Wednesday, February 4, 2026
Wednesday, February 4, 2026
Home Blog Page 1884

ಪ್ರಶಸ್ತಿ ಆಯ್ಕೆ ಪ್ರಕ್ರಿಯೆ ಬದಲಾಗಲಿದೆ : ಸಿ.ಎಂ. ಬೊಮ್ಮಾಯಿ

0

66ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾ ಕೇಂದ್ರದಲ್ಲಿ ಆಯೋಜಿಸಲಾಗಿದ್ದ 2021 ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಹಲವು ಕ್ಷೇತ್ರಗಳ ಸಾಧನೆಗಾಗಿ 66 ಜನ ಸಾಧಕರಿಗೆ ಪ್ರಶಸ್ತಿ ವಿತರಿಸಿ ಮಾತನಾಡಿದರು.

ರಾಜ್ಯೋತ್ಸವ ಪ್ರಶಸ್ತಿಗೆ ಆಹ್ವಾನಿಸುವ ಸಂಪ್ರದಾಯ ಸರಿಯಲ್ಲ. ಕ್ಷೇತ್ರದ ತಜ್ಞರೇ ಮುಂದಿನ ವರ್ಷದಿಂದ ಸಾಧಕರನ್ನು ಶೋಧಿಸಲಿದ್ದಾರೆ ಎಂದರು.ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರ ಆಯ್ಕೆ ಕನಿಷ್ಠ ವಯೋಮಿತಿ 60 ವರ್ಷ ತುಂಬಿರ ಬೇಕೆಂಬ ನಿಯಮವನ್ನು ಮುಂದಿನ ವರ್ಷದಿಂದ ಸಡಿಲಿಸುವ ಜೊತೆಗೆ, ಪ್ರಶಸ್ತಿ ಮೊತ್ತವನ್ನು 1 ಲಕ್ಷ ದಿಂದ 5 ಲಕ್ಷ ರೂಪಾಯಿಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು.

ಈ ಸಮಾರಂಭದಲ್ಲಿ ಕಂದಾಯ ಸಚಿವ ಆರ್. ಅಶೋಕ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಹಿರಿಯ ಸಾಹಿತಿ ಪದ್ಮಶ್ರೀ ಡಾ. ದೊಡ್ಡರಂಗೇಗೌಡ ಅವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಅಂತರ್ಜಾಲ ಗುಣಮಟ್ಟ ಸೇವೆ : ಸರ್ಕಾರ ಬದ್ಧ

0

ಸರ್ಕಾರವು ಗ್ರಾಹಕರಿಗೆ ಸ್ಥಿರ, ಸುರಕ್ಷಿತ, ವಿಶ್ವಾಸಾರ್ಹ ಮತ್ತು ಹೊಣೆಗಾರಿಕೆಯುಳ್ಳ ಅಂತರ್ಜಾಲ ಸಂಪರ್ಕ ವ್ಯವಸ್ಥೆ ನೀಡುವಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಮತ್ತು ಸಂಪರ್ಕ ಇಲಾಖೆ ಸಚಿವ ಶ್ರೀ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.

ಅವರು ಉತ್ತರಾಖಂಡದ ಡೆಹ್ರಾಡೂನ್ ನಲ್ಲಿ ಪ್ರಥಮ ಅಂತರ್ಜಾಲ ವಿನಿಮಯ ಕೇಂದ್ರವನ್ನು ಇತ್ತೀಚೆಗೆ ಉದ್ಘಾಟಿಸಿ ಮಾತನಾಡಿದರು. ಈ ಕೇಂದ್ರವು ಉತ್ತರಾಖಂಡದಲ್ಲಿ ಅಂತರ್ಜಾಲ ಸೇವೆಯನ್ನು ಹೆಚ್ಚಿಸುವಲ್ಲಿ ಸಹಾಯಕವಾಗಲಿದೆ ಎಂದರು.

ನೇತ್ರದಾನ : ಪುನೀತರಾದ ಪುನೀತ್

0

ಪವರ್ ಸ್ಟಾರ್ ನಟ ಪುನೀತ್ ರಾಜಕುಮಾರ್ ಅವರ ಕಣ್ಣು ನಾಲ್ವರಿಗೆ ಜಗದ ಬೆಳಕು ತೋರಿದೆ. ಸಾವಿನ ಬಳಿಕ ಮಣ್ಣಿನಲ್ಲಿ ಮಣ್ಣಾಗುತ್ತಿದ್ದವು.ಅಂತಹ ಅಮೂಲ್ಯ ಕಣ್ಣಗಳನ್ನು ಪುನೀತ್ ಕುಟುಂಬದವರು ದಾನ ಮಾಡಿದ್ದಾರೆ. ನಾಲ್ವರ ಬಾಳಿನಲ್ಲಿ ಇಲ್ಲಿಯವರೆಗಿದ್ದ ಅಂದಕಾರ ದೂರವಾಗಿ ಹೊರಜಗತ್ತನ್ನು ನೋಡುವ ಸೌಭಾಗ್ಯ ಒದಗಿದೆ ಎಂದು ನಾರಾಯಣ ನೇತ್ರಾಲಯದ ಮುಖ್ಯಸ್ಥ ಡಾ.ಭುಜಂಗ ಶೆಟ್ಟಿ ತಿಳಿಸಿದ್ದಾರೆ.
ಪುನೀತ್ ರಾಜಕುಮಾರ್ ನಿಧನಕ್ಕೆ ಸಂತಾಪ ಸೂಚಿಸಲು ನಾರಾಯಣ ನೇತ್ರಾಲಯದಲ್ಲಿ “ನಿಮಗಿದೋ ವಂದನೆ” ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅವರ ಪುನೀತ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
” ಈವರೆಗೂ ಯಾವುದೇ ದಾನಿಗಳಿಂದ ಎರಡು ಕಣ್ಣುಗಳನ್ನು ಪಡೆದರೆ ಮತ್ತಿಬ್ಬರಿಗೆ ಮಾತ್ರ ಕಸಿ ಮಾಡಲಾಗುತ್ತಿತ್ತು. ಆದರೆ ಇದೇ ಮೊದಲ ಬಾರಿಗೆ ಪುನೀತ್ ಅವರಿಂದ ಪಡೆದ ಎರಡು ಕಣ್ಣುಗಳನ್ನು ಆಧುನಿಕ ತಂತ್ರಜ್ಞಾನದ ನೆರವಿನೊಂದಿಗೆ ನುರಿತ ತಜ್ಞರ ತಂಡವು ಯಶಸ್ವಿಯಾಗಿ ನಾಲ್ವರಿಗೆ ದೃಷ್ಟಿ ಭಾಗ್ಯ ನೀಡಿದೆ ಎಂದರು.
ಪುನೀತ್ ಅವರ ಮರಣದ ಮಾರನೇ ದಿನವೆ ನಾಲ್ಕು ಜನರಿಗೆ ಕಸಿ ಮಾಡಲಾಗಿದೆ. ಎಲ್ಲರಿಗೂ ದೃಷ್ಟಿ ಸ್ಪಷ್ಟವಾಗಿದೆ. ಒಂದೇ ದಿನ ಒಬ್ಬರ ಕಣ್ಣನ್ನು ನಾಲ್ವರಿಗೆ ಕಸಿ ಮಾಡಿರುವುದು ರಾಜ್ಯದಲ್ಲಿ ಇದೇ ಮೊದಲು. ಇವರಲ್ಲಿ ಒಬ್ಬ ಯುವತಿ ಹಾಗೂ ಮೂವರು ಯುವಕರು ಸೇರಿದ್ದಾರೆ ಎಂದರು.
“ದಾನ ಪಡೆದ ಕಣ್ಣುಗಳು ಆರೋಗ್ಯಕರವಾಗಿದ್ದರೆ ಕಾರ್ನಿಯಾವನ್ನು ಎರಡು ಭಾಗಗಳನ್ನಾಗಿ ಮಾಡಿ ಇಬ್ಬರಿಗೆ ಕಸಿ ಮಾಡಬಹುದು. ಆದರೆ ನಾವು ದಾನಿಗಳಿಂದ ಪಡೆದ ಬಹುತೇಕರ ಕಣ್ಣುಗಳಲ್ಲಿ ಕಾರ್ನಿಯಾದ ಮುಂಬಾಗ ಚೆನ್ನಾಗಿದ್ದರೆ, ಹಿಂಭಾಗದಲ್ಲಿ ತೊಂದರೆ ಇರುತ್ತದೆ, ಅಥವಾ ಹಿಂಭಾಗದಲ್ಲಿ ಚೆನ್ನಾಗಿದ್ದರೆ ಮುಂಭಾಗದಲ್ಲಿ ಸಮಸ್ಯೆ ಇರುತ್ತಿತ್ತು. ನಟ ಪುನೀತ್ ಅವರ ಎರಡು ಕಣ್ಣುಗಳಲ್ಲೂ ಯಾವುದೇ ಸಮಸ್ಯೆ ಇರಲಿಲ್ಲ. ಹಾಗಾಗಿ ಕಣ್ಣಿನ ಕಾರ್ನಿಯಾದ ಮುಂದಿನ ಮತ್ತು ಹಿಂದಿನ ಪದರಗಳನ್ನು ಬೇರ್ಪಡಿಸುವ ಮೂಲಕ ಪ್ರತಿ ಕಣ್ಣಿನಿಂದ ತಲಾ ಇಬ್ಬರು ರೋಗಿಗಳಿಗೆ ಚಿಕಿತ್ಸೆ ನೀಡಲು ನಾವು ಬಳಸಿದ್ದೇವೆ.
ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಣ್ಣಿನ ದಾನ ಮಾಡಿದ ಡಾ. ರಾಜಕುಮಾರ್ ಕುಟುಂಬ ವರ್ಗಕ್ಕೆ ನಾವು ತುಂಬಾ ಧನ್ಯವಾದಗಳನ್ನು ಸಲ್ಲಿಸುತ್ತೇವೆ ಎಂದರು.

ಮನೆ ಬಾಗಿಲಿಗೆ ಸರ್ಕಾರಿ ಸೇವೆ

0

ವಿಧಾನಸೌಧದ ಮುಂಭಾಗದಲ್ಲಿ ಎರಡು ಸಾರ್ವಜನಿಕ ಸೇವೆಗಳ ಜೊತೆ, ಸಾರಿಗೆ ಇಲಾಖೆಯ 30 ಸಂಪರ್ಕರಹಿತ ಆನ್ಲೈನ್ ಸೇವೆಗಳನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಲೋಕಾರ್ಪಣೆ ಮಾಡಿದರು.
ಈ ಯೋಜನೆಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಯಶಸ್ವಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜನಸೇವಕ ಮತ್ತು ಜನಸ್ಪಂದನೆ ಯೋಜನೆಗಳಿಗೆ ಸಿಎಂ ಬೊಮ್ಮಾಯಿ ಚಾಲನೆ ನೀಡಿ, “ಆಳುವವರು ಹಾಗೂ ಆಡಳಿತ ನಡೆಸುವವರ ಜವಾಬ್ದಾರಿಯಾಗಿದೆ. ಉತ್ತರದಾಯಿತ್ವದ ಬಗ್ಗೆ ಸ್ಪಷ್ಟತೆ ಇಲ್ಲ.ಆದ್ದರಿಂದ ತಳಹಂತದಲ್ಲಿ ನಾಗರಿಕ ಸೇವೆ ಮತ್ತು ಸರಕಾರದ ನಡುವೆ ಗೋಡೆ ಎದ್ದು ನಿಂತಿದೆ. ಸೇವೆಗಳನ್ನು ಹಣ ಕೊಟ್ಟು ಪಡೆಯುವ ಸ್ಥಿತಿ ನಿರ್ಮಾಣವಾಗಿದೆ” ಎಂದು ವಿಷಾದ ವ್ಯಕ್ತಪಡಿಸಿದರು.
ಅಧಿಕಾರಶಾಹಿ ವಿಳಂಬ ಧೋರಣೆ ಅನುಸರಿಸುತ್ತಿದೆ.ಇದರಿಂದ ನಾಗರಿಕ ಸೇವೆಗಳಿಂದ ವಂಚಿತರಾಗುತ್ತಿರುವ ಜನರ ಮನೆ ಬಾಗಿಲಿಗೆ ಸೌಕರ್ಯ ಒದಗಿಸುವ ಮಹತ್ವಾಕಾಂಕ್ಷೆಯ ಉದ್ದೇಶವನ್ನು ಈ ಯೋಜನೆ ಹೊಂದಿವೆ ಎಂದು ತಿಳಿಸಿದರು.
ಜನಸೇವಕ ಯೋಜನೆಯಡಿಯಲ್ಲಿ, ಆಧಾರ್ ನವೀಕರಣ, ವಿಧವಾ ವೇತನ,ಆದಾಯ ಅಥವಾ ಜಾತಿ ಪ್ರಮಾಣಪತ್ರ, ಪಿಂಚಣಿ ಇತ್ಯಾದಿ ಸೇವೆಗಳು ಸುಲಭವಾಗಿ ಲಭ್ಯವಾಗಲಿವೆ.
ಏಕೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣೆ ವ್ಯವಸ್ಥೆ ಫೋರ್ಟಲ್ ನಲ್ಲಿ ಲಾಗಿನ್ ಆಗುವ ಮೂಲಕ ಅಥವಾ 1902 ಸಹಾಯವಾಣಿಗೆ ಕರೆ ಮಾಡಿ 33 ಇಲಾಖೆಗೆ ಸಂಬಂಧಿಸಿದ ದೂರುಗಳನ್ನು ಸಲ್ಲಿಸಿ ಆನ್ ಲೈನ್ ಸೇವೆ ಪಡೆಯಬಹುದು. ಆರೋಗ್ಯ , ನೀರು ಮತ್ತು ವಿದ್ಯುದ್ಛಕ್ತಿ ವಲಯ ಹೊರತುಪಡಿಸಿ ಇತರೆ ದೂರುಗಳಿಗೆ ಪರಿಹಾರ ಪಡೆದುಕೊಳ್ಳುವ ವ್ಯವಸ್ಥೆ ಯೇ ಜನಸ್ಪಂದನ ಯೋಜನೆ ಎಂದು ತಿಳಿಸಿದರು.
ಸದ್ಯ ಬೆಂಗಳೂರು ನಗರದಲ್ಲಿ ಈ ಸೇವೆ ಜಾರಿಗೊಳಿಸಲಾಗಿದೆ. ಇಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸಿ, ಲೋಪದೋಷಗಳಿದ್ದರೆ ಸರಿಪಡಿಸಿ ಜ.26 ಕ್ಕೆ ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಜನರು ಇಲಾಖೆಗಳ ಬಳಿ ಬರುವ ಬದಲಿಗೆ ಆಡಳಿತವೇ ಜನರ ಬಳಿ ಹೋಗುವ ಈ ವ್ಯವಸ್ಥೆಯು ಕ್ರಾಂತಿಕಾರಿ ಎಂದು ಬೊಮ್ಮಾಯಿ ಹೇಳಿದರು.
ಸಚಿವರಾದ ಡಾ. ಸಿ.ಎನ್. ಅಶ್ವಥ್ ನಾರಾಯಣ, ಬಿ.ಸಿ. ನಾಗೇಶ್, ಶಾಸಕರಾದ ರಿಜ್ವಾನ್ ಅರ್ಷದ್,
ಸುರೇಶ್ ಕುಮಾರ್, ಮಹಾಂತೇಶ್ ಕವಟಗಿಮಠ ಇನ್ನಿತರರು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಪ್ರತಿ ಬುಧವಾರ ಲಸಿಕಾಮೇಳ : ಕೆ.ಎಸ್. ಈಶ್ವರಪ್ಪ

0

ಜಿಲ್ಲೆಯಲ್ಲಿ ಶೇ.88ರಷ್ಟು ಮಂದಿ ಮೊದಲ ಬಾರಿಯ ಹಾಗೂ ಶೇ.41ರಷ್ಟು ಮಂದಿ ಎರಡನೇ ಬಾರಿಯ ಲಸಿಕೆಯನ್ನು ಪಡೆದಿದ್ದಾರೆ. ಈವರೆಗೆ ಲಸಿಕೆಯನ್ನೇ ಪಡೆಯದಿರುವವರು 2 ಲಕ್ಷ ಜನರಿದ್ದಾರೆ. ಕೂಡಲೇ ಲಸಿಕೆ ಪಡೆದು ತಮ್ಮ ಕುಟುಂಬದ ಹಾಗೂ ಸಾರ್ವಜನಿಕರ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ಲಸಿಕೆ ಹಾಕಿಸಿಕೊಳ್ಳುವಂತೆ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮನವಿ ಮಾಡಿದ್ದಾರೆ.

ಜಿಲ್ಲಾಡಳಿತವು ನಗರದ ಪೊಲೀಸ್‌ ಕವಾಯತು ಮೈದಾನದಲ್ಲಿ ಏರ್ಪಡಿಸಿದ್ದ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿದರು. ನಂತರ ಮಾಧ್ಯಮದ ಪ್ರತಿನಿಧಿಗಳಿಗೆ ಮಾಹಿತಿ ನೀಡಿ ಮಾತನಾಡಿದರು.

ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಒಳಗೊಂಡು ಒಟ್ಟು 141ಆರೋಗ್ಯ ಕೇಂದ್ರಗಳಲ್ಲಿ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತಿದೆ. ಈವರೆಗೆ ಲಸಿಕೆಯನ್ನು ಹಾಕಿಸಿಕೊಳ್ಳದಿರುವ ಸಾರ್ವಜನಿಕರು ಲಸಿಕೆಯನ್ನು ಹಾಕಿಸಿಕೊಳ್ಳಲು ಧಾವಿಸುವಂತೆ ಸಚಿವರು ಕರೆ ನೀಡಿದರು. ಈ ಲಸಿಕಾ ಆಂದೋಲನದ ಯಶಸ್ಸಿಗಾಗಿ ಆರೋಗ್ಯ ಇಲಾಖೆಯ ತಜ್ಞವೈದ್ಯರಲ್ಲದೆ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಶ್ರಮಿಸುತ್ತಿದ್ದಾರೆ. ಪ್ರತಿ ಬುಧವಾರದಂದು ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಲಸಿಕಾಮೇಳವನ್ನು ಆಯೋಜಿಸಲಾಗುತ್ತಿದೆ ಎಂದರು.

ರಾಜ್ಯೋತ್ಸವದ ಈ ಶುಭ ದಿನದಂದು ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸೇವೆ ಸಲ್ಲಿಸಿದ ಜಿಲ್ಲೆಯ 4ಜನರಿಗೆ ರಾಜ್ಯ ಸರ್ಕಾರವು ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿರುವುದು ನಮ್ಮೆಲ್ಲರಿಗೆ ಸಂತಸದ ತಂದಿದೆ ಎಂದರು.

ಇತ್ತೀಚೆಗೆ ಕೇಳಿ ಬರುತ್ತಿರುವ ಬಿಟ್ ಕಾಯಿನ್ ಮತ್ತು ಡ್ರಗ್ಸ್ ಅಕ್ರಮಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿರುದ್ಧ ಸರ್ಕಾರ ನಿರ್ಧಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳಲಿದೆ. ಅದಕ್ಕಾಗಿ ರಾಜ್ಯ ಗೃಹ ಸಚಿವರಿಗೆ ವಿಶೇಷ ಅಧಿಕಾರ ನೀಡಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್.ವೈಶಾಲಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್, ಮೇಯರ್ ಸುನಿತಾ ಅಣ್ಣಪ್ಪ, ಚನ್ನಬಸಪ್ಪ, ಜ್ಯೋತಿಪ್ರಕಾಶ್ ಮುಂತಾದವರು ಉಪಸ್ಥಿತರಿದ್ದರು.

ಇಂಗ್ಲೆಂಡ್ ವಿರುದ್ಧ ನೆಲಕಚ್ಚಿದ ಶ್ರೀಲಂಕಾ

0

ಟಿ – 20 ವಿಶ್ವಕಪ್ ಟೂರ್ನಿಯ ಸೂಪರ್ – 12 ರ A – ಗುಂಪಿನ ಇಂಗ್ಲೆಂಡ್ ಮತ್ತು ಶ್ರೀಲಂಕಾ ತಂಡಗಳ ನಡುವೆ ಪಂದ್ಯ ನಡೆಯಿತು. ಶ್ರೀಲಂಕಾ ತಂಡದ ವಿರುದ್ಧ ಇಂಗ್ಲೆಂಡ್ ರೋಚಕ ಜಯಗಳಿಸಿದೆ.

ಶಾರ್ಜಾದ ಶೇಕ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 163 ರನ್ ಕಲೆಹಾಕಿತು. ಆರಂಭಿಕ ಹಿನ್ನಡೆ ಕಂಡು ರೋಚಕ ಬ್ಯಾಟಿಂಗ್ ಮಾಡಿದ ಜೋಸ್ ಬಟ್ಲರ್ ಮತ್ತು ಇಯಾನ್ ಮಾರ್ಗನ್ ರವರ ಉತ್ತಮ ಪ್ರದರ್ಶನದೊಂದಿಗೆ ತಂಡದ ಗೆಲುವಿಗೆ ಆಸರೆಯಾದರು.

ಜೋಸ್ ಬಟ್ಲರ್ ರವರು 67 ಎಸೆತಗಳಲ್ಲಿ 6 ಬೌಂಡರಿ ಹಾಗೂ 6 ಸಿಕ್ಸರ್ ಸಿಡಿಸಿ 101 ರನ್ ಗಳಿಸುವ ಮೂಲಕ ಸೆಂಚುರಿ ಬಾರಿಸಿದರು. ಹಾಗೆಯೇ ಇಯಾನ್ ಮಾರ್ಗನ್ ರವರು 36 ಎಸೆತಗಳಲ್ಲಿ 1 ಬೌಂಡರಿ ಹಾಗೂ 3 ಸಿಕ್ಸರ್ ಗಳನ್ನು ಸಿಡಿಸಿ 40 ರನ್ ಗಳನ್ನೂ ಕಲೆ ಹಾಕಿದರು.

5.2 ಓವರ್ ಗಳಲ್ಲಿ ಕೇವಲ 35 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡ ಇಂಗ್ಲೆಂಡ್ ತಂಡದ ಸ್ಥಿತಿ ರಕ್ಷಣಾತ್ಮಕ ಆಟದೊಂದಿಗೆ ಇನ್ನಿಂಗ್ಸ್ ಕಟ್ಟಿದ ಈ ಜೋಡಿ ಕ್ರಮೇಣ ಅಬ್ಬರಿಸತೊಡಗಿ 4 ನೇ ವಿಕೆಟ್ ಗೆ ಕೇವಲ 78 ಎಸೆತಗಳಲ್ಲಿ 112 ರನ್ ಗಳ ಕಾಣಿಕೆ ನೀಡಿದರು. ಇಂಗ್ಲೆಂಡ್ ತಂಡ ಕೊನೆಯ 10 ಓವರ್ ಗಳಲ್ಲಿ 1 ವಿಕೆಟ್ ಗೆ 116 ರನ್ ಗಳಿಸಿತು. ಅದರಲ್ಲೂ ಇನ್ನಿಂಗ್ಸ್ ನ ಕೊನೆಯ ಓವರ್ ನ (19.5) ಕೊನೆಯ ಬಾಲ್ ನಲ್ಲಿ ಸಿಕ್ಸರ್ ಸಿಡಿಸುವುದರ ಮೂಲಕ ಬಟ್ಲರ್ ಆಕರ್ಷಕ ಶತಕ ಪೂರೈಸಿದರು. ಇದರೊಂದಿಗೆ ಟಿ – 20 ವಿಶ್ವಕಪ್ ಇತಿಹಾಸದಲ್ಲಿ ಶತಕ ಬಾರಿಸಿದ 8 ನೇ ಹಾಗೂ ಋತುವಿನ ಮೊದಲ ಆಟಗಾರ ಎಂಬ ಗೌರವಕ್ಕೆ ಬಟ್ಲರ್ ಪಾತ್ರರಾದರು.

ಒಟ್ಟಿನಲ್ಲಿ ಇವರಿಬ್ಬರ ಉತ್ತಮ ಪ್ರದರ್ಶನ ಮೂಲಕ ಬಹಳ ತಾಳ್ಮೆಯಿಂದ ಸಮಯೋಚಿತ ಬ್ಯಾಟಿಂಗ್ ಫಲವಾಗಿ ಇಂಗ್ಲೆಂಡ್ ತಂಡ ಟಿ – 20 ವಿಶ್ವಕಪ್ ಟೂರ್ನಿಯ ಸೂಪರ್ 12 ರ ಹಂತದ ಪಂದ್ಯದಲ್ಲಿ ಶ್ರೀಲಂಕಾ ತಂಡಕ್ಕೆ 164 ರನ್ ಗಳ ಸವಾಲ್ ಹಾಕಿತು.
163 ರನ್ ಗಳನ್ನ ಗೆಲುವಿನ ಗುರಿ ಬೆನ್ನತ್ತಿ ಹೋರಾಡುವ ಹೊತ್ತಿಗೆ 8 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 54 ರನ್ ಗಳಿಸಿತು. ತಂಡದ ಪ್ರಮುಖ ಬ್ಯಾಟ್ಸ್ಮನ್ ಗಳು ಬಹಳ ಬೇಗನೆ ವಿಕೆಟ್ ಗಳನ್ನ ಒಪ್ಪಿಸಿ ಸಂಕಷ್ಟಕ್ಕೆ ಸಿಲುಕಿದ ಶ್ರೀಲಂಕಾ 19 ಓವರ್ ಗಳಲ್ಲಿ 137 ರನ್ ಗಳಿಸಿತು.ತಲಾ 2 ವಿಕೆಟ್ ಗಳಿಸಿದ ಇಂಗ್ಲೆಂಡ್ ತಂಡದ ಮೋಯಿನ್ ಅಲಿ, ಆದಿಲ್ ರಶೀದ್ ಮತ್ತು ಕ್ರಿಸ್ ಜೋರ್ಡಾನ್ ಅವರು ಶ್ರೀಲಂಕಾದ ಕುಸಿತಕ್ಕೆ ಕಾರಣರಾದರು. ಇಂಗ್ಲೆಂಡ್ ತಂಡಕ್ಕೆ ಶರಣಾಯಿತು.

ಅಡಿಕೆ ಹಾಳೆಯಲ್ಲಿ ಆಕರ್ಷಕ ವಸ್ತುಗಳು

0

ಪ್ರಾಚೀನ ಕಾಲದಿಂದ ಮನೆಬಳಕೆಯ ವಸ್ತುಗಳು ಬಿದಿರು ಮತ್ತು ಬೆತ್ತದಿಂದ ತಯಾರಿಸಲಾಗುತ್ತಿತ್ತು. ಇತ್ತೀಚಿನ ದಿನಗಳಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ಹೆಚ್ಚಾಗಿದೆ. ಇದರಿಂದ ಬೆತ್ತ ಬಿದಿರು ವಸ್ತುಗಳ ಉತ್ಪನ್ನಗಳು ತಮ್ಮ ಅಸ್ತಿತ್ವವನ್ನು ಕಳೆದುಕೊಳ್ಳುತ್ತಾ ಬಂದಿದೆ. ಪ್ಲಾಸ್ಟಿಕ್ ಪರಿಸರಕ್ಕೆ ವಿಷಕಾರಿ ವಸ್ತುವಾಗಿದೆ ಎಂಬುದು ಎಲ್ಲರಿಗೂ ತಿಳಿದೇ ಇದೆ. ಪ್ಲಾಸ್ಟಿಕ್ ಬಳಕೆ ತಗ್ಗಿಸಲು, ನಿಸರ್ಗದ ವಸ್ತುಗಳು ಎಸ್ಎಲ್ ಪಡೆದೆ ನಮ್ಮ ದೈನಂದಿನ ಬಳಕೆ ವಸ್ತುಗಳಾಗಿ ವಿವಿಧ ನಮೂನೆ ಹೊಂದಲು ಸಾಧ್ಯವಾಗಲಿದೆ.

ಜಿ -20 : ಜಾಗತಿಕ ತಾಪಮಾನಕ್ಕೆ ನಿಯಂತ್ರಣ

0

ಜಿ -20 ಶೃಂಗದಲ್ಲಿ ಬಹುರಾಷ್ಟ್ರೀಯ ಕಾರ್ಪೊರೇಟ್ ಕಂಪನಿಗಳಿಗೆ ಶೇ.15 ಗ್ಲೋಬಲ್ ಮಿನಿಮಮ್ ಟ್ಯಾಕ್ಸ್ ವಿಧಿಸುವ ವಿಚಾರ, ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ಬಳಕೆ ಕಡಿಮೆ ಮಾಡಿ, ನವೀಕರಿಸಬಹುದಾದ ಇಂಧನ ಬಳಕೆಗೆ ಆದ್ಯತೆ ನೀಡುವುದು, ಹಸಿರು ಮನೆ ಅನಿಲ ಹೊರಸೂಸುವಿಕೆ ಕಡಿಮೆ ಮಾಡುವುದು ಮುಂತಾದ ವಿಷಯಗಳು ಚರ್ಚೆಗೆ ಒಳಗಾದವು.
ತಾಪಮಾನವನ್ನು 1.5 ಡಿಗ್ರಿ ಸೆಲ್ಸಿಯಸ್ ಗೆ ಮಿತಿಗೊಳಿಸಲು 2015ರ ಪ್ಯಾರಿಸ್ ಸಮ್ಮೇಳನದಲ್ಲಿ ಜಾಗತಿಕ ನಾಯಕರು ಸಮ್ಮತಿಸಿದ್ದರು. ಇದು ಪರಾಮರ್ಶೆ ಈ ಸಿಒಪಿ 26 ಶೃಂಗಸಭೆಯಲ್ಲಿ ನಡೆಯಲಿದೆ. ಕಳೆದ ಒಂದೂವರೆ ಶತಮಾನದಲ್ಲೇ ಇಳೆ 1.1 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಯಾಗಿದೆ. ಇದನ್ನು ಆಧಾರವಾಗಿಟ್ಟುಕೊಂಡು 2030ರ ವೇಳೆಗೆ 1.5 ಡಿಗ್ರಿ ಸೆಲ್ಸಿಯಸ್ ಮಿತಿ ದಾಟಲಿದೆ ಎನ್ನುವುದು ವಿಜ್ಞಾನಿಗಳ ಅಭಿಪ್ರಾಯವಾಗಿದೆ.
‘ಚೀನಾ ಸೇರಿ ಪ್ರಮುಖ ರಾಷ್ಟ್ರಗಳು ಕಲ್ಲಿದ್ದಲು ಯೋಜನೆ ಸ್ಥಗಿತಗೊಳಿಸುವ ವಿಚಾರದಲ್ಲಿ ಬದ್ಧತೆ ತೋರಿಸಬೇಕು. ಗ್ಲಾಸ್ಗೋವ್ ನಲ್ಲಿ ಈ ಬಗ್ಗೆ ಘೋಷಣೆ ಮಾಡಿ ಪರಿಸರ ಸ್ನೇಹಿ ಇಂಧನ ಬಳಕೆ ಕಡೆಗೆ ಗಮನ ಹರಿಸಬೇಕು” ಎಂದು ಪ್ರಧಾನಿ ಬೋರಿಸ್ ಜಾನ್ಸನ್ ತಿಳಿಸಿದರು.
ಜಗತ್ತಿನ ದೊಡ್ಡ ಅರ್ಥವ್ಯವಸ್ಥೆಯ ನಾಯಕರು ಜಿ-20 ಶೃಂಗದ ಎರಡನೇ ಮತ್ತು ಕೊನೆಯ ದಿನ ಹವಾಮಾನ ವೈಪರಿತ್ಯದ ವಿಚಾರಕ್ಕೆ ಹೆಚ್ಚಿನ ಆದ್ಯತೆ ನೀಡಿ ಮಾತನಾಡಿದರು.
ಸ್ಕಾಟ್ಲೆಂಡ್ ನ ಗ್ಲಾಸ್ಗೋವ್ ನಲ್ಲಿ ಸಿಒಪಿ 26 ಶೃಂಗ ಶುರುವಾಗಿದ್ದು, ಮುಂದಿನ ಎರಡು ವಾರಗಳ ವಿವಿಧ ರಾಷ್ಟ್ರಗಳ ನಾಯಕರು ಹವಾಮಾನ ವೈಪರಿತ್ಯ ತಡೆಗೆ ತೆಗೆದುಕೊಂಡ ಕ್ರಮಗಳ ವಿವರವನ್ನು ಜಗತ್ತಿನೆದುರು ಪ್ರಸ್ತುತಪಡಿಸಲಿದ್ದಾರೆ.
ಜಗತ್ತಿನ ಹಸಿರು ಮನೆ ಅನಿಲ ಹೊರಸೂಸುವಿಕೆಯ 4ನೇ ಮೂರಂಶದಷ್ಟು ಹೊಂದಿರುವ ಜಿ-20 ರಾಷ್ಟ್ರಗಳು, ಏರುತ್ತಿರುವ ತಾಪಮಾನ ಕಡಿಮೆ ಮಾಡಲು ಬಡರಾಷ್ಟ್ರಗಳಿಗೆ ನೆರವಾಗುತ್ತ, ತಮ್ಮ ದೇಶಗಳಲ್ಲಿ ಮಾಲಿನ್ಯ ತಡೆಗೆ ಹೇಗೆ ಎಲ್ಲರಿಗೂ ಹೊಂದುವಂತಹ ಕ್ರಮ ತೆಗೆದುಕೊಳ್ಳುವುದು ಎಂಬ ಬಗ್ಗೆ ಚಿಂತನೆ ನಡೆಸಿವೆ.
ಆಸ್ಟ್ರೇಲಿಯಾ, ರಷ್ಯಾ, ಜಪಾನ್, ಚೀನಾ ಮತ್ತು ಭಾರತ ದೇಶಗಳು ಹವಾಮಾನ ವೈಪರಿತ್ಯ ಕಡೆಗೆ ಸಂಬಂಧಿಸಿ ಬದ್ಧತೆಯನ್ನು ತೋರಿಸಬೇಕು. ಪ್ರತಿರೋಧದ ಭಾಷೆಯನ್ನು ಬಿಟ್ಟು ಪ್ಯಾರಿಸ್ ಒಪ್ಪಂದ ಅಂಶಗಳಿಗೆ ಅನುಗುಣವಾಗಿ ಕ್ರಮಗಳನ್ನು ನಿಶ್ಚಿತ ಗಡುವಿನೊಳಗೆ ಜಾರಿಗೊಳಿಸಬೇಕು ಎಂದು ಐರೋಪ್ಯ ಒಕ್ಕೂಟ ಆಗ್ರಹಿಸಿದೆ.

ಲಾಕ್ ಡೌನ್ ಅವಧಿ : ಶಾಲಾ ಕಟ್ಟಡ ನಿರ್ವಹಣಾ ಕೊರತೆ

0

ಕೋವಿಡ್, ಲಾಕ್ ಡೌನ್ ನಂತರ ರಾಜ್ಯಾದ್ಯಂತ ಪ್ರಾಥಮಿಕ ಶಾಲೆಗಳು ಸೇರಿ ಎಲ್ಲ ಶಾಲಾ-ಕಾಲೇಜುಗಳು ಪ್ರಾರಂಭಗೊಂಡಿವೆ. ಶಾಲೆಗಳಲ್ಲಿ ಮಕ್ಕಳ ದಾಖಲಾತಿ 2.35 ಲಕ್ಷದ ದಾಟಿದೆ ಎನ್ನಲಾಗುತ್ತಿದೆ. ಆದರೆ ಮೂಲಸೌಕರ್ಯ ಕೊರತೆಯಿಂದ ಸರ್ಕಾರಿ ಶಾಲೆಗಳು ಬಳಲುತ್ತಿವೆ.
ನಿರ್ವಹಣೆ ಕೊರತೆಯಿಂದ ಸರಕಾರಿ ಶಾಲೆಗಳು ಶಿಥಿಲಗೊಂಡಿವೆ. ಈ ಸಂಬಂಧ 13 ಮಾನದಂಡಗಳನ್ನು ಅನುಸರಿಸಿ, ಶಾಲೆಗಳಲ್ಲಿರುವ ಕೊರತೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ. ಖಾಸಗಿ ಕಂಪನಿಗಳ ಸಿಎಸ್ಆರ್ ನಿಧಿ, ಸ್ವಯಂ ಸೇವಾ ಸಂಸ್ಥೆ, ಹಳೆ ವಿದ್ಯಾರ್ಥಿ ಸಂಘಗಳ ನೆರವಿನಿಂದ ಈ ಶಾಲೆಗಳ ರಿಪೇರಿ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪ್ರಾರ್ಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.
ಲಾಕ್ ಡೌನ್ ಸಂದರ್ಭದಲ್ಲಿ ಶಾಲೆಗಳು ಮುಚ್ಚಿದ್ದ ಕಾರಣ ನಿರ್ವಹಣೆ ಮಾಡಲಾಗದೇ, ಹಾಗೂ ಮಳೆಯಿಂದಾಗಿ ಹಲವೆಡೆ ಕಟ್ಟಡಗಳು ಕುಸಿದಿವೆ. ರಾಜ್ಯಾದ್ಯಂತ 7,800 ಶಾಲಾ ಕಟ್ಟಡಗಳು ಹಾನಿಗೊಳಗಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ಶಾಲೆಗಳಲ್ಲಿರುವ ಮೂಲಸೌಕರ್ಯ ಮತ್ತು ಸ್ಥಿತಿಗತಿಗಳ ಬಗ್ಗೆ ಶಿಕ್ಷಣ ಇಲಾಖೆ ಮಾಹಿತಿ ಸಂಗ್ರಹಿಸಿದೆ. ಮೂರು ಸಾವಿರಕ್ಕೂ ಹೆಚ್ಚು ಶಾಲಾ ಕಟ್ಟಡಗಳು ತೀವ್ರವಾಗಿ ಹಾನಿಗೊಳಗಾಗಿದ್ದು ನಾಲ್ಕು ಸಾವಿರಕ್ಕೂ ಹೆಚ್ಚು ಕಟ್ಟಡಗಳು ಮಧ್ಯಮ ಪ್ರಮಾಣದ ಹಾನಿಗೊಳಗಾಗಿವೆ ಇದರಲ್ಲಿ ಗ್ರಾಮೀಣ ಮತ್ತು ಪ್ರಾರ್ಥಮಿಕ ಶಾಲೆಗಳೇ ಹೆಚ್ಚು ಎಂಬ ವಿಚಾರಗಳು ಬೆಳಕಿಗೆ ಬಂದಿವೆ. ಸೂಕ್ತ ಕ್ರಮವನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಸಚಿವರು ತಿಳಿಸಿದ್ದಾರೆ.

ವಾಣಿಜ್ಯ ಬಳಕೆ ಸಿಲಿಂಡರ್ ಗಳ ಬೆಲೆ ಏರಿಕೆ

0

ವಾಣಿಜ್ಯ ಬಳಕೆಯ ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್ ಗಳ ಬೆಲೆ ರೂ. 266 ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ 19 ಕೆಜಿ ತೂಕದ ವಾಣಿಜ್ಯ ಸಿಲೆಂಡರ್ ಬೆಲೆ 2000.50 ಪೈಸೆ ಮುಟ್ಟಿದೆ. ಮುಂಚೆ ಈ ಬೆಲೆ ರೂ.1734 ಇತ್ತು. ಗೃಹಬಳಕೆಯ ಸಿಲಿಂಡರ್ ಗಳ ಬೆಲೆ ಏರಿಕೆ ಮಾಡಿಲ್ಲ.