Skating Association ಕೇರಳದ ಫಲಕಾಡಿನಲ್ಲಿ ನಡೆಯುತ್ತಿರುವ ಸಿ ಬಿ ಎಸ್ ಸಿ ದಕ್ಷಿಣ ವಲಯದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ನಮ್ಮ ಶಿವಮೊಗ್ಗ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ನ ಇಬ್ಬರು ಸ್ಟೇಟರ್ ಗಳು ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕವನ್ನು ಪಡೆದಿದ್ದಾರೆ. ಶಿವಮೊಗ್ಗದ ನಮ್ಮ ಸ್ಕೇಟಿಂಗ್ ಅಸೋಸಿಯೇಷನ್ ನ ಆದ್ವಿಕಾ ನಾಯರ್ ಅವರು ಬಂಗಾರ ಹಾಗೂ ಕಂಚಿನ ಪಡೆದಿದ್ದಾರೆ. ನಮ್ಮ ಸ್ಕೇಟರ್ ವೇದಾಂಶ್ ಗಜೇಂದ್ರ ಪರಡಿ ಅವರು ಬೆಳ್ಳಿ ಪದಕ ಗೆದ್ದು, ಶಿವಮೊಗ್ಗ ಇಲ್ಲಿಗೆ ಕೀರ್ತಿ ತಂದಿದ್ದಾರೆ.
ಶಿವಮೊಗ್ಗ ಗೋಪಾಳದಲ್ಲಿರುವ ಕ್ರೀಡಾ ಸಂಕೀರ್ಣದಲ್ಲಿ ನಮ್ಮ ಸಂಸ್ಥೆಯ ತರಬೇತಿದಾರರಾದ ಆರ್. ವಿಶ್ವಾಸ್ ಮತ್ತು ಆರ್ ಅತೀಶ್ ಅವರಿಂದ ತರಬೇತಿ ಪಡೆದಿದ್ದಾರೆ.
Skating Association ಸಂಸ್ಥೆಗೆ ಕೀರ್ತಿ ತಂದ ನಮ್ಮ ಸಂಸ್ಥೆಯ ಅಧ್ಯಕ್ಷ ಮೋಹನ್ ಕುಮಾರ್, ಕಾರ್ಯದರ್ಶಿ ಎಂ. ರವಿ ಹಾಗೂ ಪದಾಧಿಕಾರಿಗಳಾದ ಎಸ್. ಕೆ. ಗಜೇಂದ್ರ ಸ್ವಾಮಿ, ಉಮಾ ಟಿ., ತಾರಾನಾಥ್, ಶ್ರೀನಾಥ್ ಅಭಿನಂದಿಸಿದ್ದಾರೆ.
ಸಂಸದರ ಅಭಿನಂದನೆ: ಜಿಲ್ಲೆಗೆ ಕೀರ್ತಿ ತಂದ ಸ್ಕೇಟಿಂಗ್ ಪುಟಗಳನ್ನು ಸಂಸದ ಬಿ. ವೈ. ರಾಘವೇಂದ್ರ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ರೇಖ್ಯಾನಾಯ್ಕ ಅಭಿನಂದಿಸಿದ್ದಾರೆ.
Skating Association ಕೇರಳದ ಫಾಲಕ್ಕಾಡ್ ನಲ್ಲಿ ನಡೆದ ದಕ್ಷಿಣ ವಲಯ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಶಿವಮೊಗ್ಗ ಸ್ಪರ್ಧಿಗಳ ಗಮನಾರ್ಹ ಸಾಧನೆ
Canara Bank Rural Self Employment Training Institute ಸಿಸಿ ಟಿವಿ ಅಳವಡಿಕೆ, ನಿರ್ವಹಣೆ , ಸರ್ವೀಸಿಂಗ್ ಬಗ್ಗೆ ಉಚಿತ ತರಬೇತಿ ಮಾಹಿತಿ
Canara Bank Rural Self Employment Training Institute ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಸೆ. 08 ರಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಉಚಿತ ಸಿಸಿ ಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿ ಶಿಬಿರವನ್ನು ಏರ್ಪಡಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದ್ದು, ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.
ಅಭ್ಯರ್ಥಿಗಳು ಸ್ಥಳಿಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.
ಆಸಕ್ತಿಯುಳ್ಳ ಅಭ್ಯರ್ಥಿಗಳು ಸೆ. 08 ರ ಸೋಮವಾರ ಬೆಳಗ್ಗೆ 9.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬಹುದೆಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.
Canara Bank Rural Self Employment Training Institute ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯನ್ನು ಈ ಕೆಳಕಂಡ ದೂ. ಸಂ. 8970476050, 9591514154, 9686248369, 8970446644, 9505894247 ಗಳಿಗೆ ಸಂಪರ್ಕಿಸಬಹುದಾಗಿದೆ.
MESCOM ಆಗಸ್ಟ್ 25, ಬೆಜ್ಜುವಳ್ಳಿ ಯ ಮೆಸ್ಕಾಂ ಕಛೇರಿಯಲ್ಲಿ ಜನ ಸಂಪರ್ಕ ಸಭೆ
ಬೆಜ್ಜುವಳ್ಳಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಆ 25 ರಂದು ಬೆಳಿಗ್ಗೆ 11.00 ರಿಂದ 01.00 ವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ.
ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
MESCOM ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 8277882835.
JCI Shivamogga ಶಿವಮೊಗ್ಗ ಜೆಸಿಐ ಸಮೃದ್ದಿ ಘಟಕದಿಂದ ತುಂಬಿದ ತುಂಗೆಗೆ ಬಾಗಿನ ಅರ್ಪಣೆ
JCI Shivamogga ಜೆಸಿಐ ಸಮೃದ್ಧಿ ಘಟಕದ ಪದಾಧಿಕಾರಿಗಳು ತುಂಗಾ ನದಿಗೆ ಬಾಗಿನ ಸಮರ್ಪಿಸಿದರು.
ಜೆಸಿಐ ಸಮೃದ್ಧಿ ಘಟಕದ ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ, ತುಂಗಾ ನದಿಗೆ ಬಾಗಿನ ಅರ್ಪಿಸಿದ್ದು, ಘಟಕದ ಎಲ್ಲರೂ ಭಾಗವಹಿಸಿದ್ದು, ಗೌರಿ ಗಣೇಶ ಹಬ್ಬ ಎಲ್ಲರಿಗೂ ಶುಭವಾಗಲಿ ಎಂದು ಆಶಿಸಿದರು.
ಜೆಸಿಐ ಸಮೃದ್ಧಿ ಘಟಕದ ಕಾರ್ಯದರ್ಶಿ ಗಾಯತ್ರಿ ಯಲ್ಲಪ್ಪಗೌಡ ಮಾತನಾಡಿ, ಈ ವರ್ಷ ಉತ್ತಮ ಮಳೆಯಾಗಿರುವುದರಿಂದ ತುಂಗಾ ನದಿಯು ತುಂಬಿದೆ. ತುಂಬಿದ ನದಿಗೆ ಬಾಗಿನ ಅರ್ಪಿಸುವುದು ತುಂಬಾ ಖುಷಿಯಾಗುತ್ತಿದೆ. ಸಕಾಲಕ್ಕೆ ಸರಿಯಾಗಿ ಮಳೆಯಾಗಿರುವುದರಿಂದ ಎಲ್ಲ ರೈತರು ಬೆಳೆಗಳನ್ನು ಚೆನ್ನಾಗಿ ಬೆಳೆದು ಸುಖ ಸಮೃದ್ಧಿ ಜೀವನ ನಡೆಸಲಿ ಎಂದು ಆಶಿಸಿದರು.
ಜೆಸಿಐ ಸಮೃದ್ಧಿ ಘಟಕದ ಸದಸ್ಯೆ ಕವಿತಾ ಮಾತನಾಡಿ, ತುಂಗಾ ನದಿಗೆ ಬಾಗಿನ ಅರ್ಪಿಸುತ್ತಿರುವುದು ತುಂಬಾ ಸಂತೋಷವಾಗುತ್ತಿದೆ ಎಂದರು.
JCI Shivamogga ಜೆಸಿಐ ಸಂಸ್ಥೆಯ ಶಶಿಕಲಾ ಹಾಗೂ ಮೀನ ಅವರು ಸಮೃದ್ಧಿ ಘಟಕದ ಅಧ್ಯಕ ನರಸಿಂಹಮೂರ್ತಿ ಅವರಿಗೆ ವಸ್ತ್ರವನ್ನು ಉಡುಗೊರೆಯಾಗಿ ನೀಡಿದರು.
ಅಶ್ವಿನಿ, ನರಸಮ್ಮ, ಅನಿತಾ ಸಿರಿಲ್, ಶಶಿಕಲಾ, ಸುಮ, ಪುಷ್ಪ, ಮಾಲಾ, ಸರಳ ವಾಸನ್, ಮಂಜುಳಾ, ಮೀನಾ, ಅನ್ನಪೂರ್ಣ, ಶಾಂತಮ್ಮ, ದೀಕ್ಷಿತ್, ಕಿಶನ್, ಬಿ.ಎಂ.ಯಲ್ಲಪ್ಪಗೌಡ ಹಾಜರಿದ್ದರು.
Department of School Education ಕ್ರೀಡೆಯಿಂದ ಶಿಸ್ತು, ಸಂಯಮ ಬೆಳೆಯುತ್ತದೆ. ಸೋಲು ಗೆಲುವು ಮುಖ್ಯವಲ್ಲ, – ಚಂದ್ರಕಾಂತ್
Department of School Education ಯೋಗ ಮತ್ತು ಚೆಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ, ಯೋಗದಿಂದ ಆರೋಗ್ಯ ವೃದ್ಧಿ ಆದರೆ,ಚದುರಂಗದಿಂದ ಬುದ್ಧಿ ಮತ್ತು ಏಕಾಗ್ರತೆ ಹೆಚ್ಚಾಗುತ್ತದೆ ಎಂದು ತಾಲೂಕು ದೈಹಿಕ ಶಿಕ್ಷಣ ಅಧಿಕಾರಿಗಳಾದ ಚಂದ್ರಕಾಂತ್ ಅಭಿಪ್ರಾಯಪಟ್ಟರು.
ಅವರು ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಶಿವಮೊಗ್ಗ ಹಾಗೂ ಇನ್ಫೆಂಟ್ ಜೀಸಸ್ ಪ್ರಾಥಮಿಕ ಶಾಲೆ ಶರಾವತಿ ನಗರ,ಶಿವಮೊಗ್ಗ. ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಅನುದಾನ ರಹಿತ ಹಿರಿಯ ಪ್ರಾಥಮಿಕ ಶಾಲೆಗಳ ಸಿ ಮತ್ತು ಡಿ ವಲಯಗಳ ವಲಯ ಮಟ್ಟದ ಯೋಗ ಮತ್ತು ಚೆಸ್ ಪಂದಾವಳಿಗೆ ಚಾಲನೆ ನೀಡಿ ಮಾತನಾಡುತ್ತಾ, ಕ್ರೀಡೆಯಿಂದ ಶಿಸ್ತು ಸಂಯಮ ಬೆಳೆಯುವುದು, ಸೋಲು ಗೆಲುವು ಮುಖ್ಯವಲ್ಲ ಕ್ರೀಡಾ ಮನೋಭಾವದಿಂದ ಭಾಗವಹಿಸುವುದು ಮುಖ್ಯ. ಇಲ್ಲಿ ಭಾಗವಹಿಸಿದ ಮಕ್ಕಳು ಜಿಲ್ಲೆ, ರಾಜ್ಯ,ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸಿ ದೇಶಕ್ಕೆ ಕೀರ್ತಿ ತರಲೆಂದು ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
ಜಿಲ್ಲಾ ಅನುದಾನ ರಹಿತ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ರಾ. ಹ.ತಿಮ್ಮೇನಹಳ್ಳಿ ಮಾತನಾಡುತ್ತಾ,ಯೋಗದಿಂದ ನಮ್ಮ ಆರೋಗ್ಯ ಕಾಪಾಡುವ ಜೊತೆಗೆ ದೇಹ ಮತ್ತು ಮನಸ್ಸನ್ನು ಆರೋಗ್ಯ ವಾಗಿಟ್ಟುಕೊಂಡಾಗ ದಿನನಿತ್ಯದ ಕೆಲಸ-ಕಾರ್ಯಗಳನ್ನು ನಿರೀಕ್ಷೆಯಂತೆ ನಿರ್ವಹಿಸಲು, ಸದಾ ಲವ ಲವಿಕೆಯಿಂದಿರಲು ಸಾಧ್ಯವಾಗಲಿದೆ ಎಂದರು.
Department of School Education ಈ ನಿಟ್ಟಿನಲ್ಲಿ ಎಲ್ಲರೂ ಯೋಗಭ್ಯಾಸವನ್ನು ನಿಯಮಿತವಾಗಿ ರೂಢಿಸಿಕೊಳ್ಳುವುದು ಉತ್ತಮ, ಚೆಸ್ ಬುದ್ದಿವಂತಿಕೆಯ ಕ್ರೀಡೆ, ಪುರಾತನ ಕಾಲದಿಂದಲೂ ಪ್ರಚಲಿತವಿರುವ ಕ್ರೀಡೆ ಚದುರಂಗ,ಹಿಂದಿನ ಕಾಲದಿಂದಲೂ ರಾಜ ಮಹಾರಾಜರ ಕಾಲದಲ್ಲಿ ಪ್ರಸಿದ್ಧಿಯನ್ನು ಪಡೆದ ಕ್ರೀಡೆ. ಕೇವಲ ಭಾರತದಲ್ಲಿ ಅಷ್ಟೇ ಅಲ್ಲದೇ ಇಡೀ ವಿಶ್ವದಲ್ಲಿ ಯೋಗಕ್ಕೆ ಆದ್ಯತೆ ನೀಡಲಾಗುತ್ತಿದೆ. ಹಾಗಾಗಿ ಕ್ರೀಡಾಪಟುಗಳು ಯೋಗ ಮತ್ತು ಚೆಸ್ ಸತತ ಅಭ್ಯಾಸದಿಂದ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಇನ್ಫೆಂಟ್ ಶಾಲೆಯ ಮುಖ್ಯ ಶಿಕ್ಷಕಿಯಾದ ಸಿಸ್ಟರ್ ಫಿಲೋಮಿನಾ ಮಾತನಾಡುತ್ತಾ, ಕ್ರೀಡೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ರಾಜ್ಯ ರಾಷ್ಟ್ರಮಟ್ಟದಲ್ಲಿ ಉತ್ತಮ ಸಾಧನೆ ಮಾಡಿ ಎಂದು ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಚೆಸ್ ತೀರ್ಪುಗಾರರಾಗಿ ಆಗಮಿಸಿದ್ದ ,ರಾಷ್ಟ್ರೀಯ ತಿರುಪುಗಾರರಾದ ವಿಲ್ಸನ್ ಮಾತನಾಡುತ್ತಾ ಚದುರಂಗದಲ್ಲಿ ಶಿವಮೊಗ್ಗ ರಾಷ್ಟ್ರ ಮತ್ತು ಅಂತರಾಷ್ಟ್ರಮಟ್ಟದಲ್ಲಿ ಅನೇಕ ಕ್ರೀಡಾಪಟುಗಳನ್ನು ಕ್ರೀಡಾ ಕ್ಷೇತ್ರಕ್ಕೆ ನೀಡಿದೆ ಎಂದು ಸ್ಮರಿಸಿಕೊಂಡರು. ಯೋಗಾಸನ ತೀರ್ಪುಗಾರರಾದ ಶ್ರೀಮತಿ ಸುನಿತಾ ಯೋಗಾಸನದ ನಿಯಮಗಳು ಮತ್ತು ಅದರಿಂದ ಆಗುವ ಪ್ರಯೋಜನಗಳ ಬಗ್ಗೆ ಮಾತನಾಡಿದರು .
ಕಾರ್ಯಕ್ರಮದಲ್ಲಿ ಪೋಷಕರು ಮತ್ತು ಕ್ರೀಡಾಪಟುಗಳು,ಇನ್ನೂ ಮುಂತಾದವರು ಉಪಸ್ಥಿತರಿದ್ದರು.
CM Siddharamaiah ‘ಸಿಎಂ’ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ವಾರ್ಷಿಕ ರಾಜ್ಯಮಟ್ಟದ ಪ,ಜಾ/ಪ.ಪಂಗಡಗಳ ಜಾಗೃತ ಸಮಿತಿ ಸಭೆ
CM Siddharamaiah ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ
2025-26ನೇ ಸಾಲಿನ ರಾಜ್ಯ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಾಗೃತ ಹಾಗೂ ಉಸ್ತುವಾರಿ ಸಮಿತಿ ಸಭೆ ನಡೆಯಿತು.
CM Siddharamaiah ಈ ಸಭೆಯಲ್ಲಿ, ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವ ಎಚ್.ಕೆ ಪಾಟೀಲ, ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ, ಅಬಕಾರಿ ಆರ್.ಬಿ. ತಿಮ್ಮಾಪೂರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಶಾಸಕರು, ಹಿರಿಯ ಅಧಿಕಾರಿಗಳು, ಸಮಿತಿ ಸದಸ್ಯರು ಉಪಸ್ಥಿತರಿದ್ದರು.
Sharavathi Pumped Storage Project ಪರಿಸರ ನಾಶವಾದರೆ ಇತಿಹಾಸವೂ ನಾಶ – ಡಾ.ಎಸ್.ಜಿ.ಸಾಮಕ್
Sharavathi Pumped Storage Project ಶ್ರೀ ವಿಶ್ವ ವೀರಾಂಜನೇಯ ಮಹಾಸಂಸ್ಥಾನ ಹೇಮಾಪುರ ಮಹಾ ಪೀಠ ಶ್ರೀ ಕ್ಷೇತ್ರ ಬಂಗಾರ ಮಕ್ಕಿ ಇದರ ಆಶ್ರಯದಲ್ಲಿ ಶ್ರೀ ಶ್ರೀ ಮಾರುತಿ ಗುರೂಜಿಯವರ ಅಧ್ಯಕ್ಷತೆಯಲ್ಲಿ ಶರಾವತಿ ಪಂಪ್ ಸ್ಟೋರೇಜ್ ಯೋಜನೆ ಕುರಿತು ಸಾರ್ವಜನಿಕ ಸಭೆಯನ್ನು ದಿನಾಂಕ 24 ಆಗಸ್ಟ್ 2025ರಂದು ಆಯೋಜಿಸಲಾಗಿತ್ತು. ನಾಡಿನ ಹೆಸರಾಂತ ಪರಿಸರವಾದಿಗಳು ವಿಜ್ಞಾನಿಗಳು ಸಂಶೋಧಕರು ಮುಂತಾದವರು ಆಗಮಿಸಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು. ಅವರುಗಳಲ್ಲಿ ಪ್ರಮುಖರೆಂದರೆ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನ ಡಾಕ್ಟರ್ ಟಿವಿ ರಾಮಚಂದ್ರ ಡಾಕ್ಟರ್ ಎಲ್ ಕೆ ಶ್ರೀಪತಿ ಗಿರೀಶ್ ಜನ್ನೇ ಶಿವಾನಂದ ಕಳವೆ ಅಖಿಲೇಶ್ ಚೀಪ್ಳಿ ಗುರು ಪ್ರಸಾದ್ ರವಿ ಹೆಗಡೆ ಡಾಕ್ಟರ್ ಎಸ್ ಜಿ ಸಾಮಕ್ ಹರತಾಳು ಹಾಲಪ್ಪ ಮುಂತಾದವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. Sharavathi Pumped Storage Project ಈ ಯೋಜನೆ ಅನುಷ್ಠಾನಗೊಂಡಲ್ಲಿ ಪರಿಸರ ಜೀವ ವೈವಿಧ್ಯತೆ ಹಾಗೂ ಕಾಡು ನಾಶವಾಗುವುದು ಖಚಿತವಾದ ಕಾರಣ ಯಾವುದೇ ಕಾರಣಕ್ಕೂ ಈ ಯೋಜನೆ ಅನುಷ್ಠಾನಕ್ಕೆ ಬರಲು ಬಿಡಬಾರದೆಂ ಬುದು ಎಂಬುದು ಎಲ್ಲರ ಒಕ್ಕೊರಳಿನ ಅಭಿಪ್ರಾಯವಾಗಿತ್ತು. ಡಾಕ್ಟರ್ ಎಸ್ ಜಿ ಸಾಮತ್ ಅವರು ಪರಿಸರದ ಜೊತೆಗೆ ಇತಿಹಾಸವು ಕೂಡ ನಾಶವಾಗುವ ಸಾಧ್ಯತೆಯನ್ನು ವಿವರಿಸಿದರು.
Keladi Shivappa Nayaka University of Agriculture and Horticulture ಬೇಕರಿ ಬಿಸ್ಕತ್ ತಯಾರಿಸಿ, ಉದ್ಯಮ ಆರಂಭಿಸುವ ಆಸೆ ಇದೆಯೆ? ತರಬೇತಿ ಪಡೆಯಲು ನಿಮಗೆ ಮಾಹಿತಿ
Keladi Shivappa Nayaka University of Agriculture and Horticulture ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಸೆ. 01 ರಿಂದ 30 ರವರೆಗೆ 1 ತಿಂಗಳು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್ತು, ಕೋಕೋನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಕೋಕೊನಟ್ ಕ್ಯಾಸಲ್ಸ, ಫ್ರುಟ್ ಕೇಕ್, ಸ್ಪಾಂಜ್ಕೇಕ್, ಜೆಲ್ಕೇಕ್, ಬಟರ್ ಐಸಿಂಗ್, ಮಿಲ್ಕ್ ಬ್ರೆಡ್, ಪಪ್ಪೇಸ್ಟ್ರೀ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆಯೋಜಿಸಿದೆ.
ಆಕಸ್ತರು ತರಬೇತಿ ಶುಲ್ಕ ರೂ. 4500/-ಗಳನ್ನು ಪಾವತಿಸಿ, ಆ.30 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಕೃಷಿ ಮಹಾವಿದ್ಯಾಲಯವನ್ನು ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಕೃಷಿ ಮತ್ತು ತೋಟಗಾರಿಕೆ ಮಹಾವಿದ್ಯಾಲಯದ ಪ್ರೋಫೆಸರ್ ತಿಳಿಸಿದ್ದಾರೆ.
Keladi Shivappa Nayaka University of Agriculture and Horticulture ನೋಂದಾವಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಾ. ಜಯಶ್ರೀ ಎಸ್. -9449187763 ಮತ್ತು ಜಯಶಂಕರ-9686555897 ಇವರುಗಳನ್ನು ಸಂಪರ್ಕಿಸುವುದು.
Linganamakki Dam ಲಿಂಗನಮಕ್ಕಿ ಡ್ಯಾಂ ಐದು ಗೇಟ್ ಓಪನ್, 3500 ಕ್ಯುಸೆಕ್ ನೀರು ಬಿಡುಗಡೆ
Linganamakki Dam ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಹಾಗೂ ಸಾಗರ ಶಾಸಕರಾದ ಗೋಪಾಲಕೃಷ್ಣ ಬೇಳೂರು , ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ಹಾಗೂ ಇತರೆ ಮುಖಂಡರು ಭಾನುವಾರ ಲಿಂಗನಮಕ್ಕಿ ಜಲಾಶಯದ ಗೇಟ್ ಗಳನ್ನು
ತೆರೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
5 ಗೇಟ್ ಗಳನ್ನು ತೆರೆದು 3500 ಕ್ಯುಸೆಕ್ ನೀರನ್ನು ಶರಾವತಿ ನದಿಗೆ ಬಿಡಲಾಯಿತು.
Brahma Kumaris ವಿಶ್ವ ಬಂಧುತ್ವ ಸಂಕೇತವಾಗಿ ಒಂದು ಲಕ್ಷಕ್ಕೂ ಹೆಚ್ಚು ಯೂನಿಟ್ ರಕ್ತದಾನ ಯೋಜನೆ-ಅನಸೂಯ ಅಕ್ಕ
Brahma Kumaris ಆಧ್ಯಾತ್ಮ ಮತ್ತು ಧ್ಯಾನದ ಬಗ್ಗೆ ತರಬೇತಿ ನೀಡಿ ಶಾಂತಿ, ಪ್ರೀತಿ, ಏಕತೆ, ಸದ್ಭಾವನೆಯನ್ನು ಜನರಲ್ಲಿ ಮೂಡಿಸುತ್ತಿದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಸಂಚಾಲಕಿ ಅನಸೂಯ ಅಕ್ಕ ಹೇಳಿದರು.
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ನವುಲೆ ಸೇವಾ ಕೇಂದ್ರದ ವತಿಯಿಂದ ದಿನಾಂಕ 24-08-2025ರಂದು ಆಯೋಜಿಸಿದ್ದ ವಿಶ್ವ ಬಂಧುತ್ವ ದಿನ ಹಾಗೂ ಬೃಹತ್ ರಕ್ತದಾನ ಅಭಿಯಾನದಲ್ಲಿ ಮಾತನಾಡಿ, ಆಧ್ಯಾತ್ಮ ಮೌಲ್ಯಗಳನ್ನು ವಿಶ್ವಾದ್ಯಂತ ಬಿತ್ತರಿಸುತ್ತಿದೆ ಎಂದು ತಿಳಿಸಿದರು.
ವಿಶ್ವ ಬಂಧುತ್ವ ದಿನದ ಅಂಗವಾಗಿ ಭಾರತ ಮತ್ತು ನೇಪಾಳ ಸೇರಿ ಒಂದು ಲಕ್ಷಕ್ಕೂ ಹೆಚ್ಚು ಯೂನಿಟ್ಅನ್ನು ರಕ್ತದಾನ ಮಾಡುವ ಯೋಜನೆ ಹಮ್ಮಿಕೊಳ್ಳಲಾಗಿದೆ ಬ್ರಹ್ಮಕುಮಾರಿಸ್ ಸಂಸ್ಥೆಯ ಪೂರ್ವ ಮುಖ್ಯ ಆಡಳಿತಾಧಿಕಾರಿ ದಾದಿ ಪ್ರಕಾಶ ಮಣಿ ಜೀ ಅವರ 18ನೇ ಪುಣ್ಯ ತಿಥಿಯನ್ನು ವಿಶ್ವ ಬಂಧುತ್ವ ದಿನ ಎಂದು ಆಚರಿಸಲಾಗುತ್ತಿದೆ. ಆಗಸ್ಟ್ 22 ರಿಂದ 25ರವರೆಗೆ ಭಾರತ ಮತ್ತು ನೇಪಾಳದ 1,500ಕ್ಕೂ ಹೆಚ್ಚು ಬ್ರಹ್ಮಕುಮಾರಿ ಸೇವಾ ಕೇಂದ್ರಗಳಲ್ಲಿ ನೂರು ಗಂಟೆಗಳಲ್ಲಿ 100000 ಯೂನಿಟ್ ರಕ್ತ ಸಂಗ್ರಹಿಸಿ ಸಾರ್ವಜನಿಕರ ಆರೋಗ್ಯಕ್ಕಾಗಿ ನೀಡುವ ಗುರಿ ಹೊಂದಲಾಗಿದೆ. ಗಿನ್ನಿಸ್ ವಿಶ್ವ ದಾಖಲೆ ಸ್ಥಾಪಿಸಲಾಗುವುದು ಎಂದು ಹೇಳಿದರು.
ನವುಲೆ ಶಾಖೆ ಸಂಚಾಲಕಿ ಬಿ.ಕೆ.ಸ್ವಾತಿ ಅಕ್ಕ ಮಾತನಾಡಿ, ರಕ್ತ ಶರೀರಕ್ಕೆ ಶಕ್ತಿ. ಆಧ್ಯಾತ್ಮ ಆತ್ಮಕ್ಕೆ ಶಕ್ತಿ ನೀಡುತ್ತದೆ. ಒಂದು ತಿಂಗಳಿನಿಂದ ವಿವಿಧ ಸಂಘ ಸಂಸ್ಥೆ ಹಾಗೂ ಕಾಲೇಜುಗಳಲ್ಲಿ ರಕ್ತದಾನದ ಬಗ್ಗೆ ಜಾಗೃತಿ ಮೂಡಿಸಿ ಸಹಕಾರ ಕೋರಲಾಗಿದೆ ಎಂದು ತಿಳಿಸಿದರು.
ರಕ್ತದಾನಿಗಳಿಗೆ ಪ್ರಮಾಣ ಪತ್ರ ಹಾಗೂ ನೆನಪಿನ ಕಾಣಿಕೆಗಳನ್ನು ನೀಡಲಾಯಿತು. ಜಿಲ್ಲಾ ಮೆಗಾನ್ ಬೋಧನಾ ಆಸ್ಪತ್ರೆಯ ವೈದ್ಯೆ ಡಾ. ಗೀತಾ ಲಕ್ಷ್ಮೀ ಅವರು ರಕ್ತದಾನದ ಮಹತ್ವ ಹಾಗೂ ರಕ್ತದಾನದಿಂದ ಆಗುವ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಿದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ರಕ್ತದಾನದಿಂದ ಹೃದಯಾಘಾತ ಪ್ರಮಾಣ ಕಡಿಮೆಯಾಗುತ್ತದೆ. ಆರೋಗ್ಯಕ್ಕೂ ಅನುಕೂಲಗಳಿವೆ. ಮೂಢನಂಬಿಕೆಯಿಂದ ಹೊರಬಂದು ರಕ್ತದಾನ ಮಾಡಬೇಕು ಎಂದು ತಿಳಿಸಿದರು.
Brahma Kumaris ಮೇರಾ ಯುವ ಭಾರತ್ ಶಿವಮೊಗ್ಗ ಸಂಸ್ಥೆಯ ಜಿಲ್ಲಾ ಯುವ ಅಧಿಕಾರಿ ಸ್ನೇಹಲತಾ, ಎಂ.ರಮೇಶ್, ಜೆಎನ್ಎಸ್ಸಿಇ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅರುಣ್ ಕುಮಾರ್, ಜಿಲ್ಲಾ ಬೋಧನಾ ಆಸ್ಪತ್ರೆಯ ಹನುಮಂತಪ್ಪ, ಡಾ. ವೈಶಾಕ್, ಡಾ. ದಿಲೀಪ್ರಿಯ, ಮಂಜು, ರಾಜು, ಸಿಬ್ಬಂದಿ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಸದಸ್ಯರು, ಸಂಚಾಲಕರು, ರಕ್ತದಾನಿಗಳು ಉಪಸ್ಥಿತರಿದ್ದರು.
