Monday, December 15, 2025
Monday, December 15, 2025
Home Blog Page 2

ಕನ್ನಡ ಮಾಧ್ಯಮದಲ್ಲಿ ಓದಿದ್ದವರು ಇಂದು ಸಮಾಜದಲ್ಲಿ ಮುಂಚೂಣಿಯಲ್ಲಿದ್ದಾರೆ : ಕೆ.ಎಸ್.ಗೀತಾ

0

ಶಿವಮೊಗ್ಗ ತಾಲ್ಲೂಕಿನ ಒಂದು ಪುಟ್ಟ ಶಾಲೆ ಆಡಿನಕೊಟ್ಟಿಗೆಯಲ್ಲಿ ಸಾಮಾನ್ಯ ಶಿಕ್ಷಕಿ. ನನ್ನಂತಹವರನ್ನು ಇಂದು ಕರೆಸಿ ಸನ್ಮಾನಿಸುತ್ತಿರುವುದು ನನಗೆ ತುಂಬ ಸಂತೋಷವನ್ನುಂಟು ಮಾಡಿದೆ. ಅದಕ್ಕಾಗಿ ಎಲ್ಲರಿಗೂ ಧನ್ಯವಾದಗಳು ಎಂದು ಶಿಕ್ಷಕಿ ಕೆ.ಎಸ್.ಗೀತಾ ತಿಳಿಸಿದ್ದಾರೆ. ಅವರು ಸಹ್ಯಾದ್ರಿ ಲಲಿತ ಕಲಾ ಅಕಾಡೆಮಿ ವತಿಯಿಂದ ರಾಜ್ಯೋತ್ಸವದ ಪ್ರಯುಕ್ತ ವನಿತಾ ವಿದ್ಯಾಲಯದಲ್ಲಿ ನಡೆದ ಸನ್ಮಾನ ಸ್ವೀಕರಿಸಿ ಮಾತನಾಡುತ್ತಿದ್ದರು.

ರಾಜ್ಯೋತ್ಸವದ ಮಹತ್ವದ ಬಗ್ಗೆ ಎಂ ಎನ್ ಸುಂದರ್ ರಾಜ್ ಅವರು ತಿಳಿಸುತ್ತಾ, ಕನ್ನಡ ಮಾಧ್ಯಮದಲ್ಲಿ ಓದಿ ನೂರಾರು ಗೌರವ ಡಾಕ್ಟರೇಟ್ ಗಳಿಸಿ, ಭಾರತರತ್ನ ಪ್ರಶಸ್ತಿಯನ್ನು ಪಡೆದ ಸಿ.ಎನ್.ಆರ್.ರಾವ್ ಬಗ್ಗೆ ನಾವೆಲ್ಲ ಅಭಿಮಾನ ಹೊಂದಬೇಕು ಎಂದು ಹೇಳಿದರು

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿ. ವಿಜಯಕುಮಾರ್ ಅವರು ಮಾತನಾಡಿ ಕನ್ನಡ ನಿತ್ಯೋತ್ಸವವಾಗಿ ಆಚರಿಸಬೇಕೆಂದು ಕರೆನೀಡಿದರು.

ಮಕ್ಕಳಿಗೆ ರಸಪ್ರಶ್ನೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಇದನ್ನು ಹರಿಪ್ರಸಾದ್ ನಡೆಸಿಕೊಟ್ಟರು. ವಿಜೇತ ಮಕ್ಕಳಿಗೆ ಜಿಲ್ಲಾ ಸರ್ವೋದಯ ಮಂಡಳಿ ಅಧ್ಯಕ್ಷ ಮನೋಹರ್ ಬಹುಮಾನ ವಿತರಿಸಿ, ಮಕ್ಕಳಲ್ಲಿ ಸ್ಫರ್ಧಾ ಮನೋಭಾವ ಬೆಳೆಯಲು ಇಂಥಾ ಕಾರ್ಯಕ್ರಮಗಳ ಅವಶ್ಯಕತೆ ಇದೆಯೆಂದು ಶ್ಲಾಘಿಸಿದರು.

ಶ್ರೀಮತಿ ತಾರಾಪ್ರಸಾದ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ತಮ್ಮ ಸಂಸ್ಥೆಯು ಒಬ್ಬ ನಿಷ್ಠಾವಂತ ಶಿಕ್ಷಕಿಯನ್ನು ಸನ್ಮಾನಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ತಿಳಿಸಿದರು.

ಪ್ರಾರಂಭದಲ್ಲಿ ಹರಿಪ್ರಸಾದ್ ಸ್ವಾಗತಿಸಿ, ಕೊನೆಯಲ್ಲಿ ವಂದಿಸಿದರು.

ಮೊದಲು ಶಾಲಾ ಮಕ್ಕಳಿಂದ ಪ್ರಾರ್ಥನೆ ನಡೆಯಿತು.

Department of Kannada and Culture ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಾನಪದ ಕಲಾವಿದರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿಶೇಷ ಕಾರ್ಯಕ್ರಮ

0

Department of Kannada and Culture ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಾನಪದ ಕಲಾವಿದರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ವಿಧಾನ ಸಭೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಪ್ರಸ್ತುತ ಕಷ್ಟದ ಪರಿಸ್ಥಿತಿಯಲ್ಲಿರುವ 11,154 ಕಲಾವಿದರು, ಸಾಹಿತಿಗಳಿಗೆ ತಿಂಗಳಿಗೆ ರೂ. 2500 ದಂತೆ ಮಾಸಾಶನ ನೀಡಲಾಗುತ್ತಿದೆ. ಅಲ್ಲದೆ 410 ಜನ ಮೃತ ಕಲಾವಿದರ ಪತ್ನಿಯರಿಗೂ ಮಾಸಿಕ 500 ರೂ. ಮಾಸಾಶನ ಪಾವತಿಸಲಾಗುತ್ತಿದೆ. ಪ್ರಸಕ್ತ ವರ್ಷದ ನವೆಂಬರ್ ತಿಂಗಳಿನವರೆಗೂ ಮಾಸಾಶನ ಪಾವತಿಸಲಾಗಿದೆ. ಮಾಸಾಶನ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿದ 1896 ಕಲಾವಿದರು, ಸಾಹಿತಿಗಳಿಗೂ ಕೂಡ ಮಾಸಾಶನ ಮಂಜೂರು ಮಾಡಲಾಗಿದೆ.

Department of Kannada and Culture ಜಾನಪದ ಜಾತ್ರೆ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿಲ್ಲ. ಈ ವರ್ಷ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಲಾವಿದರಿಗೆ ಪ್ರೋತ್ಸಾಹ ನೀಡಬೇಕು, ಸ್ಥಳೀಯ ಕಲೆಗಳನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಚಿತ್ರದುರ್ಗ, ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ದೊಡ್ಡ ಮಟ್ಟದಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದ್ದು, ದಿನಾಂಕಗಳನ್ನು ಶೀಘ್ರ ನಿಗದಿಪಡಿಸಲಾಗುವುದು ಎಂದು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಡಾ. ಅಶ್ವತ್ಥ ನಾರಾಯಣ ಹಾಗೂ ಆರ್ ಅಶೋಕ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ತಂಗಡಗಿ ಅವರ ಉತ್ತರಿಸಿದ್ದಾರೆ.

ಗ್ರಂಥಪಾಲಕರ ಹಕ್ಕುಗಳಿಗೆ ವಿಧಾನಪರಿಷತ್ತಿನಲ್ಲಿ ಡಿ.ಎಸ್.ಅರುಣ್ ಧ್ವನಿ

0

ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನವನ್ನು ಪಾವತಿಸದೆ ನಡೆಯುತ್ತಿರುವ ಗಂಭೀರ ಅಕ್ರಮವನ್ನು ಮಾನ್ಯ ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳು , ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಪ್ರತಿನಿಧಿಗಳಾದ ಡಿ.ಎಸ್.ಅರುಣ್ ಅವರು ಇಂದು ವಿಧಾನಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ವಿಷಯ ಪ್ರಸ್ತಾಪಿಸಿದರು.

ರಾಜ್ಯಾದ್ಯಂತ ಸಾವಿರಾರು ಗ್ರಂಥಪಾಲಕರು ತಿಂಗಳ ಕನಿಷ್ಠ ವೇತನಕ್ಕೂ ವಂಚಿತರಾಗುತ್ತಿರುವ ಬಗ್ಗೆ ಹಲವು ಜಿಲ್ಲೆಗಳಿಂದ ಬಂದಿರುವ ದೂರುಗಳು ಭಾರೀ ಆತಂಕಕ್ಕೆ ಕಾರಣವಾಗಿದ್ದು, ಕೆಲವು ಗ್ರಂಥಪಾಲಕರು ಆರ್ಥಿಕ ಬಿಕ್ಕಟ್ಟಿನಲ್ಲಿ ಪ್ರಾಣ ಕಳೆದುಕೊಂಡಿರುವ ಘಟನೆಗಳು ವರದಿಯಾದ ಹಿನ್ನೆಲೆ ವಿಷಯ ಮತ್ತಷ್ಟು ಗಂಭೀರವಾಗಿದೆ ಎಂದು ಮಾನ್ಯ ಶಾಸಕರು ಉಲ್ಲೆಕಿಸಿದರು.

ವೇತನ ಪಾವತಿ ಕಡಿಮೆ ಆಗಲು ಕಾರಣವಾಗಿರುವ ಆಡಳಿತಾತ್ಮಕ ಗೊಂದಲಗಳು, ಹಣ ಬಿಡುಗಡೆ ವಿಳಂಬ ಮತ್ತು ವರ್ಗೀಕರಣದ ದೋಷಗಳು ಕುರಿತು ಸರ್ಕಾರ ತಕ್ಷಣ ಸ್ಪಷ್ಟನೆ ನೀಡಬೇಕೆಂದು ಒತ್ತಾಯಿಸಿದರು. ಜೊತೆಗೆ, ಬಾಕಿ ಉಳಿದ ವೇತನ ಹಾಗೂ arrears ಪಾವತಿಗೆ ನಿಗದಿತ ಅವಧಿ ಪ್ರಕಟಿಸಬೇಕೆಂಬ ಬೇಡಿಕೆಯನ್ನು ಮಂಡಿಸಿದರು.

ಗ್ರಾಮೀಣ ಶಿಕ್ಷಣ ಮತ್ತು ಮಾಹಿತಿಗಾರಿಕೆಯ ಗುಣಮಟ್ಟ ಕಾಪಾಡಲು, ಗ್ರಂಥಪಾಲಕರಿಗೆ ಕನಿಷ್ಠ ವೇತನ ಹಕ್ಕನ್ನು ಪೂರ್ಣವಾಗಿ ಜಾರಿಗೊಳಿಸುವುದು ಸರ್ಕಾರದ ತುರ್ತು ಜವಾಬ್ದಾರಿ ಎಂದು ಮಾನ್ಯ ಡಿ. ಎಸ್ ಅರುಣ್ ರವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ, ಗ್ರಂಥಪಾಲಕರ ಹಿತವನ್ನು ಗಟ್ಟಿಯಾಗಿ ರಕ್ಷಿಸಲು ಶ್ರೀ ಅರುಣ್ ಅವರು ಇನ್ನೂ ಕೆಲವು ಮಹತ್ವದ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದರು . ESI ಮತ್ತು PF ಅಂತಹ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಗ್ರಂಥಪಾಲಕರಿಗೆ ತಕ್ಷಣ ಜಾರಿಗೊಳಿಸಬೇಕು, ಗ್ರಂಥಪಾಲಕರಿಗೆ ಪ್ರತ್ಯೇಕ ಸೇವಾ ನಿಯಮಾವಳಿ (Service Rules) ರೂಪಿಸಬೇಕು ಮತ್ತು ರಾಜ್ಯ ಬಜೆಟ್‌ನಲ್ಲಿ ಇವರಿಗಾಗಿ ಪ್ರತ್ಯೇಕ ವಿನಿಯೋಗ ಒದಗಿಸಬೇಕು ಎಂದು ಸ್ಪಷ್ಟವಾಗಿ ಹೇಳಿದರು. ಈ ಮೂರು ಕ್ರಮಗಳು ಈಗಿನ ಪರಿಸ್ಥಿತಿಯಲ್ಲಿ ಅತಿ ಅವಶ್ಯಕವಾಗಿವೆ ಎಂದು ಹೇಳಿದರು.

ವೇತನ ಪಾವತಿಯಲ್ಲಿ ಪಾರದರ್ಶಕತೆ ಹಾಗೂ ವಿಳಂಬ ನಿವಾರಣೆಗಾಗಿ ನೇರ ಲಾಭ ವರ್ಗಾವಣೆ (DBT) ವ್ಯವಸ್ಥೆ ಜಾರಿಗೆ ತರಬೇಕೆಂದು ಕೂಡ ಅವರು ಸರ್ಕಾರಕ್ಕೆ ಸಲಹೆ ನೀಡಿದರು. ಲಕ್ಷಾಂತರ ಫಲಾನುಭವಿಗಳಿಗೆ ಕೇಂದ್ರ ಸರ್ಕಾರ ಯಶಸ್ವಿಯಾಗಿ ಜಾರಿಗೊಳಿಸಿರುವ DBT ಮಾದರಿಯನ್ನು, ರಾಜ್ಯವು ಕೇವಲ ಆರು ಸಾವಿರಕ್ಕೂ ಕಡಿಮೆಯಿರುವ ಗ್ರಂಥಪಾಲಕರಿಗೆ ಜಾರಿಗೊಳಿಸುವುದು ಬಹಳ ಸುಲಭ ಮತ್ತು ಪರಿಣಾಮಕಾರಿ ಎಂಬುದನ್ನು ಡಿ. ಎಸ್. ಅರುಣ್ ಅವರು ಉದಾಹರಣೆ ನೀಡಿದರು.

RDPR ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಗೈರುಹಾಜರಾಗಿದ್ದ ಹಿನ್ನೆಲೆಯಲ್ಲಿ, ಅವರ ಪರವಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಉತ್ತರ ನೀಡುತ್ತಾ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಡಿ.ಎಸ್.ಅರುಣ್ ಅವರ ಸೂಚನೆಗಳನ್ನು ಸಂಪೂರ್ಣವಾಗಿ ಸಮರ್ಥಿಸಿ, RDPR ಸಚಿವರು ಮತ್ತು ಇಲಾಖೆಯೊಂದಿಗೆ ಚರ್ಚಿಸಿ DBT ವ್ಯವಸ್ಥೆ ಸೇರಿದಂತೆ ಸಲ್ಲಿಸಿದ ಶಿಫಾರಸುಗಳ ಮೇಲೆ ಶೀಘ್ರವೇ ಕ್ರಮ ಕೈಗೊಳ್ಳುವಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದರು

Visvesvaraya Technological University ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ವಿಶೇಷ ಕಾರ್ಯಾಗಾರ

0

Visvesvaraya Technological University ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ “ಜ್ಞಾನ ಸಂಗಮ” ಸಭಾಂಗಣದಲ್ಲಿ ಆಯೋಜಿಸಿದ್ದ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗಾಗಿ ವಿಭಾಗ ಮಟ್ಟದ (ಬೆಳಗಾವಿ, ಚಿಕ್ಕೋಡಿ, ಕಾರವಾರ, ಶಿರಸಿ) ಸಂಪನ್ಮೂಲ ಶಿಕ್ಷಕರ ಕಾರ್ಯಗಾರವನ್ನು ಉದ್ಘಾಟಿಸಿ,‌ಶಾಲಾ ಶಿಕ್ಷಣ ಮಂತ್ರಿ ಮಧು ಬಂಗಾರಪ್ಪ ಮಾತನಾಡಿದರು.

ರಾಜ್ಯದಲ್ಲಿ ಉತ್ತಮ ಶಿಕ್ಷಕರಿರುವುದೇ ಸರ್ಕಾರಿ ಶಾಲೆಗಳಲ್ಲಿ ಆದ್ದರಿಂದ ನಿಮ್ಮೆಲ್ಲರ ಸಹಕಾರದೊಂದಿಗೆ ಕಳೆದ ವರ್ಷಕ್ಕಿಂತ ಈ ವರ್ಷ ಫಲಿತಾಂಶ ಸುಧಾರಣೆಯಾಗಬೇಕು. ಈ ಬಾರಿ ನೂರಕ್ಕೆ ನೂರರಷ್ಟು ಫಲಿತಾಂಶ ಬರುವ ನಿಟ್ಟಿನಲ್ಲಿ ಎಲ್ಲ ಶಿಕ್ಷಕರು ಕಾರ್ಯಪ್ರವೃತ್ತರಾಗಬೇಕು. ವಿದ್ಯಾರ್ಥಿಗಳಿಗೆ ಹೆಚ್ಚಿನ ಅಂಕಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸಿ ತಮ್ಮ ತಮ್ಮ ಶಾಲೆಗಳಲ್ಲಿ ಅನುಷ್ಠಾನ ಮಾಡಬೇಕು.

ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಹೆಚ್ಚಿನ ಒತ್ತು ನೀಡಿ, ಮಕ್ಕಳ ಪಟ್ಟಿ ಮಾಡಿ ಅಂತಹ ವಿದ್ಯಾರ್ಥಿಗಳಿಗೆ ವಿಶೇಷ ಗಮನ ಹರಿಸಿ, ತರಬೇತಿ ನೀಡಬೇಕು. ಪರೀಕ್ಷೆಯಲ್ಲಿ ಬರಬಹುದಾದ ಸಂಭಾವ್ಯ ಪ್ರಶ್ನೆಗಳ ಬಗ್ಗೆ ತಿಳಿ ಹೇಳಬೇಕು. ಹಳೆ ಪ್ರಶ್ನೆ ಪತ್ರಿಕೆಗಳನ್ನು ಬಿಡಿಸಿ ವಿವರಿಸಬೇಕು ಮತ್ತು ವಿದ್ಯಾರ್ಥಿಗಳು ಸುಲಭವಾಗಿ ಕಲಿಯುವಂತೆ ಮತ್ತು ಅರ್ಥವಾಗುವಂತೆ ಕಲಿಕಾ ವಿಧಾನದಲ್ಲಿ ತಿಳಿಸಬೇಕು.

ಈ ಬಾರಿ ನೂರಕ್ಕೆ ನೂರರಷ್ಟು ಫಲಿತಾಂಶ ತರುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಶಿಕ್ಷಕರು ಕಾರ್ಯಪ್ರವೃತ್ತರಾಗಬೇಕು ಎಂದು ಮಧು ಬಂಗಾರಪ್ಪ ಕರೆ ನೀಡಿದರು.

Visvesvaraya Technological University ಕಾರ್ಯಾಗಾರದಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ವಿ. ರಶ್ಮಿ ಮಹೇಶ್, ಧಾರವಾಡ ಅಪರ ಆಯುಕ್ತರಾದ ಶ್ರೀ ಈಶ್ವರ್ ಉಳ್ಳಾಗಡ್ಡಿ, ಡಿ.ಎಸ್.ಇ.ಆರ್.ಟಿ ನಿರ್ದೇಶಕರಾದ ಶ್ರೀ ಹೆಚ್.ಎನ್ ಗೋಪಾಲಕೃಷ್ಣ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಸಂಪನ್ಮೂಲ ವ್ಯಕ್ತಿಗಳು ಹಾಜರಿದ್ದರು.

B.Y. Raghavendra ಶಿವಮೊಗ್ಗದಲ್ಲಿ ESIC ಉಪ-ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಬಿ.ವೈ.ರಾಘವೇಂದ್ರ ಮನವಿ

0

B.Y. Raghavendra ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವರಾದ ಸನ್ಮಾನ್ಯ ಡಾ. ಮನ್ಸುಖ್ ಮಾಂಡವಿಯಾ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ, ಶಿವಮೊಗ್ಗದಲ್ಲಿ ESIC Sub-Regional Office (SRO) ಸ್ಥಾಪಿಸಲು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ಮನವಿ ಸಲ್ಲಿಸಿದರು.

ಶಿವಮೊಗ್ಗ, ಭದ್ರಾವತಿ, ದಾವಣಗೆರೆ, ಚಿತ್ರದುರ್ಗ ಮತ್ತು ಹರಿಹರ ಸೇರಿ ಒಟ್ಟು 280000 ವಿಮಾದಾರರು ಇದ್ದು — Sub-Regional Office ಸ್ಥಾಪನೆಗೆ ಅಗತ್ಯವಾದ ಮಾನದಂಡವನ್ನು ಸ್ಪಷ್ಟವಾಗಿ ಮೀರುತ್ತದೆ ಹಾಗೂ ಪ್ರಸ್ತುತ ಸಾವಿರಾರು ಉದ್ಯೋಗದಾತರು ಮತ್ತು ಕಾರ್ಮಿಕರು 220 ಕಿಮೀ ದೂರದ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದು, ಹೊಸ SRO ಸ್ಥಾಪನೆಯಾದರೆ ಐದು ನಗರಗಳ 2.8 ಲಕ್ಷಕ್ಕೂ ಹೆಚ್ಚು ಕಾರ್ಮಿಕರಿಗೆ ತ್ವರಿತ ಮತ್ತು ಸ್ಥಳೀಯ ESI ಸೇವೆಗಳು ಲಭ್ಯವಾಗಲಿವೆ ಎಂದು ತಿಳಿಸಲಾಯಿತು.

B.Y. Raghavendra ಈ ಮನವಿಗಳಿಗೆ ಕೇಂದ್ರ ಸಚಿವ ಮನಸುಖ್ ಮಾಂಡವೀಯ ಅವರು ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದು, ಆದ್ಯತೆ ಆಧಾರದ ಮೇಲೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

CM Siddharamaih ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸಭೆ

0

CM Siddharamaih ಸುವರ್ಣ ವಿಧಾನಸೌಧದಲ್ಲಿ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನವರು ಸಭೆ ನಡೆಸಿದರು
ಈ ವೇಳೆ ಕಬ್ಬು ಮತ್ತು ಮೆಕ್ಕೆಜೋಳ ಬೆಳೆಗಾರರ ಸಮಸ್ಯೆಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ ಹಿನ್ನೆಲೆಯಲ್ಲಿ ರೈತ ಮುಖಂಡರು ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು ಸನ್ಮಾನಿಸಿ, ಧನ್ಯವಾದ ಸಲ್ಲಿಸಿದರು.

ಸಭೆಯಲ್ಲಿ ಮುಖ್ಯಮಂತ್ರಿಗಳು ಹೇಳಿದ ಮಾತುಗಳು:

  • ಕಬ್ಬು ಬೆಳೆಗಾರರು ಸೇರಿದಂತೆ ಎಲ್ಲಾ ರೈತರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದ್ದು, ರೈತರ ಎಲ್ಲಾ ಬೇಡಿಕೆಗಳನ್ನು ಪರಿಶೀಲಿಸಿ ಪರಿಹಾರ ಕಂಡುಕೊಳ್ಳಲಾಗುವುದು.
  • ನಮ್ಮ ಸರ್ಕಾರ ಬಂದ ಬಳಿಕ ಪ್ರತಿ ಲೀಟರ್ ಹಾಲಿಗೆ ರೂ.5 ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಪ್ರಸ್ತುತ ಪ್ರತಿದಿನ ಒಂದು ಕೋಟಿ ಲೀಟರ್ ಹಾಲು ಖರೀದಿಗೆ ರೂ.5 ಕೋಟಿ ಪ್ರೋತ್ಸಾಹ ಧನವನ್ನು ರೈತರಿಗೆ ನೀಡುತ್ತಿದ್ದೇವೆ.
  • ಕಬ್ಬಿನ ತೂಕದಲ್ಲಿ ಸಕ್ಕರೆ ಕಾರ್ಖಾನೆಗಳು ಮಾಡುವ ಮೋಸವನ್ನು ತಪ್ಪಿಸಲು, ಇಳುವರಿ ನಿಗದಿಯನ್ನು ವೈಜ್ಞಾನಿಕವಾಗಿ ಮಾಡಲು ಕ್ರಮ ಕೈಗೊಳ್ಳಲಾಗಿದೆ.
  • ಭೂ ಸುಧಾರಣಾ ಕಾಯ್ದೆಗೆ ಹಿಂದಿನ ಸರ್ಕಾರ ಮಾಡಿರುವ ತಿದ್ದುಪಡಿಗಳನ್ನು ಹಿಂತೆಗೆದುಕೊಳ್ಳಲು ಕ್ರಮ ಕೈಗೊಳ್ಳಲಾಗುವುದು.
  • ನೀರಾವರಿಗೆ ವಿದ್ಯುತ್‌ ಸಮಸ್ಯೆಯಿದ್ದು, 12 ತಾಸು ನಿರಂತರ ವಿದ್ಯುತ್‌ ಪೂರೈಕೆ ಮಾಡಬೇಕು, ಅಕ್ರಮ – ಸಕ್ರಮ ಯೋಜನೆಯನ್ನು ಪುನಾರಂಭಿಸಬೇಕು, ಕಾಡುಪ್ರಾಣಿಗಳಿಂದ ಬೆಳೆ ಹಾನಿ ಪರಿಹಾರ ಧನ ಹೆಚ್ಚಿಸಬೇಕು. ರೈತರ ಉತ್ಪನ್ನಗಳ ಖರೀದಿಗೆ ಕಾರ್ಪಸ್‌ ಫಂಡ್‌ ಆರಂಭಿಸಬೇಕು. ಪಂಚಾಯತ್‌ ಮಟ್ಟದಲ್ಲಿ ಪಶು ವೈದ್ಯರ ನೇಮಕ ಮಾಡಬೇಕು. ಬೆಳಗಾವಿಯಲ್ಲಿ ಆರಂಭಿಸಲಾಗಿರುವ ಸಕ್ಕರೆ ಆಯುಕ್ತರ ಕಚೇರಿಗೆ ಅಗತ್ಯ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ರೈತ ಪ್ರತಿನಿಧಿಗಳು ಮನವಿ ಸಲ್ಲಿಸಿದ್ದು, ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ವಹಿಸಲಾಗುವುದು.
  • ರೈತರಿಗೆ 7 ಗಂಟೆ ಕಾಲ ನಿರಂತರ ವಿದ್ಯುತ್‌ ಒದಗಿಸಲು ಸರ್ಕಾರ ಬದ್ಧವಾಗಿದೆ. ವಿದ್ಯುತ್‌ ಉತ್ಪಾದನೆ ಹೆಚ್ಚಾದಾಗ ವಿದ್ಯುತ್‌ ಪೂರೈಕೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು.
  • ರೈತರ ವಿಷಯದಲ್ಲಿ ಸರ್ಕಾರ ಯಾವುದೇ ಆತ್ಮವಂಚನೆ ಮಾಡುವುದಿಲ್ಲ. ನಮ್ಮ ಸರ್ಕಾರ ರೈತ ಪರವಿದ್ದು, ಅನ್ನದಾತರ ಎಲ್ಲಾ ಸಮಸ್ಯೆಗಳಿಗೂ ನ್ಯಾಯಯುತ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

B.Y. Raghavendra ಕೇಂದ್ರ ಶಿಕ್ಷಣ ಸಚಿವರನ್ನ ಭೇಟಿ ಮಾಡಿದ ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ

0

B.Y. Raghavendra ಕೇಂದ್ರ ಶಿಕ್ಷಣ ಸಚಿವರಾದ ಮಾನ್ಯ ಶ್ರೀ ಧರ್ಮೇಂದ್ರ ಪ್ರಧಾನ ಜೀ ಅವರನ್ನುಶಿವಮೊಗ್ಗ ಸಂಸದರಾದ ಬಿ ವೈ ರಾಘವೇಂದ್ರ ಅವರು ಭೇಟಿ ಮಾಡಿ , ಶಿವಮೊಗ್ಗ ಮತ್ತು ರಾಜ್ಯದ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚಿಸಿದರು.

ಕುವೆಂಪು ವಿಶ್ವವಿದ್ಯಾಲಯದ ಸುಮಾರು 3,000 ಗ್ರಾಮೀಣ ಮತ್ತು ಓಬಿಸಿ ವಿದ್ಯಾರ್ಥಿಗಳಿಗೆ ಗಂಭೀರ ವಸತಿ ಸಮಸ್ಯೆ ಎದುರಾಗುತ್ತಿರುವುದರಿಂದ, ಓಬಿಸಿ ವಿದ್ಯಾರ್ಥಿಗಳ ವಸತಿ ಗೃಹ ನಿರ್ಮಾಣಕ್ಕೆ ಯುಜಿಸಿ ವಿಶೇಷ ಅನುದಾನ ಮಂಜೂರು ಮಾಡುವಂತೆ ವಿನಂತಿಸಿದರು.

ಶಿವಮೊಗ್ಗದ ಕೇಂದ್ರ ವಿದ್ಯಾಲಯದಲ್ಲಿ ಎಲ್ಲಾ ತರಗತಿಗಳಿಗೆ ಎರಡು ಹೆಚ್ಚುವರಿ ಸೆಕ್ಷನ್‌ಗಳನ್ನು ಅನುಮೋದಿಸಲಾಗಿದೆ; ಇದಕ್ಕಾಗಿ ಶಾಶ್ವತ ಕಟ್ಟಡಗಳು ಮತ್ತು ಹೊಸ ಮೂಲಸೌಕರ್ಯ ಒದಗಿಸಲು ಸಹಕಾರ ಕೋರಿ ಮನವಿ ಮಾಡಿದರು.

ಕರ್ನಾಟಕದ ಏಕೈಕ ಸಂಸ್ಕೃತ ಭಾಷಾಭಿಮಾನಿ ಗ್ರಾಮವಾದ ಮತ್ತೂರು–ಹೊಸಳ್ಳಿಯಲ್ಲಿ ರಾಷ್ಟ್ರೀಯ ಆದರ್ಶ ವೇದ ವಿದ್ಯಾಲಯ ಸ್ಥಾಪನೆಗೆ ದೀರ್ಘಕಾಲದಿಂದ ಬಾಕಿ ಉಳಿದಿರುವ ಪ್ರಸ್ತಾವನೆಯನ್ನು ಅನುಮೋದಿಸಲು ಬೇಡಿಕೆ ಇಟ್ಟು, 2009 ರ ಪೂರ್ವದಲ್ಲಿ ಎಂ.ಫಿಲ್ ಪದವಿ ಪಡೆದ, 10–25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ Guest Lecturers‌ರ ಪದವಿಯನ್ನು NET ಸಮಾನವಾಗಿ ಪರಿಗಣಿಸಲು, ಮಹಾರಾಷ್ಟ್ರ ಸರ್ಕಾರದ ಉದಾಹರಣೆಯನ್ನು ಅನುಸರಿಸಿ ಮಾನ್ಯತೆ ನೀಡುವಂತೆ ಕೇಳಿದರು.

PM POSHAN ಯೋಜನೆಯ ಅಡಿಯಲ್ಲಿ ಕೆಲಸ ಮಾಡುವ 25 ಲಕ್ಷಕ್ಕೂ ಹೆಚ್ಚು ಕುಕ್-ಕಮ್-ಹೆಲ್ಪರ್ಸ್‌ಗಳಿಗೆ 2009 ರಿಂದ ಬದಲಾಗದ ಕೇವಲ 600 ರೂ ಕೇಂದ್ರದ ಹಂಚಿಕೆ ದೊರೆಯುತ್ತಿರುವುದರಿಂದ, ಸಂಭಾವನೆ ಹೆಚ್ಚಿಸುವುದು, ಆರೋಗ್ಯ ವಿಮೆ, ಸಾಮಾಜಿಕ ಭದ್ರತೆ ಮತ್ತು ಕಾನೂನುಬದ್ಧ ಹುದ್ದೆ ನೀಡುವಂತೆ ವಿನಂತಿಸಿದರು.

B.Y. Raghavendra ಇತ್ತೀಚಿನ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಸೇವೆಯಲ್ಲಿ ಇದ್ದ ಶಿಕ್ಷಕರಿಗೆ TET ಕಡ್ಡಾಯವಾಗಿರುವುದರಿಂದ ಉಂಟಾದ ಆತಂಕಕ್ಕೆ ಪರಿಹಾರವಾಗಿ, TET ನಿಯಮ ಜಾರಿಗಿಂತ ಮೊದಲೇ ನೇಮಕಗೊಂಡ ಶಿಕ್ಷಕರಿಗೆ ವಿನಾಯಿತಿ ನೀಡುವಂತೆ ಮನವಿ ಮಾಡಿದರು..

ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಿಕ್ಷಣ ಸಂಸ್ಥೆಗಳ ಹಿತಕ್ಕಾಗಿ ತಿಳಿಸಿದ ಎಲ್ಲಾ ವಿಷಯಗಳನ್ನು ಸಂವೇದನಾಶೀಲವಾಗಿ ಆಲಿಸಿ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ ಮಾನ್ಯ ಧರ್ಮೇಂದ್ರ ಪ್ರಧಾನ ಜೀ ಅವರಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದರು.

ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ

0

ಶಿವಮೊಗ್ಗ ನಗರದ ಎನ್.ಟಿ.ರಸ್ತೆಯ ಎಂಆರ್.ಎಫ್ ಟೈರ್ ಶೋ ರೂಂ ಹತ್ತಿರ ವಾಸ ಮಾಡುತ್ತಿದ್ದ 65 ವರ್ಷ ಸಯ್ಯದ್ ಭಾಷಾ ಎಂಬ ವ್ಯಕ್ತಿಯು ಅನಾರೋಗ್ಯದ ಕಾರಣ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಡಿ. 10 ರಂದು ಮೃತಪಟ್ಟಿರುತ್ತಾರೆ. ಈ ವ್ಯಕ್ತಿಯ ವಾರಸುದಾರರ ಬಗ್ಗೆ ಯಾವುದೇ ಮಾಹಿತಿ ದೊರಕಿರುವುದಿಲ್ಲ. ಈ ವ್ಯಕ್ತಿಯ ಚಹರೆ 5 ಅಡಿ ಎತ್ತರವಿದ್ದು, ಎಣ್ಣೆಗೆಂಪು ಮೈಬಣ್ಣ, ಕೋಲುಮುಖ, ತೆಳುವಾದ ಮೈಕಟ್ಟು ಹೊಂದಿರುತ್ತಾರೆ. ಎರಡು ಕೈಗಳ ಮೇಲೆ ಹಳೆಯ ಗಾಯದ ಗುರುತು ಇರುತ್ತದೆ.
ಈ ಮೃತ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಇದ್ದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ದೂ.ಸಂ.: 08182-261414/ 9916882544 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.

ಸಹಕಾರ ಸಂಘ/ಸೌಹಾರ್ದ ಸಹಕಾರಿಗಳ ವಾರ್ಷಿಕ ಮಹಾಸಭೆ ನಡಾವಳಿ ಸಲ್ಲಿಸಲು ಸೂಚನೆ

0

ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲಾ ಸಹಕಾರ ಸಂಘಗಳು/ ಸೌಹಾರ್ದ ಸಹಕಾರಿಗಳು ಕಾಯ್ದೆ ಹಾಗೂ ನಿಯಮಗಳನ್ವಯ 2025-26ನೇ ಸಾಲಿನ ಲೆಕ್ಕಪರಿಶೋಧನೆಗೆ ಲೆಕ್ಕಪರಿಶೋಧಕರ ಆಯ್ಕೆ ಸಂಬಂಧ ವಾರ್ಷಿಕ ಮಹಾಸಭೆ ಜರುಗಿದ ನಡಾವಳಿಯ ಯಥಾ ಪ್ರತಿಯನ್ನು ಮಹಾಸಭೆ ನಡೆದ 7 ದಿನಗಳೊಳಗಾಗಿ ಉಪನಿರ್ದೇಶಕರ ಕಚೇರಿ, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆ, ಪಿ.ಜಿ.ಎಸ್. ಟವರ್, 2ನೇ ಮಹಡಿ, ಜ್ಯುವೆಲ್ ರಾಕ್ ಹೋಟೆಲ್ ರಸ್ತೆ, ಜಗನ್ನಾಥ ನರ್ಸಿಂಗ್ ಹೋಂ ಪಕ್ಕ, ಶಿವಮೊಗ್ಗ ಇವರ ಕಚೇರಿಗೆ ಕಡ್ಡಾಯವಾಗಿ ಒಂದು ಪ್ರತಿಯನ್ನು ಸಲ್ಲಿಸಿ ಸ್ವೀಕೃತಿ ಪಡೆದುಕೊಳ್ಳುವಂತೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

MESCOM ಜೋಗ: ಮೆಸ್ಕಾಂ ಜನ ಸಂಪರ್ಕ ಸಭೆ

0

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಡಿ. 16 ರಂದು ಬೆಳಿಗ್ಗೆ 11.00 ರಿಂದ 01.00 ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.

ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ ;.9448289520.