ರಾಜ್ಯದ ಮೂರು ಸಾಧಕರಿಗೆ ಮಂಗಳವಾರ ಪದ್ಮ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ವೈದ್ಯ ಮತ್ತು ಶಿಕ್ಷಣ ತಜ್ಞ ಬಿ.ಎಂ. ಹೆಗ್ಡೆ, ಪ್ಯಾರಾ ಅಥ್ಲೀಟ್ ಕೆ.ವೈ. ವೆಂಕಟೇಶ್, ಜಾನಪದ ಕಲಾವಿದೆ ಮಂಜಮ್ಮ ಜೋಗತಿ ಸೇರಿದಂತೆ ಹಲವು ಗಣ್ಯರು ಮಂಗಳವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಪದ್ಮ ಪ್ರಶಸ್ತಿ ಸ್ವೀಕರಿಸಿದರು. ಕೆ. ವೈ. ವೆಂಕಟೇಶ್ ಹಾಗೂ ಮಂಜಮ್ಮ ಜೋಗತಿ ಅವರು ಪದ್ಮಶ್ರೀ ಹಾಗೂ ಬಿ.ಎಂ. ಹೆಗ್ಡೆ ಅವರು ಪದ್ಮಭೂಷಣ ಪ್ರಶಸ್ತಿಗೆ ಭಾಜನರಾದರು.
ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಖ್ಯಾತ ಹಿನ್ನೆಲೆ ಗಾಯಕಿ ಕೆ.ಎಸ್.ಚಿತ್ರಾ , ಅಗ್ರಿ ಶಿಲ್ಪಿ ಸುದರ್ಶನ್ ಸಾಹೂ ಅವರು ಪದ್ಮವಿಭೂಷಣ ಪ್ರಶಸ್ತಿ ಸ್ವೀಕರಿಸಿದರೆ, ಎಸ್. ಪಿ. ಬಾಲಸುಬ್ರಮಣ್ಯಂ ಪರವಾಗಿ ಅವರ ಪುತ್ರ ಪದ್ಮವಿಭೂಷಣ ಸ್ವೀಕರಿಸಿದರು.
ಡಾ.ಬಿ.ಎಂ. ಹೆಗಡೆ ಅವರು ವ್ಹೀಲ್ ಚೇರ್ ನಲ್ಲಿ ಬಂದು ಪ್ರಶಸ್ತಿ ಪಡೆದುಕೊಂಡರು. ಜೋಗತಿ ಮಂಜಮ್ಮ ಅವರು ಪ್ರಶಸ್ತಿ ಪಡೆದ ಬಳಿಕ ರಾಷ್ಟ್ರಪತಿಯವರಿಗೆ ದೃಷ್ಟಿ ತೆಗೆಯುವ ಮೂಲಕ ಗಮನ ಸೆಳೆದರು.
ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್, ಕೇಂದ್ರದ ಮಾಜಿ ಸಚಿವ ರಾಮ್ ವಿಲಾಸ್ ಪಾಸ್ವಾನ್, ಗುಜರಾತ್ ಮಾಜಿ ಮುಖ್ಯಮಂತ್ರಿ ಕೇಶುಭಾಯಿ ಪಟೇಲ್ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಘೋಷಿಸಿದ್ದು, ಗೊಗೊಯ್ ಅವರ ಪತ್ನಿ, ಪಾಸ್ವಾನ್ ಅವರ ಪುತ್ರ ಹಾಗೂ ಪಟೇಲ್ ಪುತ್ರ ಪ್ರಶಸ್ತಿ ಸ್ವೀಕರಿಸಿದರು.
ಟೇಬಲ್ ಟೆನಿಸ್ ಆಟಗಾರ್ತಿ ಮೌಮಾದಾಸ್, ಕುಸ್ತಿಪಟು ವೀರೇಂದರ್ ಸಿಂಗ್, ಬಾಂಗ್ಲಾದೇಶ ವಿಮೋಚನೆ ಯುದ್ಧದಲ್ಲಿ ಮಹತ್ವದ ಪಾತ್ರವಹಿಸಿದ ಲೆಫ್ಟಿನೆಂಟ್ ಕರ್ನಲ್ ಖ್ವಾಜಿ ಸಜ್ಜದ್ ಅಲಿ ಜಹೀರ್, ಸೇರಿದಂತೆ 51 ಸಾಧಕರಿಗೆ ರಾಮನಾಥ್ ಕೋವಿಂದ್ ಅವರು ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. ನಾಲ್ವರಿಗೆ ಪದ್ಮವಿಭೂಷಣ, ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಮತ್ತಷ್ಟು ಕನ್ನಡಿಗರಿಗೆ ಪದ್ಮ ಪುರಸ್ಕಾರ
ಲಿಖಿಂಪುರ -ಖೇರಿ, ರೈತರು ಹತ್ಯೆ-ತನಿಖಾ ಪ್ರಗತಿ
ಲಿಖಿಂಪುರ -ಖೇರಿಯಲ್ಲಿ ರೈತರು ಸೇರಿ 8 ಮಂದಿಯ ಹತ್ಯೆ ಪ್ರಕರಣವು ಹೊಸ ತಿರುವು ಪಡೆದಿದೆ. ಕೇಂದ್ರ ಗ್ರಹ ಖಾತೆಯ ರಾಜ್ಯ ಸಚಿವ ಶ್ರೀ ಅಜಯ್ ಮಿಶ್ರ ಅವರ ಮಗ ಆಶಿಶ್ ಮಿಶ್ರಾ ಅವರ ಬಂಧೂಕಿನಿಂದ ಹಿಂಸಾಚಾರ ನಡೆದ ದಿನ ಗುಂಡು ಹಾರಿಸಲಾಗಿದೆ ಎಂಬುವುದನ್ನು ವಿಜ್ಞಾನ ವರದಿಯು ದೃಢಪಡಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಆಶಿಶ್ ಅವರ ಬಂದೂಕು ಮತ್ತು ಅಂಕಿತ ಅವರ ಪಿಸ್ತೂಲಿನಿಂದ ಗುಂಡು ಹಾರಾಟ ನಡೆಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಲಿಖಿಂ ಪುರ- ಖೇರಿಯಲ್ಲಿ ಹೇಳಿದ್ದಾರೆ. ಆಶಿಶ್ ಮತ್ತು ಅಂಕಿತ ಅವರೇ ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಿದ್ದರು.
ರೈತರ ಮೇಲೆ ಎಸ್ಯುವಿ ವಾಹನ ಹರಿಸಿ ನಾಲ್ವರನ್ನು ಹತ್ಯೆ ಮಾಡಿದ ಆರೋಪ ಆಶಿಶ್ ಮತ್ತು ಅವರ ಗೆಳೆಯ ಅಂಕಿತ್ ದಾಸ್ ಮೇಲೆ ಇದೆ.
ತನಿಖೆ ಬಗ್ಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಎಫ್ಐಆರ್ ದಾಖಲಾಗಿವೆ. ಆಶಿಶ್, ಅಂಕಿತ್ ಮತ್ತು ಇತರರ ವಿರುದ್ಧ ರೈತರು ಎಫ್ಐಆರ್ ದಾಖಲಿಸಿದ್ದಾರೆ. ಅಪರಿಚಿತ ವ್ಯಕ್ತಿಗಳ ವಿರುದ್ಧ ಬಿಜೆಪಿ ಕಾರ್ಯಕರ್ತರೊಬ್ಬರು ದೂರು ದಾಖಲಿಸಿದ್ದಾರೆ. ಪ್ರಕರಣದಲ್ಲಿ ಈವರೆಗೆ 17 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರೈತರ ಮೇಲೆ ಹರಿದ ವಾಹನದಲ್ಲಿ ತಾವು ಇರಲಿಲ್ಲ ಎಂದು ಆಶಿಶ್ ಮತ್ತು ಅಜಯ್ ಮಿಶ್ರ ಅವರು ತನಿಖೆ ವೇಳೆ ಹೇಳಿದ್ದರು. ಆದರೆ ಎಸ್ ಯುವಿ ವಾಹನದಲ್ಲಿ ಆಶಿಶ್ ಇದ್ದರು ಎಂದು ರೈತರು ಹೇಳಿದ್ದಾರೆ.
ಹಿಂಸಾಚಾರದ ಬಳಿಕ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಅಜಯ್ ಮಿಶ್ರ ಅವರು ರಾಜೀನಾಮೆ ಕೊಡಬೇಕು ಎಂಬ ಆಗ್ರಹ ಬಲವಾಗಿ ಕೇಳಿ ಬಂದಿತ್ತು. ಆದರೆ, ಕೇಂದ್ರ ಗೃಹಸಚಿವ ಅಮಿತ್ ಷಾ ಅವರ ಜೊತೆಗೆ ಅವರು ಇತ್ತೀಚೆಗೆ ವೇದಿಕೆ ಹಂಚಿಕೊಂಡಿದ್ದರು. ಪ್ರಕರಣದ ತನಿಖೆಯು ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು.
ಒನಕೆ ಓಬವ್ವ ಜಯಂತಿ.
ರಾಜ್ಯದಾದ್ಯಂತ ನ.11ರಂದು ಓಬವ್ವ ಜಯಂತಿ ಆಚರಿಸಲು ಸರ್ಕಾರ ಆದೇಶ ಹೊರಡಿಸಿದೆ.
ಚಿತ್ರದುರ್ಗದ ಇತಿಹಾಸದಲ್ಲಿ ಒನಕೆ ಓಬವ್ವಳ ಹೆಸರು ಮರೆಯಲು ಸಾಧ್ಯವಿಲ್ಲ. ನವೆಂಬರ್ 11ರಂದು ಓಬವ್ವನ ಜನ್ಮದಿನವಾದ ಕಾರಣ ಈ ದಿನವೇ ಓಬವ್ವ ಜಯಂತಿಯನ್ನಾಗಿ ಘೋಷಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಚರಣೆ ನಡೆಯಲಿದೆ.
ಕಿತ್ತೂರು ರಾಣಿ ಚೆನ್ನಮ್ಮ, ರಾಣಿ ಅಬ್ಬಕ್ಕ ಕರ್ನಾಟಕದ ಇತರೆ ರಾಣಿಯರ ಸಾಲಿನಲ್ಲಿ ಓಬವ್ವ ಕೂಡ ಒಬ್ಬಳು ಎಂದು ಪರಿಗಣಿಸಲಾಗಿದೆ.
ಫ್ರೀ ಶಿಪ್ ಕಾರ್ಡ್: ಪ.ಜಾ/ ವರ್ಗ ಗಳ ವಿದ್ಯಾರ್ಥಿಗಳಿಗೆ ಸರಳ ಪ್ರವೇಶಾತಿ
ಎಸ್ ಸಿ, ಎಸ್ ಟಿ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಫ್ರೀಶಿಪ್ ಕಾರ್ಡ್ ವಿತರಣೆ, ಶುಲ್ಕ ಕಟ್ಟದೆ ಫ್ರೀಶಿಪ್ ಕಾರ್ಡ್ ತೋರಿಸಿದರೆ ಕಾಲೇಜು ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ.
ಹಲವು ವಿದ್ಯಾರ್ಥಿಗಳು ಕಾಲೇಜು ಪ್ರವೇಶದ ಸಂದರ್ಭದಲ್ಲಿ ಹಣವಿಲ್ಲದೆ ಇರಬಹುದು. ಇದರಿಂದ ಅನೇಕ ಬಡ ಮಕ್ಕಳು ಶಿಕ್ಷಣದಿಂದ ದೂರ ಉಳಿಯುತ್ತಾರೆ.ಇದನ್ನು ತಪ್ಪಿಸಲು ಸರಕಾರ ಫ್ರೀಶಿಪ್ ಕಾರ್ಡ್ ಯೋಜನೆ ಜಾರಿಗೆ ತಂದಿದೆ.
ಫ್ರೀಶಿಪ್ ಕಾರ್ಡ್ ಬಡ ಮಕ್ಕಳು ಶಿಕ್ಷಣದಿಂದ ದೂರ ಉಳಿಯದೆ ಇರಲಿ ಎಂಬ ದೃಷ್ಟಿಯಿಂದ ರಚಿಸಲಾದ ಯೋಜನೆಯಾಗಿದೆ. ಫ್ರೀಶಿಪ್ ಕಾರ್ಡ್ ಡೌನ್ಲೋಡ್ ಮಾಡಿಕೊಳ್ಳಬೇಕು. ನಂತರ ತಾವು ಪ್ರವೇಶ ಪಡೆದಿರುವ ಕಾಲೇಜಿಗೆ ಹೋಗಿ ಕಾರ್ಡನ್ನು ತೋರಿಸಿದಲ್ಲಿ, ಯಾವುದೇ ಶುಲ್ಕವಿಲ್ಲದೆ ಉಚಿತ ಪ್ರವೇಶ ಪಡೆಯಬಹುದು.
ಕಾಲೇಜಿಗೆ ಸಮಾಜ ಕಲ್ಯಾಣ ಇಲಾಖೆಯು ವಿದ್ಯಾರ್ಥಿವೇತನ ನೀಡಿ, ಏಳು ದಿನಗಳೊಳಗೆ ಶುಲ್ಕ ಕಟ್ಟುವ ಬಗ್ಗೆ ಪ್ರಮಾಣಪತ್ರವನ್ನು ನೀಡಬೇಕಾಗುತ್ತದೆ. ಇದರಿಂದ ಕಾಲೇಜು ಉಚಿತ ಪ್ರವೇಶ ನೀಡಲಿದೆ. ಉಚಿತ ಪ್ರವೇಶ ಪಡೆದ ನಂತರ ಕಾಲೇಜು ಶುಲ್ಕವನ್ನು ಸಮಾಜ ಕಲ್ಯಾಣ ಇಲಾಖೆ ಪಾವತಿಸಲಿದೆ.
ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ಎಸ್.ಎಸ್.ಪಿ ಪೋರ್ಟಲ್ ನಲ್ಲಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸುತ್ತಾರೆ. ಈ ವೆಬ್ ಪೋರ್ಟಲ್ ನಲ್ಲಿ ಹೋಗಿ ಕಾರ್ಡ್ ಗೆ ಅಪ್ಲೈ ಮಾಡಬೇಕು. ತದನಂತರ ಅದೇ ಪೋರ್ಟಲ್ ನಲ್ಲಿ ಫ್ರೀಶಿಪ್ ಕಾರ್ಡ್ ಡೌನ್ಲೋಡ್ ಮಾಡಿಕೊಳ್ಳಬೇಕು. ಈ ಕಾರ್ಡ್ ಗೆ ವಿದ್ಯಾರ್ಥಿವೇತನದ ನಂಬರ್ ನೀಡಲಾಗಿರುತ್ತದೆ. ಈ ಯೋಜನೆಯಿಂದ ವಿದ್ಯಾರ್ಥಿಗಳು ಶುಲ್ಕ ಪಾವತಿಯ ಸಂಕಷ್ಟದಿಂದ ಪಾರಾಗಬಹುದು.
ಪ್ರಸ್ತುತ ಈ ಕಾರ್ಡ್ ಕೇವಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮಾತ್ರ ಜಾರಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೂ ಈ ಯೋಜನೆ ಜಾರಿಗೆ ತರುವ ಸಂಭವವಿದೆ.
ಆರಕ್ಷಕರಿಂದ, ಜನರಕ್ಷಣಾ ಕಾರ್ಯ
ಕುವೆಂಪು ರಸ್ತೆಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಯ ನಿಧಾನಗತಿಯಿಂದಾಗಿ ವಾಹನ ಚಾಲಕರಿಗೆ ದಿನನಿತ್ಯವೂ ನರಕ ದರ್ಶನವಾಗುತ್ತಿದೆ.
ಪ್ರತಿಯೊಂದು ರಸ್ತೆಯು ಗುಂಡಿಮಯವಾಗಿದೆ. ಜೈಲು ಸರ್ಕಲ್ ನಲ್ಲಿ ಕುವೆಂಪು ರಸ್ತೆಗೆ ಅಡ್ಡಲಾಗಿ ಗುಂಡಿ ತೋಡಲಾಗಿದೆ. ಸ್ಮಾರ್ಟ್ ಸಿಟಿ ಅಧಿಕಾರಿಗಳು ರಸ್ತೆಯ ಗುಂಡಿಗಳಿಗೆ ಸರಿಯಾಗಿ ಮಣ್ಣು ಮುಚ್ಚಿಸದೆ ಇರುವುದರಿಂದ, ವಾಹನ ಸವಾರರು ಇಲ್ಲಿ ಸಂಚರಿಸಲು ಪರದಾಡುತ್ತಿದ್ದಾರೆ. ಇದನ್ನು ಗಮನಿಸಿದ ಸಂಚಾರಿ ಪೊಲೀಸರು ತಾವೇ ರಸ್ತೆ ಗುಂಡಿಗಳಿಗೆ ಮಣ್ಣು ಹಾಕಿ, ವಾಹನ ಸವಾರರಿಗೆ ನೆರವಾಗುವಂತೆ ಮಾಡಿದ್ದಾರೆ. ಇದರಿಂದ ವಾಹನ ಸಂಚಾರರಿಗೆ ಸಹಾಯಕವಾಗಿದೆ ಪೊಲೀಸರ ಕಾರ್ಯದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸಂಚಾರಿ ಠಾಣೆ ಎಸ್.ಎಸ್.ಐ. ಮಂಜುನಾಥ್ ಹಾಗೂ ಚಾಲಕ ಪ್ರಕಾಶ್ ಸಿಬ್ಬಂದಿ ಹನುಮಂತಪ್ಪ ಇವರುಗಳು ಜೈಲು ಸರ್ಕಲ್ ನಲ್ಲಿ ಗುಂಡಿ ಮುಚ್ಚಿದ್ದಾರೆ. ಇದರಿಂದ ವಾಹನ ಸವಾರರು ಕೊಂಚ ನಿರಾಳರಾಗಿದ್ದಾರೆ.
ಜೈ ಪೋಲಿಸ್.
ಮಕ್ಕಳ ಆಗಮನ : ಅಂಗನವಾಡಿ ಸಡಗರ
ಕೋವಿಡ್-19 ಕಾರಣದಿಂದಾಗಿ ಸುಮಾರು ಒಂದೂವರೆ ವರ್ಷದಿಂದ ದೇಶದಾದ್ಯಂತ ಅಂಗನವಾಡಿ ಕೇಂದ್ರಗಳು ಸ್ಥಗಿತಗೊಂಡಿದ್ದವು.
ರಾಜ್ಯದಾದ್ಯಂತ ಅಂಗನವಾಡಿ,ಎಲ್.ಕೆ. ಜಿ-ಯುಕೆಜಿ ಬೌದ್ಧಿಕ ತರಗತಿಗಳು ಆರಂಭಗೊಂಡಿದೆ. ಅಂಗನವಾಡಿಯತ್ತ ಆಗಮಿಸಿದ ಪುಟಾಣಿಗಳಿಗೆ ಚಾಕಲೇಟ್,ಸಿಹಿ ತಿನಿಸುಗಳು, ಬಲೂನನ್ನು ನೀಡಿ ಆತ್ಮೀಯವಾಗಿ ಸ್ವಾಗತಿಸಲಾಯಿತು. ಚಿಣ್ಣರನ್ನು ಸ್ವಾಗತಿಸಲು ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ತರಗತಿಗಳನ್ನು ಸಂಪೂರ್ಣವಾಗಿ ಶುಚಿ ಗೊಳಿಸಿ, ಸ್ಯಾನಿಟೈಸ್ ಮಾಡಲಾಗಿದೆ.ಹಾಗೂ ಚಿಣ್ಣರ ಆಗಮನಕ್ಕೆ ಬಲೂನ್ ಗಳಿಂದ ತರಗತಿಗಳನ್ನು ಸಿಂಗರಿಸಲಾಗಿತ್ತು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
ಚೀನಾ, ಅಮೆರಿಕವನ್ನ ನಕಲು ಮಾಡುತ್ತಿದೆ
ಅಮೆರಿಕ ನೌಕಾಪಡೆಯ ಯುದ್ಧ ವಿಮಾನಗಳ ಪೂರ್ಣ ಮಾದರಿ, ಆರ್ ಲೀಗ್ ಬರ್ಕ್ ಮಾರ್ಗದರ್ಶಿ ಕ್ಷಿಪಣಿ ಧ್ವಂಸದ ಎರಡು ಮಾದರಿಗಳು, ಆರು ಮೀಟರ್ ಉದ್ದದ ರೈಲು ವ್ಯವಸ್ಥೆ, ಅದರ ಮೇಲೆ ಹಡುಗು ಗಾತ್ರದ ನಿರ್ದಿಷ್ಟ ಗುರಿ ಇರುವಂತೆ ಮಾದರಿಯನ್ನು ರೂಪಿಸಲಾಗಿದೆ. ಈ ಸಂಕೀರ್ಣವನ್ನು ಭೂಮಿಯಿಂದ ಭೂಮಿಗೆ ಉಡಾವಣೆ ಮಾಡಬಹುದಾದ ಕ್ಷಿಪಣಿಗಳ ಪ್ರಯೋಗಕ್ಕೆ ಬಳಸಲಾಗುತ್ತಿದೆ ಎಂದು ಜಿಯೊಸ್ಪೆಷಿಯಲ್ ಇಂಟೆಲಿಜೆನ್ಸ್ ಕಂಪನಿಯ ಮೂಲಗಳನ್ನು ಆಧರಿಸಿ ಅಮೇರಿಕಾದ ನೌಕಾ ಸಂಸ್ಥೆಯು ತಿಳಿಸಿದೆ.
ಅಮೆರಿಕ ನೌಕಾಪಡೆ ಯುದ್ಧ ವಿಮಾನಗಳು, ಇತರೆ ಯುದ್ಧ ಹಡಗುಗಳ ಮಾದರಿಗಳನ್ನು ಚೀನಾ ಸೇನೆಯು, ಅಲ್ಲಿನ ಮರುಭೂಮಿ ಕ್ಸಿನ್ ಜಿಯಾಂಗ್ ನಲ್ಲಿ ರೂಪಿಸಿದೆ. ತರಬೇತಿ ಗುರಿಯಾಗಿ ಬಳಸುವುದು ಇದರ ಉದ್ದೇಶ ಎನ್ನಲಾಗಿದೆ.
ಚೀನಾದ ಹಡಗು ನಿರೋಧಕ ಕ್ಷಿಪಣಿ ಕಾರ್ಯಕ್ರಮದ ಉಸ್ತುವಾರಿಯನ್ನು ಅಲ್ಲಿನ ಪೀಪಲ್ಸ್ ಲಿಬರೇಷನ್ ಆರ್ಮಿ ರಾಕೆಟ್ ಫೋರ್ಸ್ (ಪಿಎಲ್ಎಆರ್ ಎಫ್) ಹೊಂದಿದೆ. ಚೀನಾದ ರಕ್ಷಣಾ ಸಚಿವಾಲಯ ಈ ಕುರಿತು ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.
ಮತ್ತೆ ಮಳೆ… ಹಲವೆಡೆ ಯಲ್ಲೊ ಅಲರ್ಟ್
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತಮಿಳುನಾಡಿನಲ್ಲಿ ಭಾರಿ ಮಳೆ ಆರ್ಭಟ ಮುಂದುವರಿದಿದೆ. ಜೊತೆಗೆ ಮುಂದಿನ 48 ಗಂಟೆಗಳಲ್ಲಿ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇದರೊಂದಿಗೆ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕ ಸೇರಿದಂತೆ ದಕ್ಷಿಣದ ಎಲ್ಲಾ ರಾಜ್ಯಗಳಿಗೂ ತಟ್ಟಿದೆ.
ಸೋಮವಾರ ಉಡುಪಿ ಜಿಲ್ಲೆಯ ಹೆಬ್ರಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬೆಳಗಾವಿ ಜಿಲ್ಲೆಯ ಹೋಳಿನಗರಪುರ, ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಹಾಗೂ ಬೆಳ್ತಂಗಡಿಯಲ್ಲಿ ಭಾರಿ ಮಳೆಯಾಗಿದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಕೋಲಾರ, ಮೈಸೂರು, ಮಂಡ್ಯ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮತ್ತು ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ ಚಿಕ್ಕಮಗಳೂರು ಕೊಡಗು ಹಾಗೂ ಹಾಸನದಲ್ಲಿ ನವೆಂಬರ್ 11 ಮತ್ತು 12 ರಂದು ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ನೀಡಿದೆ.
ನವೆಂಬರ್ 9 ಮತ್ತು 10 ರಂದು ಕೆಲವು ಕಡೆ ಗುಡುಗು ಸಿಡಿಲಿನಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕನ್ನಡಿಗರ ಮುಡಿಗೆ ಪದ್ಮ ಪುರಸ್ಕಾರ
ರಾಷ್ಟ್ರಪತಿ ಭವನದಲ್ಲಿ ನಡೆದ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕದ ಅನೇಕ ಸಾಧಕರಿಗೆ ಪದ್ಮ ಪ್ರಶಸ್ತಿಯನ್ನು ನೀಡಲಾಯಿತು.
ಶ್ರೀ ವಿಶ್ವೇಶತೀರ್ಥ ಶ್ರೀ ಪಾದರಿಗೆ ನೀಡಲಾದ ಮರಣೋತ್ತರ ಪದ್ಮ ವಿಭೂಷಣ ಪ್ರಶಸ್ತಿಯನ್ನು , ಹಾಲಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥರು ಮಾನ್ಯ ರಾಷ್ಟ್ರಪತಿಗಳಿಂದ
ಪ್ರಶಸ್ತಿ ಸ್ವೀಕರಿಸಿದರು.
ಧಾರ್ಮಿಕ ಕ್ಷೇತ್ರದಲ್ಲಿದ್ದು ಸಾಮಾಜಿಕ ಕಳಕಳಿಯನ್ನು ಹೊಂದಿದ್ದರು. ಅವರ ಅನೇಕ ಸಮಾಜಪರ ಕಾಳಜಿಗಳು ಉಳಿದ ಮಠಾಧೀಶರಿಗೆ ಮಾದರಿ ಎನಿಸಿವೆ. ಸನಾತನ ಹಿಂದೂ ಧರ್ಮ ರಕ್ಷಣೆಯಲ್ಲಿ ಸರಳ ನೀತಿಯನ್ನು ಪ್ರತಿಪಾದಿಸಿದ ಶ್ರೀಗಳು, ತಮ್ಮದೇ ಆದ ವಿಚಾರಗಳಿಂದ ಅನೇಕರಿಗೆ ಸ್ಪೂರ್ತಿ ನೀಡಿದ್ದಾರೆ. ಜೀವಿತ ಕಾಲದಲ್ಲಿಯೇ ಹುಡುಕಿಕೊಂಡು ಬರಬೇಕಾಗಿದ್ದ, ದೇಶಸಮ್ಮಾನ ಅವರಿಗೆ ಮರಣೋತ್ತರ ಸಂದಿದೆ.

ಕಿತ್ತಲೆ ಮಾರಿ ಶಾಲೆ ಕಟ್ಟಿದ ಮಂಗಳೂರಿನ ಅಕ್ಷರ ಸಂತ ಹರೇಕಳ ಹಾಜಬ್ಬ, ಕಾಡಿನ ವೃಕ್ಷ ದೇವತೆ ಎಂದೇ ಹೆಸರುವಾಸಿಯಾದ ಅಂಕೋಲದ ತುಳಸಿ ಗೌಡ, ಕರ್ನಾಟಕದ ನೆಲದಲ್ಲಿ ಸರಕು ಸಾರಿಗೆ ಸಾಮ್ರಾಜ್ಯವನ್ನು ನಿರ್ಮಿಸಿದ ಶ್ರೀ.ವಿಜಯ ಸಂಕೇಶ್ವರ ಮತ್ತು ಭಾರತೀಯ ಹಾಕಿ ತಂಡದ ನಾಯಕರಾಗಿ ಘನತೆಯನ್ನು ಎತ್ತರಕ್ಕೆರಿಸಿದ ಕೊಡಗಿನ ಯೋಧ ಎಂ. ಪಿ. ಗಣೇಶ್ ಹಾಗೂ ಮೈಸೂರಿನ ಸುಧರ್ಮ ಸಂಸ್ಕೃತ ಪತ್ರಿಕೆಯ ದಿ. ಸಂಪತ್ ಕುಮಾರ್, ಜಯಲಕ್ಷ್ಮಿ ಇವರುಗಳಿಗೆ ಪದ್ಮಶ್ರೀ ಪ್ರಶಸ್ತಿ ಸಂದಿದೆ.
ಹಾಜಬ್ಬ ಅವರನ್ನು ಪ್ರಧಾನಿ ಅವರು ಕಂಡ ಕೂಡಲೇ ಅವರನ್ನು ಅಕ್ಕಕ್ಕದವರಿಗೆ ಪರಿಚಯಿಸಿದ ಪ್ರಸಂಗವನ್ನು ನೆನೆದು ಹಾಜಬ್ಬ ರೋಮಾಂಚನಗೊಂಡರು. ಹಾಗೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಹತ್ತಿರ ಹೋಗಿ ಊರಿಗೆ ಕಾಲೇಜು ಕಟ್ಟಲು ಒಂದು ಕೋಟಿ ರೂಪಾಯಿ ನೀಡಬೇಕೆಂದು ಕೋರಿದರು.
ಲಕ್ಷಾಂತರ ಗಿಡಗಳನ್ನು ಬೆಳೆಸಿ, ಗಿಡ-ಮರಗಳ ಮಾಹಿತಿ ಕಣಜ ಎಂದೇ ಪ್ರಸಿದ್ದಿ ಯಾಗಿದ್ದಾರೆ ಶ್ರೀಮತಿ ತುಳಸಿ ಗೌಡ. ಈ ಹಿಂದೆ ಅವರಿಗೆ ಹಲವಾರು ಪ್ರಶಸ್ತಿಗಳು ಲಭಿಸಿವೆ. ವೃಕ್ಷ ದೇವತೆ ಎಂದೇ ಪ್ರಸಿದ್ದಿಯಾಗಿದ್ದಾರೆ. ಅವರು ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದರು.
ಸರಕು,ಸಾರಿಗೆ ಸಾಮ್ರಾಜ್ಯವನ್ನು ನಿರ್ಮಿಸಿದ,ಉದ್ಯಮಿ ವಿಜಯ ಸಂಕೇಶ್ವರ್ ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದರು. ಅವರು ಸ್ಥಾಪಿಸಿರುವ, ವಿಆರ್ಎಲ್ ಸಂಸ್ಥೆಯು ದೇಶದ ಅತಿ ದೊಡ್ಡ ಸಾರಿಗೆ ಉದ್ಯಮ ಸಂಸ್ಥೆಯಾಗಿ ಬೆಳೆದು ನಿಂತಿದೆ. ಪತ್ರಿಕಾ ಲೋಕರಂಗ ಹಾಗೂ ಖಾಸಗಿ ಟಿವಿ ಚಾನಲ್ ಮಾಲೀಕರಾಗಿ ಮಾಲೀಕರಾಗಿ ಯಶಸ್ವಿಯಾಗಿದ್ದಾರೆ. ಅದು ಅವರು ಸಂಸದ, ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ.
ಹಾಕಿ ಕ್ರೀಡಾ ಕ್ಷೇತ್ರದಲ್ಲಿ ಸಾಧಕ ಎಂಪಿ ಗಣೇಶ್ ಭಾರತಕ್ಕೆ ಒಲಿಂಪಿಕ್ ಪದಕ ತಂದವರು. ಪದ್ಮಶ್ರೀ ಪ್ರಶಸ್ತಿ ನನಗೆ ಸಂತಸವನ್ನುಂಟು ಮಾಡಿದೆ. ಪ್ರಶಸ್ತಿ ಎಲ್ಲಾ ಹಾಕಿ ವಿದ್ಯಾರ್ಥಿಗಳಿಗೆ, ಭಾರತೀಯ ಕ್ರೀಡಾ ಪ್ರಾಧಿಕಾರ ಹಾಗೂ ಕೊಡವ ಜನತೆಗೆ ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.
ಸುಧರ್ಮ ಎಂಬ ಸಂಸ್ಕೃತಭಾಷೆಯ ಪತ್ರಿಕೆಯನ್ನು ನಡೆಸಿಕೊಂಡು ಬಂದವರು ಮೈಸೂರಿನ ದಿ. ಸಂಪತ್ ಕುಮಾರ್ ಹಾಗೂ ಅವರ ಧರ್ಮಪತ್ನಿ ಜಯಲಕ್ಷ್ಮಿ ಅವರಿಗೆ 2020 ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಒಲಿದು ಬಂದಿದೆ. ಸಂಪತ್ ಕುಮಾರ್ ಇಹಲೋಕ ತ್ಯಜಿಸಿರುವುದರಿಂದ ಜಯಲಕ್ಷ್ಮಿ ಅವರು ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದರು.
ಲಿಖಿಂಪುರ-ಖೇರಿ ರೈತರ ಹತ್ಯೆ,ತನಿಖಾ ಪ್ರಗತಿ
ಲಿಖಿಂಪುರ – ಖೇರಿ ಪ್ರಕರಣದ ತನಿಖೆಯು ಸಮರ್ಪಕವಾಗಿಲ್ಲ. ಒಬ್ಬ ಆರೋಪಿಯನ್ನು ರಕ್ಷಿಸುವ ಉದ್ದೇಶದಿಂದಲೇ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ ಎಂದು ತೋರುತ್ತಿದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.
ಲಿಕಿಂಗ್ ಪುರ ಕೇರಿ ಪ್ರಕರಣದಲ್ಲಿ ನ್ಯಾಯ ಸಿಗಬೇಕಾದರೆ ಸ್ವತಂತ್ರ ತನಿಖೆ ಅಗತ್ಯ ಎಂಬುದು ಸುಪ್ರೀಂಕೋರ್ಟ್ ಅಭಿಪ್ರಾಯದಿಂದ ಸ್ಪಷ್ಟವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
“ರೈತರ ಹತ್ಯೆ ಮಾಡಿದವರ ಜೊತೆಗೆ ಉತ್ತರಪ್ರದೇಶ ಸರ್ಕಾರ ನಿಂತಿದೆ ಎಂಬುದು ಈಗ ಸ್ಪಷ್ಟವಾಗಿದೆ. ರೈತನ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯ ತಂದೆಗೆ ( ಶ್ರೀ ಅಜಯ್ ಮಿಶ್ರಾ, ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ) ನರೇಂದ್ರ ಮೋದಿ ಅವರ ರಕ್ಷಣೆ ಇದೆ” ಎಂದು ಅವರು ಆರೋಪಿಸಿದ್ದಾರೆ.
ಎಸ್ ಯುವಿ ವಾಹನ ಹರಿಸಿ ನಾಲ್ವರು ರೈತರ ಹತ್ಯೆ ಮತ್ತು ನಂತರದ ಹಿಂಸಾಚಾರದಲ್ಲಿ ನಾಲ್ವರ ಹತ್ತಿ ಪ್ರಕರಣವು ಉತ್ತರಪ್ರದೇಶದ ಲಖಿಂಪುರ- ಖೇರಿಯಲ್ಲಿ ಅಕ್ಟೋಬರ್ 3ರಂದು ನಡೆದಿತ್ತು. ಆಶಿಶ್ ಅವರೇ ರೈತರ ಮೇಲೆ ಎಸ್ ವಿಯು ವಾಹನ ಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರಿದ್ದ ಪೀಠವು ತನಿಖೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಸಾಕ್ಷಿಗಳನ್ನು ಬೇರೆಬೇರೆ ಎಫ್ ಐಆರ್ ಗಳಲ್ಲಿ ದಾಖಲಿಸಿ ಗೋಜಲು ಮಾಡಲಾಗಿದೆ ಎಂದು ಪೀಠವು ಹೇಳಿದೆ.
ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಬಿಟ್ಟರೆ ಉಳಿದ ಆರೋಪಿಗಳ ಮೊಬೈಲ್ ಫೋನ್ ಗಳನ್ನು ಏಕೆ ಜಪ್ತಿ ಮಾಡಿಕೊಂಡಿಲ್ಲ ಎಂದು ಕೋರ್ಟ್ ಪ್ರಶ್ನಿಸಿದೆ. ಉಳಿದ ಆರೋಪಿಗಳು ಮೊಬೈಲ್ ಫೋನ್ ಬಳಸಿಲ್ಲವೇ ಎಂದು ಕೇಳಿದೆ.
ತನಿಖೆಯ ಸ್ಥಿತಿಗತಿ ವರದಿಯಲ್ಲಿ ಏನೂ ಇಲ್ಲ ಎಂದು ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಹತ್ತು ದಿನ ಸಮಯ ಕೊಡಲಾಗಿತ್ತು. ಆದರೆ, ಪ್ರಯೋಗಾಲಯದ ವರದಿಗಳನ್ನೇ ಸಲ್ಲಿಸಲಾಗದೇ ಇದ್ದುದ್ದೇ ಸುಪ್ರೀಂಕೋರ್ಟ್ ಸಿಟ್ಟಿಗೆ ಕಾರಣವಾಗಿದೆ.
ಈ ಪ್ರಕರಣದಲ್ಲಿ ಉತ್ತರಪ್ರದೇಶ ಸರ್ಕಾರವನ್ನು ಸುಪ್ರೀಂಕೋರ್ಟ್ ಮೂರನೇ ಬಾರಿ ತರಾಟೆಗೆ ತೆಗೆದುಕೊಂಡಿದೆ. ಪ್ರಮುಖ ಆರೋಪಿ ಆಶಿಶ್ ಅವರನ್ನು ಬಂಧಿಸಿದ ಬಗ್ಗೆ ಸುಪ್ರೀಂಕೋರ್ಟ್ ಅಕ್ಟೋಬರ್ 11ರಂದು ಆಕ್ಷೇಪ ವ್ಯಕ್ತಪಡಿಸಿತ್ತು. ಅದಾದ ಮೂರು ದಿನಗಳ ಬಳಿಕ, ಆಶಿಶ್ ಬಂಧನವಾಗಿತ್ತು. ಸಾಕ್ಷಿಗಳ ಹೇಳಿಕೆ ದಾಖಲು ವಿಚಾರದಲ್ಲಿಯೂ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿತ್ತು.
