Saturday, February 7, 2026
Saturday, February 7, 2026
Home Blog Page 1854

ನವದೆಹಲಿಗೆ ಮಾಲಿನ್ಯದ ಸಂಕಟ

0

ಭಾರತದ ಹೊಸದಿಲ್ಲಿ ವಾಯು ಮಾಲಿನ್ಯದಿಂದ ಕೂಡಿರುವ ನಗರ ಎಂಬ ಕುಖ್ಯಾತಿಗೆ ಪಾತ್ರವಾಗಿದೆ. ಆದರೆ ಜಗತ್ತಿನ ಅನೇಕ ನಗರಗಳ ದಿನದಿಂದ ದಿನಕ್ಕೆ ಹದಗೆಟ್ಟಿದೆ.

ಜಗತ್ತಿನಲ್ಲಿ ಅತಿ ಹೆಚ್ಚು ಮಾಲಿನ್ಯವಾಗಿರುವ 100 ನಗರಗಳಲ್ಲಿ ಭಾರತ, ಚೀನಾ ಪಾಕಿಸ್ತಾನದಲ್ಲೇ 94 ನಗರಗಳಿವೆ. ಭಾರತದಲ್ಲಿ 46, ಚೀನಾ 42, ಪಾಕಿಸ್ತಾನ 6, ಬಾಂಗ್ಲಾದೇಶ 4, ಇಂಡೋನೇಷ್ಯಾ ಹಾಗೂ ಥೈಲ್ಯಾಂಡ್ ತಲಾ ಒಂದು ನಗರಗಳು ಅತಿ ಹೆಚ್ಚು ಮಾಲಿನ್ಯ ಕೊಳಕಾಗಿರುವ ನಗರಗಳಾಗಿವೆ.

ಗಾಳಿಯಲ್ಲಿರುವ 2.5 ಮೈಕ್ರಾನ್ ಗಾತ್ರದ ಮಾಲಿನ್ಯಕಾರಕ ಕಣಗಳು ಗರ್ಭದಲ್ಲಿರುವ ಶಿಶುವಿನ ಮಿದುಳಿಗೆ ತೊಂದರೆ ಉಂಟುಮಾಡುತ್ತದೆ. ಕಣ್ಣು ಉರಿ, ಪದೇಪದೇ ಕಣ್ಣು ತಿಕ್ಕಿ ಕೆಂಪಾಗುವುದು, ಸಕ್ಕರೆ ಕಾಯಿಲೆಗೆ ತುತ್ತಾಗುವ ಸಾಧ್ಯತೆ ಹೆಚ್ಚು‌ ಹಾಗೂ ಶ್ವಾಸಕೋಶ ಕ್ಯಾನ್ಸರ್, ಪಾರ್ಶ್ವವಾಯು ಕಾಯಿಲೆ, ಹೃದಯಾಘಾತ ಸಂಭವಿಸುವುದು ಎಂದು ಆರೋಗ್ಯ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.

ಪೆಟ್ರೋಲ್ -ಡಿಸೆಲ್ ದರ ಇಳಿಕೆ ಯಾವಾಗ?

0

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರಗಳು ನಿರಂತರ ವಾಗಿ ಇಳಿಕೆಯಾಗಬೇಕು. ಆಗ ಮಾತ್ರವೇ ದೇಶಿ ಮಾರುಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್ ದರದಲ್ಲಿ ಇಳಿಕೆ ಆಗಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಏಷ್ಯಾದಲ್ಲಿ ಬ್ರೆಂಟ್ ಕಚ್ಚಾ ತೈಲ ದರವು ಪ್ರತೀ ಬ್ಯಾರೆಲ್ ಗೆ 4 ಡಾಲರ್ ಗಳಷ್ಟು ಆಗಿತ್ತು. ತೈಲ ದರದಲ್ಲಿ ಆಗಿರುವ ಇಳಿಕೆಯಿಂದ ದೇಶದಲ್ಲಿ ಪೆಟ್ರೋಲ್ ದರ ತಗ್ಗಲಿದೆ ಎಂಬುವ ನಿರೀಕ್ಷೆ ವ್ಯಕ್ತವಾಗಿತ್ತು. ಆದರೆ, ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪೆನಿಗಳು ಹಿಂದಿನ ಹದಿನೈದು ದಿನಗಳ ಅಂತಾರಾಷ್ಟ್ರೀಯ ಇಂಧನ ದರದ ಸರಾಸರಿಯನ್ನು ಆದರಿಸಿ ರಿಟೇಲ್ ಮಾರಾಟದ ರವನ್ನು ಪರಿಷ್ಕರಣೆ ಮಾಡುತ್ತವೆ. ಹೀಗಾಗಿ ಯಾವುದೇ ಬದಲಾವಣೆಯಾಗಿಲ್ಲ ಎಂದು ತಿಳಿಸಿವೆ.

ಕಚ್ಚಾ ತೈಲ ದರ ಇಳಿಕೆ ಇನ್ನೂ ಹಲವು ದಿನಗಳವರೆಗೆ ಹೀಗೆ ಮುಂದುವರಿಯಲಿದೆ. ಆಗ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ನ ರಿಟೇಲ್ ಮಾರಾಟದ ಕಡಿಮೆಯಾಗುವ ಸಾಧ್ಯತೆ ಎಂದು ಮೂಲಗಳು ತಿಳಿಸಿವೆ.

ಹೊಸ ಶಿಕ್ಷಣ ನೀತಿ : ವಿಷಯವಿದೆ, ಬೋಧಕರಿಲ್ಲ

ರಾಷ್ಟ್ರೀಯ ಶಿಕ್ಷಣ ನೀತಿ ಪ್ರಕಾರ ರಾಜ್ಯದ ಎಲ್ಲಾ ವಿವಿಗಳ ತಮ್ಮ ಅಧೀನದಲ್ಲಿರುವ ಕಾಲೇಜುಗಳ ಪದವಿಯ ಮೊದಲ ವರ್ಷದಲ್ಲಿ ಕೌಶಲ್ಯಾಧಾರಿತ ಹೊಸ ಕೋರ್ಸ್ ಅಳವಡಿಸಿಕೊಂಡಿದೆ. ಆದರೆ ಅದನ್ನು ವಿದ್ಯಾರ್ಥಿಗಳಿಗೆ ಬೋಧಿಸುವವರೇ ಇಲ್ಲ. ಅವರ ನೇಮಕವೂ ಆಗಿಲ್ಲ. ಹೀಗಾಗಿ ಹೊಸ ಶಿಕ್ಷಣ ನೀತಿ ಜಾರಿ ಎಂಬುದು ಕೇವಲ ಮಾತಲ್ಲೇ ಉಳಿದಿದೆ.
ಈ ವಿಚಾರಗಳನ್ನು ಬೋಧಿಸಲು ಕಾಲೇಜುಗಳಲ್ಲಿ ಕೆಲಸದ ಒತ್ತಡ ಕಡಿಮೆ ಇರುವ ಉಪನ್ಯಾಸಕರ ಪಟ್ಟಿಯನ್ನು ಕೊಟ್ಟರೆ ನಾವು ಅವರಿಗೆ ತರಬೇತಿ ನೀಡುವ ಕಾರ್ಯ ಮಾಡಬಹುದು. ಉಪನ್ಯಾಸಕರ ಪಟ್ಟಿಯನ್ನು ಕಾಲೇಜುಗಳು ಕಳಿಸಿಕೊಡಲಿ ಎಂದು ಮಂಗಳೂರು ವಿವಿಯ ಕುಲಪತಿ ಪ್ರೊ.ಪಿ.ಎಸ್‌. ಯಡಪಡಿತ್ತಾಯ ತಿಳಿಸಿದ್ದಾರೆ.
ರಾಜ್ಯದ 23 ವಿವಿಗಳಲ್ಲಿ ಎನ್ ಇಪಿ ಅಳವಡಿಸಲಾಗಿದೆ. ಆದರೆ ಕೌಶಲ ಪೂರಕ ಶಿಕ್ಷಣ ವಿಚಾರದಲ್ಲಿ ಮೊದಲ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಡಿಜಿಟಲ್ ಸಾಕ್ಷರತೆ, ಯೋಗ ಮತ್ತು ಆರೋಗ್ಯ ಎನ್ನುವ ಹೊಸ ಕೋರ್ಸ್ ಕಡ್ಡಾಯ ಮಾಡಲಾಗಿದೆ. ಇದರೊಂದಿಗೆ ಆರ್ಥಿಕ ಸಾಕ್ಷರತೆ, ಬ್ಯಾಂಕಿಂಗ್ ಮತ್ತು ಹಣಕಾಸು, ಬಿಲ್ಡಿಂಗ್ ಮ್ಯಾಥಮೆಟಿಕಲ್ ಎಬಿಲಿಟಿ, ಕೃತಿಕ ಬುದ್ಧಿಮತ್ತೆ ಸಮಸ್ಯೆಗಳ ಪರಿಹಾರ ಕೋರ್ಸ್, ಕ್ರಿಯಾಶೀಲತೆ ಮತ್ತು ಸಂಶೋಧನೆ ಕೋರ್ಸ್, ವಿಜ್ಞಾನ ಮತ್ತು ಸಮಾಜ, ಸಾಂಸ್ಕೃತಿಕ ಅರಿವು, ಸೈಬರ್ ಸೆಕ್ಯೂರಿಟಿ, ವೃತ್ತಿಪರ ಸಂವಹನ ಸೇರಿದಂತೆ ಹಲವು ಕೋರ್ಸ್ ಗಳು ಸೇರಿಕೊಂಡಿದೆ.
ಹೊಸ ಶಿಕ್ಷಣ ನೀತಿ ಅನುಸಾರ ಪಠ್ಯಗಳನ್ನು ಗೊತ್ತುಪಡಿಸಲಾಗಿದೆ. ಆದರೆ ಸಿಲಬಸ್ ಪ್ರತಿ ಸಿಗುತ್ತದೆಯೇ ಹೊರತು ಪುಸ್ತಕಗಳು ಇಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಸ್ತ್ರೀ-ಪುರುಷ ಫಲವಂತಿಕೆ ಸಮೀಕ್ಷೆ

0

ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ಸ್ಪೋಟಕ ಮಾಹಿತಿಯನ್ನು ತಿಳಿಸಿದೆ. ರಾಜ್ಯದಲ್ಲಿಯೂ ಪುರುಷ ಮತ್ತು ಸ್ತ್ರೀಯರಲ್ಲಿ ಸಂತಾನಶಕ್ತಿ ಫಲವತ್ತತೆ ಪ್ರಮಾಣ ಶೇ. 1.7 ಕುಸಿದಿರುವುದಾಗಿ ವರದಿಯಲ್ಲಿ ಹೇಳಿದೆ.

2019-20ರ ವರದಿ ಪ್ರಕಾರ ಗ್ರಾಮೀಣ ಭಾಗದಲ್ಲಿ ಕಳೆದ ಐದು ವರ್ಷಗಳಲ್ಲಿ ಫರ್ಟಿಲಿಟಿ ಪ್ರಮಾಣದಲ್ಲಿ ಯಾವುದೇ ತರಹದ ಬದಲಾವಣೆಗಳಾಗಿಲ್ಲ, ಆದರೆ ನಗರ ಪ್ರದೇಶಗಳಲ್ಲಿ ವಾಸಿಸುವ ಜನರಲ್ಲಿ ಫರ್ಟಿಲಿಟಿ ಪ್ರಮಾಣ ಶೇ.1.8 ರಿಂದ 1.5 ಕ್ಕೆ ಕುಸಿದಿರುವ ಬಗ್ಗೆ ಮಾಹಿತಿ ಹೊರಬಿದ್ದಿದೆ.

ಫರ್ಟಿಲಿಟಿ ಪ್ರಮಾಣ ರಾಜ್ಯದಲ್ಲಿ ಕಡಿಮೆಯಾಗಲು 18 ವರ್ಷದೊಳಗೆ ಮದುವೆಯಾಗಿ 20-24 ವರ್ಷ ವಯೋಮಾನದ ಸ್ತ್ರೀಯರಲ್ಲಿ ಫರ್ಟಿಲಿಟಿ ಪ್ರಮಾಣ ಶೇ. 21.3 ಕ್ಕೆ ಕುಸಿದಿದೆ. 2015-16 ರಲ್ಲಿ ಶೇ. 21.4 ರಷ್ಟಿತ್ತು. ಇದೇ ವೇಳೆ 21 ವರ್ಷಕ್ಕೆ ಮದುವೆಯಾಗಿ ಸದ್ಯ 25-29 ವಯೋಮಾನದ ಪುರುಷರಲ್ಲಿ ಫರ್ಟಿಲಿಟಿ ಪ್ರಮಾಣ ಶೇ. 9.1 ರಿಂದ 6.1ಕ್ಕೆ ಇಳಿಕೆಯಾಗಿದೆ.

ಫರ್ಟಿಲಿಟಿ ಪ್ರಮಾಣವು ಪುರುಷ ಮತ್ತು ಮಹಿಳೆಯರಲ್ಲಿ ಕಡಿಮೆಯಾಗಲು ಮುಖ್ಯಕಾರಣವೆಂದರೆ ಪರಿಸರ ಮಾಲಿನ್ಯ, ಬದಲಾದ ಜೀವನ ಶೈಲಿ ಹಾಗೂ ಆಹಾರ ಪದ್ಧತಿ ಆಗಿದೆ.

“ಪರಿಸರ ಮಾಲಿನ್ಯದಿಂದ ದೇಹದೊಳಗೆ ಸೇರುವ ಅನಗತ್ಯ ವಸ್ತುಗಳು ದೇಹದಲ್ಲಿನ ಹಾರ್ಮೋನ್ ಗಳಲ್ಲಿ ವ್ಯತ್ಯಾಸವನ್ನುಂಟು ಮಾಡುತ್ತವೆ. ಇದು ಫರ್ಟಿಲಿಟಿ ಮೇಲೆ ನೇರ ಪರಿಣಾಮ ಬೀರುತ್ತದೆ. ಕೆಲಸದ ಒತ್ತಡದಿಂದ ಜೈವಿಕ ಚಕ್ರವತಿ ವ್ಯತ್ಯಾಸವಾಗುತ್ತದೆ. ಇದು ಪುರುಷರಲ್ಲಿ ವೀರ್ಯಾಣು ಗುಣಮಟ್ಟ ಕುಸಿಯುವಂತೆ ಮಾಡಿದೆ. ಸ್ತ್ರೀಯರಲ್ಲಿ ಪಿಸಿಒಡಿ ತೊಂದರೆ, ಬೊಜ್ಜು, ಥೈರಾಯ್ಡ್ ಸಮಸ್ಯೆಗಳು ಅಧಿಕವಾಗುತ್ತಿರುವುದರಿಂದ ಸಂತಾನೋತ್ಪತ್ತಿ ಕ್ರಿಯೆ ನಡೆದರೂ ಫಲವತ್ತತೆ ಕ್ಷೀಣಿಸುತ್ತಿದೆ” ಇಂದು ಲೈಂಗಿಕ ತಜ್ಞೆ ಡಾ.ಪದ್ಮಿನಿ ಪ್ರಸಾದ್ ತಿಳಿಸಿದ್ದಾರೆ.

ವಿಜಯನಗರ: ಪರ್ಲ್ಸ್ ಆಫ್ ಹಂಪಿ ಕ್ಲಬ್ ಉದ್ಘಾಟನೆ.

0

ರೋಟರಿ ಕ್ಲಬ್ ಹೊಸಪೇಟೆ ಇವರ ಆಶ್ರಯದಲ್ಲಿ ಮಹಿಳೆಯರಿಂದ ರೋಟರಿ ಕ್ಲಬ್ ಆಫ್ ಹಂಪಿ ಪರ್ಲ್ಸ್ (Rotary Club of Hampi Pearls) ಸಂಸ್ಥೆಯನ್ನು ಉದ್ಘಾಟಿಸಲಾಯಿತು.

ಹೊಸಪೇಟೆ ಸ್ಟೇಷನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಗಳನ್ನು ರೋಟರಿ ಕ್ಲಬ್ ಗವರ್ನರ್ ಮತ್ತು ಹೆಸರಾಂತ ಸಿವಿಲ್ ಗುತ್ತಿಗೆದಾರರಾದ ಶ್ರೀ ತಿರುಪತಿ ನಾಯ್ಡು ಮತ್ತು ತುಮಕೂರಿನ ರೋಟರಿ ಕ್ಲಬ್ ಮುಖ್ಯಸ್ಥರು ಹಾಗೂ ಕರ್ನಾಟಕದ ಪ್ರಪ್ರಥಮ ರೋಟರಿ ಲೇಡಿ ಗೌರ್ನರ್ ಶ್ರೀಮತಿ ಆಶಾ ಪ್ರಸನ್ನ ಕುಮಾರ್ , ವಿಜಯನಗರ ರೋಟರಿ ಕ್ಲಬ್ ಆಫ್ ಹಂಪಿ ಪರ್ಲ್ಸ್ ಕ್ಲಬ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಕಮಲಾ ಗುಮಾಸ್ತೆ , ಕಾರ್ಯದರ್ಶಿ ಶ್ರೀಮತಿ ರಚನಾ ಏಕತಾರೆ, ಉಪಾಧ್ಯಕ್ಷೆ ನಿರ್ಮಲಾ ನಾಯ್ಡು ಇವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಬೆಂಗಳೂರಿನ ಶ್ರೀ ಜಿ.ಎನ್ ಶೇಷಾದ್ರಿ ಅವರು ವ್ಯಕ್ತಿತ್ವ ವಿಕಾಸನ ವಿಷಯವಾಗಿ ಉಪನ್ಯಾಸ ನೀಡಿದರು.
ವೈಯಕ್ತಿಕವಾಗಿ , ಸಾಮಾಜಿಕ ಮತ್ತು ಸಮೂಹದಲ್ಲಿ ಯಾವುದೇ ಆತಂಕವನ್ನು ಪಡದೆ ಗುರಿಯನ್ನು ಸಾಧಿಸುವ ಉಪಯುಕ್ತ ಅಂಶಗಳನ್ನು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಕೊಪ್ಪಳ ರೋಟರಿ ಕ್ಲಬ್ ನ ಡಾ.ಕೆ.ಜಿ. ಕುಲಕರಣಿ ಇನ್ನು ಮುಂತಾದವರು ಉಪಸ್ಥಿತರಿದ್ದರು.

ವರದಿ ಸೌಜನ್ಯ : ಮುರುಳಿಧರ್ ನಾಡಿಗೇರ್.

ಓಮಿಕ್ರಾನ್ : ನೆದರ್ಲೆಂಡ್, ಡೆನ್ಮಾರ್ಕ್, ಆಸ್ಟ್ರೇಲಿಯ ಹಬ್ಬಿದ ಭಯ

0

ಓಮಿಕ್ರಾನ್ ಕರೋನಾ ವೈರಸ್ ರೂಪಾಂತರವು ಪ್ರಪಂಚದಾದ್ಯಂತ ಹರಡಲಾರಂಭಿಸಿದೆ.
ನೆದರ್ಲ್ಯಾಂಡ್ ನಲ್ಲಿ 13 ಪ್ರಕರಣಗಳು ಕಂಡುಬಂದಿವೆ. ಮತ್ತು ಡೆನ್ಮಾರ್ಕ್ ಮತ್ತು ಆಸ್ಟ್ರೇಲಿಯಾವನ್ನು ತಲುಪಲು ಹೆಚ್ಚಿನ ದೇಶಗಳು ಅಸಾಧ್ಯವಾದ ಪ್ರಯಾಣದ ನಿರ್ಬಂಧಗಳನ್ನು ಹಾಕಲು ಪ್ರಯತ್ನಿಸುತ್ತಿವೆ. ಶುಕ್ರವಾರ ದಕ್ಷಿಣ ಆಫ್ರಿಕಾದಿಂದ ಆಮ್‌ಸ್ಟರ್‌ಡ್ಯಾಮ್‌ಗೆ ತಲುಪಿದೆ ಎರಡು ವಿಮಾನಗಳಲ್ಲಿ 13 ಜನರಲ್ಲಿ ವಿಭಿನ್ನ ಪ್ರಕರಣಗಳು ಕಂಡುಬಂದಿವೆ ಎಂದು ದಕ್ಷಿಣ ಆಫ್ರಿಕಾದ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನಗಳಲ್ಲಿ ದಿನಕ್ಕೆ 600 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸಿದ್ದಾರೆ.ಅದರಲ್ಲಿ 61 ಕರೋನವೈರಸ್ ಪ್ರಕರಣಗಳು ಕಂಡು ಬಂದಿವೆ. ಹೊಸ ರೂಪಾಂತರಕ್ಕಾಗಿ ಡೋಸ್ ಅನ್ನು ಪರೀಕ್ಷಿಸುತ್ತಿದ್ದೆವೆ. ನೆದರ್‌ಲ್ಯಾಂಡ್ಸ್‌ನಲ್ಲಿ ಹೆಚ್ಚಿನ ಪ್ರಕರಣಗಳು ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ ಎಂದು ಆರೋಗ್ಯ ಸಚಿವ ಹ್ಯೂಗೋ ಡಿ ಜೊಂಗ್ ರೋಟರ್‌ಡ್ಯಾಮ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಇದು ಬಹುಶಃ ಮಂಜುಗಡ್ಡೆಯ ತುದಿಯಾಗಿರಬಹುದು. ವಿಶ್ವ ಆರೋಗ್ಯ ಸಂಸ್ಥೆಯು ಕಳೆದ ವಾರ ಕಳವಳದ ರೂಪಾಂತರವೆಂದು ಕರೆಯಲಾದ ಓಮಿಕ್ರಾನ್‌ನ ಆವಿಷ್ಕಾರವು ವ್ಯಾಕ್ಸಿನೇಷನ್‌ಗಳನ್ನು ವಿರೋಧಿಸುತ್ತದೆ ಮತ್ತು ಸುಮಾರು ಎರಡು ವರ್ಷಕ್ಕೊಮ್ಮೆ ಎರಡು ವರ್ಷಗಳ ಸಾಂಕ್ರಾಮಿಕ ರೋಗವನ್ನು ವಿಸ್ತರಿಸುತ್ತದೆ ಎಂಬ ಆತಂಕವನ್ನು ಪ್ರಪಂಚದಾದ್ಯಂತ ಉಂಟುಮಾಡಿದೆ.
ಈ ಓಮಿಕ್ರಾನ್ ಕೊರೋನಾ ವೈರಸ್ ಮೊದಲು ದಕ್ಷಿಣ ಆಫ್ರಿಕಾದಲ್ಲಿ ಕಂಡುಹಿಡಿಯಲಾಯಿತು. ಇದು ಈಗ ಬ್ರಿಟನ್, ಜರ್ಮನಿ, ಇಟಲಿ ನೆದರ್ಲ್ಯಾಂಡ್ಸ್, ಡೆನ್ಮಾರ್ಕ್, ಬೆಲ್ಜಿಯಂ, ಬೋಟ್ಸ್ ವಾನಾ, ಇಸ್ರೇಲ್, ಆಸ್ಟ್ರೇಲಿಯಾ ಮತ್ತು ಹಾಂಗ್ ಕಾಂಗ್ ನಲ್ಲಿ ಪತ್ತೆಯಾಗಿದೆ. ಓಮಿಕ್ರಾನ್ ಹಿಂದಿನ ರೂಪಾಂತರಗಳಿಗಿಂತ ಹೆಚ್ಚು ಸಾಂಕ್ರಾಮಿಕವಾಗಿದೆ, ಆದರೂ ಇದು ಇತರ ತಳಿಗಳಿಗೆ ಹೋಲಿಸಿದರೆ ಹೆಚ್ಚು ಅಥವಾ ಕಡಿಮೆ ತೀವ್ರವಾದ ಕೋವಿಡ್ ಅನ್ನು ಉಂಟುಮಾಡುತ್ತದೆಯೇ ಎಂದು ಇನ್ನೂ ತಿಳಿದಿಲ್ಲ. ಸಾಂಕ್ರಾಮಿಕ ರೋಗಶಾಸ್ತ್ರಜ್ಞರು ಓಮಿಕ್ರಾನ್ ಪ್ರಸಾರವನ್ನು ತಡೆಯಲು ಪ್ರಯಾಣದ ನಿರ್ಬಂಧಗಳು ತುಂಬಾ ತಡವಾಗಿರಬಹುದು ಎಂದು ಹೇಳುತ್ತಿದ್ದಾರೆ.ಯುನೈಟೆಡ್ ಸ್ಟೇಟ್ಸ್, ಬ್ರೆಜಿಲ್, ಕೆನಡಾ, ಯುರೋಪಿಯನ್ ಯೂನಿಯನ್ ನೇಷನ್ಸ್, ಆಸ್ಟ್ರೇಲಿಯಾ, ಜಪಾನ್, ದಕ್ಷಿಣ ಕೊರಿಯಾ ಮತ್ತು ಥೈಲ್ಯಾಂಡ್ ಸೇರಿದಂತೆ ಹಲವು ದೇಶಗಳು ದಕ್ಷಿಣ ಆಫ್ರಿಕಾ ಮತ್ತು ಇತರ ದಕ್ಷಿಣದಿಂದ ಪ್ರಯಾಣಕ್ಕೆ ನಿಷೇಧ ಅಥವಾ ನಿರ್ಬಂಧಗಳನ್ನು ಘೋಷಿಸಿವೆ. ಆಫ್ರಿಕನ್-ಅಮೇರಿಕನ್ ರಾಷ್ಟ್ರಗಳು. ಇಂಡೋನೇಷ್ಯಾ ಮತ್ತು ಸೌದಿ ಅರೇಬಿಯಾ ಸೇರಿದಂತೆ ಹೆಚ್ಚಿನ ದೇಶಗಳು ನಿರ್ಬಂಧಗಳನ್ನು ವಿಧಿಸಿವೆ. ಯೂರೋಪ್ ನಲ್ಲಿನ ಅನೇಕ ದೇಶಗಳು ಈಗಾಗಲೇ ಸೋಂಕುಗಳ ಉಲ್ಬಣವನ್ನು ಎದುರಿಸುತ್ತಿವೆ. ಹರಡುವಿಕೆಯನ್ನು ತಡೆಯಲು ಸಾಮಾಜಿಕ ಚಟುವಟಿಕೆಯ ಮೇಲೆ ಕೆಲವು ನಿರ್ಬಂಧಗಳನ್ನು ಪುನಃ ಪರಿಚಯಿಸುತ್ತಿವೆ.
ಹೊಸ ವೈರಾಣು ಜಗತ್ತಿನಾದ್ಯಂತ ವ್ಯಾಕ್ಸಿನೇಷನ್ ದರಗಳಲ್ಲಿನ ದೊಡ್ಡ ಅಸಮಾನತೆಗಳ ಮೇಲೆ ಗಮನಸೆಳೆದಿದೆ. ಅನೇಕ ಅಭಿವೃದ್ಧಿ ಹೊಂದಿದ ದೇಶಗಳು ಮೂರನೇ ಡೋಸ್ ಬೂಸ್ಟರ್‌ಗಳನ್ನು ನೀಡುತ್ತಿದ್ದರೂ ಸಹ, ವೈದ್ಯಕೀಯ ಮತ್ತು ಮಾನವ ಹಕ್ಕುಗಳ ಗುಂಪುಗಳ ಪ್ರಕಾರ ನಾಲ್ಕು ದೇಶಗಳಲ್ಲಿ 7% ಜನರು ತಮ್ಮ ಮೊದಲ ಹೊಡೆತವನ್ನು ಸ್ವೀಕರಿಸಿದ್ದಾರೆ. GAVI ವ್ಯಾಕ್ಸಿಂಗ್ ಏಲಿಯನ್ಸ್‌ನ ಸಿಇಒ ಸೇಥ್ ಬರ್ಕ್ಲಿ, ಲಸಿಕೆಗಳ ಸಮಾನ ವಿತರಣೆಗೆ ಒತ್ತಾಯಿಸಲು ಡಬ್ಲ್ಯೂ ಎಚ್ಒ ನ ಕೊವ್ಯಾಕ್ಸ್ ಉಪಕ್ರಮವು ಸಹ-ನಾಯಕತ್ವ ವಹಿಸುತ್ತದೆ. ಇದು ಹೆಚ್ಚಿನ ರೂಪಾಂತರಗಳ ಹೊರಹೊಮ್ಮುವಿಕೆಯನ್ನು ತಡೆಯಲು ಅಗತ್ಯವಾದ ಲಸಿಕೆಯಾಗಿದೆ ಎಂದು ಹೇಳಿದರು.

ಮೇಲ್ಮನೆ ಚುನಾವಣೆ : ಬೃಹತ್ ಸಾರ್ವಜನಿಕ ಸಭೆ ನಡೆಸುವಂತಿಲ್ಲ-ಸಿಎಂ

0

ಕೋವಿಡ್ ವೈರಸ್ ನ ಹೊಸ ರೂಪಾಂತರಿ ಓಮಿಕ್ರಾನ್ ವಿಶ್ವದ ಹಲವು ದೇಶಗಳಲ್ಲಿ ಕಾಣಿಸಿಕೊಂಡಿದೆ. ವಿಶ್ವವನ್ನೇ ಮತ್ತೆ ಆತಂಕಕ್ಕೆ ತಳ್ಳಿದೆ. ದಕ್ಷಿಣ ಆಫ್ರಿಕಾ, ಹಾಂಕಾಂಗ್ ಹಾಗೂ ಬೋಟ್ಸ್ವಾನಾ ದೇಶಗಳಿಂದ ವಿಮಾನಯಾನ ನಿರ್ಬಂಧಿಸುವಂತೆ ಕೇಂದ್ರಸರ್ಕಾರವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕೋರಿದ್ದಾರೆ.

ನಮ್ಮಲ್ಲಿ ಹೊಸ ತಳಿ ವೈರಸ್ ಇಲ್ಲ. ಆದರೆ ಕಟ್ಟೇಚ್ಚರ ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. “ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಬಂದಿದೆ ಎಂಬ ಸಂದರ್ಭದಲ್ಲೇ ಮೂರು ದೇಶಗಳಲ್ಲಿ ಹೊಸ ರೂಪಾಂತರಿ ತಳಿ ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಂಡಿದೆ. ಯುರೋಪಿಯನ್ ರಾಷ್ಟ್ರಗಳು ದಕ್ಷಿಣ ಆಫ್ರಿಕಾ, ಹಾಂಕಾಂಗ್ ಮತ್ತು ಬೋಟ್ಸ್ವಾನಾ ಈ ಮೂರು ರಾಷ್ಟ್ರಗಳಿಗೆ ನಿರ್ಬಂಧ ಹೇರಿವೆ. ಓಮಿಕ್ರಾನ್ ಬಗ್ಗೆ ಡಬ್ಲ್ಯೂ ಎಚ್ಒ ಎಚ್ಚರಿಕೆ ನೀಡಿದೆ. ಈ ತಳಿ ಯಾವ ರೀತಿ ಪರಿಣಾಮ ಬೀರಲಿದೆ ಎಂಬುದು ಗೊತ್ತಿಲ್ಲ. ಆದರೆ ಬಹಳ ವೇಗವಾಗಿ ಹರಡುತ್ತದೆ ಎಂಬ ವಿಚಾರವಿದೆ. ಹಾಗಾಗಿ ದೇಶದಲ್ಲೂ ಬಹಳ ಎಚ್ಚರಿಕೆ ವಯಿಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿಯವರು ಸಭೆ ನಡೆಸಿ ಕೆಲ ನಿರ್ದೇಶನ ನೀಡಿದ್ದಾರೆ. ಅಂತಾರಾಷ್ಟ್ರೀಯ ವಿಮಾನಯಾನ ನಿರ್ಬಂಧ ಹೇರಲು ಕೇಂದ್ರ ಸರ್ಕಾರ ಚಿಂತಿಸಿದೆ” ಎಂದರು.

ಕೇರಳ ರಾಜ್ಯದಿಂದ ಬರುವವರಲ್ಲಿ ಸೋಂಕು ಹರಡುತ್ತಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತಿದೆ. ಕೇರಳ ಗಡಿಗೆ ಹೊಂದಿಕೊಂಡ ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರ, ಮೈಸೂರು ಗಡಿಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಆರ್ ಟಿ ಸಿ ಪಿ ಆರ್ ನೆಗೆಟಿವ್ ಇದ್ದರೆ ಅಷ್ಟೇ ರಾಜ್ಯದೊಳಗೆ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಕೇರಳದಿಂದ ಬರುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದಿರಬೇಕು. ಗಡಿಭಾಗಗಳಲ್ಲಿ 24 ಗಂಟೆ ನಿಗಾ ವಹಿಸಲು ಸೂಚಿಸಲಾಗಿದೆ. ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟ್ ಡೋಸ್ ನೀಡಲು ಕೇಂದ್ರ ಸರ್ಕಾರದ ಅನುಮತಿ ಕೋರಲಾಗಿದೆ. ಮಾಲ್, ಸಾರ್ವಜನಿಕ ಸ್ಥಳ, ಸರ್ಕಾರಿ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುವವರು ಡಬಲ್ ಡೋಸ್ ಲಸಿಕೆ ಪಡೆದಿರಬೇಕು. ಸರ್ಕಾರಿ ಕಚೇರಿ, ಮಾಲ್ಗಳಲ್ಲಿ ಲಸಿಕೆ ನೀಡಿಕೆ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದೆ. ಮೇಲ್ಮನೆ ಚುನಾವಣಾ ಪ್ರಚಾರಕ್ಕೆ ದೊಡ್ಡ ಸಾರ್ವಜನಿಕ ಸಭೆ ನಡೆಸುವಂತಿಲ್ಲ. ಸಭೆಯಲ್ಲಿ 50ರಿಂದ 100 ಜನರಿಗೆ ಅವಕಾಶ. ಅಲ್ಲಿಯೂ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲನೆ ಕಡ್ಡಾಯ ಎಂದು ಸಿಎಂ ಹೇಳಿದ್ದಾರೆ.

ರಾಜ್ಯ ಸರ್ಕಾರದ ಬಳಿ ಸದ್ಯ 80 ಲಕ್ಷ ಡೋಸ್ ಲಸಿಕೆ ಲಭ್ಯವಿದೆ. ಈಗಾಗಲೇ ಮೊದಲ ಡೋಸ್ ಪಡೆದವರ ಸಂಖ್ಯೆ ಶೇ. 58 ರಷ್ಟಿದ್ದು, ಡಿಸೆಂಬರ್ ಅಂತ್ಯದೊಳಗೆ ಶೇ. 70ರಷ್ಟು ತಲುಪುವ ಗುರಿ ಹೊಂದಲಾಗಿದೆ ಎಂದು ಸಿಎಂ ಬೊಮ್ಮಾಯಿ ಮಾಧ್ಯಮ ಮಿತ್ರರಿಗೆ ತಿಳಿಸಿದ್ದಾರೆ.

ಗ್ರಾಮ ಸಭೆಗಳು ಅರ್ಥ ಕಳೆದುಕೊಳ್ಳುತ್ತಿವೆ

0

ಗ್ರಾಮ ಸಭೆಗಳನ್ನೇ ಮೊಟಕುಗೊಳಿಸುವ ಕೆಲಸಕ್ಕೆ ಬಿಜೆಪಿ ಆಡಳಿತ ಮುಂದಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಆರೋಪಿಸಿದ್ದಾರೆ.
ಚಿತ್ರದುರ್ಗದಲ್ಲಿ ನಡೆದ ವಿಧಾನಪರಿಷತ್ ಸ್ಥಳೀಯ ಸಂಸ್ಥೆಗಳ ಚುನಾವಣಾ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಮಾತನಾಡಿದರು.
ರಾಜೀವ್ ಗಾಂಧಿ ಪ್ರಧಾನಿಯಾಗಿದ್ದಾಗ ಮಹಿಳೆ ಮೀಸಲು ಹಾಗೂ ಅಲ್ಪಸಂಖ್ಯಾತರು, ಹಿಂದುಳಿದವರಿಗೆ ಮೀಸಲು, ಪರಿಶಿಷ್ಟರಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲು ಕೊಡುವ ನಿರ್ಣಯದಿಂದ ತಳಮಟ್ಟದವರೆಗೂ ಅಧಿಕಾರ ಹಂಚಿಕೆ ಆರಂಭವಾಯಿತು ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಂಚಾಯಿತಿ ಮಟ್ಟದಲ್ಲಿ ಅಧಿಕಾರ ಇರಬೇಕು ಎಂಬ ಕಾರಣಕ್ಕೆ ಕಾಂಗ್ರೆಸ್ ಅಧಿಕಾರ ವಿಕೇಂದ್ರಿಕರಣ ವ್ಯವಸ್ಥೆ ಜಾರಿಗೊಳಿಸಿತು. ಆದರೆ ಬಿಜೆಪಿ ಇದಕ್ಕೆ ವಿರುದ್ಧವಾಗಿದೆ. ಗ್ರಾಮ ಸಭೆಗಳ ಮೂಲಕ ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಅಧಿಕಾರ ವಿಕೇಂದ್ರಿಕರಣ ವ್ಯವಸ್ಥೆಯು ಸಹಕಾರಿಯಾಗಿದೆ. ಆದರೆ ಗ್ರಾಮ ಸಭೆಗಳನ್ನು ಮೊಟಕುಗೊಳಿಸುವ ಕೆಲಸ ಬಿಜೆಪಿಯಿಂದ ಆಗುತ್ತಿದೆ ಎಂದು ಹೇಳಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಮನೆಮನೆ ಲಸಿಕಾ ಮಿತ್ರ -ಅಭಿಯಾನ

0

ಮೊದಲ ಡೋಸ್ ಕೊವಿಡ್ ಲಸಿಕೆ ಪಡೆಯಲು ಮುಗಿಬಿದ್ದ ಜನರು ಈಗ ಆರೋಗ್ಯ ಇಲಾಖೆಯವರು ಒತ್ತಾಯಿಸಿದರೂ ಎರಡನೇ ಡೋಸ್ ಪಡೆಯಲು ಒಪ್ಪುತ್ತಿಲ್ಲ. ನಿಧಾನಕ್ಕೆ ಕೊವಿಡ್
ಸಾಂಕ್ರಾಮಿಕ ರೋಗ ತಗ್ಗುತ್ತಿದ್ದಂತೆಯೇ ವ್ಯಾಕ್ಸಿನ್ ಪಡೆಯುವ ಜನರ ಧಾವಂತ ಕೂಡ ಕಡಿಮೆಯಾಗಿದೆ. ಮೊದಲ ಡೋಸ್ ಹಾಕಿಸಿಕೊಂಡವರಲ್ಲಿ 43 ಲಕ್ಷ ಜನರು ದ್ವಿತೀಯ ಲಸಿಕೆ ಅವಧಿ ಮುಗಿದರೂ ಹಾಕಿಸಿಕೊಂಡಿಲ್ಲ. ಓಮಿಕ್ರಾನ್ ವೈರಸ್ ವ್ಯಾಪಿಸುವುದನ್ನು ತಡೆಯುವ ಕ್ರಮವಾಗಿ ಲಸಿಕೆ ಅಭಿಯಾನವನ್ನು ಮತ್ತಷ್ಟು ಚುರುಕುಗೊಳಿಸಲು ಸರ್ಕಾರ ಮುಂದಾಗಿದೆ. ಹಲವು ಜಿಲ್ಲಾಧಿಕಾರಿಗಳು ‘ನೋ ವ್ಯಾಕ್ಸಿನ್, ನೋ ಎಂಟ್ರಿ’ ನಿಯಮ ಜಾರಿಗೊಳಿಸಿದ್ದಾರೆ.
ಈಗ ನೀಡುತ್ತಿರುವ ಲಸಿಕೆ ಓಮಿಕ್ರಾನ್ ಮೇಲೆ ಎಷ್ಟು ಪರಿಣಾಮಕಾರಿ ಎಂಬುದರ ಬಗ್ಗೆ ಇನ್ನೂ ಅಧ್ಯಯನ ನಡೆದಿಲ್ಲ. ಆದರೆ ಎರಡೂ ಡೋಸ್ ಲಸಿಕೆ ಪಡೆದರೆ ಅಪಾಯದಿಂದ ಪಾರಾಗಬಹುದು. ಇದು ಅತಿವೇಗದಲ್ಲಿ ಹರಡುವ ಸಾಧ್ಯತೆ ಇರುವುದರಿಂದ, ಕೊವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಕೊವಿಡ್ ತಾಂತ್ರಿಕ ಸಮಿತಿ ಸದಸ್ಯ ಹಾಗೂ ಮಣಿಪಾಲ ಆಸ್ಪತ್ರೆಯ ಮುಖ್ಯಸ್ಥರಾಗಿರುವ ಡಾ. ಸುದರ್ಶನ್ ಬಲ್ಲಾಳ್ ಅವರು ತಿಳಿಸಿದ್ದಾರೆ.
ಒಂದೊಮ್ಮೆ ಮೂರನೇ ಅಲೆ ಎದುರಾದರೆ, ಎರಡೂ ಡೋಸ್ ಪಡೆದವರಿಗಷ್ಟೇ ಉಚಿತ ಚಿಕಿತ್ಸೆ ನೀಡುವ ನೀತಿ ರೂಪಿಸಲು ಸರ್ಕಾರ ಚಿಂತಿಸುತ್ತಿದೆ. ಕೊವಿಡ್ ನಿಂದ ಸಾವು ಸಂಭವಿಸಿದರೆ, ಎರಡೂ ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಪರಿಹಾರ ಸಿಗುವ ಸಾಧ್ಯತೆ ಇದೆ. ಹಾಗಾಗಿ ಪ್ರತಿಯೊಬ್ಬರೂ ಎರಡು ಡೋಸ್ ಲಸಿಕೆ ಪಡೆಯಬೇಕು ಎಂದು ಆರೋಗ್ಯ ಅಧಿಕಾರಿಯೊಬ್ಬರು ಮನವಿ ಮಾಡಿದ್ದಾರೆ.
ಲಸಿಕೆ ಅಭಿಯಾನದ ಅಂಗವಾಗಿ ‘ಮನೆಮನೆ ಲಸಿಕಾ ಮಿತ್ರ’ಯೋಜನೆಯಡಿ ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿ ಮನೆಗಳಿಗೆ ಭೇಟಿ ನೀಡಿ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಬಸ್, ರೈಲು, ಮೆಟ್ರೊ ಮತ್ತು ವಿಮಾನ ನಿಲ್ದಾಣದಲ್ಲಿ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಿ ಲಸಿಕಾಕರಣ ನಡೆಸಲಾಗುತ್ತಿದೆ.

ಜಾತಿ ಪದ್ಧತಿ ನಿರ್ಮೂಲನೆಯಾಗಿಲ್ಲ: ಸುಪ್ರೀಂ ಕಳವಳ.

0

ಭಾರತ ಸ್ವಾತಂತ್ರ್ಯ ಪಡೆದು 75 ವರ್ಷಗಳಾದರೂ ಜಾತಿ ಪದ್ಧತಿ ನಿರ್ಮೂಲನೆಯಾಗಿಲ್ಲ. ಜಾತೀಯತೆ ಪ್ರೇರಿತ ಹಿಂಸಾಕೃತ್ಯ ಗಳು ಇನ್ನೂ ನಡೆಯುತ್ತಿವೆ ಎಂದು ಸುಪ್ರೀಂಕೋರ್ಟ್ ಆತಂಕವನ್ನು ವ್ಯಕ್ತಪಡಿಸಿದೆ.

ಜಾತಿಯ ಹೆಸರಿನಲ್ಲಿ ನಡೆಯುವ ಇಂತಹ ಘೋರ ಅಪರಾಧಗಳನ್ನು ನಾಗರಿಕ ಸಮಾಜ ಬಲವಾಗಿ ತಿರಸ್ಕರಿಸಬೇಕು’ ಎಂದು ಸುಪ್ರೀಂಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ.

1991ರ ಲ್ಲಿ ಉತ್ತರಪ್ರದೇಶದಲ್ಲಿ ಭೀಕರ ಹತ್ಯೆ ನಡೆದಿತ್ತು. ಮಹಿಳೆಯನ್ನು ಸೇರಿ ಮೂವರನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದ ಹಲವು ಅರ್ಜಿಗಳ ವಿಚಾರಣೆ ನಂತರ ಪ್ರಕಟಿಸಿದ ತೀರ್ಪಿನಲ್ಲಿ ಸುಪ್ರೀಂಕೋರ್ಟ್ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್, ಸಂಜೀವ್ ಖನ್ನಾ ಮತ್ತು ಬಿ ಆರ್ ಗವಾಯಿ ಅವರ ನ್ಯಾಯಪೀಠದಲ್ಲಿ ಈ ಕೃತ್ಯಕ್ಕೆ ಸಂಬಂಧಿಸಿದ ವಿಚಾರಣೆ ನಡೆಸಲಾಗಿತ್ತು.

ಈ ಭೀಕರ ಹತ್ಯೆಗಳನ್ನು ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಕೋರ್ಟ್ ಹಲವು ನಿರ್ದೇಶನಗಳನ್ನು ನೀಡುತ್ತಲೇ ಬಂದಿದೆ. ಈ ನಿರ್ದೇಶನಗಳನ್ನು ಯಾವುದೇ ವಿಳಂಬವಿಲ್ಲದೆ ಅನುಷ್ಠಾನಗೊಳಿಸಬೇಕು ಎಂದು ಸೂಚನೆ ನೀಡಿದೆ.

ಈ ರೀತಿಯ ಪ್ರಕರಣಗಳಲ್ಲಿ ಸಾಕ್ಷಿಗಳನ್ನು ರಚಿಸುವಲ್ಲಿ ಸರ್ಕಾರಗಳ ಪಾತ್ರ ಮಹತ್ವವಾಗಿದೆ. ಅದರಲ್ಲೂ, ಅಧಿಕಾರದಲ್ಲಿರುವವರು , ಹಣ ಪ್ರಭಾವ ಬೀರುವವರನ್ನು ಒಳಗೊಂಡ ಪ್ರಕರಣಗಳಲ್ಲಿ ಸಾಕ್ಷಿಗಳಿಗೆ ರಕ್ಷಣೆ ನೀಡುವುದು ಮುಖ್ಯ ಎಂದು ನ್ಯಾಯಪೀಠ ಹೇಳಿದೆ.

ಸಾಕ್ಷಿಗಳು ಪ್ರತಿಕೂಲ ಹೇಳಿಕೆ ನೀಡಲು ಅವರಿಗೆ ಸೂಕ್ತ ರಕ್ಷಣೆ ಸಿಗದಿರುವುದೇ ಕಾರಣ. ಇದು ಕಟು ವಾಸ್ತವ ಎಂದು ಕೂಡ ತಿಳಿಸಿದೆ.

ಜಾತಿ ಆಧಾರಿತ ಆಚರಣೆಗಳು ಮತಾಂಧತೆಯನ್ನು ಬೆಳೆಸುತ್ತವೆ. ಈ ರೀತಿಯ ಆಚರಣೆಗಳು ಈಗಲೂ ಅಸ್ತಿತ್ವದಲ್ಲಿದೆ. ಎಲ್ಲರೂ ಸಮಾನ ಎಂಬ ಸಂವಿಧಾನದ ಆಶಯಕ್ಕೆ ಇಂಥ ಆಚರಣೆಗಳು ಅಡ್ಡಿಯಾಗುತ್ತಿವೆ ಎಂದು ನ್ಯಾಯಪೀಠ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.