Monday, February 2, 2026
Monday, February 2, 2026
Home Blog Page 2

ಮರಗಳ ಹತ್ಯೆಗೆ ಮೊದಲು ನನಗೆ ದಯಾಮರಣ ನೀಡಿ : ವಿಶುಕುಮಾರ್

0

ಶ್ರೀಗಂಧ ಮರಗಳನ್ನು ಕಡಿತಲೆ ಮಾಡುವುದಕ್ಕಿಂತ ಮೊದಲು ನನಗೆ ದಯಾಮರಣ ದಯಪಾಲಿಸಿ” ಎಂದು ರಾಷ್ಟ್ರಪತಿ, ಪ್ರಧಾನಿ ಹಾಗೂ ಮುಖ್ಯಮಂತ್ರಿ ಅವರಿಗೆ ಭೂಸ್ವಾಧೀನ ಪ್ರಾಧಿಕಾರದ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ್ದಾರೆ.
ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ ಫೆ.2ಕ್ಕೆ ಶ್ರೀಗಂಧ ಮರಗಳನ್ನು ಕಡಿತಲೆ ಮಾಡಲಾಗುವುದು ಎಂದು ಜ.27ಕ್ಕೆ ನೋಟಿಸ್ ನೀಡುತ್ತಾರೆ. ಆದರೆ ಈ ವಿಷಯ ಈಗಾಗಲೇ ನ್ಯಾಯಾಲಯದ ವಿಚಾರಣೆಯಲ್ಲಿರುವ ಸಂದರ್ಭದಲ್ಲಿ ಅಧಿಕಾರಿಗಳು ಮರ ಕಡಿತಲೆ ಮುಂದಾಗಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
ತಾವು ಸುಮಾರು 30 ವರ್ಷಗಳಿಂದ ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಶ್ರೀಗಂಧ ಬೆಳೆ ಬೆಳೆಸಿಕೊಂಡು ಬಂದಿರುವುದಾಗಿ ತಿಳಿಸಿದರು. ಸಿದ್ದರಾಮಯ್ಯ ನೇತೃತ್ವದ ಸರ್ಕಾರವೇ ಜಾಹೀರಾತು ನೀಡಿ ಶ್ರೀಗಂಧ ಬೆಳೆಸಲು ರೈತರನ್ನು ಪ್ರೋತ್ಸಾಹಿಸಿತ್ತು. ಸರ್ಕಾರದ ಪ್ರೇರಣೆಯ ಮೇರೆಗೆ ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಿ ಶ್ರೀಗಂಧ ಮರಗಳನ್ನು ಬೆಳೆಸಿದ್ದೇವೆ. ಆದರೆ ಈಗ ಅದಕ್ಕೆ ತಕ್ಕಂತೆ ಬೆಲೆ ನೀಡಿದೆ ಕಡಿತಲೆ ಮಾಡುವುದಕ್ಕೆ ಮುಂದಾಗಿರುವುದು ಅನ್ಯಾಯ ಎಂದು ಆರೋಪಿಸಿದರು.
ಅಧಿಕಾರಿಗಳ ಲಂಚಗುಳಿತನ ಹಾಗೂ ದೌರ್ಜನ್ಯದಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿ ಈಗಾಗಲೇ ಎರಡು ಬಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದೇನೆ ಎಂದರು. “ಆದರೆ ಈಗ ಆತ್ಮಹತ್ಯೆ ಮಾಡಿಕೊಳ್ಳಲು ಧೈರ್ಯ ಬರುತ್ತಿಲ್ಲ. ಆದ್ದರಿಂದ ಸರ್ಕಾರವೇ ಹೇಳಿದಂತೆ ಶ್ರೀಗಂಧ ಮರಗಳಿಗೆ ವೈಜ್ಞಾನಿಕವಾಗಿ ಯೋಗ್ಯ ಬೆಲೆ ನಿಗದಿ ಮಾಡಿ ಪರಿಹಾರ ನೀಡಿ. ಇಲ್ಲವಾದಲ್ಲಿ ನನ್ನ ಮರಗಳನ್ನು ಉಚಿತವಾಗಿ ತೆಗೆದುಕೊಳ್ಳಿ. ಆದರೆ ಅದಕ್ಕಿಂತ ಮೊದಲು ನನಗೆ ದಯಾಮರಣ ನೀಡಿ” ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಕೆಲವು ಅಧಿಕಾರಿಗಳು ಶ್ರೀಗಂಧಕ್ಕೆ ಹಾಗೂ ಭೂತಾಯಿಗೆ ಅಪಮೌಲ್ಯ ಮಾಡುತ್ತಿರುವುದನ್ನು ನಾನು ಸಹಿಸಲು ಸಾಧ್ಯವಿಲ್ಲ ಎಂದು ಅವರು ಕಿಡಿಕಾರಿದರು. ಶ್ರೀಗಂಧವು ರಾಷ್ಟ್ರದ ಅಮೂಲ್ಯ ಸಂಪತ್ತು. ಅದನ್ನು ಬೆಳೆಸಿದ ರೈತನಿಗೆ ಗೌರವ ನೀಡದೆ ದೌರ್ಜನ್ಯ ನಡೆಸುತ್ತಿರುವುದು ನೋವಿನ ಸಂಗತಿ ಎಂದು ಹೇಳಿದರು.
ಸಂದರ್ಭದಲ್ಲಿ ಕುಟುಂಬದ ಸದಸ್ಯರು, ಸ್ಥಳೀಯರು ಹಾಗೂ ಬೆಂಬಲಿಗರು ಉಪಸ್ಥಿತರಿದ್ದರು.

B.Y.Raghavendra ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಆಜೀವಿಕ ಜಿಲ್ಲಾ ಜಾಗೃತಿ ಸಮಾವೇಶ

0

B.Y.Raghavendra ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಭಾರತೀಯ ಜನತಾ ಪಾರ್ಟಿ, ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ “ಜಿಲ್ಲಾ ಜಾಗೃತಿ ಸಮಾವೇಶ”ದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಭಾಗವಹಿಸಿದ್ದರು.

ಗ್ರಾಮೀಣ ಭಾಗದ ಜನತೆಯ ಆರ್ಥಿಕ ಸಬಲೀಕರಣ, ಉದ್ಯೋಗ ಹಾಗೂ ಆಜೀವಿಕಾವಕಾಶಗಳ ವೃದ್ಧಿ ಗುರಿಯಾಗಿಟ್ಟುಕೊಂಡು, ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಿರುವ “ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಆಜೀವಿಕ ಮಿಷನ್ – ಗ್ರಾಮೀಣ (VB-G RAM G)” ಯೋಜನೆಯ ಕುರಿತು, ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಸಮಗ್ರ ಮಾಹಿತಿಯನ್ನ ಸಂಸದರು ನೀಡಿದರು.

B.Y.Raghavendra ಈ ಸಮಾವೇಶದಲ್ಲಿ ಉಡುಪಿ–ಚಿಕ್ಕಮಗಳೂರು ಸಂಸದರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಶಿವಮೊಗ್ಗ ನಗರದ ಶಾಸಕರಾದ ಶ್ರೀ ಚನ್ನಬಸಪ್ಪ, ತೀರ್ಥಹಳ್ಳಿ ಕ್ಷೇತ್ರದ ಶಾಸಕರಾದ ಶ್ರೀ ಆರಗ ಜ್ಞಾನೇಂದ್ರ, ಶ್ರೀ ಅಶೋಕ್ ನಾಯ್ಕ್, ಜಿಲ್ಲಾ ಬಿಜೆಪಿ ಅಧ್ಯಕ್ಷರು ಶ್ರೀ ಜಗದೀಶ ಎನ್, ಜಿಲ್ಲಾ ಪದಾಧಿಕಾರಿಗಳು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು

Shankara Eye Hospital ವಿಐಎಸ್‌ಎಲ್ ನಿಂದ ಸಾಂಸ್ಥಿಕ ಸಾಮಾಜಿಕ ಕಳಕಳಿಯ ಅಂಗವಾಗಿ ಉಚಿತ ವೈಧ್ಯಕೀಯ ಆರೋಗ್ಯ ಶಿಬಿರ

0

Shankara Eye Hospital ಶಂಕರ ಕಣ್ಣಿನ ಆಸ್ಪತ್ರೆ (ಶಿವಮೊಗ್ಗ) ಮತ್ತು ವಿಐಎಸ್‌ಎಲ್ ಆಸ್ಪತ್ರೆಗಳ ಸಹಯೋಗದೊಂದಿಗೆ ಭದ್ರಾವತಿಯ ದೊಡ್ಡೇರಿ ಗ್ರಾಮದಲ್ಲಿ ಸಮಗ್ರ ಉಚಿತ ವೈಧ್ಯಕೀಯ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು.

ಸಾಮಾನ್ಯ ತಪಾಸಣೆ, ನೇತ್ರವಿಜ್ಞಾನ, ದಂತವೈದ್ಯಶಾಸ್ತçದAತಹ ಕ್ಷೇತ್ರಗಳಲ್ಲಿ ಅನುಭವಿ ತಜ್ಞವೈದ್ಯರು ಭಾಗವಹಿಸುವ ಮೂಲಕ ಆರೋಗ್ಯ ಸಮಾಲೋಚನೆ ಮತ್ತು ರೋಗನಿರ್ಣಯ ಸೇವೆಗಳನ್ನು ನೀಡಲಾಯಿತು. ಈ ಉಪಕ್ರಮದ ಭಾಗವಾಗಿ ರಕ್ತದೊತ್ತಡ (ಬಿಪಿ), ರಕ್ತದಲ್ಲಿನ ಸಕ್ಕರೆ ಪರೀಕ್ಷೆ, ಕಣ್ಣಿನ ಪರೀಕ್ಷೆ, ದಂತ ತಪಾಸಣೆಗಳನ್ನು ಮಾಡಲಾಯಿತು.

Shankara Eye Hospital ಶ್ರೀ ಬಿ. ವಿಶ್ವನಾಥ, ಮುಖ್ಯ ಮಹಾಪ್ರಬಂಧಕರು (ಮಾನವಸಂಪನ್ಮೂಲ), ವಿಐಎಸ್‌ಎಲ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇವರೊಂದಿಗೆ ವಿಐಎಸ್‌ಎಲ್‌ನ ಅಧಿಕಾರಿಗಳಾದ ಡಾ|| ಕೆ.ಎಸ್. ಸುಜೀತ್ ಕುಮಾರ್, ಡಾ|| ಎಸ್.ಎನ್. ಸುರೇಶ್, ಶ್ರೀ ಎಮ್.ಎಲ್. ಯೋಗೀಶ್, ದೊಡ್ಡೇರಿ ಗ್ರಾಮದಿಂದ ಶ್ರೀಮತಿ ರಾಮಕ್ಕ, ಅಧ್ಯಕ್ಷರು ದೊಡ್ಡೇರಿ ಗ್ರಾಮಪಂಚಾಯ್ತಿ, ಶ್ರೀ ಆರ್. ಮೋಹನ್ ಕುಮಾರ್, ಕಾರ್ಯದರ್ಶಿ, ದೊಡ್ಡೇರಿ ಗ್ರಾಮಪಂಚಾಯ್ತಿ, ಶಂಕರ ಕಣ್ಣಿನ ಆಸ್ಪತ್ರೆಯ ಡಾ|| ಲಕ್ಷಿತ & ಶ್ರೀ ಹರ್ಷ ಆರ್. ಗೌಡ ಮತ್ತು ತಂಡದವರು ಉಪಸ್ಥಿತರಿದ್ದರು. 164 ಗ್ರಾಮಸ್ಥರು ಈ ಶಿಬಿರದ ಸದುಪಯೋಗಪಡಿಸಿಕೊಂಡರು.

ವಿಐಎಸ್‌ಎಲ್‌ ವತಿಯಿAದ ಉಚಿತ ಔಷಧಿ ಹಾಗೂ ಕನ್ನಡಕಗಳನ್ನು ವಿತರಿಸಲಾಯಿತು

Inner Wheel Club ಇನ್ನರ್ ವೀಲ್ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ಮಾನವೀಯ ಸೇವೆಗಳು

0

Inner Wheel Club ಇನ್ನರ್ ವೀಲ್ ಕ್ಲಬ್ ಆಫ್ ಶಿವಮೊಗ್ಗ ಈಸ್ಟ್ ವತಿಯಿಂದ 29 ಜನವರಿ 2026 ರಂದು ಜಿಲ್ಲಾ ಅಧ್ಯಕ್ಷೆಯ ಅಧಿಕೃತ ಭೇಟಿ ಕಾರ್ಯಕ್ರಮವನ್ನು ಅಂತರರಾಷ್ಟ್ರೀಯ ಇನ್ನರ್ ವೀಲ್ ದಿನಾಚರಣೆಯೊಂದಿಗೆ ಸಂಯೋಜಿಸಿ ಆಯೋಜಿಸಲಾಯಿತು. ಇನ್ನರ್ ವೀಲ್ ಒಂದು ಅಂತರರಾಷ್ಟ್ರೀಯ ಮಹಿಳಾ ಸೇವಾ ಸಂಘಟನೆಯಾಗಿದ್ದು ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ.
ಈ ಸಂದರ್ಭದಲ್ಲಿ ಅಗತ್ಯವಿರುವ ವ್ಯಕ್ತಿಗೆ ಒಂದು ಹಿಯರಿಂಗ್ ಎಯ್ಡ್ ದಾನ ಮಾಡಲಾಯಿತು ಹಾಗೂ ರೋಟರಿ ಶಾಲೆಗೆ ನಲಿ-ಕಲಿ ಮೇಜುಗಳಿಗಾಗಿ 20 ಕುರ್ಚಿಗಳನ್ನು ವಿತರಿಸಲಾಯಿತು. ಜೊತೆಗೆ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗಾಗಿ “ಮೊಬೈಲ್ ಫೋನ್ ಇಲ್ಲದ ಒಂದು ದಿನ” ಎಂಬ ವಿಷಯದ ಮೇಲೆ “ಯೂತ್ ಅನ್ಪ್ಲಗ್” ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿ ವಿಜೇತರಿಗೆ ನಗದು ಬಹುಮಾನ ಮತ್ತು ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರಮದ ಉದ್ದೇಶ ವಿದ್ಯಾರ್ಥಿಗಳಲ್ಲಿ ಚಿಂತನಾ ಶಕ್ತಿ, ಬರವಣಿಗೆ ಕೌಶಲ್ಯ ಹಾಗೂ ಆತ್ಮವಿಶ್ವಾಸವನ್ನು ಬೆಳೆಸುವುದಾಗಿತ್ತು.
ಕಾರ್ಯಕ್ರಮಕ್ಕೆ ಜಿಲ್ಲಾ 318ರ ಅಧ್ಯಕ್ಷೆ ಶ್ರೀಮತಿ ಶಬರಿ ಕಡಿದಾಳ್ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಇನ್ನರ್ ವೀಲ್ ಕ್ಲಬ್ ಆಫ್ ಶಿವಮೊಗ್ಗ ಈಸ್ಟ್‌ನ ಅಧ್ಯಕ್ಷೆ ಶ್ರೀಮತಿ ವೀಣಾ ಸುರೇಶ್, ಕಾರ್ಯದರ್ಶಿ ಶ್ರೀಮತಿ ಶಿಲ್ಪಾ ಗೋಪಿನಾಥ್, ಖಜಾಂಚಿ ಶ್ರೀಮತಿ ಶ್ವೇತಾ ಆಶಿತ್, ಸಂಪಾದಕಿ ವಿಜಯಶ್ರೀ, ಎಲ್ಲಾ ಕ್ಲಬ್ ಸದಸ್ಯರು, ಪೂರ್ವ ಜಿಲ್ಲಾ ಅಧ್ಯಕ್ಷೆ ಶ್ರೀಮತಿ ಭಾರತಿ ಚಂದ್ರಶೇಖರ್, ರೋಟರಿ ಕ್ಲಬ್ ಆಫ್ ಶಿವಮೊಗ್ಗ ಈಸ್ಟ್ ಅಧ್ಯಕ್ಷ ಆರ್‌ಟಿಎನ್. ಕಿಶೋರ್, ಮಾಜಿ ಅಧ್ಯಕ್ಷರಾದ ಬಿಂದು ವಿಜಯ ಕುಮಾರ್. ರೋಟರಿ ಕ್ಲಬ್ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಫೆಬ್ರವರಿ 1ರಂದು ಉಪಾಸನ ಮೋಹನ್ ರಿಂದ ಸುಗಮ ಸಂಗೀತ ಕಾರ್ಯಗಾರ

0

ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್ ವತಿಯಿಂದ ಫೆಬ್ರವರಿ 1 ರಂದು ಭಾನುವಾರ ಮಧ್ಯಾಹ್ನ 2 ಗಂಟೆಯಿಂದ ವಿನೋಬನಗರ 60ನೇ ರಸ್ತೆಯಲ್ಲಿರುವ ಶುಭ ಮಂಗಳ ಸಮುದಾಯ ಭವನದಲ್ಲಿ ನಾದೋಪಾಸನ ಸುಗಮ ಸಂಗೀತ ಗೀತ ಗಾಯನ ತರಬೇತಿ ಕಾರ್ಯಗಾರವನ್ನು ನಾಡಿನ ಖ್ಯಾತ ಸಂಗೀತ ವಿದ್ವಾಂಸ ಉಪಾಸನ ಮೋಹನ್ ಅವರು ನಡೆಸಿಕೊಡಲಿದ್ದು ಯುವ ನಾಯಕ ಸಂಗೀತ ಪ್ರೇಮಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆಇ ಕಾಂತೇಶ್ ರವರು ಕಾರ್ಯಕ್ರಮ ಉದ್ಘಾಟಿಸುವವರು. ಈ ಕಾರ್ಯಗಾರದಲ್ಲಿ ಭಾಗವಹಿಸಲಿಚ್ಚಿಸುವವರು. ಆಸಕ್ತರು ದೂರವಾಣಿ ಸಂಖ್ಯೆ 97 411 57 990 ರಲ್ಲಿ ಹೆಸರು ನೋಂದಾಯಿಸಲು ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಶಾಂತ ಎಸ್. ಶೆಟ್ಟಿ ತಿಳಿಸಿದ್ದಾರೆ.

Sahyadri Art College Shimoga ಬದುಕಿನ ಮೌಲ್ಯಗಳನ್ನು ಕಲಿಸುವ ಸಂಸ್ಥೆ ಜೆಸಿಐ : ಪ್ರವೀಣ್ ದೇಶಪಾಂಡೆ

0

Sahyadri Art College Shimoga ವಿದ್ಯಾರ್ಥಿಗಳಲ್ಲಿ ಪರಿಪೂರ್ಣ ವ್ಯಕ್ತಿತ್ವ ರೂಪಿಸುವಲ್ಲಿ ಹಾಗೂ ನಾಯಕತ್ವ ಬೆಳೆಸುವಲ್ಲಿ ಜೆಸಿಐ ಸಂಸ್ಥೆಯ ತರಬೇತಿ ಮಹತ್ತರ ಪಾತ್ರ ವಹಿಸುತ್ತದೆ ನುರಿತ ವಲಯ ತರಬೇತುದಾರ ಪ್ರವೀಣ್ ದೇಶಪಾಂಡೆ ಹೇಳಿದರು.

ಜಿಲ್ಲಾ ಪಂಚಾಯಿತಿ, ಸಹ್ಯಾದ್ರಿ ಕಲಾ ಕಾಲೇಜು ಶಿವಮೊಗ್ಗ ಹಾಗೂ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಹಯೋಗದೊಂದಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ಬದುಕಿನ ಮೌಲ್ಯಗಳನ್ನು, ಸಂಸ್ಕಾರಗಳನ್ನು ಹಾಗೂ ಶಿಸ್ತುಬದ್ಧ ಜೀವನ ಮತ್ತು ಕೌಶಲ್ಯಗಳನ್ನು ಜೆಸಿಐ ಕಲಿಸುತ್ತದೆ. ಜೆಸಿಐ ಸಂಸ್ಥೆ ವ್ಯಕ್ತಿತ್ವ ವಿಕಸನಗೊಳಿಸಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿಕೊಂಡು ಮುನ್ನಡೆಯಬೇಕು. ನಿಮ್ಮ ಇಷ್ಟದ ಕ್ಷೇತ್ರದಲ್ಲಿ ಹಂತ ಹಂತವಾಗಿ ಪ್ರಗತಿ ಸಾಧಿಸಬೇಕು. ಸಮಾಜಕ್ಕೆ ನಿಮ್ಮದೇ ಆದ ಕೊಡುಗೆ ನೀಡಬೇಕು. ಜೆಸಿಐ ಸಂಸ್ಥೆಯಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳುವುದರಿಂದ ಉತ್ತಮ ಸಾಧನೆ ಮಾಡಲು ಸಾಧ್ಯವಿದೆ ಎಂದರು.

ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಬಿ.ಎನ್.ಸಂತೋಷ್ ಕುಮಾರ್ ಮಾತನಾಡಿ, ತರಬೇತಿಗಳಿಂದ ವಿದ್ಯಾರ್ಥಿಗಳಲ್ಲಿ ವಿಶೇಷ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಮುಂದಿನ ಕಾರ್ಯಕ್ಷೇತ್ರ ವೃದ್ಧಿಯಾಗುತ್ತದೆ ಎಂದು ತಿಳಿಸಿದರು.

ಜೆಸಿಐ ಸಂಸ್ಥೆಯ ಮೂಲಕ ನಿರಂತರವಾಗಿ ಸಮಾಜಮುಖಿ ಸೇವಾ ಕಾರ್ಯ ನಡೆಸುವ ಜತೆಯಲ್ಲಿ ಯುವಜನರಿಗೆ ತರಬೇತಿ ನೀಡಲಾಗುತ್ತಿದೆ. ಇದರಿಂದ ವೃತ್ತಿ ಕ್ಷೇತ್ರದಲ್ಲಿ ಯಶಸ್ಸು ಗಳಿಸಲು ತರಬೇತಿಗಳು ನೆರವಾಗುತ್ತದೆ ಎಂದು ಹೇಳಿದರು.

Sahyadri Art College Shimoga ವಲಯ ತರಬೇತುದಾರ ಗಣೇಶ್ ವಿ, ಶೇಷಗಿರಿ ಡಿ, ಕಾರ್ಯದರ್ಶಿ ಉಮಾಮಣಿ, ಮಹದೇವಸ್ವಾಮಿ, ಡಾ. ಕೃಪಾಲಿನಿ, ಸಿಂಚನಾ, ಗೌರಿಶಂಕರ, ರವಿ ಮತ್ತು ಜೆಸಿಐ ಸಂಸ್ಥೆ ಸದಸ್ಯರು ಹಾಜರಿದ್ದರು.

Rotary Shivamogga ಸಾರ್ಥಕ ಸೇವೆ ಸಲ್ಲಿಸಿದ ವೃತ್ತಿಪರರಿಗೆ ರೋಟರಿಯಿಂದ ವಿಶೇಷ ವೃತ್ತಿ ಸೇವಾ ಪ್ರಶಸ್ತಿ ಪ್ರದಾನ

0

Rotary Shivamogga ರೋಟರಿ ಸಂಸ್ಥೆಯು ಸಾಮಾಜಿಕ ಸೇವಾ ಕಾರ್ಯಗಳನ್ನು ನಡೆಸುವ ಜತೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧಕರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿರುವುದು ಇತರರಿಗೂ ಪ್ರೇರಣೆಯಾಗುತ್ತದೆ ಎಂದು ರೋಟರಿ ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್ ಹೇಳಿದರು.

ವೃತ್ತಿಯಲ್ಲಿ ಸಾರ್ಥಕ ಸೇವೆ ಸಲ್ಲಿಸಿದ ವಿವಿಧ ಕ್ಷೇತ್ರದಲ್ಲಿ ವೃತ್ತಿಪರರಿಗೆ ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ವತಿಯಿಂದ ವಿಶೇಷ ಸಾಧಕರಿಗೆ ವೃತ್ತಿ ಸೇವಾ ಪ್ರಶಸ್ತಿ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ಯುವಜನರಿಗೆ ಸಾಧನೆ ಮಾಡಲು ಸೂಕ್ತ ಪ್ರೋತ್ಸಾಹ ಮತ್ತು ಮಾರ್ಗದರ್ಶನ ಸಿಗುತ್ತದೆ ಎಂದು ತಿಳಿಸಿದರು.

ವೃತ್ತಿಪರ ಸೇವಾ ನಿರ್ದೇಶಕ ಡಿ.ಕೆ.ಶೇಷಗಿರಿ ಮಾತನಾಡಿ, ವೃತ್ತಿ ಮತ್ತು ಕೌಶಲ್ಯಗಳು ಒಂದೇ ನಾಣ್ಯದ ಎರಡು ಮುಖಗಳಿದ್ದ ಹಾಗೆ. ಅಂತರಾಷ್ಟ್ರೀಯ ಸಂಸ್ಥೆಯು ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ ಗೌರವಿಸುತ್ತಿರುವುದು ಉತ್ತಮ ಕಾರ್ಯ ಎಂದು ತಿಳಿಸಿದರು.

ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವ ಎಚ್.ಸುರೇಶ್, ನಂಜುಂಡ, ಅರಸು ನಾಯಕ್, ನಾಗರಾಜ, ಮೈಲಾರಿ, ಜಯಪಾಲ್, ಜಫ್ರುಲ್ಲಾ ಖಾನ್, ಪ್ರಹ್ಲಾದ್, ಮಂಜುನಾಥ್ ಅವರಿಗೆ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ನಮ್ಮನ್ನು ಗುರುತಿಸಿ ಸನ್ಮಾನಿಸಿರುವುದು ಬಹಳ ಸಂತಸದ ಸಂಗತಿ ಎಂದು ಸನ್ಮಾನಿತರು ಅನಿಸಿಕೆ ವ್ಯಕ್ತಪಡಿಸಿದರು.

ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಡಿ.ಕಿಶೋರ್‌ಕುಮಾರ್ ಮಾತನಾಡಿ, ಸೇವಾಕಾರ್ಯಗಳನ್ನು ನಮ್ಮ ಕ್ಲಬ್‌ನಿಂದ ಹಮ್ಮಿಕೊಂಡು ನಡೆಸುತ್ತಿದ್ದು, ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನಿಸುವ ಅವಕಾಶ ಸಿಕ್ಕಿರುವುದು ಹೆಮ್ಮೆಯ ಸಂಗತಿ ಎಂದು ತಿಳಿಸಿದರು.

ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಪ್ರೊ. ಧನಂಜಯ ಮಾತನಾಡಿ, ಸಾಮಾನ್ಯ ವೃತ್ತಿ ಮಾಡುವ ಸಾಧಕರನ್ನು ಗುರುತಿಸಿ ಗೌರವಿಸುವುದು ವಿಶೇಷ ಕಾರ್ಯ ಎಂದು ಹೇಳಿದರು.

Rotary Shivamogga ವೃತ್ತಿಪರ ಪ್ರಶಸ್ತಿ ಪ್ರದಾನ ಮುಖ್ಯಸ್ಥ ಸತೀಶ್ ಚಂದ್ರ, ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಚಂದ್ರಹಾಸ ಪಿ.ರಾಯ್ಕರ್, ಜಗದೀಶ್, ರವಿಶಂಕರ್, ಗಣೇಶ್, ಅಜಿತ್, ಡಾ. ಗುಡದಪ್ಪ ಕಸಬಿ, ರಘುರಾಜ್, ರವಿ ಪ್ರಕಾಶ್ ಜನ್ನೆ, ವೀಣಾ ಕಿಶೋರ್, ಗಿರಿಜಾ ಧನಂಜಯ ರಾಂಪುರ, ಪದ್ಮಿನಿ ವಸಂತ ಹೋಬಳಿದಾರ್, ಬಿಂದು ವಿಜಯಕುಮಾರ್, ಕೇಶವಪ್ಪ, ರಮೇಶ್ ಭಟ್, ಆದಿಮೂರ್ತಿ, ರೂಪಾ ಗುಡದಪ್ಪ ಕಸಬಿ ಮತ್ತಿತರರು ಉಪಸ್ಥಿತರಿದ್ದರು.

ಕುವೆಂಪು ರಸ್ತೆಯಲ್ಲಿ ಹಂಪ್ಸ್ ನಿರ್ಮಿಸಲು ಮನವಿ

0

ಶರಾವತಿ ನಗರ 9ನೇ ಕ್ರಾಸ್, ಪಿಎನ್‌ಟಿ ಕಾಲೊನಿ ಪಕ್ಕದ ರಸ್ತೆ, ವಿನೋಬನಗರದಿಂದ ಪೆಟ್ರೋಲ್ ಬಂಕ್ ಪಕ್ಕ ಕುವೆಂಪು ರಸ್ತೆಗೆ ಸೇರುವ ನಾಲ್ಕು ರಸ್ತೆಗಳು ಸೇರುವ ಜಾಗದಲ್ಲಿ ಕಳೆದ ಹಲವಾರು ತಿಂಗಳುಗಳಿAದ ನಿತ್ಯವೂ ಅಪಘಾತ ಗಳು ಸಂಭವಿಸುತ್ತಿದ್ದು, ಕೂಡಲೆ ಈ ಭಾಗದಲ್ಲಿ ಹಂಪ್ಸ್ ಹಾಕಲು ಒತ್ತಾಯಿಸಿದ್ದಾರೆ.
ಇಲ್ಲಿ ಸಮರ್ಪಕ ಸಂಚಾರ ನಿಯಂತ್ರಣ ವ್ಯವಸ್ಥೆ ಇಲ್ಲದಿರುವುದು ಹಾಗೂ ಹಂಪ್‌ಗಳ ತಪ್ಪು ವಿನ್ಯಾಸ ಅಪಘಾತಗಳಿಗೆ ಪ್ರಮುಖ ಕಾರಣವಾಗಿದೆ. ಈ ದಿನ ಎರಡು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿದೆ. ಇದೇ ಸ್ಥಳದಲ್ಲಿ ಕೆಲ ತಿಂಗಳ ಹಿಂದೆ ಕಾರೊಂದು ಕಾಂಪೌಂಡ್ ಗೋಡೆ ಹಾಗೂ ನಗರಸಭೆಯ ಡಿಸ್‌ಪ್ಲೇ ಕಂಬಕ್ಕೆ ಡಿಕ್ಕಿ ಸಂಭವಿಸಿದ ಘಟನೆ ಕೂಡ ನಡೆದಿದೆ.
ಬಹುತೇಕ ಅಪಘಾತಗಳು ನಡೆದು ಆಸ್ಪತ್ರೆಗೆ ಸೇರಿಸಿರುವ ಉದಾಹರಣೆ ಕೂಡ ಇದೆ. ಘಟನೆಗೆ ಸಂಬಂಧಿಸಿದಂತೆ ಅಧಿಕೃತ ದೂರುಗಳು ದಾಖಲಾಗುತ್ತಿಲ್ಲ. ಈ ಕುರಿತು ಸಾರ್ವಜನಿಕರು ಸಂಚಾರಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದರೂ, ಇದುವರೆಗೆ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಲಾಗಿಲ್ಲ ಎಂಬ ಆರೋಪವಿದೆ. ಆದ್ದರಿಂದ, ಸಂಚಾರ ಪೊಲೀಸ್ ಇಲಾಖೆ, ನಗರಸಭೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಹಂಪ್ಸ್ಗಳನ್ನು ಸರಿಯಾಗಿ ಮರು ನಿರ್ಮಾಣ ಮಾಡಲು ಒತ್ತಾಯಿಸಿದ್ದಾರೆ. ಜೊತೆಗೆ ಈ ಭಾಗದಲ್ಲಿ ಅಗತ್ಯ ಸೂಚನಾ ಫಲಕಗಳು ಮತ್ತು ವೇಗ ನಿಯಂತ್ರಣ ಸಿಸಿ ಟಿವಿ ಅಳವಡಿಸಿ, ಯಾವುದೇ ಅಮೂಲ್ಯ ಜೀವ ಕಳೆದುಹೋಗುವ ಮುನ್ನವೇ ತ್ವರಿತ ಕ್ರಮ ಕೈಗೊಳ್ಳಲು ಸಾರ್ವಜನಿಕರು ಮನವಿ ಮಾಡಿದ್ದಾರೆ.

Department of Social Welfare ಕುಷ್ಟರೋಗ ತಾರತಮ್ಯ ಬೇಡ-ಸೂಕ್ತ ಚಿಕಿತ್ಸೆಯಿಂದ ಪೂರ್ಣ ಗುಣ ಸಾಧ್ಯ : ಡಾ.ನಟರಾಜ್

0

Department of Social Welfare ಬಡವ, ಶ್ರೀಮಂತ, ಗಂಡು, ಹೆಣ್ಣು ಎಂಬ ಬೇಧವಿಲ್ಲದೆ ಯಾರಲ್ಲಿ ಬೇಕಾದರೂ ಕುಷ್ಟರೋಗ ಬರಬಹುದಾಗಿದ್ದು ರೋಗಲಕ್ಷಣಗಳು ಕಂಡು ಬಂದ ಕೂಡಲೇ ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಸಂಪೂರ್ಣವಾಗಿ ಗುಣಮುಖರಾಗಬಹುದು ಎಂದು ಡಿಹೆಚ್‌ಓ ಡಾ.ನಟರಾಜ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೋಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಸಹಯೋಗದೊಂದಿಗೆ ಆರ್.ಎಮ್.ಎಲ್ ನಗರದ ಕನಕ ವಿದ್ಯಾ ಸಂಸ್ಥೆಯ ಮುಂಭಾಗದಿಂದ ಏರ್ಪಡಿಸಲಾಗಿದ್ದ ಕುಷ್ಠರೋಗ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕುಷ್ಟರೋಗಕ್ಕೆ ಬಹುವಿಧ ಔಷಧ(ಎಂಡಿಟಿ) ಚಿಕಿತ್ಸೆಯು ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ದೊರೆಯುತ್ತದೆ. ಹಾಗೂ ಸಹಾಯಕ ಔಷಧಿಗಳನ್ನು ಉಚಿತವಾಗಿ ಒದಗಿಸಲಾಗುತ್ತದೆ. ಕುಷ್ಟರೋಗದಿಂದ ಅಂಗವೈಕಲ್ಯಕ್ಕೆ ಒಳಗಾದವರಿಗೆ ರಿ-ಕನ್ಸ÷್ಟçಕ್ಟಿವ್ ಶಸ್ತçಚಿಕಿತ್ಸೆಯನ್ನು ಆಯ್ದ ಆಸ್ಪತ್ರೆಗಳಲ್ಲಿ ಉಚಿತವಾಗಿ ನಡೆಸಲಾಗುವುದು.
ಮಚ್ಚೆಗಳನ್ನು ಗುಪ್ತವಾಗಿರಸದೇ ವೈದ್ಯರಲ್ಲಿ ತೋರಿಸಿಕೊಂಡು, ಪ್ರಾರಂಭಿಕ ಹಂತದಲ್ಲಿಯೇ ತೋರಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆದರೆ ಅಂಗವೈಕಲ್ಯ ತಡೆಯಬಹುದಾಗಿದ್ದು, ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ರೋಗಮುಕ್ತರಾಗಬೇಕೆಂದು ಹಾಗೂ ರೋಗ ಕಳಂಕವೆAದು ಭಾವಿಸಬಾರದು. ಮೌಢ್ಯತೆಯಿಂದ ಹೊರಬರಬೇಕೆಂದು ಕರೆ ನೀಡಿದರು.
ಡಿಎಲ್‌ಓ ಡಾ.ಕಿರಣ್ ಮಾತನಾಡಿ, ಸುಮಾರು 80 ರಿಂದ 90 ವರ್ಷಗಳ ಹಿಂದೆ ಕುಷ್ಟರೋಗಕ್ಕೆ ಯಾವುದೇ ಔಷಧಿಗಳಿರಲಿಲ್ಲ. ಆಗ ಜನರ ಮನಸ್ಸಿನಲ್ಲಿ ಈ ರೋಗದ ಕುರಿತು ದೊಡ್ಡ ಮೌಢ್ಯತೆ ಇತ್ತು. ಇದು ಹಿಂದಿನ ಜನ್ಮದ ಪಾಪವೆಂದು ಪರಿಗಣಿಸಿದ್ದರು. ಅಂದಿನ ದಿನಮಾನದಲ್ಲಿ ಮಹಾತ್ಮಾ ಗಾಂಧೀಜಿಯವರು ತಮ್ಮ ಸಾಬರಮತಿ ಆಶ್ರಮದಲ್ಲಿ ಈ ರೋಗಿಗಳಿಗೆ ಆರೈಕೆ ಮಾಡಿ ಚಿಕಿತ್ಸೆ ಕೊಡಿಸಿ ಗುಣಮುಖರಾಗಿಸುತ್ತಿದ್ದರು. ಇದರ ಸ್ಮರಣಾರ್ಥ ಜ.30 ಗಾಂಧೀಜಿಯವರು ಹುತಾತ್ಮರಾದ ದಿನವನ್ನು ಸರ್ಕಾರವು ಕುಷ್ಟರೋಗ ನಿರ್ಮೂಲನೆ ದಿನವನ್ನಾಗಿ ಆಚರಿಸುತ್ತಿದೆ ಎಂದರು.
ಜ.30 ರಿಂದ ಫೆ.13 ರವರೆಗೆ 15 ದಿನಗಳ ಕಾಲ ಕುಷ್ಟರೋಗ ಪತ್ತೆ ಹಚ್ಚುವ ಆಂದೋಲನ ಮಾಡಲಾಗುತ್ತಿದೆ. ಕುಷ್ಟರೋಗವು ಮೈಕ್ರೋಬ್ಯಾಕ್ಟೀರಿಯಂ ಲೆಪ್ರೆ ಎಂಬ ಸೂಕ್ಷಾö್ಮಣುವಿನಿಂದ ಬರುವ ಕಾಯಿಲೆಯಾಗಿದ್ದು ನಿಧಾನವಾಗಿ ಸೋಂಕು ಹರಡುತ್ತದೆ. ಪ್ರಾಥಮಿಕವಾಗಿ ಚರ್ಮ, ನರಗಳ ಮೇಲೆ ಪರಿಣಾಮ ಬೀರುತದೆ. ರೋಗ ಇರುವ ವ್ಯಕ್ತಿ ಕೆಮ್ಮಿದಾಗ ಅಥವಾ ಸೀನಿದಾಗ ರೋಗ ಹರಡುತ್ತದೆ. ಈ ರೋಗ ವಂಶಪಾರAರ‍್ಯವಲ್ಲ. ಕುಷ್ಟ ರೋಗದ ಬಗ್ಗೆ ಯಾವುದೇ ಬೇಧ, ತಾರತಮ್ಯ ಬೇಡ.
ಚರ್ಮದ ಮೇಲೆ ತಿಳಿಬಿಳಿ ಅಥವಾ ಕೆಂಪು ಇಲ್ಲವೇ ತಾಮ್ರ ವರ್ಣದ ಸ್ಪರ್ಷಜ್ಞಾನವಿಲ್ಲದ ಮಚ್ಚೆಗಳು, ಹುಬ್ಬು ಕಣ್ಣರೆಪ್ಪೆ ನಷ್ಟ, ಕೈ ಅಥವಾ ಕಾಲಿನ ಸ್ಪರ್ಶಜ್ಞಾನ ಕಡಿಮೆಯಾಗುವುದು, ಕೈ ಬೆರಳುಗಳು, ಪಾದಗಳಲ್ಲಿ ನಿಶ್ಯಕ್ತಿ ರೋಗ ಲಕ್ಷಣಗಳಾಗಿವೆ. ರೋಗ ತೀವ್ರತೆ ಮೇಲೆ ಪಿಬಿ ಮತ್ತು ಎಂಬಿ ಎಂದು ವರ್ಗೀಕರಿಸಲಾಗಿದ್ದು, ಪಿಬಿ ಗೆ 6 ತಿಂಗಳ ಕಾಲ ಉಚಿತ ಬಹುಔಷಧಿ ಚಿಕಿತ್ಸೆ, ಎಂಬಿ ಗೆ 12 ತಿಂಗಳ ಕಾಲ ಔಷಧಿ ನೀಡಲಾಗುತ್ತದೆ. ಸೂಕ್ತ ಚಿಕಿತ್ಸೆಯಿಂದ ಈ ರೋಗವನ್ನು ಸಂಪೂರ್ಣವಾಗಿ ಗುಣ ಹೊಂದಬಹುದು.
ಜಿಲ್ಲೆಯಲ್ಲಿ ಈ ಸಾಲಿನ ಏಪ್ರಿಲ್‌ನಿಂದ ಇಲ್ಲಿಯವರೆಗೆ 41 ಕುಷ್ಟರೋಗಿಗಳನ್ನು ಪತ್ತೆ ಹಚ್ಚಿ ಚಿಕಿತ್ಸೆ ನಿಡಲಾಗುತ್ತಿದೆ. 2025-26 ನೇ ಸಾಲಿಗೆ 28 ಜನರು ಗುಣಮುಖರಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಕುಷ್ಟರೋಗದಿಂದ ಸಂಪೂರ್ಣರಾಗಿ ಗುಣಮುಖರಾದ ಶಿವಪ್ಪ, ಲಕ್ಷ್ಮಣ ಇಕ್ಬಾಲ್ ಮತ್ತು ಮೊಹಮ್ಮದ್ ಜಮೀರ್‌ರನ್ನು ವಿಶೇಷ ಆಹ್ವಾನಿತರಾಗಿ ಆಹ್ವಾನಿಸಿದ್ದು, ಈ ವೇಳೆ ಇವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಇವರು ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜನರಲ್ಲಿ ಜಾಗೃತಿ ಮೂಡಿಸಿದರು.
Department of Social Welfare ಜಾಥಾವು ಆರ್‌ಎಂಎಲ್ ನಗರದ ಕನಕ ವಿದ್ಯಾಸಂಸ್ಥೆಯಿಂದ ಪ್ರಾರಂಭಗೊಂಡು ಆರ್.ಎಂ.ಎಲ್ ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಗಿಬಂದು ಸೀಗೆಹಟ್ಟಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಮುಕ್ತಾಯಗೊಂಡಿತು.
ಕಾರ್ಯಕ್ರಮದಲ್ಲಿ ತಾಲ್ಲೂಕು ವೈದ್ಯಾಧಿಕಾರಿ ಡಾ. ಚಂದ್ರಶೇಖರ, ಊರುಗಡೂರು ಪಿಹೆಚ್‌ಸಿ ವೈದ್ಯಾಧಿಕಾರಿ ಡಾ. ಕಾಂಚನ, ಮಾಜಿ ಪಾಲಿಕೆ ಸದಸ್ಯರಾದ ರಾಜು, ಸ್ಥಳೀಯ ಮುಖಂಡರಾದ ಪ್ರಸನ್ನಕುಮಾರ್, ಮೂರ್ತಿ, ನೇತಾಜಿ, ಪೂಜಾ ಚಾರಿಟಬಲ್ ಟ್ರಸ್ಟ್, ಅಂಬೇಡ್ಕರ್ ಜಾನಪದ ಕಲಾ ತಂಡ, ನೇಸರ ಕಲಾ ತಂಡ, ಸಿಮ್ಸ್ ನರ್ಸಿಂಗ್ ವಿದ್ಯಾರ್ಥಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಹಾಜರಿದ್ದರು.

Karnataka State Commission for Protection of Child Rights ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪಾಲನೆ-ಪೋಷಣೆಯಲ್ಲಿ ಜಿಲ್ಲೆ ಅಗ್ರಸ್ಥಾನ : ನ್ಯಾ.ಸಂತೋಷ ಎಂ.ಎಸ್

0

Karnataka State Commission for Protection of Child Rights ಮಕ್ಕಳ ಹಕ್ಕುಗಳ ರಕ್ಷಣೆ, ಪಾಲನೆ ಮತ್ತು ಪೋಷಣೆಯಲ್ಲಿ ಜಿಲ್ಲೆಯು ಅಗ್ರ ಸ್ಥಾನ ಪಡೆದಿದ್ದು, ಇದರಲ್ಲಿ ಅಧಿಕಾರ ವರ್ಗದ ಪಾತ್ರ ಪ್ರಮುಖವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಂ.ಎಸ್.ಸಂತೋಷ್ ಶ್ಲಾಘಿಸಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಗರದ ಜಿಲ್ಲಾ ಡಯಟ್ ಸಂಸ್ಥೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು, ಮಕ್ಕಳ ಸಹಾಯವಾಣಿ ಸಿಬ್ಬಂದಿಗಳು ಹಾಗೂ ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಕ್ಕಳ ಪಾಲನಾ ಸಂಸ್ಥೆಗಳ ಸಿಬ್ಬಂದಿಗಳಿಗೆ ಶುಕ್ರವಾರ ಏರ್ಪಡಿಸಿದ್ದ “ಬಾಲ್ಯ ವಿವಾಹ, ಪೊಕ್ಸೋ ಮತ್ತು ಮಕ್ಕಳ ರಕ್ಷಣೆಗೆ ಸಂಬAಧಿಸಿದ ಅರಿವು ಹಾಗೂ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಮಕ್ಕಳ ಸುರಕ್ಷತೆ, ಮೂಲಭೂತ ಸೌಕರ್ಯಗಳ ಕುರಿತಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿ ಮಗುವಿಗೆ ಸಮಾಜದಲ್ಲಿ ಪಾಲನೆ ಪೋಷಣೆ ಸಿಗಬೇಕು. ಸಿಗಬೇಕಾದ ಪಾಲನೆ ಪೋಷಣೆ ದೊರಕದಿದ್ದಾಗ ಅದು ಕಾನೂನಿನ ಉಲ್ಲಂಘನೆಯಾಗುತ್ತದೆ, ಆದ್ದರಿಂದ ಪಾಲನೆ ಸಂಸ್ಥೆಯಲ್ಲಿ ಪ್ರತಿ ಮಗುವಿನ ಪಾಲನೆ ಪೋಷಣೆಯನ್ನು ಸರಿಯಾಗಿ ಮಾಡಿ, ಈ ಮಕ್ಕಳು ಮುಖ್ಯವಾಹಿನಿಗೆ ಬರುವಂತೆ ಪಾಲನಾ ಸಂಸ್ಥೆಗಳು ಮಾಡಬೇಕೆಂದರು.
ಬಾಲ್ಯ ವಿವಾಹ, ಪೊಕ್ಸೋ ಮತ್ತು ಮಕ್ಕಳ ರಕ್ಷಣೆಗೆ ಸಂಬAಧಿಸಿದAತೆ ಅರಿವು ಮತ್ತು ಜಾಗೃತಿಗಾಗಿ ಪ್ರತಿ ಮೂರು ತಿಂಗಳಿಗೊಮ್ಮೆ ಸಮನ್ವಯ ಸಭೆ ಕೈಗೊಂಡು ನಿರಂತರ ಅಭಿಯಾನ ನಡೆಸಬೇಕು. ಎಲ್ಲ ಪಾಲುದಾರ ಇಲಾಖೆಗಳು ಸಕ್ರಿಯವಾಗಿ, ಕ್ರಿಯಾಶೀಲರಾಗಿ ಅಭಿಯಾನದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಅಪರ್ಣ ಕೊಳ್ಳ ಮಾತನಾಡಿ, ಅಧಿಕಾರಿಗಳು ಮಕ್ಕಳ ಪಾಲನೆ ಪೋಷಣೆಗೆ ಸಂಬಂಧಿಸಿದಂತೆ ಯಾವುದೇ ರಾಜಿ ಮಾಡಿಕೊಳ್ಳದೇ ಸರಿಯಾಗಿ ಕ್ರಮ ವಹಿಸಬೇಕು.ಬಾಲ್ಯ ವಿವಾಹ, ಪೋಕ್ಸೋ ಕಾಯ್ದೆಗಳು ಮತ್ತು ಮಕ್ಕಳ ಹಕ್ಕುಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕು ಎಂದರು.
Karnataka State Commission for Protection of Child Rights ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಂದ ಜಿಲ್ಲೆಯಲ್ಲಿ ಬಾಲ್ಯ ವಿವಾಹ ಕುರಿತಾದ ಮಾಹಿತಿ ತೆಗೆದುಕೊಂಡು ಜಾಗೃತಿ ಕಾರ್ಯಕ್ರಮಗಳನ್ನು ಇನ್ನೂ ಪರಿಣಾಮಕಾರಿಯಾಗಿ ಮಾಡಬೇಕು. ಬಾಲ್ಯ ವಿವಾಹ, ಪೋಕ್ಸೋದಂತಹ ಪ್ರಕರಣಗಳನ್ನು ತಡೆಗಟ್ಟಲು ಶ್ರಮ ವಹಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ್ ಆರ್, ಜಿಲ್ಲಾ ಬಾಲನ್ಯಾಯ ಮಂಡಳಿ ಸದಸ್ಯೆ ರೇಖಾ.ಜಿ.ಎಂ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ತಾಜುದ್ದೀನ್ ಖಾನ್, ಡಯಟ್ ಪ್ರಾಂಶುಪಾಲರಾದ ಹೆಚ್.ಆರ್. ಕೃಷ್ಣಮೂರ್ತಿ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.