Saturday, February 7, 2026
Saturday, February 7, 2026
Home Blog Page 1859

ಕ್ರಿಪ್ಟೋಕರೆನ್ಸಿಗೆ ಅಗ್ನಿ ಪರೀಕ್ಷೆ

0

ಭಾರತದಲ್ಲಿ ಕ್ರಿಪ್ಟೋಕರೆನ್ಸಿ ಗಳನ್ನು ಸರ್ಕಾರ ನಿಷೇಧಿಸಲಿದೆ ಎಂಬ ವದಂತಿ ಡಿಜಿಟಲ್ ಕರೆನ್ಸಿ ಮಾರುಕಟ್ಟೆಯಲ್ಲಿ ಆತಂಕ ಸೃಷ್ಟಿಸಿದೆ.
ಕೇಂದ್ರ ಸರ್ಕಾರ ನವೆಂಬರ್ 29ರಂದು ಸಂಸತ್ತಿನ ಅಧಿವೇಶನದಲ್ಲಿ ಕ್ರಿಪ್ಟೋಕರೆನ್ಸಿ ಕುರಿತ ವಿಧೇಯಕ ಮಂಡಿಸಲಿದೆ. ಇದರ ಪರಿಣಾಮಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಮೂಲಗಳ ಪ್ರಕಾರ ಸರಕಾರ ಕ್ರಿಪ್ಟೋ ಕರೆನ್ಸಿಗಳನ್ನು ಸಂಪೂರ್ಣವಾಗಿ ನಿಷೇಧಿಸುವ ಸಾಧ್ಯತೆ ಇಲ್ಲ ‌. ಬದಲಿಗೆ ನಿಯಂತ್ರಿಸುವ ಹಾಗೂ ಅದರ ಮೂಲಕ ಭಯೋತ್ಪಾದನೆಗೆ ಹಣಕಾಸು ಇತ್ಯಾದಿ ಅಕ್ರಮಗಳು ನಡೆಯದಿರುವಂತೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.
ಚಲಾವಣೆಯಲ್ಲಿರುವ ಅನೇಕ ಕ್ರಿಪ್ಟೋಕರೆನ್ಸಿಗಳು ಕಣ್ಮರೆಯಾಗುವ ಸಾಧ್ಯತೆ ಇದೆ. ಇದರಲ್ಲಿ ಕೆಲವು ಮಾತ್ರ ಉಳಿದುಕೊಳ್ಳಲಿದೆ ಎಂದು ಮಾಜಿ ಆರ್ ಬಿಐ ಗವರ್ನರ್ ರಘುರಾಮ್ ರಾಜನ್ ಹೇಳಿದ್ದಾರೆ.
ಬಿಟ್ ಕಾಯಿನ್, ಟೆದರ್ ಡಾಗ್ ಕಾಯಿನ್ ಮುಂತಾದ ಕ್ರಿಪ್ತೋಕರೆನ್ಸಿ ಗಳ ಮೌಲ್ಯ ಪಾತಳಕ್ಕೆ ಕುಸಿದಿದೆ. ಬಹುತೇಕ ಬಿಟ್ ಕಾಯಿನ್ ದರವು ಸರಾಸರಿ ಶೇ.20ರಷ್ಟು ಕುಸಿತ ಕಂಡಿದೆ ಎಂದು ‘ವಾಜರ್ ಎಕ್ಸ್’ ಅಂಕಿ ಅಂಶಗಳು ತಿಳಿಸಿವೆ.
ಒಂದು ವೇಳೆ ಸರ್ಕಾರ ಬಹುತೇಕ ಕ್ರಿಪ್ತೋಕರೆನ್ಸಿ ಗಳನ್ನು ನಿಷೇಧಿಸಿದರೆ ಏನಾಗಲಿದೆ ಎಂಬ ಪ್ರಶ್ನೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಆರ್ಥಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಹೆಣ್ಣಿನ ಮೇಲೆ ನಿಲ್ಲದ ದೌರ್ಜನ್ಯ

0

ಜಗವೆಂಬ ಹಣತೆಯಲ್ಲಿ, ಬದುಕೆಂಬ ಎಣ್ಣೆ ಹಾಕಿ, ಗಂಡನೆಂಬ ಬತ್ತಿಗೆ ಹೆಣ್ಣಿನ ದೀಪ ಬೆಳಗುವುದಯ್ಯು…. ಆಹಾ! ಸಾಲುಗಳು ಎಷ್ಟು ಅರ್ಥಗರ್ಭಿತವಾಗಿದೆ. ಸಾಮಾಜಿಕ ಜೀವನದಲ್ಲಿ ಈ ಸಾಲುಗಳು ಗಂಡು-ಹೆಣ್ಣು ಸಮಾನ ಎಂಬ ಅರ್ಥವನ್ನು ನೀಡುತ್ತದೆ.

ಸಮಾಜದಲ್ಲಿ ಹೆಣ್ಣು-ಗಂಡು ಎಂಬುದು ಎರಡು ಕಣ್ಣುಗಳಿದ್ದಂತೆ. ಆದರೆ ಅನೇಕ ಶತಮಾನಗಳಿಂದ ಹೆಣ್ಣಿನ ಮೇಲೆ ಆಗುವ ದೌರ್ಜನ್ಯಗಳು ಈಗಿನವರೆಗೂ ನಿಂತಿಲ್ಲ. ಆಧುನಿಕ ಕಾಲದಲ್ಲಿ ಹೇಳುವ ಈ ಪುರುಷ ಪ್ರಧಾನ ಸಮಾಜವೂ ತನ್ನ ಅಂತರಾಳದಲ್ಲಿ ಮಹಿಳೆಯ ಬಗ್ಗೆ ಯೋಚಿಸುವುದೇ ಬೇರೆ. ಆಕೆ ಪ್ರತಿನಿತ್ಯವೂ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾಳೆ.

ಮಾಧ್ಯಮಗಳಲ್ಲಿ ಪ್ರತಿದಿನವೂ ಒಂದಲ್ಲ ಒಂದು ಸುದ್ದಿ, ಹೆಣ್ಣಿನ ಮೇಲಾಗುವ ದೌರ್ಜನ್ಯವೇ ಆಗಿರುತ್ತದೆ. ಸ್ವಾತಂತ್ರದ ನಂತರ ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧವೆಂದು ಘೋಷಿಸಲಾಗಿತ್ತು. ಆದರೆ ಅದೆಷ್ಟು ರಾಜ್ಯಗಳಲ್ಲಿ ಇಂದಿಗೂ ಕೂಡ ಬಾಲ್ಯವಿವಾಹ ಪದ್ಧತಿ ಜಾರಿಯಲ್ಲಿದೆ.

ಅತ್ಯಾಚಾರ, ವರದಕ್ಷಿಣೆ ಪಿಡುಗು, ಇನ್ನೂ ಹಲವು ಸಾಮಾಜಿಕ ಪಿಡುಗುಗಳು ಇಂದಿಗೂ ಅಸ್ತಿತ್ವದಲ್ಲಿದೆ. ಸ್ತ್ರೀ ಮೇಲೆ ಪುರುಷರ ರಕ್ಕಸಿಯ ಅಟ್ಟಹಾಸ ನಡೆಸುತ್ತಲೇ ಇದೆ.
ಅತ್ಯಾಚಾರಕ್ಕೆ ಎಷ್ಟೋ ಮಹಿಳೆಯರು ಬಲಿಯಾಗುತ್ತಿದ್ದಾರೆ.

ಸಮಾಜದಲ್ಲಿನ ಮಹಿಳೆಯರ ಮೇಲಾಗುವ ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ತಪ್ಪಿಸಲು ಕಾನೂನು ಅರಿವು ಅಗತ್ಯವಿದೆ. ಇದರ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸ ಬೇಕು. ಆದ್ದರಿಂದ ಪ್ರತಿವರ್ಷ ನವೆಂಬರ್ 25ರಂದು ವಿಶ್ವ ಮಹಿಳಾ ದೌರ್ಜನ್ಯ ವಿರೋಧಿ ದಿನವಾಗಿ ಆಚರಿಸಲಾಗುತ್ತದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಪಾಕ್ ನ ಲಾಹೋರ್ ಪಟ್ಟಣ ಮಾಲಿನ್ಯದಲ್ಲಿ ಪ್ರಥಮ

0

ವಿಶ್ವದ ಅತಿ ಹೆಚ್ಚು ಮಾಲಿನ್ಯಕ್ಕೆ ಒಳಗಾದ ನಗರ ಎಂಬ ಅಪಕೀರ್ತಿಗೆ ಪಾಕಿಸ್ತಾನದ ರಾಜಧಾನಿ ಲಾಹೋರ್ ಪಾತ್ರವಾಗಿದೆ.

ಸ್ವಿಜರ್ಲ್ಯಾಂಡ್ ನ ‘ಪ್ಲಾಟ್ಫಾರ್ಮ್ ಐಕ್ಯೂಏರ್’ ಎಂಬ ವಾಯು ಗುಣಮಟ್ಟದ ಮೇಲೆ ನಿಗಾ ಇಡುವ ಕಂಪನಿ ಈ ಕುರಿತಂತೆ ಮಾಹಿತಿ ನೀಡಿದೆ.

ನಗರಗಳ ವಾಯು ಗುಣಮಟ್ಟ ಅಳೆಯುವ ಅಮೆರಿಕದ ಎಕ್ಯೂಐ ಎಂಬ ಮಾನದಂಡದ ಪ್ರಕಾರ ವಿಶ್ವದ ಅತ್ಯಂತ ಮಾಲಿನ್ಯ ನಗರಗಳ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಲಾಹೋರ್ ಪಡೆದಿದೆ.

ಲಾಹೋರ್ ನ ವಾಯು ಗುಣಮಟ್ಟ ಸೂಚ್ಯಂಕ 203 ದಾಖಲಾಗಿದೆ. 2ನೇ ಸ್ಥಾನದಲ್ಲಿರುವ ದೆಹಲಿಯ ವಾಯು ಗುಣಮಟ್ಟ ಸೂಚ್ಯಂಕ 186 ಎಂದು ‘ಪ್ಲಾಟ್ ಫಾರ್ಮ್ ಐಕ್ಯೂಏರ್ ‘ ಕಂಪನಿ ಮಾಹಿತಿಯಲ್ಲಿ ತಿಳಿಸಿದೆ.

‘ಈ ನಗರಗಳಲ್ಲಿ ಹೊಗೆ ಮಂಜಿನ ಪ್ರಮಾಣ ಹೆಚ್ಚುತ್ತಿದೆ ಗಾಳಿಯಲ್ಲಿ ಮಾಲಿನ್ಯಕಾರಕ ಕಣಗಳ ಪ್ರಮಾಣವೂ ಅಧಿಕಗೊಂಡಿದೆ. ಅದರಿಂದ ಸಾವಿರಾರು ಜನರು ಉಸಿರಾಟದ ತೊಂದರೆ ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುವಂತಾಗಿದೆ. ಜನರು ಮನೆಯಲ್ಲಿ ಉಳಿಯಬೇಕಾದ ಅನಿವಾರ್ಯ ಸ್ಥಿತಿ ನಿರ್ಮಾಣವಾಗಿದೆ’ ಎಂದು ಕಂಪನಿ ತಿಳಿಸಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಮೂರು ಕೃಷಿ ಕಾನೂನು ರದ್ದು : ಕೇಂದ್ರ ಸಂಪುಟ ಒಪ್ಪಿಗೆ

0

ಕಳೆದ ಒಂದು ವರ್ಷದಿಂದ ನಡೆದ ರೈತರ ಪ್ರತಿಭಟನೆಗೆ ಸ್ಪಂದಿಸಿದ ಪ್ರಧಾನಿ ನರೇಂದ್ರ ಮೋದಿಯವರು ಮೂರು ಕೃಷಿ ಕಾಯ್ದೆಗಳನ್ನು ವಾಪಸ್ಸು ಪಡೆಯುವ ಘೋಷಣೆಯನ್ನು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ.
ಮೋದಿಯವರ ಘೋಷಣೆಯ ನಂತರದ ಮೊದಲ ಸಂಪುಟ ಸಭೆಯಲ್ಲೇ ಕೃಷಿ ಕಾನೂನು ರದ್ಧತಿಗೆ ಅಗತ್ಯ ವಿಧೇಯಕ ಮಂಡನೆ ನಿರ್ಧಾರವು ಸ್ವಾಗತಾರ್ಹ. ಇದು ನಮ್ಮ ಸರಕಾರದ ಬದ್ಧತೆಯನ್ನು ತೋರಿಸುತ್ತದೆ. ಮಾತಿಗೆ ತಪ್ಪದಿರುವುದು ನಮ್ಮ ಸರ್ಕಾರದ ಸಂಕಲ್ಪ ಮಂತ್ರ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.
ಕೃಷಿ ಕಾನೂನು ರದ್ದು ವಿಧೇಯಕ -2021ರ ಮಂಡನೆಗೆ ಸಂಪುಟ ಸರ್ವಸಮ್ಮತ ಒಪ್ಪಿಗೆ ನೀಡಿದೆ. ಮುಂಬರುವ ಚಳಿಗಾಲದ ಸಂಸತ್ ಅಧಿವೇಶನದಲ್ಲಿಯೇ ಈ ರದ್ದು ವಿಧೇಯಕ ಮಂಡನೆಯಾಗಲಿದೆ. ಈ ಬಗ್ಗೆ ಸಭೆ ಬಳಿಕ ಪ್ರತಿಕ್ರಿಯೆ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರು, ಮುಂಬರುವ ಅಧಿವೇಶನದಲ್ಲಿ ಕೃಷಿ ಕಾನೂನುಗಳ ರದ್ಧತಿಗೆ ಕೇಂದ್ರ ಸರ್ಕಾರ ಆದ್ಯತೆ ನೀಡಲಿದೆ ಎಂದರು.
ನವಂಬರ್ 29ರಿಂದ ಡಿಸೆಂಬರ್ 23 ರವರೆಗೆ ಚಳಿಗಾಲದ ಸಂಸತ್ ಅಧಿವೇಶನ ನಡೆಯಲಿದೆ. ರೈತರ ಪ್ರತಿಭಟನೆಗೆ ಮನ್ನಣೆ ನೀಡಿ ಕೃಷಿ ಕಾನೂನು ರದ್ದು ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 19ರಂದು ಪ್ರಕಟಿಸಿದ್ದರು. ನವೆಂಬರ್ 21ರಂದು ಸಂಯುಕ್ತ ಕಿಸಾನ್ ಮೋರ್ಚಾದಿಂದ ಪ್ರಧಾನಿ ಮೋದಿಯವರಿಗೆ ಪತ್ರ ಬರೆಯಲಾಗಿತ್ತು.
2020ರ ನವೆಂಬರ್ ನಿಂದ ಆರಂಭಗೊಂಡಿರುವ ಸುಮಾರು 40 ರೈತ ಸಂಘಟನೆಗಳ ಪ್ರತಿಭಟನೆಯು ದಿಲ್ಲಿಯ ಗಡಿಯಲ್ಲಿ ನಿರಂತರವಾಗಿ ಸಾಗುತ್ತಿದೆ. ಪಂಜಾಬ್, ಹರಿಯಾಣ, ರಾಜಸ್ಥಾನ ಉತ್ತರಪ್ರದೇಶದಿಂದ ಸಾವಿರಾರು ರೈತರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಮಲೆನಾಡ ಸೊಬಗಿಗೆ ಸೆರೆಯಾದ ರಾಜ್ಯಪಾಲರು

0

ಪ್ರಾದೇಶಿಕ ಮತ್ತು ಮಾತೃಭಾಷಾ ಶಿಕ್ಷಣಕ್ಕೆ ಆದ್ಯತೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಉದ್ದೇಶವಾಗಿದೆ ಎಂದು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಹೇಳಿದ್ದಾರೆ.
ಶಿವಮೊಗ್ಗ ನಗರದ ಪ್ರೇರಣಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದ ಪ್ರೇರಣಾ ಕನ್ವೇಷನ್ ಸಭಾಂಗಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಮಾತನಾಡಿದರು.
ಬೇರೆ ಎಲ್ಲಾ ರಾಜ್ಯಗಳಿಗಿಂತ ಕರ್ನಾಟಕ ಸಾಹಿತ್ಯ, ಸಂಸ್ಕೃತಿ, ಶಿಕ್ಷಣ, ರಾಜಕೀಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಬಹಳ ಮುಂಚೂಣಿಯಲ್ಲಿದೆ. ರಾಜ್ಯದ ಅಭಿವೃದ್ಧಿಯಲ್ಲಿ ಶಿವಮೊಗ್ಗದ ಕೊಡುಗೆ ಅಪಾರವಾಗಿದೆ. ಇದು ಶೈಕ್ಷಣಿಕ ಕೇಂದ್ರವಾಗಿ ಅಭಿವೃದ್ಧಿ ಹೊಂದುತ್ತಿರುವುದು ಸಂತಸದ ಸಂಗತಿ. ಹಿಂದಿ ಭಾಷಿಗನಾದರೂ ರಾಜ್ಯಪಾಲನಾಗಿ ಕರ್ನಾಟಕಕ್ಕೆ ಬಂದ ಬಳಿಕ ಕನ್ನಡ ಕಲಿಯುತ್ತಿದ್ದೇನೆ ಎಂದರು.


ರಾಜ್ಯಪಾಲರಾದ ಬಳಿಕ ಮೊದಲ ಬಾರಿಗೆ ಶಿವಮೊಗ್ಗ ಭೇಟಿ ನೀಡಿದ ಥಾವರಚಂದ್ ಗೆಹ್ಲೋಟ್ ಅವರು ಮಲೆನಾಡಿನ ಪರಿಸರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮಕ್ಕೆ ಭೇಟಿ ನೀಡಿ ಪ್ರಾಣಿಗಳನ್ನು ವೀಕ್ಷಿಸಿದರು. ಅರಣ್ಯ, ದಟ್ಟ ಹಸಿರು, ತಂಪಾದ ವಾತಾವರಣವಿರುವ ಇಂತಹ ಸ್ಥಳಗಳಿಗೆ ರಾಜ್ಯದವರಲ್ಲದೇ ಹೊರ ರಾಜ್ಯದವರೂ ಬಂದು ವೀಕ್ಷಿಸಬೇಕು. ಪ್ರವಾಸಿ ಕೇಂದ್ರಗಳಿಗೆ ಹೆಚ್ಚು ಜನರು ಬರುವಂತಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಜೋಗ ಜಲಪಾತವನ್ನು ವಿಕ್ಷಿಸಿ ಆನಂದ ಪಟ್ಟರು.

ಬಿಸಿಯೂಟ ಸಂಗಡ ಮೊಟ್ಟೆ ಅಥವಾ ಬಾಳೆಹಣ್ಣು

0

ರಾಜ್ಯದ ಏಳು ಜಿಲ್ಲೆಗಳ ಸರ್ಕಾರಿ ಶಾಲೆಗಳಿಗೆ ಮಧ್ಯಾಹ್ನದ ಬಿಸಿಯೂಟಕ್ಕೆ ಮೊಟ್ಟೆ ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ , ಹಿರಿಯ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ ಯೋಜನೆ ದೊರೆಯಲಿದೆ.

ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯಪುರ, ಕಲ್ಬುರ್ಗಿ, ಬೀದರ್, ಯಾದಗಿರಿ ಈ ಜಿಲ್ಲೆಯ ಶಾಲಾ ಮಕ್ಕಳಿಗೆ ಬೇಯಿಸಿದ ಮೊಟ್ಟೆ ದೊರೆಯಲಿದೆ. ಮೊಟ್ಟೆ ಸೇವಿಸದವರಿಗೆ ಮೊಟ್ಟೆ ಬದಲು ಬಾಳೆಹಣ್ಣು ನೀಡಲು ತೀರ್ಮಾನಿಸಲಾಗಿದೆ.

ಡಿಸೆಂಬರ್ ತಿಂಗಳಿನಿಂದ ಮಾರ್ಚ್ ಮೂವತ್ತರವರೆಗೆ ಒಟ್ಟು ನಾಲ್ಕು ತಿಂಗಳು ಯೋಜನೆ ಜಾರಿಯಲ್ಲಿ ಇರುತ್ತದೆ. ಈ ಯೋಜನೆಗೆ ಸುಮಾರು 39. 86 ಕೋಟಿ ವೆಚ್ಚ ಅಂದಾಜಿಸಲಾಗಿದೆ.

ಮಕ್ಕಳು ಅಪೌಷ್ಠಿಕತೆ ರಕ್ತಹೀನತೆ ಹೊಂದಿರುವ ಮಕ್ಕಳ ಪ್ರಮಾಣ ಹೆಚ್ಚಾಗಿದೆ. ಈ ಸಮಸ್ಯೆಯನ್ನು ಪರಿಹರಿಸಲು ರಾಜ್ಯ ಸರ್ಕಾರವು ‘ಪ್ರಧಾನಮಂತ್ರಿ ಪೋಷಣ್’ ಯೋಜನೆಯ ಅಡಿಯಲ್ಲಿ ಈ ಕಾರ್ಯಕ್ರಮ ಅನುಷ್ಠಾನಗೊಳಿಸುತ್ತಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಕೋವಿಡ್ ನಂತರ ವಿಮಾನ ಸಂಚಾರ ಸುಧಾರಿಸಿದೆ : ಬನ್ಸಲ್

0

ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ರಾಜೀವ್ ಬನ್ಸಲ್ ಅವರು ಮುಂದಿನ ಐದು ವರ್ಷಗಳ ಅವಧಿಯಲ್ಲಿ ದೇಶದ ವಿಮಾನ ನಿಲ್ದಾಣಗಳಲ್ಲಿ ಒಟ್ಟು 90 ಸಾವಿರ ಕೋಟಿ ಹೂಡಿಕೆ ಆಗುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.

ಈ ಹೂಡಿಕೆಯಲ್ಲಿ ಖಾಸಗಿ ವಲಯದ ಪಾಲು 68 ಸಾವಿರ ಕೋಟಿ ಆಗಲಿದೆ ಎಂದು ಅಂದಾಜಿಸಲಾಗಿದೆ. ಕೊರೋನ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನವು ತೀವ್ರ ಸಂಕಷ್ಟಕ್ಕೆ ಸಿಲುಕಿತ್ತು, ಈಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ದೇಶಿ ವಿಮಾನ ಸಂಚಾರ ಪ್ರಮಾಣವು ಕೋವಿಡ್ ನ ಮೊದಲಿನ ಹಂತಕ್ಕೆ ಬರುತ್ತಿದೆ ಎಂದಿದ್ದಾರೆ.

ವಿಮಾನ ನಿಲ್ದಾಣಗಳಲ್ಲಿ ಆಗಲಿರುವ ಒಟ್ಟು ಹೂಡಿಕೆಯಲ್ಲಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು 20ರಿಂದ 22 ಸಾವಿರ ಕೋಟಿ ವರೆಗಿನ ಮೊತ್ತವನ್ನು ಹೂಡಿಕೆ ಮಾಡಲಿದೆ ಹಾಗೂ ಇನ್ನುಳಿದ ಮೊತ್ತವನ್ನು ಖಾಸಗಿ ಕಂಪನಿಗಳು ಹೂಡಿಕೆ ರೂಪದಲ್ಲಿ ವಿನಿಯೋಗಿಸಲಿವೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ ಒಟ್ಟು 220 ವಿಮಾನ ನಿಲ್ದಾಣಗಳು, ಹೆಲಿಕಾಪ್ಟರ್ ನಿಲ್ದಾಣಗಳು ಸಕ್ರಿಯವಾಗುವ ನಿರೀಕ್ಷೆ ಇದೆ. ಪ್ರಸ್ತುತ ದೇಶದಲ್ಲಿ ಒಟ್ಟು 136 ವಿಮಾನ ನಿಲ್ದಾಣಗಳು ಕಾರ್ಯನಿರ್ವಹಿಸುತ್ತಿವೆ. ಹಲವೆಡೆ ಸಣ್ಣ ವಿಮಾನ ನಿಲ್ದಾಣಗಳನ್ನು ನಿರ್ಮಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ರಾಜೀವ್ ಬನ್ಸಲ್ ತಿಳಿಸಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಬಿತ್ತನೆ ಬೀಜಗಳ ಜೊತೆ ತರಕಾರಿ ಬೀಜಗಳನ್ನು ಉತ್ಪಾದಿಸಲಿ: ಬಿ.ಸಿ.ಪಾಟೀಲ್

0

ಕರ್ನಾಟಕ ರಾಜ್ಯ ಬೀಜ ನಿಗಮ ತಳಿವರ್ಧಿತ ಬಿತ್ತನೆ ಬೀಜಗಳ ಜೊತೆಗೆ ರೈತರಿಗೆ ಲಾಭದಾಯಕವಾಗುವ ತರಕಾರಿ ಬೀಜಗಳನ್ನೂ ಉತ್ಪಾದಿಸಲಿ ಎಂದು ಕರ್ನಾಟಕ ರಾಜ್ಯ ಬೀಜ ನಿಗಮದ ಅಧ್ಯಕ್ಷರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ.
ಹೆಬ್ಬಾಳದ ಕರ್ನಾಟಕ ಬೀಜ ನಿಗಮದಲ್ಲಿ ಬೀಜ ನಿಗಮದ ಅಧಿಕಾರಿಗಳು ಹಾಗೂ ಜಿಲ್ಲಾ ಉಪವ್ಯವಸ್ಥಾಪಕ ನಿರ್ದೇಶಕರೊಂದಿಗೆ ಬಿ.ಸಿ.ಪಾಟೀಲ್ ಸಭೆ ನಡೆಸಿದರು.
ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ಪೂರೈಸುವುದರ ಜೊತೆಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಗುಣಮಟ್ಟದ ಬೀಜ ಉತ್ಪಾದನೆಯ ಲಾಭ ತರುವ ನಿಗಮವಾಗಬೇಕು. ಬೀಜ ನಿಗಮ ರೈತರಿಗೆ ಬರಿ ಬಿತ್ತನೆ ಬೀಜವನ್ನು ಪೂರೈಸುವ ಕೆಲಸವನ್ನಷ್ಟೇ ಮಾಡಬಾರದು. ಆ ಮೂಲಕ ನಿಗಮ ದೇಶದಲ್ಲಿಯೇ ಲಾಭದಾಯಕ ನಿಗಮವಾಗಬೇಕು.ರೈತರ ಹಿತದೃಷ್ಟಿಯಿಂದ ತರಕಾರಿ ಬಿತ್ತನೆ ಬೀಜಗಳನ್ನು ಸಹ ರಾಜ್ಯ ಬೀಜ ನಿಗಮ ಉತ್ಪಾದಿಸಿ ಮಾರಾಟ ಮಾಡಬೇಕು. ಇದಕ್ಕೆ ಅಗತ್ಯವಾದ ಕೌಶಲ್ಯ ತರಬೇತಿ ವೃತ್ತಿಪರತೆಯನ್ನು ಜಿಲ್ಲಾ ವ್ಯವಸ್ಥಾಪಕ ನಿರ್ದೇಶಕರು ಹೊಂದಬೇಕು. ಆ ಮೂಲಕ ಕರ್ನಾಟಕ ತೈಲ ನಿಗಮದಂತೆ ಬೀಜ ನಿಗಮವು ಸಹ ಲಾಭದಾಯವಾಗಬೇಕೆಂದು ಬಿ.ಸಿ.ಪಾಟೀಲ್ ಕರೆ ನೀಡಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ವಾಲ್ಮೀಕಿ ರಾಮಾಯಣದಲ್ಲಿ ಅನುಕರಣೆಯ ಮೌಲ್ಯಗಳಿವೆ

0

ಕುವೆಂಪು ವಿಶ್ವವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಪ್ರೊ.ಎಸ್.ಪಿ. ಹಿರೇಮಠ್ ಸಭಾಂಗಣದಲ್ಲಿ ನಡೆಸಲಾಯಿತು.

“ಮಹರ್ಷಿ ವಾಲ್ಮೀಕಿ ರಚಿಸಿರುವ ರಾಮಾಯಣದಲ್ಲಿ ಸ್ತ್ರೀ ಸಮಾನತೆ, ಸಹೋದರ ಬಾಂಧವ್ಯ, ಅಹಿಂಸಾವಾದ ಹೀಗೆ ಹಲವಾರು ಅನುಕರಣಿಯ ಮೌಲ್ಯಗಳಿವೆ. ಹೀಗಾಗಿಯೇ ರಾಮ ಮತ್ತು ರಾಮಾಯಣ ಭಾರತೀಯರ ಹೃದಯಕ್ಕೆ ಹತ್ತಿರವಾದ ಭಾವನಾತ್ಮಕ ವಿಚಾರ ” ಎಂದು ಕುವೆಂಪು ವಿವಿ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಜಗತ್ತಿನ ಕಾವ್ಯಪರಂಪರೆಯಲ್ಲಿ ಪ್ರಥಮ ಸ್ಥಾನದಲ್ಲಿ ನಿಲ್ಲುವ ಮಹಾಕಾವ್ಯವನ್ನು ವಾಲ್ಮೀಕಿಯವರು ರಚಿಸಿದ್ದಾರೆ. ಇವರು ಸರ್ವಕಾಲಕ್ಕೂ ಸಲ್ಲುವ ಅನೇಕ ಆದರ್ಶಗಳನ್ನು ಪ್ರತಿಪಾದಿಸಿದ ಜಾಗತಿಕ ಕವಿ ಎಂದು ತುಮಕೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ನಾಗಭೂಷಣ್ ಬಗ್ಗನಡು ಹೇಳಿದರು.

ಮಹರ್ಷಿ ವಾಲ್ಮೀಕಿ ಅವರು ರಾಮನ ಮೇರು ವ್ಯಕ್ತಿತ್ವವನ್ನು ಮತ್ತು ರಾಮಾಯಣದ ಮೂಲಕ ಅವರು ಪ್ರತಿಪಾದಿಸಿದ್ದಾರೆ. ಈ ಮೌಲ್ಯಗಳನ್ನು ಇಂದಿನ ಪೀಳಿಗೆಯವರಿಗೆ ತಲುಪಿಸಬೇಕು. ಈ ದೃಷ್ಟಿಯಿಂದ ಸರ್ಕಾರ ವಾಲ್ಮೀಕಿ ಜಯಂತಿಯ ಆಚರಣೆ ಆರಂಭಿಸಿದೆ. ವಿಶ್ವವಿದ್ಯಾಲಯ ವಾಲ್ಮೀಕಿ ಜಯಂತಿಯನ್ನು ಆಚರಿಸುವುದರ ಜೊತೆಗೆ ವರ್ಷವಿಡಿ ಎಸ್ ಸಿ ಎಸ್ ಟಿ ಘಟಕದ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಕುಲಸಚಿವೆ ಶ್ರೀಮತಿ ಜಿ. ಅನುರಾಧ ಅವರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಪರೀಕ್ಷಾಂಗ ಕುಲಸಚಿವ ಪ್ರೊ. ಸಿ.ಎಂ. ತ್ಯಾಗರಾಜ, ಹಣಕಾಸು ಅಧಿಕಾರಿ ಎಸ್. ರಾಮಕೃಷ್ಣ, ಘಟಕದ ಸಂಚಾಲಕ ಡಾ. ಉದ್ದಗಟ್ಟಿ ವೆಂಕಟೇಶ್ ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಮಹಿಳೆಯರಲ್ಲಿ ಪರಸ್ಪರ ವಿಚಾರವಿನಿಮಯ ಅಗತ್ಯ-ಕೆ. ಎಸ್. ಈಶ್ವರಪ್ಪ

0

ಶಿವಮೊಗ್ಗದ ವಿನೋಬನಗರ ಶಿವಾಲಯ ಸಭಾಂಗಣದಲ್ಲಿ, ನಾಡ ನಮನ ಸ್ಪರ್ಧೆ ಕಾರ್ಯಕ್ರಮ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಪ್ರತಿಮನೆಯಲ್ಲೂ ದೇಶಭಕ್ತಿ ಗೀತೆ, ರಾಷ್ಟ್ರಾಭಿಮಾನ ಮೊಳಗಬೇಕು.
ಹೆಣ್ಣುಮಕ್ಕಳು ಸದಾ ತಮ್ಮ ಕುಟುಂಬದ ಜವಾಬ್ದಾರಿ ಹೊತ್ತು, ಮನೆಯೊಳಗೆ ಒತ್ತಡದಲ್ಲಿ ಇರುತ್ತಾರೆ. ಅವರು ಮನೆ ಗೆಲಸದ ಜೊತೆಗೆ ಸಾಮಾಜಿಕ ಚಟುವಟಿಕೆಯಲ್ಲಿ ಭಾಗವಹಿಸಬೇಕು. ಪರಸ್ಪರ ತಮ್ಮ ಸಮಸ್ಯೆ ಹಂಚಿಕೊಳ್ಳಬೇಕು. ಒಳ್ಳೆಯ ವಿಚಾರ ಅರಿಯಲು ಇಂತಹ ಕಾರ್ಯಕ್ರಮ ಸಹಾಯಕವಾಗಿದೆ. ಭಜನೆ, ಹಾಡು ಇನ್ನು ಹಲವಾರು ಸಂಸ್ಕಾರಗಳು ಬೇರೂರಿ ದಾಗ ಅದು ಸಮಾಜದ ಮೇಲೆ ಉತ್ತಮ ಪರಿಣಾಮವನ್ನು ಬೀರುತ್ತದೆ ಎಂದು ಹೇಳಿದರು.

ಹಾಡು ಮತ್ತು ಭಜನೆಗೆ ರಾಗ ಮುಖ್ಯವಲ್ಲ, ಭಾವ ಮುಖ್ಯ. ಉತ್ತಮ ಹಾಡುಗಾರರ ಜೊತೆಗೆ ಧ್ವನಿಗೂಡಿಸಿದಾಗ ತನ್ನಿಂತಾನೇ ಅವರು ಅದ್ಭುತ ಹಾಡುಗಾರ ರಾಗುತ್ತಾರೆ. ಭಕ್ತಿಯಲ್ಲಿ ತಲ್ಲೀನರಾದಾಗ, ಸ್ವಾಭಾವಿಕವಾಗಿ ಉತ್ತಮ ವಾದ ಸ್ವರ ಹೊರಹೊಮ್ಮುತ್ತದೆ. ಅದರಿಂದ ಹೃದಯಕ್ಕೆ ಆನಂದ, ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ ಎಂದು ಕೂಡ ತಿಳಿಸಿದರು.

ಸದ್ಗುಣ, ಸಚ್ಚಾರಿತ್ರ್ಯ, ಸಹಕಾರ ಮನೋಭಾವನೆ, ಸಂಸ್ಕಾರ ಇವುಗಳು ಭಜನೆಯಿಂದ ಹೊರಬರಲು ಸಾಧ್ಯ. ಇದು ಕೇವಲ ಮಹಿಳೆಯರ ಸಂಘಟನೆ ಮಾತ್ರವಲ್ಲ. ಭಕ್ತಿ ಮತ್ತು ಭಾವದ ಸಮ್ಮೇಲನವಾಗಿದೆ. ಅತಿ ಹೆಚ್ಚು ಸಂಖ್ಯೆಯಲ್ಲಿ ಹೆಣ್ಣು ಮಕ್ಕಳನ್ನು ಸೇರಿಸಿಕೊಂಡು ಇಂತಹ ಕಾರ್ಯಕ್ರಮ ಹಮ್ಮಿಕೊಂಡಾಗ, ನಮಗರಿವಿಲ್ಲದೇ ನಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ಸಿಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಜಿಲ್ಲಾ ಜಂಗಮ ಸಮಾಜ ಅಧ್ಯಕ್ಷ ಟಿ. ವಿ. ಈಶ್ವರಯ್ಯ, ವಿನೋಬನಗರ ವೀರಶೈವ ಸಮಿತಿ ಅಧ್ಯಕ್ಷ ಎಚ್. ಮಲ್ಲಿಕಾರ್ಜುನ ಸ್ವಾಮಿ, ತಾಲೂಕು ಸಮಾಜ ಅಧ್ಯಕ್ಷ ಉಮೇಶ್ ಹಿರೇಮಠ್, ಜಿಲ್ಲಾ ಜಂಗಮ ಮಹಿಳಾ ಸಮಾಜದ ಅಧ್ಯಕ್ಷ ಸುಜಯ ಪ್ರಸಾದ್ ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.