Friday, February 6, 2026
Friday, February 6, 2026
Home Blog Page 1872

ಆಸ್ಪತ್ರೆಯ ನಿರ್ಲಕ್ಷ : ತೀರ್ಪು ಗ್ರಾಹಕರ ಪರ

0

ಮಹಾರಾಷ್ಟ್ರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೆರಿಗೆ ಸಂದರ್ಭ ಅಸುನಿಗಿದ ತಾಯಿ ಪ್ರಕರಣವೊಂದು ವಿಚಾರಣಿಗೆ ದಾಖಲಾಗಿತ್ತು.

ರಾಷ್ಟ್ರೀಯ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗ ಈ ಪ್ರಕರಣವನ್ನು ವಿಚಾರಣೆಗೆ ಒಳಪಡಿಸಿತ್ತು. ವಿಚಾರಣೆ ವೇಳೆ ವಾದ-ವಿವಾದಗಳನ್ನು ಆಲಿಸಿದ ಆಯೋಗವು ಮಹಾರಾಷ್ಟ್ರ ರಾಜ್ಯದ ಗ್ರಾಹಕರ ಆಯೋಗವು ನೀಡಿದ್ದ ತೀರ್ಪನ್ನು ಎತ್ತಿ ಹಿಡಿದಿದೆ.ಅದರ ಪ್ರಕಾರ ಖಾಸಗಿ ಆಸ್ಪತ್ರೆಯು ಮೃತರ ವಾರಸುದಾರರಿಗೆ 20 ಲಕ್ಷ ರೂಪಾಯಿ ಪರಿಹಾರದ ಜೊತೆಗೆ 1 ಲಕ್ಷ ರೂಪಾಯಿ ಕೋರ್ಟ್ ಖರ್ಚನ್ನು ನೀಡಬೇಕೆಂದು ತೀರ್ಪು ನೀಡಿದೆ.

ಈ ಘಟನೆಯು 1995 ರಲ್ಲಿ ‌ ನಡೆದಿದೆ. 6 ವಾರದೊಳಗಾಗಿ ಈ ಪರಿಹಾರದ ಹಣವನ್ನು ನೀಡಬೇಕು, ತಪ್ಪಿದ್ದಲ್ಲಿ ಶೇ. 6 ರಷ್ಟು ಸರಳ ಬಡ್ಡಿಯನ್ನು ಸೇರಿಸಿ ನೀಡಬೇಕೆಂದು ಆದೇಶಿಸಿದೆ.

ಆಡಳಿತ ಸುಧಾರಣೆಗೆ ಪ್ರಧಾನಿಯವರ ಮಹತ್ವದ ಹೆಜ್ಜೆ

0

ಲೋಕಸಭಾ ಚುನಾವಣೆಗೆ ಎರಡು ವರ್ಷ ಬಾಕಿ ಇರುವಾಗ ಆಡಳಿತ ಸುಧಾರಣೆಯತ್ತ ನರೇಂದ್ರ ಮೋದಿಯವರ ಗಮನ ಹೆಚ್ಚಿಸಿದೆ. ತಮ್ಮ ಸರ್ಕಾರದ 77 ಮಂದಿ ಸಚಿವರನ್ನು ಎಂಟು ತಂಡಗಳಾಗಿ ವಿಂಗಡಿಸಿದ್ದಾರೆ.

ಪ್ರತಿ ತಂಡದಲ್ಲಿ 9ರಿಂದ 10 ಸಚಿವರು ಇರುವಂತೆ ನಿಗಾವಹಿಸಲಾಗಿದೆ. ಈ ತಂಡಗಳಲ್ಲಿ ಒಬ್ಬರು ಸಂಪುಟ ಸಚಿವರು ಇರಲಿದ್ದು, ಸಮನ್ವಯಕಾರರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಪ್ರತಿ ತಂಡವು ಒಂದು ವೆಬ್ ಪೋರ್ಟಲ್ ರಚಿಸಿ, ತಮಗೆ ಸೂಚಿಸಲಾಗಿರುವ ಆಡಳಿತ ಸುಧಾರಣಾ ಕ್ಷೇತ್ರದ ಕುರಿತು ಜನರಿಂದ ಮತ್ತು ತಜ್ಞರಿಂದ ಮಾಹಿತಿ ಕಲೆ ಹಾಕುತ್ತಿರಬೇಕು.
ಸಚಿವ ಸಂಪುಟ ಸಹೋದ್ಯೋಗಿಗಳು, ಕಿರಿಯ ಸಚಿವರು, ಹಿರಿಯ ಸಚಿವರು, ಒಬ್ಬರನ್ನೊಬ್ಬರು ಗೌರವಿಸಿ, ಪಕ್ಷ ಹಾಗೂ ಸರ್ಕಾರದ ಕೆಲಸಗಳನ್ನು ಸಮನ್ವಯತೆ ಸಾಧಿಸಿಕೊಳ್ಳಲು ಆದ್ಯತೆ ನೀಡಬೇಕು.
ನಿವೃತ್ತ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ, ಆಡಳಿತದ ಲೋಪದೋಷಗಳ ಕುರಿತು ವಿಸ್ತೃತ ವರದಿ ಪಡೆಯಬೇಕು.
ಪ್ರತಿ ತಂಡವು ದೇಶದ ವಿವಿಧ ರಾಜ್ಯಗಳಲ್ಲಿ ನ ಎಲ್ಲಾ ಜಿಲ್ಲೆಗಳು, ರಾಜ್ಯ ಇಲಾಖೆಗಳ ಕೈಪಿಡಿ ರಚಿಸಬೇಕು. ಅದನ್ನು ಸೂಕ್ತ ಹೂಡಿಕೆದಾರರಿಗೆ ತಲುಪಿಸಿ ಹೊಸ ಯೋಜನೆಗಳನ್ನು ಘೋಷಿಸಬೇಕು ಎಂಬ ಆದೇಶಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.
ಮಾಹಿತಿ ತಂತ್ರಜ್ಞಾನದ ಮೂಲಕ ಜನಸ್ನೇಹಿ ಆಡಳಿತ ಸುಧಾರಣೆಗಾಗಿ ಸಚಿವರ ತಂಡ ರಚನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ರಷ್ಯಾದಿಂದ “ಎಸ್-400”,ಯುಎಸ್ ಮೃದು ಧೋರಣೆ

0

ಅಮೆರಿಕದ ನಿರ್ಬಂಧ ಬೆದರಿಕೆ ನಡುವೆಯೇ ರಷ್ಯಾವು ಅತ್ಯಾಧುನಿಕ ಕ್ಷಿಪಣಿ ನಿರೋಧಕ ವ್ಯವಸ್ಥೆ ‘ಎಸ್-400’ ಅನ್ನು ಭಾರತಕ್ಕೆ ಪೂರೈಸುವ ಪ್ರಕ್ರಿಯೆ ಆರಂಭಿಸಿದೆ. ‘ ವರ್ಷಾಂತ್ಯಕ್ಕೆ ಎಸ್-400 ವ್ಯವಸ್ಥೆಯ ಮೊದಲ ಘಟಕವು ಪೂರ್ಣ ಪ್ರಮಾಣದಲ್ಲಿ ಭಾರತ ತಲುಪಲಿದೆ. ಈಗಾಗಲೇ ಮೊದಲ ಕಂತಿನ ಭಾಗಗಳು ಭಾರತಕ್ಕೆ ಹಸ್ತಾಂತರವಾಗಿವೆ’ ಎಂದು ರಷ್ಯಾದ ಮಿಲಿಟರಿ ಸಹಕಾರ ಏಜೆನ್ಸಿ ಮುಖ್ಯಸ್ಥ ಮಿಟ್ರಿ ಶುಗಾಯೆವ್ ಹೇಳಿದ್ದಾರೆ.
ರಷ್ಯಾದ ಮಿಲಿಟರಿ ಶಸ್ತ್ರಾಸ್ತ್ರ ಗಳನ್ನು ಖರೀದಿಸುವ ದೇಶದ ವಿರುದ್ಧ ಅಮೆರಿಕವು ಹಣಕಾಸು ಮತ್ತು ಮಿಲಿಟರಿ ವ್ಯವಹಾರ ನಡೆಸುವುದಿಲ್ಲ. ಈ ಸಂಬಂಧ 2017ರಲ್ಲಿ ‘ಕ್ಯಾಟ್ಸಾ’ ಕಾನೂನು ರೂಪಿಸಲಾಗಿದೆ. ಎಸ್-400 ಖರೀದಿಸಿದ ಟರ್ಕಿ ವಿರುದ್ಧ ಕಳೆದ ವರ್ಷ ಅಮೆರಿಕ ಸರ್ಕಾರವನ್ನು ಅಡಿಯಲ್ಲಿ ನಿರ್ಬಂಧ ಹೇರಿದೆ. ಇದಲ್ಲದೆ ಎಫ್-35 ಯುದ್ಧವಿಮಾನ ಯೋಜನೆಯಿಂದಲೂ ಟರ್ಕಿಯನ್ನು ಹೊರಕ್ಕೆ ದೂಡಲಾಗಿದೆ. ನ್ಯಾಟೋ ಒಕ್ಕೂಟದ ಟರ್ಕಿ ವಿರುದ್ಧವೇ ಅಮೇರಿಕಾ ಇಷ್ಟೊಂದು ಖಡಕ್ ಕ್ರಮ ಕೈಗೊಂಡಿದ್ದರೂ, ಭಾರತದ ವಿರುದ್ಧ ಮಾತ್ರ ಮೊದಲಿನಿಂದಲೂ ಮೃದು ಧೋರಣೆಯನ್ನು ಹೊಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಷ್ಯಾದಿಂದ ಎಸ್- 400 ಖರೀದಿಸುವುದು ಬೇಡ, ಬದಲಿಗೆ ತಮ್ಮ ಬಳಿಯಿರುವ ಅತ್ಯಾಧುನಿಕ ಕ್ಷಿಪಣಿ ನಿರೋಧಕ ವ್ಯವಸ್ಥೆ ನೀಡುವುದಾಗಿ ಈಗಾಗಲೇ ಹಲವು ಬಾರಿ ಅಮೆರಿಕಾದ ರಕ್ಷಣಾ ಸಚಿವರು ಮತ್ತು ವಿದೇಶಾಂಗ ಸಚಿವರು ಭಾರತ ಸರ್ಕಾರದ ಮೇಲೆ ಒತ್ತಡ ಹೇರಿದ್ದಾರೆ. ಆದರೆ, ರಷ್ಯಾ ಸರ್ಕಾರದೊಂದಿಗೆ ಒಪ್ಪಂದ ಮುರಿದು ಕೊಳ್ಳಲು ಸಾಧ್ಯವಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಹಿರೇಕೆರೂರು : ರೈತರೊಂದಿಗೆ ಒಂದು ದಿನ

0

ಹಿರೇಕೆರೂರಿನಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ 64ನೇ ಹುಟ್ಟುಹಬ್ಬದ ಪ್ರಯುಕ್ತ ‘ರೈತರೊಂದಿಗೆ ಒಂದು ದಿನ’ ಕಾರ್ಯಕ್ರಮಕ್ಕೇ ಕನ್ನಡ ಚಲನಚಿತ್ರದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಚಾಲನೆ ನೀಡಿದರು.

ರೈತರೊಂದಿಗೆ ಒಂದು ದಿನ ಕಾರ್ಯಕ್ರಮಕ್ಕೆ ಇಡೀ ಹಿರೇಕೆರೂರು ತಾಲೂಕು ಮದುವಣಗಿತ್ತಿಯಂತೆ ಸಿಂಗಾರಗೊಂಡು ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು. ಪೂರ್ಣ ಕುಂಭ ಹೊತ್ತ ನೂರಾರು ಮಹಿಳೆಯರು, ವೀರಗಾಸೆ, ಡೊಳ್ಳು ಕುಣಿತ, ಎತ್ತಿನ ಬಂಡಿ ಹಾಗೂ ಮೀರಿದ ವಾದ್ಯ ಮೇಳಗಳ ಮೆರವಣಿಗೆಯೊಂದಿಗೆ ಅದ್ದೂರಿ ಸ್ವಾಗತ ಕೋರಲಾಯಿತು.

ಈ ಸಮಾರಂಭದಲ್ಲಿ ಸಾಧಕ ರೈತರಿಗೆ ಸನ್ಮಾನ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ರೈತರಿಗೆ ಉಪಯೋಗವಾಗುವಂತಹ ಕೃಷಿ ಯಂತ್ರೋಪಕರಣಗಳ ಪ್ರದರ್ಶನ, ಜೇನು ಸಾಕಾಣಿಕೆ ಕುರಿತು ಪ್ರಾತ್ಯಕ್ಷಿಕೆ, ಪುರುಷರಿಗೆ ಹಾಲು ಕರೆಯುವ ಸ್ಪರ್ಧೆ, ಮಹಿಳೆಯರಿಗೆ ಮಜ್ಜಿಗೆ ಕಡೆಯುವ ಮತ್ತು ಹಿಟ್ಟು ಬೀಸುವ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ರೈತರು ಸರ್ಕಾರದಿಂದ ಸಿಗುವಂತಹ ಸೌಲಭ್ಯಗಳನ್ನು ಸರಿಯಾಗಿ ಬಳಸಿಕೊಂಡಾಗ ಮಾತ್ರ ಆರ್ಥಿಕವಾಗಿ ಸಬಲರಾಗಲು ಸಾಧ್ಯ ಎಂದು ಸಚಿವ ಬಿ.ಸಿ.ಪಾಟೀಲ್ ಅವರು ರೈತರಿಗೆ ಸಲಹೆ ನೀಡಿದರು.

ಇದೇ ಮೊದಲ ಬಾರಿಗೆ ನನ್ನ ತಾಲೂಕಿನಲ್ಲಿನ ‘ರೈತರೊಂದಿಗೆ ಒಂದು ದಿನ’ ಕಾರ್ಯಕ್ರಮ ಮಾಡುತ್ತಿರುವುದು ಸಂತಸ ತಂದಿದೆ. ಸಮಗ್ರ ಕೃಷಿ ನೀತಿ ಅನುಸರಿಸಿ ಉಪಕಸುಬುಗಳನ್ನು ಸಹ ಅಳವಡಿಸಿಕೊಳ್ಳಿ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ರೈತರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾತನಾಡಿ ಪೊಲೀಸ್ ಆಗಿ, ನಟನಾಗಿ, ನಿರ್ಮಾಪಕನಾಗಿ ಈಗ ಸಚಿವರಾಗುವುದು ಬಹಳ ಸುಲಭದ ಕೆಲಸವಲ್ಲ. ಏನೇ ಕೆಲಸವಾಗಲಿ ಅದನ್ನ ಗುರಿ ಇಟ್ಟು ಮಾಡಿದರೆ ಮಾತ್ರ ಯಶಸ್ಸು ಕಟ್ಟಿಟ್ಟ ಬುತ್ತಿ ಇದಕ್ಕೆ ಬಿ.ಸಿ.ಪಾಟೀಲರ ಸಾಕ್ಷಿ. “ಬಿ.ಸಿ.ಪಾಟೀಲರ ನಾ ನಾನು ಪ್ರೀತಿಯಿಂದ ಕಾಕಾ ಅವರೇ” ಎಂದು ಕರೆಯುತ್ತೇನೆ. ರೈತರು ಕಷ್ಟಪಟ್ಟು ಬೆಳೆ ಬೆಳೆಯುತ್ತಾರೆ. ರೈತರು ಮತ್ತು ಸೈನಿಕರು ದೇಶದ ಬೆನ್ನೆಲುಬು. ರೈತ ಭೂಮಿತಾಯಿಯನ್ನು ನಂಬಿ ಕಷ್ಟಪಟ್ಟು ದುಡಿಯುತ್ತಾನೆ. ಹಾಗಾಗಿ ರೈತರು ತಂತ್ರಜ್ಞಾನ ಇಲಾಖೆಯ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಫಸಲು ಬೆಳೆದಲ್ಲಿ ತಮ್ಮ ಆದಾಯ ದ್ವಿಗುಣ ಗೊಳಿಸಬಹುದು ಎಂದು ತಿಳಿಸಿದರು.

ಅಮೆರಿಕ-ಭಾರತ : ವಿಮಾನಯಾನ

0

ಎರಡು ವರ್ಷಗಳ ಕೊರೊನಾ ಲಾಕ್ ಡೌನ್ ನ ನಂತರ ಎಲ್ಲಾ ಚಟುವಟಿಕೆಗಳು ಮತ್ತೆ ಮೊದಲಿನಂತೆ ಆರಂಭಗೊಂಡಿವೆ. ಈಗ ಅಮೆರಿಕನ್ ಏರ್ ಲೈನ್ಸ್ ಒಂದು ದಶಕದ ಬಳಿಕ ಭಾರತಕ್ಕೆ ತಡೆರಹಿತ ನೇರ ವಿಮಾನ ಸಂಚಾರವನ್ನು ಮತ್ತೆ ಆರಂಭಿಸಿದೆ.
13/11/2021 ರಂದು ನ್ಯೂಯಾರ್ಕ್-ಹೊಸದಿಲ್ಲಿ ನಡುವೆ ಸಂಚರಿಸುವ ಮೊದಲ ವಿಮಾನವು ಇಂದಿರಾಗಾಂಧಿ ಅಂತಾರಾಷ್ಟ್ರೀಯ ನಿಲ್ದಾಣವನ್ನು ಬಂದು ತಲುಪಿದೆ.
ಈ ವಿಮಾನಯಾನವನ್ನು ಅಕ್ಟೋಬರ್ ನಲ್ಲಿಯೇ ಆರಂಭಿಸಬೇಕಿತ್ತು. ಆದರೆ, ಅಂತರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆ ಕಡಿಮೆಯಿರುವುದರಿಂದ ಎರಡು ವಾರ ಮುಂದೂಡಲಾಗಿತ್ತು. ಹಾಗೆಯೇ ಬೆಂಗಳೂರು- ಸಿಯಾಟಲ್ ನಡುವಿನ ನೇರ ವಿಮಾನ ಸಂಚಾರವನ್ನು 2022ರ ಜ. 4 ರಂದು ಆರಂಭಿಸಲು ನಿರ್ಧರಿಸಲಾಗಿದ್ದರೂ, ಅದನ್ನು ಮಾರ್ಚ್ ಅಂತ್ಯಕ್ಕೆ ಮುಂದೂಡಲಾಗಿದೆ ಎಂಬ ವರದಿ ಲಭ್ಯವಾಗಿದೆ. ಕಾರ್ಪೊರೇಟ್ ವ್ಯವಹಾರಗಳು ಇನ್ನೂ ಪೂರ್ಣ ಪ್ರಮಾಣದಲ್ಲಿ ಕೋವಿಡ್ ಪೂರ್ವ ಮಟ್ಟಕ್ಕೆ ಮರಳದೇ ಇರುವುದು ಈ ತೀರ್ಮಾನಕ್ಕೆ ಕಾರಣವಾಗಿದೆ ಎಂದು ಸಂಸ್ಥೆ ತಿಳಿಸಿದೆ.

ನೀರು ಹಂಚಿಕೆ ನಿರ್ಧಾರವಾಗಿಲ್ಲ : ಸಿಎಂ ಬೊಮ್ಮಾಯಿ

0

ನೆರೆ ರಾಜ್ಯಗಳು ನೀರಿನ ಬಳಕೆಗೆ ರೂಪಿಸಿರುವ ಜಲ ನ್ಯಾಯ ಮಂಡಳಿ ತೀರ್ಪು ಉಲಂಘಿಸಿ ರೂಪಿಸುತ್ತಿರುವ ಬೃಹತ್ ಮಟ್ಟದ ಶಾಶ್ವತ ಯೋಜನೆಗಳನ್ನು ಕೇಂದ್ರ ಸರ್ಕಾರ ಶಾಸನಬದ್ಧ ಅನುಮೋದನೆ ನೀಡಬಾರದು ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮನವಿ ಮಾಡಿದ್ದಾರೆ.

ತಿರುಪತಿಯಲ್ಲಿ ನಡೆದ ದಕ್ಷಿಣ ವಲಯ ಪರಿಷತ್ತಿನ ಸಿ.ಎಂಗಳ 29ನೇ ಸಭೆಯಲ್ಲಿ ಬೊಮ್ಮಾಯಿಯವರು ಕರ್ನಾಟಕದ ಬೇಡಿಕೆಗಳನ್ನು ಮಂಡಿಸಿದರು. ಕೇಂದ್ರ ಗೃಹಸಚಿವ ಅಮಿತ್ ಶಾ ಈ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.

ಸಹ ಜಲಾನಯನ ಪ್ರದೇಶಗಳನ್ನು ಹೊಂದಿರುವ ರಾಜ್ಯಗಳ ಪಾಲು ಎಷ್ಟು ಎಂಬ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಆದರೂ ಕಾವೇರಿ ವೈಗೈ- ಗುಂಡಾರ್ ಸಂಪರ್ಕಿಸುವ ಕಾಮಗಾರಿಯನ್ನು ತಮಿಳುನಾಡು ಮುಂದುವರಿಸಿದೆ. ಶ್ರೀಶೈಲಂ ಜಲಾಶಯದಲ್ಲಿ ಹೆಚ್ಚುವರಿ ಪ್ರಮಾಣದ ಅಪಾರ ನೀರನ್ನ ಬಳಸಿಕೊಂಡು ಹಲವು ಏತ ನೀರಾವರಿ ಯೋಜನೆಗಳನ್ನು ಕೈಗೊಳ್ಳಲು ತೆಲಂಗಾಣ ಅಥವಾ ಅಪೆಕ್ಸ್ ಮಂಡಳಿಗೆ ಅಧಿಕಾರವಿಲ್ಲ. ಹಾಗಾಗಿ ಕೇಂದ್ರ ಸರ್ಕಾರ ಈ ರೀತಿಯ ಯೋಜನೆಗಳಿಗೆ ಶಾಸನಬದ್ಧ ಅನುಮೋದನೆ ನೀಡಬಾರದು ಎಂದು ಬೊಮ್ಮಾಯಿ ಅವರು ಸಭೆಯಲ್ಲಿ ಗೃಹ ಸಚಿವರ ಗಮನಕ್ಕೆ ತಂದರು.

ದಿಟ್ಟ ಆಟ, ಆಸಿಸ್ ಗೆ ಟಿ-20 ಕೀರಿಟ

0

ಟಿ – 20 ವಿಶ್ವಕಪ್ ಟೂರ್ನಿಯ ಅಂತಿಮ ಪಂದ್ಯ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆಯಿತು.ಈ ಫೈನಲ್ ಪಂದ್ಯಾವಳಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಆಸ್ಟ್ರೇಲಿಯಾ ಗೆಲುವು ಸಾಧಿಸಿದೆ.
ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್ ಮಾಡಿದ ನ್ಯೂಜಿಲ್ಯಾಂಡ್ ತಂಡವು 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿತು.
ಮಾರ್ಟಿನ್ ಗುಪ್ಟಿಲ್ ಮತ್ತು ಡೆವಿಲ್ ಪಿಚ್ಚರ್ ಉತ್ತಮ ಆರಂಭ ನೀಡುವ ಪ್ರಯತ್ನ ಮಾಡಿದರು. ಗ್ಲೇನ್ ಮ್ಯಾಕ್ಸ್ ವೆಲ್ ಹಾಕಿದ 3 ನೇ ಓವರ್ ನಲ್ಲಿ ಗುಪ್ಟಿಲ್ ಹೊಡೆದ ಚೆಂಡನ್ನು ಕ್ಯಾಚ್ ಹಿಡಿಯುವ ಮ್ಯಾಥ್ಯೂ ವೇಡ್ ಪ್ರಯತ್ನ ಫಲಿಸಲಿಲ್ಲ. ಆದರೆ ನಂತರದ ಓವರ್ ನಲ್ಲಿ ಜೋಶ್ ಹ್ಯಾಜಲ್ ವುಡ್, ಡೆರಿಲ್ ಮಿಚೆಲ್ 11 ರನ್ ಗಳಿಸಿದ್ದಾಗ ಅವರ ವಿಕೆಟ್ ಕಬಳಿಸುವಲ್ಲಿ ಸಫಲರಾದರು. ಸೆಮಿಫೈನಲ್ನಲ್ಲಿ ಕೀವಿಸ್ ಗೆಲುವಿಗೆ ಮಿಚೆಲ್ ಆಟವೇ ಕಾರಣವಾಗಿತ್ತು.
ಈ ಸಂದರ್ಭದಲ್ಲಿ ಗುಪ್ಟಿಲ್ ಜೊತೆಗೂಡಿದ ಕೇನ್ ತಮ್ಮ ಅನುಭವ ತಾಳ್ಮೆ ಮತ್ತು ಕೌಶಲಗಳನ್ನು ಸಮ್ಮಿಶ್ರ ಮಾಡಿದ ಅಂದ-ಚಂದದ ಬ್ಯಾಟಿಂಗ್ ಮಾಡಿದರು. ಅವರ ಆಟಕ್ಕೆ ಹೆಚ್ಚು ಆದ್ಯತೆ ಕೊಟ್ಟ ಗುಪ್ಟಿಲ್ ತಮ್ಮ ಆಟದ ವೇಗಕ್ಕೆ ಕಡಿವಾಣ ಹಾಕಿದರು 2 ನೇ ವಿಕೆಟ್ ಜೊತೆಯಾಟದಲ್ಲಿ 48 ರನ್ ಸೇರಿಸಿದರು. ಇವರಿಬ್ಬರ ತಾಳ್ಮೆ ಆಟದಿಂದಾಗಿ 11 ಓವರ್ ಗಳಲ್ಲಿ ಒಟ್ಟು 76 ರನ್ ಗಳು ಮಾತ್ರ ಸೇರಿದ್ದವು.ಆದರೆ ವಿಕೆಟ್ ಗಳನ್ನ ಕಾಪಾಡಿಕೊಂಡಿದ್ದರು. 11 ನೇ ಓವರ್ ನಲ್ಲಿ ಮಿಚೆಲ್ ಸ್ಟಾರ್ಕ್ ಬೌಲಿಂಗ್ ನಲ್ಲಿ ಕೇನ್ ವಿಲಿಯಮ್ಸನ್ ಗೆ ಫೀಲ್ಡರ್ ಜೋಶ್ ಜೀವದಾನ ಕೊಟ್ಟರು. ನಂತರದ ಓವರ್ ನಲ್ಲಿ ಗುಪ್ಟಿಲ್ ವಿಕೆಟ್ ಪಡೆದ ಆಡಂ ಜಂಪಾ ಸಂಭ್ರಮಿಸಿದರು. ಆದರೆ ವಿಲಿಯಮ್ಸನ್ ಅವರನ್ನು ನಿಯಂತ್ರಿಸುವುದು ಬೌಲರ್ಗಳಿಗೆ ಸಾಧ್ಯವಾಗಲಿಲ್ಲ. ಗ್ಲೇನ್ ಫಿಲಿಪ್ಸ್ 18 ರನ್ ಗಳಿಸಿಕೊಂಡು ಔಟಾದರು. ಶತಕದತ್ತ ಕಾಲಿಟ್ಟು ಹೋರಾಡಿದ ಕೇನ್ 48 ಎಸೆತಗಳಲ್ಲಿ 85 ರನ್ ಗಳಿಸಿದರು. ಇನ್ನು ಹೆಚ್ಚು ರನ್ ಗಳಿಕೆಯ ವೇಗ ಹೆಚ್ಚಿಸುವ ಭರದಲ್ಲಿ ಔಟಾದರು. ಜಿಮ್ಮಿ ನಿಶಾಮ್ ಔಟಾಗದೆ 13 ರನ್ ಗಳಿಸಿಕೊಂಡರು ಮತ್ತು ಸೀಫರ್ಟ್ ಔಟಾಗದೆ 8 ಗಳಿಸಿಕೊಂಡು ತಂಡದ ಮೊತ್ತ ಬೆಳೆಸಲು ತಮ್ಮ ಕಾಣಿಕೆ ನೀಡಿದರು.
173 ರನ್ ಗಳ ಗೆಲುವಿನ ಗುರಿಯನ್ನಿಟ್ಟುಕೊಂಡು ಬೆನ್ನತ್ತಿ ಆಡಿದ ಆಸ್ಟ್ರೇಲಿಯಾ ಉತ್ತಮ ಆರಂಭ ಮಾಡಿತು.ಕೇವಲ 18.5 ಓವರ್ ಗಳಲ್ಲಿಯೇ 2 ವಿಕೆಟ್ ಕಳೆದುಕೊಂಡು 173 ರನ್ ಗಳಿಸಿ ಗೆಲುವು ಸಾಧಿಸಿತು.
ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಮತ್ತು ಗ್ಲೇನ್ ಮ್ಯಾಕ್ಸ್ ವೆಲ್ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ಯಾರನ್ ಫಿಂಚ್ ಬಳಗ 8 ವಿಕೆಟ್ ಗಳ ಜಯ ಸಾಧಿಸಿತು. ಈ ಮೂಲಕ ಟಿ – 20 ವಿಶ್ವಕಪ್ ಮೊದಲಿಗೆ ಪ್ರಶಸ್ತಿಯನ್ನು ಗೆದ್ದು ಬೀಗಿತು. ಏಕದಿನ ವಿಶ್ವಕಪ್ ನಲ್ಲಿ ತಂಡ 5 ಬಾರಿ ಚಾಂಪಿಯನ್ ಆಗಿದೆ.
ಟಿ – 20 ವಿಶ್ವಕಪ್ ನಲ್ಲಿ ಮೊದಲ ಪ್ರಶಸ್ತಿ ಗೆಲ್ಲುವ ನ್ಯೂಜಿಲೆಂಡ್ ಕನಸು ಇದರೊಂದಿಗೆ ನುಚ್ಚಿನೂರಾಯಿತು. ಆಸ್ಟ್ರೇಲಿಯಾ ತಂಡದ ಬೌಲರ್ ಗಳು ನ್ಯೂಜಿಲೆಂಡ್ ತಂಡದ ರನ್ ವೇಗಕ್ಕೆ ಕಡಿವಾಣ ಹಾಕಿದರು.
ಟಿ – 20 ವಿಶ್ವಕಪ್ ಚೊಚ್ಚಲವಾಗಿ ಮುಡಿಗೇರಿಸಿದ ಆಸ್ಟ್ರೇಲಿಯ ಭರವಸೆ ಆಟವಾಡಿ ಇಡೀ ಕ್ರೀಡಾಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು.

ಕಣಿವೆ ರಾಜ್ಯದಲ್ಲಿ ಉಗ್ರರ ಹೆಚ್ಚಳ

0

ಕಣಿವೆ ರಾಜ್ಯ ಕಾಶ್ಮೀರದಲ್ಲಿ 220 ಉಗ್ರರು ಸಕ್ರಿಯರಾಗಿದ್ದಾರೆ. ಈ ಆತಂಕಕಾರಿ ಬೆಳವಣಿಗೆ ಬಗ್ಗೆ ವರದಿಯಾಗಿದೆ. ಈ ವರ್ಷ ಭದ್ರತಾ ಪಡೆಗಳಿಗೆ ಕಾರ್ಯಾಚರಣೆಯಲ್ಲಿ 133 ಉಗ್ರರು ಬಲಿಯಾಗಿದ್ದು ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿರುವವರ ಸಂಖ್ಯೆ ಹೆಚ್ಚಾಗಿದೆ.

ಕಾಶ್ಮೀರ ಗಡಿಭಾಗದಲ್ಲಿ ನುಸುಳುಕೋರರ ಸಂಖ್ಯೆ ಹೆಚ್ಚಾಗಿರುವುದು ಹಾಗೂ ಸ್ಥಳೀಯವಾಗಿ ಆಗಿಂದಾಗ್ಗೆ ಉಗ್ರ ಸಂಘಟನೆಗಳು ನೇಮಕಾತಿ ಪ್ರಕ್ರಿಯೆ ನಡೆಸಿ ಉಗ್ರರ ಸಂಖ್ಯೆ ಹೆಚ್ಚಾಗಲು ಕಾರಣವಾಗಿವೆ.

ಈ ವರ್ಷ 100 ಸ್ಥಳೀಯ ಯುವಕರು ಹೊಸದಾಗಿ ಉಗ್ರ ಸಂಘಟನೆಗೆ ಸೇರಿದ್ದಾರೆ. ಹದಿನೈದು-ಇಪ್ಪತ್ತು ಉಗ್ರರು ಪಾಕಿಸ್ತಾನದಿಂದ ಕಾಶ್ಮೀರ ಕಣಿವೆಗೆ ನುಸುಳಿ ಬಂದಿದ್ದಾರೆ. ಕಳೆದ ವರ್ಷ ಭಾರತೀಯ ಭದ್ರತಾಪಡೆ 207 ಮಂದಿ ಉಗ್ರರನ್ನು ಹತ್ಯೆ ಮಾಡಿತ್ತು. 174 ಮಂದಿ ಉಗ್ರ ಸಂಘಟನೆಗಳನ್ನು ಸೇರಿದ್ದರು.

ಸುಮಾರು 35ರಿಂದ 40 ಪಾಕಿಸ್ತಾನಿ ಉಗ್ರರು ಸದ್ಯ ಕಾರ್ಯ ಪ್ರವೃತ್ತರಾಗಿದ್ದಾರೆ. ಇವರಲ್ಲಿ 12 ಜನ ಜೈಶ್-ಎ-ಮೊಹಮ್ಮದ್ ಸಂಘಟನೆಗೆ ಸೇರಿದರೆ, ಉಳಿದವರು ಲಷ್ಕರ್-ಎ-ತೈಯಬಾ ಸಂಘಟನೆಗೆ ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಡಿಜಿಟಲ್ ಮಾಧ್ಯಮಕ್ಕೆ ಭವ್ಯ ಭವಿಷ್ಯ

0

ನಾವಿಂದು ಸಮೂಹ ಮಾಧ್ಯಮಗಳ ಸ್ಥಿತ್ಯಂತರ ಯುಗದಲ್ಲಿದ್ದೆವೆ. ದಿನದಿಂದ ದಿನಕ್ಕೆ ಮಾಧ್ಯಮ ಕ್ಷೇತ್ರದಲ್ಲಿ ಕ್ಷಿಪ್ರ ಬದಲಾವಣೆಗಳಾಗುತ್ತಿವೆ. 15ನೇ ಶತಮಾನದಲ್ಲಿ ಮುದ್ರಣ ಯಂತ್ರದ ಆವಿಷ್ಕಾರವಾದ ಮೇಲೆ ಸಮೂಹ ಮಾಧ್ಯಮಗಳ ಯುಗ ಆರಂಭವಾಯಿತು. ಮೊದಲು ಪತ್ರಿಕೆಗಳು ಆರಂಭವಾಗಿ ನಂತರ ಛಾಯಾಗ್ರಹಣ, ಸಿನಿಮಾ, ಬಾನುಲಿ, ಟೆಲಿವಿಷನ್ ಮಾಧ್ಯಮಗಳು ಒಂದರ ನಂತರ ಒಂದು ಹುಟ್ಟಿಕೊಂಡು 20ನೇ ಶತಮಾನದಲ್ಲಿ ಅಂತ್ಯಕಾಲದ ಆವಿಷ್ಕಾರದೊಂದಿಗೆ ಮಹಾ ಮಾಧ್ಯಮ ಯುಗಕ್ಕೆ ಕಾರಣವಾಯಿತು. ಇಂದು ಮಾಧ್ಯಮಗಳ ಸಂಗಮದಿಂದ ಮೊಬೈಲ್ ಮೂಲಕ ಅಂಗೈಯಲ್ಲೇ ಪ್ರತಿಯೊಂದು ಮಾಧ್ಯಮವನ್ನು ನೋಡುವುದು ಸಾಧ್ಯವಾಗಿದೆ.
ಅಂತರ್ಜಾಲದ ಆವಿಷ್ಕಾರ ಮಾಧ್ಯಮ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆಗೆ ಕಾರಣವಾಯಿತು. ಒಂದೆಡೆ ಎಲ್ಲಾ ಸಮೂಹ ಮಾಧ್ಯಮಗಳಿಗೆ ಸುದ್ದಿ ಸಂಗ್ರಹ, ವಿತರಣೆ ಸುಲಭವಾದರೆ, ಇನ್ನೊಂದೆಡೆ ವಿವಿಧ ಪ್ರಯೋಗಗಳನ್ನು ಮಾಡಲು ಸಾಧ್ಯವಾಯಿತು. ಇವತ್ತು ಮುದ್ರಣ ಮಾಧ್ಯಮ ಕೇವಲ ಮುದ್ರಣ ಮಾಧ್ಯಮವಾಗಿ ಉಳಿದಿಲ್ಲ. ಅದು ಟೆಲಿವಿಷನ್ ನಂತೆ ದೃಶ್ಯ ಹಾಗೂ ಶ್ರವ್ಯ ಮಾಧ್ಯಮವಾಗಿದೆ. ಪತ್ರಿಕೆಗಳು ಇಂದು ಟೆಲಿವಿಷನ್ ನಂತೆ, ಪೊಡಕಾಸ್ಟ್ ಮೂಲಕ ನೇರ ಸುದ್ದಿ ಹಾಗೂ ಸಂದರ್ಶನಗಳನ್ನು ಪ್ರಸಾರ ಮಾಡುವುದಲ್ಲದೆ, ಕ್ಲಬ್ ಹೌಸ್ ಮೂಲಕ ಬಾನುಲಿಯಂತೆ ಶ್ರವ್ಯ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಿವೆ. ಇದು ಮಾಧ್ಯಮ ಕ್ಷೇತ್ರಕ್ಕೆ ಕಾಲಿಡುವವರೆಗೆ ಒಂದು ಅವಕಾಶ ಹಾಗೂ ಸವಾಲಾಗಿ ಪರಿಣಮಿಸಿದೆ.

ಒಂದು ಮಾಧ್ಯಮ ಹುಟ್ಟಿಕೊಂಡಾಗ ಇನ್ನೊಂದು ಮಾಧ್ಯಮದ ಅಸ್ತಿತ್ವದ ಪ್ರಶ್ನೆ ಎದುರಾಗುತ್ತದೆ. ಆದರೆ ಈವರೆಗೆ ಯಾವುದೇ ಮಾಧ್ಯಮ ಬಂದರೂ ಅದರ ಹಿಂದಿನ ಮಾಧ್ಯಮ ಆಸ್ತಿತ್ವ ಕಳೆದುಕೊಂಡಿಲ್ಲ. ಆದರೆ ಈಗಾಗಲೇ ಅನೇಕ ಪ್ರಭಾವಿ ಪತ್ರಿಕೆಗಳು ಮುದ್ರಿತ ಆವೃತ್ತಿ ನಿಲ್ಲಿಸಿ ಆನ್ಲೈನ್ ಆವೃತ್ತಿಗಳನ್ನು ಮಾತ್ರ ಪ್ರಕಟಿಸುತ್ತಿರುವುದರಿಂದ ಮುಂದೆ ಪತ್ರಿಕೆಗಳು ತಮ್ಮ ಅಸ್ತಿತ್ವ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಎಫ್ಎಂ ಬಾನುಲಿ ಮಾತ್ರ ಜನಪ್ರಿಯವಾಗುತ್ತಿದ್ದು, ಎಸ್ ಡಬ್ಲ್ಯೂ, ಎಂ ಡಬ್ಲ್ಯೂ, ವಾಹಿನಿಗಳ ಶ್ರೋತೃಗಳ ಸಂಖ್ಯೆ ಸಾಕಷ್ಟು ಇಳಿಮುಖವಾಗಿದೆ. ಟೆಲಿವಿಷನ್ ಮಾತ್ರ ಜನಪ್ರಿಯವಾಗಿದ್ದು, ಮುಂದೆಯೂ ತನ್ನ ಅಸ್ತಿತ್ವ ಉಳಿಸುವ ಭರವಸೆ ಇದೆ. ಇಂತಹ ಸಂದರ್ಭದಲ್ಲಿ ಭವಿಷ್ಯದಲ್ಲಿ ಭರವಸೆ ಮೂಡಿಸುವ ಮಾಧ್ಯಮಗಳೆಂದರೆ ಡಿಜಿಟಲ್ ಮಾಧ್ಯಮಗಳು.
ಇಂದು ಸುದ್ದಿಜಾಲಗಳು, ಸುದ್ದಿ ಪೋರ್ಟಲ್ ಗಳು, ಸುದ್ದಿ ಆಪ್ ಗಳು ಜನಪ್ರಿಯವಾಗುತ್ತಿದ್ದು, ಪರ್ಯಾಯ ಸಮೂಹ ಮಾಧ್ಯಮಗಳಾಗಿ ಕಾರ್ಯನಿರ್ವಹಿಸುತ್ತಿವೆ. ಸಮೂಹ ಮಾಧ್ಯಮಗಳಿಗಿರುವಷ್ಟು ಕಾನೂನು ನಿಯಮಗಳು ಇವುಗಳಿಗಿಲ್ಲದಿರುವುದರಿಂದ ಮುಕ್ತ ಅಭಿವ್ಯಕ್ತಿಯ ಮುಖ್ಯ ವೇದಿಕೆಯಾಗಿ ಕಾಣಿಸಿಕೊಳ್ಳುತ್ತಿವೆ. ಮುಖ್ಯವಾಹಿನಿಯ ಮಾಧ್ಯಮಗಳು ಪ್ರಜಾಪ್ರಭುತ್ವ ದೇಶದಲ್ಲಿ ನಿಜವಾದ ವಿರೋಧಪಕ್ಷದ ರೀತಿಯಲ್ಲಿ ಕಾರ್ಯನಿರ್ವಹಿಸಲು ವಿಫಲವಾಗಿರುವುದರಿಂದ ಡಿಜಿಟಲ್ ಮಾಧ್ಯಮಗಳು ಆ ಕೆಲಸವನ್ನು ಮಾಡುತ್ತಿವೆ. ಅದಕ್ಕಾಗಿಯೇ ಸಮೂಹ ಮಾಧ್ಯಮಗಳನ್ನು ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆಂದು ಕರೆದಂತೆ ಡಿಜಿಟಲ್ ಮಾಧ್ಯಮಗಳನ್ನು ಐದನೇ ಅಂಗವೆಂದು ಕರೆಯುತ್ತಾರೆ. ಅವು ಕೆಲವೊಮ್ಮೆ ಮುಖ್ಯವಾಹಿನಿ ಮಾಧ್ಯಮಗಳ ಕಾವಲು ನಾಯಿಯಾಗಿ ಕೂಡ ಕೆಲಸ ಮಾಡುತ್ತವೆ.
ಫಿಲಿಪ್ಟಿನ್ ಮರಿಯಾ ರೆಸ್ಸಾ ಹಾಗೂ ರಷ್ಯಾದ ಡಿಮಿಟ್ರಿ ಮುರಟೋವ್ ಎಂಬ ತನಿಖಾ ಪತ್ರಕರ್ತರಿಗೆ ಈ ವರ್ಷದ ನೊಬೆಲ್ ಶಾಂತಿ ಪುರಸ್ಕಾರ ದೊರೆತಿದೆ. ಇದು ಮಾಧ್ಯಮ ರಂಗದ ಮೇಲೆ ಸಮಾಜ ಇಟ್ಟಿರುವ ವಿಶ್ವಾಸಕ್ಕೆ ದ್ಯೋತಕವಾಗಿದೆ. ಮುಖ್ಯವಾಹಿನಿ ಮಾಧ್ಯಮಗಳಲ್ಲಿ ತನಿಖಾ ವರದಿಗಳು ಕಡಿಮೆಯಾಗುತ್ತಿರುವಾಗ ಮರಿಯಾ ರೆಸ್ಸಾರಂತವರು ಡಿಜಿಟಲ್ ಮಾಧ್ಯಮಗಳ ಮೂಲಕ ಆಡಳಿತವನ್ನು ಎದುರುಹಾಕಿಕೊಂಡು ಕೆಲಸ ಮಾಡಿದರು. ಭಾರತದಲ್ಲಿ ಅಂತಹ ಅನೇಕ ಸುದ್ದಿ ಪೋರ್ಟಲ್ ಗಳಿವೆ. ನ್ಯೂಸ್ ಪೋರ್ಟಲ್ ಗಳು ಒಂದು ಪರ್ಯಾಯ ಮಾಧ್ಯಮವಾಗಿ ಹಾಗೂ ನಿಜವಾದ ಪ್ರಜಾಪ್ರಭುತ್ವದ 5ನೇ ಅಂಗವಾಗಿ ಕಾರ್ಯನಿರ್ವಹಿಸಲಿ ಎಂಬ ಆಶಯ ನನ್ನದು.

ಲೇಖಕರು: ಡಾ.ಸತೀಶ್ ಕುಮಾರ್ ಅಂಡಿಂಜೆ

ಪ್ರಸ್ತುತ ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಹಾಗೂ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ. ಸತೀಶ್ ಕುಮಾರ್ ಅಂಡಿಂಜೆ ಅವರು ಬೆಳ್ತಂಗಡಿ ತಾಲೂಕಿನ ಅಂಡಿಂಜೆಯವರು. ಇವರು ಹೊಸ ದಿಗಂತ ಪತ್ರಿಕೆಯಲ್ಲಿ ಉಪಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇವರು (ಎಂಎ) ಪತ್ರಿಕೋದ್ಯಮದಲ್ಲಿ ಪ್ರಥಮ ಶ್ರೇಣಿ ಮತ್ತು ಚಿನ್ನದ ಪದಕಗಳನ್ನು ಪಡೆದಿದ್ದಾರೆ. ಇವರು ಅನೇಕ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಭಾಗವಹಿಸಿ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿರುತ್ತಾರೆ. ಇವರು 60ಕ್ಕೂ ಹೆಚ್ಚು ಸಂಶೋಧನಾ ಲೇಖನಗಳು, ಸಂಶೋಧನಾ ನಿಯತಕಾಲಿಕೆಗಳು ಮತ್ತು ವಿಚಾರ ಸಂಕಿರಣದ ಸಂಪಾದಿತ ಕೃತಿಗಳಲ್ಲಿ ಪ್ರಕಟಗೊಂಡಿವೆ.ಇವರು ‘ಭಾರತೀಯ ಮಾಧ್ಯಮ ಕಾನೂನುಗಳು ಮತ್ತು ನೀತಿ ಸಂಹಿತೆ’, ‘ಸಮೂಹ ಮಾಧ್ಯಮ ಸಂಶೋಧನೆ’ ಮತ್ತು ‘ಮಾಧ್ಯಮಲೋಕ’ ಎಂಬ ಕೃತಿಗಳನ್ನು ಪ್ರಕಟಿಸಿದ್ದಾರೆ. ಇವರ ಭಾಷಣ ಹಾಗೂ ಸಣ್ಣ ಕಥೆಗಳು ಮಂಗಳೂರು ಮತ್ತು ಭದ್ರಾವತಿ ಆಕಾಶವಾಣಿ ಕೇಂದ್ರಗಳಿಂದ ಪ್ರಸಾರಗೊಂಡಿವೆ.

ಮಕ್ಕಳ ಕೈಲಿ ಮೊಬೈಲ್: ದೌರ್ಜನ್ಯಕ್ಕೆ ಆಹ್ವಾನ

0

ದೇಶಾದ್ಯಂತ ಮಕ್ಕಳ ಮೇಲೆ ನಡೆದ ಸೈಬರ್ ದೌರ್ಜನ್ಯ ಪ್ರಕರಣಗಳು 2019 ಕ್ಕೆ ಹೋಲಿಸಿದರೆ 2020ರಲ್ಲಿ ಶೇ. 400ರಷ್ಟು ಹೆಚ್ಚಾಗಿದೆ. ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಜಾಸ್ತಿ ದಾಖಲಾಗಿರುವ ಐದು ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಸೈಬರ್ ದೌರ್ಜನ್ಯ ಪ್ರಕರಣಗಳು ಉತ್ತರಪ್ರದೇಶ, ಕರ್ನಾಟಕ, ಮಹಾರಾಷ್ಟ್ರ, ಕೇರಳ ಹಾಗೂ ಓಡಿಸಾ ರಾಜ್ಯಗಳಲ್ಲಿ ಅಧಿಕವಾಗಿ ದಾಖಲಾಗಿವೆ ಎಂದು ವರದಿಯಾಗಿದೆ.
“ಒಟ್ಟು 842 ಪ್ರಕರಣಗಳಲ್ಲಿ 238 ಪ್ರಕರಣಗಳು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಜೊತೆಗೆ ಅವುಗಳ ಚಿತ್ರೀಕರಣ ಮಾಡಿ ರವಾನಿಸಿದ ಪ್ರಕರಣಗಳಾಗಿವೆ” ಎಂದು ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋ (ಎನ್ ಸಿಆರ್ ಬಿ) ವರದಿ ತಿಳಿಸಿದೆ.
ಎನ್ ಸಿಆರ್ ಬಿ ವರದಿ ಪ್ರಕಾರ, 2019ರಲ್ಲಿ ದೇಶಾದ್ಯಂತ ಮಕ್ಕಳ ಮೇಲೆ ದೌರ್ಜನ್ಯ ಎಸಗಿದ ಕುರಿತು 164 ಕೇಸ್ ದಾಖಲಾಗಿದ್ದವು. ಅದೇ ರೀತಿ 2018ರಲ್ಲಿ 117 ಪ್ರಕರಣ, 2017ರಲ್ಲಿ 79 ಪ್ರಕರಣ ದಾಖಲಾಗಿದ್ದವು. ಮಕ್ಕಳು ಹೆಚ್ಚಿನ ಅವಧಿಯಲ್ಲಿ ಆನ್ಲೈನ್ನಲ್ಲಿಯೇ ಕಳೆಯುತ್ತಿರುವುದರಿಂದ ಇಂತಹ ಪ್ರಕರಣಗಳು ಜಾಸ್ತಿಯಾಗುತ್ತಿವೆ ಎಂದು ತಜ್ಞರು ತಿಳಿಸಿದ್ದಾರೆ.
ಈಗಿನ ಮಕ್ಕಳು ಅಂತರ್ಜಾಲದಲ್ಲಿ ಹೆಚ್ಚಿನ ಸಮಯ ಕಳೆಯುವುದು ಹೆಚ್ಚಾಗಿದೆ. ಇದರೊಂದಿಗೆ ಸ್ಮಾರ್ಟ್ ಫೋನ್ ಬಳಸುವುದು ಸುಲಭವಾಗಿದೆ. ಶೈಕ್ಷಣಿಕ ಕಾರಣಗಳಿಗಾಗಿ ಪೋಷಕರು ಮಕ್ಕಳಿಗೆ ಮೊಬೈಲ್ ಕೊಡಿಸುತ್ತಾರೆ. ಆದರೆ ಮಕ್ಕಳು ಆನ್ಲೈನ್ ನಲ್ಲಿ ಇರುವುದು ಅಪಾಯಕಾರಿಯಾಗಿದೆ. ಅಶ್ಲೀಲ ಚಿತ್ರಗಳ ವೀಕ್ಷಣೆ, ಲೈಂಗಿಕ ಪ್ರಚೋದನೆ, ದೌರ್ಜನ್ಯ, ಅಶ್ಲೀಲ ಚಿತ್ರಗಳ ರವಾನಿಸಿ ಹಲವು ರೀತಿಯಲ್ಲಿ ದೌರ್ಜನ್ಯಕೀಡಾಗುತ್ತಾರೆ ಎಂದು ಕ್ರೈಂ-ಚೈಲ್ಡ್ ರೈಟ್ಸ್ ಅಂಡ್ ಯು ಸಂಸ್ಥೆ ಸಿಇಒ ಪೂಜಾ ಮರ್ವಾಹ ತಿಳಿಸಿದ್ದಾರೆ.