Friday, February 6, 2026
Friday, February 6, 2026
Home Blog Page 19

ಸಂಗೀತ ರಸಿಕರನ್ನ ಗೆದ್ದ ಹಿಂದೂಸ್ತಾನಿ ಗಾಯನ ಕಾರ್ಯಕ್ರಮ

0

ಶಿವಮೊಗ್ಗ ನಗರದ ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ ಪಾಠ ಶಾಲೆಯಲ್ಲಿ ಗಾನಲಹರಿ 116ನೇ ಅಮಾವಾಸ್ಯೆಯ ಸಂಗೀತ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ರಾಜ್ಯ ಪ್ರಶಸ್ತಿ ಪುರಸ್ಕತ ಆರ್.ಬಿ. ಸಂಗಮೇಶ್ವರ ಗವಾಯಿಗಳೂ ಅಧ್ಯಕ್ಷತೆ ವಹಿಸಿದ್ದರು. ಹೊಸಮನ ಬಡಾವಣೆಯ ಶ್ರೀಮುದ್ದು ಗಣಪ ಭಜನಾ ಮಂಡಳಿಯಿಂದ ಭಜನಾ ಸೇವೆ ನಡೆಯಿತು.

ಆಶ್ರಮದ ಮಕ್ಕಳು ಪ್ರಾರ್ಥಿಸಿದರು. ಹುಬ್ಬಳ್ಳಿ ಹಿಂದೂಸ್ಥಾನಿ ಗಾಯಕ ಮಂಜುನಾಥ ಬಿ. ದೊಡ್ಡ ಮನಿ ಅವರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ರಾಜ್ಯ ಪ್ರಶಸ್ತಿ ಪುರಸ್ಕತ ರಾಮಣ್ಣ ಭಜಂತ್ರಿ, ವೀರಭದ್ರಶಾಸ್ತ್ರಿ ವೇದ ಘೋಷ, ವಿನಾಯಕ ಭಟ್ ತಬಲ, ಸಿದ್ದಣ್ಣ ಬಡಿಗೇರ್ ಹಾರ್‍ಮೋನಿಯಂ ಜೊತೆ ಸಾಥ್ ನೀಡಿದರು. ರೇವಣ್ಣ ಸಿದ್ದಯ್ಯ ಹಿರೇಮಠ ಅವರು ನಿರೂಪಿಸಿದರು.

Kote Police Station ಅಪರಿಚಿತ ಮಹಿಳೆಯ ಶವ ಪತ್ತೆ. ವಾರಸುದಾರರ ಗುರುತಿಗೆ ಸಹಕರಿಸಲು ಪೊಲೀಸ್ ಠಾಣೆ ಮನವಿ

0

Kote Police Station ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗುಂಡಪ್ಪ ಶೆಡ್ ಕಾಂಪೌAಡ್ ಬಳಿ ಜ. 03 ರಂದು ಸುಮಾರು 60 ವರ್ಷ ವಯಸ್ಸಿನ ಜಯಮ್ಮ ಎಂಬ ಮಹಿಳೆ ಅನಾರೋಗದಿಂದ ಮಲಗಿಕೊಂಡಿದ್ದು, ಸಾರ್ವಜನಿಕರ ಸಹಾಯದಿಂದ ಅಂಬುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಜ 08 ರಂದು ಮೃತಪಟ್ಟಿರುತ್ತಾರೆ. ಈಕೆಯ ವಿಳಾಸ ಅಥವಾ ವಾರಸುದಾರರ ಬಗ್ಗೆ ಯಾವುದೇ ಸುಳಿವು ದೊರಕಿರುವುದಿಲ್ಲ.
Kote Police Station ಈ ಮಹಿಳೆಯ ಚಹರೆ 5.0 ಅಡಿ ಎತ್ತರ, ಕೋಲುಮುಖ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಎರಡೂ ಕೈಗಳ ಒಳಭಾಗದಲ್ಲಿ ಹೂವಿನ ಚಿತ್ರವುಳ್ಳ ಹಚ್ಚೆ ಇರುತ್ತದೆ ಮೃತಳ ಮೈಮೇಲೆ ಆಕಾಶ ನೀಲಿ ಬಣ್ಣದ ಸೀರೆ ಮತ್ತು ರವಿಕೆ ಧರಿಸಿರುತ್ತಾಳೆ.ಈ ಮೃತ ಮಹಿಳೆಯ ವಾರಸುದಾರರ ಬಗ್ಗೆ ಸುಳಿವು ದೊರತಲ್ಲಿ ಕೋಟೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.

MESCOM ಜನವರಿ 22. ಶಿವಮೊಗ್ಗದ ಸರ್.ಎಂ.ವಿ‌.ರಸ್ತೆ ಸುತ್ತಮುತ್ತ ವಿದ್ಯುತ್ ನಿಲುಗಡೆ

0

MESCOM ಶಿವಮೊಗ್ಗ ನಗರ ಉಪವಿಭಾಗ-1ರ ಘಟಕ 2 ರ ವ್ಯಾಪ್ತಿಯಲ್ಲಿ ಜ. 22 ರಂದು ಬೆಳಗ್ಗೆ 10.00 ರಿಂದ ಮ 2.00 ರವರೆಗೆ ವೀರಭದ್ರೇಶ್ವರ ಟಾಕೀಸ್ ನಿಂದ ಡಿ.ವಿ.ಎಸ್ ಕಾಲೇಜ್ ವರೆಗೆ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಂಡಿದ್ದು, ಸರ್ ಎಂ.ವಿ.ರಸ್ತೆ, ಲೂರ್ದುನಗರ, ಕಾನ್ವೆಂಟ್ ರಸ್ತೆ, ವೀರಭದ್ರೇಶ್ವರ ಟಾಕೀಸ್ ಹತ್ತಿರ, ಬಿ.ಹೆಚ್.ರಸ್ತೆ, ಗಾಂಧಿ ಪಾರ್ಕ್ ಮತ್ತು ಮಹಾನಗರ ಪಾಲಿಕೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

Bhadra Reservoir ಭದ್ರಾ ಜಲಾಶಯದಿಂದ ‌ನೀರು ಬಿಡುಗಡೆ, ಸಾರ್ವಜನಿಕರು ಜಾಗ್ರತೆ ವಹಿಸಲು ಇಲಾಖೆ ಪ್ರಕಟಣೆ

0

Bhadra Reservoir 2025-26ನೇ ಸಾಲಿನಲ್ಲಿ ಭದ್ರಾ ಜಲಾಶಯದಿಂದ ನದಿಯ ಮೂಲಕ ವಿಜಯನಗರ ಜಿಲ್ಲೆ, ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ತುಂಗ-ಭದ್ರಾ ನದಿಗೆ ಜ.20 ರಿಂದ ಜ. 30 ಪ್ರತಿ ದಿನ 500 ಕ್ಯೂಸೆಕ್ಸ್ನಂತೆ ಹಾಗೂ ಜ. 31 ರಂದು 300 ಕ್ಯೂಸೆಕ್ಸ್ ಒಟ್ಟು 0.50 ಟಿ.ಎಂ.ಸಿ ನೀರನ್ನು ಹರಿಸಲಾಗುವುದು.
Bhadra Reservoir ಈ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನ ಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್‌ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ಕರ್ನಾಟಕ ನೀರಾವರಿ ನಿಗಮ, ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಅಮೋಘ ” ನರ್ತನ ಸಂಭ್ರಮ” ಆಯೋಜನೆ

0

ಶಿವಮೊಗ್ಗ ನಗರದ ಸರ್ವತೋಮುಖ ಅಭಿವೃದ್ಧಿ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಒಂದು ಸಣ್ಣ ಪ್ರಯತ್ನವನ್ನು ಮಾಡುತ್ತಿರುವ, ವಿವಿಧ ಕ್ಷೇತ್ರಗಳಲ್ಲಿನ ಯುವ ಸಮಾನ ಮನಸ್ಕರ ತಂಡವಾದ ‘ಅನವರತ ಫೌಂಡೇಶನ್’ ವತಿಯಿಂದ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

:’ನರ್ತನ ಸಂಭ್ರಮ’:
ರಾಷ್ಟ್ರಗಾಯನ ವಂದೇ ಮಾತರಂ’ಗೆ 150ನೇ ವರ್ಷದ ಸಂಭ್ರಮ ಹಾಗೂ ನಮ್ಮ ಹೆಮ್ಮೆಯ ನಾಡಗೀತೆಗೆ 100 ವರ್ಷಗಳು ಸಂದಿರುವ ಸುಸಂದರ್ಭದಲ್ಲಿ ಈ ಐತಿಹಾಸಿಕ ಘಟ್ಟಗಳನ್ನು ಸಂಭ್ರಮದಿಂದ ಆಚರಿಸಲು ನಗರದ ಹೆಸರಾಂತ ನೃತ್ಯ ತಂಡಗಳಿಂದ ‘ನರ್ತನ ಸಂಭ್ರಮ’ ಎಂಬ ವೈಭವದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ನಗರದ ಖ್ಯಾತ ನೃತ್ಯ ಗುರುಗಳ ಮಾರ್ಗದರ್ಶನದಲ್ಲಿ ಬೆಳಗಿದ ಪ್ರತಿಭೆಗಳು ಒಂದೇ ವೇದಿಕೆಯಲ್ಲಿ ತಮ್ಮ ಕಲಾ ಚಾತುರ್ಯವನ್ನು ಪ್ರದರ್ಶಿಸಲಿದ್ದಾರೆ.
ಭಾಗವಹಿಸುವ ತಂಡಗಳು-

  1. ಕಲಾರ್ಪಣ
  2. ನಟನಂ ಬಾಲ ನಾಟ್ಯ ಕೇಂದ್ರ
  3. ಪುಷ್ಪ ಪರ್ಫಾರ್ಮಿಂಗ್ ಆರ್ಟ್ಸ್
  4. ಪೆರುಮಾಳ್ ನೃತ್ಯ ಕಲಾ ಕೇಂದ್ರ
  5. ಮನು ಕಲಾ ಕೇಂದ್ರ
  6. ಮಯೂರಿ ನೃತ್ಯ ಕಲಾ ಕೇಂದ್ರ
  7. ಮಲ್ನಾಡ್ ಜನಪದ ಕಲಾತಂಡ
  8. ಶ್ರೀ ನಟರಾಜ ನೃತ್ಯ ಕಲಾನಿಕೇತನ
  9. ಸಹಚೇತನ ನಾಟ್ಯಾಲಯ

ವಿಶೇಷವಾಗಿ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕನ್ನಡ ಚಿತ್ರರಂಗದ ಖ್ಯಾತ ನಟಿಯಾದ ಶ್ರೀಮತಿ ತಾರಾ ಅವರು ನೆರವೇರಿಸಲಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯವಾಹ ಶ್ರೀ ಪಟ್ಟಾಭಿರಾಮ್ ಅವರು ಹಾಗೂ ಬೆಳ್ಳಿ ಮಂಡಲ ಹಾಗೂ ಸಿನಿಮೊಗ ತಂಡದ ಸಂಚಾಲಕರಾದ ಶ್ರೀ ವೈದ್ಯನಾಥ್ ಹೆಚ್.ಯು ಅವರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದ ಘನತೆಯನ್ನು ಹೆಚ್ಚಿಸುತ್ತಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಮ್ಮ ಫೌಂಡೇಶನ್ ನ ಗೌರವಾಧ್ಯಕ್ಷರು ಹಾಗೂ ನಗರದ ಶಾಸಕರಾದ ಶ್ರೀ ಎಸ್ ಎನ್ ಚನ್ನಬಸಪ್ಪ ಅವರು ವಹಿಸಲಿದ್ದಾರೆ.

ಗೆಜ್ಜೆ ನಾದದ ಲಯಕ್ಕೆ ಸಾಕ್ಷಿಯಾಗಲಿರುವ ಈ ಅಪೂರ್ವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಶಿವಮೊಗ್ಗದ ಕಲಾಭಿಮಾನಿಗಳು ಹಾಗೂ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ‘ಅನವರತ ಫೌಂಡೇಶನ್’ ವಿನಂತಿಸುತ್ತಿದೆ.

ಈ ಮೊದಲು,
ದಿನಾಂಕ 21.01.2026ರ ಬುಧವಾರ ಬೆಳಿಗ್ಗೆ 10.00 ಗಂಟೆಗೆ ನಗರದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗಾಗಿ ಈ ಕೆಳಗಿನ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

  • ನಮ್ಮ ಮಣ್ಣಿನ ಸೊಗಡನ್ನು ಬಿಂಬಿಸುವ ಜನಪದ ಕಲೆಯ ಆದ್ಯತೆಗಾಗಿ:
    “ಜಾನಪದ ನೃತ್ಯ ಮತ್ತು ಗಾಯನ”
  • ಅಭಿನಯ ಮತ್ತು ಕಲೆಯ ಪ್ರಕಟೀಕರಣಕ್ಕಾಗಿ: ಏಕಪಾತ್ರಾಭಿನಯ ಹಾಗೂ ಚಿತ್ರಕಲಾ ಸ್ಪರ್ಧೆಗಳು.
  • ಆಧುನಿಕ ಸಂವಹನ ಮತ್ತು ಇಂದಿನ ಪೀಳಿಗೆಯ ಆಸಕ್ತಿಯನ್ನು ಗಮನದಲ್ಲಿಟ್ಟುಕೊಂಡು : ‘ಛಾಯಾಗ್ರಹಣ’ (Photography) ಮತ್ತು ‘ರೀಲ್ಸ್’ (Reels) ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಈ ಸ್ಪರ್ಧೆಗಳಲ್ಲಿನ ಆಸಕ್ತರು ಭಾಗವಹಿಸಲು ಆನ್‌ಲೈನ್ ಮೂಲಕ ನೊಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ತಂಡವು ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಶಿವಮೊಗ್ಗದವರೇ ಆದ, ಖ್ಯಾತ ಸಾಹಿತಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಡಾ।। ಗಜಾನನ ಶರ್ಮ ಅವರು ನೆರವೇರಿಸಲಿದ್ದು, ಅವರೊಂದಿಗೆ ಸಾಮಾಜಿಕ ಕಾರ್ಯಕರ್ತರು, ಸಹ್ಯಾದ್ರಿ ವಾಣಿಜ್ಯ ಕಾಲೇಜ್ ನ ಉಪನ್ಯಾಸಕರಾದ ಶ್ರೀ ಗಿರೀಶ್ ಕಾರಂತ್ ಉಪಸ್ಥಿತರಿರುತ್ತಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರ ಹಾಗೂ ಜಿಲ್ಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಈ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ.

State Newspaper Distributors Association ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದಿಂದ ಕ್ಯಾಲೆಂಡರ್ ಬಿಡುಗಡೆ.

0

State Newspaper Distributors Association ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ (ರಿ) ಶಿವಮೊಗ್ಗ ಜಿಲ್ಲಾ ಘಟಕದ ವತಿಯೀಂದ ಸೊರಬ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ವಿತರಕ ಶರತ್ ಸ್ವಾಮಿ ನೇತೃತ್ವದಲ್ಲಿ ಕ್ಯಾಲೆಂಡರ್ ಗಳನ್ನು ಬಿಡುಗಡೆಗೊಳಿಸಲಾಯಿತು. ಪತ್ರಕರ್ತರ ಸಂಘದ ಅಧ್ಯಕ್ಷ ತೋಟಪ್ಪ ಜಿ.ಎಂ ಮಾತನಾಡಿ, ಪತ್ರಿಕಾ ವಿತರಕರು ಪತ್ರಿಕಾ ರಂಗದ ಅವಿಭಾಗ್ಯ ಅಂಗವಾಗಿದ್ದು, ಪತ್ರಿಕೆ ಮುದ್ರಣದ ಶ್ರಮಕ್ಕೆ ಪ್ರತಿಫಲ ಸಿಗಲು ವಿತರಕರ ಪಾತ್ರ ಮಹತ್ತರವಾಗಿದೆ ಎಂದರು.
State Newspaper Distributors Association ಮಾಜಿ ಅಧ್ಯಕ್ಷ ಬಣ್ಣದಬಾಬು ಮಾತನಾಡಿ, ಜನರಿಗೆ ಮಳೆ, ಚಳಿ, ಬಿಸಿಲನ್ನು ಲೆಕ್ಕಿಸದೇ ಮನೆಮನೆಗೆ ಪತ್ರಿಕೆ ಮುಟ್ಟಿಸುವ ಕಾರ್ಯ ಅನನ್ಯ ಎಂದರು. ಪತ್ರಿಕಾ ವಿತರಕ ರಘುನಾಥ ಬಾಪಟ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶರತ್ ಸ್ವಾಮಿ, ರಾಘವೇಂದ್ರ ಬಾಪಟ್, ನೋಪಿಶಂಕರ, ರವಿ ಕಲ್ಲಂಬಿ, ಚಂದ್ರಪ್ಪ, ಹೆಚ್.ಕೆ.ಬಿ ಸ್ವಾಮಿ,ಜೆ.ಎಸ್ ಚಿದಾನಂದಗೌಡ ಮತ್ತಿತರರಿದ್ದರು.

Shivamogga Police 33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪತ್ತೆ‌ಮಾಡಿದ ಶಿವಮೊಗ್ಗ ಪೊಲೀಸ್ ಇಲಾಖೆ.

0

Shivamogga Police ಸಾಗರ ಪೇಟೆ ಪೊಲೀಸ್ ಠಾಣಾ ಗುನ್ನೆ ಸಂಖ್ಯೆ 29/1985 ಕಲಂ 448, 323 ಐ.ಪಿ.ಸಿ ಪ್ರಕರಣದ ಆರೋಪಿ ಕೆ. ಪಿ. ಮಯಡ್ಡಿ, ( 1985 ರಲ್ಲಿ 18 ವರ್ಷ, ಪ್ರಸ್ತುತ 60 ವರ್ಷ) ವಾಸ ತೊಬ್ಬಟ್ಟು ಗ್ರಾಮ, ಮಂಗಳೂರು ಈತನು ಘನ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ 33 ವರ್ಷಗಳಿಂದ ತಲೆ ಮರೆಸಿಕೊಂಡಿದ್ದು, ಮಾನ್ಯ PCJ & JMFC ನ್ಯಾಯಾಲಯ ಸಾಗರದ LPR ಪ್ರಕರಣ 20/1993 C.C. ಸಂಖ್ಯೆ 350/89 ರಲ್ಲಿ ಆರೋಪಿ ವಿರುದ್ಧ ಘನ ನ್ಯಾಯಾಲಯವು ದಸ್ತಗಿರಿ ವಾರೆಂಟ್ ಹೊರಡಿಸಿರುತ್ತದೆ. ಸದರಿ ಆರೋಪಿತನ ಪತ್ತೆ ಬಗ್ಗೆ ಡಿ.ವೈ.ಎಸ್.ಪಿ ಸಾಗರ ಪೊಲೀಸ್ ಉಪ ವಿಭಾಗ ರವರ ನೇತೃತ್ವದಲ್ಲಿ, ಸಾಗರ ಪೇಟೆ ಪೊಲೀಸ್ Shivamogga Police ಠಾಣೆಯ ASI ಪರಶುರಾಮ್, HC ರತ್ನಾಕರ, HC ತಾರಾನಾಥ HC ಶೇಕ್ ಫೈರೋಜ್ ಅಹಮದ್, PC ವಿಶ್ವಾನಾಥ, PC ರಾಮನ ಗೌಡ ಪಾಟೀಲ್ ಮತ್ತು PC ಜಗದೀಶ್ ರವರನ್ನು ಒಳಗೊಂಡ ತಂಡವನ್ನು ರಚಿಸಲಾಗಿದ್ದು, ಸದರಿ ತಂಡವು ಆರೋಪಿ ಕೆ. ಪಿ. ಮಯಡ್ಡಿಯನ್ನು ಪತ್ತೆ ಮಾಡಿ, ಮಾನ್ಯ ನ್ಯಾಯಾಲಯದ ಮುಂದೆ ಹಾಜರ್ ಪಡಿಸಿದ್ದು, ಆರೋಪಿ ತಪ್ಪು ಒಪ್ಪಿಕೊಂಡು ದಂಡ ಕಟ್ಟಿದ ಕಾರಣ ಘನ ನ್ಯಾಯಾಲಯವು ಪ್ರಕರಣವನ್ನು ಮುಕ್ತಾಯ ಮಾಡಿರುತ್ತದೆ.

Shri Saraswati Music Institute “ವೀಣಾ ತ್ರಿಶತೋತ್ಸವ”ದಲ್ಲಿ ವೀಣೆಗಳ‌ ಝೇಂಕಾರ ಕೇಳಲು ರೋಮಾಂಚಕ ಅನುಭವ- ಬಿ.ವೈ.ರಾಘವೇಂದ್ರ.

0

Shri Saraswati Music Institute ಶಿವಮೊಗ್ಗದ ಶ್ರೀ ಸರಸ್ವತಿ ಸಂಗೀತ ವಿದ್ಯಾಲಯದ ರಜತ ಮಹೋತ್ಸವದ ಅಂಗವಾಗಿ, ಸುಶ್ರಾವ್ಯ ಸಂಗೀತ ವಿದ್ಯಾಲಯ ಹಾಗೂ ಶ್ರೀ ಸಾಯಿಶಕ್ತಿ ಸಂಗೀತ ವಿದ್ಯಾಲಯಗಳ ಸಹಯೋಗದೊಂದಿಗೆ ‘ವೀಣಾ ತ್ರಿಶತೋತ್ಸವ’ ಕಾರ್ಯಕ್ರಮವನ್ನು
ಆಯೋಜಿಸಲಾಗಿತ್ತು

ಮೈಸೂರು ರಾಜವಂಶಸ್ಥರು ಹಾಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರೊಂದಿಗೆ ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸಿದರು.

ಒಂದೇ ವೇದಿಕೆಯಲ್ಲಿ ‘301 ವೀಣಾ ನಾದ ಝೇಂಕಾರ’ ಮೊಳಗಿದ್ದು ನಿಜಕ್ಕೂ ರೋಮಾಂಚನಕಾರಿ ಮತ್ತು ಕಿವಿಗೆ ಇಂಪಾದ ಅನುಭವವಾಗಿತ್ತು. ನಮ್ಮ ಶಾಸ್ತ್ರೀಯ ಸಂಗೀತ ಪರಂಪರೆಯನ್ನು ಉಳಿಸಿ, ಬೆಳೆಸುತ್ತಿರುವ ಈ ಸಂಸ್ಥೆಗಳ ಕಾರ್ಯ ಶ್ಲಾಘನೀಯ.

Shri Saraswati Music Institute ಈ ಸಂದರ್ಭದಲ್ಲಿ ಶ್ರೀ ಡಿ. ಎಸ್. ಅರುಣ್ ವಿಧಾನ ಪರಿಷತ್ ಸದಸ್ಯರು, ಡಾ. ಧನಂಜಯ್ ಸರ್ಜಿ ವಿಧಾನ ಪರಿಷತ್ ಸದಸ್ಯರು, ಶಿವಮೊಗ್ಗ ನಗರದ ಶಾಸಕರಾದ ಎಸ್. ಏನ್ ಚೆನ್ನಬಸಪ್ಪ, ಶ್ರೀ ಕೆ. ಬಿ. ಪ್ರಸನ್ನ ಕುಮಾರ್ ಮಾಜಿ ಶಾಸಕರು, ಶ್ರೀಮತಿ ರೇವತಿ ಕಾಮತ್, ಶ್ರೀ ಉಮೇಶ್ ಹಾಲಾಡಿ ಸೇರಿದಂತೆ ವೇದಿಕೆಯಲ್ಲಿ ಅನೇಕ ಗಣ್ಯರು ಉಪಸ್ಥಿತರಿದ್ದರು.

ಮಾರಿ ಜಾತ್ರೆ ಅಂಗವಾಗಿ ” ಟಗರು ಕಾಳಗ” ಪೋಸ್ಟರ್ ಬಿಡುಗಡೆ ಸಮಾರಂಭ ಆಯೋಜನೆ

0

ನಮ್ಮೂರ ಬಳಗ, ಶಿವಮೊಗ್ಗ ವತಿಯಿಂದ, ಪ್ರತಿಷ್ಠಿತ ‘ಕೋಟೆ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ’ ಅಂಗವಾಗಿ ಆಯೋಜಿಸಿರುವ “ರಾಷ್ಟ್ರಮಟ್ಟದ ಬಾರಿ ಟಗರು ಕಾಳಗ” ದ ಪೋಸ್ಟರ್ ಬಿಡುಗಡೆ ಹಾಗೂ ಸಾಮಾಜಿಕ ಜಾಲತಾಣದ ಮುಖಪುಟ ಚಾಲನೆ ಕಾರ್ಯಕ್ರಮವನ್ನು ದಿನಾಂಕ: 19 -1- 2026ನೇ ಸೋಮವಾರ , ನಾಳೆ ಬೆಳಗ್ಗೆ 11: 30 ಕ್ಕೆ ಕೋಟೆ ಶ್ರೀ ಮಾರಿಕಾಂಬಾ ದೇವಾಲಯದಲ್ಲಿ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮವನ್ನು ಕೋಟೆ ಮಾರಿಕಾಂಬ ದೇವಾಲಯ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಚಾಲನೆ ನೀಡುವರು ತಾವುಗಳು ಆಗಮಿಸಬೇಕಾಗಿ ವಿನಂತಿಸಲಾಗಿದೆ.

MESCOM ಜನವರಿ 21. ಮಾಚೇನಹಳ್ಳಿ ಸುತ್ತಮುತ್ತ ವಿದ್ಯುತ್ ನಿಲುಗಡೆ. ಮೆಸ್ಕಾಂ ಪ್ರಕಟಣೆ

0

MESCOM ಶಿವಮೊಗ್ಗ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿದ್ದು, ಜ. 21 ರಂದು ಬೆಳಗ್ಗೆ 9.30 ರಿಂದ ಸಂಜೆ 6.00 ರವರೆಗೆ ಮಾಚೇನಹಳ್ಳಿ, ಬಿದರೆ, ಬಿದರೆ ಗೇಟ್, ನಿದಿಗೆ, ಓತಿಘಟ್ಟ, ಹಾರೇಕಟ್ಟೆ, ಸೋಗಾನೆ, ಜನತಾ ಕಾಲೋನಿ, ಶಿವಣ್ಣ ಕ್ಯಾಂಪ್, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಹೊನ್ನವಿಲೆ, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.