Saturday, February 7, 2026
Saturday, February 7, 2026
Home Blog Page 1862

ಸಂತೋಷ್ ಬಾಬು ಅವರಿಗೆ ಮರಣೋತ್ತರ ಮಹಾವೀರ ಚಕ್ರ ಪ್ರಶಸ್ತಿ

0

ಚೀನಾ ವಿರುದ್ಧದ ಹೋರಾಟದಲ್ಲಿ ಹುತಾತ್ಮರಾಗಿದ್ದ ಕರ್ನಲ್ ಬಿಕ್ಕುಮಳ್ಳ ಸಂತೋಷ್ ಬಾಬು ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಹಾವೀರ ಚಕ್ರ ಪ್ರಶಸ್ತಿಯನ್ನು ಮರಣೋತ್ತರವಾಗಿ ಪ್ರದಾನ ಮಾಡಿದರು.
ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮತ್ತು ದೇಶದ ಉನ್ನತ ಸೇನಾಧಿಕಾರಿಗಳ ಉಪಸ್ಥಿತಿಯಲ್ಲಿ ನವದೆಹಲಿಯಲ್ಲಿ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಸಂತೋಷ್ ಬಾಬು ಅವರ ಪತ್ನಿ ಬಿ. ಸಂತೋಷಿ ಮತ್ತು ತಾಯಿ ಮಂಜುಳಾ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.
ಸಂತೋಷ್ ಬಾಬು ಅವರು ಕಳೆದ ವರ್ಷ ಜೂನ್ 15ರಂದು ಪೂರ್ವ ಲಡಾಖ್ ನ ಗಲ್ವಾನ್ ಗಣಿಯಲ್ಲಿ ಚೀನಾ ದಾಳಿಯ ವಿರುದ್ಧದ ಹೋರಾಟದ ನೇತೃತ್ವ ವಹಿಸಿದ್ದ 16ನೇ ರೆಜಿಮೆಂಟ್ ನ ಕಮಾಂಡಿಂಗ್ ಅಧಿಕಾರಿಯಾಗಿದ್ದರು.
ಪರಮವೀರ ಚಕ್ರದ ನಂತರ ಮಹಾವೀರ ಚಕ್ರವು ಎರಡನೇ ಅತ್ಯುನ್ನತ ಶೌರ್ಯ ಪ್ರಶಸ್ತಿಯಾಗಿದೆ.
ಗಲ್ವಾನ್ ಕಣಿವೆಯಲ್ಲಿ ಚೀನಾ ಪಡೆಗಳ ವಿರುದ್ಧ ಯುದ್ಧದಲ್ಲಿ ಹುತಾತ್ಮರಾದ ನುದುರಾಮ್ ಸೊರೆನ್,ಹವಿಲ್ದಾರ್ (ಗನ್ನರ್) ಕೆ.ಪಳನಿ, ನಾಯಕ್ ದೀಪಕ್ ಸಿಂಗ್, ನೈಯಿಬ್ ಸುಬೇದಾರ್, ಮತ್ತು ಸಿಪಾಯಿ ಗುರ್ತೇಜ್ ಸಿಂಗ್ ಅವರಿಗೆ ಮರಣೋತ್ತರವಾಗಿ ವೀರ ಚಕ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಮಳೆ : ಸಂಶೋಧನಾ ಕೇಂದ್ರಕ್ಕೆ ಧಕ್ಕೆ

0

ಕಳೆದ ಎರಡು ವಾರಗಳಿಂದ ಬಿಟ್ಟು ಬಿಡದೆ ಸುರಿದ ಭಾರಿ ಮಳೆಯಿಂದಾಗಿ ಬೆಂಗಳೂರು ನಗರದ ಹಲವು ಪ್ರದೇಶಗಳು ಜಲಾವೃತವಾಗಿದೆ.

ಜಕ್ಕೂರಿನ ಜವಾಹರ ಲಾಲ್ ನೆಹರು ಉನ್ನತ ವೈಜ್ಞಾನಿಕ ಸಂಶೋಧನಾ ಕೇಂದ್ರದ ನೆಲಮಹಡಿಯ ಪ್ರಯೋಗಾಲಯಗಳಿಗೆ ನೀರು ನುಗ್ಗಿದೆ. ಇದರಿಂದ ಸಂಶೋಧನೆಗೆಂದು ಬಳಸುತ್ತಿದ್ದ ಜೀವಕೋಶಗಳು, ಆಕಾರ ಕೋಶಗಳು, ವೈರಾಣುಗಳ ಮಾದರಿಗಳು ಹಾನಿಗೊಳಗಾಗಿವೆ. ಮಳೆಯಿಂದಾಗಿ ದಶಕಗಳ ಸಂಶೋಧನೆಗೆ ಧಕ್ಕೆಯಾಗಿದೆ.

ಸಂಶೋಧನೆ ಕೇಂದ್ರದ ಅಣು ಜೀವವಿಜ್ಞಾನ ಮತ್ತು ವಂಶವಾಹಿ ವಿಜ್ಞಾನದ ಪ್ರಯೋಗಾಲಯ ಸೇರಿದಂತೆ ಅನೇಕ ಪ್ರಯೋಗಗಳಿಗೆ ನಾಲ್ಕೈದು ಅಡಿಗಳಷ್ಟು ಮಳೆ ನೀರು ನುಗ್ಗಿದೆ. ಅತ್ಯಾಧುನಿಕ ಸೂಕ್ಷ್ಮ ದರ್ಶಕಗಳು, ಮೈನಸ್ 80 ಸೆಂಟಿಗ್ರೇಡ್ ವರೆಗೂ ಕಾಯ್ದುಕೊಳ್ಳುವ ಶೀತಲೀಕರಣ ಯಂತ್ರಗಳು ಸೇರಿದಂತೆ ಹಲವು ಉಪಕರಣಗಳು ಹಾಳಾಗಿವೆ.

20 ವರ್ಷ ಹಿಂದಿನಿಂದಲೂ ಸಂಗ್ರಹಿಸಿಟ್ಟಿದ್ದ ಜೀವಕೋಶಗಳ ಮಾದರಿಗಳು ಮಳೆಯಿಂದಾಗಿ ಅಪಾರ ನಷ್ಟಕ್ಕಿಡಾಗಿದೆ. ನಷ್ಟದ ಪ್ರಮಾಣವನ್ನು ಮತ್ತಷ್ಟು ಲೆಕ್ಕ ಹಾಕಬೇಕಿದೆ ಎಂದು ಜೆ ಎನ್ ಸಿ ಎ ಎಸ್ ಆರ್ ಅಧ್ಯಕ್ಷ ಪ್ರೊ. ಗಿರಿಧರ್.ಯು.ಕುಲಕರ್ಣಿ ತಿಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಸೇನಾ ಕಾರ್ಯನಿರತರಿಗೆ ಉಕ್ಕಿನ ತಂಗುದಾಣ

0

ಗಡಿ ನಿಯಂತ್ರಣ ರೇಖೆಗೆ ಹೊಂದಿಕೊಂಡು ಎತ್ತರದ, ಸೂಕ್ಷ್ಮ ಪ್ರದೇಶದಲ್ಲಿ ನಿಯೋಜಿಸಲಾದ ಗಡಿ ಭದ್ರತಾ ಪಡೆ ಸಿಬ್ಬಂದಿಯು, ಜೀವನ ಗುಣಮಟ್ಟ ಉತ್ತಮಪಡಿಸುವ ನಿಟ್ಟಿನಲ್ಲಿ ಉಕ್ಕಿನಿಂದ ನಿರ್ಮಿಸಿದ ತಂಗುದಾಣ ಪಡೆಯಲಿದ್ದಾರೆ.
ಉಕ್ಕಿನ ಹಾಳೆಗಳನ್ನು ಬಳಸಿ ನಿರ್ಮಿಸಲಾದ ಶೌಚಾಲಯ, ಅಡುಗೆ ಕೋಣೆ, ವಿರಾಮ ಕೋಣೆಯ ಮಾದರಿಗಳನ್ನು ಎಸ್ ಡಿಎಲ್ ಗಳಲ್ಲಿ ಅಳವಡಿಸಲಾಗುತ್ತದೆ. ಮೊದಲ ಹಂತದ ಜಾರಿ ನಂತರ ಇನ್ನೂ ಹೆಚ್ಚಿನ ಎಸ್ ಬಿಎಂ ಗಳಿಗೆ ಈ ಸೌಲಭ್ಯ ವಿಸ್ತರಿಸಲಾಗುವುದು ಎಂಬ ಮಾಹಿತಿ ದೊರೆತಿದೆ.
ಗಡಿಯ ಮುಂಚೂಣಿ ರಕ್ಷಣಾ ನೆಲೆ ಸಿಬ್ಬಂದಿಗಳ ಜೀವನ ಗುಣಮಟ್ಟ ಉತ್ತಮಗೊಳಿಸಲು ಕ್ರಮಕೈಗೊಳ್ಳಲಾಗಿದೆ.
ಬಿಎಸ್ಎಫ್ ಸಿಬ್ಬಂದಿ ಸ್ವತಂತ್ರವಾಗಿ ಅಥವಾ ಸೇನೆ ಜೊತೆಗೂಡಿ ಕಾರ್ಯ ನಿರ್ವಹಿಸಲಿದ್ದಾರೆ. ಗಡಿ ನಿಯಂತ್ರಣ ರೇಖೆಯ ವ್ಯಾಪ್ತಿ ಒಟ್ಟು 772 ಕಿ.ಮೀ. ಆಗಿದ್ದು, ಈ ಪೈಕಿ ಸುಮಾರು 430 ಕಿ.ಮೀ. ಉದ್ದದ ಅಂತರವು ಜಮ್ಮು ಮತ್ತು ಕಾಶ್ಮೀರದ ವ್ಯಾಪ್ತಿಯಲ್ಲಿದೆ.
ಬಿಎಸ್ಎಫ್ ನ ಅಧಿಕಾರಿ ಮೂಲಗಳ ಪ್ರಕಾರ, ಗಡಿನಿಯಂತ್ರಣ ರೇಖೆಯುದ್ದಕ್ಕೂ ಇರುವ ಇಂತಹ ಸುಮಾರು 115 ಎಫ್ ಡಿಎಲ್ ಗಳ ತಂಗುದಾಣಗಳನ್ನು ಉಕ್ಕಿನಿಂದ ನಿರ್ಮಿಸಿದ ವಿಶಾಲ ತಂಗುದಾಣಗಳಾಗಿ 35 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಗುರಿ ಇದೆ.
ಪ್ರಧಾನ ನಿರ್ದೇಶಕರು ಈ ಬಗ್ಗೆ ಮರುಬಳಕೆ ಇಂಧನ ಸಚಿವಾಲಯದ ಅಧಿಕಾರಿಗಳನ್ನು ಭೇಟಿಯಾಗಿ, ಈ ಎಫ್ ಡಿಎಲ್ ಗಳಿಗೆ ಸೋಲಾರ್ ಆಧಾರಿತ ವಿದ್ಯುತ್ ಯೋಜನೆ ಮಂಜೂರಾತಿ ಕೋರಿದ್ದು, ಇದಕ್ಕೆ ಔಪಚಾರಿಕ ಸಮ್ಮತಿ ದೊರೆತಿದೆ. ಈ ತಂಗುದಾಣಗಳಲ್ಲಿ ಸದ್ಯ ಅಡುಗೆ ಇನ್ನಿತರ ಉದ್ದೇಶಗಳಿಗೆ ಸೀಮೆಎಣ್ಣೆ ಮತ್ತು ಡೀಸೆಲ್ ಅವಲಂಬಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

“ಹಾದಿಗಲ್ಲು” : ಸಹೃದಯ ಸಂವಾದ

0

ಯುವ ಸಮುದಾಯದವರಲ್ಲಿ ಪ್ರೇರಣೆ ತುಂಬಬಲ್ಲ ಸ್ಫೂರ್ತಿಯುತ ಅಂಶಗಳ ಶಕ್ತಿಯ ಸಾಧನವಾಗಿ ಕೆ.ಎ.ದಯಾನಂದ ಅವರ “ಹಾದಿಗಲ್ಲು” ಕೃತಿ ಮೂಡಿಬಂದಿದೆ ಎಂದು ವಿಮರ್ಶಕ ಡಾ. ರಾಜೇಂದ್ರ ಚೆನ್ನಿ ಹೇಳಿದರು.
ಜಿಲ್ಲಾ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಿದ್ದ ಮಾನ್ಯ ಕೆ.ಎ.ದಯಾನಂದ ಅವರ ಆತ್ಮವೃತ್ತಾಂಶ “ಹಾದಿಗಲ್ಲು” ಪುಸ್ತಕದ 7ನೇ ಮುದ್ರಣ ಲೋಕಾರ್ಪಣೆ ಹಾಗೂ ಕೃತಿ ಕುರಿತು “ಸಮಾನ ಮನಸ್ಕರೊಂದಿಗೆ ಸಂವಾದ”ಕಾರ್ಯಕ್ರಮ ನಡೆಯಿತು.
ಬಡ ಕುಟುಂಬದಲ್ಲಿ ಜನಿಸಿ ಕಷ್ಟದಲ್ಲಿಯೇ ಜೀವನ ನಡೆಸುವ ಜತೆಯಲ್ಲಿ ಯಶಸ್ಸಿನ ಮೆಟ್ಟಿಲು ಹತ್ತುವುದು ಸವಾಲು. ಆದರೆ ಇವರು ನಡೆದು ಬಂದ ಹಾದಿಯು ಅನೇಕ ಸವಾಲುಗಳನ್ನು ದಾಟಿದ ಸಾಹಸಯಾತ್ರೆಯ ಸಾಧ್ಯತೆಯನ್ನು ತೆರೆದಿಡುತ್ತದೆ. ಏನೇ ಅಡೆತಡೆ ಬಂದರೂ ಅದನ್ನೆಲ್ಲಾ ಮೀರಿ ಸಾಧಿಸುವ ಆತ್ಮವಿಶ್ವಾಸ ಹೆಚ್ಚಿಸುತ್ತದೆ. ಎಲ್ಲರೂ ಕೃತಿಯನ್ನು ಓದುವ ಮೂಲಕ ಪ್ರೇರಣೆ ಪಡೆದುಕೊಳ್ಳಬೇಕು ಎಂದು ಡಾ. ರಾಜೇಂದ್ರ ಚೆನ್ನಿ ಅಭಿಪ್ರಾಯ ವ್ಯಕ್ತಪಡಿಸಿದರು.


ಕೆಲವು ವ್ಯಕ್ತಿಗಳ ಆತ್ಮಕತೆಯೂ ಹುಟ್ಟಿದಾಗಲೇ ಯಶಸ್ಸು ದೊರೆಯುವುದು ನಿಶ್ಚಿತ ಎಂಬಂತೆ ವರ್ಣಿಸುವ, ವೈಭವೀಕರಿಸುವ ರೀತಿಯಲ್ಲಿರುತ್ತದೆ. ಆದರೆ ಕೆ.ಎ. ದಯಾನಂದ ಅವರ ಹಾದಿಗಲ್ಲು ಕೃತಿಯಲ್ಲಿ ಬಾಲ್ಯ, ವಿದ್ಯಾರ್ಥಿ ಹಂತದಿಂದ ಹಿಡಿದು ಜೀವನದಲ್ಲಿ ಹಂತಹಂತವಾಗಿ ನೋವಿನ ಸರಮಾಲೆ ಎದುರಿಸಿ ಗೆಲುವಿನ ದಾರಿಗೆ ಬರುವ ಕಥನವನ್ನು ಕಾಣಬಹುದಾಗಿದೆ. ಈ ಪುಸ್ತಕವು ಪ್ರಾಮಾಣಿಕತೆ, ಕ್ರಿಯಾತ್ಮಕ ಆಲೋಚನೆಗಳ ಬಗ್ಗೆ ಪ್ರೇರಣೆ ಒದಗಿಸುತ್ತದೆ ಎಂದರು.
ಬಿಬಿಎಂಪಿ ಆಡಳಿತ ವಿಶೇಷ ಅಧಿಕಾರಿ ಕೆ.ಎ.ದಯಾನಂದ ಅವರು ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಯುವಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ನನ್ನ ವೃತ್ತಿಯ ಆರಂಭದ ಅವಧಿಯಲ್ಲೇ ಮಾಡುತ್ತಿದ್ದೆ. ನಂತರ ವಿವಿಧ ಜಿಲ್ಲೆಗಳಲ್ಲಿ ಕೆಲಸ ಮಾಡಿದೆ. ಯುವಜನರಿಗೆ ಆತ್ಮಸ್ಥೈರ್ಯ ತುಂಬಲು ಸ್ಫೂರ್ತಿಯುತ ಅಂಶಗಳನ್ನು ಪುಸ್ತಕ ರೂಪದಲ್ಲಿ ತರುವ ಆಲೋಚನೆ ನಡೆಸಿದೆ. ಕೊರೊನಾ ಲಾಕ್‌ಡೌನ್ ಆರಂಭದಲ್ಲಿ ಪುಸ್ತಕ ಪೂರ್ಣಗೊಳಿಸಿದೆ. ಇದೀಗ 7ನೇ ಮುದ್ರಣ ಕಂಡಿರುವುದು ಸಂತಸದ ಸಂಗತಿ ಎಂದು ತಿಳಿಸಿದರು.
ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಸಮನ್ವಯ ಟ್ರಸ್ಟ್ ನಿರ್ದೇಶಕ ಸಮನ್ವಯ ಕಾಶಿ, ರಘುಸಮರ್ಥ ನಾಡಿಗ್, ಅಭಿ, ರೈತ ದುರ್ಗಪ್ಪ ಅಂಗಡಿ, ಸಮನ್ವಯ ಟ್ರಸ್ಟ್ ಸ್ವಯಂಸೇವಕರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಬೂಸ್ಟರ್ ಡೋಸ್ ಬೇಕೆ,ಬೇಡವೆ?

0

ಕೊರೊನಾ ವೈರಸ್ ವಿರುದ್ಧ ದ ಲಸಿಕೆ 2 ಡೋಸ್ ಪಡೆದುಕೊಂಡವರಿಗೆ ಬೂಸ್ಟರ್ ಡೋಸ್ ನಿಂದ ಹೆಚ್ಚಿನ ರಕ್ಷಣೆ ಸಿಗುತ್ತದೆ. ಇದಕ್ಕೆ ವೈಜ್ಞಾನಿಕ ಆಧಾರವಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತಿನ ನಿರ್ದೇಶಕ ಡಾ. ಬಲರಾಮ್ ಭಾರ್ಗವ ತಿಳಿಸಿದ್ದಾರೆ.

ಭಾರತದಲ್ಲಿ ಲಸಿಕೆ ನೀಡಿಕೆ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪಿನ ಮುಂದಿನ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ವರದಿಗಳು ತಿಳಿಸಿವೆ.

ಭಾರತದ ಜನರಿಗೆ ಮಾತ್ರವಲ್ಲದೆ, ಜಗತ್ತಿನಾದ್ಯಂತ ಲಸಿಕೆಯು ಎಲ್ಲರಿಗೂ ಸಿಗುವಂತೆ ನೋಡಿಕೊಳ್ಳಲು ಭಾರತ ಬಯಸಿದೆ ಎಂದು ಭಾರ್ಗವ ಅವರು ಹೇಳಿದ್ದಾರೆ.

ಸದ್ಯಕ್ಕೆ ಬೇಕಾದಷ್ಟು ಲಸಿಕೆಗಳು ಸಂಗ್ರಹವಿದೆ. ಎಲ್ಲಾ ವಯಸ್ಕರಿಗೂ 2 ಡೋಸ್ ಲಸಿಕೆ ಹಾಕಿಸುವ ಜವಾಬ್ದಾರಿ ಸರಕಾರದ್ದಾಗಿದೆ. ಪರಿಣತರ ಒತ್ತಾಯದ ಮೇರೆಗೆ ಬೂಸ್ಟರ್ ಡೋಸ್ ಬಗ್ಗೆ ನಿರ್ಧಾರಕ್ಕೆ ಬರಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಹೇಳಿದ್ದಾರೆ.

ಲಸಿಕೆ ಹಾಕಿಸಿಕೊಳ್ಳಲು ಅರ್ಹತೆ ಇರುವ ಶೇ.82 ರಷ್ಟು ಜನರು ಮೊದಲ ಡೋಸ್ ಪಡೆದಿದ್ದಾರೆ. ಎರಡನೇದು ಡೋಸ್ ಶೇ.43ರಷ್ಟು ಜನ ಪಡೆದಿದ್ದಾರೆ. ಒಟ್ಟು 116.87 ಕೋಟಿ ಡೋಸ್ ಲಸಿಕೆಯನ್ನು ಜನರಿಗೆ ಹಾಕಲಾಗಿದೆ. 12 ಕೋಟಿ ಜನರು ಲಸಿಕೆಯ ಎರಡನೇ ಡೋಸ್ ನಿಗದಿತ ಅವಧಿಯೊಳಗೆ ಹಾಕಿಸಿಕೊಂಡಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಸತತ ಪ್ರಯತ್ನದಿಂದ ಯಶಸ್ಸು ಕಟ್ಟಿಟ್ಟ ಬುತ್ತಿ

0

ಸಾಧನೆ ಸಾಧಕನ ಸ್ವತ್ತೇ ಹೊರತು ಸೋಮಾರಿಯ ಸ್ವತ್ತಲ್ಲ. ಸಾಧನೆಗೆ ಶ್ರೀಮಂತರು, ಬಡವರು ಎಂಬ ಭೇದವಿಲ್ಲ. ಆತ್ಮವಿಶ್ವಾಸ, ಛಲ ಮತ್ತು ನಿರಂತರ ಪರಿಶ್ರಮ ಇದ್ದರೆ ಸಾಧನೆ ನಿಮ್ಮನ್ನು ಹುಡುಕಿ ಬರುತ್ತದೆ ಎಂದು ಬಿಬಿಎಂಪಿ ಆಡಳಿತ ವಿಶೇಷ ಅಧಿಕಾರಿ ಕೆ.ಎ. ದಯಾನಂದ್ ಅವರು ಹೇಳಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಭಾಂಗಣದಲ್ಲಿ ವಿ ಆರ್ ಒನ್ ಟೀಮ್ ಮತ್ತು ಸಮನ್ವಯ ಟ್ರಸ್ಟ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆ ತಯಾರಿಯಲ್ಲಿರುವ ಅಭ್ಯರ್ಥಿಗಳಿಗೆ ಸಂವಾದ ಕಾರ್ಯಕ್ರಮವನ್ನು ನಡೆಸಲಾಯಿತು.


ಜೀವನದಲ್ಲಿ ಏನನ್ನಾದರೂ ಸಾಧಿಸಬೇಕು ಎಂಬ ಗುರಿ ಇದ್ದರೆ ಸಾಲದು, ಬದಲಾಗಿ ಗುರಿಮುಟ್ಟಲು ಸತತ ಪ್ರಯತ್ನ ವಿದ್ದಾಗ ಮಾತ್ರ ಅಂದುಕೊಂಡಿದ್ದನ್ನು ಸಾಧಿಸಬಹುದು. ಪ್ರತಿಯೊಬ್ಬರಲ್ಲಿಯೂ ವೈಶಿಷ್ಟ್ಯ ಇದ್ದೇ ಇರುತ್ತದೆ. ಇನ್ನೊಬ್ಬರೊಂದಿಗೆ ಹೋಲಿಕೆ ಮಾಡಿಕೊಳ್ಳುವುದು, ಅನುಸರಿಸುವುದು ಸರಿಯಲ್ಲ. ನಿಮ್ಮದೇ ಆದ ವ್ಯಕ್ತಿತ್ವದೊಂದಿಗೆ, ಕ್ರಿಯಾತ್ಮಕ ಆಲೋಚನೆಗಳೊಂದಿಗೆ ಅಧ್ಯಯನ ನಡೆಸುವ ಪರಿಪಾಠ ಬೆಳೆಸಿಕೊಳ್ಳಬೇಕು. ಎಲ್ಲರಿಗೂ ಸ್ಪೂರ್ತಿ ಆಗುವಂತೆ ಬದುಕು ರೂಪಿಸಿಕೊಳ್ಳಬೇಕು ಎಂದು ದಯಾನಂದ್ ರವರು ಸಲಹೆ ನೀಡಿದರು.
ಕೆ.ಎ.ದಯಾನಂದ್ ಅವರು ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಸಹ್ಯಾದ್ರಿ ಉತ್ಸವ ನಡೆಸಿದ್ದರು. ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಯಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದರು. ದಯಾನಂದ ಅವರ ಜೀವನವೇ ಎಲ್ಲರಿಗೂ ಸ್ಪೂರ್ತಿ ಎಂದು ಸಮನ್ವಯ ಟ್ರಸ್ಟ್ ನಿರ್ದೇಶಕ ಸಮನ್ವಯ ಕಾಶಿ ಯವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಜೆ.ಆರ್. ವಾಸುದೇವ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ಗೋಪಿನಾಥ್, ಬಿ. ಆರ್.ಸಂತೋಷ್, ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಟಿ.ಆರ್. ಅಶ್ವತ್ ನಾರಾಯಣ ಶೆಟ್ಟಿ, ವಿ ಆರ್ ಒನ್ ಟೀಮ್ ನ ಜಗದೀಶ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಅಡಿಕೆಗೆ ಭವಿಷ್ಯವಿದೆ- ಆರಗ ಜ್ಞಾನೆಂದ್ರ

0

ತೀರ್ಥಹಳ್ಳಿಯ ಟಿಎಪಿಸಿಎಂಎಸ್ ಸಭಾಂಗಣದಲ್ಲಿ ಕೃಷಿಕರ ಸೌಹಾರ್ದ ಸಹಕಾರಿಯ ವಾರ್ಷಿಕ ಸಭೆ ನಡೆಯಿತು. ಇದರ ಅಧ್ಯಕ್ಷತೆಯನ್ನು ಮಾನ್ಯ ಗೃಹಸಚಿವ ಆರಗ ಜ್ಞಾನೇಂದ್ರ ಅವರು ವಹಿಸಿದ್ದರು.

ರಾಜ್ಯ ಸರ್ಕಾರ ಅಡಿಕೆ ಬೆಳೆಗಾರರ ಹಿತ ಕಾಪಾಡುತ್ತಿದೆ ವೈಜ್ಞಾನಿಕವಾಗಿ ಅಡಿಕೆ ಆರೋಗ್ಯವೃದ್ಧಿಗೆ ಸಹಾಯಕ ಎಂದು ಗೃಹಸಚಿವರ ಜ್ಞಾನೇಂದ್ರ ಅವರು ಅಭಿಪ್ರಾಯಪಟ್ಟಿದ್ದಾರೆ.

ಅಡಿಕೆಗೆ ಇನ್ನಷ್ಟು ಉತ್ತಮ ಭವಿಷ್ಯ ಇದೆ. ಬೆಳೆಗಾರರು ಆತಂಕ ಪಡುವ ಅಗತ್ಯವಿಲ್ಲ. ಕೆಲವು ತಿಂಗಳುಗಳಿಂದ ಅಡಿಕೆಗೆ ಮಾರುಕಟ್ಟೆಯಲ್ಲಿ ಉತ್ತಮ ಧಾರಣೆ ದೊರಕಿದೆ. ಮಲೆನಾಡು ಭಾಗದ ಜನರ ಬದುಕು ಅಡಿಕೆ ಧಾರಣೆ ಯಿಂದ ಸುಧಾರಣೆ ಕಂಡಿದೆ. ಅಕಾಲಿಕ ಮಳೆಯಿಂದಾಗಿ ಅಡಿಕೆ ಫಸಲು ಅಪಾರ ಪ್ರಮಾಣದಲ್ಲಿ ನಷ್ಟವಾಗಿದೆ ಎಂದು ಹೇಳಿದರು.

ಅಡಿಕೆಗೊನೆ ತೆಗೆಯುವ ಫೈಬರ್ ದೋಟಿಗೆ ಸಹಾಯಧನ ನೀಡಲಾಗುತ್ತದೆ. ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ 300 ಕೋಟಿ ಸಹಾಯಧನ ಬಿಡುಗಡೆ ಮಾಡಲಾಗಿದೆ. ಮುಖ್ಯಮಂತ್ರಿ ಜೊತೆ ಚರ್ಚಿಸಿ ಮಳೆಯಿಂದ ಆಗಿರುವ ನಷ್ಟಕ್ಕೆ ಪರಿಹಾರ ದೊರಕಿಸಲು ಹೆಚ್ಚಿಸಲಾಗುವುದು ಎಂದು ಗೃಹ ಸಚಿವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಸೌಹಾರ್ದ ಸಹಕಾರಿ ನಿರ್ದೇಶಕರು, ಸಿಇಓ ಕವಿತಾ ಜೋಯಿಸ್ ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ವಿಶ್ವಮಾನವತೆಯನ್ನು ಸಾರಿದ ಕನಕದಾಸರು

0

ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತದ ವತಿಯಿಂದ ಕನಕದಾಸರ 534ನೇ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು.
“ಕನಕದಾಸರು ಜಾತ್ಯಾತೀತ ಮನೋಭಾವ ಬಿತ್ತುವ ಮೂಲಕ ವಿಶ್ವ ಮಾನವತೆಯನ್ನು ಸಾರಿದ ಮಹನೀಯರಾಗಿದ್ದಾರೆ” ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದರು.
ಕನ್ನಡ ಸಾಹಿತ್ಯದ ನಾನಾ ಪ್ರಕಾರಗಳಲ್ಲಿ ದಾಸ ಸಾಹಿತ್ಯಕ್ಕೆ ಮಹತ್ವದ ಸ್ಥಾನವಿದೆ. ದಾಸ ಶ್ರೇಷ್ಠರು ಎಂಬ ಪದಕ್ಕೆ ಅನ್ವರ್ಥವಾಗಿದ್ದ ಕನಕದಾಸರು ಎಲ್ಲಾ ವರ್ಗಗಳ ಜನರಿಗೂ ಆದರ್ಶಪ್ರಾಯ. ಸಮಾಜದ ಮೇಲ್ವರ್ಗ ಹಾಗೂ ತಳಸಮುದಾಯಗಳ ವೈರುಧ್ಯಗಳನ್ನು ತಮ್ಮ ಕೃತಿಗಳಲ್ಲಿ ಪ್ರತಿಪಾದಿಸಿರುವ ಕನಕದಾಸರ ಚಿಂತನೆಗಳನ್ನು ನಾವು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್, ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ, ಉಪವಿಭಾಗಾಧಿಕಾರಿ ಪ್ರಕಾಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್, ಕುರುಬ ಸಮಾಜದ ಮುಖಂಡರಾದ ನವುಲೆ ಈಶ್ವರಪ್ಪ, ಕೆ. ರಂಗನಾಥ್, ವೇಣುಗೋಪಾಲ್ ಇನ್ನಿತರರು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಕರ್ನಾಟಕದ ಕೈತಪ್ಪಿದ T-20 ಕಿರೀಟ

0

ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಕ್ರಿಕೆಟ್ ಟಿ – 20 ಟೂರ್ನಿಯ ಫೈನಲ್ ಪಂದ್ಯವು ತಮಿಳುನಾಡು ಮತ್ತು ಕರ್ನಾಟಕ ತಂಡಗಳ ನಡುವೆ ಪಂದ್ಯ ನಡೆಯಿತು. ಕೊನೆಯ ಎಸೆತದಲ್ಲಿ ಆಟದ ತಿರುವನ್ನೇ ಬದಲಾಯಿಸಿದ ತಮಿಳುನಾಡು ತಂಡ ಕರ್ನಾಟಕವನ್ನು ಸೋಲಿಸಿ ಚಾಂಪಿಯನ್ ಪಟ್ಟ ಗಳಿಸಿಕೊಂಡಿತು.

ದೆಹಲಿಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ತಮಿಳುನಾಡು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಕರ್ನಾಟಕ ಬ್ಯಾಟಿಂಗ್ ಆರಂಭಿಸಿ ಕರುಣ್ ನಾಯರ್ ,,(18). ಬಿ.ಆರ್ .ಶರತ್ (16,). ಅಭಿನವ್ ಮನೋಹರ್ (46). ಪ್ರವೀಣ್ ದುಬೆ (33). ಎಸ್ ಸುಚಿತ್ (18). ಇವರೆಲ್ಲ ಸೇರಿ ಕರ್ನಾಟಕದ ಇನ್ನಿಂಗ್ಸ್ 7 ವಿಕೆಟ್ ಪತನಕ್ಕೆ 151 ರನ್ ಕಟ್ಟಿಕೊಟ್ಟರು. ಸ್ಪಿನ್ನರ್ ಗಳ ಎದುರು ಬ್ಯಾಟಿಂಗ್ ಆಡಿದ ಕರ್ನಾಟಕ ತಂಡವು ವೈಫಲ್ಯ ಅನುಭವಿಸಿತು.

152 ರನ್ ಗಳ ಗೆಲುವಿನ ಗುರಿಯನ್ನು ಇಟ್ಟುಕೊಂಡು ಆಡಿದ ತಮಿಳುನಾಡು ತಂಡದ ಪರ ಆರಂಭಿಕ ಜೋಡಿ ನಿಶಾಂತ್ (25) ಮತ್ತು ನಾರಾಯಣ್ ಜಗದೀಶನ್ (41) ಉತ್ತಮ ಆಟವಾಡಿದರು. ಆದರೆ ಮಧ್ಯಮ ಕ್ರಮಾಂಕದ ಕುಸಿತದಿಂದಾಗಿ ತಂಡ ಒತ್ತಡಕ್ಕೆ ಒಳಗಾಗಿತ್ತು.

ವಿಜಯ್ ಶಂಕರ್, ನಾರಾಯಣ ಜಗದೀಶನ, ಮತ್ತು ಸಂಜಯ್ ಯಾದವ್ ಅವರ ವಿಕೆಟ್ಗಳು ಉರುಳಿದಾಗ ತಂಡಕ್ಕೆ 17 ಎಸೆತಗಳಲ್ಲಿ 36 ರನ್ ಬೇಕಾಗಿತ್ತು. ಈ ಸಂದರ್ಭದಲ್ಲಿ ಮಹಮ್ಮದ್ ಅವರ ನೆರವಿನೊಂದಿಗೆ ಶಾರುಖ್ ಖಾನ್ ದಿಟ್ಟ ಆಟ ಆಡಿದರು.7 ಎಸೆತ ಬಾಕಿ ಇರುವಾಗ ಮಹಮ್ಮದ್ ಕೂಡ ಔಟಾದರು.
ಆದರೆ ಶಾರುಕ್ ಖಾನ್ ಎದೆಗುಂದಲಿಲ್ಲ. ಪ್ರತೀಕ್ ಜೈನ್ ಹಾಕಿದ 19 ನೇಯ ಓವರ್ ನಲ್ಲಿ ಗೆಲುವಿಗೆ 16 ರನ್ ಬೇಕಾಗಿತ್ತು. ಬೌಂಡರಿ ಹಾಗೂ ಸ್ಕ್ವೇರ್ ಲೆಗ್ ಮೇಲಿಂದ ಸಿಕ್ಸರ್ ಸಿಡಿಸಿ ಶಾರುಖ್ ಖಾನ್ ಸಂಭ್ರಮಿಸಿದರು. ಹಾಗೆಯೇ ತಂಡದ ಮೊತ್ತ 150 ರನ್ ದಾಟಲು ನೆರವಾದರು. ಟಿ – 20 ಪಂದ್ಯಗಳಲ್ಲಿ ಗೆಲುವು ಯಾರ ಪರ ಎಂದು ಹೇಳಲು ಸಾಧ್ಯವಾಗುವುದಿಲ್ಲ. ಕೊನೆಯ ಎಸೆತ ಇದ್ದಾಗ ಗೆಲುವು ಅಸಾಧ್ಯ ಅಂದುಕೊಳ್ಳುತ್ತಿದ್ದಂತೆಯೇ ಸಿಕ್ಸರ್ ಹೊಡೆದು ಪಂದ್ಯದ ಗತಿಯನ್ನೇ ಬದಲಾಯಿಸುತ್ತಾರೆ. ಅದಕ್ಕೆ ಈ ಪಂದ್ಯವೇ ರೋಚಕ ಸಾಕ್ಷಿ.

ಇಲ್ಲಿ ಆದದ್ದು ಹೀಗೆ ಕೊನೆಯ ಎಸೆತ 5 ರನ್ ಬೇಕಿತ್ತು. ಶಾರುಖಾನ್ ಸಿಕ್ಸರ್ ಎತ್ತಿ ಕರ್ನಾಟಕದ ಜಯವನ್ನು ಕಸಿದುಕೊಂಡರು.

ತಮಿಳುನಾಡು ತಂಡ ಸತತವಾಗಿ ಈ ಟ್ರೋಫಿಯನ್ನು ಎರಡನೇ ಬಾರಿಗೆ ಗೆದ್ದುಕೊಂಡಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಸಾಂಕ್ರಾಮಿಕ ರೋಗ ತಡೆಯಲು ಸಾರ್ವಜನಿಕರ ಸಹಕಾರ ಅಗತ್ಯ

0

ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಆರೋಗ್ಯ ಇಲಾಖೆಯೊಂದಿಗೆ ಸಹಕಾರ ನೀಡಬೇಕು ಎಂದು ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ ಮನವಿ ಮಾಡಿದ್ದಾರೆ.
ಸಾಂಕ್ರಾಮಿಕ ರೋಗಗಳು ಹರಡದಂತೆ ತಡೆಯಲು ಸಾರ್ವಜನಿಕರ ಪಾತ್ರ ಬಹಳ ಮುಖ್ಯವಾಗಿದೆ. ವಾಂತಿ ಬೇಧಿ ಉಂಟಾದಾಗ ಡಿ ಹೈಡ್ರೇಷನ್ ಆಗುವುದರಿಂದ ತಕ್ಷಣ ಚಿಕಿತ್ಸೆಯನ್ನು ಮನೆಯಲ್ಲಿಯೇ ಪ್ರಾರಂಭಿಸಬೇಕು. ಒಂದು ಲೀಟಲ್ ಶುದ್ಧವಾದ ನೀರಿಗೆ ಒಂದು ಚಮಚ ಉಪ್ಪು ಮತ್ತು 8 ಚಮಚ ಸಕ್ಕರೆ ದ್ರಾವಣ ತಯಾರಿಸಿ ಆಸ್ಪತ್ರೆಗೆ ಹೋಗುವವರಿಗೆ ಸ್ವಲ್ಪ ಸ್ವಲ್ಪ ಕುಡಿಯಬೇಕು ಎಂದು ತಿಳಿಸಿದರು.
ನಗರ ಪ್ರದೇಶ ವ್ಯಾಪ್ತಿಯಲ್ಲಿ ಆರೋಗ್ಯ ಕಾರ್ಯಕರ್ತರಿಂದ ಪ್ರತಿ ಮನೆಗೆ ಭೇಟಿ ನೀಡಿ ಕ್ರಿಮಿ, ಜ್ವರ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗಿದೆ. ಸಾಂಕ್ರಾಮಿಕ ರೋಗಗಳ ಬಗ್ಗೆ ನಿಗಾವಹಿಸಲು ಎಲ್ಲಾ ಆರೋಗ್ಯ ಕಾರ್ಯಕರ್ತರ ವಾಟ್ಸಪ್ ಗ್ರೂಪ್ ಗಳನ್ನು ರಚಿಸಲಾಗಿದೆ. ಪ್ರತಿ ದಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ರಾಪಿಡ್ ರೆಸ್ಪಾನ್ಸ್ ತಂಡವನ್ನು ರಚಿಸಲಾಗಿದೆ ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿ ಪ್ರಸ್ತುತ ವರ್ಷ ಇದುವರೆಗೆ ಡೆಂಗ್ಯೂ 381, ಚಿಕನ್ ಗುನ್ಯಾ 169, ಮಲೇರಿಯಾ 2, ಇಲಿಜ್ವರ 22, ಮತ್ತು ಮಂಗನಕಾಯಿಲೆ 13 ಪ್ರಕರಣಗಳು ಪತ್ತೆಯಾಗಿವೆ ಎಂದು ಅವರ ಪತ್ರಿಕಾ ಪ್ರಕಟಣೆ ತಿಳಿಸಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.