Saturday, February 7, 2026
Saturday, February 7, 2026
Home Blog Page 1858

ಉದ್ಯೋಗಕ್ಕೆ ಬೆಂಗಳೂರು ಪ್ರಶಸ್ತ ನಗರ

0

ಒಂದಲ್ಲಾ ಒಂದು ಪ್ರಶಂಸೆಯ ಗರಿಗೆ ಪಾತ್ರವಾಗಿರುವ ರಾಜ್ಯ ರಾಜಧಾನಿ ಬೆಂಗಳೂರು ಈಗ ಉದ್ಯೋಗ ಮತ್ತು ಆರ್ಥಿಕ ಪ್ರಗತಿಯ ದೃಷ್ಟಿಯಿಂದ ದೇಶದಲ್ಲೇ ಅತ್ಯುತ್ತಮ ನಗರವಾಗಿದೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಈ ಬಗ್ಗೆ ನೀತಿ ಆಯೋಗ ಮೊಟ್ಟ ಮೊದಲ ಬಾರಿಗೆ ‘ಸಸ್ಟೈನೆಬಲ್ ಡೆವಲಪ್ಮೆಂಟ್ ಗೋಲ್ಸ್’ ಸೂಚ್ಯಂಕದಲ್ಲಿ ಬೆಂಗಳೂರು, ಉದ್ಯೋಗ ಮತ್ತು ಆರ್ಥಿಕ ಬೆಳವಣಿಗೆ ವಿಭಾಗದಲ್ಲಿ ಅಗ್ರಸ್ಥಾನ ಪಡೆದಿದೆ.

ನೀತಿ ಆಯೋಗದ ಸಮೀಕ್ಷೆಯ ಪ್ರಕಾರ ಇಡೀ ದೇಶದಲ್ಲಿಯೇ ಉತ್ತಮ ಉದ್ಯೋಗ ಸೃಷ್ಟಿ ಮತ್ತು ಆರ್ಥಿಕ ಬೆಳವಣಿಗೆಯಲ್ಲಿ ಒಟ್ಟು 56 ನಗರಗಳಲ್ಲಿ ಬೆಂಗಳೂರು ಗರಿಷ್ಠ 79 ಅಂಕಗಳಿಸುವ ಮೂಲಕ ಮೊದಲ ಸ್ಥಾನದಲ್ಲಿದೆ. 64 ಅಂಕಗಳಿಸಿ ಛತ್ತೀಸ್ಗಡ್ ರಾಜಧಾನಿ ರಾಯ್ಪುರ ಎರಡನೇ ಸ್ಥಾನ ಪಡೆದಿದೆ ಹಾಗೂ ವಾಣಿಜ್ಯ ರಾಜಧಾನಿ ಎಂದೇ ಹೆಸರುವಾಸಿಯಾಗಿರುವ ಮುಂಬೈ 17ನೇ ಸ್ಥಾನದಲ್ಲಿದೆ.

ನೌಕಾಪಡೆಗೆ ಮತ್ತಷ್ಟು ಬಲ : ಐಎನ್ಎಸ್ ವೇಲಾ

0

ಭಾರತದ ನೌಕಾಪಡೆಗೆ ಮತ್ತಷ್ಟು ಬಲ ತುಂಬಲಿದೆ ದೇಶೀಯ ನಿರ್ಮಿತ ‘ಐ ಎನ್ ಎಸ್ ವೇಲಾ’ ಜಲಾಂತರ್ಗಾಮಿ ನೌಕೆ.

ಸ್ಕಾರ್ಪಿನ್ ಶ್ರೇಣಿಯ ಈ ಜಲಾಂತರ್ಗಾಮಿಯನ್ನು ಪ್ರಾಜೆಕ್ಟ್ 75 ರ ಅಡಿಯಲ್ಲಿ ನಿರ್ಮಿಸಲಾಗಿದೆ.
ಪ್ರಾಜೆಕ್ಟ್ 75 ಅಡಿಯಲ್ಲಿ ನೌಕಾಪಡೆಯ ಸೇರ್ಪಡೆಯಾದ ನಾಲ್ಕನೇ ಜಲಾಂತರ್ಗಾಮಿ ಇದಾಗಿದೆ. ಸಾಗರದಾಳದಲ್ಲಿ ವೈರಿ ಪಡೆಗಳ ವಿರುದ್ಧದ ಸಮರದ ಪೂರ್ಣ ಚಿತ್ರಣವನ್ನು ವೇಲಾ ಬದಲಾಯಿಸಲಿದೆ ಎಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್ ತಿಳಿಸಿದ್ದಾರೆ.

ಈ ಜಲಾಂತರ್ಗಾಮಿ ನೌಕೆಯನ್ನು ಪಶ್ಚಿಮ ನೌಕಾದಳದ ಮೂಲಕ ಹಿಂದೂ ಮಹಾಸಾಗರದಲ್ಲಿ ನಿಯೋಜನೆಯ ಮಾಡಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು. ನವೆಂಬರ್ ನಲ್ಲಿ ನೌಕಾಪಡೆಗೆ ದೈತ್ಯಶಕ್ತಿಗಳ ಸೇರ್ಪಡೆಯಾಗಲಿವೆ ಎಂದು ಹೇಳಿದರು.

“ಸದ್ಯ ವೇಲಾದಂತಹ ಅತ್ಯಧಿಕ ಧಾಳಿ ಸಾಮರ್ಥ್ಯದ ಸಬ್ ಮರೀನ್ ಶಕ್ತಿ ನಮಗೆ ಸಿಕ್ಕಿರುವುದು ಹಿಂದೂ ಮಹಾಸಾಗರದಲ್ಲಿ ಭಾರತದ ಸಾಗರ ಗಡಿ ರಕ್ಷಣೆಗೆ ನೆರವಾಗಲಿದೆ” ಎಂದು ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

ಗುತ್ತಿಗೆ ಕಮಿಷನ್ ವ್ಯವಹಾರ : ಪರಿಶೀಲನೆ ಸಿಎಂ

0

ಬಿಟ್ ಕಾಯಿನ್ ಹಗರಣದ ಬೆನ್ನಲ್ಲೇ ರಾಜ್ಯ ಸರ್ಕಾರಕ್ಕೆ ಗುತ್ತಿಗೆದಾರರಿಂದ ಶೇ.40 ಕಮಿಷನ್ ಆರೋಪ ವಿಚಾರಣೆಗೆ ಸಿಎಂ ಬೊಮ್ಮಾಯಿ ಅವರು ತನಿಖೆಗೆ ಮುಂದಾಗಿದ್ದಾರೆ.

ಪ್ರಧಾನಿ ಮೋದಿಯವರಿಗೆ ಕಳೆದ ಜುಲೈ 26ರಂದು ‘ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ಸ್ ಅಸೋಸಿಯೇಷನ್’ ಪತ್ರ ಬರೆದಿತ್ತು. ಗುತ್ತಿಗೆ ಕಾಮಗಾರಿಗಳಲ್ಲಿ ಶೇ.40ರಷ್ಟು ಕಮಿಷನ್ ಬೇಡಿಕೆಗೆ ಒತ್ತಡ ಹೇರಲಾಗುತ್ತಿದೆ ಎಂದು ಪತ್ರದಲ್ಲಿ ಗಂಭೀರವಾಗಿ ಆರೋಪಿಸಿತ್ತು. ನಂತರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೂ ಸಹ ಸಂಘದ ಪದಾಧಿಕಾರಿಗಳ ನಿಯೋಗ ಮನವಿ ಸಲ್ಲಿಸಿತ್ತು.

ಈ ಸಂಬಂಧ ಪ್ರತಿಪಕ್ಷಗಳು ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಟೀಕಿಸಿವೆ. ಸಿಎಂ ಬೊಮ್ಮಾಯಿ ಅವರು ಸಂಬಂಧಪಟ್ಟ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪತ್ರ ಬರೆದಿದ್ದಾರೆ.

ಶೇ.40ರಷ್ಟು ಕಮಿಷನ್ ದಂಧೆ ಬಗ್ಗೆ ಗುತ್ತಿಗೆದಾರರ ಸಂಘದ ಆರೋಪವನ್ನು ಆಧಾರವಾಗಿಟ್ಟುಕೊಂಡು ರಾಜ್ಯ ಸರ್ಕಾರವನ್ನು ವಜಾ ಮಾಡಿ, ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ರಾಜ್ಯಪಾಲರಿಗೆ ಪ್ರತಿಪಕ್ಷ ಕಾಂಗ್ರೆಸ್ ಮನವಿ ಪತ್ರ ಸಲ್ಲಿಸಿದೆ. ಈ ವಿಷಯವನ್ನು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಾಧ್ಯಮದೊಂದಿಗೆ ಹಂಚಿಕೊಂಡಿದ್ದಾರೆ.

ಗುತ್ತಿಗೆದಾರರಿಂದ ಶೇ.40 ಪರ್ಸೆಂಟ್ ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ಬೊಮ್ಮಾಯಿಯವರು ಪ್ರತಿಕ್ರಿಯಿಸಿದ್ದು, “ನಮ್ಮ ಸರ್ಕಾರ ಬಂದ ಮೇಲೆ ಯಾವುದಾದರೂ ಟೆಂಡರ್ ಅಂತಿಮ ಗೊಂಡಿದ್ದರೆ, ಅದನ್ನು ವಿಶೇಷವಾಗಿ ಪರಿಶೀಲನೆ ಮಾಡುವಂತೆ ಸೂಚಿಸಲಾಗಿದೆ. ಇದಕ್ಕಿಂತ ಪಾರದರ್ಶಕತೆ ಇನ್ನೇನು ಬೇಕು?” ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಟೀಕಿಸಿರುವ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯದ ಇತಿಹಾಸದಲ್ಲಿ ಇಂತಹ ಘಟನೆ ನಡೆದಿರಲಿಲ್ಲ. ‘ನಮ್ಮ ಸರ್ಕಾರವಿದ್ದಾಗ ಮೋದಿಯವರು ಟೆನ್ ಪರ್ಸೆಂಟ್ ಸರ್ಕಾರ ಎಂದಿದ್ದರು. ಈ ಹೇಳಿಕೆಗೆ ಯಾವ ಆಧಾರವೂ ಇರಲಿಲ್ಲ. ಆದರೆ, ಈಗ ನಾವು ಕೊಟ್ಟ ದೂರಿನಲ್ಲಿ ಗುತ್ತಿಗೆದಾರರ ಸಂಘ ಬರೆದ ಪತ್ರ ನೀಡಿದ್ದೇವೆ’ ಎಂದು ಹೇಳಿದ್ದಾರೆ.

‘ರಾಜ್ಯಕ್ಕೆ ಕಳಂಕ ಬಂದಿದೆ. ಸರ್ಕಾರವನ್ನು ಕೂಡಲೇ ವಜಾ ಮಾಡಬೇಕು. ಗುತ್ತಿಗೆದಾರರ ಸಂಘದ ದೂರಿನ ಬಗ್ಗೆ ಸುಪ್ರೀಂಕೋರ್ಟ್ ಜಡ್ಜ್ ಅವರಿಂದ ತನಿಖೆ ಆಗಲಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ.

ಕುವೆಂಪು ವಿವಿ : ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

0

ಭಾರತದಲ್ಲಿ ವರ್ಷಕ್ಕೆ ಸುಮಾರು 3 ಲಕ್ಷ ಜನರು ಮಾರಣಾಂತಿಕ ಕ್ಯಾನ್ಸರ್ ಕಾಯಿಲೆಗೆ ತುತ್ತಾಗುತ್ತಿದ್ದಾರೆ ಎಂದು ಮಲ್ನಾಡ್ ಆಸ್ಪತ್ರೆಯ ಕ್ಯಾನ್ಸರ್ ಶಸ್ತ್ರಚಿಕಿತ್ಸಾ ತಜ್ಞ ಡಾ.ರೋಷನ್ ಬಿ.ಎ.ರಾವ್ ಹೇಳಿದರು.
ಕುವೆಂಪು ವಿವಿಯ ಆರೋಗ್ಯ ಕೇಂದ್ರ ಮತ್ತು ಶಿವಮೊಗ್ಗದ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆಯ ಸಹಯೋಗದೊಂದಿಗೆ ಕ್ಯಾನ್ಸರ್ ಕಾಯಿಲೆ ಕುರಿತು ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಆಧುನಿಕ ಜೀವನಶೈಲಿ, ಆಹಾರ ಪದ್ಧತಿ ಮತ್ತು ದುಶ್ಚಟಗಳು ಮಾರಣಾಂತಿಕ ಕ್ಯಾನ್ಸರ್ ಗೆ ಕಾರಣ. ಆದ್ದರಿಂದ , ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳುವುದು ಮತ್ತು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಕ್ಯಾನ್ಸರ್ ತಡೆಯಬಹುದು ಎಂದು ಕುಲಸಚಿವೆ ಜಿ. ಅನುರಾಧ ಅವರು ತಿಳಿಸಿದರು.
ತಂಬಾಕು ಸೇವನೆ, ಮದ್ಯಪಾನ, ಧೂಮಪಾನ, ಜೀವನದ ಒತ್ತಡ, ಡ್ರಗ್ಸ್ ಸೇವನೆ, ದೀರ್ಘಕಾಲದಿಂದ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಕ್ಯಾನ್ಸರ್ ಕಾಯಿಲೆ ಸಾಧ್ಯತೆ ಹೆಚ್ಚು. ಕ್ಯಾನ್ಸರ್ ಪೀಡಿತರಲ್ಲಿ ಬಹುತೇಕರು ತಂಬಾಕು ಸೇವನೆ, ಧೂಮಪಾನ ಮತ್ತು ಮದ್ಯವ್ಯಸನಿಗಳಾಗಿದ್ದಾರೆ.
ಒಂದು ಅಥವಾ ಎರಡು ವಾರಗಳಿಗೂ ಅಧಿಕ ಸಮಯ ಬಾಯಿಯಲ್ಲಿ ಗಾಯ ಗುಣವಾಗದಿರುವುದು, ಧ್ವನಿ ಬದಲಾವಣೆ, ಊಟ ಕಡಿಮೆ ಸೇರುವುದು, ಮೂತ್ರದಲ್ಲಿ ರಕ್ತ ಹೋಗುವಿಕೆ, ಮೂಳೆಗಳಲ್ಲಿ ನೋವು ಮತ್ತು ದೇಹದಲ್ಲಿ ಗಡ್ಡೆಗಳು ಕಾಣಿಸಿಕೊಳ್ಳುವುದು ಕ್ಯಾನ್ಸರ್ ನ ಮುನ್ಸೂಚನೆಗಳಾಗಿವೆ‌. ಆದ್ದರಿಂದ ಆರಂಭಿಕ ಹಂತದಲ್ಲಿ ಚಿಕಿತ್ಸೆ ಪ್ರಾರಂಭಿಸಿದರೆ ಕ್ಯಾನ್ಸರ್ ನಿಂದ ಗುಣಮುಖರಾಗಬಹುದು ಎಂದು ಡಾ.ರೋಷನ್ ಬಿ.ಎ.ರಾವ್ ತಿಳಿಸಿದರು.
ಕಾರ್ಯಕ್ರಮದಲ್ಲಿ ಹಣಕಾಸು ಅಧಿಕಾರಿ ಎಸ್. ರಾಮಕೃಷ್ಣ, ಆರೋಗ್ಯಧಿಕಾರಿ ಡಾ. ಶ್ರೀ ರಕ್ಷಾ, ಮಹಿಳಾ ವೈದ್ಯಾಧಿಕಾರಿ ಡಾ. ಉಷಾರಾಣಿ, ಆಪ್ತಸಮಾಲೋಚಕಿ ರಜಿನಿ, ಹಸಿನಾ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ವರದಕ್ಷಿಣೆ ಹಣ, ಸಮಾಜಸೇವೆಗೆ…

0

ವಿವಾಹದ ಸಂದರ್ಭದಲ್ಲಿ ವಧುವಿನ ಕಡೆಯವರು ವರನಿಗೆ ವರದಕ್ಷಿಣೆ ಕೊಡುವ ಅನಿಷ್ಟ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಆದರೆ ವಧುಯೊಬ್ಬರು ತಮ್ಮ ಮದುವೆಗೆಂದು (ವರದಕ್ಷಿಣೆ) ಇರಿಸಿದ್ದ 75 ಲಕ್ಷ ರೂಗಳನ್ನು ಸಾಮಾಜಿಕ ಕಾರ್ಯಕ್ಕಾಗಿ ನೀಡಿದ್ದಾರೆ.

ರಾಜಸ್ಥಾನದ, ಬಾರ್ಮೇರ್ ಜಿಲ್ಲೆಯ ಉದ್ಯಮಿ ಕಿಶೋರ್ ಸಿಂಗ್ ಕನೋದ್ ಅವರ ಮಗಳ ಅದುವೇ ಇತ್ತೀಚೆಗೆ ನೆರವೇರಿತು. ವಧುವಿನ ಹೆಸರು ಅಂಜಲಿ ಕನ್ವಾರ್ . ತಂದೆ ಕಿಶೋರ್ ಅವರು ಮಗಳ ವಿವಾಹದ ಸಂದರ್ಭದಲ್ಲಿ, ವರನಿಗೆ ವರದಕ್ಷಿಣೆ ರೂಪದಲ್ಲಿ 75 ಲಕ್ಷವನ್ನು ರೂಪಾಯಿಗಳನ್ನು ತೆಗೆದಿರಿಸಿದ್ದರು. ಆದರೆ ಮದುಮಗಳು ಅಂಜಲಿ ಬುದ್ಧಿವಂತಿಕೆಯನ್ನು ಉಪಯೋಗಿಸಿದರು. ಮದುವೆಯ ಹಿಂದಿನ ದಿನ ಆಕೆ, ತಮ್ಮ ತಂದೆಯ ಬಳಿ ಹೋಗಿ ‘ವರದಕ್ಷಿಣೆ ನೀಡಲು ತೆಗೆದಿಟ್ಟ ಹಣವನ್ನು ಬಾಲಕಿಯರ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ ನೀಡಿ’ ಎಂದು ಕೇಳಿಕೊಂಡರು. ಇದಕ್ಕೆ ತಂದೆ ಸಂತೋಷದಿಂದ ಒಪ್ಪಿದರು.

ಮದುವೆಯ ದಿನ ಮಂಟಪದಲ್ಲಿ ಇದರ ಬಗ್ಗೆ ಕಿಶೋರ್ ಘೋಷಣೆ ಮಾಡಿದ್ದರು. ಮಗಳಿಗೆ ಖಾಲಿ ಚೆಕ್ ನೀಡಿ, ಎಷ್ಟು ದೇಣಿಗೆ ನೀಡಬೇಕು. ಅದನ್ನು ಚೆಕ್ ನಲ್ಲಿ ನಮೂದಿಸಿ ಎಂದು ಹೇಳಿದರು. ಚೆಕ್ ನಲ್ಲಿ ಅಂಜಲಿಯವರು 75ಲಕ್ಷ ನಮೂದಿಸಿದರು.

ನಂತರ ಅದನ್ನು ಹಾಸ್ಟೆಲ್ ಕಟ್ಟಡ ನಿಧಿಗೆ ಅರ್ಪಿಸಲಾಯಿತು. ಹಾಸ್ಟೆಲ್ ನಿರ್ಮಿಸುತ್ತಿರುವ ತಾರಾತರ ಆಡಳಿತವರ್ಗವು ಕಿಶೋರ್ ಅವರ ದಾನ ಗುಣವನ್ನ ಮೆಚ್ಚಿದೆ.
“ನಾವು ನಿರ್ಮಿಸುತ್ತಿರುವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಕಿಶೋರ್ ಅವರು ಈ ಮೊದಲೇ ಒಂದು ಕೋಟಿ ದೇಣಿಗೆ ನೀಡಿದ್ದರು. ಕೆಲಸ ಪೂರ್ಣಗೊಳಿಸಲು ಇನ್ನೂ 50 ರಿಂದ 75 ಲಕ್ಷ ಹಣದ ಅಗತ್ಯವಿತ್ತು. ಈಗ ಕಿಶೋರ್ ಅವರು ಅದನ್ನು ಒದಗಿಸಿದ್ದಾರೆ” ಎಂದು ತಾರಾತರ ಮಠವು ಮಾಹಿತಿ ನೀಡಿದೆ. ಈ ವರದಿಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಧುವಿನ ನಡೆಗೆ ಬಾರಿ ಮೆಚ್ಚುಗೆ ಪಡೆದುಕೊಂಡಿದೆ.

ಜು.ಹಾಕಿ ವಿಶ್ವಕಪ್ :ಮೊದಲ ಪಂದ್ಯ ಭಾರತಕ್ಕೆ ಸೋಲು

0

ಜೂನಿಯರ್ ಹಾಕಿ ವಿಶ್ವಕಪ್ ಹಾಕಿ ಟೂರ್ನಿ ಭಾರತ ಮತ್ತು ನಡೆದಿದ್ದು ಭಾರತದ ವಿರುದ್ಧ ಜಯಗಳಿಸಿದೆ.
ಭುವನೇಶ್ವರದ ಕಳಿಂಗ ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯನ್ನು ಉದ್ಘಾಟಿಸಲಾಯಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ಓಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್. ಭಾರತೀಯ ಹಾಕಿ ಒಕ್ಕೂಟದ ಅಧ್ಯಕ್ಷ ನರೇಂದರ್ ಪಾತ್ರ ಅವನೇ ಸಿದ್ದರು.
B. ಗುಂಪಿನ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಭಾರತ ತಂಡವು 4-5 ರಿಂದ ಫ್ರಾನ್ಸ್ ಎದುರು ಸೋಲುಂಡಿತು.
ಜರ್ಮನಿ ತಂಡ 5-2 ರಲ್ಲಿ ಪಾಕಿಸ್ತಾನ ಮಣಿಸಿತು. ಟೊರೆಂಟ್ 1-0 ಇಂದ ಕೆನಡಾ ಎದುರು ಮಲೇಷ್ಯಾ2-1 ರಿಂದ ಚಿಲಿ ವಿರುದ್ಧವೂ ಜಯ ಗಳಿಸಿದವು. ಮೊದಲ ದಿನ ನಡೆದ ಇನ್ನುಳಿದ ಪಂದ್ಯಗಳಲ್ಲಿ ಬೆಲ್ಜಿಯಂ 5-1 ರಿಂದ ದಕ್ಷಿಣ ಆಫ್ರಿಕಾ ಇದ್ದರು ಜಯ ಸಾಧಿಸಿತು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಗೌತಮ್ ಗಂಭೀರ್: ಉಗ್ರರಿಂದ ಬೆದರಿಕೆ.

0

ಮಾಜಿ ಕ್ರಿಕೆಟಿಗ ಹಾಗೂ ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರಿಗೆ ಐಸಿಸಿ ಕಾಶ್ಮೀರ ಉಗ್ರ ಸಂಘಟನೆಯಿಂದ ಕೊಲೆ ಬೆದರಿಕೆ ಬಂದಿದೆ.

ರಾತ್ರಿಯ ವೇಳೆ ಅಧಿಕೃತ ಇಮೇಲ್ ಗೆ ಜೀವ ಬೆದರಿಕೆ ಮೇಲ್ ಬಂದಿದೆ. ” ನಿಮ್ಮನ್ನು ಮತ್ತು ಕುಟುಂಬಸ್ಥರನ್ನು ಕೊಂದು ಹಾಕುತ್ತೇವೆ” ಎಂದು ಐಸಿಸ್ ಸಂಘಟನೆಯ ಹೆಸರಿನಲ್ಲಿ ಬೆದರಿಕೆ ಬಂದಿದೆ.

ದೆಹಲಿಯಲ್ಲಿನ ಗಂಭೀರ್ ನಿವಾಸಕ್ಕೆ ಭದ್ರತೆ ಒದಗಿಸಲಾಗಿದೆ. ಪೊಲೀಸ್ ಸಿಬ್ಬಂದಿ ವರ್ಗದವರು ಮೇಲ್ ಕಳುಹಿಸುವವರು ನಿಖರ ಸ್ಥಳದ ಮಾಹಿತಿಯನ್ನು ಕಲೆ ಹಾಕಲು ಮುಂದಾಗಿದ್ದಾರೆ. ಇದಕ್ಕಾಗಿ ಗೂಗಲ್ ಕಂಪನಿಯಲ್ಲಿ ಗೆ ಸಂಪರ್ಕವನ್ನು ಸಾಧಿಸಿದ್ದಾರೆ.

ಗಂಭೀರ ಅವರ ಖಾಸಗಿ ಕಾರ್ಯದರ್ಶಿ ಗೌರವ್ ಅರೋರ. ಇವರು ಡಿಸಿಪಿ ಶ್ವೇತಾ ಚೌಹಾಣ್ ಅವರನ್ನು ಭೇಟಿ ಮಾಡಿ ಬೆದರಿಕೆ ಸಂಬಂಧ ದೂರು ನೀಡಿದ್ದಾರೆ. ಸೈಬರ್ ಸೆಲ್ ನಲ್ಲಿ ಎಫ್ಐಆರ್ ದಾಖಲಿಸಿ ಕೊಂಡು ತನಿಖೆ ನಡೆಸಲಾಗುತ್ತಿದೆ.

ಕೋವಿಡ್ : ದೇಶದಲ್ಲೇ ಬೆಂಗಳೂರು ಅಗ್ರಸ್ಥಾನ

0

ಭಾರತವು 9,283 ಹೊಸದಾಗಿ ಕರೋನಾ ವೈರಸ್ ಸೋಂಕನ್ನು ಹೊಂದಿದೆ. ದೇಶದಲ್ಲಿ ಒಟ್ಟು ಕೋವಿಡ್ -19 ಪ್ರಕರಣಗಳ ಸಂಖ್ಯೆ 3,45,35,763. ಆದರೆ ಸಕ್ರಿಯ ಪ್ರಕರಣಗಳು 1,11,481 ಕ್ಕೆ ಇಳಿದಿದೆ. ಇದು 537 ದಿನಗಳಲ್ಲಿ ಅತ್ಯಂತ ಕಡಿಮೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯು ತಿಳಿಸಿದೆ. ಇಲ್ಲಿಯವರೆಗೆ 37 ಸಾವುಗಳಾಗಿವೆ. ಸಕ್ರಿಯ ಪ್ರಕರಣಗಳು ಒಟ್ಟು ಸೋಂಕುಗಳ ಪ್ರಮಾಣವು 0.32% ಅನ್ನು ಒಳಗೊಂಡಿದೆ. 24 ಗಂಟೆಗಳ ಅವಧಿಯಲ್ಲಿ ಸಕ್ರಿಯ ಕೊವಿಡ್ 2,103 ಪ್ರಕರಣಗಳ ಇಳಿಕೆ ಕಂಡಿದೆ. ಕರ್ನಾಟಕದಲ್ಲಿ ಪ್ರಸ್ತುತ 254 ಹೊಸ ಪ್ರಕರಣಗಳು ಮತ್ತು ಮೂರು ಸಾವುಗಳು ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,94,255 ಕ್ಕೆ ತಲುಪಿದೆ. ಬೆಂಗಳೂರು ನಗರವು ಪ್ರಕರಣಗಳ ಪಟ್ಟಿಯಲ್ಲಿ (152) ಅಗ್ರಸ್ಥಾನದಲ್ಲಿದೆ. ಏಕೆಂದರೆ ನಗರದಲ್ಲಿ 464 ಡಿಸ್ಚಾರ್ಜ್ ಮತ್ತು ಒಂದು ಸಾವು ಸಂಭವಿಸಿದೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಒಟ್ಟು ಸಂಖ್ಯೆ 6,412.

ಹಿರಿಯ ಮಾಧ್ಯಮ ತಜ್ಞ ಶ್ರೀ ಶೇಷಚಂದ್ರಿಕ ಅವರೊಡನೆ ಸಂವಾದ.

0

ಎಸ್.ಕೆ. ಶೇಷಚಂದ್ರಿಕ ಅವರು ನಾಡಿನ ಹಿರಿಯ ಮಾಧ್ಯಮ ತಜ್ಞರಲ್ಲಿ ಒಬ್ಬರಾಗಿದ್ದಾರೆ. ಭಾರತ ಸರ್ಕಾರದ ಕ್ಷೇತ್ರ ಪ್ರಚಾರ ಇಲಾಖೆ, ಆಕಾಶವಾಣಿ, ದೂರದರ್ಶನ, ಇಂತಹ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಸೇವೆ ಸಲ್ಲಿಸಿ ಅಪಾರ ಅನುಭವ ಹೊಂದಿದ್ದಾರೆ. ಹಿರಿಯ ಪತ್ರಕರ್ತರಾಗಿ ನಾಡಿನ ಪ್ರಮುಖ ದಿನಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿಯೂ ಖ್ಯಾತಿಯನ್ನು ಪಡೆದಿದ್ದಾರೆ.
ಆಕಾಶವಾಣಿಯಲ್ಲಿ ಬಾತ್ಮೀದಾರರಾಗಿ ಸಲ್ಲಿಸಿದ ವಿಶಿಷ್ಟ ಸೇವೆಗಾಗಿ ಭಾರತ ಸರ್ಕಾರವು ನೀಡುವ ಎಲ್.ಕೆ. ಶರ್ಮಾ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಪ್ರಸ್ತುತ ಈ ವರ್ಷ ಅವರಿಗೆ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಪಾಟೀಲ ಪುಟ್ಟಪ್ಪ ಪ್ರಶಸ್ತಿಯನ್ನು ನೀಡಲಾಗಿದೆ. ಇವರಿಗೆ ರಾಜ್ಯೋತ್ಸವ ಮತ್ತು ಮಾಧ್ಯಮ ಪ್ರಶಸ್ತಿಗಳನ್ನು ಸಹ ನೀಡಿ ಗೌರವಿಸಲಾಗಿದೆ.
ಸಾರೆಕೊಪ್ಪ ಬಂಗಾರಪ್ಪ ನವರು ಮುಖ್ಯಮಂತ್ರಿಯಾಗಿದ್ದಾಗ ಇವರು ಪತ್ರಿಕಾ ಕಾರ್ಯದರ್ಶಿ ಯಾಗಿಯೂ ಸೇವೆ ಸಲ್ಲಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಉತ್ತಮ ಬರವಣಿಗೆ ಉತ್ತಮ ಸಮಾಜ

0

ವಿದ್ಯಾರ್ಥಿಗಳು ವಿದ್ಯಾರ್ಥಿ ದೆಸೆಯಿಂದಲೇ ಬರವಣಿಗೆಯಲ್ಲಿ ಆಸಕ್ತಿ ರೂಢಿಸಿಕೊಳ್ಳಬೇಕು. ವಯಸ್ಸು ಬೆಳೆದಂತೆ ಪ್ರಬುದ್ಧತೆಯೂ ಮೈಗೂಡುತ್ತದೆ ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಡಾ.ಎಸ್.ಎಂ. ಜಯಕರ ತಿಳಿಸಿದ್ದಾರೆ.
ದಿಶಾ ಭಾರತ್ ಮತ್ತು ಈಸ್ಟ್ ವೆಸ್ಟ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಹಯೋಗದಲ್ಲಿ ನನ್ನ ಭಾರತ ಅಭಿಯಾನ ನಿಮಿತ್ತ ಕಾರ್ಯಕ್ರಮ ಜರುಗಿತು.
‘ಸ್ವಾತಂತ್ರ್ಯ ನಂತರದ ಭಾರತ’ ಎಂಬ ವಿಷಯದ ಕುರಿತು ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.
ಈ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನವನ್ನು ಪಡೆದ ವಿದ್ಯಾರ್ಥಿಗಳಿಗೆ ಕುಲಪತಿಗಳು ಅಭಿನಂದನೆ ಸಲ್ಲಿಸಿದರು.
ಉತ್ತಮ ಬರವಣಿಗೆಯಿಂದ ಆರೋಗ್ಯಪೂರ್ಣ ಸಮಾಜದ ಜೊತೆಗೆ ಸಮೃದ್ಧ ಭಾರತ ನಿರ್ಮಾಣ ಸಾಧ್ಯ ಎಂದರು.
ಕರ್ನಾಟಕ ಸಂಸ್ಕೃತಿ ವಿವಿ ಕುಲಸಚಿವ ಡಾ.ಎಂ. ಕೊಟ್ರೇಶ್ ಅವರು ಮಾತನಾಡಿ, ವ್ಯಕ್ತಿಯೊಬ್ಬನ ಜ್ಞಾನವನ್ನು ಅಭಿವ್ಯಕ್ತಗೊಳಿಸಲು ಸೂಕ್ತ ವೇದಿಕೆ ಅಗತ್ಯವಿದೆ. ಪ್ರತಿಭೆಗಳನ್ನು ಗುರುತಿಸಿ ಬೆಳೆಸುವ ಕಾರ್ಯ ಇಂದಿನ ಅವಶ್ಯಕತೆಯಾಗಿದೆ. ಸೃಜನ ಹಾಗೂ ಸೃಜನೇತರ ಶೈಲಿಯ ಬರಹಗಳು ಪ್ರಾಮುಖ್ಯತೆ ಪಡೆದಿವೆ. ಹೆಚ್ಚು ಹೆಚ್ಚು ಸೃಜನಶೀಲ ಸಾಹಿತ್ಯ ನಿರ್ಮಾಣವಾಗಬೇಕಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಈಸ್ಟ್ ವೆಸ್ಟ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥೆ ರಶ್ಮಿ ರವಿಕಿರಣ್ ವಹಿಸಿದ್ದರು. ದೇಶ ಭಾರತ ಸಂಸ್ಥಾಪಕಿ ಹಾಗೂ ನಿರ್ದೇಶಕಿ ರೇಖಾ ರಾಮಚಂದ್ರನ್, ದಯಾನಂದ್ ಸಾಗರ್, ದಂತ ವೈದ್ಯ ಕಾಲೇಜಿನ ಪ್ರಾಂಶುಪಾಲರಾದ ಡಾ. ಹೇಮಂತ್ ಮಾದಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.