Friday, February 20, 2026
Friday, February 20, 2026
Home Blog Page 195

Food and Civil Supplies Department ರಾಜ್ಯದಲ್ಲಿ ಬಯೋಮೆಟ್ರಿಕ್ ಆಧರಿತ ಪಡಿತರ ವಿತರಣೆ ಕಡ್ಡಾಯ- ಸಚಿವ.ಕೆ.ಎಚ್.ಮುನಿಯಪ್ಪ

0

Food and Civil Supplies Department ಪಡಿತರ ವಿತರಣೆಯಲ್ಲಿ ಅವ್ಯವಹಾರಗಳನ್ನು ತಪ್ಪಿಸುವ ಉದ್ದೇಶದಿಂದ ಬಯೋಮೆಟ್ರಿಕ್‌ ಆಧಾರಿತ ಪಡಿತರ ವಿತರಣೆಯನ್ನು ಕಡ್ಡಾಯಗೊಳಿಸಲಾಗಿದೆ. ಎಂದು ರಾಜ್ಯ ಆಹಾರ ಮತ್ಯು ನಾಗರೀಕ ಸರಬರಾಜು ಇಲಾಖೆ ಮಂತ್ರಿ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.

Food and Civil Supplies Department ವಯಸ್ಸಾದವರಿಗೆ ಬಯೋಮೆಟ್ರಿಕ್‌ ನೀಡಲು ತೊಂದರೆ ಉಂಟಾದಲ್ಲಿ ಐರೀಸ್‌ ಸ್ಕ್ಯಾನರ್‌ (ಕಣ್ಣಿನ ಮೂಲಕ ದೃಢೀಕರಣ) ಮಾಡಬಹುದಾಗಿದೆ. ಬಯೋಮೆಟ್ರಿಕ್‌ ಹಾಗೂ ಐರೀಸ್‌ ಎರಡರಲ್ಲಿಯೂ ಪಡಿತರ ಪಡೆಯಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ವಿನಾಯಿತಿ ನೀಡಿ ಪಡಿತರವನ್ನು ವಿತರಿಸಲಾಗುತ್ತಿದೆ ಎಂದು ಆಹಾರ ಸಚಿವರಾದ ಕೆ.ಎಚ್‌.ಮುನಿಯಪ್ಪ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದ್ದಾರೆ

All India Veerashaiva Lingayat Mahasabha ಶಿವಮೊಗ್ಗದಲ್ಲಿ ಬಿಲ್ವಪತ್ರೆ ಅಭಿಯಾನ

0

All India Veerashaiva Lingayat Mahasabha ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಯುವ ಘಟಕ ಶಿವಮೊಗ್ಗ ತಾಲೂಕು ವತಿಯಿಂದ ಬಿಲ್ವ ಪತ್ರೆ ಅಭಿಯಾನ ಅಂಗವಾಗಿ ಬಿಲ್ವ ಪತ್ರೆ ಸಸಿಯನ್ನು ಶಿವಮೊಗ್ಗದ ಸಮಾಜದ ವಿವಿಧ ಧಾರ್ಮಿಕ ಸ್ಥಳಗಳಲಿ ಹಮ್ಮಿಕೊಳಲಾಯಿತ್ತು. ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಅಧ್ಯಕ್ಷರು ಮಾತನಾಡಿ ಬಿಲ್ವ ಪತ್ರೆಯ ಧಾರ್ಮಿಕ ಮತ್ತು ವೈಜ್ಞಾನಿಕ ಮಹತ್ವದ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ಬಸವೇಶ್ವರ ವೀರಶೈವ ಸಮಾಜದ ಅಧ್ಯಕ್ಷರಾದ ಶ್ರೀ ಎಸ್ ಎಸ್ ಜ್ಯೋತಿ ಪ್ರಕಾಶ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಳ್ಳೇಕೆರೆ ಸಂತೋಷ್ ತಾಲೂಕು ಅಧ್ಯಕ್ಷರಾದ ಮಲ್ಲಿಕಾರ್ಜುನ ಸ್ವಾಮಿ ಯುವ ಘಟಕದ ಅಧ್ಯಕ್ಷ ನವೀನ್ ವಾರದ್ ಪ್ರಧಾನ ಕಾರ್ಯದರ್ಶಿ ತೇಜು ಕುಮಾರ್ ನೋಳಂಬ ಸಮಾಜದ ಈಶ್ವರ್ ಎಣ್ಣೇರ್ ಕುಬೇರಪ್ಪ ಮತ್ತು ಮಹಾಸಾಭಾದ ಪ್ರಮುಖರು ಹಾಜರಿದ್ದರು.

Prime Minister’s Employment Generation Scheme ಪಿಎಂಇಜಿಪಿ ಯೋಜನೆಯಡಿ ಸಾಲ- ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

0

Prime Minister’s Employment Generation Scheme ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ(ಪಿಎಂಇಜಿಪಿ)ಯಡಿ ಬ್ಯಾಂಕುಗಳಿಂದ ಸಾಲ ಪಡೆದು ಉತ್ಪಾದನಾ / ಸೇವಾ ಘಟಕ ಪ್ರಾರಂಭಿಸಲು ಗ್ರಾಮೀಣ ಮತ್ತು ನಗರ ಪ್ರದೇಶಗಳ ಆಸಕ್ತ ಅರ್ಜಿದಾರರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಗ್ರಾಮೀಣ ಪ್ರದೇಶಗಳಲ್ಲಿ ಉತ್ಪಾದನಾ ಮತ್ತು ಸೇವಾ ವಲಯದ ಚಟುವಟಿಕೆ ಪ್ರಾರಂಭಿಸಲು ಕೇಂದ್ರ ಸರ್ಕಾರದಿಂದ ಶೇಕಡಾ 25 ರಿಂದ 35 ರವರೆಗೆ ಮತ್ತು ನಗರ ಪ್ರದೇಶದಲ್ಲಿ ಶೇಕಡಾ 15 ರಿಂದ 25 ರವರೆಗೆ ಸಹಾಯಧನ ಲಭ್ಯವಿರುತ್ತದೆ. ಈ ಯೋಜನೆಯಡಿ ಹೊಸದಾಗಿ ಪ್ರಾರಂಭಿಸಲಿರುವ ಉತ್ಪಾದನಾ ಘಟಕಗಳಿಗೆ 50 ಲಕ್ಷ ಮತ್ತು ಸೇವಾ ಘಟಕಗಳಿಗೆ 20 ಲಕ್ಷ ಗರಿಷ್ಠ ಯೋಜನಾ ವೆಚ್ಚದ ಘಟಕಗಳಿಗೆ ಬ್ಯಾಂಕುಗಳಿಂದ ಆರ್ಥಿಕ ನೆರವು ಪಡೆಯಲು ಅವಕಾಶವಿರುತ್ತದೆ.
Prime Minister’s Employment Generation Scheme ಈ ಯೋಜನೆಗಳಡಿಯಲ್ಲಿ ಹೊಸದಾಗಿ ಚಟುವಟಿಕೆಗಳನ್ನು ಪ್ರಾರಂಭಿಸಲು ಇಚ್ಚಿಸಿರುವ ಜಿಲ್ಲೆಯ ಆಸಕ್ತ ಯುವಕ / ಯುವತಿಯರಿಂದ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು ಖಾಸಗಿ ವ್ಯಕ್ತಿ / ಮಧ್ಯವರ್ತಿ / ಮೂರನೇ ವ್ಯಕ್ತಿಗಳನ್ನು ಅವಲಂಬಿಸದೆ ಮಾಹಿತಿಗಾಗಿ ಕಛೇರಿಗೆ ನೇರವಾಗಿ ಭೇಟಿ ನೀಡಬಹುದು. ಆಸಕ್ತರು https://www.kviconline.gov.in/pmegpeportal/ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ವಿವರಗಳಿಗೆ ಶ್ರೀಮತಿ ಸಿ. ಓ. ಸುಜಾತ, ಜಿಲ್ಲಾ ಅಭಿವೃದ್ಧಿ ಅಧಿಕಾರಿಗಳು, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕಚೇರಿ, ‘ಬಿ” ಬ್ಲಾಕ್-7, ಎರಡನೇ ಮಹಡಿ, ಉಪವಿಭಾಗಾಧಿಕಾರಿಗಳ ಕಚೇರಿ ಕಟ್ಟಡ, ಬಾಲರಾಜ್ ಅರಸ್ ರಸ್ತೆ, ಶಿವಮೊಗ್ಗ, ದೂರವಾಣಿ:-9480825637 ಇವರನ್ನು ಸಂಪರ್ಕಿಸಬಹುದೆಂದು ಮಂಡಳಿಯ ಜಿಲ್ಲಾ ಅಭಿವೃದ್ಧಿ ಅಧಕಾರಿ ತಿಳಿಸಿದ್ದಾರೆ.

Dr. B.R. Ambedkar ಡಾ.ಅಂಬೇಡ್ಕರ್ ದೀಕ್ಷಾ ಭೂಮಿ ಭೇಟಿಗೆ ಯಾತ್ರಾರ್ಥಿಗಳಿಂದ ಅರ್ಜಿ‌ ಆಹ್ವಾನ

0

Dr. B.R. Ambedkar 2025-26 ನೇ ಸಾಲಿಗೆ ಪರಿಶಿಷ್ಟ ಜಾತಿಗೆ ಸೇರಿದ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳು ರಾಜ್ಯದಿಂದ ಮಹಾರಾಷ್ಟçದ ನಾಗಪುರದಲ್ಲಿನ ದೀಕ್ಷಾ ಭೂಮಿಯ ಭೇಟಿಗಾಗಿ ಯಾತ್ರಾರ್ಥಿಗಳನ್ನು ಆಯ್ಕೆ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆ.30 ರಿಂದ ಅ.4 ರವರೆಗೆ ಅವಕಾಶವಿದ್ದು, ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ https://swdservices.karnataka.gov.in ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯವರಾಗಿಬೇಕು ಹಾಗೂ ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ:9480843044 ಹಾಗೂ ಕಚೇರಿ ದೂ.ಸಂ: 08182-249241 ಗೆ ಸಂಪರ್ಕಿಸಬಹುದೆAದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಮಲ್ಲೇಶಪ್ಪ ತಿಳಿಸಿದ್ದಾರೆ.

Bahumukhi Shivamogga ಕಾರ್ನಾಡ್ ಕೆಲೈಡೋಸ್ಕೋಪ್” ಕೃತಿಯು ಅನೇಕ‌ ಒಳನೋಟಗಳನ್ನ ಒಳಗೊಂಡಿದೆ- ಟಿ.ಪಿ.ಅಶೋಕ

0

Bahumukhi Shivamogga ಹಿರಿಯ ಪತ್ರಕರ್ತ ಮುರಳೀಧರ ಖಜಾನೆಯವರ ಗಿರೀಶ್ ಕಾರ್ನಾಡ್ ಕೆಲೈಡೋಸ್ಕೋಪ್ ಕೃತಿಯ ಮೂಲಕ ಲೇಖಕರು ಗಿರೀಶ್ ಕಾರ್ನಾಡರ ಸಿನಿಮಾಗಳೊಂದಿಗೆ ಅನುಸಂಧಾನ ನಡೆಸಿದ್ದಾರೆ. ಹೀಗಾಗಿ ಈ ಕೃತಿ ಅನೇಕ ಒಳನೋಟಗಳನ್ನು ತೆರೆದಿಡುತ್ತದೆ ಎಂದು ಹೆಸರಾಂತ ವಿಮರ್ಶಕ ಟಿ. ಪಿ. ಅಶೋಕ ಹೇಳಿದರು.
ಶಿವಮೊಗ್ಗ ನಗರದ ಬಹುಮುಖಿ ಆಯೋಜನೆಯ 57 ಕಾರ್ಯಕ್ರಮವಾಗಿ ಹಿರಿಯ ಪತ್ರಕರ್ತ ಮುರಳೀಧರ ಖಜಾನೆಯವರ ಗಿರೀಶ್ ಕಾರ್ನಾಡ್ ಕೆಲೈಡೋಸ್ಕೋಪ್ ಕೃತಿಯ ಕುರಿತು ವಿಶ್ಲೇಷಣೆ ನಡೆಸಿದ ಅವರು, ಗಿರೀಶ್ ಕಾರ್ನಾಡರ ನಾಟಕಗಳ ಬಗ್ಗೆ ಅನೇಕ ಚರ್ಚೆಗಳು, ವಿಮರ್ಶೆಗಳು ನಡೆದಿವೆ. ಆದರೆ, ಅವರ ಸಿನಿಮಾಗಳ ಬಗ್ಗೆ ಚರ್ಚೆಗಳು ನಿರೀಕ್ಷಿತ ಪ್ರಮಾಣದಲ್ಲಿ ನಡೆದಿಲ್ಲ. ಹೀಗಾಗಿ ಈ ಕೃತಿ ಅವರ ಸಿನಿಮಾಗಳ ಒಳನೋಟವನ್ನು ತೆರೆದಿಡುತ್ತದೆ ಎಂದರು.
ಕಾರ್ನಾಡರ ಸಿನಿಮಾಗಳು ವರ್ತಮಾನದ ನೆಲೆಯಲ್ಲಿಯೇ ರೂಪುಗೊಂಡವು. ಆದರೆ, ಅವುಗಳನ್ನು ವಿಶ್ಲೇಸುವಾಗ ಕಾಲಾತೀತವಾಗಿಯೇ ನೋಡಬೇಕಾಗುತ್ತದೆ ಎಂದ ಅವರು, ಕಾರ್ನಾಡ್ ನಿರ್ದೇಶಿಸಿದ ಸಂಸ್ಕಾರ, ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೇ ಚಿತ್ರಗಳು ಬಹು ಚರ್ಚಿತವಾದವುಗಳು. ಈ ಸಿನಿಮಾಗಳ ಮೂಲಕ ಅವರು, ಹೊಸ ಅಲೆಯನ್ನು ಸೃಷ್ಟಿಸಿದವರು ಎಂದರು.
ರಾಷ್ಟç ಕವಿ ಕುವೆಂಪುರವರ ಕಾನೂರು ಹೆಗ್ಗಡತಿಯನ್ನು ತೆರೆಗೆ ತಂದಾಗ, ಸುದೀರ್ಘವಾದ ಕಾದಂಬರಿ ಹೇಗೆ ತೆರೆಗೆ ಅಳವಡಿಸರಬಹುದು ಎಂಬ ಕುತೂಹಲವಿತ್ತು. ಚಿತ್ರಕಥೆಯ ಹಂತದಲ್ಲಿ ಅದಕ್ಕೊಂದು ಹೊಸ ಚೌಕಟ್ಟನ್ನು ಗಿರೀಶ್ ಕಾರ್ನಾಡ್ ನೀಡಿದ್ದಾರೆ ಎಂದು ವಿವರಿಸಿದ ಅವರು, ಕಾರ್ನಾಡರ ಸಿನಿಮಾಗಳ ಚರ್ಚೆ ಪ್ರಸ್ತುತದ ಸಂದರ್ಭದಲ್ಲಿ ಅತ್ಯಂತ ಮಹತ್ವದ್ದು ಎಂದರು.
ಕೃತಿಕಾರ ಮುರಳೀಧರ ಖಜಾನೆ ಮಾತನಾಡಿ, ಇಂದು ಸಿನಿಮಾಗಳ ವ್ಯಾಖ್ಯಾನ ಬದಲಾಗಿದೆ. ಯಾವುದೇ ತಂತ್ರಜ್ಞಾನ ಇಲ್ಲದ ಸಮಯದಲ್ಲಿ ಕಾರ್ನಾಡರು,ಒಂದಾನೊಂದು ಕಾಲದಲ್ಲಿ, ಉತ್ಸವ್‌ನಂತಹ ಮಹತ್ವದ ಚಿತ್ರಗಳನ್ನು ನೀಡುತ್ತಾರೆ. ಇದು ಅವರ ದೂರದೃಷ್ಟಿಯ ಸಂಕೇತ ಎಂದರು.
ಪುಸ್ತಕದ ಸಂಪಾದಕರಾದ ಹಿರಿಯ ರಂಗಕರ್ಮಿ, ಸಂಗೀತ ಶಾಸö ಜ್ಞ ಎಂ. ಕೆ. ಶಂಕರ್ ಮಾತನಾಡಿ, ವಾಸ್ತವವಾಗಿ ಈ ಕೃತಿಯನ್ನು ಸಂಪಾದಿಸುವ ಅಗತ್ಯ ಇರಲಿಲ್ಲ. ಆದರೆ, ಓದಗರಿಗೆ ಅನುಕೂಲವಾಗಲಿ ಎಂಬ ಕಾರಣದಿಂದ ಈ ಕೆಲಸ ಮಾಡಬೇಕಾಯಿತು. ಸಿನಿಮಾಗಳಲ್ಲಿ ಸಂಕಲನ ಹೇಗೋ ಹಾಗೆಯೇ ಈ ಕೃತಿಯನ್ನು ಸಂಪಾದಿಸಲಾಗಿದೆ. ಹೀಗಾಗಿ ಈ ಕೃತಿಯನ್ನು ಓದಿದಾಗ, ಕಾರ್ನಾಡ ಸಿನಿಮಾಗಳು ತೆರೆದುಕೊಂಡ ಅನುಭವವಾಗುತ್ತದೆ ಎಂದರುದ
ಶಿವಮೊಗ್ಗ ಮೂಲದ ಮುರಳೀಧರ ಖಜಾನೆಯವರು ಸುಮಾರು ನಾಲ್ಕು ದಶಕಗಳ ಕಾಲ ಪತ್ರಕರ್ತರಾಗಿ ಪ್ರಜಾವಾಣಿ, ಉದಯವಾಣಿ ಹಾಗೂ ದಿ ಹಿಂದೂ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿರುವ ಕನ್ನಡ ಹಾಗೂ ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಒಡನಾಡುತ್ತಿರುವ ಅಪರೂಪದ ಪತ್ರಕರ್ತರು ಹಾಗೂ ಬರಹಗಾರರು ಎಂದು ಪರಿಚಯ ಮಾಡಿಕೊಟ್ಟ ಡಾ. ಹೆಚ್. ಎಸ್. ನಾಗಭೂಷಣ್, ಖಜಾನೆಯವರು ಶಿವಮೊಗ್ಗೆಯಲ್ಲಿ ಇದ್ದ ಸಂದರ್ಭದಲ್ಲಿ ರಂಗಭೂಮಿಯಲ್ಲಿಯೂ ಗುರುತಿಸಿಕೊಂಡಿದ್ದು, ಅಭಿನಯ ತಂಡದ ಹಲವಾರು ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಹಿನ್ನೆಲೆಯಲ್ಲಿಯೂ ಕೆಲಸ ಮಾಡಿದ್ದಾರೆ. ಜೊತೆಗೆ ಅನೇಕ ಜನಪರ ಹೋರಾಟಗಳಲ್ಲಿಯೂ ಕೂಡಾ ಭಾಗಿಯಾಗಿದ್ದಾರೆ ಎಂದರು.
Bahumukhi Shivamogga ಮುರಳಿರವರು, ರುಸ್ತುಂ ಬರುಚ ಇವರ ಕೊಶ್ವನ್ ಆಥ್ ( ನಂಬಿಕೆಯ ಪ್ರಶ್ನೆ) ಹಾಗೂ ಡಿ. ಮಂಡಲ್ ರವರ ಅಯೋಧ್ಯ ಆರ್ಕಾ್ಯಲಜಿಆಸ್ಟರ್ ಡೆಮಾಕ್ರೆಸಿ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ . ಅಲ್ಲದೆ ರ‍್ಯಾಂಡಮ್ ರಿ-ಕ್ಷನ್ಸ್ – ಎ ಕೆಲೈಡೋಸ್ಕೋಪಿಕ್ ಮ್ಯೂಸಿಂಗ್ಸ್ ಆನ್ ಕನ್ನಡ ಸಿನೆಮಾ ಹೆಸರಿನ ಇಂಗ್ಲಿಷ್ ಪುಸ್ತಕದ ನಂತರ ಈಗ ಕಾರ್ನಾಡ್ ಕೆಲೈಡೋಸ್ಕೊಪ್ ಇಂಗ್ಲೀಷ್ ಕೃತಿ ಪ್ರಕಟಿಸಿದ್ದಾರೆ. ಭಾರತೀಯ ಚಲನಚಿತ್ರದ ಬಗ್ಗೆ ಅಧಿಕೃತವಾಗಿ ಮಾತನಾಡಬಲ್ಲ ಇವರು, ಜಿ. ವಿ. ಅಯ್ಯರ್, ಗರುದತ್, ಪ್ರಸಿದ್ಧ ಛಾಯಾಗ್ರಾಹಕ ವಿ. ಕೆ. ಮೂರ್ತಿ ಕುರಿತಾಗಿ ಕೃತಿಗಳನ್ನು ಸಧ್ಯದಲ್ಲಿಯೇ ಹೊರತರಲಿದ್ದಾರೆ. ಹಾಗೆಯೇ ಕನ್ನಡ ರಂಗಭೂಮಿಗೆ ಮಹತ್ವದ ನಾಟಕವೊಂದರ ರಚನೆಯಲ್ಲಿಯೂ ತೊಡಗಿದ್ದಾರೆ ಎಂದು ವಿವರಿಸಿದರು.

Bapuji Institute of Hi-Tech Education ಪಠ್ಯಗಳು ಹೊರೆಯಲ್ಲ. ಅದಕ್ಕಿಂತ ಹೊರತಾದ ಜ್ಞಾನವೂ ಸಾಧನೆಗೆ ಅವಶ್ಯ- ‌ ಪ್ರೊ.ಜಿ.ಅನಿತಾ ಕುಮಾರಿ

0

Bapuji Institute of Hi-Tech Education ಪಠ್ಯಗಳು ಹೊರೆಯಲ್ಲ, ಕೇವಲ ನಾಲ್ಕು ತಿಂಗಳುಗಳಲ್ಲಿ ಪೂರೈಸಬಹುದು ಆದರೆ ಅವು ಪರಿಪೂರ್ಣವೂ ಅಲ್ಲ, ಪಠ್ಯದಿಂದ ಹೊರತಾದ ಜ್ಞಾನವೂ ಸಾಧನೆಗೆ ಅವಶ್ಯ ಎಂದು ಎಂ ಎಸ್ ಬಿ ವಾಣಿಜ್ಯ ಮತ್ತು ಕಲಾ ಕಾಲೇಜಿನ ಪ್ರಾಂಶುಪಾಲೆ ಪ್ರೊ.ಅನಿತಾ ಕುಮಾರಿ ಜೆ ಹೇಳಿದರು.

ಅವರಿಂದು ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಹೈಟೆಕ್ ಎಜುಕೇಶನ್ ನ ವಾಣಿಜ್ಯ ವಿಭಾಗದ ವತಿಯಿಂದ ಏರ್ಪಾಡಾಗಿದ್ದ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕೋರುವ ‘ಫ್ಲೋಸಂ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ಪಠ್ಯದಿಂದ ಹೊರತಾದ ವಾಣಿಜ್ಯ ಮತ್ತು ಕೈಗಾರಿಕೋದ್ಯಮಗಳ ವಸ್ತು ಸ್ಥಿತಿ ಬೆಳವಣಿಗೆ ಹಾಗೂ ಭವಿಷ್ಯವನ್ನು ಅಂತರ್ಜಾಲ ಮುಂತಾದ ಆಧುನಿಕ ತಂತ್ರಜ್ಞಾನಗಳಿಂದ ವಿದ್ಯಾರ್ಥಿಗಳು ಪಡೆದುಕೊಳ್ಳುತ್ತಾ ನವೀಕರಣಗೊಳ್ಳುತ್ತಿರಬೇಕು, ಆಗ ಅವಕಾಶಗಳು ಗೋಚರವಾಗುತ್ತವೆ, ಅವನ್ನು ಬಾಚಿಕೊಳ್ಳಬಹುದು, ಅಧ್ಯಾಪನವು ಶಿಕ್ಷಕರ ಜವಾಬ್ದಾರಿಯಾದರೆ ಅಧ್ಯಯನವು ವಿದ್ಯಾರ್ಥಿಗಳ ಜವಾಬ್ದಾರಿಯಾಗಿದೆ, ಇದಕ್ಕಾಗಿ ಗಮನವಿಟ್ಟು ಆಲಿಸಬೇಕು ಅರ್ಥ ಮಾಡಿಕೊಳ್ಳಬೇಕು ಇದಕ್ಕೆ ಬದ್ಧತೆ ಸಮರ್ಪಣೆ ಮತ್ತು ಮಗ್ನತೆ ಬೇಕು ಎಂದರಲ್ಲದೇ ಹಳೆಯ ಪೀಳಿಗೆಗಿಂತ ಈಗಿನ ಪೀಳಿಗೆಗೆ ತಂತ್ರಜ್ಞಾನಗಳ ತಿಳುವಳಿಕೆ ಹೆಚ್ಚಿಗೆ ಇದ್ದು ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದರು.

ಸ್ವಾಗತ ಕೋರುತ್ತಾ ಪ್ರಾಸ್ತಾವಿಕ ನುಡಿಗಳನ್ನಾಡಿದ ಕಾಲೇಜಿನ ನಿರ್ದೇಶಕ ಡಾ. ಸ್ವಾಮಿ ತ್ರಿಭುವನಾನಂದ ಹೆಚ್ ವಿ ಸ್ಪರ್ಧಾತ್ಮಕತೆಯು ಸಾಮರ್ಥ್ಯವನ್ನು ಅವಲಂಬಿಸಿರುತ್ತದೆ, ಸಾಮರ್ಥ್ಯ ವೃದ್ಧಿಗಾಗಿ ಪಠ್ಯದೊಂದಿಗೆ ವಾಣಿಜ್ಯ ವಿಷಯ ಸಂಬಂಧೀ ಇತರೆ ಕೋರ್ಸ್ ಗಳನ್ನೂ ಮಾಡುವುದು ಉತ್ತಮ ಎಂದರು.

ಅಧ್ಯಕ್ಷ ಸ್ಥಾನದಿಂದ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ಬಿ ವೀರಪ್ಪನವರು ಹಿರಿಯ ವಿದ್ಯಾರ್ಥಿಗಳು ಒಟ್ಟಾಗಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕೋರುವ ಇಂತಹ ಕಾರ್ಯಕ್ರಮ ಏರ್ಪಡಿಸಿರುವುದು ಅನುಕರಣೀಯವಾಗಿದೆ, ಇದು ಬಾಪೂಜಿ ವಿದ್ಯಾ ಸಂಸ್ಥೆಯ ಕಾಲೇಜು ವಿದ್ಯಾರ್ಥಿಗಳ ಉತ್ತಮ ಅಭಿರುಚಿಯನ್ನು ಸಾಕ್ಷೀಕರಿಸುತ್ತಿದೆ ಎಂದರು.

Bapuji Institute of Hi-Tech Education ಅಪೂರ್ವ ಎಂ ಬಿ ಹಾಗೂ ಸೃಷ್ಟಿ ಎ ಜೈನ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಪ್ರಾರ್ಥನೆಯನ್ನು ಅಕ್ಷತಾ ಎಂ ವಿ ಹಾಡಿದರೆ ಅತಿಥಿಗಳ ಪರಿಚಯವನ್ನು ಸ್ನೇಹಾ ವಿ ಆರ್, ರಾಘವ್ ಜಿ ಎನ್ ಮಾಡಿದರು. ಪ್ರತಿಭಾ ಪುರಸ್ಕಾರದ ನಂತರ ವಂದನೆಗಳನ್ನು ಪ್ರೊ. ಬಿ ಬಿ ಮಂಜುನಾಥ ಅರ್ಪಿಸಿದರು. ಬೋಧಕ ವರ್ಗದ ಲತಾ ಓ ಹೆಚ್, ಶ್ವೇತಾ ಬಿ ವಿ, ಮಂಜುಳಾ ಎ ಎನ್, ಜ್ಞಾನೇಶ್ವರ್ ಆರ್ ಎಸ್, ಪ್ರಜ್ವಲ್ ಎ ಆರ್, ನಾಗರಾಜ್ ಎಂ ಎಸ್, ನರೇಂದ್ರ ಡಿ ಆರ್ ಮುಂತಾದವರು ಉಪಸ್ಥಿತರಿದ್ದರು.

ಚಿತ್ರ ಹಾಗೂ ವರದಿ: -ಡಾ. ಎಚ್ ಬಿ ಮಂಜುನಾಥ, ಹಿರಿಯ ಪತ್ರಕರ್ತರು-

Karnataka State Commission For Backward Classes ಆಗಸ್ಟ್ 23 ರಿಂದ ಹಿಂದುಳಿದ ವರ್ಗಗಳ‌ ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ

0

Karnataka State Commission For Backward Classes ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಾಳೆ ಆಗಸ್ಟ್ 23 ರಿಂದ ಪ್ರಾರಂಭಿಸುತ್ತಿದೆ, ವಿದ್ಯತ್ ಮೀಟರ್ ರೀಡರುಗಳು ಎಲ್ಲ ಮನೆಗಳನ್ನು ಜಿಯೋಟ್ಯಾಗಿಂಗ್ ಮಾಡುವ ಕಾರ್ಯ ಪ್ರಾರಂಭಿಸಲಿದ್ದಾರೆ. ಯಾವುದೇ ಮನೆಗಳು ತಪ್ಪಿ ಹೋಗದಂತೆ ಯಶಸ್ವಿಯಾಗಿ ಸಮೀಕ್ಷೆ ಕೈಗೊಳ್ಳಲು ರಾಜ್ಯದ ಜನತೆ ಸಹಕರಿಸಬೇಕು ಎಂದು ಆಯೋಗದ ಅಧ್ಯಕ್ಷ ಮಧುಸೂಧನ್ ಆರ್ ನಾಯ್ಕ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸುವ ಬದ್ಧತೆಯೊಂದಿಗೆ ಹಮ್ಮಿಕೊಳ್ಳಲಾಗಿದೆ.
ಮೊದಲ ಹಂತದಲ್ಲಿ ಸಮೀಕ್ಷೆಗೆ ಸಂಬಂಧಿಸಿದ ಪೂರ್ವಭಾವಿ ಕೆಲಸಗಳಾಗಿರುವ ಮನೆ ಪಟ್ಟಿ ಮತ್ತು ಅವುಗಳ ನಕ್ಷೆ (ಮ್ಯಾಪಿಂಗ್) ಸಿದ್ಧಪಡಿಸುವ ಕಾರ್ಯವನ್ನು ಒಳಗೊಂಡಿರುತ್ತದೆ. ಅದು ರಾಜ್ಯದಾದ್ಯಂತ ಎಲ್ಲಾ ಮನೆಗಳ ಸಂಪೂರ್ಣ ಎಣಿಕೆ, ಅನುಕ್ರಮ ಸಂಖ್ಯೆಗಳನ್ನು ನೀಡುವುದು ಮತ್ತು ಮ್ಯಾಪಿಂಗ್ ಮಾಡುವ ಕೆಲಸವನ್ನು ಸಾಧ್ಯವಾಗಿಸುತ್ತದೆ. ರಾಜ್ಯದಲ್ಲಿರುವ ಎಲ್ಲಾ ವಾಸದ ಮನೆಗಳಿಗೆ ವಿದ್ಯುತ್ ಸಂಪರ್ಕವಿರುವುದರಿಂದ ವಾಸದ ಮನೆಗಳ ಆರ್. ಆರ್. ಮೀಟರ್ ಆಧಾರದ ಮೇಲೆ ಮನೆಗಳನ್ನು ಗುರುತಿಸಿ ಅಲ್ಲಿರುವ ಜನರ ಸಮೀಕ್ಷೆ ಮಾಡುವುದರಿಂದ ಯಾವುದೇ ಮನೆಗಳು ಸಮೀಕ್ಷಾ ವ್ಯಾಪ್ತಿಯಿಂದ ತಪ್ಪಿ ಹೋಗುವುದಿಲ್ಲ.

ಇದರಿಂದ ಎರಡನೇ ಹಂತದಲ್ಲಿ ಸಮೀಕ್ಷೆಯ ಕಾರ್ಯವನ್ನು ವ್ಯವಸ್ಥಿತವಾಗಿ ಮತ್ತು ವೈಜ್ಞಾನಿಕವಾಗಿ ಕಾರ್ಯಗತಗೊಳಿಸಲು ಅನುಕೂಲವಾಗುತ್ತದೆ.ಎರಡನೇಯ ಹಂತದ ಸಮೀಕ್ಷೆಯ ಕಾರ್ಯವನ್ನು ದಸರಾ ರಜೆಯ ಅವಧಿಯಲ್ಲಿ 22 ನೇ ಸೆಪ್ಟೆಂಬರ್ ನಿಂದ 7 ನೇ ಅಕ್ಟೋಬರ್ 2025 ರವರೆಗೆ ನಡೆಸಲು ಗುರಿ ಹೊಂದಲಾಗಿದೆ. ಈ ಸಮಯದಲ್ಲಿ ಶಾಲಾ ರಜಾದಿನಗಳು ಇರುವುದರಿಂದ ಸಮೀಕ್ಷೆ ಕಾರ್ಯಕ್ಕೆ ಪೂರಕವಾಗುತ್ತದೆ.

ಇ-ಆಡಳಿತ ಮತ್ತು ಇಂಧನ ಇಲಾಖೆಗಳು ವಿದ್ಯುಚ್ಛಕ್ತಿ ಮೀಟರ್ ಸಂಪರ್ಕದ (ಆ‌ರ್.ಆ‌ರ್. ನಂಬರ್) ಆಧಾರದ ಮೇಲೆ ವಿನ್ಯಾಸಗೊಳಿಸಿದ ಈ ನವೀನ, ಕ್ರಿಯಾತ್ಮಕ ಮತ್ತು ವಿಶಿಷ್ಟ ವ್ಯವಸ್ಥೆಯು ಉತ್ತಮವಾಗಿದೆ. ಅದಕ್ಕನುಗುಣವಾಗಿ ಒಂದು ಅಗತ್ಯವಾದ ‘ಆ್ಯಪ್’ ಅಭಿವೃದ್ಧಿಪಡಿಸಲಾಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರು ಸೇರಿದಂತೆ, ಆಯೋಗದ ಇಂಧನ ಇಲಾಖೆಯ, ಇ.ಡಿ.ಸಿ.ಎಸ್ ಸಂಸ್ಥೆಯ ಉತ್ಸಾಹಿ ಹಾಗೂ ಸೃಜನಶೀಲ ಸಲಹಾ ತಂಡದ ಸಹಕಾರದೊಂದಿಗೆ ಈ ಪ್ರಕ್ರಿಯೆಯನ್ನು ವಿನ್ಯಾಸಗೊಳಿಸಲಾಗಿದೆ. ಸಮೀಕ್ಷೆಯ ಕಾರ್ಯವನ್ನು ತ್ವರಿತವಾಗಿ ಪ್ರಾರಂಭಿಸಲು ಸಹಾಯ ಮಾಡುತ್ತದೆ.

ಇದು ರಾಜ್ಯದಾದ್ಯಂತ ಇರುವ ಇಂಧನ ಇಲಾಖೆಯ ಎಲ್ಲ ವಿದ್ಯುತ್ ಸರಬರಾಜು ಕಂಪನಿಗಳ ( ESCOM) ಗಳ ಅಪಾರ ಸಂಖ್ಯೆಯ ‘ಮೀಟರ್ ರೀಡರ್’ (Meter Readers) ಗಳನ್ನು ಒಳಗೊಂಡಿರುತ್ತದೆ. ಕರ್ನಾಟಕ ರಾಜ್ಯವು ಎಲ್ಲಾ ಮನೆಗಳನ್ನು ವಿದ್ಯುದ್ದೀಕರಣ ಗೊಳಿಸುವುದರಲ್ಲಿ ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂಬುದು ಹೆಮ್ಮೆಯ ವಿಷಯವಾಗಿರುವುದರಿಂದ ಎಸ್ಕಾಂಗಳ ಮೀಟರ್ ರೀಡರ್ ಗಳು, ಗ್ರಾಹಕರ ಮನೆ ಬಳಕೆ ವಿದ್ಯುತ್ ಸಂಪರ್ಕದ ಮೀಟರ್ ಅನ್ನು ಓದುವುದು ಮತ್ತು ಬಿಲಿಂಗ್ ಮಾಡುವುದರ ಜೊತೆಗೆ ಮನೆಗಳನ್ನು ‘ಜಿಯೋ ಟ್ಯಾಗ್’ ಮಾಡಿ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವ್ಯಾಪ್ತಿಗೆ ಒಳಪಟಿಸುತ್ತಾರೆ.

ಮೀಟರ್ ರೀಡರ್ ಗಳು ಸೆರೆಹಿಡಿದ ಮನೆ ಪಟ್ಟಿ ಡೇಟಾವನ್ನು EDCS (ನಾಗರಿಕ ಸೇವೆಗಳ ಎಲೆಕ್ಟ್ರಾನಿಕ್ ವಿತರಣೆ) ನ ಸರ್ವರ‌್ ಗಳಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ. ನಂತರ ದ್ವಿತೀಯ ದತ್ತಾಂಶಗಳನ್ನು ಆಧರಿಸಿ, ಮೌಲೀಕರಿಸಿದ ನಂತರ ‘ಮನೆ ಪಟ್ಟಿ’ ಸಮೀಕ್ಷೆಯ ಉದ್ದೇಶಕ್ಕಾಗಿ ‘ಮ್ಯಾಪಿಂಗ್’ ಮಾಡಲಾಗುತ್ತದೆ. ಅಭಿವೃದ್ಧಿಪಡಿಸಲಾದ ಅಪ್ಲಿಕೇಶನ್ ನಲ್ಲಿ ಮನೆಯ ‘ಸ್ಥಳ’ (Location) ವನ್ನು ಸೆರೆಹಿಡಿಯಲಾಗುತ್ತದೆ ಮತ್ತು ಪ್ರತಿ ಮನೆಗಳಿಗೆ ‘ವಿಶಿಷ್ಟ್ಯ (Unique Number) ಸಂಖ್ಯೆಯನ್ನು’ ನೀಡಲಾಗುತ್ತದೆ. [ಅಪಾರ್ಟ್‌ ಮೆಂಟ್ ಗಳು / ವಾಸಸ್ಥಳಗಳ ಕ್ಲಸ್ಟರ್ ಸೇರಿದಂತೆ]

ತಮ್ಮ ‘ಬಿಲ್ಲಿಂಗ್ ಸೈಕಲ್’ನಲ್ಲಿ ಮೀಟ‌ರ್ ರೀಡರ್ ಗಳು ಆಗಸ್ಟ್ 23, 2025 ರಿಂದ ಸದರಿ ಕೆಲಸವನ್ನು ಪ್ರಾರಂಭಿಸುತ್ತಾರೆ ಮತ್ತು ಅಭಿವೃದ್ಧಿ ಪಡಿಸಲಾದ ಆ್ಯಪ್ ನಲ್ಲಿ ದಾಖಲಿಸುತ್ತಾರೆ. ಇದಾದ ನಂತರ ಪ್ರತಿ ಮನೆಗೂ ಸ್ಟಿಕ್ಕರ್ ಅಂಟಿಸಿ ಸಮೀಕ್ಷಾ ದಾರರಿಗೆ ಮನೆಯ ಗುರುತಿಸುವಿಕೆ ಸುಲಭವಾಗುವಂತೆ ಮಾಡುತ್ತಾರೆ.

Karnataka State Commission For Backward Classes ಪ್ರಸ್ತಾವಿತ ಸಮೀಕ್ಷೆಯು ಹಿಂದುಳಿದ ವರ್ಗಗಳು ಮತ್ತು ಇತರ ಎಲ್ಲಾ ಜನರ ‘ದತ್ತಾಂಶಗಳನ್ನು ಸೆರೆಹಿಡಿಯುವುದು’ ಮಾತ್ರವಲ್ಲದೆ, ಅಂದಾಜು 7 ಕೋಟಿ ಜನರಿಗೆ ಸರ್ಕಾರಿ ಇಲಾಖೆಗಳಿಂದ ಪ್ರಾರಂಭಿಸಲಾಗಿರುವ ಹಾಗೂ ಮುಂದೆ ಪ್ರಾರಂಭಿಸಲಿರುವ ಎಲ್ಲಾ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಬಳಸಬಹುದಾದ ಉಪಯುಕ್ತ ದತ್ತಾಂಶವಾಗಲಿದೆ.

ಮನೆ ಪಟ್ಟಿ ಕಾರ್ಯಾಚರಣೆಗಳ ಈ ಮೊದಲ ಹಂತವು ತುಂಬಾ ಸವಾಲಿನದ್ದಾಗಿದ್ದರೂ ರಾಜ್ಯದ ಎಲ್ಲಾ ಮನೆಗಳನ್ನು ಒಳಗೊಂಡಂತೆ ವ್ಯವಸ್ಥಿತವಾಗಿ ಸಮೀಕ್ಷೆಯನ್ನು ನಡೆಸುವ ಉದ್ದೇಶಕ್ಕಾಗಿ ಇದು ಬಹಳ ಪ್ರಮುಖ ಕಾರ್ಯವಾಗಿದೆ. ಆದ್ದರಿಂದ, ಸಾರ್ವಜನಿಕರು ಮತ್ತು ಪ್ರತಿಯೊಂದು ಕುಟುಂಬದ ಸದಸ್ಯರು [ವಿಶೇಷವಾಗಿ ಅಪಾರ್ಟೆಂಟ್ ಮತ್ತು ಕ್ಲಸ್ಟರ್ ವಾಸಸ್ಥಳಗಳಲ್ಲಿ ವಾಸಿಸುವವರು] ಮೀಟರ್ ರೀಡರ್ ಗಳಿಗೆ ವಹಿಸಲಾಗಿರುವ ಮನೆ ಪಟ್ಟಿ ಕೆಲಸವನ್ನು ಸುಗಮವಾಗಿ ಪೂರ್ಣಗೊಳಿಸುವ ದಿಸೆಯಲ್ಲಿ ಸಹಕರಿಸಲು ಮತ್ತು ಅನುಕೂಲ ಮಾಡಿಕೊಡಲು ಆಯೋಗ ಮನವಿ ಮಾಡಿದೆ.

Canara Bank Rural Self Employment Training Institute ವಸ್ತ್ರ ಚಿತ್ರ ಕಲೋದ್ಯಮ & ಸೆಲ್ ಫೋನ್ ರಿಪೇರಿ ಬಗ್ಗೆ ಸ್ವ ಉದ್ಯೋಗ ತರಬೇತಿ ಪಡೆಯಲು ಅರ್ಜಿ ಆಹ್ವಾನ

0

Canara Bank Rural Self Employment Training Institute ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರಿನಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು 8ನೇ ತರಗತಿ ಉತ್ತೀರ್ಣರಾಗಿರಬೇಕು. ಮತ್ತು ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ ಹೊಂದಿದು ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು.

ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
31 ದಿನಗಳ ವಸ್ತ್ರಚಿತ್ರ ಕಲಾ ಉದ್ಯಮಿ
( ಎಂಬ್ರಾಯಿಡರಿ ) ತರಬೇತಿಯು 01/09/2025ರಿಂದ ಪ್ರಾರಂಭಗೊಳ್ಳಲಿದೆ.

30 ದಿನಗಳ ಸೆಲ್ ಫೋನ್ ರಿಪೇರಿ & ಸರ್ವಿಸ್ ತರಬೇತಿಯು 24/09/2025 ರಿಂದ ಆರಂಭವಾಗಲಿದೆ.

Canara Bank Rural Self Employment Training Institute ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು-೫೭೭ ೨೧೬ (ಶಿವಮೊಗ್ಗ ತಾಲ್ಲೂಕು)
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. ೯೭೪೩೪೨೯೫೯೫, ೮೭೨೨೩೮೪೫೪೧, ೯೧೬೪೪೧೧೫೮೦, ೮೧೦೫೩೭೮೭೩೫ ೯೪೪೯೩೭೧೫೭೯, ೯೪೮೧೯೫೫೭೨೧, ಇಲ್ಲಿ ಸಂಪರ್ಕಿಸಬಹುದಾಗಿದೆ.

H.S. Sundaresh ನಿವೇಶನ ಬೇಕೆ? “ಸೂಡಾ” ಅ‍ಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರಿಂದ ವಿಶೇಷ ಮಾಹಿತಿ

0

H.S. Sundaresh ಶಿವಮೊಗ್ಗ ನಗರದ ಹೊರವಲಯದಲ್ಲಿರುವ ಗೋಪಶೆಟ್ಟಿಕೊಪ್ಪ ಗ್ರಾಮದ ವಿವಿಧ ಸ.ನಂ.ಗಳ 104 ಎಕರೆ ಭೂಪ್ರದೇಶದ ಪೈಕಿ ಶೇ.50:50ರ ಅನುಪಾತದಲ್ಲಿ ಒಪ್ಪಿಗೆ ಸೂಚಿಸಿರುವ 30 ಎಕರೆ ಜಮೀನನ್ನು ಮೊದಲ ಹಂತದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದ್ದು, ಸರ್ಕಾರದ ಪೂರ್ವಾನುಮೋದನೆಗಾಗಿ ಸಲ್ಲಿಸಲಾಗಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅ‍ಧ್ಯಕ್ಷ ಹೆಚ್.ಎಸ್.ಸುಂದರೇಶ್‌ಅವರು ಹೇಳಿದರು.
ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. ಸದರಿ ಪ್ರದೇಶದಲ್ಲಿನ ಉಳಿದ ಭೂಪ್ರದೇಶವನ್ನು ಪರಿವರ್ತಿಸಲೂ ಸಹ ಸರ್ಕಾರದಿಂದ ಒತ್ತಡವಿದ್ದು, ಪ್ರಕ್ರಿಯೇ ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು ಎಂದ ಅವರು, ಕೆಲವು ದಶಕಗಳ ಹಿಂದೆ ಸೂಡಾ ವ್ಯಾಪ್ತಿಯ ಭದ್ರಾವತಿ ಪಟ್ಟಣದಲ್ಲಿ ಸ್ವಾದೀನಪಡಿಸಿಕೊಂಡಿರುವ 34ಎಕರೆ ಜಮೀನನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದ್ದು, ಶೀಘ್ರದಲ್ಲಿ ಕಾರ್ಯಾರಂಭಿಸಲಾಗುವುದು ಎಂದವರು ನುಡಿದರು.
ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಹಾಯೋಜನೆ-11ರ ಕಾರ್ಯ ಪ್ರಗತಿಯಲ್ಲಿದ್ದು, ಹಾಲಿ ಭೂಉಪಯೋಗ ನಕ್ಷೆಗಳನ್ನು ತಯಾರಿಸಿ ಪ್ರಾಧಿಕಾರದಿಂದ ಅನುಮೋದಿಸಲಾಗಿರುತ್ತದೆ. ಪ್ರಸ್ತಾವಿತ ಭೂ ಉಪಯೋಗ ನಕ್ಷೆ. ರಸ್ತೆ ಪರಿಚಲನ ನಕ್ಷೆಗಳನ್ನು ಸಿದ್ದಪಡಿಸಿ ತಾತ್ಕಾಲಿಕ ಅನುಮೋದನೆ ಪಡೆಯಲು ಸರ್ಕಾರಕ್ಕೆ ಸಲ್ಲಿಸಲು ಪ್ರಸ್ತಾವನೆಯನ್ನು ಸಿದ್ದಪಡಿಸಲಾಗಿದೆ ಎಂದವರು ನುಡಿದರು.
ಊರಗಡೂರಿನ ವಸತಿ ಬಡಾವಣೆಯಲ್ಲಿ 04 ಎಕರೆ ಪ್ರದೇಶದಲ್ಲಿ ಮತ್ತು ಸೋಮಿನಕೊಪ್ಪದಲ್ಲಿ ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಅಪಾರ್ಟ್‌ಮೆಂಟ್‌ಗಳನ್ನು ರೂ. 10000.00 ಲಕ್ಷಗಳ ಅಂದಾಜುಮೊತ್ತದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ. ಸ್ವಾಮಿ ವಿವೇಕಾನಂದ ಬಡಾವಣೆಯ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಪಕ್ಕದಲ್ಲಿ ರೂ. 1000.00 ಲಕ್ಷಗಳ ಅಂದಾಜು ಮೊತ್ತದಲ್ಲಿ ಮಾಲ್ ನಿರ್ಮಿಸಲು ಉದ್ದೇಶಿಸಲಾಗಿದೆ. ಜೆ.ಹೆಚ್ ಪಟೇಲ್ ಬಡಾವಣೆಯ ಸೋಮಿನಕೊಪ್ಪ ಮುಖ್ಯರಸ್ತೆಯಲ್ಲಿಯೂ ವಾಣಿಜ್ಯ ಸಂಕೀರ್ಣ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದರು.
H.S. Sundaresh ಶಿವಮೊಗ್ಗ ನಗರದ ಯೋಜನಾ ಪ್ರದೇಶದ 320.00 ಲಕ್ಷಗಳ ವೆಚ್ಚದಲ್ಲಿ ವ್ಯಾಪ್ತಿಯಲ್ಲಿ 4 ಕೆರೆಗಳನ್ನು ಅಭಿವೃದ್ಧಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ ಶಿವಮೊಗ್ಗ ಮತ್ತು ಭದ್ರಾವತಿ ನಗರದಲ್ಲಿ 5000.00 ಲಕ್ಷಗಳ ವೆಚ್ಚದಲ್ಲಿ 22 ಕೆರೆಗಳನ್ನು ಅಭಿವೃದ್ಧಿಪಡಿಸಲು ಡಿ.ಪಿ.ಆರ್. ತಯಾರಿಸಲಾಗುತ್ತಿದೆ. ಶಿವಮೊಗ್ಗ ನಗರದ ಹೊರ ವರ್ತುಲ ರಸ್ತೆ ಅಭಿವೃದ್ಧಿಪಡಿಸಲು ಮತ್ತು ಶಿವಮೊಗ್ಗ ನಗರದ 3 ಮತ್ತು ಭದ್ರಾವತಿ ನಗರದ 3 ವೃತ್ತಗಳನ್ನು 4000.00 ಲಕ್ಷಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು.
ಪ್ರಾಧಿಕಾರದ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ 60 ಮೀ. ಅಗಲದ ಹೊರವರ್ತುಲ ರಸ್ತೆಯನ್ನು ರೂ.500.00 ಲಕ್ಷಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಹಾಗೂ ಜೆ.ಹೆಚ್.ಪಟೇಲ್ ಬಡಾವಣೆ ಅಟಲ್ ಬಿಹಾರಿ ವಾಜಪೇಯಿ ಬಡಾವಣೆ ಮತ್ತು ನಿಧಿಗೆ-ಮಾಚೇನಹಳ್ಳಿ ಬಡಾವಣೆಯಲ್ಲಿ ಒಟ್ಟು 3 ಉದ್ಯಾನವನಗಳ ಅಭಿವೃದ್ಧಿಪಡಿಸಲು ಒಟ್ಟು ರೂ. 295.00 ಲಕ್ಷಗಳ ಅಂದಾಜು ಮೊತ್ತದಲ್ಲಿ ಈಗಾಗಲೇ ಟೆಂಡರ್ ಕರೆಯಲಾಗಿದೆ. ಪ್ರಾಧಿಕಾರದ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿ ಶಿವಮೊಗ್ಗ ಮತ್ತು ಭದ್ರಾವತಿ ನಗರದಲ್ಲಿ ಒಟ್ಟು 57 ಉದ್ಯಾನವನಗಳು ಹಾಗೂ 25 ಆಟೋ ಶೆಲ್ಡರ್‌ಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಅಲ್ಲದೇ ಪ್ರಾಧಿಕಾರಕ್ಕೆ ಅಟಲ್ ಬಿಹಾರಿ ವಾಜಪೇಯಿ (ಮಲ್ಲಿಗೇನಹಳ್ಳಿ) ವಸತಿ ಬಡಾವಣೆಯಲ್ಲಿ ಹೊಸ ಕಛೇರಿ ಕಟ್ಟಡವನ್ನು ರೂ. 1000.00 ಲಕ್ಷಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ. ಪ್ರಾಧಿಕಾರದ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿ ರೂ. 50.00 ಲಕ್ಷಗಳ ಅಂದಾಜುಮೊತ್ತದಲ್ಲಿ ಸ್ವಾಗತ ಕಮಾನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸೂಡಾ ಆಯುಕ್ತ ವಿಶ್ವನಾಥ ಮುದ್ದಜ್ಜಿ, ಸದಸ್ಯರಾದ ರವಿಕುಮಾರ್‌ಹೆಚ್.‌ಚನ್ನಪ್ಪ ಮತ್ತಿತರರು ಉಪಸ್ಥಿತರಿದ್ದರು.

Agriculture Department Shivamogga ಬೆಳೆ ಸಮೀಕ್ಷೆ ಯೋಜನೆ- ಜೆಟ್ ಪೈಪ್ಪಡೆಯಲು ಕೃಷಿ ಇಲಾಖೆ ಮಾಹಿತಿ ಅನುಸರಿಸಿ- ಎಸ್.ಟಿ.ರಮೇಶ್

0

Agriculture Department Shivamogga ಕೃಷಿ ಇಲಾಖೆ ಶಿವಮೊಗ್ಗ ಹಾಗೂ ಇ-ಆಡಳಿತ ಕರ್ನಾಟಕ ಸರ್ಕಾರ ಇವರ ಸಹಯೋಗದಲ್ಲಿ
ದಿನಾಂಕ: 21-08-2025 ರಂದು ತಾಲ್ಲೂಕಿನ ಸುಮಾರು 8 ಸಾವಿರ ರೈತರೊಂದಿಗೆ ದೂರವಾಣಿ ಕರೆ ಮುಖಾಂತರ 2025-26ನೇ ಸಾಲಿನ ಬೆಳೆ ಸಮೀಕ್ಷೆ ಯೋಜನೆ ಅನುಷ್ಠಾನ ಹಾಗೂ ಸೂಕ್ಷ್ಮ ನೀರಾವರಿ ಯೋಜನೆಯಡಿ ನೀಡಲಾಗುತ್ತಿರುವ ಸೌಲಭ್ಯಗಳ ಕುರಿತು ಕಾರ್ಯಗಾರವನ್ನು ನಡೆಸಲಾಯಿತು
ಶಿವಮೊಗ್ಗ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರಾದ ರಮೇಶ್.ಎಸ್.ಟಿ ರವರು ಮಾತನಾಡಿ, ಬೆಳೆ ಸಮೀಕ್ಷೆ ಯೋಜನೆ ಅನುಷ್ಠಾನ ಕುರಿತು ರೈತರ ಬೆಳೆ ಸಮೀಕ್ಷೆ 2025-26ಕ್ಕೆ ಸರ್ಕಾರವು ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಯ ಮಾಹಿತಿಯನ್ನು ಬೆಳೆ ಸಮೀಕ್ಷೆ ತಂತ್ರಾಂಶದ ಮೂಲಕ ತಾವೇ ನೇರವಾಗಿ ಬೆಳೆ ಸಮೀಕ್ಷೆ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ರೈತರು ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ರೈತರ ಬೆಳೆ ಸಮೀಕ್ಷೆ ಆಪ್ ( Farmer crop survey App)ನ್ನು ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಂಡು ಅಪ್ಲೋಡ್ ಮಾಡಬಹುದು.
ರೈತರಿಗೆ ಅಪ್ಲೋಡ್ ಮಾಡಲು ಸಾಧ್ಯವಾಗದಿದ್ದಲ್ಲಿ ತಾಲ್ಲೂಕು ಆಡಳಿತ ನೇಮಿಸಿರುವ ಮೊಬೈಲ್ ತಂತ್ರಾಂಶ ಜ್ಞಾನವುಳ್ಳ ಸ್ಥಳೀಯ ಖಾಸಗಿ ನಿವಾಸಿಗಳ ಸಹಾಯದಿಂದ ಬೆಳೆ ವಿವರ ದಾಖಲಿಸಬಹುದು. ಇದರಿಂದ ಪ್ರಕೃತಿ ವಿಕೋಪದಡಿ ಪ್ರವಾಹ ಮತ್ತು ಬರಗಾಲ ಸಂದರ್ಭದಲ್ಲಿ ನೀಡುವ ಬೆಳೆ ನಷ್ಟ ಪರಿಹಾರ ವಿತರಿಸಲು, ಕನಿಷ್ಟ ಬೆಂಬಲ ಬೆಲೆ ಯೋಜನೆ ಫಲಾನುಭವಿಗಳನ್ನು ಗುರುತಿಸಲು, ಬೆಳೆ ವಿಮಾ ಯೋಜನೆ, ಬೆಳೆ ವಿಸ್ತೀರ್ಣ, ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು, ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಅನುಕೂಲವಾಗುವುದು ಎಂದು ತಿಳಿಸಿದರು.
Agriculture Department Shivamogga ಸೂಕ್ಷ್ಮ ನೀರಾವರಿ ಯೋಜನೆಯಡಿ ನೀರಾವರಿ ಉಪಕರಣಗಳಾದ ಜೆಟ್ ಪೈಪ್‌ಗಳು/ ಕಪ್ಪು ಪೈಪ್‌ಗಳನ್ನು ಎಲ್ಲಾ ವರ್ಗದ ರೈತರಿಗೆ ಶೇ.90 ಸಹಾಯಧನದಲ್ಲಿ ವಿತರಿಸಲಾಗುವುದು ಹಾಗೂ ಈಗಾಗಲೇ ಸೌಲಭ್ಯ ಪಡೆದ ಫಲಾನುಭವಿಗಳು ಏಳು ವರ್ಷ ಮುಗಿದಿದ್ದರೆ ಮತ್ತೊಮ್ಮೆ ಪಡೆಯಲು ಹಾಗೂ 2.20 ಎಕರೆಗಿಂತ ಹೆಚ್ಚಿನ ಜಮೀನು ಹೊಂದಿರುವ ರೈತರು ಮತ್ತೊಂದು ಘಟಕ ಪಡೆಯಲು ಅವಕಾಶ ಕಲ್ಪಿಸಿದ್ದು, ರೈತರು ಕೇವಲ ಶೇಕಡ 10 ರಷ್ಟು ರೈತರ ವಂತಿಕೆಯನ್ನು ಪಾವತಿ ಮಾಡಿ ಸೌಲಭ್ಯ ಪಡೆಯಬಹುದು. ಈ ಯೋಜನೆಯಲ್ಲಿ ಪ್ರಸ್ತುತ ಅನುದಾನ ಲಭ್ಯವಿದ್ದು ಎಲ್ಲಾ ರೈತಭಾಂದವರು ತಮ್ಮ ಹತ್ತಿರದ ಕೃಷಿ ಇಲಾಖೆಗೆ ಭೇಟಿ ಮಾಡಿ ಆಧಾರ್, ಪಹಣಿ ಹಾಗೂ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಯೊಂದಿಗೆ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯಲು ಮನವಿ ಮಾಡಿದರು.