Tuesday, May 5, 2026
Tuesday, May 5, 2026
Home Blog Page 1975

ಕನ್ನಡ ನೆಲದಲ್ಲಿ ಕನ್ನಡಿಗನೇ ಸಾರ್ವಭೌಮ: ಸಂಸದ ಬಿ.ವೈ.ಆರ್

0

ಶಿಕಾರಿಪುರ ತಾಲೂಕ್ ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಆಡಳಿತ ತಾಲೂಕು, ಪಂಚಾಯತ್ ಪುರಸಭೆ, ವಿವಿಧ ಇಲಾಖೆಗಳು ಹಾಗೂ ಕನ್ನಡ ಯುವಕರ ಸಂಘ, ವಿವಿಧ ಸಂಘಟನೆಗಳು ಶಿಕಾರಿಪುರ ತಾಲೂಕು ಇವರುಗಳ ಸಂಯುಕ್ತಾಶ್ರಯದಲ್ಲಿ 66ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.


ಈ ಕಾರ್ಯಕ್ರಮದಲ್ಲಿ ಮಾನ್ಯ ಸಂಸದ ಬಿವೈ ರಾಘವೇಂದ್ರ ಅವರು ಧ್ವಜಾರೋಹಣ ನೆರವೇರಿಸಿದರು.
” ನಮ್ಮ ಅನ್ನ ಕೊಡುವ ಭಾಷೆ ಕನ್ನಡ ಇಂತಹ ಪುಣ್ಯದ ಭೂಮಿ ಕನ್ನಡ ನಾಡು. ಭಾಷೆ, ನಾಡು,ನುಡಿಗೆ ಹೆಚ್ಚಿನ ಕೆಲಸವನ್ನು ಮಾಡೋಣ. ಕನ್ನಡ ನಾಡಿನಲ್ಲಿ ಕನ್ನಡಿಗನೇ ಸಾರ್ವಭೌಮ. ಕನ್ನಡಕ್ಕೆ ಮೊದಲ ಆದ್ಯತೆ ಕೊಡುತ್ತೇವೆ. ಜೊತೆಗೆ ಮುಂದಿನ ದಿನದಲ್ಲಿ ಶಿವಮೊಗ್ಗವು ಕನ್ನಡ ಸಾಹಿತ್ಯ ಕ್ಷೇತ್ರ ಮತ್ತು ಪ್ರವಾಸೋದ್ಯಮದಲ್ಲಿ ಅನೇಕ ಕೊಡುಗೆ ನೀಡಲಿದೆ. ನಮ್ಮ ಜಿಲ್ಲೆಯನ್ನು, ಇನ್ನೂ ಎತ್ತರಕ್ಕೆ ತೆಗೆದುಕೊಂಡು ಹೋಗುತ್ತೇವೆ” ಎಂದು ಮಾನ್ಯ ಸಂಸದ ಬಿವೈ ರಾಘವೇಂದ್ರ ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಕವಿರಾಜ್, ಎಂ. ಎ. ಡಿ. ಬಿ. ಅಧ್ಯಕ್ಷರಾದ ಗುರುಮೂರ್ತಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಚನ್ನವೀರಪ್ಪ. ಟಿ. ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಟಿ -20 “ಕಿವಿ” ಹಿಂಡಿಸಿಕೊಂಡ ಭಾರತ

0

ಟಿ – 20 ವಿಶ್ವಕಪ್ ಟೂರ್ನಿಯ ಸೂಪರ್ – 12 ರ B – ಗುಂಪಿನಲ್ಲಿರುವ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಪಂದ್ಯ ನಡೆಯಿತು. ಭಾರತ ತಂಡದ ವಿರುದ್ಧ ನ್ಯೂಜಿಲೆಂಡ್ ತಂಡ ಭರ್ಜರಿ ಜಯ ಗಳಿಸಿತು.
ದುಬೈನ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಆಡಿದ ಭಾರತ ತಂಡ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ ಕೇವಲ 110 ರನ್ ಗಳಿಸಿತು. ಆರಂಭದಲ್ಲಿಯೇ ಆಘಾತಗೊಂಡ ಭಾರತ ತಂಡ ಹೆಚ್ಚಿನ ರನ್ ಗಳಿಸಲು ಸಾಧ್ಯವಾಗಲ್ಲಿಲ್ಲ.
ದಿಡೀರ್ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ ತಂಡವನ್ನು ಕಂಡ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ಅಂಕಣ ಇಳಿದರು. ಹಾರ್ದಿಕ್ ಪಾಂಡ್ಯ 24 ಎಸೆತಗಳಲ್ಲಿ 1 ಬೌಂಡರಿ ಬಾರಿಸಿ 23 ರನ್ ಗಳನ್ನ ಕಲೆ ಹಾಕಿದರು. ಹಾಗೆಯೇ ರವೀಂದ್ರ ಜಡೇಜಾ 19 ಎಸೆತಗಳಲ್ಲಿ 2 ಬೌಂಡರಿ, 1 ಸಿಕ್ಸ್ ಸಿಡಿಸಿ, ಇವರಿಬ್ಬರ ಜೊತೆಯಾಟದಲ್ಲಿ ಕೆಲ ಕಾಲ ಪ್ರತಿ ಹೋರಾಟದಿಂದ ಹೆಚ್ಚು ರನ್ ಗಳಿಸಬಹುದು ಎಂಬ ಆಸೆ ಹೂಡಿತು.
ಅಂತೆ ಪಾಂಡೆ ಹಾಗೂ ಜಡೇಜಾ ಜೋಡಿ 6 ನೇ ವಿಕೆಟ್ ಗೆ 24 ರನ್ ಸೇರಿಸಿದರು. ಬೌಲ್ಟ್ ರವರ ಎಸೆತದಲ್ಲಿ ಗುಪ್ಟಿಲ್ ಸುಲಭವಾಗಿ ಕ್ಯಾಚ್ ಸಿಕ್ಕಿಸಿ ಹೊರ ನಡೆದರು.
ಬಳಿಕ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಜಡೇಜಾ ಕಡೆಯ ಓವರ್ ನಲ್ಲಿ ತಂಡದ ಮೊತ್ತವನ್ನು 100 ರ ಗಡಿ ದಾಟಿಸಿ ರನ್ ರೇಟ್ ಹೆಚ್ಚಳಕ್ಕೆ ಪ್ರಮುಖ ಕಾರಣರಾದರು.
110 ರನ್ ಗಳನ್ನ ಗೆಲುವಿನ ಗುರಿಯನ್ನಿಟ್ಟುಕೊಂಡು ಬೆನ್ನತ್ತಿ ಆಡಿದ ನ್ಯೂಜಿಲೆಂಡ್ ತಂಡ ಕೇವಲ 14.3 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 111 ರನ್ ಭಾರಿಸಿ ಭರ್ಜರಿ ಜಯ ಸಾಧಿಸಿದೆ.
ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ನ್ಯೂಜಿಲೆಂಡ್ ತಂಡ ವೇಗಿ ಟ್ರಂಪ್ ಬೌಲ್ಟ್ 20 ರನ್ ಗಳಿಗೆ 2 ವಿಕೆಟ್ ತೆಗೆದುಕೊಂಡರು. ಹಾಗೆಯೇ ಸ್ಪಿನ್ನರ್ ಇಶ್ ಸೋಧಿ 17 ರನ್ ಗಳಿಗೆ 2 ವಿಕೆಟ್ ತೆಗೆದುಕೊಂಡರು. ಇವರ ರೋಚಕ ಬೌಲಿಂಗ್ ನಿಂದ ವಿರಾಟ್ ಕೊಹ್ಲಿ ಬಳಗವು ನಲುಗಿ ಸತತ ಎರಡನೇ ಸೋಲನ್ನು ಕಂಡಿತು.
ನ್ಯೂಜಿಲೆಂಡ್ ತಂಡದ ಆಟಗಾರರ ಬೌಲಿಂಗ್ ಹಾಗೂ ಬ್ಯಾಟಿಂಗ್ ಇವೆರೆಡರ ಉತ್ತಮ ಪ್ರದರ್ಶನ ತೋರಿದ ಆಟಗಾರರು ಭಾರತ ತಂಡವನ್ನು ಬಹಳ ಸುಲಭವಾಗಿ ಸೋಲಿಸಿ ತಂಡದ ಗೆಲುವಿಗೆ ಕಾರಣರಾದರು .
ಕೀವಿಸ್ ತಂಡದ ನಿಕಟ ಬೌಲಿಂಗ್ ನ ಎದುರು ಭಾರತ ಬ್ಯಾಟ್ಸ್ ಮನ್ ಗಳ ಯಾವ ಆಟವು ನಡೆಯಲಿಲ್ಲ ಹಾಗಾಗಿ ಭಾರತಕ್ಕೆ ಸೆಮಿಫೈನಲ್ ನ ದಾರಿ ಬಹಳ ಕಠಿಣವಾಗಿದೆ.

ಪರಿಸರ ಸ್ನೇಹಿ ಪಟಾಕಿಗೆ ಮಾತ್ರ ಅನುಮತಿ

0

ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಪಟಾಕಿಗಳ ಮಾರಾಟ ಹಾಗೂ ಸಿಡಿಸುವುದನ್ನು ರಾಜ್ಯ ಸರ್ಕಾರ ನಿಷೇಧಿಸಿದೆ.
ದೀಪಾವಳಿ ಹಬ್ಬ ಸಮೀಪಿಸುತ್ತಿದ್ದಂತೆ ಹಬ್ಬದ ಆಚರಣೆ ಸಂಬಂಧ, ಕರ್ನಾಟಕ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ದೀಪಾವಳಿಯ ವೇಳೆ ಹಸಿರು ಪಟಾಕಿ ಗೆ ಮಾತ್ರ ಅವಕಾಶವಿದ್ದು, ಉಳಿದ ಇತರೆ ಸಿಡಿಮದ್ದುಗಳ ಮಾರಾಟಕ್ಕೆ ಅವಕಾಶವಿಲ್ಲ. ಹಸಿರು ಪಟಾಕಿಯ ಮಾರಾಟಕ್ಕೆ ದಿನಾಂಕವನ್ನು ನಿಗದಿಗೊಳಿಸಲಾಗಿದೆ. ನವೆಂಬರ್ 1ರಿಂದ 10ರವರೆಗೆ ಪಟಾಕಿ ಮಳಿಗೆಗಳನ್ನು ತೆರೆಯಲು ಅವಕಾಶ ಕಲ್ಪಿಸಿಕೊಡಲಾಗುತ್ತದೆ. ಅಧಿಕೃತ ಪರವನಾಗಿ ಪಡೆದವರಿಗೆ ಮಾತ್ರ ಹಸಿರು ಪಟಾಕಿ ಮಾರಲು ಅವಕಾಶ ಇದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಪಟಾಕಿಗಳನ್ನು ಸಾರ್ವಜನಿಕ ವಸತಿ ಸ್ಥಳದಿಂದ ದೂರವಿರುವ ಮೈದಾನದಲ್ಲಿ ಪಟಾಕಿ ಮಳಿಗೆಗಳನ್ನು ಸ್ಥಾಪಿಸಬೇಕು. ಮಳೆಗೆ ಸಂಬಂಧಿಸಿದ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಹಾಗೂ ಮಳಿಗೆಗಳಲ್ಲಿ ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುತ್ತಿರಬೇಕು. ಒಂದು ಮಾರಾಟ ಮಳಿಗೆಗೂ ಹಾಗೂ ಇನ್ನೊಂದು ಮಾರಾಟ ಮಳಿಗೆಗೂ 6 ಮೀಟರ್ ಅಂತರವಿರಬೇಕು. ಮಾರಾಟ ಮಳಿಗೆಗೆ ನಿತ್ಯವೂ ಸ್ಯಾನಿಟೈಸ್ ಮಾಡಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಹಸಿರು ಪಟಾಕಿಯನ್ನು ಹೊರತುಪಡಿಸಿ ಇನ್ಯಾವುದೇ ಪಟಾಕಿಯ ಮಾರಾಟ ಹಾಗೂ ಸಿಡಿಸುವುದನ್ನು ರಾಜ್ಯ ಸರ್ಕಾರ ನಿಷೇಧಿಸಿದೆ.
ಈ ಹಸಿರು ಪಟಾಕಿ ಪರಿಸರ ಸ್ನೇಹಿ ಪಟಾಕಿಯಾಗಿದೆ. ಇದರಿಂದ ಶಬ್ದ ಮಾಲಿನ್ಯ ವಾಯು ಮಾಲಿನ್ಯ ಯಾವುದೇ ಪರಿಸರಕ್ಕೆ ಹಾನಿಯಾಗದ ಇರುವ ಕಾರಣದಿಂದ ಈ ಪಟಾಕಿ ಅತ್ಯಂತ ಸುರಕ್ಷಿತ ಮತ್ತು ಪರಿಸರಸ್ನೇಹಿ ಪಟಾಕಿಯಾಗಿದೆ.

ಹೊಸ ಶಿಕ್ಷಣ ನೀತಿಯಿಂದ, ಜಾಗತಿಕ ಗುಣಮಟ್ಟ

0

ಕುವೆಂಪು ವಿಶ್ವವಿದ್ಯಾಲಯದಲ್ಲಿ ನೂತನ ಶಿಕ್ಷಣ ಕುರಿತು ವಿಶ್ವವಿದ್ಯಾಲಯದ ಹಿರೇಮಠ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಹೊಸ ಶಿಕ್ಷಣ ನೀತಿಯ ಅನುಷ್ಠಾನದಲ್ಲಿ ಶಿಕ್ಷಣ ಸಂಸ್ಥೆ ಮತ್ತು ಶಿಕ್ಷಕರ ಪಾತ್ರ ಮಹತ್ತರವಾದದ್ದು, ಈ ರೀತಿಯ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಯನ್ನು ತರಲಿದೆ ಅದಕ್ಕೆ ಸೂಕ್ತ ಕ್ರಮಗಳು ಅಗತ್ಯವಿದ್ದು, ನಮ್ಮಿಂದ ಅದು ಆರಂಭವಾಗಲಿ. 3 ದಶಕಗಳ ಬಳಿಕ ಕೇಂದ್ರ ಸರ್ಕಾರ ರೂಪಿಸಿರುವ ಮಹತ್ವಾಕಾಂಕ್ಷೆಯ ಶಿಕ್ಷಣ ನೀತಿ ಇದಾಗಿದೆ. ಭಾರತೀಯ ಶೈಕ್ಷಣಿಕ ವ್ಯವಸ್ಥೆಗೆ ಜಾಗತಿಕ ಗುಣಮಟ್ಟವನ್ನು ತಂದುಕೊಡಲಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವೆ ಜಿ.ಅನುರಾಧ ಅವರು ‘ ನೂತನ ಶಿಕ್ಷಣ ನೀತಿಯನ್ನು ವಿಶ್ವವಿದ್ಯಾಲಯ ವ್ಯಾಪ್ತಿಯ ಪದವಿ ಕಾಲೇಜುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಯಾವುದೇ ರೀತಿಯ ಗೊಂದಲಗಳು ಉಂಟಾದಲ್ಲಿ ವಿಶ್ವವಿದ್ಯಾಲಯದ ಆಡಳಿತ ವ್ಯವಸ್ಥೆ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದರು.
ಭೂಗರ್ಭಶಾಸ್ತ್ರ ವಿಭಾಗದ ಪ್ರೊ. ಸೈಯದ್ ಅಶ್ಫಕ್ ಅಹಮ್ಮದ್ ಅವರು ನೂ ತನ ಶಿಕ್ಷಣ ನೀತಿಯಡಿ ವಿದ್ಯಾರ್ಥಿಗಳ ಪ್ರವೇಶ, ತರಗತಿಗಳು,ಪರೀಕ್ಷೆ, ಕ್ರೆಡಿಟ್ ಪಾಯಿಂಟ್ ಕುರಿತು ವಿವಿಧ ಕಾಲೇಜುಗಳಿಂದ ಆಗಮಿಸಿದ ಅಧ್ಯಾಪಕರುಗಳಿಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು.
ಐಕ್ಯೂಎಸಿ ನಿರ್ದೇಶಕ ಪ್ರೊ. ಹೆಚ್. ಎಸ್.ಜಯಣ್ಣ, ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳು, ಅಧ್ಯಾಪಕರು ಕಾರ್ಯಗಾರದಲ್ಲಿ ಉಪಸ್ಥಿತರಿದ್ದರು.

ಎಂದಿನಂತೆ, ಬಿಎಂಟಿಸಿ ಬಸ್ ಸಂಚಾರ

0

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿ ಎಂ ಟಿ ಸಿ) ನಗರದ ವಿವಿಧ ಭಾಗಗಳಿಂದ ವಿಮಾನ ನಿಲ್ದಾಣಕ್ಕೆ ಎಸಿ ಬಸ್ ಗಳ ಸಂಖ್ಯೆಯನ್ನು ಕ್ರಮೇಣವಾಗಿ ಹೆಚ್ಚಿಸಲಾಗುತ್ತಿದೆ.
ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಕರಣಗಳು ಕಡಿಮೆಯಾಗುತ್ತಿದ್ದಂತೆ, ಎಲ್ಲಾ ಜನ ಜೀವನ ಸ್ಥಿತಿಯು ಸಹಜ ರೀತಿಯಲ್ಲಿ ಮೊದಲಿನಂತಾಗಿದೆ. ಇದೇ ರೀತಿ ಸಾರಿಗೆ ಬಸ್ ಗಳ ಸಂಖ್ಯೆಯಲ್ಲೂ ಕ್ರಮೇಣವಾಗಿ ಹೆಚ್ಚಿಸಲಾಗುತ್ತಿದೆ.
ಕೊರೋನಾ ಕಾರಣದಿಂದಾಗಿ ಸಾರಿಗೆ ಸೇವೆಗಳನ್ನು ನಿರ್ಬಂಧಿಸಲಾಗಿತ್ತು. ಆದರೆ ಈಗ ಬೆಂಗಳೂರಿನ ಮಹಾನಗರ ಸಾರಿಗೆ ಸಂಸ್ಥೆ ನಗರದ ವಿವಿಧ ಭಾಗಗಳಿಂದ ವಿಮಾನ ನಿಲ್ದಾಣಕ್ಕೆ ಎಸಿ ಬಸ್ ಗಳ ಸಂಖ್ಯೆಯನ್ನು ಹೆಚ್ಚಿಸುತ್ತಿದೆ.

ಕೋವಿಡ್ -19ರ ಎರಡನೇ ಅಲೆಯ ಸಮಯದಲ್ಲಿ ಕಾರಣ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ನಗರದ ಇತರ ಭಾಗಗಳ ನಡುವೆ ಕಾರ್ಯನಿರ್ವಹಿಸುವ ಬಿಎಂಟಿಸಿ ಯ ಬಸ್ ಗಳನ್ನು ನಿಲ್ಲಿಸಲಾಗಿತ್ತು. ಆದರೆ ಈಗ ಮತ್ತೇ ಎಲ್ಲಾ ಸ್ಥಿತಿ ಸಹಜವಾಗಿರುವ ಕಾರಣ, ಹಿಂದಿನಿಂದ ಸಾರಿಗೆ ಸೇವೆಗಳು ಆರಂಭಗೊಳ್ಳಲಿದೆ. ಹಾಗೂ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾರ್ಯನಿರ್ವಹಿಸುವ ಬಸ್ ಗಳ ಸಂಖ್ಯೆಯನ್ನು 45 ರಿಂದ 58ಕ್ಕೆ ಹೆಚ್ಚಿಸಲಾಗಿದೆ.

‘ನಾವು ಬೇಡಿಕೆಗೆ ಅನುಗುಣವಾಗಿ ಸಂಖ್ಯೆಯನ್ನು ಹೆಚ್ಚಿಸುತ್ತೇವೆ ‘ ಎಂದು ಹಿರಿಯ ಬಿಎಂಟಿಸಿ ಅಧಿಕಾರಿಯೊಬ್ಬರು ಮಾಧ್ಯಮ ದಾರರಿಗೆ ತಿಳಿಸಿದರು.

ರಜನಿ ಕ್ಷೇಮವಿದ್ದಾರೆ ವದಂತಿ ನಂಬಬೇಡಿ

ಸೂಪರ್ ಸ್ಟಾರ್ ನಟ ರಜನಿಕಾಂತ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಚೆನ್ನೈ ಆಸ್ಪತ್ರೆಗೆ ಆಗಮಿಸುತ್ತಿದ್ದರು.
ಈಗಾಗಲೇ ಸಾಕಷ್ಟು ಬಾರಿ ಆಸ್ಪತ್ರೆಗೆ ದಾಖಲಾಗಿದ್ದ ರಜನಿಕಾಂತ್ ಅವರ ಆರೋಗ್ಯದ ಬಗ್ಗೆ ನಾನಾ ವದಂತಿಗಳು ಹರಿದಾಡುತ್ತಿವೆ. ಈ ಹಿನ್ನೆಲೆಯಲ್ಲಿ ರಜನಿಕಾಂತ್ ಅವರು ಸ್ಪಷ್ಟನೆ ನೀಡಿದ್ದು, “ರಜನಿಕಾಂತ್ ಕ್ಷೇಮವಾಗಿದ್ದಾರೆ. ಅವರ ಆರೋಗ್ಯದ ಬಗ್ಗೆ ಹರಿದಾಡುತ್ತಿರುವ ವದಂತಿಗಳನ್ನು ನಂಬಬೇಡಿ “ಎಂದು ಹೇಳಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ರಜನಿಕಾಂತ್ ಅವರು ದೆಹಲಿಯಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಂದ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ್ದರು.

ರಿಪ್ಪನ್ ಪೇಟೆಯಲ್ಲಿ “ಅಪ್ಪು”ಗೆ ಗೌರವ ನಮನ

0

ನಟ ಪುನಿತ್ ರಾಜ್ ಕುಮಾರ್ ನಿನ್ನೆ ಅಕಾಲಿಕ ನಿಧನರಾದ್ದಾರೆ.ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ರಿಪ್ಪನ್ ಪೇಟೆಯಲ್ಲಿ ಅಂಗಡಿ ಮುಂಗಟ್ಟು ಬಂದ್ ಮಾಡಿ ಅಗಲಿದ ನಟನಿಗೆ ಗೌರವ ನಮನ ಸಲ್ಲಿಸಲಾಗಿದೆ.

ರಿಪ್ಪನ್ ಪೇಟೆಯಲ್ಲಿ ಔಷಧಿ ಮಳಿಗೆಗಳನ್ನು ಹೊರತು ಪಡಿಸಿ ಉಳಿದೆಲ್ಲ ಮಳಿಗೆಗಳು, ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಲಾಗಿದೆ. ಮಧ್ಯಾಹ್ನದವರೆಗೆ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.
ವಾಹನ ಸಂಚಾರ, ಬಸ್ಸುಗಳ ಓಡಾಟಕ್ಕೆ ಯಾವುದೆ ಅಡ್ಡಿಯಾಗಿಲ್ಲ. ರಿಪ್ಪನ್ ಪೇಟೆ ಸರ್ಕಲ್’ನಲ್ಲಿ ಪುನಿತ್ ರಾಜ್ ಕುಮಾರ್ ಭಾವಚಿತ್ರಕ್ಕೆ ಹೂವು ಹಾಕಿ ಗೌರವ ಸಲ್ಲಿಸಲಾಗಿದೆ.

ಕುಪ್ಪಳಿಯಲ್ಲಿ ಸಮಾಜವಾದಿ ಅಧ್ಯಯನ ಶಿಬಿರ

0

ಕುಪ್ಪಳ್ಳಿಯ ಶತಮಾನೋತ್ಸವ ಭವನದ ಹೇಮಾಂಗಣದಲ್ಲಿ ಇಂದು ಮತ್ತು ನಾಳೆ ಪರ್ಯಾಯ ಜೀವನ ಪದ್ಧತಿ ವಿಷಯವಾಗಿ ಸಮಾಜವಾದಿ ಅಧ್ಯಯನ ಶಿಬಿರ ಆಯೋಜಿಸಲಾಗಿದೆ.

ಲೋಹಿಯಾ ಜನ್ಮಶತಾಬ್ದಿ ಪ್ರತಿಷ್ಠಾನ ಹಾಗೂ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಸಹೋದ್ಯೋಗ ಸಹಯೋಗದಲ್ಲಿ ಈ ಶಿಬಿರ ನೆರವೇರಲಿದೆ. ಇಂದು ಬೆಳಿಗ್ಗೆ ಬೆಂಗಳೂರಿನ ಗಾಂಧಿ ಸ್ಮಾರಕ ನಿಧಿ ಕಾರ್ಯಕಾರಿ ಸಮಿತಿ ಸದಸ್ಯ ಪ್ರೊ.ಜಿ. ಬಿ. ಶಿವರಾಜ್ ಉದ್ಘಾಟಿಸಿದರು. ಬೆಂಗಳೂರಿನ ಎಂ.ಚಂದ್ರಶೇಖರ ಪ್ರತಿಷ್ಠಾನದ ಎಂಸಿ ನರೇಂದ್ರ ಅಧ್ಯಕ್ಷತೆ ವಹಿಸಿದ್ದರು. ಡಾ. ಸಂಜೀವ್ ಕುಲಕರ್ಣಿ ಆಹಾರ ಮತ್ತು ಆರೋಗ್ಯ ಪದ್ಧತಿ ಕುರಿತು ಮಾತನಾಡಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಮೇಲುಕೋಟೆಯ ಕಾರ್ಯಕರ್ತ ಸಂತೋಷ್ ಕೌಲಗಿ ಸಹಕಾರ ಮತ್ತು ಸಹಬಾಳ್ವೆ ವಿಷಯವಾಗಿ ಮಾತನಾಡಲಿದ್ದಾರೆ.
ನಾಳೆ ಮೈಸೂರಿನ ಕಲಾವಿದ ಸಚ್ಚಿದಾನಂದ ಅವರು ಚರಕ ಬಳಕೆ ಕುರಿತು ಮಾಹಿತಿ ನೀಡುವರು. ಶಿರಸಿಯ ಪರಿಸರ ಕಾರ್ಯಕರ್ತ ಕೇಶವ ಕೋರ್ಸೆ ಅವರು ಜೀವನ ಪದ್ಧತಿ ಮತ್ತು ಶಿಕ್ಷಣ ತರಬೇತಿಯ ಕುರಿತು ಮಾಹಿತಿ ನೀಡುತ್ತಾರೆ. ಪ್ರತಿ ಗೋಷ್ಠಿ ಮುಕ್ತಾಯದ ನಂತರ ಚರ್ಚೆ ಇರುತ್ತದೆ. ಕುವೆಂಪು ಪ್ರತಿಷ್ಠಾನದ ಸಮ ಕಾರ್ಯದರ್ಶಿ ಕಡಿದಾಳು ಪ್ರಕಾಶ್ ರವರ ಅಧ್ಯಕ್ಷತೆಯಲ್ಲಿ ಶಿಬಿರಾರ್ಥಿಗಳ ಪ್ರತಿಕ್ರಿಯೆ ಗೋಷ್ಠಿ ಹಾಗೂ ಸಮಾರೋಪ ನಡೆಯಲಿದೆ.

ಬದಲಾದ ಫೇಸ್ ಬುಕ್ ಬ್ರಾಂಡ್ ನೇಮ್

0

ಸಾಮಾಜಿಕ ಜಾಲತಾಣ ಫೇಸ್ಬುಕ್ ನನ್ನ ಬ್ರಾಂಡ್ ಗೆ ಹೊಸ ಹೆಸರನ್ನು ‘ಮೆಟಾ’ ಎಂದು ಬದಲಿಸಿದೆ. ಈ ಮೊದಲು ಫೇಸ್ ಬುಕ್ ಬ್ರಾಂಡ್ ಹೆಸರು ಕೂಡ ಫೇಸ್ ಬುಕ್ ಆಗಿತ್ತು. ಮೆಟಾವರ್ಸ್ ಎನ್ನುವುದು ಕಂಪ್ಯೂಟರೀಕೃತ ತಂತ್ರಜ್ಞಾನ ಸ್ಪೇಸ್ ಆಗಿದ್ದು, ಬಳಕೆದಾರರು ಈ ವರ್ಚುವಲ್ ರಿಯಾಲಿಟಿಯನ್ನು ಬಳಸಬಹುದಾಗಿದೆ.
ಬ್ರಾಂಡ್ ಹೆಸರು ಬದಲಾಗಿರುವುದರಿಂದ ಬಳಕೆದಾರರು ತಮ್ಮ ಪೋಸ್ಟ್ಗಳನ್ನು ವಿಡಿಯೋಗಳನ್ನು , ಹಂಚಲು ಬಳಸುವ ಫೇಸ್ ಬುಕ್ ಹೆಸರು ಬದಲಾಗುವುದಿಲ್ಲ. ಇನ್ಸ್ಟಾಗ್ರಾಮ್, ಮೆಸೆಂಜರ್ ಹಾಗೂ ವಾಟ್ಸಪ್ ಹೆಸರೂ ಬದಲಾಗುವುದಿಲ್ಲ.
ಆದರೆ ಡಿಸೆಂಬರ್ ಒಂದರಿಂದ ಕಂಪನಿಯ ಷೇರು ಎಂವಿಆರ್ ಎಸ್ ಎಂಬ ಹೊಸ ಸಂಕ್ಷಿಪ್ತ ಹೆಸರಲ್ಲಿ ಗುರುತಿಸಿಕೊಳ್ಳಲಿದೆ ಎಂದು ಫೇಸ್ ಬುಕ್ ತಿಳಿಸಿದೆ.
ಫೇಸ್ ಬುಕ್ ಭವಿಷ್ಯದಲ್ಲಿ ತನ್ನ ಬೆಳವಣಿಗೆಗೆ ವರ್ಚುವಲ್ ಡಿಜಿಟಲ್ ತಂತ್ರಜ್ಞಾನವನ್ನು ವ್ಯಾಪಕವಾಗಿ ಅಳವಡಿಸಿಕೊಳ್ಳಲಿದೆ. ಈ ನಿಟ್ಟಿನಲ್ಲಿ ಬ್ರಾಂಡ್ ಗೆ ಹೊಸ ರೂಪ ನೀಡಲಾಗಿದೆ ಎಂದು ಫೇಸ್ ಬುಕ್ ನ ಸಿಇಒ ಮಾರ್ಕ್ ಜುಕರ್ ಬರ್ಕ್ ತಿಳಿಸಿದ್ದಾರೆ.

ರಾಜ್ಯದ ಸಾರಿಗೆ ಸೇವೆ : ನಂ.1ರಿಂದ ಆನ್ ಲೈನ್ ಆಗಲಿದೆ

0

ಕರ್ನಾಟಕ ಆಡಳಿತ ಸುಧಾರಣಾ ಆಯೋಗ -2ರ ಶಿಫಾರಸು ಹಾಗೂ ಕೇಂದ್ರ ಸರ್ಕಾರದ ನಿರ್ದೇಶನ ನಿಯಮಾವಳಿಗಳನ್ವಯ ಆಯ್ದ 30 ಪ್ರಮುಖ ಸೇವೆಗಳನ್ನು ಆನ್ ಲೈನ್ ನಲ್ಲೇ ಜನರಿಗೆ ಒದಗಿಸಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಎನ್ಐಸಿ ಸಹಯೋಗದಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸುವ ಕಾರ್ಯ ನಡೆಯುತ್ತಿದೆ. ಸದ್ಯದಲ್ಲೇ ಅಂತಿಮ ರೂಪ ಪಡೆಯಲಿದ್ದು, ಭ್ರಷ್ಟಾಚಾರ ಮುಕ್ತ ಸೇವೆ ಸಿಗುವ ನಿರೀಕ್ಷೆ ಮೂಡಿಸಿದೆ.
ಸಾರಿಗೆ ಇಲಾಖೆ ಸೇವೆಯನ್ನು ಸಾಧ್ಯವಾದಷ್ಟು ಸುಲಭ, ಸರಳ ಹಾಗೂ ಭ್ರಷ್ಟಾಚಾರ ಮುಕ್ತವಾಗಿ ಒದಗಿಸುವ ನಿಟ್ಟಿನಲ್ಲಿ ಹೊಸ ಪ್ರಯತ್ನ ನಡೆಸಲಾಗುತ್ತಿದೆ. “
ಆಡಳಿತ ಸುಧಾರಣಾ ಆಯೋಗ-2ರ ಶಿಫಾರಸು ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಗಮನದಲ್ಲಿಟ್ಟುಕೊಂಡು ಆಯ್ದ 30 ಸೇವೆಗಳನ್ನು ಆನ್ ಲೈನ್ ಮೂಲಕ ಒದಗಿಸಲು ಪ್ರಯತ್ನ ನಡೆದಿದೆ “ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ತಿಳಿಸಿದ್ದಾರೆ.
ರಾಜ್ಯದಲ್ಲಿ ಸಾರಿಗೆ ಇಲಾಖೆಯು 47 ಬಗೆಯ ಸೇವೆ ಒದಗಿಸುತ್ತಿದೆ. ಸಾರಿಗೆ ಇಲಾಖೆ ಸೇವೆಗಾಗಿ ವರ್ಷವಿಡಿ 50 ಲಕ್ಷಕ್ಕೂ ಹೆಚ್ಚು ಜನ ಕಚೇರಿಗೆ ಭೇಟಿ ನೀಡುತ್ತಾರೆ ಎಂಬ ಅಂದಾಜು ಇದೆ. ಇಷ್ಟು ಜನರ ಸಮಯ, ಸಂಚಾರ, ವೆಚ್ಚಕ್ಕೆ ತಡೆ ಹಾಕಿ ಆಯ್ದ ಸೇವೆಗಳನ್ನು ಕುಳಿತಲ್ಲೇ ಪಡೆಯುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಪ್ರಯತ್ನಕ್ಕೆ ಮುಂದಾಗಿದೆ.
ವಾಹನದ ನೋಂದಣಿ ಪ್ರಮಾಣ ಪತ್ರದ (ಆರ್.ಸಿ) ಜೊತೆಗೆ ನೊಂದಣಿ ಸಂಖ್ಯೆ ಹಂಚಿಕೆ, ತಾತ್ಕಾಲಿಕ ನೊಂದಣಿ, ವಾಹನಗಳ ವರ್ಗಾವಣೆ, ಆರ್. ಸಿ ನಕಲು ಪ್ರತಿ, ಪ್ರಮಾಣಪತ್ರದಲ್ಲಿ ಬದಲಾವಣೆ, ಕಲಿಕೆ ಚಾಲನಾ ಪರವಾನಗಿ (ಎಲ್.ಎಲ್.) ವಿತರಣೆ, ಎಲ್.ಎಲ್.ನಲ್ಲಿ ಹೆಸರು ಅಥವಾ ವಿಳಾಸ ಬದಲಾವಣೆ, ಕಂಡಕ್ಟರ್ ಪರವಾನಗಿ /ನವೀಕರಣ ಸೇರಿದಂತೆ 5:30 ಸೇವೆಗಳು ನವೆಂಬರ್ ಒಂದರಿಂದ ಆನ್ ಲೈನ್ ನಲ್ಲಿ ಲಭ್ಯವಾಗಲಿವೆ.