Saturday, December 6, 2025
Saturday, December 6, 2025
Home Blog Page 2

Rangayana Shivamogga ಡಿಸೆಂಬರ್ 5, ಶಿವಮೊಗ್ಗದ ರಂಗಾಯಣದಲ್ಲಿ “ನಮ್ಮೊಳಗೊಬ್ಬ ಗಾಂಧಿ” ನಾಟಕ ಪ್ರದರ್ಶನ

0

Rangayana Shivamogga ರಂಗಾಯಣ, ಶಿವಮೊಗ್ಗ ರೆಪರ್ಟರಿ ಕಲಾವಿದರ ಪ್ರಸ್ತುತಿಯಲ್ಲಿ ಡಿ.5 ರಂದು ಶಿವಮೊಗ್ಗದ ಅಶೋಕನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಸಂಜೆ 6.30ಕ್ಕೆ ಡಾ.ಡಿ.ಎಸ್.ಚೌಗಲೆ ರಚನೆಯ ಶ್ರೀ ಚಿದಂಬರ ರಾವ್ ಜಂಬೆ ನಿರ್ದೇಶನದ ‘ನಮ್ಮೊಳಗೊಬ್ಬ ಗಾಂಧಿ’ ನಾಟಕ ಪ್ರದರ್ಶನವನ್ನು ಆಯೋಜಿಸಲಾಗಿದೆ.
ಈ ನಾಟಕವನ್ನು ಸಂಸ್ಕೃತಿ ಚಿಂತಕರಾದ ಪ್ರೊ. ರಾಜೇಂದ್ರ ಚೆನ್ನಿ, ಶಿವಮೊಗ್ಗ ಇವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಮೊಗ್ಗದ ರಂಗಾಯಣದ ನಿರ್ದೇಶಕರಾದ ಶ್ರೀ ಪ್ರಸನ್ನ ಡಿ ಸಾಗರ ಇವರು ವಹಿಸಲಿದ್ದಾರೆ. 2025 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶಿವಮೊಗ್ಗ ಜಿಲ್ಲೆಯ ಕೋಣಂದೂರು ಲಿಂಗಪ್ಪ, ಪ್ರೊ. ರಾಜೇಂದ್ರ ಚೆನ್ನಿ ಮತ್ತು ಶ್ರೀ ಟಾಕಪ್ಪ ಇವರನ್ನು ರಂಗಾಯಣದಿಂದ ಗೌರವಿಸಲಾಗುವುದು. Rangayana Shivamogga ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಡಾ.ಡಿ.ಎಸ್. ಚೌಗಲೆ ನಾಟಕಕಾರರು, ಬೆಳಗಾವಿ ಮತ್ತು ಶ್ರೀ. ಡಿಂಗ್ರಿ ನರೇಶ್, ರಂಗಕರ್ಮಿಗಳು ಮತ್ತು ಸದಸ್ಯರು, ರಂಗಸಮಾಜ ಇವರು ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಶಿವಮೊಗ್ಗ ರಂಗಾಯಣ ಆಡಳಿತಾಧಿಕಾರಿಗಳಾದ ಡಾ. ಶೈಲಜಾ ಎ.ಸಿ. ಇವರು ಉಪಸ್ಥಿತರಿರುವರು.
ಈ ನಾಟಕಕ್ಕೆ ಪ್ರವೇಶ ಉಚಿತವಾಗಿದ್ದು, ರಂಗಾಸಕ್ತರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬಂದು ವೀಕ್ಷಿಸಬೇಕೆಂದು ಶಿವಮೊಗ್ಗ ರಂಗಾಯಣದ ನಿರ್ದೇಶಕರಾದ ಪ್ರಸನ್ನ ಡಿ. ಸಾಗರ ಮತ್ತು ಆಡಳಿತಾಧಿಕಾರಿಗಳಾದ ಡಾ.ಶೈಲಜಾ ಎ.ಸಿ. ತಿಳಿಸಿದ್ದಾರೆ.

ಬೆಂಗಳೂರು ಜಲಮಂಡಳಿಗೆ ” ಜಿಯೋಸ್ಪೆಷಿಯಲ್ ಎಕ್ಸಲೆನ್ಸ್ “ಪ್ರಶಸ್ತಿ

0

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ತನ್ನ ಜಿಐಎಸ್-ಆಧಾರಿತ ಯುಟಿಲಿಟಿ ಆಸ್ತಿ ನಿರ್ವಹಣಾ ವೇದಿಕೆ ಜಲಪಥಕ್ಕಾಗಿ ಪ್ರತಿಷ್ಠಿತ ‘ಜಿಯೋಸ್ಪೇಷಿಯಲ್ ಎಕ್ಸಲೆನ್ಸ್ ಪ್ರಶಸ್ತಿ’ (Geospatial Excellence Award) ಗಾಗಿ ಭಾಜನವಾಗಿದೆ.

ಹೊಸ ದೆಹಲಿಯ ಭಾರತ್ ಮಂಟಪಂನಲ್ಲಿ ನಡೆದ ‘ಜಿಯೋಸ್ಮಾರ್ಟ್ ಇಂಡಿಯಾ 2025’ ಸಮ್ಮೇಳನದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಸಮ್ಮೇಳನದ ಸಮಾರೋಪ ಅಧಿವೇಶನದಲ್ಲಿ ಬಿಡಬ್ಲ್ಯುಎಸ್‌ಎಸ್‌ಬಿ ಅಧ್ಯಕ್ಷರಾದ ಡಾ. ರಾಮ್ ಪ್ರಸಾತ್‌ ಮನೋಹರ್, ಐಎಎಸ್, ಅವರು ಈ ಪ್ರಶಸ್ತಿಯನ್ನು ಸ್ವೀಕರಿಸಿದರು.

ಕಾರ್ಯಕ್ರಮದ ನಂತರ ಮಾತನಾಡಿದ ಡಾ. ಮನೋಹರ್ ಅವರು, ಜಿಯೋಸ್ಪಾಷಿಯಲ್‌ ಮ್ಯಾಪಿಂಗ್ ತಂತ್ರಜ್ಞಾನದ ಮೂಲಕ ಆಸ್ತಿಗಳ ಡಿಜಿಟಲೀಕರಣ, ರಿಯಲ್‌ ಟೈಮ್‌ ಡೇಟಾ ಇಂಟಿಗೇಷನ್‌ನಲ್ಲಿ ಬೆಂಗಳೂರು ಜಲಮಂಡಳಿಯ ಸಾಧನೆಗಳನ್ನು ಗುರುತಿಸಿದೆ. ಈ ಮೂಲಕ ಸಾವಿರಾರು ನೀರು ಮತ್ತು ಒಳಚರಂಡಿ ಆಸ್ತಿಗಳನ್ನು ಏಕೀಕೃತ ವೇದಿಕೆಯಲ್ಲಿ ಕೇಂದ್ರೀಕರಿಸಲು ಸಹಾಯ ಮಾಡಿದೆ, ಇದು ಯೋಜನಾ ಪ್ರಕ್ರಿಯೆ, ಮೇಲ್ವಿಚಾರಣೆ ಮತ್ತು ನಿರ್ವಹಣೆಯ ದಕ್ಷತೆಯನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ.

ಈ ಪ್ರಶಸ್ತಿಯು ಬೆಳೆಯುತ್ತಿರುವ ಬೆಂಗಳೂರು ನಗರಕ್ಕೆ ವೈಜ್ಞಾನಿಕ ಮತ್ತು ತಂತ್ರಜ್ಞಾನ ಆಧಾರಿತ ನೀರು ನಿರ್ವಹಣೆಯನ್ನು ಒದಗಿಸುವ ಬದ್ದತೆಯನ್ನು ಪ್ರತಿಬಿಂಬಿಸುತ್ತದೆ.

ಸನ್ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್‌ ಅವರ ದೂರದೃಷ್ಟಿಯಿಂದ ಈ ತಂತ್ರಜ್ಞಾನದ ಅಳವಡಿಕೆ ಸಾಧ್ಯವಾಗಿದೆ.

ಜಲಮಂಡಳಿಯಲ್ಲಿ ಈ ಮಹತ್ವದ ತಂತ್ರಜ್ಞಾನ ಕಾರ್ಯಕ್ರಮ ಅನುಷ್ಠಾನಕ್ಕೆ ಮಾರ್ಗದರ್ಶನ ನೀಡಿದ ಕರ್ನಾಟಕದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ತಂತ್ರಜ್ಞಾನ ಅಳವಡಿಕೆಗೆ ಚಾಲನೆ ನೀಡಿದ್ದ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಹಾಗೂ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದರು. “ಈ ಪ್ರಶಸ್ತಿಯು ನಮ್ಮ ಬಿಡಬ್ಲ್ಯುಎಸ್‌ಎಸ್‌ಬಿ ಎಂಜಿನಿಯರ್‌ಗಳು, ಜಿಐಎಸ್ ತಂಡಗಳು ಮತ್ತು ಈ ಪರಿವರ್ತನೆಯನ್ನು ನಿರ್ಮಿಸಿದ ನಮ್ಮ ಕ್ಷೇತ್ರ ಸಿಬ್ಬಂದಿಗೆ ಸೇರಿದ್ದು,” ಎಂದು ಅವರು ತಿಳಿಸಿದರು.

ಭವಿಷ್ಯದ ಮೇಲೆ ಕೇಂದ್ರೀಕರಿಸಿದ ಜಲ ಜಾಲ
ಬೆಂಗಳೂರು ಜಲಮಂಡಳಿಯು ‘ಜಲಪಥ’ ತಂತ್ರಜ್ಞಾನವನ್ನು ಇನ್ನಷ್ಟು ಆಧುನಿಕಗೊಳಿಸಲಿದೆ. ಮುಂದಿನ ಹಂತದಲ್ಲಿ ಸುಧಾರಿತ ಭೌಗೋಳಿಕ-ಪ್ರಾದೇಶಿಕ ವಿಶ್ಲೇಷಣೆಗಳು, ಪ್ರಿಡಿಕ್ಟಿವ್‌ ಮೆಂಟೇನೇನ್ಸ್‌ ಉಪಕರಣಗಳು ಮತ್ತು ರೀಯಲ್‌ ಟೈಮ್‌ ಯೋಜನೆಗಳ ಮೇಲ್ವಿಚಾರಣೆಯನ್ನು ಮಾಡಲು ಅನುವು ಮಾಡಿಕೊಡಲಿದೆ. “ಈ ನವೀಕರಣಗಳು ಸೇವಾ ವಿತರಣೆಯನ್ನು ಬಲಪಡಿಸುತ್ತವೆ, ನೀರಿನ ನಷ್ಟವನ್ನು ಕಡಿಮೆ ಮಾಡುತ್ತವೆ ಮತ್ತು ಬೆಂಗಳೂರಿನ ಭವಿಷ್ಯಕ್ಕಾಗಿ ಸಿದ್ಧವಾಗಿರುವ ಜಲ ಜಾಲವನ್ನು ನಿರ್ಮಿಸಲಿವೆ,” ಎಂದು ಡಾ. ಮನೋಹರ್ ಹೇಳಿದರು.

ಸರ್ವೆ ಆಫ್ ಇಂಡಿಯಾ ಮತ್ತು ರಾಷ್ಟ್ರೀಯ ಸಂಸ್ಥೆಗಳ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂಧರ್ಭದಲ್ಲಿ ಬೆಂಗಳೂರು ಜಲಮಂಡಳಿಯ ಮುಖ್ಯ ಅಭಿಯಂತರರಾದ ಸನತ್‌ ಹಾಗೂ ಸಹಾಯಕ ಮುಖ್ಯ ಅಭಿಯಂತರಾದ ಮಹೇಶ್ವರಪ್ಪ ಉಪಸ್ಥಿತರಿದ್ದರು.

ಶಿವಮೊಗ್ಗದಲ್ಲಿ “ವಿವೇಕ ವಿದ್ಯಾನಿಧಿ” ವಿತರಣಾ ಕಾರ್ಯಕ್ರಮ ಯಶಸ್ವಿ

0

ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ 200 ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ತಲುಪಿಸುವ ಧ್ಯೇಯದೊಂದಿಗೆ ಅನವರತ ಫೌಂಡೇಶನ್ ಹಮ್ಮಿಕೊಂಡಿದ್ದ “ವಿವೇಕ ವಿದ್ಯಾನಿಧಿ” ವಿತರಣಾ ಕಾರ್ಯಕ್ರಮವು ಶಿವಮೊಗ್ಗದಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿತು.

ಶಿಕ್ಷಣದ ಮೂಲಕ ಸಾಮಾಜಿಕ ಪ್ರಗತಿಗೆ ನಿರಂತರ ಬೆಂಬಲ ನೀಡುವ ಗುರಿಯನ್ನು ಈಡೇರಿಸುವ ಈ ಮಹತ್ವದ ಕಾರ್ಯಕ್ರಮದಲ್ಲಿ, ಸಮಾಜದ ಪ್ರತಿಭಾನ್ವಿತ ಹಾಗೂ ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಒಟ್ಟು 200 ವಿದ್ಯಾರ್ಥಿಗಳಿಗೆ ವಿದ್ಯಾನಿಧಿಯನ್ನು ವಿತರಿಸಲಾಯಿತು.

ಈ ಮೂಲಕ ಅವರ ಶೈಕ್ಷಣಿಕ ಕನಸುಗಳಿಗೆ ಸಂಸ್ಥೆಯು ಭದ್ರ ಬುನಾದಿ ಒದಗಿಸಿತು.

ಅನವರತ ಫೌಂಡೇಶನ್‌ನ ಈ ಮೊದಲ ಹೆಜ್ಜೆ, ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯವನ್ನು ಬೆಳಗಿಸುವ ದಿಸೆಯಲ್ಲಿ ಒಂದು ಪ್ರಮುಖ ಮೈಲಿಗಲ್ಲಾಗಿದೆ.

ಎಸ್ ಎನ್ ಚನ್ನಬಸಪ್ಪ (ಚೆನ್ನಿ)ನವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಕರ್ನಾಟಕ ಸಾಹಿತ್ಯ ಅಕಾಡೆಮಿಯ ನಿಕಟ ಪೂರ್ವ ಅಧ್ಯಕ್ಷರಾದ ಡಾ. ಬಿ ವಿ ವಸಂತ್ ಕುಮಾರ್ , ರಾಷ್ಟ್ರೀಯ ಶಿಕ್ಷಣ ಸಮಿತಿಯ ಕಾರ್ಯದರ್ಶಿಗಳಾದ ಶ್ರೀ ಎಸ್ ಎನ್ ನಾಗರಾಜ್ , ಶ್ರೀ ಡಿಎಸ್ ಅರುಣ್ , ವಿಧಾನಪರಿಷತ್ ಶಾಸಕರಾದ ಡಾ. ಧನಂಜಯ್ ಸರ್ಜಿ , ವಿಧಾನಪರಿಷತ್ ಶಾಸಕರಾದ ಶ್ರೀ ಎ.ಜೆ ರಾಮಚಂದ್ರ , ವಿಕಾಸ ವಿದ್ಯಾ ಸಮಿತಿಯ ಕಾರ್ಯದರ್ಶಿಗಳಾದ
ಶ್ರೀ ಎಸ್ ರಾಜಶೇಖರ್ , ದೇಶಿಯ ವಿದ್ಯಾ ಸಂಸ್ಥೆಯ ಕಾರ್ಯದರ್ಶಿಗಳು ಭಾಗಿಯಾಗಿದ್ದರು.

ಸಮಾರಂಭದಲ್ಲಿ ಮಾತನಾಡಿದ ಗಣ್ಯರು, ಅನವರತ ಫೌಂಡೇಶನ್‌ನ ಈ ಸಾಮಾಜಿಕ ಕಳಕಳಿಯ ಕಾರ್ಯವನ್ನು ಶ್ಲಾಘಿಸಿದರು ಹಾಗೂ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ಮಹತ್ವದ ಕುರಿತು ಪ್ರೇರಣಾತ್ಮಕ ಮಾತುಗಳನ್ನಾಡಿದರು.

ಮುಂದಿನ ದಿನಗಳಲ್ಲಿ “ವಿವೇಕ ವಿದ್ಯಾನಿಧಿ” ಕಾರ್ಯಕ್ರಮವನ್ನು ವಿಸ್ತರಿಸುವ ಮೂಲಕ ಇನ್ನಷ್ಟು ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಮಹತ್ವಾಕಾಂಕ್ಷೆಯನ್ನು ಅನವರತ ಫೌಂಡೇಶನ್ ವ್ಯಕ್ತಪಡಿಸಿತು.

Keladi Shivappa Nayak University of Agriculture and Horticulture ಡಿ.15 ರಿಂದ ಒಂದು ತಿಂಗಳ ಅವಧಿಯ ಬೇಕರಿ ಉತ್ಪನ್ನಗಳ ತಯಾರಿಕಾ ಕೌಶಲ ತರಬೇತಿ

0

Keladi Shivappa Nayak University of Agriculture and Horticulture ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ದಿ:15/12/2025 ರಿಂದ ದಿ:13/01/2026 ರವರೆಗೆ 1 ತಿಂಗಳು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್ತು, ಕೋಕೋನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್ತು, ಪೀನಟ್ ಕುಕಿಸ್, ವೆನಿಲ್ಲಾ ಬಟನ್, ಬನಾನಾ ಕೇಕ್, ಫ್ರುಟ್ ಕೇಕ್, ಸ್ಪಾಂಜ್‌ಕೇಕ್, ಆರೆಂಜ್ ಕೇಕ್, ಕಪ್ ಕೇಕ್, ಚಾಕಲೇಟ್ ಕೇಕ್, ಜಾಮ್ ರೋಲ್, ಜೆಲ್‌ಕೇಕ್, ಪೇಸ್ಟ್ರೀ ಕೇಕ್, ಬಟರ್ ಐಸಿಂಗ್, ಡೋ ನಟ್, ಮಿಲ್ಕ ಬ್ರೆಡ್, ಬನ್, ರಸ್ಕ್, ಫಿಜ್ಜಾ, ಪಪ್‌ಪೇಸ್ಟ್ರೀ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆಯೋಜಿಸಿದೆ.

ಆಕಸ್ತರು ತರಬೇತಿ ಶುಲ್ಕ ರೂ. 4500/-ಗಳನ್ನು ಪಾವತಿಸಿ, ಡಿ.13 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಕೃಷಿ ಮಹಾವಿದ್ಯಾಲಯವನ್ನು ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಕೃಷಿ ಮತ್ತು ತೋಟಗಾರಿಕೆ ಮಹಾವಿದ್ಯಾಲಯದ ಪ್ರೋಫೆಸರ್ ತಿಳಿಸಿದ್ದಾರೆ.

Keladi Shivappa Nayak University of Agriculture and Horticulture ನೋಂದಾವಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಾ. ಜಯಶ್ರೀ ಎಸ್. -9449187763 ಮತ್ತು ಜಯಶಂಕರ-9686555897 ಇವರುಗಳನ್ನು ಸಂಪರ್ಕಿಸಬಹುದು.

Armed Forces Flag Day ಡಿಸೆಂಬರ್ 8 ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಗೆ ಜಿಲ್ಲಾಡಳಿತದಿಂದ ಪೂರ್ವಸಿದ್ಧತೆ

0

Armed Forces Flag Day ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ ಅಂಗವಾಗಿ ಧ್ವಜ ಬಿಡುಗಡೆ ಸಮಾರಂಭವನ್ನು ಡಿ.08 ರಂದು ಬೆಳಿಗ್ಗೆ 11 ಘಂಟೆಗೆ ಶಿವಮೊಗ್ಗ ಜಿಲ್ಲಾ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಆಯೋಜಿಸಿದ್ದು, ಜಿಲ್ಲಾಧಿಕಾರಿಗಳು ಧ್ವಜ ಬಿಡುಗಡೆಗೊಳಿಸುವರು.

ಈ ಸಮಾರಂಭದಲ್ಲಿ ಶಿವಮೊಗ್ಗ ಜಿಲ್ಲೆಯ ಮಾಜಿ ಸೈನಿಕರು, ವೀರ ನಾರಿಯರು ಹಾಗೂ ಮಾಜಿ ಸೈನಿಕರ ಅವಲಂಬಿತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Armed Forces Flag Day ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.

ಶಿವಮೊಗ್ಗದ ಜೈನ ಸಮಾಜದ ಹಿರಿಯ ಮುಖಂಡ ಎಸ್.ಜಿ.ಜಿನರಾಜ ಜೈನ್ ನಿಧನ

0

ಶಿವಮೊಗ್ಗ ನಗರದ ಗಾಂಧಿ ಬಜಾರ್‌ನ ನಿವಾಸಿ, ಹಿರಿಯ ಆರ್.ಎಸ್.ಎಸ್. ಕಾರ್ಯಕರ್ತರು, ದಿಗಂಬರ ಜೈನ್ ಸಮಾಜದ ಹಿರಿಯ ಮುಖಂಡರು, ಹವ್ಯಾಸಿ ಕವಿ, ಸಮಾಜಸೇವಕರು ಹಾಗೂ ವಿಕಾಸ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾಗಿದ್ದ ಶ್ರಿ ಶಾ. ಎಸ್‌. ಜಿ. ಜನರಾಜ ಜೈನ್ (ವಯಸ್ಸು 85) ರವರು ವಯೋಸಹಜ ಅನಾರೋಗ್ಯದಿಂದ ತಮ್ಮ ಸ್ವಗೃಹದಲ್ಲಿ ಜಿನೈಕ್ಯರಾಗಿರುವ ಸುದ್ದಿಯನ್ನು ಭದ್ರಾವತಿ ದಿಗಂಬರ ಜೈನ ಸಮಾಜ ಸಂತಾಪಪೂರ್ವಕವಾಗಿ ತಿಳಿಸುತ್ತದೆ.

ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು ಭದ್ರಾವತಿ ದಿಗಂಬರ ಜೈನ್ ಸಮಾಜ ಪ್ರಾರ್ಥಿಸುತ್ತದೆ.

Shivamogga Police ಅನಾಮಧೇಯ ವ್ಯಕ್ತಿ ಸಾವು, ವಾರಸುದಾರರ ಪತ್ತೆಗೆ ಪೊಲೀಸ್ ಠಾಣೆಯಿಂದ ಮನವಿ

0

Shivamogga Police ಶಿವಮೊಗ್ಗ ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ನ.29 ರಂದು ಅಸ್ವಸ್ಥನಾಗಿ ಬಿದ್ದಿದ್ದ ಸುಮಾರು 45 ರಿಂದ 50 ವರ್ಷ ವಯಸ್ಸಿನ ಅನಾಮಧೇಯ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾನೆ.
ಮೃತ ಅಪರಿಚಿತ ವ್ಯಕ್ತಿಯು ಸುಮಾರು 5.6 ಅಡಿ ಎತ್ತರ, ಕೋಲು ಮುಖ, ಸಾಧಾರಣ ಮೈ ಕಟ್ಟು, ಗೋಧಿ ಮೈ ಬಣ್ಣ, ತಲೆಯಲ್ಲಿ 2 ಇಂಚು ಉದ್ದದ ಕಪ್ಪು- ಬಿಳಿ ಕೂದಲು ಇದ್ದು, ಮುಖದಲ್ಲಿ 1/4 ಇಂಚು ಉದ್ದದ ಕಪ್ಪು-ಬಿಳಿ ಗಡ್ಡವಿರುತ್ತದೆ. ಎಡಗೈ ಒಳಭಾಗದಲ್ಲಿ ಅಮ್ಮ ಎಂಬ ಟ್ಯಾಟೂ ಇರುತ್ತದೆ. ಮೃತನ ಮೈ ಮೇಲೆ ನೀಲಿ ಬಿಳಿ ಅಡ್ಡಗೆರೆಗಳಿರುವ ಟೀ ಶರ್ಟ್,ಬೂದು ಬಣ್ಣದ ಫಾರ್ಮಲ್ ಪ್ಯಾಂಟ್ ಇರುತ್ತದೆ. ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ಕೋಟೆ ಪೋಲೀಸ್ ಠಾಣೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Consumer Disputes Redressal Commission ಮೋಸದಿಂದ ಕಟಾಯಿಸಿದ ಹಣದ ಬಗ್ಗೆ ದೂರು ಸಲ್ಲಿಸಿದರೂ ಕ್ರಮಕೈಗೊಳ್ಳದ ಬ್ಯಾಂಕ್ ನಿಂದ ಗ್ರಾಹಕರಿಗೆ ಪರಿಹಾರ ನೀಡಲು ಆದೇಶ

0

Consumer Disputes Redressal Commission ಮೋಸದಿಂದ ಕಟಾವಣೆಯಾದ ಮೊತ್ತದ ಕುರಿತು ಸರಿಯಾದ ಕ್ರಮ ಕೈಗೊಳ್ಳದ ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕರಿಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ದಂಡ ವಿಧಿಸಿ, ದೂರುದಾರರಿಗೆ ಸೂಕ್ತ ಪರಿಹಾರ ನೀಡುವಂತೆ ಆದೇಶಿಸಿದೆ.

ದೂರುದಾರರಾದ ದೇವಾಪ್ರಸಾದ್, ಶಾಂತಿನಗರ, ಶಿವಮೊಗ್ಗ, ವ್ಯವಸ್ಥಾಪಕರು ಯೂನಿಯನ್ ಬ್ಯಾಂಕ್, ವಿನೋಬನಗರ ಶಾಖೆ, ಶಿವಮೊಗ್ಗ, ಯೂನಿಯನ್ ಬ್ಯಾಂಕ್, ರೀಜಿನಲ್ ಆಫೀಸ್, ಶಿವಮೊಗ್ಗ, ಇವರ ವಿರುದ್ಧ ದೂರನ್ನು ಸಲ್ಲಿಸಿ, 1ನೇ ಎದುರುದಾರರ ಬ್ಯಾಂಕಿನ ಹಲವು ವರ್ಷಗಳಿಂದ ಬ್ಯಾಂಕ್ ಖಾತೆಯನ್ನು ಹೊಂದಿದ್ದು, ದಿ: 24/05/2024 ರಂದು ಸಂಜೆ ಸುಮಾರು 6.34 ಕ್ಕೆ ರೂ.1,85,500/- ಖಾತೆಯಿಂದ ಕಟಾವಾಗಿರುವುದಾಗಿ ದೂರುದಾರರ ಪೋನ್‌ಗೆ ಸಂದೇಶ ಬಂದಿರುತ್ತದೆ.

ಈ ವಿಷಯವನ್ನು ದೂರುದಾರರು 1ನೇ ಎದುರುದಾರ ಬ್ಯಾಂಕ್‌ಗೆ ವರದಿ ಮಾಡಿ, ಇದು ಅನಧಿಕೃತವಾದ/ಮೋಸದ ವ್ಯವಹಾರವಾಗಿರುತ್ತದೆ.

ಆದ್ದರಿಂದ ಸದರಿ ಮೊತ್ತ ಪಾವತಿ ತಡೆ ಹಿಡಿಯಲು ತಿಳಿಸಿದ್ದು, 1ನೇ ಎದುರುದಾರರು ಯಾವುದೇ ಕ್ರಮವನ್ನು ಕೈಗೊಂಡಿರುವುದಿಲ್ಲ. ತದನಂತರ, ದೂರುದಾರರು ಸೈಬರ್ ಕ್ರೈಂ ಪೋಲಿಸ್ ಠಾಣೆ, ಶಿವಮೊಗ್ಗ, ಇವರಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ನಂತರದಲ್ಲಿ ದೂರುದಾರರು 4ನೇ ಎದುರುದಾರರಿಗೆ ನೋಟೀಸ್ ನೀಡಿರುತ್ತಾರೆ. ನೋಟೀಸ್ ತಲುಪಿದ್ದು ಯಾವುದೇ ಕ್ರಮ/ಪ್ರತ್ಯುತ್ತರವನ್ನು ನೀಡದೇ ಅನಧಿಕೃತವಾಗಿ ಕಟಾವಣೆ ಆದ ಮೊತ್ತವನ್ನು ದೂರುದಾರರ ಖಾತೆಗೆ ಮರು ಜಮೆ ಮಾಡದೇ ಸೇವಾ ನ್ಯೂನತೆ ಎಸಗಿರುತ್ತಾರೆ ಎಂದು ದೂರನ್ನು ಸಲ್ಲಿಸಿರುತ್ತಾರೆ.

Consumer Disputes Redressal Commission ಆಯೋಗವು ನಿಯಮಾನುಸಾರ ದೂರುದಾರರು ಮತ್ತು ಎದುರುದಾರರು ಸಲ್ಲಿಸಿರುವ ಪ್ರಮಾಣಪತ್ರ ಮತ್ತು ದಾಖಲೆಗಳನ್ನು ಪರಿಶೀಲಿಸಿ, ಉಭಯ ಪಕ್ಷಗಾರರ ವಾದ-ವಿವಾದಗಳನ್ನು ಆಲಿಸಿ, ಸುತ್ತೋಲೆ ದಿ: 06/07/2017 ರಂತೆ, ಎದುರುದಾರರು ಅನಧಿಕೃತವಾಗಿ/ಮೋಸದಿಂದ ಕಟಾವಣೆಯಾದ ಮೊತ್ತದ ಕುರಿತು ಸರಿಯಾದ ಕ್ರಮವನ್ನು ಕೈಗೊಳ್ಳದಿರುವುದರಿಂದ, ಮರುಜಮೆ ಮಾಡದಿರುವುದರಿಂದ, ಸೇವಾನ್ಯೂನತೆ ಎಸಗಿರುತ್ತಾರೆ ಎಂದು ತೀರ್ಮಾನಿಸಿ. ದೂರನ್ನು ಪುರಸ್ಕರಿಸಿ, 1 ಮತ್ತು 2ನೇ ಎದುರುದಾರರು ದೂರುದಾರರಿಗೆ ರೂ.1,85,500/-ಗಳಿಗೆ ದಿನಾಂಕ:24/05/2024 ರಿಂದ ಅನ್ವಯವಾಗುವಂತೆ ವಾರ್ಷಿಕ ಶೇ.9 ರಂತೆ ಬಡ್ಡಿಯನ್ನು ಸೇರಿಸಿ, 45 ದಿನಗಳ ಒಳಗೆ ಪಾವತಿಸಬೇಕು. ತಪ್ಪಿದ್ದಲ್ಲಿ ವಾರ್ಷಿಕ ಶೇ.12 ರ ಬಡ್ಡಿಯನ್ನು ಸೇರಿಸಿ, ಪೂರ್ತಿ ಹಣ ಪಾವತಿಸುವವರೆಗೆ ನೀಡತಕ್ಕದ್ದು, ಹಾಗೂ ರೂ.10,000/-ಗಳನ್ನು ಮಾನಸಿಕ ಹಿಂಸೆ ಮತ್ತು ದೂರಿನ ಖರ್ಚು ವೆಚ್ಚಕ್ಕಾಗಿ ಈ ಆದೇಶವಾದ ದಿನದಿಂದ 45 ದಿನಗಳ ಒಳಗೆ ಪಾವತಿಸುವುದು, ತಪ್ಪಿದ್ದಲ್ಲಿ ವಾರ್ಷಿಕ ಶೇ.12 ರ ಬಡ್ಡಿಯನ್ನು ಸೇರಿಸಿ ಪೂರ್ತಿ ಹಣ ನೀಡುವವರೆಗೆ ನೀಡಬೇಕೆಂದು ಎಂದು ಆಯೋಗದ ಅಧ್ಯಕ್ಷರಾದ ಶಿವಣ್ಣ ಮತ್ತು ಸದಸ್ಯರಾದ ಬಿ.ಡಿ.ಯೋಗಾನಂದ ಭಾಂಡ್ಯರವರನ್ನು ಒಳಗೊಂಡ ಪೀಠವು ದಿನಾಂಕ: 29/11/2025 ರಂದು ಆದೇಶಿಸಿದೆ.

B.Y. Raghavendra ವಾತಾವರಣ ಆಧಾರಿತ ಬೆಳೆವಿಮೆ ಹಣ ನೀಡಲು ಮತ್ತು ಅಡಿಕೆಗೆ ಬಂದಿರುವ ಎಲೆ ಚುಕ್ಕೆ ರೋಗ ಸಮಸ್ಯೆ ಬಗ್ಗೆ ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಬಿ.ವೈ.ರಾಘವೇಂದ್ರ

0

B.Y. Raghavendra ಸಂಸತ್ತಿನಲ್ಲಿ ಶೂನ್ಯ ಕಾಲ ಉಲ್ಲೇಖದ ಮೂಲಕ ಮಲೆನಾಡು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಅಡಿಕೆ ರೈತರು ಎದುರಿಸುತ್ತಿರುವ ಗಂಭೀರ ಸಂಕಷ್ಟವನ್ನು ಸಂಸದರಾದ ಬಿ.ವೈ.ರಾಘವೇಂದ್ರ ಅವರು ಪ್ರಸ್ತಾಪಿಸಿದ್ದಾರೆ.

ಹಳದಿ ಎಲೆ ರೋಗ (YLD) ಹಾಗೂ ಎಲೆ ಚುಕ್ಕೆ ರೋಗ (LSD) ಎಂಬ ಭೀಕರ ರೋಗಗಳು, ಜೊತೆಗೆ ಸತತವಾಗಿ ನಾಲ್ಕು ತಿಂಗಳು ಸುರಿದ ಭಾರೀ ಮಳೆಯಿಂದಾಗಿ ಅಡಿಕೆ ತೋಟಗಳಲ್ಲಿ ಭಾರೀ ನಷ್ಟವಾಗಿದೆ. ಪರಿಣಾಮವಾಗಿ, ಅನೇಕ ರೈತರು ಈ ವರ್ಷ ನಿರೀಕ್ಷಿಸಿದ್ದ ಫಸಲಿನ ಕೇವಲ ನಾಲ್ಕನೇ ಭಾಗವಷ್ಟೇ ದೊರೆಯುವ ಸ್ಥಿತಿ ಎದುರಿಸುತ್ತಿದ್ದಾರೆ.
ಅದೇ ವೇಳೆ, ಬೆಳೆ ವಿಮೆ ಯೋಜನೆಯಾದ WBCIS ಅನುಷ್ಠಾನದಲ್ಲಿ ಕಂಡುಬರುವ ಗಂಭೀರ ತೊಂದರೆಗಳನ್ನು ಸಹ ನಾನು ಉಲ್ಲೇಖಿಸಿದೆ. ಅನೇಕ ಮಳೆಮಾಪನ ಕೇಂದ್ರಗಳು ಕಾರ್ಯನಿರ್ವಹಿಸದೇ ಇರುವುದು, ಮೂರು ವರ್ಷಕ್ಕೊಮ್ಮೆ ಮಾತ್ರ ಪರಿಷ್ಕಾರಗೊಳ್ಳುವ ತಾಂತ್ರಿಕ ಮಾನದಂಡಗಳು, ಮತ್ತು 20 ರಿಂದ 45 ಕಿಮೀ ದೂರದಲ್ಲಿರುವ ಬ್ಯಾಕಪ್ ಮಳೆಮಾಪನ ಕೇಂದ್ರಗಳ ತಡವಾದ ಅಧಿಸೂಚನೆ–ಇವುಗಳ ಪರಿಣಾಮವಾಗಿ ಹಲವಾರು ಅರ್ಹ ರೈತರು ಯೋಗ್ಯ ಪರಿಹಾರವನ್ನೇ ಪಡೆಯದ ಸ್ಥಿತಿ ಉಂಟಾಗಿದೆ ಎಂದಿದ್ದಾರೆ.

B.Y. Raghavendra ಈ ಹಿನ್ನೆಲೆಯಲ್ಲಿ, ಸಮೀಪದ ಹಾಗೂ ಹವಾಮಾನಕ್ಕೆ ತಕ್ಕಂತೆ ನಿಖರ ಮಾಹಿತಿಯನ್ನು ಹೊಂದಿರುವ ಕೇಂದ್ರಗಳ ಆಧಾರದ ಮೇಲೆ ರೈತರಿಗೆ 2024–25ರ ಪರಿಹಾರವನ್ನು ಮರು ಲೆಕ್ಕ ಹಾಕುವಂತೆ, ಮಳೆ SMS ಸೇವೆಯನ್ನು ಪುನರ್‌ಸ್ಥಾಪಿಸುವಂತೆ, ರೋಗ ನಿಯಂತ್ರಣಕ್ಕೆ ತಕ್ಷಣದ ಕ್ರಮ ಕೈಗೊಳ್ಳುವಂತೆ ಹಾಗೂ ಅಡಿಕೆ ಬೆಳೆ ನಷ್ಟಕ್ಕೆ ವಿಶೇಷ ಪರಿಹಾರ ಪ್ಯಾಕೇಜ್‌ ನೀಡುವ ಸಾಧ್ಯತೆಯನ್ನು ಪರಿಶೀಲಿಸುವಂತೆ ಕೇಂದ್ರ ಸರ್ಕಾರವನ್ನು ನಾನು ಮನವಿ ಮಾಡಿದ್ದೇನೆ. ನಮ್ಮ ಅನ್ನದಾತರಿಗೆ ನ್ಯಾಯ, ರಕ್ಷಣೆ ಮತ್ತು ಸಮಯೋಚಿತ ಸಹಾಯ ದೊರೆಯುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.

MESCOM ಡಿಸೆಂಬರ್ 5. ಶಿವಮೊಗ್ಗದ ಬಿಎಸ್ಎನ್ಎಲ್ ಭವನ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ.ಮೆಸ್ಕಾಂ ಪ್ರಕಟಣೆ

0

MESCOM ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-5ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ.5 ರಂದು ಬೆಳಿಗ್ಗೆ 09:00 ಗಂಟೆಯಿಂದ ಸಂಜೆ 04:00 ಗಂಟೆಯವರೆಗೆ ನಗರದ ಬಿಎಸ್ ಎನ್ ಎಲ್ ಭವನ ಬಿ ಮತ್ತು ಸಿ ಬ್ಲಾಕ್ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ನಗರ ಉಪ ವಿಭಾಗ-3 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.