B. R. Ambedkar ಕರ್ನಾಟಕ ಮಾಧ್ಯಮ ಅಕಾಡೆಮಿಯು ಚಿತ್ರದುರ್ಗ ಪತ್ರಕರ್ತರ ಭವನದ ಡಾ. ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಎಸ್.ಸಿ. ಎಸ್.ಟಿ. ಪತ್ರಿಕಾ ಸಂಪಾದಕರ ಸಂಘ ಹಾಗೂ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಆಗಸ್ಟ್ 30 ರಂದು “ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ” ಎಂಬ ವಿಷಯದ ಕುರಿತು ಒಂದು ದಿನದ ವಿಚಾರ ಸಂಕಿರಣವನ್ನು ಆಯೋಜಿಸಿದೆ.
ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಖಾತೆ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಡಿ. ಸುಧಾಕರ್ ಅವರು ವಿಚಾರ ಸಂಕಿರಣವನ್ನು ಉದ್ಘಾಟಿಸಲಿದ್ದಾರೆ.
B. R. Ambedkar ಡಾ. ಬಿ.ಆರ್. ಅಂಬೇಡ್ಕರ್ ಅವರ ಕ್ರಾಂತಿಕಾರಿ ಚಿಂತನೆಗಳು, ಇಂದಿನ ದಿನದಲ್ಲಿಯೂ ಅವುಗಳ ಪ್ರಸ್ತುತತೆ, ಪತ್ರಕರ್ತರಾಗಿ ಅವರ ಕೊಡುಗೆ ಮತ್ತು ಎಲ್ಲರನ್ನು ಒಳಗೊಂಡ ಸಮಾಜ ನಿರ್ಮಾಣಕ್ಕೆ ಮುಂದಿನ ಹಾದಿ ಮುಂತಾದ ವಿಷಯಗಳ ಚರ್ಚೆಗೆ ಈ ವಿಚಾರ ಸಂಕಿರಣವು ವೇದಿಕೆಯಾಗಲಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಶ್ರೀಮತಿ ಆಯೇಶಾ ಖಾನಂ ಅವರು ತಿಳಿಸಿದ್ದಾರೆ.
ಹಿರಿಯ ಪತ್ರಕರ್ತ ಶ್ರೀ ಡಿ. ಉಮಾಪತಿ ಅವರು ದಿಕ್ಸೂಚಿ ಭಾಷಣ ಮಾಡುವರು. ಮಾನ್ಯ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಶ್ರೀ ಕೆ.ವಿ. ಪ್ರಭಾಕರ್, ಸಂಸದ ಗೋವಿಂದ ಎಂ. ಕಾರಜೋಳ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ವಿಚಾರ ಸಂಕಿರಣದಲ್ಲಿ “ಅಂಬೇಡ್ಕರ್ ಅವರ ಪತ್ರಿಕಾ ವೃತ್ತಿ” ವಿಷಯದ ಕುರಿತು ಪತ್ರಕರ್ತ ಶ್ರೀ ಎನ್. ರವಿಕುಮಾರ್, “ಪತ್ರಕರ್ತರಾಗಿ ಅಂಬೇಡ್ಕರ್ ಅವರ ಬರವಣಿಗೆಗಳು” ವಿಷಯದ ಕುರಿತು ವಿ.ಎಲ್. ನರಸಿಂಹಮೂರ್ತಿ, “ಅಂಬೇಡ್ಕರ್ ದೃಷ್ಟಿಯಲ್ಲಿ ಲಿಂಗಸಮಾನತೆ” ಕುರಿತು ಡಾ. ಭಾರತಿದೇವಿ ಹಾಗೂ ಪತ್ರಕರ್ತರಲ್ಲಿ ಸಾಮಾಜಿಕ ನ್ಯಾಯದ ಪ್ರಜ್ಞೆ ವಿಷಯದ ಕುರಿತು ರಿಷಿಕೇಶ್ ಬಹದ್ದೂರ್ ದೇಸಾಯಿ ವಿಷಯ ಮಂಡಿಸಲಿದ್ದಾರೆ. ಹಿರಿಯ ಪತ್ರಕರ್ತ ಶ್ರೀ ಸನತ್ ಕುಮಾರ್ ಬೆಳಗಲಿ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ.
ಪತ್ರಕರ್ತರು ಹಾಗೂ ಆಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಈ ಮೂಲಕ ವಿನಂತಿಸಿದೆ.
B. R. Ambedkar ಆಗಸ್ಟ್ 30. ಚಿತ್ರದುರ್ಗದಲ್ಲಿ “ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ” ವಿಚಾರ ಸಂಕಿರಣ.
Youth Hostels Association of India ವಿದ್ಯಾಭ್ಯಾಸದ ಜೊತೆ ಮಕ್ಕಳಲ್ಲಿ ಸಾಹಸ ಪ್ರವೃತ್ತಿ ಬೆಳೆಸಬೇಕು- ಅರಿಶಿನಗೆರೆ ನಾಡಿಗ್ ವಿಜೇಂದ್ರರಾವ್.
Youth Hostels Association of India ವಿದ್ಯಾಭ್ಯಾಸದ ಜೊತೆಗೆ ಸಾಹಸ ಪ್ರವೃತಿ ಅಭ್ಯಾಸ ಮಾಡಿಸಬೇಕು. ಆಗ ಮಾತ್ರ ಮುಂದಿನ ಪ್ರಜೆಗಳು ಯಾವುದಕ್ಕು ಅಂಜದೆ ತಮ್ಮ ಜೀವನದಲ್ಲಿ ಯಶಸ್ವಿಯಾಗುತ್ತಾರೆ ಎಂದು ಯೂತ್ ಹಾಸ್ಟೇಲ್ಸ್ ತರುಣೋದಯ ಘಟಕ ಮಥುರಾ ಪ್ಯಾರಡೈಸ್ ನಲ್ಲಿ ಆಯೋಜಿಲಾಗಿದ್ದ ಸಂಸ್ಥಾಪಕರ ದಿನದ ಕಾರ್ಯಕ್ರಮ ಉದ್ಘಾಟಿಸಿ ಅ.ನ.ವಿಜಯೇಂದ್ರ ಮಾತನಾಡಿದರು
ಶತಮಾನದ ಹಿಂದೆಯೆ ಜರ್ಮನಿಯ ಅದ್ಯಾಪಕ ರಿಚರ್ಡ್ ಸ್ಕಿರ್ಮನ್ ಬಡ ಸರ್ಕಾರಿ ಶಾಲಾಮಕ್ಕಳಿಗೆ ಚಾರಣ ಏರ್ಪಡಿಸಿ ಈ ಸಹಾಸ ಪ್ರವೃತಿ ಬೆಳೆಸಲು ಪ್ರಾರಂಭಿಸಿದ. ರಜಾದಿನಗಳಲ್ಲಿ ರಾತ್ರಿ ಶಾಲೆಯಲ್ಲಿ ವಾಸ್ತವ್ಯ ಮಾಡಿ, ಕಡಿವೆ ವೆಚ್ಛದಲ್ಲಿ ಕಾರ್ಯಕ್ರಮ ರೂಪಿಸಲು ಪ್ರಾರಂಭಿಸಿದರು. ಇದನ್ನು ಇತರೆ ಪ್ರದೇಶಕ್ಕು ಹರಡುವಂತೆ ಮಾಡಿ, ಯೂತ್ ಹಾಸ್ಟೆಲ್ಸ್ ಹೆಸರಿನಡಿ ಪ್ರಾರಂಭಿಸಿದಿದರು. ಇದನ್ನು ಅರಿತ ಇತರ ಅಧ್ಯಾಪಕರು ತಾವು ಅಳವಡಿಸಿಕೊಂಡು, ದೇಶ, ವಿದೇಶಕ್ಕು ಹರಡಿ ಇಂದು ವಿಶ್ವಾಧ್ಯಂತ ಯಶಸ್ವಿಯಗಿ ಕಾರ್ಯಕ್ರಮ ಜರುಗುತ್ತಿದೆ ಎಂದರು.
Youth Hostels Association of India ಛೇರ್ಮನ್ ಎಸ್.ಎಸ್.ವಾಗೇಶ್ ಮಾತನಾಡಿ, ಬಡವರ ಆಶಾಕಿರಣದಂತೆ ಇಂದು ಯೂತ್ ಹಾಸ್ಟೇಲ್ಸ್ ಕಾರ್ಯ ನಿರ್ವಹಿಸುತ್ತಿದೆ. ಅತ್ಯಂತ ಕಡಿಮೆ ಖರ್ಚಿನಲ್ಲಿ ಸ್ಥಳಿಯ ಹಾಗೂ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗುತ್ತಿದೆ. ನಗರದ ಸಾವಿರಾರು ಜನರು ನಮ್ಮ ಘಟಕದ ಮೂಲಕ ರಾಷ್ಟ್ರೀಯ ಹಿಮಾಲಯ ಚಾರಣಗಳಲ್ಲಿ ಭಾಗವಹಿಸಿದ್ದಾರೆ. ಮೂರು ಸಾವಿರಕ್ಕೆ ಅಜೀವ ಸದಸ್ಯತ್ವ ನೀಡಲಾಗುತ್ತದೆ, ಇದರ ಸದುಪಯೋಗ ಪಡಿಸಿಕೊಳ್ಳುತೆ ಕೋರಿದರು.
ಅಧ್ಯಕ್ಷತೆ ವಹಿಸಿದ್ದ ಎನ್. ಗೋಪಿನಾಥ್ ಮಾತನಾಡಿ 1909ರಲ್ಲಿ ಜರ್ಮನಿಯಲ್ಲಿ ಪ್ರಾರಂಭವಾದ ಯೂತ್ ಹಾಸ್ಟೇಲ್ಸ್ ಇಂದು ವಿಶ್ವದ ಹಲವಾರು ದೇಶಗಳಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತ, ಯುವಕರಿಗೆ ಸಹಾಸ ಪ್ರವೃತ್ತಿ ಹೆಚ್ಚಿಸಿದೆ. ಇದನ್ನು ಅರಿತ ಮಹಾರಾಜರು ಭಾರತದಲ್ಲಿಯೇ ಪ್ರಥಮ ಭಾರಿಗೆ, ಸ್ವಾತಂತ್ರ್ಯಪೂರ್ವದಲ್ಲಿಯೇ ಮೈಸೂರಿನಲ್ಲಿ ಪ್ರಾರಂಭಿಸಿದರು. ಸ್ವಾತಂತ್ರ್ಯದ ನಂತರ ಕೇಂದ್ರ ಕಛೇರಿ ದೆಹಲಿಗೆ ವರ್ಗಗೊಂಡು, ಇಂದು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಪ್ರಕೃತಿ ಮಂಚಾಲೆ ಪ್ರಾರ್ಥಿಸಿದರು, ಎಮ್. ಪಿ.ನಾಗರಾಜ್ ಸ್ವಾಗತಿಸಿದರು, ಜಿ. ವಿಜಯಕುಮಾರ್ ವಂದಿಸಿದರು. ರಾಜು, ಎಮ್.ನಾಗರಾಜ್, ರವೀಂದ್ರ, ಸುಮಾರಾಣಿ, ಮಲ್ಲಿಕಾರ್ಜುನ್ ಮುಂತಾದವರು ಇದ್ದರು.
Shankara Eye Hospital ಕಣ್ಣಿನ ಆರೋಗ್ಯ ಸಮಸ್ಯೆಗಳ ಬಗ್ಗೆ ಕಣ್ಣಿನ ವೈದ್ಯರನ್ನ ಸಂಪರ್ಕಿಸಿದರೆ ಪ್ರಯೋಜನ- ಡಾ.ಶ್ರೀನಿ.
ಕಣ್ಣಿನ ಪರೀಕ್ಷೆ ಮಾಡಿಸುವುದರ ಮುಖಾಂತರ ಮುಂದೆ ಸಂಭವಿಸಬಹುದಾದ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಬಹುದು. ಇದು ಕೇವಲ ತಪಾಸಣಾ ಶಿಬಿರ ಅಷ್ಟೇ ಅಲ್ಲ, ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳುವ ತಿಳುವಳಿಕೆ ಶಿಬಿರ ಎಂದು ಶಂಕರ ಕಣ್ಣಿನ ಆಸ್ಪತ್ರೆ ನೇತ್ರಶಾಸ್ತ್ರಜ್ಞೆ ಡಾ. ಶ್ರೀನಿ ಹೇಳಿದರು.
ಶಂಕರ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಶಾಂತಿನಗರದ ಸರ್ಕಾರಿ ಕನ್ನಡ ಮತ್ತು ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ನೇತ್ರ ತಪಾಸಣಾ ಉಚಿತ ಶಿಬಿರದ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಕಣ್ಣಿನ ಆರೋಗ್ಯದ ಲಕ್ಷಣಗಳು, ಕಣ್ಣಿನ ವೈದ್ಯರನ್ನು ಯಾವಾಗ ಸಂಪರ್ಕಿಸಬೇಕು, ಕಣ್ಣಿನ ಆರೈಕೆ ಸಲಹೆಗಳಿಂದ ಹಿಡಿದು ಕಣ್ಣಿನ ಚಿಕಿತ್ಸೆಗಳವರೆಗೆ ಹಲವಾರು ವಿಷಯಗಳ ಜೊತೆಗೆ ನಿಯಮಿತವಾಗಿ ಕಣ್ಣಿನ ಪರೀಕ್ಷೆ ಮಾಡಿಸುವುದರ ಪ್ರಯೋಜನದ ಬಗ್ಗೆ ವಿವರಿಸಿದರು.
Shankara Eye Hospital ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಅಧ್ಯಕ್ಷ ಡಿ.ಕಿಶೋರ್ ಕುಮಾರ್ ಮಾತನಾಡಿ, ಪ್ರತಿಯೊಬ್ಬರು ಕಣ್ಣಿನ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಕಾಲಕಾಲಕ್ಕೆ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಕಾರ್ಯದರ್ಶಿ ಧನಂಜಯ್ ಮಾತನಾಡಿ, ಕಣ್ಣಿನ ಆರೋಗ್ಯ ಅತ್ಯಂತ ಮುಖ್ಯ. ಶಿಬಿರಾರ್ಥಿಗಳು ತಪಾಸಣಾ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ಯಾವುದೇ ಭಯ ಪಡದೆ ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆಯಬೇಕು. ಮುಂದೆ ತಾವುಗಳು ನೇತ್ರದಾನ ಮಾಡುವುದರ ಮೂಲಕ ಇನ್ನೊಬ್ಬರ ಬಾಳಿನಲ್ಲಿ ಬೆಳಕಾಗಬೇಕು ಎಂದರು.
ಶಿವ ಟೈರ್ಸ್ ಮಾಲೀಕ ಶಿವಕುಮಾರ್ ಅವರು ದಾನವಾಗಿ ನೀಡಿದ ಕನ್ನಡಕವನ್ನು ಡಾ. ಕಿರಣ್ ಕುಮಾರ್ ಮೂಲಕ ಶಿಬಿರಾರ್ಥಿಗಳಿಗೆ ವಿತರಿಸಲಾಯಿತು. ರೋಟರಿ ಸಂಸ್ಥೆಯ ಮನೋಹರ್, ನಿರಂಜನ್ ಕುಮಾರ್, ನೇತ್ರಾಧಿಕಾರಿ ನವೀನ್, ರೋಸಾ ಮತ್ತಿತರು ಉಪಸ್ಥಿತರಿದ್ದರು.
Department of Collegiate Education ಪಿಯು ಇಲಾಖಾ ತಾಲ್ಲೂಕು ಕ್ರೀಡಾಕೂಟದಲ್ಲಿ ವಿವಿಧ ಪಂದ್ಯಗಳಲ್ಲಿ ಮಿಂಚಿದ ಆದಿಚುಂಚನಗಿರಿ ಪಿಯು ಕಾಲೇಜಿನ ವಿದ್ಯಾರ್ಥಿ ವೃಂದ
Department of Collegiate Education ಪದವಿಪೂರ್ವ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 2025- 26 ನೇ ಸಾಲಿನ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಶಿವಮೊಗ್ಗ ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಶ್ರೀ ಆದಿಚುಂಚನರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆಯ ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಸ್ವತಂತ್ರ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರು ತಾಲೂಕು ಮಟ್ಟದ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಉತ್ತಮ ಆಟದ ಪ್ರದರ್ಶನ ನೀಡಿದರು.
ಬಾಲಕಿಯರು ವಾಲಿಬಾಲ್ ನಲ್ಲಿ ದಾಳಿ, ಅಷ್ಟೇ ರಕ್ಷಣಾತ್ಮಕ ಮತ್ತು ಅತ್ಯಾಕರ್ಷಕ ಆಟದ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದು, ಪ್ರಶಸ್ತಿ ಪತ್ರ ಮತ್ತು ಟ್ರೋಪಿಯನ್ನು ತಮ್ಮದಾಗಿಸಿಕೊಂಡಿರುತ್ತಾರೆ, ಈ ಪ್ರತಿಭೆಗಳು ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಲಿದ್ದಾರೆ.
ಬಾಲಕರ ವಿಭಾಗದಲ್ಲಿ ಥ್ರೋ ಬಾಲ್ ನಲ್ಲಿ ಪ್ರಥಮ ಸ್ಥಾನ ಪಡೆದುಕೊಂಡರೆ, ವಾಲಿಬಾಲ್, ಖೋ- ಖೋ ದಲ್ಲಿ ಉತ್ತಮ ಆಟದ ಪ್ರದರ್ಶನ ನೀಡಿ, ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
Department of Collegiate Education ಈ ಕ್ರೀಡಾ ಪ್ರತಿಭೆಗಳ ಮುಂದಿನ ಕ್ರೀಡಾ ಜೀವನ ಯಶಸ್ವಿಯಾಗಲಿ ಮತ್ತು ಕ್ರೀಡೆಗಳಲ್ಲಿ ಉತ್ತಮ ಸಾಧನೆ ಮಾಡಲಿ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು, ಪೂಜ್ಯ ಶ್ರೀ ನಾದಮಯಾನಂದನಾಥ ಸ್ವಾಮೀಜಿ, ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಕಾಲೇಜಿನ ಪ್ರಾಂಶುಪಾಲರಾದ ಗುರುರಾಜ್ ಎಸ್. ವಿ.ಹಾಗೂ ಅಧ್ಯಾಪಕ ವೃಂದದವರು, ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.
D.K. Sivakumar ವಿವಾದ ಮಾಡೋದು ಬಿಜೆಪಿ ತತ್ವ, ಧರ್ಮದಲ್ಲಿ ರಾಜಕಾರಣ ಬೇಡ- ಡಿ.ಕೆ.ಶಿವಕುಮಾರ್
ನಮ್ಮ ನಾಡ ಹಬ್ಬ – ದಸರಾ, ನಮ್ಮ ನಾಡ ದೇವತೆ – ಚಾಮುಂಡೇಶ್ವರಿ, ಚಾಮುಂಡೇಶ್ವರಿ ತಾಯಿ ನಮ್ಮ ನಾಡಿನ ಅಧಿದೇವತೆ. ಈ ತಾಯಿಯನ್ನು ಆರಾಧಿಸುವವರು, ನಂಬುವವರು, ಗೌರವಿಸುವವರು ಎಲ್ಲ ಜಾತಿ, ಧರ್ಮಗಳಲ್ಲೂ ಇದ್ದಾರೆ. ಆಕೆಯ ದರ್ಶನ ಎಲ್ಲರ ಹಕ್ಕು. ತಾಯಿ ಎಲ್ಲ ಭಕ್ತರ, ನಾಡಿನ ಎಲ್ಲ ಮಕ್ಕಳ ಆಸ್ತಿ, ಯಾರೊಬ್ಬರಿಗೂ ಸೀಮಿತ ಅಲ್ಲ. ತಾಯಿಯನ್ನು ಪೂಜಿಸಿದರೆ ಯಾರೂ ಬೇಡ ಅನ್ನಲು ಆಗುವುದಿಲ್ಲ. ಇದೇ ನನ್ನ ಮಾತಿನ ಸತ್ವ. ವಿವಾದ ಮಾಡೋದು ಬಿಜೆಪಿ ತತ್ವ! ಎಂದು ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮ, ಸಮಾಜದವರಿಗೂ ಪ್ರವೇಶವಿದೆ. ಎಲ್ಲರೂ ಬೆಟ್ಟಕ್ಕೆ ಹೋಗುತ್ತಾರೆ. ದೇವಿಯ ಪ್ರಾರ್ಥನೆ ಮಾಡುತ್ತಾರೆ. ಎಲ್ಲರ ನೋವನ್ನು ದೂರ ಮಾಡುವಳು ನಮ್ಮ ದುರ್ಗಾ ದೇವಿ.
D.K. Sivakumar ನಾಡ ಹಬ್ಬ ದಸರಾವನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶಗಳಿಂದ ಜನ ಬರುತ್ತಾರೆ. ಇದಕ್ಕೆ ನಮ್ಮ ರಾಜ ವಂಶಸ್ಥರೇ ಅನುಮತಿ ನೀಡಿ ಸಾಕ್ಷಿಯಾಗಿದ್ದಾರೆ. ನಾಡ ಹಬ್ಬ ದಸರಾ ಎಲ್ಲ ಧರ್ಮದವರಿಗೂ ಸೇರಿದ್ದು ಎಂದು ತಿಳಿಸಿದ್ದಾರೆ.
ಧರ್ಮದಲ್ಲಿ ರಾಜಕಾರಣ ಮಾಡುವುದು ಬೇಡ, ಅದನ್ನು ಆ ತಾಯಿಯೂ ಮೆಚ್ಚುವುದಿಲ್ಲ! ಎಂದಿದ್ದಾರೆ.
Rotary Club Shimoga ತುರ್ತು ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ. ರಕ್ತದಾನದ ಮಹತ್ವ ಎಲ್ಲರೂ ತಿಳಿಯಬೇಕು- ಕೆ.ಎಸ್.ವಿಶ್ವನಾಥ ನಾಯಕ್
Rotary Club Shimoga ಜೀವ ಉಳಿಸುವ ರಕ್ತದಾನವು ಅತ್ಯಂತ ಶ್ರೇಷ್ಠ ಕಾರ್ಯವಾಗಿದ್ದು, ಆರೋಗ್ಯವಂತ ಯುವಜನರು ರಕ್ತದಾನ ಮಾಡಲು ಮುಂದಾಗಬೇಕು ಎಂದು ರೋಟರಿ ಕ್ಲಬ್ ಶಿವಮೊಗ್ಗ ರಿವರ್ಸೈಡ್ ಅಧ್ಯಕ್ಷ ಕೆ.ಎಸ್.ವಿಶ್ವನಾಥ ನಾಯಕ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ರಿವರ್ ಸೈಡ್, ಸುಬ್ಬಯ್ಯ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸಹಯೋಗದಲ್ಲಿ ಕೃಷಿ ನಗರದ ರಿವರ್ ಸೈಡ್ ಭವನದಲ್ಲಿ ಆಯೋಜಿಸಿದ್ದ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿ, ತುರ್ತು ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ಹೆಚ್ಚಿದ್ದು, ರಕ್ತದಾನದ ಮಹತ್ವಗಳನ್ನು ಅರಿತುಕೊಳ್ಳಬೇಕು. ರಕ್ತದಾನ ಮಾಡುವುದರಿಂದ ಆರೋಗ್ಯಕ್ಕೂ ಅನುಕೂಲವಾಗುತ್ತದೆ ಎಂದು ತಿಳಿಸಿದರು.
150ಕ್ಕೂ ಹೆಚ್ಚು ಜನರು ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ತರಂಗ ಶಾಲೆಯ ಮಕ್ಕಳು, ಶಿಕ್ಷಕರು ಆರೋಗ್ಯ ತಪಾಸಣೆ ಮಾಡಿಸಿದ್ದು, ಅವರಿಗೆ ಬ್ಲಡ್ ಗ್ರೂಪ್ ಐಡಿ ಕಾರ್ಡ್ ವಿತರಿಸಲಾಯಿತು. ಶಿಬಿರದಲ್ಲಿ ಭಾಗವಹಿಸಿದ ರೋಗಿಗಳಿಗೆ ವೈದ್ಯರ ಸಲಹೆ ಮೇರೆಗೆ ಇಸಿಜಿ, ಬಿಪಿ, ಶುಗರ್ ಪರೀಕ್ಷೆಗಳನ್ನು ಉಚಿತವಾಗಿ ನಡೆಸಲಾಯಿತು.
ಮಧುಮೇಹ, ಹೃದಯ ಕಾಯಿಲೆ, ಕಾಲು ಮೂಳೆ, ಕೀಲು ನೋವು, ಕಿವಿ, ಮೂಗು, ಗಂಟಲು, ಕಣ್ಣು, ದಂತ, ಪ್ರಸೂತಿ, ಸ್ತ್ರೀರೋಗ, ಮಕ್ಕಳ ತಜ್ಞರು ಆರೋಗ್ಯ ಶಿಬಿರದಲ್ಲಿ ಭಾಗವಹಿಸಿದ್ದರು.
Rotary Club Shimoga ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಮುಖ್ಯ ಡೀನ್ ಡಾ. ವಿನಾಯಕ. ಈ, ಮಾರ್ಕೆಟಿಂಗ್ ವಿಭಾಗದ ಮುಖ್ಯಸ್ಥ ಕಾಂತರಾಜ್, ರೋಟರಿ ಸಹಾಯಕ ಗವರ್ನರ್ ಕೆ.ಪಿ.ಶೆಟ್ಟಿ, ಜೋನಲ್ ಲೆಫ್ಟಿನೆಂಟ್ ಎಸ್.ಪಿ.ಶಂಕರ್, ಎಂ.ಪಿ.ಆನಂದ್ ಮೂರ್ತಿ, ನವಲೆ ಈಶ್ವರಪ್ಪ, ನಟರಾಜ್, ದ್ವಾರಕನಾಥ್, ಎಂ.ಆರ್.ಬಸವರಾಜ್, ನಿತಿನ್ ಯಾದವ್, ಎಂ.ನಾಗರಾಜ್, ಎಚ್.ಸಿ.ಯೋಗೇಶ್, ಪ್ರತಾಪ್, ರಾಕೇಶ್, ಎಂ.ಎಂ.ರವಿ, ರಾಜೇಂದ್ರ ಕುಮಾರ್, ನಿರಂಜನ್ ಮೂರ್ತಿ ಹಾಗೂ ಇನ್ನರ್ ವೀಲ್ ಪದಾಧಿಕಾರಿಗಳು ಹಾಜರಿದ್ದರು.
Mysore Police ಕಾಣೆಯಾಗಿರುವ ಕಿವುಡ/ ಮೂಗ ಹುಡುಗನ ಸುಳಿವು ನೀಡಿ ಸಹಕರಿಸಿ, ಮೈಸೂರು ವಿವಿ ಪುರಂ ಪೊಲೀಸ್ ಠಾಣೆ ಮಾಹಿತಿ
Mysore Police ಶರತ್ ಎಂ ಎಂ, ಸುಮಾರು 19 ವರ್ಷಗಳು ಈತ ಹುಟ್ಟಿನಿಂದ ಕಿವುಡ/ಮೂಗನಾಗಿದ್ದು ಮೈಸೂರಿನ ಯಾದವಗಿರಿ ಕೈಗಾರಿಕಾ ಪ್ರದೇಶದ ನ್ಯಾಷನಲ್ ಅಸೋಸಿಯೇಷನ್ ಫಾರ್ ದಿ ಬ್ಲೈಂಡ್ ಇಲ್ಲಿ ವ್ಯಾಸಂಗ ಮಾಡುತ್ತಿದ್ದು, ಜುಲೈ 27 ರಂದು ಕಾಣೆಯಾಗಿರುತ್ತಾನೆ.
ಶಿವಮೊಗ್ಗ ಜಿಲ್ಲೆಯ ಮಂಜಪ್ಪ ಎಂಬುವವರ ಏಕೈಕ ಪುತ್ರನಾದ ಇವನು ಹುಟ್ಟಿನಿಂದ ಕಿವುಡ/ಮೂಗನಾಗಿದ್ದು ಈ ಹಿಂದೆ ಭದ್ರಾವತಿಯ ಕಿವುಡ ಮೂಗರ ಶಾಲೆಯಲ್ಲಿ ವ್ಯಾಸಂಗ ಮಾಡಿರುತ್ತಾನೆ. ಕಾಣೆಯಾದ ಶರತ್ ಸುಮಾರು 149 ಸೆಂ.ಮೀ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ಕೋಲುಮುಖ, ಕಪ್ಪು ಕೂದಲು ಹೊಂದಿರುತ್ತಾನೆ. ಎಡಗೈಲಿ ಅಮ್ಮ ಎಂಬ ಹಚ್ಚೆ ಇರುತ್ತದೆ. ಬಲಗೈಲಿ ಬೆಳ್ಳಿ ಕಡಗ, ಕುತ್ತಿಗೆಯಲ್ಲಿ ಬೆಳ್ಳಿ ಸರ, ಬಲಗೈಯಲ್ಲಿ ಬೆಳ್ಳಿ ಉಂಗುರ ಧರಿಸಿರುತ್ತಾನೆ. ಕಾಣೆಯಾದ ವೇಳೆ ತೆಳು ನೀಲಿ Mysore Police ಬಣ್ಣದ ಶರ್ಟ್, ಕಪ್ಪು ಬಣ್ಣದ ನಿಕ್ಕರ್ ಧರಿಸಿರುತ್ತಾನೆ. ಈತನ ಸುಳಿವು ಯಾರಿಗಾದರೂ ಪತ್ತೆಯಾದಲ್ಲಿ
ವಿ.ವಿ.ಪುರಂ ಪೊಲೀಸ್ ಠಾಣೆ ಅಥವಾ ಮೈಸೂರು ನಗರದ ಪೊಲೀಸ್ ಕಂಟ್ರೋಲ್ ರೂಂ, ದೂ.ಸಂ: 0821-2418314, ಪೊಲೀಸ್ ನಿರೀಕ್ಷಕರ ಸಂಖ್ಯೆ 9480802238 ನ್ನು ಸಂಪರ್ಕಿಸಬಹುದೆಂದು ಮೈಸೂರಿನ ವಿವಿ ಪುರಂ ಪೊಲೀಸ್ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ.
Linganamakki Dam ನಳನಳಿಸುವ ಜೋಗ ಜಲಧಾರೆ
Linganamakki Dam ಜಲಾನಯನ ಪ್ರದೇಶದಲ್ಲಿ ಕಳೆದ ಎರಡು ದಿನದಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಲಿಂಗನಮಕ್ಕಿ ಡ್ಯಾಮ್ ಎಲ್ಲ ಗೇಟ್ ಓಪನ್ ಮಾಡಲಾಗಿದ್ದು , ಜೋಗದ ಲುಕ್ ಬದಲಾಗಿದೆ.
ಶರಾವತಿ ನದಿಯಲ್ಲಿ ಪುನಃ ನೀರಿನ ಹರಿವು ಹೆಚ್ಚಾಗಿದ್ದು,
ಲಿಂಗನಮಕ್ಕಿ ಜಲಾಶಯಕ್ಕೆ 47,232 ಕ್ಯೂಸೆಕ್ ಒಳ ಹರಿವು ಬಂದಿದೆ.
ಈಗಾಗಲೆ ಜಲಾಶಯ ಭರ್ತಿ ಆಗಿರುವುದರಿಂದ ಎಲ್ಲ ರೇಡಿಯಲ್ ಗೇಟುಗಳನ್ನು ಓಪನ್ ಮಾಡಲಾಗಿದೆ.
ಜೋಗದ ಎಲ್ಲ ಜಲಪಾತಗಳು ಮೈದುಂಬಿ ಧುಮ್ಮಿಕ್ಕುತ್ತಿವೆ.
ಇದರಿಂದ ಜೋಗ ಜಲಪಾತದ ಚಹರೆ ಬದಲಾಗಿದೆ.
Linganamakki Dam ಲಿಂಗನಮಕ್ಕಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ
District Consumer Disputes Redressal Commission ಓಲಾ ಸ್ಕೂಟರ್ ಸೇವಾ ನ್ಯೂನತೆ ಪರಿಗಣಿಸಿ, ದೂರುದಾರರ ಪರ ಗ್ರಾಹಕ ಆಯೋಗದ ತೀರ್ಪು
District Consumer Disputes Redressal Commission ಶಂಕರಯ್ಯ, ಶಿವಮೊಗ್ಗ ಇವರು ವ್ಯವಸ್ಥಾಪಕರು, ಓಲಾ ರ್ವೀಸ್ ಸೆಂಟರ್ ಶಿವಮೊಗ್ಗ, ಎಂ.ಡಿ ಓಲಾ ಎಲೆಕ್ಟಿçಕಲ್ ಟೆಕ್ನಾಲಾಜಿ ಪ್ರೈ..ಲಿ ಬೆಂಗಳೂರು ಹಾಗೂ ವ್ಯವಸ್ಥಾಪಕರು ಓಲಾ ಎಲೆಕ್ಟ್ರಿಕಲ್ ಟೆಕ್ನಾಲಾಜಿ ಪ್ರೈ.ಲಿ ಬೆಂಗಳೂರು ಇವರ ವಿರುದ್ದ ಸೇವಾ ನ್ಯೂನ್ಯತೆ ಕುರಿತು ದಾಖಲಿಸಿದ ದೂರನ್ನು ಆಲಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ದೂರುದಾರರಿಗೆ ಸೂಕ್ತ ಪರಿಹಾರ ನೀಡುವಂತೆ ಎದುರುದಾರರಿಗೆ ಆದೇಶಿಸಿದೆ.
ದೂರುದಾರರು ಆನ್ಲೈನ್ ಮೂಲಕ ರೂ.1,51,071 ಪಾವತಿಸಿ ದಿ:26/5/2022 ರಂದು ಒಂದು ಓಲಾ ಎಲೆಕ್ಟಿçಕ್ ಸ್ಕೂಟರನ್ನು ಬುಕ್ ಮಾಡಿದ್ದು, ದಿ:10/6/2022 ರಂದು ಪಡೆದುಕೊಂಡಿರುತ್ತಾರೆ. ಈ ಸ್ಕೂಟರ್ 8 ರ್ಷಗಳ ಬ್ಯಾಟರಿ ವಾರಂಟಿ ಮತ್ತು ಇತರೇ ಭಾಗಗಳಿಗೆ ಮೂರು ರ್ಷಗಳ ವಾರೆಂಟಿ ಹೊಂದಿರುತ್ತದೆ. ಸ್ಕೂಟರ್ನ್ನು ವಶಕ್ಕೆ ಪಡೆದ ನಂತರ ದಿ:10/07/2022 ರಂದು ಗಾಡಿ ಸ್ಟರ್ಟ್ ಆಗದಿರುವುದರಿಂದ ದಿ:12/7/2022 ರಂದು ರಿಪೇರಿಗಾಗಿ ಬಿಟ್ಟಿದ್ದು ಸಂಸ್ಥೆಯವರು ರಿಪೇರಿ ಮಾಡಿ ನೀಡಿರುತ್ತಾರೆ. ತದನಂತರ ದಿ:9/1/2025 ರಂದು ಪುನಃ ಸ್ಟಾರ್ಟ್ ಆಗದಿರುವುದರಿಂದ 1 ನೇ ಎದುರುದಾರರಿಗೆ ಈ ಬಗ್ಗೆ ತಿಳಿಸಿದ್ದು ಎದುರುದಾರರು ಯಾವುದೇ ಪ್ರತಿಕ್ರಿಯೆ ನೀಡದೇ ಇರುವುದರಿಂದ ದಿ:18/1/2025 ರಂದು 1 ನೇ ಎದುರುದಾರರ ಬಳಿ ರಿಪೇರಿಗಾಗಿ ಬಿಟ್ಟು ಆನ್ಲೈನ್ನಲ್ಲಿ ದೂರನ್ನು ದಾಖಲಿಸಿದಾಗ, ದಿ:3/3/2025 ರಂದು ರಿಪೇರಿಗಾಗಿ ರೂ.90,000 ಗಳನ್ನು ಪಾವತಿಸಿದಲ್ಲಿ ರಿಪೇರಿ ಮಾಡುವುದಾಗಿ ತಿಳಿಸಿರುತ್ತಾರೆ.
ಓಲಾ ಸ್ಕೂಟರ್ ಇನ್ನೂ ವಾರಂಟಿ ಅವಧಿಯಲ್ಲಿದ್ದರೂ ರಿಪೇರಿ ಮಾಡದೇ, ಸ್ಕೂಟರ್ನ್ನು ತಮ್ಮ ಅಧೀನದಲ್ಲಿಯೇ ಇಟ್ಟುಕೊಂಡಿದ್ದು ಸೇವಾನ್ಯೂನ್ಯತೆ ಎಸಗಿರುತ್ತಾರೆ ಎಂದು ದೂರನ್ನು ಸಲ್ಲಿಸಿರುತ್ತಾರೆ.
ದೂರನ್ನು ದಾಖಲಿಸಿಕೊಂಡು ಮೇಲ್ಕಂಡ ದೂರಿಗೆ ಆಕ್ಷೇಪಣೆಯನ್ನು ಸಲ್ಲಿಸಲು 1 ರಿಂದ 3 ರ ವರೆಗಿನ ಎದುರುದಾರರಿಗೆ ನೋಟಿಸ್ ನೀಡಿದ್ದು, ನೋಟಿಸ್ ಜಾರಿಯಾಗಿದ್ದರೂ ಎಲ್ಲಾ ಎದುರುದಾರರು ಗೈರು ಹಾಜರಾಗಿದ್ದರಿಂದ 1 ರಿಂದ 3 ನೇ ಎದುರುದಾರರನ್ನು ಏಕಪಕ್ಷೀಯ ಎಂದು ಪರಿಗಣಿಸಲಾಗಿದೆ.
District Consumer Disputes Redressal Commission ಎದುರುದಾರರು ಸಲ್ಲಿಸಿರುವ ಪ್ರಮಾಣಪತ್ರ , ದಾಖಲಾತಿಗಳನ್ನು ಪರಿಶೀಲಿಸಿ ವಾದವನ್ನು ಆಲಿಸಿ ಎದುರುದಾರರು ಓಲಾ ಸ್ಕೂಟರ್ ವಾರಂಟಿ ಅವಧಿಯಲ್ಲಿದ್ದರೂ ಸಹ ರಿಪೇರಿ ಮಾಡಿಕೊಡದೇ ಸೇವಾ ನ್ಯೂನ್ಯತೆ ಎಸಗಿರುತ್ತಾರೆ ಎಂದು ತರ್ಮಾನಿಸಿ, 1 ರಿಂದ 3 ನೇ ಎದುರುದಾರರು ದೂರುದಾರರಿಗೆ ಜಂಟಿಯಾಗಿ ಮತ್ತು ಪ್ರತ್ಯೇಕವಾಗಿ ರೂ.67,348 ಗಳಿಗೆ ದಿ:18/1/2025 ರಿಂದ ವರ್ಷಿಕ ಶೇ.10 ರ ಬಡ್ಡಿಯನ್ನು ಸೇರಿಸಿ ಈ ಆದೇಶವಾದ 45 ದಿನಗಳ ಒಳಗಾಗಿ ಪಾವತಿಸತಕ್ಕದ್ದು. ತಪ್ಪಿದ್ದಲ್ಲಿ ವರ್ಷಿಕ ಶೇ.12 ರ ಬಡ್ಡಿಯನ್ನು ಸೇರಿಸಿ ಪರ್ತಿ ಹಣ ಪಾವತಿಸುವವರೆಗೆ ನೀಡತಕ್ಕದ್ದು ಮತ್ತು 1 ರಿಂದ 3 ನೇ ಎದುರುದಾರರು ರೂ.40,000 ಗಳನ್ನು ಮಾನಸಿಕ ವೇದನೆಗಾಗಿ ಪರಿಹಾರವಾಗಿ ಮತ್ತು ದೂರಿನ ರ್ಚು ವೆಚ್ಚಕ್ಕಾಗಿ ಈ ಆದೇಶವಾದ 45 ದಿನಗಳ ಒಳಗಾಗಿ ಪಾವತಿಸತಕ್ಕದ್ದು. ತಪ್ಪಿದ್ದಲ್ಲಿ ವರ್ಷಿಕ ಶೇ.12 ರಂತೆ ಬಡ್ಡಿಯನ್ನು ಸೇರುಸಿ ಪರ್ತಿ ಹಣ ಪಾವತಿಸುವವರೆಗೆ ನೀಡತಕ್ಕದ್ದು ಎಂದು ಈ ಆಯೋಗದ ಅಧ್ಯಕ್ಷರಾದ ಟಿ.ಶಿವಣ್ಣ ಮತ್ತು ಸದಸ್ಯರಾದ ಬಿ.ಡಿ.ಯೋಗಾನಂದ ಭಾಂಡ್ಯರವರನ್ನು ಒಳಗೊಂಡ ಪೀಠ ದಿ:19/8/2025 ರಂದು ಆದೇಶಿಸಿದೆ.
JCI Sahyadri Shivamogga ಜೆಸಿಐ ಮಾರ್ಗದರ್ಶನದಿಂದ ವೃತ್ತಿ ಬದುಕಿನಲ್ಲಿ ಶಿಸ್ತು ಬದ್ಧ ಜೀವನ ಶೈಲಿ- ಬಿ.ಮೋಹನ್
JCI Sahyadri Shivamogga ಮೌನವೀಯ ಮೌಲ್ಯಗಳ ಅರಿವು ಮೂಡಿಸುವ ಜತೆಯಲ್ಲಿ ಉತ್ತಮ ವ್ಯಕ್ತಿತ್ವ ನಿರ್ಮಾಣದಲ್ಲಿ ಜೆಸಿಐ ಸಂಸ್ಥೆ ಮಹತ್ತರ ಪಾತ್ರ ವಹಿಸುತ್ತದೆ ಎಂದು ಜೆಸಿಐ ರಾಷ್ಟ್ರೀಯ ತರಬೇತುದಾರ ಬಿ.ಮೋಹನ್ ಹೇಳಿದರು.
ಜೆಸಿಐ ಸಹ್ಯಾದ್ರಿ ಘಟಕದ ವತಿಯಿಂದ ಸರ್ವ ಪೋಷಕ ಕನ್ಸಲ್ಟೆನ್ಸಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಉದ್ಯೋಗಿ ಹಾಗೂ ಶಿಬಿರಾರ್ಥಿಗಳಿಗೆ ಜೆಸಿಐ ಮಹತ್ವ ಕುರಿತು ಉಪನ್ಯಾಸ ನೀಡಿದ ಅವರು, ವೃತ್ತಿ ಹಾಗೂ ಬದುಕಿನಲ್ಲಿ ಶಿಸ್ತುಬದ್ಧ ಜೀವನಶೈಲಿ ಅಳವಡಿಸಿಕೊಳ್ಳಲು ಜೆಸಿಐ ಮಾರ್ಗದರ್ಶನ ನೀಡುತ್ತದೆ ಎಂದು ತಿಳಿಸಿದರು.
ಅಂತರಾಷ್ಟ್ರೀಯ ಮಟ್ಟದಲ್ಲಿ ಜೆಸಿಐ ಸಂಸ್ಥೆ ತನ್ನದೇ ಆದ ವಿಶೇಷ ಮೌಲ್ಯಗಳೊಂದಿಗೆ ಸಮಾಜದಲ್ಲಿ ಗುರುತಿಸಿಕೊಂಡಿದೆ. ಯುವಜನರಿಗೆ ಹಾಗೂ ಎಲ್ಲ ಕಾರ್ಯಕ್ಷೇತ್ರಗಳನ್ನು ವಿಶೇಷ ತರಬೇತಿಗಳನ್ನು ನೀಡುವುದರ ಮುಖಾಂತರ ಅವರನ್ನು ಜೆಸಿಐ ಸಂಸ್ಥೆಗೆ ಸೇರಿಸಿ ಉತ್ತಮ ಸೇವೆ ಸಲ್ಲಿಸಲು ವೇದಿಕೆ ಒದಗಿಸುತ್ತಿದೆ.
ಜೆಸಿಐ ಸಂಸ್ಥೆಯಲ್ಲಿ ತೊಡಗಿಸಿಕೊಳ್ಳುವುದರಿಂದ ನಮ್ಮಲ್ಲಿನ ಕಾರ್ಯಕ್ಷಮತೆ ಮತ್ತಷ್ಟು ವೃದ್ಧಿಸುತ್ತದೆ ಎಂದು ಹೇಳಿದರು.
ಜೆಸಿಐ ಸಹ್ಯಾದ್ರಿ ಘಟಕದ ಅಧ್ಯಕ್ಷ ಜಿ.ವಿ.ಗಣೇಶ್ ಮಾತನಾಡಿ, ವಿವಿಧ ವೃತ್ತಿ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಯುವಜನರನ್ನು ಜೆಸಿಐ ಸಂಸ್ಥೆಗೆ ಸೇರಿಸುವ ಉದ್ದೇಶವಿದ್ದು, ಈ ವರ್ಷ 1 ಲಕ್ಷ ಸದಸ್ಯರನ್ನು ಜೆಸಿಐ ಸಂಸ್ಥೆಗೆ ಸೇರಿಸುವ ಗುರಿಯನ್ನು ಜೆಸಿಐ ಅಂತರಾಷ್ಟ್ರೀಯ ಅಧ್ಯಕ್ಷರು ಹೊಂದಿದ್ದಾರೆ. ಈ ನಿಟ್ಟಿನಲ್ಲಿ ಪ್ರಪಂಚಾದ್ಯಂತ ಅಭಿಯಾನ ನಡೆಯುತ್ತಿದೆ ಎಂದರು.
JCI Sahyadri Shivamogga ಜೆಸಿಐ ಸಂಸ್ಥೆಗೆ ಸೇರುವುದರ ಮುಖಾಂತರ ಹೊಸ ಸಂಚಲನ ಮೂಡುವವರ ಜೊತೆಗೆ ಬೇರೆ ಬೇರೆ ವೃತ್ತಿಪರರ ಸಂಪರ್ಕ ಹಾಗೂ ಅವರ ಪ್ರತಿಭೆ, ಸೇವಾ ಗುಣಗಳು ಮತ್ತು ಮಾನವೀಯ ಮೌಲ್ಯಗಳ ಪರಿಚಯವಾಗುತ್ತದೆ. ಎಲ್ಲ ಶಿಬಿರಾರ್ಥಿಗಳು ಜೆಸಿಐ ಸಂಸ್ಥೆ ಸೇರಬೇಕು ಎಂದು ತಿಳಿಸಿದರು.
ಜೆಸಿಐ ಸಂಸ್ಥೆ ಸಲ್ಲಿಸುತ್ತಿರುವ ಸೇವೆಗಳ ಬಗ್ಗೆ ಹಾಗೂ ತರಬೇತಿಗಳ ಬಗ್ಗೆ ಮಾಹಿತಿ ನೀಡಲಾಯಿತು.
ಸರ್ವ ಪೋಷಕ ಕನ್ಸಲ್ಟೆನ್ಸಿ ಪ್ರೈವೇಟ್ ಲಿಮಿಟೆಡ್ನ ಮಾಲೀಕ ಸುನೀಲ್ ನಲ್ಲೂರು ಹಾಗೂ ಉದ್ಯೋಗಿಗಳು ಉಪಸ್ಥಿತರಿದ್ದರು.
