Tuesday, May 5, 2026
Tuesday, May 5, 2026
Home Blog Page 1970

ದಯವಿಟ್ಟು ಆತ್ಮಹತ್ಯೆಗೆ ಮುಂದಾಗದಿರಿ.

0

ನಿಮ್ಮ ಪಾದಕ್ಕೆ ನಮಸ್ಕಾರ ಮಾಡಿ ಮನವಿ ಮಾಡಿಕೊಳ್ತೇನೆ.ಅಭಿಮಾನಿ ದೇವರುಗಳು ಅಂತ ಅಪ್ಪಾಜಿ ನಿಮ್ಮನ್ನ ಕರೀತಿದ್ದರು. ಈಗಾಗಲೇ ನಮ್ಮ ಕುಟುಂಬ ನೋವಿನಲ್ಲಿದೆ. ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ ಅಂತ ರಾಘವೇಂದ್ರ ರಾಜ್ ಕುಮಾರ್ ಅತ್ಯಂತ ಕಳಕಳಿಯ ಮನವಿ ಮಾಡಿದ್ದಾರೆ.
ನಿಜ.ಹೋದ ಜೀವ ಮತ್ತೆ ಬಾರದು. ಹಾಗೇ ಜೀವ ಕಳೆದುಕೊಂಡರೂ ಅದು ಜೀವಕ್ಕೆ ಜೀವ ಕೊಟ್ಟಂತಾಗುವುದಿಲ್ಲ. ಅಭಿಮಾನ ತೋರಿಸಬೇಕು. ಆದರೆ ಪ್ರಾಣತ್ಯಾಗದಿಂದ ಅಲ್ಲ. ವ್ಯಕ್ತಿಯ ಆದರ್ಶಗಳನ್ನ ಪಾಲಿಸಿದರೆ ಸಾಕು ಅದೇ ಅಪ್ಟಟ ಪ್ರೀತಿ.

ಈಗ ಹಲವಾರು ಕ್ಷೇತ್ರದ ನಾಯಕರು ಅಪ್ಪು ವಿನ ಸಾಮಾಜಿಕ ಕಳಕಳಿ ಮೆಚ್ಚಿದ್ದಾರೆ.ಜೊತೆಗೆ ನೆರವು ನೀಡಿ,ಹೊಣೆಹೊರುವುದಾಗಿಯೂ ಹೇಳಿದ್ದಾರೆ.ಇದು ನೈಜ ಸೇವೆ. ಪುನೀತರ ಆತ್ಮಕ್ಕೂ ಶಾಂತಿ ತರುವ ಕೆಲಸವಾಗುತ್ತದೆ.

ಗೋಶಾಲೆ, ಅನಾಥಾಶ್ರಮ,
ವೃದ್ಧಾಶ್ರಮ, ಹೆಣ್ಣುಮಕ್ಕಳ ಶಿಕ್ಷಣಕ್ಕೆ ನೆರವು ,ನಿರ್ಗತಿಕರಿಗೆ ಆಶ್ರಯ , ಬಡಮಕ್ಕಳಿಗೆ ಓದಲು ಸಹಾಯ ಹೀಗೆ ಹಲವು ಕ್ಷೇತ್ರಗಳಿವೆ. ಇಂತಹವುಗಳ ಬಗ್ಗೆ ನಮ್ಮ ಅಭಿಮಾನ ವ್ಯಕ್ತಪಡಿಸಬೇಕು. ಅವುಗಳಿಗೆ ನಿಧಿ ಕೂಡಿಸಿ ಬೆಳೆಸಬೇಕು.ಇವತ್ತು ಎಷ್ಟು ಊರುಗಳಲ್ಲಿ ಇಂತಹವುಗಳ ಅಗತ್ಯವಿದೆ? ಬಹಳ ಜರೂರು ಈ ಕುರಿತು ಅಭಿಮಾನಿಗಳು ಸಂಘಟಿತರಾದರೆ ಪುನೀತರ ಆತ್ಮಕ್ಕೆ ಶಾಂತಿ ದೊರಕುತ್ತದೆ.
”ಅಪ್ಪು, ನೀನು ಇನ್ನು ಅಭಿಮಾನಿಗಳಲ್ಲಿಯೇ ಬದುಕುತ್ತಿದೀಯಾ ಎಂಬ ಭಾವನೆ ನನಗೆ ಕಂದ.’ ದೇವರನ್ನು ಪೂಜಿಸುವ ಜಾಗದಲ್ಲಿ ಅಪ್ಪುವಿಗೆ ಕೊಟ್ಟಿರುವ ಈ ಸ್ಥಾನಕ್ಕೆ ನನ್ನ ಸಾಷ್ಟಾಂಗ ನಮಸ್ಕಾರಗಳು.ಈ ಸಂದರ್ಭದಲ್ಲಿ ಇಂತಹ ಕಾರ್ಯಗಳಿಂದ ನಮಗೆ ಇನ್ನಷ್ಟು ಶಕ್ತಿ ತುಂಬುವ ನಮ್ಮ ನೆಚ್ಚಿನ ಅಭಿಮಾನಿ ದೇವರುಗಳಿಗೆ ನನ್ನ ವಂದನೆಗಳು.- ನಿಮ್ಮ ರಾಘಣ್ಣ” ಎಂದು ಸಾಮಾಜಿಕ ಜಾಲ ತಾಣ ಫೇಸ್ ಬುಕ್ ನಲ್ಲಿ ಬರೆದಿದ್ದಾರೆ.

ಗೃಹ ನಿರ್ಮಾಣ : ಗ್ರಾಹಕರಿಗೆ ಬಲವಂತ ಬೇಡ

0

ರಾಷ್ಟ್ರೀಯ ಗ್ರಾಹಕ ಆಯೋಗ ಎನ್ ಸಿ ಡಿ ಆರ್ ಸಿಯು ಫ್ಲಾಟ್ ಗಳನ್ನು ಸಂಪೂರ್ಣವಾಗಿ ನಿರ್ಮಿಸಿ ಕೊಡುವುದಕ್ಕಿಂತ ಮೊದಲೇ ಬಿಲ್ಡರ್ ಗಳು ಗ್ರಾಹಕರಿಗೆ ಕೊಳ್ಳುವಂತೆ ಒತ್ತಾಯಿಸುವಂತಿಲ್ಲ ಹಾಗೂ ಯೋಜನೆ ಪೂರ್ಣಗೊಂಡಿರುವ ಬಗ್ಗೆ ಸ್ಥಳೀಯ ಸಂಸ್ಥೆಯಿಂದ ಪ್ರಮಾಣಪತ್ರ ಸಿಗುವ ಮೊದಲು ಖರೀದಿಗೆ ಗ್ರಾಹಕರನ್ನು ಬಲವಂತ ಪಡಿಸುವಂತಿಲ್ಲ. ಹಾಗೇನಾದರೂ ಮಾಡಿದರೆ ಅದು ಅಕ್ರಮ ವ್ಯವಹಾರವಾಗುತ್ತದೆ ಎಂದು ಸಿ. ವಿಶ್ವನಾಥ್ ಮತ್ತು ರಾಮ್ ಸೂರತ್ ರಾಮ್ ಮೌರ್ಯ ಅವರನ್ನು ಒಳಗೊಂಡಿರುವ ನ್ಯಾಯಪೀಠವು ಬೆಂಗಳೂರು ಮೂಲದ ರಿಯಲ್ ಎಸ್ಟೇಟ್ ಕಂಪೆನಿಗೆ ಸಂಬಂಧಿಸಿದ ಪ್ರಕರಣವೊಂದರ ಖರೀದಿದಾರರಿಗೆ 3.5 ಕೋಟಿ ರೂಪಾಯಿ ಮೊತ್ತವನ್ನು ಬಡ್ಡಿ ಸಮೇತ ನೀಡುವಂತೆ ಸೂಚಿಸಿ ಆದೇಶ ಹೊರಡಿಸಿದೆ.

T20 ದ.ಆಫ್ರಿಕ ರೋಚಕ ಜಯ.

0

ಟಿ – 20 ವಿಶ್ವಕಪ್ ಟೂರ್ನಿಯ ಸೂಪರ್ – 12 ರ A – ಗುಂಪಿನಲ್ಲಿರುವ ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಪಂದ್ಯ ನಡೆಯಿತು. ಇಂಗ್ಲೆಂಡ್ ವಿರುದ್ಧ ದಕ್ಷಿಣ ಆಫ್ರಿಕಾ ರೋಚಕ ಜಯವನ್ನು ಸಾಧಿಸಿತು.
ಶಾರ್ಜಾ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮೊದಲು ಆಡಿದ ದಕ್ಷಿಣ ಆಫ್ರಿಕಾ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 189 ರನ್ ಅನ್ನು ಬಾರಿಸಿತು. ರಾಸೀ ವ್ಯಾನ್ ಡೆರ್ ಡುಸ್ಸೆನ್ 60 ಎಸೆತಗಳಲ್ಲಿ 5 ಬೌಂಡರಿ ಹಾಗೂ 6 ಸಿಕ್ಸರ್ ಗಳನ್ನು ಸಿಡಿಸಿ 94 ರನ್ ಗಳನ್ನ ಗಳಿಸಿಕೊಂಡರು. ಅಂತೆಯೇ ಯಾಡೆಂ ಮಾರ್ಕ್ರಮ್ 25 ಎಸೆತಗಳಲ್ಲಿ 2 ಬೌಂಡರಿ ಹಾಗೂ 4 ಸಿಕ್ಸರ್ ಗಳನ್ನ ಸಿಡಿಸಿ 52 ರನ್ ಗಳನ್ನ ಗಳಿಸಿಕೊಂಡರು ಇವರ ಅಮೋಘ ಬ್ಯಾಟಿಂಗ್ ಪ್ರದರ್ಶನದಿಂದ ದಕ್ಷಿಣ ಆಫ್ರಿಕಾ ತಂಡ ಟಿ – 20 ವಿಶ್ವಕಪ್ ಟೂರ್ನಿಯ ಸೂಪರ್ – 12 ರ ಹಂತದ ಒಂದನೇ ಗುಂಪಿನ ಕೊನೆಯ ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್ ತಂಡಕ್ಕೆ 190 ರನ್ ಗಳನ್ನ ಸವಾಲೋಡ್ಡಿತು.

ಅನುದಾನ ಕಟ್ : ಪಂಚಾಯಿತ ಅತಂತ್ರ

0

ರಾಜ್ಯ ಸರ್ಕಾರ ರಾಜ್ಯದೆಲ್ಲೆಡೆಯ ಪಂಚಾಯತಿಗಳಿಗೆ ಸರ್ಕಾರ ನೀಡುವ ಅಭಿವೃದ್ಧಿ ಅನುದಾನವನ್ನು ಸ್ಥಗಿತಗೊಳಿಸಿದೆ. 2018-19 ರಲ್ಲಿ 6 ಸಾವಿರ ಜನಸಂಖ್ಯೆ ಇರುವ ಪಂಚಾಯಿತಿಗಳಿಗೆ ಸರ್ಕಾರ ಹತ್ತು ಲಕ್ಷ ರೂಪಾಯಿ ಅಭಿವೃದ್ಧಿ ಅನುದಾನವನ್ನು ಬಿಡುಗಡೆ ಮಾಡಿತ್ತು ಅಲ್ಲಿಂದೀಚೆಗೆ ಒಂದೇ ಒಂದು ಪೈಸೆ ಕೂಡ ಅನುದಾನ ಬಂದಿಲ್ಲ ಎಂದು ಪಂಚಾಯ್ತಿಗಳ ಮೂಲಗಳು ತಿಳಿಸಿವೆ.

ಸರ್ಕಾರದ ಈ ನಿರ್ಧಾರದಿಂದ ಪಂಚಾಯಿತಿಗಳಲ್ಲಿ ನಿರ್ವಹಿಸುವ ಸಿಬ್ಬಂದಿಗಳಿಗೆ ಎರಡು ಮೂರು ತಿಂಗಳಿಂದ ವೇತನ ಬಾಕಿ ಉಳಿದಿದೆ. ಬಿಲ್ ಕಲೆಕ್ಟರ್, ಕಂಪ್ಯೂಟರ್ ಆಪರೇಟರ್, ನೀರುಗಂಟಿ, ಕಚೇರಿ ಸಹಾಯಕ ಮತ್ತು ಸ್ವಚ್ಛತಾಗಾರರಿಗೆ ಪಂಚಾಯತಿಗಳ ಅಂತರಿಕ ಸಂಪನ್ಮೂಲದಿಂದ ವೇತನ ನೀಡಬೇಕು ಆದರೆ, ಆದಾಯ ಇಲ್ಲದ ಕಾರಣ ವೇತನ ಬಾಕಿ ಉಳಿಸಿಕೊಂಡಿವೆ. ಪ್ರತಿ ಪಂಚಾಯತಿಯಲ್ಲಿ ಎಂಟರಿಂದ 15 ಸಿಬ್ಬಂದಿ ಇದ್ದು ರಾಜ್ಯದಲ್ಲೆಡೆ ಸಾವಿರಾರು ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ವೇತನವಿಲ್ಲದೇ ಸಿಬ್ಬಂದಿಗಳಿಗೆ ದಸರಾ ಮತ್ತು ದೀಪಾವಳಿ ಹಬ್ಬ ಕಹಿಯನ್ನು ನೀಡಿದೆ.
ಪಂಚಾಯ್ತಿ ವ್ಯಾಪ್ತಿಯ ಕುಡಿಯುವ ನೀರಿನ ಕೊಳವೆ ಬಾವಿ, ಬೀದಿದೀಪ ಮತ್ತು ಕಚೇರಿಗಳ ವಿದ್ಯುತ್ ಶುಲ್ಕ ಪಾವತಿಗಾಗಿ ಇರುವ ಎಸ್ಕ್ರೋ ಖಾತೆ ಅನುದಾನ 2021 22 ನೇ ಸಾಲಿನಲ್ಲಿ ಬಿಡುಗಡೆಯಾಗಿಲ್ಲದ ಕಾರಣ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ವರೆಗೆ ವಿದ್ಯುತ್ ಶುಲ್ಕ ಪಾವತಿಸುವುದು ಪಂಚಾಯಿತಿಗಳಿಗೆ ದೊಡ್ಡ ಸವಾಲಾಗಿದೆ.

ಪದ್ಮಶ್ರೀ ಪ್ರಶಸ್ತಿಗೆ ಸರ್ಕಾರದ ಶಿಫಾರಸು

0

ದಿವಂಗತ ನಟ ಪುನೀತ್ ರಾಜಕುಮಾರ್ ಅವರ ಹೆಸರನ್ನು ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸು ಮಾಡಲಾಗುವುದು ಎಂದು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಸದಾಶಿವನಗರದ ಪುನೀತ್ ರಾಜಕುಮಾರ್ ಅವರ ನಿವಾಸಕ್ಕೆ ಬೇಟಿ ನೀಡಿದ ಮುಖ್ಯಮಂತ್ರಿಗಳು “ಅಭಿಮಾನಿಗಳ ಆಶಯದಂತೆ ಅಪ್ಪು ಅವರಿಗೆ ಪದ್ಮಶ್ರೀ ನೀಡುವ ವಿಚಾರ ಸರ್ವಸಮ್ಮತವಾಗಿದೆ ” ಎಂದು ಹೇಳಿದರು.

ಪುನೀತ್ ರಾಜಕುಮಾರ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ್ದ ಸಮಯದಲ್ಲಿ ಬೊಮ್ಮಾಯಿಯವರು ಪುನೀತ್ ರಾಜಕುಮಾರ್ ಕನ್ನಡದ ಆಸ್ತಿ ಅವರನ್ನು ಕಳೆದುಕೊಂಡು ಎಂಟು ದಿನಗಳಾಗಿವೆ. ಪುನೀತ್ ಅವರು ಇಲ್ಲವಾಗಿರುವುದು ನಮ್ಮ ಪಾಲಿಗೆ ಕುಟುಂಬದ ಸದಸ್ಯರೊಬ್ಬರನ್ನು ಕಳೆದುಕೊಂಡಂತಾಗಿದೆ. ಈ ರಾಜ್ಯದ ಜನತೆಯ ಪುನೀತ್ ಕುಟುಂಬದೊಂದಿಗೆ ಇದೆ ಎಂದು ಹೇಳಿದರು.ರಾಜ್ಯ ಸರ್ಕಾರ ಪುನೀತ್ ಅವರ ಅಂತ್ಯಕ್ರಿಯೆಯನ್ನು ಅತ್ಯಂತ ಪ್ರೀತಿ-ಗೌರವ, ಆತ್ಮೀಯತೆಯಿಂದ ಹಾಗೂ ಭಾವನಾತ್ಮಕವಾಗಿ ನಡೆಸಿಕೊಟ್ಟಿರುವುದಕ್ಕಾಗಿ ಕುಟುಂಬಸ್ಥರು ಕೃತಜ್ಞತೆ ಸಲ್ಲಿಸಿದ್ದಾರೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನವೆಂಬರ್ 16ರಂದು ಹಮ್ಮಿಕೊಂಡಿರುವ ‘ಪುನೀತ ತಮ್ಮನ’ ಕಾರ್ಯಕ್ರಮಕ್ಕೆ ಅಗತ್ಯ ಭದ್ರತೆ ಕಲ್ಪಿಸಲಾಗುವುದು ಎಂದರು. ಸಂದರ್ಭದಲ್ಲಿ ಸಚಿವರಾದ ಆರ್ ಅಶೋಕ್ ಹಾಗೂ ಡಾ.ಸಿ.ಎನ್. ಅಶ್ವಥ್ ನಾರಾಯಣ್ ಅವರು ಉಪಸ್ಥಿತರಿದ್ದರು.

ಕುಚೇಷ್ಟೆಯ ಚೀನಾ ಕುತಂತ್ರಗಳು

0

ಅತಿಕ್ರಮಣ ಮನಸ್ಥಿತಿಯೊಂದಿಗೆ ಯಾವಾಗಲೂ ಬೇರೆ ದೇಶಗಳೊಂದಿಗೆ ಜಗಳವಾಡುವ ಚೀನಾ ಪರಮಾಣು ಅಸ್ತ್ರಗಳನ್ನು ಹೇರಳವಾಗಿ ಸಂಗ್ರಹಿಸುತ್ತಿದೆ.
2020ರಲ್ಲಿ ಪೂರ್ವ ಲಡಾಕ್ ನಲ್ಲಿ ಭಾರತೀಯ ಯೋಧರ ಮೇಲೆ ಚೀನಾ ಸೈನಿಕರು ದಾಳಿ ನಡೆಸಿದ್ದರು. ಅತಿಕ್ರಮಣಕ್ಕೆ ಯತ್ನಿಸಿ, ವಿಫಲವಾಗಿದ್ದರು. ನಂತರ ಗಡಿ ಬಿಕ್ಕಟ್ಟು ಉಲ್ಬಣಗೊಂಡಿದೆ. ಕಳೆದ ವರ್ಷ ಘರ್ಷಣೆ ವೇಳೆ ಪಶ್ಚಿಮ ಹಿಮಾಲಯ ಪ್ರಾಂತ್ಯದಲ್ಲಿನ ಗೋಪಿ ಸ್ಥಳಗಳಲ್ಲಿ ಚೀನಾ ಮಿಲಿಟರಿಯು ಫೈಬರ್ ಆಪ್ಟಿಕ್ ಜಾಲವನ್ನು ಅಳವಡಿಸಿತ್ತು ಎಂದು ಪೆಂಟಗಾನ್ ವರದಿ ಹೇಳಿದೆ.
ತನ್ನ ಸೈನಿಕರು ಶೀಘ್ರವಾಗಿ ಸಂವಹನ ನಡೆಸಲು ಉಪಯುಕ್ತವಾಗುವಂತೆ ಈ ಜಾಲವನ್ನು ಬಳಸಲಾಗಿತ್ತು ಎನ್ನಲಾಗಿದೆ. ಅಮೆರಿಕದ ಜೊತೆಗೆ ಉತ್ತಮ ಸ್ನೇಹ ಸಂಬಂಧ ಹೊಂದಿರುವುದರಿಂದ ಭಾರತದ ಬಗ್ಗೆ ಚೀನಾಗೆ ಅಸಮಾಧಾನ ಇದೆ. ಇದೇ ಕಾರಣ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರ ತರದ ಗಡಿ ತಂಟೆ ಗಳು ಉಂಟಾಗಬಹುದು ಎಂದು ಪೆಂಟಗಾನ್ ಎಚ್ಚರಿಸಿದೆ.
ಹೀಗೆ ಚೀನಾದ ಅಣ್ವಸ್ತ್ರ ಸಂಗ್ರಹ ಮುಂದುವರೆದಲ್ಲಿ 2030ರ ವೇಳೆಗೆ ಸಾವಿರ ಪರಮಾಣು ಸಿಡಿತಲೆಗಳನ್ನು ‘ಡ್ರ್ಯಾಗನ್’ ರಾಷ್ಟ್ರದ ಮಿಲಿಟರಿ ಹೊಂದಿರಲಿದೆ. ಇದು ಯಾವುದೇ ವಿದೇಶಿ ರಾಷ್ಟ್ರದ ಮೇಲೆ ಯುದ್ಧ ಸಾರಿ, ಕ್ಷಣಮಾತ್ರದಲ್ಲಿ ಅಣ್ವಸ್ತ್ರ ದಾಳಿ ನಡೆಸುವ ಅಪಾಯವನ್ನು ಸೂಚಿಸುತ್ತದೆ. ಅತಿಕ್ರಮಣ ಮನಸ್ಥಿತಿಯ ಚೀನಾ ಬಳಿ ಇಷ್ಟೊಂದು ಹಣ ವಸ್ತುಗಳು ಇರುವುದು ಜಗತ್ತಿಗೆ ಕಂಟಕ ಎಂದು ವರದಿ ಹೇಳಲಾಗಿದೆ.
ವಾಸ್ತವಿಕ ಗಡಿ ನಿಯಂತ್ರಣ ರೇಖೆ ಬಳಿ ಚೀನಾ ನೂತನ ಗ್ರಾಮವೊಂದನ್ನು ನಿರ್ಮಿಸಿದೆ ಎಂಬುದನ್ನು ಅಮೆರಿಕ ರಕ್ಷಣಾ ಇಲಾಖೆಯ ವರದಿ ಸಹ ಸ್ಪಷ್ಟಪಡಿಸಿದೆ.
ಇದಕ್ಕೂ ಮೊದಲು ಅರುಣಾಚಲ ಪ್ರದೇಶಗಳಲ್ಲಿ ನೂರು ಮನೆಗಳ ಗ್ರಾಮವನ್ನು ನಿರ್ಮಿಸುವ ಮೂಲಕ ಚೀನಾ ಉದ್ದಟತನ ಮೆರೆದಿದೆ ಇಂದು ಭಾರತದಲ್ಲಿ ವರದಿಯಾಗಿತ್ತು. ಈಗ ಇದನ್ನು ಅಮೆರಿಕ ರಕ್ಷಣಾ ಇಲಾಖೆಯು ಸಂಸತ್ತಿಗೆ ನೀಡಿರುವ ವರದಿಯಲ್ಲಿ ಉಲ್ಲೇಖಿಸಿದೆ. “ಡಿಬೇಟ ಪ್ರದೇಶ ಹಾಗೂ ಅರುಣಾಚಲಪ್ರದೇಶದ ಮಧ್ಯೆಯಿರುವ ವಿವಾದಿತ ಪ್ರದೇಶದಲ್ಲಿ ಚೀನಾ ಗ್ರಾಮ ನಿರ್ಮಿಸಿದೆ”ಎಂದು ವರದಿಯಾಗಿದೆ.

ಚೀನಾ : ಆಂತರಿಕ ಆತಂಕ

0

ದೈನಂದಿನ ಜೀವನ ಮತ್ತು ತುರ್ತು ಪರಿಸ್ಥಿತಿ ಎದುರಿಸಲು ಅಗತ್ಯ ವಸ್ತುಗಳನ್ನು ಸಂಗ್ರಹಿಸಲು ಜನರಿಗೆ ಚೀನಾ ಸರ್ಕಾರವೇ ಶಿಫಾರಸ್ಸು ಮಾಡಿದೆ . ಜನರು ಆತಂಕದಲ್ಲಿ ಮುಳುಗಿದ್ದು ಅಗತ್ಯವಸ್ತುಗಳನ್ನು ಖರೀದಿಸುತ್ತಿದ್ದಾರೆ. ಅಲ್ಲದೆ ಚೀನಾ ತನ್ನೊಂದಿಗೆ ಯುದ್ಧ ನಡೆಸಲು ಮುಂದಾಗಿದೆ ಎನ್ನುವ ಊಹಾಪೋಹ ಮತ್ತು ಪ್ರಶ್ನೆಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.
ಸ್ಥಳಿಯ ಮಾಧ್ಯಮಗಳ ಪ್ರಕಾರ, ಯುದ್ಧ ಭಯವೋ ಅಥವಾ ಇಲ್ಲವೋ, ಚೀನಾದ ಕೆಲವು ನಗರಗಳಲ್ಲಿ ಜನರು ಅಕ್ಕಿ, ನೂಡಲ್ಸ್, ಮತ್ತು ಅಡುಗೆ ಎಣ್ಣೆಯನ್ನು ಮುಗಿಬಿದ್ದು ಖರೀದಿಸುತ್ತಿರುವುದು ಅಲ್ಲಲ್ಲಿ ಕಂಡು ಬಂದಿದೆ. ಕೋವಿಡ್ – 19 ಏಕಾಏಕಿ ಹಲವಾರು ಪ್ರಾಂತ್ಯಗಳಲ್ಲಿ ಹರಡುತ್ತಿರುವುದರಿಂದ ನೆರೆಹೊರೆಯಲ್ಲಿ ಲಾಕ್ಡೌನ್ ಸಾಧ್ಯತೆಯು ಕೆಲವರಿಗೆ ತಕ್ಷಣಕ್ಕೆ ಹೆಚ್ಚು ಚಿಂತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬಹುಶಃ ಮಿಲಿಟರಿ ಹಗೆತನವು ಸನ್ನಿಹಿತವಾಗಿದೆ ಎಂದು ಹೆಚ್ಚಿನ ವಿಶ್ಲೇಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಸಾಮಾಜಿಕ ಮಾಧ್ಯಮದಲ್ಲಿನ ಪೋಸ್ಟ್ಗಳು ಜನರ ಅಂತಹ ಅಭಿಪ್ರಾಯ ಇರುವುದನ್ನು ಮತ್ತು ಯುದ್ಧೋತ್ಸಾಹದ ಹೇಳಿಕೆಗಳನ್ನು ಹೊರಹಾಕಿದೆ.

ಶಾಲಾ ಶಿಕ್ಷಕರ ನೇಮಕ ಪ್ರಕ್ರಿಯೆ

0

ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 18 ಸಾವಿರ ಹಾಗೂ ಪ್ರೌಢಶಾಲೆಗಳಲ್ಲಿ 5,078 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಪ್ರೌಢಶಾಲೆಗಳಿಗೆ ಈಗಾಗಲೇ 3253 ಅಂದರೆ ಶೇಕಡಾ 60ರಷ್ಟು ಹುದ್ದೆಗಳಿವೆ. ಅತಿಥಿ ಉಪನ್ಯಾಸಕರ ನೇಮಕಕ್ಕೆ ಸೂಚಿಸಲಾಗಿದೆ. ಉಳಿದ 1825 ಶಿಕ್ಷಕರ ನೇಮಕಕ್ಕೆ ಸುತ್ತೋಲೆ ಹೊರಡಿಸಲಾಗಿದೆ. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಜಾರಿಯಲ್ಲಿದೆ. ಶಾಲೆಗೆ ವರ್ಗಾವಣೆಗೊಂಡ ಶಿಕ್ಷಕರು ಕರ್ತವ್ಯಕ್ಕೆ ಹಾಜರಾದ ಕೂಡಲೇ ಅತಿಥಿ ಶಿಕ್ಷಕರನ್ನು ಬಿಡುಗಡೆ ಮಾಡಬೇಕು ಎಂಬ ಮಾಹಿತಿ ಲಭ್ಯವಾಗಿದೆ.


ಪ್ರಾಥಮಿಕ ಶಾಲೆಗಳ ಅತಿಥಿ ಶಿಕ್ಷಕರಿಗೆ ಮಾಸಿಕ 7,500ಸಾವಿರ ಪ್ರೌಢಶಾಲೆಗಳ ಅತಿಥಿ ಶಿಕ್ಷಕರಿಗೆ ಮಾಸಿಕ 8,000ಗೌರವ ಸಂಭಾವನೆ ಸಿಗಲಿದೆ. ತಾನಿರುವ ಹುದ್ದೆಗಳಿಗೆ ನೇಮಕ ನಡೆಯಲಿದೆ ಎಂದು ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.
ಅತಿಥಿ ಶಿಕ್ಷಕರ ನೇಮಕಾತಿ ಹೊಣೆಯನ್ನು ಆಯಾ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಿಗೆ ನೀಡಲಾಗಿದೆ. ಮೆರಿಟ್ ಆಧಾರದಲ್ಲಿ ನೇಮಕಾತಿ ನಡೆಯಬೇಕು ಗ್ರಾಮೀಣ ಪ್ರದೇಶಗಳಲ್ಲಿ ಖಾಲಿ ಇರುವ ಹುದ್ದೆಗಳು, ಶಿಕ್ಷಕರಹಿತ ಶಾಲೆಗಳಿಗೆ ಆದ್ಯತೆ ನೀಡಬೇಕು ಎಂದಿದ್ದಾರೆ.

ಹಿಂದೂ ಧರ್ಮಕ್ಕೆ ಆದಿಶಂಕರರ ಕೊಡುಗೆ ಅಪಾರ : ಮೋದಿಜಿ

0

ನವೆಂಬರ್ 5 ರಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಜಿ ಅವರು ಪ್ರಸಿದ್ಧ ಯಾತ್ರಾಸ್ಥಳ ಕೇದಾರನಾಥ್ ಗೆ ಭೇಟಿ ನೀಡಿದರು. ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಅನಾವರಣ ಮಾಡುವ ಕಾರ್ಯಕ್ರಮಕ್ಕೆ ಆಗಮಿಸಿದರು. 2016ರಲ್ಲಿ ಬಂದ ಹಿಮ ಪ್ರವಾಹದ ಪರಿಣಾಮವಾಗಿ ಶಂಕರಾಚಾರ್ಯರ ಸಮಾಧಿ ಅಸ್ತವ್ಯಸ್ತವಾಗಿತ್ತು. ಮತ್ತೆ ಅದರ ಪುನರ್ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ.

ಶ್ರೀ ಶಂಕರಾಚಾರ್ಯರ ಪ್ರತಿಮೆಯನ್ನ ಮೈಸೂರಿನ ಶಿಲ್ಪಿ ಅವರು ತಮ್ಮ ಕರಕುಶಲತೆಯಿಂದ ನಿರ್ಮಿಸಿದ್ದಾರೆ. 12 ಅಡಿ ಎತ್ತರ ಇರುವ ಶಂಕರಾಚಾರ್ಯರ ಮೂರ್ತಿಯನ್ನು ಬಹುಸುಂದರವಾಗಿ ನಿರ್ಮಿಸಲಾಗಿದೆ. ಅವರ ಶಿಲ್ಪ ಕಲಾ ನೈಪುಣ್ಯಕ್ಕೆ ಗೌರವಿಸಿ ಕೇಂದ್ರ ಸರ್ಕಾರ ಅವರನ್ನು ಪರೀಕ್ಷಾರ್ಥವಾಗಿ ಆಚಾರ್ಯರ ಮಾದರಿ ಮೂರ್ತಿಯನ್ನು ಕೆತ್ತನೆ ಮಾಡಲು ಕೇಳಲಾಗಿತ್ತು. ಮೋದಿ ಅವರೇ ಈ ಕೆತ್ತನೆಗೆ ಮನಸೋತು ಕೆಲಸ ಆರಂಭಿಸಲು ಸೂಚಿಸಿದರು. ಶಂಕರಾಚಾರ್ಯರ ಮೂರ್ತಿಯನ್ನು ಕೃಷ್ಣ ಶಿಲೆಯಲ್ಲಿ ನಿರ್ಮಿಸಲಾಗಿದೆ.

ಪ್ರಧಾನಿ ಮೋದಿ ಜಿ ಅವರು ಕೇದಾರೇಶ್ವರನಿಗೆ ಅರ್ಚನೆಯ ಮಾಡಿ ಪೂಜೆ ಸಲ್ಲಿಸಿದರು. ಕನ್ನಡಿಗ ಅರ್ಚಕರಾದ ಶ್ರೀ ವಾಗೀಶ ಲಿಂಗ ಅವರು ರುದ್ರಾಕ್ಷಿ ಹಾರವನ್ನು ಪ್ರಧಾನಿಯವರ ಕೊರಳಿಗೆ ತೊಡಿಸಿ ಸ್ವಾಗತಿಸಿದರು. ನಂತರ ಪ್ರಧಾನಿಯವರು ಕೇದಾರೇಶ್ವರನಿಗೆ ಆರತಿ ಬೆಳಗಿದರು. ಭಕ್ತಿಪರವಶರಾಗಿ ಆದಿಶಂಕರಾಚಾರ್ಯರ ಪ್ರತಿಮೆ ಮುಂದೆ ಧ್ಯಾನಸ್ಥರಾಗಿ ಕುಳಿತಿದ್ದರು. ತಮ್ಮ ಭಾಷಣದಲ್ಲಿ ಹಿಂದೂ ಧರ್ಮಕ್ಕೆ ಆದಿಶಂಕರರ ಕೊಡುಗೆ ಅಪಾರ ಎಂದು ಸ್ಮರಿಸಿದರು.

ಗೃಹ ಬಳಕೆಯ ಎಲ್ ಪಿಜಿ ಬೆಲೆ ಇಳಿಯಲಿ

0

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಿಂದಾಗಿ ಕಂಗೆಟ್ಟಿದ್ದ ಜನಸಾಮಾನ್ಯರಿಗೆ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ದರ ಇಳಿಕೆ ಮಾಡಿದ್ದು ಜನರು ಸ್ವಲ್ಪಮಟ್ಟಿಗೆ ನಿಟ್ಟುಸಿರು ಬಿಡುವಂತಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಸಾಮಾನ್ಯ ಕುಟುಂಬಗಳಿಗೆ ನುಂಗಲಾಗದ ತುತ್ತಾಗಿ ಪರಿಣಮಿಸಿರುವ ಅಡುಗೆ ಅನಿಲ ದರವನ್ನು ಕೂಡ ಇಳಿಸಬೇಕು ಎಂಬ ಬೇಡಿಕೆ ಬಲವಾಗಿ ಕೇಳಿಬರುತ್ತಿದೆ.

ಗೃಹ ಬಳಕೆ ಸಿಲಿಂಡರ್ ಗಳ ದರ ಕೆಲವು ತಿಂಗಳಲ್ಲಿ ದುಬಾರಿಯಾಗಿದ್ದು ಶ್ರೀಸಾಮಾನ್ಯರಿಗೆ ಹೊರೆಯಾಗಿದೆ. ಹೀಗಾಗಿ ರಾಜಕೀಯ ನಾಯಕರು ಮತ್ತು ಜನಸಾಮಾನ್ಯರು ಅಡುಗೆ ಅನಿಲದ ಬೆಲೆ ಕಡಿಮೆ ಮಾಡುವಂತೆ ಒತ್ತಾಯಿಸಿದ್ದಾರೆ.

ವಾಹನ ಸವಾರರ ಗಿಂತ ಹೆಚ್ಚಾಗಿ ಸರ್ಕಾರ ಇನ್ನೊಂದು ಅಂಶವನ್ನು ಪ್ರಮುಖವಾಗಿ ಗಮನಿಸಬೇಕಾಗಿದೆ. ಗೃಹಬಳಕೆಯ ಸಿಲಿಂಡರ್ ಬಳಕೆ ಕೂಡ ಗಗನಕ್ಕೇರಿದೆ. ಮಧ್ಯಮ ಹಾಗೂ ಕೆಳಮಧ್ಯಮ ವರ್ಗದವರಿಗೆ ಸಿಲಿಂಡರ್ ಬೆಲೆ ಕೈಗೆಟುಕದಂತಾಗಿದೆ. ಕೇಂದ್ರ ಸರ್ಕಾರ ತಕ್ಷಣ ಗಮನ ಹರಿಸಿ ಗೃಹ ಬಳಕೆ ಸಿಲಿಂಡರ್ ಬೆಲೆಯನ್ನು ಕೂಡಲೇ ತಗ್ಗಿಸುವಲ್ಲಿ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದು ಆಸೆಗಣ್ಣಿನಿಂದ ಜನ ನೋಡುತ್ತಿದ್ದಾರೆ.