀನಾರಾಯಣ್, ರೇಣುಕಾರಾಧ್ಯ, ರೂಪ ಪುಣ್ಯಕೋಟಿ, ಛೇರ್ಮನ್ ಪಿಡಿಜಿ ಗೀತಾ, ಐಪಿಡಿಜಿ ದೇವಾನಂದ್, ಗೌರ್ನರ್ ಪಾಲಾಕ್ಷ, ಎಸ್.ಎಸ್.ವಾಗೇಶ್ ಇದ್ದಾ

Chirantana Yoga and Music Trust ಪಿ.ಕಾಳಿಂಗರಾಯರ ಸುಗಮ ಸಂಗೀತ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆ ಅಪಾರ- ಎಸ್.ಶಾಂತಾಶೆಟ್ಟಿ

0

Chirantana Yoga and Music Trust ಪಿ ಕಾಳಿಂಗರಾವ್ ರವರು ಸುಗಮ ಸಂಗೀತ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆ ಅಪಾರ ಅವರ ಸಾಧನೆ ಹಾಗೂ ಸಲ್ಲಿಸಿದ ಸೇವೆಗಳು ಇಂದಿಗೂ ಅಜರಾಮರ ಎಂದು ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟಿನ ಅಧ್ಯಕ್ಷರಾದ ಶ್ರೀಮತಿ ಎಸ್ ಶಾಂತಾ ಶೆಟ್ಟಿ ಅವರು ಅಭಿಮತ ವ್ಯಕ್ತಪಡಿಸಿದರು.

ಅವರು ಶಿವಮೊಗ್ಗ ನಗರದ ಮಥುರಾ ಪ್ಯಾರಾಡೈಸ್ ನಲ್ಲಿ ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್ (ರಿ) ಶಿವಮೊಗ್ಗ ಇದರ 28ನೇ ವಾರ್ಷಿಕೋತ್ಸವ ಹಾಗೂ ವಿಶ್ವ ಸುಗಮ ಸಂಗೀತ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪಿ ಕಾಳಿಂಗರಾಯರ ಹಾಡುಗಳು ಇಂದಿಗೂ ಸಹ ಜನ ಮಾನಸದಲ್ಲಿ ಅಚ್ಚಳಿಯದೆ ಉಳಿದಿವೆ ಅವರ ಮಾರ್ಗದರ್ಶನದಲ್ಲಿ ಸಾಕಷ್ಟು ಜನ ಕಲಾವಿದರು ಇಂದು ಸುಗಮ ಸಂಗೀತ ಕ್ಷೇತ್ರದಲ್ಲಿ ಶಾಶ್ವತವಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ ಎಂದು ನುಡಿದರು.

ಸುಗಮ ಸಂಗೀತ ಕ್ಷೇತ್ರದಲ್ಲಿ ನಿರಂತರವಾಗಿ ಸೇವೆ ಸಲ್ಲಿಸಿದ ಸುಗಮ ಸಂಗೀತ ಹಾಗೂ ಆಕಾಶವಾಣಿಯ ಕಲಾವಿದರಾದ ವಿದುಷಿ ಜಯಶ್ರೀ ಶ್ರೀಧರ್
ಹಾಗೂ ವಿದುಷಿ ಉಮಾ ದಿಲೀಪ್ ಇವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ಕಲಾವಿದರಿಂದ ಬಾವಗೀತೆ ಗಳನ್ನು ಹಾಡುವುದರ ಮುಖಾಂತರ ಶುಭಾಶಯ ಕೋರಲಾಯಿತು ಸಲ್ಲಿಸಲಾಯಿತು.

Chirantana Yoga and Music Trust ಕಾರ್ಯಕ್ರಮದಲ್ಲಿ ಶೋಭಾ ಸತೀಶ್ ,ಸುಶೀಲ, ರಾಜಕುಮಾರ್, ದಾಕ್ಷಾಯಿಣಿ, ಲಕ್ಷ್ಮಿ ಮಹೇಶ್, ಕೆಎಸ್ ಮಂಜುನಾಥ್, ಶ್ವೇತಾ ಪಾಟೀಲ್, ಮಥುರಾ ನಾಗರಾಜ್,
ಲತಾ ಕೇದಿಲಯ. ಹಾಗೂ ಮಮತಾ ಉಪಸ್ಥಿತರಿದ್ದರು.

Dr. Amit Hegde ಜನರಿಗೆ & ಕೃಷಿಕರಿಗೆ ಜೀವ ವೈವಿಧ್ಯತೆಯ ಅರಿವು ಮೂಡಿಸಬೇಕಿದೆ- ಡಾ.ಅಮಿತ್ ಹೆಗಡೆ

0

Dr. Amit Hegde ಪಶ್ಚಿಮಘಟ್ಟದ ಭಾಗವಾಗಿರುವ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆಯಲ್ಲಿ ಇತ್ತೀಚಿಗಷ್ಟೇ(ಆಗಸ್ಟ 15-17) ಉಭಯ ಜೀವಿಗಳ ಬಗೆಗಿನ ವಸತಿ ಕಾರ್ಯಗಾರ, ವನ್ಯಜೀವಿ ಸಂಶೋಧಕ ಡಾ. ಅಮಿತ ಹೆಗಡೆಯವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಯಿತು.
ಪಶ್ಚಿಮ ಘಟ್ಟಗಳು ಜೀವ ವೈವಿಧ್ಯತೆಯ ಖಜಾನೆಯಾಗಿದ್ದು, ಇದರಲ್ಲಿ ಉಭಯ ಜೀವಿಗಳು ವಿಶೇಷವಾಗಿ ಕಪ್ಪೆಗಳ ಅಧ್ಯಯನ, ದಾಖಲಾತಿ, ಅವುಗಳ ಸ್ವಭಾವ, ಸಂತಾನೋತ್ಪತ್ತಿ, ಹವಮಾನ ವೈಪರಿತ್ಯ ಹಾಗೂ ಸುತ್ತಮುತ್ತಲ ಸೂಕ್ಷ್ಮ ಬದಲಾವಣೆಗಳಿಂದ ಜೀವ ವೈವಿಧ್ಯತೆಯ ಮೇಲೆ ಆಗುವ ಪರಿಣಾಮಗಳ ಬಗ್ಗೆ ಮಾರ್ಗದರ್ಶನವನ್ನು ನೀಡಲಾಯಿತು. ಕಾರ್ಯಾಗಾರವು ಕೇವಲ ಶಿಕ್ಷಣಕ್ಕಷ್ಟೇ, ಸೀಮಿತಗೊಳ್ಳದೆ ಸಂರಕ್ಷಣೆ ಹಾಗೂ ಪ್ರಕೃತಿಯೊಂದಿಗೆ ಗಾಢಬಾಂಧವ್ಯವನ್ನು ಬೆಳೆಸುವ ಬಗ್ಗೆ ಗಮನಹರಿಸಲಾಯಿತು.
ವಿವಿಧ ರಾಜ್ಯ ಹಾಗೂ ವಿವಿಧ ಭಾಗಗಳಿಂದ, ವಿದ್ಯಾರ್ಥಿಗಳು, ಶಿಕ್ಷಕರಿಂದ ಹಿಡಿದು, ಕೃಷಿ ಸಂಶೋಧಕರು, ಚಾರಣಪ್ರಿಯರು, ಪರಿಸರಾಸಕ್ತರು ಭಾಗವಹಿಸಿ ಈ ಅಮೂಲ್ಯ ಅನುಭವದ ಜೊತೆಗೆ ಸಂರಕ್ಷಣೆಯ ಹೊಸ ಪ್ರೇರಣೆ ಪಡೆದುಕೊಂಡರು.
ಮಳೆಗಾಲವನ್ನು ನಾವು ಒಂದು ಋತುವಿನ ರೀತಿ ನೋಡಿರುತ್ತೇವೆ ಇದರ ಒಳಗಿನ ಸೂಕ್ಷ್ಮ ಬದಲಾವಣೆಗಳು ನಮಗೆ ಗೋಚರಿಸುವುದಿಲ್ಲ. ಮುಂಗಾರು, ಹಿಂಗಾರು ಮಳೆ, ಕೃಷಿಗೆ ಎಷ್ಟು ಪೂರಕವೋ ಹಾಗೆ ಕಪ್ಪೆಗಳ ಜೀವನ ಚಕ್ರಕ್ಕೂ ಅಷ್ಟೇ ಪೂರಕ, ಉದಾಹರಣೆಗೆ ಮಳೆಯ ಪ್ರಾರಂಭದಲ್ಲಿ ಕೂಗುವ ಕಪ್ಪೆಗಳು ಮಧ್ಯಂತರದಲ್ಲಿ ಇರುವುದಿಲ್ಲ ಮಧ್ಯಂತರದಲ್ಲಿ ಕೂಗುವ ಕಪ್ಪೆಗಳು ಮಳೆಗಾಲದ ಕೊನೆಯಲ್ಲಿ ಇರುವುದಿಲ್ಲ. ಮೊದಲು ಮಳೆಯಾಗಿ ನಂತರ ಎರಡು ಮೂರು ತಿಂಗಳು ಮಳೆಯೇ ಇಲ್ಲದಿರುವುದು ಅಥವಾ ಕೇವಲ ರಭಸದ ಮಳೆ ಸುರಿಯುವುದು ಇವೆಲ್ಲವೂ ಅವುಗಳ ಜೀವನ ಚಕ್ರದ ಅಸಮತೋಲನಕ್ಕೆ ಕಾರಣವಾಗುತ್ತದೆ. ಕಪ್ಪೆಗಳ ಕೂಗು ಅವುಗಳ ಸಂತಾನೋತ್ಪತ್ತಿ ಪ್ರಕ್ರಿಯೆ ಇವುಗಳ ಕೂಲಂಕುಶ ಅಧ್ಯಯನದಿಂದ ಪರಿಸರದ ಬದಲಾವಣೆ ಹವಾಮಾನ ವೈಪರಿತ್ಯಗಳ ಬಗ್ಗೆ ಕೂಡ ತಿಳಿಯಬಹುದು.
Dr. Amit Hegde “ತೀರಾ ಅಪರೂಪದ ಪ್ರಭೇದಗಳು ಎಷ್ಟೋ ಬಾರಿ ಕಾಡಿನಲ್ಲಿಯೇ ಕಂಡು ಬರಬೇಕೆಂದೇನಿಲ್ಲ ಕೆಲವೊಮ್ಮೆ ಕೃಷಿ ಭೂಮಿ ಹಾಗೂ ಮನೆಯ ಸುತ್ತಮುತ್ತಲೂ ಕೂಡ ಕಂಡು ಬರುವುದು. ಜನರಿಗೆ ಹಾಗೂ ಕೃಷಿಕರಿಗೆ ಇದರ ಬಗ್ಗೆ ಅರಿವು ಮೂಡಿ ಸುತ್ತ ಜೀವ ವೈವಿಧ್ಯತೆಯನ್ನು ಸಂರಕ್ಷಿಸಬೇಕಾಗಿದೆ, ಈ ಕಾರ್ಯವನ್ನು ಸದಾ ಮಾಡುತ್ತಿದ್ದೇವೆ”, ಎಂದು ಡಾಕ್ಟರ್ ಅಮಿತ್ ಹೆಗಡೆಯವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಹೆಚ್ಚಿನ ವಿವರಗಳಿಗಾಗಿ, ದಯವಿಟ್ಟು ಸಂಪರ್ಕಿಸಿ
ಡಾ. ಅಮಿತ ಹೆಗಡೆ, amithegdevargasara@gmail.com ; ಮೊಬೈಲ್-9480556122

Karnataka State Govt ಸ್ಥಿರಾಸ್ತಿ ನೋಂದಣಿ ಶುಲ್ಕ ಮತ್ತೆ ಪರಿಷ್ಕರಿಸಿದ ರಾಜ್ಯ ಸರ್ಕಾರ

0

Karnataka State Govt ಕರ್ನಾಟಕ ರಾಜ್ಯ ಸರ್ಕಾರವು ಆಗಸ್ಟ್ ,31 ರಿಂದ ಜಾರಿಗೊಳಿಸುತ್ತಿರುವ ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಶುಲ್ಕವು ನೆರೆಹೊರೆಯ ರಾಜ್ಯಗಳಲ್ಲಿರುವ ದರಗಳಿಗಿಂತ ಪ್ರಸ್ತುತ ಕಡಿಮೆ ಶುಲ್ಕ ಇದ್ದು, ಅದನ್ನು ಇತರೆ ರಾಜ್ಯಗಳ ಶುಲ್ಕಗಳೊಂದಿಗೆ ಸಮೀಕರಣ ಮಾಡಿ ಪರಿಷ್ಕರಿಸಲಾಗುತ್ತಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಶುಲ್ಕ ಆಯುಕ್ತ ಮುಲೈ ಮುಗಿಲನ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಮುದ್ರಾಂಕ ,ನೋಂದಣಿ ಹಾಗೂ ಇತರೆ ಸೆಸ್ ಸೇರಿ
ಕರ್ನಾಟಕ ರಾಜ್ಯವು ಶೇ.6.6 ರಷ್ಟು ವಿಧಿಸುತ್ತಿತ್ತು. ಇದೇ ಅವಧಿಯಲ್ಲಿ ಈ ಶುಲ್ಕವು ತಮಿಳುನಾಡು ರಾಜ್ಯದಲ್ಲಿ ಶೇ.9, ಕೇರಳ ಶೇ.10, ಆಂಧ್ರಪ್ರದೇಶ ಶೇ. 7.5,ತೆಲಂಗಾಣ ರಾಜ್ಯಗಳು ಶೇ.7.5 ರಷ್ಟು ಶುಲ್ಕ ಆಕರಿಸುತ್ತಿವೆ.

ದಸ್ತಾವೇಜುಗಳ ಮೇಲಿನ ಮುದ್ರಾಂಕ ಶುಲ್ಕ ಮತ್ತು ನೋಂದಣಿ ಶುಲ್ಕಗಳನ್ನು ಇತರೆ ರಾಜ್ಯಗಳೊಂದಿಗೆ ಸಮೀಕರಿಸಿಗೊಳ್ಳಲು (Rationalisation) ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಬಲಪಡಿಸಲು ಮತ್ತು ನಾಗರಿಕರಿಗೆ ಉತ್ತಮ ಹಾಗೂ ಪರಿಣಾಮಕಾರಿ ಸೇವೆಯನ್ನು ನೀಡಲು. ರಾಜ್ಯ ಸರ್ಕಾರವು ದಿನಾಂಕ: 31-08-2025 ರಿಂದ ಜಾರಿಗೆ ಬರುವಂತೆ ನೋಂದಣಿ ಶುಲ್ಕವನ್ನು ಶೇಕಡ 1 ರಿಂದ ಶೇ.2 ರಷ್ಟು ಪರಿಷ್ಕರಿಸಿದೆ.

ಪರಿಷ್ಕೃತ ನೋಂದಣಿ ಶುಲ್ಕವನ್ನು ಸುಗಮವಾಗಿ ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಪಾವತಿಸಲು ಹಿಂದಿನ ನೋಂದಣಿ ಶುಲ್ಕವನ್ನು ಪಾವತಿಸಿ ಈಗಾಗಲೇ ದಸ್ತಾವೇಜುಗಳ ನೋಂದಣಿಗೆ ಅಪಾಯಿಂಟ್‌ಮೆಂಟ್ ಪಡೆದಿರುವವರು ಅಥವಾ ಶುಲ್ಕವನ್ನು ಪಾವತಿಸಿ ಅಪಾಯಿಂಟ್‌ಮೆಂಟ್ ಪಡೆಯದಿರುವವರು, ವ್ಯತ್ಯಾಸದ ಮೊತ್ತವನ್ನು ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಪಾವತಿಸಬೇಕು. ಮೊದಲು ಬಳಸಿದ ಲಾಗಿನ್ ಮೂಲಕವೇ ಈ ಪಾವತಿಯನ್ನು ಮಾಡಬೇಕು. ಅರ್ಜಿದಾರರಿಗೆ ನೆರವಾಗುವ ದೃಷ್ಟಿಯಿಂದ ಅಗತ್ಯ ಸೂಚನೆಗಳನ್ನು ಒಳಗೊಂಡ ಎಸ್‌ಎಂಎಸ್‌ ನೇರವಾಗಿ ಅವರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುವುದು.

ಈಗಾಗಲೇ ದಸ್ತಾವೇಜುಗಳ ನೋಂದಣಿಗೆ ಸಲ್ಲಿಸಲಾಗಿರುವ ಹಾಗೂ ಪರಿಶೀಲನೆಯಲ್ಲಿರುವ ದಸ್ತಾವೇಜುಗಳಿಗೆ ನೋಂದಣಿ ಶುಲ್ಕವನ್ನು ಮರು ಲೆಕ್ಕ ಹಾಕಲಾಗುವುದು ಮತ್ತು ಪರಿಷ್ಕೃತ ಶೇಕಡ 2 ರಂತೆ ನೋಂದಣಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈ ವರ್ಗದ ಅರ್ಜಿದಾರರಿಗೆ ಪಾವತಿಯ ಪ್ರಕ್ರಿಯೆ ಪೂರ್ಣಗೊಳ್ಳುವ ಮೊದಲು ಪರಿಷ್ಕೃತ ನೋಂದಣಿ ಶುಲ್ಕದ ವಿವರವನ್ನು ತಿಳಿಸಲಾಗುವುದು.

Karnataka State Govt ಇಲಾಖೆಯು ದಸ್ತಾವೇಜುಗಳ ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬವಾಗುವುದನ್ನು ತಪ್ಪಿಸಲು ಎಲ್ಲಾ ಅರ್ಜಿದಾರರಿಗೆ ಮೇಲ್ಕಾಣಿಸಿದ ನವೀಕರಿಸಿದ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹಂತ ಹಂತವಾಗಿ ಅನುಸರಿಸಬಹುದಾದ ವಿವರವಾದ ಸೂಚನೆಗಳನ್ನು ಇಲಾಖೆಯ ಅಧಿಕೃತ ಪೋರ್ಟಲ್‌ನಲ್ಲಿ ಲಭ್ಯವಾಗುವಂತೆ ಕಲ್ಪಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

DC Shivamogga ಲೆಪ್ಪೋಸ್ಪೈರೋಸಿಸ್ ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ- ಡೀಸಿ ಗುರುದತ್ತ ಹೆಗಡೆ

0

DC Shivamogga ರೋಗಬಾಧಿತ ಇಲಿ, ಹಂದಿ, ನಾಯಿ ಕುದುರೆ ಮತ್ತಿತರ ಜಾನುವಾರುಗಳ ಮೂತ್ರದಲ್ಲಿನ ಬ್ಯಾಕ್ಟೀರಿಯವು ರೋಗಪೀಡಿತ ಪ್ರಾಣಿಗಳ ಮಲ-ಮೂತ್ರದಿಂದ ಕಲುಷಿತವಾದ ನೀರು, ಮಣ್ಣು ಸಸ್ಯಗಳ ಮೂಲಕ ಮನುಷ್ಯರಿಗೆ ಮಾರಣಾಂತಿಕ ಲೆಪ್ಪೋಸ್ಪೈರೋಸಿಸ್ ಸೋಂಕು ಹರಡಬಹುದಾಗಿದ್ದು, ಅದರ ನಿಯಂತ್ರಣಕ್ಕೆ ಎಲ್ಲಾ ಅರೋಗ್ಯಾಧಿಕಾರಿಗಳು ತಕ್ಷಣದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಗುರುದತ್ತಹೆಗಡೆ ಅವರು ವೈದ್ಯಾಧಿಕಾರಿಗಳಿಗೆ ತಿಳಿಸಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಆರೋಗ್ಯ ಇಲಾಖೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಳೆಗಾಲ ಮುಗಿದು ಬೇಸಿಗೆ ಆರಂಭವಾಗುವ ಸಂದಿಕಾಲದಲ್ಲಿ ಮಲೇರಿಯಾ, ಚಿಕೂನ್ಗುನ್ಯಾ, ಡೇಂಗ್ಯೂ ಮುಂತಾದ ಸಾಂಕ್ರಾಮಿಕ ರೋಗಗಳು ಜಿಲ್ಲೆಯ ಅಲ್ಲಲ್ಲಿ ಕಂಡುಬಂದು ಉಲ್ಬಣಗೊಳ್ಳುವ ಸಾಧ್ಯತೆಗಳಿರುವುದರಿಂದ ಅದರ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.
ಹಾವು ಕಡಿತಕ್ಕೆ ಸಕಾಲದಲ್ಲಿ ಅಗತ್ಯ ಚಿಕಿತ್ಸೆ ನೀಡಲು ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳನ್ನು ದಾಸ್ತಾನು ಮಾಡಿಟ್ಟುಕೊಳ್ಳುವಂತೆ ಸೂಚಿಸಿದ ಅವರು, ಹಾವು ಕಡಿತದ ವ್ಯಕ್ತಿಗೆ ತ್ವರಿತಗತಿಯ ಚಿಕಿತ್ಸೆ ನಡೆಸಲು ವೈದ್ಯರು ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಅವರು, ಹಾವು ಕಚ್ಚಿದ ಸಂದರ್ಭಗಳಲ್ಲಿ ಸಾರ್ವಜನಿಕರು ಆತಂಕಕ್ಕೊಳಗಾಗದೇ ತಕ್ಷಣದಲ್ಲಿ ಸಮೀಪದ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಳ್ಳಬೇಕು. ಇಂತಹ ಸಂದರ್ಭದಲ್ಲಿ ಬಾದಿತ ವ್ಯಕ್ತಿಯ ಕುಟುಂಬದ ಸದಸ್ಯರು ಅಥವಾ ಸ್ಥಳದಲ್ಲಿರುವ ಯಾವುದೇ ವ್ಯಕ್ತಿ ಅವರ ರಕ್ಷಣೆಗಾಗಿ ತುರ್ತು ಕ್ರಮ ವಹಿಸುವಂತೆ ಅವರು ಸೂಚಿಸಿದರು.
ನಾಯಿ ಕಡಿತಕ್ಕೆ ಸಂಬಂದಿಸಿದಂತೆ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 12,136 ಪ್ರಕರಣಗಳನ್ನು ಗುರುತಿಸಲಾಗಿದೆ. ನಾಯಿ ಕಡಿತ ಚಿಕಿತ್ಸೆಗೆ ಅಗತ್ಯವಾದ ಲಸಿಕೆಗಳನ್ನು ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ದಾಸ್ತಾನಿಕರೀಸಲಾಗಿದೆ. ಅಂತೆಯೇ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ನಾಯಿಗಳ ಹಾವಳಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.
ಚಳಿ, ಜ್ವರ, ತಲೆನೋವು, ಮಾಂಸಖಂಡಗಳಲ್ಲಿ ನೋವು, ಜಾಂಡೀಸ್, ರಕ್ತಸ್ರಾವ, ಮೂತ್ರಪಿಂಡ ಹಾಗೂ ಯಕೃತ್ ವೈಫಲ್ಯ ಅಲ್ಲದೇ ಕಡಿಮೆ ಮೂತ್ರ ವಿಸರ್ಜನೆ ಲೆಪ್ಪೋಸ್ಪೈರೋಸಿಸ್ ಸೋಂಕಿನ ಚಹರೆಯಾಗಿರಬಹುದು. ಇಂತಹ ಸೂಕ್ಷ್ಮಗಳಿರುವ ವ್ಯಕ್ತಿಗಳು ಕೂಡಲೇ ಸಮೀಪದ ಸರ್ಕಾರಿ ಆಸ್ಪತ್ರೆಗೆ ತೆರಳಿ ಆರೋಗ್ಯ ತಪಾಸಣೆ ಮಾಡಿಸಿ, ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು. ಡಾ. ನಾಗರಾಜನಾಯ್ಕ್, ಜಿಲ್ಲಾ ಸಾಂಕ್ರಾಮಿಕ ರೋಗಗಳ ಕಣ್ಗಾವಲು ಘಟಕದ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು, ಶಿವಮೊಗ್ಗ.
ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್ಅವರು ಮಾತನಾಡಿ, ಪ್ರತಿ ವರ್ಷ ಮಲೆನಾಡು ವ್ಯಾಪ್ತಿಯ ಸಾಗರ, ಹೊಸನಗರ, ತೀರ್ಥಹಳ್ಳಿ ಮತ್ತಿತರ ಪ್ರದೇಶದ ವ್ಯಾಪ್ತಿಯಲ್ಲಿ ಹರಡುವ ಮಾರಣಾಂತಿಕ ಮಂಗನ ಕಾಯಿಲೆಯ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ ಅವರು, ಮುಂದಿನ ದಿನಗಳಲ್ಲಿ ಸಂಭಾವ್ಯ ಸೋಂಕಿತ ವ್ಯಕ್ತಿ ಅಥವಾ ಅವರ ಕುಟುಂಬದ ಎಲ್ಲಾ ಸದಸ್ಯರ ಆರೋಗ್ಯ ತಪಾಸಣೆಗೆ ಕ್ರಮವಹಿಸುವಂತೆ ಅವರು ಸೂಚಿಸಿದರು.
DC Shivamogga ಪ್ರಸಕ್ತ ಸಾಲಿನಲ್ಲಿ ಈವರೆಗೆ ಯಾವುದೇ ಪ್ರಕರಣಗಳು ದಾಖಲಾಗಿರುವುದಿಲ್ಲ. ಸೋಂಕಿನ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅರಣ್ಯ ಮತ್ತು ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳು ಸೇರಿದಂತೆ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರರು ಸೇರಿದಂತೆ ಜಂಟಿ ಸಮಾಲೋಚನಾ ಸಭೆ ನಡೆಸಿ, ಕ್ರಮ ಕೈಗೊಳ್ಳುವಂತೆ ಹಾಗೂ ಕಳೆದ ಸಾಲಿನಲ್ಲಿ ಗುರುತಿಸಲಾಗಿದ್ದ ಸೋಂಕಿನ ಪ್ರದೇಶಗಳಲ್ಲಿನ ಜನರಿಗೆ ಸುರಕ್ಷತೆಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಕೈಗೊಂಡ ಕ್ರಮದ ಬಗ್ಗೆ ಕ್ರೋಡೀಕರಿಸಿದ ವರದಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸುವಂತೆ ಅವರು ಸೂಚಿಸಿದರು.
ಜನಜಾಗೃತಿಗಾಗಿ ಕೆ.ಎಫ್.ಡಿ ಕಾಯಿಲೆ ಕಂಡುಬರುವ ಪ್ರದೇಶದಲ್ಲಿನ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯಸ್ಥರಿಗೆ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಕೂಡಲೇ ಪತ್ರ ಬರೆದು ನಿಯಂತ್ರಣ ಕೈಗೊಳ್ಳುವಂತೆಯೂ ಅವರು ಸಲಹೆ ನೀಡಿದರು.
ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ತಂಬಾಕು ಉತ್ಪನ್ನಗಳ ಸೇವನೆ ಮತ್ತು ಮಾರಾಟಕ್ಕೆ ಈ ಹಿಂದೆ ಇದ್ದ ದಂಡದ ಮೊತ್ತವನ್ನು ರೂ.200/-ಗಳಿಂದ ರೂ.1000/-ಕ್ಕೆ ವಿಸ್ತರಿಸಲಾಗಿದೆ. ಅದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ನಿಷೇಧ ಮತ್ತು ದಂಡಕ್ಕೆ ಸಂಬಂಧಿಸಿದಂತೆ ಭಿತ್ತಿ ಫಲಕಗಳನ್ನು ಅಳವಡಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ|| ನಾಗರಾಜನಾಯ್ಕ್ ಸೇರಿದಂತೆ ಜಿಲ್ಲೆಯ ಎಲ್ಲಾ ವೈದ್ಯಾಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಗ್ಯಾರಂಟಿ ಯೋಜನೆಗಳಿಂದ ಜನಸಾಮಾನ್ಯರಿಗೆ ಆರ್ಥಿಕ ಸ್ವಾವಲಂಬನೆ- ಹೆಚ್.ಎಂ.ಮಧು

0

Guarantee Schemes ಗ್ಯಾರಂಟಿ ಯೋಜನೆಗಳು ಜನ ಸಾಮಾನ್ಯರ ಬದುಕಿನಲ್ಲಿ ಮಂದಹಾಸ ಮೂಡಿಸುವುದರ ಜೊತೆಗೆ ಆರ್ಥಿಕ ಸ್ವಾವಲಂಬನೆಯನ್ನು ನೀಡಿದೆ ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಮಧು ಹೆಚ್.ಎಂ. ತಿಳಿಸಿದರು.
ಶನಿವಾರ ನಗರದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ಐದು ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಯಶಸ್ವಿಯಾಗಿ ಜಾರಿಯಾಗಿದ್ದು ಬಡವರ ಆಶಾಕಿರಣವಾಗಿರುವ ಅನ್ನಭಾಗ್ಯ ಯೋಜನೆಯು ಆಸರೆಯಾಗಿದೆ. ಹಾಗೂ ಹಸಿವು ಮುಕ್ತ ಭಾರತ ಮತ್ತು “ಸುಸ್ಥಿರ ಅಭಿವೃದ್ಧಿ ಗುರಿ-2030” ತಲುಪಲು ಸಹಕಾರಿಯಾಗಿದೆ ಎಂದರು.
ಗ್ಯಾರಂಟಿ ಯೋಜನೆಗಳಲ್ಲಿ ಬಹಳ ಪ್ರಸಿದ್ದಿಯಾಗಿರುವ ಗೃಹಲಕ್ಷಿ ಯೋಜನೆಯ ಹಣವು 2025 ರ ಜೂನ್ ಮಾಹೆಯವರೆಗೆ ಬಿಡುಗಡೆಯಾಗಿರುತ್ತದೆ. 2044 ಐಟಿ/ಜಿಎಸ್‌ಟಿ ಫಲಾನುಭವಿಗಳು ಇದ್ದು, 298 ಮರಣ ಹೊಂದಿರುವ ಫಲಾನುಭವಿಗಳನ್ನು ಗುರುತಿಸಲಾಗಿದೆ. ಎನ್‌ಪಿಸಿಐ ಸಮಸ್ಯೆಯಿರುವ 90 ಫಲಾನುಭವಿಗಳಿಗೆ ಪರಿಹಾರ ಒದಗಿಸುವ ಕೆಲಸ ಮಾಡಲಾಗುತ್ತಿದೆ ಎಂದು ಶಿವಮೊಗ್ಗ ಸಿಡಿಪಿಓ ಗಂಗೂಬಾಯಿ ತಿಳಿಸಿದರು.
ರಾಜ್ಯ ಸರ್ಕಾರವು ಗೃಹಜ್ಯೋತಿ ಯೋಜನೆಯಡಿ 200 ಯುನಿಟ್ ವರೆಗೆ ವಿದ್ಯುತ್ ಬಳಕೆಯನ್ನು ಮಾಡುತ್ತಿರುವ ಗ್ರಾಹಕರುಗಳಿಗೆ ಯಾವುದೇ ಶುಲ್ಕವಿಲ್ಲದೆ ಉಚಿತ ವಿದ್ಯುತ್ ಸೌಲಭ್ಯವನ್ನು ಒದಗಿಸುತ್ತಿದ್ದು ಇದರಿಂದ ಜನ ಸಾಮಾನ್ಯರಿಗೆ ಬಹಳ ಅನುಕೂಲವಾಗುತ್ತಿದೆ. ಆರ್ಥಿಕವಾಗಿ ಅಭಿವೃದ್ಧಿಯಾಗಲು ಸಹಾಯವಾಗುತ್ತಿದೆ.
ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಜೂನ್ 2025 ರವರೆಗೆ ರೂ.1,95,45,000 ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಿರುತ್ತದೆ. ಶಿವಮೊಗ್ಗ ತಾಲ್ಲೂಕಿನಲ್ಲಿ ಜೂನ್ ಮಾಹೆಯ ವರೆಗೆ ರೂ.59,71,500 ಹಣ ಜಮೆಯಾಗಿರುತ್ತದೆ. ಯುವನಿಧಿ ಯೋಜನೆಯಡಿ ಈ ವರ್ಷ ಪದವಿ ಹಾಗೂ ಡಿಪ್ಲೋಮಾ ತೇರ್ಗಡೆಯಾಗಿರುವ ವಿದ್ಯಾರ್ಥಿಗಳನ್ನು ನೋಂದಣಿ ಮಾಡಿಸುವ ಕೆಲಸವನ್ನು ಮಾಡಬೇಕು ಎಂದರು.
Guarantee Schemes ಶಕ್ತಿ ಯೋಜನೆಯಡಿ ಶಿವಮೊಗ್ಗ ತಾಲ್ಲೂಕಿನಲ್ಲಿ 20760257 ಮಹಿಳೆಯರು ಪ್ರಯಾಣಿಸಿದ್ದು, ಸಾರಿಗೆ ಇಲಾಖೆಗೆ ಶೇಕಡ 37 ರಷ್ಟು ಅಂದರೆ ರೂ.732880651 ಆದಾಯ ಗಳಿಕೆಯಾಗಿದೆ.
ಕಾರ್ಯಕ್ರಮದಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ತಾರಾ ಹಾಗೂ ತಾಲ್ಲೂಕು ಗ್ಯಾರಂಟಿ ಯೋಜನೆ ಸಮಿತಿಯ ಸದಸ್ಯರುಗಳು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.