Monday, May 4, 2026
Monday, May 4, 2026
Home Blog Page 2

CM Siddharamaiah ವಿಧಾನಸಭೆ ಚುನಾವಣೆಗಳು ಮುಗಿಯುತ್ತಿದ್ದಂತೆಯೇ ವಾಣಿಜ್ಯ ಸಿಲಿಂಡರ್ ಬೆಲೆ ಹೆಚ್ಚಳ :‌ ಕೇಂದ್ರದ ವಿರುದ್ಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಕ್ರೋಶ

0

CM Siddharamaiah ನಾವು ಮೊದಲೇ ಎಚ್ಚರಿಕೆ ಕೊಟ್ಟಂತೆ ವಿಧಾನಸಭಾ ಚುನಾವಣೆಗಳು ಮುಗಿಯುತ್ತಿದ್ದಂತೆಯೇ ನರೇಂದ್ರಮೋದಿ ಸರ್ಕಾರವು ಬೆಲೆಯೇರಿಕೆ ಮಾಡತೊಡಗಿದೆ. ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರವನ್ನು ಮೇ 1ರಿಂದ ಜಾರಿಗೆ ಬರುವಂತೆ ಏಕಾಏಕಿ ₹993 ಹೆಚ್ಚಳ ಮಾಡಿದೆ. ಒಟ್ಟಾರೆ 19 ಕೆಜಿಯ 1 ಸಿಲಿಂಡರ್‌ಗೆ ನಿನ್ನೆಯವರೆಗೆ ₹2,078.50ರಷ್ಟಿದ್ದ ದರ ಇದೀಗ ₹3,071.5ಗೆ ತಲುಪಿದೆ. ಚುನಾವಣೆ ಅವಧಿಯಲ್ಲಿ ಮೋದಿ ಸರ್ಕಾರವು ಉದ್ದೇಶಪೂರ್ವಕವಾಗಿ ವಾಣಿಜ್ಯ ಬಳಕೆಯ ಗ್ಯಾಸ್‌ ಬೆಲೆ ಏರಿಕೆಯನ್ನು ತಡೆದಿತ್ತು ಎಂಬುದಕ್ಕೆ ದಿಢೀರನೆ ಇಷ್ಟು ಪ್ರಮಾಣದಲ್ಲಿ ಏರಿಕೆ ಮಾಡಿರುವುದು ಸಾಕ್ಷಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಕೇವಲ 4 ತಿಂಗಳ ಅವಧಿಯಲ್ಲಿ ಮೋದಿ ಸರ್ಕಾರ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರವನ್ನು 6 ಬಾರಿ ಏರಿಕೆ ಮಾಡಿದ್ದು, ಒಟ್ಟು ₹1,518 ಹೊರೆಯನ್ನು ಬಳಕೆದಾರರ ಮೇಲೆ ಹೊರಿಸಿದೆ. ಇದೊಂದು ರೀತಿಯಲ್ಲಿ ಅಧಿಕೃತ ಲೂಟಿಯೇ ಹೊರತು ಆಡಳಿತದ ಕ್ರಮವಲ್ಲ. ಆಗಾಗ ಜಾಗತಿಕ ಪರಿಸ್ಥಿತಿಗಳು ಬದಲಾಗುತ್ತಿರುತ್ತವೆ, ಇಂತಹ ಸಂದರ್ಭದಲ್ಲಿ ಭಾರತದ ನಾಗರಿಕರನ್ನು ಕಾಪಾಡುವುದು ಪ್ರಧಾನಿಯಾಗಿ ಮೋದಿಯವರ ಕರ್ತವ್ಯವಾಗಿದೆ. ಆದರೆ ಜನಸಾಮಾನ್ಯರನ್ನು ರಕ್ಷಿಸುವ ಬದಲು ಅವರ ಮೇಲೆಯೇ ಬೆಲೆ ಏರಿಕೆಯ ಹೊರೆ ಹೊರಿಸುವುದು ಅರ್ಥಹೀನವಾಗಿದೆ. ನಮ್ಮ ದೇಶದ ಆರ್ಥಿಕತೆಗೆ ವಿದೇಶಾಂಗ ನೀತಿಯು ಶ್ರೀರಕ್ಷೆಯಂತಿರಬೇಕು. ಆದರೆ ಮೋದಿ ಸರ್ಕಾರದ ಟೊಳ್ಳು ವಿದೇಶಾಂಗ ನೀತಿಯಿಂದಾಗಿ ಜನಸಾಮಾನ್ಯರು ಸಂಕಷ್ಟ ಅನುಭವಿಸುವಂತಾಗಿದೆ ಹೇಳಿದ್ದಾರೆ.

ವಾಣಿಜ್ಯ ಗ್ಯಾಸ್‌ ದರ ಏರಿಕೆಯಿಂದ ಕೇವಲ ವ್ಯಾಪಾರಸ್ಥರು ಮಾತ್ರ ಸಂಕಷ್ಟಕ್ಕೆ ಒಳಗಾಗುವುದಿಲ್ಲ, ದೇಶದ ಪ್ರತಿಯೊಂದು ಮನೆಯ ಮೇಲೂ ದರ ಏರಿಕೆಯ ಪರಿಣಾಮ ಬೀರುತ್ತದೆ. ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಸಣ್ಣಪುಟ್ಟ ಕ್ಯಾಂಟೀನ್‌ಗಳು ಹಾಗೂ ಕೆಟರಿಂಗ್‌ ಸೇವೆಗಳಿಗೆ ತಮ್ಮ ಆಹಾರ ಪದಾರ್ಥಗಳ ಮೇಲೆ ದರವನ್ನು ಹೆಚ್ಚಿಸುವುದು ಅನಿವಾರ್ಯವಾಗುತ್ತದೆ. ಇದರಿಂದ ಗ್ರಾಹಕರು ದೈನಂದಿನ ಊಟ-ಉಪಹಾರಗಳಿಗೆ ಹೆಚ್ಚು ಹಣಕೊಡುವ ಪರಿಸ್ಥಿತಿ ಬರುತ್ತದೆ. ನಗರದ ಕಾರ್ಮಿಕರು, ದಿನಗೂಲಿ ಕಾರ್ಮಿಕರು ಮತ್ತು ಸಣ್ಣ ಉದ್ಯಮಗಳ ಮಾಲೀಕರು ಹೆಚ್ಚು ಸಂಕಷ್ಟ ಅನುಭವಿಸಬೇಕಾಗುತ್ತದೆ. ಒಂದು ಲೋಟ ಟೀ ಯಿಂದ ಒಂದು ಸರಳ ಊಟದವರೆಗೆ, ಎಲ್ಲವೂ ದುಬಾರಿಯಾಗುತ್ತದೆ ಎಂದು ಹೇಳಿದ್ದಾರೆ.

CM Siddharamaiah ಕಾರ್ಮಿಕರ ದಿನದ ಕೊಡುಗೆ ಎಂಬಂತೆ ಮೋದಿಯವರು ವಾಣಿಜ್ಯ ಬಳಕೆಯ ಸಿಲಿಂಡರ್‌ ದರ ಏರಿಸುವ ಮೂಲಕ ಶ್ರಮಿಕ ವರ್ಗಕ್ಕೆ ಬರೆ ಎಳೆದಿದ್ದಾರೆ. ಒಂದೆಡೆ ದರಗಳು ದುಬಾರಿಯಾದರೆ, ಮತ್ತೊಂದೆಡೆ ಆದಾಯ ಕ್ಷೀಣಿಸುತ್ತಿದೆ. ದೈನಂದಿನ ಜೀವನ ಮತ್ತಷ್ಟು ದುಸ್ತರವಾಗುತ್ತಿದೆ. ಕಾರ್ಮಿಕರು ಕೇಂದ್ರ ಸರ್ಕಾರದ ಬಳಿ ಘನತೆಯ ಹಾಗೂ ನೆಮ್ಮದಿಯ ಬದುಕನ್ನು ಕಲ್ಪಿಸುವಂತೆ ಕೇಳಿದರೆ ಬೆಲೆಯೇರಿಕೆ ಮತ್ತು ಸಮರ್ಥನೆಯ ಉತ್ತರವನ್ನು ಕೊಡುತ್ತಿದೆ.

ಇದು ಕೇವಲ ಆರಂಭವಷ್ಟೇ, ಇಂತಹ ಮತ್ತಷ್ಟು ಬೆಲೆ ಏರಿಕೆಯ ಹೊಡೆತಗಳು ಅಪ್ಪಳಿಸಲಿವೆ, ಅದರ ಹೊರೆಯನ್ನು ನಾಗರಿಕರೇ ಹೊತ್ತುಕೊಳ್ಳುವಂತಾಗಲಿದೆ. ಇದು ಮೋದಿ ಮಾದರಿಯ ಆಡಳಿತವಾಗಿದೆ. ಚುನಾವಣೆಯಲ್ಲಿ ಜನರ ದಾರಿ ತಪ್ಪಿಸುವುದು, ಬಳಿಕ ಅವರ ಮೇಲೆ ಹೊರೆ ಹೊರಿಸುವುದು ಮೋದಿಯವರ ಸೂತ್ರವಾಗಿದೆ ಎಂದು ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಪೊಲೀಸ್ ಇಲಾಖೆಯಿಂದ ಮನೆ ಸುರಕ್ಷತೆ, ಭದ್ರತೆ ಬಗ್ಗೆ ವಿಶೇಷ ಯೋಜನೆ

0

LHBS ನ ಕಂಟ್ರೋಲ್ ರೂಂ / ಸಹಾಯವಾಣಿ ಸಂಖ್ಯೆ 8277982901
ಲಾಕ್ಡ್ ಹೌಸ್ (ಬೀಗ ಹಾಕಿದ ಮನೆಗಳ) ಸುರಕ್ಷತೆಯ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ನೂತನ ಸುರಕ್ಷತಾ ಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಬಿ.ನಿಖಿಲ್ ತಿಳಿಸಿದ್ದಾರೆ. ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ಮನವಿ ಮಾಡಿದ್ದಾರೆ.

Agricultural University ಕೃಷಿ ಪದವಿಗೆ ಪ್ರಾಯೋಗಿಕ ಪರೀಕ್ಷೆಯ ಅವಧಿ ವಿಸ್ತರಣೆ

0

Agricultural University ರೈತರ ಮಕ್ಕಳಿಗಾಗಿ ಮೀಸಲಿರುವ ಕೃಷಿ ಪದವಿ ಸೀಟುಗಳಿಗಾಗಿ ಪ್ರವೇಶ ಪ್ರಾಯೋಗಿಕ ಪರೀಕ್ಷೆಯನ್ನು ಮೇ. 10 ರವರೆಗೆ ವಿಸ್ತರಿಸಲಾಗಿದ್ದು, ಕೃಷಿ ಮಹಾವಿದ್ಯಾಲಯ, ಶಿವಮೊಗ್ಗ ಮತ್ತು ತೋಟಗಾರಿಕೆ ಮಹಾವಿದ್ಯಾಲಯ, ಹಿರಿಯೂರು ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುವುದು ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.
ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಹಾಗು ಸಿ.ಇ.ಟಿಯ ನೇತೃತ್ವದಲ್ಲಿ ನಡೆಸಲಾಗುವ ಈ ಪ್ರಾಯೋಗಿಕ ಪರೀಕ್ಷೆಯು ಎಲ್ಲಾ ಕೃಷಿ ವಿಜ್ಞಾನಗಳಿಗೆ ಹಾಗೂ ಪಶು ವೈದ್ಯಕೀಯ ವಿಜ್ಞಾನಗಳ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆಗಾಗಿ ನಡೆಯಲಿದೆ. ಕೃಷಿಕರ ಕೋಟಾದಲ್ಲಿ ಈಗಾಗಲೇ ಸಿ.ಇ.ಟಿ. ಅರ್ಜಿಯಲ್ಲಿ ಸಲ್ಲಿಸಿ ಅನರ್ಹರಾಗಿರುವ ಅಭ್ಯರ್ಥಿಗಳು ಸೂಕ್ತ ದಾಖಲೆಗಳನ್ನು ಸಲ್ಲಿಸಲು ಮತ್ತು ಹೊಸದಾಗಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕೊನೆಯ ದಿನಾಂಕವನ್ನು ಮೇ.04 ರ ಮಧ್ಯಾಹ್ನ 12.00 ಗಂಟೆಯವರೆಗೆ ಮುಂದೂಡಲಾಗಿದೆ.
ಈ ವೇಳಪಟ್ಟಿ ಈ ಕೆಳಕಂಡಂತಿದೆ.
ಅಭ್ಯರ್ಥಿಗಳು ಮೂಲ ದಾಖಲಾತಿಗಳನ್ನು ಆನ್ ಲೈನ್ ಮೂಲಕ ಅಪ್ ಲೋಡ್ ದಿನಾಂಕ: 04-05-2026ರ ಮಧ್ಯಾಹ್ನ 12.00 ಗಂಟೆಯವರೆಗೆ ಮಾಡುವುದು
ಆನ್ ಲೈನ್ನಲ್ಲಿ ದಾಖಲಾತಿಗಳ ಪರಿಶೀಲನೆ ಮತ್ತು ಕೃಷಿ ಕೋಟಾದಡಿ ಪ್ರಾಯೋಗಿಕ ಪರೀಕ್ಷೆಗೆ ಅರ್ಹ/ ಅರ್ಹರಲ್ಲದ ಅಭ್ಯರ್ಥಿಗಳ ಪಟ್ಟಿಯ ಸಿದ್ಧತೆ – ಆಯಾ ಕೇಂದ್ರಗಳಲ್ಲಿ ನಿಯೋಜಿಸಿದ ಸಮಿತಿ ಸದಸ್ಯರಿಂದ (ಆಯಾ ವಿಶ್ವವಿದ್ಯಾಲಯಗಳು ನಿಯೋಜಿಸಿದ) ದಿನಾಂಕ: 05-05-2026ರ ಸಂಜೆ 4.00 ಗಂಟೆವರೆಗೆ ಮಾಡುವುದು.
ಪ್ರಾಯೋಗಿಕ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ಜಾಲತಾಣದಲ್ಲಿ ದಿನಾಂಕ: 07-05-2026 ಪ್ರಕಟಿಸಲಾಗುವುದು.
ಅರ್ಹ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ಜಾಲತಾಣದಲ್ಲಿ ಪ್ರವೇಶ ಪತ್ರವನ್ನು ಮೇ 08 ರಿಂದ ಮೇ 10 ರ ಬೆಳಗ್ಗೆ 7.00 ರವರೆಗೆ ಡೌನ್ಲೋಡ್ ಮಾಡಿಕೊಳ್ಳವುದು
Agricultural University ಪ್ರಾಯೋಗಿಕ ಪರೀಕ್ಷೆಯನ್ನು ರಾಜ್ಯದ ಕೃಷಿ ಮತ್ತು ಕೃಷಿ ಸಂಬಂಧಿತ ವಿಶ್ವವಿದ್ಯಾಲಯಗಳ 17 ಕೇಂದ್ರಗಳಲ್ಲಿ ಏಕಕಾಲಕ್ಕೆ ಮೇ 10 ರಂದು ಬೆಳಗ್ಗೆ 09.00 ರಿಂದ ಪ್ರಾರಂಭಿಸಲಾಗುವುದು. ಆದ್ದರಿಂದ ಅಭ್ಯರ್ಥಿಗಳು ಪ್ರಯೋಗಿಕ ಕೇಂದ್ರಗಳಲ್ಲಿ ಮೇ.10 ರಂದು ಬೆಳಗ್ಗೆ 08.00ಕ್ಕೆ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ. ತಡವಾಗಿ ಬರುವ ಅಭ್ಯರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದಿಲ್ಲ. ರಾಜ್ಯದ ಎಲ್ಲಾ ಕೃಷಿ ಮತ್ತು ಕೃಷಿ ಸಂಬಂಧಿತ ವಿಶ್ವವಿದ್ಯಾಲಯಗಳಲ್ಲಿ ಮೇ. 14 ರಂದು ಬೆಳ್ಳಿಗೆ 11.00 ಗಂಟೆಯ ಒಳಗೆ ಪ್ರಾಯೋಗಿಕ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಾಗುವುದು. ವಿದ್ಯಾರ್ಥಿಗಳು ಬದಲಾದ ದಿನಾಂಕಗಳ ಗಮನಕ್ಕಾಗಿ ಹಾಗೂ ಮಾಹಿತಿಗಾಗಿ ಈ ಕೆಳಗಿನ ಅಂತರಜಾಲ ತಾಣಗಳಿಗೂ ಭೇಟಿ ನೀಡಬಹುದಾಗಿದೆ. www.uasbangalore.edu.in, www.uasd.edu.in/www.uasd.edu, www.uhsbagalkot.edu.in/uhsbagalkot.karnataka.gov.in, www.uahs.edu.in, www.uasraichur.edu.in/raichur.karnataka.gov.in, www.kvafsu.edu.in, http//kea.kar.nic.in,http//pgadmission.kar.nic.in/ugcet/UG_Home.aspx ,www.kvafsu.edu.in,

ಮೇ. 3 ರಂದು ನಡೆಸುವ‌ ನೀಟ್ ಪರೀಕ್ಷೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ : ಎನ್.ಹೇಮಂತ್

0

ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ವತಿಯಿಂದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET-UG 2026) ದಿನಾಂಕ 03.05.2026 ರಂದು ಮಧ್ಯಾಹ್ನ 02:00 ರಿಂದ ಸಂಜೆ 05:00 ರವರೆಗೆ ನಡೆಯಲಿದ್ದು ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ (ಪ್ರ) ಹೇಮಂತ್ ಎನ್. ತಿಳಿಸಿದರು.
ಶಿವಮೊಗ್ಗ ಜಿಲ್ಲಾಡಳಿತ ಕಚೇರಿಯಲ್ಲಿ ಶನಿವಾರ ನೀಟ್ ಪರೀಕ್ಷೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ,
ಶಿವಮೊಗ್ಗ ನಗರದ ಒಟ್ಟು 12 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಆಯೋಜಿಸಲಾಗಿದ್ದು, ಒಟ್ಟು 4577 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು ಪರೀಕ್ಷೆಯನ್ನು ಪಾರದರ್ಶಕವಾಗಿ ಮತ್ತು ಸುಸೂತ್ರವಾಗಿ ನಡೆಸಲು ಜಿಲ್ಲಾಡಳಿತವು ಎಲ್ಲಾ ರೀತಿಯ ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದರು.
ನಿಷೇಧಾಜ್ಞೆ ಜಾರಿ: ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ರ ಕಲಂ 163 ರನ್ವಯ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.
ಬಿಗಿ ಭದ್ರತೆ: ಪ್ರತಿ ಕೇಂದ್ರಕ್ಕೂ ಒಬ್ಬರು ಮ್ಯಾಜಿಸ್ಟ್ರೇಟ್ ದರ್ಜೆಯ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಅಕ್ರಮ ತಡೆಯಲು ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆಯಲಾಗಿದ್ದು, ಸೂಕ್ತ ಭದ್ರತೆ ಒದಗಿಸಲಾಗಿದೆ.
ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಿಕೊಂಡು ತರಬೇತಿ ನೀಡಿದ್ದಾರೆ. ವೀಕ್ಷಕರು ಬೆಳಗ್ಗೆ 11 ಗಂಟೆಗೆ ಕೇಂದ್ರದಲ್ಲಿ ಹಾಜರಿರಲಿದ್ದಾರೆ. ಪರೀಕ್ಷೆಯ ಅವಧಿಯಲ್ಲಿ ಯಾವುದೇ ಅಡಚಣೆಯಿಲ್ಲದೆ ನಿರಂತರ ವಿದ್ಯುತ್ ಪೂರೈಸಲು ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಅಗತ್ಯ ಆಸನ ಮತ್ತು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
ಕೇಂದ್ರದೊಳಗೆ ಮೊಬೈಲ್, ಪುಸ್ತಕ, ಬ್ಯಾಗ್, ಪರ್ಸ್, ಎಲೆಕ್ಟ್ರಾನಿಕ್ಸ್ ಉಪಕರಣಗಳು ಹಾಗೂ ಸ್ಮಾರ್ಟ್ ವಾಚ್‌ಗಳನ್ನು ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಒಂದು ವೇಳೆ ಇಂತಹ ವಸ್ತುಗಳನ್ನು ತಂದಿದ್ದಲ್ಲಿ, ಅಭ್ಯರ್ಥಿಗಳ ಸ್ವಂತ ಜವಾಬ್ದಾರಿಯ ಮೇಲೆ ಪ್ರತ್ಯೇಕ ಕೊಠಡಿಯಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗುವುದು.
ಪರೀಕ್ಷಾ ಕೇಂದ್ರಕ್ಕೆ ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದ್ದು, ನಿಯೋಜಿತ ಸಿಬ್ಬಂದಿ ಮಾತ್ರ ಹಾಜರಿರಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.
ಸಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಡಿಡಿಪಿಯು ಚಂದ್ರಪ್ಪ ಗುಂಡಪಲ್ಲಿ, ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು ಹಾಜರಿದ್ದರು.

ಪ್ರಾಮಾಣಿಕವಾಗಿ ನಿಷ್ಠೆಯಿಂದ ಕಾರ್ಯನಿರ್ವಹಿಸುತ್ತರುವ ಕಾರ್ಮಿಕರನ್ನ ಗುರುತಿಸಿ, ಗೌರವಿಸುತ್ತಿದ್ದೇವೆ: ಚಿನ್ನಪ್ಪ

0

ಆಟೋ ಕಾಂಪ್ಲೆಕ್ಸ್ ನ ಮಾಲೀಕರ ಸಂಘದ ಕಚೇರಿಯಲ್ಲಿ ಅಧ್ಯಕ್ಷರಾದ ಚಿನ್ನಪ್ಪನವರ ಅಧ್ಯಕ್ಷತೆಯಲ್ಲಿ
ಕಾರ್ಮಿಕರ ದಿನಾಚರಣೆಯ ಪ್ರಯುಕ್ತ ಆಟೋ ಕಾಂಪ್ಲೆಕ್ಸ್ ನಲ್ಲಿ ಕೆಲಸ ಮಾಡುತ್ತಿರುವ ಹಿರಿಯ ಪ್ರಾಮಾಣಿಕ ಹಾಗೂ ನಿಷ್ಠಾವಂತ ಕಾರ್ಮಿಕರಗಳಿಗೆ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಚಿನ್ನಪ್ಪನವರು ಮಾತನಾಡುತ್ತ ಪ್ರತಿ ವರ್ಷ ತಮ್ಮ ವೃತ್ತಿ ಜೀವನದಲ್ಲಿ ಪ್ರಾಮಾಣಿಕವಾಗಿ ನಿಷ್ಠೆಯಿಂದ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರನ್ನ ಗುರುತಿಸಿ ನಮ್ಮ ಸಂಸ್ಥೆಯಿಂದ ಗೌರವಿಸುತ್ತಾ ಬಂದಿದ್ದೇವೆ ಹಾಗೆ ಕಾರ್ಮಿಕರಿಗೆ ನ್ಯಾಯ ಬದ್ಧವಾಗಿ ಸಿಗುವ ಸರ್ಕಾರದ ಸೌಲಭ್ಯಗಳು ಸಕಾಲದಲ್ಲಿ ಸಿಗಲಿ ಎಂದು ನುಡಿದರು ಹಾಗೆ ಆಟೋ ಕಾಂಪ್ಲೆಕ್ಸ್ ನ ಹಲವಾರು ಸಮಸ್ಯೆಗಳಿಗೆ ನಿರಂತರವಾಗಿ ಹೋರಾಟ ಮಾಡುತ್ತಾ ಬಂದಿದ್ದೇವೆ ಎಂದು ನುಡಿದರು. ಗೌರವಾಧ್ಯಕ್ಷರಾದ ದಯಾನಂದ್ರವರು ಉಪಾಧ್ಯಕ್ಷರಾದ ಜಾರ್ಜ್ ಕುರಿಯನ್. ಸಂಘದ ಕಾರ್ಯದರ್ಶಿಯಾದ ಎಂಬಿ ಚಂದ್ರಶೇಖರ್, ಸಹ ಕಾರ್ಯದರ್ಶಿ ಪಿ ವೆಂಕಟೇಶ್, ಖಜಾಂಚಿ ವಿ ವೆಂಕಟೇಶ್ ಹಾಗೂ ಸದಸ್ಯರಾದ ಪ್ರಕಾಶ್ ಅಣ್ಣಪ್ಪ ,ಮಾಲ್ತೇಶ್ ರಮೇಶ್ ಬಾಬು ಅಂತೋನಿ ರಾಜ್ ಹಿದಾಯತ್ ಖಾನ್ ಉಪಸ್ಥಿತರಿದ್ದರು.
✒️

Shivamogga District Industrial Training and Employment Department ಕಾರ್ಗಲ್ ಸರ್ಕಾರಿ ಐಟಿಐ ಗೆ ವಿವಿಧ ವೃತ್ತಿಗಳಿಗೆ ಎನ್ಸಿವಿಟಿ ಯೋಜನೆಯಡಿ ಪ್ರವೇಶಾತಿಗೆ ಆನ್ ಲೈನ್ ಅರ್ಜಿ ಆಹ್ವಾನ

0

Shivamogga District Industrial Training and Employment Department ಶಿವಮೊಗ್ಗ ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಸಾಗರ ತಾಲೂಕು ಕಾರ್ಗಲ್ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿನ ವಿವಿಧ ವೃತ್ತಿಗಳಿಗೆ 2026-27ನೇ ಸಾಲಿನ ಎನ್.ಸಿ.ವಿ.ಟಿ. ಯೋಜನೆಯಡಿ ಐಟಿಐ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಎಸ್.ಎಸ್.ಎಲ್.ಸಿ./ಪಿ.ಯು.ಸಿ./ ಪದವಿ ಪಾಸ್/ಫೇಲ್ ಆದ ವಿದ್ಯಾರ್ಥಿಗಳು ವೆಬ್‌ಸೈಟ್ www.cite.karnataka.gov.in ಮೂಲಕ ಮೇ 09 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸಂಸ್ಥೆಯ ಪ್ರಾಚಾರ್ಯರು ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08186-200221/ 9448315128/ 8217882239 ಗಳನ್ನು ಸಂಪರ್ಕಿಸುವುದು.

ಮಕ್ಕಳ ಆಧಾರ್ ಸಂಖ್ಯೆಗೆ ಬಯೋಮೆಟ್ರಿಕ್ ಕಡ್ಡಾಯ- ವಿ‌.ಅಭಿಷೇಕ್

0

ಶಿವಮೊಗ್ಗ ಜಿಲ್ಲೆಯ ಎಲ್ಲಾ 5 ರಿಂದ 7 ಹಾಗೂ 15 ರಿಂದ 17 ರ ವಯೋಮಿತಿಯ ಮಕ್ಕಳ ಆಧಾರ್ ಸಂಖ್ಯೆಗೆ ಬಯೋಮೆಟ್ರಿಕ್ ನವೀಕರಣ ಮಾಡುವುದು ಕಡ್ಡಾಯ ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ. ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆ. 30 ರವರೆಗೆ ಉಚಿತವಾಗಿ ಅವಕಾಶ ಕಲ್ಪಿಸಲಾಗಿದ್ದು, ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಹಾಗೂ ಸಂಬಂಧಿಸಿದ ದಾಖಲೆಗಳೊಂದಿಗೆ ತಮ್ಮ ಹತ್ತಿರದ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ನವೀಕರಿಸಿಕೊಳ್ಳಬಹುದಾಗಿದೆ. ಇದರಿಂದ ಮಕ್ಕಳ ಶಾಲೆಯ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ಸರ್ಕಾರದ ವಿವಿಧ ಯೋಜನೆಗಳು, ವಿಧ್ಯಾರ್ಥಿ ವೇತನ, ತರಬೇತಿಗಳು ಸೇರಿದಂತೆ ಇತ್ಯಾದಿ ಯೋಜನೆಗಳ ಲಾಭ ಪಡೆಯಲು ಅನುಕೂಲವಾಗಲಿದೆ. ಪೋಷಕರು ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ತಮ್ಮ ಮಕ್ಕಳಿಗೆ ಸರ್ಕಾರದ ಯೋಜನೆಯನ್ನು ಸಕಾಲದಲ್ಲಿ ತಲುಪಿಸುವಲ್ಲಿ ಸಹಕರಿಸುವಂತೆ ಅವರು ತಿಳಿಸಿದ್ದಾರೆ.

B.Y. Raghavendra ಸಹಕಾರ ಕ್ಷೇತ್ರವು ದೇಶದ ಬೆನ್ನೆಲುಬು- ಬಿ.ವೈ.ರಾಘವೇಂದ್ರ

0

B.Y. Raghavendra ಬಿನಾ ಸಂಸ್ಕಾರ್ ನಹೀ ಸಹಕಾರ್ – ಬಿನಾ ಸಹಕಾರ್ ನಹೀ ಉದ್ಧಾರ್” ಎಂಬ ಧ್ಯೇಯವಾಕ್ಯದೊಂದಿಗೆ, ಸಹಕಾರ ಭಾರತಿ ಶಿಕಾರಿಪುರ ತಾಲ್ಲೂಕು ವತಿಯಿಂದ ಆಯೋಜಿಸಲಾಗಿದ್ದ ‘ತಾಲ್ಲೂಕು ಅಭ್ಯಾಸ ವರ್ಗ’ ಕಾರ್ಯಕ್ರಮವನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಶಿಕಾರಿಪುರದ ಕುಮುದ್ವತಿ ಆಡಿಟೋರಿಯಂನಲ್ಲಿ ಉದ್ಘಾಟಿಸಿದರು.

B.Y. Raghavendra ಸಹಕಾರ ಕ್ಷೇತ್ರವು ದೇಶದ ಆರ್ಥಿಕತೆಯ ಬೆನ್ನೆಲುಬಾಗಿದ್ದು, ಈ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರಿಗೆ ಸಂಸ್ಕೃತಿ ಮತ್ತು ಜವಾಬ್ದಾರಿಗಳ ಬಗ್ಗೆ ತಿಳುವಳಿಕೆ ನೀಡುವುದು ಅತ್ಯಗತ್ಯ. ಈ ಅಭ್ಯಾಸ ವರ್ಗವು ಸಹಕಾರ ಸಂಘಗಳ ಪದಾಧಿಕಾರಿಗಳಿಗೆ ಮತ್ತು ಸದಸ್ಯರಿಗೆ ತಮ್ಮ ಹಕ್ಕು ಹಾಗೂ ಕರ್ತವ್ಯಗಳ ಬಗ್ಗೆ ಅರಿಯಲು ಒಂದು ಉತ್ತಮ ವೇದಿಕೆಯಾಗಿದೆ ಎಂದು ರಾಘವೇಂದ್ರ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಡಿಸಿದರು.

Karnataka Yakshagana Academy ಶೃಂಗೇರಿಯಲ್ಲಿ ಮೇ4 ರಂದು ಯಕ್ಷಗಾನ ಉತ್ಸವ

0

Karnataka Yakshagana Academy ಶೃಂಗೇರಿಯ ಶ್ರೀ ಭಾರತೀತೀರ್ಥ ಸಾಂಸ್ಕೃತಿಕ ಕೇಂದ್ರ ಟ್ರಸ್ಟ್ ಇವರು ಪ್ರದರ್ಶನ ಕಲೆಗಳ ಸಂವರ್ಧನೆ ಮತ್ತು ಸಂರಕ್ಷಣೆ ಉದ್ದೇಶದಿಂದ ಮಲೆನಾಡು ಮತ್ತು ಬೆಂಗಳೂರಿನಲ್ಲಿ ಪ್ರತಿ ವರ್ಷವೂ ಯಕ್ಷಗಾನ ಉತ್ಸವವನ್ನು ಆಯೋಜಿಸಿಕೊಂಡು ಬರುತ್ತಿದೆ.
ಈ ಟ್ರಸ್ಟ್ ನ ಮತ್ತು ಉತ್ಸವದ ರೂವಾರಿ , ಕರ್ನಾಟಕ ಯಕ್ಷಗಾನ ಅಕಾಡೆಮಿ ಮಾಜಿ ಸದಸ್ಯ ರಮೇಶ್ ಬೇಗಾರ್ ಇವರ ಸಾಂಸ್ಕೃತಿಕ ಪಯಣ ದ 40 ನೇ ವರ್ಷದ ಈ ಯಕ್ಷಗಾನ ಉತ್ಸವವು 2026 ರ ಮೇ 4 ರ ಸೋಮವಾರದಂದು ಶೃಂಗೇರಿ ಮಾನುಗಾರಿನಲ್ಲಿರುವ ಜ್ಞಾನಭಾರತೀ ಶಾಲಾ ಮೈದಾನದಲ್ಲಿ ರಾತ್ರಿ 7 ರಿಂದ ಆಯೋಜಿಸಲಾಗಿದೆ.
Karnataka Yakshagana Academy ಬಡಗುತಿಟ್ಟಿನ ಪ್ರಸಿದ್ದ ವೃತ್ತಿಪರ ಯಕ್ಷಗಾನ ತಂಡವಾದ ಶ್ರೀ ಅನಂತ ಪದ್ಮನಾಭ ದಶಾವತಾರ ಯಕ್ಷಗಾನ ಮಂಡಳಿ, ಶ್ರೀ ಕ್ಷೇತ್ರ ಪೆರ್ಡೂರು ಇವರು ಪೌಂಡ್ರಕ ವಾಸುದೇವ, ಲಂಕಾ ದಹನ ಮತ್ತು ಕಾರ್ತವೀರ್ಯ – ರಾವಣ ಕಾಳಗ ಎಂಬ ಮೂರು ಪೌರಾಣಿಕ ಪ್ರಸಂಗಗಳನ್ನು ಜನ್ಸಾಲೆ ರಾಘವೇಂದ್ರ ಆಚಾರ್ಯ ಇವರ ಭಾಗವತಿಕೆ ಮತ್ತು ಪ್ರಧಾನ ನಿರ್ದೇಶನದಲ್ಲಿ ಮೂಡಿಬರಲಿರುವ ಈ ಪ್ರದರ್ಶನದಲ್ಲಿ ಪ್ರಸಿದ್ಧ ಹಾಸ್ಯ ಕಲಾವಿದ ರವೀಂದ್ರ ದೇವಾಡಿಗ ಪೌಂಡ್ರಕ ವಾಸುದೇವ ನ ಪಾತ್ರವನ್ನೂ, ನಿಲ್ಕೋಡು ಶಂಕರ ಹೆಗ್ಡೆ ಹನುಮಂತ ನ ಪಾತ್ರ ನಿರ್ವಹಿಸುತ್ತಿರುವುದು ವಿಶೇಷವಾಗಿದ್ದು, ಈ ಪ್ರದರ್ಶನ ದಲ್ಲಿ ಬಾಳ್ಕಲ್ ಪ್ರಸನ್ನ ಭಟ್, ಯಲಗುಪ್ಪ ಸುಬ್ರಮಣ್ಯ, ಚಂದ್ರಹಾಸ ಗೌಡ ಹೊಸ ಪಟ್ಟಣ , ಕಾರ್ತಿಕ್ ಚಿಟ್ಟಾಣಿ ಮೊದಲಾದ ಪ್ರತಿಭಾವಂತ ಕಲಾವಿದರ ದಂಡು ಈ ಪ್ರದರ್ಶನದಲ್ಲಿ ಪೌರಾಣಿಕ ವೈಭವ ವನ್ನು ರಂಗಕ್ಕೆ ತರಲಿದ್ದಾರೆ. ಹೆಚ್ಚಿನ ಮಾಹಿತಿಗೆ ರಮೇಶ್ ಬೇಗಾರ್ ಇವರನ್ನು 9448101708 ಮೂಲಕ ಸಂಪರ್ಕಿಸಬಹುದು ಎಂದು ಸಂಸ್ಥೆ ತಿಳಿಸಿದೆ.

Canara Bank Deshpande Orset Training Institute ಮೊಬೈಲ್ ಫೋನ್ ರಿಪೇರಿ ಉಚಿತ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನ

0

Canara Bank Deshpande Orset Training Institute ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆಯಲ್ಲಿ 2026 ರ ಮೇ ತಿಂಗಳ ಕೊನೆಯ ವಾರದಲ್ಲಿ “ಮೊಬೈಲ್ ಫೋನ್ ರಿಪೇರಿ ಮತ್ತು ಸರ್ವಿಸ್” ತರಬೇತಿ ಆಯೋಜಿಸಲಾಗಿದ್ದು, 18 ರಿಂದ 45 ವರ್ಷ ವಯೋಮಿತಿಯ ಗ್ರಾಮೀಣ ಭಾಗದ ಆಸಕ್ತಿ ಇರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಮೊಬೈಲ್ ಫೋನ್ ಗಳ ಮೂಲಭೂತ ಜ್ಞಾನ, ಹಾರ್ಡ್ ವೇರ್ ಮತ್ತು ಸಾಫ್ಟ್ವೇರ್ ರಿಪೇರಿ, ದೋಷ ಪತ್ತೆ, ಉಪಕರಣಗಳ ಬಳಕೆ, ಗ್ರಾಹಕ ಸೇವಾ ಕೌಶಲ್ಯಗಳು ಮತ್ತು ಸಣ್ಣ ಉದ್ಯಮ ಆರಂಭಿಸುವ ವಿಧಾನಗಳ ಕುರಿತು ಪ್ರಾಯೋಗಿಕ ತರಬೇತಿ ನೀಡುತ್ತಾರೆ. ಈ ತರಬೇತಿಯು ಸಂಪೂರ್ಣ ಉಚಿತವಾಗಿದ್ದು, ಅಭ್ಯರ್ಥಿಗಳಿಗೆ ಊಟ ಮತ್ತು ವಸತಿ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.

ತರಬೇತಿ ಪೂರ್ಣಗೊಂಡ ನಂತರ ಬ್ಯಾಂಕ್ ಗಳ ಮೂಲಕ ಸಾಲ ಸೌಲಭ್ಯ ಮತ್ತು ಮಾರ್ಗದರ್ಶನ ನೀಡಲಾಗುವುದು.
ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸ, ಜನ್ಮ ದಿನಾಂಕ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ಬರೆದು. ಅದನ್ನು ಫೋಟೋ ತೆಗೆದು ಮೊಬೈಲ್ ಸಂಖ್ಯೆಗೆ ವಾಟ್ಸಾಪ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು. ಅಥವಾ ಕರೆ ಮಾಡಿ ಹೆಸರು ನೋಂದಣಿ ಮಾಡಬಹುದು.

ಜಾಲತಾಣ www.rsetihaliyal.org ಅರ್ಜಿ ಸಲ್ಲಿಸಬಹುದು / CBD RSETI Haliyal ವಾಟ್ಸಾಪ್ ಚಾನಲ್ ನಲ್ಲಿರುವ ಲಿಂಕ್ https://forms.gle/m4pcmpritDevbwug9 ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಸಂಸ್ಥೆಯು ತಿಳಿಸಿದೆ .

Canara Bank Deshpande Orset Training Institute ಹೆಚ್ಚಿನ ಮಾಹಿತಿಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯ ನಿರ್ದೇಶಕರು, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ, ಮೊ. ಸಂ : 9483485489/8970145354 ಗಳನ್ನು ಸಂಪರ್ಕಿಸುವುದು.