Saturday, February 7, 2026
Saturday, February 7, 2026
Home Blog Page 1857

ಇಂಡೋನೇಷ್ಯ ಓಪನ್ ಬ್ಯಾಡ್ಮಿಂಟನ್ : ಸಿಂಧು ಎರಡನೇ ಸುತ್ತಿಗೆ

0

ಇಂಡೋನೇಷ್ಯಾ ಓಪನ್ ಸೂಪರ್ 1000 ಬ್ಯಾಡ್ಮಿಟನ್ ಚಾಂಪಿಯನ್ಶಿಪ್ನ ಮಹಿಳೆಯರ ಸಿಂಗಲ್ಸ್ ನಲ್ಲಿ ಪಿ.ವಿ.ಸಿಂಧು ಎರಡನೇ ಸುತ್ತಿಗೆ ಪ್ರವೇಶಿಸಿದ್ದಾರೆ.

ಮೊದಲ ಗೇಮ್ನಲ್ಲಿ ಸಿಂಧು ಎದುರಾಳಿಗೆ ಹೆಚ್ಚು ಅವಕಾಶಗಳನ್ನು ಕೊಡದಂತೆ ಪಾರಮ್ಯ ಮೆರೆದರು. ಆರಂಭದಲ್ಲಿಯೇ ಸಿಂಧು ಚುರುಕಿನ ರಿಟರ್ನ್ ಮತ್ತು ನಿಖರ ಸರ್ವ್ ಗಳಲ್ಲಿ ಸತತ ಏಳು ಪಾಯಿಂಟ್ಗಳನ್ನು ಕಲೆಹಾಕಿದ ಸಿಂಧು ಮುನ್ನಡೆಯುತ್ತ ದಾಪುಗಾಲಿಟ್ಟು ಜರ್ಮನಿಯ ಆಟಗಾರ್ತಿಯನ್ನು ಮಂಕಾಗಿಸಿದರು.

ಎರಡು ಬಾರಿ ಒಲಿಂಪಿಕ್ ಪದಕ ವಿಜೇತರಾಗಿರುವ ಸಿಂಧು ಈಗಷ್ಟೇ ಇಂಡೋನೇಷಿಯಾ ಸೂಪರ್ 750 ಬ್ಯಾಡ್ಮಿಂಟನ್ ನಲ್ಲಿ ಸಿಂಧು ಸೋತಿದ್ದರು.

ಗುರುವಾರ ನಡೆದ ಎರಡನೇ ಸುತ್ತಿನ ಪಂದ್ಯದಲ್ಲಿ ಮೂರನೇ ಶ್ರೇಣಿಯ ಸಿಂಧು 21-12, 21-18 ರಿಂದ ಜರ್ಮನಿಯ 26ನೇ ಶ್ರೇಣಿಯ ಯವೊನೆ ಲೀ ವಿರುದ್ಧ ಜಯಿಸಿದರು. ಹಾಲಿ ವಿಶ್ವಕಪ್ ಚಾಂಪಿಯನ್ ಆಗಿರುವ ಸಿಂಧು 37 ನಿಮಿಷಗಳ ಪಂದ್ಯದಲ್ಲಿ ಮೇಲ್ಮೈ ಸಾಧಿಸಿದರು.

ಆದರೆ ಎರಡನೇ ಗೇಮ್ಸ್ ನಲ್ಲಿ ಯವೊನೆ ಲೀ ತುಸು ಪ್ರತಿರೋಧ ಒಡ್ಡಿದ್ದರು. ಆದರೆ ಜಯ ಒಲಿಸಿಕೊಳ್ಳಲು ಅವರಿಗೆ ಸಾಧ್ಯವಾಗಲಿಲ್ಲ. ಸಿಂಧು ಜಯದತ್ತ ಮುನ್ನಡೆದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಅಕಾಲಿಕ ಮಳೆಗೆ ಕಾಫಿ ಬೆಳೆ ಆಹುತಿ!

0

ಸಕಲೇಶಪುರ ಪ್ರದೇಶದಲ್ಲಿನ ಅಕಾಲಿಕ ಮಳೆಯು ಕಾಫಿ ಉತ್ಪಾದನೆಯ ಮೇಲೆ ಕೆಟ್ಟ ಪರಿಣಾಮ ಬೀರಿದೆ. ಏಕೆಂದರೆ ತೋಟಗಾರರು ಕಾಫಿ ಬೀಜಗಳನ್ನು ಒಣಗಿಸಲು ಕಷ್ಟಪಡುತ್ತಿದ್ದಾರೆ. ಈ ಪ್ರದೇಶವು ಭಾರೀ ಮಳೆಗೆ ಹೊಸದೇನಲ್ಲ. ತುಂಬಾ ದಿನಗಳಿಂದ ಸೂರ್ಯನನ್ನು ನೋಡಿಲ್ಲ. ಇದು ಕಾಫಿ ಬೆಳೆಗಾರರನ್ನು ಚಿಂತೆಗೀಡು ಮಾಡಿದ್ದು, ಕಾಫಿ ಬೀಜಗಳನ್ನು ಒಣಗಿಸಲು ಕಷ್ಟವಾಗುತ್ತಿದೆ. ನಿರಂತರ ಮಳೆಯು ಮೆಣಸು ಮತ್ತು ಶುಂಠಿ ಬೆಳೆಗಳ ಮೇಲೆ ಪರಿಣಾಮ ಬೀರಿದೆ. ಹವಾಮಾನದಲ್ಲಿನ ವಿಪರೀತ ತೇವಾಂಶದಿಂದಾಗಿ ಅವು ಕೊಳೆಯುತ್ತಿವೆ. ಅರೇಬಿಕಾ ಕಾಫಿಯನ್ನು ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಕೊಯ್ಲು, ಸಂಸ್ಕರಿಸಿ ಮತ್ತು ಒಣಗಿಸಲಾಗುತ್ತದೆ. ಆದರೆ ಈ ವರ್ಷ ಅಕಾಲಿಕ ಮಳೆಯಿಂದಾಗಿ ಕಾಫಿ ಹಣ್ಣುಗಳು ಬೀಳುತ್ತಿವೆ ಮತ್ತು ಕಾಫಿ ಬೀಜಗಳು ಕೊಳೆಯುತ್ತಿವೆ. ಕೆಲವು ಬೆಳೆಗಾರರು ಕಾಫಿ ಹಣ್ಣುಗಳನ್ನು ಒಣಗಿಸಲು ತಮ್ಮ ಮನೆಗಳ ಕೊಠಡಿಗಳಲ್ಲಿ, ವಾಹನಗಳ ಪಾರ್ಕಿಂಗ್ ಸ್ಥಳಗಳಲ್ಲಿ, ಬಾಲ್ಕನಿಗಳಲ್ಲಿ, ಸಾಂಪ್ರದಾಯಿಕ ಓವನ್‌ಗಳ ಮೇಲೆ ಇರಿಸಲಾದ ಟ್ರೇಗಳಲ್ಲಿ ಬೀಜಗಳನ್ನು ಹರಡಿದ್ದಾರೆ. ಪಶ್ಚಿಮ ಘಟ್ಟದ ​​ಅಂಚಿನಲ್ಲಿರುವ ದೇವಲದಕೆರೆ ಗ್ರಾಮದಲ್ಲಿ ಈ ವರ್ಷ ಸುಮಾರು 4200 ಮಿ.ಮೀ ಮಳೆಯಾಗಿದೆ. ಈ ಬಾರಿ ಒಂದೇ ಒಂದು ಕಾಫಿ ಬೀಜವನ್ನು ಮನೆಗೆ ತೆಗೆದುಕೊಂಡು ಹೋಗಲು ನಮಗೆ ಸಾಧ್ಯವಾಗುತ್ತಿಲ್ಲ. ಈ ರೀತಿಯ ಪರಿಸ್ಥಿತಿ ಹಿಂದೆಂದೂ ಕಂಡಿರಲಿಲ್ಲ” ಎಂದು ಕಾಫಿ ತೋಟಗಾರ ಮಲ್ಲಪ ಹೇಳಿದರು.
“ನಮ್ಮಲ್ಲಿ 80% ಕ್ಕಿಂತ ಹೆಚ್ಚು ಸಣ್ಣ ಬೆಳೆಗಾರರು ಇದ್ದೆವೆ. ದುಬಾರಿ ಡ್ರೈಯರ್‌ಗಳನ್ನು ಖರೀದಿಸಲು ಆರ್ಥಿಕವಾಗಿ ಯೋಗ್ಯರಿಲ್ಲ. ಪ್ರವಾಹ ಮತ್ತು ಬೆಲೆ ಕುಸಿತದಿಂದ ಐದು ವರ್ಷಗಳಿಂದ ನಷ್ಟದಲ್ಲಿ ತತ್ತರಿಸುತ್ತಿದ್ದೆವೆ. ದೊಡ್ಡ ತೋಟಗಾರರು ಸಹ ನಷ್ಟವನ್ನು ಎದುರಿಸುತ್ತಿದ್ದಾರೆ. ಇದೇ ರೀತಿ ಮುಂದುವರಿದರೆ ಕಾಫಿಯನ್ನೇ ನಂಬಿ ಜೀವನ ಸಾಗಿಸಲು ಸಾಧ್ಯವಾಗುವುದಿಲ್ಲ’ ಎಂದು ಹಾಸನ ಕಾಫಿ ತೋಟಗಾರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಹೇಳಿದರು.
ಸಕಲೇಶಪುರ, ಆಲೂರು, ಬೇಲೂರು ಭಾಗಗಳಲ್ಲಿ ಸುರಿದ ಮಳೆಗೆ ಕಾಫಿ, ಕಾಳುಮೆಣಸು ಬೆಳೆ ಹಾನಿಯಾಗಿದೆ.ಕಂದಾಯ ಇಲಾಖೆ, ತಾಲ್ಲೂಕು ಪಂಚಾಯಿತಿ, ಕಾಫಿ ಮಂಡಳಿ, ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ಜಂಟಿಯಾಗಿ ತುರ್ತು ಸ್ಪಂದನಾ ತಂಡವನ್ನು ರಚಿಸಿದ್ದು, ಬೆಳೆ ಮತ್ತು ಆಸ್ತಿ ಕಾನೂನುಗಳ ವರದಿಯನ್ನು ಶೀಘ್ರದಲ್ಲೇ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ಸಕಲೇಶಪುರ ಎಸಿ ಪ್ರತೀಕ್ ಬಯಲ್ ಹೇಳಿದರು.

ರಾಜ್ಯದ ಹಲವು ಜಿಲ್ಲೆ: ಜಲಜೀವನ್ ಅಭಿಯಾನ.

0

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜಲಜೀವನ್ ಮಿಷನ್ ಕುಡಿಯುವ ನೀರಿನ ಯೋಜನೆ ಜಾರಿಗೊಳಿಸುವಂತೆ ಸಂಪುಟ ಸಭೆ ನಡೆಸಲಾಯಿತು. ಈ ಯೋಜನೆಗಾಗಿ 1,577 ಒದಗಿಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ.

ಯಾದಗಿರಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ ನೀರನ್ನು ಒದಗಿಸಲಾಗುತ್ತದೆ. 1,358.62 ಕೋಟಿ ಮೊತ್ತದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಾಗಿದೆ. ಇದಕ್ಕೆಆಡಳಿತ ಅನುಮತಿ ಸಹ ದೊರಕಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮತ್ತು ಮೂಡುಬಿದರೆ ತಾ. 39 ಹಳ್ಳಿಗಳಿಗೆ 145.48ಕೋಟಿ ಬಂಟ್ವಾಳ ಮತ್ತು ಮಂಗಳೂರು ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.

ಅಲ್ಲದೆ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬಸವಣ್ಣ ಕುಡಿಯುವ ನೀರು ಸರಬರಾಜು ಯೋಜನೆ ಗೆ 990 ಕೋಟಿ ಮೊತ್ತದ ವಿಸ್ತೃತ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಹಾಸನದಲ್ಲಿ ವಾಣಿಜ್ಯಮಳಿಗೆ; ಸಿಸಿಟಿವಿ ಹೊಂದಿರಬೇಕು.

0

ಹಾಸನದ ಹೊರವಲಯದಲ್ಲಿರುವ ಗ್ರಾನೈಟ್ ಉದ್ಯಮಿಗಳ ಮನೆಯಲ್ಲಿ 2 ಕೋಟಿ ರೂ.ಗಳ ಕಳ್ಳತನ ನಡೆದಿದದೆ. ಅಪರಾಧ ತಡೆಯಲು ವಾಣಿಜ್ಯ ಸಂಸ್ಥೆಗಳ ಆವರಣದಲ್ಲಿ ಕ್ಲೋಸ್ಡ್ ಸರ್ಕ್ಯೂಟ್ ಟೆಲಿವಿಷನ್ (ಸಿಸಿಟಿವಿ) ಕ್ಯಾಮೆರಾಗಳನ್ನು ಅಳವಡಿಸುವಂತೆ ಜಿಲ್ಲಾ ಪೊಲೀಸರು ವಾಣಿಜ್ಯ ಸಂಸ್ಥೆಗಳ ಮಾಲೀಕರಿಗೆ ಸೂಚಿಸಿದ್ದಾರೆ.
ನಿರ್ಲಕ್ಷ್ಯ ವಹಿಸುವ ಮಾಲೀಕರಿಗೆ ದಂಡ ವಿಧಿಸುವ ಎಚ್ಚರಿಕೆಯನ್ನೂ ಪೊಲೀಸರು ನೀಡಿದ್ದಾರೆ. ಪೊಲೀಸ್ ಸುರಕ್ಷತಾ (ಕ್ರಮಗಳು) ಜಾರಿ ಕಾಯಿದೆಯಡಿ, ಹಾಸನ ಪೊಲೀಸರು ಕ್ಲೋಸ್ಡ್-ಸರ್ಕ್ಯೂಟ್ ಟೆಲಿವಿಷನ್‌ಗಳನ್ನು ಅಳವಡಿಸುವಂತೆ ಚಿನ್ನಾಭರಣ ಅಂಗಡಿಗಳು / ಶೋ ರೂಂಗಳು ಮತ್ತು ಹೋಟೆಲ್‌ಗಳು ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಮಾಲೀಕರಿಗೆ ನೊಟೀಸ್ ನೀಡಿದ್ದಾರೆ. ಇಲ್ಲದಿದ್ದರೆ ಅವರು ಶಿಸ್ತು ಕ್ರಮವನ್ನು ಎದುರಿಸಬೇಕಾಗುತ್ತದೆ. ಪ್ರತಿಯೊಬ್ಬ ನಾಗರಿಕರ ರಕ್ಷಣೆ ಪೋಲಿಸ್ ಇಲಾಖೆಯ ಜವಾಬ್ದಾರಿಯಾಗಿದೆ. ಆದರೆ, ಪ್ರತಿಯೊಬ್ಬ ವ್ಯಕ್ತಿಗೆ ಮತ್ತು ಪ್ರತಿ ಅಂಗಡಿಗೆ ಭದ್ರತೆಯನ್ನು ಒದಗಿಸುವುದು ಅಸಾಧ್ಯ. ಪೊಲೀಸರು ಸಾಕಷ್ಟು ಜಾಗರೂಕರಾಗಿದ್ದರರೂ, ಈ ನಿಟ್ಟಿನಲ್ಲಿ ಸಾರ್ವಜನಿಕ ಸಹಭಾಗಿತ್ವವು ಪ್ರಮುಖ ಪಾತ್ರ ವಹಿಸುತ್ತದೆ.
ಸಾರ್ವಜನಿಕರು ರಾತ್ರಿ ಸಮಯದಲ್ಲಿ ತಮ್ಮ ಮನೆಗಳಲ್ಲಿ ಲೈಟ್‌ಗಳನ್ನು ಆನ್ ಮಾಡುವಂತೆ ಪೊಲೀಸರು ವಿನಂತಿಸಿದ್ದಾರೆ. ಗೇಟ್‌ಗಳಿಗೆ ಬೀಗ ಹಾಕುವಿಕೆಯು ಮನೆಯೊಳಗೆ ಯಾರೂ ಇಲ್ಲದಿರುವ ಬಗ್ಗೆ ದುಷ್ಕರ್ಮಿಗಳಿಗೆ ಸುಳಿವು ನೀಡುವುದರಿಂದ, ವಿಶ್ವಾಸಾರ್ಹ ವ್ಯಕ್ತಿಯನ್ನು (ಸಂಬಂಧಿ ಅಥವಾ ಸ್ನೇಹಿತ) ಅಲ್ಲಿಯೇ ಇರಲು ಕೇಳುವುದು ಉತ್ತಮ ಎಂದು ಅವರು ಹೇಳಿದ್ದಾರೆ. ಒಂದೇ ಮಾಲೀಕತ್ವ ಹೊಂದಿರುವ ಅಂಗಡಿಗಳಲ್ಲಿ ಮತ್ತು ಸಂಸ್ಥೆಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆದರೆ ಸಮಿತಿ ಅಥವಾ ಗುಂಪುಗಳು ನಿರ್ವಹಿಸುವ ಸ್ಥಳಗಳಲ್ಲಿ CCTV ಇರುವುದಿಲ್ಲ. ಡಿಜಿಟಲ್ ವೀಡಿಯೋ ರೆಕಾರ್ಡರ್‌ಗಳ (ಡಿವಿಡಿ) ಮೊತ್ತವು ನಗರದಲ್ಲಿನ 32 ಚಾನೆಲ್‌ಗಳಿಂದ (ಕ್ಯಾಮರಾಗಳು) ಫೀಡ್‌ಗಳನ್ನು ಪಡೆಯುತ್ತವೆ.
ಕಳ್ಳತನ ಪ್ರಕರಣದ ಸಂಬಂಧ ಹಾಸನ ಉಪವಿಭಾಗ 106ರಲ್ಲಿ ವಾಣಿಜ್ಯ ಮಳಿಗೆಗಳನ್ನು ಗುರುತಿಸಲಾಗಿದ್ದು, ಅವು ನಗರ ಠಾಣೆ, ವಿಸ್ತರಣಾ ಠಾಣೆ ಹಾಗೂ ಪಿಂಚಣಿ ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುತ್ತವೆ ಎಂದು ಹಾಸನ ಉಪ ಪೊಲೀಸ್ ವರಿಷ್ಠಾಧಿಕಾರಿ ಜಿ.ವಿ. ಉದಯಭಾಸ್ಕರ್ ಅವರು ತಿಳಿಸಿದರು. “ಕ್ಯಾಮೆರಾಗಳನ್ನು ಅಳವಡಿಸಲು ನಾವು ಈ ಅಂಗಡಿಗಳ ಮಾಲೀಕರಿಗೆ ನೋಟಿಸ್ ನೀಡಿದ್ದೇವೆ. ಅವರಲ್ಲಿ ಐದು ಮಂದಿ ಸಮಯ ಕೇಳುತ್ತಿದ್ದಾರೆ ಮತ್ತು ಅವರಿಗೆ ನೋಟೀಸ್ ಅನ್ನು ಎರಡು ಬಾರಿ ಸಲ್ಲಿಸಿದ್ದೆವೆ. ಅವರು ನಮ್ಮ ಮೂರನೇ ನೋಟಿಸ್‌ಗೆ ಪ್ರತಿಕ್ರಿಯಿಸಲು ವಿಫಲವಾದರೆ ಅವರಿಗೆ 5,000 ರೂಪಾಯಿ ದಂಡ ವಿಧಿಸಲಾಗುವುದು., ಅದರ ನಂತರ ಪ್ರತಿಕ್ರಿಯೆ ನೀಡದಿದ್ದರೆ 10 ಸಾವಿರ ರೂಪಾಯಿ ದಂಡ ಹಾಗೂ ಕಾನೂನು ಪ್ರಕ್ರಿಯೆಯನ್ನು ಅನುಸರಿಸಬೇಕಾಗುತ್ತದೆ ಎಂದು ಡಿಸಿಪಿ ಹೇಳಿದರು‌. ನಗರದಲ್ಲಿ ಅಂಗಡಿ ಹಾಗೂ ಮನೆಗಳಿಗೆ ಕ್ಯಾಮೆರಾಗಳನ್ನು ಅಳವಡಿಸುವಂತೆ ನಾವು ಮನವೊಲಿಸುತ್ತಿದ್ದೆವೆ. ಇಂದಿನಂತೆ ನಗರ ವ್ಯಾಪ್ತಿಯಲ್ಲಿ 333 ಕ್ಯಾಮೆರಾಗಳಿವೆ ಎಂದು ಅವರು ವಿವರಿಸಿದರು.
ಕೆಲವು ಸಂದರ್ಭಗಳಲ್ಲಿ ಕಳ್ಳರು ಡಿವಿಆರ್‌ಗಳೊಂದಿಗೆ ಪರಾರಿಯಾಗಿದ್ದಾರೆ. ಕನಿಷ್ಠ ಮೂರು ತಿಂಗಳ ಕಾಲ ಕ್ಲೌಡ್‌ನಲ್ಲಿ ಡೇಟಾವನ್ನು ಉಳಿಸಲು ಮಾಲೀಕರಿಗೆ ನಿರ್ದೇಶನ ನೀಡಲಾಗಿದೆ ಎಂದು ” ಎಸ್‌ಪಿ ಆರ್. ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.

ಜ್ಯೂನಿಯರ್ ವಿಶ್ವಕಪ್ ಹಾಕಿ : ಭಾರತ ಜಯದ ಹೆಜ್ಜೆ

0

ಜೂನಿಯರ್ ವಿಶ್ವಕಪ್ ಹಾಕಿ ಟೂರ್ನಿಯ ಎರಡನೇ ಪಂದ್ಯದಲ್ಲಿ ಭಾರತ ಮತ್ತು ಕೆನಡಾ ತಂಡಗಳ ನಡುವೆ ಪಂದ್ಯ ನಡೆಯಿತು.

ಭುವನೇಶ್ವರದ ಕಳಿಂಗಾ ಮೈದಾನದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಕೆನಡಾ ವಿರುದ್ಧ ಭಾರತ ತಂಡವು 13-1ರಲ್ಲಿ ಭರ್ಜರಿ ಜಯ ದಾಖಲಿಸಿತು.

ಮೊದಲ ಪಂದ್ಯದಲ್ಲಿ ನೀರಸ ಆಟವಾಡಿ ಸೋಲಿಗೆ ಶರಣಾಗಿದ್ದ ಭಾರತ ತಂಡ FIH ಜೂನಿಯರ್ ವಿಶ್ವಕಪ್ ಹಾಕಿ ಟೂರ್ನಿಯ ಎರಡನೇ ಪಂದ್ಯದಲ್ಲಿ ಗೆಲುವು ಸಾಧಿಸಿದೆ.

ನಾಯಕ ವಿವೇಕ್ ಪ್ರಸಾದ್ ಸಾಗರ್, ಮಣಿಂದರ್ ಸಿಂಗ್, ಶಾರದಾನಂದ ತಿವಾರಿ, ಹುಂಡಾಲ ಅರಿಜೀತ್ ಸಿಂಗ್ ಮತ್ತು ಅಭಿಷೇಕ್ ಲಕ್ರಾ ಅವರು ಗೋಲು ಬಾರಿಸಿದರು. ಸಂಜಯ್ ಮತ್ತು ಮುಂದಾಲ ಹರಿಜೀತ್ ಸಿಂಗ್ ಗಳಿಸಿದ ಹ್ಯಾಟ್ರಿಕ್ ಗೋಲು ಹಾಗೂ ಉತ್ತಮ ಸಿಂಗ್ ಗಳಿಸಿದ ಎರಡು ಗೋಲುಗಳಿಂದ ಭಾರತ ತಂಡದ ಗೆಲುವಿಗೆ ಪ್ರಮುಖ ಕಾರಣವಾಯಿತು.

ಪಂದ್ಯದ ಆರನೇ ನಿಮಿಷದಲ್ಲಿಯೇ ಗೋಲು ಬಾರಿಸುವ ಮೂಲಕ ಖಾತೆ ತೆರೆದ ಭಾರತ ತಂಡ ಕೆನಡಾ ತಂಡದ ದುರ್ಬಲ ರಕ್ಷಣಾ ಪಡೆಗೆ ಯಾವುದೇ ಅವಕಾಶ ನೀಡದಂತೆ ಗೋಲುಗಳ ಸುರಿಮಳೆ ಸುರಿಸುವ ಮೂಲಕ ಭಾರತದ ಆಟಗಾರರು ಮೇಲುಗೈ ಸಾಧಿಸಿದರು.

ಮೊದಲ ಟೆಸ್ಟ್ ನಲ್ಲಿ ಶ್ರೇಯಸ್ ಸೆಂಚುರಿ

0

ಮೊದಲ ಕ್ರಿಕೆಟ್ ಟೆಸ್ಟ್ ಪಂದ್ಯವು ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆಯುತ್ತಿದೆ. ಖಾನ್ಪುರದ ಗ್ರೀನ್ ಪಾರ್ಕ್ ನಲ್ಲಿ ಗುರುವಾರ ಆರಂಭವಾದ ಮೊದಲ ಟೆಸ್ಟ್ ನಲ್ಲಿ ಭಾರತ ತಂಡವು ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು.

ಬೆಳಗ್ಗೆ ಪಂದ್ಯ ಆರಂಭಕ್ಕೂ ಮುನ್ನ ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಅವರು ಶ್ರೇಯಸ್ ಗೆ ಟೆಸ್ಟ್ ಕ್ಯಾಪ್ ನೀಡಿ ಶುಭಕೋರಿದರು.

ಟಾಸ್ ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 84 ಓವರ್ ಗಳಲ್ಲಿ 4 ವಿಕೆಟ್ ಗಳ ಪತನಕ್ಕೆ 258 ರನ್ ಗಳಿಸಿತ್ತು. ಮೊದಲನೇ ವಿಕೆಟ್ ಹಂತದಲ್ಲಿ ಆಡಿದ ಗಿಲ್ ಮತ್ತು ಚೇತೇಶ್ವರ ಪೂಜಾರ ನ್ಯೂಜಿಲ್ಯಾಂಡ್ ತಂಡದ ಕೈಲ್ ಜಮಿಸನ್ ಅವರ ಸ್ವಿಂಗ್ ಎಸೆತಗಳಿಂದ ನಿಧಾನಗತಿಯಲ್ಲಿ ಚಂಡುಗಳನ್ನು ಎದುರಿಸಿ 88 ಎಸೆತಗಳಲ್ಲಿ 26ರನ್ ಗಳಿಸಿಕೊಂಡು ಬಹಳ ಎಚ್ಚರಿಕೆಯ ಆಟವಾಡಿದರು.

ಎರಡನೇ ವಿಕೆಟ್ ಜೊತೆಯಾಟದಲ್ಲಿ ಅವರು 61 ರನ್ ಸೇರಿಸಿದರು. 9 ನೇಯ ಪಂದ್ಯವಾಡಿದ ಗಿಲ್ 4 ನೇ ಅರ್ಧಶತಕ ಪೂರೈಸಿದರು.22 ನೇ ಓವರ್ ನಲ್ಲಿ ಲಭಿಸಿದ ಜೀವ ದಾನವನ್ನು ಸಮರ್ಪಕವಾಗಿ ಬಳಸಿಕೊಂಡರು. ಆದರೆ ಊಟದ ವಿರಾಮದ ನಂತರ ಕೈಲ್ ಜಮಿಸನ್ ಬಿರುಗಾಳಿಗೆ ಕುಸಿಯುತ್ತಿದ್ದ ತಂಡಕ್ಕೆ ಬಲತುಂಬಲು ಗಿಲ್ 93 ಎಸೆತಗಳಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್ ಸಿಡಿಸಿ 52 ರನ್ ಗಳಿಸಿದರು. ವೇಗಿ ಕೈಲ್ ಅವರ ಬೌಲಿಂಗ್ ಗೆ ಕ್ಲೀನ್ ಬೋಲ್ಡ್ ಆಗಿ ಔಟಾದರು. ನಂತರ ಪೂಜಾರ ಜೊತೆಗೂಡಿದ ನಾಯಕ ಅಜಿಂಕ್ಯಾ ರಹಾನೆ 63 ಎಸೆತಗಳಲ್ಲಿ 35 ರನ್ ಗಳಿಸುವ ಮೂಲಕ ಕೈಲ್ ಜಮಿಸನ್ ಅವರ ಬೌಲಿಂಗ್ ದಾಳಿಗೆ ರಹಾನೆ ಬೋಲ್ಡ್ ಆದರು.

5ನೇ ವಿಕೆಟ್ ಜೊತೆಯಾಟಕ್ಕೆ ಕಣಕ್ಕೆ ಕಾಲಿಟ್ಟು ಬ್ಯಾಟಿಂಗ್ ಆರಂಭಿಸಿದ ಶ್ರೇಯಸ್ ಅಯ್ಯರ್ ಮತ್ತು ರವೀಂದ್ರ ಜಡೇಜಾ ಅವರ ಬ್ಯಾಟಿಂಗ್ ಅಮೋಘವಾಗಿತ್ತು. ಶ್ರೇಯಸ್ 136 ಎಸೆತಗಳಲ್ಲಿ 7 ಬೌಂಡರಿ ಹಾಗೂ ಎರಡು ಸಿಕ್ಸರ್ ಸಿಡಿಸುವ ಮೂಲಕ 75 ರನ್ ಗಳನ್ನು ಗಳಿಸಿಕೊಂಡರು ಹಾಗೂ ರವೀಂದ್ರ ಜಡೇಜಾ 50 ರನ್ ಗಳಿಸಿ ಜೊತೆಯಾಟ ಮುರಿಯದೆ 113 ರನ್ಗಳನ್ನು ತಂಡಕ್ಕೆ ಸೇರಿಸಿದರು. ಇದರಿಂದಾಗಿ 145 ರನ್ ಗಳಿಗೆ ನಾಲ್ಕು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಭಾರತ ತಂಡವನ್ನು ಪಾರುಮಾಡಿದರು.

ಇದರಿಂದಾಗಿ ತಂಡದ ಶ್ರೇಯಸ್ ಅಯ್ಯರ್ ತಮ್ಮ ಪದಾರ್ಪಣೆಯ ಟೆಸ್ಟ್ ಪಂದ್ಯದಲ್ಲಿ ತಂಡಕ್ಕೆ ಆಸರೆಯಾದರು. ರವೀಂದ್ರ ಜಡೇಜಾ ಜೊತೆಗೆ ದಶಕದ ಜೊತೆಯಾಟವನ್ನು ಆಡಿದ ಮುಂಬೈ ಹುಡುಗ ಆತಿಥೇಯ ತಂಡಕ್ಕೆ ಮೊದಲ ದಿನದ ಆಟದಲ್ಲಿ ಉತ್ತಮ ರನ್ ಗಳಿಕೆಗೆ ಪ್ರಮುಖ ಕಾರಣರಾದರು.

ಜನಜಾಗೃತಿಗೆ ಯಕ್ಷಗಾನ ಕಲೆ

0

ಹೊಸನಗರ ರಾಮಚಂದ್ರಾಪುರ ಮಠದ ಸಭಾಂಗಣದಲ್ಲಿ ಯಕ್ಷಗಾನ ಕಾರ್ಯಕ್ರಮ ನೆರವೇರಿತು. ಈ ಪ್ರದರ್ಶನದಲ್ಲಿ ರಮೇಶ್ ಹೆಗಡೆ ಗುಂಡೂಮನೆ ರಚಿಸಿದ ನೂತನ ಯಕ್ಷಪ್ರಸಂಗ ‘ಸಿರಿಧೇನು ಮಹಿಮಾ’ ಪುಸ್ತಕ ಬಿಡುಗಡೆಗೊಳಿಸಲಾಯಿತು.

ರಾಜರಾಜೇಶ್ವರಿ ಕೃಪಾಪೋಷಿತ ವಂಶವಾಹಿನಿ ಯಕ್ಷ ಮೇಳ ಗುಂಡೂಮನೆಯವರು ಏರ್ಪಡಿಸಿದ್ದರು. ಈ ಸೇವೆಯಾಟ ದಲ್ಲಿ ರಮೇಶ್ ಹೆಗಡೆ ರಚಿಸಿರುವ ನೂತನ ಯಕ್ಷ ಕೃತಿ ಪ್ರತಿಯನ್ನು ಬಿಡುಗಡೆಗೊಳಿಸಲಾಯಿತು.

‘ಅತ್ಯಂತ ಸುಲಭವಾಗಿ ಜನರಲ್ಲಿ ಜಾಗೃತಿ ಮೂಡಿಸುವ ಶಕ್ತಿ ಯಕ್ಷಗಾನ ಕಲೆ ಹೊಂದಿದೆ’ ಎಂದು ಗೋಕರ್ಣ ಶ್ರೀರಾಮಚಂದ್ರಾಪುರ ಮಠದ ಶ್ರೀ. ಗಜಾನನ ಭಟ್ ತಿಳಿಸಿದರು.

ಹೊಸನಗರ ಪ್ರಧಾನ ಮಠದ ವ್ಯವಸ್ಥಾಪಕ ರಾಘವೇಂದ್ರ ಮಧ್ಯಸ್ಥ, ಮಹಾನಂದಿ ಗೋ ಲೋಕದ ಕೃಷ್ಣಪ್ರಸಾದ್ ಎಡಪಾಡಿ, ವಂಶವಾಹಿನಿ ಭಾಗವತರಾದ ಸೂರ್ಯನಾರಾಯಣ ಹೆಗಡೆ ಇನ್ನೂ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ದೇಶದಲ್ಲಿ ಪೌಷ್ಟಿಕಾಂಶದ ಕೊರತೆ : ಯೋಜನೆಗಳನ್ನ ಅನುಷ್ಠಾನಗೊಳಿಸಿ

0

ಪೌಷ್ಟಿಕಾಂಶಯುಕ್ತ ಹಾಗೂ ಹಸಿವು ಮುಕ್ತ ರಾಷ್ಟ್ರ ನಿರ್ಮಾಣ ಇಂದಿನ ತುರ್ತು ಅಗತ್ಯ ಎಂದು ನವದೆಹಲಿ ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ಮಹಾ ನಿರ್ದೇಶಕ ಡಾ.ಆರ್.ಸಿ. ಅಗರ್ವಾಲ್ ಅವರು ಹೇಳಿದರು.
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ವಿವಿ ಆವರಣದಲ್ಲಿ ಏರ್ಪಡಿಸಲಾಗಿದ್ದ 6ನೇ ಘಟಿಕೋತ್ಸವದಲ್ಲಿ ಭಾಗವಹಿಸಿದ್ದರು.
ದೇಶದಲ್ಲಿ ಪ್ರತಿಯೊಬ್ಬರಿಗೂ ಗುಣಮಟ್ಟದ ಪೌಷ್ಟಿಕಾಂಶಯುಕ್ತ ಆಹಾರ ಲಭಿಸಬೇಕು. ದೇಶದಲ್ಲಿನ ಪೌಷ್ಟಿಕಾಂಶದ ಕೊರತೆಯನ್ನು ನೀಗಿಸುವಲ್ಲಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಬೇಕು. ಆ ಗ ಮೂಲಕ ಜಾಗತಿಕವಾಗಿ ದೇಶವನ್ನು ಗುರುತಿಸಿಕೊಳ್ಳುವ ಸ್ಥಾನಕ್ಕೆ ಕೊಂಡೊಯ್ಯುಬೇಕು. ಈ ಜವಾಬ್ದಾರಿ ಪ್ರತಿಯೊಬ್ಬರದ್ದು ಆಗಿದೆ ಎಂದರು.
ದೇಶದಲ್ಲಿ ಲಭಿಸುತ್ತಿರುವ ನೀರಿನಲ್ಲಿ ಶೇ.25ರಷ್ಟು ನೀರನ್ನು ಮಾತ್ರ ಬಳಸಲಾಗುತ್ತಿದೆ. ಶೇಕಡ 75ರಷ್ಟು ನೀರನ್ನು ವ್ಯರ್ಥವಾಗಿ ಸಮುದ್ರಗಳಿಗೆ ಹರಿಸಲಾಗುತ್ತಿದೆ. ಈ ನೀರನ್ನು ಸದ್ವಿನಿಯೋಗ ಮಾಡಿಕೊಳ್ಳಬೇಕು. ಕಡಿಮೆ ನೀರಿನಲ್ಲಿ ಉತ್ತಮ ಬೆಳೆ ಹಾಗೂ ಇಳುವರಿಯನ್ನು ಪಡೆದು, ಆಹಾರ ಉತ್ಪಾದನೆಯಲ್ಲಿ ಹಾಗೂ ಆಹಾರ ಸಂಸ್ಕರಣೆಯಲ್ಲಿ ಭಾರತ ಸ್ವಾವಲಂಬನೆ ಸಾಧಿಸಬೇಕೆಂದರು.
ಬಹು ಸಂಖ್ಯೆಯ ಜನರು ಕೃಷಿ ಕ್ಷೇತ್ರದಿಂದ ವಿಮುಖರಾಗುತ್ತಿದ್ದಾರೆ. ಕೃಷಿ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿವೆ. ವಿಮುಖರಾಗಿರುವ ಯುವಕರು ಕೃಷಿ ಕ್ಷೇತ್ರದಲ್ಲಿನ ಸಮಸ್ಯೆ-ಸವಾಲುಗಳನ್ನು ಎದುರಿಸಿ, ಕೃಷಿಯನ್ನು ಲಾಭದಾಯಕ ಉದ್ಯಮವನ್ನಾಗಿ ಪರಿವರ್ತಿಸಬೇಕು. ಅಲ್ಲದೆ ತಂತ್ರಜ್ಞಾನದ ಅಳವಡಿಕೆಯಿಲ್ಲದೇ ಕೃಷಿಯಲ್ಲಿ ನಿರೀಕ್ಷಿತ ಪ್ರಗತಿ ಕಷ್ಟಸಾಧ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ಆವಿಷ್ಕಾರಗೊಂಡಿರುವ ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಮುಂದುವರಿಯುವಂತೆ ಸಲಹೆ ನೀಡಿದರು.


ಈ ಘಟಿಕೋತ್ಸವದಲ್ಲಿ ಇದೇ ಮೊದಲ ಬಾರಿಗೆ ವಿಶ್ವವಿದ್ಯಾಲಯದ ವತಿಯಿಂದ ಹೈದರಾಬಾದ್ ನ ಭಾರತ ಬಯೋಟಿಕ್ ಸಂಸ್ಥೆಯ ಸಂಸ್ಥಾಪಕ ಡಾ. ಕೃಷ್ಣಮೂರ್ತಿ ಎಲ್ಲಾ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.ಇದರೊಂದಿಗೆ ಕೃಷಿ ಮತ್ತು ತೋಟಗಾರಿಕೆ ವಿವಿಯ ಸಂಶೋಧನಾರ್ಥಿಗಳಿಗೆ ಡಾಕ್ಟರೇಟ್ ಹಾಗೂ ವಿವಿಧ ನಿಕಾಯಗಳ ಪದವೀಧರ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.
ಕೇಂದ್ರ ಸರ್ಕಾರವು ಅನುಷ್ಠಾನಕ್ಕೆ ತಂದಿರುವ ಹೊಸ ಶಿಕ್ಷಣ ನೀತಿಯನ್ನು ದೇಶದ ಎಲ್ಲಾ ರಾಜ್ಯಗಳು ಅಳವಡಿಸಿಕೊಳ್ಳಬೇಕು. ಈ ಶಿಕ್ಷಣ ನೀತಿಯನ್ನು ಬೈಬಲ್ ನಂತೆ ಜತನದಿಂದ ಕಾಪಾಡಿಕೊಳ್ಳುವ ಜೊತೆಗೆ ಅಧ್ಯಯನ ಮಾಡಬೇಕು. ಈ ನೀತಿಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ. ಇದರಿಂದಾಗಿ ಯುವಸಮೂಹಕ್ಕೆ ಹೆಚ್ಚಿನ ಉದ್ಯೋಗಾವಕಾಶಗಳು ಲಭ್ಯವಾಗಲಿದೆ ಎಂದು ಅಗರ್ವಾಲ್ ರವರು ತಿಳಿಸಿದರು.
ರಾಜ್ಯದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ನವಿಲೆಯ ವಿವಿ ಆವರಣದಲ್ಲಿ ಏರ್ಪಡಿಸಲಾಗಿದ್ದ ಘಟಿಕೋತ್ಸವ ಸುಗ್ಗಿ ಸಂಭ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಯ ಕುಲಪತಿ ಡಾ.ಎಂ.ಕೆ.ನಾಯ್ಕ್., ಕುಲಸಚಿವ ಡಾ. ಆರ್. ಲೋಕೇಶ್ ಸೇರಿದಂತೆ ವ್ಯವಸ್ಥಾಪನ ಮಂಡಳಿಯ ಸದಸ್ಯರು, ವಿಶ್ವವಿದ್ಯಾಲಯದ ಉಪನ್ಯಾಸಕರು, ಪದಕದ ದಾನಿಗಳು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

ನೋಯ್ಡಾ ವಿಮಾನ ನಿಲ್ದಾಣ: ಏಷ್ಯಾದಲ್ಲೇ ಪ್ರಥಮ ವಾಗಲಿದೆ.

0

ಏಷ್ಯಾದಲ್ಲೇ ಅತಿ ದೊಡ್ಡ ವಿಮಾನ ನಿಲ್ದಾಣದ ಶಂಕುಸ್ಥಾಪನಾ ಕಾರ್ಯಕ್ರಮ ಉತ್ತರಪ್ರದೇಶದ ಜೆವರ ನಲ್ಲಿ ನಡೆಯಿತು. ಶಂಕು ಸ್ಥಾಪನೆಯನ್ನು ಮಾನ್ಯ ನರೇಂದ್ರ ಮೋದಿ ಅವರು ನೆರವೇರಿಸಿದರು.

” ಯಾವುದೇ ಅಭಿವೃದ್ಧಿ ಕಾರ್ಯಕ್ರಮ ಅಥವಾ ಯೋಜನೆ ಅರ್ಧಕ್ಕೆ ನಿಲ್ಲಬಾರದು. ಕಳೆದ ಏಳು ವರ್ಷಗಳ ಮುನ್ನ ನಿರ್ಲಕ್ಷಕ್ಕೆ ತುತ್ತಾಗಿ ಕತ್ತಲೆಯಲ್ಲಿ ಮುಳುಗಿದ್ದ ಉತ್ತರ ಪ್ರದೇಶವು ಡಬಲ್ ಎಂಜಿನ್ ಬಿಜೆಪಿ ಸರಕಾರದ ಆಡಳಿತದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಖ್ಯಾತಿ ಗಳಿಸಿದೆ. ಈ ಖ್ಯಾತಿಯನ್ನು ಇನ್ನಷ್ಟು ಉತ್ತುಂಗಕ್ಕೆ ಏರಿಸುವುದು ನಮ್ಮ ಗುರಿ” ಎಂದು ಮಾನ್ಯ ಪ್ರಧಾನಿ ಅವರು ತಿಳಿಸಿದ್ದಾರೆ.

ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಅವರು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ನಿರ್ದೇಶನದಂತೆ ಇಲ್ಲಿ ವಿಮಾನ ನಿಲ್ದಾನ ನಿರ್ಮಾಣವಾಗಲಿದೆ ಎಂದು ಹೇಳಿದರು.

ಕೊನೆಯ ಹಂತದ ನಿರ್ಮಾಣ ಪ್ರಕ್ರಿಯೆ ಮುಗಿದ ನಂತರ ಈ ನಿಲ್ದಾಣವು ದೆಹಲಿ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮೀರಿಸಲಿದೆ. ಏಷ್ಯಾದ ಅತಿ ದೊಡ್ಡ ವಿಮಾನ ನಿಲ್ದಾಣ ಎಂಬ ಹಿರಿಮೆಗೆ ಪಾತ್ರವಾಗಲಿದೆ. ಉತ್ತರ ಪ್ರದೇಶದಲ್ಲಿ ಈ ಹಿಂದೆ ಕೇವಲ ನಾಲ್ಕು ವಿಮಾನ ನಿಲ್ದಾಣಗಳಿದ್ದವು. ಈಗ 9 ನಿಲ್ದಾಣ ಗಳು ಕಾರ್ಯನಿರ್ವಹಿಸುತ್ತಿವೆ. ಹತ್ತನೇ ವಿಮಾನ ನಿಲ್ದಾಣ ನಿರ್ಮಿಸಲು ಚಾಲನೆ ನೀಡಲಾಗಿದೆ ಎಂದು ಸಿಂಧಿಯಾ ತಿಳಿಸಿದರು.

ಮೊದಲ ಹಂತದ ನಿರ್ಮಾಣ ಕಾರ್ಯಕ್ಕೆ 34 ಸಾವಿರ ಕೋಟಿ ಹೂಡಿಕೆ ಆಗಲಿದೆ. ಪ್ರಥಮ ಹಂತದಲ್ಲಿ ವಾರ್ಷಿಕ 1.2 ಕೋಟಿ ಪ್ರಯಾಣಿಕರ ನಿರ್ವಹಣೆಯ ಸಾಮರ್ಥ್ಯವನ್ನು ಹೊಂದಿರಲಿದೆ. ನಿಲ್ದಾಣದ ವ್ಯಾಪ್ತಿ ಐದು ಸಾವಿರ ಹೆಕ್ಟೇರ್ ಪ್ರದೇಶದಲ್ಲಿದೆ. ಕಾಮಗಾರಿಯು 2024 ಕ್ಕೆ ಮುಗಿಯಲಿದೆ ಎಂದು ತಿಳಿದುಬಂದಿದೆ.

ಜನಮನಗೆದ್ದಿರುವ ಡಾ.ವೀರೇಂದ್ರ ಹೆಗ್ಗಡೆ.

0

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ 74ನೇ ಜನ್ಮದಿನವನ್ನು ಸರಳವಾಗಿ ಆಚರಿಸಲಾಯಿತು.
ಚತುರ್ವಿಧ ದಾನದೊಂದಿಗೆ ಕ್ಷೇತ್ರದ ಕಾರ್ಯವನ್ನು ಅರ್ಥಪೂರ್ಣವಾಗಿ ನಡೆಸುತ್ತಿರುವ ಧರ್ಮಾಧಿಕಾರಿಯವರ ಧರ್ಮ ಕಾರ್ಯಗಳು, ಜನ ಕಲ್ಯಾಣ ಯೋಜನೆಗಳು ವಿಶ್ವವ್ಯಾಪ್ತಿಯಾಗಿದೆ ಮತ್ತು ಜನಮನ್ನಣೆ ಗಳಿಸಿವೆ. ಇವರ ಜನಪರ ಕಾಳಜಿ ಸ್ತುತ್ಯರ್ಹ,”ಎಂದು ಶ್ರೀ ಚಾರುಕೀರ್ತಿ ದಿವಾಕರ ಪಂಡಿತಾಚಾರ್ಯ ಸ್ವಾಮೀಜಿ ಹರಸಿ ಸ್ತುತಿಸಿದರು.
ಊರಿನ ನಾಗರಿಕರು, ದೇವಳದ ನೌಕರರು, ಗಣ್ಯರು, ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ, ಆಪ್ತರು, ಅಭಿಮಾನಿಗಳು ಮತ್ತು ಭಕ್ತರು ಶ್ರದ್ಧಾಭಕ್ತಿಯಿಂದ ಡಾ. ಹೆಗಡೆಯವರಿಗೆ ಶುಭಾಶಯ ಸಲ್ಲಿಸಿದರು.
ಹಿಂದಿನ ಧರ್ಮಾಧಿಕಾರಿಯಾಗಿದ್ದ ಕೀರ್ತಿಶೇಷ ರತ್ನವರ್ಮ ಹೆಗಡೆ, ರತ್ನಮ್ಮ ದಂಪತಿಯ ಜೇಷ್ಠ ಪುತ್ರರಾಗಿರುವ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ತಮ್ಮ 20ನೇ ವಯಸ್ಸಿನಲ್ಲಿ ಅಂದರೆ 1968ರ ಅ. 24ರಂದು ಧರ್ಮ ಸಮನ್ವಯತೆಯ ನೆಲೆವೀಡು ಶ್ರೀ ಕ್ಷೇತ್ರ ಧರ್ಮಸ್ಥಳದ 21ನೇ ಧರ್ಮಾಧಿಕಾರಿಯಾಗಿ ಪಟ್ಟಾಭಿಷಿಕ್ತರಾದರು. ಡಾ. ವೀರೇಂದ್ರ ಹೆಗ್ಗಡೆ ಅವರ ಜನಪರ ಕಾರ್ಯಗಳು ಕ್ಷೇತ್ರದ ಅಭಿವೃದ್ಧಿ ಎಲ್ಲರಿಗೂ ಮಾದರಿಯಾಗಿದೆ. ಸುಮಾರು ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆ ಹೊಂದಿರುವ ಧರ್ಮಸ್ಥಳ ಇಂದು ಜಾಗತಿಕ ಮಟ್ಟದಲ್ಲಿ ಮನ್ನಣೆ, ಮಾನ್ಯತೆ ಪಡೆದಿದೆ. ಧರ್ಮಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಡಾ. ಹೆಗಡೆಯವರು ಹಿರಿಯರು ಹಾಕಿಕೊಟ್ಟ ಪರಂಪರೆ, ಮಾರ್ಗದರ್ಶನದಲ್ಲಿ ಮುನ್ನಡೆದು ತಮ್ಮ ಆಡಳಿತ ವೈಖರಿ, ಅನುಪಮ ಸೇವೆ, ಧರ್ಮ ಮತ್ತು ಪರಂಪರೆಯ ರಕ್ಷಣೆಗಳೊಂದಿಗೆ ವಿಜ್ಞಾನ ಹಾಗೂ ತಂತ್ರಜ್ಞಾನದ ನಿತ್ಯದ ಬಳಕೆ ಕೂಡ ಇವರ ಹಿರಿಮೆಯಾಗಿದೆ.ಸಮಾಜ ಸೇವಾ ಕ್ಷೇತ್ರದಲ್ಲಿಯೂ ಕೂಡ ಅವರು ಸಲ್ಲಿಸುತ್ತಿರುವ ಸೇವೆ ಅನನ್ಯ. ಗ್ರಾಮೀಣಾಭಿವೃದ್ಧಿಯ ಕಲ್ಪನೆಯನ್ನ ಸಾಕ್ಷಾತ್ಕಾರ ಗೊಳಿಸುತ್ತಿರುವ ಅವರ ಸಂಕಲ್ಪಶಕ್ತಿ ಮಾದರಿಯಾಗಿದೆ.
ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಕಿಕೊಂಡಿರುವ ಅನೇಕ ಗ್ರಾಮೋದ್ಧಾರ ಯೋಜನೆಗಳು ಇತರ ಸಂಸ್ಥೆಗಳಿಗೆ ಆದರ್ಶವಾಗಿವೆ‌.