Saturday, February 7, 2026
Saturday, February 7, 2026
Home Blog Page 1856

ಹೋದೆಯಾ ಕೊವಿಡ್ ಅಂದ್ರೆ ಬಂದೆನಾ ಒಮಿಕ್ರಾನ್

0

ಕೋವಿಡ್-19 ಸಾಂಕ್ರಾಮಿಕ ಮೂರನೆಯ ಅಲೆಯು ಹೆಚ್ಚು ಅಪಾಯಕಾರಿ ಆಗಿರುವುದಿಲ್ಲ ಎಂದು ತಜ್ಞ ವೈದ್ಯರು ಹಾಗೂ ವಿಜ್ಞಾನಿಗಳು ಇದುವರೆಗೆ ನಿಟ್ಟುಸಿರು ಬಿಟ್ಟಿದ್ದರು. ಆದರೆ, ಕೊರೊನಾ ವೈರಾಣುವಿನ ರೂಪಾಂತರ ಜಗತ್ತಿನಾದ್ಯಂತ ತೀವ್ರವಾಗಿ ವ್ಯಾಪಿಸುವ ಆತಂಕ ನಿರ್ಮಾಣವಾಗಿದೆ.
ದಕ್ಷಿಣ ಆಫ್ರಿಕಾದ ಬೋಟ್ಸ್ ವಾನಾದಲ್ಲಿ ಮೊದಲ ಬಾರಿಗೆ ಪತ್ತೆಯಾದ ‘ಬಿ.1.1.529’ ರೂಪಾಂತರಿಯು ಈಗ ಇಸ್ರೇಲ್ ಮತ್ತು ಹಾಂಕಾಂಗ್ ಗೂ ವ್ಯಾಪಿಸಿರುವುದು ದೃಢಪಟ್ಟಿದೆ.
ಹೊಸ ಕೊರೊನಾ ರೂಪಾಂತರಿಯು ಆರ್ಭಟ ಹೆಚ್ಚಿಸುತ್ತಿರುವ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಪೆಡ್ರೋಸ್ ಅಧಾನೊಮ್ ಅವರು ತುರ್ತು ಸಭೆಯನ್ನು ಆಯೋಜಿಸಿದ್ದಾರೆ. ದಕ್ಷಿಣ ಆಫ್ರಿಕಾ, ಹಾಂಕಾಂಗ್, ಇಸ್ರೇಲಿನಿಂದ ಹಿರಿಯ ವಿಜ್ಞಾನಿಗಳು ಹಾಗೂ ತಜ್ಞ ವೈದ್ಯರಿಂದ ಬೋಟ್ಸ್ ವಾನಾ ಪ್ರಸರಣದ ಬಗ್ಗೆ ವರದಿಯನ್ನು ಕೂಡ ವಿಆಸಂ (WHO) ಸಂಗ್ರಹಿಸಿದೆ. ಇದನ್ನು ಆಧರಿಸಿ, ಕೊರೊನಾ ರೂಪಾಂತರಿ ನಿಯಂತ್ರಣಕ್ಕೆ ಅಗತ್ಯ ರೂಪುರೇಷೆ ರಚಿಸಲು ಸಂಸ್ಥೆಯ ವಿಜ್ಞಾನಿಗಳೊಂದಿಗೆ ಪೆಡ್ರೋಸ್ ಮಹತ್ವದ ಚರ್ಚೆ ನಡೆಸಿದ್ದಾರೆ. ಶೀಘ್ರವೇ ಮುನ್ನೆಚ್ಚರಿಕೆ ಕ್ರಮಗಳ ಮಾರ್ಗಸೂಚಿಯನ್ನು ವಿಶ್ವಸಂಸ್ಥೆಯು ಎಲ್ಲ ರಾಷ್ಟ್ರಗಳಿಗೆ ರವಾನಿಸಲಿದೆ.
ತಪಾಸಣೆಯಲ್ಲಿ ಗುರುತು ಹಿಡಿಯಲಾಗದ ಅಥವಾ ಇನ್ನೂ ಕೂಡ ಗಂಭೀರ ಸ್ಥಿತಿಗೆ ತಲುಪದ ಮಾರಣಾಂತಿಕ ಕಾಯಿಲೆಯು ಇರುವವರಿಗೆ ಹೊಸ ರೂಪಾಂತರಿಯು ಮಾರಣಾಂತಿಕವಾಗಿದೆ. ಉದಾಹರಣೆಗೆ ಎಡ್ಸ್ ಸೋಂಕು ತಗುಲಿರುವುದು ಗಮನಕ್ಕೆ ಬರದವರಿಗೆ ಬೋಟ್ಸ್ ವಾನಾ ಸೋಂಕು ತಗುಲಿದ್ದಲ್ಲಿ ಅನಾರೋಗ್ಯ ಮಿತಿಮೀರಲಿದೆ. ಡೆಲ್ಟಾ ರೂಪಾತರಿಯನ್ನು ಇದು ಹಿಮ್ಮೆಟ್ಟಿಸಲಿದೆ ಎಂದು ಲಂಡನ್ ವಿಶ್ವವಿದ್ಯಾಲಯದ ಜೀನ್ಸ್ ಅಧ್ಯಯನ ವಿಜ್ಞಾನಿ ಪ್ರೋ.ಫ್ರಾಂಕೊಯಿಸ್ ಬಲ್ಲೌಕ್ಸ್ ತಿಳಿಸಿದ್ದಾರೆ.
ವಿಸಾ ನಿರ್ಬಂಧ ಸಡಿಲಿಸಿ ಅಂತರಾಷ್ಟ್ರೀಯ ವಿಮಾನ ಸಂಚಾರ ಮುಕ್ತಗೊಳಿಸಲು ಮುಂದಾಗಿರುವ ವೇಳೆಯಲ್ಲೇ ಹೊಸ ರೂಪಾಂತರಿ ಬಗ್ಗೆ ಎಚ್ಚರಿಕೆ ಸಿಕ್ಕಿದೆ. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಬೊಟ್ಸ್ ವಾನಾ ನಿಯಂತ್ರಣ ಬಗ್ಗೆ ಗಂಭೀರ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೆ ತರಲಿದ್ದೇವೆ. ಭಾರತದಲ್ಲಿ ರೂಪಾಂತರಿ ಪತ್ತೆಯಾಗಿಲ್ಲ. ಆದರೂ ರಾಜ್ಯಗಳಿಗೂ ಈ ಬಗ್ಗೆ ಸೂಚನೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ತಿಳಿಸಿದ್ದಾರೆ.

ಹಂಪಿ ಉತ್ಸವದ ಮಾದರಿ ಕೆಳದಿ ಉತ್ಸವ ಜರುಗಬೇಕು

0

ಕೆಳದಿಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕೆಳದಿ ಶಿವಪ್ಪನಾಯಕ ಪ್ರತಿಷ್ಠಾನದ ಡಾ. ಕೆಳದಿ ವೆಂಕಟೇಶ್ ಜೋಯಿಸ್ ಆಗ್ರಹಿಸಿದ್ದಾರೆ.

ಕೆಳದಿ ಸಂಸ್ಥಾನಕ್ಕೆ ಸುಮಾರು 263 ವರ್ಷಗಳ ಇತಿಹಾಸ ಇದೆ. ಕ್ರಿ. ಶ 1499ರಿಂದ 1763ರ ವರೆಗೆ ಕೆಳದಿ ಯೂ ಸೇರಿ 13 ಜಿಲ್ಲೆಗಳ ಆಡಳಿತವನ್ನು 17 ರಾಜರು, ಇಬ್ಬರು ರಾಣಿಯರು, ಕೆಳದಿ ಆಳ್ವಿಕೆ ಮಾಡಿದ್ದಾರೆ. ಕರ್ನಾಟಕದ ರಾಜಕೀಯ, ಸಾಂಸ್ಕೃತಿಕ ಕ್ಷೇತ್ರಕ್ಕೆ ಇವರ ಕೊಡುಗೆ ಅಪಾರವಾಗಿದೆ ಎಂದು ಡಾ.ಕೆಳದಿ ವೆಂಕಟೇಶ್ ಜೊಯಿಸ್ ಅವರು ಹೇಳಿದರು.

ಪ್ರತಿವರ್ಷ ಕೆಳದಿ ಉತ್ಸವ ಆಚರಣೆಯನ್ನು ಸರ್ಕಾರವೇ ಮಾಡಬೇಕು. ಅಮೂಲ್ಯ ಕೆಳದಿಯ ಇತಿಹಾಸವನ್ನು ಎಲ್ಲರಿಗೂ ತಿಳಿಸಬೇಕು. ಹಂಪಿ ಉತ್ಸವದಂತೆ ಶಾಶ್ವತವಾಗಿ ಸರ್ಕಾರ ವಿಶೇಷ ಅನುದಾನ ನೀಡಬೇಕು. ಕುವೆಂಪು ವಿವಿಯಲ್ಲಿ ಕೆಳದಿ ರಾಣಿ ಚೆನ್ನಮ್ಮ ಅವರ ಜಯಂತಿ ಆಚರಿಸಬೇಕು. ಅವರ ಹೆಸರಿನಲ್ಲಿ ಅಧ್ಯಯನ ಪೀಠ ಸ್ಥಾಪಿಸಬೇಕು. ಹಾಗೂ ಅವರ ಹೆಸರು ಶಾಶ್ವತವಾಗಿ ಉಳಿಯುವಂತೆ ಮಾಡಬೇಕು ಎಂದು ಡಾ. ಕೆಳದಿ ವೆಂಕಟೇಶ್ ಜೋಯಿಸ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕೆಳದಿ ಇತಿಹಾಸ ಸ್ಮಾರಕವಾದ ರಾಜ್ಯದ ಸಮಾಧಿ ರಾಜರ ಶಿವಮೊಗ್ಗದಲ್ಲಿದೆ. ಅದನ್ನು ಸಂರಕ್ಷಿಸಲೇ ಬೇಕು ಎಂದು ನಿವೃತ್ತ ಪ್ರಾಧ್ಯಾಪಕಿ ಪ್ರೊ. ಕಿರಣ್ ದೇಸಾಯಿ ಮತ್ತು ಎನ್.ಜೆ. ರಾಜಶೇಖರ್ ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಕತ್ತಿಗೆ ಚನ್ನಪ್ಪ, ಬಳ್ಳೇಕೆರೆ ಸಂತೋಷ್, ಎನ್.ಎಲ್. ಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ಭಾರತದಿಂದ 14 ರಾಷ್ಟ್ರಗಳಿಗೆ ಏರ್ ಇಂಡಿಯಾ ಸಂಚಾರ

0

ಡಿಸೆಂಬರ್ 15ರಿಂದ ಭಾರತದಿಂದ ಹಲವಾರು ರಾಷ್ಟ್ರಗಳಿಗೆ ಎಂದಿನಂತೆ ನಿಯಮಿತವಾಗಿ ಅಂತರಾಷ್ಟ್ರೀಯ ವಿಮಾನ ಹಾರಾಟ ಪುನಃ ಆರಂಭವಾಗಲಿದೆ.
ಫ್ರಾನ್ಸ್, ಬ್ರಿಟನ್, ಸಿಂಗಾಪುರ ಸೇರಿ 14 ರಾಷ್ಟ್ರ ಗಳಿಗೆ ಮಾತ್ರ ಸಾಮಾನ್ಯ ‘ಏರ್ ಬಬಲ್’ ವ್ಯವಸ್ಥೆಯಡಿಯಲ್ಲಿ ಹಾರಾಡ ಇರಲಿದೆ. ವಿಶ್ವದಾದ್ಯಂತ ಕೋವಿಡ್ 19 ಸ್ಥಿತಿಯನ್ನು ಪರಿಶೀಲಿಸಿ ಆರೋಗ್ಯ ಸಚಿವಾಲಯದ ಜೊತೆ ಸಮಾಲೋಚಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಕೊವಿಡ್ -19 ಸಂಕಷ್ಟದ ಕಾರಣ 2022ರ ಮಾರ್ಚ್ ನಿಂದ ಅಂತರಾಷ್ಟ್ರೀಯ ವಿಮಾನ ಹಾರಾಟವನ್ನು ನಿರ್ಬಂಧಿಸಲಾಗಿತ್ತು.

ಹೆದ್ದಾರಿ ತಡೆ ರೈತರ ಪ್ರತಿಭಟನೆ

0

ಕೃಷಿ ಕಾಯ್ದೆ ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ನೀತಿಗಳನ್ನು ವಿರೋಧಿಸಿ ನಡೆದ ರೈತರ ಪ್ರತಿಭಟನೆಗೆ ರಾಜ್ಯದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ರಾಜ್ಯದ ನಾನಾ ಭಾಗಗಳಲ್ಲಿ ಹೆದ್ದಾರಿ ತಡೆದು ರೈತರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದಿಲ್ಲಿ ರೈತರ ಹೋರಾಟದ ವರ್ಷಾಚರಣೆ ಮತ್ತು ಕೃಷಿ ಉತ್ಪನ್ನಗಳಿಗೆ ಶಾಸನಬದ್ಧ ಕನಿಷ್ಟ ಬೆಂಬಲ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಭಟನೆ ಮತ್ತು ಹೆದ್ದಾರಿ ತಡೆಗೆ ಕರೆ ನೀಡಿತ್ತು.
ಪ್ರಧಾನಿ ಮೋದಿ ಮೂರು ಕೃಷಿ ಕಾಯ್ದೆಗಳನ್ನು ಚುನಾವಣೆ ಹಿನ್ನೆಲೆಯಲ್ಲಿ ವಾಪಸ್ ಪಡೆದಿದ್ದಾರೆ. ಇದರ ಹಿಂದೆ ರೈತರ ಹಿತ, ಕಾಳಜಿ ಕಾಣುತ್ತಿಲ್ಲ. ಹೀಗಾಗಿ ಎಲ್ಲಾ ಬೇಡಿಕೆ ಈಡೇರುವವರೆಗೂ ಹೋರಾಟ .
ಕನಿಷ್ಠ ಬೆಂಬಲ ಬೆಲೆಯನ್ನು ವೈಜ್ಞಾನಿಕ ರೀತಿಯಲ್ಲಿ ನಿಗದಿ ಮಾಡಬೇಕು. ಜಲ ಜೀವನ್ ಮಿಷನ್ ಹೆಸರಿನಲ್ಲಿ ಗ್ರಾಮೀಣ ಪ್ರದೇಶದ ಮನೆಗಳ ನೀರಿನ ಸಂಪರ್ಕ ಮೀಟರ್ ಅಳವಡಿಕೆ ನಿರ್ಧಾರ ಕೈಬಿಡಬೇಕು.
ಹಾಲು ಒಕ್ಕೂಟ ರೈತರಿಂದ ಖರೀದಿಸುವ ಪ್ರತಿ ಲೀಟರ್ ಹಾಲಿನ ಬೆಲೆಯನ್ನು ನಾಲ್ಕು ರೂಪಾಯಿ ಕಡಿಮೆ ಮಾಡಿದೆ. ಮತ್ತೊಂದೆಡೆ ಗ್ರಾಹಕರಿಗೆ ಹಳೆಯ ದರದಲ್ಲೇ ಹಾಲು ಮಾರುತ್ತಿದೆ. ಈ ಮೂಲಕ ಇಬ್ಬರಿಗೂ ವಂಚನೆ ಮಾಡಲಾಗುತ್ತಿದೆ. ಇದನ್ನು ಸರಿಪಡಿಸಿ ಹಿಂದಿನ ದರದ ಪ್ರಕಾರ ವಹಿವಾಟು ನಡೆಸಬೇಕು.
ಹೋರಾಟದಲ್ಲಿ ಹುತಾತ್ಮರಾದ ರೈತರ ಅವಲಂಬಿತರಿಗೆ ಮಾಸಿಕ ಭತ್ಯೆ ನೀಡಬೇಕು. ರೈತರ ಮೇಲಿನ ಮೊಕದ್ದಮೆ, ಹಿಂಪಡೆಯಬೇಕು.
ಅನಾವೃಷ್ಟಿ, ಅತಿವೃಷ್ಟಿಯಿಂದ ಆಗಿರುವ ಬೆಳೆ ನಾಶಕ್ಕೆ ಸೂಕ್ತ ಪರಿಹಾರ ನೀಡಬೇಕು. ಗ್ರಾಮೀಣ ಭಾಗದ ರಸ್ತೆಗಳನ್ನು ಅಭಿವೃದ್ಧಿಪಡಿಸಬೇಕು. ಈ ಎಲ್ಲಾ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ಗುತ್ತಿಗೆ ಕಮಿಷನ್ ಪ್ರಕರಣ ತನಿಖೆಗೆ ಆದೇಶ

0

ರಾಜ್ಯದ ಗುತ್ತಿಗೆದಾರರ ಸಂಘದ ಅಧ್ಯಕ್ಷರ ಪತ್ರವು ಪ್ರಧಾನಿ ಅವರಿಗೆ ತಲುಪಿದೆ. ಈಗಾಗಲೇ ಪ್ರತಿಪಕ್ಷದವರ ಪ್ರತಿಭಟನೆಗೂ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಬೊಮ್ಮಾಯಿಯವರು ಕ್ರಮ ಕೈಗೊಂಡಿದ್ದಾರೆ.
ಶ್ರೀ ಬೊಮ್ಮಾಯಿಯವರು ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ನಂತರ 10 ಕೋಟಿ ರೂ. ಹೆಚ್ಚು ಅನುದಾನದ ಎಲ್ಲಾ ಟೆಂಡರ್ ಪ್ರಕ್ರಿಯೆ, ಪ್ರಗತಿ ಕಾಮಗಾರಿಗಳ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಎಲ್ಲಾ ಇಲಾಖೆಗಳಿಗೆ ಆದೇಶಿಸಿದ್ದಾರೆ.
ನಾನು ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಉಲ್ಲೇಖಿಸಲಾದ ಇಲಾಖೆಗಳಲ್ಲಿ ಮಂಜೂರಾದ ಪ್ರಮುಖ ಕಾಮಗಾರಿಗಳನ್ನು ಪರಿಶೀಲಿಸಿಬೇಕು. ಯಾವುದೇ ಲೋಪಗಳು ಕಂಡುಬಂದ ಕಡೆ ವಿಸ್ತೃತ ತನಿಖೆಗೆ ಒಳಪಡಬೇಕು. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಅಥವಾ ಪ್ರಧಾನ ಕಾರ್ಯದರ್ಶಿಗಳಿಗೆ ಕೂಡಲೇ ನಿರ್ದೇಶನ ನೀಡಬೇಕು ಎಂದು ಸಿಎಂ ಸೂಚಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಪ್ರಧಾನಿ ಎಚ್. ಡಿ .ದೇವೇಗೌಡ ನವರು, ಗುತ್ತಿಗೆದಾರರ ಸಂಘ ಪ್ರಧಾನಿಗೆ ಬರೆದಿರುವ ‘ಕಮಿಷನ್ ‘ ಪತ್ರದ ವಿಚಾರದಲ್ಲಿ ಯಾವುದೇ ದೊಡ್ಡ ವ್ಯತ್ಯಾಸವಿಲ್ಲ. ರಾಜಕೀಯ ವ್ಯವಸ್ಥೆ ಈ ಮಟ್ಟಿಗೆ ಬರಲು ಕಾಂಗ್ರೆಸ್, ಬಿಜೆಪಿ ಎರಡೂ ಪಕ್ಷಗಳು ಕಾರಣ. ದಿಲ್ಲಿ ಮಟ್ಟದಲ್ಲಿ ದೊಡ್ಡ ನಾಯಕರು ಸೇರಿದರೆ ಏನಾದರೂ ಬದಲಾವಣೆ ತರಲು ಸಾಧ್ಯ ಎಂದಿದ್ದಾರೆ.

ಇಳಿಕೆಯಾಗದ ತರಕಾರಿ ಬೆಲೆ. ಗ್ರಾಹಕರ ಪರದಾಟ.

0

ಇಂಧನದ ದರ ಇಳಿಮುಖ ವಾಗುತ್ತಿದ್ದಂತೆ, ತರಕಾರಿ ಬೆಲೆ ಕೂಡ ಕಡಿಮೆಯಾಗಬಹುದು ಎಂದುಕೊಂಡಿದ್ದ ಗ್ರಾಹಕರಿಗೆ ನಿರಾಸೆ ಎದುರಾಗಿದೆ.

ಈ ಬಾರಿಯ ವರುಣನ ಆರ್ಭಟದಿಂದ ರೈತರ ಹೊಲದಲ್ಲಿರುವ ಬೆಳೆ ನಾಶವಾಗಿದೆ. ಅಲ್ಲದೆ, ತಾವು ಬೆಳೆದ ಎಲ್ಲಾ ತರಕಾರಿ, ಇತರೆ ಬೆಳೆಗಳು ನೀರುಪಾಲಾಗಿದೆ. ರೈತರು ಹೊಲದಲ್ಲಿ ಅಳಿದುಳಿದ ತರಕಾರಿಗಳನ್ನು ಮಾರುಕಟ್ಟೆಗೆ ತಂದರೂ ಸಹ , ರೈತರಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಆದರೆ, ಅದೇ ತರಕಾರಿ ಚಿಲ್ಲರೆ ಮಾರುಕಟ್ಟೆಯಲ್ಲಿ ಭಾರಿ ಬೆಲೆಗೆ ಮಾರಾಟವಾಗುತ್ತಿದೆ. ಇದರಿಂದ ಕಷ್ಟಪಟ್ಟು ಬೆಳೆ ಬೆಳೆದ ರೈತರು ಹಾಗೂ ತರಕಾರಿ ಕೊಳ್ಳುವ ಗ್ರಾಹಕರಿಗೆ ಪ್ರಯೋಜನವಾಗುತ್ತಿಲ್ಲ.

‘ಕಳೆದ 15ದಿನಗಳಿಂದ ತರಕಾರಿ ದರ ಏರಿಕೆಯಾಗುತ್ತಲೇ ಇದೆ. ಗುಣಮಟ್ಟದಲ್ಲೂ ಕೊರತೆ ಇದೆ. ಹೀಗಾಗಿ, 1ಕೆಜಿ ಖರೀದಿಸುವ ಗ್ರಾಹಕರು ಅರ್ಧ ಕೆಜಿ ಕಾಲು ಕೆಜಿ ಖರೀದಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಟೊಮೋಟೊ ಕೆಜಿಗೆ 80 ರೂ. ಇತ್ತು. ಆದರೆ ಈಗ 65 ರೂಪಾಯಿಗಳಿಗೆ ಇಳಿದಿದೆ ಎಂದು ಶಿವಮೊಗ್ಗ ಪ್ರಮುಖ ತರಕಾರಿ ಮಾರಾಟಗಾರರು ತಿಳಿಸಿದ್ದಾರೆ.

ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರ ಜೀವನ ಕಷ್ಟವಾಗಿದೆ. ತರಕಾರಿ ಬೆಲೆ ಗಗನಕ್ಕೇರಿರುವುದರಿಂದ ಜನ ಖರೀದಿಸಲು ಹಿಂದೇಟು ಹಾಕುತ್ತಿದ್ದಾರೆ. ತರಕಾರಿ ಸ್ಟಾಲ್, ಅಂಗಡಿಗಳಲ್ಲಿ ಮುಂಚಿನಂತೆ ತಾಜಾ ತರಕಾರಿಗಳು ದೊರೆಯುತ್ತಿಲ್ಲ.

ಕೆ ಲೈವ್ ಸುದ್ದಿಸಾಲು.

0

ಬೆಂಗಳೂರಿಗೆ ಮತ್ತೆ ವರುಣನ ಕಾಟ.
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ.
ನವೆಂಬರ್ 26 ರಿಂದ ಡಿಸೆಂಬರ್ 1 ರವರೆಗೆ ಸಾಧಾರಣ ಮಳೆ ಬೀಳಲಿದೆ.

ಸದ್ಯ ರಾಜ್ಯದಲ್ಲಿ ಪ್ರವಾಹದಿಂದಾಗಿರುವ ಆಸ್ತಿ,ಜೀವ ಮತ್ತು ಪ್ರಾಕೃತಿಕ ಹಾನಿಗಳಿಗೆ ಹಣಕಾಸಿನ ಪರಿಹಾರ
ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಿದ್ದಾರೆ.

ಕರ್ನಾಟಕದ ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರೀಯ ಹೆದ್ದಾರಿ ತಡೆ ಚಳವಳಿ ಮಾಡಿದೆ. ಕೃಷಿ ಬೆಳೆಗೆ ಬೆಂಬಲ ಬೆಲೆ ಪ್ರಕಟಿಸಬೇಕು ಎಪಿಎಂಸಿ ಮತ್ತು ಭೂಸುಧಾರಣಾ ಕಾಯಿದೆಗಳನ್ನು ರದ್ದುಗೊಳಿಸಲು
ಒತ್ತಾಯಿಸಿದೆ.

ಪ್ರಸ್ತುತ ವಿಧಾನ ಪರಿಷತ್ತಿಗೆ ಸ್ಪರ್ಧಿಸಿರುವ 121 ಅಭ್ಯರ್ಥಿಗಳಲ್ಲಿ
ಶ್ರೀಯೂಸುಫ್ ಶರೀಫ್ ಅವರು ಅತ್ಯಂತ ಶ್ರೀಮಂತ ವ್ಯಕ್ತಿ.
ಅವರು ಘೋಷಿಸಿರುವ ಸ್ವಂತ
ಆಸ್ತಿಯ ಮೊತ್ತ ರೂ 1,744 ಕೋಟಿ.

ಕೋವಿಡ್ ನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಚಿತ್ರನಟ ಕಮಲ ಹಾಸನ್ ಅವರೀಗ ಚೇತರಿಸಿಕೊಳ್ಳುತ್ತಿದ್ದಾರೆ.ಚನ್ನೈನ ಶ್ರೀರಾಮಚಂದ್ರ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಸುಹಾಸ್ ಪ್ರಭಾಕರ್ ಅವರು ಆರೋಗ್ಯ ಮಾಹಿತಿ ಪತ್ರದಲ್ಲಿ ತಿಳಿಸಿದ್ದಾರೆ.

ಕನ್ನಡಿಗ ಸಾಗರ ಪುರಾಣಿಕ್ ಅವರ
ಕನ್ನಡ ಚಿತ್ರ ‘ಡೊಳ್ಳು’ ,ಪಣಜಿಯ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ
ಪ್ರದರ್ಶಿತವಾಗುತ್ತಿದೆ.

ಹತ್ತನೇ ತರಗತಿ ಸೂಕ್ತವಾಗಿ ಪಠ್ಯ ಕಡಿತ

0

ಈ ಬಾರಿಯ 10 ನೇ ತರಗತಿ ಪಠ್ಯಕ್ರಮವನ್ನು ಶೇ.20 ರಷ್ಟು ಕಡಿಮೆಗೊಳಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಶಿಕ್ಷಣಕ್ಕೆ ಸಂಬಂಧಿಸಿದ ವರ ಅಭಿಪ್ರಾಯ ಪಡೆದು, 10 ನೇ ತರಗತಿಯ ಎಲ್ಲಾ ವಿಷಯಗಳ ಶೇಕಡ 20ರಷ್ಟು ಪಠ್ಯ ಕಡಿತ ಗೊಳಿಸಲು ನಿರ್ಧರಿಸಲಾಗಿದೆ. ಒಂದೆರಡು ದಿನಗಳಲ್ಲಿ ವಿವರಗಳನ್ನು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ .ನಾಗೇಶ್ ಅವರು ತಿಳಿಸಿದರು.

ಕೊರೋನಾ ದಿಂದಾಗಿ ಶಾಲೆಗಳು ತಡವಾಗಿ ಆರಂಭಗೊಂಡಿದೆ. ಇದನ್ನು ಪರಿಗಣಿಸಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಬಾರಿಯ ಶೈಕ್ಷಣಿಕ ವರ್ಷದ ಅವಧಿಯಲ್ಲಿ ಶೇ.100ರಷ್ಟು ಪಠ್ಯ ಕ್ರಮ ಬೋಧನೆ ಇದು ಕಷ್ಟಸಾಧ್ಯ ಇಂದು ಶಿಕ್ಷಕರ ವಲಯದಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿದ್ದವು.

ಪ್ರತಿವರ್ಷವೂ 240ಕ್ಕೂ ಹೆಚ್ಚು ಬೋಧನಾ ದಿನಗಳು ಲಭಿಸುತ್ತಿದ್ದವು. ಆದರೆ, ಈ ಬಾರಿ 180 ಬೋಧನಾ ದಿನಗಳು ಮಾತ್ರ ಲಭಿಸಿವೆ. ಇದರಿಂದ ವಿದ್ಯಾರ್ಥಿಗಳಿಗೆ ಪಠ್ಯ ಬೋಧನೆ ಪುನರಾವರ್ತಿಸಲು ಸಾಧ್ಯವಾಗುವುದಿಲ್ಲ ಎಂದು ಶಿಕ್ಷಕರು ಅಭಿಪ್ರಾಯಪಟ್ಟಿದ್ದರು.

ಪಠ್ಯ ಕಡಿತಗೊಳಿಸುವ ವಿವರಗಳನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸದ್ಯದಲ್ಲೇ ಪ್ರಕಟಿಸಲಿದೆ.

ಪಠ್ಯ ಕಡಿತಗೊಳಿಸುವ ನಿರ್ಧಾರ ಕೈಗೊಂಡಿರುವುದರಿಂದ ಮಾರ್ಚ್-ಏಪ್ರಿಲ್ ತಿಂಗಳಿನಲ್ಲಿ ಎಸೆಸೆಲ್ಸಿ ಪರೀಕ್ಷೆಗಳು ನಡೆಯುವ ಸಾಧ್ಯತೆಗಳಿವೆ. ಇದರಿಂದ ಮೊದಲಿನಂತೆಯೇ ಶೈಕ್ಷಣಿಕ ವರ್ಷಗಳು ಆರಂಭವಾಗಲು ಅನುಕೂಲವಾಗುತ್ತದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಸಂವಿಧಾನವನ್ನು ಎಲ್ಲರೂ ಗೌರವಿಸೋಣ

0

ನಮ್ಮ ನೆಲದ ಕಾನೂನಾದ ಸಂವಿಧಾನವನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು ಹಾಗೂ ಗೌರವಿಸಬೇಕು. ಸಂವಿಧಾನವನ್ನು ಗೌರವಿಸುವುದು ನಮ್ಮೆಲ್ಲರ ಮೂಲಭೂತ ಕರ್ತವ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಎ. ಮುಸ್ತಫಾ ಹುಸೇನ್ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ವಕೀಲರ ಭವನದಲ್ಲಿ ಏರ್ಪಡಿಸಲಾಗಿದ್ದ ‘ಸಂವಿಧಾನ ದಿನಾಚರಣೆ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳೆಲ್ಲರೂ ಸಂವಿಧಾನವನ್ನು ಓದಿ ಅರ್ಥ ಮಾಡಿಕೊಳ್ಳಬೇಕು. ಹಾಗೂ ಸಂವಿಧಾನ ತಿಳಿದವರು ಇತರರಲ್ಲೂ ಇದರ ಅರಿವು ಮೂಡಿಸಬೇಕು. ಇದು ನಮ್ಮ ನೆಲದ ಮೂಲಭೂತ ಕಾನೂನಾಗಿದ್ದು, ಮುಖ್ಯವಾಗಿ ವಕೀಲರು ಇದನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳಬೇಕು. ನ್ಯಾಯಾಂಗಕ್ಕೆ ಸಂವಿಧಾನ ಒಂದು ಮುಖ್ಯ ಅಂಶವಾಗಿದ್ದು ಕಾನೂನು ವ್ಯವಹರಿಸುವ ನಮಗೆ ಇದು ಬಹು ಮಹತ್ವದ್ದಾಗಿದೆ ಎಂದರು.
ನಾವು ಐಚ್ಚಿಕವಾಗಿ ಸಂವಿಧಾನ ಓದಿದಲ್ಲಿ ನಮಗೆ ಸಂವಿಧಾನ ರಚನೆ ಹಿಂದೆ ಇರುವ ಮಹನೀಯರ ಪರಿಶ್ರಮ ಮತ್ತು ಆಶಯಗಳು ಅರ್ಥವಾಗುತ್ತವೆ. ಇದರ ರಚನೆ ಹಿಂದೆ ಬಹಳ ಶ್ರಮ ಇದೆ. ನ್ಯಾಯಾಂಗ ವ್ಯವಸ್ಥೆಯಲ್ಲಿ ಕೂಡ ಡ್ರಾಫ್ಟಿಂಗ್ ಕೆಲಸ ಕಷ್ಟ. ಇದಕ್ಕೆ ಉತ್ತಮ ಕೌಶಲ್ಯದ ಅಗತ್ಯವಿದೆ ಎಂದರು.
ಇಷ್ಟೊಂದು ದೊಡ್ಡ ಸಂವಿಧಾನ ನೀಡಿದ ಮಹನೀಯರು ಸಂವಿಧಾನ ರಚನೆ ಸಲುವಾಗಿ ಬಹು ಚರ್ಚೆಗಳು, ಸಭೆಗಳು, ಅಧ್ಯಯನ ನಡೆಸಿದ್ದಾರೆ. 1946 ರ ಡಿ.9 ರಂದು ಮೊದಲ ಸಂವಿಧಾನ ರಚನೆ ಪರಿಷತ್ ಸಭೆ ನಡೆಯಿತು. ನಂತರ 17 ಉಪ ಸಮಿತಿಗಳ ರಚನೆಯಾಗಿ 117 ಸಭೆಗಳು ನಡೆದು 1949 ರ ನವೆಂಬರ್ 26 ರಂದು ಸಂವಿಧಾನ ಅನುಮೋದನೆಗೊಂಡು 1950 ರ ಜನವರಿ 26 ರಿಂದ ಜಾರಿಗೊಂಡಿತು. ಬಹು ಸಂಸ್ಕøತಿಯ ನಮ್ಮ ದೇಶಕ್ಕೆ ಅನ್ವಯವಾಗುವಂತಹ ಬಹುದೊಡ್ಡ ಸಂವಿಧಾನವನ್ನು ನೀಡಿದ ಮಹನೀಯರನ್ನು ಸ್ಮರಿಸುವ ದಿನ ಇದಾಗಿದೆ. ಸಂವಿಧಾನ ರಚನಾ ಪೂರ್ವದ ಚರ್ಚೆಗಳನ್ನು ವಕೀಲರು ಸೇರಿದಂತೆ ಎಲ್ಲರೂ ತಿಳಿದುಕೊಳ್ಳಬೇಕು. ಸಂವಿಧಾನ ನ್ಯಾಯಾಲಯಕ್ಕೆ ವಿಶೇಷ ಅಧಿಕಾರ ನೀಡಿದ್ದು, ಸಂವಿಧಾನ ಕಾನೂನು ಮತ್ತು ಅದರ ಬೆಳವಣಿಗೆಯನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕೆಂದು ಕರೆ ನೀಡಿದರು.
ಬಹಳಷ್ಟು ಜನರಿಗೆ ಸಂವಿಧಾನದ ಅರಿವು ಇನ್ನೂ ಇಲ್ಲ. ಈ ನಿಟ್ಟಿನಲ್ಲಿ ಸಂವಿಧಾನ ಕುರಿತು ಅರಿವು ಕಾರ್ಯಕ್ರಮಗಳು ಹೆಚ್ಚಾಗಾಗಬೇಕು. ಆಗ ಎಲ್ಲರಿಗೂ ತಮ್ಮ ಹಕ್ಕು, ಕರ್ತವ್ಯಗಳು ಅರ್ಥವಾಗಿ ಜವಾಬ್ದಾರಿ ಹೆಚ್ಚುತ್ತದೆ ಎಂದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎನ್.ದೇವೇಂದ್ರಪ್ಪ ಮಾತನಾಡಿ, ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಲು ಒತ್ತಾಸೆಯಾಗಿ ನಿಂತಿದ್ದು ನಮ್ಮ ಸಂವಿಧಾನ. ವೈವಿಧ್ಯಮಯವಾದ ನಮ್ಮ ದೇಶದಲ್ಲಿ ಯಾವುದೇ ಬೇಧ ಭಾವವಿಲ್ಲದೆ ಎಲ್ಲರನ್ನೂ ಸಮಾನರಾಗಿ ಕಾಣುವ ಮತ್ತು ದೇಶದ ಒಗ್ಗಟ್ಟಿನ ಮೂಲಭೂತ ತತ್ವ ನಮ್ಮ ಸಂವಿಧಾನ. ಇಂತಹ ನಮ್ಮ ಸಂವಿಧಾನವನ್ನು ನಾವೆಲ್ಲರೂ ಗೌರವಿಸಬೇಕು.
ಸಂವಿಧಾನ ರಚನೆ ಒಂದು ಬಹುದೊಡ್ಡ ಕಾರ್ಯವಾಗಿದ್ದು ಶಿವಮೊಗ್ಗದ ಹಿರಿಯರಾದ ಕೃಷ್ಣಮೂರ್ತಿಯವರು ಸಹ ಈ ಕಾರ್ಯದಲ್ಲಿ ಪಾಲ್ಗೊಂಡಿದ್ದರೆಂಬುದು ನಮಗೆ ಹೆಮ್ಮೆಯ ವಿಷಯವಾಗಿದೆ. ಪ್ರಸ್ತುತ ಎಲ್ಲ ವಕೀಲರು ಸಂವಿಧಾನದ ಆಶಯಗಳನ್ನು ಅರಿತು ಅದೇ ಪಥದಲ್ಲಿ ಸಾಗಬೇಕೆಂದು ಆಶಿಸಿದರು.
ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸರಸ್ವತಿ ಕೆ.ಎನ್. ಸ್ವಾಗತಿಸಿದರು. ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಕಾಂತ್‍ರಾಜ್ ಕೆ.ಆರ್ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ನ್ಯಾಯಾಧೀಶರು, ಸರ್ಕಾರಿ ಅಭಿಯೋಜಕರು, ನ್ಯಾಯವಾದಿಗಳು, ಸಂಘದ ಸದಸ್ಯರು, ಪ್ಯಾನೆಲ್ ವಕೀಲರು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಆರೋಗ್ಯಕ್ಕೆ ಉತ್ತಮ ಆಹಾರ- ಯೋಗ ಮುಖ್ಯ

0

ಮೈಸೂರಿನ ರಾಣಿ ಬಹುದ್ದೂರ್ ಸಭಾಂಗಣದಲ್ಲಿ ರಾಷ್ಟೀಯ ಆಯುರ್ವೇದ ದಿನವನ್ನು ಆಚರಿಸಲಾಯಿತು. ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಇತರೆ ಸಂಸ್ಥೆಗಳು ಸೇರಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಸಿಎಫ್ ಟಿಆರ್ ಮಾಜಿ ನಿರ್ದೇಶಕ ಪ್ರಕಾಶ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

‘ ಜಡ ಜೀವನಶೈಲಿಯನ್ನು ಬದಲಾಯಿಸುವುದರಿಂದ ಸಾಕಷ್ಟು ಆರೋಗ್ಯ ಸಮಸ್ಯೆ ಉಂಟಾಗುತ್ತಿದೆ. ನಮ್ಮ ಆರೋಗ್ಯವನ್ನು ರಕ್ಷಿಸಲು ಮಾನಸಿಕ ಆರೋಗ್ಯವು ಮುಖ್ಯವಾಗಿದೆ. ಆಯುರ್ವೇದದಲ್ಲಿ 16 ಗುಣಲಕ್ಷಣಗಳನ್ನು ವಿವರಿಸಲಾಗಿದೆ. ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ನಾವು ಇದನ್ನು ಅನುಸರಿಸಬೇಕು. ನಾವು ಆರೋಗ್ಯಕರ ಜೀವನ ನಡೆಸಲು ಉತ್ತಮ ಆಹಾರ ಮತ್ತು ಯೋಗ ಪ್ರಮುಖವಾಗಿದೆ ಎಂದು ಪ್ರಕಾಶ್ ಅವರು ಹೇಳಿದ್ದಾರೆ.