Thursday, February 19, 2026
Thursday, February 19, 2026
Home Blog Page 188

Keladi Shivappa Nayaka University of Agricultural and Horticultural Sciences ಸೆಪ್ಟೆಂಬರ್ 2, ಇರುವಕ್ಕಿಯ ಕೃಷಿ ವಿವಿ ಆಶ್ರಯದಲ್ಲಿ ಏಲಕ್ಕಿ & ಜಾಯಿಕಾಯಿ ಕೃಷಿ ಬಗ್ಗೆ ತರಬೇತಿ ಕಾರ್ಯಾಗಾರ

0

Keladi Shivappa Nayaka University of Agricultural and Horticultural Sciences ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ವಿಸ್ತರಣಾ ನಿರ್ದೇಶನಾಲಯ, ರೈತರ ತರಬೇತಿ ಸಂಸ್ಥೆಯು “ಸಾಂಬಾರು ಬೆಳೆಗಳಾದ ಏಲಕ್ಕಿ ಮತ್ತು ಜಾಯಿಕಾಯಿ ಕೃಷಿ”
ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತದೆ.

ಈ ಕಾರ್ಯಕ್ರಮವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ರೈತರ ತರಬೇತಿ ಸಂಸ್ಥೆ, ವರದಾ ಬ್ಲಾಕ್ ನ ಎರಡನೇ ಮಹಡಿ, ಇರುವಕ್ಕಿ ಯಲ್ಲಿ ದಿನಾಂಕ:02.09.2025 ರ ಬೆಳಗ್ಗೆ 10 ಗಂಟೆಗೆ ನೆರವೇರಿಸಲಾಗುತ್ತದೆ.

ಆದುದರಿಂದ ಆಸಕ್ತ ರೈತರು ಮತ್ತು ರೈತ ಮಹಿಳೆಯರು, ರೈತರ ತರಬೇತಿ ಸಂಸ್ಥೆಯ ಸಿಬ್ಬಂದಿಯವರಿಗೆ ಫೋನ್ ಮುಖಾಂತರ ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಈ ತರಬೇತಿ ಕಾರ್ಯಕ್ರಮವು ಉಚಿತವಾಗಿರುತ್ತದೆ.

ನೋಂದಣಿ ಮಾಡಿಕೊಳ್ಳಲು ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆಗಳು 9958324261/ 6363725298 / 9448312978

Shimoga News ಕಂತಿನ ಹಣ ಸೂಕ್ತ ಪಾವಿತಿಸಿದ್ದರೂ ಜೆಸಿಬಿಯನ್ನ ಫೈನಾನ್ಷಿಯರ್ ಮಾರಾಟ ಮಾಡಿದ ಪ್ರಕರಣ. ಮಾಲೀಕರ ಪರ ಗ್ರಾಹಕ ಆಯೋಗ ತೀರ್ಪು.

0

Shimoga News ದೂರುದಾರರಾದ ಶಿವಮೊಗ್ಗ ತಾಲ್ಲೂಕಿನ ಗೊಂದಿಚಟ್ನಹಳ್ಳಿ ನಿವಾಸಿ ನಾಗರಾಜ ಎಂಬುವವರಿAದ ಎದುರುದಾರರಾದ ಹೆಚ್‌ಡಿಬಿ ಫೈನಾನ್ಸಿಯಲ್ ಸರ್ವೀಸ್ ಶಿವಮೊಗ್ಗ, ಹೆಚ್‌ಡಿಬಿ ಫೈನಾನ್ಸಿಯಲ್ ಮುಂಬೈ ಹಾಗೂ ಪ್ರಾದೇಶಿಕ ಸಾರಿಗೆ ಕಚೇರಿ ಶಿವಮೊಗ್ಗ ಇವರು ಯಾವುದೇ ರೀತಿಯ ನೋಟಿಸ್ ನೀಡದೆ ಕಾನೂನು ಬಾಹಿರವಾಗಿ ಜೆಸಿಬಿ ಯನ್ನು ವಶಕ್ಕೆ ಪಡೆದು ಹರಾಜು ಮೂಲಕ ಮಾರಾಟ ಮಾಡಿದ ಕಾರಣಕ್ಕಾಗಿ ಸೇವಾ ನ್ಯೂನ್ಯತೆ ಎಸಗಿದ್ದಾರೆಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಪರಿಗಣಿಸಿ, 1 ಮತ್ತು 2ನೇ ಎದುರುದಾರರು ಸೂಕ್ತ ಪರಿಹಾರ ನೀಡಬೇಕೆಂದು ಆದೇಶಿಸಿದೆ.
ದೂರುದಾರರು ತಮ್ಮ ಜೀವನ ನಿರ್ವಹಣೆಗಾಗಿ ಒಂದು ಜೆಸಿಬಿ ಖರೀದಿಸಿದ್ದು, 1 ಮತ್ತು 2 ನೇ ಎದುರುದಾರರಿಂದ ರೂ.31,65,625 ಲಕ್ಷ ಸಾಲವನ್ನು ಪಡೆದು 60 ತಿಂಗಳ ಇಎಂಐ ಅನ್ನು 4/2/2023 ರಿಂದ 4/10/2023 ರವೆಗೆ ಪಾವತಿಸಬೇಕಾಗಿರುತ್ತದೆ. ದೂರುದಾರರು ಮಾಸಿಕ ಎಲ್ಲಾ ಇಎಂಐ ಗಳನ್ನು ಪಾವತಿಸಿಕೊಂಡು ಬರುತ್ತಿದ್ದು ವೈಯಕ್ತಿಕ ಕಾರಣಗಳಿಂದ 2 ಇಎಂಐಗಳನ್ನು ಪಾವತಿಸಲು ಸಾಧ್ಯವಾಗದೇ, ಅಕೋಬ್ಟರ್-2024 ರಂದು ಉಳಿಕೆಯಾದ 2 ಇಎಂಐಗಳನ್ನು ಪಾವತಿಸುವುದಾಗಿ ಭರವಸೆಯನ್ನು ಕೊಟ್ಟಿರುತ್ತಾರೆ.
Shimoga News ಆದರೆ 14/10/2024 ರಂದು ಶಿವಮೊಗ್ಗ ಸಿಟಿಯಲ್ಲಿ ಜೆಸಿಬಿ ಕೆಲಸ ಮಾಡುತ್ತಿದ್ದಾಗ 1 ಮತ್ತು 2 ನೇ ಎದುರುದಾರರು ಮತ್ತು ಏಜೆಂಟರು ಜೆಸಿಬಿಯನ್ನು ತಮ್ಮ ವಶಕ್ಕೆ ಪಡೆದಿರುತ್ತಾರೆ. ತದನಂತರ ದೂರುದಾರರು ಎದುರುದಾರರ ಕಚೇರಿಗೆ ಭೇಟಿ ನೀಡಿ ವಿಚಾರಿಸಿದಾಗ ಉಳಿಕೆ ಇಎಂಐ ಗಳನ್ನು ಪಾವತಿಸಲು ಹೇಳಿರುತ್ತಾರೆ. ಅದರಂತೆ ರೂ.50,000 ಪಾವತಿಸಿ ಜೆಸಿಬಿಯನ್ನು ಕೊಡಲು ಕೇಳಿರುತ್ತಾರೆ. ಆದರೂ ಎದುರುದಾರರು ಜೆಸಿಬಿ ಯನ್ನು ದೂರುದಾರರಿಗೆ ನೀಡಿರುವುದಿಲ್ಲ. 1 ಮತ್ತ 2ನೇ ಎದುರುದಾರರು ದಿ:16/12/2024 ರಂದು ಪತ್ರ ಬರೆದು ನಿಮ್ಮ ಜೆಸಿಬಿಯನ್ನು ಹರಾಜು ಮೂಲಕ ಮಾರಾಟ ಮಾಡಿರುವುದಾಗಿ ತಿಳಿಸಿರುತ್ತಾರೆ. 1 ಮತ್ತು 2 ನೇ ಎದುರುರಾರರು ದೂರುದಾರರಿಗೆ ಯಾವುದೇ ರೀತಿಯ ನೋಟಿಸ್ ನೀಡದೆ ಕಾನೂನು ಬಾಹಿರವಾಗಿ ಜೆಸಿಬಿ ಯನ್ನು ವಶಕ್ಕೆ ಪಡೆದು ಹರಾಜು ಮೂಲಕ ಮಾರಾಟ ಮಾಡಿ ಸೇವಾ ನ್ಯೂನ್ಯತೆ ಎಸಗಿರುತ್ತಾರೆ ಎಂದು ದೂರನ್ನು ಸಲ್ಲಿಸಿರುತ್ತಾರೆ.
ದೂರುದಾರರು ಮತ್ತು ಎದುರುದಾರರು ಸಲ್ಲಿಸಿರುವಂತಹ ಪ್ರಮಾಣ ಪತ್ರ ಮತ್ತು ದಾಖಲಾತಿಗಳನ್ನು ಪರಶೀಲಿಸಿ, ವಾದ-ವಿವಾದಗಳನ್ನು ಆಲಿಸಿ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದನ್ವಯ ಎದುರುದಾರರು ದೂರುದಾರರಿಗೆ ಕಾನೂನು ರೀತಿಯಲ್ಲಿ ನೋಟಿಸ್ ನೀಡದೇ ಜೆಸಿಬಿಯನ್ನು ವಶಕ್ಕೆ ಪಡೆದು ಮಾರಾಟ ಮಾಡಿರುವುದಕ್ಕೆ ಯಾವುದೇ ದಾಖಲಾತಿಗಳನ್ನು ಸಲ್ಲಿಸದಿರುವುದರಿಂದ ಸೇವಾ ನ್ಯೂನ್ಯತೆ ವಹಿಸಿರುತ್ತಾರೆ ಎಂದು ತೀರ್ಮಾನಿಸಿ, 1 ಮತ್ತು 2 ನೇ ಎದುರುದಾರರು ದೂರುದಾರರಿಂದ ಈ ಆದೇಶವಾದ 45 ದಿನಗಳ ಒಳಗೆ 2 ಇಎಂಐ ಗಳನ್ನು ಪಡೆದು ಜೆಸಿಬಿ ಯನ್ನು ದೂರುದಾರರ ವಶಕ್ಕೆ ನೀಡತಕ್ಕದ್ದು. ತಪ್ಪಿದ್ದಲ್ಲಿ 1 ಮತ್ತು 2 ನೇ ಎದುರುದಾರರು ದೂರುದಾರರಿಗೆ ಪ್ರತಿ ದಿನಕ್ಕೆ ರೂ.2000 ಗಳನ್ನು ಆದೇಶವಾದ ದಿನದಿಂದ ಜೆಸಿಬಿ ಯನ್ನು ವಶಕ್ಕೆ ಕೊಡುವವರೆಗೆ ಪಾವತಿಸತಕ್ಕದ್ದು. ಹಾಗೂ ರೂ.2,10,000 ಗಳನ್ನು ಮಾನಸಿಕ ವೇದನೆಗಾಗಿ, ಪರಿಹಾರವಾಗಿ ಮತ್ತು ದೂರಿನ ಖರ್ಚು ವೆಚ್ಚಕ್ಕಾಗಿ ಆದೇಶವಾದ 45 ದಿನಗಳ ಒಳಗಾಗಿ ಪಾವತಿಸತಕ್ಕದ್ದು. ತಪ್ಪಿದ್ದಲ್ಲಿ ವಾರ್ಷಿಕ ಶೇ.12 ರಂತೆ ಬಡ್ಡಿಯನ್ನು ಸೇರಿಸಿ ಆದೇಶವಾದ ದಿನದಿಂದ ಪೂರ್ತಿ ಹಣ ಪಾವತಿಸುವವರೆಗೆ ನೀಡತಕ್ಕದೆಂದು ಹಾಗೂ 3 ನೇ ಎದುರುದಾರರ ವಿರುದ್ದ ದೂರನ್ನು ವಜಾ ಮಾಡಿದೆ ಎಂದು ಆಯೋಗದ ಅಧ್ಯಕ್ಷರಾದ ಟಿ.ಶಿವಣ್ಣ ಮತ್ತು ಸದಸ್ಯರಾದ ಬಿ.ಡಿ.ಯೋಗಾನಂದ ಭಾಂಡ್ಯ ಇವರನ್ನೊಳಗೊಂಡ ಪೀಠ ದಿ:13/8/2025 ರಂದು ಆದೇಶಿಸಿದೆ.

S. N. Channabasappa ಮೇಜರ್ ಧ್ಯಾನ್ ಚಂದ್ ಅವರ ಜೀವನವೇ ಕ್ರೀಡಾಳುಗಳಿಗೆ ಮಾದರಿ- ಎಸ್.ಎನ್.ಚನ್ನಬಸಪ್ಪ.

0

S. N. Channabasappa ಇಂದು ಮೇಜರ್ ಧ್ಯಾನ್‌ಚಂದ್ ರವರ ಜಯಂತಿಯ ನಿಮಿತ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ, ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ‘ರಾಷ್ಟ್ರೀಯ ಕ್ರೀಡಾ ದಿನಾಚರಣೆ’ ಮತ್ತು ‘ಸಂಸದ್ ಕ್ರೀಡಾ ಮಹೋತ್ಸವ’ವನ್ನು ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಉದ್ಘಾಟಿಸಿದರು.

ಭಾರತ ಹೋಕಿಯ ಜಾದುಗಾರರಾದ ಮೇಜರ್ ಧ್ಯಾನ್‌ಚಂದ್ ಅವರ ತ್ಯಾಗ, ಶ್ರಮ ಮತ್ತು ದೇಶಕ್ಕಾಗಿ ನೀಡಿದ ಅಪಾರ ಕೊಡುಗೆಯನ್ನು ಸ್ಮಸ್ಮರಿಸಿ, ಅವರ ಜೀವನವೇ ಕ್ರೀಡೆಯ ಮಾದರಿ, ಶಿಸ್ತಿನ ಪಾಠ ಮತ್ತು ರಾಷ್ಟ್ರಭಕ್ತಿಯ ಸಂಕೇತವಾಗಿದೆ ಎಂದು ತಿಳಿಸಲಾಯಿತು.

S. N. Channabasappa ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ದೂರದೃಷ್ಟಿಯ ‘ಖೇಲೋ ಇಂಡಿಯಾ’ ಮತ್ತು ‘ಫಿಟ್ ಇಂಡಿಯಾ’ ಕಾರ್ಯಕ್ರಮದ ಸ್ಫೂರ್ತಿಯಿಂದ, ಯುವಕರಲ್ಲಿ ಆರೋಗ್ಯ, ಶಾರೀರಿಕ ಸಾಮರ್ಥ್ಯ ಹಾಗೂ ಕ್ರೀಡಾ ಚೇತನೆಯನ್ನು ಬೆಳೆಸುವ ಉದ್ದೇಶದಿಂದ ಈ ಕ್ರೀಡಾ ಮಹೋತ್ಸವ ಆಯೋಜನೆಗೊಂಡಿದ್ದು, ಇದು ನಮ್ಮ ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳಿಗೆ ತಮ್ಮ ಸಾಮರ್ಥ್ಯವನ್ನು ಮೆರೆದಿಡಲು ಒಳ್ಳೆಯ ವೇದಿಕೆ ಒದಗಿಸುತ್ತದೆ.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರುಗಳಾದ, ಶ್ರೀ ಡಿ ಎಸ್ ಅರುಣ್ ಡಾ. ಧನಂಜಯ್ ಸರ್ಜಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಜಗದೀಶ್, ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಶ್ರೀಮತಿ ಸುರೇಖಾ ಮುರಳಿಧರ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಗೂ ಕ್ರೀಡಾಪಟುಗಳು ಉಪಸ್ಥಿತರಿದ್ದರು.

Sir.M. Visvesvaraya ಸರ್ .ಎಂ.ವಿ ಜನ್ಮದಿನದ ಪ್ರಯುಕ್ತ ಪ್ರೌಢಶಾಲೆ/ ಪಿಯು ವಿದ್ಯಾರ್ಥಿಗಳಿಗೆರಸಪ್ರಶ್ನೆ ಸ್ಪರ್ಧೆ.

0

Sir.M. Visvesvaraya ದಿನಾಂಕ: 15-9-25 ರಂದು ಆಚರಿಸಲಿರುವ “ಸರ್.ಎಂ. ವಿಶ್ವೇಶ್ವರಯ್ಯರವರ ಜನ್ಮ ದಿನಾಚರಣೆ” ಮತ್ತು “ಇಂಜಿನಿಯರ‍್ಸ್ ಡೇ” ಪ್ರಯುಕ್ತ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ದಿನಾಂಕ:10.09.2025ರ ಬುಧವಾರದಂದು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕ್ವಿಜ್/ರಸಪ್ರಶ್ನೆ ಮತ್ತು ಪದವಿ ಪೂರ್ವ ಕಾಲೇಜು (ಪಿಯುಸಿ) ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ದೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಅವರವರ ವಿದ್ಯಾ ಸಂಸ್ಥೆಯ ದೃಢೀಕರಣ ಪತ್ರದ ಮೂಲಕ ಭಾಗವಹಿಸಲು ಕೋರಿದೆ.

೧. ಕ್ವಿಜ್/ರಸಪ್ರಶ್ನೆ ಪ್ರಥಮ ಬಹುಮಾನ 6000/-

ದ್ವಿತೀಯ ಬಹುಮಾನ 4000/-

ತೃತೀಯ ಬಹುಮಾನ 2000/-

೨. ಭಾಷಣ ಸ್ಪರ್ದೆ ಪ್ರಥಮ ಬಹುಮಾನ 3000/-

ದ್ವಿತೀಯ ಬಹುಮಾನ 2000/-

ತೃತೀಯ ಬಹುಮಾನ 1000/-

ಸ್ಥಳ:- ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣ

ದಿನಾAಕ: 10.09.2025 ಬುದವಾರ, ಸಮಯ: ಬೆಳಗ್ಗೆ 10.00 ಘಂಟೆಗೆ

Sir.M. Visvesvaraya ನಿಬಂಧನೆಗಳು: ಒಂದು ಶಾಲೆಯಿಂದ ಇಬ್ಬರು ವಿದ್ಯಾರ್ಥಿಗಳ ಒಂದು ತಂಡದ‌ಂತೆ ಎರಡು ತಂಡಗಳನ್ನು ಮಾತ್ರ ಕಳುಹಿಸಿಕೊಡುವುದು. ಕ್ವಿಜ್ ಸ್ಪರ್ದೆಯು ಎರಡು ಹಂತಗಳಲ್ಲಿ ನಡೆಯಲಿದ್ದು
1) ಮೊದಲನೆಯ ಹಂತ ಲಿಖಿತವಾಗಿರುತ್ತದೆ.

2) ಎರಡನೆಯ ಹಂತ ಮೌಖಿಕವಾಗಿರುತ್ತದೆ.

ಭಾಷಣ ಸ್ಪರ್ದೆಗೆ ಒಂದು ಕಾಲೇಜಿನಿಂದ ಇಬ್ಬರು ವಿದ್ಯಾರ್ಥಿಗಳು ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ. ಎರಡು ಸ್ಪರ್ಧೆ ಗಳಲ್ಲಿ ಪ್ರಥಮ ಸ್ಥಾನ ಪಡೆದ ವಿಜೇತ ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜಿಗೆ ಆಕರ್ಷಕ ಪಾರಿತೋಷಕ ನೀಡಲಾಗುವುದು.
ಸೂಚನೆ:ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9353966546,7019663300,9632351163 ಸಂಪರ್ಕಿಸಲು ಕೋರಿದೆ.

Jayanthyo of Sri Veerabhadreshwara Swamy ಭಾದ್ರಪದ ಮಾಸದ ವಿಶೇಷವಾಗಿ ಪ್ರಧಾನ ಅರ್ಚಕ ವೃಂದಕ್ಕೆ ಸನ್ಮಾನ

0

Jayanthyo of Sri Veerabhadreshwara Swamy ಭಕ್ತ ಸಮೂಹದ ವತಿಯಿಂದ ಪ್ರಧಾನ ಅರ್ಚಕರುಗಳಿಗೆ ಸನ್ಮಾನ
ಬಾದ್ರಪದ ಮಾಸದ ಮೆಾದಲನೇ ವಾರ ಶ್ರೀ ವೀರಭದ್ರೇಶ್ವರ ಸ್ವಾಮಿಯ ಜಯಂತ್ಯೆುಾೕತ್ಸವದ ಪ್ರಯುಕ್ತ ಶಿವಮೆಾಗ್ಗದ ಚೌಕಿ ಮಠದ ವೀರಭದ್ರೇಶ್ವರ ಸ್ವಾಮಿಗೆ ವಿಶೇಷ ಪುಾಜೆ ಸಲ್ಲಿಸಲಾಯಿತು ನಂತರ ಪ್ರಸಾದ ವಿನಿಯೆಾೕಗ ಮಾಡಲಾಯಿತು ನಂತರ ಶಿವಮೆಾಗ್ಗದ ಭಕ್ತ ಸಮುಾಹದ ವತಿಯಿಂದ ದೇವಸ್ಥಾನದ ಪ್ರಧಾನ ಅರ್ಚಕರಾದ ಬೆಟಗೇರಿ ಶಾಸ್ತ್ರಿಗಳು ಹಾಗುಾ ಇನ್ನಿತರೆ ಅರ್ಚಕರಿಗೆ ಸನ್ಮಾನ ಮಾಡಲಾಯಿತು
Jayanthyo of Sri Veerabhadreshwara Swamy ಈ ಪುಾಜಾ ಕಾರ್ಯದಲ್ಲಿ SP ದಿನೇಶ್. ಬಳ್ಳೆಕೆರೆ ಸಂತೋಷ ಮತ್ತು ಮಲ್ಲಿಕಾರ್ಜುನ ಸ್ವಾಮಿ ನವೀನ್ ವಾರದ್.ಅವಿನಾಶ್ ಬಿ ಆರ್. ಬಿ ಜಿ ಧನರಾಜ್. ಚೇತನ್ ದುಮ್ಮಳ್ಳಿ. ಸಚ್ಚಿನ್ ಪೂಜಾರ್ ಉಮೇಶ್ ಕತ್ತಿಗೆ.ರಮೇಶ್ ವಿ. ಚಂದ್ರಶೇಖರ ಎಂ.
ಕೊಟ್ರೇಶ್. ವಿನೋದ್. ವೀರೇಶ್ ಮತ್ತು ತೇಜು ಕುಮಾರ್ ಹಾಗುಾ ಇನ್ನಿತರೇ ಭಕ್ತವೃಂದದವರು ಭಾಗವಹಿಸಿದ್ದರು

CM Siddaramaiah ರೈತರಿಗೆ ಸಕಾಲದಲ್ಲಿ ಕೃಷಿ ಸಾಲ ಸಿಗುವುದನ್ನ ಪ್ರತಿ ಜಿಲ್ಲೆಯಲ್ಲೂ ಖಾತ್ರಿಪಡಿಸಬೇಕು- ಸಿದ್ಧರಾಮಯ್ಯ

0

CM Siddaramaiah ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಆದ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಚರ್ಚಿಸಲಾದ
ಸಭೆಯ ಮುಖ್ಯಾಂಶಗಳು ಹೀಗಿವೆ:

  • ರಾಜ್ಯದಲ್ಲಿ ಪ್ರಸ್ತುತ ಸಾಲಿನಲ್ಲಿ 37ಲಕ್ಷ ರೈತರಿಗೆ ರೂ.28,000 ಕೋಟಿ ಸಾಲ ವಿತರಣೆಯ ಗುರಿ ಹೊಂದಲಾಗಿದ್ದು, ಜುಲೈ ಅಂತ್ಯದವರೆಗೆ 8,69,284 ರೈತರಿಗೆ ರೂ.8,362.68 ಕೋಟಿ ಸಾಲ ವಿತರಣೆ ಮಾಡಲಾಗಿದೆ. ರೈತರಿಗೆ ಸಕಾಲದಲ್ಲಿ ಕೃಷಿ ಸಾಲ ಸಿಗುವುದನ್ನು ಪ್ರತಿ ಜಿಲ್ಲೆಯಲ್ಲೂ ಖಾತ್ರಿಪಡಿಸಬೇಕು.
  • ನಬಾರ್ಡ್ ರಿಯಾಯಿತಿ ಬಡ್ಡಿ ದರದ ಸಾಲದ ಮಿತಿಯನ್ನು ಹಿಂದಿನ ಸಾಲಿನಲ್ಲಿದ್ದ ರೂ.5,600 ಕೋಟಿಗಳಿಂದ ರೂ.3,236.11 ಕೋಟಿಗೆ ಅಂದರೆ ಶೇ.42.21ರಷ್ಟು ಕಡಿಮೆ ಮಾಡಿದೆ. ಆದರೂ ಸಾಲ ವಿತರಣೆಯಲ್ಲಿ ಶೇ.96.07 ರಷ್ಟು ಪ್ರಗತಿ ಸಾಧಿಸಲಾಗಿದೆ. 2024-25ನೇ ಸಾಲಿನಲ್ಲಿ 29,75,598 ರೈತರಿಗೆ 25,939.09 ಕೋಟಿ ಕೃಷಿ ಸಾಲ ವಿತರಣೆ ಮಾಡಲಾಗಿದೆ.
  • ರಾಜ್ಯದಲ್ಲಿ 28,516 ಸಹಕಾರ ಸಂಘಗಳು ಲಾಭದಲ್ಲಿದ್ದು, 14,670 ಸಂಘಗಳು ನಷ್ಟದಲ್ಲಿವೆ. ಸಾಲ ವಸೂಲಾತಿ ಸರಿಯಾಗಿ ಆಗದ ಕಾರಣ ಬಹುತೇಕ ಸಂಘಗಳು ನಷ್ಟದಲ್ಲಿದ್ದು, ಅಂತಹ ಸಂಘಗಳು ಸಾಲ ವಸೂಲಾತಿಗೆ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಇದರಲ್ಲಿ 2,200 ಹಾಲು ಉತ್ಪಾದಕ ಸಂಘಗಳು ನಷ್ಟದಲ್ಲಿವೆ. ಹಾಲು ಉತ್ಪಾದಕ ಸಹಕಾರ ಸಂಘಗಳ ವೆಚ್ಚದ ಮೇಲೆ ನಿಗಾ ಇರಿಸಬೇಕು. ಹಾಲು ಉತ್ಪಾದನೆಯನ್ನು ಹೆಚ್ಚಿಸುವುದು ಸಂಘಗಳ ಕಾರ್ಯದರ್ಶಿಗಳ ಜವಾಬ್ದಾರಿ. ಹಾಲು ಉತ್ಪಾದಕ ಸಹಕಾರ ಸಂಘಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಬೇಕು.
  • ಕನ್ನಡ ಸಾಹಿತ್ಯ ಪರಿಷತ್‌‌ನ ಅವ್ಯವಹಾರಗಳ ಕುರಿತು ಡಿಆರ್‌ಸಿಎಸ್ ತನಿಖೆ ನಡೆಸುತ್ತಿದೆ. ತನಿಖೆ ನಡೆಯುತ್ತಿರುವ ಸಂದರ್ಭದಲ್ಲೇ ಕೆಲವು ಸದಸ್ಯರ ಸದಸ್ಯತ್ವವನ್ನು ಪರಿಷತ್ ರದ್ದುಪಡಿಸುತ್ತಿರುವ ಕುರಿತು ದೂರುಗಳು ಬಂದಿದ್ದು, ಈ ಕುರಿತು ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು.
  • ಸಹಕಾರ ಸಂಘಗಳ ಹಿರಿಯ ನಿರೀಕ್ಷಕರ 126 ಹುದ್ದೆಗಳು ಹಾಗೂ ಸಹಕಾರ ಸಂಘಗಳ ನಿರೀಕ್ಷಕರ 403 ಹುದ್ದೆಗಳು ಖಾಲಿಯಿವೆ. ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸಬೇಕು.
  • ಸಹಕಾರ ಸಂಘಗಳ ನಿಬಂಧಕರ ಕಚೇರಿಯ ವ್ಯಾಪ್ತಿಯ ಸೇವೆಗಳನ್ನು ಗಣಕೀಕರಿಸುವ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು.
  • ರಾಜ್ಯದಲ್ಲಿ 7,074 ಗಿರವಿದಾರ ಸಂಸ್ಥೆಗಳು ಹಾಗೂ 1,468 ಚೀಟಿ ಸಂಸ್ಥೆಗಳು ಕರ್ನಾಟಕ ಲೇವಾದೇವಿಗಾರರ ಅಧಿನಿಯಮ 1961, ಕರ್ನಾಟಕ ಗಿರವಿದಾರರ ಅಧಿನಿಯಮ 1961 ಮತ್ತು ಚೀಟಿನಿಧಿಗಳ ಅಧಿನಿಯಮ 1982ರಡಿ ನೋಂದಣಿಯಾಗಿವೆ. ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಗಿರವಿದಾರ ಸಂಸ್ಥೆಗಳು ಹಾಗೂ ಚೀಟಿ ಸಂಸ್ಥೆಗಳ ಮೇಲೆ ನಿಗಾ ಇರಿಸಬೇಕು.
  • ರಾಜ್ಯದಲ್ಲಿ ಸಹಕಾರಿ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಸಹಕಾರ ಇಲಾಖೆ ಅಧಿಕಾರಿಗಳು ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು.

Shimoga Bharat Scouts and Guides ಕೃಷಿ ಶಿಬಿರದಿಂದ ಮಕ್ಕಳಲ್ಲಿ ರೈತರ ಶ್ರಮ ಅರಿತುಕೊಳ್ಳುವಲ್ಲಿ ಸಹಕಾರಿ- ಶಕುಂತಲಾ ಚಂದ್ರಶೇಖರ್.

0

Shimoga Bharat Scouts and Guides ಮಕ್ಕಳಿಗೆ ಗ್ರಾಮೀಣ ಪ್ರದೇಶದ ಪರಿಚಯ ಹಾಗೂ ಮಲೆನಾಡಿನ ಸೊಬಗು ತಿಳಿಯಬೇಕು ಎಂದು ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಶಿವಮೊಗ್ಗ ಜಿಲ್ಲಾ ಪ್ರಧಾನ ಆಯುಕ್ತೆ ಶಕುಂತಲಾ ಚಂದ್ರಶೇಖರ್ ಹೇಳಿದರು.
ಸ್ಕೌಟ್ಸ್ ಅಂಡ್ ಗೈಡ್ಸ್ ಮಕ್ಕಳ ನಡಿಗೆ ಕೃಷಿ ಕ್ಷೇತ್ರದ ಕಡೆಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಈ ಕಾರ್ಯಕ್ರಮ ಮಕ್ಕಳಲ್ಲಿ ರೈತರ ಶ್ರಮದ ಮಹತ್ವ ಅರಿತುಕೊಳ್ಳುವ ಮನೋಭಾವ ಬೆಳೆಸುತ್ತದೆ. ಪ್ರತಿಯೊಬ್ಬರಿಗೂ ಪ್ರಕೃತಿಯ ಬಗ್ಗೆ ಗೌರವ ಮೂಡಿಸುತ್ತದೆ. ಆಹಾರ ಭದ್ರತೆ ಹಾಗೂ ಸ್ಥಿರ ಜೀವನಶೈಲಿಯ ಬಗ್ಗೆ ಜಾಗೃತಿ ತರಲು ಸಹಕಾರಿ ಆಗುತ್ತದೆ ಎಂದು ತಿಳಿಸಿದರು.
ಬೆಂಗಳೂರಿನ ಮಕ್ಕಳಿಗೆ ಕೃಷಿ ಮತ್ತು ಗ್ರಾಮೀಣ ಜೀವನದ ನೇರ ಅನುಭವ ಕಲ್ಪಿಸುವ ಉದ್ದೇಶದಿಂದ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಬೆಂಗಳೂರು ಉತ್ತರ ಜಿಲ್ಲೆ ವತಿಯಿಂದ ಆ.28ರಿಂದ 30ರವರೆಗೆ ಶಿವಮೊಗ್ಗದಲ್ಲಿ ಕೃಷಿ ಶಿಬಿರ ಆಯೋಜಿಸಲಾಗಿದೆ ಎಂದರು.
ಈ ಶಿಬಿರವು ನಗರ ಜೀವನ ಮತ್ತು ಕೃಷಿ ಜೀವನದ ನಡುವಿನ ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ, ಭಾಗವಹಿಸಿದ ಮಕ್ಕಳಿಗೆ ಕೃಷಿ ಕುರಿತು ಪ್ರಾಯೋಗಿಕ ಜ್ಞಾನವನ್ನು ನೀಡಿತು. ಮಕ್ಕಳು ಬೀಜ ಬಿತ್ತನೆ, ಮಣ್ಣಿನ ಸಿದ್ಧತೆ ಹಾಗೂ ಸಾಂಪ್ರದಾಯಿಕ ಹಾಗೂ ಆಧುನಿಕ ಕೃಷಿ ವಿಧಾನಗಳ ಅಧ್ಯಯನದಲ್ಲಿ ಉತ್ಸಾಹದಿಂದ ಪಾಲ್ಗೊಂಡರು.
Shimoga Bharat Scouts and Guides ಶಿಬಿರವು ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧಿಯಾ, ಜಿಲ್ಲಾ ಮುಖ್ಯ ಆಯುಕ್ತ ಡಾ. ಪ್ರಸನ್ನಕುಮಾರ್, ಬೆಂಗಳೂರು ಉತ್ತರ ಜಿಲ್ಲಾ ಕಾರ್ಯದರ್ಶಿ ಬಿ.ಕೆ.ಶೇಷಾದ್ರಿ ಹಾಗೂ ಶಿಬಿರದ ಆಯೋಜಕ ರಾಜ್ಯ ಸಹ ಸಂಘಟನಾ ಆಯುಕ್ತ ನಿತಿನ್ ಅಮೀನ್ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮದಲ್ಲಿ ಆಯುಕ್ತರಾದ ಕೆ.ರವಿ, ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್, ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರಯ್ಯ, ಮಲ್ಲಿಕಾರ್ಜುನ ಕಾನೂರು, ಸ್ಥಳೀಯ ಸಂಸ್ಥೆಗಳ ಕಾರ್ಯದರ್ಶಿ ರಾಜೇಶ್ ಅವಲಕ್ಕಿ ಉಪಸ್ಥಿತರಿದ್ದರು.

Spoken English Course ಮಹಿಳೆಯರೇ ಇಂಗ್ಲೀಷ್ ಮಾತಾಡುವುದನ್ನ ಕಲಿಯಬೇಕೆ? ಆಸಕ್ತರಿಗೆ ಇಲ್ಲಿದೆ ಮಾಹಿತಿ.

0

Spoken English Course ಇನ್ನರ್‌ವೀಲ್ ಕ್ಲಬ್ ಶಿವಮೊಗ್ಗ ಈಸ್ಟ್ ವತಿಯಿಂದ ಸೆಪ್ಟೆಂಬರ್ 1ರಿಂದ ಪ್ರಾರಂಭವಾಗುವ 40 ಗಂಟೆಗಳ Spoken English Course ಅನ್ನು ಹಮ್ಮಿಕೊಳ್ಳಲಾಗಿದೆ.

Spoken English Course ಈ ಕೋರ್ಸ್‌ನ ಉದ್ದೇಶವು ಮಹಿಳೆಯರಲ್ಲಿ ಇಂಗ್ಲಿಷ್ ಮಾತನಾಡುವಲ್ಲಿ ಆತ್ಮವಿಶ್ವಾಸವನ್ನು ಬೆಳೆಸುವುದು, ಶಬ್ದಕೋಶ ಹಾಗೂ ವ್ಯಾಕರಣವನ್ನು ಸುಧಾರಿಸುವುದು, ಹಾಗೂ ಪ್ರತಿದಿನದ ಸಂವಹನವನ್ನು ಸುಲಭಗೊಳಿಸುವುದು. ಉದ್ಯೋಗದಲ್ಲಿರುವ ಮಹಿಳೆಯರು, ವಿದ್ಯಾರ್ಥಿನಿಯರು ಹಾಗೂ ಆಸಕ್ತರಿಗೆ ಇದು ವಿಶೇಷವಾಗಿ ಸಹಾಯಕವಾಗಲಿದೆ.
ಸೋಮವಾರದಿಂದ ಶುಕ್ರವಾರ, ಸಂಜೆ
5:00 ರಿಂದ 6:00 ಗಂಟೆ ವರೆಗೆ
ಸ್ಥಳ: ರೋಟರಿ ಶಾಲೆ, ರಾಜೇಂದ್ರನಗರ

ಈ ಕೋರ್ಸ್ ಮುಖ್ಯವಾಗಿ ಮಹಿಳೆಯರಿಗೆ ಮಾತ್ರ ಮೀಸಲಾಗಿದೆ. ಆದರೆ, ಬೇಕಾದಷ್ಟು ನೋಂದಣಿಗಳು ಬಂದಿಲ್ಲದಿದ್ದಲ್ಲಿ ಯುವಕರಿಗೂ ಅವಕಾಶ ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ ಸಂಪರ್ಕ: 7829738412.

MESCOM ಆಗಸ್ಟ್ 30. ಅಬ್ಬಲಗೆರೆ ಸುತ್ತಮುತ್ತ ವಿದ್ಯುತ್ ಸರಬಾರಾಜು ವ್ಯತ್ಯಯ. ಮೆಸ್ಕಾಂ ಪ್ರಕಟಣೆ.

0

MESCOM ಶಿವಮೊಗ್ಗ ತಾವರೆಚಟ್ನಹಳ್ಳಿ ವಿದ್ಯುತ್ ಸ್ವೀಕರಣಾ ಕೇಂದ್ರದ 66 ಕೆವಿ ಕೇಂದ್ರದ ಅಬ್ಬಲಗೆರೆ, ಬೆಳಲಕಟ್ಟೆ, ಗೋಂಧಿಚಟ್ನಹಳ್ಳಿ ಮತ್ತು ಹುಣಸೋಡು ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.30 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಅಬ್ಬಲಗೆರೆ, ಕೊಮ್ಮನಾಳು, ಬನ್ನಿಕೆರೆ, ಬೀರನಕೆರೆ, ಬಿಕ್ಕೋನಹಳ್ಳಿ, ಕುಂಚೇನಹಳ್ಳಿ ಮೇಲಿನ/ಕೆಳಗಿನ ತಾಂಡ, ಕಲ್ಲಾಪುರ, ಗೋಂದಿಚಟ್ನಹಳ್ಳಿ, ಮೇಲಿನಹನಸವಾಡಿ, ಹೊಳೆಹನಸವಾಡಿ, ಬೆಳಲಕಟ್ಟೆ, ಕಲ್ಲಗಂಗೂರು, ಹುಣಸೋಡು, ಮೋಜಪ್ಪಹೊಸೂರು, ಬಸವನಗಂಗೂರು, ಮತ್ತೋಡು ಹಾಗೂ ಸುತ್ತುಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ್ದು, ಗ್ರಾಹಕರು/ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Department of Information and Public Relations ಪಿಂಚಣಿ ಪಡೆಯುತ್ತಿರುವ ಪತ್ರಕರ್ತರುಸೆ.30ರ ಒಳಗೆ ಜೀವಂತ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ.

0

Department of Information and Public Relations ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾಸಾಶನ/ವಿಧವಾ ಮಾಸಾಶನ ಪಡೆಯುತ್ತಿರುವ ಪತ್ರಕರ್ತರು ತಮ್ಮ ಜೀವಂತ ಪ್ರಮಾಣ ಪತ್ರವನ್ನು ದೃಢೀಕರಿಸಿ, 2025ರ ಸೆಪ್ಟಂಬರ್ ಅಂತ್ಯದೊಳಗಾಗಿ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರ್.ಎಂ.ವಿ.ರಸ್ತೆ, ಶಿವಮೊಗ್ಗ ಇವರಿಗೆ ಸಲ್ಲಿಸುವಂತೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವುದು.