ಕರ್ನಾಟಕದಲ್ಲಿ ಮಳೆಯಿಂದ ಹಾನಿಯಾಗಿರುವ ಬಗ್ಗೆ ತಕ್ಷಣ ಸಮೀಕ್ಷೆ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರದ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿಯೂ ಸಹ ಬೆಳೆ ಹಾನಿ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಎಲ್ಲ ಮಾಹಿತಿ ಲಭ್ಯವಾದ ಬಳಿಕ ಪರಿಹಾರ ಕ್ರಮ ಕೈಗೊಳ್ಳಲಾಗುವುದು. ಬೆಳೆ ನಷ್ಟಕ್ಕೆ ಒಳಗಾಗಿರುವ ರೈತರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು. ಕರ್ನಾಟಕ ಸೇರಿದಂತೆ ಆಂಧ್ರಪ್ರದೇಶ ತಮಿಳುನಾಡಿನಲ್ಲಿ ಭಾರಿ ಮಳೆಯಿಂದಾಗಿ ಸಾಕಷ್ಟು ಹಾನಿಯಾಗಿದೆ. ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಗೃಹ ಸಚಿವರು ಹಾಗೂ ಪ್ರಧಾನಮಂತ್ರಿಯವರು ಸಂಪರ್ಕದಲ್ಲಿದ್ದಾರೆ. ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
ಚಿಕ್ಕಬಳ್ಳಾಪುರದಲ್ಲಿ ಬಿದ್ದ ಭಾರಿ ಮಳೆ ಪರಿಣಾಮವಾಗಿ, ಹಲವಾರು ಜನ ಮನೆ ಕಳೆದುಕೊಂಡಿದ್ದಾರೆ. ಮನೆ ಕಳೆದುಕೊಂಡವರಿಗೆ ಪರಿಹಾರ ಹಣ ಹಾಗೂ ಬೆಳೆ ಹಾನಿ ಬಗ್ಗೆ ತ್ವರಿತ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅನೇಕ ಮಂದಿ ತಮ್ಮ ವಾಸದ ಮನೆ ಕಳೆದುಕೊಂಡಿದ್ದಾರೆ. ಸಂಪೂರ್ಣವಾಗಿ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ. ಮಳೆಯಿಂದಾಗಿ ಜಖಂ ಆದ ಮನೆಗಳಿಗೆ 3 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಅವರು ಹೇಳಿದ್ದಾರೆ.
ಚಿಕ್ಕಬಳ್ಳಾಪುರದ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ಜನರ ಸಂಕಷ್ಟಗಳನ್ನು ಮುಖ್ಯಮಂತ್ರಿಗಳು ಆಲಿಸಿದರು. ಇದರ ಬಗ್ಗೆ ಕ್ರಮ ಕೈಗೊಳ್ಳಲು ಬೆಂಗಳೂರಿನ ಉನ್ನತ ಅಧಿಕಾರಿಗಳು, ಸಚಿವರ ಸಭೆ ನಡೆಸುವಂತೆ ಸೂಚನೆ ನೀಡಿದ್ದಾರೆ.
ನಿರಾಶ್ರಿತರ ನೆರವಿಗೆ ತಕ್ಷಣ ಧಾವಿಸಬೇಕು. ವಿಪತ್ತು ನಿರ್ವಹಣಾ ತಂಡ ದಿನದ 24 ಗಂಟೆಯೂ ಕಾರ್ಯನಿರ್ವಹಿಸಬೇಕು. ಬೆಳೆಹಾನಿಗೆ ಸಂಬಂಧಿಸಿದ ಪರಿಹಾರ ನೀಡಲು ಪ್ರಸ್ತಾವನೆ ಸಿದ್ಧಪಡಿಸಬೇಕು. ನಷ್ಟದ ಅಂದಾಜಿನ ಬಗ್ಗೆ ಕೇಂದ್ರಕ್ಕೆ ಮನವಿ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಅವರು ಸೂಚಿಸಿದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
ಚಿನ್ನ ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಆಭರಣ ಬೇಕೋ, ನಗದು ಹಣ ಬೇಕೋ ಎಂದು ಕೇಳಿದರೆ ಬುದ್ದಿವಂತರ ಆಯ್ಕೆ ಚಿನ್ನವೆ. ನಗದು ಹಣಕ್ಕೆ ಹೋಲಿಸಿದರೆ ಬಿಟ್ ಕಾಯಿನ್ ಮೌಲ್ಯವೇ ಜಾಸ್ತಿ. ಬಿಟ್ ಕಾಯಿನ್ ಗಿಂತ ಚಿನ್ನದ ಮೌಲ್ಯವೇ ಜಾಸ್ತಿ. ಹಾಗಾಗಿ, ರಾಜ್ಯದಲ್ಲಿ ಚಿನ್ನ ಮತ್ತು ಬೆಳ್ಳಿ ವಜ್ರಾಭರಣಗಳ ಮೇಲೆ ಬಂಡವಾಳ ಹೂಡಿಕೆ ಮಾಡುತ್ತಿರುವವರ ಸಂಖ್ಯೆ ದಿಢೀರ್ ಹೆಚ್ಚಳವಾಗಿದೆ. ಸಾಮಾನ್ಯ ದಿನಗಳಿಗೆ ಹೋಲಿಸಿದರೆ ಈಗ ಚಿನ್ನಾಭರಣಗಳ ವಹಿವಾಟು ಶೇಕಡಾ 20 ರಷ್ಟು ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ. ರಾಜ್ಯದಲ್ಲಿ ವಜ್ರ ಚಿನ್ನ ಮತ್ತು ಬೆಳ್ಳಿ ಆಭರಣಗಳ ವಹಿವಾಟು ಸಾಮಾನ್ಯ ದಿನಗಳಿಗಿಂತ 20% ಹೆಚ್ಚಾಗಿದೆ. ಇದರಿಂದ ಚಿನ್ನಾಭರಣಗಳ ದರ ಏರಿಕೆಯಾಗಿದೆ. ಹೂಡಿಕೆದಾರರಿಗೆ ಚಿನ್ನ ಅತ್ಯಂತ ಸುರಕ್ಷಿತ. ಹೀಗಾಗಿ, ಕೆಲವರು ಕೋಟ್ಯಂತರ ರೂಪಾಯಿ ಮೌಲ್ಯದ ಆಭರಣಗಳ ಖರೀದಿಯಲ್ಲಿ ತೊಡಗಿದ್ದಾರೆ ಎಂದು ರಾಜ್ಯ ಆಭರಣ ವರ್ತಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾದ ಡಾ. ಬಿ ರಾಮಾಚಾರಿ ಅವರು ತಿಳಿಸಿದ್ದಾರೆ. 2015ರಲ್ಲಿ ಪ್ರತಿ ಗ್ರಾಂ. ಚಿನ್ನಕ್ಕೆ ಸರಾಸರಿ 2,600 ರೂಪಾಯಿ ಇತ್ತು. ಈಗ ಪ್ರತಿ ಗ್ರಾಂ. ಚಿನ್ನದ ಬೆಲೆ 4,650 ರೂಪಾಯಿ ಇದೆ. ಐದು ವರ್ಷಗಳಲ್ಲಿ ನಾನಾ ಹಂತದಲ್ಲಿ ಹೂಡಿಕೆ ಮಾಡುತ್ತಿರುವ ಸಂಖ್ಯೆ ಹೆಚ್ಚಳವಾಗಿದೆ. ಒಟ್ಟಾರೆಯಾಗಿ ಐದು ವರ್ಷಗಳಲ್ಲಿ ಚಿನ್ನದ ಮೇಲೆ ಹೂಡಿಕೆ ಮಾಡುತ್ತಿರುವವರ ಸಂಖ್ಯೆ ಶೇಕಡಾ 80 ರಷ್ಟು ಏರಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ಶ್ರೀಮಂತರು ಹಾಗೂ ರಾಜಕಾರಣಿಗಳು ಚಿನ್ನಾಭರಣಗಳ ಮೇಲೆ ನೂರಾರು ಕೋಟಿ ರೂಪಾಯಿ ಕಪ್ಪು ಹಣ ಹೂಡಿಕೆ ಮಾಡುತ್ತಿದ್ದರು. ಚುನಾವಣೆ ಸಂದರ್ಭದಲ್ಲಿ ಅಕ್ರಮವಾಗಿ ಸಾವಿರಾರು ಕೋಟಿ ರೂಪಾಯಿ ಚಿನ್ನದ ವಹಿವಾಟು ನಡೆಯುತ್ತಿತ್ತು. ಇದನ್ನು ತಡೆಯಲು ಕೇಂದ್ರ ಸರಕಾರ ಈಗಾಗಲೇ ಪ್ರತಿ ಆಭರಣಕ್ಕೂ ಶಾಶ್ವತವಾಗಿ ಯುಐಡಿ (ವಿಶೇಷ) ಸಂಖ್ಯೆ ನೀಡುವ ಯೋಜನೆ ಜಾರಿಗೆ ತಂದಿದೆ. ಅಲ್ಲದೆ ಚಿನ್ನ ಖರೀದಿ ಸಂದರ್ಭದಲ್ಲಿ ಚಿನ್ನ ಬೇಡ ಮಾಲೀಕರು ನಕಲಿ ಬಿಲ್ ತಯಾರಿಸಿ ಸರ್ಕಾರಕ್ಕೂ ತೆರಿಗೆ ವಂಚಿಸಿರುವ ಪ್ರಕರಣಗಳು ನಡೆಯುತ್ತಿದ್ದವು. ಅದನ್ನು ತಡೆಯಲು ಹಾಲ್ ಮಾರ್ಕ್ ಯುಐಡಿ ಯೋಜನೆ ಜಾರಿಯಾಗಿದೆ. ಎರಡು ಲಕ್ಷ ರೂಪಾಯಿ ಮೌಲ್ಯಕ್ಕಿಂತ ಹೆಚ್ಚಿನ ಬೆಲೆಯ ಚಿನ್ನ ಖರೀದಿಸಿದರೆ ಬಿಲ್ ಹಾಗೂ ಪ್ಯಾನ್ ಕಾರ್ಡ್ ಕಡ್ಡಾಯವಾಗಿದೆ. ಇಷ್ಟೇಲ್ಲಾ ನಿಯಮಗಳಿದ್ದರೂ ಕಾನೂನುಬಾಹಿರವಾಗಿ ಹಣ ಸಂಪಾದಿಸುವ ಅಧಿಕಾರಿಗಳು, ರಾಜಕೀಯ ನಾಯಕರು ಮತ್ತು ಉದ್ದಿಮೆದಾರರು ಕೋಟ್ಯಂತರ ರೂಪಾಯಿಗಳನ್ನು ಚಿನ್ನದ ಗಟ್ಟಿಗಳ ಮೇಲೆ ಹೂಡಿಕೆ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
ಜಾರ್ಖಂಡಿನ ರಿಚುಗುಟಾ ಮತ್ತು ಡೆಮು ನಿಲ್ದಾಣಗಳ ನಡುವಿನ ರೈಲ್ವೆ ಹಳಿಗಳನ್ನು ಸ್ಪೋಟ ಸಂಭವಿಸಿದೆ. ದಾಳಿ ಬೆನ್ನಲ್ಲೇ ಈ ವಿಭಾಗದ ಎಲ್ಲಾ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ಪಲಮು ವಲಯದ ಡಿಐಜಿ ರಾಜಕುಮಾರ್ ತಿಳಿಸಿದ್ದಾರೆ. ಜಾರ್ಖಂಡ್ ನ ಲಾತೇಹಾರ್ ಜಿಲ್ಲೆಯಲ್ಲಿ ನಿಷೇಧಿತ ಸಿಪಿಐ ( ಮಾವೋವಾದಿ) ಸಂಘಟನೆಯ ಸದಸ್ಯರು ರೈಲು ಹಳಿಯನ್ನು ಸ್ಪೋಟಿಸಿದ್ದಾರೆ. ಇದರಿಂದಾಗಿ ಈ ಮಾರ್ಗದಲ್ಲಿ ಬಂದ ಧನ್ ಬಾಗ್ ವಿಭಾಗದ ಡೀಸೆಲ್ ರೈಲ್ವೆ ಇಂಜಿನ್ ಹಳಿ ತಪ್ಪಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಯಿಂದಾಗಿ ಬರ್ಕಾಕಾನಾಗಡ್ವಾ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಅಡಚಣೆಯಾಗಿದೆ. ಈ ಮಾರ್ಗದ ಹಲವು ರೈಲುಗಳ ಮಾರ್ಗ ಬದಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿಪಿಐ (ಮಾವೋವಾದಿ) ತನ್ನ ನಾಯಕ ಪ್ರಶಾಂತ್ ಬೋಸ್ ಅವರ ಬಂಧನವನ್ನು ವಿರೋಧಿಸಿ, ಶನಿವಾರ ರಾಷ್ಟ್ರವ್ಯಾಪ್ತಿ ಬಂದ್ ಗೆ ಕರೆ ನೀಡಿತ್ತು. ಬೋಸ್ ತಲೆಗೆ ಸರ್ಕಾರ ಒಂದು ಕೋಟಿ ರೂಪಾಯಿ ನಗದು ಪುರಸ್ಕಾರ ಘೋಷಿಸಿತ್ತು. ಜಾರ್ಖಂಡ್, ಬಿಹಾರ್, ಒಡಿಶಾ, ಪಶ್ಚಿಮ ಬಂಗಾಳ, ಛತ್ತಿಸ್ ಗಢ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ಭಾಗದಲ್ಲಿ ನಡೆದಿರುವ ನೂರಕ್ಕೂ ಹೆಚ್ಚು ದಾಳಿಗಳ ಪ್ರಧಾನ ಸಂಚುಕೋರ ಬೋಸ್ ಎಂದು ಮೂಲಗಳು ತಿಳಿಸಿವೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
ಕಳೆದ ಕೆಲವು ವಾರಗಳಿಂದ ವರುಣನ ಆರ್ಭಟಕ್ಕೆ ಇಡೀ ರಾಜ್ಯದ ಜನತೆ ತತ್ತರಿಸಿದೆ. ಮಳೆಯಿಂದಾಗಿ ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಲಸೋಲ ಮಾಡಿ ಬೆಳೆದಂತಹ ಬೆಳೆಗಳಿಂದ ಮಳೆರಾಯನ ಅವಾಂತರದಿಂದ ಸಂಪೂರ್ಣ ನೀರುಪಾಲಾಗಿದೆ.
ಅಕಾಲಿಕ ಮಳೆಯಿಂದಾಗಿ ರಾಜ್ಯದ 21 ಜಿಲ್ಲೆಗಳಲ್ಲಿ ಭತ್ತ, ಮೆಕ್ಕೆಜೋಳ, ರಾಗಿ ಸೇರಿದಂತೆ ಪ್ರಮುಖ ಬೆಳೆಗಳೆಲ್ಲ ನೆಲಕಚ್ಚಿವೆ ಹಿಂಗಾರಿನ ಕೊನೆ ಅವಧಿಯಲ್ಲಿ ಬಿತ್ತಿ ದಂತಹ ಬೀಜವೂ ನೀರಿನಲ್ಲಿ ಕೊಚ್ಚಿ ಹೋಗಿವೆ. ವಾಣಿಜ್ಯ ಬೆಳೆಗಳು ನಾಶವಾಗಿದ್ದು ಇದರಿಂದ ರೈತರು ಹೈರಾಣಾಗಿದ್ದಾರೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
ವಿದ್ಯಾರ್ಥಿಗಳು, ಯುವಸ್ಪರ್ಧಿಗಳು ತಮ್ಮಲ್ಲಿರುವ ವಿವಿಧ ಪ್ರತಿಭೆಯನ್ನು ಅನಾವರಣಗೊಳಿಸಲು ಯುವಜನೋತ್ಸವ ಉತ್ತಮ ವೇದಿಕೆಯಾಗಿದ್ದು, ಉತ್ತಮ ಸ್ಪರ್ಧೆ ನೀಡಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಜಿಲ್ಲೆಗೆ ಒಳ್ಳೆಯ ಹೆಸರನ್ನು ತರಬೇಕೆಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹಾರೈಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ, ಶಿವಮೊಗ್ಗ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಮಾತನಾಡಿ, ಇಂದಿನ ಪೀಳೆಯಲ್ಲಿ ದೇಶದ ಮುಂದಿನ ಭವಿಷ್ಯ ಅಡಗಿದ್ದು, ಯುವಜನತೆ ಓದಿನೊಂದಿಗೆ ಇತರೆ ಸಾಂಸ್ಕೃತಿಕ, ಸಾಹಿತ್ಯಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಇತರೆ ಸಾಂಸ್ಕೃತಿಕ, ಜಾನಪದ, ಶಾಸ್ತ್ರೀಯ ಚಟುವಟಿಕೆಗಳನ್ನು ಉತ್ತೇಜಿಸಲು ಇಂತಹ ಯುವಜನೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು ಇದು ಯುವಜನತೆಯ ಜೀವನದ ಸರ್ವತೋಮುಖ ಬೆಳವಣಿಗೆಗೆ ಕೂಡ ಸಹಕರಿಸುತ್ತದೆ ಎಂದರು. ಕುವೆಂಪು ವಿವಿಯ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ನಾಗರಾಜ್ ಪರಿಸರ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಅಭಿವ್ಯಕ್ತಿಗೊಳಿಸಲು ಇದೊಂದು ಒಳ್ಳೆಯ ವೇದಿಕೆಯಾಗಿದ್ದು ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಸ್ವಯಂ ಸೇವಕರು ಪಾಲ್ಗೊಂಡಿದ್ದು, ರಾಷ್ಟ್ರಮಟ್ಟದಲ್ಲಿ ಹೆಸರು ತರಬೇಕೆಂದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಟಿ.ಮಂಜುನಾಥಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮಗಳನ್ನು ಕುವೆಂಪು ರಂಗಮಂದಿರ ಮತ್ತು ಸರ್ಕಾರಿ ನೌಕರರ ಭವನ ಈ ಎರಡು ವೇದಿಕೆಗಳಲ್ಲಿ 15 ರಿಂದ 29 ವರ್ಷದೊಳಗಿನ ಯುವಜನತೆಗೆ ಜಾನಪದ ನೃತ್ಯ(ಗುಂಪು), ಜಾನಪದ ಗೀತೆ(ಗುಂಪು), ಏಕಪಾತ್ರಾಭಿನಯ ವೈಯಕ್ತಿಕ(ಇಂಗ್ಲಿಷ್/ಹಿಂದಿ), ಶಾಸ್ತ್ರೀಯ ಸಂಗೀತ(ಹಿಂದೂಸ್ತಾನಿ ಮತ್ತು ಕರ್ನಾಟಿಕ್), ಶಾಸ್ತ್ರೀಯ ವಾದ್ಯ(ಸಿತಾರ, ಕೊಳಲು, ತಬಲಾ, ವೀಣಾ, ಮೃದಂಗಂ), ಹಾರ್ಮೋನಿಯಂ, ಗಿಟಾರ್, ಶಾಸ್ತ್ರೀಯ ನೃತ್ಯಗಳು(ಮಣಿಪುರಿ, ಒಡಿಸ್ಸಿ, ಕಥಕ್, ಕೂಚುಪುಡಿ, ಭರತನಾಟ್ಯ) ಮತ್ತು ಆಶುಭಾಷಣ (ಹಿಂದಿ/ಇಂಗ್ಲಿಷ್) ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ನೆಹರು ಯುವ ಕೇಂದ್ರದ ಸಂಯೋಜಕ ಉಲ್ಲಾಸ್ ಕೆ.ಟಿ.ಕೆ ಇತರೆ ಇಲಾಖೆಯ ಅಧಿಕಾರಿಗಳು, ಯುವ ಸ್ಪರ್ಧಿಗಳು, ನಿರ್ಣಾಯಕರು ಉಪಸ್ಥಿತರಿದ್ದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
ವಿಶ್ವದ ದೊಡ್ಡಣ್ಣ ಎಂದೇ ಹೆಸರುವಾಸಿಯಾಗಿರುವ ಅಮೇರಿಕಾ ದೇಶದ ಅಲ್ಪಾವಧಿಗೆ ಅಧ್ಯಕ್ಷರಾಗಿ ಭಾರತ ಮೂಲದ ಕಮಲಾ ಹ್ಯಾರಿಸ್ ಅವರು ಕಾರ್ಯನಿರ್ವಹಿಸಿದರು.
1 ಗಂಟೆ 25 ನಿಮಿಷಗಳ ಕಾಲ ಶುಕ್ರವಾರ ಅಧ್ಯಕ್ಷೀಯ ಅಧಿಕಾರವನ್ನು ಚಲಾಯಿಸುವ ಮೂಲಕ ಈ ಜವಾಬ್ದಾರಿ ನಿರ್ವಹಿಸಿದ ಅಮೆರಿಕದ ಮೊದಲ ಮಹಿಳೆ ಎಂಬ ಕೀರ್ತಿಗೆ ಕಮಲ ಹ್ಯಾರಿಸ್ ಅವರು ಪಾತ್ರರಾಗಿದ್ದಾರೆ.
ವಾರ್ಷಿಕ ಆರೋಗ್ಯ ತಪಾಸಣೆ ಹಿನ್ನೆಲೆಯಲ್ಲಿ ಅಮೆರಿಕಾ ಅಧ್ಯಕ್ಷ ಅವರಿಗೆ ಅರವಳಿಕೆ ನೀಡಬೇಕಿದ್ದ ಕಾರಣ ತಾತ್ಕಾಲಿಕವಾಗಿ ಅಧ್ಯಕ್ಷೀಯ ಅಧಿಕಾರ ಚಲಾಯಿಸುವ ಜವಾಬ್ದಾರಿಯನ್ನು ಕಮಲ ಹ್ಯಾರಿಸ್ ಅವರಿಗೆ ನೀಡಲಾಗಿತ್ತು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
ಸ್ವಚ್ಛತೆಯೆಡೆಗೆ ತ್ವರಿತವಾಗಿ ಸಾಗುತ್ತಿರುವ ರಾಜ್ಯ ವಿಭಾಗದ ಪ್ರಶಸ್ತಿಗೆ ಕರ್ನಾಟಕ ಭಾಜನವಾಗಿದೆ. ಕೇಂದ್ರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನೀಡುವ 2021 ನೇ ಸಾಲಿನ ಸ್ವಚ್ಛ ಸರ್ವೇಕ್ಷಣ ವಿಭಾಗದ ವಿವಿಧ ಪ್ರಶಸ್ತಿಗಳಿಗೆ ರಾಜ್ಯದ 9 ನಗರ ಸ್ಥಳೀಯ ಸಂಸ್ಥೆಗಳು ಆಯ್ಕೆಯಾಗಿವೆ. ಅರಮನೆ ನಗರಿ ಮೈಸೂರು 2021ರ ಸ್ವಚ್ಛ ಸರ್ವೇಕ್ಷಣ ಪ್ರಶಸ್ತಿಯಲ್ಲಿ 4 ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಸಮಗ್ರ ವಿಭಾಗದಲ್ಲಿ ಹನ್ನೊಂದನೇ ಸ್ಥಾನದಲ್ಲಿದೆ. ಕೇಂದ್ರದ ವಸತಿ ಮತ್ತು ನಗರಾಭಿವೃದ್ಧಿ ವ್ಯವಹಾರಗಳ ಸಚಿವಾಲಯವು ರಾಷ್ಟ್ರಮಟ್ಟದಲ್ಲಿ 2016ರಿಂದ ಸ್ವಚ್ಛ ಸರ್ವೇಕ್ಷಣಾ ಯೋಜನೆಯನ್ನು ನಡೆಸಿಕೊಂಡು ಬಂದಿದೆ. 2015, 2016 ರಲ್ಲಿ ಮೈಸೂರು ನಗರ ಸತತ ಎರಡು ಬಾರಿ ದೇಶದ ನಂಬರ್ ಒನ್ ಸ್ವಚ್ಛನಗರಿ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು. 2019ರಲ್ಲಿ ಸಮಗ್ರ ವಿಭಾಗದಲ್ಲಿ ಮೂರನೇ ಸ್ಥಾನಕ್ಕೆ ಜಿಗಿಯಿತು. 2020 ರಲ್ಲಿ ಪ್ರಥಮ ಬಾರಿಗೆ ರಾಂಕಿಂಗ್ ಹಾಗೂ ಸ್ವಚ್ಛನಗರಿ ಗೆ ಪ್ರತ್ಯೇಕ ಪ್ರಶಸ್ತಿ ನೀಡಲಾಯಿತು. ರಾಷ್ಟ್ರದ 4,360 ಪಟ್ಟಣ ಮತ್ತು ನಗರಗಳ ಸ್ಥಳೀಯ ಸಂಸ್ಥೆಗಳ ಕಾರ್ಯ ವೈಖರಿ ಬಗ್ಗೆ ಅವಲೋಕನ ಮತ್ತು ಸಮೀಕ್ಷೆ ನಡೆಸಿರುವ ಕೇಂದ್ರವು ಕರ್ನಾಟಕ ರಾಜ್ಯಕ್ಕೆ ಪ್ರಶಸ್ತಿ ಘೋಷಿಸಿದೆ. ನೂರಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳನ್ನು ಒಳಗೊಂಡಿರುವ ರಾಜ್ಯಗಳ ಪೈಕಿ ಛತ್ತೀಸ್ ಘಡವು ಸ್ವಚ್ಛ ರಾಜ್ಯ ಪ್ರಶಸ್ತಿ ಪಡೆದಿದ್ದು, ರಾಜ್ಯಕ್ಕೆ 4ನೇ ಸ್ಥಾನ ದೊರೆತಿದೆ. ಸ್ವಚ್ಛ ಸರ್ವೇಕ್ಷಣಾ ವಿಭಾಗದ ‘3 ಸ್ಟಾರ್’ ಪ್ರಶಸ್ತಿಗೆ ತುಮಕೂರು ಮತ್ತು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗಳು ಆಯ್ಕೆಯಾಗಿವೆ. ಹುಬ್ಬಳ್ಳಿ-ಧಾರವಾಡ ಸ್ವಚ್ಛತೆಯೆಡೆಗೆ ತ್ವರಿತವಾಗಿ ಸಾಗುತ್ತಿರುವ ‘ಮಧ್ಯಮ’ ನಗರ ಪ್ರಶಸ್ತಿಗೂ ಪಾತ್ರವಾಗಿವೆ. 50 ಸಾವಿರದಿಂದ 1 ಲಕ್ಷ ಜನಸಂಖ್ಯೆಯ ವಿಭಾಗದಲ್ಲಿ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರಸಭೆಯು ಸ್ವಚ್ಛತೆಯೆಡೆಗೆ ತ್ವರಿತವಾಗಿ ಸಾಗುತ್ತಿರುವ ನಗರ ಪ್ರಶಸ್ತಿಗೆ, 25 ಸಾವಿರದಿಂದ 50 ಸಾವಿರ ಜನಸಂಖ್ಯೆಯ ವಿಭಾಗದಲ್ಲಿ ಉತ್ತರಕನ್ನಡ ಜಿಲ್ಲೆಯ ಕುಮಟಾ ಉತ್ತಮ ಸುಸ್ಥಿರ ನಗರ ಪ್ರಶಸ್ತಿಗೆ ಆಯ್ಕೆಯಾಗಿದೆ. ಹೊಸದುರ್ಗ ಪುರಸಭೆಗೆ ದಕ್ಷಿಣ ವಲಯದ ಸ್ವಚ್ಛನಗರಿ ಪ್ರಶಸ್ತಿ, ಪಿರಿಯಾಪಟ್ಟಣ ಮತ್ತು ಕೆ.ಆರ್ .ನಗರ ಪುರಸಭೆಗಳು ಉತ್ತಮ ನಾಗರಿಕ ಸ್ಪಂದನೆ ವಿಭಾಗದ ಪ್ರಶಸ್ತಿ ಪಡೆದಿವೆ. ಉತ್ತರಪ್ರದೇಶದ ವಾರಣಾಸಿ ನಗರವು ‘ಉತ್ತಮ ಗಂಗಾ ನಗರ’ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದರೆ, ಬಿಹಾರದ ಮುಂಗೇರ್ ಮತ್ತು ಪಟ್ನಾ ನಗರಗಳು ಈ ವಿಭಾಗದಲ್ಲಿ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನ ಪಡೆದಿವೆ. ಮಧ್ಯಪ್ರದೇಶದ ಇಂದೋರ್ ನಗರವು ಸತತ 5ನೇ ವರ್ಷ ದೇಶದ ಸ್ವಚ್ಛ ನಗರ ಪ್ರಶಸ್ತಿಗೆ ಭಾಜನವಾಗಿದೆ. ಗುಜರಾತ್ ನ ಸೂರತ್ ಮತ್ತು ಆಂಧ್ರಪ್ರದೇಶದ ವಿಜಯವಾಡ, ಉತ್ತರಪ್ರದೇಶದ ಹಾಪುರ್ ಮತ್ತು ಗುಜರಾತ್ ನ ರಾಜ್ಕೋಟ್ ನಗರಗಳು ಕ್ರಮವಾಗಿ ಎರಡರಿಂದ 5ನೇ ಸ್ಥಾನ ಗಳಿಸಿವೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
ಅರುಣಾಚ ಪ್ರದೇಶ ಗಡಿಯಲ್ಲಿ ಚೀನಾ ಸೇನೆಯು ಗ್ರಾಮಗಳನ್ನು ನಿರ್ಮಿಸಿರುವ ಬಗ್ಗೆ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ವರ್ಷದ ಆರಂಭದಲ್ಲೇ ಭಾರತೀಯ ಸೇನೆಯು ರಷ್ಯಾ ನಿರ್ಮಿತ ಎಸ್ -400 ಕ್ಷಿಪಣಿ ನಿರೋಧಕ ವ್ಯವಸ್ಥೆಯನ್ನು ವಾಸ್ತವ ಗಡಿ ರೇಖೆಯಲ್ಲಿ ನಿಯೋಜಿಸಲು ಸಿದ್ಧತೆ ಪ್ರಾರಂಭಿಸಿದೆ. ಭಾರತದ ಪಾಲಿನ ಎಸ್ -400 ತ್ವರಿತವಾಗಿ ಪೂರೈಕೆ ಆಗುತ್ತಿರುವುದಕ್ಕೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಆಪ್ತ ಸಂಬಂಧವೇ ಪ್ರಮುಖ ಕಾರಣ ಎನ್ನಲಾಗಿದೆ. ಇದೇ ಆಪ್ತತೆಯನ್ನು ಮುಂದುವರಿಸಿರುವ ಉಭಯ ನಾಯಕರು, ಡಿ.6 ರಂದು ರಷ್ಯಾದ ಸೋಛಿಯಾ ಬ್ಲ್ಯಾಕ್ ರೆಸಾರ್ಟ್ನಲ್ಲಿ ಮುಖಾ ಮುಖಿ ಭೇಟಿ ಆಗಲಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ. ಈಗಾಗಲೇ ಹಂತಹಂತವಾಗಿ ಎಸ್-400 ವ್ಯವಸ್ಥೆಯ ಪ್ರಮುಖ ಉಪಕರಣಗಳು ಒಂದೊಂದಾಗಿ ರಷ್ಯಾದಿಂದ ಭಾರತಕ್ಕೆ ಪೂರೈಕೆಯಾಗಲು ಶುರುವಾಗಿವೆ. ಇದರ ಭಾಗವಾಗಿ ಆಳವಾದ ಪ್ರದೇಶಗಳ ನಿಗಾ ಇರಿಸುವ ಸಾಮರ್ಥ್ಯದ ಅತ್ಯಾಧುನಿಕ ರೆಡಾರ್ ಗಳು ಶೀಘ್ರವೇ ಭಾರತದ ಕೈಸೇರಿವೆ. ಒಂದನ್ನು ಎಸ್ -400 ಲಡಾಕ್ ನಾ ಉತ್ತರದ ಗಡಿಭಾಗದಲ್ಲಿಯೂ, ಮತ್ತೊಂದನ್ನು ಅರುಣಾಚಲ ಪ್ರದೇಶದ ಗಡಿಯಲ್ಲಿಯೂ ನಿಯೋಜಿಸಲು ಭಾರತೀಯ ಸೇನೆ ತೀರ್ಮಾನಿಸಿದೆ. ಕೆಲ ತಿಂಗಳ ಹಿಂದೆಯೇ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿಯು (ಪಿಎಲ್ಎ) ಟಿಬೆಟ್, ಅರುಣಾಚಲ ಪ್ರದೇಶ ಮತ್ತು ಲಡಾಕ್ ಗಡಿಯಲ್ಲಿರುವ ತನ್ನ ನಿಂಗ್ಚಿ ಹಾಗೂ ನಾರಿ ಗರ್ ಗುನ್ಸಾ ವಾಯು ನೆಲೆಗಳಲ್ಲಿ ಎಸ್-400 ಕ್ಷಿಪಣಿ ನಿರೋಧಕ ವ್ಯವಸ್ಥೆಗಳನ್ನು ನಿಯೋಜಿಸಿದೆ ಎಂದು ಮೂಲಗಳು ತಿಳಿಸಿವೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 07 ಸಂಖ್ಯೆಯ ಪ್ರೋಸೆಸ್ ಜಾರಿಕಾರ(ಪ್ರೋಸೆಸ್ ಸರ್ವರ್) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಶಿವಮೊಗ್ಗದ ಜಿಲ್ಲಾ ನ್ಯಾಯಾಲಯ ವೆಬ್ಸೈಟ್https://districts.ecourts.gov.in/shivamogga-onlinerecruitment ಅಥವಾ http://karnatakajudiciary.kar.nic.in/districtrecruitment.asp ನಲ್ಲಿ ನೀಡಲಾದ ಲಿಂಕ್ ಮೂಲಕ ಆನ್ಲೈನ್ನಲ್ಲಿ ನವೆಂಬರ್ 23 ರಿಂದ ಡಿಸೆಂಬರ್ 30 ರೊಳಗೆ ಸಲ್ಲಿಸಬಹುದು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿರಬೇಕು. ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದ ಕನಿಷ್ಟ 18 ವರ್ಷ ಮತ್ತು ಸಾಮಾನ್ಯ ವರ್ಗಕ್ಕೆ ಗರಿಷ್ಟ 35 ವರ್ಷ, 2ಎ, 2ಬಿ, 3ಎ, 3ಬಿ ಗೆ 38 ವರ್ಷಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 01 ಕ್ಕೆ 40 ವರ್ಷಗಳ ವಯೋಮಿತಿ(ವಿಧವೆ ಮತ್ತು ಅಂಗವಿಕಲರಿಗೆ 10 ವರ್ಷ ಸಡಿಲಿಕೆ ಹಾಗೂ ಈಗಾಗಲೇ ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು) ಇದೆ. ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಯ ಅರ್ಜಿ ಶುಲ್ಕ ರೂ.200 ಆಗಿದ್ದು ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ.100 ಹಾಗೂ ಪ.ಜಾತಿ, ಪ.ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸುವುದರಿಂದ ವಿನಾಯಿತಿ ನೀಡಲಾಗಿದೆ. ನಿಗದಿತ ಶುಲ್ಕವನ್ನು ನ್ಯಾಯಾಲಯ ಮೇಲೆ ನೀಡಲಾದ ವೆಬ್ಸೈಟ್ ಲಿಂಕ್ಗಳ ಮುಖಾಂತರ ಅಥವಾ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಟೇಟ್ ಬ್ಯಾಂಕ್ ಕಲೆಕ್ಟ್ ಮೂಲಕ ಆನ್ಲೈನ್ ಪೇಮೆಂಟ್ ಸೌಲಭ್ಯದ ಮೂಲಕ ಪಾವತಿಸತಕ್ಕದ್ದು. ಶುಲ್ಕ ಪಾವತಿಸದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅಭ್ಯರ್ಥಿಯ ಆಯ್ಕೆಯು ಕರ್ನಾಟಕ ಅಧೀನ ನ್ಯಾಯಾಲಯಗಳ(ಲಿಪಿ ಮತ್ತು ಇತರೆ ಹುದ್ದೆಗಳ)(ನೇಮಕಾತಿ) ನಿಯಮ 1982 ಮತ್ತು (ತಿದ್ದುಪಡಿ) ನಿಯಮ 2007 ರ ಪ್ರಕಾರ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಮೇಲ್ಕಂಡ ವೆಬ್ಸೈಟ್ನ್ನು ವೀಕ್ಷಿಸಬಹುದೆಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಮುಸ್ತಫ ಹುಸೇನ್ ಎಸ್.ಎ ತಿಳಿಸಿದ್ದಾರೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.