Department of Labour ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕಾಯ್ದೆ 2013 ಅನುಷ್ಟಾನಕ್ಕಾಗಿ ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯವು ನೀಡಿರುವ ನಿರ್ದೇಶನದಂತೆ ಆಂತರಿಕ ದೂರು ಸಮಿತಿಯನ್ನು ರಚಿಸದೇ ಇರುವ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಕಾರ್ಖಾನೆಗಳ ಮಾಲೀಕರು ಕೂಡಲೇ ಆಂತರಿಕ ದೂರು ಸಮಿತಿಯನ್ನು ರಚನೆ ಮಾಡಿ, ಅದರ ಆದೇಶ ಪ್ರತಿಯನ್ನು ಜಿಲ್ಲಾಧಿಕಾರಿಗಳು ಹಾಗೂ ಕಾರ್ಮಿಕ ಅಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾ ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.
Department of Labour 2013 ರ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ ಮತ್ತು ನಿವಾರಿಸುವಿಕೆ )ಕಾಯ್ದೆಯ ಅನುಷ್ಠನಕ್ಕಾಗಿ ಮಾನ್ಯ ಸರ್ವೊಚ್ಛ ನ್ಯಾಯಾಲಯವು ದಿ:12-08-2025 ರಂದು ನೀಡಿರುವ ನಿರ್ದೇಶನಗಳನ್ವಯ ಕಾಯ್ದೆಯು ಅನ್ವಯಿಸುವ 10 ಮತ್ತು 10 ಕ್ಕಿಂತ ಹೆಚ್ಚಿನ ಕಾರ್ಮಿಕರನ್ನು ಹೊಂದಿರುವ ಪ್ರತಿ ಸಂಸ್ಥೆಯ ಮಾಲೀಕರು ತಮ್ಮ ಸಂಸ್ಥೆಯಲ್ಲಿ ಆಂತರಿಕ ದೂರು ಸಮಿತಿಯನ್ನು ರಚಿಸದಿರುವುದು ಕಂಡುಬಂದಿರುತ್ತದೆ. ಹಾಗಾಗಿ ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯವು ನೀಡಿರುವ ನಿರ್ದೇಶನದಂತೆ ಆಂತರಿಕ ದೂರು ಸಮಿತಿಯನ್ನು ರಚಿಸದೇ ಇರುವ ಅಂಗಡಿ, ವಾಣಿಜ್ಯ ಸಂಸ್ಥೆಗಳು ಮತ್ತು ಕಾರ್ಖಾನೆಗಳ ಮಾಲೀಕರು ಕೂಡಲೇ ಆಂತರಿಕ ದೂರು ಸಮಿತಿಯನ್ನು ರಚನೆ ಮಾಡಿ, ಅದರ ಆದೇಶದ ಪ್ರತಿಯನ್ನು ಜಿಲ್ಲಾಧಿಕಾರಿಗಳು ಹಾಗೂ ಕಾರ್ಮಿಕ ಅಧಿಕಾರಿಗಳ ಕಚೇರಿ 2 ನೇ ಮಹಡಿ ವಾಣಿಜ್ಯ ಸಂಕೀರ್ಣ, ಸೂಡಾ ಕಾಂಪ್ಲೆಕ್ಸ್, ಪೊಲೀಸ್ ಚೌಕಿ ವಿನೋಬನಗರ ಇಲ್ಲಿಗೆ ಸಲ್ಲಿಸಬೇಕೆಂದು ತಿಳಿಸಿದ್ದಾರೆ.
Department of Labour ಆಂತರಿಕ ದೂರು ಸಮಿತಿ ರಚಿಸಿ, ಪ್ರತಿಯನ್ನು ಶೀಘ್ರ ಸಲ್ಲಿಸಲು ಸೂಚನೆ
Backward Classes Welfare Department ಅಲೆಮಾರಿ/ ಅರೆ ಅಲೆಮಾರಿ ಜನಾಂಗದವರಿಗೆ ವಿವಿಧ ಅಭಿವೃದ್ಧಿ ಕಾರ್ಯಕ್ರಮ ಮಾಹಿತಿ
Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರಿಗೆ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ.
5 ರಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಲ್ಲಿ ಹಾಗೂ 10 ನೇ ತರಗತಿ ನಂತರದ ಕೋರ್ಸ್/ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ನೀಡಲು ಅವಕಾಶವನ್ನು ಕಲ್ಪಿಸಲಾಗಿದೆ.
Backward Classes Welfare Department ಅಲೆಮಾರಿ/ಅರೆ ಅಲೆಮಾರಿ ಜನಾಂಗದವರು ಹೆಚ್ಚಾಗಿ ವಾಸಿಸುವ ಕಾಲೋನಿಗಳಲ್ಲಿ ಚರಂಡಿ ಹಾಗೂ ಸಿಸಿ ರಸ್ತೆ ಕಾಮಗಾರಿ, ಮೂಲಭೂತ ಸೌಕರ್ಯಗಳು, ವಸತಿ ರಹಿತರಿಗೆ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ಮೂಲಕ ಮನೆಗಳ ನಿರ್ಮಾಣ ಮಾಡಲು ರೂ.1.20 ಲಕ್ಷಗಳ ಸಹಾಯಧನ, 1 ರಿಂದ 10 ನೇ ತರಗತಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ. 2000 ಹಾಗೂ ಮೆಟ್ರಿಕ್ ನಂತರದ ಐಟಿಐ, ಪಿಯುಸಿ, ಡಿಪ್ಲೊಮಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.3000, ಪದವಿ/ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ರೂ.4000 ಹಾಗೂ ತಾಂತ್ರಿಕ ವೃತ್ತಿಪರ ಕೊರ್ಸ್ಗಳಿಗೆ ರೂ. 5000 ವಿಶೇಷ ಸಹಾಯ ಧನ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ:08182-222129 ಗೆ ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
National Service Scheme ಆಗಸ್ಟ್ 29 ರಿಂದ 31 ವರೆಗೆ ಬಂಡೀಪುರದಿಂದ ಬೀದರ್ ವರೆಗೆ ಬೈಕ್ ಜಾಥಾ
National Service Scheme ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ಆಚರಿಸುತ್ತಿರುವ ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ, 2025ರ ಆಗಸ್ಟ್ 29 ರಿಂದ 31ರವರೆಗೆ ಬಂಡೀಪುರದಿಂದ ಬೀದರ ವರೆಗೆ 3 ದಿನಗಳ ಬೈಕ್ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮದ್ಯಪಾನ ಮತ್ತು ಮಾದಕ ವಸ್ತುಗಳ ದುರುಪಯೋಗದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರೇರಣೆ ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ರಾಜ್ಯ ಸರ್ಕಾರದ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ನವೀನರಾಜ್ಸಿಂಗ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅರಣ್ಯ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಮತ್ತು ಎನ್.ಸಿ.ಸಿ. ಸಹಯೋಗದೊಂದಿಗೆ ಜಾಥಾ ಆಯೋಜಿಸಲಾಗುತ್ತಿದೆ. ಸಾರ್ವಜನಿಕರಿಂದ ಆಯ್ಕೆಯಾದ 20 ಬೈಕ್ ಸವಾರರು ಭಾಗವಹಿಸಲಿದ್ದಾರೆ. ಈ ಜಾಥಾ ಕಾರ್ಯಕ್ರಮವು ಮಾರ್ಗದುದ್ದಕ್ಕೂ ರಾಜ್ಯದ ಪ್ರಮುಖ ಜಿಲ್ಲೆಗಳ ಮೂಲಕ ಸಾಗುತ್ತಾ ಶಾಲೆಗಳು, ಕಾಲೇಜುಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಿದೆ.
ಈ ಬೃಹತ್ ಅಭಿಯಾನವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
ಸರ್ಕಾರದ ಪ್ರಧಾನ ಕಾರ್ಯದರ್ಶಿ ನವೀನರಾಜ್ ಸಿಂಗ್,ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ಸರ್ಕಾರದ ಪ್ರಧಾನ ಕಾರ್ಯದರ್ಶಿ (ಅರಣ್ಯ) ಮನೋಜಕುಮಾರ್,
ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಅಭಿವೃದ್ಧಿ) ಆರ್.ರವಿಶಂಕರ್,ಬಂಡೀಪುರ ಹುಲಿ ಮೀಸಲು ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ನಿರ್ದೇಶಕ ಎಸ್.ಪ್ರಭಾಕರನ್,
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಹಾಗೂ ಇತರ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಗಣ್ಯರು ರೂಪಿಸಿದ್ದಾರೆ.
ದೇಶಾದ್ಯಂತ 1 ಲಕ್ಷ ಕಿಲೋಮೀಟರುಗಳಿಗೂ ಹೆಚ್ಚು ಪ್ರಯಾಣವನ್ನು ಸೈಕ್ಲಿಂಗ್ನಲ್ಲಿ ಕ್ರಮಿಸಿ ಅಪ್ರತಿಮ ಸಾಧನೆ ಮಾಡಿರುವ ರೈಡರ್ ನಂದಿನಿ ಮಿಥುನ್ ಈ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವುದು ವಿಶೇಷವಾಗಿದೆ. ಅವರು ತಮ್ಮ ಅಸಾಧಾರಣ ಅನುಭವಗಳು ಮತ್ತು ಬದ್ಧತೆಯಿಂದ ಸಾಮಾಜಿಕ ಉದ್ದೇಶಗಳ ಕಡೆಗೆ ಯುವಕರನ್ನು ಪ್ರೇರೇಪಿಸಲಿದ್ದಾರೆ.
National Service Scheme ಈ ಗಣ್ಯರು ಶಾಲೆಗಳು, ಕಾಲೇಜುಗಳು, ಮತ್ತು ಸಾರ್ವಜನಿಕ ವೇದಿಕೆಗಳಲ್ಲಿ ಭಾಗವಹಿಸಿ, ಯುವಜನತೆಗೆ ಉದ್ದೇಶಿತ ಜಾಗೃತಿ ಭಾಷಣಗಳು ಮತ್ತು ಸಂದೇಶಗಳನ್ನು ನೀಡಲಿದ್ದಾರೆ.
ಕರ್ನಾಟಕ ಸರ್ಕಾರವು ಈ ಜಾಥಾ ಕಾರ್ಯಕ್ರಮದ ಮೂಲಕ ಸಾರ್ವಜನಿಕರಿಗೆ ಮಾದಕ ದ್ರವ್ಯ ಮುಕ್ತ ಹಾಗೂ ಆರೋಗ್ಯಕರ ಸಮಾಜವನ್ನು ಸೃಷ್ಟಿಸುವ ಪ್ರಯತ್ನವಾಗಿ ಹಮ್ಮಿಕೊಳ್ಳುತ್ತಿದೆ.
Information & Public Relations Department ಶಿವಮೊಗ್ಗ ವಾರ್ತಾ & ಸಾರ್ವಜನಿಕ ಸಂಪರ್ಕ ಇಲಾಖೆ ಹಿ.ಸಹಾಯಕ ನಿರ್ದೇಶಕರಾಗಿ ಧನಂಜಯ
Information & Public Relations Department ಶಿವಮೊಗ್ಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯ ನಿರ್ದೇಶಕರಾಗಿ ಧನಂಜಯ ಇವರು ಮಂಗಳವಾರ ಅಧಿಕಾರ ಸ್ವೀಕರಿಸಿದ್ದಾರೆ.
ಇವರಿಗೆ ಸಂಬಂಧಿಸಿದ ಸರ್ಕಾರಿ ಹಾಗೂ ಅರೆ ಸರ್ಕಾರಿ ಪತ್ರ ವ್ಯವಹಾರವನ್ನು ಇವರ ಹೆಸರಿನಲ್ಲಿ ಹಾಗೂ ಪದನಾಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸರ್.ಎಂ.ವಿ ರಸ್ತೆ ಶಿವಮೊಗ್ಗ ಈ ವಿಳಾಸದಲ್ಲಿ ಪತ್ರ ವ್ಯವಹರಿಸಬಹುದೆಂದು ಅವರು ತಿಳಿಸಿದ್ದಾರೆ.
Department of Empowerment of Persons with Disabilities and Senior Citizens 2025-26 ನೇ ಸಾಲಿಗೆ ಫಲಾನುಭವಿ ಆಧಾರಿತ ಯೋಜನೆಗಳ ಲಾಭ ಪಡೆಯಲು ವಿಕಲಚೇತನರಿಂದ ಆನ್ಲೈನ್ ಅರ್ಜಿ ಆಹ್ವಾನ
Department of Empowerment of Persons with Disabilities and Senior Citizens 2025-26 ನೇ ಸಾಲಿಗೆ ವಿಕಲಚೇತನರ ಹಾಗೂ ಹಿರಿಯ ನಾಗರೀಕ ಸಬಲೀಕರಣ ಇಲಾಖೆಯಡಿ 13 ಫಲಾನುಭವಿ ಆಧಾರಿತ ಯೋಜನೆಗಳನ್ನು ಸುವಿಧಾ ಯೋಜನೆ ಇವರಿಂದ ಡಿಬಿಟಿ ತಂತ್ರಾಂಶದಡಿ ನೀಡಲು ವಿಕಲಚೇತನರಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆ.30 ಕೊನೆಯ ದಿನಾಂಕವಾಗಿದ್ದು, ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಸೇವಾಸಿಂಧು ಪೊರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.
ಆಧಾರ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ನಿರುದ್ಯೋಗ ಭತ್ಯೆ, ಶಿಶುಪಾಲನಾ ಭತ್ಯೆ, ಮರಣ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್, ದೃಷ್ಟಿ ದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ ಕಿಟ್ ಯೋಜನೆ, ದೈಹಿಕ ವಿಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರವಾಹನ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿಚಾಲಿತ ವೀಲ್ಚೇರ್ ಯೋಜನೆಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.
Department of Empowerment of Persons with Disabilities and Senior Citizens ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಎಲ್ಲಾ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ಆಯಾ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು/ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರ ಪುನರ್ವಸತಿ ಕಾರ್ಯಕರ್ತರುಗಳಿಗೆ ನೀಡಬೇಕು.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ-998015110/8746997896, ಭದ್ರಾವತಿ-7899137243, ಶಿಕಾರಿಪುರ-9741161346, ತೀರ್ಥಹಳ್ಳಿ-9480767638, ಸಾಗರ-9535247754,ಸೊರಬ-9110493122, ಹೊಸನಗರ-9731922693 ಗೆ ಸಂಪರ್ಕಿಸಬಹುದೆಂದು ಜಿಲ್ಲಾ ವಿಕಚೇತನರ ಹಾಗೂ ಹಿರಿಯ ನಾಗರೀಕ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ
District Employment Exchange Shivamogga ಆಗಸ್ಟ್ 29. ಶಿವಮೊಗ್ಗದ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಮೂಲಕ ನೌಕರಿ ಪಡೆಯಲು ಅವಕಾಶ
District Employment Exchange Shivamogga ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರ ವತಿಯಿಂದ ಆ.29 ರಂದು ಬೆಳಿಗ್ಗೆ 10 ಗಂಟೆಗೆ ಸಾಗರ ರಸ್ತೆಯಲ್ಲಿರುವ ಪಂಪಾನಗರದ ಗುತ್ಯಪ್ಪ ಕಾಲೋನಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಯಲ್ಲಿ ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ.
ನೇರ ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವಿಯಲ್ಲಿ ತೆರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು.
District Employment Exchange Shivamogga ಸಂದರ್ಶನದಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ತಮ್ಮ ಸ್ವವಿವರ ಹಾಗೂ ಆಧಾರ್ ಕಾರ್ಡ್ ತರಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂ.ಸಂ: 08182-255293, 9380663606 ಗೆ ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
Klive Special Article ಶ್ರೀಗಣೇಶ ಸ್ಮರಣೆ
ಲೇ: ಎನ್.ಜಯಭೀಮ ಜೊಯ್ಸ್.ಶಿವಮೊಗ್ಗ
Klive Special Article ಶ್ರೀಗಣೇಶ ಸ್ಮರಣೆ ಶ್ರೀಹರಿಕಥಾಮೃತಸಾರ ಎನ್ನುವ ಶ್ರೇಷ್ಠ ಗ್ರಂಥವನ್ನು
ಶ್ರೀಜಗನ್ನಾಥದಾಸರು ತಮ್ಮ ಇಳಿ ವಯಸ್ಸಿನಲ್ಲಿ ಬರೆದಿದ್ದಾರೆಂದು ತಿಳಿದು ಬರುತ್ತದೆ.ಈ ಗ್ರಂಥವು ಒಟ್ಟು 32,ಸಂಧಿಗಳನ್ನು ಹೊಂದಿದೆ.
ಜಗನ್ನಾಥದಾಸರು ಮೊದಲನೆಯ ಸಂಧಿಯಾದ ಮಂಗಳಾಚರಣ ಸಂಧಿಯಿಂದ ಪ್ರಾರಂಭವಾಗಿ 27ಸಂಧಿಗಳನ್ನು ಪೂರೈಸುತ್ತಾರೆ.ಮುಂದೆ28ನೇ ಸಂಧಿಯನ್ನು ಬರೆಯಲು ಆಗುವುದೇ ಇಲ್ಲ.ಅವರು ಯೋಚನೆ ಮಾಡಿ ತಮ್ಮ ಗುರುಗಳ ಬಳಿ ಕೇಳುವುದೆಂದು ಶ್ರೀಗೋಪಾಲದಾಸರ ಹತ್ತಿರ ಬರುತ್ತಾರೆ.ವಿಷಯ ತಿಳಿದ ಗುರುಗಳು ನೀವು ಗಣಪತಿಯನ್ನೇ ಮರೆತು ಬಿಟ್ಟಿದ್ದೀರಿ,ಅದಕ್ಕೆ ನಿಮ್ಮ ಹರಿಕಥಾಮೃತಸಾರದ ಬರವಣಿಗೆ ಮುಂದುವರೆಯುತ್ತಿಲ್ಲ ಎಂದು ಹೇಳಿ ಮುಂದಿನ ಸಂಧಿಯನ್ನು ಗಣಪತಿಯ ಹೆಸರಿನಲ್ಲಿ ಬರೆಯಿರಿ ಎಂದು ಸೂಚಿಸುತ್ತಾರೆ.ಜಗನ್ನಾಥದಾಸರು 28ನೇ ಸಂಧಿಯನ್ನು “ವಿಘ್ನೇಶ್ವರ ಸ್ತೋತ್ರ ಸಂಧಿ”ಎಂದು ಗಣಪತಿಗೆ ಅರ್ಪಣೆ ಮಾಡುತ್ತಾರೆ.ಮುಂದೆ ಬರವಣಿಗೆ 32ಸಂಧಿಯವರೆಗೂ ಮುಂದುವರೆಯುತ್ತದೆ.
ಅಂದರೆ ಇದರಿಂದ ತಿಳಿಯುವುದೇನೆಂದರೆ ಯಾವುದೇ
Klive Special Article ಶ್ರೀಗಣೇಶ ಸ್ಮರಣೆ ಶುಭ ಕಾರ್ಯವನ್ನು ಆರಂಭಿಸುವ ಮೊದಲು ವಿಘ್ನೇಶ್ವರನನ್ನು ಪೂಜಿಸಿ ಕೆಲಸ ಪ್ರಾರಂಭ ಮಾಡಬೇಕೆಂಬುದು ತಿಳಿಯುತ್ತದೆ.
ಯಾವುದೇ ಹವನ,ಹೋಮ,ಮಂಗಳಕಾರ್ಯಗಳನ್ನು
ಪ್ರಾರಂಭಿಸುವ ಮೊದಲು ಗಣಪತಿಯನ್ನು ಪೂಜಿಸಿ,
ಹಿಡಿದ ಶುಭಕಾರ್ಯಗಳನ್ನು ನಿರ್ವಿಘ್ನವಾಗಿ ನೆರವೇರಿಸುವಂತೆ ಪ್ರಾರ್ಥಿಸುವುದು ರೂಢಿಯಲ್ಲಿದೆ.
ಇಂತಹ ವಿಘ್ನ ನಿವಾರಕನಾದ ವಿಘ್ನೇಶ್ವರನನ್ನು ನಾವೂ ಭಕ್ತಿಯಿಂದ ಪೂಜಿಸಿ ಸ್ವಾಮಿಯ ಅನುಗ್ರಹ ಪಡೆಯೋಣ.
Mr. K.C. Veerendra ಜನಪ್ರತಿಧಿಗಳೋ? ಧನ ಪ್ರತಿನಿಧಿಗಳೋ?
Mr. K.C. Veerendra ಚಿತ್ರದುರ್ಗದ ಶಾಸಕ ಶ್ರೀಕೆ.ಸಿ.ವೀರೆಂದ್ರ ಪಪ್ಪಿ ಈಗ ಸುದ್ದಿಯಲ್ಲಿದ್ದಾರೆ.
ಅದೂ ಭರ್ಜರಿ “ಇಡಿ ” ದಾಳಿಗೆ ಸಿಲುಕಿದ ಭಾರಿ ಮಿಕ ಆಗಿದ್ದಾರೆ. ಶಾಸಕರ ಮೇಲಿನ ದಾಳಿ ಇಂದು ಹೊಸದಲ್ಲ.
ನಮ್ಮಿಂದ ಆರಿಸಿ ಬಂದ ಜನಪ್ರತಿನಿಧಿಗಳು , ಚುನಾವಣೆಗೆ ಮುಂಚೆಯೇ ಕೆಲವರು ಹಣದ ಥೈಲಿ ಹಿಡಿದೇ ರಾಜಕೀಯ ಪಕ್ಷಗಳ ಬಾಗಿಲು ತಟ್ಟುತ್ತಾರೆ.
ಅನಿವಾರ್ಯ ಪಕ್ಷಗಳು ಇಡುಗಂಟು ಸ್ವೀಕರಿಸಿ ಸ್ಪರ್ಧೆಗೆ ಟಿಕೆಟ್ ನೀಡುತ್ತವೆ. ಇದು ಎಲ್ಲ ರಾಜಕೀಯ ಪಕ್ಷಗಳ ಸಾಮಾನ್ಯ ನಡವಳಿಕೆ.
ಜೂಜು ಅಡ್ಡೆ ( ಕ್ಯಾಸಿನೊ) ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ. ಈ ವ್ಯವಹಾರದ ₹12 ಕೋಟಿ ನಗದು ಪತ್ತೆಯಾಗಿದೆ. ಗ್ಯಾರಂಟಿಗಾಗಿ ಅವರದೇ ಪಕ್ಷ ಕೋಟಿಗಟ್ಟಲೆ ಖರ್ಚು ಮಾಡುತ್ತಿದೆ. ಈ ಶಾಸಕರ ಬಳಿಯ ಹಣದಿಂದ ಇಡೀ ಚಿತ್ರದುರ್ಗ ತಾಲ್ಲೂಕನ್ನೇ ಉದ್ಧಾರ ಮಾಡಬಹುದು. ಇನ್ನು ಆಭರಣಗಳಂತೂ ಆರು ಕೋಟಿ ರೂ ಮೌಲ್ಯ.
Mr. K.C. Veerendra ಸಂಪಾದನೆ ಅವರವರ ಸಾಮರ್ಥ್ಯಕ್ಕೆ ಸೇರಿದೆ. ಆದರೆ ಜನಪ್ರತಿನಿಧಿಗಳಾಗಿ ಐಷಾರಾಮಿಗಳಾಗಿದ್ದರೆ
ಜನಮನದಲ್ಲಿ ನಿಲ್ಲುತ್ತಾರೆಯೆ? . ಸರಳತೆ, ಪ್ರಾಮಾಣಿಕತೆ, ಮತ್ತು ಉಪಕಾರಿ ಮನೋಭಾವಕ್ಕೆ ಅವರಲ್ಲಿ ಆದ್ಯತೆ ಸಿಗುತ್ತದೆ ಎಂಬುದು ಅನುಮಾನಾಸ್ಪದ ವಿಚಾರ.
Rotary Club Shimoga ರೋಟರಿ ಕ್ಲಬ್ ಶಿವಮೊಗ್ಗಒಳ್ಳೆಯ ಜೀವನ ಶೈಲಿಯಿಂದ ಉತ್ತಮ ಆರೋಗ್ಯ-ಪ್ರಕಾಶ ಮೂರ್ತಿ
Rotary Club Shimoga ಪ್ರತಿಯೊಬ್ಬರಿಗೂ ಆರೋಗ್ಯ ಮುಖ್ಯ. ಒಳ್ಳೆಯ ಜೀವನಶೈಲಿ ರೂಢಿಸಿಕೊಳ್ಳುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಅಧ್ಯಕ್ಷ ಪ್ರಕಾಶ್ಮೂರ್ತಿ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು, ಕುಟುಂಬ ಕಲ್ಯಾಣ ಇಲಾಖೆ ಹಾಗೂ ಬಾಪೂಜಿ ಮೆಡಿಕಲ್ ಕಾಲೇಜು ವತಿಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊಳೆಹೊನ್ನೂರಿನಲ್ಲಿ ಏರ್ಪಡಿಸಿದ್ದ ಉಚಿತ ಆರೋಗ್ಯ ಶಿಬಿರದಲ್ಲಿ ಮಾತನಾಡಿದರು.
ರೋಟರಿ ಸಂಸ್ಥೆಯು ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ನಿರಂತರವಾಗಿ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿದ್ದು, ಆರೋಗ್ಯ ಶಿಬಿರ ಸೇರಿದಂತೆ ವೈವಿಧ್ಯ ಸೇವಾ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ನಮ್ಮ ಸಂಸ್ಥೆಯು ವರ್ಷಪೂರ್ತಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಯೋಜಿಸಿದೆ ಎಂದು ತಿಳಿಸಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯೆ ಡಾ. ಪ್ರತಿಭಾ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಬರುವ ಸಮಸ್ಯೆಗಳು ಮತ್ತು ಪರಿಹಾರೋಪಾಯಗಳನ್ನು ತಿಳಿಸಿ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
Rotary Club Shimoga ರೋಟರಿ ಸಹಾಯಕ ಗವರ್ನರ್ ಕೆ.ಪಿ.ಶೆಟ್ಟಿ ಮಾತನಾಡಿ, ರೋಟರಿಯ ಉದಾತ್ತ ಗುಣಗಳನ್ನು ಯುವ ಸಮಾಜ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಬಾಪೂಜಿ ಕಾಲೇಜಿನ ವೈದ್ಯರು ಎಲ್ಲ ವಿದ್ಯಾರ್ಥಿಗಳ ಆರೋಗ್ಯ ಪರಿಶೀಲಿಸಿದರು.
ರೋಟರಿ ಸಂಸ್ಥೆಯ ಸ್ವಪ್ನಾ, ಸ್ಮಿತಾ ಹಾಗೂ ಎಫ್ಪಿಎಐನ ಸತೀಶ್ ಹಾಗೂ ಕಾಲೇಜಿನ ಎನ್.ಎಸ್.ಎಸ್.
ಘಟಕದ ಪ್ರಮುಖರು ಹಾಗೂ ಸಹ ಶಿಕ್ಷಕರು ಹಾಜರಿದ್ದರು.
Department of Fisheries ಪ.ಜಾ/ ಪ.ಪಂಗಡಗಳ ಮೀನು ಮಾರಾಟಗಾರರ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ
Department of Fisheries 2025-26 ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ರಾಜ್ಯವಲಯದಿಂದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನು ಮಾರಾಟಗಾರರಿಗೆ ಆರ್ಥಿಕ ನೆರವು ನೀಡಲು ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50 ರಷ್ಟು ಅಥವಾ ರೂ.3 ಲಕ್ಷ ಆರ್ಥಿಕ ನೆರವನ್ನು ಇಲಾಖಾ ಷರತ್ತು ಮತ್ತು ನಿಬಂಧನೆಗಳಿಗೊಳಪಟ್ಟು ಅನುಷ್ಟಾನಗೊಳಿಸಲಾಗುತ್ತಿದೆ. ಜಿಲ್ಲೆಗೆ ಪರಿಶಿಷ್ಟ ಜಾತಿ-2 ಮತ್ತು ಪರಿಶಿಷ್ಟ ಪಂಗಡ-1 ಮೀನು ಮಾರಾಟಗಾರರಿಗೆ ಗುರಿಯನ್ನು ನಿಗದಿಪಡಿಸಲಾಗಿದ್ದು, ಅರ್ಹ ಮೀನು ಮಾರಾಟಗಾರರು ಸೆ.20 ರ ಒಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಂಬಂಧಪಟ್ಟ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಿ ಇಲಾಖೆಯ ಆನ್ಲೈನ್ ಪೋರ್ಟಲ್ ಮೂಲಕ ಸಲ್ಲಿಸಬೇಕು.
Department of Fisheries ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕ, ಶಿವಮೊಗ್ಗ- 9986040981, ಮೀನುಗಾರಿಕೆ ಸಹಾಯಕ ನಿರ್ದೇಶಕ, ಭದ್ರಾವತಿ-9743370815, ಮೀನುಗಾರಿಕೆ ಸಹಾಯಕ ನಿರ್ದೇಶಕ, ಶಿಕಾರಿಪುರ-9686939028, ಮೀನುಗಾರಿಕೆ ಸಹಾಯಕ ನಿರ್ದೇಶಕರ, ಸಾಗರ ಮತ್ತು ಹೊಸನಗರ-9538044365, ಮೀನುಗಾರಿಕೆ ಸಹಾಯಕ ನಿರ್ದೇಶಕ, ಸೊರಬ-9535386449, ಮೀನುಗಾರಿಕೆ ಸಹಾಯಕ ನಿರ್ದೇಶಕ ತೀರ್ಥಹಳ್ಳಿ-8655132438 ಗೆ ಸಂಪರ್ಕಿಸಬಹುದೆAದು ಮೀನುಗಾರಿಕೆ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
