Monday, February 16, 2026
Monday, February 16, 2026
Home Blog Page 1912

ದಸರಾ ಅಂಬಾರಿ ಹೊರಲು ಗಜಪಡೆ ಸಜ್ಜು

0
  • ದಸರಾ ಉತ್ಸವ ಹಿನ್ನೆಲೆಯಲ್ಲಿ ಅಂಬಾರಿ ಹೊರಲು ಸಕ್ರೆಬೈಲ್​​​ ಆನೆ ಬಿಡಾರದಿಂದ ಎರಡು ಆನೆಗಳು ನಗರಕ್ಕೆ ಆಗಮಿಸಿವೆ. ಶಿವಮೊಗ್ಗ ದಸರಾದಲ್ಲಿ ಆಕರ್ಷಣೆಯ ಕೇಂದ್ರಬಿಂದುವಾಗಿರುವ ಅಂಬಾರಿ ಉತ್ಸವಕ್ಕಾಗಿ ಸಾಗರ್​ ಮತ್ತು ಭಾನುಮತಿ ಆನೆಗಳನ್ನು ನಿನ್ನೆಯೇ ನಗರಕ್ಕೆ ಬರಮಾಡಿಕೊಳ್ಳಲಾಗಿದೆ.

ಸಕ್ರೆಬೈಲ್​​​​ನಲ್ಲಿ ಆನೆಗಳು ಲಾರಿ ಏರಲು ಹಿಂದೇಟು ಹಾಕಿದ್ದು, ಬಳಿಕ ನಡೆದುಕೊಂಡೇ ಶಿವಮೊಗ್ಗ ತಲುಪಿವೆ. ನಗರ ತಲುಪಿದ ಆನೆಗಳಿಗೆ ಮಹಾನಗರ ಪಾಲಿಕೆ ವತಿಯಿಂದ ಪೂಜೆ ಸಲ್ಲಿಸಿ, ಸ್ವಾಗತ ಕೋರಲಾಯಿತು.

ವಾಸವಿ ಶಾಲೆಯ ಬಳಿ ವಾಸ್ತವ್ಯ ಹೂಡಿರುವ ಆನೆಗಳು ಇಂದಿನಿಂದ ಎರಡು ದಿನ ನಡೆಯಲಿರುವ ದಸರಾದಲ್ಲಿ ಭಾಗಿಯಾಗಲಿವೆ. ಈ ವೇಳೆ ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಆಯುಕ್ತ ಚಿದಾನಂದ ವಾಟರೆ ಸೇರಿ ಸಿಬ್ಬಂದಿ ಹಾಜರಿದ್ದರು.

ಸಲಗ ಚಿತ್ರಕ್ಕೆ ಶಿವಮೊಗ್ಗದಲ್ಲಿ ಗುಡ್ ರೇಸ್ಪಾನ್ಸ್,ಚಿತ್ರ ಮಂದಿರ ಹೌಸ್ ಪುಲ್

0

ಕೊರೊನಾ ಮಹಾಮಾರಿ ಕಡಿಮೆಯಾದ ನಂತರ ಚಿತ್ರಮಂದಿರದಲ್ಲಿ ಬಿಡುಗಡೆಯಾದ ಮೊದಲ ಚಿತ್ರ ಸಲಗಕ್ಕೆ ಶಿವಮೊಗ್ಗದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನಗರದ ಮಲ್ಲಿಕಾರ್ಜುನ ಚಿತ್ರಮಂದಿರದಲ್ಲಿ ಹಾಗೂ ಭಾರತ್ ಸಿನಿಮಾಸ್ ನಲ್ಲಿ ಸಲಗ ಚಿತ್ರ ತೇರೆ ಕಂಡಿದೆ .ಹಾಗಾಗಿ ದುನಿಯಾ ವಿಜಯ್ ಅಭಿಮಾನಿಗಳು ಸಲಗ ಚಿತ್ರ ನೋಡಿ ಚಿತ್ರದ ನಿರ್ದೇಶನಕ್ಕೆ ಬಹುಪರಾಕ್ ಹೇಳಿದ್ದಾರೆ.
ಚಿತ್ರ ಮಂದಿರದ ಬಳಿ ಅಭಿಮಾನಿಗಳು ಕುಣಿದು ಕುಪ್ಪಳಿಸಿ ಚಿತ್ರ ವಿಕ್ಷೀಸಿದ್ದಾರೆ.ಬೆಳಗ್ಗೆ ಶೋ ಮತ್ತು ಮತ್ತು ಮಧ್ಯಾಹ್ನದ ಶೋ ಕೂಡ ಹೌಸ್ ಪುಲ್ ಆಗಿದ್ದು ದುನಿಯಾ ವಿಜಯ್ ನಿರ್ದೇಶನ ಮಾಡಿ ನಟಿಸಿರುವ ಚಿತ್ರಕ್ಕೆ ಶಿವಮೊಗ್ಗದ ಜನ ಚಿತ್ರ ನೋಡಿ ಹಾರೈಸಿದ್ದಾರೆ.

ಒಟ್ಟಾರೆ ಕಳೆದೆರೆಡು ವರ್ಷಗಳಿಂದ ಕೊರೊನಾ ಮಹಾಮಾರಿಯಿಂದಾಗಿ ಚಿತ್ರ ಮಂದಿರಗಳಲ್ಲಿ ಚಿತ್ರ ಬಿಡುಗಡೆ ಯಾಗದೇ ವರ್ಷಗಳೆ ಕಳೆದೊಗಿತ್ತು ಇಂದು ತೇರೆ ಕಂಡಿರುವ ಚಿತ್ರ ಸಲಗಕ್ಕೆ ಶಿವಮೊಗ್ಗ ದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಸಿನಿ ರಸಿಕರು ಚಿತ್ರ ನೋಡಿ ಏಂಜಾಯ್ ಮಾಡಿದ್ದಾರೆ.