Thursday, February 5, 2026
Thursday, February 5, 2026
Home Blog Page 1879

ಸಮಾಜ ಸೇವೆಗೆ ಸ್ಪೂರ್ತಿ- ಪುನೀತ್

0

ಪುನೀತ್ ಅವರು 46 ವರ್ಷಗಳ ಕಾಲ ಬದುಕಿದ್ದರು ಅವರು ಮಾಡಿದ ಸಾಧನೆ ಬಹುದೊಡ್ಡದು. ಅನೇಕ ಸದಭಿರುಚಿ ಸಿನಿಮಾಗಳನ್ನು ನೀಡುವ ಮೂಲಕ ಅಭಿಮಾನಿಗಳ ಹೃದಯಗಳಲ್ಲಿ ಮನೆ ಮಾಡಿದ್ದಾರೆ. ಅವರು ತಮ್ಮ ಜೀವನದಲ್ಲಿ ರೂಡಿಸಿಕೊಂಡಿದ್ದ ಮೌಲ್ಯಗಳು ಸಮಾಜಕ್ಕೆ ದಾರಿ ದೀಪವಾಗಿವೆ ಎಂದು ಶಿವಮೊಗ್ಗ ಬಸವ ಕೇಂದ್ರದ ಡಾ. ಬಸವ ಮರುಳಸಿದ್ಧ ಸ್ವಾಮೀಜಿ ಅವರು ಹೇಳಿದ್ದಾರೆ.
ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ “ಅಪ್ಪು- ಅಮರ ಪುನೀತ್ ರಾಜಕುಮಾರ್”ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅಪ್ಪು ಅಭಿಮಾನಿಗಳ ಹೃದಯದಲ್ಲಿ ಈಗಲೂ ಚಿರಸ್ಥಾಯಿಯಾಗಿದ್ದಾರೆ. ಇದಕ್ಕೆ ಕಾರಣ ಅವರ ಪರಿಪೂರ್ಣ ವ್ಯಕ್ತಿತ್ವ ಎಂದು ಅವರು ತಿಳಿಸಿದರು.
ಎಂಡೋಸಲ್ಫಾನ್ ಸಂತ್ರಸ್ತರ ಪರ ದನಿಯತ್ತಿದ್ದರು.ಆ ಮೂಲಕ ಪುನೀತ್ ಅವರು ಸರ್ಕಾರ ಮತ್ತು ಸಂಬಂಧಪಟ್ಟ ಕಂಪನಿಯವರು ಪರಿಹಾರ ನೀಡುವಷ್ಟರ ಮಟ್ಟಿಗೆ ಹೋರಾಟವನ್ನು ರೂಪಿಸಿದ್ದರು. ಇದು ಅವರಲ್ಲಿ ಸಮಾಜದ ಪರವಾಗಿದ್ದ ಬದ್ಧತೆಯ ಪ್ರತೀಕ ಎಂದರು.
ಕಾರ್ಯಕ್ರಮದಲ್ಲಿ ಗೋಣಿಬೀಡು ಶೀಲ ಸಂಪಾದನಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ಸಾನಿಧ್ಯ ವಹಿಸಿದ್ದರು.
ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಅವರು ತಮ್ಮ ಗಾಯನದ ಮೂಲಕ ಪುನೀತ್ ರಾಜಕುಮಾರ್ ಅವರಿಗೆ ನಮನ ಸಲ್ಲಿಸಿದರು. ಗಾಯಕರಾದ ಋತ್ವಿಕ್ ಮುರುಳಿಧರ್, ಗಾಯಕಿ ವಿದುಷಿ ಸುರೇಖಾ ಹೆಗಡೆ, ಚಾರ್ವಿ ಮುರುಳಿಧರ್, ಎಸ್.ಪಿ. ವಿಶಾಲ್, ಸೂಡಾ ಮಾಜಿ ಅಧ್ಯಕ್ಷ ರಮೇಶ್, ಸದ್ಭಾವನಾ ಟ್ರಸ್ಟ್ ಅಧ್ಯಕ್ಷ ಶ್ರೀಕಾಂತ್, ನಿರ್ಮಲಾ ಕಾಶಿ ಇನ್ನಿತರರು ಉಪಸ್ಥಿತರಿದ್ದರು.

ಧಾರಾಕಾರ ಮಳೆ: ಚೆನ್ನೈ ಜಲಾವೃತ

0

ಚೆನ್ನೈ ಮತ್ತು ಹೊರವಲಯದ ಪ್ರದೇಶಗಳಲ್ಲಿ ಕಳೆದ ಒಂದೆರಡು ದಿನಗಳಿಂದ ಧಾರಾಕಾರ ಮಳೆ ಸುರಿದಿದ್ದು, ಇದರಿಂದ ಚೆನ್ನೈ ನಗರ ಜಲಾವೃತಗೊಂಡಿದೆ.

2015ರ ಪ್ರವಾಹದ ಕರಾಳ ನೆನಪನ್ನು ಮರುಕಳಿಸಿದೆ. ತಮಿಳುನಾಡುಅತಿ ಹೆಚ್ಚು ಮಳೆಯಾಗಿರುವುದು ಚೆನ್ನೈನಲ್ಲಿ. ಎರಡರಿಂದ ಮೂರು ಅಡಿಗಳಷ್ಟು ನೀರು ನಿಂತಿರುವುದರಿಂದ ವಾಹನ ಸಂಚಾರಕ್ಕೂ ತೊಡಕುಂಟಾಗಿತ್ತು. ರೈಲು ಹಳಿಗಳ ಮೇಲೆ ಭಾರಿ ಪ್ರಮಾಣದ ನೀರು ನಿಂತಿರುವುದರಿಂದ ರೈಲು ಸಂಚಾರ ಅಸ್ತವ್ಯಸ್ತಗೊಂಡಿದೆ. ವಿಮಾನದ ಹಾರಾಟವು ಸಹ ವ್ಯತ್ಯಯಗೊಂಡಿದೆ. ಮಳೆಯಲ್ಲಿ ಸಿಲುಕಿಕೊಂಡಿದ್ದ 81 ಜನರನ್ನು ರಕ್ಷಿಸಲಾಗಿದೆ. ಚೆನ್ನೈ ನಗರಕ್ಕೆ ಕುಡಿಯುವ ನೀರನ್ನು ಪೂರೈಸುತ್ತಿರುವ ಪ್ರಮುಖ ಮೂಲಗಳಾದ ಚೆಂಬರಂಬಕ್ಕಮ್ ಮತ್ತು ,ಪುಝಲ್ ಜಲಾಶಯಗಳಿಂದ ನೀರು ಹೊರಬಿಡಲಾಗಿದೆ.
ನಿನ್ನೆ ರಾತ್ರಿ ಚೆಂಬರಂಬಕ್ಕಮ್ ನಿಂದ 2000 ಕ್ಯೂಸೆಕ್ಸ್ ನೀರು ಹೊರಬಿಡಲಾಗಿದೆ. ಗ್ರೇಟರ್ ಚೆನ್ನೈ ಮಹಾನಗರಪಾಲಿಕೆಯು 160 ಪುನರ್ವಸತಿ ಕೇಂದ್ರ ಆರಂಭಿಸಿದೆ.

ಚೆನ್ನೈ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆಗೆ ಶೀಘ್ರ ಕೈಗೊಳ್ಳುವಂತೆ ನೀಡುವಂತೆ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ರಾಜ್ಯದ ಸಂಸದರು ಮತ್ತು ಶಾಸಕರು ಪರಿಹಾರ ಕಾರ್ಯಗಳಲ್ಲಿ ಕೈಜೋಡಿಸಬೇಕು. ಮತ್ತು ದೀಪಾವಳಿಗಾಗಿ ಊರಿಗೆ ತೆರಳಿರುವ ಜನರು ಇನ್ನೂ ಮೂರುದಿನ ಚೆನ್ನೈಗೆ ಮರುಕಳಿಸುವುದು ಬೇಡ ಎಂದು ಮನವಿ ಮಾಡಿಕೊಂಡಿದ್ದಾರೆ.

ಪುನೀತ್, ಅಭಿಮಾನಿಗಳ ಆತ್ಮಶ್ರೀ – ಅಮರಶ್ರೀ

0

” ತಮ್ಮ ಪುನೀತ್ ನನಗೆ ಕೇವಲ ಸಹೋದರ ಅಲ್ಲ ನನ್ನ ಮಗ ಇದ್ದ ಹಾಗೆ ಅವನನ್ನು ಚಿಕ್ಕಂದಿನಿಂದಲೂ ಅತ್ಯಂತ ಪ್ರೀತಿಯಿಂದ ಬೆಳೆಸಿದ್ದೇವೆ. ಅವನ ಆಟ, ಪಾಠ ಬಹಳ ವಿಶಿಷ್ಟವಾಗಿದ್ದವು. ನಮಗೆಲ್ಲಾ ಅಚ್ಚು ಮೆಚ್ಚಿ ನವನಾಗಿದ. ಅವನ ಅಗಲಿಕೆ ನಮ್ಮ ಕುಟುಂಬಕ್ಕೆ ಬಲಗೈ ಹೋದಂತಾಗದೆ. ಪುನೀತ್ ಅಭಿಮಾನಿಗಳಲ್ಲಿ ಕೈ ಮುಗಿದು ಕೇಳಿಕೊಳ್ಳುತ್ತೇನೆ ಯಾರು ಕೂಡ ಪ್ರಾಣ ಕಳೆದುಕೊಳ್ಳ ಬೇಡಿ. ಇದರಿಂದ ನಿಮ್ಮ ಮನೆಯವರಿಗೆ ತೊಂದರೆ ಆಗುತ್ತದೆ. ಮತ್ತೆ ಪುನೀತ್ ಆತ್ಮಕ್ಕೆ ನೋವಾಗುತ್ತದೆ. ಅದರ ಬದಲಾಗಿ ಅವನ ಆದರ್ಶಗಳನ್ನು ಪಾಲಿಸಿ. ಬಡಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡಿ, ಅಪ್ಪುಗೆ ಇದರಿಂದ ಸಂತೋಷವಾಗುತ್ತದೆ ಎಂದು ಪುನೀತ್ ಅವರ ಹಿರಿಯಣ್ಣ ಶಿವರಾಜ್ ಕುಮಾರ್ ಅವರು ಅಭಿಮಾನಿಗಳಲ್ಲಿ ಕಳಕಳಿಯ ಮನವಿ ಮಾಡಿದರು”.

ಪುನೀತ್ ಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸು ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಶಿವಣ್ಣ “ಪದ್ಮಶ್ರೀ, ಪದ್ಮಭೂಷಣ ಇವೆಲ್ಲಕ್ಕಿಂತ ಅಪ್ಪು ಅಭಿಮಾನಿಗಳ ಮನಸ್ಸಿನಲ್ಲಿ ಅಮರಶ್ರೀ ಆಗಿದ್ದಾನೆ. ಅಭಿಮಾನಿಗಳ ಆತ್ಮದಲ್ಲೇ ಶ್ರೀ ಅವನು” ಎಂದರು.

ಮಹಾರಾಷ್ಟ್ರ ಅಸ್ಪತ್ರೆ: ಅಗ್ನಿ ಅನಾಹುತ.

0

ಮಹಾರಾಷ್ಟ್ರದಲ್ಲಿನ ಅಹ್ಮದ್ ನಗರದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಗಢ ಸಂಭವಿಸಿದೆ. ಈ ಅಗ್ನಿ ಅವಗಢದಲ್ಲಿ 11 ರೋಗಿಗಳು ಸಜೀವ ದಹನವಾಗಿದ್ದಾರೆ. ಶನಿವಾರ ಬೆಳಿಗ್ಗೆ ಸುಮಾರು 11 ಗಂಟೆ ವೇಳೆಗೆ ಜಿಲ್ಲಾಸ್ಪತ್ರೆಯ ಐಸಿಯು ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೃತರಲ್ಲಿ ಹೆಚ್ಚಾಗಿ ಹಿರಿಯ ನಾಗರಿಕರ ಇದು ಕೋವಿಡ್ ಸೋಂಕಿನಿಂದ ತೀವ್ರ ಉಸಿರಾಟ ಸಮಸ್ಯೆಯಿಂದಾಗಿ ಐಸಿಯುನಲ್ಲಿ 20 ಜನ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.

ಅಗ್ನಿ ಅವಘಡ ಸಂಭವಿಸಿದ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುವ ಅಷ್ಟರಲ್ಲಿ ಅಗ್ನಿ ಕೆನ್ನಾಲಿಗೆಗೆ ಹತ್ತು ಜನ ಬಲಿಯಾಗಿದ್ದು. ಅದರಲ್ಲಿ ಕೆಲವರು ಉಸಿರುಗಟ್ಟಿ ಮೃತ ಪಟ್ಟಿದ್ದರು. ಬೆಂಕಿ ಕಾಣಿಸಿಕೊಂಡ ಕೂಡಲೇ ಐಸಿಯುನಲ್ಲಿದ್ದ ರೋಗಿಗಳನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಇರಬಹುದೆಂದು ಶಂಕಿಸಲಾಗಿದೆ. ಈ ಸಂಬಂಧ ಇಂಧನ ಸಚಿವ ನಿತಿನ್ ರಾವುತ್ ಆದೇಶಿಸಿದ್ದಾರೆ. ಅಗ್ನಿದುರಂತಕ್ಕೆ ನಿರ್ಲಕ್ಷ ಕಾರಣವೆಂದು ತಿಳಿದು ಬಂದರೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಘಟನೆಯಲ್ಲಿ ವೃತ್ತ ಪಟ್ಟವರಿಗೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ ಹಾಗೂ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

ಸಮೀರ್ ವಾಂಖೆಡೆಗೆ ಕೊಕ್

0

ದೇಶದೆಲ್ಲೆಡೆ ಸಂಚಲನ ಮೂಡಿಸಿರುವ ಅಂತಹ ಐಷಾರಾಮಿ ಹಡಗಿನಲ್ಲಿ ನಡೆದರೆ ವೇಳೆ ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಹಾಗೂ ಹಲವರು ಡ್ರಗ್ಸ್ ಸೇವಿಸಿದ್ದಾರೆ ಎನ್ನಲಾದ ಪ್ರಕರಣದ ತನಿಖೆಯಿಂದ ಮಾದಕ ವಸ್ತು ನಿಯಂತ್ರಣ ಸಂಸ್ಥೆ ಮುಂಬೈ ವಿಭಾಗದ ಅಧಿಕಾರಿ ಸಮೀರ್ ವಾಂಖೆಡೆಗೆ ಕೊಕ್ ನೀಡಿ ಆಸ್ಥಾನಕ್ಕೆ ಐಪಿಎಸ್ ಹಿರಿಯ ಅಧಿಕಾರಿ ಸಂಜಯ್ ಕುಮಾರ್ ಸಿಂಗ್ ಅವರಿಗೆ ತನಿಖೆಯ ಹೊಣೆ ನೀಡಲಾಗಿದೆ.

ಸಮೀರ್ ವಾಂಖೆಡೆ ವಿರುದ್ಧ ಲಂಚ ಹಾಗೂ ಸುಲಿಗೆ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಡ್ರಗ್ಸ್ ಪ್ರಕರಣ ಸೇರಿದಂತೆ ವಾಂಖೆಡೆ ತನಿಖೆ ನಡೆಸುತ್ತಿದ್ದ ಆರು ಕೇಸ್ ಗಳನ್ನು ಸಂಜಯ್ ಸಿಂಗ್ ನೇತೃತ್ವದ ವಿಶೇಷ ತನಿಖಾ ತಂಡಕ್ಕೆ ವಹಿಸಿಕೊಡಲಾಗಿದೆ.

ಇಷ್ಟೆಲ್ಲಾ ಆರೋಪಗಳು ಕೇಳಿ ಬಂದರೂ ಸಹ ಸಮೀರ್ ವಾಂಖೆಡೆ ಅವರನ್ನು ಎನ್ ಸಿಬಿ ಮುಂಬೈ ವಲಯದ ನಿರ್ದೇಶಕರಾಗಿಯೇ ಮುಂದುವರೆಯಲಿದ್ದಾರೆ ಎಂದು ತಿಳಿದುಬಂದಿದೆ.
ವಾಂಖೆಡೆ ವಿರುದ್ಧ ತನಿಖೆಯಾಗಬೇಕು ಎಂದು ಎನ್ಸಿಪಿ ಮುಖಂಡ ಮಲ್ಲಿಕ್ ಒತ್ತಾಯಿಸಿದ್ದಾರೆ. ಸಮೀರ್ ವಿರುದ್ಧ ಇತ್ತೀಚೆಗೆ ಎನ್ ಸಿಬಿಯು ತನಿಖೆ ಆರಂಭಿಸಿದೆ, ಆದರೆ “ಪ್ರಕರಣದ ತನಿಖೆ ನಡೆಸಲು ನಾನು ಎಸ್ಐಟಿಗೆ ಸಹಕಾರ ನೀಡುತ್ತೇನೆ” ಎಂದು ಸಮೀರ್ ತಿಳಿಸಿದ್ದಾರೆ.

ಬಿಟ್ ಕಾಯಿನ್ ಆರೋಪಿ ಬಂಧನ

0

ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮಾಡಿಸಿದಂತಹ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಪ್ರಕರಣ ಮತ್ತು ಬಿಟ್ ಕಾಯಿನ್ ಪ್ರಕರಣದ ಪ್ರಮುಖ ಆರೋಪಿ ಹಾಗೂ ವೆಬ್ಸೈಟ್ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಬಂಧಿತ ಆರೋಪಿ ಶ್ರೀಕಿ ಈ ಹಿಂದೆ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಎರಡು ತಿಂಗಳಿನಿಂದ ಜೀವನ್ ಭೀಮಾ ನಗರದಲ್ಲಿರುವ ಪಂಚತಾರಾ ಹೋಟೆಲ್ ನಲ್ಲಿ ನೆಲೆಸಿದ್ದ. ಶ್ರೀಕಿಯನ್ನ ಭೇಟಿಮಾಡಲು ಹೋಟೆಲ್ ಗೆ ಬಂದಿದ್ದ ಉದ್ಯಮಿ ವಿಷ್ಣುಭಟ್ ಅನುಮತಿ ಇಲ್ಲದೆ ಹೋಟೆಲ್ ಕೊಠಡಿಗೆ ನುಗ್ಗಲು ಯತ್ನಿಸಿದ್ದ. ವಿಷ್ಣುಭಟ್ ನನ್ನು ಭದ್ರತಾಸಿಬ್ಬಂದಿ ತಡೆದ ಕಾರಣ ಸಿಬ್ಬಂದಿಯ ಮೇಲೆ ಕೋಪಗೊಂಡು ಶ್ರೀಕಿ ಮತ್ತು ಆತನ ಸ್ನೇಹಿತ ಹಲ್ಲೆ ನಡೆಸಿದ್ದರು. ಅಲ್ಲದೆ ಶ್ರೀಕಿ ಇದ್ದ ಕೊಠಡಿಯನ್ನು ಪೊಲೀಸರು ಪರಿಶೀಲನೆ ನಡೆಸಿದ್ದು ಕೆಲವೊಂದು ವಸ್ತುಗಳು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಾಗೂ ಮಧ್ಯ ಮತ್ತು ಡ್ರಗ್ಸ್ ಸೇವನೆ ಶಂಕೆಯ ಮೇರೆಗೆ ಶ್ರೀಕಿಯನ್ನು ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ದಯವಿಟ್ಟು ಆತ್ಮಹತ್ಯೆಗೆ ಮುಂದಾಗದಿರಿ.

0

ನಿಮ್ಮ ಪಾದಕ್ಕೆ ನಮಸ್ಕಾರ ಮಾಡಿ ಮನವಿ ಮಾಡಿಕೊಳ್ತೇನೆ.ಅಭಿಮಾನಿ ದೇವರುಗಳು ಅಂತ ಅಪ್ಪಾಜಿ ನಿಮ್ಮನ್ನ ಕರೀತಿದ್ದರು. ಈಗಾಗಲೇ ನಮ್ಮ ಕುಟುಂಬ ನೋವಿನಲ್ಲಿದೆ. ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ ಅಂತ ರಾಘವೇಂದ್ರ ರಾಜ್ ಕುಮಾರ್ ಅತ್ಯಂತ ಕಳಕಳಿಯ ಮನವಿ ಮಾಡಿದ್ದಾರೆ.
ನಿಜ.ಹೋದ ಜೀವ ಮತ್ತೆ ಬಾರದು. ಹಾಗೇ ಜೀವ ಕಳೆದುಕೊಂಡರೂ ಅದು ಜೀವಕ್ಕೆ ಜೀವ ಕೊಟ್ಟಂತಾಗುವುದಿಲ್ಲ. ಅಭಿಮಾನ ತೋರಿಸಬೇಕು. ಆದರೆ ಪ್ರಾಣತ್ಯಾಗದಿಂದ ಅಲ್ಲ. ವ್ಯಕ್ತಿಯ ಆದರ್ಶಗಳನ್ನ ಪಾಲಿಸಿದರೆ ಸಾಕು ಅದೇ ಅಪ್ಟಟ ಪ್ರೀತಿ.

ಈಗ ಹಲವಾರು ಕ್ಷೇತ್ರದ ನಾಯಕರು ಅಪ್ಪು ವಿನ ಸಾಮಾಜಿಕ ಕಳಕಳಿ ಮೆಚ್ಚಿದ್ದಾರೆ.ಜೊತೆಗೆ ನೆರವು ನೀಡಿ,ಹೊಣೆಹೊರುವುದಾಗಿಯೂ ಹೇಳಿದ್ದಾರೆ.ಇದು ನೈಜ ಸೇವೆ. ಪುನೀತರ ಆತ್ಮಕ್ಕೂ ಶಾಂತಿ ತರುವ ಕೆಲಸವಾಗುತ್ತದೆ.

ಗೋಶಾಲೆ, ಅನಾಥಾಶ್ರಮ,
ವೃದ್ಧಾಶ್ರಮ, ಹೆಣ್ಣುಮಕ್ಕಳ ಶಿಕ್ಷಣಕ್ಕೆ ನೆರವು ,ನಿರ್ಗತಿಕರಿಗೆ ಆಶ್ರಯ , ಬಡಮಕ್ಕಳಿಗೆ ಓದಲು ಸಹಾಯ ಹೀಗೆ ಹಲವು ಕ್ಷೇತ್ರಗಳಿವೆ. ಇಂತಹವುಗಳ ಬಗ್ಗೆ ನಮ್ಮ ಅಭಿಮಾನ ವ್ಯಕ್ತಪಡಿಸಬೇಕು. ಅವುಗಳಿಗೆ ನಿಧಿ ಕೂಡಿಸಿ ಬೆಳೆಸಬೇಕು.ಇವತ್ತು ಎಷ್ಟು ಊರುಗಳಲ್ಲಿ ಇಂತಹವುಗಳ ಅಗತ್ಯವಿದೆ? ಬಹಳ ಜರೂರು ಈ ಕುರಿತು ಅಭಿಮಾನಿಗಳು ಸಂಘಟಿತರಾದರೆ ಪುನೀತರ ಆತ್ಮಕ್ಕೆ ಶಾಂತಿ ದೊರಕುತ್ತದೆ.
”ಅಪ್ಪು, ನೀನು ಇನ್ನು ಅಭಿಮಾನಿಗಳಲ್ಲಿಯೇ ಬದುಕುತ್ತಿದೀಯಾ ಎಂಬ ಭಾವನೆ ನನಗೆ ಕಂದ.’ ದೇವರನ್ನು ಪೂಜಿಸುವ ಜಾಗದಲ್ಲಿ ಅಪ್ಪುವಿಗೆ ಕೊಟ್ಟಿರುವ ಈ ಸ್ಥಾನಕ್ಕೆ ನನ್ನ ಸಾಷ್ಟಾಂಗ ನಮಸ್ಕಾರಗಳು.ಈ ಸಂದರ್ಭದಲ್ಲಿ ಇಂತಹ ಕಾರ್ಯಗಳಿಂದ ನಮಗೆ ಇನ್ನಷ್ಟು ಶಕ್ತಿ ತುಂಬುವ ನಮ್ಮ ನೆಚ್ಚಿನ ಅಭಿಮಾನಿ ದೇವರುಗಳಿಗೆ ನನ್ನ ವಂದನೆಗಳು.- ನಿಮ್ಮ ರಾಘಣ್ಣ” ಎಂದು ಸಾಮಾಜಿಕ ಜಾಲ ತಾಣ ಫೇಸ್ ಬುಕ್ ನಲ್ಲಿ ಬರೆದಿದ್ದಾರೆ.

ಗೃಹ ನಿರ್ಮಾಣ : ಗ್ರಾಹಕರಿಗೆ ಬಲವಂತ ಬೇಡ

0

ರಾಷ್ಟ್ರೀಯ ಗ್ರಾಹಕ ಆಯೋಗ ಎನ್ ಸಿ ಡಿ ಆರ್ ಸಿಯು ಫ್ಲಾಟ್ ಗಳನ್ನು ಸಂಪೂರ್ಣವಾಗಿ ನಿರ್ಮಿಸಿ ಕೊಡುವುದಕ್ಕಿಂತ ಮೊದಲೇ ಬಿಲ್ಡರ್ ಗಳು ಗ್ರಾಹಕರಿಗೆ ಕೊಳ್ಳುವಂತೆ ಒತ್ತಾಯಿಸುವಂತಿಲ್ಲ ಹಾಗೂ ಯೋಜನೆ ಪೂರ್ಣಗೊಂಡಿರುವ ಬಗ್ಗೆ ಸ್ಥಳೀಯ ಸಂಸ್ಥೆಯಿಂದ ಪ್ರಮಾಣಪತ್ರ ಸಿಗುವ ಮೊದಲು ಖರೀದಿಗೆ ಗ್ರಾಹಕರನ್ನು ಬಲವಂತ ಪಡಿಸುವಂತಿಲ್ಲ. ಹಾಗೇನಾದರೂ ಮಾಡಿದರೆ ಅದು ಅಕ್ರಮ ವ್ಯವಹಾರವಾಗುತ್ತದೆ ಎಂದು ಸಿ. ವಿಶ್ವನಾಥ್ ಮತ್ತು ರಾಮ್ ಸೂರತ್ ರಾಮ್ ಮೌರ್ಯ ಅವರನ್ನು ಒಳಗೊಂಡಿರುವ ನ್ಯಾಯಪೀಠವು ಬೆಂಗಳೂರು ಮೂಲದ ರಿಯಲ್ ಎಸ್ಟೇಟ್ ಕಂಪೆನಿಗೆ ಸಂಬಂಧಿಸಿದ ಪ್ರಕರಣವೊಂದರ ಖರೀದಿದಾರರಿಗೆ 3.5 ಕೋಟಿ ರೂಪಾಯಿ ಮೊತ್ತವನ್ನು ಬಡ್ಡಿ ಸಮೇತ ನೀಡುವಂತೆ ಸೂಚಿಸಿ ಆದೇಶ ಹೊರಡಿಸಿದೆ.

T20 ದ.ಆಫ್ರಿಕ ರೋಚಕ ಜಯ.

0

ಟಿ – 20 ವಿಶ್ವಕಪ್ ಟೂರ್ನಿಯ ಸೂಪರ್ – 12 ರ A – ಗುಂಪಿನಲ್ಲಿರುವ ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಪಂದ್ಯ ನಡೆಯಿತು. ಇಂಗ್ಲೆಂಡ್ ವಿರುದ್ಧ ದಕ್ಷಿಣ ಆಫ್ರಿಕಾ ರೋಚಕ ಜಯವನ್ನು ಸಾಧಿಸಿತು.
ಶಾರ್ಜಾ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮೊದಲು ಆಡಿದ ದಕ್ಷಿಣ ಆಫ್ರಿಕಾ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 189 ರನ್ ಅನ್ನು ಬಾರಿಸಿತು. ರಾಸೀ ವ್ಯಾನ್ ಡೆರ್ ಡುಸ್ಸೆನ್ 60 ಎಸೆತಗಳಲ್ಲಿ 5 ಬೌಂಡರಿ ಹಾಗೂ 6 ಸಿಕ್ಸರ್ ಗಳನ್ನು ಸಿಡಿಸಿ 94 ರನ್ ಗಳನ್ನ ಗಳಿಸಿಕೊಂಡರು. ಅಂತೆಯೇ ಯಾಡೆಂ ಮಾರ್ಕ್ರಮ್ 25 ಎಸೆತಗಳಲ್ಲಿ 2 ಬೌಂಡರಿ ಹಾಗೂ 4 ಸಿಕ್ಸರ್ ಗಳನ್ನ ಸಿಡಿಸಿ 52 ರನ್ ಗಳನ್ನ ಗಳಿಸಿಕೊಂಡರು ಇವರ ಅಮೋಘ ಬ್ಯಾಟಿಂಗ್ ಪ್ರದರ್ಶನದಿಂದ ದಕ್ಷಿಣ ಆಫ್ರಿಕಾ ತಂಡ ಟಿ – 20 ವಿಶ್ವಕಪ್ ಟೂರ್ನಿಯ ಸೂಪರ್ – 12 ರ ಹಂತದ ಒಂದನೇ ಗುಂಪಿನ ಕೊನೆಯ ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್ ತಂಡಕ್ಕೆ 190 ರನ್ ಗಳನ್ನ ಸವಾಲೋಡ್ಡಿತು.

ಅನುದಾನ ಕಟ್ : ಪಂಚಾಯಿತ ಅತಂತ್ರ

0

ರಾಜ್ಯ ಸರ್ಕಾರ ರಾಜ್ಯದೆಲ್ಲೆಡೆಯ ಪಂಚಾಯತಿಗಳಿಗೆ ಸರ್ಕಾರ ನೀಡುವ ಅಭಿವೃದ್ಧಿ ಅನುದಾನವನ್ನು ಸ್ಥಗಿತಗೊಳಿಸಿದೆ. 2018-19 ರಲ್ಲಿ 6 ಸಾವಿರ ಜನಸಂಖ್ಯೆ ಇರುವ ಪಂಚಾಯಿತಿಗಳಿಗೆ ಸರ್ಕಾರ ಹತ್ತು ಲಕ್ಷ ರೂಪಾಯಿ ಅಭಿವೃದ್ಧಿ ಅನುದಾನವನ್ನು ಬಿಡುಗಡೆ ಮಾಡಿತ್ತು ಅಲ್ಲಿಂದೀಚೆಗೆ ಒಂದೇ ಒಂದು ಪೈಸೆ ಕೂಡ ಅನುದಾನ ಬಂದಿಲ್ಲ ಎಂದು ಪಂಚಾಯ್ತಿಗಳ ಮೂಲಗಳು ತಿಳಿಸಿವೆ.

ಸರ್ಕಾರದ ಈ ನಿರ್ಧಾರದಿಂದ ಪಂಚಾಯಿತಿಗಳಲ್ಲಿ ನಿರ್ವಹಿಸುವ ಸಿಬ್ಬಂದಿಗಳಿಗೆ ಎರಡು ಮೂರು ತಿಂಗಳಿಂದ ವೇತನ ಬಾಕಿ ಉಳಿದಿದೆ. ಬಿಲ್ ಕಲೆಕ್ಟರ್, ಕಂಪ್ಯೂಟರ್ ಆಪರೇಟರ್, ನೀರುಗಂಟಿ, ಕಚೇರಿ ಸಹಾಯಕ ಮತ್ತು ಸ್ವಚ್ಛತಾಗಾರರಿಗೆ ಪಂಚಾಯತಿಗಳ ಅಂತರಿಕ ಸಂಪನ್ಮೂಲದಿಂದ ವೇತನ ನೀಡಬೇಕು ಆದರೆ, ಆದಾಯ ಇಲ್ಲದ ಕಾರಣ ವೇತನ ಬಾಕಿ ಉಳಿಸಿಕೊಂಡಿವೆ. ಪ್ರತಿ ಪಂಚಾಯತಿಯಲ್ಲಿ ಎಂಟರಿಂದ 15 ಸಿಬ್ಬಂದಿ ಇದ್ದು ರಾಜ್ಯದಲ್ಲೆಡೆ ಸಾವಿರಾರು ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ವೇತನವಿಲ್ಲದೇ ಸಿಬ್ಬಂದಿಗಳಿಗೆ ದಸರಾ ಮತ್ತು ದೀಪಾವಳಿ ಹಬ್ಬ ಕಹಿಯನ್ನು ನೀಡಿದೆ.
ಪಂಚಾಯ್ತಿ ವ್ಯಾಪ್ತಿಯ ಕುಡಿಯುವ ನೀರಿನ ಕೊಳವೆ ಬಾವಿ, ಬೀದಿದೀಪ ಮತ್ತು ಕಚೇರಿಗಳ ವಿದ್ಯುತ್ ಶುಲ್ಕ ಪಾವತಿಗಾಗಿ ಇರುವ ಎಸ್ಕ್ರೋ ಖಾತೆ ಅನುದಾನ 2021 22 ನೇ ಸಾಲಿನಲ್ಲಿ ಬಿಡುಗಡೆಯಾಗಿಲ್ಲದ ಕಾರಣ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ವರೆಗೆ ವಿದ್ಯುತ್ ಶುಲ್ಕ ಪಾವತಿಸುವುದು ಪಂಚಾಯಿತಿಗಳಿಗೆ ದೊಡ್ಡ ಸವಾಲಾಗಿದೆ.